Pralhad Joshi: 17ನೇ ಲೋಕಸಭೆಯಲ್ಲಿ 221 ವಿಧೇಯಕ ಅಂಗೀಕಾರ ಎಂದ ಪ್ರಲ್ಹಾದ್ ಜೋಶಿ - Vistara News

ದೇಶ

Pralhad Joshi: 17ನೇ ಲೋಕಸಭೆಯಲ್ಲಿ 221 ವಿಧೇಯಕ ಅಂಗೀಕಾರ ಎಂದ ಪ್ರಲ್ಹಾದ್ ಜೋಶಿ

Pralhad Joshi: 17ನೇ ಲೋಕಸಭೆಯ ಕೊನೆಯ ಅಧಿವೇಶನ ಶನಿವಾರ ಮುಕ್ತಾಯವಾಗಿದ್ದು, ಐದು ವರ್ಷಗಳ ಕಾಲದ ಸಂಸದೀಯ ವ್ಯವಹಾರಗಳ ಬಗ್ಗೆ ಸಚಿವರು ಮಾಹಿತಿ ನೀಡಿದ್ದಾರೆ.

VISTARANEWS.COM


on

Total 221 bills approved by 17th Lok Sabha Says Pralhad Joshi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಹದಿನೇಳನೇ ಲೋಕಸಭೆ (17th Lok Sabha) ಅವಧಿಯಲ್ಲಿ ಉಭಯ ಸದನಗಳಲ್ಲಿ (Parliament) ಐದು ವರ್ಷಗಳ ಕಾಲ ಒಟ್ಟು 221 ವಿಧೇಯಕಗಳನ್ನು (221 Bills Passed) ಅಂಗೀಕರಿಸಲಾಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ(Union Minister Pralhad Joshi).

17ನೇ ಲೋಕಸಭೆ ಕೊನೆಯ ಅಧಿವೇಶನದ ಕಡೆ ದಿನವಾದ ಶನಿವಾರ ಸಂಸತ್ ಕಲಾಪದಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿರುವ ಪ್ರಲ್ಹಾದ್ ಜೋಶಿ ಅವರು, 5 ವರ್ಷಗಳಲ್ಲಿ 545 ಸಭೆಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದು ಹೇಳಿದ್ದಾರೆ.

5 ವರ್ಷಗಳ ಕಾಲ ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವದಲ್ಲಿ ಸಂಸದೀಯ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸುವ ಸುಯೋಗಕ್ಕಾಗಿ ಕೃತಜ್ಞನಾಗಿರುತ್ತೇನೆ ಎಂದಿದ್ದಾರೆ.

ಕಳೆದ 5 ವರ್ಷಗಳಲ್ಲಿ ಉಭಯ ಸದನಗಳ ವ್ಯವಹಾರಕ್ಕೆ ಕೊಡುಗೆ ನೀಡಿ, 545 ಸಭೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ ಪ್ರತಿಯೊಬ್ಬ ಸದಸ್ಯರು ಮತ್ತು ರಾಜಕೀಯ ಪಕ್ಷಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ ಜೋಶಿ.

ಉಭಯ ಸದನಗಳಿಂದ ಒಟ್ಟು 221 ಮಸೂದೆಗಳು ಅಂಗೀಕರಿಸಲ್ಪಟ್ಟವು ಮತ್ತು ಕಾಯಿದೆಗಳಾಗಿ ಮಾರ್ಪಟ್ಟಿವೆ ಎಂದು ಸಂಸದೀಯ ಸಚಿವ ಜೋಶಿ ವಿವರಿಸಿದ್ದಾರೆ.

17 ನೇ ಲೋಕಸಭೆಯ ಉತ್ಪಾದಕತೆ 97% ಆಗಿದೆ. ಈ ಸಭೆಯನ್ನು ಮುಕ್ತಾಯಗೊಳಿಸುತ್ತಿದ್ದಂತೆ, 100% ಕ್ಕಿಂತ ಹೆಚ್ಚು ಉತ್ಪಾದಕತೆಯನ್ನು ಸಾಧಿಸುವ ಸಂಕಲ್ಪದೊಂದಿಗೆ ನಾವು 18ನೇ ಲೋಕಸಭೆಗೆ ಪ್ರವೇಶಿಸುತ್ತೇವೆ ಎಂಬ ವಿಶ್ವಾಸವನ್ನು ಪ್ರಧಾನಿ ನರೇಂದ್ರ ಮೋದಿ ವ್ಯಕ್ತಪಡಿಸಿದ್ದಾರೆ ಎಂದಿದ್ದಾರೆ ಸಚಿವ ಜೋಶಿ.

PM Narendra Modi: ಲೋಕಸಭೆಯಲ್ಲಿ ನಮೋ ‘ರಾಮ’ಸ್ಮರಣೆ; ಪ್ರತಿಪಕ್ಷಗಳಿಗೆ ಚಾಟಿ

17ನೇ ಲೋಕಸಭೆಯ (17th Lok Sabha Session) ಕೊನೆಯ ಅಧಿವೇಶನದದ ಕಡೇ ದಿನವಾದ ಶನಿವಾರ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅಯೋಧ್ಯೆ ರಾಮಮಂದಿರ (Ayodhya Ram Mandir) ಸೇರಿದಂತೆ ಹಲವು ವಿಚಾರಗಳ ಬಗ್ಗೆ ಲೋಕಸಭೆಯಲ್ಲಿ ಮನಬಿಚ್ಚಿ ಮಾತನಾಡಿದರು. ರಾಮಮಂದಿರದಿಂದ ಹೊಸ ಸಂವೇದನೆ ಸೃಷ್ಟಿಯಾಗಿದೆ. ಮಂದಿರದ ಹಿಂದೆ ಸಬ್‌ ಕಾ ಸಾಥ್‌, ಸಬ್ ಕಾ ವಿಕಾಸ್‌ ದೂರದೃಷ್ಟಿಯೂ ಇದೆ ಎಂದು ಬಣ್ಣಿಸಿದರು. ರಾಮಮಂದಿರದ ಬಗ್ಗೆ ಎಲ್ಲರೂ ಧೈರ್ಯ ತೋರಲಿಲ್ಲ ಅನ್ನೋ ಮೂಲಕ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ (Pran Pratashta) ಬಹಿಷ್ಕರಿಸಿದ ಪ್ರತಿಪಕ್ಷದ (Congress Party) ನಾಯಕರಿಗೂ ಚಾಟಿ ಬೀಸಿದರು. ಜತೆಗೆ ಸಂಸತ್‌‌ನಲ್ಲಿ ಸೆಂಗೋಲ್ ಪ್ರತಿಷ್ಠಾಪನೆ, ಭಾರತಕ್ಕೆ ಜಿ20 ಅಧ್ಯಕ್ಷತೆಯ ಅವಕಾಶ ಸಿಕ್ಕಿದ್ದು, ಸಂಸತ್ತು ಪೇಪರ್‌ಲೆಸ್‌ ಆಗಿದ್ದು, ಮುಂದಿನ 25 ವರ್ಷದಲ್ಲಿ ವಿಕಸಿತ ಭಾರತ ನಿರ್ಮಿಸುವ ಸಂಕಲ್ಪದ ನೆನಪನ್ನು ಮೋದಿ ಮೆಲಕು ಹಾಕಿದ್ದು ವಿಶೇಷ.

