Dune Part Two premiere: ರೋಬೋಟ್ ಸೂಟ್‌ನಲ್ಲಿ ಹೇಗೆ ಕಾಣಿಸ್ತಾಳೆ ನೋಡಿ ಹಾಲಿವುಡ್‌ ಸುಂದರಿ! - Vistara News

ಸಿನಿಮಾ

Dune Part Two premiere: ರೋಬೋಟ್ ಸೂಟ್‌ನಲ್ಲಿ ಹೇಗೆ ಕಾಣಿಸ್ತಾಳೆ ನೋಡಿ ಹಾಲಿವುಡ್‌ ಸುಂದರಿ!

ಸ್ವೀಡಿಷ್ ನಟಿ ರೆಬೆಕಾ ಫರ್ಗುಸನ್ (Swedish actress Rebecca Ferguson) ಕೂಡ ಭಾಗಿಯಾಗಿದ್ದು, ರೆಡ್ ಕಾರ್ಪೆಟ್ ಮೇಲೆ ಪೋಸ್ ನೀಡಿದ್ದಾರೆ.

VISTARANEWS.COM


on

Dune Part Two premiere Zendaya, Timothee Chalamet
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಡ್ಯೂನ್: ಪಾರ್ಟ್‌ 2 ಚಿತ್ರದ ವರ್ಲ್ಡ್ ಪ್ರೀಮಿಯರ್‌ (Dune Part Two premiere) ಲಂಡನ್‌ನ ಲೀಸೆಸ್ಟರ್ ಸ್ಕ್ವೇರ್‌ನಲ್ಲಿ (Leicester Square) ಅದ್ಧೂರಿಯಾಗಿ ನೆರವೇರಿದೆ. ಈ ವೇಳೆ ನಟಿ ಜೆಂಡಾಯಾ (Zendaya) ಹೊಸ ಅವತಾರದಲ್ಲಿ ಕಂಡು ಬಂದರು. ಇವರು ರೆಡ್ ಕಾರ್ಪೆಟ್ ಮೇಲೆ ಸಿಲ್ವರ್ ರೋಬೋಟ್ ಸೂಟ್‌ನಲ್ಲಿ ಪೋಸ್ ನೀಡಿದ್ದಾರೆ.

ನಟಿ ಜೆಂಡಾಯಾ ಜತೆ ಅಮೆರಿಕನ್‌ ನಟ ತಿಮೋತಿ ಚಾಲಮೆಟ್ (Timothee Chalamet) ಪೋಸ್ ನೀಡಿದರು.

ಸ್ವೀಡಿಷ್ ನಟಿ ರೆಬೆಕಾ ಫರ್ಗುಸನ್ (Swedish actress Rebecca Ferguson) ಕೂಡ ಭಾಗಿಯಾಗಿದ್ದು, ರೆಡ್ ಕಾರ್ಪೆಟ್ ಮೇಲೆ ಪೋಸ್ ನೀಡಿದ್ದಾರೆ. ಡ್ಯೂನ್: ಭಾಗ ಎರಡು ಫ್ರ್ಯಾಂಚೈಸ್ ಲೇಖಕ ಫ್ರಾಂಕ್ ಹರ್ಬರ್ಟ್ ಅವರ ಅದೇ ಹೆಸರಿನ ಮೆಚ್ಚುಗೆ ಪಡೆದ ಕಾದಂಬರಿಯನ್ನು ಆಧರಿಸಿದೆ.

ಈ ವೇಳೆ ಬ್ರಿಟಿಷ್ ನಟಿ ಫ್ಲಾರೆನ್ಸ್ (British actress Florence Pugh poses) ಪಗ್ ರೆಡ್ ಕಾರ್ಪೆಟ್ ಮೇಲೆ ಪೋಸ್ ನೀಡಿದ್ದು ಹೀಗೆ.

ನಟಿ ಜೆಂಡಾಯಾ, ನಿರ್ದೇಶಕ ಡೆನಿಸ್ ವಿಲ್ಲೆನ್ಯೂವ್ ಮತ್ತು ತಿಮೋತಿ ಚಾಲಮೆಟ್ (Zendaya, director Denis Villeneuve and Timothee Chalamet) ಒಟ್ಟಿಗೆ ಕಂಡು ಬಂದರು.

ಇದನ್ನೂ ಓದಿ: Challenging Star Darshan: `ಸಿಂಧೂರ ಲಕ್ಷ್ಮಣ’ನಾಗಿ ಮಿಂಚಲಿದ್ದಾರೆ ದರ್ಶನ್‌; ಸಾಲು ಸಾಲು ಸಿನಿಮಾಗಳು ಅನೌನ್ಸ್‌!

ಪ್ರೀಮಿಯರ್‌ನಲ್ಲಿ ನಟ ಡೆನಿಸ್ ವಿಲ್ಲೆನ್ಯೂವ್ , ನಟ ಅನ್ಯಾ ಟೇಲರ್-ಜಾಯ್ (Anya Taylor-Joy ) ರೆಡ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು. ಈ ಸಿನಿಮಾ ಈ ಮುಂಚೆಯೇ ರಿಲೀಸ್‌ ಆಗಬೇಕಿತ್ತು. ಹಾಲಿವುಡ್ ನಟರ ಮುಷ್ಕರದಿಂದ ತಡವಾಗಿ ಬಿಡುಗಡೆ ಕಾಣುತ್ತಿದೆ. ಫೆಬ್ರವರಿ 28ರಿಂದ ವಿಶ್ವಾದ್ಯಂತ ತೆರೆ ಕಾಣಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan: ದರ್ಶನ್ & ಗ್ಯಾಂಗ್ ಪೊಲೀಸ್ ವಿಚಾರಣೆ ಲೈವ್ ಸ್ಟ್ರೀಮಿಂಗ್ ಆಗಬೇಕು ಎಂದ ಉಪೇಂದ್ರ!

