ವಿಸ್ತಾರ TOP 10 NEWS | ರಾಜಕೀಯ `ನಿವೃತ್ತಿʼ ಚರ್ಚೆಯಿಂದ ಚೋಪ್ರಾ ಬೆಳ್ಳಿ ಸಾಧನೆವರೆಗಿನ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS | ರಾಜಕೀಯ `ನಿವೃತ್ತಿʼ ಚರ್ಚೆಯಿಂದ ಚೋಪ್ರಾ ಬೆಳ್ಳಿ ಸಾಧನೆವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

Vistara top 10 news 24072022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಶ್ವದ ಎಲ್ಲ ಹುದ್ದೆಗಳಿಗೂ ನಿವೃತ್ತಿ ಇದೆ, ಉದ್ಯಮಪತಿಗಳೂ ನಿವೃತ್ತಿ ಘೋಷಿಸುತ್ತಾರೆ. ಆದರೆ ನಿವೃತ್ತಿಯೇ ಇಲ್ಲದ ರಾಜಕೀಯ ಕ್ಷೇತ್ರದಲ್ಲಿ ಕರ್ನಾಟಕದ ಮಟ್ಟಿಗೆ ಈಗ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಒಲಿಂಪಿಯನ್‌ ಕ್ರೀಡಾಪಟು ನೀರಜ್‌ ಚೋಪ್ರಾ ವರ್ಲ್ಡ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಗೆದ್ದಿದ್ದಾರೆ, ಆದಾಯ ತೆರಿಗೆ ರಿಟರ್ನ್‌ ಸಲ್ಲಿಕೆಗೆ ಜುಲೈ 31ರ ಗಡುವನ್ನು ವಿಸ್ತರಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ರಾಜ್ಯದಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ಪೊಲೀಸರೂ ಸೇರಿ ಎಂಟು ಜನರು ಮೃತಪಟ್ಟಿದ್ದಾರೆ ಎಂಬುದರ ಜತೆಗೆ ದೇಶದಲ್ಲಿ ನಡೆದ ಪ್ರಮುಖ ಸುದ್ದಿಗಳ ಗುಚ್ಛ ವಿಸ್ತಾರ TOP 10 NEWS.

1. World Athletics Championships | ಒಂದೇ ತಿಂಗಳಲ್ಲಿ ಎರಡು ಬೆಳ್ಳಿ ಪದಕ ಗೆದ್ದ ನೀರಜ್‌ ಚೋಪ್ರಾ
World Athletics Championships- ೨೦೨೨ ಕೂಟದಲ್ಲಿ ರಜತ ಪದಕ ಗೆದ್ದಿರುವ ಭಾರತದ ನೀರಜ್‌ ಚೋಪ್ರಾ ಒಂದೇ ತಿಂಗಳಲ್ಲಿ ಭಾರತಕ್ಕೆ ಎರಡು ಪದಕ ತಂದುಕೊಟ್ಟಿದ್ದಾರೆ. ಜುಲೈ ೧ರಂದು ಸ್ವೀಡನ್‌ನ ಸ್ಟಾಕ್‌ಹೋಮ್‌ನಲ್ಲಿ ನಡೆದ ಡೈಮಂಡ್‌ ಲೀಗ್‌ನಲ್ಲೂ ಅವರು ಬೆಳ್ಳಿಯ ಪದಕ ಗೆದ್ದು ಬೀಗಿದ್ದರು. ಅಮೆರಿಕದ ಒರೆಗಾನ್‌ನಲ್ಲಿ ಭಾನುವಾರ ಬೆಳಗ್ಗೆ ನಡೆದ (ಭಾರತೀಯ ಕಾಲಮಾನ) World Athletics Championships ಫೈನಲ್‌ ಸ್ಪರ್ಧೆಯಲ್ಲಿ ನೀರಜ್‌ ಚೋಪ್ರಾ ಐತಿಹಾಸಿಕ ಸಾಧನೆ ಮಾಡಿದ್ದಾರೆ. ನೀರಜ್‌ ಅವರು ತಮ್ಮ ನಾಲ್ಕನೇ ಪ್ರಯತ್ನದಲ್ಲಿ 88.13 ಮೀಟರ್‌ ದೂರಕ್ಕೆ ಎಸೆಯವ ಮೂಲಕ ಎರಡನೇ ಸ್ಥಾನ ಗಳಿಸಿ ರಜತ ಪದಕಕ್ಕೆ ಕೊರಳೊಡ್ಡಿದರು. ಕಳೆದ ಎರಡು ಬಾರಿಯ ಚಾಂಪಿಯನ್‌ ಗ್ರೆನೆಡಾ ದೇಶದ ಪೀಟರ್‌ ಆಂಡರ್ಸನ್‌ 90.54 ಮೀಟರ್‌ ಎಸೆಯುವ ಮೂಲಕ ಬಂಗಾರದ ಪದಕ ಗೆದ್ದರು. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

2. ರಾಜ್ಯ ರಾಜಕೀಯದಲ್ಲಿ ʻನಿವೃತ್ತಿʼ ಚರ್ಚೆ: ಬಿಜೆಪಿಯಲ್ಲಿ ನಡುಕ, 92ರಲ್ಲೂ ನಿವೃತ್ತಿ ಇಲ್ಲವೆಂದ ಶ್ಯಾಮನೂರು!
ರಾಜ್ಯ ರಾಜಕೀಯದಲ್ಲೀಗ ನಿವೃತ್ತಿ ಮಾತುಗಳದ್ದೇ ಚರ್ಚೆ. ನಾನು ನಿವೃತ್ತಿ ಆಗುತ್ತೇನೆ ಎಂದು ಒಬ್ಬ ನಾಯಕ ಹೇಳಿದರೆ, ಅದೇ ವಯಸ್ಸಿನ ಇನ್ನಿತರೆ ನಾಯಕರಲ್ಲಿ ನಡುಕ ಉಂಟಾಗುತ್ತದೆ. ಮತ್ತೊಬ್ಬರು ಬದುಕಿರುವವರೆಗೂ ನಾನೇ ಶಾಸಕ ಎನ್ನುತ್ತಾರೆ. ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರು ಎರಡು ದಿನಗಳ ಹಿಂದೆ ಶಿವಮೊಗ್ಗದಲ್ಲಿ ತಮ್ಮ ನಿವೃತ್ತಿ ಇಂಗಿತವನ್ನು ವ್ಯಕ್ತಪಡಿಸಿದ್ದರು. ಇದೀಗ ರಾಣೆಬೆನ್ನೂರು ಶಾಸಕ ಕೆ.ಬಿ. ಕೋಳಿವಾಡ ಸಹ ಇದೇ ರೀತಿಯ ಮಾತನ್ನಾಡಿದ್ದಾರೆ. ಆದರೆ 92ರ ಹರೆಯದ ಶ್ಯಾಮನೂರು ಶಿವಶಂಕರಪ್ಪ ಮಾತ್ರ ತಾವೇ ಕ್ಯಾಂಡಿಡೇಟ್‌ ಎನ್ನುತ್ತಿದ್ದಾರೆ.(ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

