Budget session 2024 : ಅಸೆಂಬ್ಲಿಯಲ್ಲಿ ಮಂಗಳೂರು ಗಲಾಟೆ; FIR ವಿರುದ್ಧ ಬಿಜೆಪಿ ಶಾಸಕರು ಕೆಂಡ - Vistara News

ಬಜೆಟ್ 2024

Budget session 2024 : ಅಸೆಂಬ್ಲಿಯಲ್ಲಿ ಮಂಗಳೂರು ಗಲಾಟೆ; FIR ವಿರುದ್ಧ ಬಿಜೆಪಿ ಶಾಸಕರು ಕೆಂಡ

Budget Session 2024 : ಮಂಗಳೂರಿನ ಜೆರೋಸಾ ಹೈಸ್ಕೂಲ್‌ ಶಿಕ್ಷಕಿ ಹಿಂದೂ ಧರ್ಮದ ಅವಹೇಳನ ಮಾಡಿದ ಪ್ರಕರಣದಲ್ಲಿ ಬಿಜೆಪಿ ಶಾಸಕರ ಮೇಲೆ ಎಫ್‌ಐಆರ್‌ ದಾಖಲಿಸಿದ ಘಟನೆ ವಿಧಾನಸಭೆಯಲ್ಲಿ ಭಾರಿ ಚರ್ಚೆಗೆ ಕಾರಣವಾಯಿತು.

VISTARANEWS.COM


on

Budget Session 2024 Mangalore issue
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಧಾನಸಭೆ: ಮಂಗಳೂರಿನ ಸೈಂಟ್‌ ಜೆರೋಸಾ ಹೈಸ್ಕೂಲ್‌ನ ಶಿಕ್ಷಕಿ (Jerosa High School Mangalore) ಹಿಂದು ಧರ್ಮ, ದೇವರು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ (Insulting Hindu Dharma) ಮಾತನಾಡಿದ್ದು ಮತ್ತು ಅದರ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿ ಮಂಗಳೂರಿನ ಇಬ್ಬರು ಬಿಜೆಪಿ ಶಾಸಕರಾದ ವೇದವ್ಯಾಸ ಕಾಮತ್‌ ಹಾಗೂ ಭರತ್‌ ಶೆಟ್ಟಿ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಪ್ರಕರಣ (FIR Against BJP MLAs) ರಾಜ್ಯ ವಿಧಾನಸಭೆಯಲ್ಲಿ (Budget Session 2024) ಪ್ರಸ್ತಾಪವಾಯಿತು. ಸ್ಥಳದಲ್ಲೇ ಇಲ್ಲದ ತಮ್ಮಿಬ್ಬರ ಮೇಲೆ ಕೇಸು ದಾಖಲಿಸಿದ್ದು ದ್ವೇಷ ಸಾಧನೆಯ ಕ್ರಮ ಎಂದು ಕೆಂಡಾಮಂಡಲರಾದರು. ಹಿಂದು ಧರ್ಮವನ್ನು ಅವಹೇಳನ ಮಾಡಿದ ಕ್ರಿಶ್ಚಿಯನ್‌ ಶಿಕ್ಷಕಿಯ ಮೇಲೆ ಯಾವುದೇ ಪ್ರಕರಣ ದಾಖಲಿಸದ ಬಗ್ಗೆಯೂ ಆಕ್ರೋಶ ವ್ಯಕ್ತವಾಯಿತು.

ಮಂಗಳೂರಿನ ಜೆರೋಸಾ ಶಾಲೆಯಲ್ಲಿ ಏಳನೇ ತರಗತಿ ವಿದ್ಯಾರ್ಥಿಗಳಿಗೆ ಪಾಠ ಮಾಡುವ ವೇಳೆ ಶಿಕ್ಷಕಿ ಪ್ರಭಾ ಅವರು ಹಿಂದು ಧರ್ಮ ಅಸ್ತಿತ್ವದಲ್ಲೇ ಇಲ್ಲ, ಶ್ರೀರಾಮ ಬರೀ ಕಲ್ಲು ಎಂದೆಲ್ಲ ಮಾತನಾಡಿದ್ದರು ಎಂದು ಮಕ್ಕಳು ಮನೆಯಲ್ಲಿ ಹೇಳಿದ ಹಿನ್ನೆಲೆಯಲ್ಲಿ ಪೋಷಕರು ಪ್ರತಿಭಟನೆ ನಡೆಸಿದ್ದರು. ಅದಕ್ಕೆ ಹಿಂದು ಸಂಘಟನೆಗಳು ಬೆಂಬಲ ನೀಡಿದ್ದವು. ಕೊನೆಗೆ ಎಲ್ಲರ ಒತ್ತಡಕ್ಕೆ ಮಣಿದು ಶಿಕ್ಷಕಿಯನ್ನು ಅಮಾನತು ಮಾಡಲಾಗಿತ್ತು. ಈ ನಡುವೆ, ಹಿಂದು ಸಂಘಟನೆಗಳು ಹಾಗೂ ಸ್ಥಳೀಯ ಶಾಸಕರು ಹಿಂದು-ಕ್ರಿಶ್ಚಿಯನ್ನರ ನಡುವೆ ಕೋಮು ದ್ವೇಷ ಸೃಷ್ಟಿಸಲು ಈ ಸಂಚು ರೂಪಿಸಿದ್ದಾರೆ, ಶಾಲೆಯ ಆವರಣದಲ್ಲಿ ಜನ ಸೇರಿ ಗಲಾಟೆ ಮಾಡಿಸಿದ್ದಾರೆ ಎಂದು ಕಾಂಗ್ರೆಸ್‌ ದೂರು ಸಲ್ಲಿಸಿತ್ತು. ಇದರಂತೆ ಹಿಂದೂ ಸಂಘಟನೆಗಳ ನಾಯಕರು ಹಾಗೂ ಇಬ್ಬರು ಶಾಸಕರ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಈ ವಿಚಾರವನ್ನು ಶಾಸಕರಿಬ್ಬರು ವಿಧಾನಸಭೆಯಲ್ಲಿ ಪ್ರಸ್ತಾಪಿಸಿ ಆಕ್ರೋಶ ವ್ಯಕ್ತಪಡಿಸಿದರು.

Budget session 2024 : ಮಕ್ಕಳ ಮೇಲೆ ಎಫ್‌ಐಆರ್‌, ಶಿಕ್ಷಕಿ ಮೇಲೆ ಯಾವುದೇ ಕ್ರಮವಿಲ್ಲ!

ವಿಧಾನಸಭೆ ಅಧಿವೇಶನದಲ್ಲಿ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಮಂಗಳೂರು ಉತ್ತರ ಶಾಸಕ ಭರತ್‌ ಶೆಟ್ಟಿ ಅವರು, ಶಿಕ್ಷಕಿ ಹಿಂದೂ ಮೂರ್ತಿಗಳು ಮತ್ತು ರಾಮನ ಬಗ್ಗೆ ಅವಹೇಳನ ಮಾಡಿ‌ ಪಾಠ ಮಾಡಿದ್ದಾರೆ. ಇದರ ವಿರುದ್ಧ ಮಕ್ಕಳು ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿದ್ದಾರೆ. ಇದೀಗ ಮಕ್ಕಳ‌ ಮೇಲೆ ಎಫ್ ಐಆರ್ ಹಾಕಿದ್ದಾರೆ. ಆದರೆ, ವಿವಾದದ ಕೇಂದ್ರ ಬಿಂದುವಾದ ಶಿಕ್ಷಕಿ ಮೇಲೆ ಯಾವುದೇ ಪ್ರಕರಣ ದಾಖಲಿಸಿಲ್ಲ ಎಂದು ಹೇಳಿದರು.

ನಾನು ಆವತ್ತು ಶಾಲೆಯ ಪರಿಸರದಲ್ಲೇ ಇರಲಿಲ್ಲ. ಆದರೂ ನನ್ನ‌ ಮೇಲೆ ಎಫ್ ಐಆರ್ ಹಾಕಿದ್ದಾರೆ. ನನ್ನ‌ ಮೇಲೆ ಹೇಗೆ ಎಫ್ ಐಆರ್ ಹಾಕಿದರು ಎಂದು ಬಿಜೆಪಿ ಶಾಸಕ ಭರತ್ ಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದರು. ಈ ವೇಳೆ ಭರತ್ ಶೆಟ್ಟಿಗೆ ಸಾಥ್‌ ನೀಡಿದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್‌ ಅವರು, ಶಾಸಕರ ಮೇಲೆ ಎಫ್ ಐಆರ್ ಹಾಕ್ತಿರುವುದು ಸರಿಯಾದುದಲ್ಲ ಎಂದರು.

