Karnataka Budget 2024: ಇದೊಂದು ಅಭಿವೃದ್ಧಿ ಪರ ಬಜೆಟ್: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ - Vistara News

ಕರ್ನಾಟಕ ಬಜೆಟ್

Karnataka Budget 2024: ಇದೊಂದು ಅಭಿವೃದ್ಧಿ ಪರ ಬಜೆಟ್: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

Karnataka Budget 2024: 2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 86,423 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಇಲಾಖೆಯ ಬಹುತೇಕ ಬೇಡಿಕೆಗಳಿಗೆ ಸಿಎಂ ಸ್ಪಂದಿಸಿದ್ದಾರೆ ಎಂದು ಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ.

VISTARANEWS.COM


on

Laxmi Hebbalkar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಐತಿಹಾಸಿಕ ಹಾಗೂ ರಚನಾತ್ಮಕ ಬಜೆಟ್ ಮಂಡಿಸಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ. ಎಲ್ಲಾ ವರ್ಗದವರಿಗೆ ಸಲ್ಲುವ ಬಜೆಟ್ ಇದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ರಾಜ್ಯ ಬಜೆಟ್‌ ಬಗ್ಗೆ ಪ್ರತಿಕ್ರಿಯಿಸಿದ ಅವರು, 2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 86,423 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಇಲಾಖೆಯ ಬಹುತೇಕ ಬೇಡಿಕೆಗಳಿಗೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ. ಮಕ್ಕಳ ಉದ್ದೇಶಿತ ಯೋಜನೆಗಳಿಗೆ ಬಜೆಟ್‌ನಲ್ಲಿ 54,617 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದರು.

ಇದನ್ನೂ ಓದಿ | Karnataka Budget 2024: ಬಜೆಟ್‌ನಲ್ಲೂ ಸಾರಿಗೆಗೆ ‘ಶಕ್ತಿ’ ನೀಡಿದ ಸಿದ್ದರಾಮಯ್ಯ; ಏನೆಲ್ಲ ಸಿಕ್ಕಿದೆ?

ಪ್ರಸಕ್ತ ಸಾಲಿನಲ್ಲಿ ಇಲಾಖೆ ನಿರೀಕ್ಷಿಸಿದಷ್ಟು ಬಜೆಟ್‌ ದಕ್ಕಿದ್ದು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಗೃಹಲಕ್ಷ್ಮಿಗೆ ಈ ಸಾಲಿನಲ್ಲಿ 28,608 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಈ ಯೋಜನೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಸ್ಮಾರ್ಟ್‌ ಫೋನ್‌ಗಳಿಗೆ 90 ಕೋಟಿ

ಅಂಗನವಾಡಿ ಕಾರ್ಯಕರ್ತೆಯರ ಮತ್ತು ಮೇಲ್ವಿಚಾರಕಿಯರ ಬಹುದಿನಗಳ ಬೇಡಿಕೆಯಾಗಿದ್ದ ಸ್ಮಾರ್ಟ್ ಫೋನ್‌ಗಾಗಿ 90 ಕೋಟಿ ರೂಪಾಯಿ ನೀಡಲಾಗಿದೆ. 90 ಕೋಟಿ ರೂ. ವೆಚ್ಚದಲ್ಲಿ 75,938 ಫೋನ್‌ಗಳನ್ನು ನೀಡಲಾಗುತ್ತಿದ್ದು, ಇದರಿಂದ ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳ್ಳಲಿದೆ. ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗಿದೆ ಎಂದು ಸಚಿವರು ಹರ್ಷ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ನೀಡಲಾಗುವುದು. ಒಟ್ಟಾರೆ ಇದೊಂದು ಅತ್ಯಂತ ಸಮತೋಲಿತ, ಅಭಿವೃದ್ಧಿ ಪರ ಬಜೆಟ್ ಎಂದು ಹೆಬ್ಬಾಳಕರ್ ಪ್ರಶಂಸಿಸಿದ್ದಾರೆ.

ಇದನ್ನೂ ಓದಿ | Karnataka Budget 2024: ಏಳನೇ ವೇತನ ಆಯೋಗ ಶಿಫಾರಸು ಜಾರಿ; ಸರ್ಕಾರಿ ನೌಕರರಿಗೆ ಸಿಎಂ ಸಿಹಿ ಸುದ್ದಿ

ಉಡುಪಿ, ಬೆಳಗಾವಿಗೂ ಹೆಚ್ಚಿನ ಅನುದಾನ

ನನ್ನ ತವರು ಜಿಲ್ಲೆ ಬೆಳಗಾವಿ ಹಾಗೂ ಉಸ್ತುವಾರಿ ಹೊತ್ತಿರುವ ಉಡುಪಿ ಜಿಲ್ಲೆಗಳಿಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡಲಾಗಿದೆ. ಇದಕ್ಕೆ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಚಿವರು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Karnataka Budget 2024: ದಿಕ್ಕು-ದೆಸೆ ಇಲ್ಲದ ಸಾಲದ ಹೊರೆಯ ಬಜೆಟ್: ಸಚಿವ ಪ್ರಲ್ಹಾದ್‌ ಜೋಶಿ

Karnataka Budget 2024: ರಾಜ್ಯ ಬಜೆಟ್‌ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಭಾಷಣದಂತೆ ಇತ್ತು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಟೀಕಿಸಿದ್ದಾರೆ.

VISTARANEWS.COM


on

Union Minister Pralhad Joshi reacts to state budget
Koo

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ಯಾವುದೇ ದಿಕ್ಕು-ದಿಸೆ ಇಲ್ಲದ ಒಂದು ದಾಖಲೆ ಪಟ್ಟಿಯಂತಿದೆ. 3.71 ಲಕ್ಷ ಕೋಟಿ ಬೃಹತ್ ಗಾತ್ರದ ಹೆಗ್ಗಳಿಕೆ ಬಿಟ್ಟರೆ, ಇದು ರಾಜ್ಯದ ಜನರ ಕಲ್ಯಾಣ ಮತ್ತು ಆರ್ಥಿಕ ಪ್ರಗತಿಗೆ ಪೂರಕವಾಗಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

ರಾಜ್ಯ ಬಜೆಟ್‌ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಈ ಬಜೆಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಭಾಷಣದಂತೆ ಇತ್ತು. ಗ್ಯಾರಂಟಿಗಳಿಗೆ ವರ್ಷವಿಡೀ ಹೇಗೆ ಹಣ ಕ್ರೋಡೀಕರಣ ಎಂಬ ಅಂಶವಿದೆಯೇ ಹೊರತು ಮುಂದಿನ ವರ್ಷಗಳಲ್ಲಿ ರಾಜ್ಯವನ್ನು ಆರ್ಥಿಕ ಸಶಕ್ತಗೊಳಿಸಲು ಯಾವುದೇ ಯೋಜನೆಗಳ ಪ್ರಸ್ತಾಪವೇ ಇಲ್ಲ ಎಂದು ಹೇಳಿದ್ದಾರೆ.