Actor Darshan: ʻಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು. ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ. ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರಿದಿದ್ದು ಎಲ್ಲವನ್ನೂ ವಿಡಿಯೊ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದುʼʼಎಂದು ನೇರವಾಗಿಯೇ ಹೇಳಿಕೊಂಡಿದ್ದಾರೆ.

VISTARANEWS.COM


on

Actor Darshan case real star upendra react about case
Koo

ಬೆಂಗಳೂರು: ದರ್ಶನ್‌ (Actor Darshan) ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಉಪೇಂದ್ರ ಅವರು ಈಗ ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ʻʻಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು. ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ. ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರಿದಿದ್ದು ಎಲ್ಲವನ್ನೂ ವಿಡಿಯೊ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದುʼʼಎಂದು ನೇರವಾಗಿಯೇ ಹೇಳಿಕೊಂಡಿದ್ದಾರೆ.

ಉಪೇಂದ್ರ ಎಕ್ಸ್‌ನಲ್ಲಿ ಹೀಗೆ ಬರೆದುಕೊಂಡಿದ್ದಾರೆ. ʻʻದರ್ಶನ್ – ರೇಣುಕಾ ಸ್ವಾಮಿ – ಪಾರದರ್ಶಕ ವಿಚಾರಣೆ …..
ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ. ಈ ಹೈ ಪ್ರೊಫೈಲ್ ಕೇಸ್ ವಿಚಾರಣೆಯಲ್ಲಿ ನಿಶ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟಿವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ,
ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ. ಏಕೆಂದರೆ…… ಯಾವುದೇ ಕೇಸ್ ಆದರೂ ಆ ಕೇಸ್ ನ ವಿಚಾರಣೆಯ ವೀಡಿಯೊ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂದ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು.

ಇದನ್ನೂ ಓದಿ: Shah Rukh Khan: ʻನಾಯಕ್‌ʼ ಸಿನಿಮಾಗೆ ಶಾರುಖ್‌ ಹೀರೊ ಆಗಬೇಕಿತ್ತು! 1 ರೂ. ಅಡ್ವಾನ್ಸ್ ಪಡೆದಿದ್ದರು!

(ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು. ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರಿದಿದ್ದು ಎಲ್ಲವನ್ನೂ ವಿಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು) ಅದೇ ರೀತಿ
ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್ ನ ವಿಚಾರಣೆಯ ವಿಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೋಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು. ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು, ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ.

ಆಗ ರೇಣುಕಾ ಸ್ವಾಮಿ ಕುಟುಂಬಕ್ಕೆ, ಜನರಿಗೆ, ಟಿವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೇ ಪೊಲೀಸ್ ಮತ್ತು ಟಿವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆʼʼಎಂದು ಬರೆದುಕೊಂಡಿದ್ದಾರೆ.

ದರ್ಶನ್‌ ಕೈವಾಡವೇನು?

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಮತ್ತೊಂದಿಷ್ಟು ಮೂಲಗಳ ಪ್ರಕಾರ, ರೇಣುಕಾಸ್ವಾಮಿ ಮೇಲೆ ದರ್ಶನ್‌ ಅವರೇ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇದಾದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ರೇಣುಕಾಸ್ವಾಮಿ ಮೃತಪಟ್ಟಿದ್ದರು. ನಂತರ ಶವವನ್ನು ಚರಂಡಿ ಬಳಿ ಎಸೆಯಲಾಗಿತ್ತು ಎನ್ನಲಾಗಿದೆ.

Continue Reading

ಬಾಲಿವುಡ್

Shah Rukh Khan: ʻನಾಯಕ್‌ʼ ಸಿನಿಮಾಗೆ ಶಾರುಖ್‌ ಹೀರೊ ಆಗಬೇಕಿತ್ತು! 1 ರೂ. ಅಡ್ವಾನ್ಸ್ ಪಡೆದಿದ್ದರು!

Shah Rukh Khan: ಈ ಚಿತ್ರವು ನಿರ್ದೇಶಕ ಶಂಕರ್ ಅವರ 1999ರ ತಮಿಳು ಚಿತ್ರ ʻಮುಧಲ್ವನ್‌ʼನ (mudhalvan) ರಿಮೇಕ್ ಆಗಿತ್ತು. ಚಿತ್ರದಲ್ಲಿ ಅನಿಲ್ ಕಪೂರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರಮಂದಿರಗಳಲ್ಲಿ ಸಿನಿಮಾ ಅಷ್ಟಾಗಿ ಸಕ್ಸೆಸ್‌ ಆಗದಿದ್ದರೂ ದೂರದರ್ಶನದಲ್ಲಿ ವ್ಯಾಪಕವಾಗಿ ಜನಪ್ರಿಯತೆ ಗಳಿಸಿತ್ತು.

