Drone Prathap: ಪ್ರೀತಿಯ ʻಪ್ರತುʼ ಕಾಮಿಡಿಗೆ ಮಹಿಳಾ ಮಣಿಗಳು ಫಿದಾ; ಡೈಲಾಗ್‌ ಹೇಳಲು ಹರಸಾಹಸ! - Vistara News

ಕಿರುತೆರೆ

Drone Prathap: ಪ್ರೀತಿಯ ʻಪ್ರತುʼ ಕಾಮಿಡಿಗೆ ಮಹಿಳಾ ಮಣಿಗಳು ಫಿದಾ; ಡೈಲಾಗ್‌ ಹೇಳಲು ಹರಸಾಹಸ!

Drone Prathap: ಪ್ರತಾಪ್ ಕಡೆಯಿಂದ ಒಂದು ಪದ ಹೇಳಿಸುವುದಕ್ಕೆ ಮೆಂಟರ್ ಸರ್ಕಸ್ ಮಾಡಿದ್ದಾರೆ. ಡೈಲಾಗ್ ಹೇಳಲು ಪ್ರತಾಪ್‌ ಹರಸಾಹಸ ಪಟ್ಟಿದ್ದಾರೆ. ಇದೀಗ ನೆಟ್ಟಿಗರ ಕಮೆಂಟ್ ಬಾಕ್ಸ್‌ನಲ್ಲಿ ಈ ಡೈಲಾಗ್‌ವನ್ನು ತಮ್ಮ ಪ್ರೀತಿಯ `ಪ್ರತು’ಗೆ ಹೇಳಿಕೊಟ್ಟಿದ್ದಾರೆ.

VISTARANEWS.COM


on

Drone Prathap
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌ 10ರ ರನ್ನರ್‌ ಅಪ್‌ ಡ್ರೋನ್‌ ಪ್ರತಾಪ್‌ (Drone Prathap) ಕ್ರೇಜ್‌ ಮಾತ್ರ ದಿನೇ ದಿನೇ ಫ್ಯಾನ್ಸ್‌ನಲ್ಲಿ ಹೆಚ್ಚಾಗುತ್ತಿದೆ. ಇದೀಗ ಡ್ರೋನ್‌ ಪ್ರತಾಪ್‌ ತಮ್ಮ ಅಭಿಮಾನಿಗಳನ್ನು ರಂಜಿಸಲು ಗಿಚ್ಚಿಗಿಲಿಗಿಲಿ ಸೀಸನ್- 3 ವೇದಿಕೆ ಬಂದಿದ್ದಾರೆ. ಈಗಾಗಲೇ ಡ್ರೋನ್ ಪ್ರತಾಪ್ ಇರುವಂತ ಪ್ರೋಮೊಗಳನ್ನು ಕಲರ್ಸ್‌ ಕನ್ನಡ ಹಂಚಿಕೊಂಡಿದೆ. ಇದರಲ್ಲಿ ಪ್ರತಾಪ್ ಕಡೆಯಿಂದ ಒಂದು ಪದ ಹೇಳಿಸುವುದಕ್ಕೆ ಮೆಂಟರ್ ಸರ್ಕಸ್ ಮಾಡಿದ್ದಾರೆ. ಡೈಲಾಗ್ ಹೇಳಲು ಪ್ರತಾಪ್‌ ಹರಸಾಹಸ ಪಟ್ಟಿದ್ದಾರೆ. ಇದೀಗ ನೆಟ್ಟಿಗರ ಕಮೆಂಟ್ ಬಾಕ್ಸ್‌ನಲ್ಲಿ ಈ ಡೈಲಾಗ್‌ವನ್ನು ತಮ್ಮ ಪ್ರೀತಿಯ `ಪ್ರತು’ಗೆ ಹೇಳಿಕೊಟ್ಟಿದ್ದಾರೆ.

ಬಿಗ್‌ ಬಾಸ್‌ ಬರುವದಕ್ಕೂ ಮುಂಚೆ ಪ್ರತಾಪ್‌ ಅವರು ಜನ ಮನ್ನಣೆ ಗಳಿಸಿರಲಿಲ್ಲ. ಯಾವಾಗ ಬಿಗ್‌ ಬಾಸ್‌ ಒಳಗೆ ಕಾಲಿಟ್ಟರೋ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ ಪ್ರತಾಪ್‌. ಇದೀಗ ಕಲರ್ಸ್‌ ಕನ್ನಡ ಹಂಚಿಕೊಂಡಿರುವ ಪ್ರೋಮೊದಲ್ಲಿ ʻʻಪ್ರತಾಪ್‌ ಮುಂದೆ ಇನ್ನೊಬ್ಬ ಮಂತ್ರವಾದಿಯೂ ನಿಂತಿದ್ದಾನೆ. ʻಆವಾಹಯಾಮಿʼ ಡೈಲಾಗ್ ಹೇಳಬೇಕಿತ್ತು. ಅದು ಆವಾಹಯಾಮಿ.. ʻಹಾವಾಹಯಾಮಿʼ ಅಲ್ಲ ಎಂದಿದ್ದಾರೆ ಪ್ರೇಕ್ಷಕರು. ಆವಾಹಯಾಮಿ ಡೈಲಾಗ್‌ ಹೇಳಲು ಪ್ರತಾಪ್‌ ಪಟ್ಟ ಕಷ್ಟ ಅಷ್ಟಿಷ್ಟಲ್ಲ. ಪ್ರತಾಪ್ ಅವರು ಈ ಕಷ್ಟ ಕಂಡು ಜಡ್ಜಸ್ ಸುಸ್ತಾಗಿ ಹೋಗಿದ್ದಾರೆ. ಸಾಧುಕೋಕಿಲಾ ಅವರ ಕುರ್ಚಿ ಬಿಟ್ಟು ಎದ್ದು ಎದ್ದು ನಕ್ಕಿದ್ದಾರೆ.

ಈಗ ಗಿಚ್ಚಿಗಿಲಿ ಗಿಲಿಯಲ್ಲೂ ತನ್ನೊಳಗೂ ಒಬ್ಬ ಹಾಸ್ಯನಟ ಇದ್ದಾನೆ ಎಂಬುದನ್ನು ಪ್ರತಾಪ್ ಈಗ ಪ್ರೂವ್ ಮಾಡಿಕೊಂಡಿದ್ದಾರೆ. ಪ್ರತಾಪ್ ಈಗ ಮಾಮೂಲಿ ಡ್ರೋನ್ ಪ್ರತಾಪ್ ಆಗಿ ಉಳಿದುಕೊಂಡಿಲ್ಲ. ಬದಲಿಗೆ ಪ್ರೀತಿಯ ಪ್ರತು ಆಗಿದ್ದಾರೆ. ಪ್ರತು ಕಾಮಿಡಿಗೆ ಮಹಿಳಾ ಮಣಿಗಳು ಫಿದಾ ಆಗಿದ್ದಾರೆ. ಗಿಚ್ಚಿಗಿಲಿ ಗಿಲಿಯಲ್ಲೂ ಪ್ರತಾಪ್ ಗೆಲ್ಲಬೇಕು ಎಂದೇ ಹಾರೈಸುತ್ತಿದ್ದಾರೆ.

ಇದನ್ನೂ ಓದಿ: Drone Prathap: ಮಲೆ ಮಹದೇಶ್ವರ ಬೆಟ್ಟದಲ್ಲಿ ಡ್ರೋನ್‌ ಪ್ರತಾಪ್‌ ನೋಡಲು ಮುಗಿಬಿದ್ದ ಫ್ಯಾನ್ಸ್!

