Rajkot Test Record: ರಾಜ್​ಕೋಟ್​ನಲ್ಲಿ ಯಾರು ಫೇವರಿಟ್​; ಭಾರತ-ಇಂಗ್ಲೆಂಡ್​ ​ಟೆಸ್ಟ್​ ದಾಖಲೆ ಹೇಗಿದೆ? - Vistara News

ಕ್ರೀಡೆ

Rajkot Test Record: ರಾಜ್​ಕೋಟ್​ನಲ್ಲಿ ಯಾರು ಫೇವರಿಟ್​; ಭಾರತ-ಇಂಗ್ಲೆಂಡ್​ ​ಟೆಸ್ಟ್​ ದಾಖಲೆ ಹೇಗಿದೆ?

ಭಾರತದ ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಹೊಂದಿದ್ದಾರೆ.

VISTARANEWS.COM


on

india vs england test team
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಜ್​ಕೋಟ್​: ಭಾರತ ಮತ್ತು ಇಂಗ್ಲೆಂಡ್(India vs England Test Series)​ ನಡುವಣ 5 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಈಗಾಗಲೇ 2 ಪಂದ್ಯಗಳ ಮುಕ್ತಾಯ ಕಂಡಿದೆ. ಇತ್ತಂಡಗಳು ತಲಾ ಒಂದು ಪಂದ್ಯಗಳನ್ನು ಗೆದ್ದು 1-1 ಸಮಬಲ ಸಾಧಿಸಿದೆ. ಇದೀಗ ಮೂರನೇ ಟೆಸ್ಟ್​(India vs England 3rd Test) ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ನಾಳೆಯಿಂದ ರಾಜ್​ಕೋಟ್​ನ(Rajkot) ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ(Saurashtra Cricket Association Stadium) ಈ ಪಂದ್ಯ ಆರಂಭಗೊಳ್ಳಲಿದೆ. ಇತ್ತಂಡಗಳು ಕೂಡ ಈ ಸ್ಟೇಡಿಯಂನಲ್ಲಿ ಉತ್ತಮ ದಾಖಲೆ(Rajkot Test record) ಹೊಂದಿದೆ. ಉಭಯ ತಂಡಗಳ ಟೆಸ್ಟ್​ ಸಾಧನೆಯ ಮಾಹಿತಿ ಇಂತಿದೆ.

ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ಚೊಚ್ಚಲ ಏಕದಿನ ಮತ್ತು ಟೆಸ್ಟ್​ ಪಂದ್ಯಗಳು ನಡೆದದ್ದು ಇಂಗ್ಲೆಂಡ್​ ಮತ್ತು ಭಾರತ ವಿರುದ್ಧವೇ. 2013ರಲ್ಲಿ ಭಾರತ ಮತ್ತು ಇಂಗ್ಲೆಂಡ್​ ಏಕದಿನ ಪಂದ್ಯವನ್ನಾಡುವ ಮೂಲಕ ಈ ಮೈದಾನಲ್ಲಿ ಅಂತಾರಾಷ್ಟ್ರೀಯ ಪಂದ್ಯಗಳಿಗೆ ಚಾಲನೆ ಸಿಕ್ಕಿತ್ತು. ಇದೇ ವರ್ಷ ಆಸ್ಟ್ರೇಲಿಯಾ ವಿರುದ್ಧ ಟಿ20 ಪಂದ್ಯ ಕೂಡ ನಡೆದಿತ್ತು. 2016ರಲ್ಲಿ ಭಾರತ ಮತ್ತು ಇಂಗ್ಲೆಂಡ್​ ಮೊದಲ ಟೆಸ್ಟ್​ ಪಂದ್ಯ ಆಡಿತ್ತು. ಈ ಪಂದ್ಯದ ಡ್ರಾದಲ್ಲಿ ಅಂತ್ಯಕಂಡಿತ್ತು. ಒಟ್ಟಾರೆಯಾಗಿ ಈ ಸ್ಟೇಡಿಯಂನಲ್ಲಿ 2 ಟೆಸ್ಟ್‌, 4 ಏಕದಿನ, 5 ಅಂತಾರಾಷ್ಟ್ರೀಯ ಟಿ20 ಪಂದ್ಯಗಳು ನಡೆದಿವೆ.

ಇದನ್ನೂ ಓದಿ IND vs ENG: ಮೂರನೇ ಪಂದ್ಯದಲ್ಲಿ ಜುರೆಲ್‌, ಸರ್ಫ್‌ರಾಜ್‌ ಪದಾರ್ಪಣೆ ಖಚಿತ; ಇಲ್ಲಿದೆ ವಿಡಿಯೊ

ಅತ್ಯಧಿಕ ರನ್​ ಗಳಿಕೆ


ಭಾರತದ ಚೇತೇಶ್ವರ ಪೂಜಾರ ಮತ್ತು ವಿರಾಟ್ ಕೊಹ್ಲಿ ಅವರು ಈ ಸ್ಟೇಡಿಯಂನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಹಂಚಿಕೊಂಡಿದ್ದಾರೆ. 2016 ಮತ್ತು 2018 ರ ನಡುವೆ, ಪೂಜಾರ ಎರಡು ಟೆಸ್ಟ್ ಪಂದ್ಯಗಳಲ್ಲಿ 76.00 ಸರಾಸರಿಯಲ್ಲಿ ಶತಕ ಮತ್ತು ಒಂದು ಅರ್ಧಶತಕ ಸೇರಿದಂತೆ 228 ರನ್ ಗಳಿಸಿದ್ದಾರೆ. ಕೊಹ್ಲಿ ಕೂಡ ಎರಡು ಪಂದ್ಯಗಳಲ್ಲಿ 114 ರ ಸರಾಸರಿಯಲ್ಲಿ 228 ರನ್ ಬಾರಿಸಿ ಜಂಟಿ ದಾಖಲೆ ಹೊಂದಿದ್ದಾರೆ. ಈ ಬಾರಿಯ ಸರಣಿಯಲ್ಲಿ ಪೂಜಾರ ಮತ್ತು ವಿರಾಟ್​ ಕೊಹ್ಲಿ ಇಲ್ಲ. ಕೊಹ್ಲಿ ವೈಯಕ್ತಿಕ ಕಾರಣ ನೀಡಿ ಸರಣಿಯಿಂದ ಹಿಂದೆ ಸರಿದರೆ, ಪೂಜಾರ ಕಳಪೆ ಫಾರ್ಮ್​ನಿಂದಾಗಿ ಆಯ್ಕೆಯಾಗಿಲ್ಲ.

ಇದನ್ನೂ ಓದಿ IND vs ENG: ರಾಜ್​ಕೋಟ್​ನ ಪಿಚ್​ ರಿಪೋರ್ಟ್​, ಹವಾಮಾನ ವರದಿ ಹೇಗಿದೆ?

