ವಿಸ್ತಾರ Fact Check | ಔತಣಕೂಟದಲ್ಲಿ ರಾಮನಾಥ ಕೋವಿಂದ್‌ಗೆ ಅವಮಾನಿಸಿದರಾ ಪ್ರಧಾನಿ ಮೋದಿ? - Vistara News

ಫ್ಯಾಕ್ಟ್ ಚೆಕ

ವಿಸ್ತಾರ Fact Check | ಔತಣಕೂಟದಲ್ಲಿ ರಾಮನಾಥ ಕೋವಿಂದ್‌ಗೆ ಅವಮಾನಿಸಿದರಾ ಪ್ರಧಾನಿ ಮೋದಿ?

ಕಾಂಗ್ರೆಸ್‌ ಮತ್ತು ಆಪ್‌ ಪಕ್ಷಗಳು ಶೇರ್‌ ಮಾಡಿಕೊಂಡಿರುವ ವಿಡಿಯೋ ಸಿಕ್ಕಾಪಟೆ ಶೇರ್‌ ಆಗುತ್ತಿದೆ. ಅದರಲ್ಲಿ ರಾಮನಾಥ ಕೋವಿಂದ್‌ ಪ್ರಧಾನಿಗೆ ಕೈಮುಗಿದರೂ, ಅವರು ಪ್ರತಿಯಾಗಿ ವಂದಿಸದೆ ಇದ್ದಂತೆ ತೋರುತ್ತದೆ.

VISTARANEWS.COM


on

PM Modi And Ram Nath Kovind
ಪ್ರಧಾನಿ ನರೇಂದ್ರ ಮೋದಿಗೆ ವಂದಿಸುತ್ತಿರುವ ರಾಮನಾಥ ಕೋವಿಂದ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರ ಅಧಿಕಾರ ಅವಧಿ ಇಂದು ಮುಕ್ತಾಯವಾಗಿದ್ದು, ಸಂಜೆ 7ಗಂಟೆಗೆ ವಿದಾಯದ ಭಾಷಣ ಮಾಡಲಿದ್ದಾರೆ. ಹುದ್ದೆಯಿಂದ ನಿರ್ಗಮಿಸಲಿರುವ ರಾಮನಾಥ ಕೋವಿಂದ್‌ಗಾಗಿ ಶುಕ್ರವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಔತಣಕೂಟ ಏರ್ಪಡಿಸಿದ್ದರು. ಅದರಲ್ಲಿ ಬಹುತೇಕ ಎಲ್ಲ ಸಂಸದರು, ಗಣ್ಯರು ಪಾಲ್ಗೊಂಡಿದ್ದರು. ಆದರೆ ಔತಣಕೂಟ ಮುಗಿಯುತ್ತಿದ್ದಂತೆ ಕಾಂಗ್ರೆಸ್‌ ಮತ್ತು ಆಪ್‌ನ ಕೆಲವು ಮುಖಂಡರು ಒಂದು ವಿಡಿಯೋವನ್ನು ಶೇರ್‌ ಮಾಡಿಕೊಂಡು ಪ್ರಧಾನಿ ನರೇಂದ್ರ ಮೋದಿಯವರ ವರ್ತನೆಯನ್ನು ಟೀಕಿಸುತ್ತಿದ್ದಾರೆ.

ರಾಮನಾಥ ಕೋವಿಂದ್‌ ಕೈಮುಗಿಯುತ್ತ ಪ್ರಧಾನಿ ಮೋದಿ ಸಮೀಪ ಬರುತ್ತಾರೆ. ಆದರೆ ನರೇಂದ್ರ ಮೋದಿ, ಕೋವಿಂದ್‌ ಕಡೆಗೆ ನೋಡದೆ ಎದುರಿಗೆ ಫೋಟೋ ತೆಗೆಯುತ್ತಿರುವವರ ಕ್ಯಾಮರಾವನ್ನೇ ದಿಟ್ಟಿಸುತ್ತ ನಿಂತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಕರ್ನಾಟಕ ಕಾಂಗ್ರೆಸ್‌ ಕೂಡ ಈ ವಿಡಿಯೋ ಶೇರ್‌ ಮಾಡಿಕೊಂಡು, ʼದಲಿತ ರಾಷ್ಟ್ರಪತಿ ಎಂದು ಬೆನ್ನು ತಟ್ಟಿಕೊಂಡ ಬಿಜೆಪಿ, ದಲಿತರಿಗೆ ನೀಡುವ ಬೆಲೆ ಇದು. ಪ್ರಧಾನಮಂತ್ರಿಗಳು ಕ್ಯಾಮರಾಕ್ಕೆ ನೀಡುವ ಬೆಲೆಯನ್ನು ಈ ದೇಶದ ನಿರ್ಗಮಿತ, ದಲಿತ ರಾಷ್ಟ್ರಪತಿಗೆ ನೀಡದೆ ಇರುವುದು ದುರದೃಷ್ಟ. ರಾಮನಾಥ ಕೋವಿಂದ್‌ ದಲಿತ ಎಂಬ ಕಾರಣಕ್ಕೆ ಅವರನ್ನು ರಾಮಮಂದಿರ ಭೂಮಿಪೂಜೆಗೂ ಬಿಟ್ಟುಕೊಳ್ಳದೆ ಇರುವವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ? ಎಂದು ಕ್ಯಾಪ್ಷನ್‌ ಬರೆದುಕೊಂಡಿತ್ತು.

ಇದರೊಂದಿಗೆ ಆಪ್‌ ನಾಯಕ ಸಂಜಯ್‌ ಸಿಂಗ್‌ ಕೂಡ ಆ ವಿಡಿಯೋ ಶೇರ್‌ ಮಾಡಿಕೊಂಡು ʼರಾಷ್ಟ್ರಪತಿ ಸ್ಥಾನದಿಂದ ನಿರ್ಗಮಿಸುತ್ತಿರುವ ರಾಮನಾಥ ಕೋವಿಂದ್‌ರಿಗೆ ಪ್ರಧಾನಿ ಮೋದಿ ಅವಮಾನ ಮಾಡಿದ್ದಾರೆ. ಅವರು ಕೈ ಮುಗಿದರೂ ಮೋದಿ ಪ್ರತಿಕ್ರಿಯೆ ನೀಡಲಿಲ್ಲʼ ಎಂದು ಹೇಳಿದ್ದಾರೆ. ಹಾಗೇ, ಆ ವಿಡಿಯೋವನ್ನು ಅವರು ಶೇರ್‌ ಮಾಡಿಕೊಂಡಿದ್ದಾರೆ.

