GOOD NEWS| ಆಗಸ್ಟ್‌ 15ರಂದು ಔಷಧಗಳ ದರ ಇಳಿಕೆಗೆ ಕೇಂದ್ರ ಸರ್ಕಾರ ಪರಿಶೀಲನೆ - Vistara News

ಪ್ರಮುಖ ಸುದ್ದಿ

GOOD NEWS| ಆಗಸ್ಟ್‌ 15ರಂದು ಔಷಧಗಳ ದರ ಇಳಿಕೆಗೆ ಕೇಂದ್ರ ಸರ್ಕಾರ ಪರಿಶೀಲನೆ

ಕ್ಯಾನ್ಸರ್‌, ಹೃದಯ ಕಾಯಿಲೆಗಳ ಔಷಧಗಳ ದರವನ್ನು ಸ್ವಾತಂತ್ರ್ಯೋತ್ಸವದ ಸಂದರ್ಭ ಇಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ವ್ಯಾಪಕ ಬಳಕೆಯಲ್ಲಿ ಇರುವ ಔಷಧಗಳ ದರ ತಗ್ಗಿದರೆ ಜನತೆಗೆ ಅನುಕೂಲ.

VISTARANEWS.COM


on

medicine
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಕೇಂದ್ರ ಸರ್ಕಾರ ಆಗಸ್ಟ್‌ ೧೫ರಂದು ಕೆಲವು ನಿರ್ಣಾಯಕ ಔಷಧಗಳ ದರ ಇಳಿಕೆಗೆ ಮುಂದಾಗಿದೆ. ಕ್ಯಾನ್ಸರ್‌ ಮತ್ತು ಹೃದಯದ ಕಾಯಿಲೆ ಕುರಿತ ಚಿಕಿತ್ಸೆಯಲ್ಲಿ ಬಳಸುವ ಪ್ರಮುಖ ಔಷಧಗಳ ದರಗಳು ಇಳಿಕೆಯಾಗುವ ನಿರೀಕ್ಷೆ ಇದೆ.

ಔಷಧಗಳ ದರ ಇಳಿಸುವ ಬಗ್ಗೆ ಪ್ರಸ್ತಾಪ ಇದ್ದು, ಸರ್ಕಾರ ಅಂತಿಮ ನಿರ್ಧಾರವನ್ನು ಶೀಘ್ರ ಕೈಗೊಳ್ಳಲಿದೆ. ನಿರ್ಣಾಯಕ ಔಷಧಗಳ ದುಬಾರಿ ದರಗಳ ಬಗ್ಗೆ ಸರ್ಕಾರ ಕಳವಳ ಹೊಂದಿದೆ. ಹೀಗಾಗಿ ಅದನ್ನು ನಿಯಂತ್ರಿಸಲು ಮುಂದಾಗಿದೆ.

೭೦% ಇಳಿಕೆ ಸಂಭವ: ವ್ಯಾಪಕವಾಗಿ ಬಳಕೆಯಲ್ಲಿರುವ ಕೆಲವು ನಿರ್ಣಾಯಕ ಔಷಧಗಳ ದರದಲ್ಲಿ ೭೦% ಇಳಿಕೆಯಾಗುವ ನಿರೀಕ್ಷೆ ಇದೆ. ಕೇಂದ್ರ ಸರ್ಕಾರವು ನಿರ್ಣಾಯಕ ಔಷಧಗಳ ಪಟ್ಟಿಯನ್ನು ( NLEM) ಪರಿಷ್ಕರಿಸುವ ಸಾಧ್ಯತೆ ಇದೆ.

ದರ ನಿಯಂತ್ರಣಕ್ಕೆ ಚಿಂತನೆ: ಮಾರಾಟದಲ್ಲಿ ಲಾಭಾಂಶ ಅಧಿಕವಾಗಿರುವ ಔಷಧಗಳ ದರಗಳಿಗೆ ಮಿತಿಯನ್ನು ವಿಧಿಸಲು ಕೂಡ ಚಿಂತನೆ ನಡೆದಿದೆ. ಈ ಸಂಬಂಧ ಆರೋಗ್ಯ ಸಚಿವ ಮಾನ್‌ಸುಖ್‌ ಮಾಂಡವೀಯ ಅವರು ಔಷಧ ಉತ್ಪಾದನೆ ಮತ್ತು ಮಾರಾಟ ವಲಯದ ಪ್ರಮುಖರೊಡನೆ ಇತ್ತೀಚೆಗೆ ಸಮಾಲೋಚನೆಯನ್ನೂ ನಡೆಸಿದ್ದಾರೆ. ಕೆಲವು ಔಷಧಗಳಲ್ಲಿ ವ್ಯಾಪಾರದ ಲಾಭಾಂಶ ೧೦೦೦%ಗೂ ಹೆಚ್ಚು ಇರುವುದು ಗೊತ್ತಾಗಿದೆ. ಪ್ರಸ್ತುತ ಔಷಧ ದರ ನಿಯಂತ್ರಕ ಎನ್‌ಪಿಪಿಎ ೩೫೫ ಔಷಧಗಳ ದರಗಳಿಗೆ ಮಿತಿ ವಿಧಿಸಿದೆ. ದರ ನಿಯಂತ್ರಣಕ್ಕೆ ಒಳಪಟ್ಟಿರುವ ಔಷಧಗಳ ಮಾರಾಟದಲ್ಲಿ ಚಿಲ್ಲರೆ ಮಾರಾಟಕ್ಕೆ ಲಾಭಾಂಶ ೮% ಮತ್ತು ಸಗಟು ಮಾರಾಟಕ್ಕೆ ಲಾಭಾಂಶ ೧೬% ಮಿತಿಯೊಳಗೆ ಇರಬೇಕಾಗುತ್ತದೆ.