ಕಡಿಮೆ ಮೊತ್ತ


ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡವು ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ಟೆಸ್ಟ್‌ನಲ್ಲಿ ಅತ್ಯಂತ ಕಡಿಮೆ ಮೊತ್ತವನ್ನು ದಾಖಲಿಸಿದೆ. ಕ್ರೈಗ್ ಬ್ರಾಥ್‌ವೈಟ್ ನೇತೃತ್ವದ ತಂಡ 2018 ರಲ್ಲಿ ಭಾರತ ಪ್ರವಾಸದ ಮೊದಲ ಟೆಸ್ಟ್​ ಪಂದ್ಯವನ್ನು ಇಲ್ಲಿ ಆಡಿತ್ತು. ಈ ಪಂದ್ಯದಲ್ಲಿ ವಿಂಡೀಸ್​ ಮೊದಲ ಇನಿಂಗ್ಸ್​ನಲ್ಲಿ 48 ಓವರ್‌ಗಳಲ್ಲಿ 181 ರನ್‌ಗಳಿಗೆ ಆಲೌಟ್ ಆಗಿತ್ತು. ಆಫ್-ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕೇವಲ 37 ರನ್‌ಗಳಿಗೆ ನಾಲ್ಕು ವಿಕೆಟ್‌ ಕಿತ್ತು ಮಿಂಚಿದ್ದರು. ಭಾರತವು ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 649/9 ರನ್​ಗೆ ಡಿಕ್ಲೇರ್​ ಮಾಡಿತ್ತು. ಭಾರತ ಈ ಪಂದ್ಯವನ್ನು ಇನ್ನಿಂಗ್ಸ್ ಮತ್ತು 272 ರನ್‌ಗಳ ಜಯ ಸಾಧಿಸಿತ್ತು.

india vs west indies 2018 rajkot test
kuldeep yadav


ಅತಿ ಹೆಚ್ಚು ವಿಕೆಟ್​ ಸಾಧನೆ


ಭಾರತದ ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಹೊಂದಿದ್ದಾರೆ. ಅಶ್ವಿನ್​ ಇಲ್ಲಿ 2 ಟೆಸ್ಟ್​ ಪಂದ್ಯ ಆಡಿ 37.55 ಸರಾಸರಿಯಲ್ಲಿ ಒಂಬತ್ತು ವಿಕೆಟ್‌ಗಳನ್ನು ಉರುಳಿಸಿದ್ದಾರೆ. ನಾಳಿನ ಪಂದ್ಯದಲ್ಲಿಯೂ ಅವರು ಆಡುವ ಕಾರಣ ವಿಕೆಟ್​ ಸಂಖ್ಯೆಯನ್ನು ಹೆಚ್ಚಿಸುವ ಅವಕಾಶ ಅವರ ಮುಂದಿದೆ.

R Ashwin achieves historic feat
kuldeep yadav


ಗರಿಷ್ಠ ವೈಯಕ್ತಿಕ ರನ್​ ಸಾಧಕರು


ವಿರಾಟ್ ಕೊಹ್ಲಿ ಅವರು ಈ ಸ್ಟೇಡಿಯಂನಲ್ಲಿ ಟೆಸ್ಟ್​ನಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್ ದಾಖಲಿಸಿದ ಆಟಗಾರನಾಗಿದ್ದಾರೆ. 2018 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ ಮೊದಲ ಇನಿಂಗ್ಸ್​ನಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಕೊಹ್ಲಿ 230 ಎಸೆತಗಳಲ್ಲಿ 139 ರನ್ ಬಾರಿಸಿದ್ದರು. ಅವರ ಈ ಅದ್ಭುತ ಶತಕವು 10 ಬೌಂಡರಿಗಳೊಂದಿಗೆ ಸೇರಿತ್ತು. ಅವರ ಇನ್ನಿಂಗ್ಸ್ ಭಾರತಕ್ಕೆ ತಮ್ಮ ಮೊದಲ ಇನ್ನಿಂಗ್ಸ್‌ನಲ್ಲಿ 649/9d ಗಳ ಬೃಹತ್ ಮೊತ್ತವನ್ನು ಗಳಿಸಲು ಸಹಾಯ ಮಾಡಿತ್ತು. ಈ ಬಾರಿ ಕೊಹ್ಲಿ ಗೈರಾಗಿದ್ದಾರೆ.

ಇದನ್ನೂ ಓದಿ IND vs ENG: ಒಂದು ದಿನ ಮುಂಚಿತವಾಗಿ 3ನೇ ಟೆಸ್ಟ್​ಗೆ ಆಡುವ ಬಳಗ ಪ್ರಕಟಿಸಿದ ಇಂಗ್ಲೆಂಡ್​

virat kohli test
kuldeep yadav


ಗರಿಷ್ಠ ವೈಯಕ್ತಿಕ ವಿಕೆಟ್​ ಟೇಕರ್​


ಚೈನಾಮನ್ ಖ್ಯಾತಿಯ ಸ್ಪಿನ್ನ್​ ಬೌಲರ್​​ ಕುಲ್​ದೀಪ್ ಯಾದವ್ ಅವರು 2018 ರಲ್ಲಿ ವಿಂಡೀಸ್​ ಎದುರಿನ ಪಂದ್ಯದಲ್ಲಿ 57 ರನ್​ಗೆ 5 ವಿಕೆಟ್​ ಕಿತ್ತಿದ್ದರು. ಇದು ಈ ಮೈದಾನದಲ್ಲಿ ಬೌಲರ್​ ಒಬ್ಬ ಪಡೆದ ಗರಿಷ್ಠ ವೈಯಕ್ತಿಕ ಟೆಸ್ಟ್​ ವಿಕೆಟ್​ ಆಗಿದೆ. ಈ ಬಾರಿಯೂ ಕುಲ್​ದೀಪ್​ ಇಂಗ್ಲೆಂಡ್​ ಸರಣಿಯಲ್ಲಿ ಆಡುತ್ತಿದ್ದಾರೆ.

kuldeep yadav
kuldeep yadav
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Paris Olympics 2024 : ಭಾರತಕ್ಕೆ ಒಲಿಂಪಿಕ್ ಕ್ರೀಡಾಕೂಟ ತರುವ ದಿನ ದೂರವಿಲ್ಲ; ಇಂಡಿಯಾ ಹೌಸ್ ಉದ್ಘಾಟನೆಯಲ್ಲಿ ನೀತಾ ಅಂಬಾನಿ

Paris Olympics 2024 : ಭಾರತ ಮತ್ತು ವಿದೇಶಗಳ ಅತಿಥಿಗಳು, ಐಒಸಿ ಅಧಿಕಾರಿಗಳು ಮತ್ತು ಭಾರತದ ಗಣ್ಯರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಇದರಲ್ಲಿ ಐಒಸಿ ಸಮಿತಿ ಸದಸ್ಯ ಸೆರ್ ಮಿಯಾಂಗ್ ಎನ್ ಜಿ, ಭಾರತೀಯ ಒಲಿಂಪಿಕ್ ಸಂಸ್ಥೆ ಅಧ್ಯಕ್ಷ ಪಿ.ಟಿ. ಉಷಾ, ಫ್ರಾನ್ಸ್‌ನಲ್ಲಿರುವ ಭಾರತದ ರಾಯಭಾರಿ ಜಾವೇದ್ ಅಶ್ರಫ್, ಬಿಸಿಸಿಐನ ಜಯ್ ಶಾ ಮತ್ತು ಒಲಿಂಪಿಕ್ ಚಿನ್ನದ ಪದಕ ವಿಜೇತ ಅಭಿನವ್ ಬಿಂದ್ರಾ ಸೇರಿ ಹಲವರಿದ್ದರು.