ಕಲರ್ಸ್‌ ಕನ್ನಡ ಪ್ರೋಮೊ

ಮೊದಲನೆ ಸೀಸನ್‌ನ ಮೂಲಕ ಇದು ಜನರ ಮೆಚ್ಚುಗೆಗೆ ಪಾತ್ರವಾಗಿತ್ತು. ʻಗಿಚ್ಚಿ ಗಿಲಿಗಿಲಿ’ಯ ಮೊದಲ ಸೀಸನ್‌ನಲ್ಲಿ ನಿವೇದಿತಾ ಗೌಡ, ಜಗ್ಗಪ್ಪ, ಪ್ರಶಾಂತ್, ಚಂದ್ರಪ್ರಭಾ ಮುಂತಾದವರು ಇದ್ದರು. ಮೊದಲನೇ ಸೀಸನ್‌ನಲ್ಲಿ ವಂಶಿಕಾ ಅಂಜನಿ ಕಶ್ಯಪ ಹಾಗೂ ಶಿವು ಈ ಶೋನ ವಿಜೇತರಾಗಿ ಹೊರಹೊಮ್ಮಿದ್ದರು. ವಿನೋದ್ ಗೊಬ್ರಗಾಲ್, ನಿವೇದಿತಾ ಗೌಡ ಈ ಶೋನ ರನ್ನರ್ ಅಪ್ ಆಗಿದ್ದರು. ಗಿಚ್ಚಿ ಗಿಲಿಗಿಲಿ ಸೀಸನ್ 2 ವಿನ್ನರ್ ಪಟ್ಟವನ್ನು ಚಂದ್ರಪ್ರಭಾ ಅಲಂಕರಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Niveditha Gowda: ದಸರಾ ವೇದಿಕೆ ಮೇಲೆ ಪ್ರಪೋಸ್‌ ಮಾಡಿದ್ದೇ ವಿಚ್ಛೇದನಕ್ಕೆ ಕಾರಣವೇ? ʻಕ್ಯೂಟ್‌ ಕಪಲ್‌ʼ ಬಾಳಲ್ಲಿ ಬಿರುಗಾಳಿ!

Niveditha Gowda:  ಚಂದನ್‌ ಶೆಟ್ಟಿ ಮತ್ತು ನಿವೇದಿತಾ ಕನ್ನಡದ ‘ಬಿಗ್‌ ಬಾಸ್-5’ರ ಸ್ಪರ್ಧಿಗಳು. ಈ ಕಾರ್ಯಕ್ರಮದಲ್ಲಿ ಜೊತೆಯಾದ ಇಬ್ಬರ ಪರಿಚಯ ನಂತರ ಸ್ನೇಹ ಹಾಗೂ ಪ್ರೀತಿಯಾಗಿ ಬದಲಾಗಿತ್ತು. ಯುವ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಚಂದನ್ ಶೆಟ್ಟಿ, ಅದೇ ವೇದಿಕೆ ಮೇಲೆ ನಿವೇದಿತಾ ಗೌಡ ಅವರಿಗೆ ಪ್ರಪೋಸ್ ಮಾಡಿದ್ದರು. ನಿವೇದಿತಾ ಗೌಡ ಅವರಿಗೆ ಪ್ರಪೋಸ್‌ ಮಾಡಲು ಮುಂದಾಗಿದ್ದ ಚಂದನ್, ಮೊದಲು ಫಾರಿನ್ ಲೊಕೇಷನ್‌ ಆರಿಸಿಕೊಂಡಿದ್ರಂತೆ.

VISTARANEWS.COM


on

Niveditha Gowda chandan divorce whats the reason
Koo

ಬೆಂಗಳೂರು: ಬಿಗ್‌ ಬಾಸ್‌ ಜೋಡಿ, ಕ್ಯೂಟ್‌ ಕಪಲ್‌ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಗೌಡ (Niveditha Gowda) ದಂಪತಿ ವಿಚ್ಛೇದನ ಪಡೆದುಕೊಂಡಿದೆ. ಯುವ ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ನಿವೇದಿತಾಗೆ ಲವ್ ಪ್ರೊಪೋಸಲ್ ಮಾಡಿ ಸುದ್ದಿಯಾಗಿದ್ದರು. ಚಂದನ್ ವರ್ತನೆಗೆ ಪರ ಹಾಗೂ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಇದೇ ವರ್ಷ ಮೇ 12 ರಂದು ನಿವೇದಿತಾ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದರು ಚಂದನ್‌. ಆರು ದಿನಗಳ ಹಿಂದೆಯಷ್ಟೇ ʻಕೋಟಿʼ ಸಿನಿಮಾ ಪ್ರಚಾರಕ್ಕೂ ಒಟ್ಟಿಗೆ ಕಾಣಿಸಿಕೊಂಡಿದ್ದರು. ಇದೀಗ ಇಬ್ಬರೂ ಬೇರೆಯಾಗಿದ್ದಾರೆ. ಇದೀಗ ಜೋಡಿಯ ಫ್ಯಾನ್ಸ್‌ ಕಮೆಂಟ್‌ ಮೂಲಕ ಬೇಸರ ಹೊರ ಹಾಕಿದ್ದಾರೆ.

ʻಕ್ಯಾಂಡಿ ಕ್ರಶ್ʼ ಜೋಡಿ ಒಟ್ಟಿಗೆ ಕಾಣಿಸಿಕೊಂಡಿತ್ತು. ಮೂರು ತಿಂಗಳ ಹಿಂದೆ ಚಿತ್ರದ ಶೂಟಿಂಗ್ ನಡೆದಿತ್ತು. ಸದ್ಯ ಸಿನಿಮಾ ರಿಲೀಸ್‌ ಆಗಬೇಕಿದೆ.

ಯುವ ದಸರಾ ಕಾರ್ಯಕ್ರಮದಲ್ಲಿ ಪ್ರಪೋಸ್‌ ಮಾಡಿದ್ದ ಚಂದನ್‌

ಚಂದನ್‌ ಶೆಟ್ಟಿ ಮತ್ತು ನಿವೇದಿತಾ ಕನ್ನಡದ ‘ಬಿಗ್‌ ಬಾಸ್-5’ರ ಸ್ಪರ್ಧಿಗಳು. ಈ ಕಾರ್ಯಕ್ರಮದಲ್ಲಿ ಜೊತೆಯಾದ ಇಬ್ಬರ ಪರಿಚಯ ನಂತರ ಸ್ನೇಹ ಹಾಗೂ ಪ್ರೀತಿಯಾಗಿ ಬದಲಾಗಿತ್ತು. ಯುವ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಚಂದನ್ ಶೆಟ್ಟಿ, ಅದೇ ವೇದಿಕೆ ಮೇಲೆ ನಿವೇದಿತಾ ಗೌಡ ಅವರಿಗೆ ಪ್ರಪೋಸ್ ಮಾಡಿದ್ದರು. ನಿವೇದಿತಾ ಗೌಡ ಅವರಿಗೆ ಪ್ರಪೋಸ್‌ ಮಾಡಲು ಮುಂದಾಗಿದ್ದ ಚಂದನ್, ಮೊದಲು ಫಾರಿನ್ ಲೊಕೇಷನ್‌ ಆರಿಸಿಕೊಂಡಿದ್ರಂತೆ. ಆದರೆ ಆ ನಂತರ ದೇವಿ ಚಾಮುಂಡೇಶ್ವರಿ ಆಶೀರ್ವಾದದೊಂದಿಗೆ ಮೈಸೂರು ಯುವ ದಸರಾ ವೇದಿಕೆ ಮೇಲೆ ಪ್ರೇಮ ನಿವೇದನೆ ಮಾಡಲು ಮುಂದಾಗಿದ್ದರು ಎಂದು ವರದಿಯಾಗಿತ್ತು.

ಇದನ್ನೂ ಓದಿ: Niveditha Gowda: ನಿವೇದಿತಾ- ಚಂದನ್‌ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ ಕೊಟ್ರಾ ಬಾರ್ಬಿ ಡಾಲ್‌?

ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಜೋಡಿ!

