Arvind Kejriwal: ದೆಹಲಿ ಸಿಎಂ ಆಪ್ತ ಕಾರ್ಯದರ್ಶಿ ಸೇರಿ ಆಪ್‌ ನಾಯಕರ ನಿವಾಸಗಳ ಮೇಲೆ ಇಡಿ ದಾಳಿ - Vistara News

ದೇಶ

Arvind Kejriwal: ದೆಹಲಿ ಸಿಎಂ ಆಪ್ತ ಕಾರ್ಯದರ್ಶಿ ಸೇರಿ ಆಪ್‌ ನಾಯಕರ ನಿವಾಸಗಳ ಮೇಲೆ ಇಡಿ ದಾಳಿ

Arvind Kejriwal: ದೆಹಲಿ ಜಲ ಮಂಡಳಿಗೆ ಸಂಬಂಧಿಸಿದ ಹಗರಣದ ತನಿಖೆಯ ಭಾಗವಾಗಿ ಇಡಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಮತ್ತು ಆಮ್ ಆದ್ಮಿ ಪಕ್ಷದ ಇತರ ಪ್ರಮುಖ ನಾಯಕರಿಗೆ ಸೇರಿದ ಸ್ಥಳಗಳ ಮೇಲೆ ದಾಳಿ ನಡೆಸಿದೆ.

VISTARANEWS.COM


on

Delhi CM moves motion of confidence in assembly and ED Summons to Kejriwal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ (Bibhav Kumar) ಮತ್ತು ಆಮ್ ಆದ್ಮಿ ಪಕ್ಷ(Aam Aadmi Party)ದ ಇತರ ಪ್ರಮುಖ ನಾಯಕರಿಗೆ ಸೇರಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ(Enforcement Directorate) ಮಂಗಳವಾರ ದಾಳಿ ನಡೆಸಿದೆ. ಹಣ ಅಕ್ರಮ ವರ್ಗಾವಣೆ ತನಿಖೆಯ ಭಾಗವಾಗಿ 10 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿ ಜಲ ಮಂಡಳಿಗೆ ಸಂಬಂಧಿಸಿದ ಹಗರಣದ ತನಿಖೆಯ ಭಾಗವಾಗಿ ಈ ಶೋಧ ನಡೆಸಲಾಗಿದೆ.

ತನಿಖೆಯ ಭಾಗವಾಗಿ ಕೇಂದ್ರ ತನಿಖಾ ಸಂಸ್ಥೆ ದೆಹಲಿ ಜಲ ಮಂಡಳಿ (DJB) ಮಾಜಿ ಸದಸ್ಯ ಶಲಭ್ ಕುಮಾರ್ ಮತ್ತು ಪಕ್ಷದ ರಾಜ್ಯಸಭಾ ಸದಸ್ಯರೂ ಆಗಿರುವ ಎಎಪಿ ಖಜಾಂಚಿ ಎನ್‌.ಡಿ.ಗುಪ್ತಾ ಅವರ ನಿವಾಸದಲ್ಲಿಯೂ ಶೋಧ ನಡೆಸಿದೆ.

ಏನಿದು ಅಕ್ರಮ?

ದೆಹಲಿ ಜಲ ಮಂಡಳಿಯ ಟೆಂಡರ್ ಪ್ರಕ್ರಿಯೆಯಲ್ಲಿ ನಡೆದ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಕೇಂದ್ರ ತನಿಖಾ ದಳ (CBI) ಮತ್ತು ದೆಹಲಿ ಸರ್ಕಾರದ ಭ್ರಷ್ಟಾಚಾರ ನಿಗ್ರಹ ದಳ (ACB) ಎಫ್ಐಆರ್ ದಾಖಲಿಸಿದ ಆಧಾರದ ಮೇಲೆ ಡಿಜೆಬಿಯ ಟೆಂಡರ್ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ಇಡಿ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ಪಿಎಂಎಲ್ಎ ಕಾನೂನಿನ ಅಡಿಯಲ್ಲಿ ಜಲ ಮಂಡಳಿಯ ಮಾಜಿ ಮುಖ್ಯ ಎಂಜಿನಿಯರ್ ಅವರನ್ನು ಬಂಧಿಸಲಾಗಿತ್ತು. ಅಲ್ಲದೆ ಉದ್ಯಮಿಯನ್ನೂ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೆಹಲಿ ಜಲ ಮಂಡಳಿಯ ಮುಖ್ಯ ಎಂಜಿನಿಯರ್ ಆಗಿದ್ದ ಜಗದೀಶ್ ಕುಮಾರ್ ಅರೋರಾ ಅವರು ವಿವಿಧ ಕಾಮಗಾರಿಗಳಿಗಾಗಿ ಎನ್‌ಕೆಜಿ ಇನ್ಫ್ರಾಸ್ಟ್ರಕ್ಚರ್‌ ಲಿಮಿಟೆಡ್‌ (NKG Infrastructure Ltd.)ಗೆ ಒಟ್ಟು 38 ಕೋಟಿ ರೂ.ಗಳ ಗುತ್ತಿಗೆಯನ್ನು ನೀಡಿದ್ದರು. ಎನ್‌ಕೆಜಿ ಇನ್ಫ್ರಾಸ್ಟ್ರಕ್ಚರ್‌ ಲಿಮಿಟೆಡ್‌ ನಕಲಿ, ಸುಳ್ಳು ದಾಖಲೆಗಳನ್ನು ಸಲ್ಲಿಸುವ ಮೂಲಕ ಬಿಡ್ ಪಡೆದುಕೊಂಡಿದೆ ಎನ್ನುವುದು ಇಡಿ ತನಿಖೆಯ ವೇಳೆ ಕಂಡು ಬಂದಿತ್ತು.