ಆಗ ಮಧ್ಯ ಪ್ರವೇಶ ಮಾಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಮಂತ್ರಿ ದಿನೇಶ್‌ ಗುಂಡೂ ರಾವ್‌ ಅವರು, ಎಫ್ ಐಆರ್ ಹಾಕಿದ ಕೂಡಲೇ ಅಪರಾಧಿ ಆಗಲ್ಲ. ಕೋಮುವಾದ ಕೆರಳಿಸಲು ಇವರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಮಂಗಳೂರಿನಲ್ಲಿ ಕೋಮು ಭಾವನೆಗೆ ಧಕ್ಕೆ ತರುವ ಕೆಲಸವನ್ನು ಮಾಡಲಾಗುತ್ತಿದೆ. ಬಿಜೆಪಿ ಶಾಸಕರು ಬೀದಿಯಲ್ಲಿ ನಿಂತು ಏನು ಮಾಡ್ತಾರೆ ಅಂತ ಗೊತ್ತಿದೆ ಎಂದು ಹೇಳಿದರು.

ಈ ವೇಳೆ ಕೃಷ್ಣಬೈರೇಗೌಡ ಮಧ್ಯ ಪ್ರವೇಶ ಮಾಡಿ, ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ್ದಾರೆ. ಉತ್ತರ ಕೊಡ್ತೇವೆ ಎಂದರು.

ಇದನ್ನೂ ಓದಿ: ಕ್ರೈಸ್ತ ಶಿಕ್ಷಕಿಯಿಂದ ರಾಮನ ಅವಹೇಳನ ಕೇಸ್‌; ವಿವಾದ ನಿರ್ವಹಣೆಯಲ್ಲಿ ವಿಫಲವಾದ ಡಿಡಿಪಿಐ ವರ್ಗಾವಣೆ

ಜಾಮೀನು ಪಡೆಯಲ್ಲ, ಏನ್ಮಾಡ್ತಾರೆ ನೋಡೋಣ ಎಂದ ಭರತ್‌ ಶೆಟ್ಟಿ

ಈ ನಡುವೆ, ವಿಧಾನಸೌಧದ ಕೆಂಗಲ್‌ ಗೇಟ್‌ ಬಳಿ ಮಾತನಾಡಿದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಅವರು, ʻʻನನ್ನ ಮೇಲೆ ದುರುದ್ದೇಶದಿಂದ ಎಫ್‌ಐಆರ್‌ ಹಾಕಿದ್ದಾರೆ. ಈ ಮೊದಲು ಹರೀಶ್ ಪೂಂಜಾ ಮೇಲೆ ಕೇಸ್ ಹಾಕಿದರು. ಈಗ ನನ್ನ ಹಾಗೂ ವೇದವ್ಯಾಸ ಕಾಮತ್ ಮೇಲೆ ಕೇಸ್ ಹಾಕಿದ್ದಾರೆ. ಜೈ ಶ್ರೀರಾಮ್ ಎನ್ನುವರ ಮೇಲೆ ಕೇಸ್ ಹಾಕುತ್ತಿದ್ದಾರೆ. ರಾಮನನ್ನು ಅವಹೇಳನ ಮಾಡಿದವರ ಮೇಲೆ ಯಾವುದೇ ಕೇಸಿಲ್ಲ, ಅವರನ್ನು ಹಂಗೇ ಬಿಡುತ್ತಿದ್ದಾರೆ ಎಂದು ಹೇಳಿದರು.

ʻʻನಾವು ಇದನ್ನು ಫೇಸ್ ಮಾಡುತ್ತೇವೆ. .ನಾವು ಇಬ್ಬರು ಶಾಸಕರು ಜಾಮೀನು ಪಡೆಯೋದಿಲ್ಲ. ಈ ಪ್ರಕರಣವನ್ನು ಎದರಿಸುತ್ತೇವೆʼʼ ಎಂದು ಹೇಳಿದ ಭರತ್‌ ಶೆಟ್ಟಿ ಅವರು, ಸದನದ ಶೂನ್ಯ ವೇಳೆಯಲ್ಲಿ ಪ್ರಸ್ತಾಪ ಮಾಡಿದ್ದೇನೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಸರಿಯಾಗಿ ಉತ್ತರ ಕೊಟ್ಟಿಲ್ಲ. ಸಂಜೆ ಗೃಹ ಸಚಿವರು ಉತ್ತರಿಸಬಹುದು. ನಾವು ಇದನ್ನ ಮತ್ತೆ ಪ್ರಸ್ತಾಪ ಮಾಡ್ತೇವೆ ಎಂದರು.

ʻʻನಾನು ಶಾಲೆಗೆ ಹೋಗೇ ಇರಲಿಲ್ಲ. ಡಿಡಿಪಿಐ ಕಚೇರಿಗೆ ಮಾತ್ರ ಹೋಗಿದ್ದೆ‌. ಆದ್ರೆ ಗಲಾಟೆ ಮಾಡಿದ್ದಾರೆ ಎಂದು ಕೇಸ್ ಹಾಕಿದ್ದಾರೆ. ಇದು ದುರದ್ದೇಶದಿಂದ ಹಾಕಿರುವ ಕೇಸ್ʼʼ ಎಂದು ಹೇಳಿದರು.

ರಾಮನ ಅವಹೇಳನ ಮಾಡಿದ ಶಿಕ್ಷಕಿಯ ಮೇಲೆ ಪೋಷಕರೇ ದೂರು ನೀಡಿದ್ದಾರೆ‌. ಆದರೆ, ಅವರ ಮೇಲೆ ಕೇಸು ಹಾಕಿಲ್ಲ. ಅದಕ್ಕೆ ಬದಲಾಗಿ ‌ ಡಿಡಿಪಿಐಯನ್ನು ವರ್ಗಾವಣೆ ಮಾಡಿದ್ದಾರೆ. ಅವರು ತನಿಖೆ ಮಾಡಿದರೆ ಸತ್ಯ ಗೊತ್ತಾಗುತ್ತೆ ಅಂತ ಅವರನ್ನು ಎತ್ತಂಗಡಿ ಮಾಡಿದ್ದಾರೆ ಎಂದು ಭರತ್‌ ಶೆಟ್ಟಿ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ವಿಸ್ತಾರ ಸಂಪಾದಕೀಯ: ಸಾಲದ ಹೊರೆಯ ನಡುವೆ ಸರ್ವ ವಲಯಗಳಿಗೂ ಸಮಾನ ಹಂಚಿಕೆಯ ಬಜೆಟ್

Vistara Editorial: ಸಿಎಂ ಸಿದ್ದರಾಮಯ್ಯ ಅವರು ಸಾಲ ಮಾಡಿ ತುಪ್ಪ ತಂದರೂ ರಾಜ್ಯದ ಎಲ್ಲ ವಲಯಗಳ ಜನತೆಗೂ ಹದವಾಗಿ ಹಂಚಿದ್ದಾರೆ. ಅವರ ಘೋಷಣೆಗಳು ಹಾಗೂ ಭರವಸೆಗಳು ಸಕಾಲದಲ್ಲಿ ಕಾರ್ಯರೂಪದಲ್ಲಿ ಬರುವಂತಾಗಲಿ.

