Amit Shah: ಅಮಿತ್‌ ಶಾ ಹಣೆಯಲ್ಲಿ ವಿಭೂತಿ; ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಅತಿಥಿ ಗೃಹ ಉದ್ಘಾಟನೆ - Vistara News

ಮೈಸೂರು

Amit Shah: ಅಮಿತ್‌ ಶಾ ಹಣೆಯಲ್ಲಿ ವಿಭೂತಿ; ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಅತಿಥಿ ಗೃಹ ಉದ್ಘಾಟನೆ

Amit Shah: ಗದ್ದುಗೆ ಪೂಜೆ ನೆರವೇರಿಸಿದ ಅಮಿತ್‌ ಶಾ ಅವರು ವಿಭೂತಿ ಧಾರಣೆ ಮಾಡಿಕೊಂಡಿದ್ದರು. ಇದು ಎಲ್ಲರನ್ನೂ ಗಮನ ಸೆಳೆಯಿತು. ಬಳಿಕ ಶ್ರೀಮತಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಅತಿಥಿ ಗೃಹದ ಉದ್ಘಾಟನೆಯನ್ನು ಅಮಿತ್ ಶಾ ನೆರವೇರಿಸಿದರು.

VISTARANEWS.COM


on

Amith shah visit Suttur Mutt
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಮೈಸೂರಿನ ಸುತ್ತೂರು ಮಹಾಸಂಸ್ಥಾನದಲ್ಲಿ ಏರ್ಪಡಿಸಲಾಗಿದ್ದ ಸುತ್ತೂರು ಜಾತ್ರಾ ಮಹೋತ್ಸವ (Suttur Jatra Mahotsava) ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಭೇಟಿ ನೀಡಿದ್ದಾರೆ. ಈ ವೇಳೆ ಸುತ್ತೂರು ವೇದಿಕೆಯಲ್ಲಿ ಶ್ರೀಮತಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಅತಿಥಿ ಗೃಹದ ಉದ್ಘಾಟನೆಯನ್ನು ಅಮಿತ್ ಶಾ ನೆರವೇರಿಸಿದರು. ಈ ವೇಳೆ ಅಯೋಧ್ಯೆ ರಾಮಲಲ್ಲಾ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್‌ (Arun Yogiraj) ಅವರಿಗೆ ಶ್ರೀ ಶಿವರಾತ್ರಿ ಶಿವಯೋಗಿಗಳ ಮೂರ್ತಿ ಉಡುಗೆ ನೀಡುವ ಮೂಲಕ ಅಮಿತ್‌ ಶಾ ಅವರು ಸನ್ಮಾನಿಸಿದರು.

ಅಮಿತ್ ಶಾ ಹಣೆಯಲ್ಲಿ ವಿಭೂತಿ

ಇದಕ್ಕೂ ಮೊದಲು ಗದ್ದುಗೆ ಪೂಜೆ ನೆರವೇರಿಸಿದ ಅಮಿತ್‌ ಶಾ ಅವರು ವಿಭೂತಿ ಧಾರಣೆ ಮಾಡಿಕೊಂಡಿದ್ದರು. ಇದು ಎಲ್ಲರನ್ನೂ ಗಮನ ಸೆಳೆಯಿತು. ಅಮಿತ್ ಶಾ ಅವರಿಗೆ ಈ ವೇಳೆ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರು ಶಾಲು ಹೊದಿಸಿ ಸನ್ಮಾನ ಮಾಡಿದರು. ಶ್ರೀಗಂಧದಲ್ಲಿ ನಿರ್ಮಿಸಿದ ಚಾಮುಂಡೇಶ್ವರಿ ವಿಗ್ರಹ ಹಾಗೂ ಅಮಿತ್ ಶಾ ಭಾವಚಿತ್ರವನ್ನು ನೀಡಲಾಯಿತು.

ಸುತ್ತೂರು ಮಠವು ಎಲ್ಲ ಕ್ಷೇತ್ರಗಳಲ್ಲೂ ಸೇವೆ ಮಾಡುತ್ತಿದೆ: ಬಿ.ವೈ. ವಿಜಯೇಂದ್ರ

ಬಳಿಕ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಅಮಿತ್‌ ಶಾ ಭಾಗಿಯಾಗಿದರು. ಈ ವೇಳೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಸುತ್ತೂರು ಶಿವಯೋಗಿಗಳ ತಪೋ ಭೂಮಿ ಇದಾಗಿದೆ. ಇಂತಹ ಭೂಮಿಯ ಜಾತ್ರೆಯಲ್ಲಿ ಅಮಿತ್ ಶಾ ಅವರು ಭಾಗಿಯಾಗಿರುವುದು ಸಂತಸ ತಂದಿದೆ. ಸುತ್ತೂರು ಶ್ರೀಗಳು ಮಠ, ಶಿಕ್ಷಣ, ಆರೋಗ್ಯ ಸೇವೆಗಳ ಮೂಲಕ ರಾಜ್ಯದಲ್ಲಿ ಸಾಧನೆ ಮಾಡಿದ್ದಾರೆ. ಕರ್ನಾಟಕವು ಮಠ ಮಾನ್ಯಗಳ ಸಂಸ್ಕೃತಿ ಇರುವ ನಾಡು ಇದಾಗಿದೆ. ಸುತ್ತೂರು ಮಠವು ಎಲ್ಲ ಕ್ಷೇತ್ರಗಳಲ್ಲೂ ಸೇವೆ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೂ ಸುತ್ತೂರು ಮಠದ ಬಗ್ಗೆ ಭಕ್ತಿ ಇದೆ. ಈಗ ಅಮಿತ್ ಶಾ ಅವರು ಮಠದ ಸದ್ಭಕ್ತರಾಗಿ ಇಲ್ಲಿಗೆ ಬಂದಿದ್ದಾರೆ ಎಂದು ತಿಳಿಸಿದರು.

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ನಾಲ್ಕು ‌ಬಾರಿ ಸಿಎಂ ಆಗಿದ್ದು, ಶ್ರೀ ಶಿವಕುಮಾರ ಸ್ವಾಮೀಜಿ, ಸುತ್ತೂರು ಸ್ವಾಮೀಜಿ ಅವರ ಮಾರ್ಗದರ್ಶನದಿಂದ ಕಾರ್ಯನಿರ್ವಹಣೆ ಮಾಡಿದ್ದಾರೆ. ಅಮಿತ್ ಶಾ ಅವರ ಸಲಹೆಯಿಂದ ಹಲವು ಅಭಿವೃದ್ಧಿ ಕೆಲಸಗಳು ಆಗುತ್ತಿವೆ. ಕಾಶ್ಮೀರದಲ್ಲಿ 370 ಅನ್ನು ಕಿತ್ತೆಸೆಯಲು ಅಮಿತ್ ಶಾ ಅವರ ಶ್ರಮ ಅಪಾರ. ಈಗ ಕಾಶ್ಮೀರ ಶಾಂತವಾಗಿದೆ. ಅಮಿತ್ ಶಾ ಬಂದಿರೋದು ರಾಜಕೀಯ ಹಾಗೂ ರಾಜ್ಯದಲ್ಲಿ ಸಂಚಲನ ಮೂಡಿಸಿದೆ ಎಂದು ಬಿ.ವೈ. ವಿಜಯೇಂದ್ರ ಹೇಳಿದರು.

