Kannada New Movie: ʻಕೈಲಾಸʼ ಸಿನಿಮಾದ ಕಿಕ್ಕೇರಿಸೋ ಟ್ರಾನ್ಸ್‌ ಹಾಡು ಬಿಡುಗಡೆ - Vistara News

ಸ್ಯಾಂಡಲ್ ವುಡ್

Kannada New Movie: ʻಕೈಲಾಸʼ ಸಿನಿಮಾದ ಕಿಕ್ಕೇರಿಸೋ ಟ್ರಾನ್ಸ್‌ ಹಾಡು ಬಿಡುಗಡೆ

Kannada New Movie: ದೃಶ್ಯಗಳ ಮೂಲಕವೇ ಕಿಕ್ಕೇರಿಸುವ ಶೈಲಿಯ ಈ ಟ್ರಾನ್ಸ್ ವೀಡಿಯೊ ಸಾಂಗ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ನೋಡುಗರ ಕಡೆಯಿಂದ ಮೆಚ್ಚುಗೆಯನ್ನೂ ಪಡೆದುಕೊಳ್ಳುತ್ತಿದೆ. ಮಾದಕ ಜಗತ್ತಿನ ಉನ್ಮತ್ತ ಕ್ಷಣಗಳನ್ನು ಹಿಡಿದಿಟ್ಟಂತೆ ಭಾಸವಾಗುವ ಈ ಹಾಡಿನ ಮಧ್ಯೆ ಪೂರಕವಾದ ಒಂದಷ್ಟು ಸಾಲುಗಳಿವೆ.

VISTARANEWS.COM


on

Kailasa Trance Video Song out
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಈ ಹಿಂದೆ ‘ತಾರಕಾಸುರ’ ಚಿತ್ರದ ಮೂಲಕ ಅಬ್ಬರದ ಎಂಟ್ರಿ ಕೊಟ್ಟಿದ್ದ ರವಿ ಇದೀಗ ʻಕೈಲಾಸ’ ಎಂಬ ಚಿತ್ರದ ಮೂಲಕ ಮತ್ತೆ ಪ್ರೇಕ್ಷಕರನ್ನು ಮುಖಾಮುಖಿಯಾಗಲು ತಯಾರಾಗಿದ್ದಾರೆ. ನಾಗ್ ವೆಂಕಟ್ ನಿರ್ದೇಶನದ “ಕೈಲಾಸ’ ಚಿತ್ರಕ್ಕೆ `ಕಾಸಿದ್ರೆ’ ಎಂಬ ಅಡಿ ಬರಹವಿದೆ.

ದೃಶ್ಯಗಳ ಮೂಲಕವೇ ಕಿಕ್ಕೇರಿಸುವ ಶೈಲಿಯ ಈ ಟ್ರಾನ್ಸ್ ವೀಡಿಯೊ ಸಾಂಗ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ನೋಡುಗರ ಕಡೆಯಿಂದ ಮೆಚ್ಚುಗೆಯನ್ನೂ ಪಡೆದುಕೊಳ್ಳುತ್ತಿದೆ. ಮಾದಕ ಜಗತ್ತಿನ ಉನ್ಮತ್ತ ಕ್ಷಣಗಳನ್ನು ಹಿಡಿದಿಟ್ಟಂತೆ ಭಾಸವಾಗುವ ಈ ಹಾಡಿನ ಮಧ್ಯೆ ಪೂರಕವಾದ ಒಂದಷ್ಟು ಸಾಲುಗಳಿವೆ.

ಈ ಹಾಡಿಗೆ ಲೇಖಕ್ ಎಂ ಸಿದ್ಧಾರ್ಥ ಸಾಹಿತ್ಯ ಒದಗಿಸಿದ್ದಾರೆ. ಆಶಿಕ್ ಅರುಣ್ ಸಂಗೀತ ಸಂಯೋಜನೆಯೊಂದಿಗೆ ಈ ಟ್ರಾನ್ಸ್ ವೀಡಿಯೋ ಸಾಂಗ್ ಮೂಡಿ ಬಂದಿದೆ. ಇದರ ಮೂಲಕವೇ ನಾಯಕ ರವಿಯ ಪಾತ್ರ ಕೂಡ ಪ್ರೇಕ್ಷಕರ ಮುಂದೆ ಸುಳಿದಂತಾಗಿದೆ. ಇದುವರೆಗೂ ಕನ್ನಡ ಸಿನಿಮಾಗಳಲ್ಲಿ ಇಂಥಾ ಟ್ರಾನ್ಸ್ ವೀಡಿಯೋ ಸಾಂಗ್ ಅಲ್ಲಲ್ಲಿ ಕಾಣಿಸಿಕೊಂಡಿವೆ. ಆದರೆ ಈ ಚಿತ್ರದಲ್ಲಿ ಅದನ್ನು ಪೂರ್ಣಪ್ರಮಾಣದಲ್ಲಿ ಪ್ರಯೋಗ ಮಾಡಲಾಗಿದೆಯಂತೆ.
ಇದು ಕ್ರೈಂ ಕಂ ಕಾಮಿಡಿ ಜಾನರ್‌ಗೆ ಒಳಪಡುವ ಚಿತ್ರ. ಪಕ್ಕಾ ಕಮರ್ಶಿಯಲ್ ಬಗೆಯಲ್ಲಿ ತಯಾರುಗೊಂಡಿರುವ ಇದು ನಾಗ್ ವೆಂಕಟ್ ನಿರ್ದೇಶನದ ಮೊದಲ ಸಿನಿಮಾ. ಮೂಲತಃ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ ನಾಗ್ ವೆಂಕಟ್ ಕೆಲವು ವರ್ಷಗಳ ಹಿಂದೆಯೇ ಪೂರ್ಣ ಪ್ರಮಾಣದಲ್ಲಿ ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿದ್ದಾರೆ. ಈವರೆಗೂ ಸಾಕಷ್ಟು ಕಿರು ಚಿತ್ರಗಳ ಮೂಲಕ ಪರೀಕ್ಷೆಗೊಡ್ಡಿಕೊಂಡಿದ್ದ ನಾಗ್ ವೆಂಕಟ್, ʻಕೈಲಾಸ ಕಾಸಿದ್ರೆʼ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ.

ಇದನ್ನೂ ಓದಿ: Kannada New Movie: ತೀರದಾಚೆ ತೆರೆದುಕೊಂಡ `ಸಾರಾಂಶ’ ಲಿರಿಕಲ್ ವೀಡಿಯೊ ಸಾಂಗ್!

ಇದೇ ತಿಂಗಳ 24ರಂದು ಟ್ರೈಲರ್ ಬಿಡುಗಡೆಗೊಳ್ಳಲಿದೆ. ತಾರಕಾಸುರ ನಂತರ ರವಿ ಮತ್ತೊಂದು ವಿಶೇಷವಾದ ಪಾತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಈಗ ಬಿಡುಗಡೆಯಾಗಿರುವ ಈ ನಶೆ ಹಾಡಿನ ಪ್ರಭೆಯಲ್ಲಿಯೇ, ಪ್ರೇಮಿಗಳ ದಿನದಂದು ಚೆಂದದ್ದೊಂದು ಹಾಡು ಬಿಡುಗಡೆಗೊಳಿಸಲು ಚಿತ್ರತಂಡ ತೀರ್ಮಾನಿಸಿದೆ. ವಿಶೇಷವೆಂದರೆ, ಈ ಚಿತ್ರದಲ್ಲಿ ಕ್ರೈಂ ಹಾಗೂ ಕಾಮಿಡಿ ಮಿಳಿತವಾಗಿರೋದರಿಂದಾಗಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್ ಕೂಡಾ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇಲ್ಲಿ ರವಿ ಅವರಿಗೆ ಜೋಡಿಯಾಗಿ ಸುಕನ್ಯಾ ನಟಿಸಿದ್ದಾರೆ. “ಶಿವಾಜಿ ಸುರತ್ಕಲ್ʼ ಚಿತ್ರದ ಸಣ್ಣ ಪಾತ್ರದಲ್ಲಿ ನಟಿಸಿದ್ದ ಸುಕನ್ಯಾ ಈ ಮೂಲಕ ನಾಯಕಿಯಾಗಿದ್ದಾರೆ. ವಾಸಿಕ್ ಅಲ್ಸಾದ್ ನಿರ್ಮಾಣ ಮಾಡಿರುವ “ಕೈಲಾಸʼ ಚಿತ್ರಕ್ಕೆ ಆಶಿಕ್ ಅರುಣ್ ಸಂಗೀತ, ತ್ಯಾಗರಾಜನ್ ಸಂಕಲನ, ಲೇಖಕ್ ಎಂ ಸಾಹಿತ್ಯ, ವಿನೋದ್ ರಾಜೇಂದ್ರನ್ ಛಾಯಾಗ್ರಹಣ, ಧನಂಜಯ ಬಿ ನೃತ್ಯ ನಿರ್ದೇಶನವಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Kannada New Movie: ನಾಳೆಯಿಂದ ʻಸಹಾರಾʼ ಆಟ ಶುರು; ಕನ್ನಡದ ಮೊದಲ ಮಹಿಳಾ ಕ್ರಿಕೆಟ್ ಕಥೆಯಾಧಾರಿತ ಸಿನಿಮಾ!