VISTARANEWS.COM


on

Vistara Editorial, Karnataka budget touches all sectors amid debt burden
Koo

ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು 2024-25ರ ಬಜೆಟ್‌ ಅನ್ನು ಮಂಡಿಸಿದ್ದಾರೆ. ಈ ಸಾಲಿನ ಕರ್ನಾಟಕ ರಾಜ್ಯ ‌ ಆಯವ್ಯಯದ (Karnataka Budget 2024) ಒಟ್ಟು ಗಾತ್ರ 3,71,383 ಕೋಟಿ ರೂ. ಇದು 2023-24ನೇ ಸಾಲಿಗಿಂತ 44 ಸಾವಿರ ಕೋಟಿ ರೂ. ಹೆಚ್ಚು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಇನ್ನಷ್ಟು ಆಕರ್ಷಕ ಯೋಜನೆಗಳನ್ನು ಪ್ರಕಟಿಸಿ ಮತದಾರರನ್ನು ಸೆಳೆಯಬಹುದು ಎಂದು ಹೇಳಲಾಗಿತ್ತಾದರೂ, ಸಿಎಂ ಹಾಗೇನೂ ಮಾಡಲು ಮುಂದಾಗಿಲ್ಲ. ಖಜಾನೆಯ ಸ್ಥಿತಿಗತಿ ಗಮನಿಸಿಕೊಂಡು, ಏರಿಸಬೇಕಾದಲ್ಲಿ ತೆರಿಗೆ ಏರಿಸಿ, ಸಾಲ ಮಾಡಬೇಕಾದಲ್ಲಿ ಸಾಲ ಮಾಡಿ, ಗ್ಯಾರಂಟಿ ಯೋಜನೆಗಳಿಗೂ ಹಣಕಾಸು ಹೊಂದಿಸಿಕೊಂಡು, ವಿತ್ತೀಯ ಶಿಸ್ತನ್ನು ಉಳಿಸಿಕೊಳ್ಳಲು ಸಾಕಷ್ಟು ಕಸರತ್ತು ಮಾಡಿ ಬಜೆಟನ್ನು ಸಿಎಂ ಮಂಡಿಸಿದ್ದಾರೆ. ಎಲ್ಲ ವಲಯಗಳನ್ನೂ ಈ ಬಜೆಟ್‌ ಸ್ಪರ್ಶಿಸಿದೆ(Vistara Editorial).

ಜನಪ್ರಿಯ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಅಡಚಣೆ ಆಗದಂತೆ ತಾಳಮೇಳ ಕಾಯ್ದುಕೊಂಡಿದ್ದಾರೆ. ಒಟ್ಟಾರೆಯಾಗಿ ಐದೂ ಗ್ಯಾರಂಟಿಗಳಿಗೆ ಸೇರಿ 52,009 ಕೋಟಿ ರೂಪಾಯಿಯನ್ನು ಮೀಸಲಿಟ್ಟಿರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಐದೂ ಗ್ಯಾರಂಟಿ ಯೋಜನೆಯಲ್ಲಿ ಸಿಂಹಪಾಲು ಗೃಹ ಲಕ್ಷ್ಮಿ ಯೋಜನೆಗೆ (28,608 ಕೋಟಿ ರೂ) ಖರ್ಚಾಗುತ್ತಿದ್ದರೆ, ಅತಿ ಕಡಿಮೆ ಅನುದಾನ (650 ಕೋಟಿ ರೂ.) ಯುವ ನಿಧಿಗೆ ಮೀಸಲಿಡಲಾಗಿದೆ. ಇಲಾಖೆಗಳಲ್ಲಿ ಶಿಕ್ಷಣ 44422 ಕೋಟಿ ರೂ., ಮಹಿಳಾ ಮತ್ತು ಮಕ್ಕಳ ಕಲ್ಯಾಣ 34406 ಕೋಟಿ ರೂ., ಇಂಧನ 23159 ಕೋಟಿ ರೂ., ಗ್ರಾಮೀಣಾಭಿವೃದ್ಧಿ 21160 ಕೋಟಿ ರೂ. ಹೆಚ್ಚಿನ ಅನುದಾನ ಪಡೆದಿವೆ.

ಪ್ರಸಕ್ತ ಸಾಲಿನಲ್ಲಿ ರಾಜ್ಯದ 36 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 27,000 ಕೋಟಿ ರೂ.ಗಳಷ್ಟು ದಾಖಲೆಯ ಬೆಳೆ ಸಾಲ ವಿತರಣೆ ಗುರಿ, ಸರ್ಕಾರದ ಹಿಂದಿನ ಅವಧಿಯ ಬೆಳೆಸಾಲ ಮನ್ನಾ ಬಾಬ್ತು ಬಾಕಿ ಇರುವ 132 ಕೋಟಿ ರೂ. ಮೊತ್ತ ಡಿಸಿಸಿ ಬ್ಯಾಂಕುಗಳಿಗೆ ಬಿಡುಗಡೆ, ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ ಸಮಗ್ರ ಕೃಷಿ ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿ ಇವೆಲ್ಲವೂ ಕೃಷಿ ಕ್ಷೇತ್ರವನ್ನು ಬಲಿಷ್ಠಗೊಳಿಸುವ ಘೋಷಣೆಗಳಾಗಿವೆ. ಕಾವೇರಿ ಕಣಿವೆಯ ಮಹತ್ವಾಕಾಂಕ್ಷಿ ಯೋಜನೆಯಾದ ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕೆ ಒಂದು ಪ್ರತ್ಯೇಕ ಯೋಜನಾ ವಿಭಾಗ ಹಾಗೂ 2 ಉಪವಿಭಾಗಗಳ ಸ್ಥಾಪನೆ, ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ ದೊಡ್ಡನಗರದ ಬಳಿಯ ವಿತರಣಾ ತೊಟ್ಟಿಯವರೆಗೆ ಪೂರ್ವ ಪರೀಕ್ಷಾರ್ಥ ಚಾಲನೆ, ಲಿಫ್ಟ್‌ ಕಾಮಗಾರಿಗಳನ್ನು ಪೂರ್ಣಗೊಳಿಸಿ ಗುರುತ್ವ ಕಾಲುವೆಗೆ ನೀರು ಹರಿಸಲು ಕ್ರಮ, ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಯೋಜನೆಯಡಿಯ ಉಪಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆ, ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ ಸುಮಾರು 75,000 ಎಕರೆ ನೀರಾವರಿ ಸಾಮರ್ಥ್ಯ ಕಲ್ಪಿಸುವ ಗುರಿ ಹೊಂದಿರುವುದು ನೀರಾವರಿಯ ಬೋನಸ್.

2024-25 ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಿರುವುದು ವಸತಿ ಹೊಂದುವ ಕನಸು ಹೊಂದಿದವರಿಗೆ ಭರವಸೆ. 2000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ ಪರಿವರ್ತನೆ ಮಾಡುತ್ತಿರುವುದು ಶಿಕ್ಷಣ ಕ್ಷೇತ್ರದಲ್ಲಿ ಕುತೂಹಲಕಾರಿಯಾದ, ಕನ್ನಡ ಭಾಷೆಯ ಮೇಲೆ ದೂರಗಾಮಿ ಪರಿಣಾಮ ಬೀರಬಲ್ಲ ಹೆಜ್ಜೆಯಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್‌ ಘೋನ್‌ ಒದಗಿಸಲು ಕ್ರಮ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿ೦ದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಒಟ್ಟು 2,710 ಕೋಟಿ ರೂ. ಅನುದಾನ, ಪರಿಶಿಷ್ಟ ಜಾತಿಯ 5,000 ಯುವಕ/ಯುವತಿಯರಿಗೆ ಡ್ರೋನ್‌ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ, ಹಿಂದುಳಿದ ವರ್ಗಗಳ 150 ಮೆಟ್ರಿಕ್‌ ನಂತರದ ಹೊಸ ವಸತಿನಿಲಯಗಳ ಪ್ರಾರಂಭ ಇವುಗಳು ದುರ್ಬಲ ವರ್ಗಗಳ ಸಬಲೀಕರಣಕ್ಕೆ ಹೆಚ್ಚಿನ ಮೌಲ್ಯ ಕಲ್ಪಿಸಬಲ್ಲ ಕ್ರಮಗಳಾಗಿವೆ. ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗದ ಶಿಫಾರಸು ಜಾರ ಸೇರಿದಂತೆ ಹಲವು ಭರವಸೆಗಳನ್ನು ನೀಡಲಾಗಿದೆ.