ಇದನ್ನೂ ಓದಿ: Congress Guarantee: ಧಮ್ಮು, ತಾಕತ್ತು ಇದ್ದರೆ ಬಿಜೆಪಿ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆ ನಿಲ್ಲಿಸಲಿ; ಬಿಜೆಪಿಗೆ ಸಿದ್ದರಾಮಯ್ಯ ನೇರ ಸವಾಲು

ವೇದಿಕೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಆರ್.ಅಶೋಕ, ಶಿಲ್ಪಿ ಅರುಣ್ ಯೋಗಿರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Murder Case: ನಟಿ, ಕಾಂಗ್ರೆಸ್ ನಾಯಕಿ ವಿದ್ಯಾ ಹತ್ಯೆ ಆರೋಪಿ ಪತಿಯ ಬಂಧನ

Murder Case: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯಿಂದಲೇ ಬರ್ಬರವಾಗಿ ಹತ್ಯೆಗೀಡಾಗಿದ್ದ ಕಾಂಗ್ರೆಸ್ ಮುಖಂಡೆ ಹಾಗೂ ಶಿವರಾಜ್‌ಕುಮಾರ್ ನಟನೆಯ ಸೂಪರ್‌ ಹಿಟ್‌ ಚಿತ್ರ ‘ಭಜರಂಗಿ’ಯಲ್ಲಿ ನಟಿಸಿದ್ದ ವಿದ್ಯಾ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ, ಪತಿ ನಂದೀಶ್‌ನನ್ನು ಬನ್ನೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Congress leader actress Vidya murder case Accused husband arrested
Koo

ಮೈಸೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾಗಿದ್ದ (Murder Case) ಕಾಂಗ್ರೆಸ್ ಮುಖಂಡೆ ಹಾಗೂ ಶಿವರಾಜ್‌ಕುಮಾರ್ ನಟನೆಯ ಸೂಪರ್‌ ಹಿಟ್‌ ಚಿತ್ರ ‘ಭಜರಂಗಿ’ ಯಲ್ಲಿ ನಟಿಸಿದ್ದ ವಿದ್ಯಾ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ, ಪತಿ ನಂದೀಶ್‌ನನ್ನು ಬನ್ನೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Rain News: ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ; ಹಾರಿದ 10ಕ್ಕೂ ಹೆಚ್ಚು ಮನೆಗಳ ಮೇಲಿನ ಶೀಟ್, ಇಬ್ಬರಿಗೆ ಗಾಯ

ಶಿವರಾಜ್‌ಕುಮಾರ್ ನಟನೆಯ ಸೂಪರ್‌ ಹಿಟ್‌ ಚಿತ್ರ ‘ಭಜರಂಗಿ’ಯಲ್ಲಿ ನಟಿಸಿದ್ದ ವಿದ್ಯಾ ನಂದೀಶ್ ಕನ್ನಡದ ಕೆಲ ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ಬಣ್ಣ ಹಚ್ಚಿದ್ದರು. ವಿದ್ಯಾ ನಂದೀಶ್ ಮೈಸೂರಿನ ಶ್ರೀರಾಮಪುರದಲ್ಲಿ ಪತಿ ಹಾಗೂ ಮಕ್ಕಳ ಜೊತೆ ನೆಲೆಸಿದ್ದರು. ಬನ್ನೂರಿನ ತುರಗನೂರಿನಲ್ಲಿ ಪತಿಯ ಮನೆಗೆ ಆಕೆ ತೆರಳಿದ್ದಾಗ ಗಲಾಟೆ ನಡೆದಿದೆ ಎನ್ನಲಾಗಿದೆ. ಪತಿ ಹಾಗೂ ಪತ್ನಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಆದರೆ ಈ ಬಾರಿ ಅದು ವಿಕೋಪಕ್ಕೆ ಹೋಗಿ ಕೊಲೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಕುರಿತು ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬನ್ನೂರು ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್ ಪುನೀತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಆರೋಪಿಯ ಸ್ನೇಹಿತ ನೀಡಿದ ಸುಳಿವಿನ ಮೇರೆಗೆ ಆರೋಪಿ ನಂದೀಶ್‌ನನ್ನು ಬಂಧಿಸಿದ್ದಾರೆ.

Murder Case: ಯುವತಿ ಪ್ರಬುದ್ಧ ಸಾವು ಆತ್ಮಹತ್ಯೆಯಲ್ಲ, ಕೊಲೆ: ತಾಯಿ ದೂರು

ರಾಜಧಾನಿಯ ಸುಬ್ರಹ್ಮಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಭುದ್ಧ ಎಂಬ ಯುವತಿಯ ಸಾವಿನ (Girl Death) ಕುರಿತು ಅನುಮಾನಗಳು ಮೂಡಿದ್ದು, ಇದು ಆತ್ಮಹತ್ಯೆ (Self Harming) ಅಲ್ಲ ಕೊಲೆ (Murder Case) ಎಂದು ಪ್ರಬುಧ್ದ ತಾಯಿ ದೂರು ನೀಡಿದ್ದಾರೆ.

ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಈ ಪ್ರಕರಣದಲ್ಲಿ ಸೆಕ್ಷನ್‌ 302 ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳೆದ 15ನೇ ತಾರೀಕಿನಂದು ಪ್ರಬುಧ್ದ (20) ಸಾವಿಗೀಡಾಗಿದ್ದರು. ಬಾತ್ ರೂಮಿನಲ್ಲಿ ಆಕೆಯ ಶವ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಕಂಡುಬಂದಂತೆ ಇದು ಆತ್ಮಹತ್ಯೆ ಎಂದು ಪೊಲೀಸರು ಪರಿಗಣಿಸಿದ್ದರು. ಆತ್ಮಹತ್ಯೆಗೆ ಬಳಸಲಾದ ಚಾಕು ಕೂಡ ಶವದ ಪಕ್ಕದಲ್ಲೇ ಇತ್ತು, ಯಾವುದೇ ವಸ್ತು ಕಳವಾಗಿರಲಿಲ್ಲ. ಮನೆಯ ಮುಂದಿನ ಬಾಗಿಲು ಒಳಗಿನಿಂದ ಲಾಕ್‌ ಆಗಿದ್ದು, ಹಿಂದಿನ ಬಾಗಿಲಿನ ಚಿಲಕ ಹಾಕಿರಲಿಲ್ಲ.