ಹಿಂದಿನ ಸರ್ಕಾರದ ಪ್ರಸ್ತಾವನೆಗಳೇ ಈ ಬಜೆಟ್‌ನಲ್ಲಿವೆ ಅಷ್ಟೇ. ನೀರಾವರಿ ಯೋಜನೆಗಳಿಗೆ ಯಾವುದೇ ಹಣಕಾಸು ಪ್ರಸ್ತಾಪವಿಲ್ಲ. ಕೇಂದ್ರ ಸರ್ಕಾರದ ಅನುಮತಿ ನೇಪಹೇಳಿ ಜಾರಿಕೊಳ್ಳುವ ವ್ಯರ್ಥ ಪ್ರಯತ್ನವೇ ಸಿಎಂ ಸಿದ್ದರಾಮಯ್ಯ ಅವರ ಕಸರತ್ತು ಆಗಿದೆ ಎಂದು ಸಚಿವರು ಆರೋಪಿಸಿದ್ದಾರೆ.‌

ಇದನ್ನೂ ಓದಿ | Karnataka Budget 2024 : ಬಜೆಟ್‌ ಬಹಿಷ್ಕಾರ ಇತಿಹಾಸದಲ್ಲೇ ಮೊದಲಲ್ಲ! 2021ರಲ್ಲೇ ಸಿದ್ದು ಇತಿಹಾಸ ಸೃಷ್ಟಿಸಿದ್ದರು!

ಸಾಲದ ಹೊರೆಯ ಬಜೆಟ್

ಕಳೆದ ವರ್ಷಕ್ಕೆ ಹೋಲಿಸಿದರೆ ರೆವೆನ್ಯೂ ವೆಚ್ಚ 1 ಲಕ್ಷ ಕೋಟಿಗೂ ಮೀರಿದೆ. ತೆರಿಗೆದಾರರ ಮೇಲೆ ಅನಗತ್ಯ ಹೊರೆ ಹೇರಲಾಗಿದೆ. ಅಲ್ಲದೇ, ಕಳೆದ ಸರ್ಕಾರಕ್ಕಿಂತ ಶೇ.22ರಷ್ಟು ಸಾಲದ ಹೊರೆ ಇದರಲ್ಲಿದೆ. 1,05,246 ಕೋಟಿಗೂ ಅಧಿಕ ಸಾಲ ಈ ಬಜೆಟ್ ಒಳಗೊಂಡಿದೆ. ಹಾಗಾಗಿ ಇದೊಂದು ಸಾಲದ ಹೊರೆಯ ಬಜೆಟ್ ಆಗಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

Continue Reading

ಕರ್ನಾಟಕ

Karnataka Budget 2024: ಸಾಲ ಶೂಲದ ಹರಿಕಾರ ಸಾಲರಾಮಯ್ಯ; ರಾಜ್ಯ ಬಜೆಟ್‌ ಬಗ್ಗೆ ಬಿಜೆಪಿ ಟೀಕೆ

Karnataka Budget 2024: ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ 9 ತಿಂಗಳಲ್ಲಿ 1,93,246 ಕೋಟಿ ರೂ. ಸಾಲ‌ ಮಾಡಿದೆ. ಅಂದರೆ ಪ್ರತಿಯೊಬ್ಬ ಕನ್ನಡಿಗನ ತಲೆ ಮೇಲೆ 28 ಸಾವಿರ ರೂ. ಸಾಲ ಹೇರಿದ್ದಾರೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.

VISTARANEWS.COM


on

Karnataka Budget 2024 new 1
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ ಬಗ್ಗೆ ಸಾರ್ವಜನಿಕರು ಮತ್ತು ರಾಜಕೀಯ ನಾಯಕರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಇನ್ನು ಬಜೆಟ್‌ ಬಗ್ಗೆ ರಾಜ್ಯ ಬಿಜೆಪಿ ಪ್ರತಿಕ್ರಿಯಿಸಿ, ಸಾಲ ಶೂಲದ ಹರಿಕಾರ ಸಾಲರಾಮಯ್ಯ, ಸಾಲವೇ ಎಲ್ಲದಕ್ಕೂ ವಾಮಮಾರ್ಗ ಎಂದುಕೊಂಡಿರುವ ಈ ಶತಮಾನದ ನಕಲಿ ಅರ್ಥ ಶಾಸ್ತ್ರಜ್ಞ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ, ಅಧಿಕಾರಕ್ಕೆ ಬಂದು ಕೇವಲ 9 ತಿಂಗಳಲ್ಲಿ 1,93,246 ಕೋಟಿ ರೂ. ಸಾಲ‌ ಮಾಡಿದ್ದಾರೆ. ಅಂದರೆ ಪ್ರತಿಯೊಬ್ಬ ಕನ್ನಡಿಗನ ತಲೆ ಮೇಲೆ 28 ಸಾವಿರ ರೂ. ಸಾಲ ಹೇರಿದ್ದಾರೆ. ಸಾಲರಾಮಯ್ಯನವರು ಒಂದು ಸಮುದಾಯದ ತುಷ್ಟೀಕರಣಕ್ಕಾಗಿ ಲಕ್ಷಾಂತರ ಕೋಟಿ ಸಾಲ ಮಾಡಿ ಕನ್ನಡಿಗರನ್ನು ಸಂಪೂರ್ಣವಾಗಿ ಮುಳುಗಿಸಿದ್ದಾರೆ. ಸಾಲದ ಸುಳಿಗೆ ಕರುನಾಡು ಸಿಲುಕಿದೆ. ಕರ್ನಾಟಕ ಅಭಿವೃದ್ಧಿಯಲ್ಲಿ 20 ವರ್ಷ ಹಿಂದಕ್ಕೆ ಬಿದ್ದಿದೆ. ಆರ್ಥಿಕತೆ ಹಳ್ಳ ಹಿಡಿದಿದೆ ಎಂದು ಕಿಡಿಕಾರಿದೆ.

ಇದನ್ನೂ ಓದಿ | Karnataka Budget Session 2024: ಬಿಜೆಪಿಯವರ ತಲೆಯಲ್ಲಿ ಏನೂ ಇಲ್ಲ; ಬಡವರ ಕೊಳ್ಳುವ ಶಕ್ತಿ ಹೆಚ್ಚಿಸುವ ಬಜೆಟ್‌ ಎಂದ ಸಿದ್ದರಾಮಯ್ಯ

ನಯಾಪೈಸೆ ಪ್ರಯೋಜನ ಇಲ್ಲದ ಬಜೆಟ್‌, ಉತ್ತರಕ್ಕೆ ಒಂದು ರೂ. ಕೂಡಾ ಇಲ್ಲ; ಬಿ.ವೈ ವಿಜಯೇಂದ್ರ

Karnataka-Budget-2024-BY-Vijayendra

ಬೆಂಗಳೂರು: ಮುಖ್ಯಮಂತ್ರಿಗಳು ಮತ್ತು ರಾಜ್ಯದ ಹಣಕಾಸು ಸಚಿವರಾದ ಸಿದ್ದರಾಮಯ್ಯನವರು (CM Siddaramaiah) ಇಂದು ಮಂಡಿಸಿದ ರಾಜ್ಯ ಬಜೆಟ್‌ (Karnataka Budget 2024) ಬಜೆಟ್ ರೈತವಿರೋಧಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಶೂನ್ಯ ಪ್ರಗತಿಯ ಬಜೆಟ್ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ವಿಶ್ಲೇಷಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ರಾಜ್ಯವನ್ನು 20 ವರ್ಷಗಳಷ್ಟು ಹಿಂದಕ್ಕೆ ತೆಗೆದುಕೊಂಡು ಹೋಗುವ ಬಜೆಟ್ ಇದು ಎಂದು ಟೀಕಿಸಿದರು.