ಮುಂದಿನ ಪೀಳಿಗೆ ರಾಮಮಂದಿರದ ಬಗ್ಗೆ ನೆನೆಯುತ್ತದೆ. ರಾಮಮಂದಿರದ ಬಗ್ಗೆ ಎಲ್ಲರೂ ಸೂಕ್ತ ಧೈರ್ಯ ತೋರಿಲ್ಲ. ಯುದ್ಧಭೂಮಿಯಿಂದಲೇ ಓಡುವ ಪ್ರವೃತ್ತಿ ತೋರಿದ್ದಾರೆ ಎಂದ ಮೋದಿ ಹೇಳಿದರು. ಯಾವ ಪಕ್ಷ, ವ್ಯಕ್ತಿ ಹೆಸರು ಹೇಳದೆ ಕಾಂಗ್ರೆಸ್‌ಗೆ ಮೋದಿ ಅವರು ಟಾಂಗ್ ನೀಡಿದರು. ಆದರೆ ನಮಗೆ ಸಂವೇದನೆ, ಸಂಕಲ್ಪ, ಸಹಾನುಭೂತಿ ಇದೆ. ಯಸ್ವಿಯಾಗಿ ಸದನ ನಡೆಸಿದ ಸ್ಪೀಕರ್‌‌ಗೆ ಸೆಲ್ಯೂಟ್‌. ದೇಶಕ್ಕೆ ಒಂದೇ ಸಂವಿಧಾನ ಇರಬೇಕೆಂಬ ನಿರೀಕ್ಷೆ ಸಾಬೀತಾಗಿದೆ ಎಂದು ಮೋದಿ ಹೇಳಿದರು.

ಮಂಗಳಮುಖಿ ಸಮುದಾಯವು ಯಾವಾಗಲೂ ಅಗೌರವವನ್ನು ಅನುಭವಿಸುತ್ತಿತ್ತು. 17 ನೇ ಲೋಕಸಭೆಯ ಸದಸ್ಯರು ಅವರ ಬಗ್ಗೆ ಕಳವಳ ವ್ಯಕ್ತಪಡಿಸಿದರು ಮತ್ತು ಅವರಿಗೆ ಉತ್ತಮ ಜೀವನವನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸಿದರು. ಭಾರತವು ಮಂಗಳಮುಖಿಯರಿಗಾಗಿ ಏನು ಮಾಡಿದೆ ಎಂದು ಜಗತ್ತು ಚರ್ಚಿಸುತ್ತದೆ. ನಾವು ತೃತೀಯಲಿಂಗಿಗಳಿಗೆ ಅಸ್ತಿತ್ವವನ್ನು ನೀಡಿದ್ದೇವೆ, ಅವರನ್ನುಗುರುತಿಸಿದ್ದೇವೆ. ತೃತೀಯಲಿಂಗಿ ಸಮುದಾಯಕ್ಕೆ 16,000-17,000 ಗುರುತಿನ ಚೀಟಿಗಳನ್ನು ನೀಡಲಾಗಿದೆ. ಪದ್ಮ ಪ್ರಶಸ್ತಿಗಳ ಮೂಲಕ ಅವರನ್ನು ಸನ್ಮಾನಿಸಿದ್ದೇವೆ (Padma Awards) ಎಂದು ಪ್ರಧಾನಿ ಮೋದಿ ಅವರು ಹೇಳಿದರು.

ತೃತೀಯಲಿಂಗಿ ಸಮುದಾಯದ ಜನರು ಮುದ್ರಾ ಯೋಜನೆಯಡಿ ಸಾಲ ಪಡೆದು ವ್ಯಾಪಾರ ಆರಂಭಿಸಿದ್ದಾರೆ ಎಂದು ಪ್ರಧಾನಿ ಮೋದಿ ತಿಳಿಸಿದರು. “ನಾವು ತೃತೀಯಲಿಂಗಿಗಳಿಗೆ ಪದ್ಮ ಪ್ರಶಸ್ತಿಗಳನ್ನು ನೀಡಿದ್ದೇವೆ. ಅವರು ಮೊದಲು ಮಾಡದ ವಿವಿಧ ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಲಾರಂಭಿಸಿದ್ದಾರೆ. ಅವರು ಈಗ ಗೌರವದ ಜೀವನ ನಡೆಸುತ್ತಿದ್ದಾರೆ” ಎಂದು ಅವರು ಹೇಳಿದರು. 2019ರಲ್ಲಿ ನರ್ತಕಿ ನಟರಾಜ ಅವರು ಪದ್ಮ ಪ್ರಶಸ್ತಿ ಪಡೆದ ಮೊದಲ ತೃತೀಯಲಿಂಗಿಯಾಗಿದ್ದಾರೆ. ಕರ್ನಾಟಕದವರೇ ಆದ ಮಂಜಮ್ಮ ಜೋಗತಿ ಅವರೂ ಪದ್ಮ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.

