Amit Shah: ಲೋಕಸಭೆಗೆ ಬಿಜೆಪಿ ಟಿಕೆಟ್‌; ಫೆ. 20-21ಕ್ಕೆ ಮಹತ್ವದ ಸಭೆ ನಡೆಸಲು ಅಮಿತ್‌ ಶಾ ನಿರ್ಧಾರ! - Vistara News

ರಾಜಕೀಯ

Amit Shah: ಲೋಕಸಭೆಗೆ ಬಿಜೆಪಿ ಟಿಕೆಟ್‌; ಫೆ. 20-21ಕ್ಕೆ ಮಹತ್ವದ ಸಭೆ ನಡೆಸಲು ಅಮಿತ್‌ ಶಾ ನಿರ್ಧಾರ!

Amit Shah: ಅಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಅಗರವಾಲ್ ಅವರ ನೇತೃತ್ವದಲ್ಲಿ ಸಭೆಗಳು ನಡೆಯಲಿವೆ. ಅಂದಿನ ಸಭೆಗಳಲ್ಲಿ ಎಲ್ಲ ಲೋಕಸಭಾ ಕ್ಷೇತ್ರದ ಬಗ್ಗೆ ಚರ್ಚೆಯಾಗಲಿದೆ. ಕೋರ್ ಕಮಿಟಿ ಸೇರಿದಂತೆ ಕ್ಲಸ್ಟರ್ ಪ್ರಮುಖರ ಜತೆ ಸಭೆ ನಡೆಸಲು ನಿರ್ಧಾರ ಮಾಡಲಾಗಿದೆ.

VISTARANEWS.COM


on

Lok Sabha Elections 2024 Amit Shah to hold BJP meeting on February 20 and 21
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಮತ್ತೊಮ್ಮೆ ಅಧಿಕಾರದ ಗದ್ದುಗೆ ಹಿಡಿಯಲು ಮುಂದಾಗಿರುವ ಬಿಜೆಪಿ ಇದಕ್ಕಾಗಿ ಸಾಕಷ್ಟು ಸಿದ್ಧತೆಗಳನ್ನು ನಡೆಸುತ್ತಿದೆ. ಅದರಲ್ಲೂ ದಕ್ಷಿಣ ಭಾರತದ ರಾಜ್ಯಗಳಿಗೆ ಹೆಚ್ಚು ಒತ್ತು ನೀಡುತ್ತಿದ್ದು, ಈ ಭಾಗದಲ್ಲಿ ಹೆಚ್ಚಿನ ಸೀಟ್‌ಗಳನ್ನು ಪಡೆದುಕೊಳ್ಳಲು ಕಾರ್ಯತಂತ್ರಗಳನ್ನು ಹೆಣೆಯುತ್ತಿದೆ. ಈ ಸಂಬಂಧ ರಾಜ್ಯಕ್ಕೆ ಭೇಟಿ ನೀಡಿರುವ ಕೇಂದ್ರ ಗೃಹ ಸಚಿವ, ಬಿಜೆಪಿ ನಂಬರ್‌ 2 ನಾಯಕ, ರಾಜಕೀಯ ಚಾಣಕ್ಯ ಖ್ಯಾತಿಯ ಅಮಿತ್‌ ಶಾ (Amit Shah) ಅವರು ಮೈಸೂರಿನಲ್ಲಿ ಬಿಜೆಪಿ (BJP Karnataka) ಕೋರ್‌ ಕಮಿಟಿ ಮೀಟಿಂಗ್‌ (BJP Core Committee Meeting) ನಡೆಸಿದ್ದಾರೆ. ಅಲ್ಲದೆ, ಅಭ್ಯರ್ಥಿಗಳ ಆಯ್ಕೆ ಮತ್ತು ಮೈತ್ರಿ ವಿಚಾರವಾಗಿ ಚರ್ಚೆ ನಡೆಸಲು ಫೆಬ್ರವರಿ 20, 21ರಂದುಸಭೆಗಳನ್ನು ನಡೆಸಲು ತೀರ್ಮಾನವನ್ನು ಕೈಗೊಂಡಿದ್ದಾರೆ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳನ್ನು ಮೈತ್ರಿಕೂಟದೊಂದಿಗೆ ಗೆಲುವು ಸಾಧಿಸುವ ಬಗ್ಗೆ ಅಮಿತ್‌ ಶಾ ಜತೆಗೆ ಭಾನುವಾರ ನಡೆದ ಕೋರ್‌ ಕಮಿಟಿ ಸಭೆಯಲ್ಲಿ ಚರ್ಚೆಗೆ ಬಂದಿದೆ. ಅಲ್ಲದೆ, ಚುನಾವಣೆ ಸಮೀಪ ಬಂದಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಮತ್ತು ಮೈತ್ರಿ ವಿಚಾರದ ಬಗ್ಗೆ ಒಂದು ನಿರ್ಧಾರಕ್ಕೆ ಬರಬೇಕಿದೆ. ಇನ್ನು ಮೈತ್ರಿ ನಿರ್ಧಾರದ ಬಗ್ಗೆ ಸ್ವಪಕ್ಷೀಯರಿಂದ ಅಸಮಾಧಾನದ ಮಾತುಗಳು ಕೇಳಿ ಬರುತ್ತಿರುವ ಬಗ್ಗೆ ಅಮಿತ್‌ ಶಾ ಸಿಟ್ಟಾಗಿದ್ದಾರೆ ಎನ್ನಲಾಗಿದೆ.

ಬಿಜೆಪಿಯನ್ನು ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಫೆಬ್ರವರಿ 20, 21ರಂದು ಎರಡು ದಿನಗಳ ಕಾಲ ಸಭೆ ನಡೆಸಲು ಅಮಿತ್‌ ಶಾ ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಅಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಅಗರವಾಲ್ ಅವರ ನೇತೃತ್ವದಲ್ಲಿ ಸಭೆಗಳು ನಡೆಯಲಿವೆ. ಅಂದಿನ ಸಭೆಗಳಲ್ಲಿ ಎಲ್ಲ ಲೋಕಸಭಾ ಕ್ಷೇತ್ರದ ಬಗ್ಗೆ ಚರ್ಚೆಯಾಗಲಿದೆ. ಕೋರ್ ಕಮಿಟಿ ಸೇರಿದಂತೆ ಕ್ಲಸ್ಟರ್ ಪ್ರಮುಖರ ಜತೆ ಸಭೆ ನಡೆಸಲು ನಿರ್ಧಾರ ಮಾಡಲಾಗಿದೆ. ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಲು ಮುಹೂರ್ತವನ್ನು ನಿಗದಿ ಮಾಡಲಾಗಿದೆ.

28 ಕ್ಷೇತ್ರವನ್ನೂ ಗೆಲ್ಲುವ ವಿಶ್ವಾಸ

ಸಭೆ ಬಳಿಕ ಮಾತನಾಡಿದ ಮಾಜಿ ಸಚಿವ ಸಿ.ಟಿ. ರವಿ, ಕೋರ್ ಕಮಿಟಿ ಸಭೆ ಮುಗಿದಿದೆ. ಕ್ಲಸ್ಟರ್ ಕಮಿಟಿ ಸಭೆ ನಡೆಯುತ್ತಿದೆ. 28 ಲೋಕಸಭಾ ಕ್ಷೇತ್ರದಲ್ಲಿಯೂ ಎನ್‌ಡಿಎ ಮೈತ್ರಿ ಕೂಟದಿಂದ ಗೆಲ್ಲುವ ಬಗ್ಗೆ ಚರ್ಚೆಯಾಗಿದೆ. ರಾಧಾ ಮೋಹನ್ ಅಗರವಾಲ್ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ರೋಡ್ ಮ್ಯಾಪ್ ಸಿದ್ಧಪಡಿಸುವಂತೆ ಸೂಚನೆ ನೀಡಿದ್ದಾರೆ. ಅದರ ಆಧಾರದ ಮೇಲೆ ಸಭೆ ಕೂಡ ನಡೆಯಲಿದೆ. ಲೋಕಸಭಾ ಚುನಾವಣೆ ಘೋಷಣೆ ಆದ ಬಳಿಕವೇ ಅಭ್ಯರ್ಥಿ ಘೋಷಣೆ ಆಗೋದು ಎಂದು ಸಿ.ಟಿ. ರವಿ ತಿಳಿಸಿದರು.