ಯುವಕರಿಗೆ ಯಾವುದೇ ಒಂದು ಕಾರ್ಯಕ್ರಮಗಳನ್ನು, ಯೋಜನೆಗಳನ್ನು ಘೋಷಣೆ ಮಾಡಿಲ್ಲ. ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಮತ್ತು ತಮ್ಮ ವೈಫಲ್ಯಗಳನ್ನು ಮುಚ್ಚಿ ಹಾಕಿಕೊಳ್ಳಲು ಇವತ್ತು ಸನ್ಮಾನ್ಯ ಸಿದ್ದರಾಮಯ್ಯನವರು ತಮ್ಮ ಸಮಯ ವ್ಯರ್ಥ ಮಾಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Karnataka Budget 2024 : ಸಿದ್ದು ಬಜೆಟ್‌ನ ಘೋಷಣೆಗಳ ಸಂಪೂರ್ಣ ಪಟ್ಟಿ; ಇದನ್ನು ಓದಿದ್ರೆ ಸಾಕು!

ಈ ಬಜೆಟ್‍ನ ಪಾವಿತ್ರ್ಯತೆಯನ್ನು ಹಾಳು ಮಾಡಿದ್ದಾರೆ ಎಂದು ಆಕ್ಷೇಪಿಸಿದ ಅವರು, ಮೊನ್ನೆ ದೆಹಲಿ ಚಲೋ ಮಾಡಿದ್ದರು. ದೆಹಲಿಯಲ್ಲಿ ರಾಜ್ಯ ಸರಕಾರದ ಗೌರವವನ್ನು ಹರಾಜು ಹಾಕುವ ಕೆಲಸ ಆಗಿತ್ತು. ಇವತ್ತು ಕೂಡ ಮುಖ್ಯಮಂತ್ರಿಗಳು ತಮ್ಮ ಬಜೆಟ್‍ನಲ್ಲಿ ಕೇಂದ್ರ ಸರಕಾರವನ್ನು ದೂರುವ ಕೆಲಸ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒಂದು ರೂಪಾಯಿ ಇಲ್ಲ..

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒಂದು ರೂಪಾಯಿಯನ್ನೂ ಕೊಡದ ಬಜೆಟ್ ಇದಾಗಿದೆ. ಸಂಕಷ್ಟದಲ್ಲಿರುವ ರೈತರು ಬಜೆಟ್ ಮೂಲಕ ಪರಿಹಾರದ ನಿರೀಕ್ಷೆಯಲ್ಲಿದ್ದರು. ಇದರಡಿ ಮಹಿಳೆಯರಿಗೂ ಅನುಕೂಲ ಆಗುವುದಿಲ್ಲ. ಇವರು ತಮ್ಮ ಪ್ರಣಾಳಿಕೆಯಲ್ಲಿ ನೇಕಾರರ ಬಗ್ಗೆ ಮಾತನಾಡಿದ್ದರು. ನೇಕಾರರ ಪರವಾಗಿ ಯಾವುದೇ ಒಂದು ಯೋಜನೆಯನ್ನು ಘೋಷಣೆ ಮಾಡಿಲ್ಲ. ಯೋಜನೆ ಘೋಷಿಸುವುದು ಇರಲಿ; ಆ ನೇಕಾರರ ಹೆಸರನ್ನೂ ಉಲ್ಲೇಖಿಸಿಲ್ಲ ಎಂದು ವಿಜಯೇಂದ್ರ ಅವರು ಟೀಕಿಸಿದರು.

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳವಿಲ್ಲ!

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳದ ಭರವಸೆ ನೀಡಿದ್ದರು. ಅದರ ಬಗ್ಗೆಯೂ ಉಲ್ಲೇಖ ಮಾಡಿಲ್ಲ. ‘ನುಡಿದಂತೆ ನಡೆದ ಸರಕಾರ’ ಎಂದು ಕೊಚ್ಚಿಕೊಳ್ಳುತ್ತಾರೆ. ‘ನುಡಿದಂತೆ ನಡೆದ ಸರಕಾರ’ ಎಂದು ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿದ್ದು, ರಾಜ್ಯದ ರೈತರು, ಬಡವರು, ದೀನದಲಿತರು, ನೇಕಾರರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿ ಎಲ್ಲ ವರ್ಗಕ್ಕೂ ನಿರಾಸೆ ಮೂಡಿಸಿದ ಬಜೆಟ್ ಇದು ಎಂದು ತಿಳಿಸಿದರು.

ಕೃಷಿ ಬೆಳೆ ಸಾಲ ಮನ್ನಾದ ಉಲ್ಲೇಖವೇ ಇಲ್ಲ

ಬರಗಾಲದ ಸಂದರ್ಭದಲ್ಲೂ ಕೃಷಿ ಮತ್ತು ಬೆಳೆ ಸಾಲದ ಮನ್ನಾ ಕುರಿತು ಉಲ್ಲೇಖ ಮಾಡಿಲ್ಲ. ಸರಕಾರಿ ನೌಕರರ ಮೂಗಿಗೆ ತುಪ್ಪ ಹಚ್ಚುವ ಕೆಲಸವನ್ನು ಇವರು ಮಾಡಿದ್ದಾರೆ. ಬರಗಾಲದ ಸಂದರ್ಭದಲ್ಲಿ ಯಾವುದೇ ರೀತಿಯ ಅನುಕೂಲ ಆಗದ ಬಜೆಟ್, ನಿಶ್ಚಿತವಾಗಿ ಇದು ಕರಾಳ ದಿನ ಎಂದರೂ ತಪ್ಪಾಗಲಾರದು ಎಂದು ನುಡಿದರು.

ಇದನ್ನೂ ಓದಿ | Karnataka Budget 2024: ರಾಜ್ಯ ಬಜೆಟ್‌ನಲ್ಲಿ ಯಾವ ಜಿಲ್ಲೆಗೆ ಏನು ಸಿಕ್ಕಿದೆ?; ಇಲ್ಲಿದೆ ಮಾಹಿತಿ

ಸಿದ್ದರಾಮಯ್ಯ ಅವರಿಂದ ಇಂಥ ಬಜೆಟ್‌ ನಿರೀಕ್ಷೆ ಮಾಡಿರಲಿಲ್ಲ

15ನೇ ಬಜೆಟ್ ಮಂಡಿಸುತ್ತಿರುವ ಒಬ್ಬ ಅನುಭವಿ ಮುಖ್ಯಮಂತ್ರಿ ಈ ರೀತಿ ಬಜೆಟ್ ಮಂಡಿಸಬಹುದೆಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ. ನಿಜವಾಗಲೂ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಒಂದು ದುರಂತವೇ ಸರಿ ಎಂದ ಅವರು, ರೈತರನ್ನೂ ಕಡೆಗಣಿಸಿದ್ದಾರೆ; ಮಹಿಳೆಯರನ್ನೂ ಕಡೆಗಣಿಸಿದ್ದಾರೆ; ನೇಕಾರರನ್ನೂ ಕಡೆಗಣಿಸಿದ್ದಾರೆ, ಯುವಕರನ್ನೂ ಕಡೆಗಣಿಸಿದ್ದಾರೆ; ಉತ್ತರ ಕರ್ನಾಟಕದ ಅಭಿವೃದ್ಧಿಯನ್ನೂ ಕಡೆಗಣಿಸಿದ ಸರಕಾರ ಬಹುಶಃ ರಾಜ್ಯದ ಜನರ ಪಾಲಿಗೆ ಬದುಕಿದ್ದೂ ಸತ್ತಂತೆ ಎಂದು ಹೇಳಿದರು.

