21ನೇ ಶತಮಾನವನ್ನು ಗೆದ್ದು ಬೀಗಲಿದೆ ಭಾರತ; ರಾಮನಾಥ ಕೋವಿಂದ್‌ ವಿದಾಯದ ಭಾಷಣ - Vistara News

ದೇಶ

21ನೇ ಶತಮಾನವನ್ನು ಗೆದ್ದು ಬೀಗಲಿದೆ ಭಾರತ; ರಾಮನಾಥ ಕೋವಿಂದ್‌ ವಿದಾಯದ ಭಾಷಣ

ರಾಮನಾಥ ಕೋವಿಂದ್‌ ಅವರಿಗಾಗಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಔತಣಕೂಟ ಏರ್ಪಡಿಸಿದ್ದರು. ಶನಿವಾರ ಸಂಸತ್ತಿನಲ್ಲಿ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿತ್ತು.

VISTARANEWS.COM


on

Ram Nath Kovind
ರಾಮನಾಥ ಕೋವಿಂದ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ನಾಳೆ (ಜುಲೈ 25) ರಾಷ್ಟ್ರಪತಿ ಹುದ್ದೆಯಿಂದ ನಿರ್ಗಮಿಸಲಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಇಂದು ವಿದಾಯದ ಭಾಷಣ ಮಾಡಿದರು. ʼಈ 21ನೇ ಶತಮಾನವನ್ನು ಭಾರತ ಸ್ವಂತದ್ದು ಮಾಡಿಕೊಳ್ಳುವ ಎಲ್ಲ ಲಕ್ಷಣಗಳೂ ಗೋಚರಿಸುತ್ತಿದೆ. ಅಂದರೆ ಈ ಶತಮಾನವನ್ನು ಗೆದ್ದು, ಮಾದರಿ ರಾಷ್ಟ್ರವಾಗುವ ಮಾರ್ಗದಲ್ಲಿ ದಾಪುಗಾಲು ಇಡುತ್ತಿದೆ ಎಂದು ಹೇಳಿದರು. ರಾಷ್ಟ್ರಪತಿ ಭವನದಿಂದ ದೂರದರ್ಶನದ ಮೂಲಕ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅವರು, ʼಐದು ವರ್ಷಗಳ ಹಿಂದೆ ನನ್ನ ಮೇಲೆ ನಂಬಿಕೆಯಿಟ್ಟು ರಾಷ್ಟ್ರಪತಿಯನ್ನಾಗಿ ಆಯ್ಕೆ ಮಾಡಲಾಯಿತು. ಅದಕ್ಕಾಗಿ ನಾನು ಎಲ್ಲ ಜನಪ್ರತಿನಿಧಿಗಳು ಮತ್ತು ಇಡೀ ದೇಶದ ಜನರಿಗೆ ಸದಾ ಕೃತಜ್ಞನಾಗಿರುತ್ತೇನೆʼ ಎಂದರು.

ಉತ್ತರ ಪ್ರದೇಶ ಕಾನ್ಪುರ ದೇಹತ್‌ ಜಿಲ್ಲೆಯ ಒಂದು ಹಳ್ಳಿಯ ಅತ್ಯಂತ ಸಾಮಾನ್ಯ ಕುಟುಂಬದಲ್ಲಿ ಹುಟ್ಟಿ-ಬೆಳೆದವನು ನಾನು. ಆದರೆ ನಾನೊಂದು ಅತ್ಯುನ್ನತ ಹುದ್ದೆಯನ್ನು ನಿರ್ವಹಿಸಿ, ಇಂದು ಇಡೀ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುತ್ತಿದ್ದೇನೆ. ಹೀಗೆ ಸಾಮಾನ್ಯ ವ್ಯಕ್ತಿಗೂ ಅಸಮಾನ್ಯವಾದ ಹುದ್ದೆಯನ್ನು ಒದಗಿಸಿಕೊಡಬಲ್ಲ, ನಮ್ಮ ದೇಶದ ಅತ್ಯಂತ ರೋಮಾಂಚನಕಾರಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ನನ್ನದೊಂದು ಸೆಲ್ಯೂಟ್‌. ನಾನು ನನ್ನ ಅಧಿಕಾರ ಅವಧಿಯಲ್ಲಿ ಇಡೀ ದೇಶದ ಪ್ರತಿ ಸಮಾಜದಿಂದಲೂ ಸಂಪೂರ್ಣ ಬೆಂಬಲ ಮತ್ತು ಸಹಕಾರ ಪಡೆದಿದ್ದೇನೆʼ ಎಂದು ಹೇಳಿದರು.

ಹಾಗೇ, ಹವಾಮಾನ ವೈಪರೀತ್ಯದ ಬಗ್ಗೆ ಮಾತನಾಡಿದ ರಾಮನಾಥ ಕೋವಿಂದ್‌, ʼಮುಂದಿನ ಪೀಳಿಘೆಯವರು ಪರಿಸರ ರಕ್ಷಣೆಯ ಬಗ್ಗೆ ಹೆಚ್ಚಿನ ಗಮನಕೊಟ್ಟು. ಅದನ್ನು ಆದ್ಯತೆಯೆಂದು ಪರಿಗಣಿಸಬೇಕುʼ ಎಂದು ಕರೆ ಕೊಟ್ಟರು. ಪ್ರಕೃತಿ ಮಾತೆ ಈಗ ಅತ್ಯಂತ ಸಂಕಟದಲ್ಲಿದ್ದಾಳೆ. ಸದ್ಯದ ಹವಾಮಾನ ವೈಪರೀತ್ಯ ಎಂಬುದು ಭೂಮಿಗೆ ಶಾಪವಾಗುತ್ತಿದೆ. ನಾವು ಪರಿಸರದ ಬಗ್ಗೆ ಅತ್ಯಂತ ಕಾಳಜಿ ವಹಿಸಬೇಕು. ನಮ್ಮ ನೆಲ, ವಾಯು, ಜಲವನ್ನು ರಕ್ಷಿಸಬೇಕುʼ ಎಂದರು.

ನಮ್ಮ ದೇಶದಲ್ಲಿ ಆರೋಗ್ಯ, ಶಿಕ್ಷಣ, ಆರ್ಥಿಕತೆ ಸೇರಿ ಇನ್ನೂ ಹಲವು ಕ್ಷೇತ್ರಗಳನ್ನು ಉಲ್ಲೇಖಿಸಿ ಮಾತನಾಡಿದ ಅವರು, ʼಇಂದು ಭಾರತದ ಎಲ್ಲ ವಿಭಾಗಗಳಲ್ಲೂ ಉನ್ನತಿ ಸಾಧಿಸುತ್ತಿದೆ. ಈ 21ನೇ ಶತಮಾನವನ್ನು ಗೆದ್ದು ಬೀಗಲು ಸಕಲ ಶಸ್ತ್ರಾಸ್ತ್ರಗಳನ್ನೂ ಸಿದ್ಧಪಡಿಸಿಕೊಳ್ಳುತ್ತಿದೆʼ ಎಂದು ತಿಳಿಸಿದರು. ರಾಷ್ಟ್ರೀಯ ಶಿಕ್ಷಣ ನೀತಿ, ದೇಶದ ಮಿಲಿಟರಿ ಶಕ್ತಿ, ಆಜಾದಿ ಕಾ ಅಮೃತ ಮಹೋತ್ಸವ ಸೇರಿ, ಹತ್ತು-ಹಲವು ವಿಷಯಗಳನ್ನು ಪ್ರಸ್ತಾಪಿಸಿ, ರಾಷ್ಟ್ರವನ್ನು ಹೊಗಳಿದರು.

ದಲಿತ ನಾಯಕ ರಾಮನಾಥ ಕೋವಿಂದ್‌ 2017ರ ಜುಲೈ 25ರಂದು ಈ ದೇಶದ ರಾಷ್ಟ್ರಪತಿ ಹುದ್ದೆ ಅಲಂಕರಿಸಿದ್ದರು. ಆಗ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಜೆ.ಎಸ್‌.ಖೇಹರ್‌ ಅವರು ಕೋವಿಂದ್‌ಗೆ ಪ್ರತಿಜ್ಞಾವಿಧಿ ಬೋಧಿಸಿದ್ದರು. ಇದೀಗ ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆಯಾಗಿದ್ದು, ಜುಲೈ 25ರಂದು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

ಇದನ್ನೂ ಓದಿ: ವಿಸ್ತಾರ Fact Check | ಔತಣಕೂಟದಲ್ಲಿ ರಾಮನಾಥ ಕೋವಿಂದ್‌ಗೆ ಅವಮಾನಿಸಿದರಾ ಪ್ರಧಾನಿ ಮೋದಿ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Anna Lezhneva: ಚುನಾವಣೆ ಗೆದ್ದು ಬಂದ ಪವನ್‌ಗೆ ತಿಲಕವಿಟ್ಟು ಸ್ವಾಗತಿಸಿದ ಈ ವಿದೇಶಿ ಮಹಿಳೆ ಯಾರು?