VISTARANEWS.COM


on

Shah Rukh Khan Took ₹1 As Signing Amount For 'Nayak'
Koo

ಬೆಂಗಳೂರು: ಶಂಕರ್ ನಿರ್ದೇಶನದ 2001ರಲ್ಲಿ ಬಿಡುಗಡೆಯಾದ ʻನಾಯಕ್‌ʼ ಸಿನಿಮಾದಲ್ಲಿ (Shah Rukh Khan) ಅನಿಲ್ ಕಪೂರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಆದರೆ ಈ ಸಿನಿಮಾಗೆ (Shah Rukh Khan) ಮೊದಲು ಸಹಿ ಹಾಕಿದ್ದು ಶಾರುಖ್‌. ಜತೆಗೆ ಶಾರುಖ್ ಖಾನ್ ಅವರು ʻನಾಯಕ್ʼ ಚಿತ್ರಕ್ಕೆ ಸಹಿ ಹಾಕುವಾಗ ಮುಂಗಡ ಪಡೆದಿದ್ದು ಕೇವಲ ಒಂದು ರೂ. ಅಂತೆ. ಈ ಘಟನೆ ಬಗ್ಗೆ ಸಂದರ್ಶನವೊಂದರಲ್ಲಿ ಶಾರುಖ್‌ ಹೇಳಿಕೊಂಡಿದ್ದಾರೆ. ಈ ಚಿತ್ರವು ನಿರ್ದೇಶಕ ಶಂಕರ್ ಅವರ 1999ರ ತಮಿಳು ಚಿತ್ರ ʻಮುಧಲ್ವನ್‌ʼನ (mudhalvan) ರಿಮೇಕ್ ಆಗಿತ್ತು. ಚಿತ್ರದಲ್ಲಿ ಅನಿಲ್ ಕಪೂರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರಮಂದಿರಗಳಲ್ಲಿ ಸಿನಿಮಾ ಅಷ್ಟಾಗಿ ಸಕ್ಸೆಸ್‌ ಆಗದಿದ್ದರೂ ದೂರದರ್ಶನದಲ್ಲಿ ವ್ಯಾಪಕವಾಗಿ ಜನಪ್ರಿಯತೆ ಗಳಿಸಿತ್ತು.

ಸಂದರ್ಶನದಲ್ಲಿ, ಶಾರುಖ್ ಖಾನ್ ಸಿನಿಮಾ ಬಗ್ಗೆ ಮಾತನಾಡಿ ʻʻಈ ಸಿನಿಮಾಗೆ ನಾನು ಒಪ್ಪಿಗೆ ನೀಡಿ ಸಹಿ ಹಾಕುವಾಗ ಮುಂಗಡ ಸಂಭಾವನೆ ಪಡೆದಿದ್ದು ಕೇವಲ ಒಂದು ರೂ. ಜತೆಗೆ ಡೇಟ್‌ ನೀಡಲು ಸದಾ ಸಿದ್ದ ಎಂದು ಭರವಸೆ ಕೊಟ್ಟೆ. ಆದರೆ ನನಗೆ ನಾಯಕ್‌ ಮೂಲ ಆವೃತ್ತಿ ಇಷ್ಟ ಆಗಿತ್ತು. ಹಿಂದಿ ರಿಮೇಕ್‌ ಮಾಡುವುದು ಸರಿಯೆನಿಸಲಿಲ್ಲʼʼ ಎಂದರು. ಶಾರುಖ್‌ ಮಾತು ಮುಂದುವರಿಸಿ ʻʻನಾನು ಸಹಿ ಮಾಡಿದ್ದು, ದಿನಾಂಕ ನೀಡಿರುವ ಸಾಕ್ಷಿ ಇನ್ನೂ ನನ್ನ ಬಳಿ ಇದೆ. ಶಂಕರ್‌ ಜತೆ ಇನ್ನೂ ಕೂಡ ನನಗೆ ಕೆಲಸ ಮಾಡುವ ಬಯಕೆ ಇದೆ. ಅವರು ಹಾಲಿವುಡ್ ನಿರ್ದೇಶಕ ಜೇಮ್ಸ್ ಕ್ಯಾಮರೂನ್ ನಂತೆ. ಅವರ ಜತೆ ಸಿನಿಮಾ ಮಾಡುವುದು ಅದೃಷ್ಟʼʼ ಎಂದರು.

ಇದನ್ನೂ ಓದಿ: Shah Rukh Khan: ಖ್ಯಾತ ಹಾಲಿವುಡ್‌ ನಟನಂತೆ ಕಂಡ ಶಾರುಖ್ ಖಾನ್; ವಿಡಿಯೊ ವೈರಲ್‌!

ಸಿನಿಮಾ ವಿಚಾರಕ್ಕೆ ಬಂದರೆ ಶಾರುಖ್ ಅವರ ಮಗಳು ಸುಹಾನಾ ಖಾನ್ ಅವರ ಜತೆ ʻದಿ ಕಿಂಗ್ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದನ್ನು ಸುಜೋಯ್ ಘೋಷ್ ನಿರ್ದೇಶಿಸಲಿದ್ದಾರೆ. ವರದಿಗಳ ಪ್ರಕಾರ ಚಿತ್ರದ ಬಜೆಟ್ 200 ಕೋಟಿ ರೂ. ಮತ್ತೊಂದೆಡೆ, ಅನಿಲ್ ಕಪೂರ್ ಬಿಗ್ ಬಾಸ್ OTT ಸೀಸನ್ 3 ಅನ್ನು ಹೋಸ್ಟ್‌ ಮಾಡುತ್ತಿದ್ದಾರೆ.

