Karnataka Budget Session 2024:‌ ಶೇ. 16 ಮಾತ್ರ ಹೂಡಿಕೆ ಎಂದ ಬಿಜೆಪಿ! ಉ.ಕ. ಭಾಗದಲ್ಲಿ ಸಾವಿರಾರು ಉದ್ಯೋಗ: ಎಂಬಿಪಿ - Vistara News

ವಿಧಾನಮಂಡಲ ಅಧಿವೇಶನ

Karnataka Budget Session 2024:‌ ಶೇ. 16 ಮಾತ್ರ ಹೂಡಿಕೆ ಎಂದ ಬಿಜೆಪಿ! ಉ.ಕ. ಭಾಗದಲ್ಲಿ ಸಾವಿರಾರು ಉದ್ಯೋಗ: ಎಂಬಿಪಿ

Karnataka Budget Session 2024:‌ ಒಟ್ಟಾರೆಯಾಗಿ 12 ಬಂಡವಾಳ ಹೂಡಿಕೆ ಒಪ್ಪಂದ ಆಗಿದೆ. ಬೃಹತ್ ಕೈಗಾರಿಕೆಯಲ್ಲಿ ತನ್ನದೇ ಆದ ನಿಯಮ‌ ಇದೆ. ಒಪ್ಪಂದದ ಪ್ರಕಾರ 74 ಸಾವಿರ ಕೋಟಿ ರೂಪಾಯಿ ಹೂಡಿಕೆ ಆಗುತ್ತಿದ್ದು, ಇದರಿಂದ 70 ಸಾವಿರ ಉದ್ಯೋಗ ಸೃಷ್ಟಿ ಆಗಲಿದೆ. ಬಿಯಾಂಡ್ ಬೆಂಗಳೂರು (ಬೆಂಗಳೂರು ಆಚೆಗೆ) 217 ಯೋಜನೆ ಇದೆ ಎಂದು ಸಚಿವ ಎಂ.ಬಿ. ಪಾಟೀಲ್‌ ಉತ್ತರ ನೀಡಿದ್ದಾರೆ.

VISTARANEWS.COM


on

Karnataka Budget Session 2024 Only 16 investments says BJP and Thousands of jobs in UP says MB Patil
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಧಾನ ಪರಿಷತ್: ವಿಧಾನ ಮಂಡಲ ಅಧಿವೇಶನದಲ್ಲಿ (Karnataka Budget Session 2024) ಚರ್ಚೆಗಳು ಕಾವೇರುತ್ತಿವೆ. ರಾಜ್ಯದಲ್ಲಿ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿ ಬಗ್ಗೆ ಗಹನವಾದ ಚರ್ಚೆಗಳು ನಡೆದಿವೆ. ಈ ವೇಳೆ ವಿಧಾನ ಪರಿಷತ್‌ ಸದಸ್ಯ ಕೇಶವ ಪ್ರಸಾದ್ ಮಾತನಾಡಿ, ಕಳೆದ ಒಂದು ವರ್ಷದಿಂದ ಆಗಿರುವ ಹೂಡಿಕೆಗಳ ಒಪ್ಪಂದ ಎಷ್ಟು? ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಹೂಡಿಕೆ ಪರ್ಸೆಂಟೇಜ್ ಕೇವಲ ಶೇ. 16.66 ಮಾತ್ರ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವ ಎಂ.ಬಿ. ಪಾಟೀಲ್‌, ಒಪ್ಪಂದದ ಪ್ರಕಾರ 74 ಸಾವಿರ ಕೋಟಿ ಹೂಡಿಕೆ 70 ಸಾವಿರ ಉದ್ಯೋಗ ಸೃಷ್ಟಿ ಆಗಲಿದೆ ಎಂದು ಉತ್ತರಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಕೇಶವ ಪ್ರಸಾದ್, ನಾನು ಕೇಳಿದ ಪ್ರಶ್ನೆಗೆ ರಾಜ್ಯದಲ್ಲಿ ಹೂಡಿಕೆ ಪರ್ಸೆಂಟೇಜ್ ಕೇವಲ ಶೇ. 16.66 ಮಾತ್ರ ಎಂದು ಉತ್ತರ ಬಂದಿದೆ. ಅಲ್ಲದೆ, ಇದರ ಕಾರ್ಯಾರಂಭವನ್ನು ಮುಂದೆ ಆರಂಭ ಮಾಡಲಾಗುವುದು ಎಂದು ಹೇಳುವ ಮೂಲಕ ಭವಿಷ್ಯ ರೂಪದಲ್ಲಿ ಎಂಬ ಉತ್ತರವನ್ನು ಕೊಡಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಇದನ್ನೂ ಓದಿ: Ranveer Singh: ನೀಲಿ ಚಿತ್ರತಾರೆ ಜತೆಗಿನ ರಣವೀರ್ ಸಿಂಗ್ ಜಾಹೀರಾತಿಗೆ ವಿರೋಧ ಏಕೆ? ವಿಡಿಯೊ ನೋಡಿ!

ಇದಲ್ಲದೆ, ಬೆಂಗಳೂರು ಹೊರತುಪಡಿಸಿ ಬೇರೆ ಕಡೆ ಎಲ್ಲಿ ಹೂಡಿಕೆ ಆಗಿದೆ ಎಂಬ ನನ್ನ ಪ್ರಶ್ನೆಗೆ ಸ್ಟ್ರಾಟರ್ಜಿಕ್ ಸಮಿತಿ ಮಾಡಲಾಗಿದೆ ಅಂತ ಮಾತ್ರ ಹೇಳಿದ್ದಾರೆ. ನಾನು ಪ್ರಸ್ತುತ ಎಷ್ಟು ಉದ್ಯೋಗ ಸೃಷ್ಟಿ ಆಗಿದೆ ಅಂತ ಕೇಳಿದ್ದೇನೆ ಎಂದು ವಿಧಾನ ಪರಿಷತ್‌ ಸದಸ್ಯ ಕೇಶವ ಪ್ರಸಾದ್ ಹೇಳಿದರು.

ಬೆಂಗಳೂರು ಆಚೆಗೆ 217 ಯೋಜನೆ: ಸಚಿವ ಎಂಬಿ ಪಾಟೀಲ್

ಇದಕ್ಕೆ ಸಚಿವ ಎಂ.ಬಿ ಪಾಟೀಲ್ ಉತ್ತರ ನೀಡಿ, ಒಟ್ಟಾರೆಯಾಗಿ 12 ಬಂಡವಾಳ ಹೂಡಿಕೆ ಒಪ್ಪಂದ ಆಗಿದೆ. ಬೃಹತ್ ಕೈಗಾರಿಕೆಯಲ್ಲಿ ತನ್ನದೇ ಆದ ನಿಯಮ‌ ಇದೆ. ಒಪ್ಪಂದದ ಪ್ರಕಾರ 74 ಸಾವಿರ ಕೋಟಿ ರೂಪಾಯಿ ಹೂಡಿಕೆ ಆಗುತ್ತಿದ್ದು, ಇದರಿಂದ 70 ಸಾವಿರ ಉದ್ಯೋಗ ಸೃಷ್ಟಿ ಆಗಲಿದೆ. ಬಿಯಾಂಡ್ ಬೆಂಗಳೂರು (ಬೆಂಗಳೂರು ಆಚೆಗೆ) 217 ಯೋಜನೆ ಇದೆ. ಈ ಯೋಜನೆಗಳು ಉತ್ತರ ಕರ್ನಾಟಕ ಹಾಗೂ ಹೈದ್ರಾಬಾದ್ ಕರ್ನಾಟಕ ಭಾಗಕ್ಕೆ ಬರಲಿದೆ ಎಂದು ಸಚಿವ ಎಂ.ಬಿ. ಪಾಟೀಲ್‌ ಹೇಳಿದರು.

