ICC Rankings: ಬರೋಬ್ಬರಿ 1,739 ದಿನಗಳ ಬಳಿಕ ಶ್ರೇಯಾಂಕದಲ್ಲಿ ಕುಸಿತ ಕಂಡ ಶಕೀಬ್ - Vistara News

ಕ್ರೀಡೆ

ICC Rankings: ಬರೋಬ್ಬರಿ 1,739 ದಿನಗಳ ಬಳಿಕ ಶ್ರೇಯಾಂಕದಲ್ಲಿ ಕುಸಿತ ಕಂಡ ಶಕೀಬ್

ಶಕೀಬ್ ಅಲ್​ ಹಸನ್​ ಅವರು ಮೇ 7, 2019 ರಿಂದ ಸತತ 1,739 ದಿನಗಳ ತನಕ ಏಕದಿನ ಆಲ್​ರೌಂಡರ್​ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದ್ದರು. ಈ ಮೂಲಕ ಅತಿ ದೀರ್ಘ ಅವಧಿಗೆ ಈ ಸ್ಥಾನ ಉಳಿಸಿದ ಮೊದಲ ಆಟಗಾರ ಎನ್ನುವ ದಾಖಲೆಯನ್ನು ಹೊಂದಿದ್ದರು.

VISTARANEWS.COM


on

Shakib Al Hasan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದುಬೈ: ಐಸಿಸಿ ನೂತನ ಏಕದಿನ ಶ್ರೇಯಾಂಕ ಪಟ್ಟಿ ಪ್ರಕಟಗೊಂಡಿದೆ. ಆಲ್​ರೌಂಡರ್​ಗಳ(No.1 ODI all-rounder) ಶ್ರೇಯಾಂಕದಲ್ಲಿ ಅಫಘಾನಿಸ್ತಾನದ ಹಿರಿಯ ಆಟಗಾರ ಮೊಹಮ್ಮದ್​ ನಬಿ(Mohammad Nabi) ಅವರು ಅಗ್ರಸ್ಥಾನಕ್ಕೇರಿದ್ದಾರೆ. ಈ ಮೂಲಕ ಬರೋಬ್ಬರಿ 1739 ದಿನಗಳ ಕಾಲ ಅಗ್ರಸ್ಥಾನದಲ್ಲಿದ್ಧ ಬಾಂಗ್ಲಾದೇಶದ ಶಕೀಬ್​ ಅಲ್​ ಹಸನ್(Shakib Al Hasan) ಅವರನ್ನು ಹಿಂದಿಕ್ಕಿದ್ದಾರೆ. ಜತೆಗೆ ಈ ಸ್ಥಾನಕ್ಕೇರಿದ ಅತಿ ಹಿರಿಯ ಕ್ರಿಕೆಟಿಗ ಎಂಬ ಗೌರವಕ್ಕೂ ಪಾತ್ರರಾದರು.

ಶ್ರೀಲಂಕಾ ಎದುರಿನ ಏಕದಿನ ಸರಣಿಯಲ್ಲಿ ಶತಕ ಮತ್ತು ಬೌಲಿಂಗ್​ನಲ್ಲಿ ತೋರಿದ ಶ್ರೇಷ್ಠ ಪ್ರದರ್ಶನದ ಕಾರಣ ನಬಿ ಅಗ್ರಸ್ಥಾನ ಪಡೆದರು. ಕಣ್ಣಿನ ಸಮಸ್ಯೆಯಿಂದಾಗಿ ಏಕದಿನ ವಿಶ್ವಕಪ್​ ಟೂರ್ನಿಯ ಬಳಿಕ ಶಬೀಬ್​ ಕ್ರಿಕೆಟ್​ನಿಂದ ದೂರ ಉಳಿದದ್ದು ಶ್ರೇಯಾಂಕ ಹಿನ್ನಡೆಗೆ ಕಾರಣ.

ಶಕೀಬ್ ಅಲ್​ ಹಸನ್​ ಅವರು ಮೇ 7, 2019 ರಿಂದ ಸತತ 1,739 ದಿನಗಳ ತನಕ ಏಕದಿನ ಆಲ್​ರೌಂಡರ್​ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದ್ದರು. ಈ ಮೂಲಕ ಅತಿ ದೀರ್ಘ ಅವಧಿಗೆ ಈ ಸ್ಥಾನ ಉಳಿಸಿದ ಮೊದಲ ಆಟಗಾರ ಎನ್ನುವ ದಾಖಲೆಯನ್ನು ಹೊಂದಿದ್ದರು. ಸದ್ಯ ಶಕೀಬ್​ 310 ರೇಟಿಂಗ್​ ಅಂಕದೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ.

ಟೆಸ್ಟ್​ ಆಲ್​ರೌಂಡರ್​ಗಳ ಶ್ರೇಯಾಂಕದಲ್ಲಿ ಟೀಮ್​ ಇಂಡಿಯಾದ ರವೀಂದ್ರ ಜಡೇಜ ಅವರು ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ಟಿ20 ರೌಂಡರ್​ಗಳ ಶ್ರೇಯಾಂಕದಲ್ಲಿ ಶಕೀಬ್​ ಅಲ್​ ಹಸನ್ ತಮ್ಮ ಅಗ್ರಸ್ಥಾನವನ್ನು ಉಳಿಸಿಕೊಂಡಿದ್ದಾರೆ.

ಇದನ್ನೂ ಓದಿ R Ashwin: ದಾಖಲೆ ಬರೆಯಲು ಅಶ್ವಿನ್​ಗೆ ಬೇಕಿದೆ ಕೇವಲ ಒಂದು ವಿಕೆಟ್!​

ಕಣ್ಣಿನ ಸಮಸ್ಯೆ ಎದುರಿಸುತ್ತಿರುವ ಶಕೀಬ್


ಬಾಂಗ್ಲಾ ನಾಯಕ ಶಕೀಬ್ ಅವರ ಎಡಗಣ್ಣಿನ ರೆಟಿನಾದಲ್ಲಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. 2023ರ ಏಕದಿನ ವಿಶ್ವಕಪ್‌ನ ನಂತರ ಶಕೀಬ್, ಕಣ್ಣಿನಲ್ಲಿ ಸಮಸ್ಯೆ ಇರುವ ಬಗ್ಗೆ ಮಾಹಿತಿ ನೀಡಿದ್ದರು. ನಂತರ ಅದನ್ನು ನೇತ್ರ ತಜ್ಞ ವೈದರ ಬಳಿ ತೊರಿಸಲಾಗಿತ್ತು. ಈ ವೇಳೆ ಅವರ ರೆಟಿನಾದಲ್ಲಿ ಸಮಸ್ಯೆ ಇದೆ ಎಂಬುದು ಬೆಳಕಿಗೆ ಬಂದಿದೆ.