2023ರಲ್ಲಿ ಬ್ಯಾಕ್‌ ಟು ಬ್ಯಾಕ್‌ ಹಿಟ್‌ ಸಿನಿಮಾಗಳನ್ನು ನೀಡಿದ ಬಳಿಕ ಶಾರುಖ್‌ ʻಕಿಂಗ್‌ʼ ಸಿನಿಮಾ ಮೇಲೆ ಗಮನ ಹರಿಸಿದ್ದಾರೆ.ಈ ಚಿತ್ರವನ್ನು ಶಾರುಖ್ ಅವರ ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಮತ್ತು ಅವರ ಪಠಾಣ್ ನಿರ್ದೇಶಕ ಸಿದ್ಧಾರ್ಥ್ ಆನಂದ್ ಅವರ ಮಾರ್ಫ್ಲಿಕ್ಸ್ ಪಿಕ್ಚರ್ಸ್ ಸಹ-ನಿರ್ಮಾಣ ಮಾಡಿದ್ದಾರೆ.ಇನ್ನು ಶಾರುಖ್‌ ಮಗಳು ಕಳೆದ ವರ್ಷ ಬಿಡುಗಡೆಯಾದ ʻದಿ ಆರ್ಚೀಸ್ʼ (The Archies) ಸಿನಿಮಾ ಮೂಲಕ ಬಣ್ಣದ ಲೋಕ ಪ್ರವೇಶಿಸಿದರು. ಜೋಯಾ ಅಖ್ತರ್ ಮತ್ತು ರೀಮಾ ಕಾಗ್ತಿ ನಿರ್ದೇಶನದ ‘ದಿ ಆರ್ಚೀಸ್’ ಸಿನಿಮಾದಲ್ಲಿ ಸುಹಾನಾ ಜತೆಗೆ ಅಮಿತಾಭ್‌ ಬಚ್ಚನ್ ಮತ್ತು ಜಯಾ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದಾ ಕೂಡ ನಟಿಸಿದ್ದರು. ಈ ವೇಳೆ ಅವರಿಬ್ಬರು ಡೇಟಿಂಗ್ ನಡೆಸುತ್ತಿದ್ದರು ಎನ್ನುವ ಗುಸುಗುಸು ಹಬ್ಬಿತ್ತು. ಆದರೆ ಈ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಸುಹಾನಾ ಖಾನ್‌ ಅಭಿನಯದ ಮೊದಲ ಚಿತ್ರ ‘ದಿ ಆರ್ಚೀಸ್’ ಒಟಿಟಿಯಲ್ಲಿ ತೆರೆಕಂಡು ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತ್ತು.

Continue Reading

ಸ್ಯಾಂಡಲ್ ವುಡ್

Kiccha Sudeep: ಜಗ್ಗೇಶ್‌ಗೆ ಹೇಗೆ ಮಾತನಾಡಬೇಕು, ಹೇಗೆ ಎಸ್ಕೇಪ್ ಆಗಬೇಕು ಅನ್ನೋದು ಗೊತ್ತು ಎಂದ ಕಿಚ್ಚ!

Kiccha Sudeep: ನಟ ದರ್ಶನ್‌ (Actor Darshan) ಬಂಧನವಾಗಿರುವ ಬಗ್ಗೆ ನಟ ಕಿಚ್ಚ ಸುದೀಪ್‌ (Kiccha Sudeep) ಮೊದಲ ಬಾರಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ನೀವು ಮಾಧ್ಯಮಗಳಲ್ಲಿ ಏನು ತೋರಿಸುತ್ತಿದ್ದೀರಿ ಅಷ್ಟು ಮಾತ್ರ ನನಗೆ ಗೊತ್ತು. ಮಾಧ್ಯಮ, ಪೊಲೀಸ್ ಸಿಬ್ಬಂದಿ ಪ್ರಯತ್ನದಿಂದ ಸತ್ಯಾಂಶಗಳು ಬೆಳಕಿಗೆ ಬಂದಿವೆ. ಸಿಎಂ ಸಿದ್ದರಾಮಯ್ಯ ಹಠ ಹಿಡಿದು ಕುಳಿತ ಮೇಲೆ ಈ ಕೇಸ್ ಎಫೆಕ್ಟ್ ಗೊತಾಗ್ತಿದೆ. ಆ ಕುಟುಂಬದ ಹೆಣ್ಣು ಮಗಳಿಗೆ ನ್ಯಾಯ ಸಿಗಬೇಕು. ಬಾಳಿ ಬದುಕಬೇಕಿದ್ದ ರೇಣುಕಾಸ್ವಾಮಿಗೆ ನ್ಯಾಯ ಬೇಕು. ನ್ಯಾಯದ ಮೇಲೆ ನಂಬಿಕೆ ಹುಟ್ಟಬೇಕೆಂದರೆ ನ್ಯಾಯ ಸಿಗಬೇಕು. ಚಿತ್ರರಂಗಕ್ಕೂ ನ್ಯಾಯ ಸಿಗಬೇಕು ತಿಳಿಸಿದರು.