೨೦೧೯ರ ಫೆಬ್ರವರಿಯಲ್ಲಿ ಎನ್‌ಪಿಪಿಎ ಕ್ಯಾನ್ಸರ್‌ ಚಿಕಿತ್ಸೆಯಲ್ಲಿ ಬಳಸುವ ೪೧ ಔಷಧಗಳ ಮಾರಾಟ ದರದ ಮೇಲೆ ಮಿತಿಯನ್ನು ವಿಧಿಸಿತ್ತು. ಇದರಿಂದಾಗಿ ಅವುಗಳ ದರ ಇಳಿದಿತ್ತು. ೨೦೨೧ರ ಆಗಸ್ಟ್‌ನಲ್ಲಿ ಆರೋಗ್ಯ ಸಚಿವರು ಸಂಸತ್ತಿನಲ್ಲಿ ಔಷಧಗಳು ಮತ್ತು ವೈದ್ಯಕೀಯ ಸಲಕರಣೆಗಳ ದರಗಳಿಗೆ ಮಿತಿ ವಿಧಿಸಿರುವುದರಿಂದ ಗ್ರಾಹಕರಿಗೆ ಒಟ್ಟಾರೆಯಾಗಿ ವಾರ್ಷಿಕ ೧೨,೦೦೦ ಕೋಟಿ ರೂ. ಉಳಿತಾಯವಾದಂತಾಗಿದೆ ಎಂದು ತಿಳಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Akbar Nagar: ಉತ್ತರ ಪ್ರದೇಶದ ಅಕ್ಬರ್‌ ನಗರದ ಅಕ್ರಮ ಮನೆಗಳ ಧ್ವಂಸಕ್ಕೆ ಸುಪ್ರೀಂ ಕೋರ್ಟ್‌ ಅಸ್ತು!

Akbar Nagar: ಅಕ್ಬರ್‌ ನಗರದಲ್ಲಿ ನೆಲಸಮ ಕಾರ್ಯಾಚರಣೆ ಕೈಗೊಳ್ಳಲು ಅನುಮತಿ ನೀಡಿದ ಅಲಹಾಬಾದ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ದೀಪಾಂಕರ್‌ ದತ್ತಾ ನೇತೃತ್ವದ ನ್ಯಾಯಪೀಠವು, ಲಖನೌ ಅಭಿವೃದ್ಧಿ ಪ್ರಾಧಿಕಾರಕ್ಕೆ ನೆಲಸಮ ಕಾರ್ಯಾಚರಣೆ ಕೈಗೊಳ್ಳಲು ಅನುಮತಿ ನೀಡಿದೆ. ಆದರೆ, ಪ್ರಾಧಿಕಾರಕ್ಕೆ ಜನರ ಹಿತದೃಷ್ಟಿಯಿಂದ ಕೋರ್ಟ್‌ ಕೆಲ ಸೂಚನೆಗಳನ್ನು ನೀಡಿದೆ.

VISTARANEWS.COM


on

Akbar Nagar
Koo

ಲಖನೌ: ಉತ್ತರ ಪ್ರದೇಶದ (Uttar Pradesh) ಲಖನೌನಲ್ಲಿರುವ ಅಕ್ಬರ್‌ ನಗರದಲ್ಲಿ (Akbar Nagar) ಅಕ್ರಮವಾಗಿ ನಿರ್ಮಿಸಲಾಗಿರುವ ಎಲ್ಲ ಮನೆಗಳನ್ನು ನೆಲಸಮಗೊಳಿಸಲು ಸುಪ್ರೀಂ ಕೋರ್ಟ್‌ (Supreme Court) ಗ್ರೀನ್‌ ಸಿಗ್ನಲ್‌ ನೀಡಿದೆ. ಇದರೊಂದಿಗೆ ಅಕ್ಬರ್‌ ನಗರದಲ್ಲಿ ಕಟ್ಟಡಗಳ ನೆಲಸಮಗೊಳಿಸುವ ಕುರಿತು ಲಖನೌ ಅಭಿವೃದ್ಧಿ ಪ್ರಾಧಿಕಾರ (LDA) ತೆಗೆದುಕೊಂಡ ನಿರ್ಧಾರಕ್ಕೆ ಭಾರಿ ಮುನ್ನಡೆ ಸಿಕ್ಕಂತಾಗಿದೆ. ಶೀಘ್ರದಲ್ಲಿಯೇ ಅಕ್ಬರ್‌ ನಗರದಲ್ಲಿರುವ ಎಲ್ಲ ಮನೆಗಳನ್ನು ನೆಲಸಮಗೊಳಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಅಕ್ಬರ್‌ ನಗರದಲ್ಲಿ ನೆಲಸಮ ಕಾರ್ಯಾಚರಣೆ ಕೈಗೊಳ್ಳಲು ಅನುಮತಿ ನೀಡಿದ ಅಲಹಾಬಾದ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ದೀಪಾಂಕರ್‌ ದತ್ತಾ ನೇತೃತ್ವದ ನ್ಯಾಯಪೀಠವು, ಲಖನೌ ಅಭಿವೃದ್ಧಿ ಪ್ರಾಧಿಕಾರಕ್ಕೆ ನೆಲಸಮ ಕಾರ್ಯಾಚರಣೆ ಕೈಗೊಳ್ಳಲು ಅನುಮತಿ ನೀಡಿತು. “ಕಟ್ಟಡಗಳನ್ನು ನೆಲಸಮಗೊಳಿಸುವ ಕುರಿತು ಅಲಹಾಬಾದ್‌ ಹೈಕೋರ್ಟ್‌ ಸೂಚನೆಗಳು, ನಿರ್ದೇಶನಗಳು ಸರಿಯಾಗಿವೆ” ಎಂದು ಸ್ಪಷ್ಟಪಡಿಸಿತು.

ಏಕೆ ಕಟ್ಟಡಗಳ ನೆಲಸಮ?

ಅಕ್ಬರ್‌ ನಗರದಲ್ಲಿ ಕಾನೂನುಬಾಹಿರವಾಗಿ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಅದರಲ್ಲೂ, ಪ್ರವಾಹದ ಭೀತಿ ಜಾಸ್ತಿ ಇರುವ ಪ್ರದೇಶದಲ್ಲಿ (Floodplain) ಇಡೀ ನಗರದ ಕಟ್ಟಡಗಳು ನಿರ್ಮಾಣಗೊಂಡಿವೆ. ಕುಕ್ರೈಲ್‌ ನದಿ ತೀರದಲ್ಲಿ ಸುಮಾರು 15 ಸಾವಿರ ಜನ ವಾಸಿಸುತ್ತಿದ್ದು, ಸಾವಿರಾರು ಕಟ್ಟಡಗಳು ತಲೆಎತ್ತಿವೆ. ಇಲ್ಲಿ ಸರ್ಕಾರದ ಜಾಗವನ್ನು ಅತಿಕ್ರಮಣ ಮಾಡಿಕೊಂಡು, ಸ್ಲಮ್‌ಗಳನ್ನು ನಿರ್ಮಾಣ ಮಾಡಿಕೊಂಡು, ದೊಡ್ಡ ಊರನ್ನೇ ನಿರ್ಮಿಸಲಾಗಿದೆ. ಆದರೆ, ಈ ಊರು ನದಿ ತೀರದಲ್ಲಿರುವುದರಿಂದ ಪ್ರವಾಹದ ಭೀತಿ ಜಾಸ್ತಿ ಇದೆ. ಇದನ್ನು ಪ್ರಮುಖವಾಗಿ ಗಮನದಲ್ಲಿಟ್ಟುಕೊಂಡು ನ್ಯಾಯಾಲಯವು ನೆಲಸಮಕ್ಕೆ ಆದೇಶ ನೀಡಿದೆ ಎಂದು ತಿಳಿದುಬಂದಿದೆ.