3. GOOD NEWS| ಆಗಸ್ಟ್‌ 15ರಂದು ಔಷಧಗಳ ದರ ಇಳಿಕೆಗೆ ಕೇಂದ್ರ ಸರ್ಕಾರ ಪರಿಶೀಲನೆ
ಕೇಂದ್ರ ಸರ್ಕಾರ ಆಗಸ್ಟ್‌ ೧೫ರಂದು ಕೆಲವು ನಿರ್ಣಾಯಕ ಔಷಧಗಳ ದರ ಇಳಿಕೆಗೆ ಮುಂದಾಗಿದೆ. ಕ್ಯಾನ್ಸರ್‌ ಮತ್ತು ಹೃದಯದ ಕಾಯಿಲೆ ಕುರಿತ ಚಿಕಿತ್ಸೆಯಲ್ಲಿ ಬಳಸುವ ಪ್ರಮುಖ ಔಷಧಗಳ ದರಗಳು ಇಳಿಕೆಯಾಗುವ ನಿರೀಕ್ಷೆ ಇದೆ. ಔಷಧಗಳ ದರ ಇಳಿಸುವ ಬಗ್ಗೆ ಪ್ರಸ್ತಾಪ ಇದ್ದು, ಸರ್ಕಾರ ಅಂತಿಮ ನಿರ್ಧಾರವನ್ನು ಶೀಘ್ರ ಕೈಗೊಳ್ಳಲಿದೆ. ನಿರ್ಣಾಯಕ ಔಷಧಗಳ ದುಬಾರಿ ದರಗಳ ಬಗ್ಗೆ ಸರ್ಕಾರ ಕಳವಳ ಹೊಂದಿದೆ. ಹೀಗಾಗಿ ಅದನ್ನು ನಿಯಂತ್ರಿಸಲು ಮುಂದಾಗಿದೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

4. ITR Filing 2021-22| ಐಟಿ ರಿಟರ್ನ್‌ ಸಲ್ಲಿಕೆಯ ಗಡುವು ವಿಸ್ತರಣೆ ಪರಿಶೀಲನೆ ಇಲ್ಲ, ಕಂದಾಯ ಕಾರ್ಯದರ್ಶಿ
ಆದಾಯ ತೆರಿಗೆ ರಿಟರ್ನ್‌ ಸಲ್ಲಿಕೆಯ ಗಡುವನ್ನು ಜುಲೈ ೩೧ರಿಂದಾಚೆಗೆ ವಿಸ್ತರಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಕಂದಾಯ ಕಾರ್ಯದರ್ಶಿ ತರುಣ್‌ ಬಜಾಜ್‌ ತಿಳಿಸಿದ್ದಾರೆ. ಬಹುತೇಕ ಐಟಿ ರಿಟರ್ನ್‌ ನಿಗದಿತ ಗಡುವಿನ ಒಳಗೆ ಸಲ್ಲಿಕೆಯಾಗುವ ನಿರೀಕ್ಷೆ ಇರುವುದರಿಂದ ವಿಸ್ತರಣೆ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ. ೨೦೨೧-೨೨ರ ಸಾಲಿನ ೨.೩ ಕೋಟಿ ಐಟಿ ರಿಟರ್ನ್‌ಗಳು ಸಲ್ಲಿಕೆಯಾಗಿವೆ. ಸಂಖ್ಯೆ ಏರಿಕೆಯೂ ಆಗುತ್ತಿದೆ. ಕಳೆದ ೨೦೨೦-೨೧ರ ಸಾಲಿನಲ್ಲಿ ೫.೮೯ ಕೋಟಿ ಐಟಿಆರ್‌ ಸಲ್ಲಿಕೆಯಾಗಿದೆ. ಐಟಿ ರಿಟರ್ನ್‌ ಸಲ್ಲಿಕೆಯ ಗಡುವು ವಿಸ್ತರಣೆ ವಾಡಿಕೆ ಎಂಬಂತಾಗಿದೆ. ಹೀಗಾಗಿ ಜನ ನಿಧಾನಗತಿಯಲ್ಲಿ ರಿಟರ್ನ್‌ ಸಲ್ಲಿಸುತ್ತಿದ್ದಾರೆ. ಆದರೆ ಈಗ ದಿನಕ್ಕೆ ೧೫ ಲಕ್ಷದಿಂದ ೧೮ ಲಕ್ಷ ರಿಟರ್ನ್‌ ಸಲ್ಲಿಕೆಯಾಗುತ್ತಿದೆ. ಇದು ೨೫-೩೦ ಲಕ್ಷ ಸರಾಸರಿಗೆ ಏರಿಕೆಯಾಗಲಿದೆ ಎಂದು ತಿಳಿಸಿದರು. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

5. ಗಾಂಜಾ ಆರೋಪಿಯ ಹಿಡಿಯಲು ಹೋಗಿದ್ದ ಬೆಂಗಳೂರಿನ ಇಬ್ಬರು ಪೊಲೀಸರು ಅಪಘಾತಕ್ಕೆ ಬಲಿ
ಬೆಂಗಳೂರು ಪೊಲೀಸರು ತೆರಳುತ್ತಿದ್ದ ವಾಹನ ಆಂಧ್ರದ ಚಿತ್ತೂರು ಬಳಿ ಅಪಘಾತಕ್ಕೆ ಒಳಗಾಗಿ ಶಿವಾಜಿನಗರ ಠಾಣೆಯ ಪಿಎಸ್ಐ ಅವಿನಾಶ್, ಪೊಲೀಸ್‌ ಕಾನ್‌ಸ್ಟೇಬಲ್‌ ಅನಿಲ್‌ ಮತ್ತು ಖಾಸಗಿ ಕಾರಿನ ಚಾಲಕ ಜೋಸೆಫ್ ಮೃತಪಟ್ಟಿದ್ದಾರೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

6. ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಐವರ ಸಾವು, ನಾಲ್ವರಿಗೆ ಗಾಯ
ಭಾನಾಪುರ ಬಳಿ ನಡೆದ ರಸ್ತೆ ಅಪಘಾತದಲ್ಲಿ(Accident) ಐವರು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ ನಾಲ್ವರಿಗೆ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಜಿಲ್ಲಾಸ್ಪತ್ರೆಗೆ ಸಚಿವ ಹಾಲಪ್ಪ ಆಚಾರ್ ಮತ್ತು ಕೊಪ್ಪಳ ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಭೇಟಿ ನೀಡಿ ಗಾಯಾಳುಗಳ ಆರೋಗ್ಯ ಸ್ಥಿತಿ ವಿಚಾರಿಸಿ ಸಾಂತ್ವನ ಹೇಳಿದ್ದಾರೆ. ಕೊಪ್ಪಳ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಮುಖ್ಯ ಪೇದೆಯಾಗಿರುವ ಶರಣಪ್ಪ ಕೊಪ್ಪದ ಎಂಬುವವರ ಮೊಮ್ಮಗಳ ಬರ್ತ್‌ಡೇ ಪಾರ್ಟಿ ಇತ್ತು. ಅದೇ ಸಂಭ್ರಮದಿಂದ ಪುನಃ ಮನೆಗೆ ಹೊರಟವರಿಗೆ ಭಾನಾಪುರದ ಟಾಯ್ಸ್ ಕ್ಲಸ್ಟರ್ ಬಳಿ ಅಪರಿಚಿತ ಭಾರಿ ವಾಹನವೊಂದು ಸ್ಕಾರ್ಪಿಯೋಗೆ ಡಿಕ್ಕಿ ಹೊಡೆದಿದೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