ಇದನ್ನೂ ಓದಿ: Karnataka Budget Session 2024: ನೀರು ಕೊಡಿ ಎಂದರೆ ನೀರಿನ ದರ ಏರಿಸಿಲ್ಲ ಎಂದ ಡಿಕೆಶಿ! ಕೊನೆಗೆ ಸಮಸ್ಯೆ ಬಗೆಹರಿಯಿತಾ?

ಅಲ್ಲದೆ, ಇನ್ವೆಸ್ಟ್ ಕರ್ನಾಟಕ ಮರು ಯೋಜನೆ ಮಾಡಲಾಗಿದೆ. ಅಧ್ಯಕ್ಷನಾಗಿ ನಾನಿದ್ದೇನೆ. ಇತರೆ ಪ್ರಮುಖ ಸಂಸ್ಥೆ ಮುಖ್ಯಸ್ಥರು ಉಪಾಧ್ಯಕ್ಷರು ಹಾಗೂ ಸದಸ್ಯರಾಗಿರುತ್ತಾರೆ. ಸ್ಟ್ರಾಟರ್ಜಿಕ್ ಇನ್ವೆಸ್ಟ್ ಕಮಿಟಿ ಅಂದರೆ ಏರೋಸ್ಪೇಸ್ ಎಲ್ಲವೂ ಬರಲಿದೆ. ಇದರಿಂದಾಗಿ ಸಾವಿರಾರು ಉದ್ಯೋಗ ಸೃಷ್ಟಿ ಆಗಲಿದೆ ಎಂದು ಉತ್ತರ ನೀಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿಧಾನಮಂಡಲ ಅಧಿವೇಶನ

Budget Session : ಬಿಜೆಪಿಯ ಜೈ ಶ್ರೀರಾಮ್‌ VS ಸಿದ್ದರಾಮಯ್ಯರ ಜೈ ಸೀತಾರಾಮ್‌!

Budget Session : ರಾಜ್ಯ ವಿಧಾನಸಭೆಯಲ್ಲಿ ಗುರುವಾರ ಬಿಜೆಪಿ ಮತ್ತು ಸಿಎಂ ಸಿದ್ದರಾಮಯ್ಯ ನಡುವೆ ವಾರ್‌ ನಡೆಯಿತು. ಅದು ದೇಶಪ್ರೇಮ, ದೇಶದ್ರೋಹ ಹಾಗೂ ಜೈ ಶ್ರೀರಾಮ್‌, ಜೈ ಸೀತಾರಾಮ್‌ ಫೈಟ್‌

VISTARANEWS.COM


on

Budget session Siddaramaiah
Koo

ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ (Budget Session) ಗುರುವಾರ ಬಿಜೆಪಿಯ ಜೈ ಶ್ರೀರಾಮ್‌ (Jai Shri Ram Slogan) ಘೋಷಣೆಗೆ ಸಿಎಂ ಸಿದ್ದರಾಮಯ್ಯ (CM Siddaramiah) ಅವರು ಜೈ ಸೀತಾರಾಮ್‌ (Jai Seetharam) ಘೋಷಣೆಯ ಮೂಲಕ ಸಡ್ಡು ಹೊಡೆದರು!

ಬುಧವಾರ ಬಜೆಟ್‌ ಅಧಿವೇಶನದಲ್ಲಿ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ವಿಧಾನಸೌಧದ ಎದುರು ನಡೆದ ʻಪಾಕಿಸ್ತಾನ್‌ ಜಿಂದಾಬಾದ್‌ʼ (Pakistan Zindabad) ವಿವಾದದ ಬಗ್ಗೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಧ್ವನಿ ಎತ್ತಿದರು. ದೇಶದ್ರೋಹಿಗಳ ವಿರುದ್ಧ ಕ್ರಮ ಕೈಗೊಳ್ಳದೆ ‌ ಸರ್ಕಾರ ವಿಳಂಬ ಮಾಡುತ್ತಿದೆ. ಕೆಲವರನ್ನು ಕರೆಸಿ ವಿಚಾರಣೆಯ ನೆಪದಲ್ಲಿ ಅವರಿಗೆ ಬಿರಿಯಾನಿ ತಿನ್ನಿಸುತ್ತಿದೆ ಎಂದು ಆರೋಪಿಸಿದರು. ಆಗ ಸಿದ್ದರಾಮಯ್ಯ ಅವರು ಸಿಟ್ಟಿಗೆದ್ದು ದೇಶಪ್ರೇಮದ ವಿಚಾರದಲ್ಲಿ ನಾವು ನಿಮ್ಮಿಂದ ಕಲಿಯಬೇಕಾಗಿಲ್ಲ. ಆರೆಸ್ಸೆಸ್‌ನವರು ಬ್ರಿಟಿಷರ ಜತೆ ಕೈಜೋಡಿಸಿದವರು. ಆರೆಸ್ಸೆಸ್‌ ಸ್ಥಾಪಕರಾದ ಕೇಶವ ಬಲಿರಾಮ ಹೆಡಗೇವಾರ್‌ ಅವರಾಗಲೀ, ನಂತರ ಸರಸಂಘಚಾಲಕರಾಗಿದ್ದ ಗೋಳ್ವಳ್ಕರ್‌ ಅವರಾಗಲೀ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡವರಲ್ಲ ಎಂದು ಹೇಳಿದರು.

ಆಗ ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಬಾವಿಯ ಸುತ್ತ ಭಜನೆ ಮಾಡುವ ರೀತಿಯಲ್ಲಿ ಓಡಾಡಿದರು. ಕಾಂಗ್ರೆಸ್‌ ಸತ್ತೋಯ್ತು, ಚಟ್ಟ ಕಟ್ಟಿ ಎಂದೆಲ್ಲ ಭಜನೆ ಮಾಡುತ್ತಾ ಸಾಗಿದರು. ಜತೆಗೆ ಜೈ ಶ್ರೀರಾಮ್‌ ಘೋಷಣೆ ಮೊಳಗಿಸಿದರು. ಆಗ ಸಿದ್ದರಾಮಯ್ಯ ಅವರು ಜೈಶ್ರೀ ರಾಮ್‌ ಘೋಷಣೆಗೆ ಪ್ರತಿಯಾಗಿ ಜೈ ಸೀತಾರಾಮ್‌ ಘೋಷಣೆ ಕೂಗಿದರು. ಬಿಜೆಪಿಯವರು ರಾಮಾಯಣವನ್ನೂ ಓದಿಲ್ಲ, ಮಹಾಭಾರತವನ್ನೂ ಓದಿಲ್ಲ ಎಂದರು.

ನಾವೂ ರಾಮನ ಭಕ್ತರೇ ಎಂದ ಸಿದ್ದರಾಮಯ್ಯ

ಅವರು ಮಾತೆತ್ತಿದರೆ ಜೈಶ್ರೀರಾಮ್‌ ಅನ್ನುತ್ತಾರೆ. ನಾವೇನು ರಾಮನ ಭಕ್ತರಲ್ಲವೆ? ನಮ್ಮ ಊರಿನಲ್ಲಿ ಎರಡು ರಾಮ ಮಂದಿರ ಕಟ್ಟಿಸಿದ್ದೇನೆ. ನಾನು ರಾಮನ ಭಕ್ತನಲ್ಲವೇ? ಎಂದು ಸಿದ್ದರಾಮಯ್ಯ ಕೇಳಿದರು.