VISTARANEWS.COM


on

Kiccha Sudeep Replies To Darshan Ban Matter Entertainment
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan) ಬಂಧನವಾಗಿರುವ ಬಗ್ಗೆ ನಟ ಕಿಚ್ಚ ಸುದೀಪ್‌ (Kiccha Sudeep) ಮೊದಲ ಬಾರಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.   ದರ್ಶನ್‌ ಅವರನ್ನು ಚಿತ್ರರಂಗದಿಂದ ಬ್ಯಾನ್‌ ಮಾಡಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಬ್ಯಾನ್ ಅನ್ನೋದಕ್ಕಿಂತ ನ್ಯಾಯ ಮುಖ್ಯ. ಫಿಲ್ಮ್‌ ಚೇಂಬರ್ ಇರುವುದು ನಿರ್ಮಾಪಕ, ಕಲಾವಿದರಿಗೆ ನ್ಯಾಯ ಕೊಡಿಸಲು. ರೇಣುಕಾಸ್ವಾಮಿ ಸಾವಿಗೂ ನ್ಯಾಯ ಬೇಕು, ಚಿತ್ರರಂಗಕ್ಕೂ ನ್ಯಾಯ ಸಿಗಬೇಕು ಎಂದು ಹೇಳಿದ್ದಾರೆ. ರಾಜ್​ಕುಮಾರ್ ಅವರು ಬ್ಯಾನ್ ಪದ ಬಳಕೆ ಮಾಡಬೇಡಿ ಎಂದಿದ್ದರಂತೆ. ಈ ಬಗ್ಗೆ ಸುದೀಪ್ ಹೇಳಿದ್ದು ಹೀಗೆ.

ಸುದೀಪ್‌ ಮಾತನಾಡಿ ʻʻಅಣ್ಣಾವ್ರ ಮಾತಿನ ಪರವಾಗಲೀ, ವಿರೋಧವಾಗಿ ಆಗಲೀ ಮಾತನಾಡುವಷ್ಟು ದೊಡ್ಡವನು ನಾನಲ್ಲ. ಆಗ ನಾನು ಹುಟ್ಟೇ ಇಲ್ಲ. ಜಗ್ಗೇಶ್ ಅವರು ನಮ್ಮ ಸಹೋದರರು. ಅವರಿಗೆ ನಮಗಿಂತ ಚೆನ್ನಾಗಿ ತಿಳುವಳಿಕೆ ಇದೆ. ಜಗ್ಗೇಶ್ ಅವರಿಗೆ ಹೇಗೆ ಮಾತನಾಡಬೇಕು, ಹೇಗೆ ಎಸ್ಕೇಪ್ ಆಗಬೇಕು ಅನ್ನೋದು ನನಗಿಂತ ಚೆನ್ನಾಗಿ ಅವರಿಗೆ ಗೊತ್ತು. ಇದರಲ್ಲಿ ನಾನು ಬಹಳ ಮುಗ್ಧ’ ಎಂದಿದ್ದಾರೆ ಸುದೀಪ್.

ಇದನ್ನೂ ಓದಿ: V Cinemas: ರಮೇಶ್ ಅರವಿಂದ್ – ಡಾಲಿ ಧನಂಜಯರಿಂದ ‘ವಿ ಸಿನಿಮಾಸ್’ ಮಲ್ಟಿಪ್ಲೆಕ್ಸ್ ಉದ್ಘಾಟನೆ

ದರ್ಶನ್‌ ಬಂಧನದ ಬಗ್ಗೆ ಪ್ರತಿಕ್ರಿಯಿಸಿ, ನೀವು ಮಾಧ್ಯಮಗಳಲ್ಲಿ ಏನು ತೋರಿಸುತ್ತಿದ್ದೀರಿ ಅಷ್ಟು ಮಾತ್ರ ನನಗೆ ಗೊತ್ತು. ಮಾಧ್ಯಮ, ಪೊಲೀಸ್ ಸಿಬ್ಬಂದಿ ಪ್ರಯತ್ನದಿಂದ ಸತ್ಯಾಂಶಗಳು ಬೆಳಕಿಗೆ ಬಂದಿವೆ. ಸಿಎಂ ಸಿದ್ದರಾಮಯ್ಯ ಹಠ ಹಿಡಿದು ಕುಳಿತ ಮೇಲೆ ಈ ಕೇಸ್ ಎಫೆಕ್ಟ್ ಗೊತಾಗ್ತಿದೆ. ಆ ಕುಟುಂಬದ ಹೆಣ್ಣು ಮಗಳಿಗೆ ನ್ಯಾಯ ಸಿಗಬೇಕು. ಬಾಳಿ ಬದುಕಬೇಕಿದ್ದ ರೇಣುಕಾಸ್ವಾಮಿಗೆ ನ್ಯಾಯ ಬೇಕು. ನ್ಯಾಯದ ಮೇಲೆ ನಂಬಿಕೆ ಹುಟ್ಟಬೇಕೆಂದರೆ ನ್ಯಾಯ ಸಿಗಬೇಕು. ಚಿತ್ರರಂಗಕ್ಕೂ ನ್ಯಾಯ ಸಿಗಬೇಕು ತಿಳಿಸಿದರು.

