Amit Shah: ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿರುವ ಅಮಿತ್ ಶಾ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ - Vistara News

ರಾಜಕೀಯ

Amit Shah: ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿರುವ ಅಮಿತ್ ಶಾ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

Amit Shah: ಅಮಿತ್ ಶಾ ಅವರು ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿದ್ದಾರೆ. ಬಡವರು, ರೈತರ ಬಗ್ಗೆ ಮಾತನಾಡಲು ಅಮಿತ್ ಶಾ ಅವರಿಗೆ ನೈತಿಕತೆ ಇಲ್ಲ. ಬರಗಾಲ ಬಂದಾಗ ಎಂ.ಎನ್. ನರೇಗಾ ಯೋಜನೆಯಡಿ 150 ಮಾನವ ದಿನಗಳನ್ನು ಹೆಚ್ಚಿಸುವುದು ಕಡ್ಡಾಯವಾದರೂ ಇಂದಿನವರೆಗೆ ಹೆಚ್ಚಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

VISTARANEWS.COM


on

Amit Shah has come to Karnataka empty handed says CM Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿದ್ದಾರೆ. ಬಡವರು, ರೈತರ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಕಿಡಿಕಾರಿದರು.

ಭಾನುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಸಂಘಟನೆ ಹಾಗೂ ಮುಖಂಡರ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂದಿನವರೆಗೆ ಬರಗಾಲದ ಬಗ್ಗೆ ಐದು ತಿಂಗಳಾದರೂ ಒಂದು ಸಭೆಯನ್ನೂ ಅಮಿತ್ ಶಾ ಕರೆದಿಲ್ಲ. ಬರ ಪರಿಹಾರ ಕೊಡಲು ಇರುವ ಸಮಿತಿಗೆ ಅವರೇ ಅಧ್ಯಕ್ಷರು. ದೇಶದ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕತೆ ಇದೆ. ರೈತರು ಬರಗಾಲದಲ್ಲಿ ಕಷ್ಟಪಡುತ್ತಿದ್ದಾರೆ. ಬರಗಾಲ ಬಂದಾಗ ಎಂಜಿನರೇಗಾ ಯೋಜನೆಯಡಿ 150 ಮಾನವ ದಿನಗಳನ್ನು ಹೆಚ್ಚಿಸುವುದು ಕಡ್ಡಾಯವಾದರೂ ಇಂದಿನವರೆಗೆ ಹೆಚ್ಚಿಸಿಲ್ಲ. ಆದರೆ, ಕೇಂದ್ರ ಸರ್ಕಾರದವರು ಇದುವರೆಗೂ ಅನುಮತಿ ನೀಡಿಲ್ಲ. ಜತೆಗೆ ಈ ಸಂಬಂಧ ಬರೆದ 2-3 ಪತ್ರಕ್ಕೂ ಉತ್ತರ ನೀಡಿಲ್ಲ ಎಂದರು.

ಅನ್ಯಾಯವನ್ನೆಲ್ಲ ಸರಿ ಎಂದು ಹೇಳಬಾರದು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಕ್ಕ ಉತ್ತರ ನೀಡಿದ್ದಾರೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಸಂಸತ್ತಿನಲ್ಲಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಈಗ ದೇವೇಗೌಡರು ಅವರ ಜತೆ ಸೇರಿದ್ದಾರೆ. ಇದೇ ದೇವೇಗೌಡರು ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕು ಎಂದಿದ್ದರು. ಅದರ ಬಗ್ಗೆ ಈಗೇನು ಹೆಳುತ್ತಿದ್ದಾರೆ? ಅವರು ಯಜಮಾನರು, ಮಾಜಿ ಪ್ರಧಾನಿಗಳಾಗಿದ್ದವರು ಹೀಗೆ ಹೇಳಬಾರದು. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ ಎಂಬ ಕಾರಣಕ್ಕೆ ಬಿಜೆಪಿಯವರು ಮಾಡಿದ ಅನ್ಯಾಯವನ್ನೆಲ್ಲ ಸರಿ ಎಂದು ಹೇಳಬಾರದು ಎಂದು ಹೇಳಿದರು.

ಇದನ್ನೂ ಓದಿ: Amit Shah: ಅಮಿತ್‌ ಶಾ ಉಕ್ಕಿನ ಮನುಷ್ಯ; ಮೋದಿ – ಶಾ ಜೋಡೆತ್ತುಗಳೆಂದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ಚಾಮರಾಜನಗರ, ಮೈಸೂರು ಕ್ಷೇತ್ರ ಎರಡನ್ನೂ ಗೆಲ್ಲಲಿದೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರಿನಿಂದಲೇ ಅಮಿತ್ ಶಾ ರಣಕಹಳೆ ಮೊಳಗಿಸುತ್ತಿದ್ದಾರಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ರಣಕಹಳೆ ಎಂದರೆ ಏನು? ಎಂದು ಮಾಧ್ಯಮದವರನ್ನೇ ಪ್ರಶ್ನೆ ಮಾಡಿದರು. ಈ ಬಾರಿ ಚಾಮರಾಜನಗರ, ಮೈಸೂರು ಕ್ಷೇತ್ರ ಎರಡನ್ನೂ ಕಾಂಗ್ರೆಸ್ ಗೆಲ್ಲಲಿದೆ ಎಂದು ಹೇಳಿದರು.

ಸಿಎಂ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದ ಬಿ.ವೈ. ವಿಜಯೇಂದ್ರ ಅವರು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ನನ್ನ ತೆರಿಗೆ ನನ್ನ ಹಕ್ಕು ಅಲ್ಲ. ಅದು ಸರ್ಕಾರದ ವೈಫಲ್ಯ ಮುಚ್ಚಿ‌ಕೊಳ್ಳುವ ಹೋರಾಟ ಅಷ್ಟೆ.‌ ನಿಮ್ಮ ಸರ್ಕಾರ ಬಂದು ಎಂಟು ತಿಂಗಳಲ್ಲಿ ಘೋಷಿಸಿದ ಒಂದು ಅಭಿವೃದ್ಧಿ ಕಾರ್ಯ ತಿಳಿಸಿ? ಯಾವ ಯೋಜನೆಯನ್ನೂ ಘೋಷಣೆ ಮಾಡಿಲ್ಲ. ಸಿಎಂ ನೇತೃತ್ವದಲ್ಲಿ ಹೊಸ ನಾಟಕ ನಡೆಯುತ್ತಿದೆ. ಒಂದು ಸುಳ್ಳು ನೂರು ಬಾರಿ ಹೇಳಿ ಜನರಿಗೆ ಮಂಕು ಎರಚುವ ಕೆಲಸವನ್ನು ಸಿಎಂ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಇದು ಕಾಂಗ್ರೆಸ್‌ಗೆ ದುಷ್ಪರಿಣಾಮ ಬೀರುವುದು ನಿಶ್ಚಿತ” ಎಂದು ಹೇಳಿದ್ದಾರೆ.

