Electric shock : ಶಾಲಾ ಕ್ರೀಡಾಕೂಟದಲ್ಲಿ ಪ್ರವಹಿಸಿದ ವಿದ್ಯುತ್‌; ಪೋಷಕ ಸಾವು, ವಿದ್ಯಾರ್ಥಿ ಗಂಭೀರ - Vistara News

ಶಿಕ್ಷಣ

Electric shock : ಶಾಲಾ ಕ್ರೀಡಾಕೂಟದಲ್ಲಿ ಪ್ರವಹಿಸಿದ ವಿದ್ಯುತ್‌; ಪೋಷಕ ಸಾವು, ವಿದ್ಯಾರ್ಥಿ ಗಂಭೀರ

Electric shock : ಶಾಲಾ ಆವರಣದಲ್ಲಿ ನಡೆಯುತ್ತಿದ್ದ ಪೋಷಕರ ಕ್ರೀಡಾಕೂಟದಲ್ಲಿ ವಿದ್ಯುತ್‌ ಅವಘಡ ಸಂಭವಿಸಿದೆ. ಪೋಷಕರೊಬ್ಬ ವಿದ್ಯುತ್‌ ಸ್ಪರ್ಶಿದಿಂದ ಮೃತಪಟ್ಟರೆ, ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

VISTARANEWS.COM


on

Man Dead student critically injured in electrocution
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಬಳ್ಳಾಪುರ: ಇಲ್ಲಿನ ಗೌರಿಬಿದನೂರಿನ ತಾಲೂಕಿನ ಕಲ್ಲಂಕರಾಯನಕುಂಟೆ ಗ್ರಾಮದಲ್ಲಿ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಪೋಷಕರೊಬ್ಬರು ಕರೆಂಟ್‌ ಶಾಕ್‌ನಿಂದ (Electric shock) ಮೃತಪಟ್ಟಿದ್ದಾರೆ. ರಾಘವೇಂದ್ರ ಮೃತ ದುರ್ದೈವಿ.

ಶ್ರೀರಾಮಕೃಷ್ಣ ಶಾರದಾದೇವಿ ಶಾಲೆಯಲ್ಲಿ ಪೋಷಕರ ಕ್ರೀಡಾಕೂಟ ಆಯೋಜಿಸಲಾಗಿತ್ತು. ಇದಕ್ಕಾಗಿ ಶಾಲಾ ಆವರಣದಲ್ಲಿ ದೊಡ್ಡದಾಗಿ ಪೆಂಡಾಲ್‌ ಹಾಕಲಾಗಿತ್ತು. ಈ ವೇಳೆ ಜೋರಾಗಿ ಗಾಳಿ ಬೀಸಿದ್ದರಿಂದ ಪೆಂಡಾಲ್‌ ಹಾರಿ ಹೈಟೆನ್ಷನ್‌ ತಂತಿಗೆ ತಗುಲಿದೆ.

ಇದರಿಂದ ಶಾರ್ಟ್‌ ಸರ್ಕ್ಯೂಟ್‌ ಸಂಭವಿಸಿದೆ. ವಿದ್ಯುತ್ ಅವಘಡದಲ್ಲಿ ಪೋಷಕ ರಾಘವೇಂದ್ರ ಸ್ಥಳದಲ್ಲೇ ಮೃತಪಟ್ಟರೆ, ಒಬ್ಬ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಕೂಡಲೇ ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆಯಲ್ಲಿ ಒಟ್ಟು 18 ಮಂದಿ ಗಾಯಗೊಂಡಿದ್ದಾರೆ. ನಾಲ್ವರು ವಿದ್ಯಾರ್ಥಿಗಳು, ಇಬ್ಬರು ಪೋಷಕರು ಹಾಗೂ ಇಬ್ಬರು ಶಿಕ್ಷಕರು ಗಂಭೀರ ಗಾಯಗೊಂಡಿದ್ದಾರೆ. ಗೌರಿಬಿದನೂರು ನಗರದ ಅರುಣಾ ಆಸ್ಪತ್ರೆಯಲ್ಲಿ ಹತ್ತು ಮಂದಿಗೆ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ಎಂಟು ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕುಣಿಗಲ್‌ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಮತ್ತೆ ಏರುಪೇರು

ಕುಣಿಗಲ್‌ ತಾಲೂಕಿನ ಸೀನಪ್ಪನಹಳ್ಳಿ ಗ್ರಾಮದ ಶ್ರೀ ಅಂಬಾ ಭವಾನಿ ಅನುದಾನಿತ ಫ್ರೌಢಶಾಲೆಯಲ್ಲಿ ನೀಡಿದ್ದ ಮೊಸರನ್ನ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳು ಚಿಕಿತ್ಸೆ ಪಡೆದು ಮನೆಗೆ ತೆರಳಿದ ಬಳಿಕ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದು, (Tumkur News) ಗುರುವಾರ ತಡರಾತ್ರಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗುರುವಾರ ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಿದ ಬಳಿಕ 24 ಗಂಟೆ ನಿಗಾ ಘಟಕದಲ್ಲಿರಿಸಿ ಆರೋಗ್ಯ ಸ್ಥಿತಿ ಅವಲೋಕಿಸದೇ ವೈದ್ಯರು ಮನೆಗಳಿಗೆ ಕಳುಹಿಸಿದ್ದಾರೆ. ಇದಕ್ಕೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದು ಆಸ್ಪತ್ರೆಗೆ ಆಗಮಿಸಿದ ತಾಲೂಕು ದಂಡಾಧಿಕಾರಿ ವಿಶ್ವನಾಥ್‌, ಮಕ್ಕಳ ಆರೋಗ್ಯ ವಿಚಾರಿಸಿ ಮಾಹಿತಿ ಪಡೆದು ವೈದ್ಯರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಮಕ್ಕಳು ಗುಣಮುಖವಾಗುವವರೆಗೆ ಚಿಕಿತ್ಸೆ ಮುಂದುವರಿಸುವಂತೆ ತಿಳಿಸಿದರು. ಬಳಿಕ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಶಾಲೆಯಲ್ಲಿ ಘಟನೆಗೆ ಕಾರಣವಾದವರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.