ಇವರು ರಾಮ- ಸೀತೆಯರನ್ನು ಬೇರೆ ಮಾಡಿದ್ದಾರೆ. ಅವರು ಜೈ ಶ್ರೀ ರಾಮ್‌ ಎನ್ನುತ್ತಾರೆ. ಅದಕ್ಕಾಗಿ ನಾವು ಜೈ ಸೀತಾರಾಮ್‌ ಎಂದು ಹೇಳುತ್ತೇವೆ. ಮಹಾತ್ಮಾ ಗಾಂಧೀಜಿ ಹೇಳಿದ ಸೀತಾರಾಮನಲ್ಲಿ ನಾವು ನಂಬಿಕೆ ಇಟ್ಟಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

ನಾವು ರಾಷ್ಟ್ರಭಕ್ತರು. ಈ ದೇಶದ ಜನರನ್ನು ಪ್ರೀತಿಸುವವರು. ಎಲ್ಲ ಧರ್ಮದ ಜನರನ್ನು ಪ್ರೀತಿಸುವವರು ಕಾಂಗ್ರೆಸ್‌ ಪಕ್ಷದವರು. ಇವರ ತರ ಬುರ್ಖಾ ಹಾಕಿದವರು, ಟೋಪಿ ಹಾಕಿದವರು ಬರಬೇಕಾಗಿಲ್ಲ ಎನ್ನುವುದಿಲ್ಲ ಎಂದು ಸಿದ್ದರಾಮಯ್ಯ ಅವರು ಬಿಜೆಪಿಯನ್ನು ಕೆಣಕಿದರು.

ಇದನ್ನು ಓದಿ : Budget Session : ನಮ್ಮ ಗ್ಯಾರಂಟಿ ಕದ್ದು ಮೋದಿ ಗ್ಯಾರಂಟಿ ಅಂತಿದಾರೆ; ಸಿದ್ದರಾಮಯ್ಯ ಆರೋಪ

ಬೆಲೆ ಏರಿಕೆ, ಸಂಕಷ್ಟಕ್ಕೆ ಗ್ಯಾರಂಟಿ ಉತ್ತರ

ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ ಎಂದವರು ಪೆಟ್ರೋಲ್‌ ಡೀಸೆಲ್‌ ಬೆಲೆ, ಗ್ಯಾಸ್‌ ಬೆಲೆ, ಅಗತ್ಯವಸ್ತುಗಳ ಬೆಲೆ ಏರಿಸಿದರು. ಬಡವರಿಗೆ ನಿರುದ್ಯೋಗ, ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅವರಿಗೆ ನಾವು ಗ್ಯಾರಂಟಿ ಯೋಜನೆಗಳ ಮೂಲಕ ನಾಲ್ಕರಿಂದ ಐದು ಸಾವಿರ ರೂ. ಕೊಡ್ತಾ ಇದ್ದೀವಿ. 1.2 ಕೋಟಿ ರೂ. ಕುಟುಂಬಗಳು ಅಂದರೆ ಸುಮಾರು 4.5 ಕೋಟಿ ಜನರಿಗೆ ಕೊಡ್ತಾ ಇದ್ದೀವಿ. ಈಗ ಅವರು ನಮ್ಮನ್ನು ಕಾಪಿ ಮಾಡುತ್ತಿದ್ದಾರೆ. ಈಗ ಮೋದಿ ಗ್ಯಾರಂಟಿ ಎಂದು ಹೇಳುತ್ತಾರೆ ಎಂದು ಹೇಳಿದರು.

ಬರ ಪರಿಹಾರಕ್ಕೆ ಪ್ರಸ್ತಾವನೆ ಅಕ್ಟೋಬರ್‌ ನಲ್ಲಿಯೇ ಕಳಿಸಿದ್ದೆವು. ನೇರವಾಗಿ ಪ್ರಧಾನಮಂತ್ರಿಯವರು ಹಾಗೂ ಅಮಿತ್‌ ಷಾ ಅವರನ್ನು ಭೇಟಿ ಮಾಡಿದೆ. 240 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿವೆ ಎಂದು ಪರಿಹಾರ ನೀಡುವಂತೆ ಮನವಿ ಮಾಡಿದೆ. ಡಿಸೆಂಬರ್‌ 23ರಂದು ಸಭೆ ಕರೆಯುವುದಾಗಿ ಕೇಂದ್ರ ಸಚಿವರು ಹೇಳಿದರೂ ಈ ವರೆಗೆ ಸಭೆ ನಡೆಸಿಲ್ಲ.. ನಮ್ಮ ಸಂಸದರು ಈ ಬಗ್ಗೆ ಮೌನ ವಹಿಸಿದ್ದಾರೆ. ಕರ್ನಾಟಕದ ಜನ ಇವರನ್ನು ಮುಂಬರುವ ಚುನಾವಣೆಯಲ್ಲಿ ತಿರಸ್ಕರಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಕೇಂದ್ರ ಸರ್ಕಾರದಿಂದ ಹಣ ಬರುತ್ತದೆ ಎಂದು ಪದೇಪದೆ ಹೇಳುತ್ತಾರೆ. ಈ ಹಣ ಯಾರಿಂದ ಬರುತ್ತದೆ? ನಮ್ಮ ತೆರಿಗೆಯಿಂದ. ಆದ್ದರಿಂದಲೇ ನಾವು ಹೇಳುವುದು ನಮ್ಮ ತೆರಿಗೆ ನಮ್ಮ ಹಕ್ಕು. ಸೆಸ್‌, ಸರ್ಚಾರ್ಜ್‌ ನಲ್ಲಿ ನಮಗೆ ಪಾಲು ಕೊಡುವುದಿಲ್ಲ. ಸೆಸ್‌, ಸರ್ಚಾರ್ಜ್‌ ಮೂಲ 5,52,000 ಕೋಟಿ ರೂ. ಸಂಗ್ರಹವಾಗಿದೆ. ಸೆಸ್‌ ಸರ್ಚಾರ್ಜ್‌ 1958 ರಿಂದ ವಿಧಿಸಲಾಗುತ್ತಿದೆ ಎಂದು ಬೊಮ್ಮಾಯಿ ಅವರು ಹೇಳಿದ್ದಾರೆ. ಆದರೆ 1999 ರ ವರೆಗೆ ಸೆಸ್‌ ಸರ್ಚಾರ್ಜ್‌ ನಲ್ಲಿ ರಾಜ್ಯಕ್ಕೆ ಪಾಲು ದೊರೆಯುತ್ತಿದ್ದು. ಸಂವಿಧಾನ ತಿದ್ದುಪಡಿ ಮಾಡಿ ಇದನ್ನು ಸ್ಥಗಿತಗೊಳಿಸಲಾಯಿತು. ಕನಿಷ್ಠ ತೆರಿಗೆಯ 50% ಆದರೂ ನಮಗೆ ಕೊಡಬೇಕು. 4.71% ರಿಂದ 3.64% ಗೆ ಕಡಿಮೆಯಾಗಿದೆ.. ಇದರ ಅರಿವಾಗಿಯೇ 15ನೇ ಹಣಕಾಸು ಆಯೋಗ ವಿಶೇಷ ಅನುದಾನಕ್ಕೆ ಶಿಫಾರಸು ಮಾಡಿದ್ದು ಎಂದು ವಿವರಿಸಿದರು.

ಎರಡು ವರ್ಷದಲ್ಲಿ ಉಳಿತಾಯ ಬಜೆಟ್: ಸಿಎಂ ಭರವಸೆ

ರಾಜ್ಯ ಸರ್ಕಾರ ಒಂದೇ ಒಂದು ಬಾರಿ 2020-21ರಲ್ಲಿ ಶೇ. 3ರ ಮಿತಿ ದಾಟಿದೆ. ಇನ್ನು ಎರಡು ವರ್ಷದಲ್ಲಿ ಆಯವ್ಯಯವನ್ನು ರಾಜಸ್ವ ಉಳಿತಾಯಕ್ಕೆ ತಂದೇ ತರುವುದಾಗಿ ಸದನಕ್ಕೆ ಭರವಸೆ ನೀಡುತ್ತೇನೆ. 2018 ರಲ್ಲಿ ನನ್ನ ಅವಧಿಯ ಮುಕ್ತಾಯದ ವೇಳೆ 2.42 ಲಕ್ಷ ಕೋಟಿ ಸಾಲ ಇದ್ದು, 2023 ಮಾರ್ಚ್‌ ವೇಳೆಗೆ 5.23 ಲಕ್ಷ ಕೋಟಿ ಇದೆ. ಇವರು ನಾಲ್ಕು ವರ್ಷದಲ್ಲಿ 2,81,00 ಕೋಟಿ ರೂ. ಮಾಡಿದ್ದಾರೆ. ಇದಲ್ಲದೇ ಜಿ.ಎಸ್.ಟಿ. ಪರಿಹಾರ ಸಾಲ 3,000 ಕೋಟಿ ರೂ. ಮಾಡಿದ್ದಾರೆ ಎಂದು ಹೇಳಿದರು.