ಕರ್ನಾಟಕದಲ್ಲಿ ಈಗ 26+1 ಸ್ಥಾನ ಬಿಜೆಪಿ ಪಡೆದುಕೊಂಡಿದೆ. ಅಂದರೆ, ಮೈತ್ರಿಕೂಟ ಪಕ್ಷವಾದ ಜೆಡಿಎಸ್‌ ಸೇರಿ ಈ ಸಂಖ್ಯೆಯನ್ನು ನಾವು ಹೊಂದಿದ್ದೇವೆ. ಒಂದು ಸ್ಥಾನವನ್ನು ಮಾತ್ರ ಕಾಂಗ್ರೆಸ್ ಪಡೆದುಕೊಂಡಿದೆ. ಹೀಗಾಗಿ ಈ ಬಾರಿ ನಾವು 28ಕ್ಕೆ 28 ಕ್ಷೇತ್ರವನ್ನು ಸಹ ಗೆಲ್ಲುವ ವಿಶ್ವಾಸ ಇದೆ ಎಂದು ತಿಳಿಸಿದರು.

ಕರ್ನಾಟಕಕ್ಕೆ ಕೇಂದ್ರದಿಂದ ಕಳೆದ ಹತ್ತು ವರ್ಷದಲ್ಲಿ ನಾಲ್ಕು ಲಕ್ಷದ 91 ಸಾವಿರ ಕೋಟಿ ರೂಪಾಯಿ ಬಂದಿದೆ. ಅವರಿಗೆ ಹೋಲಿಕೆ ಮಾಡಿದರೆ ಮೂರೂವರೆ ಲಕ್ಷ ಕೋಟಿ ರೂಪಾಯಿ ಹೆಚ್ಚಾಗಿ ಬಂದಿದೆ. ಟೂಲ್ ಕಿಟ್ ಆಗಿ ಸಂಚು ಮಾಡಿದ್ದಾರೆ. ಕಾಂಗ್ರೆಸ್ ದೆಹಲಿಯಲ್ಲಿ ಪ್ರತಿಭಟನೆ ಮಾಡಿರುವುದು ಒಂದು ಸಂಚು. ಪ್ರಾದೇಶಿಕತೆಯನ್ನು ಎತ್ತಿ ಕಟ್ಟುವ ಕೆಲಸವನ್ನು ಮಾಡಿದ್ದಾರೆ ಎಂದು ಸಿ.ಟಿ. ಆಕ್ರೋಶವನ್ನು ಹೊರಹಾಕಿದರು.

ಇದನ್ನೂ ಓದಿ: Amit Shah: ಚಾಮುಂಡೇಶ್ವರಿ ಆಶೀರ್ವಾದ ಪಡೆದ ಅಮಿತ್‌ ಶಾ; ಲೋಕಸಭೆಗೆ ರಣಕಹಳೆ ಊದಿದ ಚಾಣಕ್ಯ!

ಕ್ಷೇತ್ರ ಹಂಚಿಕೆ ಚರ್ಚೆ ಆಗಿಲ್ಲ

ಸೀಟು ಹಂಚಿಕೆ ಬಗ್ಗೆ ಈ ಹಂತದಲ್ಲಿ ಚರ್ಚೆಯಾಗಿಲ್ಲ. ಬಿಜೆಪಿಯ ಆಂತರಿಕ ಸಭೆ ಮಾತ್ರ ನಡೆದಿದೆ. ಪಾಸಿಟಿವ್ ಮತ್ತು ನೆಗೆಟೀವ್ ಮಾತ್ರ ಚರ್ಚೆಯಾಗಿದೆ. ನಮ್ಮ ಸಾಮರ್ಥ್ಯ ಹಾಗೂ ವಿಪಕ್ಷದ ಸಾಮರ್ಥ್ಯ ಮತ್ತು ದೌರ್ಬಲ್ಯಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಜೆಡಿಎಸ್‌ ಈಗ ಎನ್‌ಡಿಎ ಭಾಗವಾಗಿದೆ. ಜೆಡಿಎಸ್‌ನವರನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ. ಮೈತ್ರಿ ಅಭ್ಯರ್ಥಿಯನ್ನು ಕೂಡ ನಾಯಕರು ನಿರ್ಧಾರ ಮಾಡ್ತಾರೆ ಎಂದು ಸಿ.ಟಿ. ರವಿ ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಆರ್‌ಎಸ್‌ಎಸ್ ಮುಖಂಡ ರಾಜೇಶ್, ಮಾಜಿ ಸಚಿವ ಸಿ.ಟಿ.ರವಿ, ಪ್ರತಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೋರ್‌ ಕಮಿಟಿ ಸಭೆಯಲ್ಲಿ ಭಾಗಿಯಾಗಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

Lok Sabha Election 2024

PM Modi: ಕನ್ಯಾಕುಮಾರಿಯಲ್ಲಿ ಪ್ರಧಾನಿ ಧ್ಯಾನ; ಪ್ರಧಾನಿ ಈ ಸ್ಥಳವನ್ನೇ ಆಯ್ಕೆ ಮಾಡಲು ಏನು ಕಾರಣ?

ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಈ ಬಾರಿ ಲೋಕ ಸಭಾ ಚುನಾವಣಾ ಪ್ರಚಾರದ ಅಂತ್ಯವನ್ನು ಕನ್ಯಾಕುಮಾರಿಯ ಸ್ವಾಮಿ ವಿವೇಕಾನಂದ ಕಲ್ಲಿನ ಸ್ಮಾರಕದಲ್ಲಿ ನಡೆಸಲಿದ್ದಾರೆ. ಇಲ್ಲಿ ಸುಮಾರು 45 ಗಂಟೆಗಳ ಕಾಲ ಅವರು ಕಳೆಯಲಿದ್ದಾರೆ.

VISTARANEWS.COM


on

By

PM Modi
Koo

ಲೋಕಸಭಾ ಚುನಾವಣೆ- 2024ರ (Loksabha election-2024) ಬಿಜೆಪಿ ಪ್ರಚಾರ ಕಾರ್ಯವನ್ನು ಅಂತ್ಯಗೊಳಿಸಿ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಕನ್ಯಾಕುಮಾರಿಗೆ ತೆರಳಲಿದ್ದು, ( Kanyakumari) ಇಲ್ಲಿನ ವಿವೇಕಾನಂದ ಕಲ್ಲಿನ ಸ್ಮಾರಕದಲ್ಲಿ (Vivekananda Rock Memorial) ಮೇ 30ರಿಂದ ಜೂನ್ 1ರವರೆಗೆ ಒಟ್ಟು 45 ಗಂಟೆಗಳ ಕಾಲ ಧ್ಯಾನ ಮಾಡಲಿದ್ದಾರೆ.

ಇದೇ ಸ್ಥಳದಲ್ಲಿ ಭಾರತದ ಆಧ್ಯಾತ್ಮಿಕ ನಾಯಕ ಸ್ವಾಮಿ ವಿವೇಕಾನಂದರು 1892ರಲ್ಲಿ ಮೂರು ದಿನಗಳ ಕಾಲ ಧ್ಯಾನ ಮಾಡಿ ಜ್ಞಾನೋದಯವನ್ನು ಪಡೆದಿದ್ದರು.

2019ರ ಚುನಾವಣಾ ಪ್ರಚಾರದ ಕೊನೆಯಲ್ಲಿ ಪ್ರಧಾನಿ ಮೋದಿ ಅವರು ಉತ್ತರಾಖಂಡದ ಕೇದಾರನಾಥ ದೇಗುಲಕ್ಕೆ ಭೇಟಿ ನೀಡಿ 15 ಗಂಟೆಗಳ ‘ಏಕಾಂತವಾಸ್’ (ಏಕಾಂತ ಧ್ಯಾನ) ಕೈಗೊಂಡಿದ್ದರು.

2014 ರಲ್ಲಿ ಮಹಾರಾಷ್ಟ್ರದ ಪ್ರತಾಪಗಢಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದರು. 1659ರ ನವೆಂಬರ್ ನಲ್ಲಿ ಬಿಜಾಪುರದ ಆದಿಲ್ ಶಾಹಿ ಸುಲ್ತಾನರ ಸೇನಾಪತಿ ಅಫ್ಜಲ್ ಖಾನ್ ಅವರನ್ನು ಕೊಂದು ಯುದ್ಧದಲ್ಲಿ ಗೆದ್ದ ಛತ್ರಪತಿ ಶಿವಾಜಿಗೆ ಗೌರವ ಸಲ್ಲಿಸಿದರು. ಈ ವಿಜಯವು ಮರಾಠಾ ಸಾಮ್ರಾಜ್ಯದ ಮುಖ್ಯಸ್ಥನಾಗಿ ಶಿವಾಜಿಯ ಪಟ್ಟಾಭಿಷೇಕಕ್ಕೆ ದಾರಿ ಮಾಡಿಕೊಟ್ಟಿತು. ಇದನ್ನು ಹಿಂದವಿ ಸ್ವರಾಜ್ ಎಂದು ಛತ್ರಪತಿ ಶಿವಾಜಿ ಕರೆದರು.