ಆದರೆ ಈ ವಿಡಿಯೋ ಹಿಂದಿನ ಸತ್ಯಾಂಶವೇನು? ಪ್ರಧಾನಿ ಮೋದಿ ನಿಜಕ್ಕೂ ರಾಷ್ಟ್ರಪತಿ ರಾಮನಾಥ ಕೋವಿಂದ್‌ ನಮಸ್ಕಾರಕ್ಕೆ ಸ್ಪಂದಿಸಲಿಲ್ಲವಾ?. ಕಾಂಗ್ರೆಸ್‌ ಹಂಚಿಕೊಂಡಿರುವ ಈ ನಾಲ್ಕು ಸೆಕೆಂಡ್‌ಗಳ ವಿಡಿಯೋಕ್ಕೆ ಪ್ರತಿಯಾಗಿ ಬಿಜೆಪಿ ಹಂಚಿಕೊಂಡಿರುವ ಇದೇ ವಿಡಿಯೋದ ದೀರ್ಘ ಆವೃತ್ತಿಯನ್ನ ನೋಡಿದರೆ ಸತ್ಯವೇನು ಎಂಬುದು ಸ್ಪಷ್ಟವಾಗುತ್ತದೆ. ʼಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಸೇರಿ ಗಣ್ಯರೆಲ್ಲ ಸಾಲಾಗಿ ನಿಂತಿದ್ದಾರೆ. ರಾಮನಾಥ ಕೋವಿಂದ್‌ ಕೈಮುಗಿಯುತ್ತ ಮುಂದಡಿ ಇಡುತ್ತ ಬರುತ್ತಾರೆ. ಅದಕ್ಕೆ ಪ್ರತಿಯಾಗಿ ಅಲ್ಲಿದ್ದವರೆಲ್ಲರೂ ವಂದಿಸುತ್ತಾರೆ. ನರೇಂದ್ರ ಮೋದಿ ಕೂಡ ಎರಡೂ ಕೈ ಜೋಡಿಸುವುದನ್ನು ನೋಡಬಹುದು. ಹೀಗೆ ಒಂದು ಬಾರಿ ಕೋವಿಂದ್‌ಗೆ ಪ್ರತಿವಂದಿಸಿದ ನರೇಂದ್ರ ಮೋದಿ, ತಿರುಗಿ ಕ್ಯಾಮರಾಗಳಿಗೆ ಪೋಸ್‌ ಕೊಡುತ್ತಾರೆ. ಅಷ್ಟರಲ್ಲಿ ಮೋದಿಯವರ ಹಿಂಬದಿಯಲ್ಲಿದ್ದ ಪಿಯೂಷ್‌ ಗೋಯಲ್‌ ಅವರು ಕೋವಿಂದ್‌ಗೆ ಕೈಜೋಡಿಸುತ್ತಾರೆ ಮತ್ತು ಕೋವಿಂದ್‌ ಹಾಗೂ ಗೋಯಲ್‌ ಇಬ್ಬರೂ ಏನೋ ಮಾತಾಡಿಕೊಳ್ಳುತ್ತಾರೆ.

ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ಗೆ ಯಾವುದೇ ಅವಮಾನ ಮಾಡಿಲ್ಲ. ಗೌರವ ಕಳೆದಿಲ್ಲ. ಪ್ರತಿಪಕ್ಷಗಳು ಆರೋಪಿಸುತ್ತಿರುವಂತೆ ಏನೂ ಆಗಿಲ್ಲ ಎಂಬುದು ಬಿಜೆಪಿ ಶೇರ್‌ ಮಾಡಿಕೊಂಡಿರುವ ವಿಡಿಯೋದಲ್ಲೇ ಸ್ಪಷ್ಟವಾಗುತ್ತಿದೆ. ಇಲ್ಲಿದೆ ನೋಡಿ ಬಿಜೆಪಿ ನಾಯಕ ಅಮಿತ್‌ ಮಾಳ್ವಿಯಾ ಶೇರ್‌ ಮಾಡಿಕೊಂಡಿರುವ ಈ ವಿಡಿಯೋ..

ಇದನ್ನೂ ಓದಿ: Video: ರಾಮನಾಥ ಕೋವಿಂದ್‌ ಅಧಿಕಾರ ಅವಧಿ ಜು.24ಕ್ಕೆ ಅಂತ್ಯ; ಸಂಸತ್ತಿನಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Fact Check

Fact Check: ಬೈಕ್ ಕದ್ದು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದರೆ ಪಂಜಾಬ್ ಸಿಎಂ ಭಗವಂತ್ ಮಾನ್?

Viral news: ಹತ್ತು ವರ್ಷಗಳ ಹಿಂದೆ ಬೈಕ್ ದರೋಡೆ ಪ್ರಕರಣದಲ್ಲಿ ಮಾನ್ ಅವರು ಬಂಧನಕ್ಕೊಳಗಾದ ಛಾಯಾ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದು ನಿಜವೇ ?

VISTARANEWS.COM


on

By

Viral news
Koo

ಪಂಜಾಬ್: ನಿರಂತರ ಒಂದಲ್ಲ ಒಂದು (Fact Check) ಕಾರಣದಿಂದ ಸುದ್ದಿಯಲ್ಲಿರುವ ಹೊಸದಾಗಿ ಚುನಾಯಿತರಾದ ಪಂಜಾಬ್ (Punjab) ಮುಖ್ಯಮಂತ್ರಿ (Chief Minister) ಭಗವಂತ್ ಮಾನ್ (Bhagwant Mann) ಅವರನ್ನು ಈ ಹಿಂದೆ ಬೈಕ್ ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿ ಬಂಧನಕ್ಕೆ ಒಳಪಡಿಸಲಾಗಿತ್ತು ಎನ್ನುವ ಫೋಟೋ ಸಹಿತ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral news) ಆಗಿದೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ವಿವಾದಗಳಿಗೆ ಹೊಸದೇನಲ್ಲ. ರಾಜ್ಯದ ಅತ್ಯುನ್ನತ ಹುದ್ದೆಗೇರಿದ ಬಳಿಕ ಅವರ ಕುರಿತು ಜನರು ತಮ್ಮ ಅಭಿಪ್ರಾಯಗಳನ್ನು ಮತ್ತು ಹಳೆಯ ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದನ್ನು ಸಾಕಷ್ಟು ಮಂದಿ ವೀಕ್ಷಿಸುತ್ತಿದ್ದಾರೆ.