ಈ ಸುದ್ದಿಯನ್ನೂ ಓದಿ: PM Narendra Modi: ಲೋಕಸಭೆಯಲ್ಲಿ ನಮೋ ‘ರಾಮ’ಸ್ಮರಣೆ; ಪ್ರತಿಪಕ್ಷಗಳಿಗೆ ಚಾಟಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Arvind Kejriwal: ಮಧ್ಯಂತರ ಜಾಮೀನು ಅವಧಿ ಮುಗಿದು ಜೈಲಿಗೆ ಮರಳಿದ ಅರವಿಂದ್‌ ಕೇಜ್ರಿವಾಲ್‌; ಜೂ. 5ರ ತನಕ ನ್ಯಾಯಾಂಗ ಬಂಧನ

Arvind Kejriwal: ದಿಲ್ಲಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಹಗರಣದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಮಧ್ಯಂತರ ಜಾಮೀನು ಅವಧಿ ಪೂರ್ಣಗೊಂಡಿದ್ದು, ಇಂದು (ಜೂ. 2) ಅವರು ತಿಹಾರ್‌ ಜೈಲಿಗೆ ಮರಳಿದ್ದಾರೆ. ದೆಹಲಿಯ ರೂಸ್ ಅವೆನ್ಯೂ ಕೋರ್ಟ್‌ ಜಾಮೀನು ಅರ್ಜಿಯ ವಿಚಾರಣೆ ನಡೆಸಿ ಜೂನ್ 5ರಂದು ತೀರ್ಪು ಪ್ರಕಟಿಸುವುದಾಗಿ ಹೇಳಿದೆ.

VISTARANEWS.COM


on

Arvind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಹಗರಣದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರ ಮಧ್ಯಂತರ ಜಾಮೀನು ಅವಧಿ ಪೂರ್ಣಗೊಂಡಿದ್ದು, ಇಂದು (ಜೂ. 2) ಅವರು ತಿಹಾರ್‌ ಜೈಲಿಗೆ ಮರಳಿದ್ದಾರೆ. ಈ ಹಿಂದೆ ದೆಹಲಿಯ ರೋಸ್‌ ಅವನ್ಯೂ ಕೋರ್ಟ್‌ ಜೂನ್‌ 5ರ ತನಕ ದೆಹಲಿ ಮುಖ್ಯಮಂತ್ರಿಗೆ ಜೈಲು ಶಿಕ್ಷೆ ವಿಧಿಸಿತ್ತು. ಲೋಕಸಭಾ ಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲು ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಕೋರ್ಟ್‌ ಮೇ 10ರಂದು ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. 

21 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ಕೇಜ್ರಿವಾಲ್‌ ಶರಣಾದರು. ಶರಣಾದ ಕೇಜ್ರಿವಾಲ್ ಅವರನ್ನು ವರ್ಚುವಲ್ ಕಾನ್ಫರೆನ್ಸ್ ಮೂಲಕ ಮ್ಯಾಜಿಸ್ಟ್ರೇಟ್ ಸಂಜೀವ್ ಅಗರ್ವಾಲ್ ಅವರ ಮುಂದೆ ಹಾಜರುಪಡಿಸಲಾಯಿತು.

ಮೇ 20ರಂದು ಜಾರಿ ನಿರ್ದೇಶನಾಲಯ (Enforcement Directorate)ದ ಅಧಿಕಾರಿಗಳು ಕೋರ್ಟ್‌ ಮೆಟ್ಟಿಲೇರಿ ವಿಚಾರಣೆಗಾಗಿ ಕೇಜ್ರಿವಾಲ್‌ ಅವರನ್ನು ಇನ್ನೂ 14 ದಿನ ತಮ್ಮ ವಶಕ್ಕೆ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಅರವಿಂದ್ ಕೇಜ್ರಿವಾಲ್ ಅವರ ವಕೀಲರಾದ ರಿಷಿಕೇಶ್ ಕುಮಾರ್ ಮತ್ತು ವಿವೇಕ್ ಜೈನ್ ವಿರೋಧ ವ್ಯಕ್ತಪಡಿಸಿದ್ದರು. ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸುವ ಮೊದಲು ಕೇಜ್ರಿವಾಲ್ ಶರಣಾಗಬೇಕಾಗುತ್ತದೆ ಎಂದು ಇ.ಡಿ. ಹೇಳಿತ್ತು. ಅದರಂತೆ ಅವರು ಇದೀಗ ಜೈಲಿಗೆ ಮರಳಿದ್ದು, ರೂಸ್ ಅವೆನ್ಯೂ ಕೋರ್ಟ್‌ ಜಾಮೀನು ಅರ್ಜಿಯ ವಿಚಾರಣೆ ನಡೆಸಿ ಜೂನ್ 5ರಂದು ತೀರ್ಪು ಪ್ರಕಟಿಸುವುದಾಗಿ ಹೇಳಿದೆ.

ಶರಣಾಗುವ ಮುನ್ನ ದೆಹಲಿ ಸಿಎಂ ಹೇಳಿದ್ದೇನು?

ಇಂದು ತಿಹಾರ್‌ ಜೈಲಿಗೆ ತೆರಳುವ ಮುನ್ನ ಕೇಜ್ರಿವಾಲ್‌ ಹನುಮಂತನ ದೇಗುಲ, ಗಾಂಧಿ ಸ್ಮಾರಕ ಮತ್ತು ಆಪ್ ಕಚೇರಿಗೆ ಭೇಟಿ ನೀಡಿದ್ದರು. ಬಳಿಕ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ʼʼಜಾಮೀನಿನ ಮೂಲಕ ಹೊರಗಡೆ ಬಂದ ನಾನು ಈ 21 ದಿನದಲ್ಲಿ ಒಂದು ನಿಮಿಷವನ್ನೂ ವ್ಯರ್ಥವಾಗಿ ಕಳೆದಿಲ್ಲ. ನಮ್ಮ ಎಲ್ಲ ಮಿತ್ರ ಪಕ್ಷಗಳಿಗಾಗಿ ಪ್ರಚಾರ ನಡೆಸಿದೆ. ದೇಶವನ್ನು ಉಳಿಸಲು ಹೋರಾಟ ನಡೆಸಿದೆ. ನನಗೆ ಆಮ್‌ ಆದ್ಮಿ ಪಾರ್ಟಿಗಿಂತ ದೇಶ ಮೊದಲುʼʼ ಎಂದು ಹೇಳಿದರು. ಜತೆಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸರ್ವಾಧಿಕಾರ ಧೋರಣೆ ಹೊಂದಿದೆ ಎಂದೂ ಆರೋಪಿಸಿದರು.

ಇದನ್ನೂ ಓದಿ: Arvind Kejriwal: ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌ ಇಂದು ಮತ್ತೆ ತಿಹಾರ್‌ ಜೈಲಿಗೆ

ಪ್ರಕರಣದ ಹಿನ್ನೆಲೆ

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಅರವಿಂದ್‌ ಕೇಜ್ರಿವಾಲ್‌ ಮಾತ್ರವಲ್ಲ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರನ್ನೂ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್​ ಅವರಿಗೆ ಇ.ಡಿ. 9 ಬಾರಿ ನೋಟಿಸ್ ಜಾರಿ ಮಾಡಿತ್ತು. ಬಳಿಕ ಮಾರ್ಚ್​ 21ರಂದು ಅವರನ್ನು ಬಂಧಿಸಲಾಗಿತ್ತು.

