Love Case : ಪ್ರೀತ್ಸೆ ಪ್ರೀತ್ಸೆ ಎಂದು ಅಪ್ರಾಪ್ತೆಯ ಕೊಂದೇ ಬಿಟ್ಟ ಪಾಗಲ್‌ ಪ್ರೇಮಿ - Vistara News

ಬೆಂಗಳೂರು ಗ್ರಾಮಾಂತರ

Love Case : ಪ್ರೀತ್ಸೆ ಪ್ರೀತ್ಸೆ ಎಂದು ಅಪ್ರಾಪ್ತೆಯ ಕೊಂದೇ ಬಿಟ್ಟ ಪಾಗಲ್‌ ಪ್ರೇಮಿ

Murder Case : ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಬಾಲಕಿಯೊಬ್ಬಳು ಬಲಿಯಾಗಿದ್ದಾಳೆ. ಪ್ರೀತಿ ನಿರಾಕರಿಸಿದ್ದಕ್ಕೆ ಅಪಹರಿಸಿ, ಬರ್ಬರವಾಗಿ (Love Case) ಕೊಂದಿದ್ದಾನೆ. ಬಳಿಕ ಕತ್ತುಕೂಯ್ದುಕೊಂಡು ಆತ್ಮಹತ್ಯೆಗೆ (Self Harming) ಯತ್ನಿಸಿದ್ದಾನೆ.

VISTARANEWS.COM


on

Lover kidnapped and killed for refusing love
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು ಗ್ರಾಮಾಂತರ/ಕೋಲಾರ: ಪ್ರೀತ್ಸೆ ಪ್ರೀತ್ಸೆ ಎಂದು ಹಿಂದೆ ಬಿದ್ದ (Love Case) ಪಾಗಲ್‌ ಪ್ರೇಮಿಯೊಬ್ಬ ಬಾಲಕಿಯನ್ನು ಹತ್ಯೆ (Murder Case) ಮಾಡಿದ್ದಾನೆ. 2 ದಿನಗಳ ಹಿಂದೆ ಕಾಣೆಯಾಗಿದ್ದ 15 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಬೆಂಗಳೂರು ಗ್ರಾಮಾಂತರದ ಅನುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶವ ಸಿಕ್ಕಿದೆ. ಕೋಲಾರದ ಮಾಲೂರು ತಾಲೂಕಿನ ದೊಮ್ಮಲೂರು ಗ್ರಾಮದ ನಂದಿತ (15) ಮೃತ ದುರ್ದೈವಿ.

ಬೆಂಗಳೂರು ಗ್ರಾಮಾಂತರದ ಅನುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಂದಿತಾಳ ಶವ ಪತ್ತೆಯಾಗಿತ್ತು. ನಂದಿತ ಹಿಂದೆ ಬಿದ್ದಿದ್ದ ನಿತಿನ್‌ ಎಂಬಾತ ಆಕೆಯನ್ನು ಕಿಡ್ನ್ಯಾಪ್‌ ಮಾಡಿ ಕೊಲೆಗೈದಿರುವುದಾಗಿ ಪೊಲೀಸರಿಗೆ ಮಾಹಿತಿ ಲಭಿಸಿದೆ. ಬರಗೂರು ಗ್ರಾಮದ ನಿವಾಸಿ ನಿತಿನ್ (23) ನಂದಿತಾಳನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ.

ಈ ಪಾಗಲ್ ಪ್ರೇಮಿಯ ಪ್ರೀತಿಯನ್ನು ನಂದಿತಾ ನಿರಾಕರಿಸಿದ್ದಳು. ಶಾಲೆ ಮುಗಿಸಿ ಮನೆಗೆ ಬರುವಾಗ ನಂದಿತಾಳನ್ನು ಅಪಹರಿಸಿದ್ದಾನೆ. ಆಗಲೂ ಆಕೆ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಚಾಕುವಿನಿಂದ ತಿವಿದು ಕೊಲೆಗೈದಿದ್ದಾನೆ. ಕೊಲೆ ನಂತರ ಆರೋಪಿ ನಿತಿನ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಆತ್ಮಹತ್ಯೆ ಮಾಡಿಕೊಳ್ಳುವ ಹೈಡ್ರಾಮಾ ಮಾಡಿದ್ದಾನೆ.

ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಕಳೆದ 15 ದಿನಗಳ ಹಿಂದೆಯೂ ಬಾಲಕಿಯನ್ನು ಚುಡಾಯಿಸಿದ್ದ. ಆಗ ನ್ಯಾಯ ಪಂಚಾಯಿತಿ ಮಾಡಿ ಕಳಿಸಿದ್ದರು. ಆದರೆ ಇದೀಗ ಬಾಲಕಿಯನ್ನು ಕೊಂದಿದ್ದಾನೆ. ಸದ್ಯ ಅನುಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Bantwal News: ಚಲಿಸುತ್ತಿದ್ದ ಬಸ್‌ನಿಂದ ಆಯ ತಪ್ಪಿ ಬಿದ್ದು ಮಹಿಳೆ ಸಾವು

ಮಾಟ ಮಂತ್ರಕ್ಕೆ ಹೆಂಡ್ತಿ ಸಾಯದ್ದಕ್ಕೆ ಸುಪಾರಿ ಕೊಟ್ಟು ಕೊಂದ

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್‌ನಲ್ಲಿ ಗೃಹಿಣಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಳು. ಇದೀಗ ಪ್ರಕರಣವನ್ನು ಭೇದಿಸಿರುವ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಮಹಿಳೆಯ ಶವ ನೋಡಿದ ಪೊಲೀಸರಿಗೆ ಸಣ್ಣದೊಂದು ಅನುಮಾನ ಬಂದಿತ್ತು. ಮೊದಮೊದಲು ಆತ್ಮಹತ್ಯೆ ಎಂದುಕೊಂಡಿದ್ದ ಪ್ರಕರಣವು ಹತ್ಯೆಯಾಗಿ (Murder Case) ಬದಲಾಗಿದೆ.