ಆದರೆ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಸಿಎಂ ಸಿದ್ದರಾಮಯ್ಯ ಸಾಲ ಮಾಡಿರುವುದು ಕಂಡುಬರುತ್ತಿದೆ. 2024-25ರಲ್ಲಿ ರಾಜಸ್ವ ಕೊರತೆ 27,354 ಕೋಟಿ ರೂ.ಗಳೆಂದು ಅಂದಾಜು ಮಾಡಲಾಗಿದೆ. ವಿತ್ತೀಯ ಕೊರತೆ 82,981 ಕೋಟಿ ರೂ.ಗಳೆಂದು ಅಂದಾಜು ಮಾಡಲಾಗಿದ್ದು, ರಾಜ್ಯದ ಜಿ.ಎಸ್.ಡಿ.ಪಿಯ ಶೇ.2.95ರಷ್ಟಿದೆ. ರಾಜ್ಯದ ಒಟ್ಟು ಹೊಣೆಗಾರಿಕೆಯು 2024-25ರ ಅಂತ್ಯಕ್ಕೆ 6,65,095 ಕೋಟಿ ರೂ.ಗಳು ಎಂದು ಅಂದಾಜಿಸಲಾಗಿದೆ. ಅಂದರೆ ಈಗ ರಾಜ್ಯ ಸರ್ಕಾರದ ಮೇಲೆ 6.65 ಲಕ್ಷ ಕೋಟಿ ರೂ. ಸಾಲ ಇದೆ. ಅಂದರೆ, ರಾಜ್ಯದಲ್ಲಿ 6.5 ಕೋಟಿ ಜನಸಂಖ್ಯೆ ಇದೆ ಎಂದು ಇಟ್ಟುಕೊಂಡರೆ ಪ್ರತಿಯೊಬ್ಬರ ಮೇಲೆ ಒಂದೊಂದು ಲಕ್ಷ ರೂ. ಸಾಲ ಇರುವಂತಾಗಿದೆ. ಇಷ್ಟು ದೊಡ್ಡ ಗಾತ್ರದ ಬಜೆಟ್‌ ಮಂಡನೆಗಾಗಿ ಸಿದ್ದರಾಮಯ್ಯ ಅವರು 1,05,246 ಕೋಟಿ ರೂ. ಸಾಲ ಮಾಡಬೇಕಾಗಿದೆ. ಆದರೆ ಇದು ವಿತ್ತೀಯ ಶಿಸ್ತನ್ನು ದಾಟಿ ಹೋಗಿಲ್ಲ. ಹೀಗಾಗಿ ರಾಜ್ಯಕ್ಕೆ ಆರ್ಥಿಕ ಅಪಾಯವೇನೂ ಎದುರಾಗುವ ಸ್ಥಿತಿಯಲ್ಲಿ ಇಲ್ಲ ಎಂಬ ವಾದ ಮುಖ್ಯಮಂತ್ರಿಯದು. ಸಾಲ ಮಾಡಿ ತುಪ್ಪ ತಂದರೂ ರಾಜ್ಯದ ಎಲ್ಲ ವಲಯಗಳ ಜನತೆಗೂ ಹದವಾಗಿ ಹಂಚಿದ್ದಾರೆ. ಈ ಮೇಲಿನ ಘೋಷಣೆಗಳು ಹಾಗೂ ಭರವಸೆಗಳು ಸಕಾಲದಲ್ಲಿ ಕಾರ್ಯರೂಪದಲ್ಲಿ ಬಂದಾಗ ಮಾತ್ರ ಅರ್ಥಪೂರ್ಣವಾಗಲಿವೆ.

ಈ ಸುದ್ದಿಯನ್ನೂ ಓದಿ: ವಿಸ್ತಾರ ಸಂಪಾದಕೀಯ: ಚುನಾವಣೆ ಬಾಂಡ್; ಪಾರದರ್ಶಕತೆ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

Continue Reading

ಬಜೆಟ್ 2024

Karnataka Budget 2024 : ಪರಿಶಿಷ್ಟ ಪಂಗಡದ 5 ಸಾವಿರ ಯುವಕರಿಗೆ ಡ್ರೋನ್ ಟ್ರೈನಿಂಗ್​​

Karnataka Budget 2024 : ಡ್ರೋನ್ ತರಬೇತಿ ನೀಡುವ ಮೂಲಕ ಪರಿಶಿಷ್ಟ ಪಂಗಡದ ಯುವಕರಿಗೆ ಔದ್ಯೋಗಿಕ ಅವಕಾಶಗಳನ್ನು ಸೃಷ್ಟಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

VISTARANEWS.COM


on

Drone Training
Koo

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯಡಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಯುವಕರಿಗೆ ಅನೇಕ ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಬಜೆಟ್​ನಲ್ಲಿ (Karnataka Budget 2024) ಪ್ರಕಟಿಸಿದ್ದಾರೆ. ಪ್ರಮುಖವಾಗಿ ಉದ್ಯೋಗಕ್ಕೆ ನೆರವಾಗುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಸಿದ್ದರಾಮಯ್ಯ ಅವರು ಪ್ರಕಟಿಸಿದ್ದಾರೆ. ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ 5,000 ಯುವಕ/ಯುವತಿಯರಿಗೆ ಡ್ರೋನ್ ತರಬೇತಿಯನ್ನು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಕರ್ನಾಟಕ ಅನುಸೂಚಿತ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯಡಿಯಲ್ಲಿ 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಗೆ 27,674 ಕೋಟಿ ರೂ. ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಗೆ 11,44೭ ಕೋಟಿ ರೂ. ಗಳು ಸೇರಿದಂತೆ ಒಟ್ಟಾರೆ 39,12೧ ಕೋಟಿ ರೂ. ಗಳ ಅನುದಾನವನ್ನು ಒದಗಿಸಲಾಗಿದೆ ಎಂದು ಸಿದ್ದರಾಮಯ್ಯ ಅವರು ಬಜೆಟ್​ನಲ್ಲಿ ಹೇಳಿದರು.

ವೈಜ್ಞಾನಿಕವಾಗಿ ಹಾಗೂ ಸಂವಿಧಾನಬದ್ಧವಾಗಿ ಪರಿಶಿಷ್ಟ ಜಾತಿಯ ಮೀಸಲು ವರ್ಗೀಕರಣ ಮಾಡುವುದು ಸರ್ಕಾರದ ಧ್ಯೇಯವಾಗಿದೆ. ಈ ಕುರಿತು ಭಾರತದ ಸಂವಿಧಾನದ ಅನುಚ್ಛೇದ 341ಕ್ಕೆ ಅಗತ್ಯ ತಿದ್ದುಪಡಿ ತಂದು, ಹೊಸದಾಗಿ ಕ್ಲಾಸ್​ -3 ಅನ್ನು ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂದು ಹೇಳಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ವಸತಿ ಶಾಲೆಗಳು ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಒಟ್ಟು 2,710 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂಬುದಾಗಿ ಬಜೆಟ್ ಭಾಷಣದಲ್ಲಿ ಸಿಎಂ ಹೇಳಿದರು.

ಇದನ್ನೂ ಓದಿ : Karnataka Budget 2024: ಇದೊಂದು ಅಭಿವೃದ್ಧಿ ಪರ ಬಜೆಟ್: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಕ್ರೈಸ್‌ ಯೋಜನೆಯಡಿ 23 ವಸತಿ ಶಾಲೆಗಳ ಕಟ್ಟಡ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳಿಗೆ ಸೇರಿದ ಒಟ್ಟು 29 ವಸತಿ ಶಾಲಾ ಸಂಕೀರ್ಣಗಳ ನಿರ್ಮಾಣ ಕಾಮಗಾರಿಗಳನ್ನು 638 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲಾಗುವುದು| ವಸತಿ ಶಾಲೆಗಳು ಇಲ್ಲದಿರುವ ಹೋಬಳಿಗಳ ಪೈಕಿ 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳನ್ನು ಕ್ರೈಸ್‌ ಸಂಸ್ಥೆಯ ಮೂಲಕ ಪ್ರಾರಂಭಿಸಲಾಗುವುದು ಎಂದು ನುಡಿದರು.

2023-24ನೇ ಸಾಲಿನಲ್ಲಿ 23 ವಿದ್ಯಾರ್ಥಿನಿಲಯಗಳ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗಿದೆ. ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿರುವ 18 ವಿದ್ಯಾರ್ಥಿನಿಲಯಗಳಿಗೆ ಸ್ವಂತ ಕಟ್ಟಡಗಳನ್ನು 2024-25ನೇ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆಯ ಮುಖಾಂತರ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಹೇಳಿದರು.