15 ಸಾವಿರ ಜನರ ಸ್ಥಿತಿ ಏನು?

ಕಟ್ಟಡಗಳು, ಸ್ಲಮ್‌ಗಳಲ್ಲಿರುವ ಜೋಪಡಿಗಳನ್ನು ನೆಲಸಮಗೊಳಿಸುವುದರಿಂದ ಸುಮಾರು 15 ಸಾವಿರ ಜನರಿಗೆ ತೊಂದರೆಯಾಗಲಿದೆ ಎಂದು ತಿಳಿದುಬಂದಿದೆ. ಇದನ್ನು ಕೂಡ ಗಮನದಲ್ಲಿಟ್ಟುಕೊಂಡಿರುವ ಸುಪ್ರೀಂ ಕೋರ್ಟ್‌, “ನೀವು ಯಾರನ್ನು ಸ್ಥಳಾಂತರ ಮಾಡಬೇಕು ಎಂದಿದ್ದೀರೋ, ಅವರಿಗೆ ಬೇರೆ ಜಾಗದಲ್ಲಿ ಮನೆ ನಿರ್ಮಿಸಿಕೊಡಿ. ಅವರಿಗೆ ಬದಲಿ ಮನೆಯ ವ್ಯವಸ್ಥೆ ಆಗುವವರೆಗೆ ಅಲ್ಲಿಂದ ಸ್ಥಳಾಂತರ ಮಾಡುವ ಹಾಗಿಲ್ಲ” ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ. ಹಾಗಾಗಿ, ಅಕ್ಬರ್‌ ನಗರದ ನಿವಾಸಿಗಳು ನಿರಾಶ್ರಿತರಾಗುವುದಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: Bulldozer Justice Video: ಅತ್ಯಾಚಾರ ಎಸಗಿ ಕ್ರೂರಹಿಂಸೆ; ಆರೋಪಿ ಅಯಾನ್‌ ಪಠಾಣ್‌ ಮನೆ ಧ್ವಂಸಗೊಳಿಸಿದ ಬುಲ್ಡೋಜರ್‌!

Continue Reading

ಪ್ರಮುಖ ಸುದ್ದಿ

Colin Munro : ನ್ಯೂಜಿಲ್ಯಾಂಡ್​ ಟಿ20 ಸ್ಪೆಷಲಿಸ್ಟ್​ ಅಟಗಾರ ನಿವೃತ್ತಿ; ಈ ಆಟಗಾರನ ಸಾಧನೆಗಳ ವಿವರ ಇಲ್ಲಿದೆ

VISTARANEWS.COM


on

Colin Munro
Koo

ನವದೆಹಲಿ: ನ್ಯೂಜಿಲೆಂಡ್ ಕ್ರಿಕೆಟ್​ ತಂಡದ ಟಿ20 ಸ್ಪೆಷಲಿಸ್ಟ್ ಹಾಗೂ ವಿನಾಶಕಾರಿ ಬ್ಯಾಟರ್​ಗಳಲ್ಲಿ ಒಬ್ಬರಾಗಿದ್ ಕಾಲಿನ್ ಮನ್ರೊ ಶುಕ್ರವಾರ (ಮೇ 10) ಅಂತರರಾಷ್ಟ್ರೀಯ ಕ್ರಿಕೆಟ್ ಅಖಾಡದಿಂದ ನಿರ್ಗಮಿಸಿದ್ದಾರೆ. ಮುಂಬರುವ ಟಿ20 ವಿಶ್ವ ಕಪ್​ನಲ್ಲಿ ಅವಕಾಶ ಪಡೆಯದ ಅವರು ನಿವೃತ್ತಿ ಘೋಷಿಸಿದ್ದಾರೆ. 2020 ರಲ್ಲಿ ಬೇ ಓವಲ್​ನಲ್ಲಿ ಭಾರತ ವಿರುದ್ಧದ ಐದನೇ ಟಿ20 ಪಂದ್ಯದಲ್ಲಿ ಕೊನೆಯ ಬಾರಿಗೆ ಬ್ಲ್ಯಾಕ್​ ಕ್ಯಾಪ್ಟ್​​ ತಂಡವನ್ನು ಅವರು ಪ್ರತಿನಿಧಿಸಿದ್ದರು. ಈ ಡೈನಾಮಿಕ್ ಎಡಗೈ ಬ್ಯಾಟ್ಸ್ಮನ್, ನ್ಯೂಜಿಲೆಂಡ್ ಕ್ರಿಕೆಟ್​​ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಅವರು 65 ಟಿ 20, 57 ಏಕದಿನ ಮತ್ತು ಏಕೈಕ ಟೆಸ್ಟ್ ಪಂದ್ಯವನ್ನಾಡಿದ್ದಾರೆ. ಮನ್ರೊ 3,000 ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ರನ್ ಗಳಿಸಿದ್ದಾರೆ ಮತ್ತು ಏಳು ವಿಕೆಟ್​ಗಳನ್ನು ಪಡೆದಿದ್ದಾರೆ.

