Karnataka Budget Session 2024: 'ವಿಪಕ್ಷದವರು ಗೂಂಡಾಗಳು' ಎಂಬ ಸಿಎಂ ಹೇಳಿಕೆಗೆ ಟಿ.ಎ. ಶರವಣ ಕಿಡಿ - Vistara News

ರಾಜಕೀಯ

Karnataka Budget Session 2024: ‘ವಿಪಕ್ಷದವರು ಗೂಂಡಾಗಳು’ ಎಂಬ ಸಿಎಂ ಹೇಳಿಕೆಗೆ ಟಿ.ಎ. ಶರವಣ ಕಿಡಿ

Karnataka Budget Session 2024: ಸಿಎಂ ಸಿದ್ದರಾಮಯ್ಯ ಅವರು ವಿಪಕ್ಷದ ಸದಸ್ಯರನ್ನು ಗುಂಡಾಗಳಿಗೆ ಹೋಲಿಸಿ, ಥೂ, ಛಿ ಎಂದು ಬೆದರಿಸಲು ಪ್ರಯತ್ನಿಸಿದ್ದಾರೆ. ಇದು ಖಂಡನೀಯವಾಗಿದೆ. ಅವರು ತಮ್ಮ ಪದ ಬಳಕೆ ಬಗ್ಗೆ ಕನಿಷ್ಠ ವಿಷಾದ ಸೂಚಿಸುವ ಕೆಲಸವನ್ನೂ ಮಾಡಿಲ್ಲ ಎಂದು ಟಿ.ಎ. ಶರವಣ ಅಸಮಾಧಾನವನ್ನು ಹೊರಹಾಕಿದ್ದಾರೆ.

VISTARANEWS.COM


on

Karnataka Budget Session 2024 Opposition is goondas says CM and TA Sharavana condemn this statement
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಧಾನ ಪರಿಷತ್ತಿನಲ್ಲಿ ಶುಕ್ರವಾರ ನಡೆದ ಸದನದಲ್ಲಿ (Karnataka Budget Session 2024) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಪದ ಬಳಕೆ ಬಗ್ಗೆ ತೀವ್ರ ಆಕ್ಷೇಪಗಳು ವ್ಯಕ್ತವಾಗಿವೆ. ಈ ಬಗ್ಗೆ ತೀವ್ರ ಅಸಮಾಧಾನವನ್ನು ಹೊರಹಾಕಿರುವ ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಸಿದ್ದರಾಮಯ್ಯ ಅವರು ವಿಪಕ್ಷದ ಸದಸ್ಯರನ್ನು ಗುಂಡಾಗಳಿಗೆ ಹೋಲಿಸಿ, ಥೂ, ಛಿ ಎಂದು ಬೆದರಿಸಲು ಪ್ರಯತ್ನಿಸಿದ್ದಾರೆ. ಇದು ಖಂಡನೀಯವಾಗಿದೆ. ಅವರು ತಮ್ಮ ಪದ ಬಳಕೆ ಬಗ್ಗೆ ಕನಿಷ್ಠ ವಿಷಾದ ಸೂಚಿಸುವ ಕೆಲಸವನ್ನೂ ಮಾಡಿಲ್ಲ ಎಂದು ಹೇಳಿದರು.

ವಿಧಾನ ಪರಿಷತ್‌ನಲ್ಲಿ ನಡೆಯುತ್ತಿದ್ದ ಕಲಾಪದ ವೇಳೆ ಸಿಎಂ ಸಿದ್ದರಾಮಯ್ಯ ಅವರ ಪದಪ್ರಯೋಗದಿಂದ ಅಸಮಾಧಾನಗೊಂಡ ವಿಪಕ್ಷ ಸದಸ್ಯರು ಸಭಾತ್ಯಾಗವನ್ನು ಮಾಡಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಟಿ.ಎ. ಶರವಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸುದೀರ್ಘ ಉತ್ತರವನ್ನು ಸೌಜನ್ಯದಿಂದ ಕೇಳಿಸಿಕೊಳ್ಳುತ್ತಿದ್ದೆವು. ಪದೇ ಪದೆ ಅವರು ಕೇಂದ್ರ ಸರ್ಕಾರವನ್ನು ದೂರಿದ್ದಾರೆ. ಆಗ ಆಕ್ಷೇಪಿಸಿದಾಗ ‘ನೀವು ವಿಪಕ್ಷ ಸದಸ್ಯರು ಗೂಂಡಾಗಳಾ? ಥೂ, ಛೀ ಎಂದು ನಮ್ಮನ್ನೆಲ್ಲ ಬೆದರಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ’ ಎಂದು ಟೀಕಿಸಿದರು.‌

ಆರೂವರೆ ಕೋಟಿ ಜನರನ್ನು ಪ್ರತಿನಿಧಿಯಾಗಿರುವ ಮುಖ್ಯಮಂತ್ರಿಗಳು ಅಸಾಂವಿಧಾನಿಕ ಪದವನ್ನು ಬಳಸಿದ್ದಾರೆ. ಮುಖ್ಯಮಂತ್ರಿಗಳು ತಮ್ಮ ಪದ ಬಳಕೆಗೆ ವಿಷಾದ ಸೂಚಿಸಿಲ್ಲ. ಸಿಎಂ ಅವರ ವರ್ತನೆ, ಪದ ಪ್ರಯೋಗದಿಂದ ನಮಗೆ ಬಹಳ ನೋವಾಗಿದೆ. ಆದ್ದರಿಂದ ವಿಪಕ್ಷದ ಸದಸ್ಯರೆಲ್ಲರೂ ಸಭಾತ್ಯಾಗ ಮಾಡಿದ್ದೇವೆ ಎಂದು ಟಿ.ಎ. ಶರವಣ ತಿಳಿಸಿದರು.

Karnataka Budget Session 2024 Opposition is goondas says CM and TA Sharavana condemn this statement

ರಾಜ್ಯದ ಜನರು ಮುಖ್ಯಮಂತ್ರಿಗಳ ವರ್ತನೆಗೆ ತಕ್ಕ ಉತ್ತರವನ್ನು ಸೂಕ್ತ ಸಮಯದಲ್ಲಿ ನೀಡುತ್ತಾರೆ ಎಂದು ತಿಳಿಸಿದ ಅವರು, ಇವತ್ತು ಕಲಾಪವನ್ನು ಬಹಿಷ್ಕರಿಸಿದ್ದೇವೆ. ಮುಖ್ಯಮಂತ್ರಿಗಳು ಮಾತ್ರವಲ್ಲದೆ, ಸಚಿವರು ಕೂಡ ಪದೇ ಪದೆ ಎದ್ದುನಿಂತು ವಿಪಕ್ಷದವರಿಗೆ ಮಾತನಾಡಲು ಅವಕಾಶವನ್ನೇ ಕೊಟ್ಟಿಲ್ಲ ಎಂದು ಟಿ.ಎ. ಶರವಣ ಕಿಡಿಕಾರಿದರು.