ದರ್ಶನ್ ಬ್ಯಾನ್ ಕುರಿತು ಮಾತನಾಡಿ, ನ್ಯಾಯ ಬೇರೆ, ಫ್ರೆಂಡ್‌ಶಿಪ್‌ ಬೇರೆ. ಚಿತ್ರರಂಗದ ಮೇಲೆ ಕಪ್ಪು ಚುಕ್ಕೆ ಬರುವುದು ನಮಗೂ ಇಷ್ಟವಿಲ್ಲ. ಯಾರೋ ಒಬ್ಬರಿಂದ ಚಿತ್ರರಂಗ ಹಾಳಾಗಬಾರದು. ನಾವು ಯಾರೂ ಕಾನೂನು ಅಲ್ಲ. ಈ ಕೇಸ್‌ನಿಂದ ಹೊರಬಂದರೆ ಬ್ಯಾನ್ ಅನ್ನೋದು ಬರೋದಿಲ್ಲ. ಬ್ಯಾನ್ ಅನ್ನೋದಕ್ಕಿಂತ ನ್ಯಾಯ ಮುಖ್ಯ. ಚೇಂಬರ್ ಇರುವುದು ನಿರ್ಮಾಪಕ, ಕಲಾವಿದರಿಗೆ ನ್ಯಾಯ ಕೊಡಿಸಲು. ಬ್ಯಾನ್ ಅನ್ನೋ ಪದ ಕಟ್ಟಬೇಡಿ. ಪೊಲೀಸ್ ಸಿಬ್ಬಂದಿ ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಕೊಡಿ ಅಷ್ಟು ಸಾಕು ಎಂದು ಕೋರಿದರು.

ಮ್ಯಾಕ್ಸ್‌ ರಿಲೀಸ್‌ ಯಾವಾಗ?

ಚಿತ್ರರಂಗದಲ್ಲಿ ಹಿರಿಯರು ಇದ್ದಾರೆ. ಒಳ್ಳೆ ಸಿನಿಮಾ ಬಂದರೆ ಜನ ಥಿಯೇಟರ್‌ಗೆ ಬಂದೇ ಬರುತ್ತಾರೆ. ಪ್ರಯತ್ನ ಮಾಡೋಣ, ಚಿತ್ರರಂಗ ಬೆಳಿಯುತ್ತದೆ. ಮ್ಯಾಕ್ಸ್ ಸಿನಿಮಾ ಶೂಟಿಂಗ್ ಮುಕ್ತಾಯಗೊಂಡಿದೆ. ಆಗಸ್ಟ್‌ನಲ್ಲಿ ತೆರೆಗೆ ಬರೋ ಸಾಧ್ಯತೆ ಇದೆ ಎಂದು ಹೇಳಿದರು.

Continue Reading

ಸ್ಯಾಂಡಲ್ ವುಡ್

Actor Darshan: ಬಂಧಿತರಲ್ಲಿ ಹಲವರಿಗೆ ದರ್ಶನ್ ನೇರ ಪರಿಚಯವೇ ಇಲ್ವಂತೆ; ʻದಚ್ಚುʼ ಅರೆಸ್ಟ್ ಆದ ಬಳಿಕವೇ ಮುಖಾಮುಖಿ!

Actor Darshan: ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಆದರೆ, ವಿಚಾರಣೆ ವೇಳೆ ಮೊಬೈಲ್‌ ಪಾಸ್‌ವರ್ಡ್‌ (Mobile Password) ನೀಡಲು ದರ್ಶನ್‌ ಮತ್ತು ಆತನ ಗ್ಯಾಂಗ್‌ ನಿರಾಕರಿಸುತ್ತಿದೆ. ಇದರಿಂದ ಪೊಲೀಸರ ತನಿಖೆಗೆ ಅಡಚಣೆಯಾಗುತ್ತಿದೆ ಎಂದು ತಿಳಿದುಬಂದಿದೆ.ದರ್ಶನ್‌ & ಗ್ಯಾಂಗ್‌ನಿಂದ ಪೊಲೀಸರು ಇದುವರೆಗೆ 10 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಡೇಟಾ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

VISTARANEWS.COM


on

Actor Darshan of many acquaintance unknown of darshan
Koo

ಬೆಂಗಳೂರು: ನಟ ದರ್ಶನ್‌ (Actor Darshan) ಟೀಮ್‌ನಿಂದ ಹತ್ಯೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Murder Case) ಮೊಬೈಲ್‌ಗಾಗಿ (mobile phone) ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆಯಾಗಿ ಹತ್ತು ದಿನ ಕಳೆಯುತ್ತಿದ್ದರೂ ಮೊಬೈಲ್ ಪತ್ತೆಯಾಗಿಲ್ಲ. ಇನ್ನು ಕೊಲೆ ಕೇಸ್‌ಗೆ ಸಂಬಂಧಪಟ್ಟಂತೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಭಾಗಿಯಾದವರ ಸಂಖ್ಯೆ 19 ಮಂದಿ. 19 ಮಂದಿಯಲ್ಲಿ ಹಲವರಿಗೆ ದರ್ಶನ್‌ ಅವರ ನೇರ ಪರಿಚಯವೇ ಇಲ್ಲ ಎಂದು ತಿಳಿದು ಬಂದಿದೆ.