ನ್ಯೂಜಿಲ್ಯಾಂಡ್​ ತಂಡದ (ಬ್ಲ್ಯಾಕ್​ ಕ್ಯಾಪ್ಟ್​) ಜೆರ್ಸಿ ಧರಿಸಿದ್ದಕ್ಕೆ ಹೆಮ್ಮೆ ವ್ಯಕ್ತಪಡಿಸಿದ ಕಾಲಿನ್ ಮನ್ರೊ, ತಮ್ಮ ಅಂತಾರಾಷ್ಟ್ರೀಯ ಪ್ರಯಾಣವನ್ನು ಕೊನೆಗೊಳಿಸಲು ಇದು ಸೂಕ್ತ ಕ್ಷಣ ಎಂದು ಹೇಳಿದ್ದಾರೆ. “ಬ್ಲ್ಯಾಕ್ ಕ್ಯಾಪ್ಸ್ ಪರ ಆಡುವುದು ಯಾವಾಗಲೂ ನನ್ನ ವೃತ್ತಿಜೀವನದ ವಿಶೇಷ ಕ್ಷಣವಾಗಿದೆ. ಎಲ್ಲಾ ಸ್ವರೂಪಗಳ 123 ಪಂದ್ಯಗಳಲ್ಲಿ ಆ ಜರ್ಸಿಯನ್ನು ಧರಿಸಿರುವುದು ನನಗೆ ಅಪಾರ ಹೆಮ್ಮೆ ತರುವ ಸಾಧನೆಯಾಗಿದೆ” ಎಂದು ಹೇಳಿದ್ದಾರೆ.

ಮನ್ರೊ ಅವರ ಕ್ರಿಕೆಟ್ ಪಯಣ 2006 ರ ಐಸಿಸಿ ಅಂಡರ್ 19 ವಿಶ್ವಕಪ್​ನಲ್ಲಿ ಪ್ರಾರಂಭವಾಗಿತ್ತು. ನಂತರ ಅವರು 2012-13 ರಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದ ಸಮಯದಲ್ಲಿ ಹಿರಿಯರ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು.

2016 ಮತ್ತು 2019 ರ ನಡುವೆ ಟಿ 20 ಮತ್ತು ಏಕದಿನ ಪಂದ್ಯಗಳಲ್ಲಿ ಬ್ಲ್ಯಾಕ್ ಕ್ಯಾಪ್ಸ್​​ ತಂಡಕ್ಕೆ ಪ್ರಮುಖವಾಗಿ ಕಾಣಿಸಿಕೊಂಡಿದ್ದರು. ವೈಟ್-ಬಾಲ್ ಕ್ರಿಕೆಟ್​ನಲ್ಲಿ ತಮ್ಮನ್ನು ತಾವು ಪರಿಗಣಿಸಲೇಬೇಕಾದ ಆಟಗಾರನಾಗಿ ರೂಪುಗೊಂಡರು 2019ರಲ್ಲಿ ಇಂಗ್ಲೆಂಡ್​ನಲ್ಲಿ ನಡೆದ ಏಕದಿನ ವಿಶ್ವಕಪ್ ಹಾಗೂ ಟಿ20 ವಿಶ್ವಕಪ್​ನಲ್ಲಿ ನ್ಯೂಜಿಲೆಂಡ್ ತಂಡವನ್ನು ಪ್ರತಿನಿಧಿಸಿದ್ದರು.

ಯಶಸ್ವಿ ಆಟಗಾರ

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳುತ್ತಿರುವ ಮುನ್ರೊ, ನ್ಯೂಜಿಲೆಂಡ್​ ತಂಡದ ಅತ್ಯಂತ ಯಶಸ್ವಿ ಟಿ20 ಬ್ಯಾಟರ್​ಗಳಲ್ಲಿ ಒಬ್ಬರಾಗಿ ತಮ್ಮ ಪರಂಪರೆ ಸೃಷ್ಟಿಸಿದ್ದರು. ಪ್ರಸ್ತುತ ಅವರು ಟಿ 20 ಪಂದ್ಯಗಳಲ್ಲಿ ಬ್ಲ್ಯಾಕ್ ಕ್ಯಾಪ್ಸ್​​ ತಂಡ ಪರ ಆರನೇ ಅತಿ ಗರಿಷ್ಠ ಸ್ಕೋರರ್ ಆಗಿದ್ದಾರೆ. ಪ್ರಭಾವಶಾಲಿ 31 ರ ಸರಾಸರಿ ಮತ್ತು 156.4 ಸ್ಟ್ರೈಕ್ ರೇಟ್​ನಲ್ಲಿ 1,724 ರನ್ ಗಳಿಸಿದ್ದಾರೆ.

ಇದನ್ನೂ ಓದಿ: T20 World Cup : ವಿಶ್ವ ಕಪ್​ಗೆ ಭಾರತ ತಂಡ ಪ್ರಯಾಣಿಸುವ ದಿನಾಂಕ ಪ್ರಕಟಿಸಿದ ಜಯ್​ ಶಾ

ಅವರು ನ್ಯೂಜಿಲೆಂಡ್​ ಪರ ಅತಿ ಹೆಚ್ಚು ಟಿ 20 ಅಂತರರಾಷ್ಟ್ರೀಯ ಶತಕಗಳ ದಾಖಲೆಯನ್ನು ಹೊಂದಿದ್ದಾರೆ. ಅಂದ ಹಅಗೆ ಅವರ ಹೆಸರಿನಲ್ಲಿ ಮೂರು ಶತಕಗಳಿವೆ.

2018ರಲ್ಲಿ ಬೇ ಓವಲ್​ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಮನ್ರೊ 47 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಇದು ಆ ಸಮಯದಲ್ಲಿ ನ್ಯೂಜಿಲೆಂಡ್​ಪರ ವೇಗದ ಟಿ 20 ಶತಕ ಮಾತ್ರವಲ್ಲ, ಮೂರು ಟಿ 20 ಶತಕಗಳನ್ನು ದಾಖಲಿಸಿದ ತಮ್ಮ ದೇಶದ ಮೊದಲ ಆಟಗಾರ ಎಂಬ ಸ್ಥಾನಮಾನ ಹೊಂದಿದ್ದರು.

Continue Reading

ಕ್ರೀಡೆ

T20 World Cup : ವಿಶ್ವ ಕಪ್​ಗೆ ಭಾರತ ತಂಡ ಪ್ರಯಾಣಿಸುವ ದಿನಾಂಕ ಪ್ರಕಟಿಸಿದ ಜಯ್​ ಶಾ

T20 World Cup: ಭಾರತೀಯ ಆಟಗಾರರು ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ 2024 (IPL 2024) ಋತುವಿನಲ್ಲಿ ಭಾಗವಹಿಸುತ್ತಿದ್ದಾರೆ. ತಂಡಗಳು ಪಂದ್ಯಾವಳಿಯಲ್ಲಿ ಪ್ಲೇಆಫ್ ಸ್ಥಾನಗಳಿಗಾಗಿ ಸ್ಪರ್ಧಿಸುತ್ತಿವೆ. ಮುಂಬೈ ಇಂಡಿಯನ್ಸ್ (Mumbai Indians) ಮತ್ತು ಪಂಜಾಬ್ ಕಿಂಗ್ಸ್ (PBKS) ಪಂದ್ಯಾವಳಿಯಿಂದ ಹೊರಗುಳಿದಿದ್ದರೆ ಇತರ ತಂಡಗಳು ಪ್ಲೇಆಫ್ ಸ್ಥಾನಗಳಿಗಾಗಿ ಸ್ಪರ್ಧಿಸುತ್ತಿವೆ.