ಆದರೆ ಮಗಳ ಸಾವಿನ‌ ಬಗ್ಗೆ ತಾಯಿ ಅನುಮಾನ ವ್ಯಕ್ತಪಡಿಸಿದ್ದಾರೆ. ಆಕೆ ಆತ್ಮಹತ್ಯೆ ಮಾಡಿಕೊಳ್ಳುವಂಥ ಸ್ವಭಾವದವಳಲ್ಲ, ಅದಕ್ಕೆ ಯಾವುದೇ ಕಾರಣವೂ ಇರಲಿಲ್ಲ. ನನ್ನ ಮಗಳನ್ನು ಯಾರೋ ಕ್ರೂರವಾಗಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: Gas Leak deaths: ಮುಚ್ಚಿದ ಮನೆಯಲ್ಲಿ ಗ್ಯಾಸ್‌ ಸೋರಿಕೆ, ನಿದ್ರೆಯಲ್ಲೇ ಚಿರನಿದ್ರೆಗೆ ಜಾರಿದ 4 ಮಂದಿ

ಕತ್ತು ಮತ್ತು ಕೈಯನ್ನು ಚಾಕುವಿನಿಂದ ಕುಯ್ದು ಕೊಲೆ ಮಾಡಿದ್ದಾರೆ. ಮುಖಕ್ಕೆ ಮತ್ತು ತಲೆಯ ಹಿಂಭಾಗಕ್ಕೆ ಬಲವಾಗಿ ಹೊಡೆಯಲಾಗಿದೆ ಎಂದು ತಾಯಿ ಅನುಮಾನಿಸಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿರುವ ಪೊಲೀಸರು, ಅನುಮಾನಾಸ್ಪದ ವ್ಯಕ್ತಿಗಳ ವಿಚಾರಣೆ ನಡೆಸುತ್ತಿದ್ದಾರೆ. ಪೋಸ್ಟ್ ಮಾರ್ಟಂ ವರದಿಗಾಗಿ ಕಾಯಲಾಗುತ್ತಿದೆ.

Continue Reading

ಕ್ರೈಂ

Gas Leak deaths: ಮುಚ್ಚಿದ ಮನೆಯಲ್ಲಿ ಗ್ಯಾಸ್‌ ಸೋರಿಕೆ, ನಿದ್ರೆಯಲ್ಲೇ ಚಿರನಿದ್ರೆಗೆ ಜಾರಿದ 4 ಮಂದಿ

Gas Leak deaths: ಮೃತಪಟ್ಟ ಕುಮಾರಸ್ವಾಮಿ ಕುಟುಂಬ ಎರಗನಹಳ್ಳಿ ಗ್ರಾಮದಲ್ಲಿ ಕಳೆದ ಮೂವತ್ತು ವರ್ಷಗಳಿಂದ ವಾಸವಿದೆ. 10×30 ಅಡಿ ಅಳತೆಯ ಪುಟ್ಟ ಮನೆಯಲ್ಲಿ ನಾಲ್ವರ ಕುಟುಂಬ ವಾಸವಿತ್ತು. ಮನೆಯ ಹಿಂಭಾಗ ಹಾಗೂ ಮುಂಭಾಗ ಮಾತ್ರ ಕಿಟಕಿ ವ್ಯವಸ್ಥೆಯಿದೆ. ಮನೆಯ ಯಜಮಾನ ಕುಮಾರಸ್ವಾಮಿ ಇಸ್ತ್ರೀ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು.

VISTARANEWS.COM


on

gas leak deaths mysore
Koo

ಮೈಸೂರು: ಮನೆಯೊಳಗೆ ಅಡುಗೆ ಅನಿಲ ಸೋರಿಕೆಯಾದ (Gas leakage) ಪರಿಣಾಮ ಒಂದೇ ಕುಟುಂಬದ ನಾಲ್ವರು ರಾತ್ರಿ ನಿದ್ರೆಯಲ್ಲೇ ಪ್ರಾಣ (Gas Leak deaths) ಬಿಟ್ಟಿದ್ದಾರೆ. ಕಿಟಕಿ ಬಾಗಿಲುಗಳು ಭದ್ರವಾಗಿ ಮುಚ್ಚಿದ್ದರಿಂದ, ಅಡುಗೆ ಅನಿಲ (LPG) ಹೊರಹೋಗಲು ಯಾವುದೇ ಕಿಂಡಿಯಿಲ್ಲದೆ ಬಂದ್‌ ಆಗಿದ್ದು, ನಾಲ್ವರ ಜೀವ ತೆಗೆದಿದೆ.

ಮೃತಪಟ್ಟ ನಾಲ್ವರು ಚಿಕ್ಕಮಗಳೂರು ಜಿಲ್ಲೆಯ ಸಕ್ಕರಾಯ ಪಟ್ಟಣ ಗ್ರಾಮದವರು. ಕುಮಾರಸ್ವಾಮಿ (45), ಮಂಜುಳಾ (39), ಮಕ್ಕಳಾದ ಅರ್ಚನಾ (19) ಸ್ವಾತಿ (17) ಸಾವನ್ನಪ್ಪಿದ್ದಾರೆ. ಸೋಮವಾರ ಕಡೂರಿನಲ್ಲಿ ಸಂಬಂಧಿಕರ ಮದುವೆ ಮುಗಿಸಿ ವಾಪಸ್ ಮನೆಗೆ ಬಂದಿದ್ದರು. ಸೋಮವಾರ ರಾತ್ರಿ ಮನೆಯಲ್ಲಿ ಮಲಗಿದ್ದರು. ಬುಧವಾರ ಬೆಳಗಿನ ಜಾವ ಆದರೂ ಎದ್ದಿರಲಿಲ್ಲ. ಅನುಮಾನಗೊಂಡ ಸ್ಥಳೀಯರು ಬಾಗಿಲು ಬಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ನಾಲ್ವರ ಬಲಿ ಪಡೆಯಿತಾ ಗಾಳಿ ಬೆಳಕು ಇಲ್ಲದ ಮನೆ?

