Bharat Dal : 60 ರೂ.ಗೆ ಮೋದಿಯ ಭಾರತ್​ ದಾಲ್​; ಖರೀದಿ ಮಾಡುವುದು ಹೇಗೆ? - Vistara News

ಪ್ರಮುಖ ಸುದ್ದಿ

Bharat Dal : 60 ರೂ.ಗೆ ಮೋದಿಯ ಭಾರತ್​ ದಾಲ್​; ಖರೀದಿ ಮಾಡುವುದು ಹೇಗೆ?

ಮೋದಿ ಸರ್ಕಾರ ನಾಫೆಡ್, ಎನ್​ಸಿಎಫ್​, ಕೇಂದ್ರೀಯ ಭಂಡಾರ್ ಮತ್ತು ಸಫಲ್ ಸೇರಿದಂತೆ ವಿವಿಧ ಚಿಲ್ಲರೆ ಮಳಿಗೆಗಳ ಮೂಲಕ ಮತ್ತು ಇ-ಕಾಮರ್ಸ್ ಫ್ಲ್ಯಾಟ್​ಪಾರ್ಮ್​ಗಳಲ್ಲಿ ಸಬ್ಸಿಡಿ ದರದಲ್ಲಿ ಭಾರತ್ ದಾಲ್ (Bharat Dal ) ಪರಿಚಯಿಸಿದೆ.

VISTARANEWS.COM


on

Bharat Dal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು:ಚಿಲ್ಲರೆ ಮಟ್ಟದಲ್ಲಿ ಆಹಾರ ವಸ್ತುಗಳ ಬೆಲೆಗಳನ್ನು ನಿಯಂತ್ರಣದಲ್ಲಿ ಇಡುವ ಪ್ರಯತ್ನಗಳ ಭಾಗವಾಗಿ ಕೇಂದ್ರ ಸರ್ಕಾರವು ‘ಭಾರತ್ ದಾಲ್’ ಬ್ರಾಂಡ್ (Bharat Dal) ಹೆಸರಿನಲ್ಲಿ ಕಡಲೆ ಬೇಳೆಯನ್ನು 1 ಕೆ.ಜಿ ಪ್ಯಾಕ್​ಗೆ ಪ್ರತಿ ಕೆ.ಜಿ.ಗೆ 60 ರೂ., 30 ಕೆ.ಜಿಯ ಪ್ಯಾಕ್​ಗೆ ಪ್ರತಿ ಕೆ.ಜಿ.ಗೆ 55 ರೂ.ಗಳ ಸಬ್ಸಿಡಿ ದರದಲ್ಲಿ ಮಾರಾಟ ಮಾಡಲು ನಿರ್ಧರಿಸಿದೆ. ಭಾರತ್ ದಾಲ್ ಪ್ರಸ್ತುತ ನಾಫೆಡ್, ಎನ್​ಸಿಸಿಎಫ್, ಕೇಂದ್ರೀಯ ಭಂಡಾರ್ ಮತ್ತು ಸಫಲ್ ನಿರ್ವಹಿಸುವ ಚಿಲ್ಲರೆ ಮಳಿಗೆಗಳಲ್ಲಿ ಲಭ್ಯವಿದೆ. ಇದಲ್ಲದೆ, ಇದು ಅನೇಕ ಇ-ಕಾಮರ್ಸ್ ಫ್ಲ್ಯಾಟ್​ಫಾರ್ಮ್​ಗಳಲ್ಲಿಯೂ ಲಭ್ಯವಿದೆ. ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಲು, ರಾಜ್ಯ ಸರ್ಕಾರಗಳು ರಾಜ್ಯ ನಿಯಂತ್ರಿತ ಸಹಕಾರಿ ಸಂಸ್ಥೆಗಳು ಮತ್ತು ನಿಗಮಗಳ ಮೂಲಕ ಕಲ್ಯಾಣ ಯೋಜನೆಗಳಲ್ಲಿ ವಿತರಿಸಲು ಕಡಲೆ ಬೇಳೆಯನ್ನು ಪಡೆಯಬಹುದು.

ಇದನ್ನೂ ಓದಿ : Narendra Modi : ಕರ್ನಾಟಕವೂ ನಂದೇ, ಡೆಲ್ಲಿಯೂ ನನ್ನದೇ, ಕಾಂಗ್ರೆಸ್​ ಧರಣಿಗೆ ಮೋದಿ ಟಾಂಗ್​

ಬೇಳೆಕಾಳುಗಳ ಬೆಲೆಗಳನ್ನು ಸ್ಥಿರಗೊಳಿಸಲು, ಸರ್ಕಾರವು ಬೆಲೆ ಸ್ಥಿರೀಕರಣ ನಿಧಿ (ಪಿಎಸ್ಎಫ್) ಅಡಿಯಲ್ಲಿ ಕಡಲೆ, ತೊಗರಿ, ಉದ್ದು, ಹೆಸರು ಮತ್ತು ಮಸೂರ್​ ದಾಲ್​ ದ್ವಿದಳ ಧಾನ್ಯಗಳ ಬಫರ್ ಸಂಗ್ರಹವನ್ನು ನಿರ್ವಹಿಸುತ್ತದೆ. ಬೆಲೆಗಳನ್ನು ನಿಯಂತ್ರಿಸಲು ಈ ಸ್ಟಾಕ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತದೆ. ಬೆಲೆಗಳನ್ನು ಮತ್ತಷ್ಟು ನಿಯಂತ್ರಿಸಲು ಮಾರ್ಚ್ 31, 2024 ರವರೆಗೆ ತೊಗರಿ ಮತ್ತು ಉದ್ದಿನ ಮೇಲಿನ ಆಮದು ಸುಂಕವನ್ನು ತೆಗೆದುಹಾಕಲಾಗಿದೆ. ದೇಶೀಯ ಲಭ್ಯತೆ ಮತ್ತು ಬೆಲೆಗಳನ್ನು ಹೆಚ್ಚಿಸುವ ಉದ್ದೇಶದಿಂದ ಮಸೂರ್ ಮೇಲಿನ ಆಮದು ಸುಂಕವನ್ನು ಶೂನ್ಯಕ್ಕೆ ಇಳಿಸಿದೆ.

ಭಾರತ್ ದಾಲ್ ಈಗ ಅತಿ ಹೆಚ್ಚು ಮಾರಾಟವಾಗುವ ಬ್ರಾಂಡ್ ಆಗಿದೆ

ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ಅವರ ಪ್ರಕಾರ, ‘ಭಾರತ್’ ಲೇಬಲ್ ಅಡಿಯಲ್ಲಿ ಮಾರಾಟವಾಗುವ ಕಡಲೆ ಬೇಳೆ ತ್ವರಿತ ಜನಪ್ರಿಯತೆ ಗಳಿಸಿದೆ. ಅದರ ಸ್ಪರ್ಧಾತ್ಮಕ ಬೆಲೆ ಅನುಕೂಲದಿಂದಾಗಿ ಬಿಡುಗಡೆಯಾದ ನಾಲ್ಕು ತಿಂಗಳಲ್ಲಿ ಮಾರುಕಟ್ಟೆಯ ಕಾಲು ಭಾಗವನ್ನು ತನ್ನದಾಗಿಸಿಕೊಂಡಿದೆ. ಅಕ್ಟೋಬರ್ 2023 ರಲ್ಲಿ ಬಿಡುಗಡೆಯಾದ ‘ಭಾರತ್’ ಬ್ರಾಂಡ್ ಕಡಲೆ ಬೇಳೆ ಇತರ ಬ್ರಾಂಡ್​ಗಳಿಗೆ ಹೋಲಿಸಿದರೆ ಪ್ರತಿ ಕೆ.ಜಿ.ಗೆ 60 ರೂ.ಗಳಷ್ಟು ಕಡಿಮೆಯಾಗಿದೆ.