ಇದೀಗ ಸುಮಾರು ಒಂದು ದಶಕದ ಹಿಂದೆ ಬೈಕ್ ದರೋಡೆ ಪ್ರಕರಣದಲ್ಲಿ ಮಾನ್ ಬಂಧನಕ್ಕೊಳಗಾದ ಛಾಯಾ ಚಿತ್ರ ಎಂದು ಹೇಳುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾನ್ ಅವರು ಇತರ ಮೂವರೊಂದಿಗೆ ನೆಲದ ಮೇಲೆ ಕುಳಿತಿರುವ ಈ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಮಂದಿ ವೀಕ್ಷಿಸಿದ್ದಾರೆ.

ಇದನ್ನೂ ಓದಿ: Video Viral: ಜಲ ತರಂಗ್‌ನಲ್ಲಿ ಮಹಿಳೆ ನುಡಿಸಿದ ಐಗಿರಿ ನಂದಿನಿ ವಿಡಿಯೋ ವೈರಲ್

ಈ ಫೋಟೋ ದ ಕುರಿತು ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸಿದ ನ್ಯೂಸ್‌ಚೆಕರ್ ಇದು ಸುಳ್ಳೆಂದು ತಿಳಿಸಿದೆ. ಆದರೂ ಈ ಚಿತ್ರವನ್ನು ಟ್ವಿಟರ್‌ನಲ್ಲಿ ಸಾಕಷ್ಟು ಮಂದಿ ವೀಕ್ಷಿಸುತ್ತಿದ್ದಾರೆ ಮತ್ತು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ಭಗವಂತ್ ಮಾನ್ ಅವರು 2022ರ ಮಾರ್ಚ್ 16ರಂದು ಪಂಜಾಬ್ ನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಮಾಜಿ ಶಾಸಕರಿಗೆ ಪಿಂಚಣಿ ಪಾವತಿ, ಶಿಕ್ಷಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಅವರ ಸರ್ಕಾರದ ‘ದೊಡ್ಡ’ ನಿರ್ಧಾರಗಳಿಗಾಗಿ ಅವರು ನಿರಂತರ ಸುದ್ದಿಯಲ್ಲಿದ್ದಾರೆ.


ಮಾನ್ ಅವರನ್ನು ಪಂಜಾಬ್‌ನಲ್ಲಿ ಎಎಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದಾಗಿನಿಂದ ಹಾಸ್ಯನಟ-ರಾಜಕಾರಣಿ ಮಾನ್ ಅವರನ್ನು ಪದೇ ಪದೇ ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ ಮಾಡಲಾಗುತ್ತಿದೆ. ಪಂಜಾಬ್ ಸಿಎಂ ಬಗೆಗಿನ ಹಲವಾರು ಸುಳ್ಳು ಮಾಹಿತಿಗಳನ್ನು ನ್ಯೂಸ್‌ಕೆಕರ್ ತನಿಖೆ ನಡೆಸಿದೆ.

ಇದೀಗ ವೈರಲ್ ಆಗಿರುವ ಚಿತ್ರದ ಹುಡುಕಾಟ ನಡೆಸಿದಾಗ ಪಂಜಾಬಿ ಗಾಯಕ ಮತ್ತು ನಟ ಕರಮ್‌ಜಿತ್ ಅನ್ಮೋಲ್ ಅವರು ಮ್ಯಾಚ್ 18ರಂದು ಫೇಸ್‌ಬುಕ್ ನಲ್ಲಿ ಮಾಡಿರುವ ಪೋಸ್ಟ್ ಸಿಕ್ಕಿದೆ. ಅದರಲ್ಲಿ ಅವರು ಭಗವಂತ್ ಮಾನ್ ಮತ್ತು ಮಂಜಿತ್ ಸಿಧು ಅವರೊಂದಿಗೆ ಹೋಳಿ ನೆನಪುಗಳು ಎಂಬ ಶೀರ್ಷಿಕೆಯೊಂದಿಗೆ ಈ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಬೈಕ್ ಕಳ್ಳತನ ಪ್ರಕರಣದಲ್ಲಿ ಮಾನ್ ಬಂಧನ ಎಂಬಂತೆ ಬಿಂಬಿಸಿರುವ ಈ ಚಿತ್ರ ದ ಹೇಳಿಕೆಯನ್ನು ಮಂಜಿತ್ ಸಿಧು ಅವರು ತಳ್ಳಿಹಾಕಿದ್ದಾರೆ. ಇದು ನಕಲಿ ಸುದ್ದಿ ಎಂದು ಹೇಳಿದ್ದಾರೆ.


ಈ ಚಿತ್ರವನ್ನು 1994 ಅಥವಾ 1995 ರಲ್ಲಿ ಕೆನಡಾದ ಗಾಯಕ ಹರ್ಭಜನ್ ಮಾನ್ ಭಾರತಕ್ಕೆ ಬಂದಾಗ ಪಟಿಯಾಲದಲ್ಲಿ ತೆಗೆದಿದ್ದಾರೆ. ಹೋಳಿ ಹಬ್ಬದಂದು ಹರ್ಭಜನ್ ಮಾನ್ ಅವರ ಮನೆಯ ಟೆರೇಸ್‌ನಲ್ಲಿ ಚಿತ್ರ ತೆಗೆಯಲಾಗಿದೆ. ಭಗವಂತ್ ಮಾನ್, ಕರಮ್ಜಿತ್ ಅನ್ಮೋಲ್ ಮತ್ತು ಹರ್ಭಜನ್ ಮಾನ್ ಕೂಡ ಅಲ್ಲಿ ಹಾಜರಿದ್ದರು. ಭಗವಂತ್ ಮಾನ್ ಮತ್ತು ನಾನು ಕಾಲೇಜು ದಿನಗಳಿಂದಲೂ ಸ್ನೇಹಿತರಾಗಿದ್ದೇವೆ ಎಂದು ಸಿಧು ತಿಳಿಸಿದ್ದಾರೆ.