ಈ ಕುರಿತು ಬಿಸಿಬಿಯ ಹಿರಿಯ ವೈದ್ಯ ದೇಬಾಶಿಶ್ ಚೌಧರಿ ಮಾಹಿತಿ ನೀಡಿದ್ದು, ಶಕೀಬ್ ಎಡಗಣ್ಣಿನ ಎಕ್ಸ್‌ಟ್ರಾಫೋವಲ್ ಸೆಂಟ್ರಲ್ ಸೆರೋಸ್ ಕೊರಿಯೊ ರೆಟಿನೋಪತಿ (ಸಿಎಸ್‌ಆರ್) ನಿಂದ ಬಳಲುತ್ತಿದ್ದಾರೆ ಎಂದು ಹೇಳಿದ್ದರು. ಇದೇ ವೇಳೆ ಸಮಸ್ಯೆಯ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಂಡ ದೇಬಾಶಿಶ್ ಚೌಧರಿ, ಸೆಂಟ್ರಲ್ ಸೆರೋಸ್ ಕೊರಿಯೊ ರೆಟಿನೋಪತಿ ಸಮಸ್ಯೆಗೆ ತುತ್ತಾಗುವ ವ್ಯಕ್ತಿಯ ಕಣ್ಣುಗಳ ರೆಟಿನಾದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಆ ವ್ಯಕ್ತಿಯ ದೃಷ್ಟಿ ಅಡಚಣೆಗಳಿಗೆ ಕಾರಣವಾಗುತ್ತದೆ ಎಂದಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಶಕೀಬ್ ಸಿಂಗಾಪುರಕ್ಕೆ ತೆರಳುವ ಸಾಧ್ಯತೆ ಇದೆ. ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಶಬೀಕ್​ ಆಡುವುದು ಅನುಮಾನ.

ಏಕದಿನ ಶ್ರೇಯಾಂಕ


ನಂಬರ್ 1 ಬ್ಯಾಟರ್​: ಬಾಬರ್ ಅಜಂ (ಪಾಕಿಸ್ತಾನ)

ನಂಬರ್ 1 ಬೌಲರ್​​: ಕೇಶವ್ ಮಹಾರಾಜ್ (ದಕ್ಷಿಣ ಆಫ್ರಿಕಾ)

ನಂಬರ್ 1 ಆಲ್​ರೌಂಡರ್​: ಮೊಹಮ್ಮದ್ ನಬಿ (ಅಫಘಾಸ್ತಾನ)

ಟಿ20 ಶ್ರೇಯಾಂಕ


ನಂಬರ್ 1 ಬ್ಯಾಟರ್​: ಸೂರ್ಯಕುಮಾರ್ ಯಾದವ್ (ಭಾರತ)

ನಂಬರ್ 1 ಬೌಲರ್​​: ಆದಿಲ್ ರಶೀದ್ (ಇಂಗ್ಲೆಂಡ್)

ನಂಬರ್ 1 ಆಲ್​ರೌಂಡರ್: ಶಕೀಬ್ ಅಲ್ ಹಸನ್ (ಬಾಂಗ್ಲಾದೇಶ)

ಟೆಸ್ಟ್ ಶ್ರೇಯಾಂಕ


ನಂಬರ್ 1 ಬ್ಯಾಟರ್​: ಕೇನ್ ವಿಲಿಯಮ್ಸ್​ (ನ್ಯೂಜಿಲ್ಯಾಂಡ್​)

ನಂಬರ್ 1 ಬೌಲರ್​​: ಜಸ್​ಪ್ರೀತ್ ಬುಮ್ರಾ (ಭಾರತ)

ನಂಬರ್ 1 ಆಲ್​ರೌಂಡರ್​: ರವೀಂದ್ರ ಜಡೇಜಾ (ಭಾರತ)

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Irfan Pathan : ಇರ್ಫಾನ್ ಪಠಾಣ್​ ಮೇಕಪ್ ಆರ್ಟಿಸ್ಟ್​​ ವೆಸ್ಟ್​ ಇಂಡೀಸ್​ನ ಸ್ವಿಮ್ಮಿಂಗ್​ ಪೂಲ್​ನಲ್ಲಿ ಶವವಾಗಿ ಪತ್ತೆ!

Irfan Pathan : ಐಸಿಸಿ ಟಿ 20 ವಿಶ್ವಕಪ್ 2024 ಪ್ರಸ್ತುತ ಯುಎಸ್ಎ ಮತ್ತು ವೆಸ್ಟ್ ಇಂಡೀಸ್​ನಲ್ಲಿ ನಡೆಯುತ್ತಿದೆ. ಸೂಪರ್ 8 ಪಂದ್ಯಗಳು ವೆಸ್ಟ್ ಇಂಡೀಸ್​ನಲ್ಲಿ ನಡೆಯುತ್ತಿವೆ. ಪಠಾಣ್ ವಿಂಡೀಸ್​ಗೆ ತೆರಳಿದ್ದು ಅನ್ಸಾರಿಯೂ ಹೋಗಿದ್ದಾರೆ. ಜೂನ್ 21 ರ ಶುಕ್ರವಾರ ಸಂಜೆ ಅನ್ಸಾರಿ ಹೋಟೆಲ್ ಈಜುಕೊಳದಲ್ಲಿ ಸ್ನಾನ ಮಾಡುವಾಗ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವೆಸ್ಟ್ ಇಂಡೀಸ್ ನಿಂದ ಮಾಹಿತಿ ಸಿಕ್ಕಿದೆ.

VISTARANEWS.COM


on

Irfan Pathan
Koo

ನವದೆಹಲಿ: ಟಿ 20 ವಿಶ್ವಕಪ್​​ನ ವೀಕ್ಷಕ ವಿವರಣೆ ತಂಡದ ಭಾಗವಾಗಿ ವೆಸ್ಟ್​ ಇಂಡೀಸ್​ಗೆ ಹೋಗಿದ್ದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಅವರ ಮೇಕಪ್​ ಆರ್ಟಿಸ್ಟ್​ ಫಯಾಜ್ ಅನ್ಸಾರಿ ಇಂಡೀಸ್​ನ ಈಜುಕೊಳದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಫಯಾಜ್​ ಅವರು ವಿಶ್ವ ಕಪ್ ಹಿನ್ನೆಲೆಯಲ್ಲಿ ವೆಸ್ಟ್​ ಇಂಡೀಸ್​​ಗೆ ತೆರಳಿದ್ದರು. ಈ ದುರಂತ ಘಟನೆಯು ಅವರ ಕುಟುಂಬಕ್ಕೆ ಆಘಾತ ತಂದಿದೆ. ಫಯಾಜ್ ಅನ್ಸಾರಿ ಉತ್ತರ ಪ್ರದೇಶದ ಬಿಜ್ನೋರ್​​ ನಾಗಿನಾ ಮೂಲದವರು.