ಇದನ್ನೂ ಓದಿ : Karnataka Budget 2024: ಇದೊಂದು ಅಭಿವೃದ್ಧಿ ಪರ ಬಜೆಟ್: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಶೈಕ್ಷಣಿಕವಾಗಿ ಪ್ರಮುಖ ನಗರಗಳಲ್ಲಿ ವಸತಿನಿಲಯಗಳಿಗೆ ಬೇಡಿಕೆ ಹೆಚ್ಚುತ್ತಿರುವ ಕಾರಣ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 31 ಹೊಸ ಮೆಟ್ರಿಕ್‌ ನಂತರದ ವಸತಿನಿಲಯಗಳನ್ನು ಮಂಜೂರು ಮಾಡಲಾಗುವುದು. ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮೆಟ್ರಿಕ್‌ ಪೂರ್ವ, ಮೆಟ್ರಿಕ್‌ ನಂತರದ ವಸತಿ ನಿಲಯಗಳು, ಆಶ್ರಮ ಶಾಲೆಗಳು ಮತ್ತು ವಸತಿ ಶಾಲೆಗಳ ವಿದ್ಯಾರ್ಥಿಗಳ ಭೋಜನ ವೆಚ್ಚವನ್ನು ಪ್ರತಿ ವಿದ್ಯಾರ್ಥಿಗೆ 100 ರೂ. ನಂತೆ ಹೆಚ್ಚಿಸಲಾಗುವುದು ಎಂದು ಹೇಳಿದರು.

35 ಕೋಟಿ ಕಾರ್ಪಸ್​ ಫಂಡ್​

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಜನರಿಗೆ ದುಬಾರಿ ವೆಚ್ಚದ ಚಿಕಿತ್ಸಾ ಸೇವೆಗಳನ್ನು ಒದಗಿಸಲು 35 ಕೋಟಿ ರೂ.ಗಳ ಕಾರ್ಪಸ್​​ ಫಂಡ್​ ಸ್ಥಾಪಿಸಲಾಗುವುದು. ಈ ನಿಧಿಯ ಬಡ್ಡಿ ಆಕರಣೆಯನ್ನು ರೋಗಿಗಳ ಚಿಕಿತ್ಸೆಯ ಅಗತ್ಯಕ್ಕನುಗುಣವಾಗಿ ನೀಡಲಾಗುವುದು ಎಂದು ಹೇಳಿದರು.

ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಗಮಗಳಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 1,750 ಕೋಟಿ ರೂ.ಗಳ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು.

ಪರಿಶಿಷ್ಟ ಪಂಗಡಗಳ ಕಲ್ಯಾಣ

  1. ಪರಿಶಿಷ್ಟ ವರ್ಗಗಳ ಸರ್ವತೋಮುಖ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಲಾಗಿದೆ. ಈ ಸಚಿವಾಲಯಕ್ಕೆ ಅಗತ್ಯ ಹುದ್ದೆಗಳನ್ನು ಸೃಜಿಸಿ 2023-24ನೇ ಸಾಲಿನಿಂದ ಕಾರ್ಯಾರಂಭ ಮಾಡಲಾಗಿದೆ ಎಂದು ಬಜೆಟ್​ನಲ್ಲಿ ಘೋಷಿಸಿದರು.
  2. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಶ್ರಮ ಶಾಲೆಗಳ ಹೆಸರನ್ನು ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳು ಎಂದು ಮರು ನಾಮಕರಣ ಮಾಡಲಾಗುವುದು. ಈ ಶಾಲೆಗಳ ಉನ್ನತೀಕರಣಕ್ಕೆ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.
  3. ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್‌ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ, ಯಾವುದೇ ಫೆಲೋಶಿಪ್‌ ಪಡೆಯದಿದ್ದಲ್ಲಿ ಮಾಸಿಕ 25,000 ರೂ.ಗಳಂತೆ ಶಿಷ್ಯವೇತನ ನೀಡಲಾಗುವುದು ಎಂದು ಸಿಎಂ ಬಜೆಟ್ ವೇಳೆ ಘೋಷಿಸಿದ್ದಾರೆ.
Continue Reading

ಪ್ರಮುಖ ಸುದ್ದಿ

Karnataka Budget 2024 : ಮೆಟ್ರೊ 3ನೆ ಹಂತ ಸೇರಿದಂತೆ ಬೆಂಗಳೂರು ನಗರ ಸಂಚಾರ ವ್ಯವಸ್ಥೆಗೆ ಬಜೆಟ್​ನಲ್ಲಿ ಒತ್ತು

Karnataka Budget 2024 : ಮೆಟ್ರೊ, ಉಪನಗರ ರೈಲು ಹಾಗೂ ಬಿಎಂಟಿಗೆ ಉತ್ತೇಜನ ನೀಡುವ ಭರವಸೆಯನ್ನು ಬಜೆಟ್​ನಲ್ಲಿ ವ್ಯಕ್ತಪಡಿಸಲಾಗಿದೆ.

VISTARANEWS.COM


on

Namma Metro
Koo

ಬೆಂಗಳೂರು: ಬೆಂಗಳೂರು ನಗರದೊಳಗಿನ ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಅವರು ತಾವು ಮಂಡಿಸಿರುವ 15ನೇ ಬಜೆಟ್​ನಲ್ಲಿ (Karnataka Budget 2024) ಒತ್ತು ನೀಡಿದ್ದಾರೆ. ಪ್ರಮುಖವಾಗಿ ಸರ್ಜಾಪುರದಿಂದ ಹೆಬ್ಬಾಳದವರೆಗಿನ ನಮ್ಮ ಮೆಟ್ರೋ ಹಂತ 3 ಕರಡು ಸಿದ್ಧಪಡಿಸುವುದು, ಉಪನಗರ ರೈಲು ಯೋಜನೆಗೆ ಚುರುಕು, ಬಿಎಂಟಿಸಿ ಸಾರಿಗೆ ಉನ್ನತೀಕರಣಕ್ಕೆ ಆದ್ಯತೆ ನೀಡಲಾಗಿದೆ.

ನಮ್ಮ ಮೆಟ್ರೋ ರೈಲಿನ ಮೂಲಕ 8 ಲಕ್ಷಕ್ಕೂ ಹೆಚ್ಚಿನ ಜನರು ಪ್ರತಿನಿತ್ಯ ಪ್ರಯಾಣಿಸುತ್ತಿದ್ದಾರೆ. ಪ್ರಸ್ತುತ ಕಾರ್ಯಾಚರಣೆಯಲ್ಲಿರುವ 74 ಕಿ.ಮೀ. ಮಾರ್ಗದೊಂದಿಗೆ 2025ರ ಮಾರ್ಚ್‌ ವೇಳೆಗೆ ಹೆಚ್ಚುವರಿಯಾಗಿ 44 ಕಿ.ಮೀ. ಮಾರ್ಗ ಸೇರ್ಪಡೆಯಾಗಲಿದೆ. ಮೆಟ್ರೋ ಯೋಜನೆ ಹಂತ-2 ಮತ್ತು 2ಎ ಯೋಜನೆಯಡಿ ಹೊರವರ್ತುಲ ರಸ್ತೆ- ವಿಮಾನ ನಿಲ್ದಾಣ ಮಾರ್ಗವು 2026ರ ಜೂನ್‌ ವೇಳೆಗೆ ಸಿದ್ದವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತನ್ನ ಬಜೆಟ್‌ ಭಾಷಣದಲ್ಲಿ ಘೋಷಿಸಿದ್ದಾರೆ.

ಇದನ್ನೂ ಓದಿ :Karnataka Budget 2024 : ಸಿದ್ದರಾಮಯ್ಯ ಬಜೆಟ್​ ಎಕ್ಸ್​ ಟ್ರೆಂಡಿಂಗ್​ನಲ್ಲಿ ನಂಬರ್​ 1

ಮೆಟ್ರೊ ಹಂತ-3ರ ಅಂದಾಜು 15,611 ಕೋಟಿ ರೂ. ವೆಚ್ಚದ ಯೋಜನೆಗೆ ರಾಜ್ಯ ಸರ್ಕಾರವು ಆಡಳಿತಾತ್ಮಕ ಅನುಮೋದನೆ ಕೊಟ್ಟಿದೆ. ನಮ್ಮ ಮೆಟ್ರೋ ಹಂತ-3ಎ ರಡಿಯಲ್ಲಿ ಸರ್ಜಾಪುರದಿಂದ ಅಗರ, ಕೋರಮಂಗಲ ಡೈರಿ ವೃತ್ತ, ಮೇಖ್ರಿ ವೃತ್ತ ಮೂಲಕ ಹೆಬ್ಬಾಳವನ್ನು ಸಂಪರ್ಕಿಸಲಿದೆ.