ಬಿಜೆಪಿಯವರು ಗೂಂಡಾಗಳು ಎಂದ ಸಿಎಂ

ರಾಜ್ಯದ ತೆರಿಗೆ ಪಾವತಿ ಹಾಗೂ ಕೇಂದ್ರದ ತೆರಿಗೆ ಲೆಕ್ಕಾಚಾರದ ವ್ಯತ್ಯಾಸದ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ (CM Siddaramaiah), ವಿಪಕ್ಷಗಳ ಗದ್ದಲದಿಂದ ಆಕ್ರೋಶಗೊಂಡು, “ಏನು ಗೂಂಡಾಗಿರಿ ಮಾಡ್ತೀರಾ? ನೀವು ಗೂಂಡಾಗಳು, ನಿಮ್ಮ ಗೂಂಡಾಗಿರಿಗೆ ನಾವು ಹೆದರುವುದಿಲ್ಲ” ಎಂದು ಹೇಳಿರುವುದು ಈಗ ಗಲಾಟೆಗೆ ಕಾರಣವಾಗಿದೆ. ಈ ಸಂಬಂಧ ವಿಪಕ್ಷಗಳು ಕೆರಳಿದ್ದು ಗದ್ದಲ ಎಬ್ಬಿಸಿದ್ದಾರೆ. ಗದ್ದಲ ಹೆಚ್ಚಾದ ಹಿನ್ನೆಲೆಯಲ್ಲಿ 10 ನಿಮಿಷ ಕಾಲ ವಿಧಾನ ಪರಿಷತ್ ಕಲಾಪವನ್ನು ಸಭಾಪತಿಗಳು ಮುಂದೂಡಿದ್ದಾರೆ.

ರಾಜ್ಯದ ತೆರಿಗೆ ಪಾವತಿ ಹಾಗೂ ಕೇಂದ್ರದ ತೆರಿಗೆ ಲೆಕ್ಕಾಚಾರದಲ್ಲಿನ ವ್ಯತ್ಯಾಸದ ಬಗ್ಗೆ ಕಾಂಗ್ರೆಸ್‌ನ ಯು.ಬಿ. ವೆಂಕಟೇಶ್ ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡುವ ವೇಳೆ ಈ ಗದ್ದಲಗಳು ನಡೆದಿವೆ. ಕರ್ನಾಟಕ ಇವತ್ತು ತೆರಿಗೆ ಪಾವತಿಸುವುದರಲ್ಲಿ ಎರಡನೇ ಸ್ಥಾನದಲ್ಲಿದೆ. ಆದರೂ, ನಮಗೆ ಬರುವ ತೆರಿಗೆ ಆದಾಯದ ಪಾಲು ಕಡಿಮೆ ಆಗುತ್ತಿದೆ ಎಂದು ಹೇಳಿದರು.

ಹದಿನಾಲ್ಕು ಮತ್ತು ಹದಿನೈದನೇ ಹಣಕಾಸು ಆಯೋಗ ಶಿಫಾರಸು ಮಾಡುವಾಗ 18-19ರ ಬಜೆಟ್ ಗ್ರಾತ್ರ ಇತ್ತು. ಬಳಿಕ ಬಜೆಟ್ ಗಾತ್ರ ಹೆಚ್ಚಾಗುತ್ತಾ ಹೋಯಿತು. ಹೀಗಾಗಿ ಅದರ ಪಾಲು ಹೆಚ್ಚಾಗಬೇಕಿತ್ತು. ಈ ಹಿನ್ನೆಲೆಯಲ್ಲಿ 14ನೇ ಹಣಕಾಸು ಆಯೋಗವು ಶೇ. 42 ಕೊಡಲು ಹೇಳಿತ್ತು. ಆದರೆ, 15ನೇ ಆಯೋಗದಲ್ಲಿ ಇದರ ಪ್ರಮಾಣ ಕಡಿಮೆಯಾಗಿದೆ. ಈ ಎರಡೂ ಹಣಕಾಸು ಆಯೋಗದಲ್ಲಿ ವರ್ಷವಾರು ಕಡಿಮೆ ತೆರಿಗೆ ಪಾವತಿ ಆಗುತ್ತಿದೆ. ಮೊದಲ ವರದಿಯಲ್ಲಿ 5495 ಕೋಟಿ ಕೊಡಲು ಶಿಫಾರಸು ಆಗಿತ್ತು. ಅಂತಿಮ ವರದಿಯಲ್ಲಿ ಕೆರೆ ಹಾಗೂ ಫೆರಿಫರಲ್ ರಿಂಗ್ ರೋಡ್‌ಗಾಗಿ 6000 ಕೋಟಿ ರೂಪಾಯಿ ನೀಡಿತ್ತು ಎಂದು ಸಿಎಂ ಸಿದ್ದರಾಮಯ್ಯ ಅವರು ಅಂಕಿ-ಅಂಶಗಳನ್ನು ತೆರೆದಿಟ್ಟರು.

ಕರ್ನಾಟಕಕ್ಕೆ 11 ಸಾವಿರ ಕೋಟಿ ರೂ. ಕೊಡಲು 15ನೇ ಹಣಕಾಸು ಆಯೋಗದಿಂದ ಶಿಫಾರಸು ಮಾಡಲಾಗಿತ್ತು. ಆದರೆ, ಈ ಹಣವನ್ನು ಕೇಂದ್ರ ಸರ್ಕಾರ ಕೊಟ್ಟಿಲ್ಲ. ಇದನ್ನೇ ಸೆಂಟ್ರಲ್ ಫೈನಾನ್ಸ್ ಮಿನಿಸ್ಟರ್ ವಾದ ಮಾಡಲು ಹೊರಟಿದ್ದಾರೆ. ಪ್ರಶ್ನೆ ಮಾಡಿದರೆ ಹಣಕಾಸು ಆಯೋಗ ಅಟಾನಮಸ್ ಬಾಡಿಯಾಗಿದೆ. ನಾವು ಅದರ ವರದಿಯನ್ನಷ್ಟೇ ಅನುಷ್ಠಾನ ಮಾಡುತ್ತೇವೆ ಎನ್ನುತ್ತಾರೆ.‌ ಅದರಂತೆ ಮಾಡಿದರೂ ನಮಗೆ ಹಣ ಬಿಡುಗಡೆ ಆಗಬೇಕಿತ್ತು. ಅದನ್ನಿನ್ನೂ ಅವರು ಮಾಡಿಲ್ಲ. ಈ ಹಿಂದಿನ ಸರ್ಕಾರದ ಗಮನಕ್ಕೆ ಈ ವಿಚಾರವನ್ನು ತಂದಿದ್ದೆ. ವಿಶೇಷ ಅನುದಾನ ಪಡೆಯಲು ಕ್ರಮ ವಹಿಸಿ ಎಂದು ಮನವಿ ಮಾಡಿದ್ದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದಕ್ಕೆ ವಿಪಕ್ಷದವರು ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿದರು. ಅದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ನಾನು ಫ್ಯಾಕ್ಟ್ ಹೇಳುತ್ತಿದ್ದೇನೆ. ಫ್ಯಾಕ್ಟ್ ಈಸ್ ಫ್ಯಾಕ್ಟ್. ವಿಪಕ್ಷಗಳ ಈ ನಡೆ ಸಹಿಸಲ್ಲ. ನಾನು ಉತ್ತರ ಕೊಡಲ್ಲ. ಪ್ರಶ್ನೆ ಕೇಳಿದವರು ಸುಮ್ಮನಿರುವಾಗ ವಿಪಕ್ಷದ್ದವರದ್ದೇನು ಮಾತು? ಎಂದು ಪ್ರಶ್ನೆ ಮಾಡಿದರು. ಆಗ ಮತ್ತೆ ವಿಪಕ್ಷದವರು ಗದ್ದಲ ಮಾಡಿದರು. ಆಗ ಮಧ್ಯಪ್ರವೇಶ ಮಾಡಿದ ಸಭಾಪತಿಗಳು, ಸದಸ್ಯರ ಮನವೊಲಿಕೆಗೆ ಪ್ರಯತ್ನಿಸಿದರು.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ. ನಮ್ಮ ಫ್ಯಾಕ್ಟ್ ಉತ್ತರ ಸಹಿಸಲು ಸಾಧ್ಯ ಆಗುತ್ತಿಲ್ಲ. ನೀವು ಎಷ್ಟೇ ಕೂಗಾಡಿದರೂ ಅದು ಸತ್ಯವೇ. ನಿರ್ಮಲಾ ಸೀತಾರಾಂ ಕೂಡ ವಿರೋಧಿ ಧೋರಣೆ ತೋರಿಸಿದ್ದಾರೆ ಎಂದು ಹೇಳಿದರು. ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು, “ಸಿಎಂ ಆನ್ಸರ್ ಬೇಡ” ಎಂದು ಘೋಷಣೆ ಕೂಗಿದರು.