7. ವಿಸ್ತಾರ Fact Check | ಔತಣಕೂಟದಲ್ಲಿ ರಾಮನಾಥ ಕೋವಿಂದ್‌ಗೆ ಅವಮಾನಿಸಿದರಾ ಪ್ರಧಾನಿ ಮೋದಿ?
ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರ ಅಧಿಕಾರ ಅವಧಿ ಇಂದು ಮುಕ್ತಾಯವಾಗಿದ್ದು, ಸಂಜೆ 7 ಗಂಟೆಗೆ ವಿದಾಯದ ಭಾಷಣ ಮಾಡಲಿದ್ದಾರೆ. ಹುದ್ದೆಯಿಂದ ನಿರ್ಗಮಿಸಲಿರುವ ರಾಮನಾಥ ಕೋವಿಂದ್‌ಗಾಗಿ ಶುಕ್ರವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಔತಣಕೂಟ ಏರ್ಪಡಿಸಿದ್ದರು. ಅದರಲ್ಲಿ ಬಹುತೇಕ ಎಲ್ಲ ಸಂಸದರು, ಗಣ್ಯರು ಪಾಲ್ಗೊಂಡಿದ್ದರು. ಆದರೆ ಔತಣಕೂಟ ಮುಗಿಯುತ್ತಿದ್ದಂತೆ ಕಾಂಗ್ರೆಸ್‌ ಮತ್ತು ಆಪ್‌ನ ಕೆಲವು ಮುಖಂಡರು ಒಂದು ವಿಡಿಯೊವನ್ನು ಶೇರ್‌ ಮಾಡಿಕೊಂಡು ಪ್ರಧಾನಿ ನರೇಂದ್ರ ಮೋದಿಯವರ ವರ್ತನೆಯನ್ನು ಟೀಕಿಸುತ್ತಿದ್ದಾರೆ. ಆದರೆ ಇದೇ ಸಂಪೂರ್ಣ ಸತ್ಯವಲ್ಲ. ಏನಿದು ಘಟನೆ? ವಿಸ್ತೃತ ವರದಿ ಓದಿ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

8. PM ಫಸಲ್‌ ಬಿಮಾ| ವಿಮೆ ಕಂಪನಿಗಳಿಗೆ 5 ವರ್ಷಗಳಲ್ಲಿ 40,000 ಕೋಟಿ ರೂ. ಗಳಿಕೆ, ರೈತರಿಗೆ?
ವಿಮೆ ಕಂಪನಿಗಳು ಕಳೆದ ೫ ವರ್ಷಗಳಲ್ಲಿ ಕೇಂದ್ರ ಸರ್ಕಾರದ ಬೆಳೆ ವಿಮೆ ಯೋಜನೆಯಾದ ಪಿಎಂ ಫಸಲ್‌ ಬಿಮಾದಲ್ಲಿ ೪೦,೦೦೦ ಕೋಟಿ ರೂ. ಗಳಿಕೆಯನ್ನು ತಮ್ಮದಾಗಿಸಿವೆ. ಪ್ರಧಾನಮಂತ್ರಿ ಫಸಲ್‌ ಬಿಮಾ ಯೋಜನೆಯನ್ನು (PMFBY) ೨೦೧೬-೧೭ರಿಂದ ಆರಂಭಿಸಲಾಗಿದೆ. ಅಲ್ಲಿಂದ ೨೦೨೧-೨೨ರ ತನಕದ ಅವಧಿಯಲ್ಲಿ ವಿಮೆ ಕಂಪನಿಗಳು ೪೦,೦೦೦ ಕೋಟಿ ರೂ.ಗಳನ್ನು ಗಳಿಸಿವೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಅವರು ರಾಜ್ಯ ಸಭೆಗೆ ತಿಳಿಸಿದ್ದಾರೆ.‌ (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

9. Plastic Ban | ಹುಬ್ಬಳ್ಳಿಯಲ್ಲಿ ಆಗಿಲ್ಲ ಪ್ಲಾಸ್ಟಿಕ್‌ ಬ್ಯಾನ್‌; ನಡೆಯುತ್ತಿದೆ ಅಂತಾರಾಜ್ಯ ಕೊರಿಯರ್‌ ಪ್ಲ್ಯಾನ್‌!
ಏಕಬಳಕೆ ಪ್ಲಾಸ್ಟಿಕ್‌ ಮಾರಾಟಕ್ಕೆ ದೇಶಾದ್ಯಂತ ನಿಷೇಧ ಹೇರಲಾಗಿದ್ದರೂ ಹುಬ್ಬಳ್ಳಿಯಲ್ಲಿ ಮಾತ್ರ ಅವ್ಯಾಹತವಾಗಿ ನಡೆಯುತ್ತಿದೆ. ಈ ಮಾದರಿಯ ಪ್ಲಾಸ್ಟಿಕ್‌ ಬಳಕೆ ಮತ್ತು ಉತ್ಪಾದನೆಗೆ (Plastic Ban) ಕೇಂದ್ರ ಸರ್ಕಾರ ಬ್ರೇಕ್‌ ಹಾಕಿದ ಮೇಲೂ ಇಲ್ಲಿ ಕಾಣಿಸಿಕೊಳ್ಳುವುದರ ಹಿಂದೆ ದೊಡ್ಡ ಜಾಲವೇ ಇದೆ ಎಂಬ ಅಸಲಿ ಕಹಾನಿ ಈಗ ಬಹಿರಂಗವಾಗಿದೆ. ಕಠಿಣ ಕಾನೂನಿನ ಮಧ್ಯೆಯೂ ರಾಜಾರೋಷವಾಗಿ ಪ್ಲಾಸ್ಟಿಕ್‌ ದಂಧೆ ನಡೆಯುತ್ತಿರುವ ಬಗ್ಗೆ ಮಾಹಿತಿ ತಿಳಿಯಲು “ವಿಸ್ತಾರ ನ್ಯೂಸ್‌” ಮುಂದಾದಾಗ ಆತಂಕಕಾರಿ ವಿಷಯವೊಂದು ಬಹಿರಂಗವಾಗಿದ್ದು, ಹೊರ ರಾಜ್ಯಗಳಿಂದ ಕೊರಿಯರ್‌ ಮೂಲಕ ಪ್ಲಾಸ್ಟಿಕ್‌ ಉತ್ಪನ್ನಗಳು ರಾಜ್ಯವನ್ನು ತಲುಪುತ್ತಿವೆ ಎಂಬ ಅಂಶ ಬೆಳಕಿಗೆ ಬಂದಿದೆ. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