ಮೃತಪಟ್ಟ ಕುಮಾರಸ್ವಾಮಿ ಕುಟುಂಬ ಎರಗನಹಳ್ಳಿ ಗ್ರಾಮದಲ್ಲಿ ಕಳೆದ ಮೂವತ್ತು ವರ್ಷಗಳಿಂದ ವಾಸವಿದೆ. 10×30 ಅಡಿ ಅಳತೆಯ ಪುಟ್ಟ ಮನೆಯಲ್ಲಿ ನಾಲ್ವರ ಕುಟುಂಬ ವಾಸವಿತ್ತು. ಮನೆಯ ಹಿಂಭಾಗ ಹಾಗೂ ಮುಂಭಾಗ ಮಾತ್ರ ಕಿಟಕಿ ವ್ಯವಸ್ಥೆಯಿದೆ. ಮನೆಯ ಯಜಮಾನ ಕುಮಾರಸ್ವಾಮಿ ಇಸ್ತ್ರೀ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಬಟ್ಟೆ ಇಸ್ತ್ರಿ ಪೆಟ್ಟಿಗೆಗೆ ಗ್ಯಾಸ್ ಬಳಸುತ್ತಿದ್ದರು. ಇದಕ್ಕಾಗಿ ಹೆಚ್ಚುವರಿ ಗ್ಯಾಸ್‌ ಸಿಲಿಂಡರ್‌ ಇಟ್ಟುಕೊಂಡಿದ್ದರು. ಇದರಿಂದಲೇ ಅನಿಲ ಸೋರಿಕೆಯಾಗಿದೆ.

ಸೋಮವಾರ ರಾತ್ರಿ ಮನೆಗೆ ಬಂದವರು ಎರಡು ಕಿಟಕಿ ಬಂದ್ ಮಾಡಿಕೊಂಡು ಮಲಗಿದ್ದರು. ರೂಂನಲ್ಲಿ ಗಂಡ ಹೆಂಡತಿ, ಹಾಲ್‌ನಲ್ಲಿ ಮಕ್ಕಳಿಬ್ಬರು ಮಲಗಿದ್ದರು. ಈ ವೇಳೆ ಸೋರಿಕೆಯಾದ ಅನಿಲ ಸೇವಿಸಿ ಎಲ್ಲರೂ ಮೃತಪಟ್ಟಿದ್ದಾರೆ. ಅವರಲ್ಲಿ ಒಬ್ಬ ಮಗಳಿಂದ ಬಾಗಿಲು ತೆಗೆಯುವ ವಿಫಲ ಯತ್ನ ನಡೆದಿದೆ. ಎಲ್ಲರ ಕಿವಿ ಮತ್ತು ಮೂಗು ಬಾಯಲ್ಲಿ ರಕ್ತ ಸೋರಿದೆ. ಅಂತಿಮವಾಗಿ ಕುಟುಂಬ ದುರಂತ ಅಂತ್ಯ ಕಂಡಿದೆ.

” ಮೊಬೈಲ್‌ ಕಾಲ್‌ ರಿಸೀವ್‌ ಮಾಡದ್ದರಿಂದ ಅನುಮಾನಪಟ್ಟ ಸಂಬಂಧಿಕರು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಿಯರು ಪರಿಶೀಲಿಸಿ ನಮಗೆ ಮಾಹಿತಿ ನೀಡಿದರು. ನಾವು ಬಂದಾಗ ಗ್ಯಾಸ್ ವಾಸನೆ ಬರುತ್ತಿತ್ತು. ಮನೆಯ ಹಿಂದಿನ ಕಿಟಕಿ ತೆರೆದು ನೋಡಿದಾಗಲೂ ಸ್ಮೆಲ್ ಬರ್ತಿತ್ತು. ಫೈರ್ ಡಿಪಾರ್ಟ್ಮೆಂಟ್, ಎಫ್ಎಸ್ಐಲ್ ಬಂದು ಡೋರ್ ಒಪನ್ ಮಾಡಿದೆವು. ಮನೆಯಲ್ಲಿ ಮೂರು ಸಿಲಿಂಡರ್ ಇದೆ. ಗ್ಯಾಸ್‌ ಬಳಸಿ ಐರನ್ ಮಾಡ್ತಿದ್ದರು. ಮೇಲ್ನೋಟಕ್ಕೆ ಒಂದು ಸಿಲಿಂಡರ್ ಮಾತ್ರ ಲೀಕ್ ಆಗಿದೆ. ಉಳಿದ ಎರಡು ಸಿಲಿಂಡರ್ ಖಾಲಿ ಇತ್ತು” ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿದ್ದಾರೆ.

ಇದನ್ನೂ ಓದಿ: Road Accident: ಬೆಂಗಳೂರು, ಗದಗದಲ್ಲಿ ಸರಣಿ ಅಪಘಾತ; ಗ್ಯಾಸ್ ಟ್ಯಾಂಕರ್ ಸ್ಫೋಟಕ್ಕೆ ಮನೆಗಳೇ ಭಸ್ಮ

Continue Reading

ಮಳೆ

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Rain News : ರಾಜ್ಯಾದ್ಯಂತ ಮಳೆ ಮುಂದುವರಿದಿದ್ದು, 8 ಜಿಲ್ಲೆಗಳಲ್ಲಿ ಭಾರಿ ಮಳೆ ಜತೆಗೆ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಈ ಹಿನ್ನೆಲೆಯಲ್ಲಿ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಮೇ 22ರಂದು ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡು ಭಾಗದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ (rain News) ಮಳೆಯಾಗಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚಿನ ಜತೆಗೆ ಗಾಳಿ ವೇಗವು ಗಂಟೆಗೆ 30-40 ಕಿ.ಮೀ ಬೀಸುವ (Karnataka Weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ತುಮಕೂರು, ಮೈಸೂರು, ರಾಮನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಮಧ್ಯಮ ಮಳೆಯ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಹಗುರ ಕೂಡಿದ ಮಳೆಯಾಗಲಿದೆ. ಇನ್ನೂ ಉತ್ತರ ಒಳನಾಡಿನ ಹಾವೇರಿ, ಗದಗ, ವಿಜಯಪುರ, ಬಾಗಲಕೋಟೆ, ಧಾರವಾಡ, ಕೊಪ್ಪಳ, ಬೆಳಗಾವಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮಳೆಯು ಸಾಧಾರಣವಾಗಿದೆ. ರಾಜಧಾನಿ ಬೆಂಗಳೂರಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ 29 ಮತ್ತು 21 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

8 ಜಿಲ್ಲೆಗಳಲ್ಲಿ ಮಳೆ ರುದ್ರ ನರ್ತನ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದಷ್ಟು ಈ ಭಾಗದ ಜನರು ಮರದಡಿ ನಿಲ್ಲುವುದು, ಮಳೆ ಸಮಯದಲ್ಲಿ ವಾಹನ ಚಲಾಯಿಸುವುದನ್ನು ತಪ್ಪಿಸುವಂತೆ ಸಲಹೆ ನೀಡಲಾಗಿದೆ.

ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌

ಬೆಂಗಳೂರು/ಚಿತ್ರದುರ್ಗ: ರಾಜ್ಯದ ಹಲವೆಡೆ ವರುಣಾರ್ಭಟಕ್ಕೆ ಅವಾಂತರವೇ (Karnataka Rain ) ಸೃಷ್ಟಿಯಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ (Karnataka weather) ಕರೆಂಟ್ ಕಟ್ ಆಗಿದ್ದು, ದೀಪದ ಬೆಳಕಿನಲ್ಲಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡಿದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿ ಒಂದು ವಾರದಿಂದ ಜನರೇಟರ್ ಕೆಟ್ಟು ಹೋಗಿದ್ದು, ಸರಿಪಡಿಸದೇ ಅಧಿಕಾರಿಗಳು ಸುಮ್ಮನಾಗಿದ್ದಾರೆ. ಸೋಮವಾರ ರಾತ್ರಿ ಸುರಿದ ಮಳೆಯಿಂದ (rain News) ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದೇ ರೋಗಿಗಳಿಗೆ ಮೇಣದ ಬತ್ತಿ ಹಿಡಿದು ವೈದ್ಯರು ಚಿಕಿತ್ಸೆ ನೀಡಿದ್ದಾರೆ.

ಕುಮಟಾದಲ್ಲಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಮರ

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವರಹಕ್ಕಲ ಗ್ರಾಮದಲ್ಲಿ ಮಳೆಗೆ ಭಾರೀ ಗಾತ್ರದ ಮರ ಬಿದ್ದು ಮನೆಗೆ ಹಾನಿಯಾಗಿದೆ. ಲಲಿತಾ ನಾಯ್ಕ ಎಂಬುವವರ ಮನೆಯ ಮೇಲೆ ಮರ ಬಿದ್ದ ಪರಿಣಾಮ ಎದುರಿದ್ದ ಸ್ಕೂಟಿ ಜಖಂಗೊಂಡಿದೆ. ಮನೆಯ ಮುಂಭಾಗದ ಕೋಣೆಯ ಚಾವಣಿ ಹಾನಿಯಾಗಿದೆ. ಮರ ಬಿದ್ದ ಪರಿಣಾಮ ಸ್ಕೂಟಿ, ಮನೆ ಸೇರಿ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿ ಆಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರಲ್ಲಿ ಕೆರೆ ಏರಿ ತುಂಡು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರೆದಿದೆ. ಮಳೆಯ ಆರ್ಭಟಕ್ಕೆ ಕೆರೆಯ ಏರಿ ಹೊಡೆದು ನೀರು ಪೋಲಾಗಿದೆ. ಕಡೂರು ತಾಲೂಕಿನ ಗೌಡನ ಕಟ್ಟೆ ಗ್ರಾಮದಲ್ಲಿರುವ ಗೌಡನಕಟ್ಟೆ ಕೆರೆಯು ಕಳೆದ ಮೂರು ನಾಲ್ಕು ದಿನಗಳಿಂದ ಸುರಿದ ಮಳೆಗೆ ಭರ್ತಿಯಾಗಿದೆ. ಪರಿಣಾಮ ಕೆರೆ ಏರಿ ತುಂಡಾಗಿ ಪಿ ಕೋಡಿಹಳ್ಳಿ ಕೆರೆಗೆ ನೀರು ಹರಿವು ಹೆಚ್ಚಾಗಿದೆ. ಭಾರಿ ಪ್ರಮಾಣದ ನೀರಿನ ಒತ್ತಡ ತಡೆಯಲಾಗದೆ ಕೆರೆ ಏರಿ ಹಿಂಭಾಗದ ತೋಟ ಜಮೀನುಗಳು ಜಲಾವೃತಗೊಂಡಿತ್ತು.

ಕಾರುಗಳ ಮೇಲೆ ಬಿದ್ದ ಮರ; ಅಪಾಯದಿಂದ ಪಾರಾದ ತಾಯಿ-ಮಗ

ದಾವಣಗೆರೆ ಆಶೋಕ್ ಟಾಕೀಸ್ ಬಳಿ ಚಲಿಸುತ್ತಿದ್ದ ಕಾರುಗಳ ಮೇಲೆ ಮರವೊಂದು ಬಿದ್ದಿತ್ತು. ಪರಿಣಾಮ ಡಸ್ಟರ್ ಕಾರು ನಜ್ಜುಗುಜ್ಜಾಗಿತ್ತು. ಡಸ್ಟರ್‌ ಕಾರು ಚಾಲಕ ಹಾಗೂ ಮತ್ತೊಂದು ಕಾರಿನಲ್ಲಿದ್ದ ಚಿಕ್ಕ ಮಗು ಹಾಗು ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದರು. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಕ್ರೇನ್ ಮೂಲಕ ಮರ ತೆರವು ಮಾಡಿದರು.

ದಾವಣಗೆರೆ ಜೆಲ್ಲೆಯ ಜಗಳೂರು ತಾಲೂಕಿನ ಗಡೆಮಾಕುಂಟೆ, ಭರಮಸಮುದ್ರ, ಮರಿಕಟ್ಟೆ, ತುಂಬಿನಕಟ್ಟೆ, ಕ್ಯಾಸೇನಹಳ್ಳಿ, ತಮ್ಮಲೇಹಳ್ಳಿ ಸೇರಿದಂತೆ ಬಹುತೇಕ ಕಡೆ ತಡ ರಾತ್ರಿ ಭರ್ಜರಿ ಮಳೆಯಾಗಿದೆ. ಇದರಿಂದಾಗಿ ಗಡೆಮಾಕುಂಟೆ ಹಾಗೂ ಭರಮಸಮುದ್ರ ಕೆರೆಗಳು ಭರ್ತಿಯಾಗಿವೆ. ಇನ್ನೂ ಖಾಲಿಯಾದ ಕೆರೆಯಲ್ಲಿ ನೀರು ಕಂಡು ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Karnataka Rain : ರಾಜ್ಯದಲ್ಲಿ ಮಳೆ ಅವಾಂತರವು (Rain news) ಮುಂದುವರಿದಿದೆ. ಭಾರಿ ಮಳೆಗೆ ಹಲವೆಡೆ ಮರಗಳು ಉರುಳಿದ್ದರೆ, ಬೆಳೆಗೆಳು ನೆಲಸಮವಾಗಿತ್ತು. ಇತ್ತ ವಿದ್ಯುತ್‌ ಸಂಪರ್ಕ ಇಲ್ಲದೆ ರೋಗಿಗಳಿಗೆ ವೈದ್ಯರು ಕತ್ತಲಲ್ಲೇ ಚಿಕಿತ್ಸೆ ಕೊಡುವಂತೆ ಆಯಿತು. ಮನೆಗಳಿಗೆ ಮಳೆ ನೀರಿನ ಜತಗೆ ಚರಂಡಿ ನೀರು ನುಗ್ಗಿತ್ತು.ರಸ್ತೆ ಎಲ್ಲವೂ ಕೆರೆಯಂತಾಗಿತ್ತು.