ಕಳೆದ ಫೆ.4ರ ಭಾನುವಾರದಂದು ಪ್ರೇಮಲತಾ ಎಂಬಾಕೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಐದು ಅಡಿ ಎತ್ತರದ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಮೊದಲಿಗೆ ಆತ್ಮಹತ್ಯೆ ಎಂದು ಬಿಂಬಿಸಲಾಗಿತ್ತು. ನಂತರ ತನಿಖೆಗಿಳಿದ ಪೊಲೀಸರಿಗೆ ಇದು ಆತ್ಮಹತ್ಯೆ ಅಲ್ಲ ಬದಲಿಗೆ ಕೊಲೆ ಎಂದು ತಿಳಿದಿತ್ತು. ಪ್ರೇಮಲತಾ ಹತ್ಯೆಗೆ ಆಕೆಯ ಪತಿ ಶಿವಶಂಕರ್ ಸ್ನೇಹಿತ ವಿನಯ್‌ಗೆ ಸುಪಾರಿ ನೀಡಿದ್ದ ಎಂದು ತಿಳಿದು ಬಂದಿದೆ.

ಪತ್ನಿ ಶೀಲ ಶಂಕಿಸಿದ್ದ ಶಿವಶಂಕರ

ಹೌಸ್‌ ಕೀಪಿಂಗ್ ಕೆಲಸ ಮಾಡುತ್ತಿದ್ದ ಪ್ರೇಮಲತಾಳ ಮೇಲೆ ಪತಿ ಶಿವಶಂಕರ್‌ಗೆ ವಿಪರೀತ ಅನುಮಾನವಿತ್ತು. ಆಕೆ ಬೇರೆಯವರ ಜತೆ ದೈಹಿಕ ಸಂಪರ್ಕ ಹೊಂದಿದ್ದಾಳೆ, ತನಗೆ ವಂಚನೆ ಮಾಡುತ್ತಿದ್ದಾಳೆ ಎಂದುಕೊಂಡಿದ್ದ. ಈ ವಿಚಾರವಾಗಿ ಅನೇಕ ಬಾರಿ ಪತ್ನಿ ಪ್ರೇಮಲತಾ ಜತೆ ಜಗಳವಾಡಿದ್ದ. ಒಂದು ಹೆಜ್ಜೆ ಮುಂದೆ ಹೋಗಿ ಪತ್ನಿಗೆ ತಿಳಿಯದಂತೆ ಮನೆಗೆ ಸಿಸಿಟಿವಿ ಅಳವಡಿಕೆ ಮಾಡಿದ್ದ. ಆದರೂ ಆತನಿಗೆ ಪತ್ನಿಯ ಮೇಲಿನ ಅನುಮಾನ ಕಡಿಮೆ ಆಗಿರಲಿಲ್ಲ.

ವಾಮಾಚಾರ ಮಾಡಿಸಿ, ಸುಪಾರಿ ಕೊಟ್ಟ

ನನಗೆ ಮೋಸ ಮಾಡುತ್ತಿದ್ದಾಳೆ ಎಂದು ಸಿಟ್ಟಿಗೆದ್ದ ಶಿವಶಂಕರ, ಈ ಹಿಂದೆ ಪತ್ನಿ ಮೇಲೆ ವಾಮಾಚಾರ ಮಾಡಿಸಿದ್ದ. ಆದರೆ ಅದರಿಂದ ಯಾವುದೇ ಎಫೆಕ್ಟ್ ಆಗಲಿಲ್ಲ. ಕಡೆಗೆ ಪತ್ನಿಯನ್ನು ಕೊಂದು ಬಿಡುವ ಎಂದುಕೊಂಡಿದ್ದ. ಹತ್ಯೆಗೆ ಹೊಂಚು ಹಾಕುತ್ತಿದ್ದ ಶಿವಶಂಕರ್‌ಗೆ ಹಂತಕ ವಿನಯ್ ಪರಿಚಯವಾಗಿದ್ದ. ಐಡಿಎಫ್‌ಸಿ ಬ್ಯಾಂಕ್ ಸಂಬಂಧಿತ ಕೆಲಸಗಳಲ್ಲಿ ವಿನಯ್ ಆಪ್ತ ಸ್ನೇಹಿತನಾಗಿದ್ದ. ಈ ಮೊದಲು ವಿನಯ್‌ ಕೂಡ ಪತ್ನಿಯ ಶೀಲ ಶಂಕಿಸಿ ಕೊಲೆ ಕೇಸ್‌ನಲ್ಲಿ ಜೈಲಿಗೆ ಹೋಗಿ ಬಂದಿದ್ದ, ಈ ಬಗ್ಗೆ ಶಿವಶಂಕರ್ ಬಳಿ ಎಲ್ಲವನ್ನೂ ಹೇಳಿಕೊಂಡಿದ್ದ.

ಹುಣಸಮಾರನಹಳ್ಳಿ ಬಳಿ ಇರುವ ಕೆರೆಯಲ್ಲಿ ವಿನಯ್ ಪತ್ನಿ ಶವ ಪತ್ತೆಯಾಗಿತ್ತು. ಮೊದಲಿಗೆ ಆತ್ಮಹತ್ಯೆ ಎಂದುಕೊಂಡಿದ್ದ ಪೊಲೀಸರಿಗೆ ಫೊರೆನ್ಸಿಕ್ ರಿಪೋರ್ಟ್‌ನಲ್ಲಿ ಯಾರೋ ಹಿಂದಿನಿಂದ ನೀರಿಗೆ ದಬ್ಬಿ ಕೊಂದು ಹಾಕಿರುವುದು ಬೆಳಕಿಗೆ ಬಂದಿತ್ತು. ಹೀಗಾಗಿ ವಿನಯ್‌ನನ್ನು ಬಂಧಿಸಿ ಜೈಲಿಗೆ ಕಳಿಸಿದ್ದರು.