VISTARANEWS.COM


on

Paris Olympics 2024
Koo

ಮುಂಬೈ/ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್‌ (Paris Olympics 2024) ಅದ್ಧೂರಿಯಾಗಿ ಉದ್ಘಾಟನೆಯಾದ ಒಂದು ದಿನದ ನಂತರ, ಭಾರತವು ಮೊದಲ ಬಾರಿಗೆ ‘ಇಂಡಿಯಾ ಹೌಸ್’ ಅನ್ನು ಪ್ಯಾರಿಸ್‌ನಲ್ಲಿ ಉದ್ಘಾಟಿಸಿತು. ರಿಲಯನ್ಸ್ ಫೌಂಡೇಷನ್ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಎಂ. ಅಂಬಾನಿ ಅವರು ಸಾಂಪ್ರದಾಯಿಕ ಭಾರತೀಯ ಶೈಲಿಯಲ್ಲಿ ದೀಪ ಬೆಳಗಿಸುವ ಮೂಲಕ ಇಂಡಿಯಾ ಹೌಸ್ ಅನ್ನು ಉದ್ಘಾಟಿಸಿದರು.

ಭಾರತ ಮತ್ತು ವಿದೇಶಗಳ ಅತಿಥಿಗಳು, ಐಒಸಿ ಅಧಿಕಾರಿಗಳು ಮತ್ತು ಭಾರತದ ಗಣ್ಯರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಇದರಲ್ಲಿ ಐಒಸಿ ಸಮಿತಿ ಸದಸ್ಯ ಸೆರ್ ಮಿಯಾಂಗ್ ಎನ್ ಜಿ, ಭಾರತೀಯ ಒಲಿಂಪಿಕ್ ಸಂಸ್ಥೆ ಅಧ್ಯಕ್ಷ ಪಿ.ಟಿ. ಉಷಾ, ಫ್ರಾನ್ಸ್‌ನಲ್ಲಿರುವ ಭಾರತದ ರಾಯಭಾರಿ ಜಾವೇದ್ ಅಶ್ರಫ್, ಬಿಸಿಸಿಐನ ಜಯ್ ಶಾ ಮತ್ತು ಒಲಿಂಪಿಕ್ ಚಿನ್ನದ ಪದಕ ವಿಜೇತ ಅಭಿನವ್ ಬಿಂದ್ರಾ ಸೇರಿ ಹಲವರಿದ್ದರು.

ಈ ಸಂದರ್ಭದಲ್ಲಿ ಐಒಸಿ ಸದಸ್ಯೆ ನೀತಾ ಅಂಬಾನಿ ಅವರು ಭಾರತಕ್ಕೆ ಒಲಿಂಪಿಕ್ಸ್ ತರುವುದು ಖಚಿತ ಎಂದು ಘೋಷಿಸಿದರು. “ಒಲಿಂಪಿಕ್ಸ್ ಇತಿಹಾಸದಲ್ಲಿ ಮೊದಲ ಬಾರಿಗೆ ನಿರ್ಮಿಸಲಾದ ಇಂಡಿಯಾ ಹೌಸ್‌ಗೆ ಸ್ವಾಗತ. ಇಂದು ನಾವು 2024ರ ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟದಲ್ಲಿ ಹೊಸ ಕನಸನ್ನು ಕಾಣುತ್ತಿದ್ದೇವೆ. 140 ಕೋಟಿ ಭಾರತೀಯರ ಕನಸು ಸಹ ಆಗಿದೆ. ಭಾರತಕ್ಕೆ ಒಲಿಂಪಿಕ್ ಅನ್ನು ತರುವುದು ಸಾಮಾನ್ಯ ಕನಸಾಗಿದೆ. ಅಥೆನ್ಸ್‌ನಲ್ಲಿ ಮೊದಲ ಬಾರಿಗೆ ಒಲಂಪಿಕ್ಸ್ ಜ್ಯೋತಿಯನ್ನು ಬೆಳಗಿಸಿದ್ದು, ಆ ಜ್ಯೋತಿಯನ್ನು ನಮ್ಮ ಪ್ರಾಚೀನ ಭಾರತದ ಮಣ್ಣಿಗೆ ತರುವ ದಿನ ದೂರವಿಲ್ಲ, ನಮ್ಮ ದೇಶವು ಒಲಿಂಪಿಕ್ ಆತಿಥ್ಯ ವಹಿಸುವ ದಿನ ದೂರವಿಲ್ಲ. ಇಂಡಿಯಾ ಹೌಸ್ ಉದ್ಘಾಟನೆಯಲ್ಲಿ ಇದು ನಮ್ಮ ಸಾಮೂಹಿಕ ಸಂಕಲ್ಪವಾಗಿದೆ,” ಎಂದರು.

“ಇಂಡಿಯಾ ಹೌಸ್ ಅನ್ನು ಭಾರತದ ಒಲಿಂಪಿಕ್ ಆಕಾಂಕ್ಷೆಗಳ ಸಂಕೇತವಾಗಿ ನೋಡಲಾಗುತ್ತದೆ. ಇದು ನಮ್ಮ ಕ್ರೀಡಾಪಟುಗಳಿಗೆ ಮನೆಯಿಂದ ದೂರವಿರುವಂಥ ಮತ್ತೊಂದು ಮನೆಯಾಗಲಿದೆ ಎಂದು ನಾವು ಭಾವಿಸುತ್ತೇವೆ. ನಾವು ಅವರ ಆತ್ಮಶಕ್ತಿಯನ್ನು ಗೌರವಿಸುವ ಮತ್ತು ಅವರ ಸಾಧನೆಗಳನ್ನು ಆಚರಿಸುವ ಸ್ಥಳವಾಗಿದೆ. ಇಂಡಿಯಾ ಹೌಸ್ ಅಂತ್ಯವಲ್ಲ, ಇದು ಭಾರತಕ್ಕೆ ಹೊಸ ಆರಂಭವಾಗಿದೆ. ಸೌಂದರ್ಯ, ವೈವಿಧ್ಯ ಮತ್ತು ಶ್ರೀಮಂತ ಪರಂಪರೆಯನ್ನು ಅನುಭವಕ್ಕೆ ಪಡೆಯುವುದಕ್ಕೆ ನಾವು ಜಗತ್ತನ್ನು ಸ್ವಾಗತಿಸುತ್ತೇವೆ,” ಎಂದರು.