ಭಾರತ್ ಬ್ರಾಂಡ್ ಕಡಲೆ ಬೇಳೆಗೆ ಪ್ರತಿಕ್ರಿಯೆ ಗಮನಾರ್ಹವಾಗಿದೆ. ಇದು ಭಾರತದಲ್ಲಿ ಮಾಸಿಕವಾಗಿ ಬಳಕೆಯಾಗುವ 1.8 ಲಕ್ಷ ಟನ್ ಕಡಲೆ ಬೇಳೆ ಬಳಕೆಯ ಬಹುದೊಡ್ಡ ಭಾಗವಾಗಿದೆ ಎಂದು ಸಿಂಗ್ ಹೇಳಿದ್ದಾರೆ. ಪ್ರಾರಂಭವಾದಾಗಿನಿಂದ ಸರಿಸುಮಾರು 2.28 ಲಕ್ಷ ಟನ್ ಭಾರತ್ ಬ್ರಾಂಡ್ ಕಡಲೆ ಬೇಳೆ ಮಾರಾಟವಾಗಿದ್ದು, ಸರಾಸರಿ ಮಾಸಿಕ ಸರಾಸರಿ 45,000 ಟನ್ ಮಾರಾಟವಾಗಿದೆ ಎಂದು ಅವರು ಹೇಳಿದ್ದಾರೆ.

ಆರಂಭದಲ್ಲಿ 100 ಚಿಲ್ಲರೆ ಕೇಂದ್ರಗಳಲ್ಲಿ ಲಭ್ಯವಿದ್ದ ಭಾರತ್ ಬ್ರಾಂಡ್ ಕಡಲೆ ಬೇಳೆ ಈಗ 21 ರಾಜ್ಯಗಳ 139 ನಗರಗಳಲ್ಲಿ 13,000 ಮೊಬೈಲ್ ಮತ್ತು ಸ್ಥಿರ ಚಿಲ್ಲರೆ ಮಳಿಗೆಗಳಲ್ಲಿ ಮಾರಾಟವಾಗುತ್ತಿದೆ. ಬೇಳೆಕಾಳುಗಳ ಬೆಲೆಗಳು ಪರಸ್ಪರ ಸಂಬಂಧ ಹೊಂದಿರುವುದರಿಂದ ಈ ಉಪಕ್ರಮವು ಬೇಳೆಕಾಳುಗಳ ಹಣದುಬ್ಬರವನ್ನು ನಿಗ್ರಹಿಸಲು ಸಹಾಯ ಮಾಡಿದೆ ಎಂದು ಸಿಂಗ್ ಒತ್ತಿ ತಿಳಿಸಿದ್ದಾರೆ. ಕಡಲೆ ಬೆಲೆಯನ್ನು ಕಡಿಮೆ ಮಾಡಲು ಬಫರ್ ಸ್ಟಾಕ್ ಗಳನ್ನು ಬಳಸುವ ಮೂಲಕ ಮಾಡಲಾಗಿದ. ಪರೋಕ್ಷವಾಗಿ ಇತರ ಬೇಳೆಕಾಳುಗಳ ಬೆಲೆಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ನಾಫೆಡ್, ಎನ್ಸಿಸಿಎಫ್, ಕೇಂದ್ರೀಯ ಭಂಡಾರ್ ಮತ್ತು ಐದು ರಾಜ್ಯ ಸಹಕಾರಿ ಸಂಸ್ಥೆಗಳ ಮೂಲಕ ಸರ್ಕಾರವು ಭಾರತ್ ಬ್ರಾಂಡ್ ಅಡಿಯಲ್ಲಿ ಕಡಲೆ ಬೇಳೆಯನ್ನು ಚಿಲ್ಲರೆ ಮಾರಾಟ ಮಾಡಿದ ಮೊದಲ ನಿದರ್ಶನ ಇದಾಗಿದೆ. ಈ ಏಜೆನ್ಸಿಗಳು ಕಚ್ಚಾ ಕಡಲೆಯನ್ನು ಸರ್ಕಾರದಿಂದ ಸಂಗ್ರಹಿಸಿ, ಸಂಸ್ಕರಿಸಿ, ನಂತರ ಭಾರತ್ ಬ್ರಾಂಡ್ ಅಡಿಯಲ್ಲಿ ಚಿಲ್ಲರೆ ಮಾರಾಟ ಮಾಡುತ್ತವೆ. ಪ್ರಸ್ತುತ, ಸರ್ಕಾರವು 15 ಲಕ್ಷ ಟನ್ ಕಡಲೆ ಬಫರ್ ಸ್ಟಾಕ್ ಅನ್ನು ಬಿಡುಗಡೆ ಮಾಡಿದೆ.

ಮೋದಿ ಸರ್ಕಾರದಿಂದ ಬಡವರಿಗೆ ಕೊಡುಗೆ, ಕಿಲೋ ಅಕ್ಕಿಗೆ 29 ರೂಪಾಯಿ

ಪ್ರತಿ ಕೆಜಿಗೆ 29 ರೂ.ಗಳ ಸಬ್ಸಿಡಿ (subsidised rate) ದರದಲ್ಲಿ ʻಭಾರತ್ ಅಕ್ಕಿ’ಯನ್ನು (Bharat Rice) ಕೇಂದ್ರ ಸರ್ಕಾರ ಇಂದು ಬಿಡುಗಡೆ ಮಾಡಿದೆ. ಸಬ್ಸಿಡಿ ಅಕ್ಕಿ 5 ಕೆಜಿ ಮತ್ತು 10 ಕೆಜಿ ಪ್ಯಾಕ್‌ಗಳಲ್ಲಿ ಲಭ್ಯವಿರುತ್ತದೆ.