ಈ ಕುರಿತು ಮತ್ತಷ್ಟು ಸ್ಪಷ್ಟಿಕರಣಕ್ಕಾಗಿ ಮಾನ್ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್ ಅನ್ನು ಪರಿಶೀಲಿಸಲಾಗಿದೆ. ಆದರೆ ಯಾವುದೇ ಅಪರಾಧ ಪ್ರಕರಣದಲ್ಲಿ ಅವರು ಭಾಗಿಯಾಗಿರುವ ಬಗ್ಗೆ ಅದರಲ್ಲಿ ಯಾವುದೇ ಉಲ್ಲೇಖವಿಲ್ಲ ಎಂದು ತಿಳಿದು ಬಂದಿದೆ.

Continue Reading

ವೈರಲ್ ನ್ಯೂಸ್

Viral news: ಚುನಾವಣೆಗೆ ಮೊದಲೇ 19 ಲಕ್ಷ ಇವಿಎಂ ಕಾಣೆಯಾಗಿದ್ದು ನಿಜವೇ? ಏನಿದರ ಅಸಲಿಯತ್ತು ?

Viral news: ಲೋಕಸಭೆ ಚುನಾವಣೆಗೂ ಮುನ್ನ 1.9 ಮಿಲಿಯನ್ ಇವಿಎಂಗಳನ್ನು ಕಳವು ಮಾಡಲಾಗಿದೆ ಎನ್ನುವ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕಳವಾಗಿರುವ ಇವಿಎಂ ಗಳು ಎಲ್ಲಿ ಹೋಗಿವೆ ? ಈ ಸುದ್ದಿ ಎಲ್ಲಿಂದ ಬಂತು ಗೊತ್ತೇ ?

VISTARANEWS.COM


on

By

Viral news
Koo

ನವದೆಹಲಿ: ಲೋಕಸಭಾ ಚುನಾವಣೆ- 2024ರ (Lok sabha election-2024) ಮೊದಲ ಹಂತದ ಮತದಾನ ಪ್ರಕ್ರಿಯೆಗಳು ಶುಕ್ರವಾರ ದೇಶದ ವಿವಿಧ ಭಾಗಗಳಲ್ಲಿ ನಡೆದಿದೆ. ಮತದಾನ ಪ್ರಾರಂಭಕ್ಕೂ ಮೊದಲು 1.9 ಮಿಲಿಯನ್ ಎಲೆಕ್ಟ್ರಾನಿಕ್ ಮತಯಂತ್ರಗಳು (EVM) ಕಾಣೆಯಾಗಿವೆ ಎನ್ನುವ ಕುರಿತು ಸಾಮಾಜಿಕ ಜಾಲತಾಣದಲ್ಲಿ (social media) ಸಂದೇಶ ಹರಡಿದ್ದು (viral news) ಇದು ಸುಳ್ಳು ಎಂದು ತಿಳಿದು ಬಂದಿದೆ.

ಏಪ್ರಿಲ್ 19ರಂದು 2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಾರಂಭವಾಗುವ ಮೊದಲು ಚುನಾವಣಾ ಫಲಿತಾಂಶಗಳ ಮೇಲೆ ಪ್ರಭಾವ ಬೀರಲು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯನ್ನು ಹಂಚಿಕೊಳ್ಳಲಾಗಿತ್ತು. ಇದರಲ್ಲಿ 1.9 ಮಿಲಿಯನ್ ಎಲೆಕ್ಟ್ರಾನಿಕ್ ಮತಯಂತ್ರಗಳು ಕಾಣೆಯಾಗಿದೆ ಎಂದು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅನೇಕ ಬಳಕೆದಾರರು ಹೇಳಿಕೊಂಡಿದ್ದರು.

ಈ ಕುರಿತು ತನಿಖೆ ನಡೆಸಿದ ವಿಶ್ವಸ್ ನ್ಯೂಸ್ ಈ ಹೇಳಿಕೆ ಸುಳ್ಳು ಎಂದು ಪತ್ತೆ ಹಚ್ಚಿದೆ. ಚುನಾವಣಾ ಆಯೋಗವೂ ಕೂಡ ಇದೊಂದು ನಕಲಿ ಸುದ್ದಿ ಎಂದು ಹೇಳಿದೆ. ಈ ವರ್ಷದ ಮಾರ್ಚ್‌ನಲ್ಲಿ ಸುಪ್ರೀಂ ಕೋರ್ಟ್ ಕೂಡ ಇವಿಎಂ ನಾಪತ್ತೆಯಾಗಿರುವ ಆರೋಪಗಳನ್ನು ತಳ್ಳಿಹಾಕಿತ್ತು.

ಇದನ್ನೂ ಓದಿ: Viral Video: 7 ಮಕ್ಕಳನ್ನು ದೇವರು ಕೊಟ್ಟಿದ್ದಾದರೆ ಬಡತನಕ್ಕೆ ಮೋದಿ ಹೇಗೆ ಕಾರಣ? ಮುಸ್ಲಿಂ ಮಹಿಳೆಗೆ ತರಾಟೆ!


ಸುಳ್ಳು ಸುದ್ದಿ

ಸಾಮಾಜಿಕ ಮಾಧ್ಯಮ ಬಳಕೆದಾರ ನಿಹಾಲ್ ಸಿಂಗ್ ನಿಗಮ್ ಅವರು, 1.9 ಮಿಲಿಯನ್ ಇವಿಎಂ ಯಂತ್ರಗಳನ್ನು ಕಳವು ಮಾಡಲಾಗಿದೆ ಮತ್ತು ಈ ಬಗ್ಗೆ ಯಾವುದೇ ಕುರುಹು ಕಂಡು ಬಂದಿಲ್ಲ ಎನ್ನುವ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಅಂದಿನಿಂದ ಈ ಪೋಸ್ಟ್ ಭಾರೀ ವೈರಲ್ ಆಗಿದೆ. ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಲವಾರು ಬಳಕೆದಾರರು ಇದನ್ನು ಹಂಚಿಕೊಂಡಿದ್ದಾರೆ.


ತನಿಖೆಯಲ್ಲೇನಿದೆ?