ಮೊದಲ ಎರಡು ಮದುವೆ ವಿಫಲವಾದ ಬಳಿಕ ನಟ-ರಾಜಕಾರಣಿ ಪವನ್ ಕಲ್ಯಾಣ್ 2013ರಲ್ಲಿ ಅನ್ನಾ ಲೆಜ್ನೆವಾ ಅವರನ್ನು ವಿವಾಹವಾದರು. ಅನ್ನಾ ಅವರಿಗೂ ಈ ಹಿಂದೆ ವಿವಾಹವಾಗಿ ಮಗಳನ್ನು ಹೊಂದಿದ್ದರು. ಈ ಮಗುವನ್ನು ಪವನ್ ದತ್ತು ಪಡೆದಿದ್ದಾರೆ. ಇವತ್ತು ಚುನಾವಣೆ ಗೆದ್ದು ಬಂದ ಪವನ್ ಗೆ ಅನ್ನಾ ಲೆಜ್ನೆವಾ (Anna Lezhneva) ಆರತಿ ಮಾಡಿ, ತಿಲಕವಿಟ್ಟು ಸ್ವಾಗತಿಸಿದ್ದಾರೆ.

VISTARANEWS.COM


on

By

Anna Lezhneva
Koo

ಲೋಕಸಭಾ ಚುನಾವಣೆ-2024ರಲ್ಲಿ (Loksabha election-2024) ಆಂಧ್ರಪ್ರದೇಶದಲ್ಲಿ (andrapradesh) ಭರ್ಜರಿ ಗೆಲುವು ಸಾಧಿಸಿ ಮನೆಗೆ ಬಂದ ತೆಲುಗು ನಟ (Telugu actor), ರಾಜಕಾರಣಿ (politician) ಪವನ್ ಕಲ್ಯಾಣ್ (Pawan Kalyan) ಅವರನ್ನು ಪತ್ನಿ (wife) ಅನ್ನಾ ಲೆಜ್ನೆವಾ (Anna Lezhneva) ಆರತಿ ಮಾಡಿ, ತಿಲಕವಿಟ್ಟು ಸ್ವಾಗತಿಸಿದ್ದು ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (viral news) ಆಗಿದೆ. ಈ ನಡುವೆ ಅವರ ಬಗ್ಗೆ ತಿಳಿದುಕೊಳ್ಳುವ ಕುತೂಹಲವೂ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.

ಆಂಧ್ರಪ್ರದೇಶ ರಾಜ್ಯ ಚುನಾವಣೆಯಲ್ಲಿ ಜನಸೇನಾ ಪಕ್ಷದ (ಜೆಎಸ್‌ಪಿ) ನಾಯಕ ತೆಲುಗು ನಟ- ರಾಜಕಾರಣಿ ಪವನ್ ಕಲ್ಯಾಣ್ ಅವರ ಐತಿಹಾಸಿಕ ಗೆಲುವು ಅವರ ಅಭಿಮಾನಿಗಳು ಮತ್ತು ಕುಟುಂಬ ಸದಸ್ಯರಲ್ಲಿ ಹರ್ಷ ಮೂಡಿಸಿದೆ. ಫಲಿತಾಂಶದ ಅನಂತರ ಪವನ್ ಮನೆಗೆ ಮರಳಿದ್ದು, ಅವರನ್ನು ಅವರ ಪತ್ನಿ ಅನ್ನಾ ಲೆಜ್ನೆವಾ ಸ್ವಾಗತಿಸಿದರು. ರಾಜಕೀಯ ಪಯಣದುದ್ದಕ್ಕೂ ಪವನ್ ಜೊತೆಯಾಗಿ ನಿಂತಿರುವ ಅನ್ನಾ ಅವರು ಪವನ್ ಅವರನ್ನು ಸ್ವಾಗತಿಸಿದ ಕ್ಷಣವನ್ನು ಸೆರೆಹಿಡಿಯಲಾಗಿದೆ ಮತ್ತು ಅವರ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿದೆ.

ಅನ್ನಾ ಲೆಜ್ನೆವಾ ಯಾರು?

ರಷ್ಯಾದ ರೂಪದರ್ಶಿ ಮತ್ತು ನಟಿಯಾಗಿರುವ ಅನ್ನಾ ಲೆಜ್ನೆವಾ ಅವರು 2011ರ ತೀನ್ ಮಾ ಚಿತ್ರದ ಚಿತ್ರೀಕರಣದಲ್ಲಿದ್ದಾಗ ಮೊದಲ ಬಾರಿಗೆ ಪವನ್ ಅವರನ್ನು ಭೇಟಿಯಾಗಿದ್ದರು. ಶೀಘ್ರದಲ್ಲೇ ಅವರು ಪ್ರೀತಿಸುವುದಾಗಿ ಪ್ರಕಟಿಸಿ 2013ರ ಸೆಪ್ಟೆಂಬರ್ 30ರಂದು ಮದುವೆಯಾದರು. ಇದಕ್ಕೂ ಮೊದಲು ಎರಡು ವರ್ಷಗಳ ಕಾಲ ಡೇಟಿಂಗ್ ಮಾಡಿದರು. ಪವನ್ ಕಲ್ಯಾಣ್ ಅವರ ಮೂರನೇ ಪತ್ನಿ ಅನ್ನಾ.

ಪವನ್ ಕಲ್ಯಾಣ್ ಅವರ ಹಿಂದಿನ ಮದುವೆಗಳು

ʼಗಬ್ಬರ್ ಸಿಂಗ್ʼ ಪವನ್ ಮೊದಲ ಬಾರಿಗೆ 1997ರಲ್ಲಿ 19 ವರ್ಷದ ಹುಡುಗಿ ನಂದಿನಿಯನ್ನು ವಿವಾಹವಾದರು. 2001ರಲ್ಲಿ ಪವನ್ ನಟಿ ರೇಣು ದೇಸಾಯಿ ಅವರೊಂದಿಗೆ ವಾಸ ಮಾಡಲು ತೊಡಗಿದರು. ಅವರಿಬ್ಬರಿಗೆ ಗಂಡು ಮಗುವಾಗಿತ್ತು. ಪವನ್ ತನ್ನ ಮೊದಲ ಹೆಂಡತಿಗೆ ಕಾನೂನುಬದ್ಧವಾಗಿ ವಿಚ್ಛೇದನ ನೀಡದ ಕಾರಣ ಸಾಕಷ್ಟು ತೊಂದರೆಯನ್ನು ಎದುರಿಸಬೇಕಾಯಿತು. ಅನಂತರ ನ್ಯಾಯಾಲಯವು 2008ರಲ್ಲಿ ಅವರಿಗೆ ವಿಚ್ಛೇದನವನ್ನು ನೀಡಿತು. ಅವರ ಎರಡನೇ ಮದುವೆಯು 2009ರಲ್ಲಿ ನಡೆಯಿತು. ಬಳಿಕ ಪವನ್ ಮತ್ತು ರೇಣು ದಂಪತಿ ತಮ್ಮ ಎರಡನೇ ಮಗುವನ್ನು ಸ್ವಾಗತಿಸಿದರು. ದುರದೃಷ್ಟವಶಾತ್ ಇವರಿಬ್ಬರ ವೈವಾಹಿಕ ಜೀವನ 2012 ರಲ್ಲಿ ವಿಚ್ಛೇದನದ ಮೂಲಕ ಕೊನೆಯಾಯಿತು.


ಪವನ್ ಕಲ್ಯಾಣ್ ಮತ್ತು ಅನ್ನಾ ಲೆಜ್ನೆವಾ

ಅನ್ನಾ ಮತ್ತು ಪವನ್ ದಂಪತಿ 2017ರಲ್ಲಿ ಮಾರ್ಕ್ ಶಂಕರ್ ಪವನೋವಿಚ್ ಎಂಬ ಗಂಡು ಮಗುವಿಗೆ ಪೋಷಕರಾದರು. ಅನ್ನಾ ಅವರ ಮೊದಲ ಮದುವೆ ವಿಫಲವಾಗಿ ಹೆಣ್ಣು ಮಗುವಿನ ತಾಯಿಯಾಗಿದ್ದರು. ಈ ಮಗು ಪೋಲೆನಾ ಅಂಜನಾ ಪವನ್ನೋವಾಳನ್ನು ಪವನ್ ತನ್ನ ಸ್ವಂತ ಮಗಳಂತೆ ಸ್ವೀಕರಿಸಿದ್ದಾರೆ. ಈಗ ಇವರು ಮೂವರು ಮಕ್ಕಳ ಪೋಷಕರಾಗಿದ್ದಾರೆ.