ಕಳೆದ ಒಂದು ವರ್ಷದಲ್ಲಿ ಧಾನ್ಯದ ಚಿಲ್ಲರೆ ಬೆಲೆಯಲ್ಲಿ ಶೇಕಡಾ 15ರಷ್ಟು ಏರಿಕೆಯಾಗಿರುವ (inflation) ಹಿನ್ನೆಲೆಯಲ್ಲಿ ದರ ಏರಿಕೆಯಿಂದ ತುಸು ಪರಿಹಾರ ನೀಡಲು ಸರ್ಕಾರ ಇದನ್ನು ಒದಗಿಸುತ್ತಿದೆ. ಆಹಾರ ಸಚಿವ ಪಿಯೂಷ್ ಗೋಯಲ್ (Piyush Goyal) ಅವರು ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದಲ್ಲಿ ಭಾರತ್ ಅಕ್ಕಿ ವಿತರಣೆಯನ್ನು ಪ್ರಾರಂಭಿಸದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಇದರ ಮೊದಲ ಹಂತದಲ್ಲಿ ಭಾರತೀಯ ಆಹಾರ ನಿಗಮವು (Food Corporation of India – FCI – ಎಫ್‌ಸಿಐ) ಎರಡು ಸಹಕಾರಿ ಸಂಸ್ಥೆಗಳಾದ ನ್ಯಾಷನಲ್ ಅಗ್ರಿಕಲ್ಚರಲ್ ಕೋಆಪರೇಟಿವ್ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್ (NAFED) ಮತ್ತು ನ್ಯಾಷನಲ್ ಕೋಆಪರೇಟಿವ್ ಕನ್ಸೂಮರ್ಸ್ ಫೆಡರೇಶನ್ ಆಫ್ ಇಂಡಿಯಾ (NCCF) ಹಾಗೂ ಚಿಲ್ಲರೆ ಸರಪಳಿ ಕೇಂದ್ರೀಯ ಭಂಡಾರ್‌ಗೆ 5 ಲಕ್ಷ ಟನ್ ಅಕ್ಕಿಯನ್ನು ನೀಡುತ್ತದೆ.

ಈ ಏಜೆನ್ಸಿಗಳು ಅಕ್ಕಿಯನ್ನು 5 ಕೆಜಿ ಮತ್ತು 10 ಕೆಜಿಗಳಲ್ಲಿ ಪ್ಯಾಕ್ ಮಾಡುತ್ತವೆ ಮತ್ತು “ಭಾರತ್” ಬ್ರಾಂಡ್‌ನ ಅಡಿಯಲ್ಲಿ ತಮ್ಮ ಔಟ್‌ಲೆಟ್‌ಗಳ ಮೂಲಕ ಚಿಲ್ಲರೆ ಮಾರಾಟ ಮಾಡುತ್ತವೆ. ಅಕ್ಕಿಯನ್ನು ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳ ಮೂಲಕವೂ ಮಾರಾಟ ಮಾಡಲಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs PAK: ಬಾಬರ್‌ ಪಡೆಯನ್ನು ಬೆಂಡೆತ್ತಲಿ ರೋಹಿತ್​ ಸಾರಥ್ಯದ ಟೀಮ್​ ಇಂಡಿಯಾ

IND vs PAK: ಮೇಲ್ನೋಟಕೆ ಭಾರತ ಈ ಬಾರಿಯ ಕೂಟದಲ್ಲಿ ಫೇವರಿಟ್‌ ಆಗಿ ಗುರುತಿಸಿಕೊಂಡಿದೆ. ಆದರೆ ಅತಿಯಾದ ಆತ್ಮವಿಶ್ವಾಸ ಸಲ್ಲದು. ಎಲ್ಲ ಪಂದ್ಯದಲ್ಲಿಯೂ ಎಚ್ಚರ ಅಗತ್ಯ. ಅದರಂತೆ ಯಾವುದೇ ಕಾರಣಕ್ಕೂ ಎದುರಾಳಿಗಳನ್ನು ಕಡೆಗಣಿಸುವಂತಿಲ್ಲ. ಇದಕ್ಕೆ ಅಮೆರಿಕ ವಿರುದ್ಧ ಪಾಕ್​, ಅಫಘಾನಿಸ್ತಾನ ವಿರುದ್ಧ ನ್ಯೂಜಿಲ್ಯಾಂಡ್​ ಸೋಲು ಕಂಡಿರುವುದೇ ಉತ್ತಮ ನಿದರ್ಶನ.

VISTARANEWS.COM


on

IND vs PAK
Koo

ನ್ಯೂಯಾರ್ಕ್​: ಕ್ರೀಡಾ ಲೋಕವೇ ನ್ಯೂಯಾರ್ಕ್​ನತ್ತ ಮುಖ ಮಾಡಿ ಸೂಪರ್‌ ಸಂಡೆಯ ಕ್ಷಣಗಣನೆಯಲ್ಲಿ ತೊಡಗಿದೆ. ಅಭಿಮಾನಿಗಳ ಕಾತರ, ಕೌತುಕಗಳೆಲ್ಲ ಸೀಮೆಯನ್ನು ಮೀರಿವೆ. ಇದಕ್ಕೆಲ್ಲ ಒಂದೇ ಕಾರಣ, ಭಾರತ- ಪಾಕಿಸ್ತಾನ(IND vs PAK) ನಡುವಿನ ಟಿ20 ವಿಶ್ವಕಪ್‌ ಪಂದ್ಯ(T20 World Cup 2024).

ಭಾನುವಾರ ರಾತ್ರಿ ನಡೆಯುವ ‘ಎ’ ವಿಭಾಗದ ಪಂದ್ಯದಲ್ಲಿ ಬುದ್ಧ ಎದುರಾಳಿಗಳಾದ ಭಾರತ-ಪಾಕಿಸ್ತಾನ ಮುಖಾಮುಖಿಯಾಗಲಿವೆ. ಉಳಿದೆಲ್ಲ ಪಂದ್ಯಗಳಿಗಿಂದ ಈ ಸಾಂಪ್ರದಾಯಿಕ ಎದುರಾಳಿಗಳ ನಡುವಿನ ಪಂದ್ಯದ ಜೋಶ್‌ ದೊಡ್ಡ ಮಟ್ಟದಲ್ಲೇ ಇರುತ್ತದೆ. ಅಕ್ಷರಶಃ ಇದೊಂದು ಕದನವೇ ಆಗಿರುತ್ತದೆ. ಗೆದ್ದರೆ ಯುದ್ಧವನ್ನೇ ಜಯಿಸಿದ ಮಹಾಸಂಭ್ರಮ. ರೋಹಿತ್​ ಪಡೆಯ ಮೇಲಿನ ನಿರೀಕ್ಷೆ ದೊಡ್ಡ ಮಟ್ಟದಲ್ಲೇ ಇದೆ. ಹಾಗೆಯೇ ಅಮೆರಿಕ ವಿರುದ್ಧ ಸೋತಿರುವ ಪಾಕಿಸ್ತಾನಕ್ಕೆ ಒತ್ತಡವೂ ಇದೆ. ಗೆದ್ದರಷ್ಟೇ ಮುಂದಿನ ಹಂತಕ್ಕೇರಬಹುದು. ಹೀಗಾಗಿ ಪಂದ್ಯ ಜಿದ್ದಾಜಿದ್ದಿನಿಂದ ಕೂಡಿರುವ ಸಾಧ್ಯತೆ ಹೆಚ್ಚು.