ಇದೀಗ ಜೂನ್ 4 ರಂದು ಪ್ರಕಟವಾಗಲಿರುವ ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಮುಂಚಿತವಾಗಿ ಮೋದಿ ಕನ್ಯಾಕುಮಾರಿ ಪ್ರವಾಸ ಯೋಜನೆ ಹಾಕಿಕೊಂಡಿದ್ದಾರೆ.


ವಿವೇಕಾನಂದ ಬಂಡೆಯ ಮಹತ್ವ ಏನು?

ಹಿಂದೂ ಮಹಾಸಾಗರ, ಅರಬ್ಬೀ ಸಮುದ್ರ ಮತ್ತು ಬಂಗಾಳಕೊಲ್ಲಿಯ ಸಂಗಮದಲ್ಲಿರುವ ಭಾರತದ ದಕ್ಷಿಣ ತುದಿಯಾದ ಕನ್ಯಾಕುಮಾರಿಯ ವವತುರೈ ಕಡಲತೀರದಿಂದ ಸುಮಾರು 500 ಮೀಟರ್ ದೂರದಲ್ಲಿರುವ ಈ ದ್ವೀಪದ ಮೇಲೆ ಧ್ಯಾನ ಮಾಡುವಾಗ ಸ್ವಾಮಿ ವಿವೇಕಾನಂದರು ಅಭಿವೃದ್ಧಿ ಹೊಂದಿದ ಭಾರತದ ಕನಸು ಕಂಡಿದ್ದರು.

ಭಾರತದಾದ್ಯಂತ ನಾಲ್ಕು ವರ್ಷಗಳ ಕಾಲ ಅಲೆದಾಡಿದ ಅವರು ದೈವಿಕ ಸ್ವಭಾವ, ಸತ್ಯ, ಶುದ್ಧತೆ, ಪ್ರಾಮಾಣಿಕತೆ, ಪರಿಶ್ರಮ, ಧೈರ್ಯ, ಶಕ್ತಿ ಮತ್ತು ಪ್ರೀತಿಯಲ್ಲಿ ನಂಬಿಕೆಯ ಇಡುವ ತತ್ತ್ವವನ್ನು ಸಾರಿದರು.

ಸ್ವಾಮಿ ರಾಮಕೃಷ್ಣಾನಂದರಿಗೆ 1894ರಲ್ಲಿ ವಿವೇಕಾನಂದರು, ಭಾರತೀಯ ಬಂಡೆಯ ಕೊನೆಯ ತುಣುಕಿನ ಮೇಲೆ ಕುಳಿತು ನಾನು ಒಂದು ಯೋಜನೆಯನ್ನು ಕಂಡಿದ್ದೇನೆ. ಸನ್ಯಾಸಿಗಳು ಅಲೆದಾಡುತ್ತಾ ಜನರಿಗೆ ಆಧ್ಯಾತ್ಮಿಕತೆಯನ್ನು ಕಲಿಸುವುದು ಹುಚ್ಚುತನ. ಬಡವರು ಅತ್ಯಂತ ಕಷ್ಟವಾದ ಜೀವನ ನಡೆಸುತ್ತಿರುವುದು ಅವರ ಅಜ್ಞಾನದಿಂದಾಗಿ. ನಾವು ಅದನ್ನು ಹೋಗಲಾಡಿಸುವ ಬದಲು ಅವರ ರಕ್ತವನ್ನು ಹೀರುತ್ತಿದ್ದೇವೆ ಮತ್ತು ಅವರನ್ನು ಪಾದದಡಿಯಲ್ಲಿ ತುಳಿಯುತ್ತಿದ್ದೇವೆ ಎಂದು ಹೇಳಿದ್ದರು.

1963ರಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ಶತಮಾನೋತ್ಸವದ ಮುನ್ನಾದಿನ ಆರ್‌ಎಸ್‌ಎಸ್ ಕಾರ್ಯಕರ್ತ ಏಕನಾಥ್ ರಾನಡೆ ನೇತೃತ್ವದ ವಿವೇಕಾನಂದ ರಾಕ್ ಸ್ಮಾರಕ ಸಮಿತಿಯು ಈ ಸ್ಥಳವನ್ನು ನೆನಪಿಸಿತ್ತು. ಇದನ್ನು 1970 ರಲ್ಲಿ ರಾಷ್ಟ್ರಪತಿ ವಿ.ವಿ.ಗಿರಿ ಅವರು ಔಪಚಾರಿಕವಾಗಿ ಉದ್ಘಾಟಿಸಿದರು.

ಒಂದು ನಂಬಿಕೆಯ ಪ್ರಕಾರ ಪಾರ್ವತಿ ದೇವಿಯು ಶಿವನಿಗಾಗಿ ಕಾಯುತ್ತಿರುವಾಗ ಇದೇ ಬಂಡೆಯ ಮೇಲೆ ಒಂದೇ ಕಾಲಿನ ಮೇಲೆ ಧ್ಯಾನ ಮಾಡುತ್ತಿದ್ದಳು.

ವವತುರೈನಿಂದ 15 ನಿಮಿಷಗಳ ದೋಣಿ ಸಂಚಾರದ ಮೂಲಕ ಕಲ್ಲಿನ ದ್ವೀಪವನ್ನು ಪ್ರವೇಶಿಸಬಹುದು. ಇದು ಹಿಂದೂ ಮಹಾಸಾಗರ, ಬಂಗಾಳ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರದ ಸಂಗಮ ಸ್ಥಳವಾಗಿದೆ.


ಮೋದಿ ಈ ಸ್ಥಳ ಆಯ್ಕೆ ಮಾಡಿದ್ದು ಯಾಕೆ?

ಪ್ರಧಾನಿ ನರೇಂದ್ರ ಮೋದಿ ಅವರು ವಿವೇಕಾನಂದ ಅವರನ್ನು ತಮ್ಮ ಜೀವನಕ್ಕೆ ಆದರ್ಶ ಎಂದು ಪರಿಗಣಿಸುತ್ತಾರೆ. ಸ್ವಾಮಿ ವಿವೇಕಾನಂದರು ಸ್ಥಾಪಿಸಿರುವ ರಾಮಕೃಷ್ಣ ಮಿಷನ್‌ನ ಸದಸ್ಯರೂ ಆಗಿದ್ದಾರೆ.

ಕಳೆದ ವರ್ಷ ರಾಮಕೃಷ್ಣ ಮಿಷನ್‌ನ 125 ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ ಮೋದಿ, ಸ್ವಾಮಿ ವಿವೇಕಾನಂದರು ಭಾರತದ ಬಗ್ಗೆ ಕಂಡಿರುವ ಕನಸನ್ನು ನನಸು ಮಾಡಲು ಭಾರತವು ಕೆಲಸ ಮಾಡುವುದನ್ನು ಅವರು ಹೆಮ್ಮೆಯಿಂದ ನೋಡುತ್ತಿದ್ದಾರೆ ಎಂದು ನನಗೆ ಖಾತ್ರಿಯಿದೆ ಎಂದು ಹೇಳಿದ್ದರು.

ಈ ಬಾರಿ ತಮಿಳುನಾಡಿನ ಕನ್ಯಾಕುಮಾರಿಯನ್ನು ಅವರು ಧ್ಯಾನ ಮಾಡಲು ಅವರು ಆಯ್ಕೆ ಮಾಡಿರುವುದು ಈ ವರ್ಷದ ಚುನಾವಣಾ ಪ್ರಚಾರದ ಸಮಯದಲ್ಲಿ ಅವರ ಪಕ್ಷ ದಕ್ಷಿಣ ಭಾರತದಲ್ಲಿ ಬಲವಾಗಿರುವುದನ್ನು ಸೂಚಿಸುತ್ತದೆ. ಕಳೆದ ಮೂರು ವರ್ಷಗಳಲ್ಲಿ ಅವರ ಒಟ್ಟು ಪ್ರವಾಸಗಳಲ್ಲಿ ಮೂರನೇ ಒಂದು ಭಾಗದಷ್ಟು ಅವರು ದಕ್ಷಿಣ ಭಾರತಕ್ಕೆ ಪ್ರವಾಸ ಕೈಗೊಂಡಿದ್ದರು. 2024ರಲ್ಲಿ ತಮಿಳುನಾಡಿಗೆ ಏಳು ಭಾರಿ ಭೇಟಿ ನೀಡಿದ್ದಾರೆ.