ಉಪನಗರ ರೈಲು

ಬೆಂಗಳೂರು ಉಪನಗರ ರೈಲು ಯೋಜನೆಯಡಿ ಬೈಯ್ಯಪ್ಪನಹಳ್ಳಿಯಿಂದ ಚಿಕ್ಕಬಾಣಾವರ ವರೆಗಿನ ಕಾರಿಡಾರ್‌-2ರ ಸಿವಿಲ್‌ ಕಾಮಗಾರಿಗಳನ್ನು ವೇಗವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಕಾರಿಡಾರ್‌-4 ರ ಹೀಲಲಿಗೆಯಿಂದ ರಾಜಾನುಕುಂಟೆ ವರೆಗಿನ 46.2 ಕಿ.ಮೀ. ಉದ್ದದ ಮಾರ್ಗ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದೆ. ಐರೋಪ್ಯ ಹೂಡಿಕೆ ಬ್ಯಾಂಕ್‌ ಮತ್ತು ಜರ್ಮನಿಯ KFW ಬ್ಯಾಂಕುಗಳ ಜೊತೆಗೆ ಆರ್ಥಿಕ ನೆರವಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬಿಎಂಟಿಸಿಗೆ ಹೊಸ ಬಸ್‌ಗಳು

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪ್ರತಿದಿನ ಸರಾಸರಿ 42 ಲಕ್ಷ ಜನರಿಗೆ ಸೇವೆಯನ್ನು ಒದಗಿಸುತ್ತಿದ್ದು, ದೇಶದಲ್ಲಿಯೇ ಅತ್ಯುತ್ತಮ ನಗರ ಸಾರಿಗೆ ವ್ಯವಸ್ಥೆಗಳಲ್ಲಿ ಒಂದಾಗಿದೆ. ಮುಂದಿನ ದಿನಗಳಲ್ಲಿ 1,334 ಹೊಸ ಎಲೆಕ್ಟ್ರಿಕ್‌ ಬಸ್‌ಗಳು ಮತ್ತು 820 ಬಿಎಸ್-6 ಡೀಸೆಲ್‌ ಬಸ್ಸುಗಳನ್ನು ಬಿ.ಎಂ.ಟಿ.ಸಿ.ಗೆ ಸೇರ್ಪಡೆಗೊಳಿಸಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್​ ಬಾಷಣದಲ್ಲಿ ಹೇಳಿದ್ದಾರೆ.

ಬಿಎಂಟಿಸಿ ಬಸ್‌ಗಳಲ್ಲಿ ಮಹಿಳೆಯರ ಸುರಕ್ಷತೆಗೆ ಆ್ಯಪ್​

ಬಿಎಂಟಿಸಿಯಲ್ಲಿ ಮಹಿಳಾ ಸುರಕ್ಷತೆಯನ್ನು ಒಳಗೊಂಡ ವೆಹಿಕಲ್‌ ಟ್ರ್ಯಾಕಿಂಗ್‌ ಹೊಂದಿರುವ ಮೊಬೈಲ್‌ ಆಪ್‌ ಅನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಜಪಾನ್‌ ಸರ್ಕಾರದ ಸಹಯೋಗದೊಂದಿಗೆ ಬೆಂಗಳೂರು ನಗರದಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಏರಿಯಾ ಟ್ರಾಫಿಕ್‌ ಸಿಗ್ನಲ್‌ ಸಿಸ್ಟಮ್‌ ಅನ್ನು ನಗರದ ಪ್ರಮುಖ 28 ಜಂಕ್ಷನ್‌ಗಳಲ್ಲಿ ಅಳವಡಿಸುವ ಮೂಲಕ ಟ್ರಾಫಿಕ್‌ ಸಿಗ್ನಲ್‌ ನಲ್ಲಿ ವಾಹನಗಳ ಸಂದಣಿಯನ್ನು ಶೇ.30ರಷ್ಟು ಹಾಗೂ ಸರಾಸರಿ ವಿಳಂಬವನ್ನು ಶೇ.13ರಷ್ಟು ಕಡಿಮೆಗೊಳಿಸಲಾಗುವುದು ಎಂದರು.

Continue Reading

ಕರ್ನಾಟಕ

Karnataka Budget 2024: ಅರ್ಥಶಾಸ್ತ್ರ, ಅಭಿವೃದ್ಧಿ, ದೂರದೃಷ್ಟಿ ಇಲ್ಲದ ಅಡ್ಡ ಕಸುಬಿ ಬಜೆಟ್‌ ಎಂದ ಆರ್.ಅಶೋಕ್‌

Karnataka Budget 2024: ಈ ಬಜೆಟ್ ಅತ್ಯಂತ ನೀರಸ, ಅಭಿವೃದ್ಧಿ ಶೂನ್ಯ, ದೂರದೃಷ್ಟಿ ಇಲ್ಲದ ಅಡ್ಡಕಸುಬಿ ಬಜೆಟ್. ಬಜೆಟ್ ಬಗೆಗಿನ ನಿರೀಕ್ಷೆಗಳೆಲ್ಲ ಹುಸಿಯಾಗಿದ್ದು, ಇದು‌ ‌’ಸಾಲರಾಮಯ್ಯನ ಸೋಗಲಾಡಿ’ ಬಜೆಟ್ ಆಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಟೀಕಿಸಿದ್ದಾರೆ.

VISTARANEWS.COM


on

R Ashoka
Koo

ಬೆಂಗಳೂರು: ಆರ್ಥಿಕ ತಜ್ಞ ಎಂದು ಕೊಚ್ಚಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ‘ಅಡ್ಡ ಕಸುಬಿ ಬಜೆಟ್‌ʼ (Karnataka Budget 2024) ಮಂಡಿಸಿದ್ದು, ಇದರಲ್ಲಿ ಅರ್ಥಶಾಸ್ತ್ರ, ಅಭಿವೃದ್ಧಿ, ದೂರದೃಷ್ಟಿ ಯಾವುದೂ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಕಟುವಾಗಿ ಟೀಕಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರದ ಬಜೆಟ್‌ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ಅವರು, ಬಜೆಟ್ ತಯಾರಿಕೆ ಎನ್ನುವುದು ಗಂಭೀರ ಹಾಗೂ ಪವಿತ್ರವಾದ ಸಾಂವಿಧಾನಿಕ ಕರ್ತವ್ಯ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ನೋಡಿದರೆ ಇದೊಂದು ‘ಅಡ್ಡ ಕಸುಬಿʼ ಬಜೆಟ್‌ನಂತೆ ಕಾಣುತ್ತಿದೆ. ಇದರಲ್ಲಿ ಅರ್ಥಶಾಸ್ತ್ರವೂ ಇಲ್ಲ, ಅಭಿವೃದ್ಧಿಯೂ ಇಲ್ಲ, ದೂರದೃಷ್ಟಿಯೂ ಇಲ್ಲ ಎಂದು ಹೇಳಿದ್ದಾರೆ.

ಸಾಧನೆಯ ಬಲದಿಂದಾಗಲೀ, ಅಭಿವೃದ್ಧಿ ಕೆಲಸಗಳಿಂದಾಗಲೀ, ಲೋಕಸಭೆ ಚುನಾವಣೆ ಎದುರಿಸುವುದು ಅಸಾಧ್ಯವೆಂದು ತಿಳಿದಿರುವ ಸಿಎಂ ಸಿದ್ದರಾಮಯ್ಯನವರು ಬಜೆಟ್ ಮಂಡನೆಯ ಪವಿತ್ರ ಸಾಂವಿಧಾನಿಕ ಕರ್ತವ್ಯವನ್ನು ಚುನಾವಣಾ ಭಾಷಣವಾಗಿಸಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಮೂಲಕ ಸಂವಿಧಾನಕ್ಕೆ ಮತ್ತು ಮತ ನೀಡಿ ಅಧಿಕಾರ ಕೊಟ್ಟ ಕನ್ನಡಿಗರಿಗೆ ಅಪಮಾನ ಎಸಗಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ | Karnataka Budget Session 2024: ಬೆಂಗಳೂರಲ್ಲಿ 6,000 ಕೋಟಿ ರೂ. ತೆರಿಗೆ ಸಂಗ್ರಹ ಟಾರ್ಗೆಟ್‌! ನಗರಾಭಿವೃದ್ಧಿಗೆ ಏನ್‌ ಮಾಡ್ತಾರೆ?