10. ಸೇನಾಪಡೆಗಳ ಸಮನ್ವಯಕ್ಕೆ ಜಂಟಿ ಥಿಯೇಟರ್ ಕಮಾಂಡ್‌ ಘೋಷಿಸಿದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್
ಸಶಸ್ತ್ರ ಸೇನಾಪಡೆಗಳ ನಡುವೆ ಸಮನ್ವಯಕ್ಕೆ ಜಂಟಿ ಥಿಯೇಟರ್ ಕಮಾಂಡ್‌ ವ್ಯವಸ್ಥೆಯನ್ನು ರಚಿಸಲಾಗುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ. ಭಾರತೀಯ ಸಶಸ್ತ್ರಪಡೆಯ ಹುತಾತ್ಮರಿಗೆ ಗೌರವ ಸಲ್ಲಿಸಲು ಜಮ್ಮು ಕಾಶ್ಮೀರ್‌ ಪೀಪಲ್ಸ್‌ ಫೋರಮ್‌ ಆಯೋಜಿಸಿದ್ದ ೨೩ನೇ ಕಾರ್ಗಿಲ್‌ ವಿಜಯ ದಿವಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ವಿಷಯ ತಿಳಿಸಿದರು. (ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ)

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Renuka Swamy Murder : ನಟ ದರ್ಶನ್ ಹಲ್ಲೆ ಮಾಡುವುದನ್ನು ವಿಡಿಯೊ ಮಾಡಿದ್ದ ಮೂವರು ಅರೆಸ್ಟ್‌; ಸಿಕ್ಕೇ ಬಿಡ್ತಾ ದೊಡ್ಡ ಸಾಕ್ಷಿ!

ರೇಣುಕಾಸ್ವಾಮಿ ಕೊಲೆ (Renuka Swamy Murder) ಕೇಸ್‌ನಲ್ಲಿ ನಟ ದರ್ಶನ್ (Actor Darshan) ಗ್ಯಾಂಗ್‌ ಬಂಧಿತರಾಗಿದ್ದಾರೆ. ಇದೀಗ ದರ್ಶನ್‌ ಹಲ್ಲೆ ನಡೆಸಿದ್ದನ್ನು ವಿಡಿಯೋ ಮಾಡಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

By

Renuka swamy Murder case
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renuka Swamy Murder) ಸಂಬಂಧಿಸಿದ್ದಂತೆ ಪೊಲೀಸರ ತನಿಖೆಯು ತೀವ್ರಗೊಳ್ಳುತ್ತಿದೆ. ಈ ನಡುವೆ ನಟ ದರ್ಶನ್ ರೇಣುಕಾಸ್ವಾಮಿಗೆ ಹಲ್ಲೆ ನಡೆಸಿದಾಗ ಅದನ್ನೂ ವಿಡಿಯೋ ಮಾಡಿಕೊಂಡಿದ್ದ ಮೂವರು ಹುಡುಗರನ್ನು ವಶಕ್ಕೆ ಪಡೆಯಲಾಗಿದೆ.

ಹಲ್ಲೆ ವಿಡಿಯೋವನ್ನು ಬೇರೆ ಯಾರಿಗೋ ಫಾರ್ವರ್ಡ್ ಮಾಡಿದ್ದು, ಇದಾದ ನಂತರವೇ ಕೊಲೆ ಪ್ರಕರಣ ಬೆಳಕಿಗೆ ಬಂದಿತ್ತು. ಕೊಲೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಮೂವರು ನಾಪತ್ತೆಯಾಗಿದ್ದರು. ಗುರುವಾರ ಮಧ್ಯಾಹ್ನ ಮೂವರನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ವಿಡಿಯೋ ಮಾಡಿದ್ದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಮೊಬೈಲ್ ಪರಿಶೀಲನೆ ವೇಳೆ ವಿಡಿಯೋ ಡಿಲೀಟ್ ಮಾಡಿರುವುದು ತಿಳಿದುಬಂದಿದೆ. ಸದ್ಯ ಪೊಲೀಸರು ವಿಡಿಯೋ ರಿಟ್ರೀವ್ ಪ್ರಕ್ರಿಯೆ ನಡೆಸುತ್ತಿದ್ದಾರೆ. ವಿಡಿಯೊ ರಿಟ್ರೀವ್ ಆದರೆ ಕೇಸ್‌ಗೆ ಮತ್ತೊಂದು ಮಹತ್ವದ ಸಾಕ್ಷ್ಯ ಆಗಲಿದೆ.

ಇದನ್ನೂ ಓದಿ: Darshan Arrested: ದರ್ಶನ್‌ ಸೇರಿ ನಾಲ್ವರು ಪೊಲೀಸ್‌ ಕಸ್ಟಡಿಗೆ, ಪವಿತ್ರಾ ಗೌಡ ಸೇರಿ 10 ಮಂದಿಗೆ ಜೈಲು

ದರ್ಶನ್‌ ಗ್ಯಾಂಗ್‌ನಿಂದ ಪೊಲೀಸ್‌ ಮೇಲೂ ಹಲ್ಲೆ! ಹೊರಬರ್ತಿದೆ ರಾಕ್ಷಸ ಪಡೆಯ ಒಂದೊಂದೇ ಕರಾಳ ಕೃತ್ಯ

ಮಂಡ್ಯ: ಬೀಭತ್ಸವಾಗಿ ರೇಣುಕಾಸ್ವಾಮಿ ಕೊಲೆ (Renuka Swamy Murder) ನಡೆಸಿದ ನಟ ದರ್ಶನ್ (Actor Darshan) ಗ್ಯಾಂಗ್‌ ಪೊಲೀಸರನ್ನೂ ಬಿಟ್ಟಿಲ್ಲ. ಪೊಲೀಸ್‌ ಕಾನ್‌ಸ್ಟೇಬಲ್‌ (Police Constable) ಮೇಲೂ ದರ್ಪ ಮೆರೆದಿರುವ ಡಿ ಬಾಸ್‌ ಗ್ಯಾಂಗ್‌, ತೀವ್ರ ಹಲ್ಲೆ (Assault case) ನಡೆಸಿರುವುದು ಬೆಳಕಿಗೆ ಬಂದಿದೆ. ಗಾಯಗೊಂಡ ಪೊಲೀಸ್‌ ಪೇದೆ ಸರ್ಕಾರಿ ಆಸ್ಪತ್ರೆಯಲ್ಲಿ ಇದಕ್ಕಾಗಿ ಚಿಕಿತ್ಸೆ ಪಡೆದ ದಾಖಲೆಯೂ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ.

ಇದು ನಡೆದಿರುವುದು ಬೇರೆಲ್ಲೂ ಅಲ್ಲ, ಮದ್ದೂರು ಶಾಸಕರ ಮನೆಯಲ್ಲಿಯೇ ಹಲ್ಲೆ ನಡೆದಿತ್ತು ಎನ್ನಲಾಗಿದೆ. ಶಾಸಕ ಕದಲೂರು ಉದಯ್ ಅವರ ಗನ್ ಮ್ಯಾನ್ ಆಗಿದ್ದ ಡಿಎಆರ್ ಪೇದೆ ನಾಗೇಶ್ ಎಂಬವರ ಮೇಲೆ ಹಲ್ಲೆ ನಡೆಸಲಾಗಿತ್ತು. ಮದ್ದೂರಿನಲ್ಲಿ ದರ್ಶನ್‌ ಲೋಕಸಭಾ ಚುನಾವಣೆ ಕಣದ ಪ್ರಚಾರಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ.