Continue Reading

ದೇಶ

Bangalore North Lok Sabha Constituency : ಕ್ಷೇತ್ರ ಬದಲಾಯಿಸಿದ ಶೋಭಾ ಕರಂದ್ಲಾಜೆಗೆ ಒಲಿಯವುದೇ ಬೆಂಗಳೂರು ಉತ್ತರ

Bangalore North Lok Sabha Constituency:ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಎರಡು ಬಾರಿ ಸಂಸದೆ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇದ್ದಾರೆ. ಅವರು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸತತವಾಗಿ ಗೆದ್ದಿದ್ದಾರೆ. ಬಿಜೆಪಿಯಿಂದ ಪ್ರತಿಷ್ಠಿತ ಸ್ಥಾನವನ್ನು ಕಸಿದುಕೊಳ್ಳುವ ಪ್ರಯತ್ನದಲ್ಲಿ ಕಾಂಗ್ರೆಸ್ ತನ್ನ ರಾಷ್ಟ್ರೀಯ ವಕ್ತಾರ ಮತ್ತು ಮಾಜಿ ರಾಜ್ಯಸಭಾ ಸಂಸದ ರಾಜೀವ್ ಗೌಡ ಅವರನ್ನು ಕಣಕ್ಕಿಳಿಸಿದೆ.

VISTARANEWS.COM


on

Bangalore North Lok Sabha Constituency
Koo

ಬೆಂಗಳೂರು: 1962ರಲ್ಲಿ ಕ್ಷೇತ್ರ ಮರುವಿಂಗಡಣೆಯಾಗುವ ಮೊದಲು ಬೆಂಗಳೂರು ಉತ್ತರ ಕ್ಷೇತ್ರ ಬೆಂಗಳೂರು ನಗರ ಕ್ಷೇತ್ರದ ವ್ಯಾಪ್ತಿಯಲ್ಲಿದೆ. 1957 ರಿಂದ 1962ರವರೆಗೆ ಬೆಂಗಳೂರು ಉತ್ತರ ಬೆಂಗಳೂರು ನಗರ ಕ್ಷೇತ್ರದ ಭಾಗವಾಗಿತ್ತು. 1951ರಲ್ಲಿ ಈ ಕ್ಷೇತ್ರದಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕೇಶವ್ ಲಿಂಗಾರ್ ಗೆದ್ದರು. ಅಂದಿನಿಂದ 1996 ರವರೆಗೆ 45 ವರ್ಷಗಳ ಕಾಲ, ಕಾಂಗ್ರೆಸ್ ಪಕ್ಷ ಸತತವಾಗಿ ತನ್ನದಾಗಿಸಿಕೊಂಡಿತ್ತು. 1996ರಲ್ಲಿ ಜನತಾದಳದ ಸಿ. ನಾರಾಯಣಸ್ವಾಮಿ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ನಂತರ, ಬಿಜೆಪಿ ಇಲ್ಲಿ ಗೆಲ್ಲಲು ಪ್ರಾರಂಭಿಸಿತು. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಈವರೆಗೆ ನಡೆದ 17 ಚುನಾವಣೆಗಳಲ್ಲಿ ಕಾಂಗ್ರೆಸ್ 12 ಬಾರಿ ಗೆಲುವು ಸಾಧಿಸಿದೆ. ಆದಾಗ್ಯೂ ಇತ್ತೀಚಿನ ಕೆಲವು ವರ್ಷಗಳಲ್ಲಿ ಅಲ್ಲಿ ಬಿಜೆಪಿ ಪ್ರಭಾವ ಹೆಚ್ಚಿದೆ.

ಕಳೆದ ನಾಲ್ಕು ಚುನಾವಣೆಗಳಲ್ಲಿ ಬಿಜೆಪಿ ಸತತವಾಗಿ ಗೆಲ್ಲುತ್ತಿದೆ. ಈ ಸ್ಥಾನದಲ್ಲಿ ಜನತಾದಳ ಕೂಡ ಒಮ್ಮೆ ಗೆದ್ದಿದೆ. ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಸಿ.ಕೆ.ಜಾಫರ್ ಷರೀಫ್ ಈ ಕ್ಷೇತ್ರದಿಂದ ಅತಿ ಹೆಚ್ಚು ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. 1977-96 ರ ನಡುವೆ ಸತತ ಐದು ಗೆಲುವುಗಳು ಸೇರಿದಂತೆ ಏಳು ಬಾರಿ ಗೆದ್ದಿದ್ದರು. ಈ ಸ್ಥಾನವು ರಾಜ್ಯದ ಅತಿದೊಡ್ಡ ಮತ್ತು ದೇಶದ ಮೂರನೇ ಅತಿದೊಡ್ಡ ಲೋಕಸಭಾ ಸ್ಥಾನವಾಗಿದೆ.

ಕಣದಲ್ಲಿ ಇರುವವರು ಯಾರು?

ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಎರಡು ಬಾರಿ ಸಂಸದೆ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇದ್ದಾರೆ. ಅವರು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸತತವಾಗಿ ಗೆದ್ದು ಇ ಬಾರಿ ಇಲ್ಲಿಂದ ಟಿಕೆಟ್​ ಗಿಟ್ಟಿಸಿದ್ದಾರೆ. ಬಿಜೆಪಿಯಿಂದ ಈ ಪ್ರತಿಷ್ಠಿತ ಸ್ಥಾನವನ್ನು ಕಸಿದುಕೊಳ್ಳುವ ಪ್ರಯತ್ನದಲ್ಲಿ ಕಾಂಗ್ರೆಸ್ ತನ್ನ ರಾಷ್ಟ್ರೀಯ ವಕ್ತಾರ ಮತ್ತು ಮಾಜಿ ರಾಜ್ಯಸಭಾ ಸಂಸದ ರಾಜೀವ್ ಗೌಡ ಅವರನ್ನು ಕಣಕ್ಕಿಳಿಸಿದೆ.