Continue Reading

ಕರ್ನಾಟಕ

Karnataka Budget 2024: ರಾಜ್ಯ ಬಜೆಟ್‌ನಲ್ಲಿ ಯಾವ ಜಿಲ್ಲೆಗೆ ಏನು ಸಿಕ್ಕಿದೆ?; ಇಲ್ಲಿದೆ ಮಾಹಿತಿ

Karnataka Budget 2024: ರಾಜ್ಯ ಬಜೆಟ್‌ನಲ್ಲಿ ಯಾವ ಜಿಲ್ಲೆಗೆ ಯಾವ ಯೋಜನೆ ಸಿಕ್ಕಿದೆ, ಎಷ್ಟು ಅನುದಾನ ನೀಡಲಾಗಿದೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

VISTARANEWS.COM


on

Karnataka Budget 2024 new
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 3.71 ಲಕ್ಷ ಕೋಟಿ ರೂ. ಗಾತ್ರದ ಬಜೆಟ್‌ ಅನ್ನು ಶುಕ್ರವಾರ ಮಂಡಿಸಿದ್ದು, ಕೃಷಿ, ಮೂಲಸೌಕರ್ಯ, ಆರೋಗ್ಯ, ಪ್ರವಾಸೋದ್ಯಮ ಸೇರಿ ವಿವಿಧ ವಲಯಗಳಿಗೆ ಅನುದಾನ ಹಂಚಿಕೆ ಮಾಡಲಾಗಿದೆ. ಈ ಬಜೆಟ್‌ನಲ್ಲಿ (Karnataka Budget 2024) ಯಾವ ಜಿಲ್ಲೆಗೆ ಏನು ಸಿಕ್ಕಿದೆ? ಯಾವ ಪ್ರಮುಖ ಯೋಜನೆಗಳು ದಕ್ಕಿವೆ ಎಂಬುವುದರ ಕುರಿತ ಜಿಲ್ಲಾವಾರು ವಿವರ ಇಲ್ಲಿದೆ.

ಬೆಂಗಳೂರು

  • ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆ.
  • ಬೆಂಗಳೂರಿನ ಕೆ.ಸಿ. ಜನರಲ್‌ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಮತ್ತಿತರ ಮೂಲಸೌಕರ್ಯ ಕಾಮಗಾರಿಗಳಿಗೆ 150 ಕೋಟಿ ರೂ.
  • ಬೆಂಗಳೂರಿನಲ್ಲಿ ಮುಂದಿನ ಎರಡು ವರ್ಷಗಳಲ್ಲಿ HUB and Spoke ಮಾದರಿಯಲ್ಲಿ 430 ಪ್ರಯೋಗಾಲಯಗಳ ಸ್ಥಾಹನೆಗೆ 20 ಕೋಟಿ ರೂ. ಅನುದಾನ
  • ಬೆ೦ಗಳೂರಿನ ನೆಫ್ರೋ-ಯುರಾಲಜಿ ಸಂಸ್ಥೆಯ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ರೋಬೋಟಿಕ್‌ ಶಸ್ತ್ರಚಿಕಿತ್ಸಾ ಸೌಲಭ್ಯ.
  • ಬೆ೦ಗಳೂರು ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ Knowledge Health Care, Innovation and Research City (KHIR) ಅನ್ನು ಅಭಿವೃದ್ಧಿಗೆ ಕ್ರಮ. 40,000 ಕೋಟಿ ರೂ.ಗಳ ಹೂಡಿಕೆ ಹಾಗೂ 80,000 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ.
  • ಬೆಂಗಳೂರಿನ ಉತ್ತರ ತಾಲ್ಲೂಕಿನಲ್ಲಿ 70 ಎಕರೆ ಪ್ರದೇಶದಲ್ಲಿ ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ಕ್ರೀಡಾ ನಗರ (Sports City)ಸ್ಥಾಪನೆ ಹಾಗೂ ನಾಲ್ಕು ಅತ್ಯಾಧುನಿಕ ಕ್ರೀಡ ಸಂಕೀರ್ಣಗಳ ನಿರ್ಮಾಣ.
  • ಬೆ೦ಗಳೂರಿನ ಪೊಲೀಸ್‌ ಸುಲಿವನ್‌ ಮೈದಾನದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಆಸ್ಟ್ರೋ ಟರ್ಫ್‌ ಹಾಕಿ ಅಂಕಣ ನಿರ್ಮಾಣ.
  • 20 ಜಿಲ್ಲಾ ಆಸ್ಪತ್ರೆಗಳಲ್ಲಿ Digital Mammography ಯಂತ್ರಗಳನ್ನು ಮತ್ತು ಕೆ.ಸಿ. ಜನರಲ್‌ ಆಸ್ಪತ್ರೆ ಬೆ೦ಗಳೂರು ಹಾಗೂ ಉಡುಪಿ, ಕೋಲಾರ ಮತ್ತು ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಿಗೆ Colposcopy ಉಪಕರಣ ಖರೀದಿಗೆ 21 ಕೋಟಿ ರೂ. ಅನುದಾನ
  • ಬೆ೦ಗಳೂರು ಗ್ರಾಮಾ೦ತರ ಜಿಲ್ಲೆಯ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಹಾಗೂ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಾಲಯ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ.

ಮಂಗಳೂರು

ವಾಟರ್‌ ಮೆಟ್ರೋ ಸಾಂದರ್ಭಿಕ ಚಿತ್ರ
  • ಮ೦ಗಳೂರು ಬಂದರಿನಿಂದ ಬೆ೦ಗಳೂರುವರೆಗೆ ಹಾಗೂ ಬೀದರ್‌ನಿಂದ ಬೆ೦ಗಳೂರು ನಡುವೆ ಆರ್ಥಿಕ ಅಭಿವೃದ್ಧಿ ಕಾರಿಡಾರ್‌ ನಿರ್ಮಾಣಕ್ಕೆ ಕ್ರಮ.
  • ಹಳೆ ಮಂಗಳೂರು, ಕಾರವಾರ ಮತ್ತು ರಾಜ್ಯದ 11 ಕಿರು ಬಂದರುಗಳಲ್ಲಿ ಹೂಳೆತ್ತುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕ್ರಮ.
  • ಹಳೇ ಮಂಗಳೂರು ಬಂದರಿನಲ್ಲಿ 350 ಮೀ. ಉದ್ದದ ಕೋಸ್ಟಲ್‌ ಬರ್ತ್‌ ನಿರ್ಮಾಣ ಕಾಮಗಾರಿ 2024-25ನೇ ಸಾಲಿನಲ್ಲಿ ಪೂರ್ಣಗೊಳಿಸಲು ಕ್ರಮ.
  • ಮಂಗಳೂರಿನ ಗುರುಪುರ ಹಾಗೂ ನೇತ್ರಾವತಿ ನದಿಗಳಲ್ಲಿ ಜಲಮೆಟ್ರೋ ಸೇವೆಗಳನ್ನು ಪರಿಚಯಿಸಲು ಕಾರ್ಯಸಾಧ್ಯತಾ ವರದಿ ತಯಾರಿಸಲು ಕ್ರಮ ದ್ವೀಪಗಳ ಸಮಗ್ರ ಅಭಿವೃದ್ಧಿಗೆ ಮಾಸ್ಟರ್‌ ಪ್ಲಾನ್‌ ತಯಾರಿಸಲು ಕ್ರಮ.
  • ಮಂಗಳೂರಿನಲ್ಲಿ 35 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ ಸ್ಥಾಪನೆ.