ಏಪ್ರಿಲ್ 22ರಂದು ಮದ್ದೂರು ಕ್ಷೇತ್ರದಲ್ಲಿ ಸ್ಟಾರ್ ಚಂದ್ರು ಪರ ದರ್ಶನ್ ಕ್ಯಾಂಪೇನ್ ನಡೆದಿತ್ತು. ಆ ವೇಳೆ ಗನ್ ಮ್ಯಾನ್ ನಾಗೇಶ್ ಜೊತೆ ದರ್ಶನ್ ಪಟಾಲಂ ಗಲಾಟೆ ತೆಗೆದಿದೆ. ಮುಖಂಡರನ್ನು ಹತ್ತಿರಕ್ಕೆ ಬಿಟ್ಟುಕೊಳ್ಳುವ ವಿಚಾರದಲ್ಲಿ ಡಿ ಗ್ಯಾಂಗ್‌ಗ ಲಕ್ಷ್ಮಣ್, ನಾಗರಾಜು ಹಾಗೂ ಇತರರು ಜಗಳ ತೆಗೆದಿದ್ದರು. ನಂತರ ಇದೇ ಜಗಳ ಮುಂದುವರೆಸಿ ಕದಲೂರು ಉದಯ್ ಮನೆ ಮುಂದೆ ಪೇದೆ ನಾಗೇಶ್‌ಗೆ ಹಲ್ಲೆ ನಡೆಸಿದ್ದರು.

ಹಲ್ಲೆ ಮಾಡುವುದರೊಂದಿಗೆ, ʼಪೊಲೀಸರು ನಮ್ಮನ್ನೂ ಏನೂ ಮಾಡಲು ಆಗಲ್ಲ, ನಮ್ಮತ್ರ ಏನೂ ಕಿತ್ಕೊಳೋಕೆ ಆಗಲ್ಲʼ ಎಂದು ಧಮಕಿ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಕುರಿತು ಪೇದೆ ನಾಗೇಶ್ ಕೆಸ್ತೂರು ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದರು. ನಂತರ ರಾಜಿ ಸಂಧಾನದ ಮೂಲಕ ನಾಗೇಶರನ್ನು ಶಾಸಕ ಉದಯ್ ಮರಳಿ ಕಳುಹಿಸಿದ್ದರು.

ಇದಾದ ಬಳಿಕ ನೊಂದಿದ್ದ ನಾಗೇಶ್‌, ಶಾಸಕ ಉದಯ್ ಗನ್‌ ಮ್ಯಾನ್ ಕೆಲಸದಿಂದ ಹೊರಬಂದಿದ್ದರು. ಇದೀಗ ಡಿಎಆರ್ ತುಕಡಿಯಲ್ಲಿ ನಾಗೇಶ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಲ್ಲೆ ನಡೆದ ಬಳಿಕ ನಾಗೇಶ್‌ ಮದ್ದೂರಿನ ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನೂ ಪಡೆದಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮೈಸೂರು

Mysuru News : ಪತ್ನಿ ಶೀಲ ಶಂಕಿಸಿ ಬೆಂಕಿ ಹಚ್ಚಿ ಸುಟ್ಟು ಹಾಕಿದವನಿಗೆ ಜೀವಾವಧಿ ಶಿಕ್ಷೆ

Mysuru News : ಪತ್ನಿಯ ಶೀಲ ಶಂಕಿಸಿದ ಪಾಪಿ ಪತಿಯೊಬ್ಬ ಸ್ಯಾನಿಟೈಜರ್ ಸುರಿದು ಬೆಂಕಿ ಹಚ್ಚಿದ್ದ. ಗಂಭೀರ ಗಾಯಗೊಂಡಿದ್ದ ಮಹಿಳೆ ನರಳಾಡಿ (Murder case) ಮೃತಪಟ್ಟಿದ್ದಳು. ಇದೀಗ ಕೃತ್ಯ ನಡೆಸಿದ ಆರೋಪಿಗೆ 4 ವರ್ಷದ ನಂತರ ಜೀವಾವಧಿ ಶಿಕ್ಷೆ (Life imprisonment) ವಿಧಿಸಿ ನ್ಯಾಯಾಲಯವು ಆದೇಶ ಹೊರಡಿಸಿದೆ.

VISTARANEWS.COM


on

By

Mysuru News
ಸಾಂದರ್ಭಿಕ ಚಿತ್ರ
Koo

ಮೈಸೂರು: ಪತ್ನಿ ಶೀಲ ಶಂಕಿಸಿ ಕೊಲೆ (Murder Case) ಮಾಡಿದ (Mysuru News) ಆರೋಪಿಗೆ ಜೀವಾವಧಿ ಶಿಕ್ಷೆ (Life imprisonment) ವಿಧಿಸಿ ಮೈಸೂರಿನ 5ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ರವಿ ಜೀವಾವಧಿ ಶಿಕ್ಷೆಗೆ ಒಳಗಾದವನು. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದೇಬೂರು ಗ್ರಾಮದ ನಿವಾಸಿಯಾದ ರವಿ ಎಂಬಾತ ಪತ್ನಿ ಅಮುದಾಳ ಶೀಲ ಶಂಕಿಸಿ ಕೊಲೆ ಮಾಡಿದ್ದ.

ಇದೀಗ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿ ರವಿಗೆ ಐಪಿಸಿ ಸೆಕ್ಷನ್ 498(ಎ ) ಪ್ರಕಾರ 2 ವರ್ಷ ಕಠಿಣ ಶಿಕ್ಷೆ ಒಂದು ಸಾವಿರ ದಂಡ ಹಾಗೂ ಐಪಿಸಿ ಸೆಕ್ಷನ್ 302 ಪ್ರಕಾರ ಜೀವಾವಧಿ ಶಿಕ್ಷೆ ಹಾಗೂ ಐದು ಸಾವಿರ ದಂಡ ಹಾಕಿ ಆದೇಶಿಸಿದೆ. ಮೈಸೂರು 5ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಗುರುರಾಜ್ ಸೋಮಕ್ಕಳವರ್ ತೀರ್ಪು ನೀಡಿದ್ದಾರೆ.

ಮಕ್ಕಳಿಬ್ಬರು ಅನಾಥ

ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದೇಬೂರು ಗ್ರಾಮದ ಸುಬ್ಬ ಅಲಿಯಾಸ್‌ ರವಿ 10 ವರ್ಷದ ಹಿಂದೆ ನಂಜನಗೂಡು ಪಟ್ಟಣದ ರಾಜಾಜಿ ಕಾಲೋನಿಯ ನಂಜುಂಡ ಅವರ ಮಗಳು ಅಮುದಾರವರನ್ನು ಮದುವೆ ಆಗಿದ್ದ. ಈ ದಂಪತಿಗೆ 9 ಹಾಗೂ 6 ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದರು.