22 ವರ್ಷಗಳ ಹಿಂದೆ, ಬಿಜ್ನೋರ್​ನ ನಾಗಿನಾ ತಹಸಿಲ್​​ನ ಮೊಹಲ್ಲಾ ಖಾಜಿ ಸರಾಯ್ನ ಫಯಾಜ್ ಅನ್ಸಾರಿ ಮುಂಬೈಗೆ ತೆರಳಿ ತಮ್ಮದೇ ಆದ ಸಲೂನ್ ಪ್ರಾರಂಭಿಸಿದ್ದರು. ಈ ಸಮಯದಲ್ಲಿ, ಪಠಾಣ್ ಮೇಕಪ್​ಗಾಗಿ ಅವರ ಸಲೂನ್​ಗೆ ಭೇಟಿ ನೀಡಲು ಪ್ರಾರಂಭಿಸಿದರು. ತರುವಾಯ, ಮಾಜಿ ಆಲ್​ರೌಂಡರ್​ ಅನ್ಸಾರಿಯನ್ನು ತಮ್ಮ ವೈಯಕ್ತಿಕ ಮೇಕಪ್ ಕಲಾವಿದನನ್ನಾಗಿ ಇಟ್ಟುಕೊಂಡಿದ್ದರು. ಅವರನ್ನು ಅಂತಾರಾಷ್ಟ್ರೀಯ ಪ್ರವಾಸಗಳಿಗೆ ಕರೆದೊಯ್ಯುತ್ತಿದ್ದರು.

ಐಸಿಸಿ ಟಿ 20 ವಿಶ್ವಕಪ್ 2024 ಪ್ರಸ್ತುತ ಯುಎಸ್ಎ ಮತ್ತು ವೆಸ್ಟ್ ಇಂಡೀಸ್​ನಲ್ಲಿ ನಡೆಯುತ್ತಿದೆ. ಸೂಪರ್ 8 ಪಂದ್ಯಗಳು ವೆಸ್ಟ್ ಇಂಡೀಸ್​ನಲ್ಲಿ ನಡೆಯುತ್ತಿವೆ. ಪಠಾಣ್ ವಿಂಡೀಸ್​ಗೆ ತೆರಳಿದ್ದು ಅನ್ಸಾರಿಯೂ ಹೋಗಿದ್ದಾರೆ. ಜೂನ್ 21 ರ ಶುಕ್ರವಾರ ಸಂಜೆ ಅನ್ಸಾರಿ ಹೋಟೆಲ್ ಈಜುಕೊಳದಲ್ಲಿ ಈಜುವಾಗ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವೆಸ್ಟ್ ಇಂಡೀಸ್ ನಿಂದ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: Hardik Pandya : ಹಾರ್ದಿಕ್ ಪಾಂಡ್ಯ ನತಾಶಾಗೆ ವಿಚ್ಛೇದನ ಕೊಡುವುದು ಖಾತರಿ ಎಂದ ಟೀಮ್​ ಇಂಡಿಯಾ ಆಟಗಾರ

ಅನ್ಸಾರಿ ಅವರ ಸೋದರಸಂಬಂಧಿ ಮೊಹಮ್ಮದ್ ಅಹ್ಮದ್ ಅವರ ಪ್ರಕಾರ, ಅವರು ಕೇವಲ ಎರಡು ತಿಂಗಳ ಹಿಂದೆ ವಿವಾಹವಾಗಿದ್ದರು. ಎಂಟು ದಿನಗಳ ಹಿಂದೆಯಷ್ಟೇ ಬಿಜ್ನೋರ್​ನ ನಾಗಿನಾದಿಂದ ಮುಂಬೈಗೆ ಹೋಗಿದ್ದರು. ಹಠಾತ್ ಅಪಘಾತವು ಕುಟುಂಬವನ್ನು ದುಃಖದಲ್ಲಿ ಮುಳುಗಿಸಿದೆ. ಅವರ ಪತ್ನಿ ಮತ್ತು ಸಂಬಂಧಿಕರು ದುಃಖಿತರಾಗಿದ್ದರು.

ಅನ್ಸಾರಿ ಅವರ ದೇಹವನ್ನು ಭಾರತಕ್ಕೆ ತರಲು ಇರ್ಫಾನ್ ಪಠಾಣ್ ಸ್ವತಃ ವೆಸ್ಟ್ ಇಂಡೀಸ್​ನಲ್ಲಿ ಎಲ್ಲಾ ವ್ಯವಸ್ಥೆಗಳನ್ನು ಮಾಡುತ್ತಿದ್ದಾರೆ. ಕುಟುಂಬವು ದೆಹಲಿಯಲ್ಲಿ ಶವವನ್ನು ಸ್ವೀಕರಿಸಲು ಯೋಜನೆ ರೂಪಿಸಿದೆ. ಇದು ಸುಮಾರು ಮೂರರಿಂದ ನಾಲ್ಕು ದಿನಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ

Continue Reading

ಪ್ರಮುಖ ಸುದ್ದಿ

Hardik Pandya : ಹಾರ್ದಿಕ್ ಪಾಂಡ್ಯ ನತಾಶಾಗೆ ವಿಚ್ಛೇದನ ಕೊಡುವುದು ಖಾತರಿ ಎಂದ ಟೀಮ್​ ಇಂಡಿಯಾ ಆಟಗಾರ

Hardik Pandya : ಪತ್ನಿ ನತಾಶಾ ಸ್ಟಾಂಕೋವಿಕ್ ಅವರಿಂದ ವಿಚ್ಛೇದನದ ವರದಿಗಳೊಂದಿಗೆ ಅವರ ಜೀವನದಲ್ಲಿ ಭಾವನಾತ್ಮಕ ಪ್ರಕ್ಷುಬ್ಧತೆಗೆ ಕಾರಣವಾಯಿತು. ಇದೀಗ ಅವರ ಕುಟುಂಬದಲ್ಲಿ ಸಮಸ್ಯೆ ಆಗಿರುವುದು ಹೌದು ಎಂದು ಟೀಮ್ ಇಂಡಿಯಾ ಆಟಗಾರರೊಬ್ಬರು ಹೇಳಿದ್ದಾರೆ. ನತಾಶಾ ಜತೆಗೆ ಅವರ ಸಂಬಂಧ ಮುರಿದು ಬೀಳುವುದು ಬಹುತೇಕ ಖಚಿತ ಎಂಬುದಾಗಿ ಅವರು ಹೇಳಿದ್ದಾರೆ.

VISTARANEWS.COM


on

Hardik Pandya
Koo

ಬೆಂಗಳೂರು: ಪ್ರಸ್ತುತ ನಡೆಯುತ್ತಿರುವ ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ (T20 World Cup 2024) ಭಾರತದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಅವರ ಪ್ರದರ್ಶನವು ಗಮನ ಸೆಳೆದಿದೆ. ಮುಂಬೈ ಇಂಡಿಯನ್ಸ್ ನಾಯಕರಾಗಿ ಅವರು ಐಪಿಎಲ್ 2024 ರ ಕಳಪೆ ಋತುವಿನ ನಂತರ ವಿಶ್ವ ಕಪ್​ಗೆ ಪ್ರವೇಶ ಪಡೆದಿದ್ದಾರೆ. ಹೀಗಾಗಿ ಅವರು ಪ್ರದರ್ಶನದ ಬಗ್ಗೆ ಅನುಮಾನಗಳು ಇದ್ದವು. ಇದೀಗ ಎಲ್ಲ ಅನುಮಾನಗಳಿಗೆ ಪರಿಹಾರ ಕೊಟ್ಟಿದ್ದು, ಬ್ಯಾಟ್ ಮೂಲಕ ಮಿಂಚಿದ್ದಾರೆ.