ಡಿಎಚ್‌ಒ ಡಾ. ಮಂಜುನಾಥ್‌ ಆಸ್ಪತ್ರೆಗೆ ಭೇಟಿ ನೀಡಿದರು. ಬಳಿಕ ಮಾತನಾಡಿ, ಪ್ರಾಥಮಿಕ ವರದಿ ಪ್ರಕಾರ ಆಹಾರದಲ್ಲಿ ವ್ಯತ್ಯಾಸವಾಗಿರುವ ಕಾರಣ ಮಕ್ಕಳಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದು , ಕ್ರಿಮಿನಾಶಕದಿಂದಲ್ಲ. ಶಾಲಾ ಮಕ್ಕಳನ್ನು ಹೊರತುಪಡಿಸಿದರೆ ಶಾಲೆಯ ಅಕ್ಕಪಕ್ಕ ವಾಸವಿರುವ ಗ್ರಾಮಸ್ಥರಿಗೆ ಯಾವುದೇ ಸಮಸ್ಯೆಯಾಗಿಲ್ಲ ಬಿಸಿಯೂಟದ ಬದಲು ಮೋಸರನ್ನ ನೀಡಿದ್ದೆ ಘಟನೆಗೆ ಕಾರಣವಾಗಿದೆ. ಶಾಲೆಯ ಆಡಳಿತ ಮಂಡಳಿಯವರು ಹಾಗು ಶಿಕ್ಷಕರು ಪ್ರಕರಣವನ್ನು ಮುಚ್ಚಿಹಾಕಲು ಮಾವಿನ ಗಿಡಗಳಿಗೆ ಔಷಧಿ ಸಿಂಪಡಣೆ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸುತ್ತಿರುವುದು ಈಗ ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಂಡ್ಯ

CBSE Class 10 Results: ಸತತ 9ನೇ ಬಾರಿಗೆ ಶೇ.100 ಫಲಿತಾಂಶ; ಅಕ್ಷರ ಇಂಟರ್‌ನ್ಯಾಷನಲ್ ಸ್ಕೂಲ್ ಅಮೋಘ ಸಾಧನೆ

CBSE Class 10 Results: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೌಡ್ಲೆ ಗ್ರಾಮದಲ್ಲಿರುವ ಪ್ರತಿಷ್ಠಿತ ಅಕ್ಷರ ಇಂಟರ್‌ನ್ಯಾಷನಲ್ ಸ್ಕೂಲ್ ಶೇ. 100 ಫಲಿತಾಂಶ ದಾಖಲಿಸುವ ಮೂಲಕ ಅಮೋಘ ಸಾಧನೆ ಮಾಡಿದೆ.

VISTARANEWS.COM


on

CBSE Class 10 Results
Koo

ಮಂಡ್ಯ: 2024-24ನೇ ಸಾಲಿನ ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಯ ಫಲಿತಾಂಶ (CBSE Class 10 Results) ಸೋಮವಾರ ಪ್ರಕಟಗೊಂಡಿದ್ದು, ಮದ್ದೂರು ತಾಲೂಕಿನ ಕೌಡ್ಲೆ ಗ್ರಾಮದಲ್ಲಿರುವ ಪ್ರತಿಷ್ಠಿತ ಅಕ್ಷರ ಇಂಟರ್‌ನ್ಯಾಷನಲ್ ಸ್ಕೂಲ್ ಶೇ. 100 ಫಲಿತಾಂಶ ದಾಖಲಿಸುವ ಮೂಲಕ ಅಮೋಘ ಸಾಧನೆ ಮಾಡಿದೆ. ಈ ಬಾರಿ ಪರೀಕ್ಷೆಗೆ 56 ವಿದ್ಯಾರ್ಥಿಗಳು ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗುವ ಮೂಲಕ ಸತತ 9ನೇ ಬಾರಿ ಅಕ್ಷರ ಇಂಟರ್‌ನ್ಯಾಷನಲ್ ಸ್ಕೂಲ್ ಶೇ.100 ಫಲಿತಾಂಶ ದಾಖಲಿಸಿ ರಾಜ್ಯದ ಗಮನ ಸೆಳೆದಿದೆ.

ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಧನಂಜಯ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. 9 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 23 ವಿದ್ಯಾರ್ಥಿಗಳು ಪ್ರಥಮ ಹಾಗೂ ದ್ವಿತೀಯ ಶ್ರೇಣಿಯಲ್ಲಿ 24 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಗೋರ್ವಧನ್ ಗೌಡ ಶೇ. 95, (ಇಂಗ್ಲಿಷ್ 88, ಕನ್ನಡ 96, ಗಣಿತ 97, ವಿಜ್ಞಾನ 95, ಸಮಾಜ 98) ಸಾನ್ವಿ ಯು ಗೌಡ ಶೇ.90, (ಇಂಗ್ಲಿಷ್ 94, ಕನ್ನಡ 98, ಗಣಿತ 66, ವಿಜ್ಞಾನ 95, ಸಮಾಜ 95) ಫಲಿತಾಂಶ ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೌಡ್ಲೆ ಗ್ರಾಮದ ಪ್ರಶಾಂತ ವಾತಾವರಣದಲ್ಲಿ 2013ರಲ್ಲಿ ಪ್ರಾರಂಭವಾದ ಅಕ್ಷರ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ರೈತಾಪಿ ವರ್ಗದ ಮಕ್ಕಳು, ಗ್ರಾಮೀಣ ಪ್ರದೇಶದ ಮಕ್ಕಳು ಸೇರಿದಂತೆ 1500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೌಲ್ಯಯುತ ಶಿಕ್ಷಣ ಪಡೆಯುತ್ತಿದ್ದಾರೆ.

