Murder Case : ಬೈಕ್‌ನಲ್ಲಿ ಬರುವಾಗ ಅಟ್ಯಾಕ್; ನಡು ರಸ್ತೆಯಲ್ಲೇ ಯುವಕನ ಕೊಲೆ, ಮತ್ತೊಬ್ಬ ಗಂಭೀರ - Vistara News

ಕ್ರೈಂ

Murder Case : ಬೈಕ್‌ನಲ್ಲಿ ಬರುವಾಗ ಅಟ್ಯಾಕ್; ನಡು ರಸ್ತೆಯಲ್ಲೇ ಯುವಕನ ಕೊಲೆ, ಮತ್ತೊಬ್ಬ ಗಂಭೀರ

Murder Case : ಕಾರಲ್ಲಿ ಬಂದ ಯುವಕರ ಗುಂಪುವೊಂದು ಬೈಕ್‌ನಲ್ಲಿ ಹೋಗುತ್ತಿದ್ದ ಯುವಕರ ಮೇಲೆ ದಾಳಿ ಮಾಡಿದ್ದಾರೆ. ಪರಿಣಾಮ ಸ್ಥಳದಲ್ಲೇ ಯುವಕ ಮೃತಪಟ್ಟರೆ, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾನೆ.

VISTARANEWS.COM


on

Murder Crime Sense
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಧಾರವಾಡ: ಯುವಕರಿಬ್ಬರು ಬೈಕ್‌ನಲ್ಲಿ ಹೋಗುತ್ತಿದ್ದಾಗ ದುಷ್ಕರ್ಮಿಗಳು ದಾಳಿ (Murder Case) ಮಾಡಿದ್ದಾರೆ. ಧಾರವಾಡದ ಡೈರಿ ರಸ್ತೆಯಲ್ಲಿ ತಡರಾತ್ರಿ ನಡೆದ ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ.

ಅರವಟಗಿ ಗ್ರಾಮದ ಕಲ್ಲನಗೌಡ ಪಾಟೀಲ್ ಹತ್ಯೆಯಾದವರು. ಸುನಿಲ್ ಜಕ್ಕನ್ನವರ ಎಂಬಾತ ಗಂಭೀರ ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿ ಸುನೀಲ್‌, ಕಲ್ಲನಗೌಡ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಯುವಕರ ಗ್ಯಾಂಗ್‌ ಏಕಾಏಕಿ ಅಡ್ಡಗಟ್ಟಿದೆ. ನಂತರ ರಾಡ್ ತೆಗೆದು ಮನಸೋ ಇಚ್ಛೆ ಹಲ್ಲೆ ಮಾಡಿದ್ದಾರೆ.

ತಲೆಗೆ ಗಂಭೀರ ಗಾಯವಾಗಿದ್ದರಿಂದ ರಕ್ತಸ್ರಾವವಾಗಿ ಕಲ್ಲನಗೌಡ ಸ್ಥಳದಲ್ಲೇ ಮೃತಪಟ್ಟರೆ, ತೀವ್ರವಾದ ಗಾಯಗೊಂಡಿರುವ ಸುನಿಲ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ದಾಳಿಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ.

ಇದನ್ನೂ ಓದಿ: Road Accident : ಚಲಿಸುತ್ತಿದ್ದಾಗಲೇ ಕಾರಿನ ಟೈರ್‌ ಸ್ಫೋಟ; ಹೆದ್ದಾರಿಯಲ್ಲಿ ಮತ್ತೆ ವ್ಹೀಲಿಂಗ್‌ ಹುಚ್ಚಾಟ

Illicit Relationship : ಗಂಡನ ಜತೆ ಅಕ್ರಮ ಸಂಬಂಧ; ಯುವತಿ ಮನೆ ಮೇಲೆ ಹೆಂಡ್ತಿ ದಾಳಿ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮದುವೆಯಾದವರು ಬೇರೆಯವರ ಜತೆ ಅಕ್ರಮ ಸಂಬಂಧ (Illicit Relationship) ಇಟ್ಟುಕೊಳ್ಳುವ ಚಾಳಿ ವಿಪರೀತವಾಗಿದೆ. ಹೀಗಾಗಿ ಅಲ್ಲಲ್ಲಿ ಜಗಳ, ಗಲಾಟೆ, ಹೊಡೆದಾಟಗಳು ಜೋರಾಗುತ್ತಿವೆ. ಬೆಂಗೂರಿನಲ್ಲೂ (Bangalore News) ಅಂಥಹುದೇ ಒಂದು ಘಟನೆ ನಡೆದಿದೆ. ನನ್ನ ಗಂಡನೊಂದಿಗೆಅಕ್ರಮ ಸಂಬಂದ ಇಟ್ಟುಕೊಂಡಿದ್ದಿಯಾ ಎಂಬ ಆಕ್ರೋಶದಿಂದ ಮಹಿಳೆಯೊಬ್ಬರು ಗುಂಪು ಕಟ್ಟಿಕೊಂಡು ಹೋಗಿ ಯುವತಿ ಮನೆ (Attack on Home) ಮೇಲೆ ದಾಳಿ‌ ಮಾಡಿದ್ದಾರೆ.

ಶರಣ್‌ ಎಂಬಾತ ಪ್ರತಿಮಾ ಎಂಬಾಕೆಯ ಜತೆಗೆ ಕಳೆದ ಮೂರು ವರ್ಷಗಳಿಂದ ಆತ್ಮೀಯವಾಗಿದ್ದ ಎನ್ನಲಾಗಿದೆ. ಇದರ ಬಗ್ಗೆ ಹಲವು ಬಾರಿ ಎಚ್ಚರಿಕೆ ನೀಡಿದ ಹೊರತಾಗಿಯೂ ಸಂಬಂಧವನ್ನು ಮುಂದುವರಿಸಿದ್ದರಿಂದ ಆಕ್ರೋಶಗೊಂಡ ಶರಣ್‌ ಪತ್ನಿ ಸಮಂತಾ ಗ್ಯಾಂಗ್‌ ಕಟ್ಟಿಕೊಂಡು ಹೋಗಿ ಪ್ರತಿಮಾಳ ಮನೆ ಮೇಲೆ ದಾಳಿ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ.