ಐಪಿಎಲ್ 2024 ರಲ್ಲಿ ರೋಹಿತ್ ಶರ್ಮಾ ಅವರನ್ನು ಮುಂಬೈ ಇಂಡಿಯನ್ಸ್ (ಎಂಐ) ನಾಯಕನ ಸ್ಥಾನದಿಂದ ಇಳಿಸಿ ಹಾರ್ದಿಕ್​ಗೆ ಪಟ್ಟ ಕಟ್ಟಿದ್ದಕ್ಕಾಗಿ ಭಾರಿ ಟೀಕೆಗಳನ್ನು ಎದುರಿಸಿದ್ದರು. ನಂತರ ಪತ್ನಿ ನತಾಶಾ ಸ್ಟಾಂಕೋವಿಕ್ ಅವರಿಂದ ವಿಚ್ಛೇದನದ ವರದಿಗಳೊಂದಿಗೆ ಅವರ ಜೀವನದಲ್ಲಿ ಭಾವನಾತ್ಮಕ ಪ್ರಕ್ಷುಬ್ಧತೆಗೆ ಕಾರಣವಾಯಿತು. ಇದೀಗ ಅವರ ಕುಟುಂಬದಲ್ಲಿ ಸಮಸ್ಯೆ ಆಗಿರುವುದು ಹೌದು ಎಂದು ಟೀಮ್ ಇಂಡಿಯಾ ಆಟಗಾರರೊಬ್ಬರು ಹೇಳಿದ್ದಾರೆ. ನತಾಶಾ ಜತೆಗೆ ಅವರ ಸಂಬಂಧ ಮುರಿದು ಬೀಳುವುದು ಬಹುತೇಕ ಖಚಿತ ಎಂಬುದಾಗಿ ಅವರು ಹೇಳಿದ್ದಾರೆ.

ನತಾಶಾ ಮತ್ತು ಹಾರ್ದಿಕ್ ದಾಂಪತ್ಯದಲ್ಲಿ ಬಿರುಕು ಬಿಟ್ಟಿದೆ ಎಂಬುದಾಗಿ ಐಪಿಎಲ್ ಮುಕ್ತಾಯಗೊಂಡ ತಕ್ಷಣ ಸುದ್ದಿಯಾಗಿತ್ತು. ಈ ಸುದ್ದಿಗೆ ರೆಕ್ಕೆ ಪುಕ್ಕಗಳು ಹುಟ್ಟಿಕೊಂಡ ಕಾರಣ ಅದು ಚರ್ಚೆಯ ವಿಷಯವಾಯಿತು. ನತಾಶಾ ಸ್ಟಾಂಕೊವಿಕ್​ ಪತಿಯನ್ನು ತೊರೆದಿದ್ದಾರೆ ಎಂಬುದಾಗಿ ಸುದ್ದಿಯಾಯಿತು. ತನ್ನ ಇನ್​​ಸ್ಟಾಗ್ರಾಮ್​ ಬಯೊದಲ್ಲಿ ಪಾಂಡ್ಯ ಹೆಸರನ್ನು ತೆಗೆದಿರುವುದೇ ಅದಕ್ಕೆ ಕಾರಣ. ಕೊನೆಯಲ್ಲಿ ಅದಕ್ಕೆ ತೇಪೆ ಹಚ್ಚಲಾಯಿತು. ತಾವು ಜತೆಗೆ ಇದ್ದೇವೆ ಎಂಬ ಪರೋಕ್ಷ ಸಂದೇಶವನ್ನು ನತಾಶಾ ಕಳುಹಿಸಿದ್ದರು. ಆದರೆ ಅದು ಖಾತರಿಯಾಗಿರಲಿಲ್ಲ. ಇದೀಗ ಆ ಸುದ್ದಿಯನ್ನೂ ನಿರಾಕರಿಸಲಾಗಿದೆ.

ಟೀಕಾಕಾರರ ಬಾಯಿ ಮುಚ್ಚಿದ ಹಾರ್ದಿಕ್ ಪಾಂಡ್ಯ

ಐರ್ಲೆಂಡ್ ವಿರುದ್ಧದ ಭಾರತದ ಆರಂಭಿಕ ಪಂದ್ಯದಲ್ಲಿ, ಪಾಂಡ್ಯ ತಮ್ಮ ನಾಲ್ಕು ಓವರ್​​ಗಳಲ್ಲಿ 27 ರನ್​​ಗಳಿಗೆ ಮೂರು ವಿಕೆಟ್​​ಗಳನ್ನು ಪಡೆದಿದ್ದದರು. 2024 ರ ಟಿ 20 ವಿಶ್ವಕಪ್ ಅಭಿಯಾನದಲ್ಲಿ ತಮ್ಮ ತಂಡದ ಗೆಲುವಿನ ಪ್ರಾರಂಭದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದು ಪಾಂಡ್ಯ ಮತ್ತು ಟೀಮ್ ಇಂಡಿಯಾ ಇಬ್ಬರಿಗೂ ಗಮನಾರ್ಹ ಆತ್ಮವಿಶ್ವಾಸವನ್ನು ಹೆಚ್ಚಿಸಿತು.

ಐಪಿಎಲ್ 2024 ಫಾರ್ಮ್ ಕಾರಣದಿಂದಾಗಿ ಟಿ 20 ವಿಶ್ವಕಪ್ 2024 ತಂಡದಲ್ಲಿ ಅವರನ್ನು ಸೇರಿಸುವ ಬಗ್ಗೆ ಆರಂಭಿಕ ಅನುಮಾನಗಳ ಹೊರತಾಗಿಯೂ, ಸ್ಟಾರ್ ಭಾರತೀಯ ಆಲ್ರೌಂಡರ್ ಪ್ರಸ್ತುತ ನಡೆಯುತ್ತಿರುವ ಮೆಗಾ ಐಸಿಸಿ ಈವೆಂಟ್​​ನ್ಲಿ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ತಮ್ಮ ಪರಿಣಾಮಕಾರಿ ಪ್ರದರ್ಶನ ನೀಡುತ್ತಿದ್ದಾರೆ.

ಅವರು ಭಾರತೀಯ ಕ್ರಿಕೆಟ್ ತಂಡಕ್ಕೆ ಉತ್ತಮ ಸಮತೋಲನ ಒದಗಿಸುತ್ತಿದ್ದಾರೆ, ಪ್ಲೇಯಿಂಗ್ ಇಲೆವೆನ್​ ಸಂಯೋಜನೆಗಳಿಗೆ ಪೂರಕವಾಗಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಟಿ 20 ವಿಶ್ವಕಪ್ 2024 ಪ್ರಗತಿಯಲ್ಲಿ, ಮೆನ್ ಇನ್ ಬ್ಲೂ ಪಂದ್ಯಾವಳಿಯಲ್ಲಿ ಪಾಂಡ್ಯ ಅವರ ಅದ್ಭುತ ಫಾರ್ಮ್ ಅನ್ನು ಮುಂದುವರಿಸಲು ಇಲ್ಲಿಯವರೆಗೆ ಅವರ ಮೂರು ಇನ್ನಿಂಗ್ಸ್​ಗಳಲ್ಲಿ 7, 32, 50* ರನ್ ಬಾರಿಸಿದ್ದಾರೆ.