ಇದನ್ನೂ ಓದಿ | CBSE 12th Results 2024: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ, 87.98% ಪಾಸ್‌

ಗ್ರಾಮೀಣ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳನ್ನು ಒದಗಿಸುತ್ತಿರುವುದು ಅಕ್ಷರ ಶಾಲೆಯ ಹೆಗ್ಗಳಿಕೆಯಾಗಿದ್ದು, ಜಿಲ್ಲೆಯಾದ್ಯಂತ ಪೋಷಕರ ನೆಚ್ಚಿನ ಶಾಲೆಯಾಗಿ ಮನೆಮಾತಾಗಿದೆ. ಪೋಷಕರಿಗೆ ಹೆಚ್ಚಿನ ಹೊರಯಾಗಬಾರದು ಎಂಬ ನಿಟ್ಟಿನಲ್ಲಿ ಕಡಿಮೆ ಫೀಸ್ ಪಡೆದು ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಹಲವು ರಾಜ್ಯಗಳ ಶಿಕ್ಷಕರು ಇಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದು ಸಂಸ್ಥೆಯ ಹೆಗ್ಗಳಿಕೆಯಾದ್ದು, ವಿದ್ಯಾರ್ಥಿಗಳ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಸುವಲ್ಲಿ ಇದು ನೆರವಾಗುತ್ತಿದೆ. ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಒಲಿಂಪಿಕ್ಸ್‌ ಮಾದರಿಯ ಸ್ವಿಮ್ಮಿಂಗ್ ಫೂಲ್, ಅತ್ಯಾಧುನಿಕ ಲೈಬ್ರರಿ, ಕಂಪ್ಯೂಟರ್ ಲ್ಯಾಬ್ ಸೇರಿದಂತೆ ಸಕಲ ಸೌಲಭ್ಯ ಒದಗಿಸಲಾಗಿದೆ. ಹಾಸ್ಟೆಲ್, ಶಾಲಾ ವಾಹನ ವ್ಯವಸ್ಥೆಯೂ ಲಭ್ಯವಿದೆ.

Continue Reading

ಶಿಕ್ಷಣ

SSLC Result : ರಾಜ್ಯ ಶಿಕ್ಷಣ ಗುಣಮಟ್ಟ ಕುಸಿತ, ICSE-CBSE ಕಡೆ ವಲಸೆ; ಇಲಾಖೆ ವಿರುದ್ಧ ಕ್ಯಾಮ್ಸ್‌ ಕಟು ಟೀಕೆ

Education News : ಶಿಕ್ಷಣ ಇಲಾಖೆ ವಿರುದ್ಧ ಕ್ಯಾಮ್ಸ್‌ ಸಂಘಟನೆ ಆಕ್ರೋಶ ಹೊರಹಾಕಿದೆ. ಗುಣಮಟ್ಟ ಶಿಕ್ಷಣ ಕಾಪಾಡದೇ ಇರುವುದರಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ (SSLC Result)ಕುಸಿತ ಉಂಟಾಗಿದೆ. ಗುಣಮಟ್ಟದ ಪಠ್ಯ ಪುಸ್ತಕ ರಚನೆ ಆಗದೇ ಇದ್ದರೆ ಪೋಷಕರು ಅನಿವಾರ್ಯವಾಗಿ CBSE-ICSE ಕಡೆ ಹೋಗುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದೆ.

VISTARANEWS.COM


on

By

sslc result
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿಯಿಂದ ಪ್ರಸ್ತುತ ಪ್ರಾಥಮಿಕ ಹಾಗೂ ಪ್ರೌಢ ಹಂತದಲ್ಲಿ ಕಲಿಕೆಯ ಗುಣ ಮಟ್ಟ ಕುಸಿದಿದೆ (SSLC Result) ಎಂದು ಖಾಸಗಿ ಶಾಲಾ ಒಕ್ಕೂಟ (ಕ್ಯಾಮ್ಸ್) ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಅಸಮಾಧಾನ ಹೊರಹಾಕಿದ್ದಾರೆ.

ಗುಣಮಟ್ಟ ಹೆಚ್ಚಿಸುವಲ್ಲಿ ಯಾವುದೇ ಹೆಚ್ಚು ಪರಿಣಾಮಕಾರಿಯಾಗಿ ರೂಪುರೇಷಗಳನ್ನು ಮಾಡುತ್ತಿಲ್ಲ. ಬದಲಿಗೆ ಶಿಕ್ಷಣ ಇಲಾಖೆ ದಿನಕ್ಕೊಂದು ನಿಯಮಗಳನ್ನು ಮಾಡುತ್ತಿದೆ. ಆದರೆ ತಾವೇ ನಡೆಸುವ ಸರ್ಕಾರಿ ಶಾಲೆಗಳಲ್ಲಿ ಅನುಷ್ಠಾನ ಮಾಡದೇ, ಕೇವಲ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ನಿಯಮ ಎಂಬಂತೆ ವರ್ತಿಸುತ್ತಿದೆ ಎಂದು ಶಶಿಕುಮಾರ್‌ ಆಕ್ರೋಶ ಹೊರಹಾಕಿದರು.

SSLC result Kams shashikumar
ಪ್ರಧಾನ ಕಾರ್ಯದರ್ಶಿ ಶಶಿಕುಮಾರ್‌

ಸುಖಾಸುಮ್ಮನೆ ಕಿರುಕುಳ, ದಬ್ಬಾಳಿಕೆ ಹಾಗೂ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಂಡು ಕೆಳ ಹಂತದ ಅಧಿಕಾರಿಗಳು ಲಾಭ ಪಡೆಯುತ್ತಿದ್ದಾರೆ. ಬಿಇಒ (BEO) ಹಾಗೂ ಡಿಡಿಪಿಐ (DDPI) ಹಂತದ ಎಲ್ಲ ಅಧಿಕಾರಿಗಳು ಕೇವಲ ಆಡಳಿತಾತ್ಮಕ ವ್ಯವಹಾರಗಳನ್ನು ಮಾಡುತ್ತಾ, ಸರ್ಕಾರಿ ಶಾಲೆಗಳಲ್ಲಿ ಯಾವುದೇ ಗುಣಮಟ್ಟದ ಬಗ್ಗೆ ಕ್ರಮ ವಹಿಸದೇ ಇರುವುದೇ ಫಲಿತಾಂಶ ಕುಸಿಯಲು ಕಾರಣ ಎಂದು ಕಿಡಿಕಾರಿದರು.