VISTARANEWS.COM


on

By

Karnataka Rain
Koo

ಬೆಂಗಳೂರು/ಚಿತ್ರದುರ್ಗ: ರಾಜ್ಯದ ಹಲವೆಡೆ ವರುಣಾರ್ಭಟಕ್ಕೆ ಅವಾಂತರವೇ (Karnataka Rain ) ಸೃಷ್ಟಿಯಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ (Karnataka weather) ಕರೆಂಟ್ ಕಟ್ ಆಗಿದ್ದು, ದೀಪದ ಬೆಳಕಿನಲ್ಲಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡಿದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕು ಆಸ್ಪತ್ರೆಯಲ್ಲಿ ಒಂದು ವಾರದಿಂದ ಜನರೇಟರ್ ಕೆಟ್ಟು ಹೋಗಿದ್ದು, ಸರಿಪಡಿಸದೇ ಅಧಿಕಾರಿಗಳು ಸುಮ್ಮನಾಗಿದ್ದಾರೆ. ಸೋಮವಾರ ರಾತ್ರಿ ಸುರಿದ ಮಳೆಯಿಂದ (rain News) ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದೇ ರೋಗಿಗಳಿಗೆ ಮೇಣದ ಬತ್ತಿ ಹಿಡಿದು ವೈದ್ಯರು ಚಿಕಿತ್ಸೆ ನೀಡಿದ್ದಾರೆ.

ಕುಮಟಾದಲ್ಲಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಮರ

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವರಹಕ್ಕಲ ಗ್ರಾಮದಲ್ಲಿ ಮಳೆಗೆ ಭಾರೀ ಗಾತ್ರದ ಮರ ಬಿದ್ದು ಮನೆಗೆ ಹಾನಿಯಾಗಿದೆ. ಲಲಿತಾ ನಾಯ್ಕ ಎಂಬುವವರ ಮನೆಯ ಮೇಲೆ ಮರ ಬಿದ್ದ ಪರಿಣಾಮ ಎದುರಿದ್ದ ಸ್ಕೂಟಿ ಜಖಂಗೊಂಡಿದೆ. ಮನೆಯ ಮುಂಭಾಗದ ಕೋಣೆಯ ಚಾವಣಿ ಹಾನಿಯಾಗಿದೆ. ಮರ ಬಿದ್ದ ಪರಿಣಾಮ ಸ್ಕೂಟಿ, ಮನೆ ಸೇರಿ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿ ಆಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರಲ್ಲಿ ಕೆರೆ ಏರಿ ತುಂಡು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರೆದಿದೆ. ಮಳೆಯ ಆರ್ಭಟಕ್ಕೆ ಕೆರೆಯ ಏರಿ ಹೊಡೆದು ನೀರು ಪೋಲಾಗಿದೆ. ಕಡೂರು ತಾಲೂಕಿನ ಗೌಡನ ಕಟ್ಟೆ ಗ್ರಾಮದಲ್ಲಿರುವ ಗೌಡನಕಟ್ಟೆ ಕೆರೆಯು ಕಳೆದ ಮೂರು ನಾಲ್ಕು ದಿನಗಳಿಂದ ಸುರಿದ ಮಳೆಗೆ ಭರ್ತಿಯಾಗಿದೆ. ಪರಿಣಾಮ ಕೆರೆ ಏರಿ ತುಂಡಾಗಿ ಪಿ ಕೋಡಿಹಳ್ಳಿ ಕೆರೆಗೆ ನೀರು ಹರಿವು ಹೆಚ್ಚಾಗಿದೆ. ಭಾರಿ ಪ್ರಮಾಣದ ನೀರಿನ ಒತ್ತಡ ತಡೆಯಲಾಗದೆ ಕೆರೆ ಏರಿ ಹಿಂಭಾಗದ ತೋಟ ಜಮೀನುಗಳು ಜಲಾವೃತಗೊಂಡಿತ್ತು.

ಕಾರುಗಳ ಮೇಲೆ ಬಿದ್ದ ಮರ; ಅಪಾಯದಿಂದ ಪಾರಾದ ತಾಯಿ-ಮಗ

ದಾವಣಗೆರೆ ಆಶೋಕ್ ಟಾಕೀಸ್ ಬಳಿ ಚಲಿಸುತ್ತಿದ್ದ ಕಾರುಗಳ ಮೇಲೆ ಮರವೊಂದು ಬಿದ್ದಿತ್ತು. ಪರಿಣಾಮ ಡಸ್ಟರ್ ಕಾರು ನಜ್ಜುಗುಜ್ಜಾಗಿತ್ತು. ಡಸ್ಟರ್‌ ಕಾರು ಚಾಲಕ ಹಾಗೂ ಮತ್ತೊಂದು ಕಾರಿನಲ್ಲಿದ್ದ ಚಿಕ್ಕ ಮಗು ಹಾಗು ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದರು. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಕ್ರೇನ್ ಮೂಲಕ ಮರ ತೆರವು ಮಾಡಿದರು.

ದಾವಣಗೆರೆ ಜೆಲ್ಲೆಯ ಜಗಳೂರು ತಾಲೂಕಿನ ಗಡೆಮಾಕುಂಟೆ, ಭರಮಸಮುದ್ರ, ಮರಿಕಟ್ಟೆ, ತುಂಬಿನಕಟ್ಟೆ, ಕ್ಯಾಸೇನಹಳ್ಳಿ, ತಮ್ಮಲೇಹಳ್ಳಿ ಸೇರಿದಂತೆ ಬಹುತೇಕ ಕಡೆ ತಡ ರಾತ್ರಿ ಭರ್ಜರಿ ಮಳೆಯಾಗಿದೆ. ಇದರಿಂದಾಗಿ ಗಡೆಮಾಕುಂಟೆ ಹಾಗೂ ಭರಮಸಮುದ್ರ ಕೆರೆಗಳು ಭರ್ತಿಯಾಗಿವೆ. ಇನ್ನೂ ಖಾಲಿಯಾದ ಕೆರೆಯಲ್ಲಿ ನೀರು ಕಂಡು ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಇದನ್ನೂ ಓದಿ: Road Accident : ತಾಯಿ-ಮಗನ ಬಲಿ ಪಡೆದ ಕಂಟೇನರ್‌; ಆಟೋ ಪ್ರಯಾಣಿಕ ಸೇರಿ ಸವಾರರಿಬ್ಬರ ಪ್ರಾಣ ಕಸಿದ ಬೈಕ್‌

ವಿಜಯನಗರದಲ್ಲಿ ಕೊಚ್ಚಿ ಹೋದ ರೋಡ್‌

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಮಳೆ ನೀರಿನ ರಭಸಕ್ಕೆ ರಸ್ತೆಯೇ ಕೊಚ್ಚಿ ಹೋಗಿತ್ತು. ಇದರಿಂದಾಗಿ ಕೂಡ್ಲಿಗಿ ತಾಲೂಕಿನ ಯಂಬ್ಳಿ- ಆಲೂರು ಗ್ರಾಮಗಳ ಮಾರ್ಗ ರಸ್ತೆ ಸಂಪರ್ಕ ಕಟ್ ಆಗಿತ್ತು. ರಸ್ತೆ ಸಂಪರ್ಕ ಇಲ್ಲದೆ ವಾಹನ ಸವಾರರು ಪರದಾಡಬೇಕಾಯಿತು.