ಹಲವರು ದರ್ಶನ್‌ ಅವರನ್ನು ಭೇಟಿಯಾಗಿದ್ದೇ ಕೊಲೆ ಕೇಸ್‌ನಲ್ಲಿ ದರ್ಶನ್ ಅರೆಸ್ಟ್ ಆದ ಬಳಿಕ ಎನ್ನಲಾಗಿದೆ. ದರ್ಶನ್‌ಗಾಗಿ ಕೃತ್ಯ ಎಸಗಿದವರಲ್ಲಿ ಕೆಲವರು ದರ್ಶನ್‌ ಅವರನ್ನು ಮುಖಾಮುಖಿ ನೋಡಿದ್ದೇ ಪೊಲೀಸ್ ಸ್ಟೇಷನ್ ನಲ್ಲಿ ಎನ್ನಲಾಗಿದೆ. ಪ್ರಕರಣದಲ್ಲಿ ಪವಿತ್ರಾಗೌಡ, ಪವಿತ್ರಾಗೌಡ ಮ್ಯಾನೇಜರ್ ಪವನ್‌, ಸ್ಟೋನಿಬ್ರೂಕ್ಸ್ ಮಾಲೀಕ ವಿನಯ್, ದರ್ಶನ್ ಮ್ಯಾನೇಜರ್ ನಾಗರಾಜ್, ಸ್ಕಾರ್ಪಿಯೋ ಕಾರು ಮಾಲೀಕ ಪುನೀತ್, ವಿನಯ್,ದೀಪಕ್, ಪ್ರದೋಶ್, ಚಿತ್ರದುರ್ಗದ ರಾಘವೇಂದ್ರ, ಮಂಡ್ಯದ ನಂದೀಶ್ ಮಾತ್ರ ದರ್ಶನ್‌ಗೆ ನೇರ ಪರಿಚಯ ಇದ್ದರಂತೆ. ರಾಘವೇಂದ್ರ ಜತೆ ಕಿಡ್ನಾಪ್ ಮಾಡಿದ್ದ ಅನುಕುಮಾರ್, ಈಟಿಯೋಸ್ ಕಾರು ಚಾಲಕ ರವಿ, ಲಕ್ಷ್ಮಣ್, ಜಗದೀಶ್ ಇವರುಗಳು ದರ್ಶನ್ ಅವರನ್ನು ಕಂಡಿದ್ದೆ ಪೊಲೀಸ್ ಸ್ಟೇಷನ್‌ನಲ್ಲಿ ಎಂದು ತಿಳಿದು ಬಂದಿದೆ.

ದರ್ಶನ್‌ಗಾಗಿ ರೇಣುಕಾಸ್ವಾಮಿ ಮೃತ ದೇಹ ಬಿಸಾಡಿದ್ದ ಕೇಶವ್, ಕಾರ್ತಿಕ್, ನಿಖಿಲ್ ನಾಯಕ್
ದರ್ಶನ್‌ ಅವರನ್ನು ಮೊದಲು ಭೇಟಿಯಾಗಿದ್ದು ಕೊಲೆಯಾದ ಮಾರನೇ ದಿನ ಅಂದರೆ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಎನ್ನಲಾಗಿದೆ. ದರ್ಶನ್ ತಂಗಿದ್ದ ಮೈಸೂರಿನ ಖಾಸಗಿ ಹೋಟೆಲ್‌ಗೆ ಕೇಶವ್, ಕಾರ್ತಿಕ್, ನಿಖಿಲ್ ರನ್ನು ಕರೆದೊಯ್ದು ದೀಪಕ್ ಭೇಟಿ ಮಾಡಿಸಿದ್ದ . ದೀಪಕ್ ಸೂಚನೆಯಂತೆ ರೇಣುಕಾಸ್ವಾಮಿ ಮೃತದೇಹವನ್ನು ಸುಮ್ಮನಹಳ್ಳಿ ರಾಜಕಾಲುವೆಗೆ ಬಿಸಾಡಿದ್ರು. ನಂತರ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಹೋಗಿ ಹಣಕಾಸಿನ ವಿಚಾರಕ್ಕೆ ರೇಣುಕಾಸ್ವಾಮಿ ಹತ್ಯೆ ಮಾಡಿದ್ದಾಗಿ ಸರೆಂಡರ್ ಆಗಿದ್ದರು ಕೇಶವ್, ಕಾರ್ತಿಕ್‌, ನಿಖಿಲ್‌ನಾಯಕ್.

ಇದನ್ನೂ ಓದಿ: Actor Darshan: ಹತ್ಯೆಯಾದ ರೇಣುಕಾಸ್ವಾಮಿ ಮೊಬೈಲ್‌ ಹೋಯಿತೆಲ್ಲಿ?

ಮೊಬೈಲ್ ಪತ್ತೆಯಾಗಿಲ್ಲ

ಕಳೆದ ಹತ್ತು ದಿನಗಳಿಂದ ಹುಡುಕಾಡಿದರೂ ರೇಣುಕಾಸ್ವಾಮಿ ಮೊಬೈಲ್ ಪತ್ತೆಯಾಗಿಲ್ಲ. ರೇಣುಕಾಸ್ವಾಮಿ ಮೊಬೈಲ್ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದೆ. ಅಶ್ಲೀಲ ಕಮೆಂಟ್ ಸಂಬಂಧಪಟ್ಟಂತೆ ಇದರಿಂದ ಸಾಕ್ಷಿಗಳನ್ನು ರಿಟ್ರೀವ್‌ ಮಾಡಬೇಕಾಗಿದೆ. ಆರೋಪಿಗಳು ರೇಣುಕಾಸ್ವಾಮಿ ಮೊಬೈಲ್‌ನಲ್ಲೇ ಕ್ಷಮಾಪಣಾ ವಿಡಿಯೋ ಮಾಡಿಸಿದ್ದರು. ಆರ್‌ಆರ್ ನಗರ ಪಟ್ಟಣಗೆರೆ ಶೆಡ್, ಕಿಡ್ನಾಪ್ ಮಾಡಿದ ರವಿಯ ಈಟಿಯೋಸ್ ಕಾರು ಸೇರಿ ಹಲವು ಕಡೆ ಹುಡುಕಿದರೂ ಮೊಬೈಲ್ ಪತ್ತೆಯಾಗಿಲ್ಲ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಆದರೆ, ವಿಚಾರಣೆ ವೇಳೆ ಮೊಬೈಲ್‌ ಪಾಸ್‌ವರ್ಡ್‌ (Mobile Password) ನೀಡಲು ದರ್ಶನ್‌ ಮತ್ತು ಆತನ ಗ್ಯಾಂಗ್‌ ನಿರಾಕರಿಸುತ್ತಿದೆ. ಇದರಿಂದ ಪೊಲೀಸರ ತನಿಖೆಗೆ ಅಡಚಣೆಯಾಗುತ್ತಿದೆ ಎಂದು ತಿಳಿದುಬಂದಿದೆ.