ಮಂಡ್ಯದ ಬಗ್ಗೆ ಚರ್ಚೆಯೇ ಆಗಿಲ್ಲ: ಬಿವೈ ವಿಜಯೇಂದ್ರ

ಮಂಡ್ಯ, ಮೈಸೂರು, ಚಾಮರಾಜನಗರ ಸೇರಿ ನಾಲ್ಕು ಲೋಕಸಭಾ ಕ್ಷೇತ್ರದಿಂದ ಕಾರ್ಯ ತಂತ್ರ ಹೇಗಿರಬೇಕು? ಜೆಡಿಎಸ್ – ಬಿಜೆಪಿ ಹೊಂದಾಣಿಕೆ ಇರುವ ಕಾರಣ ಒಟ್ಟಾಗಿ ಚುನಾವಣೆ ಎದುರಿಸುವುದು ಸೇರಿದಂತೆ ಇನ್ನಿತರ ವಿಷಯಗಳನ್ನು ಇಲ್ಲಿ ಚರ್ಚೆ ನಡೆಸಲಾಗುವುದು. ಸಿಎಂ ತವರೂರಿಂದ ಈ ಬಾರಿ ಚುನಾವಣಾ ಕಾರ್ಯತಂತ್ರ ಆರಂಭವಾಗಿದ್ದು ವಿಶೇಷ ಅಲ್ಲ. ಚಾಮರಾಜನಗರ ಕ್ಷೇತ್ರಕ್ಕೆ ಹೊಸ ಅಭ್ಯರ್ಥಿಯನ್ನು ಹುಡುಕಬೇಕು. ಮಂಡ್ಯದಲ್ಲಿ ಬದಲಾದ ರಾಜಕೀಯ ಸ್ಥಿತಿಯಲ್ಲಿ ಜೆಡಿಎಸ್ ಆ ಸ್ಥಾನ ಕೇಳುತ್ತಿದೆ ಅಂತ ಟಿವಿಯಲ್ಲಿ ನೋಡಿದ್ದೇವೆ. ಆದರೆ, ನಮ್ಮಲ್ಲಿ ಈ ಬಗ್ಗೆ ಚರ್ಚೆ ಆಗಿಲ್ಲ. ಇವತ್ತು ಆ ಬಗ್ಗೆ ಚರ್ಚೆ ಆದರೂ ಆಗಬಹುದು ಎಂದು ಹೇಳಿದರು.

ಇದನ್ನೂ ಓದಿ: Share Market : ಚೀನಾವನ್ನು ಹಿಂದಿಕ್ಕಿ ನಾಗಾಲೋಟದಲ್ಲಿರುವ ಭಾರತದ ಷೇರು ಮಾರುಕಟ್ಟೆ​; ಇಲ್ಲಿದೆ ಅಂಕಿ ಅಂಶ

ಸಿಎಂ ನೇತೃತ್ವದಲ್ಲಿ ಹೊಸ ನಾಟಕ

ಕಾಂಗ್ರೆಸ್ ಹೋರಾಟ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿ.ವೈ. ವಿಜಯೇಂದ್ರ, ನನ್ನ ತೆರಿಗೆ ನನ್ನ ಹಕ್ಕು ಅಲ್ಲ. ಅದು ಸರ್ಕಾರದ ವೈಫಲ್ಯ ಮುಚ್ಚಿ‌ಕೊಳ್ಳುವ ಹೋರಾಟ ಅಷ್ಟೆ.‌ ನಿಮ್ಮ ಸರ್ಕಾರ ಬಂದು ಎಂಟು ತಿಂಗಳಲ್ಲಿ ಘೋಷಿಸಿದ ಒಂದು ಅಭಿವೃದ್ಧಿ ಕಾರ್ಯ ತಿಳಿಸಿ? ಯಾವ ಯೋಜನೆಯನ್ನೂ ಘೋಷಣೆ ಮಾಡಿಲ್ಲ. ಸಿಎಂ ನೇತೃತ್ವದಲ್ಲಿ ಹೊಸ ನಾಟಕ ನಡೆಯುತ್ತಿದೆ. ಒಂದು ಸುಳ್ಳು ನೂರು ಬಾರಿ ಹೇಳಿ ಜನರಿಗೆ ಮಂಕು ಎರಚುವ ಕೆಲಸವನ್ನು ಸಿಎಂ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಇದು ಕಾಂಗ್ರೆಸ್‌ಗೆ ದುಷ್ಪರಿಣಾಮ ಬೀರುವುದು ನಿಶ್ಚಿತ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Valmiki Corporation Scam: ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ; ಎಂಡಿ, ಲೆಕ್ಕಾಧಿಕಾರಿ ಅಮಾನತು

Valmiki Corporation Scam: 88 ಕೋಟಿ ರೂ. ದುರುಪಯೋಗ ಪ್ರಕರಣದಲ್ಲಿ ವಾಲ್ಮೀಕಿ ನಿಗಮದ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತು ಮಾಡಿದ್ದು, ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಕ ಮಾಡಲಾಗಿದೆ.

VISTARANEWS.COM


on

Valmiki corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ (Valmiki Corporation Scam) ವಾಲ್ಮೀಕಿ ನಿಗಮದ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತು ಗೊಳಿಸಿದೆ. ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದ ರಾಜ್ಯ ಸರ್ಕಾರ, ಇದೀಗ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ, ವಾಲ್ಮೀಕಿ ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ನೇಮಿಸಿದೆ.