ಕೆಂಪರಾಜು, ಶರತ್ ಮತ್ತು ಶರಣ್‌ ಪತ್ನಿ ಸಮಂತಾ ಅವರು ರಾತ್ರಿ 11.30ರ ಹೊತ್ತಿಗೆ ನಮ್ಮ‌ ಮನೆಗೆ ಅಕ್ರಮ ಪ್ರವೇಶ ಮಾಡಿ ದಾಂಧಲೆ ಮಾಡಿದ್ದಾರೆ. ಹೀಗಾಗಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರ‌ಮ ಜರುಗಿಸಬೇಕೆಂದು ಯುವತಿ ಕೊತ್ತನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಪ್ರಕರಣ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

Illicit relationship news1

ಪ್ರತಿಮಾ ಮನೆ ಇರುವುದು ಮಾರುತಿ ಲೇಔಟ್ ಬಿಳೇಶಿವಾಲೆ ದೊಡ್ಡಗುಬ್ಬಿ ಮುಖ್ಯ ರಸ್ತೆಯಲ್ಲಿ. ಅಲ್ಲಿಗೆ ನುಗ್ಗಿದ ಇವರು ಮನೆ ಕಿಟಕಿ ಗಾಜು, ಡೋರ್ ಹಾಗೂ ಮನೆ ಮುಂದೆ ನಿಲ್ಲಿಸಿದ್ದ ಕಾರು, ಬೈಕ್‌ಗಳ ಗಾಜು ಹೊಡೆದು ಗೂಂಡಾ ವರ್ತನೆ ತೋರಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : Illicit relationship : ಮದುವೆಯಾಗಿ ಮಕ್ಕಳಿದ್ದರೂ ಪ್ರೇಮದ ಬಲೆಗೆ ಸಿಲುಕಿ ಇಬ್ಬರು ಪರಾರಿ

ಪ್ರತಿಮಾ ಕಳೆದ ಮೂರು ವರ್ಷಗಳ ಹಿಂದೆ ಮನೆ ಕಟ್ಟಿಸಿದ್ದರು. ಆಗ ಶರಣ್ ಬಳಿ ಜಲ್ಲಿ, ಎಂ ಸ್ಯಾಂಡ್ , ಬ್ಲಾಕ್ಸ್ ಗಳನ್ನು ಖರೀದಿ ಮಾಡಿದ್ದರು. ಈ ವೇಳೆ ಅವರು ಪರಿಚಯವಾಗಿದ್ದು, ನಂತರ ಮನೆ ಕಟ್ಟುವ ವಿಚಾರಕ್ಕೆ ಆಗಾಗ ಸಲಹೆ ಪಡೆಯುತ್ತಿದ್ದುದರಿಂದ ಆತ್ಮೀಯವಾಗಿದ್ದರು. ಆದರೆ, ಈ ಸಂಬಂಧವನ್ನು ಶರಣ್‌ ಪತ್ನಿ ಸಮಂತಾಗೆ ಸಹಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಆಕೆ ನನ್ನ ಗಂಡನ ಜೊತೆ ಅಕ್ರಮ ಸಂಬಂದ ಇಟ್ಟುಕೊಂಡಿದ್ದಿಯಾ ಎಂದು ಹಲವು ಬಾರಿ ಜಗಳ ಮಾಡಿದ್ದರು.

ಇದರಿಂದ ಬೇಸತ್ತ ಸಮಂತಾ ಅವರು ಶರಣ್ ಜೊತೆ ಸಂಪರ್ಕವೇ ಬಿಟ್ಟಿದ್ದಳು. ಆದರೆ, ಇತ್ತೀಚೆಗೆ ಮಾಲ್‌ ಒಂದಕ್ಕೆ ಹೋದಾಗ ಶರಣ್‌ ಮತ್ತು ಪ್ರತಿಮಾ ನಡುವೆ ಮತ್ತೆ ಮುಖಾಮುಖಿಯಾಗಿತ್ತು. ಈ ಭೇಟಿಯಿಂದ ಸಮಂತಾ ಮತ್ತೆ ಕಿರಿಕಿರಿಗೆ ಒಳಗಾಗಿದ್ದರು. ಶರಣ್‌ ಮತ್ತು ಯುವತಿ ಕದ್ದುಮುಚ್ಚಿ ಸಂಪರ್ಕ ಹೊಂದಿದ್ದಾರೆ ಎಂದು ಸಂಶಯಿಸಿದ ಆಕೆ ತನ್ನ ಗ್ಯಾಂಗ್‌ ಕಟ್ಟಿಕೊಂಡು ಹೋಗಿ ಮನೆಗೆ ನುಗ್ಗಿದ್ದಾರೆ ಎಂದು ಹೇಳಲಾಗಿದೆ.

ಇದೀಗ ಪೊಲೀಸರು ಸಮಂತಾ ಮತ್ತು ಟೀಮ್‌ ಮೇಲೆ ಕೇಸು ದಾಖಲಿಸಿಕೊಂಡಿದ್ದಾರೆ. ಇಬ್ಬರನ್ನೂ ಕರೆದು ಮಾತುಕತೆ ನಡೆಸಲು ಮುಂದಾಗಿದ್ದಾರೆ. ಶರಣ್‌ಗೂ ಅಕ್ರ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಂಡ್ಯ

Road Accident : ಬಸ್‌ ಗುದ್ದಿದ ರಭಸಕ್ಕೆ ಕಾರು ಛಿದ್ರ ಛಿದ್ರ; ಚಾಲಕ ಸ್ಪಾಟ್‌ ಡೆತ್‌, ನಾಲ್ವರಿಗೆ ಗಾಯ

Road Accident : ಮಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಛಿದ್ರ ಛಿದ್ರಗೊಂಡಿದೆ. ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

VISTARANEWS.COM


on

By

road Accident in Mandya
Koo

ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಕಾರಿನ ನಡುವೆ ಭೀಕರ ಅಪಘಾತ (Road Accident ) ಸಂಭವಿಸಿದ್ದು, ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ರಸ್ತೆಯ ಬೋರಾಪುರದಲ್ಲಿ ಅಪಘಾತ ನಡೆದಿದೆ.

ಮದ್ದೂರಿನಿಂದ ಮಳವಳ್ಳಿ ಕಡೆಗೆ ಸ್ವಿಫ್ಟ್ ಕಾರು ತೆರಳುತ್ತಿತ್ತು. ಕೆಎಸ್‌ಆರ್‌ಟಿಸಿ ಬಸ್‌ ಮಳವಳ್ಳಿಯಿಂದ ಮದ್ದೂರು ಕಡೆಗೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಛಿದ್ರಗೊಂಡಿದೆ. ಬಸ್‌ನ ಮುಂಭಾಗ ಜಖಂಗೊಂಡಿದೆ.