ದಕ್ಷಿಣದ ರಾಜ್ಯಗಳ ಮೇಲೆ ದೃಷ್ಟಿ

ಕೇರಳ, ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಕರ್ನಾಟಕವು ಒಟ್ಟು 543 ಲೋಕಸಭಾ ಸ್ಥಾನಗಳಲ್ಲಿ 131 ಸ್ಥಾನಗಳನ್ನು ಹೊಂದಿವೆ. ತಮಿಳುನಾಡುವೊಂದೇ ಸಂಸತ್ತಿನಲ್ಲಿ 39 ಸ್ಥಾನಗಳನ್ನು ಹೊಂದಿದೆ. ದಕ್ಷಿಣದಲ್ಲಿ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದರು.

ಮೋದಿ ಭೇಟಿಗೆ ಸಿದ್ಧತೆ ಏನು?

ಗುರುವಾರ ವಿವೇಕಾನಂದ ಕಲ್ಲಿನ ಸ್ಮಾರಕದಲ್ಲಿ ಪ್ರಧಾನಿಯವರ 45 ಗಂಟೆಗಳ ವಾಸ್ತವ್ಯ ಸುಗಮವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಸುಮಾರು 2,000 ಪೊಲೀಸರು ಮತ್ತು ಭದ್ರತಾ ಏಜೆನ್ಸಿಗಳನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: Modi Meditation: ಮೋದಿಗೆ ಧ್ಯಾನ ಮಾಡಲು ಬಿಡಬೇಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ಮೊರೆ!

ತಿರುನೆಲ್ವೇಲಿ ವ್ಯಾಪ್ತಿಯ ಡಿಐಜಿ ಪ್ರವೇಶ್ ಕುಮಾರ್ ಅವರು ಪೊಲೀಸ್ ವರಿಷ್ಠಾಧಿಕಾರಿ ಇ. ಸುಂದರವತನಂ ಅವರೊಂದಿಗೆ ಇಲ್ಲಿನ ಕಲ್ಲಿನ ಸ್ಮಾರಕ, ಬೋಟ್ ಜೆಟ್ಟಿ, ಹೆಲಿಪ್ಯಾಡ್ ಮತ್ತು ರಾಜ್ಯ ಅತಿಥಿ ಗೃಹದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಾರೆ.

ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಚುನಾವಣಾ ಪ್ರಚಾರವನ್ನು ಮುಗಿಸಿದ ಅನಂತರ ಪ್ರಧಾನಿ ಗುರುವಾರ ಮಧ್ಯಾಹ್ನ ತಿರುವನಂತಪುರಂ ವಿಮಾನ ನಿಲ್ದಾಣವನ್ನು ತಲುಪಲಿದ್ದಾರೆ. ಸಂಜೆ ಕನ್ಯಾಕುಮಾರಿಯಲ್ಲಿರುವ ರಾಜ್ಯ ಅತಿಥಿ ಗೃಹ ತಲುಪಿ ದೋಣಿ ಮೂಲಕ ವಿವೇಕಾನಂದ ಕಲ್ಲಿನ ಸ್ಮಾರಕಕ್ಕೆ ತೆರಳಲಿದ್ದಾರೆ. ಅವರು ಶನಿವಾರ ಮಧ್ಯಾಹ್ನದವರೆಗೆ ಅಲ್ಲಿಯೇ ಇರುತ್ತಾರೆ ಎನ್ನಲಾಗಿದೆ.

ಮೋದಿ ಶನಿವಾರ ಸಂಜೆ ವೇಳೆಗೆ ಕನ್ಯಾಕುಮಾರಿ ಹೆಲಿಪ್ಯಾಡ್ ತಲುಪಿ ತಿರುವನಂತಪುರಕ್ಕೆ ಹಿಂತಿರುಗಿ ಅದೇ ದಿನ ದೆಹಲಿಗೆ ತೆರಳಲಿದ್ದಾರೆ.

ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಸರ್ಕಾರವು ಪ್ರಧಾನಿಯವರ ಈ ಭೇಟಿಗೆ ಅನುಮತಿಯನ್ನು ವಿರೋಧಿಸಿ ಪ್ರಸ್ತುತ ಜಾರಿಯಲ್ಲಿರುವ ಚುನಾವಣಾ ಮಾದರಿ ನೀತಿ ಸಂಹಿತೆ ಮತ್ತು ನಡೆಯುತ್ತಿರುವ ಪ್ರವಾಸೋದ್ಯಮ ಋತುವನ್ನು ಉಲ್ಲೇಖಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

Continue Reading

ದೇಶ

PM Narendra Modi: ಪ್ರಧಾನಿ ಮೋದಿ ಸ್ಪರ್ಧೆ ಅನರ್ಹತೆಗೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತ

PM Narendra Modi:ಪ್ರಧಾನಿ ಮೋದಿ ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿದ್ದಾರೆ ಮತ್ತು ತಮ್ಮ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಅರ್ಜಿದಾರ ದೀಪಕ್‌ ಕುಮಾರ್‌ ಆರೋಪಿಸಿದ್ದು, ಮೋದಿ ವಿಮಾನ ಅಪಘಾತ ಮಾಡಿಸಿ ನನ್ನ ಕೊಲೆಗೆ ಯತ್ನಿಸಿದ್ದಾರೆ ಎಂದು ದೂರಿದ್ದಾರೆ. 08.07.2018ರಂದು ಏರ್‌ಇಂಡಿಯಾ ವಿಮಾನ ಅಪಘಾತ ಮಾಡಿಸುವ ಮೂಲಕ ದೇಶದಲ್ಲಿ ಶಾಂತಿ ಸುವ್ಯವಸ್ಥೆ ಕದಡುವ ಪ್ರಯತ್ನ ನಡೆಸಿದ್ದರು ಎಂದು ಅರ್ಜಿಯಲ್ಲಿ ದೀಪಕ್‌ ದೂರಿದ್ದಾರೆ.

VISTARANEWS.COM


on

PM Narendra Modi
Koo

ನವದೆಹಲಿ: ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ(PM Narendra Modi) ಸ್ಪರ್ಧೆಯನ್ನು ಅನರ್ಹ(Disqualification)ಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದಿಲ್ಲಿ ಹೈಕೋರ್ಟ್‌(Delhi high Court) ವಜಾಗೊಳಿಸಿದೆ. ಪ್ರಧಾನಿ ಮೋದಿ ವಿರುದ್ಧ ವಿಮಾನ ಪೈಲಟ್‌(Pilot) ಕ್ಯಾ. ದೀಪಕ್‌ ಕುಮಾರ್‌ ಸಲ್ಲಿಸಿದ್ದ ಅರ್ಜಿಯನ್ನು ಇಂದು ಕೋರ್ಟ್‌ ತಿರಸ್ಕರಿಸಿದೆ. ಪ್ರಧಾನಮಂತ್ರಿ ಅವರು ಭಾರತದ ಸಂವಿಧಾನಕ್ಕೆ ನಿಜವಾದ ನಂಬಿಕೆ ಮತ್ತು ನಿಷ್ಠೆಯನ್ನು ಹೊಂದಿರುವುದಾಗಿ ಸುಳ್ಳು ಪ್ರಮಾಣ ಮಾಡಿದ್ದಾರೆ ಎಂದು ಆರೋಪಿಸಿ ದೀಪಕ್‌ ಕುಮಾರ್‌ ಅರ್ಜಿ ಸಲ್ಲಿಸಿದ್ದರು.

ಪ್ರಧಾನಿ ಮೋದಿ ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿದ್ದಾರೆ ಮತ್ತು ತಮ್ಮ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಅರ್ಜಿದಾರ ದೀಪಕ್‌ ಕುಮಾರ್‌ ಆರೋಪಿಸಿದ್ದು, ಮೋದಿ ವಿಮಾನ ಅಪಘಾತ ಮಾಡಿಸಿ ನನ್ನ ಕೊಲೆಗೆ ಯತ್ನಿಸಿದ್ದಾರೆ ಎಂದು ದೂರಿದ್ದಾರೆ. 08.07.2018ರಂದು ಏರ್‌ಇಂಡಿಯಾ ವಿಮಾನ ಅಪಘಾತ ಮಾಡಿಸುವ ಮೂಲಕ ದೇಶದಲ್ಲಿ ಶಾಂತಿ ಸುವ್ಯವಸ್ಥೆ ಕದಡುವ ಪ್ರಯತ್ನ ನಡೆಸಿದ್ದರು ಎಂದು ಅರ್ಜಿಯಲ್ಲಿ ದೀಪಕ್‌ ದೂರಿದ್ದಾರೆ.

ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಅರ್ಜಿದಾರರು ಪ್ರಧಾನಿ ನರೇಂದ್ರ ಮೋದಿ ನಿರಾಧಾರ ಆರೋಪ ಮಾಡಿದ್ದಾರೆ. ಪ್ರಧಾನಿ ವಿರುದ್ಧದ ಆರೋಪ ನಿರಾಧಾರ. ಸುಖಾ ಸುಮ್ಮನೆ ಪ್ರಧಾನಿ ವಿರುದ್ಧ ಹಗರಣದ ಆರೋಪ ಹೊರಿಸುತ್ತಿದ್ದಾರೆ ಎಂದು ಹೇಳಿರುವ ಕೋರ್ಟ್‌ ದೀಪಕ್‌ ಕುಮಾರ್‌ ಅವರ ಅರ್ಜಿಯನ್ನು ತಿರಸ್ಕರಿಸಿದೆ. ಪ್ರಧಾನಿ ಮೋದಿ ಮಾತ್ರವಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಅಮಿತ್‌ ಶಾ, ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯಾ ಸಿಂದಿಯಾ ಅವರ ಸ್ಪರ್ಧೆಯನ್ನೂ ಅನರ್ಹಗೊಳಿಸುವಂತೆ ದೀಪಕ್‌ ಕುಮಾರ್‌ ತಮ್ಮ ಅರ್ಜಿಯಲ್ಲಿ ಮನವಿ ಮಾಡಿದ್ದರು.

ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ನೀತಿ ಸಂಹಿತೆ ಉಲ್ಲಂಘನೆ(Code of conduct) ಮಾಡಿದ್ದಾರೆ ಅವರನ್ನು ಚುನಾವಣೆಯಿಂದ 6 ವರ್ಷ ಅನರ್ಹಗೊಳಿಸಬೇಕಂದು ಮನವಿ ಮಾಡಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದಿಲ್ಲಿ ಕೋರ್ಟ್‌ ಈ ಹಿಂದೆ ವಜಾಗೊಳಿಸಿತ್ತು. ಆನಂದ್‌ ಎಸ್‌. ಜೋಂದಲ್‌ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ದಿಲ್ಲಿ ಕೋರ್ಟ್‌ ಅದನ್ನು ವಜಾಗೊಳಿಸಿತ್ತು. ಉತ್ತರಪ್ರದೇಶದ ಪಿಲಿಬಿತ್‌ನಲ್ಲಿ ಏ.6ರಂದು ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಸಿಖ್‌ ಮತ್ತು ಹಿಂದೂ ಭಕ್ತರ ಭಕ್ತ ಬಗ್ಗೆ ಉಲ್ಲೇಖಸಿದ್ದರು ಆ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದರು ಎಂದು ಅರ್ಜಿಯಲ್ಲಿ ತಿಳಿಸಿದ್ದರು.

ಇದನ್ನೂ ಓದಿ: Firecracker Explosion: ಪುರಿ ಜಗನ್ನಾಥ ದೇಗುಲದಲ್ಲಿ ಅಗ್ನಿ ದುರಂತ; 15 ಮಂದಿಗೆ ಗಾಯ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವುದನ್ನು ಇಂಡಿಯಾ ಒಕ್ಕೂಟ ಸದಾ ದ್ವೇಷಿಸಿತ್ತು. ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ನೀಡಿದ್ದರೂ ಅದನ್ನು ತಿರಸ್ಕರಿಸಿ ರಾಮಲಲ್ಲಾಗೆ ಅವಮಾನ ಮಾಡಿದ್ದರು. ಅವರ ಪಕ್ಷಗಳಿಂದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಾಯಕರನ್ನು ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿತ್ತು. ʼಶಕ್ತಿʼಯನ್ನು ನಿರ್ಣಾಮ ಮಾಡಬೇಕೆಂದು ಇಂಡಿಯಾ ಪಣತೊಟ್ಟಿದೆ. ಇಡೀ ದೇಶವೇ ಪೂಜಿಸುವ ಶಕ್ತಿಯನ್ನು ಕಾಂಗ್ರೆಸ್‌ ಅವಮಾನಿಸಿದೆ. ಶಕ್ತಿಯನ್ನು ಪೂಜಿಸುವ ದೇಶದ ಜನ ಕಾಂಗ್ರೆಸ್‌ ಅನ್ನು ಎಂದೂ ಕ್ಷಮಿಸಲ್ಲ ಎಂದು ಪಿಲಿಬಿತ್‌ ಅಭ್ಯರ್ಥಿ ಜಿತಿನ್‌ ಪ್ರಸಾದ್‌ ಪರ ಪ್ರಚಾರದ ವೇಳೆ ಪ್ರಧಾನಿ ವಾಗ್ದಾಳಿ ನಡೆಸಿದ್ದರು.

Continue Reading

Lok Sabha Election 2024

Narendra Modi: ಲೋಕಸಭಾ ಚುನಾವಣೆ ಫಲಿತಾಂಶದ 6 ತಿಂಗಳ ಬಳಿಕ ‘ರಾಜಕೀಯ ಭೂಕಂಪ’; ಮೋದಿನ ಮಾತಿನ ಮರ್ಮವೇನು?

VISTARANEWS.COM


on

Narendra Modi
Koo

ಕೋಲ್ಕತ್ತಾ: ಲೋಕಸಭಾ ಚುನಾವಣೆ (Lok Sabha Election)ಯ ಕೊನೆಯ ಹಂತದ ಮತದಾನಕ್ಕೆ ದಿನಗಣನೆ ಆರಂಭವಾಗಿದೆ. ಜೂನ್‌ 4ರಂದು ಫಲಿತಾಂಶ ಹೊರ ಬೀಳಲಿದ್ದು, ಈಗಾಗಲೇ ಈ ಕುರಿತಾದ ಲೆಕ್ಕಾಚಾರ ಆರಂಭವಾಗಿದೆ. ಈ ಮಧ್ಯೆ ಪಶ್ಚಿಮ ಬಂಗಾಳದ ಕಾಕ್ದ್ವೀಪ್‌ನಲ್ಲಿ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು, ಚುನಾವಣಾ ಫಲಿತಾಂಶ ಘೋಷಣೆಯಾದ ಆರು ತಿಂಗಳ ಬಳಿಕ ಬಹುದೊಡ್ಡ ಬದಲಾವಣೆಯಾಗಲಿದ್ದು, ‘ರಾಜಕೀಯ ಭೂಕಂಪ’ ಸಂಭವಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಪಶ್ಚಿಮ ಬಂಗಾಳದ ಗಡಿ ಪ್ರದೇಶಗಳಲ್ಲಿನ ಜನಸಂಖ್ಯಾಶಾಸ್ತ್ರವು ಒಳನುಸುಳುವಿಕೆಯಿಂದಾಗಿ ಬದಲಾಗುತ್ತಿದೆ ಎಂದು ಆರೋಪಿಸಿರುವ ಪ್ರಧಾನಿ, ತೃಣಮೂಲ ಕಾಂಗ್ರೆಸ್ (TMC) ಅಕ್ರಮ ವಲಸಿಗರು ಬಂಗಾಳದಲ್ಲಿ ನೆಲೆಸಲು ತುಷ್ಟೀಕರಣದ ರಾಜಕೀಯದಲ್ಲಿ ತೊಡಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ಹೇಳಿದ್ದೇನು?