ಇದನ್ನೂ ಓದಿ: Paris Olympics 2024 : ಷಟ್ಲರ್​ಗಳ ಪರಾಕ್ರಮ ಆರಂಭ; ಸಿಂಗಲ್ಸ್​ನಲ್ಲಿ ಲಕ್ಷ್ಯ ಸೇನ್​, ಡಬಲ್ಸ್​ನಲ್ಲಿ ಸಾತ್ವಿಕ್​- ಚಿರಾಗ್ ಜೋಡಿಗೆ ಗೆಲುವು

ಇಂಡಿಯಾ ಹೌಸ್ ಉದ್ಘಾಟನಾ ಸಮಾರಂಭಕ್ಕೆ ಬಾಲಿವುಡ್ ಗಾಯಕ ಶಾನ್ ತಮ್ಮ ಗಾಯನದ ಮೂಲಕ ಕಳೆ ತುಂಬಿದರು. ಅವರ ಬಾಲಿವುಡ್ ಹಾಡುಗಳಿಗೆ ಪ್ರೇಕ್ಷಕರು ಮುಕ್ತವಾಗಿ ನೃತ್ಯ ಮಾಡಿದರು. ಡೊಳ್ಳು ಬಾರಿಸುವ ಮೂಲಕ ಪ್ರವಾಸಿಗರನ್ನು ಸ್ವಾಗತಿಸಲಾಯಿತು. ಇದಾದ ಬಳಿಕ ಮುಂಬೈನ ಅಂಧ ಮಕ್ಕಳು ಭಾರತೀಯ ಸಾಂಪ್ರದಾಯಿಕ ಆಟ ಮಲ್ಲಕಂಬದ ಅದ್ಭುತ ಪ್ರದರ್ಶನ ನೀಡಿದರು. ಇಂಡಿಯಾ ಹೌಸ್ ಪಾರ್ಕ್ ಆಫ್ ನೇಷನ್ಸ್‌ನಲ್ಲಿರುವ ಪಾರ್ಕ್ ಡೆ ಲಾ ವಿಲೆಟ್‌ನಲ್ಲಿದೆ ಮತ್ತು ಜುಲೈ 27 ರಿಂದ ಆಗಸ್ಟ್ 11ರ ವರೆಗಿನ ಒಲಿಂಪಿಕ್ ಕ್ರೀಡಾಕೂಟದಲ್ಲಿ ಸ್ಥಳೀಯ ಸಮಯ ಬೆಳಿಗ್ಗೆ 11 ರಿಂದ ರಾತ್ರಿ 11 ರವರೆಗೆ ಸಂದರ್ಶಕರಿಗೆ ತೆರೆದಿರುತ್ತದೆ.

Continue Reading

ಪ್ರಮುಖ ಸುದ್ದಿ

Paris Olympics 2024 : ಷಟ್ಲರ್​ಗಳ ಪರಾಕ್ರಮ ಆರಂಭ; ಸಿಂಗಲ್ಸ್​ನಲ್ಲಿ ಲಕ್ಷ್ಯ ಸೇನ್​, ಡಬಲ್ಸ್​ನಲ್ಲಿ ಸಾತ್ವಿಕ್​- ಚಿರಾಗ್ ಜೋಡಿಗೆ ಗೆಲುವು

Paris Olympics 2024 : ಬೆಳಗ್ಗಿನ ಅವಧಿಯಲ್ಲಿ ಭಾರತದ ಶೂಟರ್​ಗಳು ನಿರಾಸೆ ಮೂಡಿಸಿದ್ದರು. ಆದರೆ, ಸಂಜೆ ವೇಳೆ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್​ನಲ್ಲಿ ಫೈನಲ್ ಹಂತಕ್ಕೆ ಪ್ರವೇಶ ಪಡೆಕೊಳ್ಳುವ ಮೂಲಕ ಶುಭ ಸುದ್ದಿ ನೀಡಿದ್ದರು. ಇದೀಗ ಷಟ್ಲರ್​ಗಳು ಖುಷಿ ಕೊಟ್ಟಿದ್ದಾರೆ. ರೋಯಿಂಗ್​ನಲ್ಲಿ ಪುರುಷರ ಸಿಂಗಲ್ ಸ್ಕಲ್ಸ್ ಸ್ಪರ್ಧೆಯಲ್ಲಿ​​ ಬಲರಾಜ್ ಪನ್ವಾರ್ 4ನೇ ಸ್ಥಾನಕ್ಕೇರಿದ್ದಾರೆ.

VISTARANEWS.COM


on

Paris Olympics 2024
Koo

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್​ನ (Paris Olympics 2024) ಮೊದಲ ದಿನ ಭಾರತದ ಷಟ್ಲರ್​ಗಳು ಅಭಿಮಾನಿಗಳಿಗೆ ಶುಭ ಸುದ್ದಿ ನೀಡಿದ್ದಾರೆ. ಸಿಂಗಲ್ಸ್​ನಲ್ಲಿ ಲಕ್ಷ್ಯ ಸೇನ್ ಹಾಗೂ ಡಬಲ್ಸ್​ ಜೋಡಿಯಾಗಿರು ಸಾತ್ವಿಕ್ ರೆಡ್ಡಿ ಹಾಗೂ ಚಿರಾಗ್ ಶೆಟ್ಟಿ ತಮ್ಮ ಮೊಲದ ಪಂದ್ಯಗಳಲ್ಲಿ ಗೆಲುವು ಕಂಡಿದ್ದಾರೆ. ಇದೇ ವೇಳೆ ಟೇಬಲ್ ಟೆನಿಸ್​ನ ಪುರುಷರ ಸಿಂಗಲ್ಸ್​ನಲ್ಲಿ ಹರ್ಮೀತ್ ದೇಸಾಯಿ 64ನೇ ಸುತ್ತಿಗೆ ಪ್ರವೇಶಿಸಿದ್ದಾರೆ. ಜತೆಗೆ ಹಾಕಿ ತಂಡವೂ ಬಿ ಗುಂಪಿನ ತನ್ನ ಮೊದಲ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಮಣಿಸಿದೆ.

ಬೆಳಗ್ಗಿನ ಅವಧಿಯಲ್ಲಿ ಭಾರತದ ಶೂಟರ್​ಗಳು ನಿರಾಸೆ ಮೂಡಿಸಿದ್ದರು. ಆದರೆ, ಸಂಜೆ ವೇಳೆ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್​ನಲ್ಲಿ ಫೈನಲ್ ಹಂತಕ್ಕೆ ಪ್ರವೇಶ ಪಡೆಕೊಳ್ಳುವ ಮೂಲಕ ಶುಭ ಸುದ್ದಿ ನೀಡಿದ್ದರು. ಇದೀಗ ಷಟ್ಲರ್​ಗಳು ಖುಷಿ ಕೊಟ್ಟಿದ್ದಾರೆ. ರೋಯಿಂಗ್​ನಲ್ಲಿ ಪುರುಷರ ಸಿಂಗಲ್ ಸ್ಕಲ್ಸ್ ಸ್ಪರ್ಧೆಯಲ್ಲಿ​​ ಬಲರಾಜ್ ಪನ್ವಾರ್ 4ನೇ ಸ್ಥಾನಕ್ಕೇರಿದ್ದಾರೆ.

ಬ್ಯಾಡ್ಮಿಂಟನ್​ ಸಿಂಗಲ್ಸ್ ನಲ್ಲಿ ಲಕ್ಷ್ಯ ಸೇನ್, ಗ್ವಾಟೆಮಾಲಾದ ಕೆವಿನ್ ಕಾರ್ಡನ್ ಅವರನ್ನು ನೇರ ಗೇಮ್‌ಗಳಿಂದ ಮಣಿಸಿದ್ದಾರೆ. 22ರ ಹರೆಯದ ಸೇನ್ 42 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ಕಾರ್ಡನ್ ವಿರುದ್ಧ 21-8, 22-20 ಅಂತರದಲ್ಲಿ ಗೆದ್ದರು. ಅಂದ ಹಾಗೆ ಲಕ್ಷ್ಯಗೆ ಇದು ಮೊದಲ ಒಲಿಂಪಿಕ್ಸ್ ಪ್ರವೇಶ. ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನ ಹಾಗೂ 2021ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚು ಗೆದ್ದಿದ್ದ ಸೇನ್, ಜುಲೈ 29ರಂದು ತಮ್ಮ ಎರಡನೇ ಗುಂಪು ಹಂತದ ಪಂದ್ಯದಲ್ಲಿ ಬೆಲ್ಜಿಯಂನ ಜೂಲಿಯನ್ ಕರಾಗ್ಗಿ ವಿರುದ್ಧ ಆಡಲಿದ್ದಾರೆ.