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಅವರು ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲಾ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ.

ಇನ್ನು 88 ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆಯುತ್ತಿದ್ದಾರೆ. ಶಿವಮೊಗ್ಗ ಮತ್ತು ಬೆಂಗಳೂರಿನ ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ | ವಾಲ್ಮೀಕಿ ನಿಗಮ ಅಧೀಕ್ಷಕ ಆತ್ಮಹತ್ಯೆ ಪ್ರಕರಣ: ಮೂವರ ಮೇಲೆ ಎಫ್‌ಐಆರ್; ಡೆತ್‌ ನೋಟ್‌ನಲ್ಲಿರುವ ಸಚಿವ ಯಾರು?

ವಾಲ್ಮೀಕಿ ನಿಗಮದ ಪ್ರಭಾರ ಎಂಡಿಯಾಗಿ ಡಾ. ಕೆ. ಆರ್. ರಾಜ್ ಕುಮಾರ್ ನೇಮಕ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 88 ಕೋಟಿ ಹಣ ದುರುಪಯೋಗ ಪ್ರಕರಣದಲ್ಲಿ MD ಜೆ. ಜೆ. ಪದ್ಮನಾಭ ಅವರನ್ನು ರಾಜ್ಯ ಸರ್ಕಾರ ಅಮಾನತು ಗೊಳಿಸಿದ ಬೆನ್ನಲ್ಲೇ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ವ್ಯವಸ್ಥಾಪಕ ನಿರ್ದೇಶಕರ ಸ್ಥಾನಕ್ಕೆ ಪ್ರಭಾರರಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Continue Reading

ಬಳ್ಳಾರಿ

MLC Election: ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆ; ಬಳ್ಳಾರಿ ಜಿಲ್ಲೆಯಲ್ಲಿ 24,183 ಪದವೀಧರ ಮತದಾರರು

MLC Election: ವಿಧಾನಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧ ಅಂತಿಮ ಮತದಾರರ ಪಟ್ಟಿ ಅನ್ವಯ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 24,183 ಪದವೀಧರ ಮತದಾರರಿದ್ದಾರೆ ಎಂದು ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ. 91-ಕಂಪ್ಲಿ, 92-ಸಿರುಗುಪ್ಪ, 93-ಬಳ್ಳಾರಿ ಗ್ರಾಮೀಣ, 94-ಬಳ್ಳಾರಿ ನಗರ, 95-ಸಂಡೂರು ವಿಧಾನಸಭಾ ಕ್ಷೇತ್ರ ಒಳಗೊಂಡಂತೆ 14,981 ಪುರುಷರು, 9,198 ಮಹಿಳೆಯರು ಮತ್ತು 4 ಜನ ಇತರೆ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 24,183 ಪದವೀಧರ ಮತದಾರರಿದ್ದಾರೆ.

VISTARANEWS.COM


on

MLC Election North East Graduate Constituency Election 2024 total 24 183 graduate voters in the district
Koo

ಬಳ್ಳಾರಿ: ವಿಧಾನಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಗೆ (MLC Election) ಸಂಬಂಧ ಅಂತಿಮ ಮತದಾರರ ಪಟ್ಟಿ ಅನ್ವಯ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 24,183 ಪದವೀಧರ ಮತದಾರರಿದ್ದಾರೆ ಎಂದು ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.

ಕ್ಷೇತ್ರವಾರು ಮತದಾರರ ವಿವರ

91-ಕಂಪ್ಲಿ, 92-ಸಿರುಗುಪ್ಪ, 93-ಬಳ್ಳಾರಿ ಗ್ರಾಮೀಣ, 94-ಬಳ್ಳಾರಿ ನಗರ, 95-ಸಂಡೂರು ವಿಧಾನಸಭಾ ಕ್ಷೇತ್ರ ಒಳಗೊಂಡಂತೆ 14,981 ಪುರುಷರು, 9,198 ಮಹಿಳೆಯರು ಮತ್ತು 4 ಜನ ಇತರೆ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 24,183 ಪದವೀಧರ ಮತದಾರರಿದ್ದಾರೆ.

ಇದನ್ನೂ ಓದಿ: Delhi Temperature: ದೆಹಲಿಯಲ್ಲಿ 52 ಡಿಗ್ರಿ ಸೆಲ್ಸಿಯಸ್‌ ತಾಪಮಾನ; ದೇಶದಲ್ಲೇ ಇದುವರೆಗಿನ ಗರಿಷ್ಠ ಟೆಂಪರೇಚರ್!

ಕಂಪ್ಲಿ ಕ್ಷೇತ್ರದಲ್ಲಿ 2,568 ಪುರುಷರು, 1,170 ಮಹಿಳೆಯರು ಸೇರಿ ಒಟ್ಟು 3,738 ಪದವೀಧರ ಮತದಾರರು. ಸಿರುಗುಪ್ಪ ಕ್ಷೇತ್ರದಲ್ಲಿ 2,522 ಪುರುಷರು, 921 ಮಹಿಳೆಯರು ಸೇರಿ ಒಟ್ಟು 3,443 ಪದವೀಧರ ಮತದಾರರು. ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ 3,098 ಪುರುಷರು, 2,030 ಮಹಿಳೆಯರು ಮತ್ತು 01 ಇತರೆ ಸೇರಿ ಒಟ್ಟು 5,129 ಪದವೀಧರ ಮತದಾರರಿದ್ದಾರೆ.

ಬಳ್ಳಾರಿ ನಗರ ಕ್ಷೇತ್ರದಲ್ಲಿ 4,552 ಪುರುಷರು, 3,681 ಮಹಿಳೆಯರು ಮತ್ತು 02 ಇತರೆ ಸೇರಿ ಒಟ್ಟು 8,235 ಪದವೀಧರ ಮತದಾರರು. ಸಂಡೂರು ಕ್ಷೇತ್ರದಲ್ಲಿ 2,241 ಪುರುಷರು, 1,396 ಮಹಿಳೆಯರು ಮತ್ತು 01 ಇತರೆ ಸೇರಿ ಒಟ್ಟು 3,638 ಪದವೀಧರ ಮತದಾರರಿದ್ದಾರೆ.