ವಿಚ್ಛೇದನದ ವದಂತಿ

ಕಳೆದ ವರ್ಷ ಅನ್ನಾ ಮತ್ತು ಪವನ್ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಸುದ್ದಿ ಇತ್ತು. ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದು ವರದಿಯಾಗಿತ್ತು. ತೆಲುಗು ತಾರೆ ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಅವರ ನಿಶ್ಚಿತಾರ್ಥ ಸಮಾರಂಭದಲ್ಲಿ ಅನ್ನಾ ಲೆಜ್ನೆವಾ ಹಾಜರಾಗದಿದ್ದಾಗ ಈ ಗುಲ್ಲು ಹಬ್ಬಿತ್ತು. ರಾಮ್ ಚರಣ್ ಮತ್ತು ಉಪಾಸನಾ ಅವರ ಮಗಳು ಕ್ಲಿನ್ ಕಾರಾ ಕೊನಿಡೆಲಾ ಅವರ ತೊಟ್ಟಿಲು ಸಮಾರಂಭವನ್ನು ಇವರು ತಪ್ಪಿಸಿಕೊಂಡರು. ಇದರಿಂದ ಅವರ ಪ್ರತ್ಯೇಕತೆಯ ವದಂತಿಗಳಿಗೆ ಉತ್ತೇಜನ ಸಿಕ್ಕಿತು. ಆದರೂ ಇತ್ತೀಚಿನ ವಿಡಿಯೋ ಗಳು ಈ ವದಂತಿಗಳನ್ನು ತಳ್ಳಿ ಹಾಕುವಂತೆ ಮಾಡಿದೆ.

ಇದನ್ನೂ ಓದಿ: Odisha Assembly Result 2024: ಬಿಜೆಡಿ ಭದ್ರ ಕೋಟೆಗೆ ಬಿಜೆಪಿ ಗ್ರ್ಯಾಂಡ್‌ ಎಂಟ್ರಿ! ಹಳೇ ದೋಸ್ತಿಗೆ ಸಕತ್‌ ಠಕ್ಕರ್‌ ಕೊಟ್ಟ ಕೇಸರಿ ಬಣ

ಆಂಧ್ರಪ್ರದೇಶದ ರಾಜ್ಯ ಚುನಾವಣೆಯಲ್ಲಿ ಪವನ್ ಕಲ್ಯಾಣ್ ಗೆದ್ದ ಅನಂತರ ಅನ್ನಾ ಲೆಜ್ನೇವಾ ಮತ್ತು ಪವನ್ ಕಲ್ಯಾಣ್ ಮತ್ತು ಅವರ ಮಾಜಿ ಪತ್ನಿ ರೇಣು ದೇಸಾಯಿ ಅವರ ಪುತ್ರ ಅಕಿರಾ ನಂದನ್ ಸೇರಿದಂತೆ ಪವನ್ ಕಲ್ಯಾಣ್ ಅವರ ಅಭಿಮಾನಿಗಳಿಗೆ ಶುಭ ಹಾರೈಸಿದ್ದಾರೆ.

Continue Reading

ಪ್ರಮುಖ ಸುದ್ದಿ

Election Results 2024: ಬಿಜೆಪಿ ಹಿನ್ನಡೆ ನಡುವೆಯೂ ಮೂರನೇ ಅವಧಿಗೆ ನರೇಂದ್ರ ಮೋದಿ ಪ್ರಧಾನಿ ಆಗುವುದು ಖಚಿತ!

Election Results 2024 :ಮುಂದಿನ ಐದು ವರ್ಷಗಳ ಕಾಲ ಲೋಕಸಭೆಗೆ ಸರ್ಕಾರದ ಆಯ್ಕೆಯ ಮತ ಎಣಿಕೆಯು ನಿರ್ಣಾಯಕ ಕ್ಷಣವಾಗಿತ್ತು ಪ್ರಮುಖ ರಾಜ್ಯಗಳಾದ ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಮತ್ತು ತಮಿಳುನಾಡುಗಳು ಗಮನ ಸೆಳೆದಿದ್ದವು.

VISTARANEWS.COM


on

Election Results 2024
Koo

ಬೆಂಗಳೂರು: ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭಾ ಚುನಾವಣೆಗಳ ಜೊತೆಗೆ 18ನೇ ಲೋಕಸಭಾ ಚುನಾವಣೆಯ (Election Results 2024) ಮತ ಎಣಿಕೆ ಪ್ರಕ್ರಿಯೆ ಮಂಗಳವಾರ ನಡೆಯಿತು. ಸಂಸತ್ತಿನ ಕೆಳಮನೆ ಎಂದೂ ಕರೆಯಲ್ಪಡುವ ಲೋಕಸಭೆಯು 543 ಸಂಸದೀಯ ಕ್ಷೇತ್ರಗಳನ್ನು ಒಳಗೊಂಡಿದೆ. ಆಯಾ ಕ್ಷೇತ್ರಗಳ ಧ್ವನಿಯಾಗಿ ಸೇವೆ ಸಲ್ಲಿಸುವ ಒಬ್ಬ ಸದಸ್ಯರನ್ನು ಈ ಚುನಾವಣೆಯಲ್ಲಿ ಆರಿಸಲಾಗುತ್ತದೆ. ಒಟ್ಟು 80 ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶವು ಲೋಕಸಭೆಯಲ್ಲಿ ಭಾರತದ ಎಲ್ಲಾ ರಾಜ್ಯಗಳಿಗಿಂತ ಅತ್ಯಧಿಕ ಸದಸ್ಯರನ್ನು ಹೊಂದಿದೆ. ಮಹಾರಾಷ್ಟ್ರವು ಒಟ್ಟು 48 ಕ್ಷೇತ್ರಗಳೊಂದಿಗೆ ಅತಿ ಹೆಚ್ಚು ಕ್ಷೇತ್ರಗಳನ್ನು ಹೊಂದಿರುವ ಎರಡನೇ ರಾಜ್ಯ. ಮುಂದಿನ ಐದು ವರ್ಷಗಳ ಕಾಲ ಲೋಕಸಭೆಗೆ ಸರ್ಕಾರದ ಆಯ್ಕೆಯ ಮತ ಎಣಿಕೆಯು ನಿರ್ಣಾಯಕ ಕ್ಷಣವಾಗಿತ್ತು ಪ್ರಮುಖ ರಾಜ್ಯಗಳಾದ ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಮತ್ತು ತಮಿಳುನಾಡು ಗಮನ ಸೆಳೆದಿದ್ದವು.

2024ರ ಲೋಕಸಭಾ ಚುನಾವಣೆಯ ಫಲಿತಾಂಶವು ಬಿಜೆಪಿಗೆ ವಾಸ್ತವ ತೆರೆದಿಟ್ಟಿದೆ. ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟವು ಸರ್ಕಾರ ರಚಿಸಲು ಸಿದ್ಧವಾಗಿದೆ. ಆದಾಗ್ಯೂ 272 ಸ್ಥಾನಗಳ ಸರಳ ಬಹುಮತ ಪಡೆಯುವಲ್ಲಿ ಬಿಜೆಪಿ ವಿಫಲವಾಗಿದೆ. ಇದು 2019ರಲ್ಲಿ ಸ್ವತಂತ್ರವಾಗಿ 303 ಸ್ಥಾನಗಳನ್ನು ಗಳಿಸಿ ವಿಜೃಂಭಿಸಿದ್ದ ಬಿಜೆಪಿಯ ತಾಕತ್ತಿಗೆ ವ್ಯತಿರಿಕ್ತವಾಗಿದೆ. ಆ ವರ್ಷ ಎನ್​​ಡಿಎ 353 ಸೀಟುಗಳನ್ನು​ ಗೆದ್ದುಕೊಂಡಿತ್ತು.

ಸಾಂಪ್ರದಾಯಿಕ ಭದ್ರಕೋಟೆಗಳಾದ ಉತ್ತರ ಪ್ರದೇಶ, ಹರಿಯಾಣ ಮತ್ತು ರಾಜಸ್ಥಾನದಲ್ಲಿ ಬಿಜೆಪಿಗೆ ಗಮನಾರ್ಹ ಹಿನ್ನಡೆಯಾಗಿದೆ. ಇದಕ್ಕೆ ವಿರುದ್ಧವಾಗಿ, ಪಕ್ಷವು ಒಡಿಶಾ, ತೆಲಂಗಾಣ ಮತ್ತು ಕೇರಳದಂತಹ ರಾಜ್ಯಗಳಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ. ಇದು ವಿವಿಧ ಪ್ರದೇಶಗಳಲ್ಲಿ ಮಿಶ್ರ ಪ್ರತಿಕ್ರಿಯೆ ದೊರಕಿದೆ.