ಭಾರತದ ಚುನಾವಣಾ ಆಯೋಗದ ಪ್ರಕಾರ 2019 ರ ಚುನಾವಣೆಯಲ್ಲಿ ಒಟ್ಟು ಮತದಾರರ ಸಂಖ್ಯೆ 28,49,250. 2019ರಲ್ಲಿ ಶೇ.54.6ರಷ್ಟು ಮತದಾನವಾಗಿತ್ತು. 2011 ರ ಜನಗಣತಿಯ ಅಂಕಿಅಂಶಗಳ ಪ್ರಕಾರ ನಗರ ಮತದಾರರು ಒಟ್ಟು ಮತದಾರರಲ್ಲಿ ಸುಮಾರು 92% ರಷ್ಟಿದ್ದಾರೆ. ಕ್ಷೇತ್ರದ ಸರಾಸರಿ ಸಾಕ್ಷರತಾ ಪ್ರಮಾಣವು ಸುಮಾರು 78% ರಷ್ಟಿತ್ತು. ಎಸ್ಸಿ ಮತದಾರರು ಮತದಾರರಲ್ಲಿ ಸುಮಾರು 11% ರಷ್ಟಿದ್ದಾರೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೆ.ಆರ್.ಪುರ, ಬ್ಯಾಟರಾಯನಪುರ, ಯಶವಂತಪುರ, ದಾಸರಹಳ್ಳಿ, ಮಹಾಲಕ್ಷ್ಮಿ ಲೇಔಟ್, ಮಲ್ಲೇಶ್ವರಂ, ಹೆಬ್ಬಾಳ ಮತ್ತು ಪುಲಕೇಶಿನಗರ ವಿಧಾನಸಭಾ ಕ್ಷೇತ್ರಗಳಿವೆ. ಈ ಪೈಕಿ ಬಿಜೆಪಿ 5 ಸ್ಥಾನಗಳನ್ನು ಹೊಂದಿದ್ದರೆ, ಕಾಂಗ್ರೆಸ್ 3 ಸ್ಥಾನಗಳನ್ನು ಹೊಂದಿದೆ.

ಹಿಂದಿನ ಚುನಾವಣಾ ಫಲಿತಾಂಶಗಳು

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಡಿ.ವಿ.ಸದಾನಂದ ಗೌಡ ಅವರು ಭಾರತೀಯ ಜನತಾ ಪಾರ್ಟಿ ಪಕ್ಷದ ಕೃಷ್ಣ ಬೈರೇಗೌಡ ಅವರನ್ನು 1,47,518 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.52.84ರಷ್ಟು ಮತಗಳನ್ನು ಪಡೆದಿತ್ತು.

ಇದನ್ನೂ ಓದಿ: Bangalore Central Election : ಮನ್ಸೂರ್ ಅಲಿ ಖಾನ್ ವಿರುದ್ಧ ಗೆದ್ದು ಅಜೇಯ ಓಟ ಮುಂದುವರಿಸುವರೇ ಪಿ. ಸಿ ಮೋಹನ್​

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಡಿ.ವಿ.ಸದಾನಂದ ಗೌಡ ಅವರು ಕಾಂಗ್ರೆಸ್​​ನ ಸಿ.ನಾರಾಯಣ ಸ್ವಾಮಿ ಅವರನ್ನು 2,29,764 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.52.95ರಷ್ಟು ಮತಗಳನ್ನು ಗಳಿಸಿತ್ತು.

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಡಿ .ಬಿ.ಚಂದ್ರೇಗೌಡ ಅವರು ಕಾಂಗ್ರೆಸ್​​ನ ಸಿ.ಕೆ.ಜಾಫರ್ ಷರೀಫ್ ಅವರನ್ನು 59,665 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.45.21ರಷ್ಟು ಮತಗಳನ್ನು ಪಡೆದಿತ್ತು.

ಮತದಾನ ದಿನಾಂಕ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 26, 2024 ರಂದು ಎರಡನೇ ಹಂತದ ಮತದಾನ ನಡೆಯಿತು. ಜೂನ್ 4, 2024 ರಂದು ಮತ ಎಣಿಕೆ ನಡೆಯಲಿದೆ.

Continue Reading

ವಾಣಿಜ್ಯ

Exit Polls: ಚುನಾವಣೋತ್ತರ ಸಮೀಕ್ಷೆ ಪ್ರಕಟವಾದ ಬೆನ್ನಲ್ಲೇ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಜಿಗಿತ ಸಾಧ್ಯತೆ

Exit Polls: ಲೋಕಸಭಾ ಚುನಾವಣೆಯ ಎಲ್ಲ ಹಂತಗಳ ಮತದಾನ ಮುಗಿದಿದ್ದು, ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದೆ. ಇದರಲ್ಲಿ ಎನ್‌ಡಿಎಗೆ ಬಹುಮತ ದೊರೆಯುವ ಸಾಧ್ಯತೆ ಇದೆ ಎನ್ನುವ ಅಂಶ ಕಂಡು ಬಂದಿದ್ದು, ಭಾರತೀಯ ಷೇರುಗಳು, ಬಾಂಡ್‌ಗಳು ಮತ್ತು ರೂಪಾಯಿ ಮೌಲ್ಯ ಸೋಮವಾರ ಏರಿಕೆಯಾಗಲಿದೆ ಎಂದು ಆರ್ಥಿಕ ತಜ್ಞರು ಊಹಿಸಿದ್ದಾರೆ.

VISTARANEWS.COM


on

Exit Polls
Koo

ಮುಂಬೈ: ಬಹು ನಿರೀಕ್ಷಿತ ಲೋಕಸಭಾ ಚುನಾವಣೆ (Lok Sabha Election 2024)ಯ 7 ಹಂತಗಳ ಮತದಾನ ಪೂರ್ಣಗೊಂಡಿದೆ. ಶನಿವಾರ (ಜೂನ್‌ 1) ಚುನಾವಣೋತ್ತರ ಸಮೀಕ್ಷೆ (Exit Polls) ಪ್ರಕಟವಾಗಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ. ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ ಹುದ್ದೆಗೆ ಏರುವುದು ಬಹುತೇಕ ಖಚಿತವಾಗಿದ್ದು, ಈ ಹಿನ್ನೆಲೆಯಲ್ಲಿ ಭಾರತೀಯ ಷೇರುಗಳು, ಬಾಂಡ್‌ಗಳು ಮತ್ತು ರೂಪಾಯಿ ಮೌಲ್ಯ ಸೋಮವಾರ ಏರಿಕೆಯಾಗಲಿದೆ ಎಂದು ಆರ್ಥಿಕ ತಜ್ಞರು ಊಹಿಸಿದ್ದಾರೆ.