24 ಮತಗಟ್ಟೆ ಕೇಂದ್ರಗಳು

ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ ಸಂಬಂಧಿಸಿದಂತೆ, ಜಿಲ್ಲೆಯಲ್ಲಿ ಒಟ್ಟು 24 ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಕಂಪ್ಲಿ ಕ್ಷೇತ್ರ
ಕಂಪ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಕಂಪ್ಲಿ ಪಟ್ಟಣದ ಪುರಸಭೆ ಕಚೇರಿಯಲ್ಲಿ 02 ಮತಗಟ್ಟೆ ಕೇಂದ್ರಗಳು, ಕುರುಗೋಡು ಪಟ್ಟಣದ ಅಂಗನವಾಡಿ ಕೇಂದ್ರ ಮತ್ತು ಕೋಳೂರು ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿ ಸೇರಿ ಒಟ್ಟು 04 ಮತಗಟ್ಟೆ ಕೇಂದ್ರಗಳು.

ಸಿರುಗುಪ್ಪ ಕ್ಷೇತ್ರ
ಸಿರುಗುಪ್ಪ ಕ್ಷೇತ್ರ ವ್ಯಾಪ್ತಿಯಲ್ಲಿ ಹಚ್ಚೋಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ, ಸಿರುಗುಪ್ಪ ಪಟ್ಟಣದ ಸರ್ಕಾರಿ ಪ್ರೌಢಶಾಲೆ, ತೆಕ್ಕಲಕೋಟೆಯ ಸರ್ಕಾರಿ ಪದವಿಪೂರ್ವ ಕಾಲೇಜು ಮತ್ತು ಕರೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಸೇರಿ 04 ಮತಗಟ್ಟೆ ಕೇಂದ್ರಗಳು.

ಬಳ್ಳಾರಿ ಗ್ರಾಮೀಣ ಕ್ಷೇತ್ರ
ಬಳ್ಳಾರಿ ಗ್ರಾಮೀಣ ಕ್ಷೇತ್ರ ವ್ಯಾಪ್ತಿಯಲ್ಲಿ ಮೋಕಾದ ಗ್ರಾಮ ಪಂಚಾಯಿತಿ ಕಚೇರಿ, ಬಳ್ಳಾರಿಯ ಕೌಲ್‍ಬಜಾರ್‌ನ ಸೆಂಟ್ ಜೋಸೆಫ್ ಪ್ರೌಢಶಾಲೆಯ 4ನೇ ತರಗತಿ ಕೊಠಡಿ, 5 ನೇ ತರಗತಿ ಕೊಠಡಿ ಹಾಗೂ 6ನೇ ತರಗತಿ ಕೊಠಡಿ ಮತ್ತು ರೂಪನಗುಡಿ ಗ್ರಾಮ ಪಂಚಾಯಿತಿ ಕಚೇರಿ ಸೇರಿ 05 ಮತಗಟ್ಟೆ ಕೇಂದ್ರಗಳು.

ಬಳ್ಳಾರಿ ನಗರ ಕ್ಷೇತ್ರ
ಬಳ್ಳಾರಿ ನಗರ ಕ್ಷೇತ್ರದಲ್ಲಿ ಬಳ್ಳಾರಿ ನಗರದ ಅಂಬಲಿಬಾಗ್‍ನ ಅಂಚೆ ಕಚೇರಿ ಹತ್ತಿರದ ಸರ್ಕಾರಿ ಬಾಲಕೀಯರ ಕಾಲೇಜಿನ ಕೊಠಡಿ ಸಂಖ್ಯೆ 42, ಕೊಠಡಿ ಸಂಖ್ಯೆ 43, ಕೊಠಡಿ ಸಂಖ್ಯೆ 44, ಎಸ್.ಎನ್.ಪೇಟೆ ಮುಖ್ಯ ರಸ್ತೆಯ ಎಸ್‍ಎಸ್‍ಎ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕೊಠಡಿ ಸಂಖ್ಯೆ 01, ಕೊಠಡಿ ಸಂಖ್ಯೆ 02, ಗಾಂಧಿನಗರದ ಬಾಲಭಾರತಿ ಇಂಗ್ಲೀಷ್ ಮಾಧ್ಯಮ ಶಾಲೆಯ ಕೊಠಡಿ ಸಂಖ್ಯೆ 01, ಕೊಠಡಿ ಸಂಖ್ಯೆ 02 ಸೇರಿ ಒಟ್ಟು 07 ಮತಗಟ್ಟೆ ಕೇಂದ್ರಗಳು.

ಸಂಡೂರು ಕ್ಷೇತ್ರ
ಸಂಡೂರು ಕ್ಷೇತ್ರ ವ್ಯಾಪ್ತಿಯಲ್ಲಿ ತೋರಣಗಲ್ಲು ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿ ಸಂಖ್ಯೆ 01, ಕೊಠಡಿ ಸಂಖ್ಯೆ 02, ಸಂಡೂರು ಪಟ್ಟಣದ ತಾಲ್ಲೂಕು ಕಚೇರಿ ಮತ್ತು ಚೋರನೂರು ಹೋಬಳಿಯ ನಾಡಕಚೇರಿ ಕಾರ್ಯಾಲಯ ಸೇರಿ ಒಟ್ಟು 04 ಮತಗಟ್ಟೆ ಕೇಂದ್ರಗಳು.‌

ಇದನ್ನೂ ಓದಿ:Tamarind Fruit Benefits: ಜೀರ್ಣಶಕ್ತಿ ಹೆಚ್ಚಿಸಿ ತೂಕ ಇಳಿಸಲು ಹುಣಸೇ ಹಣ್ಣು ಸುಲಭದ ಉಪಾಯ!

ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆಗೆ ಜೂನ್ 03 ರಂದು ಮತದಾನ ನಡೆಯಲಿದ್ದು, ಈಗಾಗಲೇ ನೋಂದಾಯಿಸಿಕೊಂಡಿರುವ ಎಲ್ಲಾ ಅರ್ಹ ಮತದಾರರು ಅಂದು ತಪ್ಪದೇ ಮತಗಟ್ಟೆ ಕೇಂದ್ರಗಳಿಗೆ ತೆರಳಿ ಮತದಾನ ಮಾಡಬೇಕು ಎಂದು ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ದೇಶ

PM Narendra Modi: ಒಡಿಶಾ ಸಿಎಂ ಆರೋಗ್ಯ ಹದಗೆಟ್ಟಿರುವ ಹಿಂದೆ ಇದ್ಯಾ ಭಾರೀ ಸಂಚು? ಏನಂದ್ರು ಪ್ರಧಾನಿ ಮೋದಿ?-ವಿಡಿಯೋ ಇದೆ

PM Narendra Modi: ಪಟ್ನಾಯಕ್‌ ಅವರ ಆರೋಗ್ಯ ಸ್ಥಿತಿ ಇದ್ದಕ್ಕಿದ್ದಂತೆ ಇಷ್ಟೊಂದು ಹದಗೆಟ್ಟಿರುವ ಹಿಂದೆ ಏನೋ ಸಂಚು ಇದೆ ಅವರ ಆಪ್ತರು ಆಗಾಗ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಪಟ್ನಾಯಕ್‌ ಜೊತೆಗಿದ್ದುಕೊಂಡೇ ಅವರ ಅಧಿಕಾರವನ್ನು ಮೋಜಿಗೆ ಬಳಸಿಕೊಳ್ಳುತ್ತಿರುವವರೇ ಅವರನ್ನು ನಿಧಾನವಾಗಿ ಅನಾರೋಗ್ಯಕ್ಕೆ ತಳ್ಳುತ್ತಿದ್ದಾರೆಯೇ ಎಂಬ ಅನುಮಾನ ಕಾಡುತ್ತಿದೆ. ಈ ಅನುಮಾನಕ್ಕೆ ತೆರೆ ಬೀಳಬೇಕಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

VISTARANEWS.COM


on

PM Narendra Modi
Koo

ಪಾಟ್ನಾ: ಲೋಕಸಭೆ ಚುನಾವಣೆ(Lok Sabha Election 2024)ಯ ಕೊನೆಯ ಹಂತಕ್ಕೆ ತಲುಪಿದ್ದು, ರಾಜಕೀಯ ಮುಖಂಡರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಬಾರಿ ವಿಧಾನಸಭೆ ಚುನಾವಣೆಯನ್ನೂ ಎದುರಿಸುತ್ತಿರುವ ಒಡಿಶಾದಲ್ಲಿ ಕೊನೆಯ ಹಂತದ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ(PM Narendra Modi) ಸಿಎಂ ನವೀನ್‌ ಪಟ್ನಾಯಕ್‌ (Naveen Patnaik) ಅವರ ಆರೋಗ್ಯದ ಬಗ್ಗೆ ಅನುಮಾನ ವ್ಯಕ್ತಪಡಿಸಿ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಇದೀಗ ಈ ವಿಡಿಯೂ ದೇಶವ್ಯಾಪಿ ಬಹಳ ಸದ್ದು ಮಾಡುತ್ತಿದೆ.

ಒಡಿಶಾದ ಮಯೂರ್‌ಭಂಜ್‌ನಲ್ಲಿ ಆಯೋಜಿಸಿದ್ದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಡಿಶಾದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಹಾಲಿ ಸಿಎಂ ನವೀನ್‌ ಪಟ್ನಾಯಕ್‌ ಅವರ ಆರೋಗ್ಯ ಕ್ಷೀಣಿಸಲು ಕಾರಣ ಏನೆಂಬುದರ ಬಗ್ಗೆ ತನಿಖೆಗೆ ಆದೇಶಿಸುತ್ತೇವೆ ಎಂದು ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಕಳೆದೊಂದು ವರ್ಷಗಳಿಂದ ನವೀನ್‌ ಬಾಬು(ಪಟ್ನಾಯಕ್‌) ಅವರ ಆರೋಗ್ಯ ಸ್ಥಿತಿ ದಿನೇ ದಿನೇ ಹದಗೆಡುತ್ತಿರುವ ಬಗ್ಗೆ ಅವರ ಹಿತೈಷಿಗಳು ಇತ್ತೀಚೆಗೆ ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಕಳೆದೊಂಡು ವರ್ಷಗಳಿಂದ ಪಟ್ನಾಯಕ್‌ ಅವರ ಪರಿಚಯಸ್ಥರು ಯಾರೇ ನನ್ನನ್ನು ಭೇಟಿ ಮಾಡಿದರೂ ಅವರ ಆರೋಗ್ಯದ ಬಗ್ಗೆ ಚರ್ಚೆ ಮಾಡುತ್ತಾರೆ. ಈಗೀಗ ಅವರಿಗೆ ತಮ್ಮ ಸ್ವಂತ ಕೆಲಸಗಳನ್ನೂ ಮಾಡಿಕೊಳ್ಳಲಾಗದಂತಹ ಅನಾರೋಗ್ಯ ಕಾಡುತ್ತಿದೆ ಎಂಬುದು ಅವರ ಆಪ್ತರಿಂದ ತಿಳಿದಿದೆ.

ಪಟ್ನಾಯಕ್‌ ಅವರ ಆರೋಗ್ಯ ಸ್ಥಿತಿ ಇದ್ದಕ್ಕಿದ್ದಂತೆ ಇಷ್ಟೊಂದು ಹದಗೆಟ್ಟಿರುವ ಹಿಂದೆ ಏನೋ ಸಂಚು ಇದೆ ಅವರ ಆಪ್ತರು ಆಗಾಗ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಪಟ್ನಾಯಕ್‌ ಜೊತೆಗಿದ್ದುಕೊಂಡೇ ಅವರ ಅಧಿಕಾರವನ್ನು ಮೋಜಿಗೆ ಬಳಸಿಕೊಳ್ಳುತ್ತಿರುವವರೇ ಅವರನ್ನು ನಿಧಾನವಾಗಿ ಅನಾರೋಗ್ಯಕ್ಕೆ ತಳ್ಳುತ್ತಿದ್ದಾರೆಯೇ ಎಂಬ ಅನುಮಾನ ಕಾಡುತ್ತಿದೆ. ಈ ಅನುಮಾನಕ್ಕೆ ತೆರೆ ಬೀಳಬೇಕಿದೆ. ಜೂ.10ರ ನಂತರ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ನವೀನ್‌ ಬಾಬು ಅವರ ಅನಾರೋಗ್ಯಕ್ಕೆ ಕಾರಣ ಏನೆಂಬುದನ್ನು ಪತ್ತೆ ಹಚ್ಚಲು ವಿಶೇಷ ಸಮಿತಿ ರಚಿಸಲಾಗುತ್ತದೆ ಎಂದು ಹೇಳಿದ್ದಾರೆ.