ಈ ವಿಚಾರ ಶಿವಶಂಕರ್‌ಗೆ ಕನೆಕ್ಟ್ ಆಗಿತ್ತು. ಹೀಗಾಗಿ ವಿನಯ್‌ ಜತೆಗೆ ಶಿವಶಂಕರ್ ತನ್ನ ಸಮಸ್ಯೆ ಹೇಳಿಕೊಂಡಿದ್ದ. ಪತ್ನಿಯನ್ನು ಕೊಲ್ಲಲ್ಲು ಸುಪಾರಿ ಕೊಟ್ಟು ಇಂತಿಷ್ಟು ಹಣ ನೀಡಿದ್ದ. ಅಷ್ಟೆ ಅಲ್ಲದೆ ಸಾಕ್ಷಿ ಸಿಗಬಾರದೆಂದು ಕೊಲೆಯ ದಿನ ಮನೆಗೆ ಅಳವಡಿಸಿದ್ದ ಸಿಸಿಟಿವಿ ತೆಗೆದು ಹಾಕಿದ್ದ.

ತನ್ನ ಮನೆಯ ಫೋಟೊವನ್ನು ವಿನಯ್‌ಗೆ ಕಳಿಸಿದ್ದ. ಕೊಲೆಯಾದ ದಿನ ಶಿವಶಂಕರ್ ತಾನು ಮನೆಯಲ್ಲಿ ಇರಲಿಲ್ಲ ಎಂದು ಬಿಂಬಿಸಿಕೊಳ್ಳಲು ಹೊರಗಡೆ ಹೋಗಿದ್ದ. ನಂತರ ಮನೆಗೆ ಬಂದಿದ್ದ ವಿನಯ್, ಪ್ರೇಮಲತಾಳನ್ನು ಉಸಿರುಗಟ್ಟಿಸಿ ಕೊಂದು ಹಾಕಿದ್ದ. ನಂತರ ಆತ್ಮಹತ್ಯೆ ಎಂದು ಬಿಂಬಿಸಲು ನೇಣು ಬಿಗಿದು ಪರಾರಿಯಾಗಿದ್ದ.

ಇನ್ನು ಈ ಸಂಬಂಧ ಪೊಲೀಸರಿಗೆ ಯಾವುದೇ ಕ್ಲೂ ಇರಲಿಲ್ಲ. ಸಿಡಿಆರ್‌ನಲ್ಲಿ ಕೂಡ ಶಿವಶಂಕರ್‌ ಲೊಕೇಷನ್ ಬೇರೆ ಕಡೆಯೇ ತೋರಿಸುತಿತ್ತು. ಹೀಗಾಗಿ ಆತ ಕೊಲೆ ಮಾಡಿದ್ದಾನೆ ಎಂಬುದಕ್ಕೆ ಸಾಕ್ಷಿ ಇರಲಿಲ್ಲ. ಸುಮಾರು 200ಕ್ಕೂ ಹೆಚ್ಚು ಸಿಸಿಟಿವಿ ಪರಿಶೀಲನೆ ನಡೆಸಿದಾಗ ಒಂದರಲ್ಲಿ ಕಾಣಿಸಿಕೊಂಡ ಹಂತಕನ ಬ್ಯಾಗ್ ಇಡೀ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟಿತ್ತು. ಆರೋಪಿಗಳನ್ನು ಬಂಧಿಸಿರುವ ಮಹಾಲಕ್ಷ್ಮಿ ಲೇಔಟ್ ಪೊಲೀಸರು ವಿಚಾರಣೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮಳೆ

Karnataka Weather : ರಾಜ್ಯಾದ್ಯಂತ ವ್ಯಾಪಕ ಮಳೆ ; ಉಡುಪಿ, ಉತ್ತರ ಕನ್ನಡಕ್ಕೆ ರೆಡ್‌ ಅಲರ್ಟ್‌

Karnataka Weather Forecast : ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದ್ದು, ಉಡುಪಿ, ಉತ್ತರ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬುಧವಾರದಂದು (ಸೆ.25) ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಸುತ್ತಮುತ್ತ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಪ್ರತ್ಯೇಕವಾಗಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡು ಭಾಗದ ಹಾಸನ, ಕೊಡಗು ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕೆಲವೊಮ್ಮೆ ಮೋಡ ಕವಿದ ವಾತಾವರಣ ಇರಲಿದೆ.

ರೆಡ್‌ ಅಲರ್ಟ್‌ ಘೋಷಣೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ಇರಲಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ನೀಡಲಾಗಿದೆ.

ಇದನ್ನೂ ಓದಿ: MLA Muniratna: ಅತ್ಯಾಚಾರ ಕೇಸ್‌; ಶಾಸಕ ಮುನಿರತ್ನಗೆ 12 ದಿನ ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶ

ದಾವಣಗೆರೆಯಲ್ಲಿ ಮನೆಗಳಿಗೆ ನುಗ್ಗಿದ ನೀರು

ದಾವಣಗೆರೆಯಲ್ಲೂ ಮಂಗಳವಾರ ಸತತ ಒಂದು ಗಂಟೆಗೂ ಹೆಚ್ಚು ಮಳೆ ಸುರಿದಿತ್ತು. ಪಿ ಬಿ ರಸ್ತೆ, ಪಿಜೆ ಬಡಾವಣೆ, ಗಾಂಧಿ ವೃತ್ತ ಸೇರಿದಂತೆ ಹಲವೆಡೆ ಮಳೆಯಿಂದ ವಾಹನ ಸವಾರರು ಪರದಾಡಿದರು. ದಾವಣಗೆರೆ, ಮಾಯಕೊಂಡ, ಹರಿಹರ ಸೇರಿದಂತೆ ರಸ್ತೆಯ ಮೇಲೆ ನೀರು ಹರಿದಿತ್ತು. ವಾಹನ ಸವಾರಿಗೆ ತೊಂದರೆ ಉಂಟಾಗಿತ್ತು. ಕಳೆದ ಮೂರು ದಿನಗಳಿಂದ ಸಂಜೆ ವೇಳೆ ವರುಣನ ಆಗಮಿಸುತ್ತಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ರೈತರು ಬೆಳೆದ ಬೆಳೆಗಳಿಗೆ ಮಳೆಯಿಂದ ಅನುಕೂಲವಾಗಲಿದೆ.