ಇದನ್ನೂ ಓದಿ: T20 World Cup 2024 : ದಕ್ಷಿಣ ಆಫ್ರಿಕಾ ತಂಡ ಸೆಮೀಸ್​ಗೆ, ಆತಿಥೇಯ ವಿಂಡೀಸ್ ಔಟ್​

ಬಾಂಗ್ಲಾದೇಶ ವಿರುದ್ಧ 27 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು. ಹಾರ್ದಿಕ್ ಅವರ ಬೌಲಿಂಗ್ ಪ್ರದರ್ಶನದ ಬಗ್ಗೆ ಮಾತನಾಡುತ್ತಾ, ಭಾರತದ ಸ್ಟಾರ್ ಆಲ್ರೌಂಡರ್ ಪ್ರಸ್ತುತ ನಡೆಯುತ್ತಿರುವ ಟಿ 20 ವಿಶ್ವಕಪ್ 2024 ರಲ್ಲಿ ಇಲ್ಲಿಯವರೆಗೆ 8 ವಿಕೆಟ್​​ ಪಡೆಯುವ ಮೂಲಕ ಸ್ಥಿರವಾಗಿ ಬೌಲಿಂಗ್ ಮಾಡುತ್ತಿದ್ದಾರೆ.

ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಮತ್ತು ಬೌಲಿಂಗ್​ಗೆ ಮೆಚ್ಚುಗೆ ತೋರಿದ ರಾಬಿನ್ ಉತ್ತಪ್ಪ

ಪ್ರಸ್ತುತ ನಡೆಯುತ್ತಿರುವ ಪಂದ್ಯಾವಳಿಯಲ್ಲಿ ಪಾಂಡ್ಯ ಅವರ ಅಸಾಧಾರಣ ಪಾತ್ರವನ್ನು ಶ್ಲಾಘಿಸಿದ ಮಾಜಿ ಬ್ಯಾಟರ್​ ರಾಬಿನ್​ ಉತ್ತಪ್ಪ, ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಅವರ ಪ್ರಭಾವಶಾಲಿ ಪ್ರದರ್ಶನ ತಂಡಕ್ಕೆ ನೆರವಾಗಿದೆ ಎಂದು ಹೇಳಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ ವೃತ್ತಿಪರವಾಗಿ ಮತ್ತು ವೈಯಕ್ತಿಕವಾಗಿ ಅವರು ಎದುರಿಸಿದ ಸವಾಲುಗಳನ್ನು ಪರಿಗಣಿಸಿ ಪಾಂಡ್ಯ ಅವರ ಪ್ರಸ್ತುತ ಫಾರ್ಮ್ ಇನ್ನೂ ಗಮನಾರ್ಹ ಎಂದು ಹೇಳಿದರು.

Continue Reading

ಪ್ರಮುಖ ಸುದ್ದಿ

T20 World Cup 2024 : ದಕ್ಷಿಣ ಆಫ್ರಿಕಾ ತಂಡ ಸೆಮೀಸ್​ಗೆ, ಆತಿಥೇಯ ವಿಂಡೀಸ್ ಔಟ್​

T20 World Cup 2024 : ಸತತ ಏಳನೇ ಗೆಲುವು ಸಾಧಿಸಿದ ದಕ್ಷಿಣ ಆಫ್ರಿಕಾ ಗ್ರೂಪ್ 2 ಅಂಕಪಟ್ಟಿಯಲ್ಲಿ ಸೂಪರ್ 8 ಸ್ಥಾನ ಗಳಿಸಿದೆ. ಮತ್ತೊಂದೆಡೆ, ಕೆರಿಬಿಯನ್ ತಂಡವು ತಮ್ಮ ಎಲ್ಲಾ ಗ್ರೂಪ್ ಸಿ ಪಂದ್ಯಗಳನ್ನು ಗೆದ್ದಿತು, ನಂತರ ಅವರು ಯುನೈಟೆಡ್ ಸ್ಟೇಟ್ಸ್ ಅನ್ನು 9 ವಿಕೆಟ್​​ಗಳಿಂದ ಸೋಲಿತ್ತು. ಆದರೆ ಕ್ವಾರ್ಟರ್ ಫೈನಲ್​​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸೋತ ನಂತರ ಆ ತಂಡ ಹೊರಗುಳಿಯಲಿದೆ.

VISTARANEWS.COM


on

T20 World Cup 2024
Koo

ಬೆಂಗಳೂರು: 2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ (T20 World Cup 2024) ದಕ್ಷಿಣ ಆಫ್ರಿಕಾ ಸೆಮಿಫೈನಲ್ ಪ್ರವೇಶಿಸಿದೆ. ಇದೇ ವೇಳೆ ಆತಿಥೇಯ ವೆಸ್ಟ್ ಇಂಡೀಸ್​ ಬಳಗ ಟೂರ್ನಿಯಿಂದ ಹೊರಕ್ಕೆ ಬಿದ್ದಿದೆ. ಬಿ ಗುಂಪಿನಿಂದ ಇಂಗ್ಲೆಂಡ್ ತಂಡವೂ ಸೆಮೀಸ್​ಗೆ ಎಂಟ್ರಿ ತೆಗೆದುಕೊಂಡಿದೆ ಆಂಟಿಗುವಾದ ನಾರ್ತ್ ಸೌಂಡ್​​ನ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ಸಹ ಆತಿಥೇಯ ವೆಸ್ಟ್ ಇಂಡೀಸ್ ತಂಡವನ್ನು 3 ವಿಕೆಟ್​​ಗಳಿಂದ (ಡಕ್​​ವರ್ತ್​ ಲೂಯಿಸ್​ ನಿಯಮದ ಪ್ರಕಾ ) ಸೋಲಿಸಿತು. ಮಳೆಯಿಂದ ಮೊಟಕುಗೊಂಡ ಪಂದ್ಯದಲ್ಲಿ ಏಡೆನ್ ಮಾರ್ಕ್ರಮ್ ಪಡೆ 5 ಎಸೆತಗಳು ಬಾಕಿ ಇರುವಾಗಲೇ 123 ರನ್​ಗಳ ಪರಿಷ್ಕೃತ ಗುರಿಯನ್ನು ಬೆನ್ನಟ್ಟಿತು. 2009 ಮತ್ತು 2014ರ ಬಳಿಕ ದಕ್ಷಿಣ ಆಫ್ರಿಕಾ ಸೆಮಿಫೈನಲ್ ಪ್ರವೇಶಿಸುತ್ತಿರುವುದು ಇದು ಮೂರನೇ ಬಾರಿ.

ಸತತ ಏಳನೇ ಗೆಲುವು ಸಾಧಿಸಿದ ದಕ್ಷಿಣ ಆಫ್ರಿಕಾ ಗ್ರೂಪ್ 2 ಅಂಕಪಟ್ಟಿಯಲ್ಲಿ ಸೂಪರ್ 8 ಸ್ಥಾನ ಗಳಿಸಿದೆ. ಮತ್ತೊಂದೆಡೆ, ಕೆರಿಬಿಯನ್ ತಂಡವು ತಮ್ಮ ಎಲ್ಲಾ ಗ್ರೂಪ್ ಸಿ ಪಂದ್ಯಗಳನ್ನು ಗೆದ್ದಿತು, ನಂತರ ಅವರು ಯುನೈಟೆಡ್ ಸ್ಟೇಟ್ಸ್ ಅನ್ನು 9 ವಿಕೆಟ್​​ಗಳಿಂದ ಸೋಲಿತ್ತು. ಆದರೆ ಕ್ವಾರ್ಟರ್ ಫೈನಲ್​​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸೋತ ನಂತರ ಆ ತಂಡ ಹೊರಗುಳಿಯಲಿದೆ.

ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡಕ್ಕೆ ಶಾಯ್ ಹೋಪ್ ಮತ್ತು ನಿಕೋಲಸ್ ಪೂರನ್ 1.1 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 5 ರನ್ ಗಳಿಸಿ ಬೇಗನೆ ನಿರ್ಗಮಿಸಿದರು. ಜಾನ್ಸನ್ ಚಾರ್ಲ್ಸ್ ಬದಲಿಗೆ ಬಂದ ಕೈಲ್ ಮೇಯರ್ಸ್ ಮತ್ತು ರೋಸ್ಟನ್ ಚೇಸ್ 10.5 ಓವರ್​​ಗಳಲ್ಲಿ 81 ರನ್​​ಗಳ ಜೊತೆಯಾಟದೊಂದಿಗೆ ತಂಡವನ್ನು ಮುನ್ನಡೆಸಿದರು. ತಬ್ರೈಜ್ ಶಮ್ಸಿ ವಿಕೆಟ್ ಪಡೆಯುವ ಮೊದಲು ಮೇಯರ್ಸ್ ತಮ್ಮ 35 ರನ್ ಗಳಲ್ಲಿ ಭರವಸೆದಾಯಕವಾಗಿ ಕಾಣಿಸಿಕೊಂಡರು.

ಚೇಸ್ 39 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. ಆದರೆ ಅವರು ಶಮ್ಸಿ ಎಸೆತಕ್ಕೆ ಔಟಾದರು. ನಾಯಕ ರೋವ್ಮನ್ ಪೊವೆಲ್ ಮತ್ತು ಶೆರ್ಫೇನ್ ರುದರ್ಫೋರ್ಡ್ ಬ್ಯಾಟಿಂಗ್​ನಲ್ಲಿ ಎಡವಿದ್ದರಿಂದ ಕೆರಿಬಿಯನ್ ತಂಡವು ಸಂಕಷ್ಟಕ್ಕೆ ಸಿಲುಕಿತು. ಆಂಡ್ರೆ ರಸೆಲ್ ಮತ್ತು ಅಲ್ಜಾರಿ ಜೋಸೆಫ್ 15 ಮತ್ತು 11 ರನ್ ಗಳಿಸಿ ವೆಸ್ಟ್ ಇಂಡೀಸ್ 8 ವಿಕೆಟ್ ನಷ್ಟಕ್ಕೆ 135 ರನ್ ಗಳಿಸಲು ನೆರವಾದರು.

ಒಟ್ನೀಲ್ ಬಾರ್ಟ್ಮನ್ ಬದಲಿಗೆ ಬದಲಿ ಆಟಗಾರನಾಗಿ ಕರೆತರಲ್ಪಟ್ಟ ಶಮ್ಸಿ, 4ಓವರ್​ಗಳಲ್ಲಿ 27 ರನ್​ ನೀಡಿ 3 ವಿಕೆಟ್​ ಉರುಳಿಸಿದರು. ಮಾರ್ಕೊ ಜಾನ್ಸೆನ್, ಐಡೆನ್ ಮಾರ್ಕ್ರಮ್, ಕೇಶವ್ ಮಹಾರಾಜ್ ಮತ್ತು ಕಗಿಸೊ ರಬಾಡ ತಲಾ ಒಂದು ವಿಕೆಟ್ ಪಡೆದರು. ರಬಾಡ ಅಕೆಲ್ ಹೊಸೈನ್ ವಿಕೆಟ್​ ಪಡೆದರು.

ಉತ್ತಮ ಆರಂಭ ಸಿಗಲಿಲ್ಲ

ರೀಜಾ ಹೆಂಡ್ರಿಕ್ಸ್ ಮತ್ತು ಕ್ವಿಂಟನ್ ಡಿ ಕಾಕ್ ಅಗ್ಗವಾಗಿ ಔಟಾಗಿದ್ದರಿಂದ ದಕ್ಷಿಣ ಆಫ್ರಿಕಾಕ್ಕೆ ಆಹ್ಲಾದಕರ ಆರಂಭ ಸಿಗಲಿಲ್ಲ. ಡಿ ಕಾಕ್ 3 ಬೌಂಡರಿಗಳೊಂದಿಗೆ ಪ್ರಾರಂಭಿಸಿದರು. ಆದರೆ ಮುಂದುವರಿಯಲು ಸಾಧ್ಯವಾಗಲಿಲ್ಲ. ಬಳಿಕ ಸುರಿದ ಮಳೆ ಪಂದ್ಯವನ್ನು ಹಾಳುಮಾಡುವ ಬೆದರಿಕೆ ಹಾಕಿತು. ಆದರೆ ಕೇವಲ 3 ಓವರ್​​ ಮಾತ್ರ ಕಡಿಮೆ ಮಾಡಲಾಯಿತು.

ಇದನ್ನೂ ಓದಿ: IND vs AUS : ಭಾರತ – ಆಸ್ಟ್ರೇಲಿಯಾ ಪಂದ್ಯಕ್ಕೆ ಮಳೆ ಬಂದರೆ ಪಂದ್ಯದ ಗತಿಯೇನು?

18 ರನ್ ಗಳಿಗೆ ಮಾರ್ಕ್ರಮ್ ಔಟಾದರು. ಹೆನ್ರಿಕ್ ಕ್ಲಾಸೆನ್ 10 ಎಸೆತಗಳಲ್ಲಿ 22 ರನ್ ಗಳಿಸಿದರು. ಸ್ಟಬ್ಸ್ ಮಧ್ಯಮ ಕ್ರಮಾಂಕದಲ್ಲಿ ಉತ್ತಮವಾಗಿ ಆಡಿದರು. ಆದರೆ ಸ್ಟಬ್ಸ್ 29 ರನ್ ಗಳಿಗೆ ನಿರ್ಗಮಿಸಿದ ನಂತರ, ದಕ್ಷಿಣ ಆಫ್ರಿಕಾವು ನಡುಗಿತು. ಆದರೆ ಜಾನ್ಸೆನ್ 14 ಎಸೆತಗಳಲ್ಲಿ 21 ರನ್ ಗಳಿಸಿ ದಕ್ಷಿಣ ಆಫ್ರಿಕಾವನ್ನು 16.1 ಓವರ್​ಗಳಲ್ಲಿ ಗೆಲುವಿನ ದಡ ಸೇರಿಸಿದರು.