ಇಂಡಿ ಒಕ್ಕೂಟದ ಸವಾಲು

ಮತ್ತೊಂದೆಡೆ, ಬಿಜೆಪಿ ಮತ್ತು ಅದರ ನೀತಿಗಳ ವಿರುದ್ಧ ಸಾಮೂಹಿಕ ಪ್ರತಿರೋಧದಿಂದ ಪ್ರೇರಿತವಾದ ಇಂಡಿ ಬ್ಯಾನರ್ ಅಡಿಯಲ್ಲಿನ ಏಕೀಕೃತ ವಿರೋಧ ಬಣವು ಸರಿಸುಮಾರು 230 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಒಕ್ಕೂಟವು ವಿವಿಧ ರಾಜ್ಯಗಳಲ್ಲಿ ಗಣನೀಯ ಲಾಭಗಳನ್ನು ಪಡೆದಿದೆ. ಇದು ಬಿಜೆಪಿಯ ಪ್ರಾಬಲ್ಯಕ್ಕೆ ಪ್ರಬಲ ಸವಾಲನ್ನು ಒಡ್ಡಿದೆ. ಈ ಒಕ್ಕೂಟಕ್ಕೆ ಸರ್ಕಾರ ರಚಿಸುವ ಅವಕಾಶ ಕಡಿಮೆ ಇದ್ದರು ಒಂದು ಕೈ ನೋಡುವ ಸಾಧ್ಯತೆಗಳಿವೆ.

ಮಂಗಳವಾರ ರಾತ್ರಿಯ ವೇಳೆಗೆ ಪ್ರಮುಖ ಪಕ್ಷಗಳು ಪಡೆದ ಮುನ್ನಡೆಯ ವಿವರ ಹೀಗಿದೆ:

ಎನ್​ಡಿಎ ಬಣ ಒಟ್ಟು 293 ಸ್ಥಾನಗಳಲ್ಲಿ ಮೇಲುಗೈ ಸಾಧಿಸಿದೆ. ಅದರಲ್ಲಿ ಬಿಜೆಪಿಯೊಂದೇ 240 ಸ್ಥಾನಗಳನ್ನು ಪಡೆದಿದೆ. 2019ಕ್ಕೆ ಹೋಲಿಸಿದರೆ 62 ಸೀಟ್​ಗಳ ಕೊರತೆ ಎದುರಿಸಿದೆ. ಮಿತ್ರ ಪಕ್ಷ ತೆಲುಗು ದೇಶಂ ಪಾರ್ಟಿ 16 ಸೀಟುಗಳನ್ನು ಗೆದ್ದಿದೆ. ಹಿಂದಿನ ಬಾರಿಗಿಂತ 13 ಸೀಟು​ಗಳನ್ನು ಹೆಚ್ಚು ಗೆದ್ದಿದೆ. ಜೆಡಿಯು 13 ಸೀಟುಗಳನ್ನು ಗಳಿಸಿಕೊಂಡಿದ್ದು, ಹಿಂದಿನ ಬಾರಿಗಿಂತ 4 ಸ್ಥಾನಗಳನ್ನು ಮೈತ್ರಿಯ ಲಾಭವಾಗಿ ಪಡೆದಿದೆ. ಶಿವಸೇನೆ (ಶಿಂಧೆ ಬಣ) 7 ಸ್ಥಾನ ಗಳಿಸಿದ್ದರೆ, ಲೋಕ ಜನಶಕ್ತಿ ಪಾರ್ಟಿ ( ಎಲ್​ಜೆಪಿ) 5 ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಕರ್ನಾಟಕದಲ್ಲಿ ಮಿತ್ರ ಪಕ್ಷ ಜೆಡಿಎಸ್​ ಮಂಡ್ಯ ಹಾಗೂ ಕೋಲಾರ ಮೂಲಕ 2 ಸ್ಥಾನ ಕೊಟ್ಟಿದೆ. ಜನಸೇನಾ ಪಾರ್ಟಿ ಆಂಧ್ರದಲ್ಲಿ 2 ಸೀಟ್​ ಗೆದ್ದಿದ್ದು, ಆರ್​ಎಲ್​ಡಿ 2 ಸೀಟ್​ ಗೆಲುವು ಕಂಡಿದೆ. ಎನ್​ಸಿಪಿ (ಅಜಿತ್ ಪವಾರ್ ಬಣ) ಒಂದು ಸ್ಥಾನ ಗೆದ್ದುಕೊಂಡಿದೆ.

​ಕಾಂಗ್ರೆಸ್‌ ಬಲ ಏರಿಕೆ:

ಇಂಡಿ ಒಕ್ಕೂಟದಲ್ಲಿ ಕಾಂಗ್ರೆಸ್​ 99 ಸ್ಥಾನಗಳನ್ನು ಗೆದ್ದುಕೊಂಡಿದೆ. ಇದು 2019ನೇ ವರ್ಷದ ಫಲಿತಾಂಶಕ್ಕೆ ಹೋಲಿಸಿದರೆ 47 ಸೀಟುಗಳನ್ನು ಹೆಚ್ಚುವರಿಯಾಗಿ ಪಡೆದಿದೆ. ಹಿಂದಿನ ಬಾರಿಗಿಂತ 32 ಸ್ಥಾನಗಳನ್ನು ಹೆಚ್ಚಿಸಿಕೊಂಡಿರುವ ಸಮಾಜವಾದಿ ಪಾರ್ಟಿ 37 ಸೀಟ್​ ಗೆದ್ದಿದೆ. ಟಿಎಂಸಿ 29 ಹಾಗೂ ತಮಿಳುನಾಡಿನಲ್ಲಿ ಡಿಎಂಕೆ 22 ಸೀಟ್​ಗಳನ್ನು ತನ್ನದಾಗಿಸಿಕೊಂಡಿದೆ. ಹಿಂದಿನ ಬಾರಿಗಿಂತ 2 ಕ್ಷೇತ್ರ​ ಹೆಚ್ಚಳವಾಗಿದೆ. ಎಸ್​ಎಸ್​ಯುಬಿಟಿ ಪಾರ್ಟಿ 9 ಸೀಟ್ ಗೆದ್ದಿದೆ. ಎನ್​ಸಿಪಿ ಶರದ್ ಪವಾರ್ ಬಣ 8 ಸೀಟ್​ಗಳನ್ನು ಹೊಂದಿವೆ. ಆರ್​ಜೆಡಿ 4, ಸಿಪಿಐಎಮ್​ 4 ಹಾಗೂ ಐಯುಎಮ್​ಎಲ್​ 3 ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ.

ಇತರ ಪಕ್ಷಗಳು 17 ಕ್ಷೇತ್ರಗಳನ್ನು ಬಾಚಿಕೊಂಡಿವೆ. ಐಎನ್​ಡಿ ಪಕ್ಷ 3 ಸ್ಥಾನ, ವೈಎಸ್​ಆರ್​ಪಿ 4 ಸ್ಥಾನ, ವಿಪಿಪಿ 1 ಸ್ಥಾನ, ಎಸ್​ಕೆಎಮ್​ 1 ಸ್ಥಾನ, ಝಡ್​ಪಿಎಮ್ 1 ಸ್ಥಾನ, ಶಿರೋಮಣಿ ಅಕಾಲಿದಳ 1 ಸ್ಥಾನ, ಎಐಎಮ್​ಎಮ್​ 1, ಎಸ್​​ಕೆಎಂ ಒಂದು ಸ್ಥಾನ ಗೆದ್ದುಕೊಂಡಿದೆ.

Continue Reading

ಪ್ರಮುಖ ಸುದ್ದಿ

Election Results 2024: ಲೋಕಸಭೆ ಚುನಾವಣೆಯ ರಾಜ್ಯವಾರು ಬಲಾಬಲ ಹೀಗಿದೆ

Election Results 2024: ಎನ್​ಡಿಎ ಒಕ್ಕೂಟ 290ಕ್ಕೂ ಅಧಿಕ ಸ್ಥಾನಗಳೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯವುದು ಖಚಿತ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿ ಆಗುವುದು ಕೂಡ ನಿಶ್ಚಿತ. 400 ಸೀಟುಗಳ ಅಭಿಲಾಷೆಯಲ್ಲಿದ್ದ ಬಿಜೆಪಿ ಇದೀಗ ಬೇರೆ ಪಕ್ಷಗಳ ಜತೆ ಸೇರಿ ಸರ್ಕಾರ ರಚಿಸಬೇಕಾಗುತ್ತದೆ.