Kannada New Movie: ಕಳೆದ ಎಂಟು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಹನಿರ್ದೇಶಕರಾಗಿ ಕೆಲಸ ಮಾಡಿರುವ ಮಂಜೇಶ್ ಭಗವತ್ ಅವರು ಇದೇ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತು ಈ ಚಿತ್ರವನ್ನು ಹೊರತರುತ್ತಿದ್ದಾರೆ. ಮಾ ಕ್ರಿಯೆಷನ್ಸ್ ಪ್ರಥಮ ನಿರ್ಮಾಣದ ಈ ಚಿತ್ರಕ್ಕೆ ನಿರ್ದೇಶಕರೇ ಕಥೆ- ಚಿತ್ರಕಥೆ – ಸಂಭಾಷಣೆ ರಚಿಸಿದ್ದಾರೆ.

VISTARANEWS.COM


on

Kannada New Movie sahara movie release tomorrow
Koo

ಬೆಂಗಳೂರು: ಕನ್ನಡದಲ್ಲಿ ಮಹಿಳಾ ಕ್ರಿಕೆಟ್ ಆಧಾರಿತ ಸಿನಿಮಾ ʻಸಹಾರಾʼ (Kannada New Movie) ನಾಳೆ (ಜೂನ್ 7) ತೆರೆ ಕಾಣುತ್ತಿದೆ. ಸಾರಿಕಾ ರಾವ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ “ಸಹಾರಾ” ಚಿತ್ರ ಕನ್ನಡ ಚಿತ್ರರಂಗಲ್ಲೇ ಮೊದಲ ಪ್ರಯತ್ನ ಎಂದರೆ ಉತ್ಪ್ರೇಕ್ಷೆಯಲ್ಲ. ಯಾಕೆಂದರೆ ಚಿತ್ರಕಥೆಯು ಮಹಿಳಾ ಕ್ರಿಕೆಟ್ ಪಟು ಕುರಿತಾದದ್ದು.
ಮಂಡ್ಯದ ಹುಡುಗಿ ಒಬ್ಬಳು ಮಹಿಳಾ ಕ್ರಿಕೆಟ್ ಪಟು ಆಗುವ‌ ಕನಸನ್ನು ಕಂಡು, ಅದನ್ನು ನನಸಾಗಿಸುವ ಹಾದಿಯಲ್ಲಿ ಆಕೆ ಎದುರಿಸುವ ಅಡೆತಡೆಗಳು, ಹೇಗೆ ಅವುಗಳನ್ನು ಮೀರಿ‌ ಸಾಧನೆಯ ಮೆಟ್ಟಿಲೇರುತ್ತಾಳೆ,ಎಲ್ಲವನ್ನೂ ಕಥೆ ಎಳೆ ಎಳೆಯಾಗಿ ಬಿಚ್ಚಿಡುತ್ತದೆ. ಈ‌ ನಿಟ್ಟಿನಲ್ಲಿ “ಸಹಾರಾ” ಚಿತ್ರ ಸಿನಿ‌ಪ್ರೇಮಿಗಳಲ್ಲಿ ಕುತೂಹಲ ಮೂಡಿಸಿದೆ. ಅಷ್ಟೇ ಅಲ್ಲದೆ, ಗೋಲ್ಡನ್ ಸ್ಟಾರ್ ಗಣೇಶ್ “ಸಹಾರಾ” ಚಿತ್ರದ ಹಾಡೊಂದನ್ನು ಬಿಡುಗಡೆ ಮಾಡಿರುವುದು ಎಲ್ಲೆಡೆ ಸದ್ದು ಮಾಡುತ್ತಿದೆ.

“ಸಹಾರಾ” ಚಿತ್ರಕ್ಕೆ ಮಂಜೇಶ್ ಭಗವತ್ ಆಕ್ಷನ್ ಕಟ್ ಹೇಳಿದ್ದು, ಅಂಕುಶ್ ರಜತ್ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಸೂರಜ್ ಜೋಯಿಸ್ ಸಂಗೀತ ಸಂಯೋಜನೆ ಮಾಡಿದ್ದು, ಆಂಟೊನಿ ರುತ್ ವಿನ್ಸೆಂಟ್ ಮುಖ್ಯ ಛಾಯಾಗ್ರಾಹಕರಾಗಿರುತ್ತಾರೆ. ವಿಜಯ್ ಎಂ ಕುಮಾರ್ ಸಂಕಲನಕಾರರಾಗಿದ್ದಾರೆ. ಪಾತ್ರಕ್ಕಾಗಿಯೇ ಸಾರಿಕಾ ಅವರು ರಣಜಿ ಆಟಗಾರರಾದ. ಕೆ.ಬಿ. ಪವನ್ ಬಳಿ ಕ್ರಿಕೆಟ್ ಆಟದ ಬಗ್ಗೆ ತರಬೇತಿ ಪಡೆದುಕೊಂಡು ಬಂದು ನಂತರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.

ಕಳೆದ ಎಂಟು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಹನಿರ್ದೇಶಕರಾಗಿ ಕೆಲಸ ಮಾಡಿರುವ ಮಂಜೇಶ್ ಭಗವತ್ ಅವರು ಇದೇ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತು ಈ ಚಿತ್ರವನ್ನು ಹೊರತರುತ್ತಿದ್ದಾರೆ. ಮಾ ಕ್ರಿಯೆಷನ್ಸ್ ಪ್ರಥಮ ನಿರ್ಮಾಣದ ಈ ಚಿತ್ರಕ್ಕೆ ನಿರ್ದೇಶಕರೇ ಕಥೆ- ಚಿತ್ರಕಥೆ – ಸಂಭಾಷಣೆ ರಚಿಸಿದ್ದಾರೆ.

ಇದನ್ನೂ ಓದಿ: Sahara Movie Trailer: ಕ್ರಿಕೆಟ್ ಆಧಾರಿತ `ಸಹಾರಾ’ ಸಿನಿಮಾ ಟ್ರೈಲರ್‌ ಔಟ್‌ ಮಾಡಿದ RCB ಮಾಜಿ ಆಟಗಾರ

ಉಳಿದಂತೆ ತಾರಾಬಳಗದಲ್ಲಿ ಮಂಜುನಾಥ ಹೆಗಡೆ, ಕುರಿ ಸುನಿಲ್, ಅಂಕುಶ್ ರಜತ್, ರಂಜನ್, ಮಂಜುಳಾ ರೆಡ್ಡಿ, ಪ್ರಕಾಶ್ ಶೆಟ್ಟಿ ಮುಂತಾದವರು ಅಭಿನಯಿಸಿದ್ದಾರೆ. ಮಹಿಳಾ ಕ್ರಿಕೆಟ್ ಆಧರಿಸಿದ ಈ ಚಿತ್ರಕ್ಕೆ ಪಿ.ಆರ್.ಸಂಸ್ಥೆ ಸಪೋರ್ಟ್ ಮಾಡಿದೆ. ಆಡಿಯೋ ಹಕ್ಕನ್ನು ಕೂಡ ಪಡೆದುಕೊಂಡಿದೆ. ಕೆಆರ್.ಜಿ ಸಂಸ್ಥೆ ಚಿತ್ರ ವಿತರಣೆ ಮಾಡುತ್ತಿದೆ.