ಭಾರತ ಬಲಿಷ್ಠ ಆದರೆ…


ಮೇಲ್ನೋಟಕೆ ಭಾರತ ಈ ಬಾರಿಯ ಕೂಟದಲ್ಲಿ ಫೇವರಿಟ್‌ ಆಗಿ ಗುರುತಿಸಿಕೊಂಡಿದೆ. ಆದರೆ ಅತಿಯಾದ ಆತ್ಮವಿಶ್ವಾಸ ಸಲ್ಲದು. ಎಲ್ಲ ಪಂದ್ಯದಲ್ಲಿಯೂ ಎಚ್ಚರ ಅಗತ್ಯ. ಅದರಂತೆ ಯಾವುದೇ ಕಾರಣಕ್ಕೂ ಎದುರಾಳಿಗಳನ್ನು ಕಡೆಗಣಿಸುವಂತಿಲ್ಲ. ಇದಕ್ಕೆ ಅಮೆರಿಕ ವಿರುದ್ಧ ಪಾಕ್​, ಅಫಘಾನಿಸ್ತಾನ ವಿರುದ್ಧ ನ್ಯೂಜಿಲ್ಯಾಂಡ್​ ಸೋಲು ಕಂಡಿರುವುದೇ ಉತ್ತಮ ನಿದರ್ಶನ. ಏಕದಿನ ವಿಶ್ವಕಪ್​ನಲ್ಲಿ ಪಾಕ್​ ವಿರುದ್ಧ ಭಾರತ ಅಜೇಯವಾಗಿದ್ದರೂ ಕೂಡ, ಟಿ20ಯಲ್ಲಿ ಅಜೇಯವಲ್ಲ. ಭಾರತದ ಆತಿಥ್ಯದಲ್ಲೇ ದುಬೈನಲ್ಲಿ 2021ರಲ್ಲಿ ನಡೆದಿದ್ದ ಟೂರ್ನಿಯಲ್ಲಿ ಭಾರತ 10 ವಿಕೆಟ್​ಗಳ ಹೀನಾಯ ಸೋಲು ಕಂಡಿತ್ತು. 2022ರಲ್ಲಿ ನಡೆದಿದ್ದ ಟೂರ್ನಿಯಲ್ಲಿ ಭಾರತ ಕೊನೆಯ ಎಸೆತದಲ್ಲಿ ಗೆಲುವು ಸಾಧಿಸಿತ್ತು. ಟಿ20ಯಲ್ಲಿ ಪಾಕಿಸ್ತಾನ ತಂಡ ಭಾರತಕ್ಕೆ ಪೈಪೋಟಿ ನೀಡುತ್ತಿದೆ. ಹೀಗಾಗಿ ಎಚ್ಚರದಿಂದ ಆಡಬೇಕು.

ಇದನ್ನೂ ಓದಿ IND vs PAK: ಪಾಕ್​ ವಿರುದ್ಧದ ಪಂದ್ಯದಲ್ಲಿ ವಿಶ್ವ ದಾಖಲೆ ನಿರ್ಮಿಸಲು ಕೊಹ್ಲಿ ಸಜ್ಜು; ಯಾವುದು ಈ ದಾಖಲೆ?

ಬುಮ್ರಾ ಮೇಲೆ ತಂಡ ಅವಲಂಬಿತ


ವೇಗಿ ಮೊಹಮ್ಮದ್​ ಶಮಿ ಗೈರಿನಲ್ಲಿ ಜಸ್​ಪ್ರೀತ್​ ಬುಮ್ರಾ ಬೌಲಿಂಗ್‌ ಮೇಲೆ ಇಡೀ ತಂಡ ಅವಲಂಬಿತವಾಗಿದೆ! ಹಾಗಾಗಿ ಬುಮ್ರಾ ಬೌಲಿಂಗ್‌ನಲ್ಲಿ ಪೂರ್ಣ ಭಾರವನ್ನು ಹೊರಲೇಬೇಕಾಗಿದೆ. ಅವರಿಗೆ ವೇಗಿ ಸಿರಾಜ್​, ಅರ್ಶ್‌ದೀಪ್‌ ಸಿಂಗ್‌, ಆಲ್​ರೌಂಡರ್​ ಹಾರ್ದಿಕ್​ ಪಾಂಡ್ಯ ಸ್ಪಿನ್ನರ್‌ಗಳಾದ ಜಡೇಜಾ​, ಅಕ್ಷರ್​ ನೆರವು ನೀಡಬೇಕಾಗಿದೆ. ಇವರೆಲ್ಲ ಒಂದಾಗಿ ತಮ್ಮ ಬೌಲಿಂಗ್‌ ಸಾಮರ್ಥ್ಯವನ್ನು ತೋರಿದರೆ ಭಾರತದ ಅಶ್ವಮೇಧವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ.

ಕೊಹ್ಲಿ ಮೇಲೆ ನಂಬಿಕೆ


ಐರ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಒಂದು ರನ್​ಗೆ ಸೀಮಿತರಾದರೂ ಕೂಡ ಪಾಕ್‌ ವಿರುದ್ಧ ಉತ್ತಮ ದಾಖಲೆಯನ್ನೇ ಹೊಂದಿದ್ದಾರೆ. ಈ ನಿಟಿನಲ್ಲಿ ಕೊಹ್ಲಿ ಬ್ಯಾಟಿಂಗ್‌ ಅಬ್ಬರ ಇಲ್ಲೂ ನಿರೀಕ್ಷಿಸಬಹುದು. ಟಿ20 ನಂ.1 ಬ್ಯಾಟರ್​ ಸೂರ್ಯಕುಮಾರ್​ ಬ್ಯಾಟ್​ ಮಂಕಾದಂತೆ ಕಾಣುತ್ತಿದೆ. ಈ ಬಾರಿಯ ಐಪಿಎಲ್​ನಲ್ಲಿಯೂ ಒಂದೆರಡು ಪಂದ್ಯಗಳನ್ನು ಬಿಟ್ಟರೆ ಬಹುತೇಕ ಪಂದ್ಯಗಳಲ್ಲಿ ವಿಫಲರಾಗಿದ್ದರು. ಹೀಗಾಗಿ ಅವರು ಬ್ಯಾಟಿಂಗ್​ ಫಾರ್ಮ್​ಗೆ ಮರಳುವ ಅನಿವಾರ್ಯತೆ ಇದೆ. ಉಳಿದಂತೆ ಯಾವುದೇ ಸಮಸ್ಯೆಗಳಿಲ್ಲ.

ಪಾಕ್‌ ತಂಡವೂ ಬಲಿಷ್ಠ


ಭಾರತ ತಂಡದಂತೆ ಪಾಕಿಸ್ತಾನ ಕೂಡ ಬಲಿಷ್ಠವಾಗಿದೆ. ಬೌಲಿಂಗ್‌ ಮತ್ತು ಬ್ಯಾಟಿಂಗ್‌ ಎರಡೂ ವಿಭಾಗಲ್ಲಿ ವೈವಿಧ್ಯಮಯವಾಗಿ ಗೋಚರಿಸಿದೆ. ಬ್ಯಾಟಿಂಗ್‌ನಲ್ಲಿ ಮೊಹಮ್ಮದ್‌ ರಿಜ್ವಾನ್‌, ನಾಯಕ ಬಾಬರ್‌ ಅಜಂ, ಇಫ್ತಿಕರ್​, ಫಕಾರ್​ ಜಮಾನ್​ ಬಲವಾದರೆ ಅತ್ತ ಬೌಲಿಂಗ್‌ನಲ್ಲಿ ಶಾಹೀನ್‌ ಅಫ್ರಿದಿ, ಶದಾಬ್‌, ಆಮೀರ್​, ರವೂಫ್‌ ಮತ್ತು ನಶೀಮ್​ ಶಾ ಎದುರಾಳಿಗಳನ್ನು ಕಟ್ಟಿಹಾಕುವಲ್ಲಿ ಸಮರ್ಥರಿದ್ದಾರೆ. ಅದರಲ್ಲೂ ಹೊಸ ಚೆಂಡಿನಲ್ಲಿ ಅಫ್ರಿದಿ ಬೆಂಕಿ ಎಸೆತಗಳನ್ನು ಎಸೆಯುವುದರಲ್ಲಿ ಎತ್ತಿದ ಕೈ.