ತುಮಕೂರಿನಲ್ಲಿ ನೀರಿನಲ್ಲಿ ಸಿಲುಕಿದ ಲಾರಿ ಹಾಗೂ ಬಸ್

ಮಳೆಯಿಂದ ಜಲಾವೃತವಾದ ರಸ್ತೆಯಲ್ಲಿ ಸಂಚಾರಿಸಿದ ಪರಿಣಾಮ ಲಾರಿ- ಬಸ್ಸು ಕೆಸರಿನಲ್ಲಿ ಸಿಲುಕಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಲಕ್ಕನಹಳ್ಳಿ ನಡೆದಿದೆ. ಶಿರಾ- ಅಮರಾಪುರ ರಸ್ತೆ ಕಾಮಗಾರಿ ನಿಧಾನವಾಗಿ ನಡೆಯುತ್ತಿರುವುದರಿಂದ ಬಿಡ್ಜ್ ಕಾಮಗಾರಿ ಬಳಿ‌ ರಸ್ತೆಯು ಜಲಾವೃತಗೊಂಡು ಸವಾರರು ಪರದಾಡುವಂತಾಗಿದೆ.

ಇನ್ನೂ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಅರಸಿಕೆರೆ ಗ್ರಾಮದಲ್ಲಿ ಗಾಳಿ- ಮಳೆ ರಭಸಕ್ಕೆ ಅಡಿಕೆ ಮರಗಳು ನೆಲಕ್ಕುರುಳಿದ್ದವು. ರೈತ ಪ್ರಕಾಶ್ ಎಂಬುವರಿಗೆ ಸೇರಿದ 12 ವರ್ಷದ ಹಳೇ ಅಡಿಕೆ ಮರಗಳು ಫಸಲಿಗೆ ಬಂದಿತ್ತು. ಇದೀಗ ಮಳೆಯಿಂದಾಗಿ ಅಂದಾಜು 2 ಲಕ್ಷ ರೂಪಾಯಿ ನಷ್ಟವಾಗಿದೆ.

ಮೈಸೂರಿನಲ್ಲಿ ಕೆರೆಯಂತಾದ ಜಮೀನುಗಳು

ಮೈಸೂರು ಜಿಲ್ಲೆಯಲ್ಲಿ ಮಳೆಯು ಮುಂದುವರಿದ್ದು, ಹುಣಸೂರು ತಾಲೂಕಿನ ಜಮೀನುಗಳಲ್ಲಿ ಜಲಾವೃತಗೊಂಡಿತ್ತು. ನೂರಾರು ಎಕರೆ ಬೆಳೆದ ಶುಂಠಿ, ತಂಬಾಕು ಬೆಳೆ ನಾಶವಾಗಿತ್ತು. ಗ್ರಾಮದ ಜಮೀನುಗಳು ಕೆರೆಗಳಂತಾಗಿತ್ತು. ಇತ್ತ ಬಿರುಗಾಳಿ ಮಳೆಗೆ ಮನೆ ಚಾವಣಿ, ಬ್ಯಾರನ್‌ ಹಾರಿಹೋಗಿತ್ತು. ಮೈಸೂರಿನ ಅತ್ತಿಕುಪ್ಪೆಯಲ್ಲಿ ಕೆರೆ ಕೋಡಿ ಒಡೆದು ಬೆಳೆ ನಾಶವಾಗಿತ್ತು. ಇದರಿಂದಾಗಿ ತೆಂಗಿನ ಸಸಿಗಳು ಕೊಚ್ಚಿಹೋಗಿದ್ದವು. ಹನಗೋಡು ಹೋಬಳಿ ಕಚುವಿನಹಳ್ಳಿ ಗ್ರಾಮದ ಜಯಮ್ಮ ಮತ್ತು ಲಲಿತಮ್ಮರಿಗೆ ಸೇರಿದ ತಂಬಾಕು ಹದಗೊಳಿಸುವ ಬ್ಯಾರನ್ ಗೋಡೆ ಕುಸಿದಿತ್ತು. ಚಿಲ್ಕುಂದ ಗ್ರಾಮದಲ್ಲಿ ಬಿರುಗಾಳಿಗೆ ರಾಮಶೆಟ್ಟರ ಮನೆ ಚಾವಣಿ ಹಾಗೂ ಚಂದ್ರುರವರ ಕೊಟ್ಟಿಗೆಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿ ಹೋಗಿದೆ. ಇತ್ತ ಸುಜ್ಜಲೂರು ಗ್ರಾಮದಲ್ಲಿ ಮನೆಗಳಿಗೆ ಚರಂಡಿ ನೀರು ನುಗ್ಗಿತ್ತು.

ಕೆರೆ ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಕರು

ಮೈಸೂರು ಮಳೆ ಅವಾಂತರಕ್ಕೆ ಜನರು ಹೈರಾಣಾಗಿದ್ದಾರೆ. ಕೆರೆ‌ ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಕರುವೊಂದನ್ನು ಯುವಕರು ರಕ್ಷಿಸಿದ ಘಟನೆ ಪಿರಿಯಾಪಟ್ಟಣ ತಾಲೂಕು ತರಿಕಲ್ ಗ್ರಾಮದಲ್ಲಿ ನಡೆದಿದೆ. ಹಾರನಹಳ್ಳಿ ಗ್ರಾಮದ ಶಿವಣ್ಣ ಅವರ ಹಸುವಿನ ಕರುವನ್ನು ರಕ್ಷಣೆ ಮಾಡಲಾಗಿತ್ತು. ಬಾಲಗೆರೆ ತುಂಬಿ ಕೋಡಿ ಒಡೆದ ಪರಿಣಾಮ ಬೆಟ್ಟದಪುರ- ಕುಶಾಲನಗರ ರಸ್ತೆ ಮೇಲೆ ಮಂಡಿಯುದ್ದ‌ ನೀರು ನಿಂತಿತ್ತು. ಮಳೆ‌ ನೀರಿನಲ್ಲಿ ತಂಬಾಕು ಸಸಿಗಳು, ಗಿಡಕ್ಕೆ ಸಿಂಪಡಿಸಲು ತಂದಿದ್ದ ರಸಾಯನಿಕ ವಸ್ತುಗಳು ಹಾಳಾಗಿದ್ದವು.