ನಟಿ ನಿವೇದಿತಾ ಗೌಡ (Niveditha Gowda) ಹಾಗೂ ಸಂಗೀತ ನಿರ್ದೇಶಕ ಚಂದನ್​ ಶೆಟ್ಟಿ ಆಗಾಗ ತಮ್ಮ ಪೋಸ್ಟ್‌ ಹಾಗೂ ರೀಲ್ಸ್‌ ಮೂಲಕ ಸುದ್ದಿಯಾಗುತ್ತಲೇ ಇರುತ್ತಿದ್ದರು. ಹಿಂದೊಮ್ಮೆ  ಅಂಡರ್​ ವಾಟರ್​ ಶೂಟ್​ ಮಾಡಿರುವ ಜೋಡಿ ಲಿಪ್‌ ಕಿಸ್‌ ಮಾಡಿದ ರೊಮ್ಯಾಂಟಿಕ್​ ವಿಡಿಯೊ ಶೇರ್‌ ಮಾಡಿಕೊಂಡಿತ್ತು. ಸಾವಿರಾರು ಜನರು ಲೈಕ್​ ಮಾಡಿದ್ದರು. ಕೆಲವರು ಈ ವಿಡಿಯೊಗೆ ಮೆಚ್ಚುಗೆ ಸೂಚಿಸಿದರೆ ಇನ್ನು ಕೆಲವರು ನೆಗೆಟಿವ್​ ಕಮೆಂಟ್​ ಕೂಡ ಮಾಡಿದ್ದರು.

ಬಿಗ್​ ಬಾಸ್​ ಕನ್ನಡ ಸೀಸನ್​ 5’ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಹಾಗೂ ಚಂದನ್​ ಶೆಟ್ಟಿ ಅವರು ಸ್ಪರ್ಧಿಸಿದ್ದರು. ಅಲ್ಲಿಯೇ ಅವರಿಗೆ ಮೊದಲ ಬಾರಿಗೆ ಪರಿಚಯ ಆಗಿದ್ದು. 2020ರ ಫೆಬ್ರವರಿಯಲ್ಲಿ ಹಸೆಮಣೆ ಏರಿದರು. ಗಾಯಕ ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಚಂದನ್​ ಶೆಟ್ಟಿ ಅವರು ಸಿನಿಮಾದಲ್ಲಿಯೂ ನಟಿಸಿದ್ದಾರೆ. ಚಂದನ್ ಶೆಟ್ಟಿ ಅವರ ಮೊದಲ ಸಿನಿಮಾದ ಶೀರ್ಷಿಕೆ ‘ಎಲ್ರ ಕಾಲೆಳೆಯುತ್ತೆ ಕಾಲ’.

ಇದೀಗ ಜೋಡಿಗೆ ಬೇರೆಯಾಗಿದ್ದು ಕಂಡು ಅವರ ಫ್ಯಾನ್ಸ್‌ ಬೇಸರ ಹೊರ ಹಾಕುತ್ತಿದ್ದಾರೆ. ಮತ್ತೆ ಒಂದಾಗಿ ಎಂದು ಕಮೆಂಟ್‌ ಮಾಡುತ್ತಿದ್ದಾರೆ. ಈ ಬಗ್ಗೆ ದಂಪತಿ ಇನ್ನೂ ಸ್ಪಷ್ಟನೆ ಕೊಟ್ಟಿಲ್ಲ. ಕರಿಯರ್ ದೃಷ್ಟಿಯಿಂದ ಪರಸ್ಪರ ಒಪ್ಪಿಗೆ ಮೂಲಕ ವಿಚ್ಛೇದನ ಪಡೆದುಕೊಂಡಿದ್ದಾರೆ. ಇಂದು ಶಾಂತಿನಗರ ಕೋರ್ಟ್‌ನಲ್ಲಿ ದಂಪತಿ ವಿಚ್ಛೇದನ ಪಡೆದುಕೊಂಡಿದೆ.

Continue Reading

ಕಿರುತೆರೆ

Raja Rani Show: ‘ರಾಜಾ ರಾಣಿ’ ಶೋನಲ್ಲಿ ಕುಣಿದು ಕುಪ್ಪಳಿಸಿದ ‘ಕರ್ನಾಟಕ ಜೋಡಿ’; ಹುಣಸೆ ಮರ ಮುಪ್ಪಾದರೆ, ಹುಳಿ ಮುಪ್ಪಾ?

Raja Rani Show: ಈಗಾಗಲೇ ಈ ಶೋನ ಹಲವು ಪ್ರೋಮೋಗಳು ರಿಲೀಸ್‌ ಆಗಿದ್ದು, ಮೆಚ್ಚುಗೆ ಪಡೆದುಕೊಂಡಿದೆ. ಈಗಾಗಲೇ ದಿವ್ಯಶ್ರೀ ಜಿಜಿ ದಂಪತಿ, ರಂಜಿತಾ ಸೀರುಂಡೆ ರಘು, ಬಿಗ್‌ ಬಾಸ್‌ ಖ್ಯಾತಿಯ ವಿನಯ್‌ ಗೌಡ ಮತ್ತು ಅಕ್ಷತಾ ಸೇರಿ ಇನ್ನೂ ಹಲವು ಜೋಡಿಗಳು ಈ ಸಲದ ಶೋನಲ್ಲಿರಲಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ರಾಜಾರಾಣಿ’ ರಿಯಾಲಿಟಿ ಶೋ ಈಗಾಗಲೇ ಎರಡು ಸೀಸನ್‌ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.ರಾಜರಾಣಿ ಸೀಸನ್ 1’ರಲ್ಲಿ ನಟಿ ನೇಹಾ ಗೌಡ ಹಾಗೂ ಅವರ ಪತಿ ಚಂದನ್ ವಿನ್ನರ್ಸ್ ಆಗಿದ್ದರು. ಅಂತೆಯೇ ಸೀಸನ್ 2 ನಲ್ಲಿ ನಟಿ ಕಾವ್ಯಾ ಮಹದೇವ್ ಹಾಗೂ ಕುಮಾರ್ ದಂಪತಿ ಗೆದ್ದಿದ್ದರು.

VISTARANEWS.COM


on

Raja Rani Show performance Karnataka Jodi in colors
Koo

ಬೆಂಗಳೂರು: ಸೋಷಿಯಲ್‌ ಮೀಡಿಯಾದಲ್ಲಿ ʻಕರ್ನಾಟಕ ಜೋಡಿʼ (Karnataka Jodi) ಸಿಕ್ಕಾಪಟ್ಟೆ ಫೇಮಸ್ ಆಗಿಬಿಟ್ಟಿದೆ. ಈ ಮಧ್ಯವಯಸ್ಕ ಗೋವಿಂದರಾಜ್ ದಂಪತಿ ‘ ಯಾಮಿನಿ ಯಾಮಿನಿ’ ಹಾಡಿನ ಗುಂಗು ಹಿಡಿಸಿತ್ತು. ಈ ದಂಪತಿ ‘ಕದಂಬ’ ಚಿತ್ರದ ‘ಯಾಮಿನಿ ಯಾರಮ್ಮ ನೀನು ಯಾಮಿನಿ..’ ಸಾಂಗ್‌ಗೆ ಇವರು ಡ್ಯಾನ್ಸ್‌ ಮಾಡಿದಾಗ ಅದು ತುಂಬ ದೊಡ್ಡಮಟ್ಟದಲ್ಲಿ ವೈರಲ್ ಆಯ್ತು (Raja Rani Show). ಆನಂತರ ಇವರ ಫಾಲೋವರ್ಸ್ ಸಂಖ್ಯೆ ಕೂಡ ಜಾಸ್ತಿ ಆಗಿತ್ತು. ಇದೀಗ ಜೋಡಿ  ‘ರಾಜಾ ರಾಣಿ’ ರೀಲೋಡೆಡ್‌ ಶೋನಲ್ಲಿ ಬಂದು ಹೆಜ್ಜೆ ಹಾಕಿದೆ.