ಕೊಡಗಿನಲ್ಲೂ ಜಿಟಿ ಜಿಟಿ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುವಭಾರ ಕುಸಿತ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ವಿವಿಧೆಡೆ ಜಿಟಿ ಜಿಟಿ ಮಳೆಯಾಗಿತ್ತು. ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಮಳೆಯ ವಾತವರಣದಿಂದಾಗಿ ವಿದ್ಯಾರ್ಥಿಗಳು ಹಾಗೂ ಬೈಕ್ ಸವಾರರು ಕಿರಿಕಿರಿ ಅನುಭವಿಸಿದರು. ಇನ್ನು ಎರಡು ಮೂರು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಮೈಸೂರಿನಲ್ಲೂ ಸಾಧಾರಣ ಮಳೆಯಾಗಿದೆ. ಸುಮಾರು ಅರ್ಧ ಗಂಟೆಗೂ ಸುರಿದ ವರ್ಷಧಾರೆಗೆ ವಾಹನ ಸಂಚಾರಕ್ಕೆ ಅಡ್ಡಿ ಆಯಿತು.

ಯಾದಗಿರಿಯಲ್ಲಿ ಮುಂದುವರಿದ ಮಳೆ ಅಬ್ಬರ

ಯಾದಗಿರಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಮಳೆ ಅರ್ಭಟಕ್ಕೆ ಭತ್ತದ ಜಮೀನಿಗೆ ನೀರು ನುಗ್ಗಿದೆ. ಭೀಮಾನದಿ ತೀರದ ರೈತರ ಜಮೀನಿಗೆ ಮಳೆ ನೀರು ನುಗ್ಗಿ, ಭತ್ತದ ಬೆಳೆ ಜಲಾವೃತಗೊಂಡಿತ್ತು. ಯಾದಗಿರಿ ಜಿಲ್ಲೆಯ ವಡಗೇರಾ ಜೋಳದಡಗಿ ಗ್ರಾಮದಲ್ಲಿ ಘಟನೆ ನಡೆದಿದೆ. ಗೇಟ್ ಎತ್ತದೆ ಕೆಬಿಜೆಎನ್‌ಎಲ್ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದಾರೆ. ಜೋಳದಡಗಿ ಗ್ರಾಮದ ಭೀಮಾನದಿಗೆ ಅಡ್ಡಲಾಗಿರುವ ಬ್ರಿಡ್ಜ್ ಕಂ ಬ್ಯಾರೇಜ್‌ನ ಗೇಟ್ ಎತ್ತದೇ ನಿರ್ಲಕ್ಷ್ಯ ವಹಿಸಿದ್ದಾರೆ. ಭಾರಿ ಮಳೆಯಿಂದ ಭೀಮಾನದಿಗೆ ನೀರಿನ ಒಳಹರಿವು ಹೆಚ್ಚಳವಾಗಿತ್ತು. ಆದರೆ, ಗೇಟ್ ಎತ್ತದಕ್ಕೆ ಭೀಮಾನದಿಯ ನೀರು ಜಮೀನಿಗೆ ನುಗ್ಗಿ ಅಪಾರಪ್ರಮಾಣದ ಬೆಳೆ ಹಾನಿಯಾಗಿದೆ ಎಂದು ರೈತರ ಕಂಗಾಲಾದರು.

ಜಮಖಂಡಿಯಲ್ಲಿ ಮಳೆ ಅವಾಂತರ

ಬಾಗಲಕೋಟೆಯ ಜಮಖಂಡಿಯಲ್ಲಿ ರಾತ್ರಿ ಸುರಿದ ಮಳೆಯು ಅವಾಂತರವೇ ಸೃಷ್ಟಿಯಾಗಿದೆ. ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಪರದಾಡಿದರು. ಜಲಾವೃತವಾದ ಮನೆಗಳಿಗೆ ಮಾಜಿ ಶಾಸಕ ಆನಂದ್ ನ್ಯಾಮಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲಕ್ಕನಕೇರೆ ಬೈಪಾಸ್ ರಸ್ತೆ ಅಕ್ಕಪಕ್ಕದ ಮನೆಗಳಿಗೆ ನೀರು ನುಗ್ಗಿತ್ತು. ನಿವಾಸಿಗಳಿಗೆ ಆದ ಹಾನಿ ಭರಿಸುವ ಭರವಸೆಯನ್ನು ಮಾಜಿ ಶಾಸಕ ಆನಂದ್ ನ್ಯಾಮಗೌಡ ನೀಡಿದರು. ಶಿಥಿಲಗೊಂಡ ಹಳೆ ಮನೆಯವರಿಗೆ ಸುರಕ್ಷಿತ ಸ್ಥಳದಲ್ಲಿ ವಾಸಿಸುವಂತೆ ಮನವಿ ಮಾಡಿದರು. ಜಮಖಂಡಿ ಎಸಿ ಶ್ವೇತಾ ಸಾಥ್‌ ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಈ 14 ಜಿಲ್ಲೆಗಳಿಗೆ ಭಾರಿ ಮಳೆ! ಕರಾವಳಿಗೆ ಆರೆಂಜ್‌, ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್‌

Karnataka Weather : 14 ಜಿಲ್ಲೆಗಳಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿಗೆ ಆರೆಂಜ್‌, ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದ್ದು, ಉಳಿದೆಡೆ ವ್ಯಾಪಕವಾಗಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಚಿತ್ರದುರ್ಗ, ತುಮಕೂರು, ಮಂಡ್ಯ, ರಾಮನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಚದುರಿದಂತೆ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಪ್ರದೇಶದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಪ್ರತ್ಯೇಕವಾಗಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಆರೆಂಜ್‌ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ 30-40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಯೆಲ್ಲೋ ಅಲರ್ಟ್‌

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಇದನ್ನೂ ಓದಿ: Karnataka Rain : ಯಾದಗಿರಿಯಲ್ಲಿ ಭಯಂಕರ ಮಳೆ; ಸಿಡಿಲಿಗೆ ಒಂದೇ ದಿನ ನಾಲ್ವರು ಬಲಿ

ಸಿಡಿಲು ಬಡಿದು ನಾಲ್ವರು ಸಾವು

ಸೋಮವಾರ ಯಾದಗಿರಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಿದೆ. ಸಿಡಿಲು ಬಡಿದು ಮೂವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಇಬ್ಬರು ಸಹೋದರರು ಹಾಗೂ ಸಹೋದರಿ ದುರ್ಮರಣ ಹೊಂದಿದ್ದಾರೆ. ಯಾದಗಿರಿ ತಾಲೂಕಿನ ಜೀನಕೇರಾ ತಾಂಡದಲ್ಲಿ ಘಟನೆ ನಡೆದಿದೆ.