Continue Reading

ವೈರಲ್ ನ್ಯೂಸ್

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಹಣ ಹಿಂತಿರುಗಿಸಲು ತೆಲಂಗಾಣ ಸಿಎಂಗೆ ಪತ್ರ ಬರೆದ ಕನ್ನಡಿಗರು

Valmiki Corporation Scam: ನಿಮ್ಮ ನಾಯಕ ರಾಹುಲ್ ಗಾಂಧಿ ಆಣತಿಯಂತೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ, ತೆಲಂಗಾಣದ ಕಾಂಗ್ರೆಸ್ ಚುನಾವಣಾ ಖರ್ಚಿಗೆ ಹಣ ಸಾಗಿಸಿದೆ. ಹೀಗಾಗಿ ಹಣವನ್ನು ಹಿಂತಿರುಗಿಸಬೇಕು ಎಂದು ಪತ್ರದಲ್ಲಿ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿಗೆ ಮನವಿ ಮಾಡಲಾಗಿದೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ನಿಗಮ ಹಗರಣದಲ್ಲಿ (Valmiki Corporation Scam) ಕೋಟ್ಯಂತರ ರೂಪಾಯಿ ತೆಲಂಗಾಣ ಕಂಪನಿಗಳಿಗೆ ವರ್ಗಾವಣೆಯಾಗಿದೆ ಎಂಬ ಆರೋಪಗಳು ಕೇಳಿಬಂದಿರುವುದರಿಂದ ಹಣ ವಾಪಸ್ ನೀಡುವಂತೆ ನೆರೆ ರಾಜ್ಯದ ಸಿಎಂಗೆ ಕನ್ನಡಿಗರು ಪತ್ರ ಬರೆದಿರುವುದು ಕಂಡುಬಂದಿದೆ. ಕರ್ನಾಟಕದ ಹಣವನ್ನು ತೆಲಂಗಾಣ ಚುನಾವಣೆಗೆ ಬಳಸಲಾಗಿದೆ. ಹೀಗಾಗಿ ಅಕ್ರಮವಾಗಿ ವರ್ಗಾವಣೆಯಾದ ಹಣವನ್ನು ಹಿಂತಿರುಗಿಸಬೇಕು ಎಂದು ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಅವರಿಗೆ ಮನವಿ ಮಾಡಲಾಗಿದೆ.

ತೆಲಂಗಾಣ ಸಿಎಂಗೆ ಕನ್ನಡಿಗರ ಹೆಸರಿನಲ್ಲಿ ಪತ್ರ ಬರೆದಿರುವ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್‌ ಹಂಚಿಕೊಂಡಿದೆ. ಕರ್ನಾಟಕದ ವಾಲ್ಮೀಕಿ ಸಮುದಾಯಕ್ಕೆ ಸೇರಬೇಕಾಗಿದ್ದ ಸುಮಾರು 187 ಕೋಟಿ ರೂ. ಹಣವನ್ನು ನಿಮ್ಮ ನಾಯಕ ರಾಹುಲ್ ಗಾಂಧಿ ಅವರ ಆಣತಿಯಂತೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ, ಸಚಿವ ನಾಗೇಂದ್ರ ಅವರ ಮೂಲಕ ತೆಲಂಗಾಣದ ಕಾಂಗ್ರೆಸ್ ಚುನಾವಣಾ ಖರ್ಚಿಗೆ ಸಾಗಿಸಿದ್ದಾರೆ.

ಇದನ್ನೂ ಓದಿ | Congress Guarantee: ʼಸ್ಯಾಡಿಸ್ಟ್‌ʼ ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟವಾಗಿಲ್ಲ, ನಿಲ್ಲಿಸೋದೇ ಒಳಿತು ಎಂದ ಲಕ್ಷ್ಮಣ್‌!

ನಿಮ್ಮಲ್ಲಿ ಕನ್ನಡಿಗರು ಕೇಳಿಕೊಳ್ಳುವುದೇನೆಂದರೆ ನಮ್ಮ ರಾಜ್ಯಕ್ಕೆ ಸೇರಬೇಕಾಗಿದ್ದ ಹಣವನ್ನು ದಯಮಾಡಿ ಹಿಂತಿರುಗಿಸಿ ಕೊಡಿ. ಈ ಹಣ ವಾಲ್ಮೀಕಿ ಸಮುದಾಯದ ಏಳಿಗೆಗಾಗಿ ಬಳಕೆ ಆಗಬೇಕಿತ್ತು ಈ ನೀಚ ಸರ್ಕಾರ ಉಂಡು ಹೋದ ಕೊಂಡು ಹೋದ ಎಂಬಂತೆ ತಮ್ಮ ಸ್ವಾರ್ಥಕ್ಕಾಗಿ ಇಲ್ಲಿ ಲೂಟಿ ಹೊಡೆದದ್ದಲ್ಲದೆ, ಮಿಕ್ಕ ಹಣವನ್ನೂ ಬೇರೆ ಬೇರೆ ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಖರ್ಚಿಗೆ ಸಾಗಿಸಿದ್ದಾರೆ.

ಗುಂಡಿಗೆ ಹೋದ ಹೆಣ, ಕಾಂಗ್ರೆಸ್ ನುಂಗಿದ ಹಣ ಎಂದಿಗೂ ವಾಪಸ್ ಬರುವುದಿಲ್ಲ ಎಂಬುದು ನಮಗೆ ತಿಳಿದಿದೆ ಆದ್ರೆ ಕೊನೆ ಪ್ರಯತ್ನವಾಗಿ ನಿಮ್ಮಲ್ಲಿ ಈ ಮನವಿ ಮಾಡುತ್ತಿದ್ದೇವೆ, ಹಣ ಹಿಂತಿರುಗಿಸಿ ವಿಶ್ವಾಸ ಉಳಿಸಿಕೊಳ್ಳಿ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ. ಸದ್ಯ ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ಇದನ್ನೂ ಓದಿ | ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಪ್ರಕರಣದಲ್ಲಿ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಹೆಸರು; ಡಾ. ಜಿ.ಪರಮೇಶ್ವರ್‌ ಹೇಳಿದ್ದೇನು?