ದಿ ಎಕನಾಮಿಕ್ ಟೈಮ್ಸ್ ನ ಮಾರ್ಚ್ 15 ವರದಿಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶಗಳ ಮೇಲೆ ಪ್ರಭಾವ ಬೀರಲು 2016 ಮತ್ತು 2019 ರ ನಡುವೆ ಚುನಾವಣಾ ಆಯೋಗದ ಮೇಲ್ವಿಚಾರಣೆಯಲ್ಲಿ 1.9 ಮಿಲಿಯನ್ ಇವಿಎಂಗಳು ನಾಪತ್ತೆಯಾಗಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ಶುಕ್ರವಾರ ಅರ್ಜಿಯನ್ನು ವಜಾಗೊಳಿಸಿತ್ತು. 1.9 ಮಿಲಿಯನ್ ಇವಿಎಂಗಳು ಕಾಣೆಯಾಗಿದೆ ಎಂದು ಐಎನ್‌ಸಿ ಹೇಳಿರುವುದು ಸಂಪೂರ್ಣವಾಗಿ ಆಧಾರ ರಹಿತವಾಗಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

2019ರಲ್ಲಿಯೂ ನಾಪತ್ತೆಯಾದ ಇವಿಎಂಗಳ ವರದಿಗಳು ಬಂದಿದ್ದವು. ಫ್ರಂಟ್‌ಲೈನ್ ಮತ್ತು ಟಿವಿ9 ಭಾರತ ವರ್ಷ್ ಈ ಕುರಿತು ವರದಿಗಳನ್ನು ಪ್ರಕಟಿಸಿತ್ತು. ಇದನ್ನೂಚುನಾವಣಾ ಆಯೋಗವು ಆಧಾರ ರಹಿತ ಎಂದು ಹೇಳಿ ಟ್ವಿಟ್ ಮಾಡಿದೆ.

ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿರುವ FAQ ವಿಭಾಗದಲ್ಲಿಯೂ ಈ ಸಮಸ್ಯೆಯನ್ನು ಉಲ್ಲೇಖಿಸಲಾಗಿದೆ. ವೈರಲ್ ಹಕ್ಕು ಕುರಿತು ಚುನಾವಣಾ ಆಯೋಗದ ಅಧಿಕಾರಿಗಳನ್ನು ಸಂಪರ್ಕಿಸಿರುವ ವಿಶ್ವಸ್ ನ್ಯೂಸ್ ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಷಯದ ಕುರಿತು ಸ್ಪಷ್ಟೀಕರಣವನ್ನು ನೀಡಲಾಗಿದೆ ಎಂದು ತಿಳಿಸಿರುವುದಾಗಿ ತಿಳಿದು ಬಂದಿದೆ.

Continue Reading

ದೇಶ

Lok Sabha Election: ಏ.19ರವರೆಗೆ ಲೋಕಸಭೆ ಚುನಾವಣೆ; ಮೇ 22ಕ್ಕೆ ರಿಸಲ್ಟ್?

Lok Sabha Election: ಮಾರ್ಚ್ 12ರಂದು ಲೋಕಸಭಾ ಚುನಾವಣಾ ಪ್ರಕ್ರಿಯೆ ಆರಂಭವಾಗಿ, ಏಪ್ರಿಲ್ 19ರಂದು ಮತದಾನ ನಡೆಯಲಿದೆ ಮತ್ತು ಮೇ 22ರಂದು ಫಲಿತಾಂಶ ಪ್ರಕಟವಾಗಲಿದೆ ಎಂಬ ವಾಟ್ಸಾಪ್ ಮೆಸೇಜ್ ಭಾರೀ ವೈರಲ್ ಆಗಿದೆ. ಅಸಲಿ ಸಂಗತಿ ಏನು?

VISTARANEWS.COM


on

Lok Sabha Election on April 19 and Result on May 22
Koo

ನವದೆಹಲಿ: ಲೋಕಸಭೆ ಚುನಾವಣಾ (Lok Sabha Election) ವೇಳಾ ಪಟ್ಟಿ ಕುರಿತು ಎಲ್ಲರಲ್ಲೂ ಕುತೂಹಲವಿದೆ(Election Schedule). ಯಾವಾಗ ದಿನಾಂಕ ಪ್ರಕಟವಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಈ ಮಧ್ಯೆ, ಏಪ್ರಿಲ್ 19ರಂದು ಚುನಾವಣೆ ನಡೆದು, ಮೇ 22ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ವಾಟ್ಸಾಪ್‌ ಮೆಸೇಜ್‌ವೊಂದು ಭಾರೀ ವೈರಲ್ ಆಗಿದೆ(WhatsApp Message Viral). ಈ ಕುರಿತು ಸ್ಪಷ್ಟನೆ ನೀಡಿರುವ ಕೇಂದ್ರ ಚುನಾವಣಾ ಆಯೋಗವು(Election Commission of India), ಲೋಕಸಭಾ ಚುನಾವಣಾ ವೇಳಾಪಟ್ಟಿಯನ್ನು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಲಾಗುತ್ತದೆಯೇ ಹೊರತು, ಪಠ್ಯ ಅಥವಾ ವಾಟ್ಸಾಪ್ ಮೆಸೇಜ್ ಮೂಲಕ ಅಲ್ಲ. ಹಾಗಾಗಿ ಇದೊಂದು ಫೇಕ್ ನ್ಯೂಸ್ (Fake News) ಎಂದು ಕೇಂದ್ರ ಚುನಾವಣಾ ಆಯೋಗವು ಸ್ಪಷ್ಟಪಡಿಸಿದೆ.

ಸಾರ್ವತ್ರಿಕ ಚುನಾವಣೆಯ ಸಂಪೂರ್ಣ ವೇಳಾಪಟ್ಟಿಯ ನಕಲಿ ಸಂದೇಶವೊಂದು ಹರಿದಾಡುತ್ತಿದೆ. ಮಾದರಿ ನೀತಿ ಸಂಹಿತೆ ಜಾರಿಗೆ ತರುವ ಮೂಲಕ ಮಾರ್ಚ್ 12 ರಂದು ಚುನಾವಣೆಯನ್ನು ಅಧಿಸೂಚಿಸಲಾಗುವುದು ಎಂದು ಅದರಲ್ಲಿ ತಿಳಿಸಲಾಗಿದೆ. ನಾಮಪತ್ರ ಸಲ್ಲಿಸಲು ಮಾರ್ಚ್ 28 ಕೊನೆಯ ದಿನಾಂಕ ಮತ್ತು ಏಪ್ರಿಲ್ 19 ಮತದಾನ ಮತ್ತು ಮೇ 22ರಂದು ಫಲಿತಾಂಶ ನಡೆಯಲಿದೆ ಎಂದು ನಕಲಿ ಸುದ್ದಿಯಲ್ಲಿ ತಿಳಿಸಲಾಗಿದೆ.