VISTARANEWS.COM


on

Election Results 2024
Koo

ಬೆಂಗಳೂರು: 2024ರ ಲೋಕಸಭಾ ಚುನಾವಣೆಯಲ್ಲಿ ದೇಶದ ಮತದಾರರು ರಾಜಕೀಯ ಪಕ್ಷಗಳಿಗೆ ಅಚ್ಚರಿಯ ಫಲಿತಾಂಶ ನೀಡಿದ್ದಾರೆ. ಸ್ವತಃ 300ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಬೇಕೆಂದಿದ್ದ ಬಿಜೆಪಿ ಕೇವಲ 240 ಸ್ಥಾನಗಳಿಗೆ ತೃಪ್ತಿ ಪಡುವಂತಾಗಿದೆ. ಹೀಗಾಗಿ ಈ ಬಾರಿ ಸರಳ ಬಹುಮತ ಪಡೆದ ಪಕ್ಷವೇ ಇಲ್ಲ. ಆದಾಗ್ಯೂ ಎನ್​ಡಿಎ ಒಕ್ಕೂಟ 290ಕ್ಕೂ ಅಧಿಕ ಸ್ಥಾನಗಳೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯವುದು ಖಚಿತ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿ ಆಗುವುದು ಕೂಡ ನಿಶ್ಚಿತ. ಒಟ್ಟು 400 ಸೀಟುಗಳ ಅಭಿಲಾಷೆಯಲ್ಲಿದ್ದ ಬಿಜೆಪಿ ಇದೀಗ ಬೇರೆ ಪಕ್ಷಗಳ ಜತೆ ಸೇರಿ ಸರ್ಕಾರ ರಚಿಸಬೇಕಾಗುತ್ತದೆ. ಈ ರೀತಿಯಾಗಿ ಅಚ್ಚರಿಯ ಫಲಿತಾಂಶ ಕಂಡ ಲೋಕಸಭಾ ಚುನಾವಣೆಯ ರಾಜ್ಯವಾರು ಚಿತ್ರಣ ಇಲ್ಲಿದೆ.

ಉತ್ತರ ಪ್ರದೇಶ

ಉತ್ತರ ಪ್ರದೇಶ ಅತಿ ಹೆಚ್ಚು 80 ಲೋಕ ಸಭಾ ಕ್ಷೇತ್ರಗಳನ್ನು ಹೊಂದಿರುವ ರಾಜ್ಯವಾಗಿದೆ. ಇಲ್ಲಿ ಇಂಡಿಯಾ ಒಕ್ಕೂಟಕ್ಕೆ ಮುನ್ನಡೆ ದೊರಕಿದೆ. ಬಿಜೆಪಿಗೆ ಕೇವಲ 34 ಸೀಟುಗಳು ದೊರಕಿದ್ದರೆ, ಎಸ್​ಪಿ 36 ಸೀಟುಗಳು ಗೆದ್ದುಕೊಂಡಿದೆ. ಕಾಂಗ್ರೆಸ್​ 6 ಹಾಗೂ ಇತರ ಪಕ್ಷಗಳು 4 ಸೀಟುಗಳನ್ನು ಗೆದ್ದಿವೆ. ಕಳೆದ ಬಾರಿ ಇಲ್ಲಿ ಬಿಜೆಪಿ 62 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಹಾಗಾಗಿ ಇಲ್ಲಿ ಬಿಜೆಪಿಗೆ ಭಾರಿ ನಷ್ಟವಾಗಿದೆ.

ಪಶ್ಚಿಮ ಬಂಗಾಳ

31 ಲೋಕ ಸಭಾ ಕ್ಷೇತ್ರಗಳನ್ನು ಹೊಂದಿರುವ ಪಶ್ಚಿಮ ಬಂಗಾಳದಲ್ಲಿ ಇಂಡಿ ಒಕ್ಕೂಟಕ್ಕೆ ಲಾಭವಾಗಿದೆ. ಇಲ್ಲಿ ಟಿಎಂಸಿ 31 ಸೀಟ್​ಗಳನ್ನು ಗೆದ್ದಿದ್ದರೆ, ಬಿಜೆಪಿಗೆ 10 ಸೀಟ್​ಗಳು ಮಾತ್ರ ದೊರಕಿವೆ. ಕಾಂಗ್ರೆಸ್​ ಪಕ್ಷ 1 ಸ್ಥಾನ​ ತನ್ನದಾಗಿಸಿಕೊಂಡಿದೆ. ಕಳೆದ ಬಾರಿ ಇಲ್ಲಿ ಬಿಜೆಪಿ 18 ಸ್ಥಾನಗಳನ್ನು ಗೆದ್ದಿತ್ತು.

ಮಹಾರಾಷ್ಟ್ರ

ಮಹಾರಾಷ್ಟ್ರದಲ್ಲಿ ಎನ್​ಡಿಎ ಒಕ್ಕೂಟಕ್ಕೆ ನಷ್ಟವಾಗಿದೆ. ಇಲ್ಲಿ ಕಾಂಗ್ರೆಸ್​ 12 ಸೀಟ್​ ಗೆದ್ದಿದ್ದರೆ ಬಿಜೆಪಿ 11 ಸೀಟ್​ಗಳಲ್ಲಿ ಜಯಿಸಿದೆ. ಶಿವಸೇನೆ ಉದ್ಧವ್​ ಠಾಕ್ರೆ ಬಣ 10​ ಹಾಗೂ ಎನ್​​ಸಿಪಿ ಶರದ್ ಪವಾರ್​ ಬಣ 5 ಸೀಟು ತನ್ನದಾಗಿಸಿಕೊಂಡಿದೆ. ಶಿವ ಸೇನೆ ಶಿಂಧೆ ಬಣಕ್ಕೆ 6 ಸೀಟ್​ ಸಿಕ್ಕಿದೆ. ಕಳೆದ ಬಾರಿ ಇಲ್ಲಿ ಬಿಜೆಪಿ ಮತ್ತು ಶಿವಸೇನೆ ಜತೆಯಾಗಿ 40 ಸೀಟುಗಳನ್ನು ಗೆದ್ದಿದ್ದವು.

ಕರ್ನಾಟಕ

28 ಕ್ಷೇತ್ರಗಳನ್ನು ಹೊಂದಿರುವ ಕರ್ನಾಟಕದಲ್ಲಿ ಬಿಜೆಪಿ 17 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್​ 9 ಸ್ಥಾನ ಗೆದ್ದಿದೆ. ಜೆಡಿಎಸ್​ 2 ಸ್ಥಾನ ಗೆದ್ದುಕೊಂಡಿದೆ. ಕಳೆದ ಬಾರಿ ಇಲ್ಲಿ ಬೆಂಬಲಿತ ಪಕ್ಷೇತರ ಸೇರಿದಂತೆ ಬಿಜೆಪಿ 26 ಸ್ಥಾನಗಳನ್ನು ಗೆದ್ದುಕೊಂಡಿತ್ತು.

ಬಿಹಾರ

ಬಿಹಾರದಲ್ಲಿ ಜೆಡಿಯುಗೆ 13 ಮತ್ತು ಬಿಜೆಪಿ ಸೀಟುಗಳು ಗೆದ್ದಿವೆ. ಆರ್​ಜೆಡಿಗೆ 4 ಮತ್ತು ಕಾಂಗ್ರೆಸ್‌ಗೆ 3 ಸೀಟುಗಳು ಸಿಕ್ಕಿವೆ. ಇತರ ಪಕ್ಷಗಳಿಗೆ 8 ಸೀಟ್ ದೊರಕಿದೆ.

ತಮಿಳುನಾಡು

ದಕ್ಷಿಣದ ಪ್ರಮುಖ ರಾಜ್ಯವಾಗಿರುವ ತಮಿಳುನಾಡಿನಲ್ಲಿ ಡಿಎಂಕೆ 22 ಸ್ಥಾನ ಗೆದ್ದುಕೊಂಡಿದೆ. ಕಾಂಗ್ರೆಸ್‌ 9 ಮತ್ತು ಇತರ ಪಕ್ಷಗಳಿಗೆ 8 ಸ್ಥಾನಗಳು ಲಭಿಸಿವೆ.

ಅಂಡಮಾನ್​ ನಿಕೋಬಾರ್

ಕೇಂದ್ರಾಡಳಿತ ಪ್ರದೇಶವಾಗಿರುವ ಅಂಡಮಾನ್ ಹಾಗೂ ನಿಕೋಬಾರ್​ನಲ್ಲಿ ಇದ್ದ ಏಕೈಕ ಸ್ಥಾನ ಬಿಜೆಪಿ ಪಾಲಾಗಿದೆ.