ತಲಾ 44,000 ರೂ. ಸಾಲಭಾಗ್ಯ

ತಮ್ಮ ಮೊದಲ ಅವಧಿಯಲ್ಲಿ 1 ಲಕ್ಷ ಕೋಟಿ ರೂ.ಗೂ ಹೆಚ್ಚು ಸಾಲ ಮಾಡಿ ಪ್ರತಿ ಪ್ರಜೆಯ ತಲೆಯ ಮೇಲೆ 44,000 ರೂ. ಗೂ ಅಧಿಕ ಸಾಲದ ಹೊರೆ ಹೇರಿದ್ದು ಮುಖ್ಯಮಂತ್ರಿ ಸಿದ್ದರಾಮ್ಯಯನವರ ದೊಡ್ಡ ಸಾಧನೆ. ಆ ಭಾಗ್ಯ, ಈ ಭಾಗ್ಯ ಎಂದು ರಾಜ್ಯದ ಜನತೆಯ ಮೇಲೆ ʼಸಾಲ ಭಾಗ್ಯʼ ಹೊರಿಸಿ, ಹಳಿ ತಪ್ಪಿದ್ದ ವಿತ್ತೀಯ ಶಿಸ್ತನ್ನು ನಂತರ ಬಂದ ಬಿಜೆಪಿ ಸರ್ಕಾರ ಕೋವಿಡ್ ಸಂಕಷ್ಟದ ಹೊರತಾಗಿಯೂ ಸರಿ ದಾರಿಗೆ ತಂದಿತ್ತು. ಆದರೆ ಈಗ ಎರಡನೇ ಅವಧಿಯಲ್ಲೂ ಸಿಎಂ ಸಿದ್ದರಾಮಯ್ಯನವರು ಕರ್ನಾಟಕವನ್ನು ದೊಡ್ಡ ಸಾಲದ ಸುಳಿಯಲ್ಲಿ ಸಿಲುಕಿಸಲು ಹೊರಟಿದ್ದಾರೆ. “ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು” ಎಂಬುದು ಈ ಸರ್ಕಾರದಲ್ಲಿ “ಸರ್ವರಿಗೂ ತೆರಿಗೆ, ಸರ್ವರಿಗೂ ಸಾಲ” ಎಂಬಂತಾಗಿದೆ ಎಂದರು.

ಕೇಂದ್ರದ ಮೇಲೆ ಆರೋಪ: ಬಜೆಟ್‌ ಪುಸ್ತಕದಲ್ಲಿ ಸುಳ್ಳುಗಳು

ಮೋದಿ ಸರ್ಕಾರದ ವಿರುದ್ಧ ದ್ವೇಷ ಭಾಷಣವನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ. ಸಂಪತ್ತಿನ ಶೇಖರಣೆ, ಅಸಮಾನತೆ ಎಂಬ ಹಳೆಯ ವಾದವನ್ನೇ ಜನರ ಮುಂದಿಟ್ಟಿದ್ದಾರೆ. ಹೀಗೆ ಹೇಳುತ್ತಲೇ ದಲಿತರಿಗೆ ಮೀಸಲಿಟ್ಟ 11 ಸಾವಿರ ಕೋಟಿ ರೂ. ಅನ್ನು ಬೇರೆ ಯೋಜನೆಗಳಿಗೆ ಬಳಸಿದ್ದಾರೆ. ಬೊಕ್ಕಸದಲ್ಲಿ ಹಣವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೇ ಪರೋಕ್ಷವಾಗಿ ಹೇಳಿದ್ದು, ಹಾಗೇನೂ ಇಲ್ಲ ಎಂದು ಬಜೆಟ್‌ನಲ್ಲಿ ಸಮರ್ಥಿಸಿಕೊಂಡಿದ್ದಾರೆ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

15ನೇ ಹಣಕಾಸು ಯೋಜನೆಯಡಿ ವಿಶೇಷ ಅನುದಾನ ಎಂಬ ಹಸಿ ಸುಳ್ಳನ್ನು ಬಜೆಟ್‌ ಪುಸ್ತಕದಲ್ಲಿ ಸೇರಿಸಿದ್ದಾರೆ. ಈ ರೀತಿಯ ಶಿಫಾರಸನ್ನು ಮಾಡಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಅಲ್ಲದೆ ರಾಜ್ಯಕ್ಕೆ ಎಷ್ಟು ನಷ್ಟವಾಗಿದೆ ಎಂಬ ಹೊಸ ತಲೆ ಬುಡವಿಲ್ಲದ ಲೆಕ್ಕವನ್ನು ನೀಡಿದ್ದಾರೆ. 2004-2014 ರ ಅವಧಿಯಲ್ಲಿ ಯುಪಿಎ ನೀಡಿದ್ದು, 81,795 ಕೋಟಿ ರೂ. 2014-2024 ರ ಅವಧಿಯಲ್ಲಿ ಮೋದಿ ಸರ್ಕಾರ ನೀಡಿರುವುದು 2,82,791 ಕೋಟಿ ರೂ. ಅಂದರೆ ಈ ಪ್ರಮಾಣ 242% ಕ್ಕೂ ಅಧಿಕ ಎಂದು ಆರ್.ಅಶೋಕ ಸತ್ಯಾಂಶವನ್ನು ವಿವರಿಸಿದ್ದಾರೆ.

ಗ್ಯಾರಂಟಿ ಯೋಜನೆಯಿಂದ ಜನರ ಆದಾಯ ಹೆಚ್ಚಿದೆ ಎಂದಿದ್ದಾರೆ. ಒಂದು ಕಡೆ ವಿದ್ಯುತ್‌ ದರ ಏರಿಕೆ, ರೈತರ ಪಂಪ್‌ಸೆಟ್‌ಗೆ ವಿದ್ಯುತ್‌ ಕಡಿತ, ಕಿಸಾನ್‌ ಸಮ್ಮಾನ್‌ ನಿಧಿ ಸ್ಥಗಿತ, ವಿದ್ಯಾನಿಧಿ ಸ್ಥಗಿತ, ಹೈನುಗಾರರಿಗೆ ಹಾಲಿನ ಪ್ರೋತ್ಸಾಹಧನ ಸ್ಥಗಿತ, ಮುದ್ರಾಂಕ ಶುಲ್ಕ ದರ ಏರಿಕೆ ಮೊದಲಾದವುಗಳ ಮೂಲಕ ಜನರಿಗೆ ದರ ಏರಿಕೆಗಳ ಬರೆ ಹಾಕಿದ್ದಾರೆ ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ ಈ ಬಜೆಟ್ ಅತ್ಯಂತ ನೀರಸ, ಅಭಿವೃದ್ಧಿ ಶೂನ್ಯ, ದೂರದೃಷ್ಟಿ ಇಲ್ಲದ ಅಡ್ಡಕಸುಬಿ ಬಜೆಟ್. ಬಜೆಟ್ ಬಗೆಗಿನ ನಿರೀಕ್ಷೆಗಳೆಲ್ಲ ಹುಸಿಯಾಗಿದ್ದು, ಇದು‌ ‌’ಸಾಲರಾಮಯ್ಯನ ಸೋಗಲಾಡಿ’ ಬಜೆಟ್ ಆಗಿದೆ ಎಂದು ಟೀಕಿಸಿದ್ದಾರೆ.