ಚುನಾವಣಾ ಆಯೋಗದ ಲೆಟರ್‌ಹೆಡ್‌‌ನಲ್ಲಿ ನಕಲಿ ಸಂದೇಶವು ವಾಟ್ಸಾಪ್ ಗ್ರೂಪ್‌ಗಳಲ್ಲಿ ಹರಿದಾಡಲು ಪ್ರಾರಂಭಿಸಿತು. ಸಾರ್ವತ್ರಿಕ ಚುನಾವಣೆಯನ್ನು ಒಂದೇ ಹಂತದಲ್ಲಿ ನಡೆಸುವುದು ಹೇಗೆ ಎಂಬ ಪ್ರಶ್ನೆಯನ್ನು ಹಲವರು ಎತ್ತಿದ್ದಾರೆ.

ಈ ಗೊಂದಲದ ನಡುವೆಯೇ ನಿನ್ನೆ ಚುನಾವಣಾ ಆಯೋಗ ವೈರಲ್ ಸಂದೇಶ ನಕಲಿ ಎಂದು ಸ್ಪಷ್ಟಪಡಿಸಿದೆ. ಲೋಕಸಭಾ ಚುನಾವಣೆಯ ವೇಳಾಪಟ್ಟಿಯ ಕುರಿತು ವಾಟ್ಸಾಪ್‌ ಅಪ್ಲಿಕೇಶನ್‌ನಲ್ಲಿ ನಕಲಿ ಸಂದೇಶವನ್ನು ಹಂಚಿಕೊಳ್ಳಲಾಗುತ್ತಿದೆ. ಈ ಸಂದೇಶವು ನಕಲಿಯಾಗಿದೆ. ಆಯೋಗವು ಇಲ್ಲಿಯವರೆಗೆ ಯಾವುದೇ ದಿನಾಂಕಗಳನ್ನು ಘೋಷಿಸಿಲ್ಲ ಎಂದು ಎಕ್ಸ್ ವೇದಿಕೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಪೋಸ್ಟ್ ಮಾಡಿದೆ.

ಎಲೆಕ್ಷನ್ ವೇಳಾಪಟ್ಟಿಯನ್ನು ಆಯೋಗವು ಸುದ್ದಿಗೋಷ್ಠಿಯಲ್ಲಿ ಘೋಷಣೆ ಮಾಡುತ್ತದೆ. #VerifyBeforeYouAmplify ಎಂಬ ಹ್ಯಾಷ್ ಟ್ಯಾಗ್ ಬಳಸಿರುವ ಆಯೋಗವು, ವಾಟ್ಸಾಪ್ ಸಂದೇಶಗಳನ್ನು ಫಾರ್ವರ್ಡ್ ಮಾಡುವಾಗ ದೃಢೀಕರಿಸಬೇಕು ಎಂದು ಹೇಳಿದೆ.

ದೆಹಲಿಯ ಮುಖ್ಯ ಚುನಾವಣಾ ಅಧಿಕಾರಿಯ ಕಚೇರಿಯಿಂದ ಪ್ರಸಾರವಾದ ಆಂತರಿಕ ಟಿಪ್ಪಣಿ ಗೊಂದಲಕ್ಕೆ ಕಾರಣವಾದ ಒಂದು ತಿಂಗಳ ಬಳಿಕ ಈ ನಕಲಿ ಸಂದೇಶವೂ ವೈರಲ್ ಆಗಿದೆ. ಈ ಆಂತರಿಕ ಟಿಪ್ಪಣಿಯಲ್ಲಿ ಏಪ್ರಿಲ್ 16 ಅನ್ನು ತಾತ್ಕಾಲಿಕ “ಚುನಾವಣೆ ದಿನಾಂಕ” ಎಂದು ಉಲ್ಲೇಖಿಸಲಾಗಿದ್ದು ಮತ್ತು ಅಧಿಕಾರಿಗಳಿಗೆ ಸಿದ್ಧತೆಗಳನ್ನು ವೇಗಗೊಳಿಸಲು ಸಹಾಯ ಮಾಡುತ್ತದೆ ಎಂದು ಹೇಳಿತ್ತು.

ಈ ಸುದ್ದಿಯನ್ನೂ ಓದಿ: Lok Sabha Election: ಈ ದಿನಾಂಕದಂದು ಲೋಕಸಭೆ ಚುನಾವಣಾ ವೇಳಾಪಟ್ಟಿ ಪ್ರಕಟ

Continue Reading

ದೇಶ

Fact Check: ಅಮುಲ್‌ನಿಂದ ʼಶರಮ್‌ʼ ಹೆಸರಿನ ಚೀಸ್ ಬಿಡುಗಡೆ?

Fact Check: ಇತ್ತೀಚೆಗೆ ಅಮುಲ್‌ ಶರಮ್‌ ಹೆಸರಿನ ಚೀಸ್‌ ಬಿಡುಗಡೆ ಮಾಡಿದೆ ಎನ್ನುವ ಸುದ್ದಿ ವೈರಲ್‌ ಆಗಿತ್ತು. ಆದರೆ ಇದೀಗ ಕಂಪೆನಿ ಸ್ಪಷ್ಟನೆ ನೀಡಿ, ಇದು ನಕಲಿ ಸುದ್ದಿ ಎಂದು ಎಚ್ಚರಿಸಿದೆ.