ಕೀಶನ್ ಜಾಧವ್ ( 25), ಚನ್ನಪ್ಪ ಜಾಧವ್ (18) ಹಾಗೂ ಸುನೀಬಾಯಿ ರಾಠೋಡ (27), ನೇನು ಜಾಧವ್ (15) ಮೃತ ದುರ್ದೈವಿ. ಸಿಡಿಲು ಬಡಿದು ತೀವ್ರ ಅಸ್ವಸ್ಥಗೊಂಡ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮೃತಪಟ್ಟಿದ್ದಾನೆ. ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.

ಯಾದಗಿರಿ ತಾಲ್ಲೂಕಿನ ಜೀನಕೇರಾ ತಾಂಡಾದಲ್ಲಿ ಕುಟುಂಬಸ್ಥರ ಜತೆ ಉಳ್ಳಾಗಡ್ಡಿ ಹಚ್ಚಲು ತೆರಳಿದರು. ಈ ವೇಳೆ ಭಾರಿ ಮಳೆಯಿಂದ ರಕ್ಷಣೆ‌ ಮಾಡಿಕೊಳ್ಳಲು ದೇವಸ್ಥಾನದೊಳಗೆ ತೆರಳಿದರು. ಜೀನಕೇರಾ ತಾಂಡಾದ ದುರ್ಗಮ್ಮ ದೇವಸ್ಥಾನದೊಳಗೆ ತೆರಳಿದ್ದರು. ಈ ವೇಳೆ ಸಿಡಿಲು ಬಡಿದಿದೆ. ಯಾದಗಿರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಯಾದಗಿರಿಯಲ್ಲಿ ಅಬ್ಬರಿಸಿದ್ದ ಮಳೆ

ಯಾದಗಿರಿ ಜಿಲ್ಲೆಯಲ್ಲಿ ಸೋಮವಾರ ಮಳೆಯು ಅಬ್ಬರಿಸಿದೆ. ಕಳೆದ ಒಂದು ಗಂಟೆಗೂ ಹೆಚ್ಚು ಮಳೆ ಸುರಿದಿದೆ. ಯಾದಗಿರಿ ನಗರ, ವಡಗೇರಾ ಸೇರಿದಂತೆ ಮೊದಲಾದ ಕಡೆ ಮಳೆ ಅರ್ಭಟ ಜೋರಾಗಿತ್ತು. ವರುಣನ ಅಬ್ಬರಕ್ಕೆ ರಸ್ತೆ ಜಲಾವೃತಗೊಂಡಿತ್ತು. ಕೇಂದ್ರ ಬಸ್ ನಿಲ್ದಾಣ ಮುಂಭಾಗ ರಸ್ತೆ ಕರೆಯಂತಾಗಿತ್ತು. ಊರಿಗೆ ತೆರಳಲು ಜನರು ಸಂಕಷ್ಟ ಪಡಬೇಕಾಯಿತು.

ಕಲಬುರಗಿಯಲ್ಲೂ ಒಂದು ಗಂಟೆಯಿಂದ ಧಾರಾಕಾರ ಮಳೆಯಾಗಿದೆ. ಕಲಬುರಗಿ ನಗರ, ಗ್ರಾಮೀಣ , ಔರಾದ್ ಸೇರಿ ಹಲವು ಭಾಗದಲ್ಲಿ ಭಾರಿ ಮಳೆಯಾಗಿದ್ದು, ರಿಂಗ್ ರಸ್ತೆಯಲ್ಲೂ ಗುಡುಗು ಸಹಿತ ಸುರಿದ ಮಳೆಯಿಂದಾಗಿ ರಸ್ತೆ ಜಲಾವೃತಗೊಂಡು, ಕಾಲುವೆಯಂತಾಗಿತ್ತು. ವಾಹನ ಸವಾರರು ಪರದಾಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಯಾದಗಿರಿಯಲ್ಲಿ ಭಯಂಕರ ಮಳೆ; ಸಿಡಿಲಿಗೆ ಒಂದೇ ದಿನ ನಾಲ್ವರು ಬಲಿ

Karnataka Rain : ಯಾದಗಿರಿಯಲ್ಲಿ ಭಯಂಕರ ಮಳೆಯಾಗುತ್ತಿದ್ದು, ಸಿಡಿಲಿಗೆ ಒಂದೇ ದಿನ ನಾಲ್ವರು ಬಲಿಯಾಗಿದ್ದಾರೆ.

VISTARANEWS.COM


on

By

karnataka rain
Koo

ಯಾದಗಿರಿ: ಸೋಮವಾರ ಯಾದಗಿರಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಿದೆ. ಸಿಡಿಲು ಬಡಿದು ಮೂವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಇಬ್ಬರು ಸಹೋದರರು ಹಾಗೂ ಸಹೋದರಿ ದುರ್ಮರಣ ಹೊಂದಿದ್ದಾರೆ. ಯಾದಗಿರಿ ತಾಲೂಕಿನ ಜೀನಕೇರಾ ತಾಂಡದಲ್ಲಿ ಘಟನೆ ನಡೆದಿದೆ.