ವಿಜಯನಗರದಲ್ಲಿ ನೆಲಸಮವಾದ ವೀಳ್ಯದೆಲೆ ಬಳ್ಳಿ

ಭಾರಿ ಮಳೆಗೆ ವೀಳ್ಯದೆಲೆ ಬಳ್ಳಿ ತೋಟ ನೆಲಸಮವಾಗಿತ್ತು. ವಿಜಯನಗರದ ಕೂಡ್ಲಿಗಿ ತಾಲೂಕಿನ ಎಚ್. ಮ್ಯಾಸರಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ದುಡಿಯುವ ಮಗನಂತೆ ಬೆಳೆದು ನಿಂತಿದ್ದ ಎಲೆಬಳ್ಳಿ ತೋಟ ನೆಲಕಚ್ಚಿತ್ತು. ಮಲ್ಲಮ್ಮ ಗಂಡ ಪೂಜಾರಿ ಮಾರಣ್ಣಗೆ ಸೇರಿದ ಒಂದು ಎಕರೆ ಎಲೆಬಳ್ಳಿ ತೋಟ ನೆಲಕ್ಕುರುಳಿದ್ದನ್ನು ಕಂಡು ಕಣ್ಣೀರುಇಟ್ಟರು.

ಮನೆಗಳಿಗೆ ನುಗ್ಗಿದ ಚರಂಡಿ ನೀರು

ಕೊಡಗು ಜಿಲ್ಲೆಯ ಗುಮ್ಮನ ಕೊಲ್ಲಿ ಚೌಡೇಶ್ವರಿ ಬಡಾವಣೆಯ ತಗ್ಗು ಪ್ರದೇಶಕ್ಕೆ ಚರಂಡಿ ನೀರು ನುಗ್ಗಿತ್ತು. ಚರಂಡಿ ನೀರು ಉಕ್ಕಿ ರಸ್ತೆ ಮೇಲೆ ಹರಿದ ಪರಿಣಾಮ ಮನೆಯಂಗಳಕ್ಕೆ ನೀರು ನುಗ್ಗಿತ್ತು. ಪ್ರವಾಹದಂತೆ ರಸ್ತೆ ತುಂಬೆಲ್ಲ ನೀರು ನಿಂತಿತ್ತು. ಇತ್ತ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲದ ಅಜ್ಜನಕಟ್ಟೆಯಲ್ಲಿ 20 ಕ್ಕೂ ಹೆಚ್ಚು ಕುಟುಂಬಗಳು ಜಲದಿಗ್ಬಂಧನದಿಂದ ಓಡಾಡಲು ಪರದಾಡಬೇಕಾಯಿತು. ಇತ್ತ ಶಾಲಾ ಮಕ್ಕಳು ಕೆಸರಲ್ಲಿ ಬೀಳುವ ಆತಂಕದಲ್ಲಿಯೇ ಮನೆಯಿಂದ ಹೊರ ಬರುತ್ತಿದ್ದರು.ಕಾಲೋನಿಯಲ್ಲಿ ಎಮರ್ಜೆನ್ಸಿ ಅಂದರೆ ಆಂಬುಲೆನ್ಸ್ ಕೂಡ ಬರಲು ಆಗುತ್ತಿಲ್ಲ ಎಂದು ಸ್ಥಳೀಯರು ಅಸಮಾಧಾನ ಹೊರಹಾಕಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Prajwal Revanna case Siddaramaiah writes to PM narendra Modi
ಕ್ರೈಂ1 min ago

Prajwal Revanna Case: ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದತಿಗಾಗಿ ಪಿಎಂಗೆ ಸಿದ್ದರಾಮಯ್ಯ ಇನ್ನೊಂದು ಪತ್ರ; ಚುರುಕಾದ ವಿದೇಶಾಂಗ ಇಲಾಖೆ

Physical Abuse
ಕ್ರೈಂ10 mins ago

Physical Abuse: ಹಿಂದು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಮುಸ್ಲಿಂ ಯುವಕರಿಗೆ ಜೀವಾವಧಿ ಶಿಕ್ಷೆ

India Head Coach
ಕ್ರೀಡೆ14 mins ago

India Head Coach: ರಿಕಿ ಪಾಂಟಿಂಗ್ ಟೀಮ್​ ಇಂಡಿಯಾದ ಮುಂದಿನ ಕೋಚ್​!

Viral Video
ವೈರಲ್ ನ್ಯೂಸ್17 mins ago

Viral Video: ಸುಡುವ ಮರಳಿನಲ್ಲಿ ಹಪ್ಪಳ ಸುಟ್ಟ ಬಿಎಸ್‌ಎಫ್‌ ಯೋಧ; ಎಲ್ಲೆಡೆ ಇದೇ ವಿಡಿಯೋ ವೈರಲ್‌

Hanuman Chalisa
ಧಾರ್ಮಿಕ37 mins ago

Hanuman Chalisa: ಹನುಮಾನ್ ಚಾಲೀಸಾ ಪಠಿಸುವಾಗ ಈ ತಪ್ಪುಗಳನ್ನು ಮಾಡಬೇಡಿ

RCB
ಕ್ರೀಡೆ42 mins ago

RCB: ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ಸೋಲಿಗೆ ವಿಜಯ್​ ಮಲ್ಯ ಕಾರಣವಂತೆ!

Cyber Crime
ಕ್ರೈಂ1 hour ago

ಎಐ ತಂತ್ರಜ್ಞಾನದಿಂದ ಹಿಂದು ಯುವತಿಯ ಅಶ್ಲೀಲ ವಿಡಿಯೊ ಸೃಷ್ಟಿಸಿ ಇಸ್ಲಾಂಗೆ ಮತಾಂತರಗೊಳಿಸಲು ಯತ್ನ: ಫೈಜಲ್ ವಿರುದ್ಧ ದೂರು

vegetable rates increase
ಪ್ರಮುಖ ಸುದ್ದಿ1 hour ago

Vegetable Rates: ತರಕಾರಿ ಮುಟ್ಟಿದರೆ ಶಾಕ್‌, ಕಿಲೋಗೆ 320 ದಾಟಿದ ಬೀನ್ಸ್!‌

Phalodi satta market
ದೇಶ1 hour ago

Phalodi Satta Bazar: ಚುನಾವಣಾ ಫಲಿತಾಂಶದ ಬಗ್ಗೆ ಸಟ್ಟಾ ಬಜಾರ್‌ನ ಪಕ್ಕಾ ಭವಿಷ್ಯವಾಣಿ; ಈ ಮಾರ್ಕೆಟ್‌ನ ಹಿನ್ನೆಲೆ ಏನು?

Virat Kohli
ಕ್ರೀಡೆ1 hour ago

Virat Kohli: ಅಂದು ವಿಶ್ವಕಪ್​ನಲ್ಲಿ, ಇಂದು ಐಪಿಎಲ್​ನಲ್ಲಿ ವಿಕೆಟ್​ ಬೇಲ್ಸ್​ ಹಾರಿಸಿ ಬೇಸರದಿಂದ ಮೈದಾನ ತೊರೆದ ಕೊಹ್ಲಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ6 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