ಸೋಮವಾರ ಸುದ್ಧಿಗೋಷ್ಠಿ ನಡೆಸಿದ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್, ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಪ್ರಾಥಮಿಕ ಹಂತದಲ್ಲೆ ಶಿಕ್ಷಣ ಗುಣಮಟ್ಟ ಕಾಪಾಡದೇ ಇರುವುದರಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಕುಸಿತ ಉಂಟಾಗಿದೆ. 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಿರಾಶದಾಯವಾಗಿದೆ.

ಸಿಸಿಟಿವಿ ಹಾಕಿದ್ದಕ್ಕೆ ಫಲಿತಾಂಶ ಕಡಿಮೆ ಬಂದಿದೆ ಎಂದು ಶಾಲಾ ಶಿಕ್ಷಣ ಇಲಾಖೆಯೇ ಒಪ್ಪಿಕೊಂಡಿದೆ. ಅಧಿಕಾರಿಗಳ ಬಳಿ ಚರ್ಚೆ ಮಾಡಿದಾಗ, ಮಕ್ಕಳು ತುಂಬಾ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಹೀಗಾಗಿ ಅವರನ್ನು ಪಾಸ್ ಮಾಡಬೇಕು ಎಂದಿದ್ದರು. ಹತ್ತಾರು ವರ್ಷಗಳಿಂದ ಶಾಲೆಯಲ್ಲಿ ಕಲಿತರೂ 10ನೇ ತರಗತಿಗೆ ಬಂದಾಗ ಕನಿಷ್ಠ 25 ಅಂಕ ಗಳಿಸಲು ಆಗದ ಮಕ್ಕಳ ಸಂಖ್ಯೆ ಹೆಚ್ಚುತ್ತಿರುವುದಕ್ಕೆ ಸರ್ಕಾರವೇ ಕಾರಣ. ಇದಕ್ಕೆ ಪರಿಹಾರ ಹುಡುಕುವ ಬದಲು ಮಕ್ಕಳ ಹಿತದೃಷ್ಟಿಯ ಹೆಸರಲ್ಲಿ ಗ್ರೇಸ್‌ ಅಂಕದ ಪ್ರಮಾಣ ಹೆಚ್ಚಿಸುತ್ತಿರುವುದು ಸರಿಯಲ್ಲ ಎಂದರು.

ಇದನ್ನೂ ಓದಿ: Prajwal Revanna Case: ಪೆನ್‌ಡ್ರೈವ್, ವಿಡಿಯೊ ಇದ್ದವರನ್ನೆಲ್ಲ ಬಂಧಿಸ್ತಾರಾ?; ಆಪ್ತರ ಬಂಧನದ ಬಗ್ಗೆ ಪ್ರೀತಂ ಗೌಡ ಫಸ್ಟ್‌ ರಿಯಾಕ್ಷನ್

ಗುಣಮಟ್ಟದ ಪಠ್ಯ ಪುಸ್ತಕ ಇಲ್ಲದೆ CBSE-ICSE ಕಡೆ ವಲಸೆ

ಅಹಿಂದ ಸೇರಿ ಎಲ್ಲಾ ವರ್ಗದ ಜನರ ಪರ ಇರುವ ಸಿಎಂ ಸಿದ್ದರಾಮಯ್ಯರಿಗೆ ಕ್ಯಾಮ್ಸ್‌ನಿಂದ ಮನವಿ ಮಾಡುತ್ತೇವೆ. ಪ್ರತಿ ಮಗುವಿಗೂ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಬಲಪಡಿಸಬೇಕು. ಪ್ರತಿ ಬಾರಿ ಪಠ್ಯಕ್ರಮವು ರಾಜಕೀಯವಾಗಿ ಪರಿಷ್ಕರಣೆ ಮಾಡುತ್ತಿದೆ. ಕಳೆದ 10 ವರ್ಷಗಳಿಂದ ಇದೇ ರೀತಿ ನಡೆದುಕೊಂಡು ಬರುತ್ತಿದೆ. ಶಿಕ್ಷಣ ಇಲಾಖೆಯಿಂದ ಗುಣಮಟ್ಟದ ಪಠ್ಯ ಪುಸ್ತಕ ರಚನೆ ಆಗದೇ ಇದ್ದಲ್ಲಿ ಇದರ ಅಡ್ಡಪರಿಣಾಮ ಮುಂದೆ ಅನುಭವಿಸಬೇಕಾಗುತ್ತೆ.

ಮಕ್ಕಳಿಗೆ ಬೇಕಾದಂತಹ ಸಂಯೋಜಿತ ಪಠ್ಯ ರಚನೆಯಾಗದೆ ಇದ್ದರೆ, ಪೋಷಕರು ಅನಿವಾರ್ಯವಾಗಿ CBSE-ICSE ಕಡೆ ಹೋಗಬೇಕಾಗುತ್ತದೆ. ಶಿಕ್ಷಣ ಇಲಾಖೆಯು ಗುಣಮಟ್ಟ ಶಿಕ್ಷಣ ಕಾಪಾಡದಿರುವ ಪರಿಣಾಮ, ಇದನ್ನು ತಕ್ಷಣ ಸರಿ ಪಡಿಸಬೇಕು.ಈ ಮೂಲಕ ರಾಜ್ಯದ ವಿದ್ಯಾರ್ಥಿಗಳು ನೆರೆಹೊರೆ ರಾಜ್ಯದ ಪಠ್ಯಕ್ಕೆ ಪೂರಕವಾಗಿ ರಾಷ್ಟ್ರಮಟ್ಟದ ಶಿಕ್ಷಣದ ಪೈಪೋಟಿಗೆ ಸಿದ್ದ ಮಾಡುವುದು ಸರ್ಕಾರದ ಆದ್ಯ ಜವಾಬ್ದಾರಿಯಾಗಿದೆ ಎಂದರು.