ತೆಲಂಗಾಣ ಸಹಕಾರ ಬ್ಯಾಂಕ್‌ ಅಧ್ಯಕ್ಷನನ್ನು ಬಂಧಿಸಿದ್ದ ಎಸ್‌ಐಟಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ನ ಸಹಕಾರ ಬ್ಯಾಂಕ್‌ ಅಧ್ಯಕ್ಷ ಸತ್ಯನಾರಾಯಣ ಇಟಕಾರಿ ಎಂಬುವವರನ್ನು ಸಿಐಡಿ ಎಸ್‌ಐಟಿ ಜೂನ್‌ 4ರಂದು ಬಂಧಿಸಿತ್ತು. ಆರೋಪಿ ಸತ್ಯನಾರಾಯಣ ಹೈದರಾಬಾದ್‌ನ ನಲ್ಲಕುಂಟ ಪ್ರದೇಶದಲ್ಲಿರುವ ಫಸ್ಟ್‌ ಫೈನಾನ್ಸ್‌ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ಲಿಮಿಟೆಡ್‌ನ ಅಧ್ಯಕ್ಷ ಹಾಗೂ ವ್ಯವಸ್ಥಾಪಕರಾಗಿದ್ದಾರೆ.

ವಾಲ್ಮೀಕಿ ನಿಗಮದ 94.73 ಕೋಟಿ ರೂ. ಅಕ್ರಮ ವರ್ಗಾವಣೆಯಲ್ಲಿ ಸತ್ಯನಾರಾಯಣ ಪ್ರಧಾನ ಸೂತ್ರಧಾರ ಆರೋಪಿಯಾಗಿದ್ದಾರೆ. ಯೂನಿಯನ್‌ ಬ್ಯಾಂಕ್‌ನಲ್ಲಿರುವ ವಾಲ್ಮೀಕಿ ನಿಗಮದ ಖಾತೆಯಿಂದ 18 ನಕಲಿ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾವಣೆ ಆಗಿತ್ತು. ತನಿಖೆ ವೇಳೆ ಫೈನಾನ್ಸ್‌ ಕಂಪನಿ ಸತ್ಯನಾರಾಯಣ ಅವರೇ 18 ನಕಲಿ ಖಾತೆಗಳನ್ನು ಸೃಷ್ಟಿಸಿ ಹಣ ವರ್ಗಾವಣೆ ಮಾಡಿಸಿಕೊಂಡಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿತ್ತು. ಹೀಗಾಗಿ ಅವರನ್ನು ಎಸ್‌ಐಟಿ ಬಂಧಿಸಿತ್ತು.

Continue Reading

ದೇಶ

Mamata Banerjee: 15 ದಿನಗಳಲ್ಲೇ ಮೋದಿ ಸರ್ಕಾರ ಪತನ; ಸ್ಫೋಟಕ ಭವಿಷ್ಯ ನುಡಿದ ಮಮತಾ ಬ್ಯಾನರ್ಜಿ!

Mamata Banerjee: ಯಾರು (ಬಿಜೆಪಿ) 400 ಸೀಟುಗಳ ಬಗ್ಗೆ ಮಾತನಾಡಿದ್ದರೋ, ಅವರಿಗೇ ಈಗ ಬಹುಮತ ಸಿಗದಷ್ಟು ಸ್ಥಾನಗಳು ಲಭಿಸಿವೆ. ಇಂಡಿಯಾ ಒಕ್ಕೂಟವು ಸರ್ಕಾರ ರಚನೆಗೆ ಹಕ್ಕು ಮಂಡಿಸಿಲ್ಲ ಎಂದ ಮಾತ್ರಕ್ಕೆ ಏನೂ ಆಗುವುದಿಲ್ಲ ಎಂಬುದಾಗಿ ಭಾವಿಸದಿರಿ ಎಂದು ಪರೋಕ್ಷವಾಗಿ ಇಂಡಿಯಾ ಒಕ್ಕೂಟವೇ ಸರ್ಕಾರ ರಚಿಸಲಿದೆ ಎಂದು ಮಮತಾ ಬ್ಯಾನರ್ಜಿ ಸುಳಿವು ನೀಡಿದ್ದಾರೆ.

VISTARANEWS.COM


on

Mamata Banerjee
Koo

ಕೋಲ್ಕೊತಾ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 294 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ನರೇಂದ್ರ ಮೋದಿ (Narendra Modi) ಅವರು ಭಾನುವಾರ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರ ಬೆನ್ನಲ್ಲೇ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ವರಿಷ್ಠ ನಾಯಕಿ ಮಮತಾ ಬ್ಯಾನರ್ಜಿ (Mamata Banerjee) ಅವರು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. “ಯಾವುದೇ ಸರ್ಕಾರವು 15 ದಿನಗಳಲ್ಲಿ ಬೇಕಾದರೂ ಪತನವಾಗಬಹುದು” ಎಂಬುದಾಗಿ ಹೇಳಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ತೃಣಮೂಲ ಕಾಂಗ್ರೆಸ್‌ ಸಂಸದೀಯ ಪಕ್ಷದ ಸಭೆಯ ಬಳಿಕ ಮಮತಾ ಬ್ಯಾನರ್ಜಿ ಮಾತನಾಡಿದರು. “ಯಾರು (ಬಿಜೆಪಿ) 400 ಸೀಟುಗಳ ಬಗ್ಗೆ ಮಾತನಾಡಿದ್ದರೋ, ಅವರಿಗೇ ಈಗ ಬಹುಮತ ಸಿಗದಷ್ಟು ಸ್ಥಾನಗಳು ಲಭಿಸಿವೆ. ಇಂಡಿಯಾ ಒಕ್ಕೂಟವು ಸರ್ಕಾರ ರಚನೆಗೆ ಹಕ್ಕು ಮಂಡಿಸಿಲ್ಲ ಎಂದ ಮಾತ್ರಕ್ಕೆ ಏನೂ ಆಗುವುದಿಲ್ಲ ಎಂಬುದಾಗಿ ಭಾವಿಸದಿರಿ. ಸಮಯ ಬದಲಾಗುತ್ತದೆ, ಮನಸ್ಥಿತಿಗಳು ಬದಲಾಗುತ್ತವೆ. ಇದರ ಮೇಲೆ ಇಂಡಿಯಾ ಒಕ್ಕೂಟವು ಹೆಚ್ಚು ಗಮನ ಹರಿಸುತ್ತಿದೆ” ಎಂದು ಹೇಳಿದರು.

ಇಂಡಿಯಾ ಒಕ್ಕೂಟದ್ದೇ ಸರ್ಕಾರ

ಕೇಂದ್ರದಲ್ಲಿ ಇಂಡಿಯಾ ಒಕ್ಕೂಟವೇ ಸರ್ಕಾರ ರಚಿಸಲಿದೆ ಎಂಬುದಾಗಿ ಮಮತಾ ಬ್ಯಾನರ್ಜಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. “ಕೊನೆಗೆ ಒಂದು ದಿನ ಇಂಡಿಯಾ ಒಕ್ಕೂಟವು ಸರ್ಕಾರ ರಚಿಸುತ್ತದೆ. ಕೆಲವು ದಿನಗಳವರೆಗೆ ಅವರು ಅಧಿಕಾರದಲ್ಲಿ ಇರಲಿ. ಆದರೆ, ಒಂದು ನೆನಪಿರಲಿ, ಒಂದೇ ದಿನದಲ್ಲಿ ಬೇಕಾದರೂ ಸರ್ಕಾರ ಬೀಳಬಹುದು. ಏನು ಬೇಕಾದರೂ ಆಗಬಹುದು. ಯಾರಿಗೆ ಗೊತ್ತು, 15 ದಿನಗಳಲ್ಲಿ ಬೇಕಾದರೂ ಸರ್ಕಾರ ಪತನವಾಗಬಹುದು” ಎಂಬುದಾಗಿ ಎನ್‌ಡಿಎ ಸರ್ಕಾರದ ಪತನದ ಕುರಿತು ಮಮತಾ ಬ್ಯಾನರ್ಜಿ ಮಹತ್ವದ ಹೇಳಿಕೆ ನೀಡಿದ್ದಾರೆ.