ಇದನ್ನೂ ಓದಿ: Rajya Sabha Election: ರಾಜ್ಯಸಭೆಗೆ 5ನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ; ನಿಜ ಕಾರಣ ಬಿಚ್ಚಿಟ್ಟ ಬಿ.ವೈ. ವಿಜಯೇಂದ್ರ

ಘೋಷಣೆ ನಡುವೆ ಸಿಎಂ ಉತ್ತರವನ್ನು ಮುಂದುವರಿಸಿದರು. “ಅವರೇ ಬಜೆಟ್‌ನಲ್ಲಿ ಒಪ್ಪಿಕೊಂಡಿದ್ದ 5300 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿಲ್ಲ. ಆದರೆ, ನಾವು ಯೋಜನೆ ಮೇಲಿನ ಕಾಳಜಿಯಿಂದ 1 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದೇವೆ. ಕೇಂದ್ರ ಸರ್ಕಾರ ರಾಜ್ಯಕ್ಕೆ 1 ಸಾವಿರ ಕೋಟಿ ರೂಪಾಯಿಗಳ ದ್ರೋಹ ಮಾಡಿದೆ. ಇದಕ್ಕೆ ಹಣಕಾಸು ಸಚಿವರು ಸಹಕಾರ ನೀಡಿದ್ದಾರೆ ಎಂದ ಸಿಎಂ ಸಿದ್ದರಾಮಯ್ಯ ಹೇಳಿದರು.

ನೀವು ಗೂಂಡಾಗಳು ಎಂದ ಸಿಎಂ ಸಿದ್ದರಾಮಯ್ಯ

ಸಿಎಂ ಉತ್ತರದಿಂದ ಕೆರಳಿದ ಬಿಜೆಪಿ ಸದಸ್ಯರು ತೀವ್ರ ಗದ್ದಲ ನಡೆಸಿದರು. ಆಗ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಉತ್ತರ ಕೊಟ್ಟ ಮೇಲೆ ಹೇಳಿ. ಏನು ಗೂಂಡಾಗಿರಿ ಮಾಡ್ತೀರಾ? ನಾನು ಯಾವುದಕ್ಕೂ ಹೆದರಲ್ಲ. ಏಳು ಕೋಟಿ ಜನ ನೋಡುತ್ತಾ ಇದ್ದಾರೆ. ಎದ್ದು ನಿಂತಿದ್ದಾರೆ ಎಂದರೆ? ಅವರು ತಪ್ಪು ಮಾಡಿದ್ದಾರೆ ಅಂತ ಅರ್ಥ ಎಂದು ಹೇಳಿದರು. ಆಗ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಎದ್ದುನಿಂತು, ವಿಧಾನಸೌಧದಲ್ಲಿ ತೊಡೆ ತಟ್ಟಿದ್ದು, ನೀವಾ ನಾವಾ? ಈಗ ನಮಗೆ ಗೂಂಡಾಗಿರಿ ಎಂದು ಹೇಳುತ್ತೀರಾ? ಅಂದು ತೊಡೆ ತಟ್ಟಿದ್ದು ಯಾರು? ಎಂದು ಪ್ರಶ್ನೆ ಮಾಡಿದರು. ಇದಕ್ಕೆ ಸಿಟ್ಟಿಗೆದ್ದ ಸಿಎಂ ಸಿದ್ದರಾಮಯ್ಯ, ನೀವು ಗೂಂಡಾಗಳು. ನಿಮ್ಮ ಗೂಂಡಾಗಿರಿಗೆ ನಾವು ಹೆದರಲ್ಲ. ನಾನು ಸತ್ಯವನ್ನೇ ಹೇಳುತ್ತಾ ಇದ್ದೇನೆ ಎಂದು ಹೇಳಿದರು. ಆಗ ಎದ್ದನಿಂತ ವಿಪಕ್ಷ ಬಿಜೆಪಿಯವರು ಗಲಾಟೆ ಮಾಡಿದರು. ಅದಕ್ಕೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಜನ ಇವರಿಗೆ ಛೀ.. ಥೂ.. ಅಂತಿದ್ದಾರೆ. ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಹೇಳಿದರು. ಆಗ ತೀವ್ರ ಗದ್ದಲವಾಗಿದ್ದರಿಂದ ಸಭಾಪತಿಯವರು ಪರಿಷತ್ ಕಲಾಪವನ್ನು ಮುಂದೂಡಿಕೆ ಮಾಡಿದರು. ಆಗ ವಿಪಕ್ಷ ಬಿಜೆಪಿಯವರು, ಗೂಂಡಾ ಸರ್ಕಾರಕ್ಕೆ ಧಿಕ್ಕಾರ ಎಂದು ಕೂಗಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Anant Ambani Video: ಮಹಾರಾಷ್ಟ್ರ ಸಿಎಂ ಹೆಗಲ ಮೇಲೆ ಕೈ ಹಾಕಿದ ಅಂಬಾನಿ ಮಗ! ನೀವೇನಂತೀರಿ?

Anant Ambani Video: ಮುಕೇಶ್ ಅಂಬಾನಿ, ಅವರ ಮಗ ಅನಂತ್ ಅಂಬಾನಿ ಮತ್ತು ಸೊಸೆ ರಾಧಿಕಾ ಮರ್ಚೆಂಟ್ (Radhika Merchant) ಅವರು ಬುಧವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಮತ್ತು ಅವರ ಕುಟುಂಬವನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಜುಲೈ 12ರಂದು ನಡೆಯಲಿರುವ ತಮ್ಮ ಮಗ ಅನಂತ್ ಅಂಬಾನಿ (Anant Ambani) ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹದ ಆಮಂತ್ರಣವನ್ನು ನೀಡಿದರು. ಈ ಸಂದರ್ಭದಲ್ಲಿನ ಒಂದು ದೃಶ್ಯ ಈಗ ವೈರಲ್‌ ಆಗಿದೆ.