ರಾಜಾ ರಾಣಿ ಶೋಗೆ ‘ಕರ್ನಾಟಕ ಜೋಡಿ’ ಬಂದಿರುವ ಕುರಿತ ಪ್ರೋಮೋ ರಿಲೀಸ್ ಆಗಿದೆ. ಅದರಲ್ಲಿ ಇಬ್ಬರು ಕೂಡ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ.  “ನಮಗೆ 51 ವಯಸ್ಸು ಆದಮೇಲೆ ನಮ್ಮ ಕೆಲಸ ಶುರುವಾಗಿದೆ. ನಾವು ಇಲ್ಲಿವರೆಗೂ ಬರ್ತಿವಿ ಎಂದು ಗೊತ್ತಿರಲಿಲ್ಲ..” ಎಂದು ಗೋವಿಂದರಾಜ್‌ ಹೇಳಿದ್ದಾರೆ. “ಈ ವಯಸ್ಸಿನಲ್ಲೂ ಇಷ್ಟೊಂದು ರೊಮ್ಯಾನ್ಸ್ ಹೇಗೆ” ಎಂದು ನಿರೂಪಕಿ ಅನುಪಮಾ ಗೌಡ ಕೇಳಿದ್ದಾರೆ. ಅದಕ್ಕೆ ಉತ್ತರಿಸಿರುವ ಗೋವಿಂದರಾಜ್, “ಹುಣಸೆಮರ ಮುಪ್ಪಾದ್ರೂ, ಹುಳಿ ಮುಪ್ಪಾಗುತ್ತಾ” ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ: Toyota Kirloskar Motor: ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನಿಂದ ಪರಿಸರ ಮಾಸಾಚರಣೆ

ಗೋವಿಂದರಾಜ್ ಹಾಗೂ ವೈಲಾ ದಂಪತಿ ಇದೀಗ ಕರ್ನಾಟಕ ಜೋಡಿ ಎಂದೇ ನೆಟ್ಟಿಗರಿಗೆ ಹೆಚ್ಚು ಪರಿಚಿತರಾಗಿಬಿಟ್ಟಿದ್ದಾರೆ. ಸೂಪರ್ ಹಿಟ್ ಸಿನಿಮಾ ಗೀತೆಗಳಿಗೆ ಡ್ಯಾನ್ಸ್ ಮಾಡುತ್ತಾ, ರೀಲ್ಸ್ ಮಾಡುತ್ತಾ ಈ ಜೋಡಿ ವೀಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದೆ. ಹಾಡಿಗೆ 50ರ ಹರೆಯದ ಜೋಡಿಯ ಸ್ಟೆಪ್ಸ್, ಹಾವಭಾವ ನೋಡಿದವರು ಫಿದಾ ಆಗಿದ್ದರು. ಮುಖ್ಯವಾಗಿ ಕ್ಯಾಮರಾ ವರ್ಕ್ ಬಗ್ಗೆಯೂ ಮೆಚ್ಚುಗೆ ವ್ಯಕ್ತವಾಗಿತ್ತು. ಪ್ರೀತಿಸಿ ಮದುವೆ ಆಗಿರುವ ಗೋವಿಂದರಾಜ್- ವೈಲಾ ಜೋಡಿ ಬಹಳ ಅನ್ಯೋನ್ಯವಾಗಿ ಜೀವನ ಸಾಗಿಸುತ್ತಿದ್ದಾರೆ. 26 ವರ್ಷಗಳ ಹಿಂದೆ ವೈಲಾ ಅವರನ್ನು ಮೊದಲ ಬಾರಿ ನೋಡಿದಾಗಲೇ ಗೋವಿಂದರಾಜ್ ಪ್ರೀತಿಲಿ ಬಿದ್ದಿದ್ದರಂತೆ. ಬೆಂಗಳೂರಿನಲ್ಲೇ ಹುಟ್ಟಿ ಬೆಳೆದ ಇಬ್ಬರು ಮದುವೆ ಆಗಿ ಸದ್ಯ ಬೆಂಗಳೂರಿನ ಇಂದಿರಾನಗರದಲ್ಲಿ ವಾಸವಾಗಿದ್ದಾರೆ.ಗೋವಿಂದರಾಜ್ ಅವರಿಗೆ 50 ವಯಸ್ಸು ಇನ್ನು ವೈಲಾ ಅವರಿಗರ 48 ವರ್ಷ ಎಂದು ಹೇಳಿದ್ದಾರೆ.

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ರಾಜಾರಾಣಿ’ ರಿಯಾಲಿಟಿ ಶೋ ಈಗಾಗಲೇ ಎರಡು ಸೀಸನ್‌ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.ರಾಜರಾಣಿ ಸೀಸನ್ 1’ರಲ್ಲಿ ನಟಿ ನೇಹಾ ಗೌಡ ಹಾಗೂ ಅವರ ಪತಿ ಚಂದನ್ ವಿನ್ನರ್ಸ್ ಆಗಿದ್ದರು. ಅಂತೆಯೇ ಸೀಸನ್ 2 ನಲ್ಲಿ ನಟಿ ಕಾವ್ಯಾ ಮಹದೇವ್ ಹಾಗೂ ಕುಮಾರ್ ದಂಪತಿ ಗೆದ್ದಿದ್ದರು. ಇದರ ಬೆನ್ನಲ್ಲೇ ಇದೀಗ ‘ರಾಜ ರಾಣಿ ರೀಲೋಡೆಡ್’ ಎಂಬ ಶೀರ್ಷಿಕೆ ಅಡಿ ಸೀಸನ್‌ 3 ಬರುತ್ತಿದೆ.ವಿಶಿಷ್ಟ ಜೋಡಿಗಳ ಸಮಾಗಮದ ‘ರಾಜ ರಾಣಿ’ (Raja Rani) ಶೋನಲ್ಲಿ ಅದಿತಿ ಪ್ರಭುದೇವ ಜಡ್ಜ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಸೃಜನ್ ಲೋಕೇಶ್, ಹಿರಿಯ ನಟಿ ತಾರಾ ಜೊತೆ ಅದಿತಿ ಕೂಡ ಜಡ್ಜ್ ಆಗಿ ಸಾಥ್ ನೀಡುತ್ತಿದ್ದಾರೆ.

ಈಗಾಗಲೇ ಈ ಶೋನ ಹಲವು ಪ್ರೋಮೋಗಳು ರಿಲೀಸ್‌ ಆಗಿದ್ದು, ಮೆಚ್ಚುಗೆ ಪಡೆದುಕೊಂಡಿದೆ. ಈಗಾಗಲೇ ದಿವ್ಯಶ್ರೀ ಜಿಜಿ ದಂಪತಿ, ರಂಜಿತಾ ಸೀರುಂಡೆ ರಘು, ಬಿಗ್‌ ಬಾಸ್‌ ಖ್ಯಾತಿಯ ವಿನಯ್‌ ಗೌಡ ಮತ್ತು ಅಕ್ಷತಾ ಸೇರಿ ಇನ್ನೂ ಹಲವು ಜೋಡಿಗಳು ಈ ಸಲದ ಶೋನಲ್ಲಿರಲಿದ್ದಾರೆ.

Continue Reading

ಕಿರುತೆರೆ

Kannada Serials TRP: ಟಿಆರ್‌ಪಿ ರೇಸ್‌ನಲ್ಲಿ ʻಶ್ರೀಗೌರಿ,ʼ ʻನಿನಗಾಗಿʼ; ʻಅಮೃತಧಾರೆʼ ಜಿಗಿತ!