ಪ್ರಮಾಣವಚನ ಕಾರ್ಯಕ್ರಮಕ್ಕೆ ಗೈರು

ನರೇಂದ್ರ ಮೋದಿ ಅವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಲಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ಟಿಎಂಸಿ ನಿರ್ಧರಿಸಿದೆ ಎಂಬುದಾಗಿ ಮಮತಾ ಬ್ಯಾನರ್ಜಿ ಹೇಳಿದರು. “ಕಾನೂನುಬಾಹಿರ ಹಾಗೂ ಪ್ರಜಾಸತ್ತಾತ್ಮಕವಲ್ಲದ ಮಾರ್ಗದ ಮೂಲಕ ಎನ್‌ಡಿಎ ಸರ್ಕಾರ ರಚಿಸುತ್ತಿದೆ. ಹಾಗಾಗಿ, ಪ್ರಮಾಣವಚನ ಕಾರ್ಯಕ್ರಮದಲ್ಲಿ ಟಿಎಂಸಿ ಭಾಗವಹಿಸಲ್ಲ” ಎಂದಿದ್ದಾರೆ.

ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾರತದ ಏಳು ನೆರೆಯ ರಾಷ್ಟ್ರಗಳ ನಾಯಕರು ಭಾಗಿಯಾಗಲಿದ್ದಾರೆ. ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝು, ಸೆಶೆಲ್ಸ್‌ನ ಉಪಾಧ್ಯಕ್ಷ ಅಹ್ಮದ್ ಅಫೀಫ್; ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ; ಮಾರಿಷಸ್‌ನ ಪ್ರಧಾನ ಮಂತ್ರಿ, ಪ್ರವಿಂದ್ ಕುಮಾರ್ ಜುಗ್ನೌತ್; ನೇಪಾಳದ ಪ್ರಧಾನಿ, ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಮತ್ತು ಭೂತಾನ್ ಪ್ರಧಾನಿ, ತ್ಶೆರಿಂಗ್ ಟೊಬ್ಗೇ ಉಪಸ್ಥಿತರಿರಲಿದ್ದಾರೆ.

ಇದನ್ನೂ ಓದಿ: Sonia Gandhi: ಮತ್ತೆ ಸೋನಿಯಾ ಗಾಂಧಿಗೆ ಮಣೆ; ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಮರು ಆಯ್ಕೆ!

Continue Reading

ದೇಶ

Sonia Gandhi: ಮತ್ತೆ ಸೋನಿಯಾ ಗಾಂಧಿಗೆ ಮಣೆ; ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಮರು ಆಯ್ಕೆ!

Sonia Gandhi: ಹಳೆಯ ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ಕಾಂಗ್ರೆಸ್‌ ಸಂಸದೀಯ ಪಕ್ಷದ ಸಭೆ ನಡೆದಿದ್ದು, ಅಲ್ಲಿಯೇ ಅವಿರೋಧವಾಗಿ ಸೋನಿಯಾ ಗಾಂಧಿ ಅವರನ್ನು ಸಂಸದೀಯ ಪಕ್ಷದ ಅಧ್ಯಕ್ಷೆಯನ್ನಾಗಿ ಮರು ಆಯ್ಕೆ ಮಾಡಲಾಗಿದೆ. ಸಭೆಯ ಬಳಿಕ ಸೋನಿಯಾ ಗಾಂಧಿ ಮರು ನೇಮಕದ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾಹಿತಿ ನೀಡಿದರು.

VISTARANEWS.COM


on

sonia gandhi
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಕಾಂಗ್ರೆಸ್‌ 99 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಪಕ್ಷದಲ್ಲಿ ಸಕಾರಾತ್ಮಕ ಮನೋಭಾವ ಮೂಡಿದೆ. ಹಾಗಾಗಿ, ಪಕ್ಷದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಮಾಡದಿರಲು ಹೈಕಮಾಂಡ್‌ ತೀರ್ಮಾನಿಸಿದೆ. ಅಷ್ಟೇ ಅಲ್ಲ, ಮತ್ತೆ ಸೋನಿಯಾ ಗಾಂಧಿ (Sonia Gandhi) ಅವರ ನಾಯಕತ್ವಕ್ಕೆ ಮಣೆ ಹಾಕಲಾಗಿದೆ. ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಅವರನ್ನು ಮರು ಆಯ್ಕೆ ಮಾಡಲಾಗಿದೆ.

ಹಳೆಯ ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ಕಾಂಗ್ರೆಸ್‌ ಸಂಸದೀಯ ಪಕ್ಷದ ಸಭೆ ನಡೆದಿದ್ದು, ಅಲ್ಲಿಯೇ ಅವಿರೋಧವಾಗಿ ಸೋನಿಯಾ ಗಾಂಧಿ ಅವರನ್ನು ಸಂಸದೀಯ ಪಕ್ಷದ ಅಧ್ಯಕ್ಷೆಯನ್ನಾಗಿ ಮರು ಆಯ್ಕೆ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋನಿಯಾ ಗಾಂಧಿ ಅವರ ಹೆಸರನ್ನು ಪ್ರಸ್ತಾಪ ಮಾಡಿದರು. ಪಕ್ಷದ ನಾಯಕರಾದ ಗೌರವ್‌ ಗೊಗೊಯ್‌, ತಾರಿಕ್‌ ಅನ್ವರ್‌, ಕೆ.ಸುಧಾಕರನ್‌ ಸೇರಿ ಹಲವು ನಾಯಕರು ಇದನ್ನೇ ಅನುಮೋದಿಸಿದರು.

ಸಭೆಯ ಬಳಿಕ ಮಲ್ಲಿಕಾರ್ಜುನ ಖರ್ಗೆ ಅವರು ಮಾಧ್ಯಮದವರಿಗೆ ಈ ವಿಷಯ ತಿಳಿಸಿದರು. “ಸೋನಿಯಾ ಗಾಂಧಿ ಅವರನ್ನೇ ಸಂಸದೀಯ ಪಕ್ಷದ ಅಧ್ಯಕ್ಷೆಯನ್ನಾಗಿ ಮರು ಆಯ್ಕೆ ಮಾಡಿರುವುದು ದೊಡ್ಡ ಸಂಗತಿಯಾಗಿದೆ. ಅವರು ನಮಗೆ ನೀಡುತ್ತಿರುವ ಮಾರ್ಗದರ್ಶವನ್ನು ಮುಂದುವರಿಸುತ್ತಾರೆ. ಅವರ ಸೇವೆಯು ಪಕ್ಷಕ್ಕಾಗಿ ಮುಂದುವರಿಯುತ್ತದೆ ಇದಕ್ಕಾಗಿ ನಾನು ಅವರಿಗೆ ಸೆಲ್ಯೂಟ್‌ ಹೊಡೆಯುತ್ತೇನೆʼ ಎಂಬುದಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಮಾಹಿತಿ ನೀಡಿದರು.

ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಅವರು, “ಮೊದಲು, ಸಂಸದರಾಗಿ ಆಯ್ಕೆಯಾದ ಎಲ್ಲ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಅಭಿನಂದನೆಗಳು. ಸವಾಲಿನ ಸಂದರ್ಭದಲ್ಲಿ ನೀವೆಲ್ಲ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದೀರಿ. ಚುನಾವಣೆ ಪ್ರಚಾರದ ವೇಳೆ ಎದುರಾದ ಸಂಕಷ್ಟಗಳನ್ನು ಮೆಟ್ಟಿ ನೀವು ಜಯ ತಂದಿದ್ದೀರಿ. ಇದು ಲೋಕಸಭೆಯಲ್ಲಿ ಕಾಂಗ್ರೆಸ್‌ ಪಕ್ಷವು ಇನ್ನಷ್ಟು ಪ್ರಬಲವಾಗಿ ಕೆಲಸ ಮಾಡಲು ಸಾಧ್ಯವಾಗಲಿದೆ. ಇನ್ನು ಪಕ್ಷದ ನಾಯಕರು ನನ್ನ ಮೇಲೆ ವಿಶ್ವಾಸ ಇಟ್ಟಿದ್ದಕ್ಕೆ ಧನ್ಯವಾದಗಳು” ಎಂದಿದ್ದಾರೆ.

ಮತ್ತೊಂದೆಡೆ, ಲೋಕಸಭೆಯಲ್ಲಿ ರಾಹುಲ್‌ ಗಾಂಧಿ ಅವರನ್ನು ಪ್ರತಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಲು ಸಿಡಬ್ಲ್ಯೂಸಿ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. “ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕನನ್ನಾಗಿ ರಾಹುಲ್‌ ಗಾಂಧಿ ಅವರನ್ನು ನೇಮಕ ಮಾಡುವ ದಿಸೆಯಲ್ಲಿ ಸಿಡಬ್ಲ್ಯೂಸಿಯು ಅವಿರೋಧವಾಗಿ ನಿರ್ಣಯ ತೆಗೆದುಕೊಂಡಿದೆ. ಸಂಸತ್‌ನಲ್ಲಿ ಪ್ರತಿಪಕ್ಷದ ನಾಯಕತ್ವ ವಹಿಸಲು ರಾಹುಲ್‌ ಗಾಂಧಿ ಅವರೇ ಸಮರ್ಥ ನಾಯಕರಾಗಿದ್ದಾರೆ. ನೀವೇ ಪ್ರತಿಪಕ್ಷ ನಾಯಕರಾಗಿ ಅಧಿಕಾರ ವಹಿಸಿಕೊಳ್ಳಿ ಎಂಬುದಾಗಿ ಕಾಂಗ್ರೆಸ್‌ ನಾಯಕರು ರಾಹುಲ್‌ ಗಾಂಧಿ ಅವರಿಗೆ ಮನವಿ ಮಾಡಲಿದ್ದಾರೆ” ಎಂಬುದಾಗಿ ಕಾಂಗ್ರೆಸ್‌ ನಾಯಕ ಕೆ.ಸಿ.ವೇಣುಗೋಪಾಲ್‌ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Narendra Modi: ಮೋದಿ ಪ್ರಮಾಣವಚನಕ್ಕೆ 7 ವಿದೇಶಿ ನಾಯಕರು; 8000 ಅತಿಥಿಗಳು

Continue Reading
Advertisement
IND vs PAK
ಕ್ರೀಡೆ25 mins ago

IND vs PAK: ಬಾಬರ್‌ ಪಡೆಯನ್ನು ಬೆಂಡೆತ್ತಲಿ ರೋಹಿತ್​ ಸಾರಥ್ಯದ ಟೀಮ್​ ಇಂಡಿಯಾ

Valmiki Corporation Scam
ವೈರಲ್ ನ್ಯೂಸ್33 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಹಣ ಹಿಂತಿರುಗಿಸಲು ತೆಲಂಗಾಣ ಸಿಎಂಗೆ ಪತ್ರ ಬರೆದ ಕನ್ನಡಿಗರು

Mamata Banerjee
ದೇಶ45 mins ago

Mamata Banerjee: 15 ದಿನಗಳಲ್ಲೇ ಮೋದಿ ಸರ್ಕಾರ ಪತನ; ಸ್ಫೋಟಕ ಭವಿಷ್ಯ ನುಡಿದ ಮಮತಾ ಬ್ಯಾನರ್ಜಿ!

NSS Camp
ಕೊಡಗು54 mins ago

NSS Camp : ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ 7 ದಿನಗಳ ಎನ್‌ಎಸ್‌ಎಸ್‌ ಶಿಬಿರಕ್ಕೆ ತೆರೆ

sonia gandhi
ದೇಶ1 hour ago

Sonia Gandhi: ಮತ್ತೆ ಸೋನಿಯಾ ಗಾಂಧಿಗೆ ಮಣೆ; ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಮರು ಆಯ್ಕೆ!

IND vs PAK
ಕ್ರೀಡೆ2 hours ago

IND vs PAK: ಪಾಕ್​ ವಿರುದ್ಧದ ಪಂದ್ಯದಲ್ಲಿ ವಿಶ್ವ ದಾಖಲೆ ನಿರ್ಮಿಸಲು ಕೊಹ್ಲಿ ಸಜ್ಜು; ಯಾವುದು ಈ ದಾಖಲೆ?

Karnataka weather Forecast
ಮಳೆ2 hours ago

Karnataka Weather : ಉತ್ತರ ಒಳನಾಡು, ಕರಾವಳಿಯಲ್ಲಿ ವ್ಯಾಪಕ ಮಳೆ; ಶಾಲೆಗೆ ನುಗ್ಗಿದ ನೀರು, ಮಕ್ಕಳಿಗೆ ರಜೆ

ಬೆಂಗಳೂರು2 hours ago

Wheelchair Cricket Tournament: ವಿಶೇಷಚೇತನರ ಗಾಲಿಕುರ್ಚಿಯ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿದ ರವಿಶಂಕರ್ ಗುರೂಜಿ

Ambani Family Fashion
ಫ್ಯಾಷನ್2 hours ago

Ambani Family Fashion: ಅಂಬಾನಿ ಕುಟುಂಬದ ಮಹಿಳೆಯರ ಜ್ಯುವೆಲರಿ ಡಿಸೈನ್ಸ್ ಕಾಪಿ ಮಾಡಿ ಟ್ರೆಂಡಿಯಾದ ಜ್ಯುವೆಲರಿಗಳಿವು!

Narendra Modi
ದೇಶ2 hours ago

Narendra Modi: ನಾಳೆ 3ನೇ ಬಾರಿ ಮೋದಿಗೆ ಪ್ರಧಾನಿ ಗಾದಿ; ಇಲ್ಲಿದೆ ಅವರ ರಾಜಕೀಯದ ಹಾದಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ1 day ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ1 day ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