ಶಿಕ್ಷಣ ಸಚಿವರು ಯಾರು ಎಂಬುದೇ ಗೊಂದಲ

ಪ್ರಸ್ತುತ ಶಿಕ್ಷಣ ವ್ಯವಸ್ಥೆ ಅತಂತ್ರ ಸ್ಥಿತಿಯಲ್ಲಿ ಇದೆ. ಇದಕ್ಕೆ ಇಲಾಖೆಯ ಮೇಲಾಧಿಕಾರಿಗಳು, ರಾಜಕೀಯ ಮುಖಂಡರು, ಸರ್ಕಾರ ಎಲ್ಲರೂ ಹೊಣೆಯಾಗಿದ್ದಾರೆ. ಶಿಕ್ಷಣ ಮಂತ್ರಿಗಳು ನಮಗೆ ಲಭ್ಯವೇ ಇರುವುದಿಲ್ಲ. ಸಚಿವರ ಪಿಎ ಅವರೇ ಮಂತ್ರಿಗಳ ರೀತಿ ವರ್ತನೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಶಿಕ್ಷಣ ಸಚಿವರು ಯಾರು ಎಂಬ ಅನುಮಾನ ಮೂಡುತ್ತೆ. ಕಾರಣ ಶಿಕ್ಷಣ ಸಚಿವರ ಆಪ್ತ ಕಾರ್ಯದರ್ಶಿ ಕಿಶೋರ್ ಅವರೇ ಸಚಿವರಾಗಿದ್ದಾರೆ. ಎಲ್ಲ ಪ್ರಶ್ನೆಗಳಿಗೆ ಸಚಿವರ ಆಪ್ತ ಕಾರ್ಯದರ್ಶಿ ಕಿಶೋರ್ ಉತ್ತರ ನೀಡುತ್ತಾರೆ ಇದು ನಿಜಕ್ಕೂ ಅತ್ಯಂತ ದುರಾದೃಷ್ಟಕರ ಎಂದು ಖಾಸಗಿ ಶಾಲೆಗಳ ಒಕ್ಕೂಟ ಸಿಡಿದೆದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

CBSE 12th Results 2024: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ, 87.98% ಪಾಸ್‌

CBSE 12th Results 2024: ಮಂಡಳಿಯು ಎರಡೂ ತರಗತಿಗಳ ಫಲಿತಾಂಶಗಳನ್ನು ಏಕಕಾಲದಲ್ಲಿ ಪ್ರಕಟಿಸಿದೆ. ವಿದ್ಯಾರ್ಥಿಗಳು ತಮ್ಮ CBSE ತರಗತಿ 12 ಫಲಿತಾಂಶ 2024 ಅನ್ನು cbse.gov.in ನಲ್ಲಿ ಅಧಿಕೃತ CBSE ವೆಬ್‌ಸೈಟ್ ಮೂಲಕ ಪ್ರವೇಶಿಸಬಹುದು. ಹೆಚ್ಚುವರಿಯಾಗಿ, cbse.nic.in, cbseresults.nic.in ಮತ್ತು results.cbse.nic.in ನಲ್ಲಿ ಫಲಿತಾಂಶಗಳನ್ನು ಪರಿಶೀಲಿಸಬಹುದು.

VISTARANEWS.COM


on

CBSE 12th results 2024
Koo

ಹೊಸದಿಲ್ಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) 12ನೇ ತರಗತಿ ಫಲಿತಾಂಶ (CBSE 12th Results 2024) ಇಂದು ಪ್ರಕಟವಾಗಿದೆ. ಈ ವರ್ಷದ ತೇರ್ಗಡೆ (Pass) ಪ್ರಮಾಣ ಶೇ.87.98ರಷ್ಟಿದೆ. 16,33,730 ಮಂದಿ ನೋಂದಾಯಿಸಿಕೊಂಡಿದ್ದು, ಅದರಲ್ಲಿ 16,21,224 ಮಂದಿ ಪರೀಕ್ಷೆ ಬರೆದು, 14,26,420 ಮಂದಿ ಪಾಸ್‌ ಆಗಿದ್ದಾರೆ. ಬೆಂಗಳೂರಿನಲ್ಲಿ (Bangalore CBSE 12th Results 2024) ಫಲಿತಾಂಶದ ಪ್ರಮಾಣ ಶೇ.96.95ರಷ್ಟಿದೆ.

ಮಂಡಳಿಯು ಎರಡೂ ತರಗತಿಗಳ ಫಲಿತಾಂಶಗಳನ್ನು ಏಕಕಾಲದಲ್ಲಿ ಪ್ರಕಟಿಸಿದೆ. ವಿದ್ಯಾರ್ಥಿಗಳು ತಮ್ಮ CBSE ತರಗತಿ 12 ಫಲಿತಾಂಶ 2024 ಅನ್ನು cbse.gov.in ನಲ್ಲಿ ಅಧಿಕೃತ CBSE ವೆಬ್‌ಸೈಟ್ ಮೂಲಕ ಪ್ರವೇಶಿಸಬಹುದು. ಹೆಚ್ಚುವರಿಯಾಗಿ, cbse.nic.in, cbseresults.nic.in ಮತ್ತು results.cbse.nic.in ನಲ್ಲಿ ಫಲಿತಾಂಶಗಳನ್ನು ಪರಿಶೀಲಿಸಬಹುದು. ಇದಲ್ಲದೆ, ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು digilocker.gov.in ಮತ್ತು results.gov.in ಮೂಲಕ ತ್ವರಿತವಾಗಿ ಪರಿಶೀಲಿಸಬಹುದು. ಆನ್‌ಲೈನ್‌ನಲ್ಲಿ ಫಲಿತಾಂಶಗಳನ್ನು ಪ್ರವೇಶಿಸಲು, ವಿದ್ಯಾರ್ಥಿಗಳಿಗೆ ಅವರ ರೋಲ್ ಸಂಖ್ಯೆ, ಶಾಲಾ ಸಂಖ್ಯೆ ಮತ್ತು ಪ್ರವೇಶ ಕಾರ್ಡ್ ಐಡಿ ಅಗತ್ಯವಿರುತ್ತದೆ.