ಇನ್ನು ಒಡಿಶಾದಲ್ಲಿ ಬಿಜೆಡಿಯ 25 ವರ್ಷಗಳ ಆಡಳಿತ ಅಂತ್ಯಗೊಳ್ಳುವುದು ಖಚಿತ. ಬಿಜೆಪಿಯ ವ್ಯಕ್ತಿ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಒಡಿಶಾಗೆ ಒಡಿಯಾ ವ್ಯಕ್ತಿಯೇ ಸಿಎಂ ಆದರೆ ಚೆಂದ. ಹೊರಗಿನವರ ಕೈಗೆ ಅಧಿಕಾರ ಕೊಡಲು ಜನರಿಗೂ ಮನಸಿಲ್ಲ ಎಂದು ಪರೋಕ್ಷವಾಗಿ ಬಿಜೆಡಿ ಸಿಎಂ ಸ್ಥಾನದ ಆಕಾಂಕ್ಷಿ ಪಾಂಡಿಯನ್‌ಗೆ ಟಾಂಗ್‌ ಕೊಟ್ಟಿದ್ದಾರೆ.

ಇದನ್ನೂ ಓದಿ:Bomb Threat: ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ ಸಂದೇಶ; ಆತಂಕ ಸೃಷ್ಟಿ

Continue Reading

ರಾಜಕೀಯ

MLC Election: ಒಂದಾದ ಸಿಎಂ- ಡಿಸಿಎಂ, ಪರಂ ಗರಂ; ಅಖಾಡಕ್ಕಿಳಿದ ರಮೇಶ್‌ ಕುಮಾರ್‌

MLC Election: ಪರಿಷತ್ ಅಭ್ಯರ್ಥಿ ಆಯ್ಕೆ ವಿಷ್ಯದಲ್ಲಿ ಹಿರಿಯ ನಾಯಕರ ಸಲಹೆ ಪಡೆದಿಲ್ಲ. ಇಂಥ ಆಯ್ಕೆಗಳನ್ನು ನಾಲ್ಕು ಗೋಡೆ ನಡುವೆ ಮಾಡುವುದು ಸರಿಯಲ್ಲ ಎಂದು ಗೃಹ ಸಚಿವ ಪರಮೇಶ್ವರ ಬಹಿರಂಗವಾಗಿ ಟೀಕಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿಯೂ ಕೈ ಪಾಳಯದಲ್ಲಿ ಈ ಬಗ್ಗೆ ಅಸಮಾಧಾನ ಮೂಡಿತ್ತು.

VISTARANEWS.COM


on

mlc election
Koo

ಬೆಂಗಳೂರು: ವಿಧಾನ ಪರಿಷತ್‌ಗೆ (MLC Election) ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಬಿಕ್ಕಟ್ಟಿನ ಚೆಂಡು ಸದ್ಯಕ್ಕೆ ಹೈಕಮಾಂಡ್ ಅಂಗಳದಲ್ಲಿದೆ. ದೆಹಲಿಯಲ್ಲಿ ನಡೆಯುತ್ತಿರುವ ಸರಣಿ ಸಭೆಗಳಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ (DCM DK Shivakumar) ಸದ್ಯ ತಮ್ಮ ಭಿನ್ನಮತಗಳನ್ನು ಮರೆತು ಒಂದಾಗಿದ್ದಾರೆ. ಈ ನಡುವೆ ಹಿರಿಯ ನಾಯಕ, ಗೃಹ ಸಚಿವ ಪರಮೇಶ್ವರ (G Parameshwara) ಅವರು, ಹಿರಿಯ ನಾಯಕರನ್ನು ಕಡೆಗಣಿಸಲಾಗುತ್ತಿದೆ ಎಂಬ ಬಾಂಬ್‌ ಹಾಕಿದ್ದಾರೆ. ಕೋಲಾರದ ಹಿರಿಯ ನಾಯಕ ರಮೇಶ್‌ ಕುಮಾರ್‌ (Ramesh Kumar) ಅವರು ಕೂಡ ತಮ್ಮ ದಾಳ ಉರುಳಿಸಲು ಮುಂದಾಗಿದ್ದಾರೆ.

ರಾಜಕೀಯ ವರ್ಚಸ್ಸಿಗಾಗಿ ನನಗೆ ನೀನು, ನಿನಗೆ ನಾನು ಎಂಬ ತತ್ವ ಉಪಯೋಗಿಸಿರುವ ಸಿಎಂ ಹಾಗೂ ಡಿಸಿಎಂ, ತಮ್ಮ ಆಪ್ತರಿಗೆ ಟಿಕೆಟ್‌ ಕೊಡಿಸುವುದು ಬಹುತೇಕ ಖಚಿತವಾಗಿದೆ. ಪರಿಷತ್ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಡಿಕೆಶಿ, ಸಿದ್ದರಾಮಯ್ಯ ಒಂದಾಗಿದ್ದು, ಹಿರಿಯ ನಾಯಕರ ಅಭಿಪ್ರಾಯವನ್ನು ತೆಗೆದುಕೊಳ್ಳದೇ ದೆಹಲಿಗೆ ದೌಡಾಯಿಸಿದ್ದಾರೆ. ಎರಡು ಪ್ರತ್ಯೇಕ ಪಟ್ಟಿ ಹಿಡಿದು ಹೊರಟಿರುವ ನಾಯಕರು ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಭೇಟಿ ಮಾಡಿದ್ದಾರೆ. ನಾಳೆ ಎಐಸಿಸಿ ಅಧ್ಯಕ್ಷ ಖರ್ಗೆಯವರನ್ನು (Mallikarjun Kharge) ಭೇಟಿ ಮಾಡಲಿದ್ದಾರೆ.