ಆಂಧ್ರಪ್ರದೇಶ

ಆಂಧ್ರಪ್ರದೇಶದಲ್ಲಿ ಟಿಡಿಪಿ 16 ಸ್ಥಾನಗಳನ್ನು ಗೆದ್ದಿದ್ದರೆ, ವೈಎಸ್​ಆರ್​ಪಿ 4 ಸ್ಥಾನ ಗೆದ್ದಿದೆ. ಬಿಜೆಪಿ 3, ಜನಸೇನಾ ಪಕ್ಷ 2 ಸ್ಥಾನ ತನ್ನದಾಗಿಸಿಕೊಂಡಿದೆ.

ಮಧ್ಯಪ್ರದೇಶ

ಮಧ್ಯ ಪ್ರದೇಶದಲ್ಲಿ ಒಟ್ಟು 29 ಲೋಕ ಸಭಾ ಕ್ಷೇತ್ರಗಳಿವೆ. ಇಲ್ಲಿ ಅಷ್ಟನ್ನೂ ಬಿಜೆಪಿ ಗೆದ್ದುಕೊಂಡು ಕ್ಲೀನ್ ಸ್ವೀಪ್ ಮಾಡಿದೆ.

ಅರುಣಾಚಲ ಪ್ರದೇಶ

ಈಶಾನ್ಯ ರಾಜ್ಯವಾಗಿರುವ ಅರುಣಾಚಲ ಪ್ರದೇಶದಲ್ಲಿ ಇದ್ದ ಎರಡು ಸ್ಥಾನವನ್ನು ಬಿಜೆಪಿ ವಶಪಡಿಸಿಕೊಂಡಿದೆ.

ಅಸ್ಸಾಂ

ಅಸ್ಸಾಂನಲ್ಲಿ ಒಟ್ಟು 14 ಸ್ಥಾನಗಳಿವೆ. ಅದರಲ್ಲಿ ಬಿಜೆಪಿ 9 ಸ್ಥಾನ ಗೆದ್ದಿದ್ದರೆ ಕಾಂಗ್ರೆಸ್​ 3 ಹಾಗೂ ಇತರರು 2 ಸ್ಥಾನ ಗೆದ್ದಿದ್ದಾರೆ.

ಛತ್ತೀಸ್​ಗಢ

ನಕ್ಸಲರ ಉಪಟಳ ಹೆಚ್ಚಿರುವ ಛತ್ತೀಸ್​ಗಡದಲ್ಲಿ ಒಟ್ಟು ಇರುವ 11 ಸ್ಥಾನಗಳಲ್ಲಿ ಬಿಜೆಪಿ 9 ಸ್ಥಾನ ಗೆದ್ದಿದೆ. ಉಳಿದ 2 ಸ್ಥಾನ ಕಾಂಗ್ರೆಸ್​ಗೆ ದೊರಕಿದೆ.

ದಾದರ್​ ಮತ್ತು ನಾಗರ್​ ಹವೇಲಿ

ಕೇಂದ್ರಾಡಳಿತ ಪ್ರದೇಶವಾಗಿರುವ ದಾದರ್ ಮತ್ತು ನಾಗರ್​ ಹವೇಲಿಯಲ್ಲಿ ಒಂದೇ ಸ್ಥಾನವಿದ್ದು ಅದು ಬಿಜೆಪಿಗೆ ಸಿಕ್ಕಿದೆ.

ದಮನ್, ದಿಯು

ಕೇಂದ್ರಾಡಳಿತ ಪ್ರದೇಶವಾಗಿರುವ ದಿಯು ಹಾಗೂ ದಮನ್​ನಲ್ಲಿ ಪಕ್ಷೇತರ ಒಂದು ಸ್ಥಾನ ಗೆದ್ದಿದ್ದಾರೆ.

ಗೋವಾ

ಕೇಂದ್ರಾಡಳಿತ ಪ್ರದೇಶವಾಗಿರುವ ಗೋವಾದಲ್ಲಿ 2 ಸ್ಥಾನಗಳು ಇದ್ದವು. ಬಿಜೆಪಿ ಹಾಗೂ ಕಾಂಗ್ರೆಸ್ ತಲಾ ಒಂದು ಸೀಟುಗಳನ್ನು ಹಂಚಿಕೊಂಡಿವೆ.

ಗುಜರಾತ್​

ಗುಜರಾತ್​ನಲ್ಲಿ ಒಟ್ಟು 26 ಲೋಕಸಭಾ ಸ್ಥಾನಗಳಿವೆ. ಅವುಗಳಲ್ಲಿ 25 ಸ್ಥಾನಗಳನ್ನು ಬಿಜೆಪಿ ವಶಪಡಿಸಿಕೊಂಡಿದೆ. ಒಂದು ಸ್ಥಾನ ಕಾಂಗ್ರೆಸ್​ಗೆ ಬಂದಿದ್ದು 10 ವರ್ಷದ ಬಳಿಕ ಖಾತೆ ತೆರೆದಿದೆ.

ಹರಿಯಾಣ

ಹರಿಯಾಣದಲ್ಲಿ ಒಟ್ಟು 10 ಲೋಕಸಭಾ ಸ್ಥಾನಗಳು ಇವೆ. ಅವುಗಳಲ್ಲಿ ಬಿಜೆಪಿ 5 ಸ್ಥಾನ ಗೆದ್ದಿದ್ದರೆ ಕಾಂಗ್ರೆಸ್​ ಅಷ್ಟೇ ಸೀಟ್​ಗಳನ್ನು ಖಾತೆಗೆ ಸೇರಿಸಿಕೊಂಡಿದೆ.

ಹಿಮಾಚಲ ಪ್ರದೇಶ

ಒಟ್ಟು ಇರುವ ನಾಲ್ಕು ಸೀಟ್​ಗಳಲ್ಲಿ ಅಷ್ಟನ್ನೂ ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

ಜಮ್ಮು ಮತ್ತು ಕಾಶ್ಮೀರ

ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ 2 ಸ್ಥಾನ ಗೆದ್ದಿದ್ದು ಜೆಕೆಎನ್​ ಪಕ್ಷ 2 ಸ್ಥಾನ ಪಡೆದಿದೆ. ಪಕ್ಷೇತರರಿಗೆ 1 ಒಂದು ಸ್ಥಾನ ದೊರಕಿದೆ.

ಕೇರಳ

ಕೇರಳದಲ್ಲಿ ಒಟ್ಟು 20 ಸೀಟ್​ಗಳಿವೆ. ಅದಲ್ಲಿ ಕಾಂಗ್ರೆಸ್​ 14 ಸೀಟ್​ಗಳನ್ನು ಗೆದ್ದುಕೊಂಡಿದೆ. ಐಯುಎಮ್​ಎಲ್​ 2 ಸೀಟ್ ಗೆದ್ದರೆ ಬಿಜೆಪಿ ಮೊದಲ ಬಾರಿಗೆ ಖಾತೆ ತೆರೆದಿದೆ. ಸಿಪಿಎಂ 1 ಸ್ಥಾನ ಹಾಗೂ ಇತರರು 2 ಸ್ಥಾನ ಗೆದ್ದಿದ್ದಾರೆ.

ಲಡಾಖ್​

ಲಡಾಖ್​​ನಲ್ಲಿ ಇದ್ದ ಒಂದೇ ಸ್ಥಾನವನ್ನು ಪಕ್ಷೇತರ ಅಭ್ಯರ್ಥಿ ಗೆದ್ದುಕೊಂಡಿದ್ದಾರೆ.

ಲಕ್ಷದ್ವೀಪ

ಇಲ್ಲಿನ ಒಂದೇ ಒಂದು ಸ್ಥಾನವನ್ನು ಕಾಂಗ್ರೆಸ್​ ಪಕ್ಷ ತನ್ನದಾಗಿಸಿಕೊಂಡಿದೆ.

ಮಣಿಪುರ

ಜನಾಂಗೀಯ ಗಲಭೆ ಪೀಡಿತ ಮಣಿಪುರದಲ್ಲಿ ಇದ್ದ ಎರಡು ಸ್ಥಾನಗಳನ್ನು ಕಾಂಗ್ರೆಸ್ ಬಾಚಿಕೊಂಡಿದೆ.

ಮೇಘಾಲಯ

ಇಲ್ಲಿ ಒಟ್ಟು 2 ಸ್ಥಾನಗಳಿದ್ದವು. ಅವುಗಳಲ್ಲಿ ಒಂದು ಕಾಂಗ್ರೆಸ್​ ಪಾಲಾಗಿದ್ದರೆ ಇನ್ನೊಂದು ಇತರ ಪಕ್ಷವೊಂದರ ಪಾಲಾಗಿದೆ.