ಡಬಲ್ಸ್​ನಲ್ಲಿ ಧಮಾಕ


ಡಬಲ್ಸ್​​ನಲ್ಲಿ ತಮ್ಮ ಮೊದಲ ಗುಂಪು ಹಂತದ ಪಂದ್ಯದಲ್ಲಿ ಭಾರತದ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಗೆಲುವು ಕಂಡರು. ಈ ಮುಖಾಮುಖಿಯಲ್ಲಿ ಭಾರತದ ಜೋಡಿ 21-17, 21-14ರ ನೇರ ಗೇಮ್​ಗಳಿಂದ ಗೆದ್ದರು. ಅವರು ಆತಿಥೇಯ ಫ್ರಾನ್ಸ್​ ಜೋಡಿ ಲುಕಾಸ್ ಕಾರ್ವಿ ಮತ್ತು ರೊನಾನ್ ಲ್ಯಾಬರ್ ಅವರನ್ನು ಮಣಿಸಿದರು. ಸಾತ್ವಿಕ್-ಚಿರಾಗ್ ಮುಂದಿನ ಪಂದ್ಯದಲ್ಲಿ ಜರ್ಮನಿಯ ಮಾರ್ಕ್ ಲ್ಯಾಮ್ಸ್ಫಸ್ – ಮಾರ್ವಿನ್ ಸೀಡೆಲ್ ವಿರುದ್ಧ ಆಡಲಿದ್ದಾರೆ.

ಇದನ್ನೂ ಓದಿ: Paris Olympics 2024 : ಭಾರತ ಹಾಕಿ ತಂಡದ ಶುಭಾರಂಭ; ನ್ಯೂಜಿಲ್ಯಾಂಡ್ ವಿರುದ್ಧ 3-2 ಗೋಲ್​ಗಳ ಗೆಲುವು

ಹರ್ಮಿತ್​ಗೆ ಶುಭ ಸುದ್ದಿ

ಭಾರತದ ಟೆನಿಸ್ ಆಟಗಾರ ಹರ್ಮೀತ್ ದೇಸಾಯಿ ತಮ್ಮ ಚೊಚ್ಚಲ ಒಲಿಂಪಿಕ್ಸ್‌ನಲ್ಲಿ ಶುಭಾರಂಭ ಮಾಡಿದ್ದಾರೆ. ಸಿಂಗಲ್ಸ್‌ನ ಪ್ರಾಥಮಿಕ ಮೊದಲ ಪಂದ್ಯದಲ್ಲಿ, ಜೋರ್ಡಾನ್‌ನ ಝೈದ್ ಅಬೋ ಯಮನ್‌ ಅವರನ್ನು 4-0 ಅಂತರದಿಂದ (11-7, 11-9, 11-5, 11-5) ಗೆದ್ದರು.

Continue Reading

ಪ್ರಮುಖ ಸುದ್ದಿ

Paris Olympics 2024 : ಭಾರತ ಹಾಕಿ ತಂಡದ ಶುಭಾರಂಭ; ನ್ಯೂಜಿಲ್ಯಾಂಡ್ ವಿರುದ್ಧ 3-2 ಗೋಲ್​ಗಳ ಗೆಲುವು

Paris Olympics 2024 : ನಾಯಕ ಹರ್ಮನ್​ ಪ್ರೀತ್ ಸಿಂಗ್ ಗಳಿಸಿದ ಪೆನಾಲ್ಟಿ ಸ್ಟ್ರೋಕ್ ಗೋಲಿನಿಂದ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಅದ್ಭುತ ಪುನರಾಗಮನ ಮಾಡಿತು. ಪ್ಯಾರಿಸ್ ಕ್ರೀಡಾಕೂಟದ ನಂತರ ನಿವೃತ್ತಿ ಘೋಷಿಸುವುದಾಗಿ ಘೋಷಿಸಿದ ಗೋಲ್ ಕೀಪರ್ ಪಿ.ಆರ್.ಶ್ರೀಜೇಶ್ ಅವರು ನ್ಯೂಜಿಲೆಂಡ್ ಗೆ 7 ಪೆನಾಲ್ಟಿ ಕಾರ್ನರ್ ಗಳನ್ನು ನಿರಾಕರಿಸಿ ಮಿಂಚಿದರು.

VISTARANEWS.COM


on

Paris Olympics 2024
Koo

ಬೆಂಗಳೂರು: ಭಾರತದ ಪುರುಷರ ಹಾಕಿ ತಂಡ ಪ್ಯಾರಿಸ್ ಒಲಿಂಪಿಕ್ಸ್​ನ (Paris Olympics 2024) ತನ್ನ ಮೊದಲ ಪಂದ್ಯದಲ್ಲಿ ರೋಚಕ ಗೆಲುವಿನೊಂದಿಗೆ ತನ್ನ ಅಭಿಯಾನ ಪ್ರಾರಂಭಿಸಿದೆ. ಫ್ರೆಂಚ್ ರಾಜಧಾನಿಯ ಯೆವೆಸ್-ಡು-ಮನೋಯಿರ್ ಸ್ಟೇಡಿಯಂ 2 ರಲ್ಲಿ ಶನಿವಾರ (ಜುಲೈ 27) ನಡೆದ ಗುಂಪು ‘ಬಿ’ ಆರಂಭಿಕ ಪಂದ್ಯದಲ್ಲಿ ಹರ್ಮನ್​ಪ್ರೀತ್​ ಸಿಂಗ್ ಪಡೆ ಮೊದಲ ಕ್ವಾರ್ಟರ್​ನಲ್ಲಿ 0-1 ಅಂತರದ ಹಿನ್ನಡೆ ಎದುರಿಸಿದರೂ ಅಂತಿಮವಾಗಿ 3-2 ಅಂತರದಿಂದ ಗೆದ್ದುಕೊಂಡಿತು. ಮೊದಲ ಕ್ವಾರ್ಟರ್ನಲ್ಲಿ ಭಾರತ ತಂಡ ಹಿನ್ನಡೆ ಅನುಭವಿಸಿದರೂ, ಎರಡನೇ ಮತ್ತು ಮೂರನೇ ಕ್ವಾರ್ಟರ್​ನಲ್ಲಿ ಮನ್ದೀಪ್ ಸಿಂಗ್ ಮತ್ತು ವಿವೇಕ್ ಸಾಗರ್ ಪ್ರಸಾದ್ ಗಳಿಸಿದ ಗೋಲುಗಳ ನೆರವಿನಿಂದ ಭಾರತ ಮೇಲುಗೈ ಸಾಧಿಸಿತು.