Continue Reading

ವಿದೇಶ

Lalit Modi: ಸಿದ್ಧಾರ್ಥ್‌ ಮಲ್ಯ ವಿವಾಹ ಸಮಾರಂಭದಲ್ಲಿ ಕಾಣಿಸಿಕೊಂಡ ಐಪಿಎಲ್​ನ ಮಾಜಿ ಅಧ್ಯಕ್ಷ ಲಲಿತ್ ಮೋದಿ

Lalit Modi: ಮದ್ಯದ ದೊರೆ, ಆರ್​ಸಿಬಿ ಫ್ರಾಂಚೈಸಿಯ ಮಾಜಿ ಮಾಲಿಕ ವಿಜಯ್‌ ಮಲ್ಯ ಅವರ ಪುತ್ರ ಸಿದ್ಧಾರ್ಥ್‌ ಮಲ್ಯ ತಮ್ಮ ಬಹುಕಾಲದ ಗೆಳತಿ ಜಾಸ್ಮಿನ್ ಜತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂಗ್ಲೆಂಡ್‌ನಲ್ಲಿ ನಡೆದ ಈ ಮದುವೆ ಸಮಾರಂಭದಲ್ಲಿ ಹಣಕಾಸು ಅಕ್ರಮದ ಆರೋಪದಲ್ಲಿ ಸಿಲುಕಿ ಭಾರತ ಬಿಟ್ಟು ಪರಾರಿಯಾಗಿರುವ ಐಪಿಎಲ್​ನ ಮಾಜಿ ಅಧ್ಯಕ್ಷ ಲಲಿತ್ ಮೋದಿ ಭಾಗಿಯಾಗಿದ್ದರು. ಸಿದ್ಧಾರ್ಥ್ ಮಲ್ಯ ಮತ್ತು ಜಾಸ್ಮಿನ್ ಹರ್ಟ್ಫೋರ್ಡ್ಶೈರ್‌ನಲ್ಲಿರುವ ವಿಜಯ್ ಮಲ್ಯ ಅವರ ಐಷಾರಾಮಿ ಎಸ್ಟೇಟ್‌ನಲ್ಲಿ ಆಪ್ತರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಆರಂಭದಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ, ಬಳಿಕ ಹಿಂದೂ ಪದ್ಧತಿಯಂತೆ ವಿವಾಹ ಸಮಾರಂಭ ನಡೆಯಿತು.

VISTARANEWS.COM


on

Lalit Modi
Koo

ಲಂಡನ್‌: ಮದ್ಯದ ದೊರೆ, ಆರ್​ಸಿಬಿ ಫ್ರಾಂಚೈಸಿಯ ಮಾಜಿ ಮಾಲಿಕ ವಿಜಯ್‌ ಮಲ್ಯ (Vijay Mallya) ಅವರ ಪುತ್ರ ಸಿದ್ಧಾರ್ಥ್‌ ಮಲ್ಯ (Siddharth Mallya) ತಮ್ಮ ಬಹುಕಾಲದ ಗೆಳತಿ ಜಾಸ್ಮಿನ್ (Jasmine) ಜತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂಗ್ಲೆಂಡ್‌ನಲ್ಲಿ ನಡೆದ ಈ ಮದುವೆ ಸಮಾರಂಭದಲ್ಲಿ ಹಣಕಾಸು ಅಕ್ರಮದ ಆರೋಪದಲ್ಲಿ ಸಿಲುಕಿ ಭಾರತ ಬಿಟ್ಟು ಪರಾರಿಯಾಗಿರುವ ಐಪಿಎಲ್​ನ ಮಾಜಿ ಅಧ್ಯಕ್ಷ ಲಲಿತ್ ಮೋದಿ (Lalit Modi) ಭಾಗಿಯಾಗಿ ಅಚ್ಚರಿ ಮೂಡಿಸಿದ್ದಾರೆ.

ಸಿದ್ಧಾರ್ಥ್ ಮಲ್ಯ ಮತ್ತು ಜಾಸ್ಮಿನ್ ಹರ್ಟ್ಫೋರ್ಡ್ಶೈರ್‌ನಲ್ಲಿರುವ ವಿಜಯ್ ಮಲ್ಯ ಅವರ ಐಷಾರಾಮಿ ಎಸ್ಟೇಟ್‌ನಲ್ಲಿ ಆಪ್ತರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಆರಂಭದಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ, ಬಳಿಕ ಹಿಂದೂ ಪದ್ಧತಿಯಂತೆ ವಿವಾಹ ಸಮಾರಂಭ ನಡೆಯಿತು.

ವಿಜಯ್ ಮಲ್ಯ 900 ಕೋಟಿ ರೂ.ಗಳ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿದ್ದರೆ ಲಲಿತ್ ಮೋದಿ ವಿರುದ್ಧ ತೆರಿಗೆ ವಂಚನೆ, ಹಣ ಅಕ್ರಮ ವರ್ಗಾವಣೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ. ಇಬ್ಬರೂ ಭಾರತಕ್ಕೆ ಬೇಕಾದ ಆರೋಪಿಗಳು. ಅವರನ್ನು ಕರೆ ತರಲು ಭಾರತ ಪ್ರಯತ್ನಿಸುತ್ತಲೇ ಇದೆ.

2010ರ ಐಪಿಎಲ್ ಬಳಿಕ ಲಲಿತ್ ಮೋದಿ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI)ಯಿಂದ ಅಮಾನತುಗೊಳಿಸಲಾಗಿತ್ತು. ದುರ್ನಡತೆ ಮತ್ತು ವ್ಯವಹಾರಗಳಲ್ಲಿ ಹಣಕಾಸು ಅಕ್ರಮಗಳ ಆರೋಪದ ನಂತರ ಈ ಕ್ರಮ ಕೈಗೊಳ್ಳಲಾಗಿತ್ತು. ಐಪಿಎಲ್ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ವಿಶ್ವ ಕ್ರೀಡಾ ಗುಂಪಿನ (World Sports Group) ಅಧಿಕಾರಿಗಳೊಂದಿಗೆ ಶಾಮೀಲಾಗಿ 753 ಕೋಟಿ ರೂ.ಗಳನ್ನು ವಂಚಿಸಿದ್ದಾರೆ ಎಂದು ಬಿಸಿಸಿಐ ಆರೋಪಿಸಿದೆ.

ಕಿಂಗ್‌ಫಿಶರ್‌ ಏರ್‌ಲೈನ್ಸ್‌ನ 9೦೦ ಕೋಟಿ ರೂ. ಸುಸ್ತಿ ಸಾಲದ ಮರು ವಸೂಲು ಪ್ರಕರಣದಲ್ಲಿ ವಿಜಯ್‌ ಮಲ್ಯ ಪ್ರಮುಖ ಆರೋಪಿ. ಎಸ್‌ಬಿಐ ನೇತೃತ್ವದ ಬ್ಯಾಂಕ್‌ಗಳ ಒಕ್ಕೂಟ ಮಲ್ಯ ವಿರುದ್ಧ ಕಾನೂನು ಕ್ರಮ ಕೈಗೊಂಡಿದೆ. ಈ ಕೇಸ್‌ನಲ್ಲಿ ಮಲ್ಯ ನ್ಯಾಯಾಂಗ ನಿಂದನೆಯನ್ನೂ ಎದುರಿಸುತ್ತಿದ್ದಾರೆ.