ಮಿಜೋರಾಮ್​

ಸಣ್ಣ ರಾಜ್ಯವಾಗಿರುವ ಮಿಜೋರಾಮ್​ನಲ್ಲಿ ಒಂದೇ ಒಂದು ಸ್ಥಾನವಿತ್ತು. ಇದನ್ನು ಝಡ್​ಪಿಎಂ ಪಕ್ಷ ಗೆದ್ದುಕೊಂಡಿದೆ.

ನಾಗಾಲ್ಯಾಂಡ್​

ಒಟ್ಟು 1 ಸ್ಥಾನ ಇದ್ದ ನ್ಯಾಗಾಲ್ಯಾಂಡ್​ನಲ್ಲಿ ಕಾಂಗ್ರೆಸ್​ ಮೇಲುಗೈ ಸಾಧಿಸಿದೆ.

ನವ ದೆಹಲಿ

ದೆಹಲಿಯಲ್ಲಿ ಬೇರೆ ಪಕ್ಷಗಳಿಗೆ ಖಾತೆ ತೆರೆಯಲು ಸಾಧ್ಯವಾಗಿಲ್ಲ. ಏಳೂ ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದೆ.

ಒಡಿಶಾ

ಇಲ್ಲಿನ ಒಟ್ಟು 21 ಕ್ಷೇತ್ರಗಳಲ್ಲಿ ಬಿಜೆಪಿಯೇ 20 ಗೆದ್ದುಕೊಂಡಿದ್ದು, ಒಂದು ಸ್ಥಾನ ಮಾತ್ರ ಬಿಜೆಡಿ ಪಾಲಾಗಿದೆ.

ಪುದುಚೆರಿ

ಪುದುಚೆರಿಯಲ್ಲಿ ಈ ಬಾರಿ ಬಿಜೆಪಿಗೆ ಅನುಕೂಲ ಆಗಿಲ್ಲ. ಇಲ್ಲಿ ಕಾಂಗ್ರೆಸ್​ ಗೆಲುವು ಸಾಧಿಸಿದೆ.

ಪಂಜಾಬ್​

ಒಟ್ಟು 13 ಸ್ಥಾನಗಳಲ್ಲಿ ಕಾಂಗ್ರೆಸ್​ 7 ಸ್ಥಾನ ಗೆದ್ದಿದ್ದರೆ ಆಪ್​ಗೆ 3 ಸೀಟ್ ಸಿಕ್ಕಿದೆ. ಎಸ್​ಎಡಿಗೆ 1 ಹಾಗೂ ಇತರರಿಗೆ 2 ಸ್ಥಾನ ದೊರಕಿದೆ.

ರಾಜಸ್ಥಾನ

ರಾಜಸ್ಥಾನದಲ್ಲಿ ಒಟ್ಟು 25 ಲೋಕಸಭಾ ಕ್ಷೇತ್ರಗಳಿವೆ. ಇಲ್ಲಿ 14 ಬಿಜೆಪಿ ಪಾಲಾದರೆ, 8 ಕಾಂಗ್ರೆಸ್ ಹಾಗೂ 3 ಇತರ ಪಕ್ಷಗಳ ಪಾಲಾಗಿವೆ.

ಸಿಕ್ಕಿಂ

ಸಿಕ್ಕಿಮ್​ನಲ್ಲಿರುವ ಒಂದೇ ಒಂದು ಕ್ಷೇತ್ರದಲ್ಲಿ ಎಸ್​ಕೆಎಂ ಪಕ್ಷ ಗೆಲುವು ಸಾಧಿಸಿದೆ.

ತೆಲಂಗಾಣ

ತೆಲಂಗಾಣದಲ್ಲಿ 17 ಲೋಕಸಭಾ ಸ್ಥಾನಗಳು ಇದ್ದವು. ಇವುಗಳಲ್ಲಿ 8 ಬಿಜೆಪಿ ಪಾಲಾದರೆ, 8 ಕಾಂಗ್ರೆಸ್​ಗೆ ಸಿಕ್ಕಿದೆ. ಒಂದು ಎಐಎಮ್​ಐಎಮ್​ಗೆ ದೊರಕಿದೆ.

ಉತ್ತರಾಖಂಡ

ಉತ್ತರಾಖಂಡದಲ್ಲಿ ಒಟ್ಟು 5 ಸೀಟುಗಳಿವೆ. ಅಷ್ಟೂ ಬಿಜೆಪಿ ಪಾಲಾಗಿವೆ.

2019ರ ಫಲಿತಾಂಶ ಏನಾಗಿತ್ತು?

ಹಿಂದಿನ 2019ರ ಚುನಾವಣೆಯಲ್ಲಿ, ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಎನ್​ಡಿಎ 353 ಲೋಕಸಭಾ ಸ್ಥಾನಗಳನ್ನು ಪಡೆಯುವ ಮೂಲಕ ಗಮನಾರ್ಹ ವಿಜಯ ದಾಖಲಿಸಿತ್ತು. ಬಿಜೆಪಿ ಏಕಾಂಗಿಯಾಗಿ 303 ಸ್ಥಾನಗಳನ್ನು ಗೆದ್ದುಕೊಂಡಿತ್ತು.

ಬಿಜೆಪಿ ನೇತೃತ್ವದ ಎನ್​​ಡಿಎ ಮತ್ತು ಹೊಸದಾಗಿ ರೂಪುಗೊಂಡ ಇಂಡಿಯಾ ಬ್ಲಾಕ್ ಪ್ರಮುಖ ಸ್ಪರ್ಧಿಗಳಾಗಿದ್ದವು. ಮತದಾರರ ಬೆಂಬಲವನ್ನು ಗಳಿಸಲು ರಾಜಕೀಯ ಪಕ್ಷಗಳು ಸಕ್ರಿಯವಾಗಿ ಪ್ರಚಾರ ಮಾಡುತ್ತಿದ್ದವು. ಎನ್​ಡಿಎಯ ಹಾಲಿ ಲೋಕಸಭಾ ಅವಧಿ ಜೂನ್ 16, 2024ರಂದು ಕೊನೆಗೊಳ್ಳಲಿದೆ.

Continue Reading

ದೇಶ

Narendra Modi Election: ಚುನಾವಣೆ ಫಲಿತಾಂಶದ ಬಳಿಕ ತಾಯಿಯ ನೆನೆದು ಭಾವುಕರಾದ ಮೋದಿ

Narendra Modi Election: Narendra Modi Election: ಲೋಕಸಭೆ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಕೇಂದ್ರ ಕಚೇರಿಯಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಎನ್‌ಡಿಎ ಮೈತ್ರಿಕೂಟಕ್ಕೆ ಮತ್ತೆ ಬಹುಮತ ನೀಡಿರುವುದಕ್ಕೆ ದೇಶದ ಜನರಿಗೆ ನರೇಂದ್ರ ಮೋದಿ ಅವರು ಧನ್ಯವಾದ ತಿಳಿಸಿದರು. ಇನ್ನು ಪಕ್ಷದ ಗೆಲುವಿಗೆ ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗೂ ಧನ್ಯವಾದ ತಿಳಿಸಿದರು. ಇದೇ ವೇಳೆ ಅವರು ತಮ್ಮ ತಾಯಿಯನ್ನು ನೆನೆದರು

VISTARANEWS.COM


on

Narendra Modi Election
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು (NDA) ಸ್ಪಷ್ಟ ಬಹುಮತ ಸಾಧಿಸಿದ ಕಾರಣ ಬಿಜೆಪಿ ಕಚೇರಿಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ನರೇಂದ್ರ ಮೋದಿ (Narendra Modi) ಮಾತನಾಡಿದರು. ಇದೇ ವೇಳೆ ಮಾತನಾಡಿದ (Narendra Modi Election) ಮೋದಿ, “ಮೂರನೇ ಅವಧಿಯಲ್ಲಿ ದೇಶವು ಹೊಸ ಅಧ್ಯಾಯಕ್ಕೆ ಸಾಕ್ಷಿಯಾಗಲಿದೆ” ಎಂದರು. ಅಷ್ಟೇ ಅಲ್ಲ, ನರೇಂದ್ರ ಮೋದಿ ಅವರು ತಮ್ಮ ತಾಯಿಯನ್ನು ನೆನೆದು ಭಾವುಕರಾದರು.