VISTARANEWS.COM


on

By

Anant Ambani
Koo

ಮಹಾರಾಷ್ಟ್ರ (maharastra) ಮುಖ್ಯಮಂತ್ರಿ (Chief Minister) ಏಕನಾಥ್‌ ಶಿಂಧೆ ಅವರಿಗೆ ಮದುವೆ ಆಮಂತ್ರಣ ನೀಡಲು ಹೋದ ರಿಲಯನ್ಸ್ ಇಂಡಸ್ಟ್ರೀಸ್ (Reliance Industries) ಅಧ್ಯಕ್ಷ ಮುಕೇಶ್ ಅಂಬಾನಿ (mukesh ambani) ಅವರ ಮಗ ಅನಂತ್ ಅಂಬಾನಿ (Anant Ambani Video), ಸೀದಾ ಮುಖ್ಯಮಂತ್ರಿಯ ಹೆಗಲ ಮೇಲೆಯೇ ಕೈ ಹಾಕಿ ಫೋಟೋಗೆ ಪೋಸ್ ನೀಡಿದ್ದು ಸಾಮಾಜಿಕ ಜಾಲತಾಣದಲ್ಲಿ ಈಗ ಭಾರಿ ಚರ್ಚೆಗೆ ಕಾರಣವಾಗಿದೆ. ಎಷ್ಟೇ ಶ್ರೀಮಂತಿಕೆ ಇದ್ದರೇನು? ಕಾಮನ್‌ಸೆನ್ಸ್‌ ಇಲ್ಲದಿದ್ದರೆ ಎಲ್ಲವೂ ವ್ಯರ್ಥ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಮುಕೇಶ್ ಅಂಬಾನಿ, ಅವರ ಮಗ ಅನಂತ್ ಅಂಬಾನಿ ಮತ್ತು ಸೊಸೆ ರಾಧಿಕಾ ಮರ್ಚೆಂಟ್ (Radhika Merchant) ಅವರು ಬುಧವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಮತ್ತು ಅವರ ಕುಟುಂಬವನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಜುಲೈ 12ರಂದು ನಡೆಯಲಿರುವ ತಮ್ಮ ಮಗ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹದ ಆಮಂತ್ರಣವನ್ನು ನೀಡಿದರು.

ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಬೆಳಗ್ಗೆ ಹಂಚಿಕೊಂಡಿರುವ ಈ ವಿಡಿಯೋ ಭಾರೀ ವೈರಲ್ ಆಗಿದ್ದು, ಸಾವಿರಾರು ಮಂದಿ ವೀಕ್ಷಿಸಿದ್ದಾರೆ. ವಿಡಿಯೋದಲ್ಲಿ ಅಂಬಾನಿ ಪುತ್ರ ಅನಂತ್ ಅಂಬಾನಿ ಮುಖ್ಯಮಂತ್ರಿ ಶಿಂಧೆ ಅವರ ಹೆಗಲಿಗೆ ಕೈ ಹಾಕಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ಎಷ್ಟೇ ದೊಡ್ಡ ವ್ಯಕ್ತಿಯಾದರೂ ಮುಖ್ಯಮಂತ್ರಿಯ ಹೆಗಲಿಗೆ ಕೈ ಹಾಕಿ ಫೋಟೋ ಗೆ ಪೋಸ್ ನೀಡಿರುವುದು ಸರಿಯೇ ಎನ್ನುವ ಪ್ರಶ್ನೆ ಎದ್ದಿದ್ದು ನೆಟ್ಟಿಗರು ಸಾಕಷ್ಟು ರೀತಿಯಲ್ಲಿ ಕಾಮೆಂಟ್‌ಗಳನ್ನು ಮಾಡಿದ್ದಾರೆ.

ಅನಂತ್ ಅಂಬಾನಿ ಮುಂಬಯಿನಲ್ಲಿ ರಾಧಿಕಾ ಅವರೊಂದಿಗಿನ ಮದುವೆಗೆ ವೈಯಕ್ತಿಕವಾಗಿ ಆಹ್ವಾನಿಸಲು ಅಜಯ್ ದೇವಗನ್ ಮತ್ತು ಕಾಜೋಲ್ ಅವರ ಮನೆಗೆ ಸೋಮವಾರ ಭೇಟಿ ನೀಡಿದರು. ರಿಲಯನ್ಸ್ ಫೌಂಡೇಶನ್‌ನ ಅಧ್ಯಕ್ಷೆ ಮತ್ತು ಸಂಸ್ಥಾಪಕಿ ನೀತಾ ಅಂಬಾನಿ ಅವರು ಸೋಮವಾರ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ತೆರಳಿ ದೇವರಿಗೆ ಮದುವೆಯ ಆಮಂತ್ರಣ ನೀಡಿದರು.

ದೇವರ ದರ್ಶನದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಈಗಷ್ಟೇ ಬಾಬಾ ಭೋಲೆನಾಥ್ ಅವರ ದರ್ಶನ ಪಡೆದಿದ್ದೇನೆ. ಹಿಂದೂ ಸಂಪ್ರದಾಯದ ಪ್ರಕಾರ ನಾವು ಮೊದಲು ಭಗವಂತನ ಆಶೀರ್ವಾದವನ್ನು ಪಡೆಯುತ್ತೇವೆ. ನಾನು ಬಾಬಾಗೆ ಮದುವೆಯ ಆಮಂತ್ರಣವನ್ನು ನೀಡಿದ್ದೇನೆ. ನನಗೆ ತುಂಬಾ ಸಂತೋಷವಾಗಿದೆ. 10 ವರ್ಷಗಳ ಅನಂತರ ಇಲ್ಲಿಗೆ ಬಂದಿದ್ದೇನೆ. ಅಭಿವೃದ್ಧಿ ಮತ್ತು ಕಾಶಿ ವಿಶ್ವನಾಥ ಕಾರಿಡಾರ್, ನಮೋ ಘಾಟ್, ಸೌರಶಕ್ತಿ ಸ್ಥಾವರಗಳು ಮತ್ತು ಸ್ವಚ್ಛತೆಯನ್ನು ನೋಡಲು ನನಗೆ ಸಂತೋಷವಾಗಿದೆ. ಬದಲಾವಣೆಯನ್ನು ನೋಡಲು ನನಗೆ ತುಂಬಾ ಸಂತೋಷವಾಗಿದೆ ಎಂದು ಹೇಳಿದ್ದರು.

10 ವರ್ಷಗಳ ಹಿಂದೆ ಕಾಶಿ ವಿಶ್ವನಾಥ ದೇವಸ್ಥಾನದ ದರ್ಶನಕ್ಕೆ ಬಂದಿದ್ದೆ. ಇಲ್ಲಿನ ಕುಶಲಕರ್ಮಿಗಳೊಂದಿಗೆ ನನಗೆ ವಿಶೇಷ ಬಾಂಧವ್ಯವಿದೆ. ನಾನು ಅವರನ್ನು ಭೇಟಿ ಮಾಡಲು ಹೋಗುತ್ತಿದ್ದೇನೆ. ರಿಲಯನ್ಸ್ ಫೌಂಡೇಶನ್ ಮತ್ತು ಸ್ವದೇಶ್ ಮಾಧ್ಯಮದ ಮೂಲಕ ನಾವು ಅವರಿಗೆ ಜಾಗತಿಕ ಮನ್ನಣೆ ಮತ್ತು ಗೌರವವನ್ನು ನೀಡಲು ಬಯಸುತ್ತೇವೆ ಎಂದು ಅವರು ಹೇಳಿದರು.


ಜುಲೈ 12ರಂದು ಮದುವೆ

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮತ್ತು ಎಂಡಿ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಜುಲೈ 12 ರಂದು ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ವಿವಾಹವಾಗಲಿದ್ದಾರೆ. ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಇದರ ವಿವರವನ್ನು ಬಹಿರಂಗಪಡಿಸುವ ಸಾಂಪ್ರದಾಯಿಕ ಕೆಂಪು ಮತ್ತು ಚಿನ್ನದ ಬಣ್ಣದ ಕಾರ್ಡ್ ಅನ್ನು ಆಹ್ವಾನ ಪತ್ರಿಕೆ ಒಳಗೊಂಡಿದೆ ಎನ್ನಲಾಗಿದೆ.