VISTARANEWS.COM


on

T20 world cup
Koo

ನವದೆಹಲಿ: ವೆಸ್ಟ್ ಇಂಡೀಸ್ ಮತ್ತು ಯುಎಸ್ಎಯಲ್ಲಿ ನಡೆಯಲಿರುವ 2024 ರ ಟಿ 20 ವಿಶ್ವಕಪ್​ಗಾಗಿ (T20 World Cup 2024) ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡದ ಆಟಗಾರರ ನಿರ್ಗಮನ ಯೋಜನೆಗಳನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಕಾರ್ಯದರ್ಶಿ ಜಯ್ ಶಾ ಬಹಿರಂಗಪಡಿಸಿದ್ದಾರೆ. ಮುಂಬರುವ ಐಸಿಸಿ ಟೂರ್ನಮೆಂಟ್​ಗೆ ಭಾರತೀಯ ಆಟಗಾರರು ಎರಡು ಹಂತಗಳಲ್ಲಿ ಅಲ್ಲಿಗೆ ತೆರಳಲಿದ್ದಾರೆ ಎಂದು ಜಯ್ ಶಾ ಮಾಹಿತಿ ನೀಡಿದ್ದಾರೆ.

ಭಾರತೀಯ ಆಟಗಾರರು ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ 2024 (IPL 2024) ಋತುವಿನಲ್ಲಿ ಭಾಗವಹಿಸುತ್ತಿದ್ದಾರೆ. ತಂಡಗಳು ಪಂದ್ಯಾವಳಿಯಲ್ಲಿ ಪ್ಲೇಆಫ್ ಸ್ಥಾನಗಳಿಗಾಗಿ ಸ್ಪರ್ಧಿಸುತ್ತಿವೆ. ಮುಂಬೈ ಇಂಡಿಯನ್ಸ್ (Mumbai Indians) ಮತ್ತು ಪಂಜಾಬ್ ಕಿಂಗ್ಸ್ (PBKS) ಪಂದ್ಯಾವಳಿಯಿಂದ ಹೊರಗುಳಿದಿದ್ದರೆ ಇತರ ತಂಡಗಳು ಪ್ಲೇಆಫ್ ಸ್ಥಾನಗಳಿಗಾಗಿ ಸ್ಪರ್ಧಿಸುತ್ತಿವೆ.

ಐಪಿಎಲ್ ಪ್ಲೇಆಫ್ ಪಂದ್ಯಗಳು ಮೇ 21 ರಿಂದ ಮೇ 26 ರವರೆಗೆ ನಡೆಯಲಿದ್ದು, ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣ ಮತ್ತು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯಲಿವೆ. ಕ್ವಾಲಿಫೈಯರ್ 1 ಮತ್ತು ಎಲಿಮಿನೇಟರ್ ಪಂದ್ಯಗಳು ಅಹಮದಾಬಾದ್​ನಲ್ಲಿ ನಡೆದರೆ, ಚೆನ್ನೈ ಕ್ವಾಲಿಫೈಯರ್ 2 ಮತ್ತು ಅಂತಿಮ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ.

ಎರಡು ಹಂತದಲ್ಲಿ ಪ್ರಯಾಣ

ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಜಯ್ ಶಾ, ಭಾರತ ತಂಡವು ಎರಡು ಹಂತಗಳಲ್ಲಿ ನಿರ್ಗಮಿಸಲಿದೆ ಎಂದು ದೃಢಪಡಿಸಿದರು. ಆಟಗಾರರು ಮತ್ತು ಕೋಚಿಂಗ್ ಸಿಬ್ಬಂದಿ ಸೇರಿದಂತೆ ಮೊದಲ ಬ್ಯಾಚ್ ಮೇ 24 ರಂದು ಹೊರಡಲಿದೆ. ಐಪಿಎಲ್ ತಂಡಗಳು ಪ್ಲೇಆಫ್​ಗೆ ಅರ್ಹತೆ ಪಡೆದ ಆಟಗಾರರನ್ನು ಒಳಗೊಂಡ ಎರಡನೇ ಬ್ಯಾಚ್ ಮೇ 26 ರಂದು ಐಪಿಎಲ್ ಫೈನಲ್ ನಂತರ ಹೊರಡಲಿದೆ.

ಇದನ್ನೂ ಓದಿ: Jay Shah : ”ನಾನವನಲ್ಲ, ನಾನವನಲ್ಲ”; ಶ್ರೇಯಸ್​, ಇಶಾನ್ ವಿವಾದಕ್ಕೆ ಸ್ಪಷ್ಟನೆ ನೀಡಿದ ಜಯ್​ ಶಾ

ಪಾಕಿಸ್ತಾನ, ಐರ್ಲೆಂಡ್, ಕೆನಡಾ ಮತ್ತು ಅಮೆರಿಕ (ಯುಎಸ್ಎ) ಜೊತೆಗೆ ಭಾರತ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದೆ. ಅವರು ತಮ್ಮ ಎಲ್ಲಾ ಗುಂಪು ಪಂದ್ಯಗಳನ್ನು ಯುಎಸ್ಎಯಲ್ಲಿ ಆಡಲಿದ್ದಾರೆ. ರೋಹಿತ್ ಶರ್ಮಾ ಪಡೆ ಜೂನ್ 5 ರಂದು ನ್ಯೂಯಾರ್ಕ್​ನ ನಸ್ಸೌ ಕೌಂಟಿ ಇಂಟರ್​​ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ಐರ್ಲೆಂಡ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ.