Kannada Serials TRP: ಕಳೆದ ಕೆಲ ವಾರಗಳಿಂದ ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಂಡು ಬರುತ್ತಿದೆ. ಎಂದಿನಂತೆ ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿಗೆ ಆರಂಭದಲ್ಲಿ ಭರ್ಜರಿ ಬೇಡಿಕೆ ಸೃಷ್ಟಿ ಆಗಿತ್ತುಕೆಲವು ದಿನಗಳ ಹಿಂದೆಯಷ್ಟೇ ಜೀ ಕನ್ನಡ ಧಾರಾವಾಹಿಯಲ್ಲಿ ಶ್ರಾವಣಿ ಸುಬ್ರಮಣ್ಯ ಪ್ರಸಾರ ಕಾಣುತ್ತಿದೆ. ಇದು ಈಗ ಮೂರನೇ ಸ್ಥಾನದಲ್ಲಿದೆ. ನಾಲ್ಕನೇ ಸ್ಥಾನದಲ್ಲಿ ‘ಸೀತಾ ರಾಮ’ ಹಾಗೂ ಐದನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿಗಳು ಇವೆ. ಈ ಎರಡೂ ಧಾರಾವಾಹಿಗಳು ಸರಿ ಸುಮಾರು ಒಂದೇ ರೀತಿಯ ಬೇಡಿಕೆ ಹೊಂದಿದೆ.

VISTARANEWS.COM


on

Kannada Serials TRP arce Ninagaagi shri gowri
Koo

ಬೆಂಗಳೂರು: ಪ್ರತಿ ಬಾರಿ ಜೀ ಕನ್ನಡ ವಾಹಿನಿ ಧಾರಾವಾಹಿಯ (Kannada Serials TRP) ʻಲಕ್ಷ್ಮೀ ನಿವಾಸʼ ಟಿಆರ್‌ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಳ್ಳುತ್ತಿತ್ತು. ಆದರೆ ʻಪುಟ್ಟಕನ ಮಕ್ಕಳುʼ ಧಾರಾವಾಹಿಯಲ್ಲಿ ಪುಟ್ಟಕ್ಕ ಮಗಳು ಸಹನಾ ಎಪಿಸೋಡ್‌ ಪ್ರಸಾರವಾಗುತ್ತಿರುವುದರಿಂದ ಭರ್ಜರಿ ಟಿಆರ್‌ಪಿ ಪಡೆದುಕೊಳ್ಳುತ್ತಿದೆ. ಕಳೆದ ಕೆಲ ವಾರಗಳಿಂದ ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಧಾರಾವಾಹಿ ಮೊದಲ ಸ್ಥಾನ ಕಾಪಾಡಿಕೊಂಡು ಬರುತ್ತಿದೆ. ಎಂದಿನಂತೆ ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿಗೆ ಆರಂಭದಲ್ಲಿ ಭರ್ಜರಿ ಬೇಡಿಕೆ ಸೃಷ್ಟಿ ಆಗಿತ್ತು.

‘ಪುಟ್ಟಕ್ಕನ ಮಕ್ಕಳು’

ಈ ವಾರ ʼಪುಟ್ಟಕ್ಕನ ಮಕ್ಕಳುʼ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ʼಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಪುಟ್ಟಕ್ಕ ಕುಟುಂಬ ಸಹನಾ ತೀರಿ ಹೋಗಿದ್ದಾಳೆ ಎಂದು ಎಲ್ಲರೂ ಅಂದುಕೊಂಡಿದ್ದಾರೆ. ಆದರೆ ಸಹನಾ ಏನನ್ನಾದರೂ ಸಾಧಿಸಬೇಕೆಂಬ ಛಲ ಹೊತ್ತಿದ್ದಾಳೆ. ಹೀಗಾಗಿ ಈ ಕಥೆ ಹಲವು ಟ್ವಿಸ್ಟ್ ಪಡೆದು ಸಾಗುತ್ತಿರುವುದರಿಂದ ಪ್ರೇಕ್ಷಕರು ಕೂಡ ಧಾರಾವಾಹಿಯನ್ನು ಮೆಚ್ಚಿಕೊಳ್ಳುತ್ತಿದ್ದಾರೆ. ಈ ಮೊದಲು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಎರಡಂಕಿಯ ಟಿಆರ್​ಪಿ ಪಡೆದಿತ್ತು. ಈಗಲೂ ಧಾರಾವಾಹಿಗೆ ಮತ್ತೆ ಅದೇ ರೀತಿಯ ಬೇಡಿಕೆ ಸೃಷ್ಟಿ ಆಗಿದೆ. ಈ ಧಾರಾವಾಹಿಗೆ ಹಲವು ಟ್ವಿಸ್ಟ್​ಗಳು ಸಿಕ್ಕಿರುವುದರಿಂದ ಧಾರಾವಾಹಿಯನ್ನು ಜನರು ಹೆಚ್ಚೆಚ್ಚು ವೀಕ್ಷಿಸುತ್ತಿದ್ದಾರೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಲಕ್ಷ್ಮೀ ನಿವಾಸ ಧಾರಾವಾಹಿ

ಸಾಯಿ ನಿರ್ಮಲ ಪ್ರೊಡಕ್ಷನ್‌ ಸಂಸ್ಥೆಯ ನಿರ್ಮಾಣ, ಆದರ್ಶ್ ಉಮೇಶ್ ಹೆಗಡೆ ನಿರ್ದೇಶನ ಈ ಧಾರಾವಾಹಿಗೆ (lakshmi nivasa kannada serial) ಇದೆ. ಕಿರುತೆರೆಯಲ್ಲಿ ಈ ಹಿಂದೆ ಹೀರೊ ಹೀರೋಯಿನ್‌ಗಳಾಗಿ‌ ಮಿಂಚಿದ್ದ ಹಲವು ಅನುಭವಿ ಕಲಾವಿದರು ಈ ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿದ್ದಾರೆ. ಆರಂಭದಲ್ಲಿ ಒಳ್ಳೆಯ ಟಿಆರ್‌ಪಿಯನ್ನು ಪಡೆದುಕೊಂಡಿತ್ತು. ʼಪುಟ್ಟಕ್ಕನ ಮಕ್ಕಳುʼ ಧಾರಾವಾಹಿಯಿಂದಾಗಿ ಈಗ ಟಿಆರ್‌ಪಿ ಅಂಕದಲ್ಲಿ ಕುಸಿತ ಕಂಡಿದೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ಎರಡನೇ ಸ್ಥಾನದಲ್ಲಿ ಈ ಬಾರಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಮೊದಲು ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇರುತ್ತಿತ್ತು. ಆ ಧಾರಾವಾಹಿಯನ್ನು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಹಿಂದಿಕ್ಕಿದೆ. ಎಂದಿನಂತೆ ಎರಡನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿಗೆ ಆರಂಭದಲ್ಲಿ ಭರ್ಜರಿ ಬೇಡಿಕೆ ಸೃಷ್ಟಿ ಆಗಿತ್ತು. ಕೆಲವು ವಾರ ಈ ಧಾರಾವಾಹಿ ಮೊದಲ ಸ್ಥಾನ ಕೂಡ ಪಡೆದಿತ್ತು. ಈಗ ಅದೇ ಬೇಡಿಕೆಯನ್ನು ಧಾರಾವಾಹಿ ಉಳಿಸಿಕೊಂಡಿದೆಯಾದರೂ, ‘ಪುಟ್ಟಕನ ಮಕ್ಕಳು’ ಧಾರಾವಾಹಿಯನ್ನು ಹಿಂದಿಕ್ಕಲು ಸಾಧ್ಯವಾಗುತ್ತಿಲ್ಲ.