ಸಂಸತ್ತಿನಲ್ಲಿ ಬಹುಮತಕ್ಕೆ ಅಗತ್ಯವಾದ 272 ಸೀಟನ್ನು ಬಿಜೆಪಿ ನೇತೃತ್ವದ ಎನ್‌ಡಿಎ ಸುಲಭವಾಗಿ ಪಡೆದುಕೊಳ್ಳಲಿದೆ ಎಂದು ಬಹುತೇಕ ಎಲ್ಲ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಫಲಿತಾಂಶ ಮಂಗಳವಾರ (ಜೂನ್‌ 4) ಪ್ರಕಟವಾಗಲಿದೆ. ಕಡಿಮೆ ಮತದಾನದ ಪ್ರಮಾಣ ಮತ್ತು ಹಲವಾರು ರಾಜ್ಯಗಳಲ್ಲಿ ಬಿಗಿಯಾದ ಸ್ಪರ್ಧೆಗಳಿಂದಾಗಿ ಪ್ರಧಾನಿ ಮೋದಿ ಅವರ ಮಹತ್ವಾಕಾಂಕ್ಷೆಯ 400 ಸ್ಥಾನಗಳ ಗುರಿಯನ್ನು ತಲುಪಲು ಬಿಜೆಪಿ ವಿಫಲವಾಗಬಹುದು ಎಂಬ ಆತಂಕದಿಂದ ಇತ್ತೀಚಿನ ಷೇರು ಮಾರುಕಟ್ಟೆ ಚಂಚಲತೆಯಿಂದ ಕೂಡಿತ್ತು. ಇದುವ ಹೂಡಿಕೆದಾರರನ್ನು ಆತಂಕಕ್ಕೆ ತಳ್ಳಿತ್ತು. ಸದ್ಯ ಚುನಾವಣೋತ್ತರ ಸಮೀಕ್ಷೆಯಿಂದ ಷೇರು ಮಾರುಕಟ್ಟೆಯಲ್ಲಿ ಜಿಗಿತ ಕಂಡು ಬರುವ ಸಾಧ್ಯತೆ ಇದೆ.

“ಫಲಿತಾಂಶದ ಬಗ್ಗೆ ಕೆಲವು ಸಂದೇಹಗಳು ಇದ್ದವು. ಈ ಬಗ್ಗೆ ಕೆಲವರು ಆತಂಕಕ್ಕೊಳಗಾಗಿದ್ದರಿಂದ ಷೇರು ಮಾರುಕಟ್ಟೆಯಲ್ಲಿ ಚಂಚಲತೆ ಹೆಚ್ಚಾಗಿತ್ತು. ಚುನಾವಣೋತ್ತರ ಸಮೀಕ್ಷೆಯಿಂದ ಆತಂಕ ನಿವಾರಣೆಯಾಗಿದೆ. ಹೀಗಾಗಿ ಮಾರುಕಟ್ಟೆಗಳು ಸೋಮವಾರ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಬಹುದುʼʼ ಎಂದು ಮುಂಬೈಯ ಡಿಎಸ್‌ಪಿ ಮ್ಯೂಚುವಲ್ ಫಂಡ್‌ನ ಈಕ್ವಿಟಿಗಳ ಮುಖ್ಯಸ್ಥ ವಿನೀತ್ ಸಾಂಬ್ರೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಂತಿಮ ಫಲಿತಾಂಶಗಳು ಚುನಾವಣೋತ್ತರ ಸಮೀಕ್ಷೆಗಳಿಗಿಂತ ಭಿನ್ನವಾಗಿದ್ದರೂ, ಎನ್‌ಡಿಎ ಒಕ್ಕೂಟಕ್ಕೆ ಗೆಲುವು ನಿಶ್ಚಿತ ಎನ್ನಲಾಗಿದೆ. ಭಾರತೀಯ ಷೇರುಗಳು ಮೇ ತಿಂಗಳಲ್ಲಿ ದಾಖಲೆಯ ಮಟ್ಟವನ್ನು ತಲುಪಿದರೆ, ಬಾಂಡ್ ಸುಮಾರು ಒಂದು ವರ್ಷದಲ್ಲಿ ಗರಿಷ್ಠ ಮಟ್ಟದ ಹತ್ತಿರದಲ್ಲಿದೆ. ಜೂನ್ 4ರ ಫಲಿತಾಂಶ ಚುನಾವಣೋತ್ತರ ಸಮೀಕ್ಷೆಯೊಂದಿಗೆ ಹೊಂದಿಕೆಯಾದರೆ ಎನ್ಎಸ್ಇ ನಿಫ್ಟಿ 50 ಸೂಚ್ಯಂಕವು ಹೊಸ ದಾಖಲೆಯನ್ನು ತಲುಪಲಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಚುನಾವಣಾ ಫಲಿತಾಂಶಕ್ಕೆ ಮುಂಚಿತವಾಗಿ ವಿದೇಶಿ ಹೂಡಿಕೆದಾರರು ಎಚ್ಚರಿಕೆಯಿಂದ ಹೆಜ್ಜೆ ಇಟ್ಟಿದ್ದರಿಂದ ಮುಖ್ಯ ಗೇಜ್ ಕಳೆದ ವಾರ ಸುಮಾರು ಶೇ. 2ರಷ್ಟು ಕುಸಿದು 22,531ಕ್ಕೆ ತಲುಪಿದೆ.

ಇದನ್ನೂ ಓದಿ: Equity Market: ದೇಶದ ಷೇರುಪೇಟೆಯಲ್ಲಿ ಗೂಳಿ ನೆಗೆತ; 6 ತಿಂಗಳಲ್ಲಿ 1 ಲಕ್ಷ ಕೋಟಿ ಡಾಲರ್‌ ಗಳಿಕೆ!