ಎನ್‌ಕೆಜಿ ಇನ್ಫ್ರಾಸ್ಟ್ರಕ್ಚರ್‌ ಲಿಮಿಟೆಡ್‌ ಬಳಿಕ ಅನಿಲ್ ಕುಮಾರ್ ಅಗರ್ವಾಲ್ ಒಡೆತನದ ಇಂಟೆಗ್ರಲ್ ಸ್ಕ್ರೂಸ್ ಲಿಮಿಟೆಡ್ (Integral Screws Ltd.)ಗೆ ಕಾಮಗಾರಿಯನ್ನ ಉಪಗುತ್ತಿಗೆ ನೀಡಿದೆ ಎಂದು ಹೆಚ್ಚಿನ ತನಿಖೆಯಿಂದ ತಿಳಿದು ಬಂದಿದೆ. ಹಣವನ್ನು ಸ್ವೀಕರಿಸಿದ ನಂತರ, ಅಗರ್ವಾಲ್ ನಗದು ಮತ್ತು ಬ್ಯಾಂಕ್ ವಹಿವಾಟು ಸೇರಿದಂತೆ ವಿವಿಧ ವಿಧಾನಗಳ ಮೂಲಕ ಜಗದೀಶ್ ಕುಮಾರ್ ಅರೋರಾ ಅವರಿಗೆ ಸುಮಾರು 3 ಕೋಟಿ ರೂ.ಗಳನ್ನು ಲಂಚವಾಗಿ ವರ್ಗಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ. ಲಂಚದ ಮೊತ್ತವನ್ನು ವರ್ಗಾಯಿಸಲು ಅರೋರಾ ಅವರ ಸಹವರ್ತಿಗಳು ಮತ್ತು ಸಂಬಂಧಿಕರಿಗೆ ಸೇರಿದ ಬ್ಯಾಂಕ್ ಖಾತೆಗಳನ್ನು ಬಳಸಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Arvind Kejriwal: ಅರವಿಂದ್ ಕೇಜ್ರಿವಾಲ್‌ಗೆ 5ನೇ ಬಾರಿ ಇ.ಡಿ. ಸಮನ್ಸ್!

ಇತ್ತ ಆರೋಪಗಳನ್ನು ನಿರಾಕರಿಸಿದ ಆಪ್‌ ನಾಯಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ʼʼಬಿಜೆಪಿಯ ಒತ್ತಾಯದ ಮೇರೆಗೆ ಇಡಿ ದಾಳಿ ನಡೆಸುತ್ತಿದೆ. ಈ ಮೂಲಕ ಬಿಜೆಪಿ ದ್ವೇಷದ ರಾಜಕರಣ ನಡೆಸುತ್ತಿದೆʼʼ ಎಂದು ಹೇಳಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

NDA Meeting: ಎನ್‌ಡಿಎ ಸಭೆಯಲ್ಲಿ ಮೋದಿಯ ಪಾದ ಮುಟ್ಟಿ ನಮಸ್ಕರಿಸಲು ಹೋದ ನಿತೀಶ್ ಕುಮಾರ್! ವಿಡಿಯೊ ನೋಡಿ

NDA Meeting: ಬಳಿಕ ನಿತೀಶ್‌ ಕುಮಾರ್‌ ಅವರು ನರೇಂದ್ರ ಮೋದಿ ಅವರ ಪಾದ ಮುಟ್ಟಿ ನಮಸ್ಕರಿಸಲು ಮುಂದಾದರು. ಆಗ ಮೋದಿ ಅವರು ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ನರೇಂದ್ರ ಮೋದಿ ಅವರಿಗೆ 73 ವರ್ಷ ವಯಸ್ಸಾಗಿದ್ದರೆ, ನಿತೀಶ್‌ ಕುಮಾರ್‌ ಅವರು ವಯಸ್ಸು ಕೂಡ 73 ವರ್ಷವಾಗಿದೆ. ಇಬ್ಬರೂ ಸಮಕಾಲೀನ ನಾಯಕರಾಗಿದ್ದಾರೆ.

VISTARANEWS.COM


on

NDA Meeting
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಎನ್‌ಡಿಎ ಮೈತ್ರಿಕೂಟವು 292 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಎನ್‌ಡಿಎ ಸಭೆಯಲ್ಲಿ (NDA Meeting) ನರೇಂದ್ರ ಮೋದಿ (Narendra Modi) ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಜೂನ್‌ 9ರಂದು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇನ್ನು, ಶುಕ್ರವಾರ ನಡೆದ ಎನ್‌ಡಿಎ ಸಭೆಯಲ್ಲಿ ನಿತೀಶ್‌ ಕುಮಾರ್‌ (Nitish Kumar) ಅವರು ನರೇಂದ್ರ ಮೋದಿ ಅವರ ಪಾದ ಮುಟ್ಟಿ ನಮಸ್ಕರಿಸಲು ಮುಂದಾದರು. ಆಗ ನರೇಂದ್ರ ಮೋದಿ ಅವರು ಅವರನ್ನು ತಡೆದರು. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಸಂಸದೀಯ ಪಕ್ಷದ ಸಭೆಯಲ್ಲಿ ರಾಜನಾಥ್‌ ಸಿಂಗ್‌ ಅವರು ನರೇಂದ್ರ ಮೋದಿ ಅವರ ಹೆಸರನ್ನು ಶಾಸಕಾಂಗ ಪಕ್ಷದ ನಾಯಕ ಎಂಬುದಾಗಿ ಪ್ರಸ್ತಾಪಿಸಿದರು. ಇದಕ್ಕೆ, ಎನ್‌ಡಿಎ ಮೈತ್ರಿಕೂಟದ ಸದಸ್ಯರೆಲ್ಲರೂ ಚಪ್ಪಾಳೆ ತಟ್ಟಿ ಬೆಂಬಲ ವ್ಯಕ್ತಪಡಿಸಿದರು. ಇದಾದ ಬಳಿಕ ನಿತೀಶ್‌ ಕುಮಾರ್‌ ಅವರು ನರೇಂದ್ರ ಮೋದಿ ಅವರ ಪಾದ ಮುಟ್ಟಿ ನಮಸ್ಕರಿಸಲು ಮುಂದಾದರು. ಆಗ ಮೋದಿ ಅವರು ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ನರೇಂದ್ರ ಮೋದಿ ಅವರಿಗೆ 73 ವರ್ಷ ವಯಸ್ಸಾಗಿದ್ದರೆ, ನಿತೀಶ್‌ ಕುಮಾರ್‌ ಅವರು ವಯಸ್ಸು ಕೂಡ 73 ವರ್ಷವಾಗಿದೆ. ಇಬ್ಬರೂ ಸಮಕಾಲೀನ ನಾಯಕರಾಗಿದ್ದಾರೆ.