ಕ್ರಿಕೆಟ್ ಆಧರಿಸಿದ ಈ ಚಿತ್ರಕ್ಕೆ ಕಿಚ್ಚ ಸುದೀಪ್ ನಿರೂಪಣೆ ಮಾಡಿದ್ದಾರೆ. ಮಂಡ್ಯದ ಹುಡುಗಿಯ ಕ್ರಿಕೆಟ್ ಕನಸಿನ ಕಥೆಯನ್ನ ನಿರೂಪಿಸಿದ್ದಾರೆ. ಇದರೊಟ್ಟಿಗೆ ಚಿತ್ರಕ್ಕೆ ಆಂಥೋನಿ ರುತ್ ವಿನ್ಸೆಂಟ್ ಕ್ಯಾಮರಾವರ್ಕ್ ಮಾಡಿದ್ದಾರೆ. ಸೂರಜ್ ಜೋಯಿಸ್ ಸಂಗೀತ ಕೊಟ್ಟಿದ್ದಾರೆ. ಥ್ರಿಲ್ಲರ್ ಮಂಜು ಸಾಹಸ, ಸಂತೋಷ್ ಶೇಖರ್ ಕೊರಿಯೋಗ್ರಫಿ ಚಿತ್ರದಲ್ಲಿದೆ.

Continue Reading

ಸ್ಯಾಂಡಲ್ ವುಡ್

Kannada New Movie: ಮಹಿಳಾ ಪ್ರಧಾನ ಮರ್ಡರ್ ಮಿಸ್ಟ್ರಿ “ಕ್ಯಾನ್ಬೆರಿ ಬೇಬೀಸ್”ಗೆ ಮುಹೂರ್ತ

Kannada New Movie: ಐದು ಜನ ಯುವತಿಯರ ಸುತ್ತ ನಡೆಯುವ ಕಥೆ ಹೊಂದಿದ ʻಕ್ಯಾನ್ಬೆರಿ ಬೇಬೀಸ್ʼ ಚಿತ್ರದ ಮುಹೂರ್ತ ಸಮಾರಂಭ ಕಳೆದ ಗುರುವಾರ ಬೆಂಗಳೂರಿನ ಶ್ರೀ ಬಲಮುರಿ ಬಾಲಚಂದ್ರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು.ಇನ್ನು ಈ ಚಿತ್ರಕ್ಕೆ ಮಲ್ಲಿಕಾರ್ಜುನ್ ಅವರ ಛಾಯಾಗ್ರಹಣವಿದೆ. ಚಿತ್ರದ ನಾಲ್ಕು ಹಾಡುಗಳಿಗೆ ಎಸ್.ನಾಗು ಅವರ ಸಂಗೀತವಿದ್ದು, ರಾಮ್ ನಾರಾಯಣ್ ಸಾಹಿತ್ಯ ರಚಿಸಿದ್ದಾರೆ. ಎಸ್.ಎಸ್.ಈಶ್ವರ್ ಹಿನ್ನೆಲೆ ಸಂಗೀತ ಒದಗಿಸುತ್ತಿದ್ದಾರೆ. ಆರ್ಯನ್ ರೋಷನ್ ಅವರ ಕೊರಿಯೋಗ್ರಫಿ, ಧನುಷ್ ಅವರ ಸಂಕಲನ, ವೀರೇಶ್ ಅವರ ಕಲಾನಿರ್ದೇಶನ ಈ ಚಿತ್ರಕ್ಕಿದೆ.

VISTARANEWS.COM


on

Kannada New Movie cranberry babies movie On set
Koo

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ (Kannada New Movie) ಮಹಿಳಾ ನಿರ್ದೇಶಕಿಯರ ಸಂಖ್ಯೆ ತೀರ ವಿರಳ ಎನ್ನಬಹುದು. ಇತ್ತೀಚೆಗೆ ಕೆಲ ಮಹಿಳಾ ತಂತ್ರಜ್ಞರುಗಳು ಚಿತ್ರರಂಗಕ್ಕೆ ಬರುತ್ತಿದ್ದಾರೆ. ಅಂಥವರಲ್ಲಿ ಶ್ರೀಪಲ್ಲವಿ ಕೂಡ ಒಬ್ಬರು. ಇವರೊಂದು ಮಹಿಳಾ ಪ್ರಧಾನ ಸಸ್ಪೆನ್ಸ್, ಥ್ರಿಲ್ಲರ್, ಮರ್ಡರ್ ಮಿಸ್ಟ್ರಿ ಕಾನ್ಸೆಪ್ಟ್ ಇಟ್ಟುಕೊಂಡು “ಕ್ಯಾನ್ಬೆರಿ ಬೇಬೀಸ್” ಎಂಬ ಚಿತ್ರವನ್ನು ನಿರ್ದೇಶನ ಮಾಡಹೊರಟಿದ್ದಾರೆ.

ಐದು ಜನ ಯುವತಿಯರ ಸುತ್ತ ನಡೆಯುವ ಕಥೆ ಹೊಂದಿದ ʻಕ್ಯಾನ್ಬೆರಿ ಬೇಬೀಸ್ʼ ಚಿತ್ರದ ಮುಹೂರ್ತ ಸಮಾರಂಭ ಕಳೆದ ಗುರುವಾರ ಬೆಂಗಳೂರಿನ ಶ್ರೀ ಬಲಮುರಿ ಬಾಲಚಂದ್ರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕಿ ಶ್ರೀಪಲ್ಲವಿ ʻʻನಾನು ಚಿತ್ರರಂಗಕ್ಕೆ ಬಂದು ಎಂಟು ವರ್ಷವಾಯ್ತು. ಕೆಲ ಚಿತ್ರಗಳಿಗೆ ಅಸೋಸಿಯೇಟ್ ಆಗಿ ಕೆಲಸ ಮಾಡಿದ ನಂತರ ಮಾಯಾಜಾಲ ಎಂಬ ಸಿನಿಮಾ ಡೈರೆಕ್ಟ್ ಮಾಡಿದ್ದೆ. ಇದು ಎರಡನೇ ಚಿತ್ರ. ದೊಡ್ಡ ಕನಸಿಟ್ಟುಕೊಂಡು ಬೆಂಗಳೂರಿಗೆ ಬರುವ ಐವರು ಯುವತಿಯರು ಇಲ್ಲಿ ಬಂದಮೇಲೆ ಏನೆಲ್ಲ ತೊಂದರೆ ರಿಸ್ಕ್ ಗಳನ್ನು ಎದುರಿಸಿದರು ಎಂದು ಚಿತ್ರದಲ್ಲಿ ಹೇಳಿದ್ದೇವೆ. ಬೆಂಗಳೂರು ಸುತ್ತಮುತ್ತ 25ರಿಂದ 30 ದಿನಗಳ ಕಾಲ ಚಿತ್ರೀಕರಣ ಮಾಡುವ ಯೋಜನೆ ಹಾಕಿಕೊಂಡಿದ್ದೇವೆʼʼ ಎಂದರು.

Kannada New Movie:

ಇದನ್ನೂ ಓದಿ: Kannada New Movie: ಅತೀ ಶೀಘ್ರದಲ್ಲೇ ತೆರೆಗೆ ಬರಲಿದೆ ‘ಆಪರೇಷನ್ ಲಂಡನ್ ಕೆಫೆ’!