ಕಾರಿನಲ್ಲಿ ಐವರು ಪ್ರಯಾಣ ಮಾಡುತ್ತಿದ್ದರು. ಅಪಘಾತದಲ್ಲಿ ಸ್ಥಳದಲ್ಲೇ ಕಾರು ಚಾಲಕ ಮೃತಪಟ್ಟರೆ, ನಾಲ್ವರು ಗಾಯಗೊಂಡಿದ್ದಾರೆ. ಕಾರಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಸ್ಥಳೀಯರು ರಕ್ಷಿಸಿದ್ದು, ಮದ್ದೂರು ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇನ್ನೂ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಹಾಗೂ ಚಾಲಕ, ನಿರ್ವಾಹಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಅಪಘಾತದಿಂದಾಗಿ ಬೋರಾಪುರ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಮದ್ದೂರು ಪಟ್ಟಣ ಠಾಣೆ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದರು. ಛಿದ್ರಗೊಂಡಿದ್ದ ಕಾರನ್ನು ತೆರವು ಮಾಡಿದ್ದರು. ಮದ್ದೂರು ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Drowned in water.. road Accident

ಉಡುಪಿಯಲ್ಲಿ ಟಿಪ್ಪರ್‌ಗೆ ಸ್ಕೂಟರ್‌ ಡಿಕ್ಕಿ; ಸವಾರ ಸಾವು

ಉಡುಪಿಯ ಕಾರ್ಕಳ ಸಮೀಪದ ಬಳ್ಳಿ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಕಮಲ್ (32) ಮೃತ ದುರ್ದೈವಿ. ಟಿಪ್ಪರ್‌ಗೆ ಸ್ಕೂಟರ್‌ ಡಿಕ್ಕಿ ಹೊಡೆದ ಪರಿಣಾಮ ಕಮಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊರ್ವ ಸ್ಕೂಟರ್ ಸವಾರ ಪ್ರಸನ್ನ ಎಂಬಾತ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ನೈಸ್ ರಸ್ತೆಯಲ್ಲಿ ಹಿಟ್ ಆ್ಯಂಡ್ ರನ್‌ಗೆ ಸವಾರ ಸಾವು

ಬೆಂಗಳೂರಿನ ನೈಸ್‌ ರಸ್ತೆಯಲ್ಲಿ ಹಿಟ್ ಆ್ಯಂಡ್ ರನ್‌ಗೆ ಬೈಕ್‌ ಸವಾರ ಮೃತಪಟ್ಟಿದ್ದಾನೆ. ವಿನಾಯಕ ಎಸ್ ಪಲ್ಲೆದ್ (20) ಮೃತ ದುರ್ದೈವಿ. ಹಿಂಬದಿ ಸವಾರ ಗಿರೀಶ್ (22) ಎಂಬಾತ ಗಂಭೀರ ಗಾಯಗೊಂಡಿದ್ದಾರೆ. ನೈಸ್ ರಸ್ತೆಯ ಮಂಗನಹಳ್ಳಿಯ ಗೊಲ್ಲರಹಟ್ಟಿಯಲ್ಲಿ ಘಟನೆ ನಡೆದಿದೆ. ಜ್ಞಾನಭಾರತಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಳಗಾವಿ

Baby Death : ಮಲತಾಯಿಯ ಕ್ರೌರ್ಯಕ್ಕೆ ಬಲಿಯಾಯ್ತಾ 3 ವರ್ಷದ ಕಂದಮ್ಮ?

Baby Death : ಮೂರು ವರ್ಷದ ಮಗುವೊಂದು ಅನುಮಾನಾಸ್ಪದವಾಗಿ ಮೃತಪಟ್ಟಿದೆ. ಮಗುವು ಮಲತಾಯಿಯ ಕ್ರೌರ್ಯಕ್ಕೆ ಬಲಿಯಾಗಿದೆ ಎಂದು ಆರೋಪ ಕೇಳಿ ಬಂದಿದೆ. ಸದ್ಯ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

murder case in Belgavi
ರಾಯಣ್ಣ ಮತ್ತು ಆತನ ಎರಡನೇ ಪತ್ನಿ ಸಪ್ನಾ. ಮೊದಲ ಪತ್ನಿ ಮಗು ಸಮೃದ್ದಿ ಮೃತ ದುರ್ದೈವಿ
Koo

ಬೆಳಗಾವಿ: ಮಲತಾಯಿಯ ಕ್ರೌರ್ಯಕ್ಕೆ ಮೂರು ವರ್ಷದ ಕಂದಮ್ಮ (Baby Death) ಬಲಿಯಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಮಲತಾಯಿಯೇ 3 ವರ್ಷದ ಮಗುವನ್ನು ಕೊಂದಿದ್ದಾಳೆ (Murder case) ಎನ್ನಲಾಗಿದೆ. ಸಮೃದ್ಧಿ(3) ಮೃತ ದುರ್ದೈವಿ. ಮಲತಾಯಿ ಸಪ್ನಾ ರಾಯಣ್ಣ ನಾವಿ ಎಂಬಾಕೆ ಕೊಲೆ ಆರೋಪ ಎದುರಿಸುತ್ತಿರುವ ಮಲತಾಯಿ ಆಗಿದ್ದಾಳೆ. ಬೆಳಗಾವಿಯ ಕಂಗ್ರಾಳಿ ಕೆ ಹೆಚ್ ಗ್ರಾಮದಲ್ಲಿ ಘಟನೆ ನಡೆದಿದೆ.

ಮಗುವಿನ ಮೇಲೆ ಕ್ರೌರ್ಯ ಮೆರೆದು ಕೊಲೆ ಮಾಡಿದ್ದಾಗಿ ಸಮೃದ್ಧಿಯ ಅಜ್ಜಿ ಹಾಗೂ ಚಿಕ್ಕಪ್ಪ ಆರೋಪಿಸಿದ್ದಾರೆ. ಸಮೃದ್ಧಿ ತಂದೆ ರಾಯಣ್ಣ ಸಿಆರ್‌ಪಿಎಫ್ ಯೋಧನಾಗಿ ಕಾರ್ಯ ನಿರ್ವಹಿಸುತ್ತಿದ್ದು, ಮೊದಲ ಪತ್ನಿ ನಿಧನದ ನಂತರ ಎರಡನೇ ಮದುವೆಯಾಗಿದ್ದರು. ಇದೀಗ ರಾಯಣ್ಣನ 2ನೇ ಪತ್ನಿ ಸಪ್ನಾ ಎಂಬಾಕೆ ಸಮೃದ್ದಿಯನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

Murder case in Belgavi
ರಾಯಣ್ಣ ಹಾಗೂ ಮೊದಲ ಪತ್ನಿ ಭಾರತಿ ನಾವಿ, ಆಕೆಯ ಮಗಳು ಸಮೃದ್ದಿ

ಮೊದಲ ಪತ್ನಿ ಕೊಲೆ ಆರೋಪ ಎದುರಿಸುತ್ತಿರುವ ಕುಟುಂಬ

ಈಗಾಗಲೇ ಮೊದಲ ಪತ್ನಿ ಭಾರತಿ ನಾವಿ ಕೊಲೆ ಆರೋಪವನ್ನು ರಾಯಣ್ಣ ಹಾಗೂ ಆತನ ಕುಟುಂಬಸ್ಥರು ಎದುರಿಸುತ್ತಿದ್ದಾರೆ. ಪತಿ ರಾಯಣ್ಣ ಹಾಗೂ ತಾಯಿ ಶೋಭಾ ಹಾಗೂ ತಂಗಿ ರೂಪಾ ವಿರುದ್ಧ 2021ರಲ್ಲಿ ಮೃತ ಭಾರತಿ ನಾವಿ ಕುಟುಂಬಸ್ಥರು ನಾಗಪುರದ ಕಾರದಾ ಠಾಣೆಯಲ್ಲಿ ದಾಖಲಿಸಿದ್ದಾರೆ. ಆ ಪ್ರಕರಣದಲ್ಲೂ ರಾಯಣ್ಣ ನಾವಿ ಕುಟುಂಬ ಆರೋಪಿಯಾಗಿದ್ದರು. ಅಂದು ತಾಯಿ ಕೊಂದರು, ಇಂದು ಆಕೆಯ ಮಗಳು ಸಮೃದ್ಧಿಯನ್ನೂ ಕೊಂದಿದ್ದಾರೆ ಎಂದು ಮೊದಲ ಪತ್ನಿ ಕುಟುಂಬಸ್ಥರು ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: Drowned In water : ಕೆರೆಯಲ್ಲಿ ಈಜಲು ಹೋದ ಬಾಲಕರು ನೀರುಪಾಲು