ಸಭೆಯಲ್ಲಿ ಮಾತನಾಡಿದ ನರೇಂದ್ರ ಮೋದಿ ಅವರು ನಿತೀಶ್‌ ಕುಮಾರ್‌, ಪವನ್‌ ಕಲ್ಯಾಣ್‌ ಸೇರಿ ಹಲವರನ್ನು ಹೊಗಳಿದರು. ಯೋಗಿ ಆದಿತ್ಯನಾಥ್‌ ಅವರ ಬೆನ್ನನ್ನೂ ತಟ್ಟಿದರು. ಇದೇ ವೇಳೆ, ದಕ್ಷಿಣ ಭಾರತದ ಫಲಿತಾಂಶದ ಕುರಿತು ಕೂಡ ಮೋದಿ ಪ್ರಸ್ತಾಪಿಸಿದರು.

“ದಕ್ಷಿಣ ಭಾರತದಲ್ಲಿ ಎನ್‌ಡಿಎ ಬುನಾದಿ ಭದ್ರವಾಗಿದ್ದು, ಹೊಸ ರಾಜಕೀಯಕ್ಕೆ ಇದು ನಾಂದಿಯಾಗಿದೆ. ಕರ್ನಾಟಕ ಹಾಗೂ ತೆಲಂಗಾಣವನ್ನೇ ತೆಗೆದುಕೊಳ್ಳಿ, ಇತ್ತೀಚೆಗೆ ಬೇರೆ ಪಕ್ಷಗಳ ಸರ್ಕಾರಗಳು ಅಲ್ಲಿ ಆಡಳಿತಕ್ಕೆ ಬಂದಿವೆ. ಆದರೆ, ಜನರು ಭ್ರಮೆಯಿಂದ ಹೊರಬಂದು ಎನ್‌ಡಿಎ ಮೈತ್ರಿಕೂಟವನ್ನು ಬೆಂಬಲಿಸಿದ್ದಾರೆ. ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಜನ ಎನ್‌ಡಿಎ ಮೈತ್ರಿಕೂಟವನ್ನು ಸ್ವೀಕರಿಸಿದ್ದಾರೆ. ಇದು ಎನ್‌ಡಿಎ ಮೇಲೆ ಜನ ಇಟ್ಟಿರುವ ವಿಶ್ವಾಸಕ್ಕೆ ಸಾಕ್ಷಿಯಾಗಿದೆ” ಎಂದು ಹೇಳಿದರು.

“ಕರ್ನಾಟಕ, ತೆಲಂಗಾಣದ ಜತೆಗೆ ತಮಿಳುನಾಡಿನ ತಂಡಕ್ಕೂ ನಾನು ಅಭಿನಂದನೆ ತಿಳಿಸುತ್ತೇನೆ. ನಾವು ಒಗ್ಗೂಡಿ ಹೋರಾಡಿದರೂ ಒಂದು ಸೀಟು ಕೂಡ ಗೆಲ್ಲಲು ಆಗಲಿಲ್ಲ. ಆದರೆ, ಎನ್‌ಡಿಎ ಮತಗಳಿಕೆಯ ಪ್ರಮಾಣವು ಜಾಸ್ತಿಯಾಗಿದೆ. ಇದರಿಂದ ಸ್ಪಷ್ಟ ಸಂದೇಶ ರವಾನೆಯಾದಂತಾಗಿದೆ. ಮುಂದಿನ ದಿನಗಳಲ್ಲಿ ತಮಿಳುನಾಡಿನಲ್ಲಿ ಎನ್‌ಡಿಎಗೆ ಜನಬೆಂಬಲ ಸಿಗುತ್ತದೆ ಎಂಬುದಕ್ಕೆ ಇದು ಸಂಕೇತವಾಗಿದೆ. ಕೇರಳದಲ್ಲಿ ನಮ್ಮ ನೂರಾರು ಕಾರ್ಯಕರ್ತರು ತ್ಯಾಗ, ಬಲಿದಾನ ಮಾಡಿದರು. ಇದೇ ಮೊದಲ ಬಾರಿಗೆ ಕೇರಳದಲ್ಲಿ ಎನ್‌ಡಿಎ ಖಾತೆ ತೆರೆದಿದೆ” ಎಂದು ತಿಳಿಸಿದರು.