ಪ್ಲೇಆಫ್ಗೆ ಪ್ರವೇಶಿಸದ ಐಪಿಎಲ್ ತಂಡಗಳಿಂದ ಆಟಗಾರರಿಗೆ ವಿಶ್ರಾಂತಿ ನೀಡುವ ಆಲೋಚನೆಯನ್ನು ಜಯ್ ಶಾ ತಳ್ಳಿಹಾಕಿದರು. ಜಸ್ಪ್ರೀತ್ ಬುಮ್ರಾ ಅವರಂತಹ ಬೌಲರ್ಗಳ ಕೌಶಲಗಳನ್ನು ಸುಧಾರಿಸಲು ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಅವರಂತಹ ಫಾರ್ಮ್​ನಲ್ಲಿರುವ ಬ್ಯಾಟರ್​ಗಳನ್ನು ಎದುರಿಸುವ ಪ್ರಾಮುಖ್ಯತೆಯನ್ನು ಶಾ ಒತ್ತಿ ಹೇಳಿದರು

2024ರ ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ

2007ರಲ್ಲಿ ನಡೆದ ಚೊಚ್ಚಲ ಟಿ20 ವಿಶ್ವಕಪ್ ಫೈನಲ್​​ನಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ತಂಡ ಪಾಕಿಸ್ತಾನ ವಿರುದ್ಧ ಜಯ ಸಾಧಿಸಿತ್ತು. ಭಾರತವು ಐದು ರನ್ ಗಳಿಂದ ಗೆದ್ದು, ಆಟದ ಕಿರು ಸ್ವರೂಪದಲ್ಲಿ ಅವರ ಏಕೈಕ ವಿಜಯ ದಾಖಲಿಸಿತ್ತು. ಟಿ 20 ವಿಶ್ವಕಪ್​​ನ ನಂತರದ ಆವೃತ್ತಿಗಳಲ್ಲಿ ಭಾರತ ತಂಡವು ಒಮ್ಮೆ ಮಾತ್ರ ಫೈನಲ್ ತಲುಪಿದೆ.

ಟಿ20 ವಿಶ್ವ ಕಪ್​​ಗೆ ​​ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಅರ್ಷ್ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ. ಸಿರಾಜ್ . ಮೀಸಲು ಆಟಗಾರರು: ಶುಬ್ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್, ಅವೇಶ್ ಖಾನ್

Continue Reading

ಪ್ರಮುಖ ಸುದ್ದಿ

Jay Shah : ”ನಾನವನಲ್ಲ, ನಾನವನಲ್ಲ”; ಶ್ರೇಯಸ್​, ಇಶಾನ್ ವಿವಾದಕ್ಕೆ ಸ್ಪಷ್ಟನೆ ನೀಡಿದ ಜಯ್​ ಶಾ

Jay Shah: ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳ ಬಳಿಕ ಶ್ರೇಯಸ್ ಅಯ್ಯರ್ ಬೆನ್ನುನೋವಿನಿಂದ ಬಳಲುತ್ತಿದ್ದರು. ಮುಂದಿನ ಮೂರು ಟೆಸ್ಟ್ ಪಂದ್ಯಗಳಿಗೆ ಅವರನ್ನು ಆಯ್ಕೆ ಮಾಡಿರಲಿಲ್ಲ. ಅಯ್ಯರ್ ಅವರು ತಮ್ಮ ತವರಿನ ಮುಂಬೈ ತಂಡವು ರಣಜಿ ಟ್ರೋಫಿ ಪಂದ್ಯವನ್ನು ಆಡುವಲ್ಲಿ ನಿರತರಾಗಿದ್ದಾಗ ಮುಂಬೈನಲ್ಲಿ ನಡೆದ ಕೋಲ್ಕತಾ ನೈಟ್ ರೈಡರ್ಸ್ ಶಿಬಿರದಲ್ಲಿ ಭಾಗವಹಿಸಿದ್ದರು ಎಂದು ಆರೋಪಿಸಲಾಗಿದೆ.

VISTARANEWS.COM


on

Jay Shah
Koo

ಬೆಂಗಳೂರು: ಎಡಗೈ ವಿಕೆಟ್​ಕೀಪರ್ ಬ್ಯಾಟರ್​ ಇಶಾನ್ ಕಿಶನ್ (Ishan Kishan) ಮತ್ತು ಮಧ್ಯಮ ಕ್ರಮಾಂಕದ ಬ್ಯಾಟಿಂಗ್​ ಶಕ್ತಿ ಶ್ರೇಯಸ್ ಅಯ್ಯರ್ (Shreya Iyer) ಅವರನ್ನು ಬಿಸಿಸಿಐ ಕೇಂದ್ರ ಗುತ್ತಿಗೆ ಪಟ್ಟಿಯಿಂದ (BCCI Central Contract list) ಕೈಬಿಡಲು ನಿರ್ಧರಿಸಿದವರು ಯಾರು ಎಂಬುದನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ (Jay Shah) ಬಹಿರಂಗಪಡಿಸಿದ್ದಾರೆ. ದೇಶೀಯ ಕ್ರಿಕೆಟ್ ಆಡಲು ಬಿಸಿಸಿಐ ಮತ್ತು ಭಾರತ ತಂಡದ ಮ್ಯಾನೇಜ್ಮೆಂಟ್​​ನ ನಿರ್ದೇಶನವನ್ನು ಈ ಆಟಗಾರರು ನಿರ್ಲಕ್ಷಿಸಿದ ನಂತರ ಇದನ್ನು ಮಾಡಲಾಗಿದೆ ಎಂಬುದಾಗಿ ಅವರು ಹೇಳಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳ ಬಳಿಕ ಶ್ರೇಯಸ್ ಅಯ್ಯರ್ ಬೆನ್ನುನೋವಿನಿಂದ ಬಳಲುತ್ತಿದ್ದರು. ಮುಂದಿನ ಮೂರು ಟೆಸ್ಟ್ ಪಂದ್ಯಗಳಿಗೆ ಅವರನ್ನು ಆಯ್ಕೆ ಮಾಡಿರಲಿಲ್ಲ. ಅಯ್ಯರ್ ಅವರು ತಮ್ಮ ತವರಿನ ಮುಂಬೈ ತಂಡವು ರಣಜಿ ಟ್ರೋಫಿ ಪಂದ್ಯವನ್ನು ಆಡುವಲ್ಲಿ ನಿರತರಾಗಿದ್ದಾಗ ಮುಂಬೈನಲ್ಲಿ ನಡೆದ ಕೋಲ್ಕತಾ ನೈಟ್ ರೈಡರ್ಸ್ ಶಿಬಿರದಲ್ಲಿ ಭಾಗವಹಿಸಿದ್ದರು ಎಂದು ಆರೋಪಿಸಲಾಗಿದೆ.