ಶ್ರಾವಣಿ ಸುಬ್ರಮಣ್ಯ

ಕೆಲವು ದಿನಗಳ ಹಿಂದೆಯಷ್ಟೇ ಜೀ ಕನ್ನಡ ಧಾರಾವಾಹಿಯಲ್ಲಿ ಶ್ರಾವಣಿ ಸುಬ್ರಮಣ್ಯ ಪ್ರಸಾರ ಕಾಣುತ್ತಿದೆ. ಇದು ಈಗ ಮೂರನೇ ಸ್ಥಾನದಲ್ಲಿದೆ. ಸೀತಾ ರಾಮ ಧಾರಾವಾಹಿ ಹಿಂದಿಕ್ಕಿ ಮುಂದೆ ಸಾಗುತ್ತಿದೆ. ಈ ಮೊದಲು ಪ್ರಸಾರ ಕಾಣುತ್ತಿದ್ದ ಬೇಡಿಕೆಯ ಧಾರಾವಾಹಿಗಳ ಟಿಆರ್​ಪಿಯನ್ನು ಈ ಧಾರಾವಾಹಿ ಹಿಂದಿಕ್ಕಿದೆ. ಮನೆಯಲ್ಲಿ ಸಿರಿವಂತಿಕೆಯ ತುಂಬಿದ್ದರೂ ಅಪ್ಪನ ಪ್ರೀತಿಗಾಗಿ ಹಾತೊರೆಯುವ ಮಗಳು ಒಂದೆಡೆಯಾದರೆ ಮನೆಯಲ್ಲಿ ಬಡತನವಿದ್ದರೂ ಪ್ರೀತಿಯಲ್ಲಿ ಶ್ರೀಮಂತರಾಗಿರುವ ಮಧ್ಯಮ ವರ್ಗದ ಕುಟುಂಬದ ಕಥೆಯ ಜತೆ ಎರಡು ಹೃದಯಗಳ ಕಥೆಯನ್ನು ಶ್ರಾವಣಿ ಸುಬ್ರಹ್ಮಣ್ಯ ಮೂಲಕ ಚಾನೆಲ್‌ ಪ್ರೇಕ್ಷಕರ ಮುಂದಿಟ್ಟಿದೆ. ಹಿರಿಯ ಕಲಾವಿದರಾದ ಮೋಹನ್‌ ಮತ್ತು ಬಾಲರಾಜ್‌ , ಕಿರುತೆರೆಯ ಖ್ಯಾತ ಕಲಾವಿದೆಯೆರಾದ ಅಪೂರ್ವ ಮತ್ತು ಸ್ನೇಹ ಇವರು ಜೊತೆ ಯುವ ಕಲಾವಿದರು ಈ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Kannada Serials TRP: ಟಾಪ್‌ 5ನಲ್ಲಿಲ್ಲ ಕಲರ್ಸ್‌ ಕನ್ನಡ ಧಾರಾವಾಹಿಗಳು: ಟ್ರ್ಯಾಕ್‌ಗೆ ಮರಳಿದ ʻಶ್ರಾವಣಿ ಸುಬ್ರಮಣ್ಯʼ!

ಅಮೃತಧಾರೆ, ಸೀತಾರಾಮ

ನಾಲ್ಕನೇ ಸ್ಥಾನದಲ್ಲಿ ‘ಸೀತಾ ರಾಮ’ ಹಾಗೂ ಐದನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿಗಳು ಇವೆ. ಈ ಎರಡೂ ಧಾರಾವಾಹಿಗಳು ಸರಿ ಸುಮಾರು ಒಂದೇ ರೀತಿಯ ಬೇಡಿಕೆ ಹೊಂದಿದೆ. ʼಅಮೃತಧಾರೆ’ ಧಾರಾವಾಹಿ ಸಾಕಷ್ಟು (amrithadhare serial kannada) ಟ್ವಿಸ್ಟ್​ಗಳನ್ನು ಪಡೆದು ಸಾಗುತ್ತಿದೆ. ಭೂಮಿಕಾ ಮತ್ತು ಗೌತಮ್‌ ಫಸ್ಟ್‌ನೈಟ್‌ ಎಪಿಸೋಡ್‌ ಒಳ್ಳೆಯ ವೀಕ್ಷಣೆ ಕಂಡಿದೆ. ಛಾಯಾ ಸಿಂಗ್ ಹಾಗೂ ರಾಜೇಶ್ ನಟರಂಗ ಅವರ ಕಾಂಬಿನೇಷನ್ ಜನರಿಗೆ ಇಷ್ಟ ಆಗಿದೆ. ಈ ಧಾರಾವಾಹಿ ಉತ್ತಮ ಟಿಆರ್​ಪಿ (Kannada Serials TRP) ಪಡೆದುಕೊಳ್ಳುತ್ತಿದೆ. ನಟರಂಗ, ಛಾಯಾ ಸಿಂಗ್, ಸಾರಾ ಅಣ್ಣಯ್ಯ ಮೊದಲಾದವರು ನಟಿಸುತ್ತಿದ್ದಾರೆ. ಈಗಾಗಲೇ ಸೀತಾ ರಾಮರ ಎಂಗೇಜ್‌ಮೆಂಟ್‌ ಆಗಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಹಿನ್ನಡೆ ಸಾಧಿಸಿದೆ. ಧಾರಾವಾಹಿ ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಈ ಧಾರಾವಾಹಿಯನ್ನು ಹಿಂದಿಕ್ಕಿದೆ. 

ನಿನಗಾಗಿ

ಕಲರ್ಸ್ ಕನ್ನಡದಲ್ಲಿ ಇತ್ತೀಚೆಗೆ ಆರಂಭ ಆದ ‘ನಿನಗಾಗಿ’ ಧಾರಾವಾಹಿ ಆರನೇ ಸ್ಥಾನದಲ್ಲಿ ಇದೆ. ಈ ಧಾರಾವಾಹಿಯಲ್ಲಿ ದಿವ್ಯಾ ಉರುಡುಗ ನಟಿಸುತ್ತಿದ್ದಾರೆ. ನಿನಗಾಗಿ’ ಧಾರಾವಾಹಿಯಲ್ಲಿ ಕಥಾನಾಯಕನಾಗಿ ರಿತ್ವಿಕ್ ಮಠದ್ ಅಭಿನಯಿಸುತ್ತಿದ್ದಾರೆ. ಪ್ರಿಯಾಂಕಾ ಕಾಮತ್, ಕಿಶನ್ ಬೆಳಗಲಿ, ಲೋಕೇಶ್, ವಿಜಯ್ ಕೌಂಡಿನ್ಯ, ಸಾನಿಯಾ ಪೊಣ್ಣಮ್ಮ ದೇವಿ, ಸಿರಿ ಸಿಂಚನ ಮುಂತಾದವರಿದ್ದಾರೆ.

‘ಶ್ರೀಗೌರಿ’

ಶ್ರೀಗೌರಿ ಕೂಡ ಬೇಡಿಕೆ ಉಳಿಸಿಕೊಂಡಿದೆ. ‘ಭಾಗ್ಯಲಕ್ಷ್ಮೀ’ ಹಾಗೂ ‘ಲಕ್ಷ್ಮಿ ಬಾರಮ್ಮ’ಗೆ ಮೊದಲಿನಷ್ಟು ಬೇಡಿಕೆ ಇಲ್ಲ. ಮುಖ್ಯ ಭೂಮಿಕೆಯಲ್ಲಿ ‘ಕಮಲಿ’ ಧಾರಾವಾಹಿಯ ಅಮೂಲ್ಯ ಗೌಡ ಅಭಿನಯ ಮಾಡಿದ್ದಾರೆ. ಅಮೂಲ್ಯ ಮೊದಲು ʻಅನುರಾಗ ಸಂಗಮʼ ಎನ್ನುವ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟರು. ʻಸ್ವಾತಿ ಮುತ್ತುʼ, ʻಪುನರ್ ವಿವಾಹʼ, ʻಅರಮನೆʼ, ಧಾರಾವಾಹಿಯಲ್ಲಿ ಅಭಿನಯ ಮಾಡಿದ್ದಾರೆ. ಅಮೂಲ್ಯ ಗೌಡಗೆ ಹೆಚ್ಚು ಖ್ಯಾತಿ ತಂದುಕೊಟ್ಟ ಧಾರಾವಾಹಿ ಕಮಲಿ. ‘ಬಿಗ್ ಬಾಸ್ ಒಟಿಟಿ’ ಮೂಲಕ ಜನಪ್ರಿಯತೆ ಪಡೆದ ಅಮೂಲ್ಯ ಗೌಡ ಈ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ.