ಮೇಲಿಂದ ಬಿದ್ದು ಬದುಕುಳಿದಿದ್ದ ಮಗುವಿನ ತಾಯಿ ಸೂಸೈಡ್‌; ಸೋಶಿಯಲ್‌ ಮೀಡಿಯಾ ಕಮೆಂಟ್‌ನಿಂದಲೇ ಖಿನ್ನತೆಗೊಳಗಾಗಿದ್ಳಾ?

ಕೊಯಂಬತ್ತೂರ್‌: ಕಳೆದ ತಿಂಗಳು ಅಪಾರ್ಟ್‌ಮೆಂಟ್‌(Apartment)ನ ಕಿಟಕಿಯಿಂದ ವಿಂಡೋ ಪೋರ್ಚ್‌(Window Porch) ಮೇಲೆ ಬಿದ್ದು, ಪವಾಡ ಸದೃಶ್ಯವಾಗಿ ಬದುಕಿ ಬಂದ ಏಳು ತಿಂಗಳ ಮಗುವಿನ(Toddler) ತಾಯಿ ಇದೀಗ ಆತಹತ್ಯೆಗೆ ಶರಣಾಗಿದ್ದಾಳೆ(Viral News). ಅವಡಿಯ ತಿರುಮಲ್ಲೈವೋವಲ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ತಾಯಿಯ ಮಡಿಲಿನಲ್ಲಿ ಆಟವಾಡುತ್ತಿದ್ದ ಮಗು ಇದ್ದಕ್ಕಿದ್ದಂತೆ ಕಿಟಕಿಯಿಂದ ಪ್ಲಾಸ್ಟಿಕ್‌ ಶೀಟ್‌ ಕವರ್‌ ಮಾಡಲಾಗಿದ್ದ ವಿಂಡೋ ಪೋರ್ಚ್‌ ಮೇಲೆ ಬಿದ್ದಿತ್ತು. ಮಗು ಅದೃಷ್ಟವಶಾತ್‌ ಅಲ್ಲೇ ನೇತಾಡಿಕೊಂಡು ಸ್ಥಳೀಯರ ಸಹಾಯದಿಂದ ಬದುಕುಳಿದಿತ್ತು.

ಈ ಘಟನೆ ಬಳಿಕ ಮಗುವಿನ ತಾಯಿ ರಮ್ಯಾ ತೀರ ಖಿನ್ನತೆಗೊಳಗಾಗಿದ್ದರು. ತನ್ನ ಅಜಾಗುರೂಕತೆಯಿಂದ ದುರಂತ ಸಂಭವಿಸಿದೆ ಎಂಬುದನ್ನು ಪದೇ ಪದೇ ಹೇಳುತ್ತಲೇ ಇದ್ದರು. ಇನ್ನು ನೆರೆಹೊರೆಯವರು, ನೆಟ್ಟಿಗರು ಈ ಘಟನೆ ಬಗ್ಗೆ ತಿಳಿದವರು ಎಲ್ಲರೂ ರಮ್ಯಾಳ ಅಜಾಗುರೂಕತೆಯಿಂದಲೇ ಈ ಘಟನೆ ನಡೆದಿದೆ ಎಂದು ದೂರುತ್ತಿದ್ದರು. ಇದರಿಂದ ಬೇಸರಗೊಂಡಿದ್ದ ರಮ್ಯಾ ಖಿನ್ನತೆಗೊಳಗಾಗಿದ್ದರು. ಇದನ್ನು ಗಮನಿಸಿದ ಆಕೆಯ ಪತಿ ವೆಂಕಟೇಶ್‌ ಕೊಯಂಬತ್ತೂರ್‌ನಲ್ಲಿರುವ ಆಕೆಯ ತವರು ಮನೆಗೆ ಕರೆದುಕೊಂಡು ಬಂದಿದ್ದರು.

ಭಾನುವಾರ ರಮ್ಯಾಳನ್ನು ಒಬ್ಬಳೇ ಮನೆಯಲ್ಲಿ ಬಿಟ್ಟು ಎಲ್ಲರೂ ಕಾರ್ಯಕ್ರಮವೊಂದಕ್ಕೆ ತೆರಳಿದ್ದರು. ವಾಪಸ್‌ ಮನೆಗೆ ಬಂದಾಗ ರಮ್ಯಾ ಪ್ರಜ್ಞೆ ತಪ್ಪಿ ಬಿದ್ದಿದ್ದನ್ನು ಕಂಡು ಮನೆಯವರು ಗಾಬರಿಗೊಂಡಿದ್ದಾರೆ. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅಲ್ಲಿ ಆಕೆ ಕೊನೆಯುಸಿರೆಳೆದಿದ್ದಾಳೆ. ಇನ್ನು ಆಕೆಯ ಸಾವಿಗೆ ಕಾರಣ ಏನೆಂಬುದು ಸರಿಯಾಗಿ ತಿಳಿದುಬಂದಿಲ್ಲ. ಆಕೆ ಏನಾದರೂ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಅವಡಿಯ ತಿರುಮಲ್ಲೈವೋವಲ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಏ.28ರಂದು ತಾಯಿಯ ಮಡಿಲಿನಲ್ಲಿ ಆಟವಾಡುತ್ತಿದ್ದ ಮಗು ಇದ್ದಕ್ಕಿದ್ದಂತೆ ಕಿಟಕಿಯಿಂದ ಪ್ಲಾಸ್ಟಿಕ್‌ ಶೀಟ್‌ ಕವರ್‌ ಮಾಡಲಾಗಿದ್ದ ವಿಂಡೋ ಪೋರ್ಚ್‌ ಮೇಲೆ ಬಿದ್ದಿತ್ತು. ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರು ತಕ್ಷಣ ಮಗುವಿನ ರಕ್ಷಣೆಗೆ ಧಾವಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ವಿಂಡೋ ಪೋರ್ಚ್‌ ಮೇಲೆ ಬಿದ್ದಿ ಮಗುವಿನ ರಕ್ಷಣೆಗೆ ದೌಡಾಯಿಸಿದ್ದ ಅಪಾರ್ಟ್‌ಮೆಂಟ್‌ ನಿವಾಸಿಗಳು ಮತ್ತೊಂದು ಕಿಟಕಿಯಿಂದ ಹೊರಬಂದು ಮಗುವನ್ನು ರಕ್ಷಿಸಿಲು ಹರಸಾಹನ ಪಟ್ಟರು. ನಾಲ್ಕೈದು ಜನ ಕಿಟಕಿಯ ಹೊರ ಭಾಗದಲ್ಲಿರುವ ಸಣ್ಣ ಜಾಗದಲ್ಲಿ ನಿಂತು ಮಗುವಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ರಕ್ಷಿಸಿದ್ದಾರೆ. ಇನ್ನು ಕೆಳಗೆ ಅನೇಕ ಜನ ದೊಡ್ಡ ಬಟ್ಟೆಯೊಂದು ಹಿಡಿದು ಮಗುವಿನ ರಕ್ಷಣೆಗೆ ಸಹಾಯ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಪ್ರಶಂಸೆ ವ್ಯಕ್ತಪಡಿಸಿರುವ ನೆಟ್ಟಿಗರು, ಅಚಾನಕ್ಕಾಗಿ ನಾಲ್ಕನೇ ಮಹಡಿಯಿಂದ ವಿಂಡೋ ಪೋರ್ಚ್‌ ಮೇಲೆ ಬಿದ್ದಿದ್ದ 7 ತಿಂಗಳಿನ ಮಗುವನ್ನು ಬಹಳ ಜಾಣ್ಮೆಯಿಂದ ರಕ್ಷಿಸಿದ್ದಾರೆ. ಅವರ ಕಾರ್ಯಕ್ಕೆ ಸಲಾಂ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