ಪದೇ ಪದೆ ಆರೋಪ

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್‌.ಅಶೋಕ, ಮುಖ್ಯಮಂತ್ರಿಗಳು ವಿಧಾನಸಭೆಯ ಒಳಗೆ ಕಾಂಗ್ರೆಸ್‌ನ ಶಾಲು ಧರಿಸಿಕೊಂಡು ಬಜೆಟ್‌ ಮಂಡಿಸಿದ್ದಾರೆ. ಕೇಂದ್ರ ಸರ್ಕಾರದ ಮೇಲೆ ನಿರಂತರವಾಗಿ ಆರೋಪ ಮಾಡಿ ತೆಗಳಿದ್ದಾರೆ. 15 ನೇ ಹಣಕಾಸು ಆಯೋಗವಿದ್ದಾಗ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿದ್ದರು. ಅದಕ್ಕೆ ಅವರೇ ಒಪ್ಪಿಗೆ ಕೊಟ್ಟು ಈಗ ಅನ್ಯಾಯ ಆಗಿದೆ ಎಂದರೆ ಕುಣಿಯಲಾಗದವರು ನೆಲ ಡೊಂಕು ಎಂದಂತಾಗುತ್ತದೆ. ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಬೇಕು. ಇಡೀ ದೇಶಕ್ಕೆ ಇವರೊಬ್ಬರೇ ತೆರಿಗೆ ಪಾವತಿಸುವಂತೆ ಮಾತಾಡುತ್ತಾರೆ. ಕೇಂದ್ರ ಸರ್ಕಾರದಿಂದ ಅನುದಾನ ತರುವುದು ಹೇಗೆಂದು ಯೋಚಿಸದೆ ತೆಗಳುವ ಕೆಲಸ ಮಾಡಿರುವುದರಿಂದ ನಾವು ಸಭಾತ್ಯಾಗ ಮಾಡಿದ್ದೇವೆ ಎಂದರು.

ಹಿಂದೆ ಬಿಜೆಪಿ ಬಜೆಟ್‌ ಮಂಡನೆ ವೇಳೆ ಕಾಂಗ್ರೆಸ್‌ನವರು ಕಿವಿ ಮೇಲೆ ಹೂ ಇಟ್ಟುಕೊಂಡಿದ್ದರು. ಆದರೆ ಈಗ ನಾವು ಪ್ರತಿಭಟಿಸಿದ್ದನ್ನು ಸ್ಪೀಕರ್‌ ಮಾಧ್ಯಮಕ್ಕೆ ತಿಳಿಯದಂತೆ ಮಾಡಿದ್ದಾರೆ. ರಾಜ್ಯಕ್ಕೆ 14,000 ಕೋಟಿ ರೂ. ಆದಾಯ ಕಡಿಮೆಯಾದರೆ, ಕೇಂದ್ರದಿಂದ ಬರುವ ಅನುದಾನ 3,000 ಕೋಟಿ ರೂ. ಹೆಚ್ಚಿದೆ. ಸಿಎಂ ಸಿದ್ದರಾಮಯ್ಯನವರು 7 ಕೋಟಿ ಕನ್ನಡಿಗರ ಮೇಲೆ ತೆರಿಗೆಯ ಜೊತೆಗೆ ಸಾಲದ ಹೊರೆ ಹಾಕಿದ್ದಾರೆ. ಒಟ್ಟು ಸಾಲ 1 ಲಕ್ಷ ಕೋಟಿ ರೂ. ದಾಟಿದೆ. ಸಾಲವನ್ನು ಈ ಮಟ್ಟಕ್ಕೆ ದಾಟಿಸಿದ ಮೊದಲ ಮುಖ್ಯಮಂತ್ರಿ ಇವರೇ ಎಂದರು.

ಇದನ್ನೂ ಓದಿ | Karnataka Budget 2024: ಏಳನೇ ವೇತನ ಆಯೋಗ ಶಿಫಾರಸು ಜಾರಿ; ಸರ್ಕಾರಿ ನೌಕರರಿಗೆ ಸಿಎಂ ಸಿಹಿ ಸುದ್ದಿ

ಲೂಟಿ ಹೊಡೆದ ಹಣವನ್ನು ಸಾಗಿಸಲು ಸುರಂಗ ಯೋಜನೆ ರೂಪಿಸಿದ್ದಾರೆ. ಬಿ.ಎಸ್‌.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಬೆಂಗಳೂರಿಗೆ ಉತ್ತಮ ಅನುದಾನ ನೀಡಿದ್ದಾರೆ. ಆದರೆ ಈಗಿನ ಬಜೆಟ್‌ನಲ್ಲಿ ಬೆಂಗಳೂರಿಗೆ ಅನುದಾನವೇ ಇಲ್ಲ. ಇದು ಚುನಾವಣೆಗಾಗಿ ಮಾಡಿದ ಬೋಗಸ್‌ ಬಜೆಟ್‌ ಎಂದರು.

Continue Reading
Advertisement
Cylinder Blast at Belgavi
ಬೆಳಗಾವಿ16 mins ago

Cylinder Blast : ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ವೃದ್ಧ ದಂಪತಿ ವಾರದ ನಂತರ ಸಾವು

lok sabha election 2024 jaishankar rahul sonia murmu
ಪ್ರಮುಖ ಸುದ್ದಿ39 mins ago

Lok Sabha Election: ಮತ ಚಲಾಯಿಸಿದ ರಾಷ್ಟ್ರಪತಿ ಮುರ್ಮು, ಸೋನಿಯಾ, ರಾಹುಲ್;‌ ಮತಕ್ಕಾಗಿ ಸರ್ಟಿಫಿಕೇಟ್ ಪಡೆದ ಜೈಶಂಕರ್‌!

Konark Tourist Destination
ಪ್ರವಾಸ41 mins ago

Konark Tourist Destination: ರಜೆಯಲ್ಲಿ ಕೋನಾರ್ಕ್‌ಗೆ ಹೋದಾಗ ಈ ಅದ್ಭುತ ಸ್ಥಳಗಳಿಗೆ ಭೇಟಿ ನೀಡಲು ಮರೆಯಬೇಡಿ

Karthi next film Suriya to produce Meiyazhagan
ಕಾಲಿವುಡ್49 mins ago

Karthi next film: ಇಂದು ನಟ ಕಾರ್ತಿ ಬರ್ತ್‌ಡೇ: ತಮ್ಮನ ಚಿತ್ರಕ್ಕೆ ಅಣ್ಣ ಸೂರ್ಯ ಬಂಡವಾಳ!

IPL 2024
ಕ್ರೀಡೆ49 mins ago

IPL 2024: ಐಪಿಎಲ್​ ಟ್ರೋಫಿಯಲ್ಲಿರುವ ಸಂಸ್ಕೃತ ಶ್ಲೋಕದ ಮೂಲ ಸಾರವೇನು?

Best Tourist Places In Tamilnadu
ಪ್ರವಾಸ1 hour ago

Best Tourist Places In Tamilnadu: ಈ ಸುಂದರ ದೇವಾಲಯಗಳ ದರ್ಶನಕ್ಕಾದರೂ ತಮಿಳುನಾಡಿಗೆ ಹೋಗಲೇಬೇಕು!

rave party culprit with jagan mohan reddy
ಪ್ರಮುಖ ಸುದ್ದಿ1 hour ago

Rave Party: ರೇವ್‌ ಪಾರ್ಟಿ ಆರೋಪಿಗೆ ಆಂಧ್ರ ಸಿಎಂ ಜಗನ್‌ ಜೊತೆ ಸ್ನೇಹ!

IPL 2024 Prize money
ಕ್ರೀಡೆ1 hour ago

IPL 2024 Prize money: ಐಪಿಎಲ್​ ವಿನ್ನರ್​ಗೆ ಸಿಗುವ ಬಹುಮಾನ ಮೊತ್ತವೆಷ್ಟು? 4ನೇ ಸ್ಥಾನಿ ಆರ್​ಸಿಬಿಗೆ ಸಿಕ್ಕ ಹಣವೆಷ್ಟು?

South Indian Monsoon Destinations
ಪ್ರವಾಸ2 hours ago

South Indian Monsoon Destinations: ದಕ್ಷಿಣ ಭಾರತದ ಈ 6 ಸ್ಥಳಗಳಲ್ಲಿ ಮಳೆಗಾಲದಲ್ಲಿ ಚಾರಣ ಮಾಡಲೇಬೇಕು!

Kiccha Sudeep Max cinema Pre climax Photo leak
ಸ್ಯಾಂಡಲ್ ವುಡ್2 hours ago

Kiccha Sudeep: ʻಮ್ಯಾಕ್ಸ್ʼ ಪ್ರಿ- ಕ್ಲೈಮ್ಯಾಕ್ಸ್ ಫೋಟೊ ಲೀಕ್‌? ಬೆಂಕಿ ಬಿರುಗಾಳಿ ಅಂದ್ರು ಫ್ಯಾನ್ಸ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