Continue Reading

ಕಿರುತೆರೆ

Amruthadhare Serial: ಡುಮ್ಮ ಸರ್ ಎದೆ ಢವ ಢವ! ಗೌತಮ್-ಭೂಮಿಕಾ ಮನಸುಗಳು ಬೆರೆತಾಯ್ತು!

Amruthadhare Serial: ರಾಜೇಶ್​ ನಟರಂಗ ಹಾಗೂ ಛಾಯಾ ಸಿಂಗ್‌ ಫಸ್ಟ್‌ನೈಟ್‌ ಸಂಚಿಕೆಯಲ್ಲಿ ನಟನೆಯಲ್ಲಿ ಇಒಬ್ಬರಿಗೊಬ್ಬರು ಮೀರಿಸಿದ್ದಾರೆ. ತಮ್ಮ ಪಾತ್ರದೊಳಗೆ ಪರಕಾಯ ಪ್ರವೇಶ ಮಾಡಿದ್ದಾರೆ. ಇವರ ಕಣ್ಣೋಟದ ಮಾತಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಒಬ್ಬರು ʻʻಧಾರಾವಾಹಿ ಅಂದ್ರೆ ಕೆಲಸ ಇಲ್ದಿರೋರು ನೋಡೋದು ಹಾಗೆ ಹೀಗೆ ಅಂತ ಬರೀ ನೆಗೆಟಿವ್ ಭಾವನೆ ಇತ್ತು. ಆದರೆ ಅಮೃತಧಾರೆ ಇದೆಲ್ಲವನ್ನೂ ಸುಳ್ಳಾಗಿಸಿ ಒಳ್ಳೆ ಸಂದೇಶ, ಮನರಂಜನೆ ಕೊಡುವಲ್ಲಿ ಯಶಸ್ವಿಯಾಗಿದೆʼʼಎಂದು ಕಮೆಂಟ್‌ ಮಾಡಿದ್ದಾರೆ. ʻʻಡುಮ್ಮ ಸರ್ ಎದೆ ಢವ ಢವʼʼಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ

VISTARANEWS.COM


on

Amruthadhare Serial goutham bhumika in first night scene
Koo

ಬೆಂಗಳೂರು: ಜೀ ಕನ್ನಡ ವಾಹಿನಿಯ ಅಮೃತಧಾರೆ ಧಾರಾವಾಹಿ (Amruthadhare Serial) ಪ್ರಮುಖ ಘಟ್ಟ ತಲುಪಿದೆ. ಅಂತೂ ಡುಮ್ಮ ಸರ್‌ ಹಾಗೂ ಭೂಮಿಕಾ ಅವರ ಫಸ್ಟ್‌ನೈಟ್‌ ಆಗಿದೆ. ಸಂಚಿಕೆ ಪ್ರಸಾರ ಕಾಣುವುದಕ್ಕೂ ಮೊದಲು ಫಸ್ಟ್ ನೈಟ್ ಸೀನ್ (Amruthadhare First Night Scene Promo) ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿತ್ತು. ಈ ಸೀರಿಯಲ್‌ನ ಪ್ರೊಮೋಕ್ಕೆ 35ರಿಂದ 40 ಲಕ್ಷ ವೀಕ್ಷಣೆ ಸಿಕ್ಕಿದೆ. ಕೇವಲ ಇನ್ಸ್‌ಸ್ಟಾ ಗ್ರಾಂ ಒಂದರಲ್ಲೇ ಈ ಸೀರಿಯಲ್ ಪ್ರೋಮೋ ವೀಕ್ಷಣೆ 35 ಲಕ್ಷಕ್ಕೂ ಅಧಿಕವಾಗಿತ್ತು.

ಇನ್ನು ಅಮೃತಧಾರೆ ಸೀರಿಯಲ್‌ ವಿಷಯಕ್ಕೆ ಬಂದರೆ ಡುಮ್ಮ ಸಾರ್ ಎಂದೇ ಖ್ಯಾತಿ ಪಡೆದಿರೋ ಗೌತಮ್ ದಿವಾನ್, ನಾಯಕಿ ಭೂಮಿಕಾ ಎಲ್ಲರ ಬಲು ಮೆಚ್ಚಿನ ಜೋಡಿ. ಗುಂಡು ಗುಂಡಗೆ ದಪ್ಪಗಿರೋ ಕೋಟ್ಯಧಿಪತಿ ಗೌತಮ್‌, ಸಣಕಲಾಗಿರೋ ಮಿಡಲ್ ಕ್ಲಾಸ್ ಹೆಣ್ಣು ಮಗಳು ಭೂಮಿಕಾ ಅಂದರೆ ಬಹಳ ಜನಕ್ಕೆ ಇಷ್ಟ. ಈ ಜೋಡಿಯನ್ನು ಒಂದಾಗಿಸಲು ಗೌತಮ್‌ ಅಜ್ಜಿ ಪಟ್ಟ ಕಷ್ಟ ಅಷ್ಟಿಷ್ಟಲ್ಲ.  ಅಜ್ಜಿ ಹೇಳಿದ ಒಂದು ಸುಳ್ಳಿನಿಂದ ದಂಪತಿ ಫಸ್ಟ್​ ನೈಟ್​ ತನಕ ಬಂದಿತ್ತು. ಗೌತಮ್‌ , ಭೂಮಿಕಾಗೆ ಫಸ್ಟ್‌ನಟೈಗೆ ಹೇಗೆ ಒಪ್ಪಿಗೆ ಕೊಟ್ರಿ? ಎಂದು ಕೇಳಿದಾಗ ಅಜ್ಜಿನೇ ನಿಮಗೆ ತುಂಬ ಆಸೆ ಎಂದು ಹೇಳಿದ್ರು ಎಂದು ಭೂಮಿಕಾ ಹೇಳುತ್ತಾಳೆ. ಅತ್ತ ಗೌತಮ್‌ ಭೂಮಿಕಾಗೆ ಇನ್ನೊಂದು ರೀತಿಯಲ್ಲಿ ಹೇಳಿ ಕನ್ವಿನ್ಸ್‌ ಮಾಡಿರುತ್ತಾರೆ ಅಜ್ಜಿ. ಆದರೆ ಇವರಿಬ್ಬರಿಗೂ ಅಜ್ಜಿ ಹೇಳಿದ ಸುಳ್ಳು ಗೊತ್ತಾಗಿ ಎಲ್ಲಿ ಮತ್ತೆ ದೂರವಾಗುವರೋ ಎನ್ನುವ ಆತಂಕ ಪ್ರೇಕ್ಷಕರಲ್ಲಿ ಕಾಡುತ್ತಲೇ ಇತ್ತು.

ಇನ್ನೇನು ಜೋಡಿ ಹತ್ತಿರ ಆಗಬೇಕು ಎನ್ನುವಷ್ಟರಲ್ಲಿ ಗೌತಮ್‌ ತಾನು ಕೆಳೆಗೆ ಮಲಗಿಕೊಳ್ಳುವುದಾಗಿ ಹೇಳುತ್ತಾನೆ. ಆದರೆ ಭೂಮಿಕಾ ಗೌತಮ್‌ನನ್ನು ತಡೆದು ನನ್ನ ನೋಡಿದ್ರೆ ನಿಮಗೆ ಏನೂ ಅನಿಸಲ್ವಾ? ನಾನು ಹತ್ತಿರ ಬಂದರೆ ನಿಮಗೆ ಏನೂ ಆಗೋದಿಲ್ವಾ ಎಂದೆಲ್ಲಾ ಪ್ರಶ್ನಿಸಿದಾಗ, ಅವಳ ಸ್ಪರ್ಷ ಆಗುತ್ತಿದ್ದಂತೆಯೇ ಗೌತಮ್​ಗೆ ರೋಮಾಂಚನವಾಗುತ್ತದೆ. ಇಬ್ಬರೂ ತಬ್ಬಿಕೊಳ್ಳುತ್ತಾರೆ. ಅಲ್ಲಿಗೆ ಫಸ್ಟ್​ನೈಟ್​ ಆಗುತ್ತದೆ. 