ಮುಖ್ಯ ವಿವಾಹ ಸಮಾರಂಭಗಳು ಜುಲೈ 12ರಂದು ಪ್ರಾರಂಭವಾಗುತ್ತವೆ. ಜುಲೈ 13ರಂದು ಶುಭ ಆಶೀರ್ವಾದ್ ದಿನವಾಗಿರುತ್ತದೆ. ಜುಲೈ 14 ರಂದು ಮಂಗಲ್ ಉತ್ಸವ ಅಥವಾ ಮದುವೆಯ ಆರತಕ್ಷತೆ ನಡೆಯಲಿದೆ. ಪ್ರತಿ ಕಾರ್ಯಕ್ರಮಕ್ಕೂ ಡ್ರೆಸ್ ಕೋಡ್ ಇರಲಿದೆ. ಈ ಎಲ್ಲಾ ಕಾರ್ಯಗಳು ಬಿಕೆಸಿಯಲ್ಲಿರುವ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ನಡೆಯಲಿದೆ.

ಇದನ್ನೂ ಓದಿ: Anant Ambani: ಅನಂತ್ ಅಂಬಾನಿ ಕೊಟ್ಟ ಪ್ರೇಮ ಪತ್ರ ಪ್ರಿಂಟ್ ಆಗಿದ್ದ ಗೌನ್‌ನಲ್ಲಿ ಮಿಂಚಿದ ರಾಧಿಕಾ ಮರ್ಚಂಟ್‌!

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ 2022ರಲ್ಲಿ ಕುಟುಂಬ ಸದಸ್ಯರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ರಾಜಸ್ಥಾನದ ರಾಜಸಮಂದ್‌ನ ನಾಥದ್ವಾರ ಪಟ್ಟಣದ ಶ್ರೀನಾಥ್‌ಜಿ ದೇವಸ್ಥಾನದಲ್ಲಿ ಸಾಂಪ್ರದಾಯಿಕ ‘ರೋಕಾ’ ಸಮಾರಂಭದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು.

ಫೆಬ್ರವರಿಯಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹಪೂರ್ವ ಆಚರಣೆಗಳ ಭಾಗವಾಗಿ, ಅಂಬಾನಿ ಕುಟುಂಬವು ಗುಜರಾತ್‌ನ ಜಾಮ್‌ನಗರದಲ್ಲಿರುವ ವಿಸ್ತಾರವಾದ ದೇವಾಲಯದ ಸಂಕೀರ್ಣದಲ್ಲಿ 14 ಹೊಸ ದೇವಾಲಯಗಳನ್ನು ನಿರ್ಮಿಸಲು ಅನುಕೂಲ ಮಾಡಿಕೊಟ್ಟಿತು. ಮಾರ್ಚ್ 1ರಿಂದ 3ರವರೆಗೆ ಜಾಮ್‌ನಗರ ನಗರದಲ್ಲಿ ಮೂರು ದಿನಗಳ ಪೂರ್ವ ವಿವಾಹ ಸಮಾರಂಭವನ್ನು ಆಯೋಜಿಸಲಾಗಿತ್ತು.

Continue Reading

ದೇಶ

Arvind Kejriwal: ಅರೆಸ್ಟ್‌ ಬೆನ್ನಲ್ಲೇ ತಡೆಯಾಜ್ಞೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಕೇಜ್ರಿವಾಲ್‌

Arvind Kejriwal: ತಮ್ಮ ಅರ್ಜಿಯನ್ನು ಹಿಂಪಡೆಯಲು ಕೇಂಜ್ರಿವಾಲ್‌ ಅವರಿಗೆ ನ್ಯಾ. ಮನೋಜ್‌ ಮಿಶ್ರಾ ಮತ್ತು ಎಸ್‌ವಿಎನ್‌ ಭಟ್ಟಿ ಇದ್ದ ನ್ಯಾಯಪೀಠ ಅವಕಾಶ ನೀಡಿತು. ರೋಸ್‌ ಅವೆನ್ಯೂ ಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಇ.ಡಿ ಅಧಿಕಾರಿಗಳು ಹೈಕೋರ್ಟ್‌ ಮೊರೆ ಹೋಗಿದ್ದರು. ವಿಚಾರಣೆ ನಡೆಸುವವರೆಗೂ ಬಿಡುಗಡೆ ಮಾಡಬಾರದು ಎಂಬುದಾಗಿ ದೆಹಲಿ ಕೋರ್ಟ್‌ ಶುಕ್ರವಾರ (ಜೂನ್‌ 21) ಬೆಳಗ್ಗೆ ಆದೇಶ ಹೊರಡಿಸಿತು. ಜಾಮೀನಿಗೆ ಸಂಬಂಧಿಸಿದ ಆದೇಶಕ್ಕೆ ತಡೆಯಾಜ್ಞೆ ನೀಡಲಾಗಿದೆ.

VISTARANEWS.COM


on

Arvind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ಹಗರಣ (Delhi Excise Policy Case) ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌(Arvind Kejriwal) ಅವರನ್ನು ಸಿಬಿಐ ಇಂದು ಔಪಚಾರಿಕವಾಗಿ ಅರೆಸ್ಟ್‌ ಮಾಡಿತ್ತು. ಬಳಿಕ ಕೋರ್ಟ್‌ಗೆ ಹಾಜರುಪಡಿಸಿದ ಸಿಬಿಐ ಐದು ದಿನಗಳ ಕಾಲ ತನ್ನ ಕಸ್ಟಡಿಗೆ ಕೇಳಿತ್ತು. ಮತ್ತೊಂದೆಡೆ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಿದ್ದ ರೋಸ್‌ ಅವೆನ್ಯೂ ಕೋರ್ಟ್‌ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ತಾವು ಸಲ್ಲಿಸಿದ್ದ ಅರ್ಜಿಯನ್ನು ಕೇಜ್ರಿವಾಲ್‌ ಹಿಂಪಡೆದಿದ್ದಾರೆ.

ತಮ್ಮ ಅರ್ಜಿಯನ್ನು ಹಿಂಪಡೆಯಲು ಕೇಂಜ್ರಿವಾಲ್‌ ಅವರಿಗೆ ನ್ಯಾ. ಮನೋಜ್‌ ಮಿಶ್ರಾ ಮತ್ತು ಎಸ್‌ವಿಎನ್‌ ಭಟ್ಟಿ ಇದ್ದ ನ್ಯಾಯಪೀಠ ಅವಕಾಶ ನೀಡಿತು. ರೋಸ್‌ ಅವೆನ್ಯೂ ಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಇ.ಡಿ ಅಧಿಕಾರಿಗಳು ಹೈಕೋರ್ಟ್‌ ಮೊರೆ ಹೋಗಿದ್ದರು. ವಿಚಾರಣೆ ನಡೆಸುವವರೆಗೂ ಬಿಡುಗಡೆ ಮಾಡಬಾರದು ಎಂಬುದಾಗಿ ದೆಹಲಿ ಕೋರ್ಟ್‌ ಶುಕ್ರವಾರ (ಜೂನ್‌ 21) ಬೆಳಗ್ಗೆ ಆದೇಶ ಹೊರಡಿಸಿತು. ಜಾಮೀನಿಗೆ ಸಂಬಂಧಿಸಿದ ಆದೇಶಕ್ಕೆ ತಡೆಯಾಜ್ಞೆ ನೀಡಲಾಗಿದೆ. ಇನ್ನೂ 2-3 ದಿನಗಳ ಬಳಿಕ ಆದೇಶ ಹೊರಡಿಸಲಾಗುವುದು ಎಂಬುದಾಗಿ ಕೋರ್ಟ್‌ ಹೇಳಿತ್ತು. ಅದೂ ಅಲ್ಲದೇ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾಮೀನು ಮಂಜೂರು ಮಾಡಿದ್ದ ರೋಸ್‌ ಅವೆನ್ಯೂ ಕೋರ್ಟ್‌ ಆದೇಶಕ್ಕೆ ದೆಹಲಿ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದ ಕೇಜ್ರಿವಾಲ್‌ಗೆ ಅಲ್ಲೂ ರಿಲೀಫ್‌ ಸಿಕ್ಕಿರಲಿಲ್ಲ.