ಇದನ್ನೂ ಓದಿ: Narendra Modi: ಕರ್ನಾಟಕದಲ್ಲಿ ಬಿಜೆಪಿ ಗೆಲುವಿನ ಬಗ್ಗೆ ನರೇಂದ್ರ ಮೋದಿ ಹೇಳಿದ್ದೇನು?

Continue Reading

ರಾಜಕೀಯ

Pawan Kalyan: ಪವನ್ ಕಲ್ಯಾಣ್ ಗಾಳಿಯಲ್ಲ ಬಿರುಗಾಳಿ ಎಂದ ಮೋದಿ! ಮೋದಿ ಇರುವವರೆಗೆ ದೇಶ ತಲೆಬಾಗುವುದಿಲ್ಲ ಎಂದ ಪವನ್‌!

ತೆಲುಗು ನಟ, ರಾಜಕಾರಣಿ ಪವನ್ ಕಲ್ಯಾಣ್ (Pawan Kalyan) ಅವರು ತಂಗಾಳಿಯಲ್ಲ, ಬಿರುಗಾಳಿ ಎಂದು ಸಂಸತ್ತಿನಲ್ಲಿ ನಡೆದ ಎನ್ ಡಿಎ ಮೈತ್ರಿಕೂಟದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿರುವುದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ (Viral Video) ಆಗಿದೆ. ನಟ ಪವನ್ ಕಲ್ಯಾಣ್ ಅವರ ಸಾಕಷ್ಟು ಅಭಿಮಾನಿಗಳು ಪ್ರಧಾನಿ ಅವರ ಈ ಮಾತುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

By

Pawan Kalyan
Koo

ನವದೆಹಲಿ: ಸಂಸತ್ತಿನಲ್ಲಿ (Parliament) ಶುಕ್ರವಾರ (Pawan Kalyan) ನಡೆದ ಎನ್ ಡಿ ಎ (NDA) ಮೈತ್ರಿ ಕೂಟದ ಸಭೆಯಲ್ಲಿ ತೆಲುಗು ದೇಶಂ ಪಕ್ಷವು (TDP) ಎನ್ ಡಿ ಎ ಮೈತ್ರಿಕೂಟದ ಭಾಗವಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ (PM Narendra Modi), ಇಲ್ಲಿ ಕುಳಿತಿರುವ ವ್ಯಕ್ತಿ ಗಾಳಿಯಲ್ಲ, ಬಿರುಗಾಳಿ ಎಂದು ತೆಲುಗು ನಟ (Telugu actor), ರಾಜಕಾರಣಿ ಪವನ್ ಕಲ್ಯಾಣ್ ( Pawan Kalyan) ಅವರ ಕುರಿತಾಗಿ ಹಾಸ್ಯ ಚಟಾಕಿ ಹಾರಿಸಿದರು.

ಪವನ್ ಕಲ್ಯಾಣ್ ಕುರಿತು ನರೇಂದ್ರ ಮೋದಿ ಮಾಡಿರುವ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ (social media) ಭಾರಿ ವೈರಲ್ (Viral Video) ಆಗಿದೆ. ನಟ ಪವನ್ ಕಲ್ಯಾಣ್ ಅವರ ಸಾಕಷ್ಟು ಅಭಿಮಾನಿಗಳು ಪ್ರಧಾನಿ ಅವರ ಈ ಮಾತುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕೆಲವು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಕಾಮೆಂಟ್ ಮಾಡಿ, ಪವನ್ ಕಲ್ಯಾಣ್ ಅವರ ಸಿನಿಮಾಗಳ ‘ಮೊದಲ ದಿನದ ಮೊದಲ ಶೋ’ ನೋಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೇಳಿದ್ದಾರೆ.


ಈ ನಡುವೆ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ನರೇಂದ್ರ ಮೋದಿಯವರ ನಾಯಕತ್ವವನ್ನು ಮೆಚ್ಚಿ ಮಾತನಾಡಿದರು.

ನರೇಂದ್ರ ಮೋದಿ ಅವರಿಗೆ ಪಕ್ಷದ ಪರವಾಗಿ ಧನ್ಯವಾದ ಅರ್ಪಿಸಿದ ಪವನ್ ಕಲ್ಯಾಣ್, ನರೇಂದ್ರ ಮೋದಿ ಅವರು 15 ವರ್ಷಗಳ ಕಾಲ ಪ್ರಧಾನಿಯಾಗಿರುತ್ತಾರೆ ಎಂದು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಹೇಳಿದ್ದನ್ನು ನೆನಪಿಸಿಕೊಂಡರು. ಚಂದ್ರಬಾಬೂಜಿ ನಿಮ್ಮ ಭವಿಷ್ಯ ನಿಜವಾಯಿತು ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.


ಅವರು ತಮ್ಮ ಮಾತು ಮುಂದುವರಿಸುತ್ತಾ, ಮೋದಜೀ ನೀವು ನಿಜವಾಗಿಯೂ ರಾಷ್ಟ್ರಕ್ಕೆ ಸ್ಫೂರ್ತಿ ನೀಡಿದ್ದೀರಿ. ನೀವು ದೇಶದ ಪ್ರಧಾನಿಯಾಗಿರುವವರೆಗೆ ನಮ್ಮ ದೇಶವು ಯಾರಿಗೂ ಎಂದಿಗೂ ತಲೆಬಾಗುವುದಿಲ್ಲ. ನಿಮ್ಮ ನಾಯಕತ್ವದಲ್ಲಿ ಪ್ರಬಲವಾದ ಹಿಮಾಲಯವು ಎಂದಿಗೂ ತಲೆಬಾಗುವುದಿಲ್ಲ. ಭಾರತವು ಎಂದಿಗೂ ತಲೆಬಾಗುವುದಿಲ್ಲ ಮತ್ತು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ, ಕಾಮಾಕ್ಯದಿಂದ ದ್ವಾರಕಾದವರೆಗೆ ನಿಮ್ಮ ನಾಯಕತ್ವದಲ್ಲಿ ಕೆಲಸ ಮಾಡಲು ನಾವು ನಿಜವಾಗಿಯೂ ಹೆಮ್ಮೆಪಡುತ್ತೇವೆ ಎಂದರು.

