Dina Bhavishya : ಈ ರಾಶಿಯವರು ಸೀಕ್ರೆಟ್‌ ವಿಷ್ಯವನ್ನು ರಿವೀಲ್‌ ಮಾಡಿದ್ರೆ ಅಪಾಯ ಗ್ಯಾರಂಟಿ! - Vistara News

ಭವಿಷ್ಯ

Dina Bhavishya : ಈ ರಾಶಿಯವರು ಸೀಕ್ರೆಟ್‌ ವಿಷ್ಯವನ್ನು ರಿವೀಲ್‌ ಮಾಡಿದ್ರೆ ಅಪಾಯ ಗ್ಯಾರಂಟಿ!

Dina Bhavishya : ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷದ ಅಷ್ಟಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

read your daily horoscope predictions for february 17 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಶನಿವಾರವೂ ಮಿಥುನ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಸಿಂಹ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರಿಗೆ ಆತುರದಲ್ಲಿ ಆಡಿದ ಮಾತು ಅಪಾಯ ತಂದಿತು ಎಚ್ಚರಿಕೆ ಇರಲಿ. ವೃಷಭ ರಾಶಿಯವರು ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ತುಲಾ ರಾಶಿಯವರು ಕುಟುಂಬ ಸದಸ್ಯರಿಂದ ರಹಸ್ಯ ಸುದ್ದಿಯೊಂದು ಅಚ್ಚರಿ ತರುವುದು. ಕುಂಭ ರಾಶಿಯವರು ಗೌಪ್ಯ ವಿಷಯಗಳನ್ನು ಹಂಚಿಕೊಂಡು ಅಪಾಯವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಜತೆಗೆ ಕುಟುಂಬದ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (17-02-2024)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ
ತಿಥಿ: ಅಷ್ಟಮಿ 08:15 ವಾರ: ಶನಿವಾರ
ನಕ್ಷತ್ರ: ಕೃತ್ತಿಕಾ 08:45 ಯೋಗ: ಇಂದ್ರ 13:42
ಕರಣ: ಭವ 08:15 ಅಮೃತ ಕಾಲ: ಬೆಳಗ್ಗೆ 06:06 ರಿಂದ 07:44 ರವರೆಗೆ
ದಿನದ ವಿಶೇಷ: ಮೈಸೂರು ರಾಜರಾಜೇಶ್ವರಿ ಪ್ರತಿಷ್ಠಾಪನ ಉತ್ಸವ, ಭೀಷ್ಮಾಷ್ಟಮಿ