ವರ್ಷದ ಹಿಂದೆಯೇ ಪ್ರಪೋಸ್

ಬಹುಕಾಲದ ಗೆಳತಿ ಜಾಸ್ಮಿನ್‌ಗೆ(Siddharth Mallya Marries GF Jasmine) 2023ರ ಆರಂಭದಲ್ಲಿ ಸಿದ್ಧಾರ್ಥ್ ಪ್ರಪೋಸ್ ಮಾಡಿದ್ದರು. ಕ್ಯಾಲಿಫೋರ್ನಿಯಾದಲ್ಲಿನ ಹ್ಯಾಲೋವಿನ್ ಪಾರ್ಟಿಯಲ್ಲಿ ಸಿದ್ದಾರ್ಥ್ ಹಾಗೂ ಜಾಸ್ಮಿನ್ ಇಬ್ಬರು ಜತೆಯಾಗಿ ಪಾಲ್ಗೊಂಡಿದ್ದರು. ಈ ವೇಳೆ ಸಿದ್ದಾರ್ಥ್ ತಮ್ಮ ಪ್ರೀತಿಯನ್ನು ಹೇಳಿಕೊಂಡಿದ್ದರು. ಇದಕ್ಕೆ ಜಾಸ್ಮಿನ್ ಗ್ರೀನ್ ಸಿಗ್ನಲ್ ನೀಡಿದ್ದರು. ಬಳಿಕ ಈ ಜೋಡಿ ಕಳೆದ ವರ್ಷವೇ ನಿಶ್ಚಿತಾರ್ಥ ಮಾಡಿಕೊಂಡಿತ್ತು. ಇದೀಗ ಜಾಸ್ಮಿನ್ ರಿಂಗ್​ ತೊಟ್ಟ ಫೋಟೊವನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳುವ ಮೂಲಕ ಮದುವೆಯಾದ ವಿಚಾರವನ್ನು ಖಚಿತಪಡಿಸಿದ್ದಾರೆ.

ಇದನ್ನೂ ಓದಿ: Sidhartha Mallya: ಹಸೆಮಣೆಗೇರಲು ಸಜ್ಜಾದ ದೀಪಿಕಾ ಪಡುಕೋಣೆ ಮಾಜಿ ಪ್ರೇಮಿ ಸಿದ್ಧಾರ್ಥ್‌ ಮಲ್ಯ

ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿ ಜನಿಸಿದ ಸಿದ್ಧಾರ್ಥ್‌ ಮಲ್ಯ ಲಂಡನ್‌ನಲ್ಲಿ ಶಿಕ್ಷಣ ಪೂರೈಸಿದರು. ಪದವಿ ಪಡೆದ ನಂತರ ಅವರು ಮಾಡೆಲ್‌ ಮತ್ತು ನಟನಾಗಿ ವೃತ್ತಿ ಜೀವನ ಆರಂಭಿಸಿದರು. ಆರಂಭದಲ್ಲಿ ಅವರು ʼಬ್ರಾಹ್ಮಣ ನಮನ್ʼ (Brahman Naman), ʼಬೆಸ್ಟ್‌ ಫೇಕ್‌ ಫ್ರೆಂಡ್ಸ್‌ʼ (Best Fake Friends) ಮುಂತಾದ ಚಿತ್ರಗಳಲ್ಲಿ ನಟಿಸಿದರು. ಬಳಿಕ ಅಭಿನಯದಿಂದ ದೂರ ಸರಿದಿದ್ದರು.

Continue Reading
Advertisement
Sleep After Lunch
ಲೈಫ್‌ಸ್ಟೈಲ್3 mins ago

Sleep After Lunch: ಊಟದ ನಂತರ ನಮಗೆ ಆಕಳಿಕೆ, ನಿದ್ದೆ ಬರುವುದೇಕೆ?

R Ashok demands that the Congress apologize for imposing emergency
ಕರ್ನಾಟಕ10 mins ago

R Ashok: ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‌ ಕ್ಷಮೆ ಕೋರಲಿ, ರಾಹುಲ್‌ ಗಾಂಧಿ ತಲೆಬಾಗಲಿ; ಆರ್‌. ಅಶೋಕ್‌

Viral Video
Latest17 mins ago

Viral Video: ರೀಲ್ಸ್ ಮಾಡಲು ಹೋದ ವಿದ್ಯಾರ್ಥಿನಿಗೆ ಕೊನೆಗೆ ಆಗಿದ್ದೇನು? ವಿಡಿಯೊ ನೋಡಿ

JP Nadda
ದೇಶ23 mins ago

JP Nadda: ರಾಜ್ಯಸಭೆ ಸದನ ನಾಯಕರಾಗಿ ಜೆ.ಪಿ. ನಡ್ಡಾ ಆಯ್ಕೆ; ಪಿಯೂಷ್‌ ಗೋಯಲ್‌ ಬದಲು ನೇಮಕ

LKG UKG in Anganwadis
ಪ್ರಮುಖ ಸುದ್ದಿ24 mins ago

LKG UKG in Anganwadis: ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ಸಿಎಂ ಸಹಮತ

Monsoon Trench Coat Fashion
ಫ್ಯಾಷನ್33 mins ago

Monsoon Trench Coat Fashion: ಮಾನ್ಸೂನ್‌ಗೂ ಕಾಲಿಟ್ಟ ಟ್ರೆಂಚ್‌ ಕೋಟ್‌ ಫ್ಯಾಷನ್‌!

Kamal Haasan predicts Deepika Padukone baby choose cinema career
ಟಾಲಿವುಡ್48 mins ago

Kamal Haasan: ಮುಂದೊಂದು ದಿನ ದೀಪಿಕಾ ಮಗು ಸಿನಿಮಾ ಮಾಡಬಹುದು ಎಂದು ಭವಿಷ್ಯ ನುಡಿದ ಕಮಲ್‌ ಹಾಸನ್‌!

tumkur Shoot out
ಕ್ರೈಂ56 mins ago

Tumkur Shoot out : ತುಮಕೂರಿನಲ್ಲಿ ಸದ್ದು ಮಾಡಿದ ಪೊಲೀಸ್ ತುಪಾಕಿ; ಸರಗಳ್ಳನ ಹೆಡೆಮುರಿ ಕಟ್ಟಿದ ಖಾಕಿ

LKG UKG In Govt Schools
ಕರ್ನಾಟಕ1 hour ago

LKG UKG In Govt Schools: ಅಂಗನವಾಡಿ ನೌಕರರ ಧರಣಿ; ಬೇಡಿಕೆಗಳನ್ನು ಸಿಎಂ ಗಮನಕ್ಕೆ ತಂದ ಲಕ್ಷ್ಮಿ ಹೆಬ್ಬಾಳ್ಕರ್‌

Sex Doll
ದೇಶ1 hour ago

AI Sex Dolls: ಶೀಘ್ರವೇ ಬರಲಿವೆ ಎಐ ಆಧಾರಿತ ‘ಸೆಕ್ಸ್‌’ ಬೊಂಬೆಗಳು; ನೈಜ ‘ಸುಖ’ಕ್ಕೆ ಇನ್ನು ಮನುಷ್ಯರೇ ಬೇಕಿಲ್ಲ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ3 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ4 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