ನಂತರ ಕಲಾವಿದರು ನಂದಿನಿಗೌಡ, ರಕ್ಷಾ,ಸಿಂಚನ ಶೆಟ್ಟಿ, ಸಂದೀಪ್ ಮಲಾನಿ, ಪ್ರಕಾಶ್, ಸುಶ್ಮಿತಾಗೌಡ ತಮ್ಮ ಪಾತ್ರಗಳ ಕುರಿತಂತೆ ಮಾತನಾಡಿದರು. ಹಾಸ್ಯನಟ ವಿಜಯ್ ಚೆಂಡೂರ್ ಅವರು ಚಿತ್ರದ ಕಥೆಗೆ ಹೊಸ ತಿರುವು ಕೊಡುವ ಕಾನ್ಸ್‌ಟೇಬಲ್‌ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಮತ್ತೊಬ್ಬ ಹಿರಿಯ ನಟ, ಸಂಕಲನಕಾರ ನಾಗೇಂದ್ರ ಅರಸ್ ಈ ಚಿತ್ರದಲ್ಲಿ ಒಬ್ಬ ವಿಜ್ಞಾನಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ನಾಗೇಂದ್ರ ಅರಸ್ ಮಾತನಾಡಿ ʻʻಪಲ್ಲವಿ ಅವರು ಒಳ್ಳೇ ಕಥೆ ಮಾಡಿಕೊಂಡಿದ್ದಾರೆ, ಅಲ್ಲದೆ ಅವರ ಪ್ರಯತ್ನಕ್ಕೆ ಸಪೋರ್ಟ್ ಮಾಡಬೇಕೆಂದು ಈ ಚಿತ್ರ ಒಪ್ಪಿದೆ. ಕನಸಿಟ್ಟುಕೊಂಡು ಬರುವ ಯುವತಿಯರು ತೊಂದರೆಯಲ್ಲಿದ್ದಾಗ ಅವರಿಗೆ ಸಹಾಯ ಮಾಡುವ ಸೈಂಟಿಸ್ಟ್ʼʼ ಎಂದು ಹೇಳಿದರು.

ಇನ್ನು ಈ ಚಿತ್ರಕ್ಕೆ ಮಲ್ಲಿಕಾರ್ಜುನ್ ಅವರ ಛಾಯಾಗ್ರಹಣವಿದೆ. ಚಿತ್ರದ ನಾಲ್ಕು ಹಾಡುಗಳಿಗೆ ಎಸ್.ನಾಗು ಅವರ ಸಂಗೀತವಿದ್ದು, ರಾಮ್ ನಾರಾಯಣ್ ಸಾಹಿತ್ಯ ರಚಿಸಿದ್ದಾರೆ. ಎಸ್.ಎಸ್.ಈಶ್ವರ್ ಹಿನ್ನೆಲೆ ಸಂಗೀತ ಒದಗಿಸುತ್ತಿದ್ದಾರೆ. ಆರ್ಯನ್ ರೋಷನ್ ಅವರ ಕೊರಿಯೋಗ್ರಫಿ, ಧನುಷ್ ಅವರ ಸಂಕಲನ, ವೀರೇಶ್ ಅವರ ಕಲಾನಿರ್ದೇಶನ ಈ ಚಿತ್ರಕ್ಕಿದೆ.

Continue Reading

ಸ್ಯಾಂಡಲ್ ವುಡ್

Dolly Dhananjay: ರೋಡಲ್ಲಿ ಹೋಗೋರೆಲ್ಲ ನನ್ನ ಮದ್ವೆ ಬಗ್ಗೆನೇ ಕೇಳ್ತಾರೆ ಎಂದ  ಡಾಲಿ ಧನಂಜಯ್!

Dolly Dhananjay: ಕೋಟಿ ಕನ್ನಡದಲ್ಲಿ ಜಿಯೋ ಸ್ಟುಡಿಯೋಸ್ ಚೊಚ್ಚಲ ನಿರ್ಮಾಣವಾಗಿದ್ದು, ನಿರ್ದೇಶಕ ಪರಮ್ ಅವರ ನೇತೃತ್ವದಲ್ಲಿ ಮತ್ತು ಜ್ಯೋತಿ ದೇಶಪಾಂಡೆ ನಿರ್ಮಿಸಿದ ಫ್ಯಾಮಿಲಿ ಡ್ರಾಮಾ ಥ್ರಿಲ್ಲರ್ ಚಿತ್ರವಾಗಿದೆ. ನಟರಾಕ್ಷಸ ಡಾಲಿ ಧನಂಜಯ, ರಮೇಶ್ ಇಂದಿರಾ, ಮೋಕ್ಷ ಕುಶಾಲ್, ರಂಗಾಯಣ ರಘು, ತಾರಾ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಪರಮ್ ಬರವಣಿಗೆ ಸಾರಥ್ಯದ ಕೋಟಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಟೀಸರ್ ಹಾಗೂ ಹಾಡುಗಳು ಹಿಟ್ ಲೀಸ್ಟ್ ಸೇರಿದ್ದು,, ಜೂನ್ 14 ರಿಂದ ಚಿತ್ರ ತೆರೆಗೆ ಬರಲಿದೆ.

VISTARANEWS.COM


on

Dolly Dhananjay Will He Get Married says During Kotee Trailer Launch
Koo

ಬೆಂಗಳೂರು: ಡಾಲಿ ಧನಂಜಯ್ (Dolly Dhananjay) ನಟನೆಯ ʼಕೋಟಿʼ (Koti Movie) ಚಿತ್ರದ ಟ್ರೈಲರ್ ಅನ್ನು ಚಿತ್ರತಂಡ ನಗರದಲ್ಲಿ ಬುಧವಾರ ರಿಲೀಸ್ ಮಾಡಿದ್ದು, ಟ್ರೈಲರ್‌ ಬಗ್ಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪರಮೇಶ್ ಗುಂಡಕಲ್ ನಿರ್ದೇಶನ ಮಾಡಿರುವ ಚೊಚ್ಚಲ ಸಿನಿಮಾ ಜೂನ್ 14ರಂದು ತೆರೆಗೆ ಬರಲಿದೆ. ಈವೆಂಟ್‌ನಲ್ಲಿ ನಟಿ ತಮ್ಮ ಮದುವೆ ಬಗ್ಗೆ ಮಾತನಾಡಿದ್ದಾರೆ.

ಡಾಲಿ ಮಾತನಾಡಿ ʻʻವರ್ಷಗಳು ಹೇಗೆ ಹೋಗುತ್ತ ಇದೆ ಎಂದು ಗೊತ್ತೇ ಆಗುತ್ತಿಲ್ಲ. ಸಿನಿಮಾದವರಿಗಂತೂ ವಯಸ್ಸಾಗುವುದು ಗೊತ್ತಾಗಲ್ಲ, ಸತ್ತು ಹೋಗುವುದೂ ಗೊತ್ತಾಗಲ್ಲ. ಒಂದು ಸಿನಿಮಾ ಮಾಡೋದ್ರೋಳಗೆ ಎರಡು ವರ್ಷ ಕಳೆದು ಹೋಗಿರುತ್ತದೆ. ರೋಡಲ್ಲಿ ಫೋಟೋ ತೆಗೆಸಿಕೊಳ್ಳುವವರು ಕೂಡ ಮದುವೆ ಯಾವಾಗ ಅಂತ ಕೇಳುವ ಹಾಗೆ ಆಗಿದೆ. ‘ಕೋಟಿ’ ಸಿನಿಮಾ ಚೆನ್ನಾಗಿ ಆದರೆ ಪಕ್ಕಾ ಮದುವೆ. ಪ್ರಮಾಣ ಕೂಡ ಮಾಡಿದ್ದೇನೆ. ಚೆನ್ನಾಗಿ ಆಗಿಲ್ಲ ಅಂದರೂ ಬಿಡಲ್ಲ, ತಾರಮ್ಮನೇ ಮದುವೆ ಮಾಡಿಸಿಬಿಡುತ್ತಾರೆ. ʻಕೋಟಿʼ ಸಿನಿಮಾ ಹಿಟ್​ ಆಗುತ್ತದೆ. ಯಾಕೆಂದರೆ ಈ ಸಿನಿಮಾ ತುಂಬ ಚೆನ್ನಾಗಿದೆ’ ಎಂದು ಡಾಲಿ ಧನಂಜಯ (Daali Dhananjaya) ಹೇಳಿದ್ದಾರೆ.