ವಿಚಾರ ಬಹಿರಂಗಗೊಂಡಿ ಅಯ್ಯರ್ ನಾಕೌಟ್ ಹಂತಗಳಲ್ಲಿ ಮುಂಬೈ ಪರ ಆಡಿದ್ದರೂ, ಅವರನ್ನು ಬಿಸಿಸಿಐ ಕೇಂದ್ರ ಒಪ್ಪಂದಗಳಲ್ಲಿ ಆಯ್ಕೆ ಮಾಡಲಾಗಿಲ್ಲ.

ನೆಪ ಹೇಳಿದ್ದ ಇಶಾನ್​

ಮತ್ತೊಂದೆಡೆ, ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹಿಂದಿರುಗಿದ ನಂತರ ಇಶಾನ್ ಕಿಶನ್ ಮಾನಸಿಕ ಆರೋಗ್ಯ ವಿರಾಮದಲ್ಲಿದ್ದರು. ಆಯ್ಕೆಗಾಗಿ ಇಂಗ್ಲೆಂಡ್ ಟೆಸ್ಟ್ ಸರಣಿಗೆ ಮುಂಚಿತವಾಗಿ ರಣಜಿ ಟ್ರೋಫಿ ಆಡುವಂತೆ ಭಾರತ ತಂಡದ ಮ್ಯಾನೇಜ್ಮೆಂಟ್ ಒತ್ತಾಯಿಸಿದ ಹೊರತಾಗಿಯೂ ಅವರು ಬಿಸಿಸಿಐ ಮತ್ತು ಅವರ ತವರಿನ ರಾಜ್ಯ ಮಂಡಳಿ ಜಾರ್ಖಂಡ್​ ಕ್ರಿಕೆಟ್​ ಸಂಸ್ಥೆ ಯಾವುದೇ ಸಂಪರ್ಕ ಸಾಧಿಸಿರಲಿಲ್ಲ.

ಅವರು ಐಪಿಎಲ್ 2024 ಕ್ಕೆ ಮುಂಚಿತವಾಗಿ ಕ್ರಿಕೆಟ್​ಗೆ ಮರಳಿದ್ದರು. ಇದರರ್ಥ ಇಬ್ಬರೂ ಆಟಗಾರರನ್ನು ಬಿಸಿಸಿಐ ಕೇಂದ್ರ ಗುತ್ತಿಗೆ ಆಟಗಾರರ ಪಟ್ಟಿಯಿಂದ ಹೊರಗಿಡಲಾಗಿದೆ.

ಇದು ಅಗರ್ಕರ್ ನಿರ್ಧಾರ

ಈ ವರ್ಷದ ಬಿಸಿಸಿಐ ಕೇಂದ್ರ ಒಪ್ಪಂದದಿಂದ ಭಾರತದ ಆಟಗಾರರಾದ ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ಕೈಬಿಡುವ ನಿರ್ಧಾರವನ್ನು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ತೆಗೆದುಕೊಂಡಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸ್ಪಷ್ಟಪಡಿಸಿದ್ದಾರೆ.

“ನೀವು ಸಂವಿಧಾನವನ್ನು ಪರಿಶೀಲಿಸಬಹುದು. ನಾನು ಆಯ್ಕೆ ಸಭೆಯ ಸಂಚಾಲಕನಾಗಿದ್ದೇನೆ. ಆ ನಿರ್ಧಾರವು ಅಜಿತ್ ಅಗರ್ಕರ್ ಅವರಿಗೆ ಸಂಬಂಧಿಸಿದ್ದು. ಈ ಇಬ್ಬರು ಆಟಗಾರರು (ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್) ದೇಶೀಯ (ಕ್ರಿಕೆಟ್) ಆಡದ ಕಾರಣ ಅವರನ್ನು (ಕೇಂದ್ರ ಗುತ್ತಿಗೆ ಪಟ್ಟಿಯಿಂದ) ಕೈಬಿಡುವ ನಿರ್ಧಾರವು ಅವರದಾಗಿತ್ತು ಎಂದು ಶಾ ಹೇಳಿದ್ದಾರೆ.

ಇದನ್ನೂ ಓದಿ: Rahul Dravid : ವಿಶ್ವ ಕಪ್​ ಬಳಿಕ ದ್ರಾವಿಡ್​ ಭಾರತದ ಕೋಚ್ ಅಗಿರುವುದಿಲ್ಲ; ಮುಂದೆ ಯಾರು?

ನನ್ನ ಪಾತ್ರ ಕೇವಲ ಕಾರ್ಯಗತಗೊಳಿಸುವುದಾಗಿದೆ. ಸಂಜು ಸ್ಯಾಮ್ಸನ್ ಅವರಂತಹ ಹೊಸ ಆಟಗಾರರನ್ನು ನಾವು ಹೊಂದಿದ್ದೇವೆ. ಹೀಗಾಗಿ ಯಾರೂ ಅನಿವಾರ್ಯವಲ್ಲ, “ಎಂದು ಜಯ್ ಶಾ ಗುರುವಾರ ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಹೌದು, ನಾನು ಆಟಗಾರರೊಂದಿಗೆ ಮಾತನಾಡಿದ್ದೇನೆ. ಮಾಧ್ಯಮಗಳು ಸಹ ವರದಿಗಳನ್ನು ಪ್ರಸಾರ ಮಾಡಿದ್ದವು” ಎಂದು ಅವರು ಹೇಳಿದರು. ಬಿಸಿಸಿಐ ತನ್ನನ್ನು ವೈಟ್ ಬಾಲ್ ಸ್ವರೂಪಕ್ಕೆ ಮಾತ್ರ ಪರಿಗಣಿಸಿದರೆ, ವಿಜಯ್ ಹಜಾರೆ ಟ್ರೋಫಿ ಮತ್ತು ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಆಡುವುದಾಗಿ ಹಾರ್ದಿಕ್ ಪಾಂಡ್ಯ ನನಗೆ ಹೇಳಿದ್ದಾರೆ ಎಂದೂ ಶಾ ಹೇಳಿದರು.