CBSE 10ನೇ ತರಗತಿ ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಗಳ ಟಾಪರ್‌ಗಳ ಹೆಸರನ್ನು ಬಹಿರಂಗಪಡಿಸುವುದಿಲ್ಲ. ಆದರೆ ಮಂಡಳಿಯು ಪ್ರತಿ ತರಗತಿಯಲ್ಲಿನ ಅಭ್ಯರ್ಥಿಗಳ ಸಂಖ್ಯೆ, ಉತ್ತೀರ್ಣ ಶೇಕಡಾವಾರು, ಲಿಂಗವಾರು ಫಲಿತಾಂಶಗಳು ಮತ್ತು ಇತರ ಸಂಬಂಧಿತ ವಿವರಗಳನ್ನು ತನ್ನ ಅಧಿಸೂಚನೆಯಲ್ಲಿ ಬಿಡುಗಡೆ ಮಾಡುತ್ತದೆ.

CBSE ಬೋರ್ಡ್ ಫಲಿತಾಂಶ 2024 ಅನ್ನು ಹೇಗೆ ಪರಿಶೀಲಿಸುವುದು?

ನಿಮ್ಮ CBSE ಬೋರ್ಡ್ ಪರೀಕ್ಷೆಯ ಫಲಿತಾಂಶಗಳನ್ನು ಪರಿಶೀಲಿಸಲು, ಈ ಹಂತಗಳನ್ನು ಅನುಸರಿಸಿ:
ಅಧಿಕೃತ ವೆಬ್‌ಸೈಟ್‌ಗಳಿಗೆ ಭೇಟಿ ನೀಡಿ: cbse.gov.in ನಲ್ಲಿ ಅಧಿಕೃತ CBSE ವೆಬ್‌ಸೈಟ್‌ಗೆ ಹೋಗಿ ಅಥವಾ ಕೆಳಗಿನ ಯಾವುದೇ ವೆಬ್‌ಸೈಟ್‌ಗಳಿಗೆ ಹೋಗಿ: cbse.nic.in, cbseresults.nic.in, ಅಥವಾ results.cbse.nic.in.
ಪ್ರವೇಶ ಫಲಿತಾಂಶಗಳ ವಿಭಾಗ: ವೆಬ್‌ಸೈಟ್‌ನ ಮುಖಪುಟದಲ್ಲಿ “ಫಲಿತಾಂಶಗಳು” ಅಥವಾ “ಫಲಿತಾಂಶ” ವಿಭಾಗವನ್ನು ನೋಡಿ.
ವರ್ಗ ಮತ್ತು ವರ್ಷವನ್ನು ಆಯ್ಕೆಮಾಡಿ: ನಿಮ್ಮ ತರಗತಿಗೆ ಸೂಕ್ತವಾದ ಆಯ್ಕೆಯನ್ನು ಆರಿಸಿ.
ವಿವರಗಳನ್ನು ನಮೂದಿಸಿ: ನಿಮ್ಮ ರೋಲ್ ಸಂಖ್ಯೆ, ಶಾಲಾ ಸಂಖ್ಯೆ ಮತ್ತು ಪ್ರವೇಶ ಕಾರ್ಡ್ ಐಡಿಯನ್ನು ನಮೂದಿಸಲು ನಿಮ್ಮನ್ನು ಕೇಳಲಾಗುತ್ತದೆ. ಈ ವಿವರಗಳನ್ನು ನಿಖರವಾಗಿ ಭರ್ತಿ ಮಾಡಿ.
ಫಲಿತಾಂಶಗಳನ್ನು ಸಲ್ಲಿಸಿ ಮತ್ತು ವೀಕ್ಷಿಸಿ: ನಿಮ್ಮ ವಿವರಗಳನ್ನು ನಮೂದಿಸಿದ ನಂತರ, ಫಾರ್ಮ್ ಅನ್ನು ಸಲ್ಲಿಸಿ. ಆಯ್ಕೆಮಾಡಿದ ವರ್ಗ ಮತ್ತು ವರ್ಷಕ್ಕೆ ನಿಮ್ಮ CBSE ಬೋರ್ಡ್ ಪರೀಕ್ಷೆಯ ಫಲಿತಾಂಶಗಳನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.
ಉಳಿಸಿ ಅಥವಾ ಮುದ್ರಿಸಿ: ನಿಮ್ಮ ಫಲಿತಾಂಶಗಳನ್ನು ಪ್ರದರ್ಶಿಸಿದ ನಂತರ, ನೀವು ಡಿಜಿಟಲ್ ನಕಲನ್ನು ಉಳಿಸಬಹುದು ಅಥವಾ ಭವಿಷ್ಯದ ಉಲ್ಲೇಖಕ್ಕಾಗಿ ಅದನ್ನು ಮುದ್ರಿಸಬಹುದು.

CBSE ಬೋರ್ಡ್ ಫಲಿತಾಂಶ 2024 ಅನ್ನು ಪರಿಶೀಲಿಸಲು ನೇರ ಲಿಂಕ್

ಹೆಚ್ಚುವರಿಯಾಗಿ, ವಿದ್ಯಾರ್ಥಿಗಳು ನಿಮ್ಮ ಫಲಿತಾಂಶಗಳನ್ನು ಡಿಜಿಲಾಕರ್ (digilocker.gov.in) ಮತ್ತು results.gov.in ಮೂಲಕ ಅದೇ ರೋಲ್ ಸಂಖ್ಯೆ, ಶಾಲೆಯ ಸಂಖ್ಯೆ ಮತ್ತು ಪ್ರವೇಶ ಕಾರ್ಡ್ ಐಡಿಯನ್ನು ಬಳಸಿಕೊಂಡು ಪರಿಶೀಲಿಸಬಹುದು.