ಇದನ್ನೂ ಓದಿ | Karnataka Budget 2024 : ಕಡಲ ತೀರ ವ್ಯಾಪಾರಕ್ಕೆ ಒತ್ತು; 1,017 ಕೋಟಿ ರೂಪಾಯಿ ಅನುದಾನ

ಶಿವಮೊಗ್ಗ

  • ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆ೦ಗಳೂರು ಗ್ರಾಮಾಂತರದ ಪೂಜೇನಹಳ್ಳಿಯಲ್ಲಿ ಆಹಾರ ಪಾರ್ಕ್‌ ಸ್ಥಾಪನೆ.
  • ಶಿವಮೊಗ್ಗ ಜಿಲ್ಲೆಯಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸ ಹೈ-ಸೆಕ್ಕೂರಿಟ ಕಾರಾಗೃಹ ನಿರ್ಮಾಣ

ಚಿಕ್ಕಮಗಳೂರು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಪೈಸ್‌ ಪಾರ್ಕ್‌ ಅಭಿವೃದ್ಧಿ.

ವಿಜಯಪುರ

ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜು ಸ್ಥಾಪನೆ

ರಾಮನಗರ

ರಾಮನಗರ ಮತ್ತು ಶಿಡ್ಲಘಟ್ಟದಲ್ಲಿ 250 ಕೋಟ ರೂ. ವೆಚ್ಚದಲ್ಲಿ ಅತ್ಯಾಧುನಿಕ ರೇಷ್ಮೆ ಮಾರುಕಟ್ಟೆ ನಿರ್ಮಾಣದ ಎರಡನೇ ಹ೦ತ ಕಾಮಗಾರಿ ಕೈಗೆತ್ತಿಕೊಳ್ಳಲು ಕ್ರಮ.

ಪುತ್ತೂರು

ಪುತ್ತೂರು ಪಶುವೈದ್ಯಕೀಯ ಕಾಲೇಜು ಕಾರ್ಯಾರಂಭಕ್ಕೆ ಕ್ರಮ.

ರಾಯಚೂರು

ಒಟ್ಟು 130 ಕೋಟಿ ರೂ. ವೆಚ್ಚದಲ್ಲಿ 7 ಶೀತಲಗೃಹ ನಿರ್ಮಾಣ. ರಾಯಚೂರು ಹಾಗೂ ರಾಣೆಬೆನ್ನೂರಿನಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆ ಪ್ರಾರಂಭ.

ಕೊಪ್ಪಳ

  • ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮತೋಲನಾ ಜಲಾಶಯ ನಿರ್ಮಾಣ ಯೋಜನೆಯ 15,600 ಕೋಟಿ ರೂ. ಮೊತ್ತದ ವಿವರವಾದ ಯೋಜನಾ ವರದಿ ಸಿದ್ಧ ಯೋಜನೆಯ ಅನುಷ್ಠಾನ ಸಂಬಂಧ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಸಮಾಲೋಚನೆ ಪ್ರಾರಂಭ.

ಮಂಡ್ಯ

  • ಕೆ.ಆರ್‌.ಎಸ್‌ನ ಬೃಂದಾವನ ಉದ್ಯಾನವನವನ್ನು ವಿಶ್ವದರ್ಜೆಯ ಪ್ರವಾಸೋದ್ಯಮ ಆಕರ್ಷಣೀಯ ಕೇಂದ್ರವನ್ನಾಗಿ ಉನ್ನತೀಕರಣ.
  • ಮಂಡ್ಯದ ಮೈಶುಗರ್‌ ಕಾರ್ಲಾನೆಯ ಆವರಣದಲ್ಲಿ ಹೊಸ ಸಕ್ಕರೆ ಕಾರ್ಖಾನೆ ನಿರ್ಮಾಣ.

ಧಾರವಾಡ

ಧಾರವಾಡದಲ್ಲಿರುವ ವಾಲ್ಮಿ ಸಂಸ್ಥೆಯನ್ನು Centre of Excellence in Water Management ಆಗಿ ಉನ್ನತೀಕರಿಸಲು ಕ್ರಮ.

ಯಲಗುರ್ಬಾ

ಯಲಬುರ್ಗಾ-ಕುಕನೂರು ತಾಲ್ಲೂಕಿನಲ್ಲಿ 970 ಕೋಟಿ ರೂ. ವೆಚ್ಚದಲ್ಲಿ 38 ಕೆರೆಗಳನ್ನು ತುಂಬಿಸುವ ಯೋಜನೆ ಹಾಗೂ ಮಸ್ಕಿ ತಾಲ್ಲೂಕಿನ ಪಾಮನಕಲ್ಲೂರು ಹಾಗೂ ಇತರ ಪ್ರದೇಶಗಳಿಗೆ ಅಂದಾಜು 990 ಕೋಟಿ ರೂ. ಮೊತ್ತದಲ್ಲಿ ನೀರಾವರಿ ಸೌಲಭ್ಯ ಕಲ್ಪಿಸುವ ಯೋಜನೆ ಅನುಷ್ಠಾನ.

ಕಲಬುರಗಿ

  • ಕಲಬುರಗಿ ನಗರಕ್ಕೆ ಕುಡಿಯುವ ನೀರು ಸರಬರಾಜಿಗಾಗಿ ಬೆಣ್ಣೆತೊರಾ ಜಲಾಶಯಕ್ಕೆ ಭೀಮಾ ಮತ್ತು ಕಾಗಿಣಾ ನದಿಗಳಿಂದ ನೀರು ತುಂಬಿಸುವ 365 ಕೋಟ ರೂ. ಮೊತ್ತದ ಯೋಜನೆ ಜಾರಿ.
  • ಕಲಬುರಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕ ಸ್ಥಾಪನೆ.
  • ಕಲಬುರಗಿಯ ಕೆ.ಜಿ.ಟಿ.ಟಿ.ಐ.ನಲ್ಲಿ 16 ಕೋಟಿ ರೂ. ವೆಚ್ಚದಲ್ಲಿ ಸಿ.ಎನ್‌.ಸಿ (Computer Numerical Control) ಯಂತ್ರವನ್ನು ಕೇಂದ್ರೀಕರಿಸುವ ಮೊದಲ ಶ್ರೇಷ್ಟತಾ ಕೇಂದ್ರ ಸ್ಥಾಪನೆ.
  • ಕಲಬುರಗಿ, ಶಿವಮೊಗ್ಗ. ಹುಬ್ಬಳ್ಳಿ ಮತ್ತು ತುಮಕೂರಿನಲ್ಲಿ ಒಟ್ಟಾರೆ 12 ಕೋಟಿ ರೂ. ವೆಚ್ಚದಲ್ಲಿ ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಕೌಶಲ್ಯ ಮತ್ತು ನಾವೀನ್ಯತಾ ಕೇಂದ್ರ ಸ್ಥಾಪನೆ.
  • ಕಲಬುರಗಿಯಲ್ಲಿ ವಚನ ಮಂಟಪ ಸ್ಥಾಪನೆಗೆ ಕ್ರಮ.