VISTARANEWS.COM


on

amul
Koo

ನವದೆಹಲಿ: ಇತ್ತೀಚೆಗೆ ಶರಮ್ (Sharam) ಹೆಸರಿನ ಅಮುಲ್ ಚೀಸ್ (Amul cheese) ಪ್ಯಾಕೆಟ್‌ನ ಪೋಸ್ಟ್ ಸೋಷಿಯಲ್‌ ಮೀಡಿಯಾಗಳಲ್ಲಿ ವೈರಲ್ ಆಗಿತ್ತು. ಇದನ್ನು ʼಶರಮ್ ನಾಮ್ ಕಿ ಚೀಜ್ ಭಿ ಹೋತಿ ಹೈʼ (Sharam naam ki cheez bhi hoti hai) ಎಂಬ ಹಿಂದಿ ನುಡಿಗಟ್ಟನ್ನು ಆಧರಿಸಿ ಪೋಸ್ಟ್‌ ಮಾಡಲಾಗಿತ್ತು. ನಾಚಿಕೆಯಿಲ್ಲದ ಯಾರಾದರೂ ವರ್ತಿಸುವಾಗ ಸಾಮಾನ್ಯವಾಗಿ ಈ ನುಡಿಗಟ್ಟನ್ನು ಬಳಸಲಾಗುತ್ತದೆ. ವೈರಲ್ ಪೋಸ್ಟ್‌ನಲ್ಲಿ ಹಿಂದಿಯ ʼಚೀಜ್ʼ ಅನ್ನು ಇಂಗ್ಲಿಷ್‌ನ ʼಚೀಸ್‌ʼ ಆಗಿ ಅನುವಾದಿಸಲಾಗಿದೆ. ಈ ವೈರಲ್‌ ಪೋಸ್ಟ್‌ನಲ್ಲಿ ಚೀಸ್ ತುಂಡಿನ ಚಿತ್ರವನ್ನು ಪ್ಯಾಕೆಟ್ ಮೇಲೆ ಮುದ್ರಿಸಿರುವುದು ಕಂಡು ಬಂದಿದೆ. ಈ ಕುರಿತು ಸ್ಪಷ್ಟನೆ ನೀಡಿದ ಅಮುಲ್‌, ʼʼಕಂಪನಿ ಇಂತಹ ಯಾವುದೇ ಉತ್ಪನ್ನ ಹೊರ ತಂದಿಲ್ಲʼʼ ಎಂದು (Fact Check) ಸ್ಪಷ್ಟಪಡಿಸಿದೆ.

ಅಮುಲ್‌ ಹೇಳಿದ್ದೇನು?

ಅಮುಲ್ ಇದಕ್ಕೆ ಪ್ರತಿಕ್ರಿಯಿಸಿ, ಇದು ನಮ್ಮ ಉತ್ಪನ್ನವಲ್ಲ ಮತ್ತು ಕೃತಕ ಬುದ್ಧಿಮತ್ತೆ (Artificial intelligence) ತಂತ್ರಜ್ಞಾನವನ್ನು ಬಳಸಿಕೊಂಡು ಚಿತ್ರವನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿದೆ. ಅಲ್ಲದೆ ಬ್ರ್ಯಾಂಡ್‌ನ ಅನುಮತಿಯಿಲ್ಲದೆ ಪೋಸ್ಟ್‌ ರಚಿಸಿ ಪೋಸ್ಟ್ ಹರಿಯಬಿಡಲಾಗಿದೆ. ಇಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅಮುಲ್‌ ಸ್ಪಷ್ಟಪಡಿಸಿದೆ.

“ಹೊಸ ರೀತಿಯ ಅಮುಲ್ ಚೀಸ್‌ಗೆ ಸಂಬಂಧಿಸಿದಂತೆ ವಾಟ್ಸ್‌ಆ್ಯಪ್‌ ಮತ್ತು ಸೋಷಿಯಲ್‌ ಮೀಡಿಯಾಗಳಲ್ಲಿ ನಕಲಿ ಸಂದೇಶವನ್ನು ಫಾರ್ವರ್ಡ್ ಮಾಡಲಾಗುತ್ತಿದೆ. ಪೋಸ್ಟ್‌ನ ಸೃಷ್ಟಿಕರ್ತರು ನಮ್ಮಿಂದ ಯಾವುದೇ ಅನುಮತಿಯಿಲ್ಲದೆ ಇದನ್ನು ಪೋಸ್ಟ್ ಮಾಡಿದ್ದಾರೆ. ಈ ಪ್ಯಾಕ್ ಅನ್ನು ಎಐ ತಂತ್ರಜ್ಞಾನ ಬಳಸಿ ಅಭಿವೃದ್ಧಿಪಡಿಸಲಾಗಿದೆ. ಈ ಮೂಲಕ ಅಮುಲ್ ಬ್ರ್ಯಾಂಡ್‌ ಅನ್ನು ಕಳಪೆಯಂತೆ ಚಿತ್ರಿಸಲಾಗಿದೆʼʼ ಎಂದು ಕಂಪನಿ ಹೇಳಿದೆ.

“ಈ ಪೋಸ್ಟ್‌ನಲ್ಲಿ ತೋರಿಸಿರುವ ಪ್ಯಾಕ್ ಅಮುಲ್ ಚೀಸ್ ಅಲ್ಲ ಎನ್ನುವುದನ್ನು ಸ್ಪಷ್ಟಪಡಿಸುತ್ತೇವೆ. ಈ ಪೋಸ್ಟ್ ಅನ್ನು ತಪ್ಪು ಮಾಹಿತಿಯನ್ನು ಹರಡಲು ಮತ್ತು ಗ್ರಾಹಕರಲ್ಲಿ ಅನಗತ್ಯ ಭಯ ಹಾಗೂ ಗೊಂದಲವನ್ನು ಮೂಡಿಸಲು ಬಳಸಲಾಗಿದೆ. ದಯವಿಟ್ಟು ನಮ್ಮ ಈ ಸಂದೇಶವನ್ನು ನಿಮ್ಮ ಕುಟುಂಬ ಮತ್ತು ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಅಮುಲ್ ಎಂದಿಗೂ ಅತ್ಯುತ್ತಮ ಉತ್ಪನ್ನಗಳನ್ನು ಒದಗಿಸುವ ಭರವಸೆ ನೀಡುತ್ತದೆʼʼ ಎಂದು ಕಂಪನಿ ಹೇಳಿದೆ.

ಹಿಂದೆಯೂ ಸುಳ್ಳು ಸುದ್ದಿ ಹರಡಿತ್ತು

ಅಮುಲ್‌ ಉತ್ಪನ್ನಗಳ ವಿರುದ್ಧ ಹಿಂದೆಯೂ ಪಿತೂರಿ ನಡೆದಿತ್ತು. ಅಮುಲ್ ಬೆಣ್ಣೆಯನ್ನು ಚೀನಾದಲ್ಲಿ ಪ್ಯಾಕ್ ಮಾಡಲಾಗುತ್ತಿದೆ ಎಂದು ಕಳೆದ ವರ್ಷ ಫೆಬ್ರವರಿಯಲ್ಲಿ ನಕಲಿ ಸಂದೇಶ ಪ್ರಸಾರವಾಗಿತ್ತು. ಕೂಡಲೇ ಎಚ್ಚೆತ್ತ ಕಂಪನಿಯು ಇದು ನಕಲಿ ಸಂದೇಶ ಎಂದು ಸ್ಪಷ್ಟನೆ ನೀಡಿತ್ತು. ಸುಳ್ಳು ಸುದ್ದಿ ಹಬ್ಬಿಸುವವರಿಗೆ ನೋಟಿಸ್ ರವಾನಿಸಿ, ಸೋಷಿಯಲ್‌ ಮೀಡಿಯಾದಲ್ಲಿ ಈ ಬಗ್ಗೆ ಎಚ್ಚರಿಕೆಯನ್ನೂ ನೀಡಿತ್ತು.