Continue Reading

ವಿಧಾನಮಂಡಲ ಅಧಿವೇಶನ

Budget Session : ನಮ್ಮ ಗ್ಯಾರಂಟಿ ಕದ್ದು ಮೋದಿ ಗ್ಯಾರಂಟಿ ಅಂತಿದಾರೆ; ಸಿದ್ದರಾಮಯ್ಯ ಆರೋಪ

Budget Session : ಕೇಂದ್ರ ಸರ್ಕಾರದವರು ರಾಜ್ಯದ ಗ್ಯಾರಂಟಿ ಯೋಜನೆಗಳನ್ನು ಕದ್ದು ತಮ್ಮ ಯೋಜನೆ ಅಂತಿದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಅವರು ಮಾತನಾಡಿದರು.

VISTARANEWS.COM


on

Budget session Siddaramaiah Modi guarantee
Koo

ಬೆಂಗಳೂರು: ಕೇಂದ್ರ ಸರ್ಕಾರ ನಮ್ಮ ಗ್ಯಾರಂಟಿಗಳನ್ನು (Congress Guarantees) ಕದ್ದು ಮೋದಿ ಗ್ಯಾರಂಟಿ (Modi Guarantee) ಎಂದು ಪ್ರಚಾರ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramiah) ಆರೋಪಿಸಿದ್ದಾರೆ. ರಾಜ್ಯ ವಿಧಾನಸಭೆಯಲ್ಲಿ (Budget Session) ಬಜೆಟ್‌ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, ಕೇಂದ್ರ ಸರ್ಕಾರದ ಯೋಜನೆಗಳಲ್ಲಿ (Central Government Schemes) ರಾಜ್ಯದ ಪಾಲೇ ಅಧಿಕವಿರುತ್ತದೆ ಎಂದು ಲೆಕ್ಕ ನೀಡಿದರು.

ನಾಡಿನ ಜನರಿಗೆ ಮಾಡಿರುವ ಅನ್ಯಾಯವನ್ನು ಸಮರ್ಥನೆ ಮಾಡುವ ಬಿಜೆಪಿ ನಾಯಕರಿಗೆ ಮೋದಿ ಮುಂದೆ ನಾಡಿನ ಹಕ್ಕನ್ನು, ನಾಡಿನ ಜನರ ಪಾಲನ್ನು ಕೇಳುವ ತಾಕತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆಕ್ಷೇಪಿಸಿದರು.

ರಾಜ್ಯದ ಸ್ವಂತ ತೆರಿಗೆ ಶೇ 78% ಇದ್ದರೆ 22% ಕೇಂದ್ರ ಸರ್ಕಾರದಿಂದ ಬರುತ್ತದೆ. ಅದೇ ಗುಜರಾತಿಗೆ 75% ಸ್ವಂತ ತೆರಿಗೆ ಯಿಂದ ಬಂದರೆ 17% ಕೇಂದ್ರದಿಂದ ಹಾಗೂ ಸಹಾಯಧನ ಸೇರಿ 25% ಕೇಂದ್ರದಿಂದ ಹೋಗುತ್ತಿದೆ. ಉತ್ತರ ಪ್ರದೇಶಕ್ಕೆ 48% ಸ್ವಂತ ತೆರಿಗೆ ಇದ್ದರೆ 32% ಹಾಗೂ 20% ಸೇರಿ ಒಟ್ಟು 52% ಕೇಂದ್ರದಿಂದ ಹೋಗುತ್ತಿದೆ. ಆದರೆ ನಮಗೆ ಮಾತ್ರ ಕೇವಲ ಕೇವಲ ಕೇವಲ ಶೇ. 22% ಕೊಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಮ್ಮಿಂದ ಪಡೆದ ಹಣ ನ್ಯಾಯಯುತವಾಗಿ ವಾಪಸ್‌ ಕೊಡುವುದಿಲ್ಲ

ದೇಶದಲ್ಲಿ ಸ್ವಂತ ತೆರಿಗೆ ಹೆಚ್ಚಿರುವ ರಾಜ್ಯಗಳ ಪೈಕಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ ಶಿಕ್ಷಣ, ಆರೋಗ್ಯ, ಸೇತುವೆ, ಸಾಮಾಜಿಕ ಭದ್ರತೆ, ಕಾನೂನು ಸುವ್ಯವಸ್ಥೆ ನಿರ್ವಹಣೆಗೆ ಕೇಂದ್ರದಿಂದ ಪಾಲು ಬರುತ್ತದೆ. ರೈಲ್ವೇಗೆ ಜಮೀನು ಕೊಟ್ಟು ಯೋಜನಾ ವೆಚ್ಚದಲ್ಲಿ ಶೇ. 50ರಷ್ಟು ರಾಜ್ಯ ಸರ್ಕಾರ ಭರಿಸುತ್ತದೆ. ರೈಲ್ವೆ ಇಂದ ಬಂದ ಆದಾಯವನ್ನು ಅವರೇ ಇಟ್ಟುಕೊಳ್ಳುತ್ತಾರೆ. ಟೋಲ್ ಸಂಗ್ರಹದಿಂದ ಬರುವ ಆದಾಯವನ್ನೂ ನಮ್ಮ ನಾಡಿನ ಜನರಿಗೆ ವಾಪಾಸ್ ಕೊಡುವುದಿಲ್ಲ ಎಂದು ರಾಜ್ಯಗಳಿಗೆ ತೆರಿಗೆಯಲ್ಲಿ ಆಗುತ್ತಿರುವ ಅನ್ಯಾಯದ ಪಟ್ಟಿಯನ್ನೇ ಸಿದ್ದರಾಮಯ್ಯ ನೀಡಿದರು.

ಕೇಂದ್ರ ಪುರಸ್ಕೃತ ಯೋಜನೆಗಳಲ್ಲೂ ರಾಜ್ಯದ ಪಾಲೇ ಅಧಿಕ

ಕೇಂದ್ರ ಸರ್ಕಾರದ ಬಜೆಟ್ ಗಾತ್ರ 45 ಲಕ್ಷ ಕೋಟಿ ರೂ.ಗಳಿದ್ದರೂ ನಮಗೆ 50257 ಕೋಟಿ ರೂ.ಗಳನ್ನು ಮಾತ್ರ ಕೊಟ್ಟಿದ್ದಾರೆ. ಅದರಲ್ಲಿ 13 ಸಾವಿರ ಕೋಟಿ ಕೇಂದ್ರ ಪುರಸ್ಕೃತ ಯೋಜನೆಗಳೂ ಸೇರಿವೆ ಎಂದರು.
ಅದರಲ್ಲಿಯೂ ಕೇಂದ್ರದ ಪಾಲು ಕಡಿಮೆ ಇದ್ದು, ನಮ್ಮ ಪಾಲು ಹೆಚ್ಚಿದೆ ಎಂದರು. 2013 ಮಾರ್ಚ್ ವರೆಗೆ 2067 ಕಿಮೀ ರಸ್ತೆಗಳಾಗಿವೆ. ಬೇರೆ ರಾಜ್ಯಗಳಲ್ಲಿ ಇದಕ್ಕಿಂತ ಹೆಚ್ಚಾಗಿದ್ದು, ಇಲ್ಲಿಯೂ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದರು.