ಧಾರವಾಡ

ಧಾರವಾಡ ಜಿಲ್ಲೆಯಲ್ಲಿ ಬೆಣ್ಣೆಹಳ್ಳದಿಂದ ಪ್ರವಾಹ ಪೀಡಿತ ಗ್ರಾಮಗಳಿಗೆ ತಡೆಗೋಡೆ ನಿರ್ಮಾಣ.

ಮೈಸೂರು

  • ಮೈಸೂರಿನಲ್ಲಿರುವ 40 ಹಾಸಿಗೆ ಸಾಮರ್ಥ್ಯದ Nephro-Urology ಆಸ್ಪತ್ರೆಯ 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಉನ್ನತೀಕರಣ.
  • ಮೈಸೂರು ವೈದ್ಯಕೀಯ ಮಹಾವಿದ್ಯಾಲಯ ಶತಮಾನೋತ್ಸವದ ಸವಿನೆನಪಿಗಾಗಿ ಕೆ.ಆರ್‌. ಆಸ್ಪತ್ರೆ ಆವರಣದಲ್ಲಿ 75 ಕೋಟ ರೂ. ವೆಚ್ಚದಲ್ಲಿ ಸುಸಜ್ಜಿತ ಹೊರ ರೋಗಿ ವಿಭಾಗದ ಕಟ್ಟಡ ನಿರ್ಮಾಣಕ್ಕೆ ಕ್ರಮ.
  • 1600 ಕೋಟಿ ರೂ. ವೆಚ್ಚದಲ್ಲಿ ಮೈಸೂರು ವಿಮಾನ ನಿಲ್ದಾಣ ರನ್‌ವೇ ವಿಸ್ತರಣೆ; ವಿಜಯಪುರ ಹಾಗೂ ಹಾಸನ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಲು, ರಾಯಚೂರು ಹಾಗೂ ಕಾರವಾರ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕ್ರಮ.
  • ಮೈಸೂರು, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ವಿಭಾಗಗಳಲ್ಲಿ ನೂತನ ಜವಳಿ ಪಾರ್ಕ್‌ಗಳ ಪ್ರಾರಂಭ; 10,000 ಉದ್ಯೋಗ ಸೃಷ್ಟಿ ಬಳ್ಳಾರಿಯಲ್ಲಿ ಜೀನ್ಸ್‌ ಅಪಾರೆಲ್‌ ಪಾರ್ಕ್‌ ಹಾಗೂ ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಅಭಿವೃದ್ಧಿಗೆ ಕ್ರಮ.
  • ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಖಾದಿ ಚಟುವಟಕೆ ಪ್ರೋತ್ಸಾಹಕ್ಕೆ ಕ್ರಮ

ಕೊಡಗು

  • ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ Viral Research & Diagnostic Laboratory (VRDL)ಅನ್ನು ಸ್ಥಾಪಿಸಲಾಗುವುದು.
  • ವಿರಾಜಪೇಟೆಯಲ್ಲಿ 12 ಕೋಟ ರೂ. ವೆಚ್ಚದಲ್ಲಿ ಹೊಸ ನ್ಯಾಯಾಲಯ ಸಂಕೀರ್ಣ ನಿರ್ಮಾಣ.

ಬಳ್ಳಾರಿ

  • ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸ್ಕಿಲ್‌ ಅಕಾಡೆಮಿ ಸ್ಥಾಪನೆ.
  • ಬಳ್ಳಾರಿ, ಕಲಬುರಗಿ, ತಳಕಲ್‌ ಮತ್ತು ಮೈಸೂರಿನ ವರುಣಾದಲ್ಲಿ 350 ಕೋಟಿ ವೆಚ್ಚದಲ್ಲಿ ಜಿ.ಟಿ.ಟಿ.ಸಿ. ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರಗಳ ಸ್ಥಾಪನೆ.
  • ಬಳ್ಳಾರಿ, ಚಿತ್ರದುರ್ಗ, ರೋಣದಲ್ಲಿ ಒಟ್ಟು 150 ಕೋಟಿ ರೂ. ವೆಚ್ಚದಲ್ಲಿ ಹೊಸ ಜಿ.ಟಿ.ಟಿ.ಸಿಗಳ ಪ್ರಾರಂಭ.

ಬೆಳಗಾವಿ

  • ಬೆಳಗಾವಿ ನಗರ ಪರಿಮಿತಿಯಲ್ಲಿ 450 ಕೋಟ ರೂ. ವೆಚ್ಚದಲ್ಲಿ 4.50 ಕಿ.ಮೀ ಉದ್ದದ ಮೇಲ್ಲೇತುವೆ (Elevated Corridor)ನಿರ್ಮಾಣಕ್ಕೆ ಕ್ರಮ.

ಉತ್ತರ ಕನ್ನಡ

  • ಉತ್ತರ ಕನ್ನಡ ಜಿಲ್ಲೆಯ ಕೇಣಿಯಲ್ಲಿ ಹೊಸ ಆಳಸಮುದ್ರ ಸರ್ವಋತು ಬಂದರು, ಪಾವಿನಕುರ್ವೆಯಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಎರಡನೇ ಬೃಹತ್‌ ಬಂದರಿನ ಅಭಿವೃದ್ಧಿಗೆ ಕ್ರಮ.
  • ಕಾರವಾರ, ಮಲ್ಪೆ ಮತ್ತು ಹಳೇ ಮಂಗಳೂರು ಬಂದರುಗಳಲ್ಲಿ ನಾಲ್ಕು ಬರ್ತ್‌ಗಳ ಅಭಿವೃದ್ಧಿ

ಚಿತ್ರದುರ್ಗ

ಹಿರೇಕೆರೂರು ತಾಲ್ಲೂಕಿನಲ್ಲಿ ವಚನಕಾರ ಸರ್ವಜ್ಞನ ಸ್ಮಾರಕ ನಿರ್ಮಾಣ. ಮಾಜಿ ಮುಖ್ಯಮಂತ್ರಿ ಎಸ್‌. ಬಂಗಾರಪ್ಪ ಸ್ಮಾರಕ ನಿರ್ಮಾಣಕ್ಕೆ ಕ್ರಮ.

ಕೊಪ್ಪಳ

Anjanadri hills
  • ಕೊಪ್ಪಳ ಜಿಲ್ಲೆ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಪಡಿಸಲು 100 ಕೋಟಿ ರೂ. ಅನುದಾನ.
  • ಬಂಡೀಪುರ, ದಾಂಡೇಲಿ ಮತ್ತು ಕಬಿನಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಇಂಟರ್‌ಪ್ರಿಟೇಷನ್‌ ಸೆ೦ಟರ್‌ ನಿರ್ಮಾಣ.