ರಾಜ್ಯದ ತೃಣಮೂಲ ಕಾಂಗ್ರೆಸ್ ಸರ್ಕಾರವು ಮುಸ್ಲಿಮರಿಗೆ ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ವಿತರಿಸುತ್ತಿದೆ. ಈ ಮೂಲಕ ಮುಸ್ಲಿಮರಿಗೆ ʼಮೂಲʼ ಒಬಿಸಿಗಳ ಹಕ್ಕುಗಳನ್ನು ನೀಡುತ್ತಿದೆ ಎಂದು ಹೇಳಿದ್ದಾರೆ. “ಬಂಗಾಳದ ಗಡಿ ಪ್ರದೇಶಗಳಲ್ಲಿನ ಜನಸಂಖ್ಯಾಶಾಸ್ತ್ರವನ್ನು ಒಳ ನುಸುಳುವಿಕೆಗೆ ಅವಕಾಶ ನೀಡುವ ಮೂಲಕ ಬದಲಾಯಿಸಲಾಗುತ್ತಿದೆ. ಧಾರ್ಮಿಕವಾಗಿ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವುದನ್ನು ಟಿಎಂಸಿ ವಿರೋಧಿಸುತ್ತದೆ. ಟಿಎಂಸಿ ನಾಯಕರು ಸಿಎಎಯನ್ನು ಏಕೆ ವಿರೋಧಿಸುತ್ತಿದ್ದಾರೆ? ಸಿಎಎ ಬಗ್ಗೆ ಏಕೆ ಸುಳ್ಳು ಹೇಳುತ್ತಿದ್ದಾರೆ?ʼʼ ಎಂದು ಮೋದಿ ಪ್ರಶ್ನಿಸಿದ್ದಾರೆ.

ಮಾಟುವಾ ಸಮುದಾಯದ ಸದಸ್ಯರು ತಮಗೆ ಸಲ್ಲಬೇಕಾದ ಎಲ್ಲ ಗೌರವದೊಂದಿಗೆ ಭಾರತೀಯ ಪೌರತ್ವವನ್ನು ಪಡೆಯುತ್ತಾರೆ ಎಂದು ಮೋದಿ ಘೋಷಿಸಿದ್ದಾರೆ. ಹಿಂದುಗಳು ಮತ್ತು ಮಾಟುವಾಗಳು ಬಂಗಾಳದಲ್ಲಿ ನೆಲೆಸುವುದನ್ನು ಟಿಎಂಸಿ ವಿರೋಧೊಸುತ್ತದೆ ಎಂದು ಅವರು ಹೇಳಿದ್ದಾರೆ. ʼʼಪಶ್ಚಿಮ ಬಂಗಾಳದಲ್ಲಿ ಮೀಸಲಾತಿಯನ್ನು ದುರುಪಯೋಗಪಡಿಲಾಗುತ್ತಿದೆ. ಮುಸ್ಲಿಮರಿಗೆ ಅನುಕೂಲ ಮಾಡಿಕೊಟ್ಟು ಹಿಂದುಳಿದ ವರ್ಗ ಮತ್ತು ದಲಿತರಿಗೆ ಅನ್ಯಾಯ ಎಸಗಲಾಗುತ್ತಿದೆ. ಆ ಮೂಲಕ ಟಿಎಂಸಿ ಸಂವಿಧಾನ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದೆʼʼ ಎಂದು ದೂರಿದ್ದಾರೆ.

ʼʼಅಕ್ರಮ ಒಳನುಸುಳುವಿಕೆ ಕಾರಣದಿಂದ ರಾಜ್ಯದ ಸಾಕಷ್ಟು ಯುವ ಜನತೆ ಅವಕಾಶ ವಂಚಿತವಾಗುತ್ತಿದೆ. ಅಕ್ರಮ ವಲಸಿಗರು ಮುಂದೆ ನಿಮ್ಮ ಆಸ್ತಿ, ಜಾಗದ ಮೇಲೆ ಅತಿಕ್ರಮಣವನ್ನೂ ಮಾಡಬಹುದು. ಹೀಗಾಗಿ ಇಡೀ ದೇಶವೇ ಈ ಬಗ್ಗೆ ಆತಂಕಗೊಂಡಿದೆʼʼ ಎಂದು ಮೋದಿ ಎಚ್ಚರಿಸಿದ್ದಾರೆ.

ಇದನ್ನೂ ಓದಿ: CAA Certificate: ದೀದಿ ವಿರೋಧದ ಮಧ್ಯೆಯೂ ಬಂಗಾಳದಲ್ಲಿ ಸಿಎಎ ಜಾರಿಗೆ ತಂದ ಕೇಂದ್ರ; ಪೌರತ್ವ ಪ್ರದಾನ!

ʼʼನಿಮ್ಮ ವೋಟು ದೇಶದ ರಾಜಕೀಯ ದಿಕ್ಕನ್ನೇ ಬದಲಾಯಿಸಬಹುದು. ಜೂನ್‌ 4ರ ನಂತರ 6 ತಿಂಗಳೊಳಗೆ ರಾಜಕೀಯವಾಗಿ ಬಹಳಷ್ಟು ಬದಲಾವಣೆ ಕಂಡು ಬರಲಿದೆ. ವಂಶಪಾರಂಪರ್ಯ ರಾಜಕಾರಣದಲ್ಲಿ ಬೆಳೆಯುವ ರಾಜಕೀಯ ಪಕ್ಷಗಳು ತಾವಾಗಿಯೇ ಛಿದ್ರವಾಗುತ್ತವೆ. ಆ ಪಕ್ಷಗಳ ಕಾರ್ಯಕರ್ತರು ಸಹ ದಣಿದಿದ್ದಾರೆ. ಅವರೆಲ್ಲರೂ ದೇಶವು ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಮತ್ತು ಅವರ ಪಕ್ಷಗಳು ಯಾವ ದಿಕ್ಕಿನಲ್ಲಿ ಸಾಗುತ್ತಿವೆ ಎಂಬುದನ್ನು ಗಮನಿಸುತ್ತಿದ್ದಾರೆ” ಎಂದು ಪ್ರಧಾನಿ ವಿವರಿಸಿದ್ದಾರೆ. ಮೀನುಗಾರರಿಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದ ವಿವಿಧ ಯೋಜನೆಗಳು, ಉಜ್ವಲ ಮತ್ತು ಆಯುಷ್ಮಾನ್ ಭಾರತ್‌ ಮುಂತಾದ ಯೋಜನೆಗಳನ್ನು ಟಿಎಂಸಿ ರಾಜ್ಯದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿಲ್ಲ ಎಂದೂ ಮೋದಿ ಆರೋಪಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Valmiki Corporation Scam: ಹಗರಣದ ಆರೋಪಿ ಜೊತೆಗೆ ಸಚಿವ ನಾಗೇಂದ್ರ ಕ್ಲೋಸ್‌? ಫೋಟೋ ಬಿಡುಗಡೆ ಮಾಡಿದ ಬಿಜೆಪಿ

Valmiki Corporation Scam: “ಈ ಹಣ ಆಂಧ್ರಪ್ರದೇಶ, ತೆಲಂಗಾಣಕ್ಕೆ ಹೋಗಿದೆ. ಇದನ್ನು ಸಿಬಿಐಗೆ ಒಪ್ಪಿಸಿದರೆ ಸತ್ಯಾಸತ್ಯತೆ ಹೊರಗಡೆಗೆ ಬರುತ್ತೆ. ಮುಖ್ಯಮಂತ್ರಿ ರಾಜೀನಾಮೆ ಕೇಳ್ತೀವಿ. ಮಂತ್ರಿ ರಾಜೀನಾಮೆ ಆಗಲೇಬೇಕು. ಆರನೇ ತಾರೀಖು ಡೆಡ್‌ಲೈನ್ ಕೊಡುತ್ತೇವೆ. ಅದರ ಒಳಗೆ ರಾಜೀನಾಮೆ ಪಡೆಯದಿದ್ರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ” ಎಂದು ಅಶೋಕ್‌ ಆಗ್ರಹಿಸಿದರು.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ನಿಗಮ ಅಧೀಕ್ಷಕ (Valmiki development corporation) ಚಂದ್ರಶೇಖರ್‌ ಆತ್ಮಹತ್ಯೆ (Officer self harming) ಮಾಡಿಕೊಂಡಿರುವ (valmiki corporation scam) ಪ್ರಕರಣದಲ್ಲಿ, ನಿಗಮದಿಂದ ವರ್ಗಾವಣೆಯಾಗಿರುವ ಹಣದ ಅಕ್ರಮದಲ್ಲಿ (Illegal money transfer) ಸಚಿವರ ಹಾಗೂ ಅವರ ಆಪ್ತ ನಾಗರಾಜ್‌ ಎಂಬಾತನ ಕೈವಾಡವಿದೆ ಎಂದು ಬಿಜೆಪಿ ಫೋಟೋ ಸಹಿತ ಆರೋಪಿಸಿದೆ. ನಾಗರಾಜ್‌, ಸಚಿವ ನಾಗೇಂದ್ರ, ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಸಿಎಂ ಸಿದ್ದರಾಮಯ್ಯಗೆ ಆಪ್ತವಾಗಿರುವ ಫೋಟೋಗಳನ್ನು ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ (BJP) ಬಿಡುಗಡೆ ಮಾಡಿದೆ.