ಕೆಲವು ದಿನಗಳ ಹಿಂದೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ʼʼಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುವ ಜೂನ್‌ 4ರ ಬಳಿಕ ಭಾರತದ ಷೇರು ಮಾರುಕಟ್ಟೆಯನ್ನು ಹಿಡಿಯಲು ಆಗುವುದಿಲ್ಲʼʼ ಎಂದು ಹೇಳಿದ್ದರು. ʼʼಜೂನ್‌ 4ರ ಬಳಿಕ ಹೂಡಿಕೆದಾರರಿಗೆ ಭಾರಿ ಲಾಭವಾಗಲಿದೆʼʼ ಎಂದು ಗೃಹ ಸಚಿವ ಅಮಿತ್‌ ಶಾ ಕೂಡ ವಿಶ್ವಾಸ ವ್ಯಕ್ತಪಡಿಸಿದ್ದರು. ಜಾಗತಿಕ ಷೇರು ಮಾರುಕಟ್ಟೆಯಲ್ಲಿ ಭಾರತದ ಷೇರುಪೇಟೆಯು ಮಹತ್ವದ ಸ್ಥಾನ ಪಡೆದಿದೆ. ಹಾಂಕಾಂಗ್‌, ಜಪಾನ್‌, ಚೀನಾ ಹಾಗೂ ಅಮೆರಿಕದ ನಂತರ ಭಾರತದ ಷೇರುಪೇಟೆಯು ಬೃಹತ್‌ ಷೇರು ಮಾರುಕಟ್ಟೆ ಎನಿಸಿದೆ. ಹೀಗಾಗಿ ಚುನಾವಣಾ ಫಲಿತಾಂಶದತ್ತ ಎಲ್ಲರ ಕಣ್ಣು ನೆಟ್ಟಿದೆ. 

Continue Reading

ದೇಶ

Arvind Kejriwal: ತಿಹಾರ್‌ ಜೈಲಿಗೆ ಮರಳಿದ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌; ಜೂ. 5ರಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ

Arvind Kejriwal: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಹಗರಣದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಮಧ್ಯಂತರ ಜಾಮೀನು ಅವಧಿ ಪೂರ್ಣಗೊಂಡಿದ್ದು, ಇಂದು (ಜೂ. 2) ಅವರು ತಿಹಾರ್‌ ಜೈಲಿಗೆ ಮರಳಿದ್ದಾರೆ.

VISTARANEWS.COM


on

Arvind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಹಗರಣದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರ ಮಧ್ಯಂತರ ಜಾಮೀನು ಅವಧಿ ಪೂರ್ಣಗೊಂಡಿದ್ದು, ಇಂದು (ಜೂ. 2) ಅವರು ತಿಹಾರ್‌ ಜೈಲಿಗೆ ಮರಳಿದ್ದಾರೆ. ಲೋಕಸಭಾ ಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲು ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಕೋರ್ಟ್‌ ಈ ಹಿಂದೆ ಮೇ 10ರಂದು ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಚುನಾವಣೆ ಪೂರ್ಣಗೊಂಡ ಮರುದಿನವೇ ಜೈಲಿಗೆ ಮರಳುವಂತೆ ಕೋರ್ಟ್‌ ಹೇಳಿತ್ತು. ಅದರಂತೆ ಅವರು 21 ದಿನಗಳ ಬಳಿಕ ಶರಣಾಗಿದ್ದಾರೆ.

ಕೇಜ್ರಿವಾಲ್‌ ಜೈಲಿಗೆ ತೆರಳುವ ಮುನ್ನ ರಾಜ್‌ ಘಾಟ್‌ನಲ್ಲಿರುವ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ಭೇಟಿ ನೀಡಿದರು. ಬಳಿಕ ಪತ್ನಿ ಸುನೀತಾ ಅವರೊಂದಿಗೆ ಹನುಮಾನ್‌ ದೇಗುಲಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ನಂತರ ಆಮ್‌ ಆದ್ಮಿ ಪಾರ್ಟಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

ಇನ್ನು ಅರವಿಂದ ಕೇಜ್ರಿವಾಲ್‌ ಅವರ ಜಾಮೀನು ಅರ್ಜಿ ವಿಚಾರಣೆ ಜೂ. 5ರಂದು ದಿಲ್ಲಿ ಕೋರ್ಟ್‌ನಲ್ಲಿ ನಡೆಯಲಿದೆ. ಶನಿವಾರ ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಅವರು, ʼʼಈ ಬಾರಿ ಅವರು ನನಗೆ ಹೆಚ್ಚು ಚಿತ್ರಹಿಂಸೆ ನೀಡುವ ಸಾಧ್ಯತೆಯಿದೆ. ಅದಕ್ಕೆ ನಾನು ತಲೆಬಾಗುವುದಿಲ್ಲ” ಎಂದು ಅವರು ಹೇಳಿದ್ದರು. ಜತೆಗೆ ʼʼದೆಹಲಿಯ ಜನರಿಗೆ ಲಭ್ಯವಿರುವ ಎಲ್ಲ ಸೌಲಭ್ಯಗಳು ಅವರ ಅನುಪಸ್ಥಿತಿಯಲ್ಲಿಯೂ ಮುಂದುವರಿಯುತ್ತವೆʼʼ ಎಂದು ಭರವಸೆ ನೀಡಿದ್ದರು.

ʼʼನೀವು ನಿಮ್ಮ ಬಗ್ಗೆ ಕಾಳಜಿ ವಹಿಸಿ, ಜೈಲಿನಲ್ಲಿ ನಿಮ್ಮ ಬಗ್ಗೆ ನಾನು ತುಂಬಾ ಚಿಂತೆ ಮಾಡುತ್ತೇನೆ. ನೀವು ಸಂತೋಷವಾಗಿದ್ದರೆ ನಿಮ್ಮ ಕೇಜ್ರಿವಾಲ್ ಕೂಡ ಸಂತೋಷವಾಗಿರುತ್ತಾರೆ. ನಾನು ಖಂಡಿತವಾಗಿಯೂ ನಿಮ್ಮ ನಡುವೆ ಇರುವುದಿಲ್ಲ, ಆದರೆ ನಿಮ್ಮ ಎಲ್ಲ ಕೆಲಸಗಳು ಮುಂದುವರಿಯುತ್ತವೆ. ಹಿಂದಿರುಗಿದ ನಂತರ ನಾನು ಪ್ರತಿ ತಾಯಿ ಮತ್ತು ಸಹೋದರಿಗೆ ಪ್ರತಿ ತಿಂಗಳು 1,000 ರೂ.ಗಳನ್ನು ನೀಡಲು ಪ್ರಾರಂಭಿಸುತ್ತೇನೆ” ಎಂದು ಕೇಜ್ರಿವಾಲ್‌ ಭಾವುಕರಾಗಿ ಹೇಳಿದ್ದರು.