ನಿಮ್ಮ ಫಲಿತಾಂಶಗಳನ್ನು ಸರಾಗವಾಗಿ ಪಡೆಯಲು, ನಿಮ್ಮ ಡಾಕ್ಯುಮೆಂಟ್‌ಗಳನ್ನು ಕೈಯಲ್ಲಿ ಇರಿಸಿಕೊಳ್ಳಲು ಮತ್ತು ಅವುಗಳನ್ನು ಸರಿಯಾಗಿ ನಮೂದಿಸಲು ಮರೆಯದಿರಿ. ನೀವು ಯಾವುದೇ ಸಮಸ್ಯೆ ಎದುರಿಸಿದರೆ ಸಹಾಯಕ್ಕಾಗಿ CBSE ಸಹಾಯವಾಣಿ ಅಥವಾ ನಿಮ್ಮ ಶಾಲಾ ಅಧಿಕಾರಿಗಳನ್ನು ಸಂಪರ್ಕಿಸಬಹುದು.

10ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು CBSEಯಿಂದ ಫೆಬ್ರವರಿ 15ರಿಂದ ಮಾರ್ಚ್ 13, 2024 ರವರೆಗೆ ನಡೆಸಲಾಯಿತು. 12ನೇ ತರಗತಿ ಪರೀಕ್ಷೆಗಳನ್ನು ಫೆಬ್ರವರಿ 15ರಿಂದ ಏಪ್ರಿಲ್ 2, 2024ರವರೆಗೆ ರಾಷ್ಟ್ರವ್ಯಾಪಿ ನಡೆಸಲಾಯಿತು. ಎರಡೂ ತರಗತಿಗಳಿಗೆ ಪರೀಕ್ಷೆಗಳನ್ನು ಒಂದೇ ಪಾಳಿಯಲ್ಲಿ 10:30ರಿಂದ ನಡೆಸಲಾಯಿತು. ಈ ವರ್ಷ, ಸರಿಸುಮಾರು 39 ಲಕ್ಷ ಅಭ್ಯರ್ಥಿಗಳು ಎರಡೂ ತರಗತಿಗಳಿಗೆ CBSE ಬೋರ್ಡ್ ಪರೀಕ್ಷೆಗಳಿಗೆ ನೋಂದಾಯಿಸಿಕೊಂಡಿದ್ದಾರೆ.

ಇದನ್ನೂ ಓದಿ: Public Exam: ಇನ್ನು ಮುಂದೆ ವರ್ಷಕ್ಕೆರಡು ಬಾರಿ ಬೋರ್ಡ್‌ ಪರೀಕ್ಷೆ ? ಪರಿಶೀಲನೆಗೆ ಸಿಬಿಎಸ್‌ಇಗೆ ಸೂಚನೆ

Continue Reading

ತುಮಕೂರು

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ 2ನೇ ಸ್ಥಾನ ಪಡೆದ ಹರ್ಷಿತಾಗೆ ಸನ್ಮಾನ

SSLC Result 2024: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಶಿರಾ ನಗರದ ಶ್ರೀ ವಾಸವಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಹರ್ಷಿತ ಡಿ.ಎಂ. ಅವರನ್ನು ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಶಿರಾ ತಾಲೂಕು ಘಟಕ ಹಾಗೂ ಶಿರಾದ ಶ್ರೀ ವಾಸವಿ ವಿದ್ಯಾಸಂಸ್ಥೆಯ ವತಿಯಿಂದ ಗೌರವಿಸಿ, ಸನ್ಮಾನಿಸಲಾಯಿತು.

VISTARANEWS.COM


on

felicitation programme for SSLC student Harshita D M who got 2nd place in the state
Koo

ಶಿರಾ: ಪರೀಕ್ಷೆಯಲ್ಲಿ (SSLC Result 2024) ಹೆಚ್ಚು ಅಂಕ ಪಡೆದು ಶಾಲೆಗೆ ಮತ್ತು ಪಾಲಕರಿಗೆ ಕೀರ್ತಿ ತರುವುದು ಹೆಮ್ಮೆಯ ಸಂಗತಿ. ಜತೆಗೆ ವಿದ್ಯಾರ್ಥಿಗಳ ಯಶಸ್ಸಿಗೆ ಶ್ರಮಿಸಿದ ಶಿಕ್ಷಕ ವೃಂದ ಹಾಗೂ ಪಾಲಕರ ಕಾರ್ಯವೂ ಶ್ಲಾಘನೀಯವಾದುದು ಎಂದು ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟದ ಶಿರಾ ತಾಲೂಕು ಘಟಕದ ಅಧ್ಯಕ್ಷ ದೊಡ್ಡ ಸಿದ್ದಪ್ಪ ತಿಳಿಸಿದರು.

ನಗರದ ಶ್ರೀ ವಾಸವಿ ವಿದ್ಯಾಸಂಸ್ಥೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಹರ್ಷಿತ ಡಿ.ಎಂ. ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಹರ್ಷಿತ ಡಿ.ಎಂ. ಅವರನ್ನು ಸನ್ಮಾನಿಸಿ, ಬಳಿಕ ಅವರು ಮಾತನಾಡಿದರು.

ದೃಢ ನಿರ್ಧಾರ ಮತ್ತು ಅಚಲವಾದ ನಂಬಿಕೆ ಯಶಸ್ಸಿನ ಮೆಟ್ಟಿಲುಗಳಾಗಿವೆ. ಜೀವನದಲ್ಲಿ ದೃಢ ನಿರ್ಧಾರ ತಗೆದುಕೊಳ್ಳುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಹೇಳಿದರು.

ಇದನ್ನೂ ಓದಿ: Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಶ್ರೀ ವಾಸವಿ ವಿದ್ಯಾಸಂಸ್ಥೆಯ ಅಧ್ಯಕ್ಷ ರಮೇಶ್ ಬಾಬು ಮಾತನಾಡಿ, ನಮ್ಮ ಸಂಸ್ಥೆಯ ವಿದ್ಯಾರ್ಥಿನಿ ಹರ್ಷಿತ ಡಿ.ಎಂ. ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ರಾಜ್ಯಕ್ಕೆ 2ನೇ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ. ಜತೆಗೆ ಶಾಲೆಗೆ ಉತ್ತಮ ಫಲಿತಾಂಶ ಬಂದಿರುವುದು ಸಂತಸ ತಂದಿದೆ ಎಂದು ತಿಳಿಸಿದರು.