‌Rave Party: ʼರೇವ್‌ ಪಾರ್ಟಿಯಲ್ಲಿ ನಾನಿಲ್ಲʼ ಎಂದು ವಿಡಿಯೋ ಮಾಡಿದ ತೆಲುಗು ನಟಿ; ಐವರ ಬಂಧನ

‌Rave Party: ಸಿಸಿಬಿ ಪೊಲೀಸರು ದಾಳಿ ಮಾಡಿದ ಸಂದರ್ಭದಲ್ಲಿ ಪಾರ್ಟಿ ಆಯೋಜಕರು ಸ್ಥಳದ ಡೋರ್‌ಲಾಕ್ ಮಾಡಿಕೊಂಡಿದ್ದಲ್ಲದೆ, ಎಂಡಿಎಂಎ ಮತ್ತು ಇನ್ನಿತರೆ ಮಾದಕ ವಸ್ತುಗಳನ್ನು ಸಿಕ್ಕಸಿಕ್ಕಲ್ಲಿ ಎಸೆದಿದ್ದರು. ಪೊಲೀಸರು ಎಂದು ಗೊತ್ತಾಗುತ್ತಿದ್ದಂತೆ ಓಡಿಹೋಗಲು ಯತ್ನಿಸಿದ್ದಾರೆ. ಡ್ರಗ್ಸ್‌ ಅನ್ನು ಬಾತ್ ರೂಂನ ಕಮೋಡ್‌ನಲ್ಲಿ ಹಾಕಿ ಫ್ಲಶ್ ಮಾಡಿದ್ದಾರೆ. ಪೊಲೀಸರು ಬಲವಂತವಾಗಿ ಡೋರ್ ತೆಗಿಸಿ ಒಳಹೋಗಿದ್ದು, ಸದ್ಯ ಫಾರ್ಮ್ ಹೌಸಿನ ಇಂಚಿಂಚನ್ನೂ ಬಿಡದೆ ಜಾಲಾಡುತ್ತಿದ್ದಾರೆ.

VISTARANEWS.COM


on

rave party telugu actress hema
Koo

ಬೆಂಗಳೂರು: ನಿನ್ನೆ ತಡರಾತ್ರಿ ಎಲೆಕ್ಟ್ರಾನಿಕ್‌ ಸಿಟಿಯ (electronic city) ಫಾರಂ ಹೌಸ್‌ನಲ್ಲಿ (Farm house) ನಡೆದ ರೇವ್‌ ಪಾರ್ಟಿಯಲ್ಲಿ (Rave party) ತೆಲುಗು ನಟಿ ಹೇಮಾ (telugu actress Hema) ಭಾಗಿಯಾಗಿದ್ದು, ಪೊಲೀಸ್‌ ವಶದಲ್ಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ಅಲ್ಲಿ ತಾನಿರಲಿಲ್ಲ ಎಂದು ಹೇಮಾ ವಿಡಿಯೋ ಸಂದೇಶ ಹರಿಬಿಟ್ಟಿದ್ದಾರೆ. ಪಾರ್ಟಿ ಮಾಡಿದ ಐವರನ್ನು ಬಂಧಿಸಲಾಗಿದೆ.

ಮೂಲಗಳ ಪ್ರಕಾರ, ಮುಜುಗರ ತಪ್ಪಿಸಲು ಅದೇ ಫಾರಂ ಹೌಸ್‌ನಲ್ಲೇ ವಿಡಿಯೋ ಚಿತ್ರೀಕರಿಸಿ ಅವರು ಹರಿಬಿಟ್ಟಿದ್ದಾರೆ ಎನ್ನಲಾಗಿದೆ. ಹೆಬ್ಬಗೋಡಿ ಫಾರ್ಮ್ ಹೌಸ್ ಒಳಗಡೆಯೇ ವಿಡಿಯೋ ಮಾಡಿ, ತಾನು ಹೈದರಾಬಾದ್‌ ಫಾರ್ಮ್ ಹೌಸ್‌ನಲ್ಲಿದ್ದೀನಿ ಎಂದು ಹೇಳುತ್ತಿದ್ದಾರೆ ಎನ್ನಲಾಗಿದೆ. ಸದ್ಯ ನಟಿಯ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

ಕಮೋಡ್‌ನಲ್ಲಿ ಫ್ಲಶ್‌ ಮಾಡಿದರು!

ಸಿಸಿಬಿ ಪೊಲೀಸರು ದಾಳಿ ಮಾಡಿದ ಸಂದರ್ಭದಲ್ಲಿ ಪಾರ್ಟಿ ಆಯೋಜಕರು ಸ್ಥಳದ ಡೋರ್‌ಲಾಕ್ ಮಾಡಿಕೊಂಡಿದ್ದಲ್ಲದೆ, ಎಂಡಿಎಂಎ ಮತ್ತು ಇನ್ನಿತರೆ ಮಾದಕ ವಸ್ತುಗಳನ್ನು ಸಿಕ್ಕಸಿಕ್ಕಲ್ಲಿ ಎಸೆದಿದ್ದರು. ಪೊಲೀಸರು ಎಂದು ಗೊತ್ತಾಗುತ್ತಿದ್ದಂತೆ ಓಡಿಹೋಗಲು ಯತ್ನಿಸಿದ್ದಾರೆ. ಡ್ರಗ್ಸ್‌ ಅನ್ನು ಬಾತ್ ರೂಂನ ಕಮೋಡ್‌ನಲ್ಲಿ ಹಾಕಿ ಫ್ಲಶ್ ಮಾಡಿದ್ದಾರೆ. ಪೊಲೀಸರು ಬಲವಂತವಾಗಿ ಡೋರ್ ತೆಗಿಸಿ ಒಳಹೋಗಿದ್ದು, ಸದ್ಯ ಫಾರ್ಮ್ ಹೌಸಿನ ಇಂಚಿಂಚನ್ನೂ ಬಿಡದೆ ಜಾಲಾಡುತ್ತಿದ್ದಾರೆ.