ಮದುವೆಯಾದ 2-3 ವರ್ಷಕ್ಕೆ ಆರೋಪಿ ರವಿ ತನ್ನ ವಾರೆಸೆ ಶುರು ಮಾಡಿದ್ದ. ಅಮುದಾಳಿಗೆ ನೀನು ಬೇರೆಯವರ ಜತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದೀಯಾ ಎಂದು ಶೀಲ ಶಂಕಿಸಿ ಪ್ರತಿದಿನ ಕುಡಿದು ಬಂದು ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದ.

ಹೀಗೆ ಕಳೆದ 2020ರ ಡಿಸೆಂಬರ್‌ 6ರಂದು ಸಂಜೆ 4-30ರ ಸುಮಾರಿಗೆ ಕುಡಿದು ಬಂದ ರವಿ, ಅಮುದಾಳೊಂದಿಗೆ ಜಗಳ ತೆಗೆದಿದ್ದ. ಈ ವೇಳೆ ರವಿಗೆ ಊಟ ಬಡಿಸುತ್ತಿದ್ದಾಗ ಅಮುದಾ ಮೇಲೆ ಸ್ಯಾನಿಟೈಜರ್ ಸುರಿದು ಬೆಂಕಿ ಹಚ್ಚಿದ್ದ. ಸುಟ್ಟ ಗಾಯಗಳಿಂದ ನರಳುತ್ತಿದ್ದ ಆಮುದಾಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಮುದಾ ಮೃತಪಟ್ಟಿದ್ದಳು.

ಇದನ್ನೂ ಓದಿ: Hassan Shoot Out : ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ; ಇಬ್ಬರ ಹತ್ಯೆಗೈದ ಪಾತಕಿಗಳು!

ಮೃತಳ ಸಹೋದರ ನೀಡಿದ ದೂರಿನ ಆಧಾರದ ಮೇರೆಗೆ ಆರೋಪಿ ರವಿ ವಿರುದ್ಧ ಕಲಂ 498(ಎ), 302 ಐಪಿಸಿ ರೀತ್ಯಾ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ತನಿಖೆ ಮಾಡಿ ಅಂದಿನ ಪೊಲೀಸ್ ವೃತ್ತ ನಿರೀಕ್ಷಕರಾದ ಲಕ್ಷ್ಮೀಕಾಂತ ತಳವಾರ್‌ರವರು ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಈ ಪ್ರಕರಣದಲ್ಲಿ ವಿಚಾರಣೆ ನಡೆಸಿದ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಗುರುರಾಜ್ ಸೋಮಕ್ಕಳವರ್, ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಆರೋಪಿಯು ಅಪರಾಧ ಎಸಗಿರುವುದು ಸಾಬೀತಾಗಿದೆ. ಹೀಗಾಗಿ ಆರೋಪಿಗೆ ಕಲಂ 498(ಎ) ಐಪಿಸಿ ಅಡಿಯ ಅಪರಾಧಕ್ಕೆ 2 ವರ್ಷ ಕಠಿಣ ಶಿಕ್ಷೆ ಮತ್ತು ರೂ.1.000/- ದಂಡವನ್ನು ವಿಧಿಸಿದ್ದು ಮತ್ತು ಕಲಂ 302 ಐಪಿಸಿ ಅಡಿಯ ಅಪರಾಧಕ್ಕೆ ಜೀವಾವಧಿ ಶಿಕ್ಷೆ ಮತ್ತು ರೂ.5,000/- ದಂಡವನ್ನು ವಿಧಿಸಿ ತೀರ್ಪು ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Shivamogga News: ಶಿವಮೊಗ್ಗದಲ್ಲಿ ಜೂ.22ರಂದು ಯುವ ಸ್ಫೂರ್ತಿ ಸಂವಾದ ಕಾರ್ಯಕ್ರಮ

Shivamogga News: ಚಿಕ್ಕಮಗಳೂರಿನ ಯುವ ಸ್ಫೂರ್ತಿ ಅಕಾಡೆಮಿ, ವಿಸ್ತಾರ ನ್ಯೂಸ್‌ ಹಾಗೂ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜು, ಗಾಜನೂರು ಇವರ ಸಹಯೋಗದಲ್ಲಿ ಜೂ.22ರಂದು ಶನಿವಾರ ಬೆಳಗ್ಗೆ 10 ಗಂಟೆಗೆ ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ಯುವ ಸ್ಫೂರ್ತಿ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ.

VISTARANEWS.COM


on

Yuva spoorthi samvaada programme on June 22 in Shivamogga
Koo

ಶಿವಮೊಗ್ಗ: ಚಿಕ್ಕಮಗಳೂರಿನ ಯುವ ಸ್ಫೂರ್ತಿ ಅಕಾಡೆಮಿ, ವಿಸ್ತಾರ ನ್ಯೂಸ್‌ ಹಾಗೂ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜು ಗಾಜನೂರು ಇವರ ಸಹಯೋಗದಲ್ಲಿ ಜೂ.22ರಂದು ಶನಿವಾರ ಬೆಳಗ್ಗೆ 10 ಗಂಟೆಗೆ ಯುವ ಸ್ಫೂರ್ತಿ ಸಂವಾದ ಕಾರ್ಯಕ್ರಮ (Shivamogga News) ಏರ್ಪಡಿಸಲಾಗಿದೆ.

ಇದನ್ನೂ ಓದಿ: Working Hours: ಅತಿ ಹೆಚ್ಚು ಕೆಲಸದ ಸಮಯ ಹೊಂದಿರುವ ದೇಶಗಳಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ?

ಜಿಲ್ಲೆಯ ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಉದ್ಘಾಟಿಸುವರು. ಶಿವಮೊಗ್ಗದ ಶ್ರೀ ದೊಡ್ಡಮ್ಮ ದೇವಿ ಉಪಾಸಕರಾದ ಶ್ರೀ ಸಿದ್ದಪ್ಪಾಜಿ ದಿವ್ಯ ಸಾನ್ನಿಧ್ಯ ವಹಿಸುವರು. ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಲೋಕಪ್ಪ ವಿ. ದಳವಾಯಿ ಅಧ್ಯಕ್ಷತೆ ವಹಿಸುವರು. ಚಿಕ್ಕಮಗಳೂರಿನ ಯುವ ಸ್ಫೂರ್ತಿ ಅಕಾಡೆಮಿಯ ಮುಖ್ಯಸ್ಥ ಸುಂದರೇಶ್‌ ಸಿ.ಬಿ. ಪ್ರಾಸ್ತಾವಿಕವಾಗಿ ಮಾತನಾಡುವರು.

ಇದನ್ನೂ ಓದಿ: CM Siddaramaiah: ಸರ್ಕಾರಿ ನೌಕರರಿಗೆ ಬಂಪರ್‌ ಸುದ್ದಿ: 27% ವೇತನ ಹೆಚ್ಚಳಕ್ಕೆ ಮುಂದಾದ ಸಿಎಂ

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗೋಪಾಲಕೃಷ್ಣ ಬಿ., ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸ್ನೇಹಲ್‌ ಸುಧಾಕರ್‌ ಲೋಖಂಡೆ, ಶಿವಮೊಗ್ಗ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್‌ ಜಿ.ಕೆ., ಹೈಕೋರ್ಟ್‌ ಹಾಗೂ ಸುಪ್ರೀ ಕೋರ್ಟ್‌ನ ನ್ಯಾಯವಾದಿ ವಿಕ್ರಂ ಪಡ್ಕೆ ಪಾಲ್ಗೊಳ್ಳುವರು.