ಕೀಶನ್ ಜಾಧವ್ ( 25), ಚನ್ನಪ್ಪ ಜಾಧವ್ (18) ಹಾಗೂ ಸುನೀಬಾಯಿ ರಾಠೋಡ (27), ನೇನು ಜಾಧವ್ (15) ಮೃತ ದುರ್ದೈವಿ. ಸಿಡಿಲು ಬಡಿದು ತೀವ್ರ ಅಸ್ವಸ್ಥಗೊಂಡ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮೃತಪಟ್ಟಿದ್ದಾನೆ. ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಯಾದಗಿರಿ ತಾಲ್ಲೂಕಿನ ಜೀನಕೇರಾ ತಾಂಡಾದಲ್ಲಿ ಕುಟುಂಬಸ್ಥರ ಜತೆ ಉಳ್ಳಾಗಡ್ಡಿ ಹಚ್ಚಲು ತೆರಳಿದರು. ಈ ವೇಳೆ ಭಾರಿ ಮಳೆಯಿಂದ ರಕ್ಷಣೆ‌ ಮಾಡಿಕೊಳ್ಳಲು ದೇವಸ್ಥಾನದೊಳಗೆ ತೆರಳಿದರು. ಜೀನಕೇರಾ ತಾಂಡಾದ ದುರ್ಗಮ್ಮ ದೇವಸ್ಥಾನದೊಳಗೆ ತೆರಳಿದ್ದರು. ಈ ವೇಳೆ ಸಿಡಿಲು ಬಡಿದಿದೆ. ಯಾದಗಿರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗದಗದಲ್ಲಿ ಸಿಡಿಲು ಬಡಿದು ಕುರಿಗಳು ಸಾವು

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ಮಳೆ ಜತೆಗೆ ಸಿಡಿಲು ಬಡಿದು ಕುರಿಗಳು ಮೃತಪಟ್ಟಿವೆ. ನಿಪ್ಪಾಣಿ ಮೂಲದ ಕುರಿಗಾಹಿಗೆ ಸೇರಿದ ನಾಲ್ಕು ಕುರಿಗಳು ಮೃತಪಟ್ಟಿವೆ. ಮಳೆಗಾಲದಲ್ಲಿ ತಮ್ಮ ಕುರಿಗಳನ್ನು ಮೇಯಿಸುತ್ತಾ ಸಂಚಾರ ಮಾಡುವ ಕುರಿಗಾಹಿಗಳು, ನಿನ್ನೆ ರಾತ್ರಿ ಗ್ರಾಮದ ಹೊರವಲಯದಲ್ಲಿ ತಂಗಿದ್ದರು. ನಿ‌ನ್ನೆ ರಾತ್ರಿ ಸುರಿದ ಭಾರಿ ಮಳೆ ವೇಳೆ ಸಿಡಿಲು ಬಡಿದು ಕುರಿಗಳು ಮೃತಪಟ್ಟಿವೆ. ಕುರಿಗಾಹಿಗಳಿಗೆ ಪಶು ಸಂಗೋಪನಾ ಇಲಾಖೆ ಪರಿಹಾರ ನೀಡಲಿ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಸಿಡಿಲಿಗೆ ರೈತ ಬಲಿ

ಧಾರವಾಡ ಜಿಲ್ಲೆಯಲ್ಲಿ ಸಿಡಿಲಿನ ಹೊಡೆತಕ್ಕೆ ರೈತರೊಬ್ಬರು ಬಲಿಯಾಗಿದ್ದಾರೆ. ಧಾರವಾಡ ತಾಲೂಕಿನ ಹನುಮನಾಳ ಗ್ರಾಮದ ರೈತ ಭೀಮನಗೌಡ ಪಾಟೀಲ(65)ಮೃತ ದುರ್ದೈವಿ. ಹೊಲದಿಂದ ಮನೆಗೆ ಬರುವಾಗ ಸಿಡಿಲು ಬಡಿದು ಭೀಮನಗೌಡ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಗರಗ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಾಗಿದೆ.

ಮಳೆಗೆ ಮನೆ ಗೋಡೆ ಕುಸಿದು ಬಿದ್ದು ವ್ಯಕ್ತಿ ಸಾವು

ಉತ್ತರ ಒಳನಾಡಿನಲ್ಲಿ ಮಳೆಯು (Karnataka Rain) ಅಬ್ಬರಿಸುತ್ತಿದ್ದು, ಧಾರಾಕಾರವಾಗಿ ಸುರಿದ ಮಳೆಗೆ ಮನೆ ಗೋಡೆ ಕುಸಿದು ಸ್ಥಳದಲ್ಲೆ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕುರುಕುಂಟಾ ಗ್ರಾಮದಲ್ಲಿ ಘಟನೆ ನಡೆದಿದೆ. ರಾಜೇಂದ್ರ ಪಾಟೀಲ್ (62) ಮೃತ ದುದೈವಿ.

ರಾಜೋಳ ಗ್ರಾಮದಿಂದ ಮಗಳ ಮನೆ ಕುರುಕುಂಟಾ ಗ್ರಾಮಕ್ಕೆ ತೆರಳಿದ್ದರು. ಮನೆಯಲ್ಲಿ ಮಲಗಿದ್ದ ವೇಳೆ ಗೋಡೆ ಕುಸಿದಿದೆ. ಪರಿಣಾಮ ರಾಜೇಂದ್ರ ಅವರು ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಕುರುಕುಂಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

ಬೆಂಗಳೂರು ಗ್ರಾಮಾಂತರ

Viral News : ದೊಡ್ಡಬಳ್ಳಾಪುರದಲ್ಲಿ ಮಂಗನಾಟ; ಮನೆಯೊಳಗೆ ನುಗ್ಗಿ ತಿಂಡಿ ಸಿಗದ್ದಕ್ಕೆ ಐಫೋನ್‌ ಹೊತ್ತೊಯ್ದ ಕೋತಿ!