ಸರ್ವಶಿಕ್ಷಣ ಅಭಿಯಾನದಡಿ 702 ಕೋಟಿ ರೂ. ಕೇಂದ್ರ ಸರ್ಕಾರ ಕೊಟ್ಟರೆ ನಮ್ಮ.ಪಾಲು 472 ಕೋಟಿ ರೂ. ಕರ್ನಾಟಕ ಸರ್ಕಾರ ಹೆಚ್ಚುವರಿಯಾಗಿ 1528 ಕೋಟಿ ರೂ.ಗಳನ್ನು ನೀಡಿದೆ. ಮಧ್ಯಾಹ್ನದ ಬಿಸಿಯೂಟದಡಿ 594 ಕೋಟಿ ಕೇಂದ್ರ ಕೊಟ್ಟರೆ ರಾಜ್ಯ ಸರ್ಕಾರ 346 ಕೋಟಿ ರೂ. ನೀಡಿ ಹೆಚ್ಚುವರಿಯಾಗಿ 967 ಕೋಟಿ ರೂ.ಗಳನ್ನು ನೀಡಿದೆ. ಆಯುಷ್ಮಾ ನ್ ಭಾರತ್ ಯೋಜನೆಯಡಿ 187 ಕೋಟಿ ರೂ.ಗಳನ್ನು ಕೇಂದ್ರ ನೀಡಿದ್ದರೆ 124 ಕೋಟಿ ರೂ ಜೊತೆಗೆ 624 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ನೀಡಿದೆ.

ಇದನ್ನೂ ಓದಿ : Budget Session : ಹೆಡಗೇವಾರ್‌ ಸ್ವಾತಂತ್ರ್ಯಕ್ಕೆ ಹೋರಾಡಿದ್ರಾ? ಗೋಲ್ವಲ್ಕರ್‌ ಭಾಗವಹಿಸಿದ್ರಾ; ಸಿಎಂ ಪ್ರಶ್ನೆ

ಕೇಂದ್ರದವರು ನಮ್ಮ ಗ್ಯಾರಂಟಿ ಕದ್ದಿದ್ದಾರೆ ಎಂದ ಸಿದ್ದರಾಮಯ್ಯ

ಸಾಮಾಜಿಕ ಭದ್ರತಾ ಯೋಜನೆಯಡಿ ಕೇಂದ್ರ ಸರ್ಕಾರ 525 ಕೋಟಿ ರೂ. ನೀಡಿದರೆ, ರಾಜ್ಯ ಸರ್ಕಾರ 350 ಕೋಟಿ ನೀಡಿದೆ ಅದರ ಜೊತೆಗೆ 8569 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಕೊಟ್ಟಿದೆ. ಒಟ್ಟಾರೆಯಾಗಿ 13005 ಕೋಟಿ ರೂ.ಗಳು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬರುತ್ತದೆ ಅಷ್ಟೇ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಪಿಎಂ ಕೃಷಿ ಸಿಂಚಯಿ ಯೋಜನೆಯಡಿ 57% ಕೇಂದ್ರ ಸರ್ಕಾರ ಹಾಗೂ 33% ರಾಜ್ಯ ಸರ್ಕಾರ ನೀಡುತ್ತದೆ ಅದರ ಜೊತೆ ಶೇ. 35ರಷ್ಟು ಹೆಚ್ಚುವರಿ ಮೊತ್ತವನ್ನು ರಾಜ್ಯ ಸರ್ಕಾರ ನೀಡುತ್ತದೆ. ಪಿಎಂ ಆವಾಸ್ ಯೋಜನೆಯಡಿ 5-6 ಲಕ್ಷ ರೂ. ರಾಜ್ಯ ಸರ್ಕಾರ ನೀಡಿದರೆ, ಕೇಂದ್ರ 1.50.ಲಕ್ಷ ರೂ. ನೀಡುತ್ತದೆ. ಅದರ ಜೊತೆಗೆ 1.38 ಲಕ್ಷ ಜಿಎಸ್‌ಟಿ ಸೇರಿ ಒಂದು ಮನೆಗೆ ಕೇಂದ್ರ ಸರ್ಕಾರ ನೀಡುವುದು ಕೇವಲ 12 ಸಾವಿರ ರೂ ಮಾತ್ರ ಎಂದರು. ಇದರಲ್ಲಿ ನಮ್ಮ ಹೆಸರಿಲ್ಲ. ಇದು ಯಾವ ನ್ಯಾಯ ಎಂದು ಪ್ರಶ್ನಿಸಿದ ಸಿಎಂ ಮೋದಿ ಗ್ಯಾರಂಟಿ ಎಂದು ನಮ್ಮ ಗ್ಯಾರಂಟಿ ಕದ್ದಿದ್ದಾರೆ ಎಂದರು.

Continue Reading

ರಾಜಕೀಯ

Budget Session : 40 ಗಂಟೆ ಕಳೆದರೂ ಜಿಂದಾಬಾದ್‌ ಉಗ್ರರ ಸೆರೆ ಇಲ್ಲ; ಬಿಜೆಪಿ ವಾಕೌಟ್‌

Budget Session : ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ ಉಗ್ರರನ್ನು 40 ಗಂಟೆಗಳ ಆದರೂ ಬಂಧಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಶಾಸಕರು ವಿಧಾನಭೆಯಿಂದ ಸಭಾತ್ಯಾಗ ಮಾಡಿದರು.

VISTARANEWS.COM


on

Budget Session BJP Walk out
Koo

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ (Rajyasabha Election) ಗೆದ್ದ ಕಾಂಗ್ರೆಸ್‌ ಅಭ್ಯರ್ಥಿಗಳ ವಿಜಯೋತ್ಸವದ ಸಂದರ್ಭದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ (Pakistan zindabad) ಘೋಷಣೆ ಕೂಗಿದ ಧೂರ್ತರ ವಿರುದ್ಧ 40 ಗಂಟೆ ಕಳೆದರೂ ಕ್ರಮ ಕೈಗೊಂಡಿಲ್ಲ. ಅವರಿಗೆ ರಕ್ಷಣೆ ಕೊಡಲಾಗುತ್ತಿದೆ ಎಂದು ಆಪಾದಿಸಿ ಬಿಜೆಪಿ ರಾಜ್ಯ ವಿಧಾನಸಭೆಯಲ್ಲಿ ಸಭಾತ್ಯಾಗ (BJP Walks out from Assembly) ಮಾಡಿದೆ. ಬಜೆಟ್‌ ಅಧಿವೇಶನದ (Budget Session) ಕೊನೆಯ ದಿನವಾದ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಚರ್ಚೆಯ ಮೇಲೆ ಉತ್ತರ ನೀಡುತ್ತಿದ್ದಾಗ ಬಿಜೆಪಿ ಶಾಸಕರು ಧರಣಿ ನಡೆಸಿದರು, ಭಜನೆ ನಡೆಸಿದರು. ಅಂತಿಮವಾಗಿ ವಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ನೇತೃತ್ವದಲ್ಲಿ ಸಭಾತ್ಯಾಗ ನಡೆಸಿದರು. ಬಳಿಕ ಎಲ್ಲರೂ ರಾಜಭವನಕ್ಕೆ ತೆರಳಿದರು. ಅದರ ನಡುವೆ ಜೈ ಮೋದಿ, ಜೈ ಶ್ರೀರಾಮ್‌ ಘೋಷಣೆಗಳೂ ಮೊಳಗಿದವು.

ಅಧಿವೇಶನ ಸಮಾವೇಶಗೊಳ್ಳುತ್ತಿದ್ದಂತೆಯೇ ಮಾತನಾಡಿದ ವಿರೋಧ ಪಕ್ಷದ ನಾಯಕರಾದ ಆರ್‌ ಅಶೋಕ್‌ ಅವರು, ʻʻಈ ಸರ್ಕಾರ ಕುಂಭಕರ್ಣ ನಿದ್ರೆಯಲ್ಲಿದೆ. ಇನ್ನೂ ಅದು ಎದ್ದೇ ಇಲ್ಲ. ದೇಶದ್ರೋಹಿಗಳನ್ನು ಶಿಕ್ಷಿಸುವ ಧೈರ್ಯ ತೋರಿಲ್ಲʼʼ ಎಂದು ಆಕ್ಷೇಪಿಸಿದರು.