Continue Reading

ಕರ್ನಾಟಕ

Darshan Arrested: ದರ್ಶನ್‌ ಸೇರಿ ನಾಲ್ವರು ಪೊಲೀಸ್‌ ಕಸ್ಟಡಿಗೆ, ಪವಿತ್ರಾ ಗೌಡ ಸೇರಿ 10 ಮಂದಿಗೆ ಜೈಲು

Darshan Arrested: ಪೊಲೀಸರ ಪರವಾಗಿ ಎಸ್‌ಪಿಪಿ ಪ್ರಸನ್ನಕುಮಾರ್‌ ವಾದ ಮಂಡಿಸಿದರು. “ಕೊಲೆ ಪ್ರಕರಣದ ತನಿಖೆ ವೇಳೆ ಹಲವು ಮಾಹಿತಿ ಲಭ್ಯವಾಗಿದೆ. ಪ್ರಕರಣದ ಕುರಿತು ಆರೋಪಿಗಳ ವಿಚಾರಣೆಯ ಅಗತ್ಯವಿದೆ. ಹಾಗಾಗಿ, ನ್ಯಾಯಾಲಯವು ಇನ್ನೂ ನಾಲ್ಕು ದಿನ ಪೊಲೀಸ್‌ ಕಸ್ಟಡಿಗೆ ನೀಡಬೇಕು” ಎಂಬುದಾಗಿ ಮನವಿ ಮಾಡಿದರು. ಅದರಂತೆ ನ್ಯಾಯಾಲಯವು ದರ್ಶನ್‌ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ, 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿದರು.

VISTARANEWS.COM


on

Darshan Arrested
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಹತ್ಯೆ (Renukaswamy Murder) ಪ್ರಕರಣದಲ್ಲಿ ದರ್ಶನ್‌ ಆ್ಯಂಡ್‌ಗೆ ಗ್ಯಾಂಗ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಗುರುವಾರ ಪೊಲೀಸ್‌ ಕಸ್ಟಡಿ ಅವಧಿ ಮುಗಿದ ಕಾರಣ ಎ1 ಆರೋಪಿ ಪವಿತ್ರಾ ಗೌಡ, ಎ2 ದರ್ಶನ್‌ ಸೇರಿ 13 ಆರೋಪಿಗಳನ್ನು ಗುರುವಾರ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಎ 1 ಪವಿತ್ರಾ ಗೌಡ ಸೇರಿ 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ (Darshan Arrested) ವಹಿಸಿದ ಕಾರಣ ಅವರನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗುತ್ತದೆ. ಇನ್ನು ದರ್ಶನ್‌ ಸೇರಿ ನಾಲ್ವರು ಆರೋಪಿಗಳನ್ನು 2 ದಿನ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.

ಪೊಲೀಸರ ಪರವಾಗಿ ಎಸ್‌ಪಿಪಿ ಪ್ರಸನ್ನಕುಮಾರ್‌ ವಾದ ಮಂಡಿಸಿದರು. “ಕೊಲೆ ಪ್ರಕರಣದ ತನಿಖೆ ವೇಳೆ ಹಲವು ಮಾಹಿತಿ ಲಭ್ಯವಾಗಿದೆ. ಪ್ರಕರಣದ ಕುರಿತು ಆರೋಪಿಗಳ ವಿಚಾರಣೆಯ ಅಗತ್ಯವಿದೆ. ಹಾಗಾಗಿ, ನ್ಯಾಯಾಲಯವು ಇನ್ನೂ ನಾಲ್ಕು ದಿನ ಪೊಲೀಸ್‌ ಕಸ್ಟಡಿಗೆ ನೀಡಬೇಕು” ಎಂಬುದಾಗಿ ಮನವಿ ಮಾಡಿದರು. ಇದಕ್ಕೆ ದರ್ಶನ್‌ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. “ಬಹುತೇಕ ವಿಚಾರಣೆ ಮುಗಿದಿದೆ. ಹಾಗಾಗಿ, ಪೊಲೀಸ್‌ ಕಸ್ಟಡಿಗೆ ನೀಡುವ ಅಗತ್ಯವಿಲ್ಲ” ಎಂದರು. ಆದರೆ, “ರೇಣುಕಾಸ್ವಾಮಿ ಮೊಬೈಲ್‌ ರಿಕವರಿ ಆಗಿಲ್ಲ. ಅದನ್ನು ಪತ್ತೆ ಹಚ್ಚಬೇಕಿದೆ. ಪವಿತ್ರಾ ಗೌಡ ಅವರನ್ನು ನ್ಯಾಯಾಂಗ ಬಂಧನಕ್ಕೆ ಹಾಗೂ ದರ್ಶನ್‌ ಸೇರಿ ಆರು ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಬೇಕು” ಎಂದು ಮನವಿ ಮಾಡಿದರು. ಇದಕ್ಕೆ ನ್ಯಾಯಾಧೀಶರು ಸಮ್ಮತಿ ಸೂಚಿಸಿದರು. ದರ್ಶನ್, ವಿನಯ್, ಪ್ರದೋಷ್ ಹಾಗೂ ಧನರಾಜ್‌ ಅವರನ್ನು ಪೊಲೀಸ್‌ ಕಸ್ಟಡಿಗೆ ನೀಡಿದರು.

Actor Darshan case reaction by umapathy d boss Fans violent

ದರ್ಶನ್‌ ಸೇರಿ ಆರು ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಬೇಕು ಎಂದು, ಪವಿತ್ರಾ ಗೌಡ ಸೇರಿ 7 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಬೇಕು ಎಂಬುದಾಗಿ ಪೊಲೀಸರು ಎರಡು ಪ್ರತ್ಯೇಕ ರಿಮ್ಯಾಂಡ್‌ ಅಪ್ಲಿಕೇಷನ್‌ ಸಲ್ಲಿಸಿದ್ದರು. ಅದರಂತೆ ಎಸ್‌ಪಿಪಿ ಪ್ರಸನ್ನಕುಮಾರ್‌ ಅವರು ವಾದ ಮಂಡಿಸಿದರು. ಕೊನೆಗೆ ನ್ಯಾಯಾಲಯವು ಎಸ್‌ಪಿಪಿ ಅವರ ವಾದವನ್ನು ಪುರಸ್ಕರಿಸಿ ದರ್ಶನ್, ವಿನಯ್, ಪ್ರದೋಷ್ ಹಾಗೂ ಧನರಾಜ್‌ ಪೊಲೀಸ್‌ ಕಸ್ಟಡಿಯನ್ನು ಮುಂದುವರಿಸಿದರು.