VISTARANEWS.COM


on

By

Monkey enters house in Doddaballapura takes away iPhone
Koo

ದೊಡ್ಡಬಳ್ಳಾಪುರ: ಮಹಿಳೆಯ ಐಫೋನ್ ಹೊತ್ತೊಯ್ದ ಕೋತಿಯೊಂದು ಟವರ್ ಏರಿದ ಘಟನೆ ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ (Viral News) ನಡೆದಿದೆ. ತುಳಸಿ ಎಂಬುವವರ ಮನೆಗೆ ನುಗ್ಗಿದ ಮಂಗವೊಂದು ತಿಂಡಿಗಾಗಿ ಹುಡುಕಾಡಿದೆ. ತಿಂಡಿ ಸಿಗದೆ ಇದ್ದಾಗ, ಚಾರ್ಜಿಂಗ್‌ ಹಾಕಿದ್ದ ಐಫೋನ್‌ ಕಂಡಿದೆ. ಕ್ಷಣಾರ್ಧದಲ್ಲೆ ಐಫೋನ್‌ ಹೊತ್ತೊಯ್ದು ಟವರ್ ಏರಿದಿದೆ. ಹೀಗಾಗಿ ಮೊಬೈಲ್‌ ವಾಪಸ್‌ ಪಡೆಯಲು ಮಹಿಳೆ ಹಾಗೂ ಸ್ಥಳೀಯರು ಹರಸಾಹಸ ಪಟ್ಟರು. ತಿಂಡಿ ಕೊಡುತ್ತೇವೆ ಎಂದರು ಮೊಬೈಲ್‌ ಕೊಡದೆ ಮಂಗನಾಟಕ್ಕೆ ಜನರು ಸುಸ್ತ್‌ ಆದರು.

ಜಿಂಕೆ ಬೇಟೆಯಾಡಿದ ಕಿಡಿಗೇಡಿಗಳು, ಕರೆಂಟ್‌ ಶಾಕ್‌ಗೆ ಕೋತಿ ಸಾವು

ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ತಾಲೂಕಿನ ಆವತಿ ಗ್ರಾಮದ ಹೆದ್ದಾರಿ ಬದಿಯಲ್ಲಿ ಜಿಂಕೆಯ ಶವ ಪತ್ತೆಯಾಗಿದೆ. ಕಿಡಿಗೇಡಿಗಳು ಮುಂಜಾನೆ ಜಿಂಕೆಯನ್ನು ಕೊಂದು ಹೆದ್ದಾರಿ ಬದಿಯಲ್ಲಿ ಬಿಸಾಡಿದ್ದಾರೆ. ಬೆಳಗ್ಗೆ ಕೆಲವರು ವಾಕಿಂಗ್ ಹೋದಾಗ ಜಿಂಕೆ‌ ಮೃತದೇಹ ಪತ್ತೆಯಾಗಿದೆ. ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಪತ್ತೆಯಾಗಿದ್ದು, ಜಿಂಕೆಯನ್ನು ಬೇಟೆಯಾಡಿ ತಂದು ಬಿಸಾಕಿ ಹೋಗಿರುವ ಶಂಕೆ ಇದೆ. ಜಿಂಕೆ ಮೃತದೇಹ ಕಂಡು ಅರಣ್ಯ ಇಲಾಖೆ ಸಿಬ್ಬಂದಿಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

ವಿದ್ಯುತ್‌ ತಗುಲಿ ಮಂಗ ಸಾವು

ವಿದ್ಯುತ್ ತಗುಲಿ ಮಂಗವೊಂದು ಮೃತಪಟ್ಟಿದೆ. ಹೀಗಾಗಿ ಗ್ರಾಮಸ್ಥರು ಹಿಂದೂ ವಿಧಿವಿಧಾನದಂತೆ ಅಂತ್ಯಕ್ರಿಯೆ ನೇರವೆರಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಘಟನೆ ನಡೆದಿದೆ. ಮನುಷ್ಯರಿಗೆ ಅಂತ್ಯಕ್ರಿಯೆ ಮಾಡುವ ರೀತಿಯಲ್ಲಿ ಮಂಗನಿಗೆ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಊರು ತುಂಬಾ ಮೆರವಣಿಗೆ ಮಾಡಿ ಶವಸಂಸ್ಕಾರ ನೆರವೇರಿಸಿದ್ದಾರೆ.

ಇದನ್ನೂ ಓದಿ: Acid attack: ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಯುವಕನ ಮೇಲೆ ಆ್ಯಸಿಡ್ ದಾಳಿ!

ಚಾಮುಂಡಿ ಬೆಟ್ಟದಲ್ಲಿ ಹೆಬ್ಬಾವು ಪ್ರತ್ಯಕ್ಷ

ಚಾಮುಂಡಿ ಬೆಟ್ಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷಗೊಂಡಿದೆ. ಚಾಮುಂಡಿ ಬೆಟ್ಟದ ರಸ್ತೆಯಲ್ಲಿ ತಡರಾತ್ರಿ ಬೃಹತ್ ಗಾತ್ರದ ಹೆಬ್ಬಾವು ರಸ್ತೆ ದಾಟುತ್ತಿರುವುದನ್ನು ಕಂಡು ವಾಹನ ಸವಾರರು ಗಾಬರಿಗೊಂಡಿದ್ದಾರೆ. ಹೆಬ್ಬಾವು ಅರಣ್ಯ ಪ್ರದೇಶದೊಳಗೆ ತೆರಳುವವರೆಗೆ ಕೆಲಕಾಲ ಅಲ್ಲೇ ನಿಂತು ವೀಕ್ಷಣೆ ಮಾಡಿದ ವಾಹನ ಸವಾರರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

ಮಲೆನಾಡಿನಲ್ಲಿ ಕಾಡಾನೆ ಹಾವಳಿ

ಮಲೆನಾಡಲ್ಲಿ ಕಾಡಾನೆ ಹಾವಳಿ ಮುಂದುವರಿದಿದೆ. ಕಾಡಾನೆ ದಾಳಿಯಿಂದ ರೈತರ ಬೆಳೆ ಸಂಪೂರ್ಣ ನಾಶವಾಗಿದೆ. ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ತಡರಾತ್ರಿ ಎರಡು ಕಾಡಾನೆಗಳು ದಾಳಿ ಮಾಡಿದೆ. ಪುರದಾಳು ಗ್ರಾಮದ ರಾಜೇಶ್ ಹಾಗೂ ಬೀರಪ್ಪ, ನಾಗರಾಜ್ ಎಂಬುವರ ತೋಟ-ಹೊಲದಲ್ಲಿರುವ ಬೆಳೆ ನಾಶವಾಗಿದೆ. ಅಡಿಕೆ ಹಾಗೂ ತೆಂಗಿನ ಮರಗಳನ್ನು ಬುಡಮೇಲು ಮಾಡಿದೆ. ಜೋಳ ಹಾಗೂ ಕಬ್ಬನ್ನು ನಾಶ ಮಾಡಿರುವುದರಿಂದ ಅರಣ್ಯ ಇಲಾಖೆಯ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ. ಆನೆಗಳ ಬಗ್ಗೆ ಮಾಹಿತಿ ನೀಡಿದರೂ ಕ್ರಮ ಕೈಗೊಳ್ಳದ ಇಲಾಖೆ ವಿರುದ್ಧ ರೈತರ ಆಕ್ರೋಶಿಸಿದ್ದಾರೆ.