ಶಿಕ್ಷಕರು ಪ್ರಸಕ್ತ ವರ್ಷದಲ್ಲಿಯೂ ಉತ್ತಮ ಫಲಿತಾಂಶ ನೀಡುವ ಭರವಸೆ ನೀಡಿದ್ದಾರೆ ಎಂದು ಇದೇ ವೇಳೆ ತಿಳಿಸಿದರು.

ಇದನ್ನೂ ಓದಿ: ICMR Dietary Guidelines: ನಿಮ್ಮ ಆರೋಗ್ಯ ಚೆನ್ನಾಗಿರಬೇಕೆ? ತಜ್ಞ ಸಮಿತಿಯ ಈ ಆಹಾರ ಸಲಹೆ ಪಾಲಿಸಿ

ಈ ಸಂದರ್ಭದಲ್ಲಿ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟದ ಶಿರಾ ತಾಲೂಕು ಕಾರ್ಯದರ್ಶಿ ಕೋಟೆ ಚಂದ್ರಶೇಖರ್, ಖಜಾಂಚಿ ಮಂಜುಶ್ರೀ ಮಹಾಲಿಂಗಪ್ಪ, ವಾಸವಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಸುರೇಶ್ ಬಾಬು, ಕಾರ್ಯದರ್ಶಿ ನಾಗರಾಜ್ ಶೆಟ್ಟಿ, ಖಜಾಂಚಿ ಚಂದ್ರಶೇಖರ್ ಬಾಬು, ನಿರ್ದೇಶಕರುಗಳಾದ ರಚಿತಾ ನಾಗಾರ್ಜುನ್, ಶ್ರೀಕಾಂತ್, ರಾಧಾಕೃಷ್ಣ, ವಿಜಯ್, ಜಗದೀಶ್, ಯಶೋದ ಸುರೇಶ್, ನಾಗಲಕ್ಷ್ಮಿ, ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಜಯನಾರಾಯಣ, ಮಂಜುನಾಥ್ ಸೇರಿದಂತೆ ಶಾಲೆಯ ವಿದ್ಯಾರ್ಥಿಗಳ ಪೋಷಕರು, ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.

Continue Reading
Advertisement
HD Deve gowda prajwal revanna case
ಪ್ರಮುಖ ಸುದ್ದಿ3 mins ago

‌Prajwal Revanna Case: ಜೀವನದಲ್ಲಿ ಮೊದಲ ಬಾರಿಗೆ ಗಡ್ಡ ಬಿಟ್ಟ ದೇವೇಗೌಡರು; ವೈರಿನಾಶಕ್ಕೆ ಶಪಥ!

Thailand Open
ಕ್ರೀಡೆ30 mins ago

Thailand Open 2024: ಇಂದಿನಿಂದ ಥಾಯ್ಲೆಂಡ್‌ ಓಪನ್‌ ಟೂರ್ನಿ; ಚಿರಾಗ್‌-ಸಾತ್ವಿಕ್‌ ಜೋಡಿ ಮೇಲೆ ಪದಕ ಭರವಸೆ

US Sanction
ವಿದೇಶ35 mins ago

US sanction: ಇರಾನ್‌ ಜೊತೆ ವ್ಯಾಪಾರ ಒಪ್ಪಂದ ಬೇಡ; ಭಾರತಕ್ಕೆ ನಿರ್ಬಂಧದ ಎಚ್ಚರಿಕೆ ಕೊಟ್ಟ ಅಮೆರಿಕ

Prajwal Revanna Case Devaraje Gowda
ಕ್ರೈಂ53 mins ago

Prajwal Revanna Case: ವಕೀಲ ದೇವರಾಜೇಗೌಡ ಇಂದು ಪೊಲೀಸ್‌ ಕಸ್ಟಡಿಗೆ

Federation Cup
ಕ್ರೀಡೆ60 mins ago

Federation Cup: ಫೆಡರೇಷನ್ ಕಪ್‌ ಫೈನಲ್​ನಲ್ಲಿ ಕಣಕ್ಕಿಳಿಯಲು ಸಜ್ಜಾದ ನೀರಜ್ ಚೋಪ್ರಾ

Israel-Hamas Conflict
ವಿದೇಶ1 hour ago

Israel-Hamas Conflict: ಗಾಜಾದಲ್ಲಿ ಭಾರತೀಯ ಮೂಲದ ವಿಶ್ವಸಂಸ್ಥೆ ಸಿಬ್ಬಂದಿ ಸಾವು

IPL 2024 Points Table
ಕ್ರೀಡೆ1 hour ago

IPL 2024 Points Table: ಟೂರ್ನಿಯಿಂದ ಹೊರಬಿದ್ದ ಗುಜರಾತ್​ ಟೈಟಾನ್ಸ್​

jayanagar murder case
ಕ್ರೈಂ1 hour ago

Murder Case: ರಸ್ತೆ ಬದಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ‌ ಕಲ್ಲು ಎತ್ತಿ ಹಾಕಿ ಕೊಲೆ

Viral News
ದೇಶ2 hours ago

Viral News: 100 ದಿನ..200ಕ್ಕೂ ಹೆಚ್ಚು ವಿಮಾನಗಳು.. ಮಹಿಳಾ ಪ್ರಯಾಣಿಕರೇ ಈತನ ಟಾರ್ಗೆಟ್‌, ಇದು ಹೈಟೆಕ್‌ ಕಳ್ಳನ ಕಥೆ

HD Revanna Bail
ಪ್ರಮುಖ ಸುದ್ದಿ2 hours ago

HD Revanna Bail: ನಿನ್ನೆ ಜಾಮೀನು ಸಿಕ್ಕರೂ ಇಂದು ಸಂಜೆಯವರೆಗೆ ರೇವಣ್ಣ ಜೈಲಿನಲ್ಲಿರಬೇಕು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ5 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ15 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ16 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ16 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ16 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ17 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ23 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ1 day ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ1 day ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ2 days ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

ಟ್ರೆಂಡಿಂಗ್‌