ಏನಿದು ಪ್ರಕರಣ?

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಅರವಿಂದ್‌ ಕೇಜ್ರಿವಾಲ್‌ ಮಾತ್ರವಲ್ಲ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರನ್ನೂ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್​ ಅವರಿಗೆ ಇ.ಡಿ. 9 ಬಾರಿ ನೋಟಿಸ್ ಜಾರಿ ಮಾಡಿತ್ತು. ಬಳಿಕ ಮಾರ್ಚ್​ 21ರಂದು ಅವರನ್ನು ಬಂಧಿಸಲಾಗಿತ್ತು. ಇದಾದ ಬಳಿಕ ಅವರು ಮಧ್ಯಂತರ ಜಾಮೀನು ಪಡೆದು ಒಂದು ತಿಂಗಳು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ ಜೈಲಿಗೆ ಮರಳುವಂತೆ ಕೋರ್ಟ್‌ ಈ ಹಿಂದೆಯೇ ಆದೇಶಿಸಿತ್ತು.

ಇದನ್ನೂ ಓದಿ:Hijab Ban: ತರಗತಿಯಲ್ಲಿ ಹಿಜಾಬ್‌, ಬುರ್ಖಾ ನಿಷೇಧ; ಕಾಲೇಜು ಆದೇಶ ಎತ್ತಿಹಿಡಿದ ಹೈಕೋರ್ಟ್‌

Continue Reading

ದೇಶ

Lok Sabha Speaker: ತುರ್ತು ಪರಿಸ್ಥಿತಿ ಬಗ್ಗೆ ಓಂ ಬಿರ್ಲಾ ಪ್ರಸ್ತಾಪ; ಪ್ರತಿಪಕ್ಷಗಳಿಂದ ಪ್ರತಿಭಟನೆ

Lok Sabha Speaker:ಸ್ಪೀಕರ್‌ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಓಂ ಬಿರ್ಲಾ, ಇಂದಿರಾ ಗಾಂಧಿ ಆಡಳಿತಾವಧಿಯಲ್ಲಿ ಜಾರಿಗೊಳಿಸಲಾದ ತುರ್ತು ಪರಿಸ್ಥಿತಿ ಬಗ್ಗೆ ಪ್ರಸ್ತಾಪಿಸಿದರು. ಆ ಸಂದರ್ಭದಲ್ಲಿ ಜನರಿಗಾದ ಕಷ್ಟ ಕಾರ್ಪಣ್ಯಗಳ ಬಗ್ಗೆ ಮಾತನಾಡಿದರು. ಅಲ್ಲದೇ ತುರ್ತು ಪರಿಸ್ಥಿತಿಯ 50ನೇ ವರ್ಷಾಚರಣೆ ಹಿನ್ನೆಲೆ ಎರಡು ದಿನ ಮೌನಾಚರಣೆಗೆ ಕರೆ ನೀಡಿದರು. ಇದರ ಬೆನ್ನಲ್ಲೇ ಪ್ರತಿಪಕ್ಷ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಪರಿಣಾಮವಾಗಿ ಕಲಾಪನ್ನು ಮುಂದೂಡಲಾಯಿತು. ಸರ್ವಾಧಿಕಾರವನ್ನು ನಿಲ್ಲಿಸಿ.. ದೇಶವನ್ನೇ ಜೈಲಾಗಿ ಪರಿವರ್ತಿಸಿದ್ದಾರೆ ಎಂದು ಘೋಷಣೆ ಕೂಗಿದರು.

VISTARANEWS.COM


on

Lok Sabha Speaker
Koo

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ(Parliament Sessions)ದ ಮೂರನೇ ದಿನವಾದ ಇಂದು ಹಲವು ಮಹತ್ವದ ಘಟನೆಗಳಿಗೆ ಸಾಕ್ಷಿಯಾಯಿತು. ಇಂದು ಸ್ಪೀಕರ್‌ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಓಂ ಬಿರ್ಲಾ(Om Birla) ಅವರು ಎರಡನೇ ಬಾರಿ ಲೋಕಸಭೆಯ ಸ್ಪೀಕರ್‌ ಆಗಿ ಚುನಾಯಿತ(Lok Sabha Speaker)ರಾಗಿದ್ದಾರೆ. ಚುನಾಯಿತರಾದ ಬಳಿಕ ಮೊದಲ ಬಾರಿಗೆ ಸಂಸತ್‌ನಲ್ಲಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿ ಸಂದರ್ಭವನ್ನು ಪ್ರಸ್ತಾಪಿಸಿದರು.

ಸ್ಪೀಕರ್‌ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಓಂ ಬಿರ್ಲಾ, ಇಂದಿರಾ ಗಾಂಧಿ ಆಡಳಿತಾವಧಿಯಲ್ಲಿ ಜಾರಿಗೊಳಿಸಲಾದ ತುರ್ತು ಪರಿಸ್ಥಿತಿ ಬಗ್ಗೆ ಪ್ರಸ್ತಾಪಿಸಿದರು. ಆ ಸಂದರ್ಭದಲ್ಲಿ ಜನರಿಗಾದ ಕಷ್ಟ ಕಾರ್ಪಣ್ಯಗಳ ಬಗ್ಗೆ ಮಾತನಾಡಿದರು. ಅಲ್ಲದೇ ತುರ್ತು ಪರಿಸ್ಥಿತಿಯ 50ನೇ ವರ್ಷಾಚರಣೆ ಹಿನ್ನೆಲೆ ಎರಡು ದಿನ ಮೌನಾಚರಣೆಗೆ ಕರೆ ನೀಡಿದರು. ಇದರ ಬೆನ್ನಲ್ಲೇ ಪ್ರತಿಪಕ್ಷ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಪರಿಣಾಮವಾಗಿ ಕಲಾಪನ್ನು ಮುಂದೂಡಲಾಯಿತು. ಸರ್ವಾಧಿಕಾರವನ್ನು ನಿಲ್ಲಿಸಿ.. ದೇಶವನ್ನೇ ಜೈಲಾಗಿ ಪರಿವರ್ತಿಸಿದ್ದಾರೆ ಎಂದು ಘೋಷಣೆ ಕೂಗಿದರು.

ಇದಾದ ಬಳಿಕ ತುರ್ತು ಪರಿಸ್ಥಿತಿ ಬಗ್ಗೆ ಪ್ರಸ್ತಾಪಿಸಿದ ಓಂ ಬಿರ್ಲಾ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಗೌರವಾನ್ವಿತ ಸಭಾಧ್ಯಕ್ಷರು ತುರ್ತು ಪರಿಸ್ಥಿತಿಯನ್ನು ಬಲವಾಗಿ ಖಂಡಿಸಿದ್ದು, ಆ ಸಮಯದಲ್ಲಿ ಮಾಡಿದ ಅತಿರೇಕ ವರ್ತನೆ ಮತ್ತು ಪ್ರಜಾಪ್ರಭುತ್ವವನ್ನು ಕತ್ತು ಹಿಸುಕಿದ ರೀತಿಯನ್ನು ಪ್ರಸ್ತಾಪಿಸಿದ್ದಕ್ಕೆ ನನಗೆ ಸಂತೋಷವಾಗಿದೆ. ಆ ದಿನಗಳಲ್ಲಿ ನಡೆದ ಹಿಂಸಾಚಾರ ಖಂಡಿಸಿ ನಡೆಸಲಾದ ಮೌನಾಚರಣೆಯನ್ನು ನಾವು ಪ್ರಶಂಸಿಸುತ್ತೇವೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