ನಾಯಕ ಹರ್ಮನ್​ ಪ್ರೀತ್ ಸಿಂಗ್ ಗಳಿಸಿದ ಪೆನಾಲ್ಟಿ ಸ್ಟ್ರೋಕ್ ಗೋಲಿನಿಂದ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಅದ್ಭುತ ಪುನರಾಗಮನ ಮಾಡಿತು. ಪ್ಯಾರಿಸ್ ಕ್ರೀಡಾಕೂಟದ ನಂತರ ನಿವೃತ್ತಿ ಘೋಷಿಸುವುದಾಗಿ ಘೋಷಿಸಿದ ಗೋಲ್ ಕೀಪರ್ ಪಿ.ಆರ್.ಶ್ರೀಜೇಶ್ ಅವರು ನ್ಯೂಜಿಲೆಂಡ್ ಗೆ 7 ಪೆನಾಲ್ಟಿ ಕಾರ್ನರ್ ಗಳನ್ನು ನಿರಾಕರಿಸಿ ಮಿಂಚಿದರು.

ಮುಂದಿನ ಪಂದ್ಯಗಳಲ್ಲಿ ಕಠಿಣ ಪರೀಕ್ಷೆಗಳನ್ನು ಎದುರಿಸಬೇಕಾಗಿರುವುದರಿಂದ ಪೂಲ್ ಬಿ ಯ ಆರಂಭಿಕ ಪಂದ್ಯದಲ್ಲಿ ಭಾರತಕ್ಕೆ ನಿರ್ಣಾಯಕ ಗೆಲುವಾಗಿದೆ. ಆಸ್ಟ್ರೇಲಿಯಾ, ಬೆಲ್ಜಿಯಂ, ಅರ್ಜೆಂಟೀನಾ ಮತ್ತು ಐರ್ಲೆಂಡ್ ತಂಡಗಳೊಂದಿಗೆ ಭಾರತ ‘ಪೂಲ್’ ನಲ್ಲಿ ಡ್ರಾ ಸಾಧಿಸಿದೆ. ಆರಂಭಿಕ ದಿನದ ಗೆಲುವಿನ ನಂತರ ಭಾರತವು ತಮ್ಮ ಪೂಲ್​ನಲ್ಲಿ ಎರಡನೇ ಸ್ಥಾನಕ್ಕೆ ಏರಿತು.

8ನೇ ನಿಮಿಷಕ್ಕೆ ಹಿನ್ನಡೆ

8ನೇ ನಿಮಿಷದ ಆರಂಭದಲ್ಲೇ ಭಾರತ 0-1ರ ಹಿನ್ನಡೆ ಅನುಭವಿಸಿತ್ತು. ಗ್ರೇಗ್ ಫುಲ್ಟನ್ ಅವರ ನೇತೃತ್ವದ ನ್ಯೂಜಿಲ್ಯಾಂಡ್​ ತಂಡ ಪಂದ್ಯದಲ್ಲಿ ಹಿಡಿತ ಸಾಧಿಸಿತ್ತು. ಆದರೆ ಅವರು ಗೋಲ್ ಪೋಸ್ಟ್​​ ಮುಂದೆ ಸ್ಥಿರತೆ ತೋರಲಿಲ್ಲ. ಅಭಿಷೇಕ್ ಭಾರತಕ್ಕೆ ಆರಂಭಿಕ ಮುನ್ನಡೆ ತರು ಭರವಸೆ ಕೊಟ್ಟರೂ ನ್ಯೂಜಿಲೆಂಡ್​ ಅನುಭವಿ ಗೋಲ್​ಕೀಪರ್​ ಡೊಮಿನಿಕ್ ಡಿಕ್ಸನ್ ತಡೆದರು. ಮೊದಲ ಕ್ವಾರ್ಟರ್​ನಲ್ಲಿ ಗುರ್ಜಂತ್ ಸಿಂಗ್​​ಗೆ ಗ್ರೀನ್ ಕಾರ್ಡ್ ಸಿಕ್ಕಿತು. ಇದು ಭಾರತದ ಸಮಬಲ ಸಾಧಿಸುವ ಅವಕಾಶಗಳಿಗೆ ಅಡ್ಡಿಯಾಯಿತು.

ಇದನ್ನೂ ಓದಿ: IND vs SL : ಶ್ರೀಲಂಕಾ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತಕ್ಕೆ 43 ರನ್​ ಭರ್ಜರಿ ಜಯ

ನಿಕ್ ವುಡ್ಸ್ ಹಳದಿ ಕಾರ್ಡ್ ನೊಂದಿಗೆ ಐದು ನಿಮಿಷಗಳ ಕಾಲ ಅಮಾನತುಗೊಂಡಿದ್ದರಿಂದ ನ್ಯೂಜಿಲೆಂಡ್ ಗೆ ಎರಡನೇ ಕ್ವಾರ್ಟರ್ ದೊಡ್ಡ ಹೊಡೆತವಾಯಿತು.

ಶೈಲಿಯಲ್ಲಿ ಪುಟಿದೇಳುವ ಭಾರತ!
ಹರ್ಮನ್ ಪ್ರೀತ್ ಸಿಂಗ್​ಗೆ ಎದುರಾಳಿ ತಂಡ ಪೆನಾಲ್ಟಿ ಕಾರ್ನರ್ ಅವಕಾಶ ನಿರಾಕರಿಸಿದ ಹೊರತಾಗಿಯೂ ನ್ಯೂಜಿಲೆಂಡ್ ನ ಬಲಿಷ್ಠ ಡಿಫೆನ್ಸ್ ವಿಭಾಗ ಕುಸಿಯಿತು. ಎರಡನೇ ಕ್ವಾರ್ಟರ್​ನಲ್ಲಿ ಭಾರತದ ನಾಯಕನಿಗೆ ಎರಡನೇ ಅವಕಾಶ ಸಿಕ್ಕಿತು. ಈ ವೇಳೆ ಗೋಲ್ ಪೋಸ್ಟ್​​ ಸಮೀಪದಲ್ಲಿದ್ದ ಮನ್ದೀಪ್ ಸಿಂಗ್ ಅವರು ಡಿಕ್ಸನ್ ಅವರನ್ನು ಹಿಂದಿಕ್ಕಿ ಭಾರತಕ್ಕೆ 1-1 ಅಂತರದ ಮುನ್ನಡೆ ತಂದುಕೊಟ್ಟರು. ಭಾರತವು ಮೂರನೇ ಕ್ವಾರ್ಟರ್ ಅನ್ನು ಹೊಸ ಆತ್ಮವಿಶ್ವಾಸದೊಂದಿಗೆ ಪ್ರಾರಂಭಿಸಿತು. ಮನ್ದೀಪ್ ಸಿಂಗ್ ಒಂದು ಗೋಲು ಬಾರಿಸಿದರು. ಆದರೆ, ಸ್ಕಾಟ್ ಬಾಯ್ಡೆ ಅವರ ಪ್ರಯತ್ನದ ಮೂಲಕ ನ್ಯೂಜಿಲೆಂಡ್ ತಿರುಗೇಟು ನೀಡಿತು. ಆದರೆ ಕೊನೆಯಲ್ಲಿ ಪೆನಾಲ್ಟಿ ಸ್ಟ್ರೋಕ್​ ಮೂಲಕ ನಾಯಕ ಹರ್ಮನ್​ ಪ್ರೀತ್ ಸಿಂಗ್ ಗೋಲ್ ಗಳಿಸಿ ಭಾರತಕ್ಕೆ ಜಯ ತಂದುಕೊಟ್ಟರು.