ʻʻನಾನು ಸಿನಿಯರ್ ಶಾಸಕನಾಗಿದ್ದೇನೆ. ಹಲವು ವರ್ಷಗಳಿಂದ ಸರ್ಕಾರಗಳನ್ನು ನೋಡಿದ್ದೇನೆ. ಮಲ್ಲಿಕಾರ್ಜುನ ಖರ್ಗೆಯವರು ಗೃಹ ಸಚಿವರಾಗಿದ್ದರು. ಆಗ ದಲಿತ ಸಮುದಾಯದ ಆರು ಜನರನ್ನ ಸಜೀವ ದಹನ ಮಾಡಲಾಗಿತ್ತು. ಆಗ ಸದನದಲ್ಲಿ ಖರ್ಗೆಯವರು ಕಣ್ಣೀರು ಹಾಕಿದ್ದರು. ಆದರೆ, ಈಗಿನ ಗೃಹ ಸಚಿವರು ವಿಧಾನಸೌಧದಲ್ಲೇ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದರೂ ಗಂಭೀರವಾಗಿ ಪರಿಗಣಿಸಿಲ್ಲ. ಘಟನೆ ನಡೆದು 40 ಗಂಟೆ ಕಳೆದರೂ ಒಬ್ಬರನ್ನೂ ಬಂದಿಸಿಲ್ಲ ಅಂತ ಹೇಳಿದ ಮೇಲೆ ಇವರು ಅಧಿಕಾರದಲ್ಲಿ ಇರಲು ಲಾಯಕ್ ಇಲ್ಲʼʼ ಎಂದರು. ಬಳಿಕ ಇತರ ಶಾಸಕರ ಜತೆ ಸದನದ ಬಾವಿಗೆ ಇಳಿದರು.

ಇದನ್ನೂ ಓದಿ : Budget Session : ಹೆಡಗೇವಾರ್‌ ಸ್ವಾತಂತ್ರ್ಯಕ್ಕೆ ಹೋರಾಡಿದ್ರಾ? ಗೋಲ್ವಲ್ಕರ್‌ ಭಾಗವಹಿಸಿದ್ರಾ; ಸಿಎಂ ಪ್ರಶ್ನೆ

ಆಗ ಗೃಹ ಸಚಿವ ಪರಮೇಶ್ವರ್‌ ಅವರು, ಎಫ್ಎಸ್ಎಲ್ ರಿಪೋರ್ಟ್ ಬರಲಿ. ಏಳು ಜನರ ಬಳಿ ಹೇಳಿಕೆ ಪಡೆದಿದ್ದೇವೆ. ಇದನ್ನ ಗಂಭೀರವಾಗಿ ಪರಿಗಣಿಸಿದ್ದೇವೆ ಎಂದರು.

ʻʻಪಾಕಿಸ್ತಾನ ಜಿಂದಾಬಾದ್ ಅಂತ ಕೂಗಿದ್ರೆ ಕ್ರಮ ನಿಶ್ಚಿತ. ನಾವು ದೇಶಭಕ್ತಿಯನ್ನು ಇವರಿಂದ ಕಲಿಯುವ ಅಗತ್ಯವಿಲ್ಲ. ಎಫ್ಎಸ್ಎಲ್ ರಿಪೋರ್ಟ್ ಬರಲಿ. ನಾವು ಯಾರನ್ನೂ ಸಹ ರಕ್ಷಣೆ ಮಾಡಲ್ಲ.ʼʼ ಎಂದರು. ಸದನದ ಬಾವಿಯಲ್ಲಿ ಇಳಿದು ಗದ್ದಲ ಮಾಡುವುದು ಸರಿಯಲ್ಲ ಎಂದು ಹೇಳಿದರು.

Budget Session Siddaramaiah RSS Leaders

ಬಿಜೆಪಿ ಸದಸ್ಯರು ಧರಣಿ ನಡೆಸುತ್ತಿರುವ ನಡುವೆಯೇ ಬಜೆಟ್ ಮೇಲೆ ಚರ್ಚೆಗೆ ಸಿಎಂ ಉತ್ತರ ನೀಡಲು ಆರಂಭಿಸಿದರು. ಆಗ ಸದನದಲ್ಲಿ ಭಾರಿ ಗದ್ದಲ ಉಂಟಾಯಿತು. ಬಿಜೆಪಿ ಶಾಸಕರು ಪೇಪರ್‌ಗಳನ್ನು ಹರಿದು ಹಾಕಿದರು. ಸಿದ್ದರಾಮಯ್ಯ ಅವರ ಮಾತುಗಳನ್ನು ಸುಳ್ಳು ಸುಳ್ಳು.. ಬುರುಡೆ ಬುರುಡೆ ಎಂದು ರೇಗಿಸಿದ ಬಿಜೆಪಿ ಶಾಸಕರು, ನ್ಯಾಯ ಬೇಕು ಅಂತ ಬಾವಿಯಲ್ಲಿ ಸುತ್ತು ಹೊಡೆದರು.

ಕಟ್ಟಿ ಕಟ್ಟಿ ಕಾಂಗ್ರೆಸ್ ಗೆ ಚಟ್ಟ ಕಟ್ಟಿ.. ಸತ್ತೋಯಿತು, ಸತ್ತೋಯಿತು.. ಕಾಂಗ್ರೆಸ್ ಸತ್ತೋಯಿತು ಎಂದು ಬಿಜೆಪಿ ಭಜನೆ ಶುರು ಮಾಡಿತು. ʻʻಮೊದಲು ಸಿಎಂ ರಾಜೀನಾಮೆ ಕೊಡಬೇಕು. ವಿಧಾನ ಸೌಧಕ್ಕೆ ಭಯೋತ್ಪಾದಕರನ್ನು ಕರೆ ತಂದಿದ್ದು ಇವರು. ಇವರ ನಡೆ ವಿರೋಧಿಸಿ ನಾವು ರಾಜಭವನ ಚಲೋ ಮಾಡ್ತೀವಿ. ರಾಜಭವನ ತೆರಳಿ ಸರ್ಕಾರದ ವಿರುದ್ಧ ದೂರು ಕೊಡ್ತೀವಿ. ಸದನದಿಂದ ವಾಕ್ ಔಟ್ ಮಾಡ್ತೀವಿʼʼ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿದರು. ಬಳಿಕ ಬಿಜೆಪಿ ಸದಸ್ಯರು ಸದನದಿಂದ ಹೊರನಡೆದರು.

Continue Reading

ರಾಜಕೀಯ

Budget Session : ಹೆಡಗೇವಾರ್‌ ಸ್ವಾತಂತ್ರ್ಯಕ್ಕೆ ಹೋರಾಡಿದ್ರಾ? ಗೋಲ್ವಲ್ಕರ್‌ ಭಾಗವಹಿಸಿದ್ರಾ; ಸಿಎಂ ಪ್ರಶ್ನೆ

Budget Session : ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಆರೆಸ್ಸೆಸ್‌ ನಾಯಕರು ಎಂದಾದರೂ ಭಾಗವಹಿಸಿದ್ದರಾ? ಎಂದು ಕೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅವರು ವಿಧಾನಸಭೆಯಲ್ಲಿ ಮಾತನಾಡಿದರು.