ಬಿಜೆಪಿ ಕಚೇರಿಯಲ್ಲಿ ಪ್ರತಿಪಕ್ಷ ನಾಯಕ ಆರ್. ಆಶೋಕ್, ಸಿಟಿ ರವಿ, ಗೋವಿಂದ ಕಾರಜೋಳ, ರಾಮಮೂರ್ತಿ, ಲೆಹರ್ ಸಿಂಗ್, ಪದ್ಮನಾಭ ರೆಡ್ಡಿ ಜಂಟಿ ಸುದ್ದಿಗೋಷ್ಠಿ ನಡೆಸಿದರು.

“ಇದೊಂದು ದೊಡ್ಡ ಹಗರಣ. ನಾಗರಾಜ್ ಅನ್ನುವ ಅಧಿಕಾರಿಯ ಹೆಸರು ಡೆತ್ ನೋಟ್‌ನಲ್ಲಿ ಇದೆ. ಈತ ಬಾರಿ ಪ್ರಭಾವಿ ಅಧಿಕಾರಿ. ಸಚಿವ ನಾಗೇಂದ್ರ ಜತೆ ಬ್ಯುಸಿನೆಸ್ ಪಾರ್ಟನರ್ ಆಗಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯಗೆ ಆಪ್ತರಾಗಿದ್ದಾರೆ. ಹಗರಣದಲ್ಲಿ ಈತನ ಕೈವಾಡವಿದೆ. ಈ ದುಡ್ಡು ಬೇರೆ ರಾಜ್ಯಗಳಿಗೆ ಹೋಗಿದೆ. ಎಲೆಕ್ಷನ್ ಫಂಡ್‌ಗೆ ಬಳಸಿರುವ ಸಾಧ್ಯತೆ ಇದೆ. ಸಚಿವ ನಾಗೇಂದ್ರ ಕೂಡಲೇ ರಾಜೀನಾಮೆ ನೀಡಬೇಕು. ಇದರಲ್ಲಿ ಸಚಿವರ ಪಾತ್ರ ಇರುವುದರಿಂದ ರಾಜ್ಯ ಸರ್ಕಾರದ ವ್ಯಾಪ್ತಿಯ ತನಿಖಾ ಸಂಸ್ಥೆಯಿಂದ ತನಿಖೆ ಆಗಬಾರದು. ಹೀಗಾಗಿ ಇದನ್ನು ಸಿಬಿಐ ತನಿಖೆಗೆ ವಹಿಸಬೇಕು. ಸಿಬಿಐಯಿಂದ ಮಾತ್ರ ನಿಷ್ಪಕ್ಷಪಾತ ತನಿಖೆ ಸಾಧ್ಯ. ದೊಡ್ಡ ದೊಡ್ಡವರು ಸಹ ಇದರಲ್ಲಿ ಪಾತ್ರಧಾರಿಗಳು ಆಗಿರುವುದರಿಂದ ಸಿಬಿಐ ತನಿಖೆಯಿಂದ ಮಾತ್ರ ಸತ್ಯ ಹೊರಬರುತ್ತೆ” ಎಂದು ಬಿಜೆಪಿ ಮುಖಂಡ ಸಿಟಿ ರವಿ ಹೇಳಿದ್ದಾರೆ.

Valmiki Corporation Scam nagaraj with minister nagendra and cm siddaramiah

ಕರ್ನಾಟಕದ ಕಾಂಗ್ರೆಸ್‌ನ ಬ್ರಹ್ಮಾಂಡ ಭ್ರಷ್ಟಾಚಾರದ ಹಗರಣ ಬಯಲಿಗೆ ಬಂದಿದೆ. ಕಾಂಗ್ರೆಸ್‌ನ ಒಂದು ವರ್ಷದ ಸಾಧನೆ ಎಂದರೆ ಎಸ್‌ಟಿ ನಿಗಮದ 180 ಕೋಟಿ ರೂ. ಹಣ ಗುಳುಂ ಮಾಡಿರುವುದು. ಚುನಾವಣೆಗೂ ಮೊದಲು ದಲಿತರ ರಕ್ಷಣೆ ನಮ್ಮ ಹಕ್ಕು ಅಂತ ಹೇಳಿದ್ರು. ಅಧಿಕಾರ ಸಿಕ್ಕ ತಕ್ಷಣ ವಾಲ್ಮೀಕಿ ನಿಗಮದ 187 ಕೋಟಿ ಹಣ ಗುಳುಂ ಮಾಡಿದ್ದಾರೆ. ಒಂದು ವರ್ಷದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿದ್ದೇ ಸಾಧನೆ ಎಂದು ಅಶೋಕ್‌ ಆರೋಪಿಸಿದರು.

ರಾಜ್ಯದಲ್ಲಿ ಹೆಣ್ಣು ಮಕ್ಕಳು ಹೊರಗಡೆ ಹೋದ್ರೆ ಗ್ಯಾರಂಟಿ ಇಲ್ಲ. ಈಗ ಸರ್ಕಾರಿ ಅಧಿಕಾರಿಗಳಿಗೂ ಗ್ಯಾರಂಟಿ ಇಲ್ಲ. ಚಂದ್ರಶೇಖರ್‌ ಡೆತ್ ನೋಟು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ 25 ವರ್ಷದ ರಾಜಕೀಯ ಜೀವನದಲ್ಲಿ ಡಿಟೈಲ್ ಆಗಿ ಡೆತ್ ನೋಟು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿಲ್ಲ. ಕಾಂಗ್ರೆಸ್‌ನವರು ಲೂಟಿ ಮಾಡಿರುವುದು ಸ್ಪಷ್ಟವಾಗಿ ಕಾಣ್ತಿದೆ. 187 ಕೋಟಿ ರೂ. ಹಗರಣದಲ್ಲಿ ಇಡೀ ಸರ್ಕಾರ ಭಾಗಿಯಾಗಿದೆ ಎಂದು ಅವರು ಆರೋಪಿಸಿದರು.

ಮಹಿಳೆಯರ ಬ್ಯಾಂಕ್ ಅಕೌಂಟ್‌ಗೆ ಟಕಾಟಕ್‌ ಹಣ ಹಾಕ್ತೀವಿ ಅಂತ ರಾಹುಲ್ ಹೇಳಿದ್ರು. 4, 6, 21, 25 ದಿನಾಂಕಗಳಂದು ಟಕಾಟಕ್‌ ಟ್ರಾನ್ಸ್‌ಫರ್ ಮಾಡಿದ್ದಾರೆ. ಕಾಂಗ್ರೆಸ್‌ನ ಲೂಟಿ ಅಕೌಂಟ್‌ಗೆ ಹಾಕಿದ್ದಾರೆ. ಇದು ಬ್ರಹ್ಮಾಂಡ ಭ್ರಷ್ಟಾಚಾರ. ದಲಿತರ ಹಣ ಮಾಯವಾಗಿದೆ. ಅಧಿಕಾರಿಗಳು ಸತ್ತು ಹೋಗ್ತಿದ್ದಾರೆ. ಕ್ರೈಮ್ ರೇಟ್, ಕೋಮುವಾದ ಮತ್ತು ಭಯೋತ್ಪಾದನೆ ಟಕಾಟಕ್‌ ಜಾಸ್ತಿ ಆಗಿದೆ ಎಂದು ಅವರು ಕಿಡಿ ಕಾರಿದರು.