ಟ್ರೇಲರ್​ ಮೂಲಕ ‘ಕೋಟಿ’ ಸಿನಿಮಾ (Kotee Kannada Movie) ನಿರೀಕ್ಷೆ ಮೂಡಿಸಿದೆ. ಈ ಚಿತ್ರದ ಟ್ರೇಲರ್​ ಬಿಡುಗಡೆ ಮಾಡಲಾಗಿದೆ. ಈ ವೇಳೆ ನಟ ಡಾಲಿ ಧನಂಜಯ್​ ಅವರು ಖಾಸಗಿ ಬದುಕಿನ ಕುರಿತು ಪ್ರಶ್ನೆಗೆ ಉತ್ತರಿಸಿದ್ದಾರೆ. ‘ವರ್ಷಗಳು ಹೋಗುತ್ತಾ ಇರುತ್ತದೆ. ಅದು ಗೊತ್ತಾಗುವುದೇ ಇಲ್ಲ. ಸಿನಿಮಾದವರಿಗೆ ವಯಸ್ಸಾಗುವುದು ಗೊತ್ತಾಗಲ್ಲ, ಸತ್ತು ಹೋಗುವುದೂ ಗೊತ್ತಾಗಲ್ಲ. ಒಂದು ಸಿನಿಮಾ ಮಾಡೋದ್ರೋಳಗೆ ಎರಡು ವರ್ಷ ಕಳೆದು ಹೋಗಿರುತ್ತದೆ. ರೋಡಲ್ಲಿ ಫೋಟೋ ತೆಗೆಸಿಕೊಳ್ಳುವವರು ಕೂಡ ಮದುವೆ ಯಾವಾಗ ಅಂತ ಕೇಳುವ ಹಾಗೆ ಆಗಿದೆ. ಪ್ರಮಾಣ ಮಾಡಿದ್ದೀನಿ. ‘ಕೋಟಿ’ ಸಿನಿಮಾ ಚೆನ್ನಾಗಿ ಆದರೆ ಪಕ್ಕಾ ಮದುವೆ. ಚೆಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ನಿರ್ದೇಶಕ ಪರಮೇಶ್ ಗುಂಡಕಲ್ ಮಾತನಾಡಿ, ಇದು ದುಡ್ಡಿನ ಸುತ್ತ ಸುತ್ತುವ ಕತೆ, ಕಥೆ ಏನು ಅನ್ನೋದನ್ನ ಸಿನಿಮಾ ನೋಡಿ. ಚಿಕ್ಕಂದಿನಲ್ಲಿ ಕಷ್ಟದ ದಿನಗಳನ್ನು ನೋಡಿದ್ದೇನೆ. ಆ ಸಂದರ್ಭದಲ್ಲಿ ಜಾತ್ರೆಯಲ್ಲಿ ರಸ್ತೆಯಲ್ಲಿ 500 ರೂ. ಸಿಕ್ಕಿತ್ತು. ಅದು ಆ ಟೈಮ್‌ಗೆ ತುಂಬಾನೇ ದೊಡ್ಡದು. ಈಗ ಎಷ್ಟು ದುಡಿದಿದ್ದೇನೆ, ಎಲ್ಲಾ ಸಿಕ್ಕಿದೆ. ಆದರೂ ಆ 500 ರೂಪಾಯಿ ಮುಂದೆ ಏನೂ ಅಲ್ಲ ಎಂದು ಹೇಳಿದರು. ಪರಮ್​ ನಿರ್ದೇಶನ ಮಾಡಿದ ಈ ಸಿನಿಮಾದಲ್ಲಿ ರಂಗಾಯಣ ರಘು, ತಾರಾ ಅನುರಾಧಾ ಕೂಡ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ.

ಇದನ್ನೂ ಓದಿ: Dolly Dhananjay: ದಾವಣಗೆರೆಯಲ್ಲಿ ‘ಕೋಟಿ’ ಅಬ್ಬರ; ಜೂನ್ 14ರಂದು ಸಿನಿಮಾ ತೆರೆಗೆ!

ನಟ ಡಾಲಿ ಧನಂಜಯ್ (Daali Dhananjaya) ಮಾತನಾಡಿ, ಸೌತ್‌ನಿಂದ ಮುಂಬೈವರೆಗೂ ಹುಡುಕಿದರೂ ಈ ತರ ಗುಂಡಿಗೆ ಇರೋ ಹುಡುಗ ಸಿಗಲ್ಲ. ಹೊಸ ಪಾತ್ರ, ಹೊಸ ಕಥೆ ಹುಡುಕುತ್ತಲೇ ಇರುತ್ತೇವೆ. ಆ ತರ ಇಷ್ಟವಾದ ಕತೆ ಕೋಟಿ, ಅದಕ್ಕೆ ಈ ಚಿತ್ರದಲ್ಲಿ ನಟಿಸಲು ಒಪಿಕೊಂಡೆ. ಮಿಡ್ಲ್ ಕ್ಲಾಸ್ ಫ್ಯಾಮಿಲಿಗೆ ಕನೆಕ್ಟ್ ಆಗೋ ಸಿನಿಮಾ ಇದಾಗಿದ್ದು, ಜತೆಗೆ ಎಲ್ಲರಿಗೂ ಕನೆಕ್ಟ್ ಆಗುತ್ತೆ. ಚಿತ್ರರಂಗದ ಸದ್ಯದ ಸ್ಥಿತಿಯ ಬಗ್ಗೆ ಗೊತ್ತು, ಕೋಟಿ ಮೂಲಕ ಈ ಫೇಸ್ ಪಾಸ್ ಆಗಲಿ ಎಂದು ತಿಳಿಸಿದರು.

ಕೋಟಿ ಕನ್ನಡದಲ್ಲಿ ಜಿಯೋ ಸ್ಟುಡಿಯೋಸ್ ಚೊಚ್ಚಲ ನಿರ್ಮಾಣವಾಗಿದ್ದು, ನಿರ್ದೇಶಕ ಪರಮ್ ಅವರ ನೇತೃತ್ವದಲ್ಲಿ ಮತ್ತು ಜ್ಯೋತಿ ದೇಶಪಾಂಡೆ ನಿರ್ಮಿಸಿದ ಫ್ಯಾಮಿಲಿ ಡ್ರಾಮಾ ಥ್ರಿಲ್ಲರ್ ಚಿತ್ರವಾಗಿದೆ. ನಟರಾಕ್ಷಸ ಡಾಲಿ ಧನಂಜಯ, ರಮೇಶ್ ಇಂದಿರಾ, ಮೋಕ್ಷ ಕುಶಾಲ್, ರಂಗಾಯಣ ರಘು, ತಾರಾ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಪರಮ್ ಬರವಣಿಗೆ ಸಾರಥ್ಯದ ಕೋಟಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಟೀಸರ್ ಹಾಗೂ ಹಾಡುಗಳು ಹಿಟ್ ಲೀಸ್ಟ್ ಸೇರಿದ್ದು,, ಜೂನ್ 14 ರಿಂದ ಚಿತ್ರ ತೆರೆಗೆ ಬರಲಿದೆ.

ಹೊಯ್ಸಳʼ ಚಿತ್ರ ಬಿಡುಗಡೆಯಾದ ಒಂದು ವರ್ಷದ ಬಳಿಕ ಈ ಸಿನಿಮಾ ಬಿಡುಗಡೆ ಆಗುತ್ತಿದೆ. ನಟ ರಾಕ್ಷಸ ಎಂದು ಬಿರುದು ಪಡೆದಿರುವ ಡಾಲಿ ಅವರ ವೃತ್ತಿ ಜೀವನದಲ್ಲಿ ಇದೊಂದು ಮೈಲುಗಲ್ಲು ಆಗಬಹುದಾದ ಸಿನಿಮಾ ಎಂಬ ಅಭಿಪ್ರಾಯ ಈಗಾಗಲೇ ಬಂದಿರುವುದು ಸಿನಿಮಾದ ಕುರಿತು ನಿರೀಕ್ಷೆಯನ್ನು ಹೆಚ್ಚು ಮಾಡಿದೆ.