ಇದನ್ನೂ ಓದಿ: Narendra Modi: ಪ್ರಮಾಣವಚನಕ್ಕೂ ಮೊದಲು ಅಡ್ವಾಣಿಯ ಆಶೀರ್ವಾದ ಪಡೆದ ನರೇಂದ್ರ ಮೋದಿ!

ನಿಮ್ಮ ಹಿಂದೆ ನಾವೆಲ್ಲರೂ ಸೇರುತ್ತೇವೆ. ದೇಶ ಸೇವೆ ಮಾಡಲು ನೀವು ನಮ್ಮನ್ನು ಪ್ರೇರೇಪಿಸಿದ ರೀತಿ ಮತ್ತು ನಿಮ್ಮ ನಡೆ- ನುಡಿ, ನೀವು ನಮಗೆ ತೋರಿದ ಅಭಿವೃದ್ಧಿಯ ರೀತಿಯಿಂದ ದೇಶಪ್ರೇಮ ನಮ್ಮಲ್ಲಿ ಮೂಡಿದೆ ಎಂದು ಹೇಳಿದರು.

ನಿಮ್ಮ ಮಾರ್ಗದರ್ಶನ ಮತ್ತು ಬೆಂಬಲದ ಅಡಿಯಲ್ಲಿಈ ಗೆಲುವು ಸಾಧ್ಯವಾಯಿತು. ವಿಧಾನಪರಿಷತ್ ಚುನಾವಣೆಯಲ್ಲಿ ಶೇ.91ರಷ್ಟು ಯಶಸ್ಸು ಸಾಧಿಸಿದ್ದೇವೆ, ನಾವೆಲ್ಲರೂ ನಿಮಗೆ ಆಭಾರಿಯಾಗಿದ್ದೇವೆ ಎಂದು ತಿಳಿಸಿದರು.

ಈ ಸಭೆಯಲ್ಲಿ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ ಸೇರಿದಂತೆ ಅನೇಕ ಬಿಜೆಪಿ ಸಂಸದರು ಉಪಸ್ಥಿತರಿದ್ದರು.

Continue Reading

ದೇಶ

Rahul Gandhi: ರಾಯ್‌ ಬರೇಲಿ V/S ವಯನಾಡ್‌-ರಾಹುಲ್‌ ಆಯ್ಕೆ ಯಾವುದು?

Rahul Gandhi: ರಾಹುಲ್‌ ಗಾಂಧಿಯವರು ಈ ಬಾರಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ ಏಕೈಕ ನಾಯಕರಾಗಿದ್ದಾರೆ. ರಾಹುಲ್‌ ಗಾಂಧಿ ಈ ಬಾರಿ ರಾಯ್‌ ಬರೇಲಿ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ರಾಜಕೀಯ ಮರುಜನ್ಮ ಕೊಟ್ಟ ವಯನಾಡನ್ನು ತ್ಯಜಿಸಲಿದ್ದಾರೆ ಎಂದು ಕೆಲವು ಹೇಳಿದರೆ, ಮತ್ತೆ ಕೆಲವು ವಯನಾಡನ್ನು ಉಳಿಸಿಕೊಳ್ಳಲಿದ್ದಾರೆ ಎಂದು ಹೇಳುತ್ತಿದ್ದಾರೆ.

VISTARANEWS.COM


on

Rahul Gandhi
Koo

ನವದೆಹಲಿ: ಈ ಬಾರಿ ಲೋಕಸಭೆ ಚುನಾವಣೆ(Lok Sabha Election 2024)ಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ(Rahul Gandhi) ಎರಡೂ ಕ್ಷೇತ್ರದಲ್ಲಿ ಕಣಕ್ಕಿಳಿದು ಅದೃಷ್ಟ ಪರೀಕ್ಷೆ ನಡೆಸಿ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ರಾಜಕೀಯ ಮರಜನ್ಮ ಕೊಟ್ಟ ಕೇರಳದ ವಯನಾಡು(Wayanad) ಹಾಗೂ ಗಾಂಧಿ ಕುಟುಂಬದ ಭದ್ರಕೋಟೆ ರಾಯ್‌ ಬರೇಲಿ(Rae Bareli) ಕ್ಷೇತ್ರಗಳಲ್ಲಿ ಬರೋಬ್ಬರಿ 3 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಪ್ರಚಂಡ ಗೆಲುವು ಪಡೆದಿದ್ದಾರೆ. ಎರಡೂ ಕ್ಷೇತ್ರಗಳನ್ನು ಗೆದ್ದಿರುವ ರಾಹುಲ್‌ ಎರಡೂ ಕ್ಷೇತ್ರವನ್ನೂ ಪ್ರತಿನಿಧಿಸುವಂತಿಲ್ಲ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಹಾಗಾದರೆ ಈ ಬಾರಿ ರಾಹುಲ್‌ ಯಾವ ಕ್ಷೇತ್ರವನ್ನು ಉಳಿಸಿಕೊಳ್ಳಬಹುದು?