VISTARANEWS.COM


on

Budget Session Siddaramaiah RSS Leaders
Koo

ಬೆಂಗಳೂರು: ಬಿಜೆಪಿಯವರು ರಾಜ್ಯದಲ್ಲಿ (BJP Karnataka) ಇದುವರೆಗೆ ಒಂದೇ ಒಂದು ಬಾರಿಯೂ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬಂದಿಲ್ಲ. ಮೂರು ಬಾರಿ ಅಧಿಕಾರಕ್ಕೆ ಏರಿದರೂ ಹಿಂಬಾಗಿಲಿನಿಂದ ಬಂದವರು. ಜನ ಇವರಿಗೆ ಯಾವತ್ತೂ ಅವಕಾಶ ಕೊಟ್ಟಿಲ್ಲ ಎಂದು ಸಿಎಂ ಸಿದ್ದರಾಮಯ್ಯ (CM Siddaramiah) ಅವರು ಹೇಳಿದರು. ಗುರುವಾರ ರಾಜ್ಯ ವಿಧಾನಸಭೆಯಲ್ಲಿ ಆಯವ್ಯಯ ಭಾಷಣ (Budget Session) ಕುರಿತ ಚರ್ಚೆಗೆ ಉತ್ತರ ನೀಡಿದರು.

ಬಿಜೆಪಿಯವರು ನಮಗೆ ದೇಶಭಕ್ತಿ ಪಾಠ ಹೇಳಿ ಕೊಡಲು ಬರುತ್ತಾರೆ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟದ್ದು ಕಾಂಗ್ರೆಸ್.‌ ಆರ್.ಎಸ್.‌ಎಸ್‌ 1925ರಲ್ಲೇ ಅಸ್ತಿತ್ವಕ್ಕೆ ಬಂತಲ್ಲ, ಅದು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲೇ ಇಲ್ಲ. ಆರೆಸ್ಸೆಸ್‌ ಸ್ಥಾಪಕರಾದ ಕೇಶವ ಬಲಿರಾಮ್‌ ಹೆಡಗೇವಾರ್‌ (Keshav Baliram Hedagevar) ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ರಾ? ಮತ್ತೊಬ್ಬ ಸರಸಂಘಚಾಲಕ ಗೋಳ್ವಳ್ಕರ್‌ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿದ್ರಾ? ಯಾವತ್ತೂ ಇಲ್ಲ ಎಂದು ಹೇಳಿದರು ಸಿದ್ದರಾಮಯ್ಯ.

ಅನಂತಕುಮಾರ್‌ ಹೆಗಡೆ ಅವರು ಕೇಂದ್ರ ಸಚಿವರಾಗಿದ್ದಾಗ, ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಿಸಲು ಎಂದು ಹೇಳಿಕೆ ನೀಡಿದರು. ಇದರ ಬಗ್ಗೆ ಮೋದಿ ಅವರಾಗಲಿ, ಪಕ್ಷದ ಹಿರಿಯರಾಗಲಿ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

Budget Session Siddaramaiah RSS Leaders1

ಅಭಿವೃದ್ಧಿ ಇಲ್ಲದೆ ಜಿಡಿಪಿ, ಆಯವ್ಯಯ ಗಾತ್ರ ಹೆಚ್ಚಳವಾಗಲು ಸಾಧ್ಯವೇ?

ಹಿಂದಿನ ಬಿಜೆಪಿ ಸರ್ಕಾರದವರು ಏನೂ ಅಭಿವೃದ್ಧಿ ಮಾಡಿರಲಿಲ್ಲ. ಬರೀ ಲೂಟಿ ಹೊಡೆದರು. ನಾವು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಯನ್ನೂ ಮಾಡಿದ್ದೇವೆ. ಇದು ಕಾಂಗ್ರೆಸ್‌ ಮತ್ತು ಬಿಜೆಪಿ ಸರ್ಕಾರಕ್ಕೆ ಇರುವ ವ್ಯತ್ಯಾಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಬಸವರಾಜ ಬೊಮ್ಮಾಯಿ ಅವರು 2023ರ ಫೆಬ್ರುವರಿಯಲ್ಲಿ 3.09 ಲಕ್ಷ ಕೋಟಿ ರೂ. ಗಾತ್ರದ ಆಯವ್ಯಯ ಮಂಡಿಸಿದರು. 2024-25ನೇ ಸಾಲಿಗೆ ನಾನು ಮಂಡಿಸಿದ ಆಯವ್ಯಯದ ಗಾತ್ರ 3,71,343 ಕೋಟಿ ರೂ. ನಷ್ಟಿದ್ದು, ಬೊಮ್ಮಾಯಿ ಅವರು ಮಂಡಿಸಿದ ಬಜೆಟ್‌ಗಿಂತ 62,200 ಕೋಟಿ ರೂ. ನಷ್ಟು ಗಾತ್ರ ಹೆಚ್ಚಳವಾಗಿದೆ. ನಾನು ಜುಲೈ 2023 ರಲ್ಲಿ ಮಂಡಿಸಿದ ಬಜೆಟ್‌ಗಿಂತ ಇದು 43,601 ಕೋಟಿ ರೂ. ಹೆಚ್ಚಳವಾಗಿದೆ. ಅಂತೆಯೇ ರಾಜ್ಯದ ಜಿಡಿಪಿ 25,63,247 ಕೋಟಿ ರೂ. ಇತ್ತು. 2024- 25 ಕ್ಕೆ 28,09,063 ಕೋಟಿ ರೂ. ಆಗುವ ನಿರೀಕ್ಷೆ ಇದೆ. ಅಂರೆ 2,41,723 ಕೋಟಿ ರೂ. ಹೆಚ್ಚು. ಅಭಿವೃದ್ಧಿ ಇಲ್ಲದೆ ಆಯವ್ಯಯ ಗಾತ್ರ ಹಾಗೂ ಜಿಡಿಪಿ ಹೆಚ್ಚಳವಾಗಲು ಸಾಧ್ಯವೇ? ಎಂದು ಪ್ರಶ್ನಿಸಿದರು.

Budget Session Siddaramaiah RSS Leaders1

ಮುಖ್ಯಮಂತ್ರಿಗಳ ಉತ್ತರದ ಇತರ ಮುಖ್ಯಾಂಶಗಳು

ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿ ಬಜೆಟ್‌ ಓದುವಾಗ ವಿರೋಧ ಪಕ್ಷದವರು ಗೈರು ಹಾಜರಾದದ್ದು. ಇವರಿಗೆ ರಾಜ್ಯದ ಆರ್ಥಿಕತೆ ಬಗ್ಗೆ ಕಾಳಜಿ ಇಲ್ಲ. ಕಾಂಗ್ರೆಸ್‌ ನವರು 9 ಜನ , ಬಿಜೆಪಿ 13 ಜನ ಹಾಗೂ ಜೆಡಿಎಸ್‌ 3 ಜನ ಭಾಗವಹಿಸಿದ್ದಾರೆ. ಇಷ್ಟೂ ಸದಸ್ಯರು ಬಜೆಟ್‌ ಬಗ್ಗೆ ಅನೇಕ ಸಲಹೆ ಸೂಚನೆ ನೀಡಿದ್ದಾರೆ. ಬಜೆಟ್‌ನ್ನು ಟೀಕಿಸಿದ್ದಾರೆ. ಕೇಂದ್ರ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ. ಇದೆಲ್ಲವನ್ನೂ ಸ್ವಾಗತ ಮಾಡುತ್ತೇನೆ. ಅವರ ಸಲಹೆ- ಸೂಚನೆಗಳನ್ನು ಸರ್ಕಾರ ಮುಂದಿನ ವರ್ಷದಲ್ಲಿ ಆರ್ಥಿಕ ವರ್ಷದಲ್ಲಿ ಏನೇನು ಮಾಡಬೇಕು ಅದೆಲ್ಲವನ್ನೂ ಮಾಡುತ್ತೇವೆಂದು ಹೇಳಬಯಸುತ್ತೇನೆ.

ಇದನ್ನೂ ಓದಿ : Budget Session: ನೀವು ತನಿಖೆ ಮಾಡುವಷ್ಟರಲ್ಲಿ ಬಾಂಬ್‌ ಇಟ್ಟು ಓಡಿ ಹೋಗುತ್ತಾರೆ; ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಕೆಂಡ

ಇದು ಹೇಗೆ ಅಭಿವೃದ್ಧಿ ಶೂನ್ಯ ಹೇಗೆ?