Continue Reading

ಪ್ರಮುಖ ಸುದ್ದಿ

IND vs SL : ಶ್ರೀಲಂಕಾ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತಕ್ಕೆ 43 ರನ್​ ಭರ್ಜರಿ ಜಯ

IND vs SL: ಇಲ್ಲಿನ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಲಂಕಾ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ನಿಗದಿತ 20 ಓವರ್​​ಗಳಲ್ಲಿ 7 ವಿಕೆಟ್​ ನಷ್ಟ ಮಾಡಿಕೊಂಡು 213 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಆತಿಥೇಯ ಬಳಗ 19. 2 ಓವರ್​ಗಳಲ್ಲಿ 170 ರನ್​ಗಳಿಗೆ ಆಲ್​ಔಟ್ ಆಯಿತು.

VISTARANEWS.COM


on

IND vs SL
Koo

ಪಲ್ಲೆಕೆಲೆ: ನಾಯಕ ಸೂರ್ಯಕುಮಾರ್​ (58 ರನ್​) ಅರ್ಧ ಶತಕ ಹಾಗೂ ರಿಷಭ್​ ಪಂತ್​ (49 ರನ್​) ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಮಿಂಚಿದ ಭಾರತ ತಂಡ ಆತಿಥೇಯ ಶ್ರೀಲಂಕಾ ವಿರುದ್ಧದ ಟಿ20 ಸರಣಿಯ (IND vs SL) ಮೊದಲ ಪಂದ್ಯದಲ್ಲಿ 43 ರನ್​ಗಳ ಗೆಲುವು ದಾಖಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆಯನ್ನು ಪಡೆದುಕೊಂಡಿದೆ. ಭಾರತ ತಂಡದ ಗೆಲುವಿನಲ್ಲಿ ಕೊನೇ ಹಂತದಲ್ಲಿ ಬೌಲರ್​ಗಳು ಕೂಡ ಪ್ರಮುಖ ಪಾತ್ರ ವಹಿಸಿದರು. ಇದರೊಂದಿಗೆ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಶುಭಾರಂಭ ಮಾಡಿದರೆ ಕೋಚ್ ಗೌತಮ್ ಗಂಭೀರ್ ಕೂಡ ಹೊಸ ಅಧ್ಯಾಯ ಆರಂಭಿಸಿದರು.

ಇಲ್ಲಿನ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಲಂಕಾ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ನಿಗದಿತ 20 ಓವರ್​​ಗಳಲ್ಲಿ 7 ವಿಕೆಟ್​ ನಷ್ಟ ಮಾಡಿಕೊಂಡು 213 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಆತಿಥೇಯ ಬಳಗ 19. 2 ಓವರ್​ಗಳಲ್ಲಿ 170 ರನ್​ಗಳಿಗೆ ಆಲ್​ಔಟ್ ಆಯಿತು.

ಮೊದಲು ಬ್ಯಾಟ್ ಮಾಡಿದ ಭಾರತ ತಂಡಕ್ಕೆ ಆರಂಭಿಕರಾದ ಯಶಸ್ವಿ ಜೈಸ್ವಾಲ್​ (21 ಎಸೆತಕ್ಕೆ 40 ರನ್​), ಶುಭ್​ಮನ್​ ಗಿಲ್​ (16 ಎಸೆತಕ್ಕೆ 34 ರನ್​) ಉತ್ತಮ ಆರಂಭ ತಂದುಕೊಟ್ಟರು. ಈ ಜೋಡಿ ಮೊದಲ ವಿಕೆಟ್​ಗೆ 74 ರನ್ ಬಾರಿಸಿತು. ಬಳಿಕ ಮೂರನೇ ಕ್ರಮಾಂಕದಲ್ಲಿ ಆಡಲು ಬಂದ ನಾಯಕ ಸೂರ್ಯಕುಮಾರ್ ಉತ್ತಮವಾಗಿ ಆಡಿದರು. ತಂಡದ ಪೂರ್ಣಾವಧಿ ನಾಯಕನಾಗಿ ನೇಮಕಗೊಂಡ ನಂತರ ತಮ್ಮ ಮೊದಲ ಪಂದ್ಯದಲ್ಲಿ ಮಿಂಚಿದರು. ಲಂಕಾ ಬೌಲರ್​ಗಳನ್ನು ಬಲವಾಗಿ ಹಿಮ್ಮೆಟ್ಟಿಸಿದರು. ಸೂರ್ಯಕುಮಾರ್ ಯಾದವ್ ತಮ್ಮ ಇನ್ನಿಂಗ್ಸ್​​ನಲ್ಲಿ ಕೆಲವು ಅಬ್ಬರದ ಶಾಟ್​ಗಳನ್ನು ಆಡಿದರು. ಅವರು ಎದುರಾಳಿ ತಂಡದ ಬೌಲರ್​​ಗಳ ನೈತಿಕತೆ ಕುಸಿಯುವಂತೆ ಮಾಡಿದರು. 26 ಎಸೆತಕ್ಕೆ ಬೌಂಡರಿ ಹಾಗೂ 2 ಸಿಕ್ಸರ್ ಸಮೇತ ಅವರು 58 ರನ್ ಬಾರಿಸಿತು.

ಇದನ್ನೂ ಓದಿ: Rishabh Pant : ಧೋನಿಯಂತೆ ಭರ್ಜರಿ ಹೆಲಿಕಾಪ್ಟರ್​ ಶಾಟ್​​ ಮೂಲಕ ಸಿಕ್ಸರ್ ಬಾರಿಸಿದ ರಿಷಭ್ ಪಂತ್​

ರಿಷಭ್ ಉತ್ತಮ ಆಟ

ಸೂರ್ಯಕುಮಾರ್ ಯಾದವ್ ಪೆವಿಲಿಯನ್​ಗೆ ಮರಳಿದ ನಂತರ, ರಿಷಭ್ ಪಂತ್ ರನ್​ ಗಳಿಸುವ ಜವಾಬ್ದಾರಿಯನ್ನು ತಮ್ಮ ಮೇಲೆ ತೆಗೆದುಕೊಂಡು ತಮ್ಮ ತಂಡವನ್ನು ದೊಡ್ಡ ಮೊತ್ತಕ್ಕೆ ಕೊಂಡೊಯ್ದರು. ಕೀಪರ್-ಬ್ಯಾಟ್ಸ್ಮನ್ ಒಂದು ಹಂತದಲ್ಲಿ 20 (20) ರನ್ ಗಳಿಸಿದ್ದರು. ನಂತರ, ಅವರು ಬ್ಯಾಟ್​ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿದರು. ರಿಷಭ್ ಪಂತ್ ತಮ್ಮ ಇನ್ನಿಂಗ್ಸ್​ನಲ್ಲಿ ಅದ್ಭುತ ಶಾಟ್​ಗಳನ್ನು ಆಡಿದರು. ಔಟಾಗುವ ಮೊದಲು ಅವರು 33 ಎಸೆತಕ್ಕೆ 6 ಫೋರ್​, 1 ಸಿಕ್ಸರ್ ಸಮೇತ 49 ರನ್ ಬಾರಿಸಿದರು. ಆದರೆ, ಒಂದು ರನ್ ಕೊರತೆಯಿಂದ ಅರ್ಧ ಶತಕದ ಅವಕಾಶ ಕಳೆದುಕೊಂಡರು.