ರಾಹುಲ್‌ ಗಾಂಧಿಯವರು ಈ ಬಾರಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ ಏಕೈಕ ನಾಯಕರಾಗಿದ್ದಾರೆ. ರಾಹುಲ್‌ ಗಾಂಧಿ ಈ ಬಾರಿ ರಾಯ್‌ ಬರೇಲಿ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ರಾಜಕೀಯ ಮರುಜನ್ಮ ಕೊಟ್ಟ ವಯನಾಡನ್ನು ತ್ಯಜಿಸಲಿದ್ದಾರೆ ಎಂದು ಕೆಲವು ಹೇಳಿದರೆ, ಮತ್ತೆ ಕೆಲವು ವಯನಾಡನ್ನು ಉಳಿಸಿಕೊಳ್ಳಲಿದ್ದಾರೆ ಎಂದು ಹೇಳುತ್ತಿದ್ದಾರೆ.

ವಯನಾಡು ಉಳಿಸಿಕೊಳ್ಳಲು ಕಾರಣವೇನು?

2019ರಲ್ಲೂ ರಾಹುಲ್‌ ಗಾಂಧಿ ಅಮೇಥಿ ಮತ್ತು ವಯನಾಡು ಕ್ಷೇತ್ರಗಳಿಂದ ಸ್ಪರ್ಧಿಸಿದ್ದ. ಆ ಸಂದರ್ಭದಲ್ಲಿ ಅವರು ಅಮೇಥಿಯಲ್ಲಿ ಸೋತಾಗ ವಯನಾಡು ಕ್ಷೇತ್ರ ಅವರನ್ನು ಕೈ ಹಿಡಿದಿತ್ತು. ಹೀಗಾಗಿ ಕ್ಷೇತ್ರದ ಬಗ್ಗೆ ರಾಹುಲ್‌ಗೆ ಭಾವನಾತ್ಮಕ ಸಂಬಂಧ ಇದೆ. ವಯನಾಡು ಜನರು ಕೂಡ ತಮ್ಮ ಭಾಷಿಗನಲ್ಲದಿದ್ದರೂ ರಾಹುಲ್‌ ಗಾಂಧಿಗೆ ಅಭೂತಪೂರ್ವ ಪ್ರೀತಿ ತೋರಿದ್ದಾರೆ. ಹೀಗಾಗಿಯೇ 3,64,422ರಷ್ಟು ಮತಗಳ ಅಂತರದಲ್ಲಿ ಗೆಲುವು ಸಾಧಿಸುವಂತಾಯಿತು. ರಾಹುಲ್‌ ಗಾಂಧಿಗೂ ಅಲ್ಲಿನ ಜನರ ಮೇಲೆ ಅಷ್ಟೇ ಪ್ರೀತಿ ಇದೆ. ಇನ್ನು 2026ರಲ್ಲಿ ಕೇರಳ ಚುನಾವಣೆ ಎದುರಿಸುತ್ತಿದ್ದು, ಒಬ್ಬ ಸಂಸದನಾಗಿ ರಾಹುಲ್‌ ಅಲ್ಲಿ ಮುಂದುವರೆಯುವುದರಿಂದ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಪಕ್ಷಕ್ಕೆ ಬಲತುಂಬಲಿದೆ.

ರಾಯ್‌ ಬರೇಲಿಯ ಕಥೆ ಏನು?

ರಾಯ್ಬರೇಲಿಯಲ್ಲಿ ಸ್ಪರ್ಧಿಸಲು ರಾಹುಲ್ ಗಾಂಧಿ ಅಷ್ಟೊಂದು ಉತ್ಸುಕರಾಗಿರಲಿಲ್ಲ. ಮಿತ್ರ ಅಖಿಲೇಶ್ ಯಾದವ್ ಅವರ ಒತ್ತಾಯದ ಮೇರೆಗೆ ಅವರು ಸ್ಪರ್ಧಿಸಿದ್ದರು. ಅದೂ ಅಲ್ಲದೇ ಈ ಹಿಂದೆ ಅವರ ಅಜ್ಜ ಫಿರೋಜ್, ಅಜ್ಜಿ ಇಂದಿರಾ ಮತ್ತು ತಾಯಿ ಸೋನಿಯಾ ಗಾಂಧಿ ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇನ್ನು ಒಲ್ಲದ ಮನಸ್ಸಿನಲ್ಲಿ ಕಣಕ್ಕಿಳಿದಿದ್ದ ರಾಹುಲ್‌ ನಿರೀಕ್ಷೆಗೂ ಮಿರಿದ ಮಟ್ಟದಲ್ಲಿ ಅಂದರೆ 3,89,341ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಹೀಗಾಗಿ ವಯನಾಡಿನ ಮೇಲೆ ಅತಿ ಹೆಚ್ಚಿನ ಒಲವು ಹೊಂದಿರುವ ರಾಹುಲ್‌ ಒತ್ತಡ, ಒತ್ತಾಯಕ್ಕೆ ಮಣಿದು ರಾಯ್‌ ಬರೇಲಿಯನ್ನೇ ಉಳಿಸಿಕೊಳ್ಳುವ ಸಾಧ್ಯತೆ ಇದೆ.

ಏನಂದ್ರಿದ್ದು ಸೋನಿಯಾ?

ಮೇ.17ರಂದು ರಾಯ್‌ ಬರೇಲಿಯಲ್ಲಿ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ್ದ ಸೋನಿಯಾ, ನಾನು ನನ್ನ ಮಗನನ್ನು ನಿಮ್ಮ ಕೈಗೆ ಒಪ್ಪಿಸುತ್ತಿದ್ದೇನೆ. ರಾಹುಲ್ ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ. ಗಾಂಧಿ ಕುಟುಂಬಕ್ಕೂ ಈ ಮಣ್ಣಿಗೂ ಶತಮಾನಗಳ ನಂಟಿದೆ ಎಂದು ಹೇಳಿದ್ದರು.