ಮುಂಬಯಿ ತಂಡಕ್ಕೆ ಆಡಲಿ

ಐಪಿಎಲ್​​ನಲ್ಲಿ ಯಾರು ಉತ್ತಮವಾಗಿ ಆಡುತ್ತಾರೋ ಅವರು ಮುಂದುವರಿಯುತ್ತಾರೆ ಎಂಬುದು ತಪ್ಪು. ಇಶಾನ್ ಕಿಶನ್ ಅವರಂತೆ ಹಾರ್ದಿಕ್​ ಪಾಂಡ್ಯ ಭಾರತ ತಂಡದೊಂದಿಗೆ ಭಾಗವಹಿಸಲು ಕಷ್ಟಪಡುತ್ತಾರೆ. ಅವರು ಮುಂಬೈ ಇಂಡಿಯನ್ಸ್​ನಲ್ಲಿ ಆಟಗಾರನಾಗಿ ಆಡುತ್ತಿದ್ದಾರೆ. ಯಾರೇ ಆದರೂ ಟೀಮ್ ಇಂಡಿಯಾದಲ್ಲಿ ನೀವು ನಿಮ್ಮನ್ನು ಸಾಬೀತುಪಡಿಸಬೇಕು ಮತ್ತು ಬ್ಯಾಕ್ ಟು ಬ್ಯಾಕ್ ಪ್ರದರ್ಶನವನ್ನು ನೀಡಬೇಕು. ಅದನ್ನು ನಿಭಾಯಿಸಬಲ್ಲ ವ್ಯಕ್ತಿಯನ್ನು ಸರಿಯಾದ ಆಟಗಾರ ಎಂದು ವಿವರಿಸಬಹುದು, “ಎಂದು ಅವರು ಹೇಳಿದರು.

ಗುಜರಾತ್ ಟೈಟಾನ್ಸ್ ವಿರುದ್ಧದ ಮುಂಬೈ ಇಂಡಿಯನ್ಸ್ ಪಂದ್ಯದ ನಂತರ ಕಿಶನ್ ಅವರೊಂದಿಗಿನ ಸಂಭಾಷಣೆಯ ವಿವರಗಳನ್ನು ಶಾ ಬಹಿರಂಗಪಡಿಸಿದರು. ಇಲ್ಲ, ನಾನು ಇಶಾನ್​ಗೆ ಯಾವ ಸಲಹೆಯನ್ನೂ ನೀಡಿಲ್ಲ. ಅವರು ಉತ್ತಮವಾಗಿ ಆಡಬೇಕು ಎಂದು ಹೇಳಿದ್ದೆ. ಮತ್ತು ನಾನು ಎಲ್ಲಾ ಆಟಗಾರರೊಂದಿಗೆ ಆ ರೀತಿ ಮಾತನಾಡುತ್ತೇನೆ “ಎಂದು ಜಯ್​ ಶಾ ಹೇಳಿದರು.

Continue Reading
Advertisement
Akbar Nagar
ದೇಶ3 mins ago

Akbar Nagar: ಉತ್ತರ ಪ್ರದೇಶದ ಅಕ್ಬರ್‌ ನಗರದ ಅಕ್ರಮ ಮನೆಗಳ ಧ್ವಂಸಕ್ಕೆ ಸುಪ್ರೀಂ ಕೋರ್ಟ್‌ ಅಸ್ತು!

Colin Munro
ಪ್ರಮುಖ ಸುದ್ದಿ20 mins ago

Colin Munro : ನ್ಯೂಜಿಲ್ಯಾಂಡ್​ ಟಿ20 ಸ್ಪೆಷಲಿಸ್ಟ್​ ಅಟಗಾರ ನಿವೃತ್ತಿ; ಈ ಆಟಗಾರನ ಸಾಧನೆಗಳ ವಿವರ ಇಲ್ಲಿದೆ

T20 world cup
ಕ್ರೀಡೆ48 mins ago

T20 World Cup : ವಿಶ್ವ ಕಪ್​ಗೆ ಭಾರತ ತಂಡ ಪ್ರಯಾಣಿಸುವ ದಿನಾಂಕ ಪ್ರಕಟಿಸಿದ ಜಯ್​ ಶಾ

Dietary Guidelines
Latest1 hour ago

Dietary Guidelines: ಕಡಿಮೆ ದೈಹಿಕ ಚಟುವಟಿಕೆ ಇರುವವರಿಗೆ ಯಾವ ರೀತಿಯ ಆಹಾರ ಸೂಕ್ತ?

Lover refused to marriage Young woman committed suicide in kalaburagi
ಕಲಬುರಗಿ1 hour ago

Self Harming: ಪ್ರೀತಿಸಲು ಓಕೆ, ಮದುವೆಗೆ ನೋ ಎಂದ ಪ್ರಿಯಕರ; ಮನನೊಂದು ಯುವತಿ ಆತ್ಮಹತ್ಯೆ

Jay Shah
ಪ್ರಮುಖ ಸುದ್ದಿ1 hour ago

Jay Shah : ”ನಾನವನಲ್ಲ, ನಾನವನಲ್ಲ”; ಶ್ರೇಯಸ್​, ಇಶಾನ್ ವಿವಾದಕ್ಕೆ ಸ್ಪಷ್ಟನೆ ನೀಡಿದ ಜಯ್​ ಶಾ

Naxals K
ದೇಶ1 hour ago

Naxals Encounter: ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 12 ನಕ್ಸಲರ ಹತ್ಯೆ

Veg v/s Non Veg Thali
ಆರೋಗ್ಯ1 hour ago

Veg v/s Non Veg Thali: ಭಾರತದಲ್ಲಿ ನಾನ್‌ವೆಜ್‌ ಊಟಕ್ಕಿಂತ ವೆಜ್ ಊಟ ದುಬಾರಿ! ಏಕೆ ಗೊತ್ತಾ?

Maruti Suzuki
ಆಟೋಮೊಬೈಲ್2 hours ago

Maruti Suzuki: ಶೀಘ್ರ ರಸ್ತೆಗಿಳಿಯಲಿದೆ ಬರೋಬ್ಬರಿ 26 ಕಿ.ಮೀ ಮೈಲೇಜ್ ಕೊಡುವ ಮಾರುತಿ ಸ್ವಿಫ್ಟ್​; ಶುರುವಾಗಿದೆ ಬುಕಿಂಗ್​

Prajwal Revanna Case
ಕರ್ನಾಟಕ2 hours ago

Prajwal Revanna Case: ರೇವಣ್ಣ ಬಸವನಗುಡಿ ನಿವಾಸದಲ್ಲಿ 2ನೇ ಬಾರಿ ಸ್ಥಳ ಮಹಜರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Physical Abuse The public prosecutor called the client woman to the lodge
ಕ್ರೈಂ6 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ8 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ9 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ16 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ23 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ24 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ1 day ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ1 day ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

ಟ್ರೆಂಡಿಂಗ್‌