Continue Reading

ಸ್ಯಾಂಡಲ್ ವುಡ್

Rakshit Shetty: ಸಿಂಪಲ್‌ ಸ್ಟಾರ್‌ಗೆ ಇಂದು ಜನುಮದಿನದ ಸಂಭ್ರಮ; ರಕ್ಷಿತ್‌  ಸಿನಿ ಜರ್ನಿ ಹೀಗಿತ್ತು!

Rakshit Shetty: ಶೆಟ್ಟಿ ಅವರ ಚೊಚ್ಚಲ ಚಲನಚಿತ್ರ 2020 ರಲ್ಲಿ ಬಿಡುಗಡೆಯಾದ ʼನಮ್‌ ಏರಿಯಾಲ್‌ ಒಂದಿನʼ, ಆದರೆ ಈ ಸಿನಿಮಾ ಸದ್ದು ಮಾಡಿರಲಿಲ್ಲ. 2013 ರಲ್ಲಿ ಅವರ ‘ಸಿಂಪಲ್ಲಾಗಿ ಒಂದು ಲವ್ ಸ್ಟೋರಿʼ ಪ್ರೇಕ್ಷಕರನ್ನು ರಂಜಿಸಿತ್ತು.  ʼಉಳಿದವರು ಕಂಡಂತೆʼ ವ್ಯಾಪಕ ಪ್ರಶಂಸೆ ಪಡೆದಿದ್ದರೆ, ʼವಾಸ್ತು ಪ್ರಕಾರʼ, ʼಗೋಧಿ ಬಣ್ಣ ಸಾಧಾರಣ ಮೈಕಟ್ಟುʼ ಚಿತ್ರಗಳು ಅವರ ಯಶಸ್ಸಿನ ಪ್ರಯಾಣವನ್ನು ಮುಂದುವರಿಸಿದ್ದವು.

VISTARANEWS.COM


on

Rakshit Shetty Birthday here is the cinema Journey
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನ ʼಸಿಂಪಲ್‌ ಸ್ಟಾರ್‌ʼ ಖ್ಯಾತಿಯ ರಕ್ಷಿತ್‌ ಶೆಟ್ಟಿಗೆ (Rakshit Shetty) ಇಂದು (ಜೂನ್ 6) ಜನುಮದಿನದ ಸಂಭ್ರಮ. 40ನೇ ವರ್ಷಕ್ಕೆ ಸಂಭ್ರಮದಿಂದ ಕಾಲಿಟ್ಟ ರಕ್ಷಿತ್‌ ಶೆಟ್ಟಿಗೆ ಅವರ ಅಭಿಮಾನಿ ಬಳಗ ಹಾಗೂ ಸ್ಯಾಂಡಲ್‌ವುಡ್‌ನ ಗಣ್ಯರು ಶುಭ ಕೋರುತ್ತಿದ್ದಾರೆ. ಮುಂಬರುವ ನಿಮ್ಮೆಲ್ಲಾ ಸಿನಿಮಾಗಳು ಭರ್ಜರಿ ಯಶಸ್ಸು ಕಾಣಲಿʼʼ ಎಂದು ಸೋಷಿಯಲ್‌ ಮಿಡಿಯಾಗಳಲ್ಲಿ ವಿಶೇಷವಾಗಿ ಅವರ ಅಭಿಮಾನಿಗಳು ಹಾರೈಸುತ್ತಿದ್ದಾರೆ. ‘ಸಿಂಪಲ್ಲಾಗಿ ಒಂದು ಲವ್ ಸ್ಟೋರಿʼ ಹಿಟ್‌ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ರಕ್ಷಿತ್‌ ಶೆಟ್ಟಿ ʼಕಿರಿಕ್‌ ಪಾರ್ಟಿʼ ಚಿತ್ರದ ಮೂಲಕ ಜನಮನ್ನಣೆ ಪಡೆದವರು.

ಕಿರಿಕ್‌ ರಕ್ಷಿತ್‌  ಸಿನಿ ಜರ್ನಿ ಹೀಗಿತ್ತು!

ಕಾರ್ಕಳದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ವಿದ್ಯಾಲಯ (NMAMIT) ದಿಂದ ಎಲೆಕ್ಟ್ರಾನಿಕ್ಸ್ ಕಮ್ಯುನಿಕೇಷನ್ಸ್ ವಿಷಯದಲ್ಲಿ ಬಿಇ ಪದವಿ ಪಡೆದ ರಕ್ಷಿತ್‌, ಚಲನಚಿತ್ರಗಳಲ್ಲಿ ಅಭಿನಯಿಸುವುದಕ್ಕೂ ಮುನ್ನ ಎರಡು ವರ್ಷಗಳ ಕಾಲ ಸಾಫ್ಟ್‌ವೇರ್ ಉದ್ಯೋಗಿಯಾಗಿ ಕೆಲಸಮಾಡಿದ್ದರು.

ಶೆಟ್ಟಿ ಅವರ ಚೊಚ್ಚಲ ಚಲನಚಿತ್ರ 2020 ರಲ್ಲಿ ಬಿಡುಗಡೆಯಾದ ʼನಮ್‌ ಏರಿಯಾಲ್‌ ಒಂದಿನʼ, ಆದರೆ ಈ ಸಿನಿಮಾ ಸದ್ದು ಮಾಡಿರಲಿಲ್ಲ. 2013 ರಲ್ಲಿ ಅವರ ‘ಸಿಂಪಲ್ಲಾಗಿ ಒಂದು ಲವ್ ಸ್ಟೋರಿʼ ಪ್ರೇಕ್ಷಕರನ್ನು ರಂಜಿಸಿತ್ತು.  ʼಉಳಿದವರು ಕಂಡಂತೆʼ ವ್ಯಾಪಕ ಪ್ರಶಂಸೆ ಪಡೆದಿದ್ದರೆ, ʼವಾಸ್ತು ಪ್ರಕಾರʼ, ʼಗೋಧಿ ಬಣ್ಣ ಸಾಧಾರಣ ಮೈಕಟ್ಟುʼ ಚಿತ್ರಗಳು ಅವರ ಯಶಸ್ಸಿನ ಪ್ರಯಾಣವನ್ನು ಮುಂದುವರಿಸಿದ್ದವು.

ಇದನ್ನೂ ಓದಿ: Rakshit Shetty: ʻರಿಚರ್ಡ್​ ಆಂಟನಿʼಯಲ್ಲಿ ಕರಾವಳಿ ಕಲಾವಿದರಿಗೆ ಮೊದಲ ಆದ್ಯತೆ ಅಂದ್ರಾ ರಕ್ಷಿತ್‌ ಶೆಟ್ಟಿ?

‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಪ್ಯಾನ್‌ ಇಂಡಿಯಾ ಸಿನಿಮಾವಾಗಿ ರಾಷ್ಟ್ರಮಟ್ಟದಲ್ಲಿ ಹವಾ ಎಬ್ಬಿಸಿತ್ತು. ಡಿಫ್‌ರೆಂಟ್‌ ಲುಕ್‌ನೊಂದಿಗೆ ಬಂದ ರಕ್ಷಿತ್‌ ಶೆಟ್ಟಿ, ಈ ಸಿನಿಮಾದ ಕಥೆ ಮತ್ತು ಸಾಹಿತ್ಯಗಳಿಂದ ಹೆಸರು ಪಡೆದಿದ್ದರು. ಅವರ ʼರಿಚರ್ಡ್ ಆ್ಯಂಟೋನಿʼ ಚಿತ್ರ ಬಿಡುಗಡೆಗೆ ಸಿದ್ಧವಾಗುತ್ತಿದೆ.