ಸಿದ್ದರಾಮಯ್ಯ ಪುತ್ರ ಯತೀಂದ್ರ ಹಾಗೂ ಗೋವಿಂದರಾಜುಗೆ ಟಿಕೆಟ್ ಕನ್ಫರ್ಮ್ ಎಂದು ಮೂಲಗಳು ತಿಳಿಸಿವೆ. ಈ ಉಭಯರ ಪರವಾಗಿ ಸಿಎಂ ಸಿದ್ದರಾಮಯ್ಯ ಬ್ಯಾಟಿಂಗ್ ಮಾಡಿದ್ದಾರೆ. ಪುತ್ರ ಯತೀಂದ್ರ ತಂದೆಗಾಗಿ ವರುಣ ಕ್ಷೇತ್ರ ತ್ಯಾಗ ಮಾಡಿದ್ದರು. ತ್ಯಾಗ ಮಾಡಿದ ಮಗನಿಗೆ ಪರಿಷತ್ ಸ್ಥಾನ ಕೊಡಿಸಲು ಸಿದ್ದರಾಮಯ್ಯ ಟೊಂಕ ಕಟ್ಟಿದ್ದಾರೆ. ಇತ್ತ ಗೋವಿಂದರಾಜು ಪರವಾಗಿಯೂ ಸಿಎಂ‌ ಬ್ಯಾಟಿಂಗ್ ಮಾಡಿದ್ದಾರೆ.

ಡಿಕೆಶಿ ಹೇಳಿರುವ ಹೆಸರಿಗೂ ಸಿಎಂ ಎಸ್ ಎಂದಿದ್ದಾರೆ ಎನ್ನುತ್ತಿವೆ ಮೂಲಗಳು. ವಿನಯ್ ಕಾರ್ತಿಕ್ ಹಾಗೂ ಮುಳುಗುಂದ್ ಪರ ಡಿಕೆಶಿ ನಿಂತಿದ್ದಾರೆ ಎನ್ನುತ್ತಿವೆ ದೆಹಲಿಯ ಮೂಲಗಳು. ಹೀಗಾಗಿ ಈ ಬಾರಿ ಪರಿಷತ್ ಅಭ್ಯರ್ಥಿ ಆಯ್ಕೆಯಲ್ಲಿ ಸಿಎಂ, ಡಿಸಿಎಂ ಇಬ್ಬರ ಕೈ ಮೇಲುಗೈ ಆಗೋದರಲ್ಲಿ ಯಾವುದೇ ಅನುಮಾನವಿಲ್ಲ.

ಇದರಿಂದ ಕಾಂಗ್ರೆಸ್ ಪಕ್ಷದ ಹಿರಿಯ ಹುದ್ದರಿಗಳಲ್ಲಿ ಅಸಮಾಧಾನ ಮೂಡಿದೆ. ದೆಹಲಿಯಲ್ಲಿ ಚರ್ಚೆಗೂ ಮುನ್ನವೇ ಕೈ ಪಾಳಯದಲ್ಲಿನ ಹಿರಿಯ ನಾಯಕರ ಅಸಮಾಧಾನ ಮುಗಿಲು ಮುಟ್ಟಿದ್ದು, ಪ್ರತಿ ಬಾರಿಯೂ ಹಿರಿಯ ನಾಯಕರ ಕಡೆಗಣಿನೆಯಾಗುತ್ತಿದೆ ಎಂದು ಕೆಲವರು ಬಹಿರಂಗ ಅಸಮಾಧಾನ ತೋಡಿಕೊಂಡಿದ್ದಾರೆ. ಪರಿಷತ್ ಅಭ್ಯರ್ಥಿ ಆಯ್ಕೆ ವಿಷ್ಯದಲ್ಲಿ ಹಿರಿಯ ನಾಯಕರ ಸಲಹೆ ಪಡೆದಿಲ್ಲ. ಇಂಥ ಆಯ್ಕೆಗಳನ್ನು ನಾಲ್ಕು ಗೋಡೆ ನಡುವೆ ಮಾಡುವುದು ಸರಿಯಲ್ಲ ಎಂದು ಗೃಹ ಸಚಿವ ಪರಮೇಶ್ವರ ಬಹಿರಂಗವಾಗಿ ಟೀಕಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿಯೂ ಕೈ ಪಾಳಯದಲ್ಲಿ ಈ ಬಗ್ಗೆ ಅಸಮಾಧಾನ ಮೂಡಿತ್ತು. ಈ ಬಾರಿಯೂ ಸಿಎಂ, ಡಿಸಿಎಂ ತಮ್ಮ ತಮ್ಮ ಆಪ್ತರಿಗೆ ಟಿಕೆಟ್ ಕೊಡಿಸುವುದು ಪಕ್ಕಾ ಆಗಿದ್ದು, ಇವರಿಬ್ಬರ ನಿರಂಕುಶ ಓಟಕ್ಕೆ ಎಐಸಿಸಿ ಅಧ್ಯಕ್ಷ ಖರ್ಗೆ ಬ್ರೇಕ್ ಹಾಕುತ್ತಾರಾ ನೋಡಬೇಕಿದೆ.

ಇತ್ತ ಕೊನೆಯ ಕ್ಷಣದಲ್ಲಿ ಪರಿಷತ್ ಸ್ಪರ್ಧೆಗೆ ರಮೇಶ್ ಕುಮಾರ್ ಎಂಟ್ರಿ ಕೊಟ್ಟಿದ್ದಾರೆ. ಕಾಂಗ್ರೆಸ್‌ಗೆ ಸಿಗುವ ಏಳು ಸ್ಥಾನಕ್ಕೆ ಭಾರಿ ಪೈಪೋಟಿ ಇದ್ದು, ಏಳು ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆ ಮಾಡಲು ದೆಹಲಿಗೆ ಹೋಗುವ ಮುನ್ನವೇ ರಮೇಶ್ ಕುಮಾರ್ ಅವರು ಸಿಎಂ ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಕಾಂಗ್ರೆಸ್ ಶಾಸಕರ ಜತೆ ಹೋಗಿ ಲಾಬಿ ಮಾಡಿರುವ ರಮೇಶ್‌ ಕುಮಾರ್‌, ಪರಿಷತ್ ಸ್ಥಾನ ತಮಗೆ ಕೊಡಿಸುವಂತೆ ಪಟ್ಟು ಹಿಡಿದಿದ್ದಾರೆ.