18ನೇ ಲೋಕಸಭೆಯ ಸ್ಪೀಕರ್‌ ಯಾರಾಗುತ್ತಾರೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಎನ್‌ಡಿಎಯಿಂದ ಕಣಕ್ಕಿಳಿದ ಬಿಜೆಪಿ ಸಂಸದ ಓಂ ಬಿರ್ಲಾ ಅವರು ಸ್ಪೀಕರ್‌ ಆಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಸಾಮಾನ್ಯವಾಗಿ ಅವಿರೋಧವಾಗಿ ಸ್ಪೀಕರ್‌ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆದರೆ ಈ ಬಾರಿ ಆಡಳಿತ ರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಇಂಡಿ ಬಣದ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಹಲವು ದಶಕಗಳ ಬಳಿಕ ಚುನಾವಣೆ ನಡೆಸಲಾಯಿತು. ಇಂಡಿ ಬಣದಿಂದ ಕಾಂಗ್ರೆಸ್‌ ಸಂಸದ ಕೊಂಡಿಕುನಾಲ್ ಸುರೇಶ್ (Kondikunal Suresh) ಕಣಕ್ಕಿಳಿದಿದ್ದರು. ಭಾರೀ ಕುತೂಹಲ ಮೂಡಿಸಿದ್ದ ಈ ಐತಿಹಾಸಿಕ ಚುನಾವಣೆಯಲ್ಲಿ ಇದೀಗ ಓಂ ಬಿರ್ಲಾ ಗೆಲುವಿನ ನಗೆ ಬೀರಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಸುಮಾರಿಗೆ ಆರಂಭವಾದ ಚುನಾವಣಾ ಪ್ರಕ್ರಿಯೆಯಲ್ಲಿ ಓಂ ಬಿರ್ಲಾ ಅವರು ಬಹುಮತಗಳನ್ನು ಪಡೆದುಕೊಂಡರು. ಓಂ ಬಿರ್ಲಾ ಅವರನ್ನು ಸ್ಪೀಕರ್‌ ಆಗಿ ಆಯ್ಕೆ ಮಾಡುವ ಪ್ರಸ್ತಾಪವನ್ನು ಪ್ರಧಾನಿ ನರೇಂದ್ರ ಮೋದಿ ಮಂಡಿಸಿದರು. ಬಳಿಕ ಹಲವು ನಾಯಕರು ಅನುಮೋದಿಸಿದರು. ಧ್ವನಿ ಮತದ ಮೂಲಕ ಸದಸ್ಯರು ಮತ ಚಲಾಯಿಸಿದರು. ಈ ಮೂಲಕ ಓಂ ಬಿರ್ಲಾ ಅವರು ಬಲರಾಮ್ ಜಖರ್ (1980-89) ನಂತರ ಎರಡು ಪೂರ್ಣ ಅವಧಿಗೆ ಆಯ್ಕೆಯಾದ ಎರಡನೇ ಸ್ಪೀಕರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು.

ಇದನ್ನೂ ಓದಿ: CM Siddaramaiah: ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿರೋದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದ ಸಿಎಂ

Continue Reading

ಬಾಲಿವುಡ್

Kangana Ranaut: ಸಂಸತ್ತಿನ ಹೊರಗೆ ಕೈ ಕುಲುಕಿ ಸಂತಸದ ಕ್ಷಣ ಹಂಚಿಕೊಂಡ ಚಿರಾಗ್ ಪಾಸ್ವಾನ್-ಕಂಗನಾ!

Kangana Ranaut: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಈ ಮುಂಚೆ ಒಟ್ಟಿಗೆ ತೆರೆ ಹಂಚಿಕೊಂಡಿದ್ದರು. 2011 ರಲ್ಲಿ, ಇಬ್ಬರು ಮಿಲೇ ನಾ ಮಿಲೇ ಹಮ್ ಚಿತ್ರದಲ್ಲಿ ನಟಿಸಿದ್ದರು. ಅಷ್ಟಾಗಿ ಸಿನಿಮಾ ಯಶಸ್ಸು ಕಂಡಿಲ್ಲ. ಆ ಬಳಿಕ ಕ್ರಮೇಣ ಚಿರಾಗ್ ಪಾಸ್ವಾನ್ ರಾಜಕೀಯಕ್ಕೆ ಎಂಟ್ರಿ ಕೊಟ್ಟರು. ಇದೀಗ ಮತ್ತೆ ಚಿರಾಗ್ ಪಾಸ್ವಾನ್ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್ ಒಟ್ಟಿಗೆ ಕಂಡಿದ್ದಾರೆ.

VISTARANEWS.COM


on

Kangana Ranaut Chirag Paswan In Parliament
Koo

ಬೆಂಗಳೂರು: ಈ ಬಾರಿ ಆಡಳಿತ ರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಇಂಡಿ ಬಣದ ನಡುವೆ (Kangana Ranaut) ಒಮ್ಮತ ಮೂಡದ ಹಿನ್ನೆಲೆಯಲ್ಲಿ (Chirag Paswan In Parliament) ಹಲವು ದಶಕಗಳ ಬಳಿಕ ಚುನಾವಣೆ ನಡೆಸಲಾಯಿತು. ಇದೀಗ ಎರಡನೇ ಬಾರಿ ಲೋಕಸಭೆ ಸ್ಪೀಕರ್‌ ಆಗಿ ಓಂ ಬಿರ್ಲಾ  ಆಯ್ಕೆಯಾದರು. ಈ ವೇಳೆ ಗಮನ ಸೆಳೆದಿದ್ದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್ . ಸಂಸತ್ ಭವನದ ಹೊರಗೆ ಚುನಾವಣಾ ಫಲಿತಾಂಶಗಳು ಪ್ರಕಟವಾದ ತಕ್ಷಣ ಪಾಸ್ವಾನ್ ಹಾಗೂ ಕಂಗನಾ ಒಬ್ಬರಿಗೊಬ್ಬರು ಕೈ ಕುಲುಕಿ ಮಾತನಾಡಿದ್ದಾರೆ. ಇವರಿಬ್ಬರ ಸಂತೋಷದ ಕ್ಷಣ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಈ ಮುಂಚೆ ಒಟ್ಟಿಗೆ ತೆರೆ ಹಂಚಿಕೊಂಡಿದ್ದರು. 2011 ರಲ್ಲಿ, ಇಬ್ಬರು ಮಿಲೇ ನಾ ಮಿಲೇ ಹಮ್ ಚಿತ್ರದಲ್ಲಿ ನಟಿಸಿದ್ದರು. ಅಷ್ಟಾಗಿ ಸಿನಿಮಾ ಯಶಸ್ಸು ಕಂಡಿಲ್ಲ. ಆ ಬಳಿಕ ಕ್ರಮೇಣ ಚಿರಾಗ್ ಪಾಸ್ವಾನ್ ರಾಜಕೀಯಕ್ಕೆ ಎಂಟ್ರಿ ಕೊಟ್ಟರು. ಇದೀಗ ಮತ್ತೆ ಚಿರಾಗ್ ಪಾಸ್ವಾನ್ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್ ಒಟ್ಟಿಗೆ ಕಂಡಿದ್ದಾರೆ.