ಹಾಸನದಲ್ಲಿ ಬೀಟಮ್ಮ ಗ್ಯಾಂಗ್‌ ಹಾವಳಿ

ಹಾಸನ ಜಿಲ್ಲೆಯಲ್ಲಿ ಬೀಟಮ್ಮ ಗ್ಯಾಂಗ್ ಹಾವಳಿ ಮುಂದುವರಿದಿದೆ. ಕಾಡಾನೆಗಳ ಹಿಂಡು ಕಂಡು ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹಾಸನದ ಬೇಲೂರು ತಾಲೂಕಿನ, ತಾವರೆಕೆರೆ ಗ್ರಾಮದಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳ ಹಿಂಡು ದಾಳಿ ಮಾಡಿದೆ. ಭತ್ತ, ಕಾಫಿ, ಬಾಳೆ, ನಾಟಿ ಮಾಡಿದ ಭತ್ತ ಸೇರಿ ಅಪಾರ ಪ್ರಮಾಣದ ಬೆಳೆ ನಾಶ ಮಾಡಿದೆ. ಬೀಟಮ್ಮ ಗ್ಯಾಂಗ್‌ನ ಹಾವಳಿಯಿಂದ ಗ್ರಾಮಸ್ಥರು ಬೇಸತ್ತಿದ್ದಾರೆ. ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯದ ಸರ್ಕಾರ ಹಾಗೂ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Dina Bhavishya
ಭವಿಷ್ಯ3 ನಿಮಿಷಗಳು ago

Dina Bhavishya : ಈ ರಾಶಿಯವರಿಗೆ ಅನಿರೀಕ್ಷಿತ ಲಾಭವು ದುಪ್ಪಟ್ಟು ಖುಷಿ ಸಿಗಲಿದೆ

Murder case
ಬೆಂಗಳೂರು12 ಗಂಟೆಗಳು ago

Bengaluru Murder : ಮಹಿಳೆಯನ್ನು 50 ತುಂಡಾಗಿ ಕತ್ತರಿಸಿದವನು ಒಡಿಶಾದ ಸ್ಮಶಾನದಲ್ಲಿ ನೇಣಿಗೆ ಶರಣು!

assault case
ಹಾವೇರಿ13 ಗಂಟೆಗಳು ago

Assault Case : ಮನೆಗೆ ಬಾರದ ಪತ್ನಿ; ಸಿಟ್ಟಾಗಿ ಮಾವ ಬೆಳೆದ ಅಡಿಕೆ ಗಿಡಗಳನ್ನು ನಾಶ ಮಾಡಿದ ಅಳಿಯ!

Murder case
ದಾವಣಗೆರೆ13 ಗಂಟೆಗಳು ago

Murder Case : ಪತಿಗೆ ನಿದ್ರೆ ಮಾತ್ರೆ ಕೊಟ್ಟು ರಾತ್ರಿ ಹೊತ್ತು ಪ್ರಿಯಕರನ ಸೇರುತ್ತಿದ್ದಳು ಮಳ್ಳಿ! ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಬಲಿ

new serial
ಬೆಂಗಳೂರು16 ಗಂಟೆಗಳು ago

New Serial : ಡಿಫರೆಂಟ್ ಕಥೆಯೊಂದಿಗೆ ಕಿರುತೆರೆಯಲ್ಲಿ ಶುರುವಾಗ್ತಿದೆ ʻನಿನ್ನ ಜೊತೆ ನನ್ನ ಕಥೆʼ

World Retinal Day 2024
ಪ್ರಮುಖ ಸುದ್ದಿ17 ಗಂಟೆಗಳು ago

World Retinal Day 2024 : ಶಾಕಿಂಗ್‌ ನ್ಯೂಸ್‌; ಜಾಗತಿಕವಾಗಿ 1 ಬಿಲಿಯನ್ ಜನರು ತಮ್ಮ ದೃಷ್ಟಿಯನ್ನು ಕಳೆದುಕೊಳ್ಳುತ್ತಿದ್ದರಂತೆ!

MUda Scam
ರಾಜಕೀಯ17 ಗಂಟೆಗಳು ago

Muda Scam : ಸಿದ್ದರಾಮಯ್ಯ ರಾಜೀನಾಮೆಗೆ ಹೆಚ್ಚಾದ ಒತ್ತಡ; ಫ್ರೀಡಂ ಪಾರ್ಕ್‌ನಲ್ಲಿ ಜೆಡಿಎಸ್‌ ಪ್ರತಿಭಟನೆ

Cancer Treatment AI
ಆರೋಗ್ಯ17 ಗಂಟೆಗಳು ago

Cancer Treatment : ವೈದ್ಯಕೀಯ ಲೋಕದಲ್ಲಿ ಎಐ; ಕ್ಯಾನ್ಸರ್‌ಕಾರಕ ಗಡ್ಡೆ ಪತ್ತೆಗೂ ಬಂದಿದೆ ಎಐ ಚಾಲಿತ ಸೈಬರ್‌ನೈಫ್‌-ಎಸ್7 ಸಿಸ್ಟಮ್‌!

Dina Bhavishya
ಭವಿಷ್ಯ18 ಗಂಟೆಗಳು ago

Dina Bhavishya :ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Self Harming
ಕೋಲಾರ2 ದಿನಗಳು ago

Self Harming : ಹೆಂಡ್ತಿ ಮನೆಯವರ ಕಿರುಕುಳ; ವಿಡಿಯೊ ಮಾಡಿ ಮಾರ್ಕಂಡೇಶ್ವರ ಬೆಟ್ಟದಲ್ಲಿ ನೇಣಿಗೆ ಶರಣು

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ11 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್4 ವಾರಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