ವಿರೋಧ ಪಕ್ಷದವರು ಅಭಿವೃದ್ಧಿ ಶೂನ್ಯ ಎಂದಿದ್ದಾರೆ. ಒಟ್ಟು ಅಭಿವೃದ್ಧಿ ಕಾರ್ಯಕ್ರಮಗಳಿಗೆ 1,20,000 ಕೋಟಿ ರೂ. ವೆಚ್ಚದ ಹಂಚಿಕೆ ಮಾಡಿದ್ದೇವೆ. 52,009 ಕೋಟಿ ರೂ. ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಮೀಸಲಿರಿಸಿದ್ದು, ಉಳಿದ ಮೊತ್ತ ಅಭಿವೃದ್ಧಿ ಕಾರ್ಯಗಳಿಗೆ ಹಂಚಿಕೆ ಮಾಡಲಾಗಿದೆ.

ಜಿಡಿಪಿ- 2023- 24 ರಲ್ಲಿ 25,63,247 ಕೋಟಿ ರೂ. ಇತ್ತು. 2024- 25 ಕ್ಕೆ 28,09,063 ಕೋಟಿ ರೂ. ಆಗುವ ನಿರೀಕ್ಷೆ ಇದೆ. ಅಂದರೆ 2,41,723 ಕೋಟಿ ರೂ. ಹೆಚ್ಚು. ಆದ್ದರಿಂದ ಜಿಡಿಪಿಯೂ ಹೆಚ್ಚಾಗಿದೆ, ಬಜೆಟ್‌ ಗಾತ್ರವೂ ಹೆಚ್ಚಾಗಿದೆ. ಇದರಿಂದ ರಾಜ್ಯದಲ್ಲಿ ಏನೂ ಅಭಿವೃದ್ಧಿ ಮಾಡಿಲ್ಲ ಎಂದು ವಿರೋಧ ಪಕ್ಷದವರು ಮಾಡಿರುವ ಆಪಾದನೆಯಲ್ಲಿ ಯಾವುದೇ ತಿರುಳಿಲ್ಲ ಎಂಬುದು ಸಾಬೀತಾಗುತ್ತದೆ.

ಗ್ಯಾರಂಟಿ ಯೋಜನೆಗಳಿಗೆ ಈ ವರ್ಷ 36,000 ಕೋಟಿ ರೂ. ವೆಚ್ಚ ಮಾಡಿದ್ದೇವೆ. ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ, ಯುವನಿಧಿ – ಈ ಕಾರ್ಯಕ್ರಮಗಳಿಗೆ 36,000 ಕೋಟಿ ರೂ. ಬಳಸಲಾಗಿದೆ. ಮುಂದಿನ ಬಜೆಟ್‌ ನಲ್ಲಿ 52,009 ಕೋಟಿ ಒದಗಿಸಿದ್ದು, ಇದರೊಂದಿಗೆ ಶಿಕ್ಷಣ, ಆರೋಗ್ಯ, ರಸ್ತೆಗಳು, ಶಾಂತಿ ಸುವ್ಯವಸ್ಥೆ ಎಲ್ಲದಕ್ಕೂ ಆದ್ಯತೆ ನೀಡಲಾಗಿದೆ.

ಹಿಂದಿನ ಬಿಜೆಪಿ ಸರ್ಕಾರದವರು ಏನೂ ಅಭಿವೃದ್ಧಿ ಮಾಡಿರಲಿಲ್ಲ. ಬರೀ ಲೂಟಿ ಹೊಡೆದರು. ನಾವು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಯನ್ನೂ ಮಾಡಿದ್ದೇವೆ. ಇದು ಕಾಂಗ್ರೆಸ್‌ ಮತ್ತು ಬಿಜೆಪಿ ಸರ್ಕಾರಕ್ಕೆ ಇರುವ ವ್ಯತ್ಯಾಸ ಎಂದರು ಸಿದ್ದರಾಮಯ್ಯ.

Continue Reading
Advertisement
Hardik Pandya
ಕ್ರೀಡೆ3 mins ago

Hardik Pandya: ಪ್ರೇಯಸಿಯ ದೋಖಾದ ಸುಳಿವು ಮೊದಲೇ ಇತ್ತಾ? ಬಹುತೇಕ ಆಸ್ತಿಯನ್ನು ಪೋಷಕರ ಹೆಸರಲ್ಲಿಟ್ಟ ಚಾಲಾಕಿ ಹಾರ್ದಿಕ್!

ಕರ್ನಾಟಕ14 mins ago

Lockup Death: ಲಾಕಪ್‌ ಡೆತ್‌ ಅಲ್ಲ ಎಂದಿದ್ದ ಮೃತ ಯುವಕನ ತಂದೆ ಮತ್ತೆ ಉಲ್ಟಾ!

Actor Kiran Raj Ronny Movie Reels with Fans Song
ಸ್ಯಾಂಡಲ್ ವುಡ್14 mins ago

Actor Kiran Raj: ʻರಾನಿʼ ಸಿನಿಮಾ ಸಾಂಗ್‌ ಔಟ್‌; ಇದೇ ಭಾನುವಾರ ಕಿರಣ್ ರಾಜ್‌ ʻರೀಲ್ಸ್ with ಫ್ಯಾನ್ಸ್ʼ!

Speech Fasting
ಆರೋಗ್ಯ15 mins ago

Speech Fasting: ಸದಾ ವಟವಟ ಮಾತಾಡ್ತಾ ಇರ್ತೀರಾ? ʼಮೌನವ್ರತʼ ಮಾಡಿ, ಆರೋಗ್ಯ ಸುಧಾರಣೆ ನೋಡಿ!

Jawa Yezdi
ಆಟೋಮೊಬೈಲ್16 mins ago

Jawa Yezdi : ಜಾವಾ ಯೆಜ್ಡಿ ಮೋಟಾರ್‌ಸೈಕಲ್ಸ್ ನ ಜಾವಾ 42 ಬಾಬರ್ ರೆಡ್ ಶೀನ್‌ ಬಿಡುಗಡೆ

road Accident
ಕಲಬುರಗಿ29 mins ago

Road Accident : ಅಯೋಧ್ಯೆಯಲ್ಲಿ ಭೀಕರ ಅಪಘಾತ; ಕಲಬುರಗಿ ಮೂಲದ ಮೂವರು ದುರ್ಮರಣ, 19 ಮಂದಿಗೆ ಗಾಯ

KKR vs SRH Final 2024
ಕ್ರೀಡೆ43 mins ago

KKR vs SRH Final 2024: ನಾಳೆ ಕೆಕೆಆರ್​-ಹೈದರಾಬಾದ್​ ಫೈನಲ್​ ಕಾದಾಟ; ಯಾರಿಗೆ ಒಲಿಯಲಿದೆ ಐಪಿಎಲ್​ ಕಿರೀಟ?

Life Expectancy
ಆರೋಗ್ಯ51 mins ago

Life Expectancy: ಕೊರೊನಾದಿಂದ ನಮ್ಮ ಆಯುಷ್ಯದಲ್ಲಿ 2 ವರ್ಷ ಕಡಿತ; WHO ಭೀಕರ ವರದಿ

Tiger Project PM Modi hotel bill in Karnataka dues Rs 6 crore and Centre vs state departments clash
ರಾಜಕೀಯ53 mins ago

PM Modi: ಮೋದಿ ಬಂಡೀಪುರ ಭೇಟಿ ಆತಿಥ್ಯಕ್ಕೆ 6 ಕೋಟಿ ರೂ. ಖರ್ಚು; ಬಿಲ್‌ ಬಾಕಿಗೆ ಕೇಂದ್ರ – ರಾಜ್ಯ ಇಲಾಖೆಗಳ ಜಟಾಪಟಿ

Karnataka Rain
ಮಳೆ56 mins ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ56 mins ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