ಅನೇಕ ಚಲನಚಿತ್ರಗಳು ಮತ್ತು ಹಲವಾರು ಚುನಾವಣೆಗಳ ನಂತರ, ಇಬ್ಬರೂ ಮತ್ತೆ ಸಹೋದ್ಯೋಗಿಗಳಾಗಿದ್ದಾರೆ, ಚಲನಚಿತ್ರ ಸೆಟ್‌ನಲ್ಲಿ ಅಲ್ಲ ಆದರೆ ಸಂಸತ್ತಿನಲ್ಲಿ.

ಇದನ್ನೂ ಓದಿ: Vinay Gowda: ʻಡೆವಿಲ್ʼ ಸಿನಿಮಾದಲ್ಲಿ ನಾನೇ ವಿಲನ್, ಪ್ರಾಜೆಕ್ಟ್‌ ಏನಾಗುತ್ತೋ ಗೊತ್ತಿಲ್ಲ ಎಂದ ʻಬಿಗ್ ಬಾಸ್ʼ ಆನೆ ವಿನಯ್ ಗೌಡ!

18ನೇ ಲೋಕಸಭೆಯ ಸ್ಪೀಕರ್‌ ಆಗಿ ಎನ್‌ಡಿಎಯಿಂದ ಕಣಕ್ಕಿಳಿದ ಬಿಜೆಪಿ ಸಂಸದ ಓಂ ಬಿರ್ಲಾ (Om Birla) ಅವರು ಆಯ್ಕೆಯಾಗಿದ್ದಾರೆ (Lok Sabha Speaker). ಸಾಮಾನ್ಯವಾಗಿ ಅವಿರೋಧವಾಗಿ ಸ್ಪೀಕರ್‌ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆದರೆ ಈ ಬಾರಿ ಆಡಳಿತ ರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಇಂಡಿ ಬಣದ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಹಲವು ದಶಕಗಳ ಬಳಿಕ ಚುನಾವಣೆ ನಡೆಸಲಾಯಿತು. ಇದೀಗ ಎರಡನೇ ಬಾರಿ ಲೋಕಸಭೆ ಸ್ಪೀಕರ್‌ ಆಗಿ ಆಯ್ಕೆ ಆಗಿರುವ ಓಂ ಬಿರ್ಲಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಎಲ್ಲಾ ಸಂಸತ್‌ ಸದಸ್ಯರು ಪಕ್ಷಾತೀತ ಅಭಿನಂದನೆ ಸಲ್ಲಿಸಿದರು.

ವಿಪ್‌ ಜಾರಿ

ಆರಂಭದಲ್ಲಿ ಎನ್‌ಡಿಎ ಪ್ರತಿಪಕ್ಷಗಳ ಮನವೊಲಿಸಲು ಯತ್ನಿಸಿತ್ತು. ಓಂ ಬಿರ್ಲಾ ಅವರನ್ನು ಬೆಂಬಲಿಸಲು ಒಪ್ಪಿಗೆ ಸೂಚಿಸಿದ್ದ ಇಂಡಿ ಬಣ ಡೆಪ್ಯುಟಿ ಸ್ಪೀಕರ್ ತಮಗೆ ಸಿಗಬೇಕೆಂಬ ಷರತ್ತು ವಿಧಿಸಿತ್ತು. ಆದರೆ ಇದಕ್ಕೆ ಎನ್‌ಡಿಎ ಒಪ್ಪಿಗೆ ಸೂಚಿಸದ ಹಿನ್ನೆಲೆಯಲ್ಲಿ ಮಾತುಕತೆ ಮುರಿದು ಬಿದ್ದು ಕೊನೆಯ ಕ್ಷಣದಲ್ಲಿ ಕೊಂಡಿಕುನಾಲ್ ಸುರೇಶ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್‌ ಎಲ್ಲ ಸದಸ್ಯರಿಗೆ ಹಾಜರಾಗುವಂತೆ ಮಂಗಳವಾರ ವಿಪ್‌ ಜಾರಿ ಮಾಡಿದ್ದವು.

Continue Reading
Advertisement
Nitin Gadkari
ದೇಶ17 mins ago

Nitin Gadkari: ಜಿಪಿಎಸ್‌ ತಂತ್ರಜ್ಞಾನದಿಂದ ಹೆದ್ದಾರಿ ಪ್ರಾಧಿಕಾರಕ್ಕೆ ಬಂಪರ್;‌ 10 ಸಾವಿರ ಕೋಟಿ ರೂ. ಆದಾಯ!

Paris Fashion Week
ಫ್ಯಾಷನ್29 mins ago

Paris Fashion Week: ಪ್ಯಾರಿಸ್‌ ಹಾಟ್‌ ಕೌಚರ್‌ ಫ್ಯಾಷನ್‌ ವೀಕ್ 2024ರ ಹೈಲೈಟ್ಸ್

Anant Ambani
ದೇಶ34 mins ago

Anant Ambani Video: ಮಹಾರಾಷ್ಟ್ರ ಸಿಎಂ ಹೆಗಲ ಮೇಲೆ ಕೈ ಹಾಕಿದ ಅಂಬಾನಿ ಮಗ! ನೀವೇನಂತೀರಿ?

Viral Video
Latest48 mins ago

Viral Video: ಜಿಮ್‌ಗೆ ಹೋಗುವವರೇ ಹುಷಾರ್‌! ಈ ವಿಡಿಯೊ ನೋಡಿ!

Acharya Pramod Krishnam
ದೇಶ1 hour ago

ಕಾಂಗ್ರೆಸ್‌ನಂತೆ 15 ತಿಂಗಳಲ್ಲಿ ಪ್ರತಿಪಕ್ಷಗಳೂ ರಾಹುಲ್‌ ಗಾಂಧಿಯಿಂದ ನಿರ್ನಾಮ; ಆಚಾರ್ಯ ಪ್ರಮೋದ್‌ ಸ್ಫೋಟಕ ಹೇಳಿಕೆ!

Viral Video
Latest1 hour ago

Viral Video: ಬಾಗಿಲ ಬಳಿ ಇದ್ದ ಆಹಾರ ಪ್ಯಾಕೆಟ್‌ ಕದ್ದೊಯ್ದ ಜೊಮ್ಯಾಟೊ ಡೆಲಿವರಿ ಬಾಯ್‌!

Rohit Sharma
ಕ್ರೀಡೆ2 hours ago

Rohit Sharma: ವಿಶ್ವ ದಾಖಲೆ ಮೇಲೆ ಕಣ್ಣಿಟ್ಟ ಹಿಟ್​ಮ್ಯಾನ್​ ರೋಹಿತ್​; ಲಂಕಾ ಆಟಗಾರನಿಗೆ ನಡುಕ

Viral Video
Latest2 hours ago

Viral Video: ಪ್ರೇಯಸಿ ಹೆಜ್ಜೆ ಇರಿಸಲು ಕಂತೆಕಂತೆ ನೋಟಿನ ಮೆಟ್ಟಿಲು! ಪ್ರಿಯತಮನ ಹುಚ್ಚು ಪ್ರೀತಿ ನೋಡಿ!

Arvind Kejriwal
ದೇಶ2 hours ago

Arvind Kejriwal: ಅರೆಸ್ಟ್‌ ಬೆನ್ನಲ್ಲೇ ತಡೆಯಾಜ್ಞೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಕೇಜ್ರಿವಾಲ್‌

Actor Darshan Full aggressive mode while he drunk
ಸ್ಯಾಂಡಲ್ ವುಡ್2 hours ago

Actor Darshan: `ದರ್ಶನ್‌’ ಫುಲ್‌ ಟೈಟ್‌ ಆದಾಗಲೇ ಅಗ್ರೆಸಿವ್‌ ಆಗೋದು‌ ಎಂದ ಭಾವನಾ ಬೆಳಗೆರೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