3 ಜನ ಡ್ರಗ್ ಪೆಡ್ಲರ್‌ಗಳು, ಆಯೋಜಕ ವಾಸು ಸೇರಿ ಐದು ಜನರನ್ನು ಬಂಧಿಸಲಾಗಿದೆ. ಪಾರ್ಟಿಯಲ್ಲಿ ಡ್ರಗ್ ಪೆಡ್ಲರ್‌ಗಳೂ ಭಾಗಿಗಳಾಗಿದ್ದರು. ಇವರು ಯಥೇಚ್ಛವಾಗಿ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದರು. ವಾಸು ಹುಟ್ಟಿದ ಹಬ್ಬಕ್ಕೆ ಪಾರ್ಟಿ ಆಯೋಜಿಸಿದ ಆರ್ಗನೈಸರ್ ಅರುಣ್, ಸಿದ್ಧಿಕಿ, ರಣಬೀರ್, ನಾಗಬಾಬುರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮಾದಕ ವಸ್ತು ಸಿಕ್ಕಿದಂತಹ ಐಷಾರಾಮಿ ಮರ್ಸಿಡಿಸ್‌ ಬೆಂಜ್‌, ರೇಂಜ್ ರೋವರ್, ಆಡಿ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.

ಸದ್ಯ ಪೊಲೀಸರು ರೇವ್‌ ಪಾರ್ಟಿಯಲ್ಲಿದ್ದ 101 ಮಂದಿಯನ್ನೂ ಕೂರಿಸಿಕೊಂಡು, ಯಾರ್ಯಾರು ಡ್ರಗ್ಸ್‌ ತೆಗೆದುಕೊಂಡಿದ್ದಾರೆ ಎಂಬುದಕ್ಕೆ ವೈದ್ಯಕೀಯ ಪರೀಕ್ಷೆ ಮಾಡಿಸುತ್ತಿದ್ದಾರೆ. ಮೆಡಿಕಲ್‌ ಟೀಮನ್ನು ಫಾರಂ ಹೌಸ್‌ಗೆ ಕರೆಸಲಾಗಿದ್ದು, ಮೆಡಿಕಲ್‌ ಮುಗಿಯುವವರೆಗೆ ಎಲ್ಲ ಅತಿಥಿಗಳನ್ನೂ ಫಾರಂ ಹೌಸ್‌ ತೊರೆಯದಂತೆ ನಿರ್ಬಂಧಿಸಲಾಗಿದೆ. ಸದ್ಯ 30 ಜನ ಹುಡುಗಿಯರು, 71 ಜನ ಪುರುಷರು ಹೀಗೆ ಒಟ್ಟು 101 ಜನರ ವಿಚಾರಣೆ ನಡೆಯುತ್ತಿದೆ.

ಪಾರ್ಟಿ ಆಯೋಜಕ, ಆರೋಪಿ ವಾಸು ಇದೀಗ ಪೊಲೀಸರಿಂದ ಬಚಾವಾಗಲು ʼನಾನು ಪಾರ್ಟಿಗೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಅನುಮತಿ ಪಡೆದಿದ್ದೇನೆಂದುʼ ಸುಳ್ಳು ಹೇಳಿಕೆ ನೀಡಿದ್ದಾನೆ. ಆದರೆ ಫಾರ್ಮ್ ಹೌಸ್ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿದೆ. ಪಾರ್ಟಿಗೆ ಬಂದವರು ಫಾರ್ಮ್ ಹೌಸ್ ಒಳಗೆ ಹೋಗಬೇಕಾದರೆ ಸೆಕ್ಯೂರಿಟಿಗೆ ಪಾಸ್ ವರ್ಡ್ ಹೇಳಬೇಕಿತ್ತು. ವಾಸು ನೀಡಿದ ಪಾಸ್‌ವರ್ಡ್ ಹೇಳಿದರೆ ಮಾತ್ರ ಒಳಗೆ ಎಂಟ್ರಿಯಾಗಬಹುದಿತ್ತು. ಡ್ರಗ್ ಪಾರ್ಟಿ ಹಿನ್ನೆಲೆಯಲ್ಲಿ ಬೇರೆ ಯಾರಾದರು ಬರದಿರಲಿ ಎಂಬ ಕಾರಣಕ್ಕೆ ವಾಸು ಪಾಸ್‌ವರ್ಡ್ ನೀಡಿದ್ದ.

ಫಾರಂ ಹೌಸ್‌ನಲ್ಲಿ ಸದ್ಯ ಭಾರಿ ಪ್ರಮಾಣದಲ್ಲಿ ಎಂಡಿಎಂಎ, ಕ್ಯಾಪ್ಸೂಲ್, ಕೊಕೇನ್ ಇತ್ಯಾದಿ ಮಾದಕ ವಸ್ತುಗಳು ದೊರೆತಿವೆ. 45 ಗ್ರಾಂನಷ್ಟು ಡ್ರಗ್ ವಶಕ್ಕೆ ಪಡೆಯಲಾಗಿದೆ. 1 ಗ್ರಾಂ ಕೊಕೇನ್‌ಗೆ 8ರಿಂದ 9 ಸಾವಿರ ರೂ. ದರವಿದೆ. ಇಂತಹ ಕೊಕೇನ್ ಭಾರಿ ಪ್ರಮಾಣದಲ್ಲಿ ಪಾರ್ಟಿಯಲ್ಲಿ ಪತ್ತೆಯಾಗಿದೆ. ಸದ್ಯ ಸಿಕ್ಕಿರುವ ಡ್ರಗ್ಸ್‌ನ ಮೌಲ್ಯ ಪರಿಶೀಲನೆಯನ್ನು ಸಿಸಿಬಿ ನಡೆಸುತ್ತಿದೆ.

ಸ್ಥಳಕ್ಕೆ ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಳೆದಂಡಿ ಆಗಮಿಸಿ ತನಿಖೆಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ನಡೆಸುತ್ತಿದ್ದ ವಾಸು ಈ ಹಿಂದೆ ಕೂಡ ಇದೇ ರೀತಿಯ ರೇವ್ ಪಾರ್ಟಿ ಮಾಡಿರುವ ಶಂಕೆ ಇದೆ. ಇನ್ನಷ್ಟು ಡ್ರಗ್ ಪೆಡ್ಲರ್‌ಗಳ ಪತ್ತೆಗೆ ಸಿಸಿಬಿ ಮುಂದಾಗಿದೆ.