ಸರ್ಕಾರಕ್ಕೆ ಆರ್ ಆಶೋಕ್ ಆರು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ:
1) ಚಂದ್ರಶೇಖರ್‌ ಡೆತ್ ನೋಟ್‌ನಲ್ಲಿ ಮಂತ್ರಿ ಹೆಸರಿದೆ. ಆದರೆ ಎಫ್ಐಆರ್‌ನಲ್ಲಿ ಯಾಕೆ ಇಲ್ಲ?
2) ಎಫ್ಐಆರ್‌ನಲ್ಲಿ ಹೆಸರಿರುವ ಅಧಿಕಾರಿಗಳನ್ನು ಯಾಕೆ ಬಂಧಿಸಿಲ್ಲ?
3) ಬಂಧಿಸಿದ್ರೆ ನಿಮ್ಮ ಬಂಡವಾಳ ಬಯಲಾಗುತ್ತಾ?
4) ಸಿಐಡಿ ಕೊಟ್ಟು ಮುಚ್ಚಿ ಹಾಕುವ ಪ್ಲಾನ್ ಮಾಡಿದ್ರಾ?
5) ಕಮಿಷನ್ ಪಡೆದಿದ್ದರೆ ರಾಜೀನಾಮೆ ಕೊಡ್ತೀನಿ ಅಂದ್ರಿ. ರಾಜೀನಾಮೆ ಯಾವಾಗ ಕೊಡ್ತೀರಾ ಸಿದ್ದರಾಮಯ್ಯ ಅವರೇ?
6) ಲ್ಯಾಪ್ ಟಾಪ್ ಕದ್ದು ಮುಚ್ಚಿ ತೆಗೆದುಕೊಂಡು ಹೋಗಿದ್ದು ಯಾಕೆ?

“ಈಶ್ವರಪ್ಪ ಪ್ರಕರಣದಲ್ಲಿ ಮೌಖಿಕ ಆದೇಶ ಅಷ್ಟೇ ಮಾಡಿದ್ದರು. ಅವರು ನೈತಿಕ ಹೊಣೆಗಾರಿಕೆ ಮೇಲೆ ರಾಜೀನಾಮೆ ಕೊಟ್ಟರು. ಈಶ್ವರಪ್ಪ ಅವರನ್ನ ಕೂಡಲೇ ಬಂಧಿಸಿ ಅಂತ ಸಿದ್ದರಾಮಯ್ಯ ಒತ್ತಾಯ ಮಾಡಿದ್ರು. ಈಗ ನೀವ್ಯಾರನ್ನು ಬಂಧಿಸಿದ್ದೀರಿ? ಇದು ಹಾದಿ ಬೀದಿಯಲ್ಲಿ ಮಾತನಾಡಿದ್ದು ಅಲ್ಲ, ಸದನದಲ್ಲಿ ಸಿದ್ದರಾಮಯ್ಯ ಹೇಳಿದ್ದು” ಎಂದು ಅಶೋಕ್ ಪ್ರಶ್ನಿಸಿದ್ದಾರೆ. “ಏನೂ ಆಗಿಲ್ಲ ಅಂತ ಪರಮೇಶ್ವರ್ ಹೇಳಿದ್ದಾರೆ. 20 ಕೋಟಿ ವಾಪಸು ಕೊಟ್ಟಿದ್ದಾರೆ ಅಂತ ಹೇಳಿದ್ದಾರೆ. ಹಣ ವಾಪಸು ತಂದಿದ್ದೀರಿ. ಅವನ ಪ್ರಾಣ ಸಹ ವಾಪಸು ತನ್ನಿ” ಎಂದರು.

“ಈ ಹಣ ಆಂಧ್ರಪ್ರದೇಶ, ತೆಲಂಗಾಣಕ್ಕೆ ಹೋಗಿದೆ. ಇದನ್ನು ಸಿಬಿಐಗೆ ಒಪ್ಪಿಸಿದರೆ ಸತ್ಯಾಸತ್ಯತೆ ಹೊರಗಡೆಗೆ ಬರುತ್ತೆ. ಮುಖ್ಯಮಂತ್ರಿ ರಾಜೀನಾಮೆ ಕೇಳ್ತೀವಿ. ಮಂತ್ರಿ ರಾಜೀನಾಮೆ ಆಗಲೇಬೇಕು. ಆರನೇ ತಾರೀಖು ಡೆಡ್‌ಲೈನ್ ಕೊಡುತ್ತೇವೆ. ಅದರ ಒಳಗೆ ರಾಜೀನಾಮೆ ಪಡೆಯದಿದ್ರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ” ಎಂದು ಅಶೋಕ್‌ ಆಗ್ರಹಿಸಿದರು.

“ಡೆತ್‌ ನೋಟ್‌ ಬಗ್ಗೆ ಪರಮೇಶ್ವರ್‌ ಅನುಮಾನ ವ್ಯಕ್ತಪಡಿಸಿದ್ದಾರೆ. ಪರಮೇಶ್ವರ್ ಹೇಳಿಕೆಯೇ ತನಿಖೆ ಯಾವ ರೀತಿಯಲ್ಲಿ ನಡೆಯುತ್ತಿದೆ ಅಂತ ತಿಳಿಸುತ್ತಿದೆ. ಸಿಐಡಿ ತನಿಖೆಗೆ ಯಾರು ಒತ್ತಾಯ ಮಾಡಿದರು? ಇವರು ಈ ಕೇಸ್ ಮುಚ್ಚಿ ಹಾಕಲು ಸಿಐಡಿಗೆ ನೀಡಿದ್ದಾರೆ” ಎಂದು ಅಶೋಕ್ ಹೇಳಿದರು.

ಇದನ್ನೂ ಓದಿ: Valmiki Corporation Scam: ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ; ಎಂಡಿ, ಲೆಕ್ಕಾಧಿಕಾರಿ ಅಮಾನತು

Continue Reading
Advertisement
Rishabh Pant
ಕ್ರೀಡೆ7 mins ago

Rishabh Pant: ದೇವರ ಕೃಪೆಯಿಂದ ಮತ್ತೆ ಟೀಮ್​ ಇಂಡಿಯಾ ಜೆರ್ಸಿ ಧರಿಸುವಂತಾಯಿತು ಎಂದು ಭಾವುಕರಾದ ರಿಷಭ್​ ಪಂತ್

IAS Exam
ಕರ್ನಾಟಕ12 mins ago

IAS Exam : ಯುಪಿಎಸ್ ಸಿ ಪರೀಕ್ಷಾ ಅಭ್ಯರ್ಥಿಗಳಿಗೆ ಉಚಿತ ತರಬೇತಿ

Kamal Haasan indian 2 second song out
ಕಾಲಿವುಡ್15 mins ago

Kamal Haasan: ‘ಇಂಡಿಯನ್-2’ ಸಿನಿಮಾದ ಎರಡನೇ ಹಾಡು ರಿಲೀಸ್!

Bus accident
ದೇಶ27 mins ago

Bus Accident: ಕಂದಕಕ್ಕೆ ಉರುಳಿದ ಬಸ್‌; 9 ಜನ ಬಲಿ; 40 ಜನರಿಗೆ ಗಂಭೀರ ಗಾಯ

Money Guide
ಮನಿ-ಗೈಡ್29 mins ago

Money Guide: ಹಣ ಪಾವತಿ ಅಂಗಳಕ್ಕೆ ಕಾಲಿಡಲು ಅದಾನಿ ಗ್ರೂಪ್‌ ಸಜ್ಜು; ಗೂಗಲ್‌ ಪೇ, ಫೋನ್‌ ಪೇಗೆ ಪ್ರಬಲ ಪೈಪೋಟಿ?

DK Shivakumar
ಕರ್ನಾಟಕ33 mins ago

DK Shivakumar: ಸಿಎಂ, ನನ್ನ ಮೇಲೆ ಶತ್ರು ಭೈರವಿ ಯಾಗ ನಡೆಯುತ್ತಿದೆ; ಡಿಕೆಶಿ ಹೊಸ ಬಾಂಬ್

Food Poisoning
ಬೆಳಗಾವಿ34 mins ago

Food Poisoning : ಜಾತ್ರೆಲಿ ಪ್ರಸಾದ ಸೇವಿಸಿದ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

IPL 2024
ಕ್ರೀಡೆ42 mins ago

IPL 2024 : ಜಿಯೋಸಿನಿಮಾದಲ್ಲಿ ದಾಖಲೆಯ 62 ಕೋಟಿಗೂ ಅಧಿಕ ವೀಕ್ಷಣೆ ಕಂಡ ಐಪಿಎಲ್​

Kannada New Movie Dasappa Kannada Movie Trailer
ಸ್ಯಾಂಡಲ್ ವುಡ್54 mins ago

Kannada New Movie: ʻತಿಥಿʼ ಚಿತ್ರದ ಖ್ಯಾತಿಯ ತಮ್ಮಣ್ಣ ಅಭಿನಯದ ʻದಾಸಪ್ಪʼ ಸಿನಿಮಾ ಟ್ರೈಲರ್‌ ಔಟ್‌!

T20 World Cup 2024
ಕ್ರೀಡೆ54 mins ago

T20 World Cup 2024: ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ಕ್ಯಾಚ್​ ಹಿಡಿದ ಫೀಲ್ಡರ್​ಗಳಿವರು…

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ4 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