ವೈದ್ಯಕೀಯ ಪರೀಕ್ಷೆಗಳಿಗಾಗಿ ಕೇಜ್ರಿವಾಲ್‌ ಅವರ ಮಧ್ಯಂತರ ಜಾಮೀನನ್ನು ಏಳು ದಿನಗಳವರೆಗೆ ವಿಸ್ತರಿಸುವ ಮನವಿಯನ್ನು ತುರ್ತಾಗಿ ಪರಿಗಣಿಸಲು ಮಾಡಲು ಸುಪ್ರೀಂ ಕೋರ್ಟ್ ರಿಜಿಸ್ಟ್ರಿ ನಿರಾಕರಿಸಿದ ನಂತರ ಅವರು ದೆಹಲಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರವಿಂದ್ ಕೇಜ್ರಿವಾಲ್ ಅವರು ವಿಚಾರಣಾ ನ್ಯಾಯಾಲಯದಿಂದ ನಿಯಮಿತ ಜಾಮೀನು ಪಡೆಯುವ ಆಯ್ಕೆಯನ್ನು ಹೊಂದಿರುವುದರಿಂದ ಅವರ ಮನವಿಯನ್ನು ನಿರ್ವಹಿಸಲಾಗುವುದಿಲ್ಲ ಎಂದು ಹೈಕೋರ್ಟ್​ ಹೇಳಿತ್ತು.

ಇದನ್ನೂ ಓದಿ: Arvind Kejriwal: ತಿಹಾರ್‌ ಜೈಲಿನಲ್ಲಿ ಅರವಿಂದ ಕೇಜ್ರಿವಾಲ್‌ ಫಸ್ಟ್‌ ನೈಟ್‌ ಹೇಗಿತ್ತು?

ಹೆಚ್ಚಿನ ಕೀಟೋನ್ ಮಟ್ಟ ಹೆಚ್ಚಳದಿಂದಾಗಿ ತೂಕ ನಷ್ಟದಿಂದಾಗಿ ಪಿಇಟಿ-ಸಿಟಿ ಸ್ಕ್ಯಾನ್ ಸೇರಿದಂತೆ ಹಲವು ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಲು ಕೇಜ್ರಿವಾಲ್ ತಮ್ಮ ಮಧ್ಯಂತರ ಜಾಮೀನು ವಿಸ್ತರಣೆ ಕೋರಿದ್ದರು. ಈ ರೋಗಲಕ್ಷಣಗಳು ಮೂತ್ರಪಿಂಡದ ಸಮಸ್ಯೆಗಳು, ಗಂಭೀರ ಹೃದಯದ ಪರಿಸ್ಥಿತಿಗಳು ಅಥವಾ ಕ್ಯಾನ್ಸರ್​ಗೆ ಕಾರಣವಾಗಬಹುದು ಎಂದು ಆಪ್​ ವಕೀಲರು ವಾದಿಸಿದ್ದರು.

Continue Reading
Advertisement
Arvind Kejriwal
ದೇಶ24 mins ago

Arvind Kejriwal: ಮಧ್ಯಂತರ ಜಾಮೀನು ಅವಧಿ ಮುಗಿದು ಜೈಲಿಗೆ ಮರಳಿದ ಅರವಿಂದ್‌ ಕೇಜ್ರಿವಾಲ್‌; ಜೂ. 5ರ ತನಕ ನ್ಯಾಯಾಂಗ ಬಂಧನ

Bangalore North Lok Sabha Constituency
ದೇಶ28 mins ago

Bangalore North Lok Sabha Constituency : ಕ್ಷೇತ್ರ ಬದಲಾಯಿಸಿದ ಶೋಭಾ ಕರಂದ್ಲಾಜೆಗೆ ಒಲಿಯವುದೇ ಬೆಂಗಳೂರು ಉತ್ತರ

Congress leader Celebration
ಕರ್ನಾಟಕ30 mins ago

Congress leader Celebration: ತಲ್ವಾರ್ ಹಿಡಿದು ಕೇಕ್ ಕಟ್ ಮಾಡಿದ ಕಾಂಗ್ರೆಸ್‌ ಮುಖಂಡ; ವಿಡಿಯೊ ವೈರಲ್‌

Karnataka Weather Forecast
ಮಳೆ1 hour ago

Karnataka Weather : ಕೋಲಾರದಲ್ಲಿ ಅಬ್ಬರಿಸಿದ ವರುಣ; ಒಳನಾಡಿನಲ್ಲಿ ತಾಪಮಾನ ಇಳಿಕೆ

Exit Polls
ವಾಣಿಜ್ಯ1 hour ago

Exit Polls: ಚುನಾವಣೋತ್ತರ ಸಮೀಕ್ಷೆ ಪ್ರಕಟವಾದ ಬೆನ್ನಲ್ಲೇ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಜಿಗಿತ ಸಾಧ್ಯತೆ

Raichur Lok Sabha Constituency
ರಾಯಚೂರು1 hour ago

Raichur Lok Sabha Constituency: ರಾಯಚೂರಿನಲ್ಲಿ ನಾಯಕರ ನಡುವಿನ ಕಾಳಗದಲ್ಲಿ ಯಾರು ರಾಜ?

Accident Case
ಕ್ರೈಂ2 hours ago

Accident Case : ಕರೆಂಟ್‌ ಶಾಕ್‌ಗೆ ಕಂಬದಲ್ಲೇ ಕಾರ್ಮಿಕನ ನರಳಾಟ; ಭೀಕರ ಅಪಘಾತಕ್ಕೆ ಇಬ್ಬರು ಬಲಿ

Lok Sabha Election 2024
ಕರ್ನಾಟಕ2 hours ago

Lok Sabha Election 2024: ಮೈಸೂರು ಕ್ಷೇತ್ರದಲ್ಲಿ ಗೆಲುವು ಯಾರಿಗೆ? ಶ್ವಾನದಿಂದ ಅಚ್ಚರಿಯ ಭವಿಷ್ಯ!

Aam Panna Recipe
ಆಹಾರ/ಅಡುಗೆ2 hours ago

Aam Panna Recipe: ಆಮ್‌ ಪನ್ನಾ! ಮಾವಿನಕಾಯಿಯ ಅದ್ಭುತ ಪೇಯ ಇದು; ನೀವೂ ಮಾಡಿ ನೋಡಿ

Arvind Kejriwal
ದೇಶ2 hours ago

Arvind Kejriwal: ತಿಹಾರ್‌ ಜೈಲಿಗೆ ಮರಳಿದ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌; ಜೂ. 5ರಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ8 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 day ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