ಕಳೆದ ಶುಕ್ರವಾರದಿಂದಲೇ ಪಾರ್ಟಿಗೆ ಸಿದ್ಧತೆ ನಡೆದಿತ್ತು. ಪಾರ್ಟಿಯಲ್ಲಿ ಭಾಗಿಯಾಗಿರುವ ಬಹುತೇಕರು ಆಂಧ್ರ ಮೂಲದ ಉದ್ಯಮಿಗಳು. ಖ್ಯಾತ ಹೋಟೆಲ್‌ಗಳ ಮಾಲೀಕರ ಮಕ್ಕಳು, ತೆಲುಗು ಸಿನಿರಂಗದ ಕಲಾವಿದರು, ಮಾಡೆಲ್‌ಗಳು, ದಕ್ಷಿಣಭಾರತದ ಖ್ಯಾತ ಡಿಜೆಗಳು ಭಾಗಿಯಾಗಿದ್ದಾರೆ. ಆಂಧ್ರ ಮೂಲದವರಾಗಿದ್ದು ಬೆಂಗಳೂರಿನಲ್ಲಿ ಬಿಝಿನೆಸ್ ಹೊಂದಿರುವ ಬಹುತೇಕರು ಇದ್ದರು. ಫಾರಂ ಹೌಸ್‌ನ ಹೊರಗೆ ನಿಂತಿರುವ ವಿಲಾಸಿ ವಾಹನಗಳಲ್ಲಿ ಆಂಧ್ರ ಮೂಲದ ವಾಹನಗಳೇ ಹೆಚ್ಚಿವೆ.

ನಿನ್ನೆ ಸಂಜೆ ಐದು ಗಂಟೆಯಿಂದಲೇ ಪಾರ್ಟಿ ಶುರುವಾಗಿದ್ದು, ಸ್ಥಳೀಯ ಪೊಲೀಸರ ಕರ್ತವ್ಯ ಲೋಪ ಗಮನಿಸಲಾಗಿದೆ. ಡ್ರಗ್ಸ್ ಪಾರ್ಟಿ ನಡೀತಿದ್ರೂ ಪೊಲೀಸರ ಗಮನಕ್ಕೆ ಬಂದಿಲ್ಲ. ಶುಕ್ರವಾರದಿಂದಲೇ ಪಾರ್ಟಿ ಸಿದ್ಧತೆ ನಡೆದಿದೆ. ಭಾರಿ ಪ್ರಮಾಣದಲ್ಲಿ ಡ್ರಗ್ ಸರಬರಾಜು ಆಗಿದೆ. ಡ್ರಗ್ ಪೆಡ್ಲರ್‌ಗಳ ಬಗ್ಗೆ ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದ ತಂಡ ಮಾಹಿತಿ ಕಲೆ ಹಾಕುತ್ತಿದೆ.

ತನಿಖೆ ನಡೆಯುತ್ತಿದೆ

“ಬೆಂಗಳೂರು ಹೊರ ವಲಯದಲ್ಲಿ ನೂರು ಜನರನ್ನೊಳಗೊಂಡ ರೇವ್ ಪಾರ್ಟಿ ನಡೆದಿದೆ. ತಪಾಸಣೆ ವೇಳೆ ದೊಡ್ಡ ಪ್ರಮಾಣದಲ್ಲಿ ಮಾದಕವಸ್ತುಗಳು ಪತ್ತೆಯಾಗಿವೆ. ಮಾದಕ ಸೇವನೆ ಬಗ್ಗೆ ತನಿಖೆ ನಡೆಯಲಾಗುತ್ತಿದೆ. ಎಫ್ಎಸ್ಎಲ್ ಹಾಗೂ ಸೋಕೋ ‌ಟೀಂನಿಂದ ತಪಾಸಣೆ ನಡೆಯಲಾಗುತ್ತಿದೆ. ಆಯೋಜಕ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಘಟನೆ ಸಂಬಂಧ ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜಿ. ಆರ್. ಪಾರ್ಮ್‌ಹೌಸ್‌ನ ಮಾಲೀಕರ ಬಗ್ಗೆ ಸ್ಥಳೀಯ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆʼʼ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಡಾ.‌ಚಂದ್ರಗುಪ್ತಾ ಹೇಳಿಕೆ ಕೊಟ್ಟಿದ್ದಾರೆ.

Continue Reading

ದೇಶ

Murder Case: ತಾಜ್‌ ಮಹಲ್‌ ಸಮೀಪದಲ್ಲೇ ಘೋರ ಕೃತ್ಯ; ಮಸೀದಿಯೊಳಗೆ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಡೆಡ್‌ಬಾಡಿ ಪತ್ತೆ

Murder Case: ತಾಜ್‌ ಮಹಲ್‌ ಸಮೀಪದಲ್ಲಿರುವ ಮಸೀದಿಯಲ್ಲಿ ಈ ಘಟನೆ ನಡೆದಿದ್ದು, ಅರೆನಗ್ನಾವಸ್ಥೆಯಲ್ಲಿ 22ವರ್ಷದ ಯುವತಿ ಮೃತದೇಹ ಪತ್ತೆಯಾಗಿದೆ. ಪ್ರಾರ್ಥನೆ ಸಲ್ಲಿಸಲೆಂದು ಮಸೀದಿಗೆ ಬಂದವರು ಮೃತದೇಹ ಬಿದ್ದಿರುವುದನ್ನು ಕಂಡಿದ್ದಾರೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ತನಿಖೆಗೆ ಕೈಗೆತ್ತಿಕೊಂಡಿದ್ದಾರೆ. ಈ ಘಟನೆಯಿಂದ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.

VISTARANEWS.COM


on

Murder case
Koo

ಉತ್ತರಪ್ರದೇಶ :ವಿಶ್ವ ವಿಖ್ಯಾತ ತಾಜ್‌ಮಹಲ್‌(Taj Mahal) ಸಮೀಪದಲ್ಲೇ ಇರುವ ಮಸೀದಿಯಲ್ಲಿ ಯುವತಿಯ ಮೃತದೇಹ(dead body) ಅನುಮಾನಾಸ್ಪದವಾಗಿ ಪತ್ತೆಯಾಗಿರುವ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ. ಇಲ್ಲಿನ ನಾಗ್ಲಾ ಪೈಮಾ ಪ್ರದೇಶದಲ್ಲಿರುವ ಮಸೀದಿಯಲ್ಲಿ ಈ ಘಟನೆ ನಡೆದಿದ್ದು, ಇದು ಕೊಲೆ(Murder Case) ಎಂದು ಶಂಕಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಹಂತಕನಿಗಾಗಿ ಬಲೆ ಬೀಸಿದ್ದಾರೆ.