ನನ್ನ ಲಿಸ್ಟ್‌ನಲ್ಲಿ ನೀನು ಇದ್ದೀಯಾ. ಡಿಕೆ ಶಿವಕುಮಾರ್ ಬಳಿ ಹೋಗು. ಅವರ ಪಟ್ಟಿಯಲ್ಲಿ ಹೆಸರು ಬರುವ ರೀತಿ ಮಾಡು ಎಂದು ಸಿದ್ದರಾಮಯ್ಯ ಓಲೈಸಿ ಕಳಿಸಿದ್ದಾರೆ. ಹೀಗಾಗಿ ಡಿಕೆಶಿ ಮನೆಗೂ ತೆರಳಿದ ರಮೇಶ್ ಕುಮಾರ್ ಆಂಡ್ ಟೀಮ್, ಪರಿಷತ್ ಸ್ಥಾನ ಕೊಡಿಸುವಂತೆ ಪಟ್ಟು ಹಿಡಿದಿದ್ದಾರೆ. ಆಕಾಂಕ್ಷಿಗಳ ಸಂಖ್ಯೆ ದುಪ್ಪಟ್ಟು ಇದೆ. ಆದರೂ ನಿಮ್ಮ ಬಗ್ಗೆ ಹೈಕಮಾಂಡ್ ಜತೆ ಮಾತನಾಡ್ತೀವಿ ಎಂದು ಹೇಳಿ ಡಿಕೆಶಿ ಕಳಿಸಿದ್ದಾರೆ ಎಂದು ತಿಳಿದುಬಂದಿದೆ.

ಹೀಗಾಗಿ ದೆಹಲಿಯ ಕಾಂಗ್ರೆಸ್ ಬೆಳವಣಿಗೆಗಳ ಮೇಲೆ ರಮೇಶ್ ಕುಮಾರ್ ಕಣ್ಣಿಟ್ಟಿದ್ದಾರೆ. ಅತ್ತ ಕೆ.ಎಚ್‌ ಮುನಿಯಪ್ಪ ಬಣ ರಮೇಶ್‌ ಕುಮಾರರ ಆಕಾಂಕ್ಷೆಗೆ ಅಡ್ಡಗಾಲಾಗಿದೆ. ಈ ವಿರೋಧದ ನಡುವೆಯೂ ರಮೇಶ್ ಕುಮಾರ್‌ಗೆ ಸ್ಥಾನ ಒಲಿಯಲಿದೆಯೇ ನೋಡಬೇಕಿದೆ.

ಇದನ್ನೂ ಓದಿ: MLC Election: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವು ಖಚಿತ: ಬೇಳೂರು

Continue Reading
Advertisement
Karnataka Weather
ಕರ್ನಾಟಕ3 mins ago

Karnataka Weather: ಇಂದು ದಕ್ಷಿಣ ಕನ್ನಡ, ಹಾಸನ, ಕೊಡಗು ಸೇರಿ ವಿವಿಧೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ!

Hair Growth Tips
ಆರೋಗ್ಯ18 mins ago

Hair Growth Tips: ಕೂದಲು ಉದುರುವುದಕ್ಕೆ ಬೀಟಾ ಕ್ಯಾರೊಟಿನ್‌ ಮದ್ದು!

Dina Bhavishya
ಭವಿಷ್ಯ1 hour ago

Dina Bhavishya: ಈ ರಾಶಿಯವರು ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ!

Girlfriend
ದೇಶ6 hours ago

Girlfriend: ‘ಬಾಡಿಗೆ ಗರ್ಲ್‌ಫ್ರೆಂಡ್‌’ ಆಗಲು ಸಿದ್ಧಳೆಂದ ಯುವತಿ; ಈಕೆಯ ‘ದರಪಟ್ಟಿ’ ನೋಡಿ,‌ ನೀವೂ ಟ್ರೈ ಮಾಡಿ

CAA Certificate
ದೇಶ7 hours ago

CAA Certificate: ದೀದಿ ವಿರೋಧದ ಮಧ್ಯೆಯೂ ಬಂಗಾಳದಲ್ಲಿ ಸಿಎಎ ಜಾರಿಗೆ ತಂದ ಕೇಂದ್ರ; ಪೌರತ್ವ ಪ್ರದಾನ!

Modi Meditation
ದೇಶ8 hours ago

Modi Meditation: ಮೋದಿಗೆ ಧ್ಯಾನ ಮಾಡಲು ಬಿಡಬೇಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ಮೊರೆ!

T20 World Cup 2024
ಕ್ರೀಡೆ8 hours ago

T20 World Cup 2024: ಟಿ20 ವಿಶ್ವಕಪ್​ನಲ್ಲಿ ಎಷ್ಟು ಬೌಲರ್​ಗಳು ಹ್ಯಾಟ್ರಿಕ್​ ವಿಕೆಟ್​ ಕಿತ್ತ ಸಾಧನೆ ಮಾಡಿದ್ದಾರೆ?

Self Harming
ಕರ್ನಾಟಕ9 hours ago

Self Harming: ಶಾಲೆಗೆ ಹೋಗಲು ಬೇಸತ್ತು 11 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ

Rudram II
ದೇಶ9 hours ago

Rudram II: ಆಗಸದಿಂದಲೇ ವೈರಿಗಳನ್ನು ನಾಶಪಡಿಸುವ ರುದ್ರಂ II ಕ್ಷಿಪಣಿ ಪ್ರಯೋಗ ಯಶಸ್ವಿ; ಶತ್ರುಗಳಿಗೆ ನಡುಕ!

Chahal-Dhanashree
ಕ್ರೀಡೆ9 hours ago

Chahal-Dhanashree: ಶೀಘ್ರದಲ್ಲೇ ಸಿಹಿ ಸುದ್ದಿ ನೀಡಲಿದ್ದಾರಾ ಚಹಲ್?; ಕುತೂಹಲ ಮೂಡಿಸಿದ ಪತ್ನಿಯ ಪೋಸ್ಟ್!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