“ನನ್ನ ತಾಯಿ ಅಗಲಿದ ಬಳಿಕ ಇದು ನನ್ನ ಮೊದಲ ಚುನಾವಣೆಯಾಗಿತ್ತು. ಆದರೆ, ದೇಶದ ಮೂಲೆ ಮೂಲೆಯಲ್ಲಿ, ಕೋಟ್ಯಂತರ ತಾಯಂದಿರು ನನ್ನನ್ನು ಮಗನಂತೆ ಸ್ವೀಕರಿಸಿದರು. ಹೆಣ್ಣುಮಕ್ಕಳು ನನಗೆ ಆಶೀರ್ವಾದ ಮಾಡಿದರು. ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳೆಯರು ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡಿದರು. ಇಂತಹ ಅಭೂತಪೂರ್ವ ಬೆಳವಣಿಗೆಯನ್ನು ನಾನು ಎಂದಿಗೂ ಮರೆಯುವುದಿಲ್ಲ. ದೇಶದ ಕೋಟ್ಯಂತರ ಮಾತೆಯರು ನೀಡಿದ ಆಶೀರ್ವಾದ, ಪ್ರೇರಣೆಯು ನನ್ನ ಮನದಲ್ಲಿ ತುಂಬಿದೆ” ಎಂದು ಮೋದಿ ಹೇಳಿದರು.

ಭಾಷಣದ ವೇಳೆ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ಸೇರಿ ಎಲ್ಲ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು. “ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಪ್ರತಿಪಕ್ಷಗಳು ಜೋರು ಧ್ವನಿಯಲ್ಲಿ ಮಾತನಾಡುತ್ತಿವೆ. ಆದರೆ, ಕಾಂಗ್ರೆಸ್‌ ಸೇರಿ ಎಲ್ಲ ಪ್ರತಿಪಕ್ಷಗಳಿಗೆ ಗೊತ್ತಿಲ್ಲ, ಬಿಜೆಪಿಯೊಂದೇ ಗಳಿಸಿರುವಷ್ಟು ಸ್ಥಾನಗಳನ್ನು ಎಲ್ಲ ಪ್ರತಿಕ್ಷಗಳು ಒಗ್ಗೂಡಿ ಜಯಿಸಿಲ್ಲ. ಆದರೆ, ಮೂರನೇ ಅವಧಿಯಲ್ಲೂ ಎನ್‌ಡಿಎ ಸರ್ಕಾರವು ಉತ್ತಮ ಆಡಳಿತ ನೀಡಲಿದೆ. ದೇಶದಲ್ಲಿ ಹೊಸ ಅಧ್ಯಾಯ ಸೃಷ್ಟಿಯಾಗಲಿದೆ. ಇದು ನರೇಂದ್ರ ಮೋದಿಯ ಗ್ಯಾರಂಟಿ” ಎಂದು ಹೇಳಿದರು.

“10 ವರ್ಷಕ್ಕೂ ಮೊದಲು ದೇಶವು ಬದಲಾವಣೆ ಬಯಸುತ್ತಿತ್ತು. 2014ರಲ್ಲಿ ನಾಗರಿಕರು ನಿರಾಸೆಯ ಕಡಲಲ್ಲಿ ಮುಳುಗಿದ್ದರು. ಯುವಕರು ತಮ್ಮ ಭವಿಷ್ಯವನ್ನು ನೆನೆದುಕೊಂಡು ಆತಂಕದಲ್ಲಿದ್ದರು. ಬಡವರು ಸಂಕಷ್ಟದಲ್ಲಿದ್ದರು. ಅಂತಹ ಕಾಲಘಟದಲ್ಲಿ ಬಿಜೆಪಿ ಎಂಬ ಆಶಾವಾದವನ್ನು ಜನ ಆಯ್ಕೆ ಮಾಡಿದರು. ನಾವು ಕೂಡ ಕಳೆದ 10 ವರ್ಷಗಳಿಂದ ಪರಿಶ್ರಮ ವಹಿಸಿದೆವು. ಜನರ ಪರವಾಗಿ ಕೆಲಸ ಮಾಡಿದೆವು. ಇದೇ ಕಾರಣಕ್ಕೆ 2019ರಲ್ಲಿ ಜನ ನಮ್ಮನ್ನು ಆಯ್ಕೆ ಮಾಡಿದರು. ಈಗ 2024ರಲ್ಲೂ ಜನರ ಆಶೀರ್ವಾದ ಪಡೆಯಲು ದೇಶದ ಮೂಲೆ ಮೂಲೆ ಸುತ್ತಿದೆ. ಜನರು ಕೂಡ ಮೂರನೇ ಬಾರಿಗೆ ಎನ್‌ಡಿಎಗೆ ಜನರ ಬೆಂಬಲ ಸಿಕ್ಕಿದೆ. ಹಾಗಾಗಿ, ಜನರಿಗೆ ನಾನು ವಿನಮ್ರವಾಗಿ ಧನ್ಯವಾದ ತಿಳಿಸಲು ಬಯಸುತ್ತೇನೆ” ಎಂದರು.

ಇದನ್ನೂ ಓದಿ: Narendra Modi Election: 3ನೇ ಸಲ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ; ರಿಸಲ್ಟ್ ಬಳಿಕ ಮೋದಿ ಭಾವುಕ ಪೋಸ್ಟ್

Continue Reading
Advertisement
Anna Lezhneva
ರಾಜಕೀಯ1 hour ago

Anna Lezhneva: ಚುನಾವಣೆ ಗೆದ್ದು ಬಂದ ಪವನ್‌ಗೆ ತಿಲಕವಿಟ್ಟು ಸ್ವಾಗತಿಸಿದ ಈ ವಿದೇಶಿ ಮಹಿಳೆ ಯಾರು?

BJP celebration about lok sabha election results
ಕರ್ನಾಟಕ1 hour ago

R Ashok: ಸೋಲಿನ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್‌. ಅಶೋಕ್‌ ಆಗ್ರಹ

MLC TA Sharavana latest statement about lok sabha election results 2024
ಕರ್ನಾಟಕ1 hour ago

TA Sharavana: ಫಲಿತಾಂಶದಿಂದ ಬಲಿಷ್ಠವಾದ ಜೆಡಿಎಸ್‌: ಟಿ.ಎ.ಶರವಣ

Election Results 2024
ಪ್ರಮುಖ ಸುದ್ದಿ1 hour ago

Election Results 2024: ಬಿಜೆಪಿ ಹಿನ್ನಡೆ ನಡುವೆಯೂ ಮೂರನೇ ಅವಧಿಗೆ ನರೇಂದ್ರ ಮೋದಿ ಪ್ರಧಾನಿ ಆಗುವುದು ಖಚಿತ!

Election Results 2024
ಪ್ರಮುಖ ಸುದ್ದಿ2 hours ago

Election Results 2024: ಲೋಕಸಭೆ ಚುನಾವಣೆಯ ರಾಜ್ಯವಾರು ಬಲಾಬಲ ಹೀಗಿದೆ

Assault Case
ಕರ್ನಾಟಕ2 hours ago

Assault Case: ಬೆಳ್ತಂಗಡಿಯಲ್ಲಿ ಬಿಜೆಪಿ ಮುಖಂಡನ ಮೇಲೆ ತಲ್ವಾರ್‌ನಿಂದ ಹಲ್ಲೆ; ಸುರಪುರದಲ್ಲಿ ರಾಜುಗೌಡ ಅಳಿಯನ ಕಾರಿನ ಮೇಲೆ ಕಲ್ಲೆಸೆತ

Narendra Modi Election
ದೇಶ2 hours ago

Narendra Modi Election: ಚುನಾವಣೆ ಫಲಿತಾಂಶದ ಬಳಿಕ ತಾಯಿಯ ನೆನೆದು ಭಾವುಕರಾದ ಮೋದಿ

Karnataka Election Results 2024
ಕರ್ನಾಟಕ2 hours ago

Karnataka Election Results 2024: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಮೈತ್ರಿ ಆಗಿದ್ರೆ ಕಾಂಗ್ರೆಸ್‌ ಅಧಿಕಾರಕ್ಕೆ ಬರ್ತಿರಲಿಲ್ಲ: ಎಚ್‌ಡಿಕೆ

Novak Djokovic
ಕ್ರೀಡೆ3 hours ago

Novak Djokovic: ಫ್ರೆಂಚ್ ಓಪನ್‌ ಟೂರ್ನಿಯಿಂದ ಹಿಂದೆ ಸರಿದ ಜೊಕೊವಿಕ್

Election Results 2024
Lok Sabha Election 20243 hours ago

Election Results 2024: ತ.ನಾಡಿನಲ್ಲಿ ಪೈಪೋಟಿ ನೀಡಿ ಸೋತ ಅಣ್ಣಾಮಲೈ; ಬಿಜೆಪಿ ಮತ ಪ್ರಮಾಣ ಶೇ. 3.57ರಿಂದ 11.04ಕ್ಕೆ ಜಿಗಿತ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ17 hours ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 day ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು3 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ5 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