ತಾಜ್‌ ಮಹಲ್‌ ಸಮೀಪದಲ್ಲಿರುವ ಮಸೀದಿಯಲ್ಲಿ ಈ ಘಟನೆ ನಡೆದಿದ್ದು, ಅರೆನಗ್ನಾವಸ್ಥೆಯಲ್ಲಿ 22ವರ್ಷದ ಯುವತಿ ಮೃತದೇಹ ಪತ್ತೆಯಾಗಿದೆ. ಪ್ರಾರ್ಥನೆ ಸಲ್ಲಿಸಲೆಂದು ಮಸೀದಿಗೆ ಬಂದವರು ಮೃತದೇಹ ಬಿದ್ದಿರುವುದನ್ನು ಕಂಡಿದ್ದಾರೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ತನಿಖೆಗೆ ಕೈಗೆತ್ತಿಕೊಂಡಿದ್ದಾರೆ. ಈ ಘಟನೆಯಿಂದ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.

ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರು, ಮಹಿಳೆ ಮೇಲೆ ಅತ್ಯಾಚಾರ ಎಸಗಿ ನಂತರ ಆಕೆಯನ್ನು ಕೊಲೆಗೈದು ಮಸೀದಿಯಲ್ಲಿ ತಂದು ಬಿಸಾಕಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಇನು ಹಂತಕನಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಇನ್ನು ಆ ಪ್ರದೇಶದಲ್ಲಿ ಅಳವಡಿಸಿರುವ ಸಿಸಿಟಿವಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ತೀವ್ರ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಮೃತದೇಹದ ಗುರುತು ಪತ್ತೆಗೆ ಯತ್ನಿಸುತ್ತಿದ್ದಾರೆ.

ಮುಖವನ್ನು ಸಂಪೂರ್ಣವಾಗಿ ಜಜ್ಜಿದ್ದ ಹಂತಕ

ಇನ್ನು ಹಂತಕ ಮೃತ ದುರ್ದೈವಿಯ ಮುಖವನ್ನು ಸಂಪೂರ್ಣವಾಗಿ ಕಲ್ಲಿನಿಂದ ಜಜ್ಜಿ ಕ್ರೌರ್ಯ ಮೆರೆದಿದ್ದಾನೆ. ಇನ್ನು ಮೃತದೇಹದಲ್ಲಿ ಸೊಂಟದ ಕೆಲಭಾಗ ಧರಿಸುವ ಬಟ್ಟೆ ಕಣ್ಮರೆಯಾಗಿದೆ. ಬಹುಷಃ ಮೃತ ಯುವತಿಗೂ ಹಂತಕನಿಗೂ ಮೊದಲೇ ಪರಿಚಯ ಇದ್ದಿರಬೇಕು. ಇದರ ಲಾಭ ಪಡೆದು ಕಿರಾತಕ ಆಕೆಯನ್ನು ಇಲ್ಲಿಗೆ ಕರೆತಂದು ಈ ದುಷ್ಕೃತ್ಯ ಎಸಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಇದನ್ನೂ ಓದಿ:Viral News: ಮೇಲಿಂದ ಬಿದ್ದು ಬದುಕುಳಿದಿದ್ದ ಮಗುವಿನ ತಾಯಿ ಸೂಸೈಡ್‌; ಸೋಶಿಯಲ್‌ ಮೀಡಿಯಾ ಕಮೆಂಟ್‌ನಿಂದಲೇ ಖಿನ್ನತೆಗೊಳಗಾಗಿದ್ಳಾ?

Continue Reading
Advertisement
IPL 2024
ಕ್ರೀಡೆ29 mins ago

IPL 2024: ಪ್ಲೇ ಆಫ್ ಪಂದ್ಯಗಳಿಗೆ ಮೀಸಲು ದಿನ ಇದೆಯೇ? ಮಳೆ ಬಂದರೆ ಫಲಿತಾಂಶ ನಿರ್ಧಾರ ಹೇಗೆ?

how many seats will the Congress have in the Lok Sabha elections CM Siddaramaiah statement
Lok Sabha Election 202448 mins ago

CM Siddaramaiah: ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಕಾರ ಕಾಂಗ್ರೆಸ್‌ಗೆ ಎಷ್ಟು ಸೀಟ್‌? ಸಂಪುಟ ಪುನಾರಚನೆ ಇಲ್ಲ!

Yami Gautam welcome baby boy
ಬಾಲಿವುಡ್54 mins ago

Yami Gautam: ನಟಿ ಯಾಮಿ ಗೌತಮ್‌ಗೆ ಗಂಡು ಮಗು; ಕಂದಮ್ಮನ ಹೆಸರೇನು?

Liquid Nitrogen Paan
ದೇಶ57 mins ago

Liquid Nitrogen Paan: ನೀವು ಲಿಕ್ವಿಡ್ ನೈಟ್ರೋಜನ್‌ ಪಾನ್‌ ಸೇವಿಸ್ತೀರಾ? ಹಾಗಿದ್ರೆ ಎಚ್ಚರ.. ಎಚ್ಚರ

road Accident in Mandya
ಮಂಡ್ಯ1 hour ago

Road Accident : ಬಸ್‌ ಗುದ್ದಿದ ರಭಸಕ್ಕೆ ಕಾರು ಛಿದ್ರ ಛಿದ್ರ; ಚಾಲಕ ಸ್ಪಾಟ್‌ ಡೆತ್‌, ನಾಲ್ವರಿಗೆ ಗಾಯ

CET result only after II PU 2nd exam Published on May 30 or 31
ಶಿಕ್ಷಣ1 hour ago

CET Result: ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ; ಮೇ 30 ಅಥವಾ 31ಕ್ಕೆ ಪ್ರಕಟ?

pretha maduve
ಧಾರ್ಮಿಕ1 hour ago

Pretha Maduve: ವಧುವಿನ ಆತ್ಮಕ್ಕೆ ದೊರೆತ ವರ, ಆಷಾಢದಲ್ಲಿ ʻಪ್ರೇತ ಮದುವೆ’ ಫಿಕ್ಸ್

Kannada New Movie Hondisi Bareyiri in youtube
ಸಿನಿಮಾ1 hour ago

Kannada New Movie: ಯೂಟ್ಯೂಬ್‌ನಲ್ಲಿ ಉಚಿತವಾಗಿ ನೋಡಬಹುದು ʻಹೊಂದಿಸಿ ಬರೆಯಿರಿʼ; ಆದರೆ ಇರಲಿದೆ ಬ್ಯಾಂಕ್ ಡಿಟೇಲ್ಸ್‌!

Prajwal should appear before SIT and face probe says Nikhil Kumaraswamy
ಕರ್ನಾಟಕ1 hour ago

Nikhil Kumaraswamy: ಪ್ರಜ್ವಲ್‌ ಎಸ್‌ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸುವುದೇ ಸೂಕ್ತ: ನಿಖಿಲ್‌ ಕುಮಾರಸ್ವಾಮಿ

Karnataka Rain
ಮಳೆ1 hour ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 hour ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ23 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