ಲಂಕಾ ಉತ್ತಮ ಆರಂಭ

ಭಾರತದ ದೊಡ್ಡ ಗುರಿಯನ್ನು ಬೆನ್ನಟ್ಟಲು ಆರಂಭಿಸಿದ ಲಂಕಾ ತಂಡ ಉತ್ತಮ ಆರಂಭ ಪಡೆಯಿತು. ಮೊದಲ ವಿಕೆಟ್​ಗೆ 84 ರನ್ ಬಾರಿಸಿತು. ಆರಂಭಿಕ ಬ್ಯಾಟರ್​ ಪಾತುಮ್ ನಿಸ್ಸಾಂಕ 4 ಎಸೆತಕ್ಕೆ 79 ರನ್ ಬಾರಿಸಿದರೆ ಕುಸಾಲ್ ಮೆಂಡಿಸ್​ 27 ಎಸೆತಕ್ಕೆ 45 ರನ್ ಗಳಿಸಿದರು. ಹೀಗಾಗಿ ಲಂಕಾ ಗೆಲುವಿನ ಸನಿಹ ಬರುವ ನಿರೀಕ್ಷೆ ಇತ್ತು. ಆದರೆ, ಕೊನೇ ಹಂತದಲ್ಲಿ ಅಕ್ಷರ್ ಪಟೇಲ್​ (3 ರನ್​ಗಳಿಗೆ 2 ವಿಕೆಟ್​), ಅರ್ಶ್​ದೀಪ್ ಸಿಂಗ್ (24 ಎಸೆತಕ್ಕೆ 2 ವಿಕೆಟ್​), ರಿಯಾನ್ ಪರಾಗ್​ 1.2 ಓವರ್​ಗಳಲ್ಲಿ 5 ರನ್ ನೀಡಿ 3 ವಿಕೆಟ್ ಕಬಳಿಸಿದರು. ಹೀಗಾಗಿ ಲಂಕಾ ತಂಡಕ್ಕೆ ಯಾವುದೇ ಹಂತದಲ್ಲಿ ಚೇತರಿಸಿಕೊಳ್ಳುವುದಕ್ಕೆ ಸಾಧ್ಯವಾಗಲಿಲ್ಲ. 149 ರನ್​ಗಳಿಗೆ 3 ವಿಕೆಟ್ ಮಾತ್ರ ಕಳೆದುಕೊಂಡಿದ್ದ ಲಂಕಾ ಮುಂದಿನ 21 ರನ್ ಮಾಡುವಷ್ಟರಲ್ಲಿ ಉಳಿದ ಏಳು ವಿಕೆಟ್ ನಷ್ಟ ಮಾಡಿಕೊಂಡು ಸೋಲೊಪ್ಪಿಕೊಂಡಿತು.

Continue Reading
Advertisement
Delhi Floods
ಪ್ರಮುಖ ಸುದ್ದಿ43 mins ago

Delhi Floods: ದೆಹಲಿಯಲ್ಲಿ ಭಾರಿ ಮಳೆ; ಕೋಚಿಂಗ್‌ ಸೆಂಟರ್‌ಗೆ ನೀರು ನುಗ್ಗಿ ಇಬ್ಬರು ವಿದ್ಯಾರ್ಥಿನಿಯರ ಸಾವು!

Paris Olympics 2024
ಕ್ರೀಡೆ52 mins ago

Paris Olympics 2024 : ಭಾರತಕ್ಕೆ ಒಲಿಂಪಿಕ್ ಕ್ರೀಡಾಕೂಟ ತರುವ ದಿನ ದೂರವಿಲ್ಲ; ಇಂಡಿಯಾ ಹೌಸ್ ಉದ್ಘಾಟನೆಯಲ್ಲಿ ನೀತಾ ಅಂಬಾನಿ

Pervez Musharraf
ದೇಶ1 hour ago

Pervez Musharraf: ಭಾರತ ವಿರೋಧಿ ಪರ್ವೇಜ್‌ ಮುಷರ‍್ರಫ್‌ಗೆ ಕೇರಳ ಬ್ಯಾಂಕ್‌ ಗೌರವ; ಭುಗಿಲೆದ್ದ ವಿವಾದ

Paris Olympics 2024
ಪ್ರಮುಖ ಸುದ್ದಿ1 hour ago

Paris Olympics 2024 : ಷಟ್ಲರ್​ಗಳ ಪರಾಕ್ರಮ ಆರಂಭ; ಸಿಂಗಲ್ಸ್​ನಲ್ಲಿ ಲಕ್ಷ್ಯ ಸೇನ್​, ಡಬಲ್ಸ್​ನಲ್ಲಿ ಸಾತ್ವಿಕ್​- ಚಿರಾಗ್ ಜೋಡಿಗೆ ಗೆಲುವು

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ಭಾರತ ಹಾಕಿ ತಂಡದ ಶುಭಾರಂಭ; ನ್ಯೂಜಿಲ್ಯಾಂಡ್ ವಿರುದ್ಧ 3-2 ಗೋಲ್​ಗಳ ಗೆಲುವು

Tihar Jail
ದೇಶ2 hours ago

Tihar Jail: ತಿಹಾರ ಜೈಲಿನ 125 ಕೈದಿಗಳಿಗೆ ಎಚ್‌ಐವಿ ಪಾಸಿಟಿವ್‌; ಇವರು ‘ಬೇಲಿ’ ಹಾರಿದ್ದು ಎಲ್ಲಿ?

IND vs SL
ಪ್ರಮುಖ ಸುದ್ದಿ2 hours ago

IND vs SL : ಶ್ರೀಲಂಕಾ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತಕ್ಕೆ 43 ರನ್​ ಭರ್ಜರಿ ಜಯ

Rishabh Pant
ಪ್ರಮುಖ ಸುದ್ದಿ2 hours ago

Rishabh Pant : ಧೋನಿಯಂತೆ ಭರ್ಜರಿ ಹೆಲಿಕಾಪ್ಟರ್​ ಶಾಟ್​​ ಮೂಲಕ ಸಿಕ್ಸರ್ ಬಾರಿಸಿದ ರಿಷಭ್ ಪಂತ್​

Puneeth Kerehalli
ಕರ್ನಾಟಕ3 hours ago

Puneeth Kerehalli: ಪುನೀತ್‌ ಕೆರೆಹಳ್ಳಿಗೆ ನ್ಯಾಯಾಂಗ ಬಂಧನ; 14 ದಿನ ಪರಪ್ಪನ ಅಗ್ರಹಾರವೇ ಗತಿ!

Mumbai Girl
ದೇಶ3 hours ago

ಬಾರೆ ಸಖಿ ಎಂದು 20 ವರ್ಷದ ಯುವತಿಯನ್ನು ಕರೆದುಕೊಂಡು ಹೋದ, ಕೊಂದು ಪೊದೆಯಲ್ಲಿ ಬಿಸಾಡಿದ; ಕೃತ್ಯಕ್ಕೆ ಕಾರಣವೇನು?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ6 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ11 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ12 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ1 day ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