ಇದನ್ನೂ ಓದಿ | Karnataka Budget 2024: ಬಜೆಟ್‌ನಲ್ಲೂ ಸಾರಿಗೆಗೆ ‘ಶಕ್ತಿ’ ನೀಡಿದ ಸಿದ್ದರಾಮಯ್ಯ; ಏನೆಲ್ಲ ಸಿಕ್ಕಿದೆ?

ಬೀದರ್‌

  • ಬೀದರ್‌ ಹಾಗೂ ವಿಜಯಪುರದಲ್ಲಿ ಕರೇಜ್‌ ಎಂದು ಪ್ರಸಿದ್ಧವಾಗಿರುವ ಪುರಾತನ ನೀರು ಸರಬರಾಜು ವ್ಯವಸ್ಥೆಯ ಪುನಶ್ಚೇತನಕ್ಕೆ 15 ಕೋಟಿ ರೂ. ನೆರವು.
  • ಬೀದರ್‌ ಜಿಲ್ಲೆಯ ಹೊನ್ನಿಕೇರಿ ಮೀಸಲು ಅರಣ್ಯ ಮತ್ತು ಇತರೆ ಜೀವವೈವಿಧ್ಯ ಪ್ರದೇಶಗಳಲ್ಲಿ ಪರಿಸರ ಪ್ರವಾಸೋದ್ಯಮ ಮತ್ತು ಸ೦ರಕ್ಷಣಾತ್ಮಕ ಕಾರ್ಯಕ್ರಮಗಳಿಗೆ 15 ಕೋಟ ರೂ. ಅನುದಾನ.
  • ಬೀದರ್‌ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಹೊಸ ಜಿಲ್ಲಾಡಳಿತ ಕಛೇರಿ ಹಾಗೂ ಅಗತ್ಯವಿರುವ ತಾಲ್ಲೂಕುಗಳಲ್ಲಿ ತಾಲ್ಲೂಕಾ ಆಡಳಿತ ಕಚೇರಿ ನಿರ್ಮಾಣ.

ಇದನ್ನೂ ಓದಿ | Karnataka Budget 2024 : 10 ಪ್ರವಾಸಿ ತಾಣಗಳಲ್ಲಿ ಕೇಬಲ್‌ ಕಾರ್‌, ಅಂಜನಾದ್ರಿ ಬೆಟ್ಟಕ್ಕೆ ಹೊಸ ಲುಕ್‌

Continue Reading

ಬಜೆಟ್ 2024

Karnataka Budget 2024 : ಪರಿಶಿಷ್ಟ ಪಂಗಡದ 5 ಸಾವಿರ ಯುವಕರಿಗೆ ಡ್ರೋನ್ ಟ್ರೈನಿಂಗ್​​

Karnataka Budget 2024 : ಡ್ರೋನ್ ತರಬೇತಿ ನೀಡುವ ಮೂಲಕ ಪರಿಶಿಷ್ಟ ಪಂಗಡದ ಯುವಕರಿಗೆ ಔದ್ಯೋಗಿಕ ಅವಕಾಶಗಳನ್ನು ಸೃಷ್ಟಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

VISTARANEWS.COM


on

Drone Training
Koo

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯಡಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಯುವಕರಿಗೆ ಅನೇಕ ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಬಜೆಟ್​ನಲ್ಲಿ (Karnataka Budget 2024) ಪ್ರಕಟಿಸಿದ್ದಾರೆ. ಪ್ರಮುಖವಾಗಿ ಉದ್ಯೋಗಕ್ಕೆ ನೆರವಾಗುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಸಿದ್ದರಾಮಯ್ಯ ಅವರು ಪ್ರಕಟಿಸಿದ್ದಾರೆ. ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ 5,000 ಯುವಕ/ಯುವತಿಯರಿಗೆ ಡ್ರೋನ್ ತರಬೇತಿಯನ್ನು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಕರ್ನಾಟಕ ಅನುಸೂಚಿತ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯಡಿಯಲ್ಲಿ 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಗೆ 27,674 ಕೋಟಿ ರೂ. ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಗೆ 11,44೭ ಕೋಟಿ ರೂ. ಗಳು ಸೇರಿದಂತೆ ಒಟ್ಟಾರೆ 39,12೧ ಕೋಟಿ ರೂ. ಗಳ ಅನುದಾನವನ್ನು ಒದಗಿಸಲಾಗಿದೆ ಎಂದು ಸಿದ್ದರಾಮಯ್ಯ ಅವರು ಬಜೆಟ್​ನಲ್ಲಿ ಹೇಳಿದರು.

ವೈಜ್ಞಾನಿಕವಾಗಿ ಹಾಗೂ ಸಂವಿಧಾನಬದ್ಧವಾಗಿ ಪರಿಶಿಷ್ಟ ಜಾತಿಯ ಮೀಸಲು ವರ್ಗೀಕರಣ ಮಾಡುವುದು ಸರ್ಕಾರದ ಧ್ಯೇಯವಾಗಿದೆ. ಈ ಕುರಿತು ಭಾರತದ ಸಂವಿಧಾನದ ಅನುಚ್ಛೇದ 341ಕ್ಕೆ ಅಗತ್ಯ ತಿದ್ದುಪಡಿ ತಂದು, ಹೊಸದಾಗಿ ಕ್ಲಾಸ್​ -3 ಅನ್ನು ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂದು ಹೇಳಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ವಸತಿ ಶಾಲೆಗಳು ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಒಟ್ಟು 2,710 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂಬುದಾಗಿ ಬಜೆಟ್ ಭಾಷಣದಲ್ಲಿ ಸಿಎಂ ಹೇಳಿದರು.

ಇದನ್ನೂ ಓದಿ : Karnataka Budget 2024: ಇದೊಂದು ಅಭಿವೃದ್ಧಿ ಪರ ಬಜೆಟ್: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಕ್ರೈಸ್‌ ಯೋಜನೆಯಡಿ 23 ವಸತಿ ಶಾಲೆಗಳ ಕಟ್ಟಡ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳಿಗೆ ಸೇರಿದ ಒಟ್ಟು 29 ವಸತಿ ಶಾಲಾ ಸಂಕೀರ್ಣಗಳ ನಿರ್ಮಾಣ ಕಾಮಗಾರಿಗಳನ್ನು 638 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲಾಗುವುದು| ವಸತಿ ಶಾಲೆಗಳು ಇಲ್ಲದಿರುವ ಹೋಬಳಿಗಳ ಪೈಕಿ 20 ಹೋಬಳಿಗಳಲ್ಲಿ ಹೊಸ ವಸತಿ ಶಾಲೆಗಳನ್ನು ಕ್ರೈಸ್‌ ಸಂಸ್ಥೆಯ ಮೂಲಕ ಪ್ರಾರಂಭಿಸಲಾಗುವುದು ಎಂದು ನುಡಿದರು.

2023-24ನೇ ಸಾಲಿನಲ್ಲಿ 23 ವಿದ್ಯಾರ್ಥಿನಿಲಯಗಳ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗಿದೆ. ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿರುವ 18 ವಿದ್ಯಾರ್ಥಿನಿಲಯಗಳಿಗೆ ಸ್ವಂತ ಕಟ್ಟಡಗಳನ್ನು 2024-25ನೇ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆಯ ಮುಖಾಂತರ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಹೇಳಿದರು.