ನಕಲಿ ಉತ್ಪನ್ನ ಮತ್ತು ಕಂಪನಿಯ ನಿಜವಾದ ಉತ್ಪನ್ನಗಳನ್ನು ಹೋಲಿಕೆ ಮಾಡುವ ವಿಡಿಯೊವನ್ನು ಪೋಸ್ಟ್‌ ಮಾಡಿ, ತಪ್ಪು ಮಾಹಿತಿಯನ್ನು ಸೃಷ್ಟಿಸಿ ಗ್ರಾಹಕರಲ್ಲಿ ಭಯ ಮತ್ತು ಗೊಂದಲ ಮೂಡಲು ಬಳಸಲಾಗಿದೆ ಎಂದು ಹೇಳಿತ್ತು. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಸೂಚನೆಯ ಪ್ರಕಾರ, ಎಲ್ಲ ಹಾಲಿನ ಉತ್ಪನ್ನಗಳು ಪ್ಯಾಕ್‌ನ ಮುಂಭಾಗದಲ್ಲಿ ವೆಜ್ ಲೋಗೋವನ್ನು ತೋರಿಸುವುದು ಕಡ್ಡಾಯ ಅದನ್ನೂ ಗಮನಿಸುವಂತೆ ಹೇಳಿತ್ತು.

ಇದನ್ನೂ ಓದಿ: Fact Check: ಸ್ಟಾರ್ ಗುರುತಿರುವ 500 ರೂಪಾಯಿ ನೋಟು ನಕಲಿಯೇ?

Continue Reading
Advertisement
Samsung Big TV Days Sale Exciting offer on big TVs
ದೇಶ2 mins ago

Samsung: ಸ್ಯಾಮ್‌ಸಂಗ್‌ನ ʼಬಿಗ್‌ ಟಿವಿ ಡೇಸ್‌ʼ ಸೇಲ್‌; ದೊಡ್ಡ ಟಿವಿಗಳ ಮೇಲೆ ಅತ್ಯಾಕರ್ಷಕ ಆಫರ್‌!

Davangere Lok Sabha Constituency
ದಾವಣಗೆರೆ5 mins ago

Davangere Lok Sabha Constituency: ದಾವಣಗೆರೆಯಲ್ಲಿ ನಾರಿಶಕ್ತಿ ಕದನ, ಯಾರು ಗೆದ್ದರೂ ಇತಿಹಾಸ

Rahul Dravid
ಕ್ರಿಕೆಟ್6 mins ago

Rahul Dravid: ರೋಹಿತ್​, ಕೊಹ್ಲಿ, ಪಂತ್​ ಸೇರಿ ಎಲ್ಲ ಆಟಗಾರರಿಗೆ ಖಡಕ್​ ಎಚ್ಚರಿಕೆ ನೀಡಿದ ಕೋಚ್​ ದ್ರಾವಿಡ್​

Kannada New Movie Mandela nari shrinivas
ಸ್ಯಾಂಡಲ್ ವುಡ್6 mins ago

Kannada New Movie: `ಮಂಡೇಲಾ’ ಚಿತ್ರಕ್ಕೆ ನಾರಿ ಶ್ರೀನಿವಾಸ್ ನಾಯಕ!

Election Result 2024
ಪ್ರಮುಖ ಸುದ್ದಿ12 mins ago

Election Result 2024: ಇಂಡಿ ಒಕ್ಕೂಟ ಸಭೆ ಸೇರಿದ್ದ ಸ್ಥಳದಲ್ಲೇ ವಾಸ್ತುದೋಷ, ಅಂದು ಅಮವಾಸ್ಯೆ ಬೇರೆ; ಹಾಗಾಗಿ…

Fact Check
Fact Check24 mins ago

Fact Check: ಸೋಲುವ ಭೀತಿಯಲ್ಲಿ ಬ್ಯಾಂಕಾಕ್‌ಗೆ ಹಾರಲು ಸಿದ್ಧರಾದ್ರಾ ರಾಹುಲ್‌ ಗಾಂಧಿ? ವೈರಲ್‌ ಆಗಿರುವ ಬೋರ್ಡಿಂಗ್‌ ಪಾಸ್‌ನ ಅಸಲಿಯತ್ತೇನು?

Benefits Of Walk After Meal
ಆರೋಗ್ಯ28 mins ago

Benefits Of Walk After Meal: ಊಟದ ಬಳಿಕ ಲಘುವಾದ ವಾಕಿಂಗ್‌ ಮಾಡಿ, ಆರೋಗ್ಯದಲ್ಲಿನ ಬದಲಾವಣೆ ನೋಡಿ!

Dead Body Found Bodies found floating in Cauvery river
ಕ್ರೈಂ33 mins ago

Dead Body Found : ಕಾವೇರಿ ನದಿಯಲ್ಲಿ ತೇಲಿ ಬಂದ ಶವಗಳು; ನೋಡಲು ಮುಗಿಬಿದ್ದ ಜನರು

Ram Charan Instagram story of daughter Klin Kaara receiving bujji
ಟಾಲಿವುಡ್33 mins ago

Ram Charan: ರಾಮ್‌ಚರಣ್‌ ಮಗಳಿಗೆ ಸಿಕ್ತು ಪ್ರಭಾಸ್‌ರಿಂದ ಪುಟಾಣಿ ಬುಜ್ಜಿ!

Kedar Jadhav Retirement
ಕ್ರಿಕೆಟ್42 mins ago

Kedar Jadhav Retirement: ಧೋನಿ ಶೈಲಿಯಲ್ಲೇ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಕೇದಾರ್​ ಜಾಧವ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 hour ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಟ್ರೆಂಡಿಂಗ್‌