ನಿರಾಸೆ ಮೂಡಿಸಿದ್ದ ದಿನಗಳು

ಸಿನಿಮಾ ಮಾಡಬೇಕು ಎಂಬ ಮಹಾದಾಸೆಯಿಂದ ರಕ್ಷಿತ್‌ ಎಂಜಿನಿಯರ್‌ ಕೆಲಸ ಬಿಟ್ಟು, ಸ್ಯಾಂಡ್‌ಲ್‌ವುಡ್‌ಗೆ ಎಂಟ್ರಿ ನೀಡಿದ್ದರು. ಆದರೆ ರಕ್ಷಿತ್‌ ಅಭಿನಯದ ಮೊದಲ ಸಿನಿಮಾ ʼತುಘಲಕ್‌ʼ ಸೋತಿತ್ತು.‌ ಮುಂದೇನು ಮಾಡಬೇಕು ಎಂದು ತೋಚದೇ ಇದ್ದಾಗ ಅವರ ಕೈ ಹಿಡಿದ್ದಿದ್ದು, ‘ಸಿಂಪಲ್ಲಾಗಿ ಒಂದು ಲವ್‌ ಸ್ಟೋರಿʼ. ಈ ಚಿತ್ರ ರಕ್ಷಿತ್ ಬದುಕಿನ ಹಾದಿಯನ್ನು ಬದಲಾಯಿಸಿದ್ದಲ್ಲದೇ, ಚಿತ್ರರಂಗದಲ್ಲಿ ಹೊಸ ನಾಯಕನ ಉದಯಕ್ಕೆ ಸಹ ಕಾರಣವಾಗಿತ್ತು.

ಈ ಎರಡು ಚಿತ್ರಗಳ ನಂತರ ಇತಿಹಾಸ ಸೃಷ್ಟಿಸಿದ ಇನ್ನೊಂದು ಚಿತ್ರ ಎಂದರೆ ʼಕಿರಿಕ್ ಪಾರ್ಟಿʼ. ಇದು ಕಾಲೇಜ್ ಹುಡುಗರ ಫೇವರೆಟ್​ ಚಿತ್ರವಾಯಿತು. ಅದರ ಡೈಲಾಗ್, ಕರ್ಣನ ಪಾತ್ರ ಅಭಿಮಾನಿಗಳ ಮನಸ್ಸಲ್ಲಿ ಈಗಲೂ ಉಳಿದಿದೆ.

ಪ್ರಶಸ್ತಿಗಳ ಸರಮಾಲೆ

ನಿರ್ದೇಶಕನಾಗಿ ಕರ್ನಾಟಕ ಸರ್ಕಾರದ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ, ಫಿಲಂಫೇರ್ (ದಕ್ಷಿಣ) ಪ್ರಶಸ್ತಿ, ಕರ್ನಾಟಕ ರಾಜ್ಯ ಸರ್ಕಾರದ ಅತ್ಯುತ್ತಮ ಚೊಚ್ಚಲ ನಿರ್ದೇಶಕ, ಅತ್ಯುತ್ತಮ ಸಾಹಿತಿ, ಅತ್ಯುತ್ತಮ ನಟ ಮುಂತಾದ ಪ್ರಶಸ್ತಿ ರಕ್ಷಿತ್‌ ಶೆಟ್ಟಿಗೆ ಸಂದಿವೆ.

ಚಾರ್ಲಿಯತ್ತ ಕಣ್ಣು

ರಕ್ಷಿತ್‌ ಅವರ ಬಹು ನಿರೀಕ್ಷೆಯ ಚಿತ್ರ ʼ777 ಚಾರ್ಲಿʼ ಈಗಾಗಲೇ ಬಿಡುಗಡೆಗೆ ಆಗಿ ರಾಷ್ಟ್ರ ಪ್ರಶಸ್ತಿಯೂ ಸಿಕ್ಕಿತು. ವಿಭಿನ್ನವಾದ ಕತೆಯನ್ನು ಹೊಂದಿರುವ ಈ ಚಿತ್ರವನ್ನು ಕಿರಣ್‌ ನಿರ್ದೇಶಿಸಿದ್ದು, ಚಾರ್ಲಿ ಎಂಬ ನಾಯಿಯೊಂದರ ಕತೆ ಈಗಾಗಲೇ ಸಿನಿ ರಸಿಕರಲ್ಲಿ ಮನಸಿನಲ್ಲಿ ಉಳಿಯುವಂತೆ ಮಾಡಿದೆ.

ಮುಂಬರುವ ಸಿನಿಮಾಗಳು

ರಕ್ಷಿತ್ ಶೆಟ್ಟಿ ( Rakshit Shetty) ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಪಾರ್ಟ್ ʻಎʼ ಹಾಗೂ ʻಬಿʼ ಕಳೆದ ವರ್ಷ ರಿಲೀಸ್ ಆಗಿತ್ತು. ಇದೀಗ ʻರಿಚರ್ಡ್​ ಆಂಟನಿʼ (Richard Anthony) ಹಾಗೂ ‘ಪುಣ್ಯಕೋಟಿ ಸಿನಿಮಾಗಳನ್ನು ರಕ್ಷಿತ್‌ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡುತ್ತಿದೆ. ವರದಿ ಪ್ರಕಾರ ಈ ಸಿನಿಮಾದಲ್ಲಿ ಕರಾವಳಿಯ ಕಲಾವಿದರು ಮಾತ್ರ ಮುಖ್ಯವಾಗಿ ನಟಿಸಲಿದ್ದಾರಂತೆ. ಜತೆಗೆ 2025ರ ವೇಳೆಗೆ ಸಿನಿಮಾ ತೆರೆಗೆ ಬರಲಿದೆ ಎಂದು ವರದಿಯಾಗಿದೆ.

ಮೂಲಗಳ ಪ್ರಕಾರ ರಿಚರ್ಡ್‌ ಆಂಟನಿ ಸಿನಿಮಾದ ಪ್ರಿ ಪ್ರೊಡಕ್ಷನ್‌ ಕೆಲಸಗಳು ಆರಂಭಗೊಂಡಿವೆ. ರಕ್ಷಿತ್ ಶೆಟ್ಟಿಯವರು ಈಗಾಗಲೇ ಉಡುಪಿಗೆ ಶಿಫ್ಟ್‌ ಆಗಿದ್ದಾರೆ. ಅವರ ಟೀಂ ಕೂಡ ಶೀಘ್ರವೇ ಉಡುಪಿಗೆ ಬರಲಿದೆ. ಮೇ 1ರಿಂದ ಸಿನಿಮಾದ ಪ್ರೀ ಪ್ರೊಡಕ್ಷನ್‌ ಕಾರ್ಯಗಳು ನೇರವೇರಲಿದೆಯಂತೆ. ಶೇ. 50ರಷ್ಟು ಸಿನಿಮಾ ಕರಾವಳಿಯಲ್ಲಿಯೇ ಶೂಟಿಂಗ್‌ ನಡಯಲಿದ್ದು, ಕೆಲವು ಸೀಕ್ವೆನ್ಸ್‌ಗಳು ಗೋಕರ್ಣ, ಕೇರಳದಲ್ಲಿ ಶೂಟ್‌ ಆಗಬಹುದು ಎನ್ನಲಾಗಿದೆ.

ರಕ್ಷಿತ್ ಶೆಟ್ಟಿ ಅವರು ಈ ಸಿನಿಮಾಗಾಗಿ ಮುಖ್ಯವಾಗಿ ಕರಾವಳಿ ಕಲಾವಿದರನ್ನೇ ಆಯ್ಕೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಸಿನಿಮಾದಲ್ಲಿ ಉಡುಪಿ ಭಾಷೆಯೇ ಪ್ರಮುಖ ಹೈಲೈಟ್‌ ಆಗಿದ್ದು, ಬೇರೆಯವರು ಮಾತನಾಡಿದರೆ ಅನುಕರಣೆಯಂತಾಗುತ್ತದೆ. ಹೀಗಾಗಿ ಉಡುಪಿ ಭಾಷೆ ಬರುವವರಿಗೆ ಮಾತ್ರ ಮೊದಲ ಆದ್ಯತೆ ನೀಡುತ್ತಿದ್ದಾರೆ ಎನ್ನಲಾಗಿದೆ. 2025ಕ್ಕೆ ಸಿನಿಮಾ ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ.

ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಪಾರ್ಟ್ ʻಎʼ ಹಾಗೂ ʻಬಿʼ ಕಳೆದ ವರ್ಷ ರಿಲೀಸ್ ಆಗಿತ್ತು. ಇದೀಗ ರಿಚರ್ಡ್​ ಆಂಟನಿ ಹಾಗೂ ‘ಪುಣ್ಯಕೋಟಿ ಸಿನಿಮಾಗಳನ್ನು ರಕ್ಷಿತ್‌ ನಿರ್ದೇಶನ ಮಾಡುತ್ತಿದ್ದಾರೆ. ನನ್ನ ಮುಂದಿನ ಎರಡು ಸಿನಿಮಾಗಳಿಗೆ (ʻರಿಚರ್ಡ್​ ಆಂಟನಿ’ ಹಾಗೂ ‘ಪುಣ್ಯಕೋಟಿ’) ಪರಶುರಾಮ ಹಾಗೂ ಆತನ ಕೊಡಲಿಯೇ ಸ್ಫೂರ್ತಿ. ಈ ಕಥೆ ಜತೆ ಹೀಗಾಗಲೇ 4 ವರ್ಷ ಕಳೆದಿದ್ದೇನೆ. ಇನ್ನೂ ನಾಲ್ಕು ವರ್ಷ ಕಳೆಯೋದು ಇದೆ ಅನಿಸುತ್ತಿದೆ ಎಂದು ರಕ್ಷಿತ್ ಶೆಟ್ಟಿ ಈ ಹಿಂದೆ ಹೇಳಿಕೊಂಡಿದ್ದರು.

ಇದನ್ನೂ ಓದಿ: Rakshit Shetty: ಕಿರುತೆರೆಗೂ ಲಗ್ಗೆ ಇಟ್ಟ ʼಸಪ್ತ ಸಾಗರದಾಚೆ ಎಲ್ಲೋ ಸೈಡ್‌ ಬಿʼ ಚಿತ್ರ; ಎಲ್ಲಿ, ಯಾವಾಗ ಪ್ರಸಾರ?

ರಿಚರ್ಡ್‌ ಆಂಟನಿ ಜತೆಗೆ ರಕ್ಷಿತ್‌ ಶೆಟ್ಟಿ ಹಲವು ಯೋಜನೆಗಳನ್ನು ಹೊಂದಿದ್ದಾರೆ. ಈ ಬಗ್ಗೆ ಈ ಹಿಂದೆ ಅವರು ಟ್ವೀಟ್‌ ಹಂಚಿಕೊಂಡಿದ್ದರು. ʻʻಸಪ್ತ ಸಾಗರದಾಚೆ ಎಲ್ಲೋ ನಂತರ ನನ್ನ ಲೈನ್ ಅಪ್‌ಗಳು ಸಾಕಷ್ಟು ಸ್ಪಷ್ಟವಾಗಿವೆ. ಅಂದರೆ ರಿಚರ್ಡ್​ ಆಂಟನಿ, ಪುಣ್ಯ ಕೋಟಿ 1 (PK 1), ಪುಣ್ಯ ಕೋಟಿ 2 (PK 2), (RA), PK 1 ಮತ್ತು 2,ಮಿಡ್ನೈಟ್ ಟು ಮೋಕ್ಷ (M2M) ಇವುಗಳು ನನಗೆ ನಿದ್ದೆಯಿಲ್ಲದ ರಾತ್ರಿಗಳನ್ನು ನೀಡುವ ನಾಲ್ಕು ಚಲನಚಿತ್ರಗಳಾಗಿವೆ. ಆದರೆ ಕಿರಿಕ್‌ ಪಾರ್ಟಿ 2 (KP2) ಗಾಗಿ ನಾನು ವಿಭಿನ್ನ ಯೋಜನೆಗಳನ್ನು ಹೊಂದಿದ್ದೇನೆʼʼ ಎಂದಿದ್ದರು.

Continue Reading
Advertisement
prajwal Revanna
ಪ್ರಮುಖ ಸುದ್ದಿ4 mins ago

Prajwal Revanna : ಪ್ರಜ್ವಲ್​ ರೇವಣ್ಣ ಮತ್ತೆ ನಾಲ್ಕು ದಿನ ಎಸ್​​ಐಟಿ ಕಸ್ಟಡಿಗೆ

Agnipath scheme
ದೇಶ6 mins ago

Agnipath Scheme: ಸರ್ಕಾರ ರಚನೆಗೂ ಮುನ್ನ ನಿತೀಶ್‌ ಕುಮಾರ್‌ ಬಿಗ್‌ ಡಿಮ್ಯಾಂಡ್‌! ಬಿಜೆಪಿಗೆ ʼಅಗ್ನಿʼ ಪರೀಕ್ಷೆ ಗ್ಯಾರಂಟಿ!

Raja Rani Show performance Karnataka Jodi in colors
ಕಿರುತೆರೆ15 mins ago

Raja Rani Show: ‘ರಾಜಾ ರಾಣಿ’ ಶೋನಲ್ಲಿ ಕುಣಿದು ಕುಪ್ಪಳಿಸಿದ ‘ಕರ್ನಾಟಕ ಜೋಡಿ’; ಹುಣಸೆ ಮರ ಮುಪ್ಪಾದರೆ, ಹುಳಿ ಮುಪ್ಪಾ?

Love Jihad
ಪ್ರಮುಖ ಸುದ್ದಿ42 mins ago

Love jihad : ಬಿಹಾರದ ಹಿಂದೂ ಯುವತಿಯನ್ನು ಉತ್ತರಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ ಆರಿಫ್; ಲವ್​ ಜಿಹಾದ್ ಆರೋಪ

Road Accident
ಕ್ರೈಂ43 mins ago

Road Accident : ಬೈಕ್‌ಗಳಿಗೆ ಗುದ್ದಿ ಸವಾರರನ್ನು ಕೊಂದು ಪರಾರಿಯಾಗಲು ಯತ್ನಿಸಿದ ಕಾರು ಚಾಲಕ

Election Results 2024
ದೇಶ51 mins ago

Election Results 2024: ರಾಮನೂರಿನಲ್ಲೇ ಬಿಜೆಪಿ ಹಿನ್ನಡೆ; ಹೀನಾಯ ಸೋಲಿಗೆ ಕಾರಣ ಏನು?

Sonu Nigam Hit Backs To Ayodhya People For Not Vote For BJP
ಬಾಲಿವುಡ್56 mins ago

Sonu Nigam: ಅಯೋಧ್ಯೆ ಜನರಿಗೆ ಛೀಮಾರಿ ಹಾಕಿದ್ರಾ ಸೋನು ನಿಗಮ್?

K Annamalai
ವೈರಲ್ ನ್ಯೂಸ್59 mins ago

K Annamalai: ಮೇಕೆಯ ತಲೆಗೆ ಅಣ್ಣಾಮಲೈ ಫೋಟೊ ಅಂಟಿಸಿ ಕಡಿದ ಡಿಎಂಕೆ ಕಾರ್ಯಕರ್ತರು!

hd kumaraswamy nitish kumar
ಪ್ರಮುಖ ಸುದ್ದಿ1 hour ago

HD Kumaraswamy: ಎಚ್‌ಡಿ ಕುಮಾರಸ್ವಾಮಿ ಕೇಳಿದ ಕೃಷಿ ಖಾತೆ ಮೇಲೇ ನಿತೀಶ್‌ ಕಣ್ಣು; ಯಾರಿಗೆ ಒಲಿಯತ್ತೆ ಇಲಾಖೆ?

Virat Kohli
ಕ್ರೀಡೆ1 hour ago

Virat Kohli: ‘ಕೊಹ್ಲಿ ಕೊ ಬೌಲಿಂಗ್​ ದೋ’ ನ್ಯೂಯಾರ್ಕ್​ ಸ್ಟೇಡಿಯಂನಲ್ಲಿ ಮೊಳಗಿದ ಅಭಿಮಾನಿಗಳ ಕೂಗು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ4 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