ಪವಿತ್ರಾ ಗೌಡ ಸೇರಿ 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, ಇವರನ್ನು ಇಂದೇ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಮಾಡಲಾಗುತ್ತದೆ. ಪವಿತ್ರಾ ಗೌಡ, ಪವನ್, ರಾಘವೇಂದ್ರ, ನಂದೀಶ್, ಜಗದೀಶ್, ಅನುಕುಮಾರ್, ನಾಗರಾಜ್, ಲಕ್ಷ್ಮಣ್, ದೀಪಕ್, ಕೇಶವ್ , ರವಿ ಕಾರ್ತಿಕ್‌ ಜೈಲುಪಾಲಾಗಲಿದ್ದಾರೆ.

ಪೊಲೀಸ್ ಕಸ್ಟಡಿ ವೇಳೆ ಆರೋಪಿಗಳ ಸ್ವ ಇಚ್ಛಾ ಹೇಳಿಕೆ, ಜೃತ್ಯ ನಡೆಸಿದಾಗ ಧರಿಸಿದ್ದ ಬಟ್ಟೆಗಳು, ಮೊಬೈಲುಗಳು, ಸ್ಥಳ ಮಹಜರು ಸೇರಿ ಹಲವು ಮಹತ್ವದ ಸಾಕ್ಷ್ಯಗಳನ್ನು ಪೊಲೀಸರು ಕಲೆಹಾಕಿದ್ದಾರೆ. ಈಗಾಗಲೇ ಪ್ರಕರಣ ಸಂಬಂಧ ಒಂಬತ್ತು ದಿನಗಳ ಕಾಲ ದರ್ಶನ್‌ ಅಲಿಯಾಸ್‌ ಡಿ ಬಾಸ್‌ ಪೊಲೀಸ್ ಕಸ್ಟಡಿಯಲ್ಲಿ ಕಳೆದಿದ್ದಾನೆ.

ಜೂನ್‌ 8ರಂದು ರೇಣುಕಾಸ್ವಾಮಿ ಕೊಲೆ ನಡೆದಿತ್ತು. ಜೂನ್ 11ರಂದು ಹತ್ಯೆ ಸಂಬಂಧ ದರ್ಶನ್‌ನನ್ನು ಮೈಸೂರಿನಲ್ಲಿ ವಶಕ್ಕೆ ಪಡೆದು ಬಂಧಿಸಲಾಗಿತ್ತು. ಜೈಲಿಗೆ ಕಳಿಸಿದರೆ ಎರಡನೇ ಬಾರಿಗೆ ಪರಪ್ಪನ ಅಗ್ರಹಾರ ಜೈಲಿಗೆ ನಟ ದರ್ಶನ್ ಹೋದಂತಾಗುತ್ತದೆ. 2011ರಲ್ಲಿ ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿ ನಟ ದರ್ಶನ್‌ ಜೈಲು ಸೇರಿದ್ದ.

ಇದನ್ನೂ ಓದಿ: Actor Darshan: ಘಟಾನುಘಟಿಗಳ ಕಲಾವಿದರ ಜತೆ ʻದರ್ಶನ್‌ʼ ಕಿರಿಕ್‌ ಒಂದೆರಡಲ್ಲ; ದೂರಾದವರೆಷ್ಟು ಮಂದಿ?

Continue Reading
Advertisement
Renuka swamy Murder case
ಬೆಂಗಳೂರು4 mins ago

Renuka Swamy Murder : ನಟ ದರ್ಶನ್ ಹಲ್ಲೆ ಮಾಡುವುದನ್ನು ವಿಡಿಯೊ ಮಾಡಿದ್ದ ಮೂವರು ಅರೆಸ್ಟ್‌; ಸಿಕ್ಕೇ ಬಿಡ್ತಾ ದೊಡ್ಡ ಸಾಕ್ಷಿ!

International Yoga Day 2024
ಫ್ಯಾಷನ್14 mins ago

International Yoga Day 2024: ಯೋಗಾಭ್ಯಾಸಕ್ಕೆ ಪುರುಷರ ಉಡುಗೆಗಳು ಹೀಗಿರಬೇಕು

Amithab Bacchan
Latest27 mins ago

Amithab Bacchan :14ನೇ ವರ್ಷಕ್ಕೆ ಕಾಲಿಟ್ಟ ʼರಾವಣ್ʼ ಚಿತ್ರ; ಮಗನನ್ನು ಹೊಗಳಿ ಸೊಸೆಯನ್ನು ನಿರ್ಲಕ್ಷಿಸಿದ ಅಮಿತಾಭ್!

BCCI
ಕ್ರೀಡೆ29 mins ago

BCCI: ಟೀಮ್​ ಇಂಡಿಯಾದ ತವರಿನ ಕ್ರಿಕೆಟ್​ ಸರಣಿಯ ವೇಳಾಪಟ್ಟಿ ಪ್ರಕಟ

Amitabh Bachchan touched Aswini Dutt feet
ಬಾಲಿವುಡ್32 mins ago

Amitabh Bachchan: ಅಶ್ವಿನಿ ದತ್ ಕಾಲಿಗೆ ನಮಸ್ಕರಿಸಿದ ಅಮಿತಾಭ್‌; ʻಬಿಗ್‌ ಬಿʼ ಕೊಂಡಾಡಿದ ರಾಮ್ ಗೋಪಾಲ್ ವರ್ಮಾ!

Citroen C3 Aircross
ಪ್ರಮುಖ ಸುದ್ದಿ37 mins ago

Citroen C3 Aircross : ಧೋನಿ ಹೆಸರಿನಲ್ಲಿ ಬಿಡುಗಡೆಯಾಗಿದೆ ಈ ಕಾರು, ಕೇವಲ 100 ಕಾರಷ್ಟೇ ಉತ್ಪಾದನೆ

Mysuru News
ಮೈಸೂರು39 mins ago

Mysuru News : ಪತ್ನಿ ಶೀಲ ಶಂಕಿಸಿ ಬೆಂಕಿ ಹಚ್ಚಿ ಸುಟ್ಟು ಹಾಕಿದವನಿಗೆ ಜೀವಾವಧಿ ಶಿಕ್ಷೆ

Yuva spoorthi samvaada programme on June 22 in Shivamogga
ಕರ್ನಾಟಕ44 mins ago

Shivamogga News: ಶಿವಮೊಗ್ಗದಲ್ಲಿ ಜೂ.22ರಂದು ಯುವ ಸ್ಫೂರ್ತಿ ಸಂವಾದ ಕಾರ್ಯಕ್ರಮ

IIT Bombay
Latest57 mins ago

IIT Bombay: ಹಿಂದೂ ದೇವರ ಅವಹೇಳನಕಾರಿ ನಾಟಕ; ಐಐಟಿ ವಿದ್ಯಾರ್ಥಿಗಳಿಗೆ ದಂಡ

Manish Pandey
ಕ್ರೀಡೆ1 hour ago

Manish Pandey: ಕ್ರಿಕೆಟಿಗ ಮನೀಷ್​ ಪಾಂಡೆ ದಾಂಪತ್ಯದಲ್ಲಿ ಬಿರುಕು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು3 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು3 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ4 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ4 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ4 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ5 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ6 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ6 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