ಇದನ್ನೂ ಓದಿ:Chandan Shetty: ತಂಗಿ ತಂಗಿ ಎಂದೇ ಮದುವೆಯಾಗಿದ್ದ ಚಂದನ್‌! ಇವರ ಬಾಳಲ್ಲಿ ವಿಲನ್‌ ಆಗಿದ್ದು ಯಾರು?

Continue Reading

ವೈರಲ್ ನ್ಯೂಸ್

Viral Video: ಸಣ್ಣ ಕಾರಿಗೆ ಡಿಕ್ಕಿ ಹೊಡೆದು ಗಿರಗಿರ ಪಲ್ಟಿ ಹೊಡೆದ ಎಸ್‌ಯವಿ!

ಸಿಕಂದರಾಬಾದ್‌ನಲ್ಲಿ ರಸ್ತೆಯಲ್ಲಿ ವೇಗವಾಗಿ ಬಂದ ಕಾರೊಂದು ಸಿಗ್ನಲ್ ಜಂಪ್ ಮಾಡಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ರಸ್ತೆ ಮಧ್ಯೆಯೇ ಉರುಳಿ ಬಿದ್ದಿದೆ. ಈ ಭಯಾನಕ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ (Viral Video) ಆಗಿದೆ. ಟ್ರಾಫಿಕ್ ನಿಯಮಗಳನ್ನು ಪಾಲಿಸದೇ ಇರುವುದು ಎಷ್ಟು ಅಪಾಯಕಾರಿ ಎಂಬುದನ್ನು ಈ ವಿಡಿಯೋ ತೋರಿಸುತ್ತದೆ ಎಂದು ಅನೇಕ ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

VISTARANEWS.COM


on

By

Viral Video
Koo

ಸಿಕಂದರಾಬಾದ್: ಸಂಚಾರ ನಿಯಮಗಳು (Traffic rules) ಇರುವುದು ಸವಾರರು (riders) ಮತ್ತು ಪಾದಚಾರಿಗಳ (pedestrians) ಸುರಕ್ಷತೆಗಾಗಿ. ಈ ನಿಯಮಗಳನ್ನು ಉಲ್ಲಂಘಿಸುವುದು ಬಹಳ ಅಪಾಯಕಾರಿ. ಇದು ಮಾರಣಾಂತಿಕವೂ ಆಗಬಹುದು. ಹೀಗಾಗಿಯೇ ಸಂಚಾರ ನಿಯಮಗಳನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸುವಂತೆ ಜಾರಿಗೆ ತರಲಾಗುತ್ತದೆ.

ಟ್ರಾಫಿಕ್ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವುದರಿಂದ ದೊಡ್ಡ ಅಪಘಾತಗಳು ಸಂಭವಿಸುತ್ತವೆ ಎಂಬುದನ್ನು ಸಾಬೀತುಪಡಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral Video) ಆಗಿದೆ. ಈ ವಿಡಿಯೋದಲ್ಲಿ ಚಾಲಕ ಸಿಗ್ನಲ್ ಜಂಪ್ ಮಾಡಿದ ಅನಂತರ ಕಾರು ಪಲ್ಟಿಯಾಗಿದ್ದು ವಿರುದ್ಧ ದಿಕ್ಕಿನಿಂದ ಬಂದ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಈ ಘಟನೆ ನಡೆದಿರುವ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕೆಮರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

ಸಿಕಂದರಾಬಾದ್‌ನ ಜುಬಿಲಿ ಬಸ್ ನಿಲ್ದಾಣದ ಬಳಿ ಕಪ್ಪು ಬಣ್ಣದ ಎಸ್‌ಯುವಿಯು ಹೆಚ್ಚಿನ ವೇಗದಲ್ಲಿ ಸಿಗ್ನಲ್ ಅನ್ನು ಜಂಪ್ ಮಾಡಿದೆ. ಅತಿ ವೇಗವಾಗಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿದೆ. ಬಳಿಯೇ ಬಿಳಿ ಕಾರಿಗೆ ಡಿಕ್ಕಿಯಾಗಿದೆ. ರಸ್ತೆ ಮಧ್ಯೆಯೇ ಕಾರು ಉರುಳಿ ಬಿದ್ದಿದೆ. ಈ ಭೀಕರ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಸಿಗ್ನಲ್ ಜಂಪಿಂಗ್ ಮತ್ತು ಅತಿವೇಗದ ಅಪಾಯಗಳನ್ನು ಎತ್ತಿ ತೋರಿಸುತ್ತದೆ.

ಘಟನಾ ಸ್ಥಳದಲ್ಲಿದ್ದ ಜನರು ಅಪಘಾತದ ಸ್ಥಳಕ್ಕೆ ಧಾವಿಸಿದ್ದಾರೆ. ಎಲ್ಲರೂ ಸೇರಿ ಕಾರಿನಲ್ಲಿದ್ದವರು ಸಹಾಯ ಮಾಡಲು ಮುಂದಾಗಿದ್ದಾರೆ. ಭೀಕರ ಅಪಘಾತ ಸಂಭವಿಸಿದರೂ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.


ಟ್ರಾಫಿಕ್ ಪೊಲೀಸ್ ಪೇದೆಯೊಬ್ಬರು ಅಪಘಾತ ಸ್ಥಳಕ್ಕೆ ಧಾವಿಸುತ್ತಿರುವ ದೃಶ್ಯವೂ ವಿಡಿಯೋದಲ್ಲಿ ಸೆರೆಯಾಗಿದೆ.
ಸಾಮಾಜಿಕ ಮಾಧ್ಯಮ ಬಳಕೆದಾರರು ಕಾನ್‌ಸ್ಟೆಬಲ್ ಅವರ ನಿಧಾನ ಪ್ರತಿಕ್ರಿಯೆಗಾಗಿ ಟೀಕಿಸಿದ್ದಾರೆ.