ಇದನ್ನೂ ಓದಿ : Karnataka Budget 2024: ಇದೊಂದು ಅಭಿವೃದ್ಧಿ ಪರ ಬಜೆಟ್: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಶೈಕ್ಷಣಿಕವಾಗಿ ಪ್ರಮುಖ ನಗರಗಳಲ್ಲಿ ವಸತಿನಿಲಯಗಳಿಗೆ ಬೇಡಿಕೆ ಹೆಚ್ಚುತ್ತಿರುವ ಕಾರಣ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 31 ಹೊಸ ಮೆಟ್ರಿಕ್‌ ನಂತರದ ವಸತಿನಿಲಯಗಳನ್ನು ಮಂಜೂರು ಮಾಡಲಾಗುವುದು. ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮೆಟ್ರಿಕ್‌ ಪೂರ್ವ, ಮೆಟ್ರಿಕ್‌ ನಂತರದ ವಸತಿ ನಿಲಯಗಳು, ಆಶ್ರಮ ಶಾಲೆಗಳು ಮತ್ತು ವಸತಿ ಶಾಲೆಗಳ ವಿದ್ಯಾರ್ಥಿಗಳ ಭೋಜನ ವೆಚ್ಚವನ್ನು ಪ್ರತಿ ವಿದ್ಯಾರ್ಥಿಗೆ 100 ರೂ. ನಂತೆ ಹೆಚ್ಚಿಸಲಾಗುವುದು ಎಂದು ಹೇಳಿದರು.

35 ಕೋಟಿ ಕಾರ್ಪಸ್​ ಫಂಡ್​

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಜನರಿಗೆ ದುಬಾರಿ ವೆಚ್ಚದ ಚಿಕಿತ್ಸಾ ಸೇವೆಗಳನ್ನು ಒದಗಿಸಲು 35 ಕೋಟಿ ರೂ.ಗಳ ಕಾರ್ಪಸ್​​ ಫಂಡ್​ ಸ್ಥಾಪಿಸಲಾಗುವುದು. ಈ ನಿಧಿಯ ಬಡ್ಡಿ ಆಕರಣೆಯನ್ನು ರೋಗಿಗಳ ಚಿಕಿತ್ಸೆಯ ಅಗತ್ಯಕ್ಕನುಗುಣವಾಗಿ ನೀಡಲಾಗುವುದು ಎಂದು ಹೇಳಿದರು.

ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಗಮಗಳಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 1,750 ಕೋಟಿ ರೂ.ಗಳ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು.

ಪರಿಶಿಷ್ಟ ಪಂಗಡಗಳ ಕಲ್ಯಾಣ

  1. ಪರಿಶಿಷ್ಟ ವರ್ಗಗಳ ಸರ್ವತೋಮುಖ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಲಾಗಿದೆ. ಈ ಸಚಿವಾಲಯಕ್ಕೆ ಅಗತ್ಯ ಹುದ್ದೆಗಳನ್ನು ಸೃಜಿಸಿ 2023-24ನೇ ಸಾಲಿನಿಂದ ಕಾರ್ಯಾರಂಭ ಮಾಡಲಾಗಿದೆ ಎಂದು ಬಜೆಟ್​ನಲ್ಲಿ ಘೋಷಿಸಿದರು.
  2. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಶ್ರಮ ಶಾಲೆಗಳ ಹೆಸರನ್ನು ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳು ಎಂದು ಮರು ನಾಮಕರಣ ಮಾಡಲಾಗುವುದು. ಈ ಶಾಲೆಗಳ ಉನ್ನತೀಕರಣಕ್ಕೆ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.
  3. ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್‌ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ, ಯಾವುದೇ ಫೆಲೋಶಿಪ್‌ ಪಡೆಯದಿದ್ದಲ್ಲಿ ಮಾಸಿಕ 25,000 ರೂ.ಗಳಂತೆ ಶಿಷ್ಯವೇತನ ನೀಡಲಾಗುವುದು ಎಂದು ಸಿಎಂ ಬಜೆಟ್ ವೇಳೆ ಘೋಷಿಸಿದ್ದಾರೆ.
Continue Reading
Advertisement
Mureder Case
ಪ್ರಮುಖ ಸುದ್ದಿ45 mins ago

Murder Case : ಕೊಡಗಿನಲ್ಲಿ ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯ ರುಂಡ ಕತ್ತರಿಸಿ ಕೊಂದ ಪ್ರೇಮಿ

Akshaya Tritiya Bala Rama Silver Idol gift from Sri Sai Gold Palace in bengaluru
ಬೆಂಗಳೂರು2 hours ago

Sri Sai Gold Palace: ಅಕ್ಷಯ ತೃತೀಯ; ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಿಂದ ಶ್ರೀ ಬಾಲ ರಾಮನ ಬೆಳ್ಳಿ ವಿಗ್ರಹ ಉಡುಗೊರೆ

IPL 2024
ಪ್ರಮುಖ ಸುದ್ದಿ3 hours ago

IPL 2024 : ಆರ್​ಸಿಬಿಗೆ ಐದನೇ ವಿಜಯ, ಪಂಜಾಬ್​ ವಿರುದ್ಧ 60 ರನ್ ಭರ್ಜರಿ ಗೆಲುವು

Padma Awards 2024
ಪ್ರಮುಖ ಸುದ್ದಿ4 hours ago

Padma Awards 2024 : ವೈಜಯಂತಿಮಾಲಾ, ಚಿರಂಜೀವಿ ಸೇರಿದಂತೆ ಹಲವು ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ

Prajwal Revanna Case
ಪ್ರಮುಖ ಸುದ್ದಿ4 hours ago

Prajwal Revanna Case : ಬಿಜೆಪಿ ಮುಖಂಡ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಕೇಸ್​ ದಾಖಲು

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ5 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

T20 World Cup 2024
ಪ್ರಮುಖ ಸುದ್ದಿ5 hours ago

T20 World Cup : ವಿಶ್ವ ಕಪ್​ಗೆ ತಂಡ ಪ್ರಕಟಿಸಿದ ಶ್ರೀಲಂಕಾ, ಸಿಎಸ್​​ಕೆ ಆಟಗಾರನಿಗೂ ಚಾನ್ಸ್​​

ಉತ್ತರ ಕನ್ನಡ5 hours ago

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾರ್ವಭೌಮ ಗುರುಕುಲಕ್ಕೆ ಶೇ.100 ಫಲಿತಾಂಶ

Yallapur Vishwadarshana Group of institutions performed well in SSLC Result 2024
ಉತ್ತರ ಕನ್ನಡ6 hours ago

SSLC Result 2024: ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಮೂಹ ಪ್ರೌಢಶಾಲೆಗಳ ಉತ್ತಮ ಸಾಧನೆ

women's Cricket team
ಕ್ರೀಡೆ6 hours ago

Womens Cricket Team : ಬಾಂಗ್ಲಾ ವಿರುದ್ಧ 5-0 ಕ್ಲೀನ್​ ಸ್ವೀಪ್ ಸಾಧನೆ ಮಾಡಿದ ಭಾರತದ ವನಿತೆಯರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ5 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ6 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ7 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ14 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ14 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ14 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು15 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ15 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು16 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

ಟ್ರೆಂಡಿಂಗ್‌