ಇದನ್ನೂ ಓದಿ: Rishta Laboni Shimana: ಚಿಕಿತ್ಸೆ ಫಲಕಾರಿಯಾಗದೆ ಖ್ಯಾತ ನಟಿ ರಿಶ್ತಾ ನಿಧನ

ಇಬ್ಬರೂ ಒಂದಾಗಲು ಬಿಡದ ಶಕುಂತಲಾ

ಇದಕ್ಕೂ ಮುಂಚೆ ಚಿಕ್ಕಮಗಳೂರಿಗೆ ಜೋಡಿಯನ್ನು ಹನಿಮೂನ್‌ಗಾಗಿ ಅಜ್ಜಿ ಕಳುಹಿಸಿರುತ್ತಾರೆ. ಆದರೆ ಅಲ್ಲಿ ಇಬ್ಬರಿಗೂ ಒಂದಾಗಲು ಗೌತಮ್‌ ತಾಯಿ ಶಕುಂತಲಾ ಬಿಡುವುದಿಲ್ಲ. ಭೂಮಿಕಾ ಕೊಲೆಗೆ ಶಕುಂತಲಾ ಸಂಚು ಹೂಡಿದ್ದಳು. ಭೂಮಿಕಾ ಕೂಡ ಕಿಡ್ನಾಪ್‌ ಆಗುತ್ತಾಳೆ. ತನ್ನ ಉಸಿರನ್ನು ನೀಡಿ ಬಳಿಕ ಭೂಮಿಕಾಳನ್ನು ಸೇಫ್‌ ಮಾಡಿ ತರುತ್ತಾನೆ ಗೌತಮ್‌. ಇದ್ಯಾವುದೂ ಅಜ್ಜಿಗೆ ಗೊತ್ತಿಲ್ಲದಿದ್ದರೂ ಇವರಿಬ್ಬರೂ ದೈಹಿಕವಾಗಿ ಒಂದಾಗಲಿಲ್ಲ ಎನ್ನುವ ಸತ್ಯ ಗೌತಮ್‌ ಸ್ನೇಹಿತ ಆನಂದ್‌ನಿಂದ ಗೊತ್ತಾಗಿ, ಪ್ಲ್ಯಾನ್‌ ಪ್ರಕಾರ ಫಸ್ಟ್‌ನೈಟ್‌ ಮುಹೂರ್ತ ಇಡುತ್ತಾರೆ.

ನಟನೆಗೆ ಮೆಚ್ಚಿದ ಫ್ಯಾನ್ಸ್‌

ರಾಜೇಶ್​ ನಟರಂಗ ಹಾಗೂ ಛಾಯಾ ಸಿಂಗ್‌ ಫಸ್ಟ್‌ನೈಟ್‌ ಸಂಚಿಕೆಯಲ್ಲಿ ನಟನೆಯಲ್ಲಿ ಒಬ್ಬರಿಗೊಬ್ಬರು ಮೀರಿಸಿದ್ದಾರೆ. ತಮ್ಮ ಪಾತ್ರದೊಳಗೆ ಪರಕಾಯ ಪ್ರವೇಶ ಮಾಡಿದ್ದಾರೆ. ಇವರ ಕಣ್ಣೋಟದ ಮಾತಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಒಬ್ಬರು ʻʻಧಾರಾವಾಹಿ ಅಂದ್ರೆ ಕೆಲಸ ಇಲ್ದಿರೋರು ನೋಡೋದು ಹಾಗೆ ಹೀಗೆ ಅಂತ ಬರೀ ನೆಗೆಟಿವ್ ಭಾವನೆ ಇತ್ತು. ಆದರೆ ಅಮೃತಧಾರೆ ಇದೆಲ್ಲವನ್ನೂ ಸುಳ್ಳಾಗಿಸಿ ಒಳ್ಳೆ ಸಂದೇಶ, ಮನರಂಜನೆ ಕೊಡುವಲ್ಲಿ ಯಶಸ್ವಿಯಾಗಿದೆʼʼಎಂದು ಕಮೆಂಟ್‌ ಮಾಡಿದ್ದಾರೆ. ʻʻಡುಮ್ಮ ಸರ್ ಎದೆ ಢವ ಢವʼʼ ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ

Continue Reading
Advertisement
T20 World Cup
ಪ್ರಮುಖ ಸುದ್ದಿ26 mins ago

T20 World Cup : ವಿಶ್ವ ಕಪ್​ ಇತಿಹಾಸದಲ್ಲಿ ಮೊದಲ ಗೆಲುವು ದಾಖಲಿಸಿದ ಕೆನಡಾ; ಐರ್ಲೆಂಡ್​ಗೆ ನಿರಾಸೆ

Narendra Modi
ದೇಶ44 mins ago

Narendra Modi: ಹಂಗಾಮಿ ಪ್ರಧಾನಿ ಮೋದಿಗೆ ಮೊಸರು-ಸಕ್ಕರೆ ತಿನ್ನಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು!

Narendra Modi
ಸಂಪಾದಕೀಯ1 hour ago

ವಿಸ್ತಾರ ಸಂಪಾದಕೀಯ: ಮೋದಿ ಮೂರನೇ ಅವಧಿ, ಆಗಲಿ ಇನ್ನಷ್ಟು ವಿಕಾಸದ ಬುನಾದಿ

T20 World Cup
ಪ್ರಮುಖ ಸುದ್ದಿ1 hour ago

T20 World Cup : ಪಾಕಿಸ್ತಾನ ತಂಡ ಅಮೆರಿಕ ವಿರುದ್ಧ ಸೋತಿದ್ದು ಐಎಮ್​ಎಫ್​ ನೀಡುವ 80 ಕೋಟಿ ಸಾಲಕ್ಕಾಗಿ!

Naxals
ದೇಶ1 hour ago

ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 7 ನಕ್ಸಲರ ಹತ್ಯೆ, ಮೂವರು ಯೋಧರಿಗೆ ಗಾಯ

Gas leak
ಪ್ರಮುಖ ಸುದ್ದಿ2 hours ago

Gas Leakage : ಮೈಸೂರಿನ ಗುಜರಿ ಗೋಡೌನ್​ನಲ್ಲಿ ಅನಿಲ ಸೋರಿಕೆ, 30 ಮಂದಿ ಅಸ್ವಸ್ಥ

soraba BJP Mandala president prakash talakaalukoppa pressmeet
ಶಿವಮೊಗ್ಗ2 hours ago

Shivamogga News: ಸೊರಬದಲ್ಲಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತ ಆರೋಪ

Chandrababu Naidu
ದೇಶ2 hours ago

Chandrababu Naidu: 5 ದಿನದಲ್ಲಿ 870 ಕೋಟಿ ರೂ. ಗಳಿಸಿದ ‘ಕಿಂಗ್‌ ಮೇಕರ್’‌ ಚಂದ್ರಬಾಬು ನಾಯ್ಡು; ಹೇಗಂತೀರಾ?

Shreyas Iyer
ಕ್ರೀಡೆ3 hours ago

Shreyas Iyer : ಬಿಸಿಸಿಐ ಕೇಂದ್ರ ಗುತ್ತಿಗೆ ತಪ್ಪಿದ ಕುರಿತು ಮಾತನಾಡಿದ ಶ್ರೇಯಸ್ ಅಯ್ಯರ್​; ಏನಂದ್ರು ಅವರು?

assault case
ಕ್ರೈಂ3 hours ago

Assault Case: ಹರಿಹರದಲ್ಲಿ ನೈತಿಕ ಪೊಲೀಸ್ ಗಿರಿ; ಯುವಕನನ್ನು ರೂಮ್‌ನಲ್ಲಿ ಹಾಕಿ ಮನಸೋ ಇಚ್ಛೆ ಹಲ್ಲೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ6 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ7 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