ಇದನ್ನೂ ಓದಿ: Viral Video: ಏಕಾಏಕಿ ಕುಸಿದು ಸಾವನ್ನಪ್ಪಿದ ಮೆಡಿಕಲ್ ಸಿಬ್ಬಂದಿ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಅಪಘಾತಕ್ಕೀಡಾದವರಿಗೆ ಸಹಾಯ ಮಾಡಲು ಮತ್ತು ಪಲ್ಟಿಯಾದ ಕಾರಿನೊಳಗೆ ಸಿಕ್ಕಿಬಿದ್ದವರನ್ನು ರಕ್ಷಿಸಲು ಅವರು ತಕ್ಷಣವೇ ವಾಹನದ ಕಡೆಗೆ ಓಡಬೇಕು ಎಂದು ಅನೇಕ ನೆಟ್ಟಿಗರು ವಾದಿಸಿದ್ದಾರೆ.

ಇಂತಹ ಅಪಘಾತಗಳನ್ನು ತಪ್ಪಿಸಲು ವಾಹನ ಸವಾರರು ಸಂಚಾರ ನಿಯಮಗಳನ್ನು ಅನುಸರಿಸಬೇಕು. ವೇಗದ ಚಾಲನೆ, ರಸ್ತೆ ನಿಯಮಗಳನ್ನು ಪಾಲಿಸದೇ ಇರುವುದು ವಾಹನ ಸವಾರರಿಗೆ ಮತ್ತು ರಸ್ತೆಯಲ್ಲಿರುವ ಇತರ ಸವಾರರು ಮತ್ತು ಪಾದಚಾರಿಗಳಿಗೆ ಮಾರಕವಾಗಬಹುದು.

Continue Reading
Advertisement
T20 World Cup
ಪ್ರಮುಖ ಸುದ್ದಿ5 mins ago

T20 World Cup : ಪಾಕಿಸ್ತಾನ ತಂಡಕ್ಕೆ ಕರಾಳ ದಿನ; ಮಾಜಿ ಆಟಗಾರರಿಂದ ಟೀಕೆ

World Food Safety Day
ಆರೋಗ್ಯ10 mins ago

World Food Safety Day: ಆಹಾರ ಸುರಕ್ಷತೆಗಾಗಿ ನಾವು ಏನು ಮಾಡಬಹುದು?

NDA Meeting
ದೇಶ15 mins ago

NDA Meeting: ಎನ್‌ಡಿಎ ಸಭೆಯಲ್ಲಿ ಮೋದಿಯ ಪಾದ ಮುಟ್ಟಿ ನಮಸ್ಕರಿಸಲು ಹೋದ ನಿತೀಶ್ ಕುಮಾರ್! ವಿಡಿಯೊ ನೋಡಿ

Viral Video
ವೈರಲ್ ನ್ಯೂಸ್16 mins ago

Viral Video: ಮಕ್ಕಳು ಆಟವಾಡ್ತಿದ್ದ ವಾಟರ್‌ ಪಾರ್ಕ್‌ಗೆ ಏಕಾಏಕಿ ನುಗ್ಗಿದ ಬುಲ್ಡೋಜರ್‌; ಆಮೇಲೆ ನಡೆದಿದ್ದೇ ಬೇರೆ- ವಿಡಿಯೋ ನೋಡಿ

Valmiki Corporation Scam
ಕರ್ನಾಟಕ20 mins ago

Valmiki Corporation Scam: ಬಿ. ನಾಗೇಂದ್ರ ನೀಡಿದ ರಾಜೀನಾಮೆ ಅಂಗೀಕಾರ ಮಾಡಿದ ರಾಜ್ಯಪಾಲರು

Heera Mandi Fashion
ಫ್ಯಾಷನ್28 mins ago

Heera Mandi Fashion: ರೀಕ್ರಿಯೆಟ್‌ ಆಗುತ್ತಿದೆ ಹೀರಾಮಂಡಿ ಲುಕ್‌!

Chandan Shetty divorce main Reason children
ಸ್ಯಾಂಡಲ್ ವುಡ್37 mins ago

Niveditha Gowda: ಮಗು ವಿಚಾರಕ್ಕೆ ಮುನಿಸು; ಒಂದೇ ಕಾರಲ್ಲಿ ಬಂದು ಡಿವೋರ್ಸ್‌ ಅರ್ಜಿ ಸಲ್ಲಿಸಿದ ಚಂದನ್‌-ನಿವೇದಿತಾ!

Pawan Kalyan
ರಾಜಕೀಯ44 mins ago

Pawan Kalyan: ಪವನ್ ಕಲ್ಯಾಣ್ ಗಾಳಿಯಲ್ಲ ಬಿರುಗಾಳಿ ಎಂದ ಮೋದಿ! ಮೋದಿ ಇರುವವರೆಗೆ ದೇಶ ತಲೆಬಾಗುವುದಿಲ್ಲ ಎಂದ ಪವನ್‌!

Sigandur launch
ಶಿವಮೊಗ್ಗ56 mins ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Money Guide
ಮನಿ ಗೈಡ್1 hour ago

Money Guide: ಪಿಎಫ್‌ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇಲ್ಲಿದೆ ಸಂಪೂರ್ಣ ಮಾಹಿತಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 weeks ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