ದರ್ಶನ್‌ & ಗ್ಯಾಂಗ್‌ನಿಂದ ಪೊಲೀಸರು ಇದುವರೆಗೆ 10 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಡೇಟಾ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಇನ್ನು ಕೆಲವು ಮೊಬೈಲ್‌ಗಳಲ್ಲಿದ್ದ ಸಾಕ್ಷ್ಯಗಳ ಆಧಾರದ ಮೇಲೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದು, ಆರೋಪಿಗಳು ಇನ್ನೂ ಕೆಲವು ಮೊಬೈಲ್‌ಗಳ ಪಾಸ್‌ವರ್ಡ್‌ ನೀಡುತ್ತಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇಷ್ಟಾದರೂ ಪಟ್ಟು ಬಿಡದ ಪೊಲೀಸ್‌ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Continue Reading
Advertisement
Actor Darshan case real star upendra react about case
ಸ್ಯಾಂಡಲ್ ವುಡ್5 mins ago

Actor Darshan: ದರ್ಶನ್ & ಗ್ಯಾಂಗ್ ಪೊಲೀಸ್ ವಿಚಾರಣೆ ಲೈವ್ ಸ್ಟ್ರೀಮಿಂಗ್ ಆಗಬೇಕು ಎಂದ ಉಪೇಂದ್ರ!

water Price hike in bwssb
ಬೆಂಗಳೂರು10 mins ago

Water Price Hike : ತೈಲ ದರ ಬಳಿಕ ಕುಡಿಯುವ ನೀರು ದುಬಾರಿ! ನೀರಿನ ದರ ಏರಿಕೆಗೆ ಜಲಮಂಡಳಿ ಪ್ರಸ್ತಾವನೆ!

Maoists Killed
ದೇಶ26 mins ago

Maoists Killed: ಭದ್ರತಾ ಪಡೆಗಳ ಕಾರ್ಯಾಚರಣೆ; ಮತ್ತೆ 4 ಮಾವೋವಾದಿಗಳ ಹತ್ಯೆ

petrol diesel price hike
ಪ್ರಮುಖ ಸುದ್ದಿ34 mins ago

Petrol Diesel Price: ಪೆಟ್ರೋಲ್‌ ಬೆಲೆ ಏರಿಕೆ ವಿರೋಧಿಸಿ ಇಂದು ಬಿಜೆಪಿ ಮಿಂಚಿನ ಪ್ರತಿಭಟನೆ

Shah Rukh Khan Took ₹1 As Signing Amount For 'Nayak'
ಬಾಲಿವುಡ್43 mins ago

Shah Rukh Khan: ʻನಾಯಕ್‌ʼ ಸಿನಿಮಾಗೆ ಶಾರುಖ್‌ ಹೀರೊ ಆಗಬೇಕಿತ್ತು! 1 ರೂ. ಅಡ್ವಾನ್ಸ್ ಪಡೆದಿದ್ದರು!

Encounter In Bandipora
ದೇಶ1 hour ago

Encounter In Bandipora: ಬಂಡಿಪೋರಾದಲ್ಲಿ ಎನ್‌ಕೌಂಟರ್‌; ಓರ್ವ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆ

BAN vs NEP
ಕ್ರೀಡೆ1 hour ago

BAN vs NEP: ಸ್ವಿಮ್ಮಿಂಗ್ ಪೂಲ್​ಗೆ ಜಿಗಿದು ಸಂಭ್ರಮಿಸಿದ ನೇಪಾಳ ಅಭಿಮಾನಿ; ವಿಡಿಯೊ ವೈರಲ್​

BS Yediyurappa pocso case
ಪ್ರಮುಖ ಸುದ್ದಿ1 hour ago

BS Yediyurappa: ಇಂದು ಸಿಐಡಿ ಮುಂದೆ ಹಾಜರಾಗಲಿರುವ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ

Kiccha Sudeep Replies To Darshan Ban Matter Entertainment
ಸ್ಯಾಂಡಲ್ ವುಡ್2 hours ago

Kiccha Sudeep: ಜಗ್ಗೇಶ್‌ಗೆ ಹೇಗೆ ಮಾತನಾಡಬೇಕು, ಹೇಗೆ ಎಸ್ಕೇಪ್ ಆಗಬೇಕು ಅನ್ನೋದು ಗೊತ್ತು ಎಂದ ಕಿಚ್ಚ!

T20 World Cup 2024
ಕ್ರೀಡೆ2 hours ago

T20 World Cup 2024: ಸೂಪರ್​-8 ಹಂತದ ವೇಳಾಪಟ್ಟಿ ಪ್ರಕಟ; 8 ತಂಡಗಳ ಮಾಹಿತಿ ಹೀಗಿದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ17 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ18 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ23 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ6 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