ಸೂರ್ಯೋದಯ : 6:42  ಸೂರ್ಯಾಸ್ತ : 06:26

ರಾಹುಕಾಲ : ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಭಾವನಾತ್ಮಕವಾಗಿ ನೀವಿಂದು ಸ್ಥಿರವಾಗಿರುವುದಿಲ್ಲ. ಆತುರದಲ್ಲಿ ಆಡಿದ ಮಾತು ಅಪಾಯ ತಂದಿತು ಎಚ್ಚರಿಕೆ. ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಪ್ರತಿಫಲ ಸಿಗುವುದರ ಜತೆಗೆ ಪುರಸ್ಕಾರ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಕುಟುಂಬದ ಸದಸ್ಯರಿಗೆ, ಸಂಬಂಧಿಗಳಿಂದ ಸುದ್ದಿ ಬರುವುದು. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ ಹೀಗಾಗಿ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಮನೆಯಲ್ಲಿ ಶುಭ ಕಾರ್ಯಗಳ ಕುರಿತು ಚರ್ಚೆ ಮಾಡುವಿರಿ. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಸಕಾರಾತ್ಮಕ ಆಲೋಚನೆಗಳು ಪುಷ್ಟಿ ನೀಡುವಂತೆ ಮಾಡುವುದು. ಆತುರದ ತಿರ್ಮಾನ, ಮಾತುಗಳು ಅಪಾಯ ತಂದಿತು ಎಚ್ಚರಿಕೆ ಇರಲಿ. ಆರೋಗ್ಯ ಕೊಂಚ ಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿಯಾಗಲಿದೆ. ಮನೆಯವರ ಧೈರ್ಯದ ಮಾತುಗಳು ಮನಸ್ಸಿಗೆ ಸಂತೋಷ ನೆಮ್ಮದಿ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಅತಿಯಾದ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಸೂಕ್ತ ವ್ಯಕ್ತಿಗಳ ಬೆಂಬಲದಿಂದ ಹೂಡಿಕೆ ವ್ಯವಹಾರದಲ್ಲಿ ತೊಡುಗುವ ಸಾಧ್ಯತೆ ಇದೆ. ಪ್ರೀತಿ-ಪಾತ್ರರೊಂದಿಗೆ ಸಮಯ ಕಳೆಯುವಿರಿ. ಸಂಗಾತಿ ನಿಮ್ಮ ಮನಸ್ಸಿಗೆ ಮುದ ನೀಡುವಳು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ವರ್ತನೆಯಲ್ಲಿ ಬದಲಾವಣೆ ಇರಲಿದೆ. ಹಿರಿಯರ ಆಶೀರ್ವಾದದ ಬಲದಿಂದ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಭೇಟಿ ಮಾಡಿ ಸಾಂತ್ವನ ಹೇಳಬಹುದು. ಧೀಡಿರ್ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಒತ್ತಡದ ಕಾರ್ಯ ಆಯಾಸವನ್ನುಂಟು ಮಾಡುವುದು. ಕುಟುಂಬದ ಸದಸ್ಯರ ಅವಶ್ಯಕತೆಗಾಗಿ ಅನಗತ್ಯ ಖರ್ಚು ಮಾಡುವಿರಿ. ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಇದರ ಮಧ್ಯೆ ಕುಟುಂಬದ ಸದಸ್ಯರು ನಿಮ್ಮ ಮುಂದೆ ಸಮಸ್ಯೆ ಹಂಚಿಕೊಳ್ಳುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಕೈಗೊಂಡ ಧಾರ್ಮಿಕ ಕಾರ್ಯಗಳು ಮನಸ್ಸಿಗೆ ಸಮಾಧಾನ ತರುವುದು. ಅಗತ್ಯಕ್ಕೆ ತಕ್ಕಂತೆ ಖರ್ಚು ಇರಲಿದೆ. ಕುಟುಂಬ ಸದಸ್ಯರಿಂದ ರಹಸ್ಯ ಸುದ್ದಿಯೊಂದು ಅಚ್ಚರಿ ತರುವುದು, ಕೋಪದಲ್ಲಿ ಮಾತಿಗೆ ಇಳಿಯುವುದರಿಂದ ಕಠಿಣ ಪರಿಸ್ಥಿತಿ ನಿರ್ಮಾಣ ಮಾಡುವುದು. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಕಠಿಣ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಲು ಸಿದ್ಧರಾಗುವಿರಿ. ಭಾವನಾತ್ಮಕ ನಿರ್ಧಾರ ಕೈಗೊಳ್ಳುವ ಭರದಲ್ಲಿ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವುದು ಬೇಡ. ಅಜಾಗೃತ ಕಾರ್ಯ ನಿಮಗೆ ಆರ್ಥಿಕ ನಷ್ಟ ಉಂಟು ಮಾಡಬಹುದು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕುಟುಂಬದ ಸದಸ್ಯರ ವರ್ತನೆಯಿಂದ ಕೋಪಗೊಳ್ಳುವ ಸಾಧ್ಯತೆ ಇದೆ. ಸಂಬಂಧಿಕರಿಂದ ವ್ಯಾಜ್ಯ ಉಂಟಾಗುವ ಸಾಧ್ಯತೆ ಇದೆ. ಆತುರದ ಮಾತುಗಳು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಜೀವನದಲ್ಲಿ ಹೊಸ ಪಾಠ ಕಲಿಯುವಿರಿ. ಕೌಟುಂಬಿಕ ಒತ್ತಡ ನಿಮ್ಮ ಮನಸ್ಸಿಗೆ ನೋವುಂಟು ಮಾಡುವ ಸಾಧ್ಯತೆ ಇದೆ. ಕೋಪದಲ್ಲಿ ಆಡಿದ ಮಾತುಗಳ ಮನವರಿಕೆ ಆಗುವುದು. ಆರೋಗ್ಯದ ಕಡೆಗೆ ಗಮನ ಹರಿಸಿ. ವೈದ್ಯರ ಸಲಹೆ ಪಡೆಯುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ,ಕೀರ್ತಿ ಸಿಗುವುದು. ದಿನದ ಮಟ್ಟಿಗೆ ಅನಗತ್ಯವಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳನ್ನು ಹಂಚಿಕೊಂಡು ಅಪಾಯವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ಸಮಾಧಾನದ ಮಾತುಗಳು ಸೂಕ್ತ ವ್ಯಕ್ತಿಗಳಿಂದ ಸಿಗಲಿವೆ. ನಿಮ್ಮ ವರ್ತನೆಯಿಂದ ಕುಟುಂಬದ ಸದಸ್ಯರು ಕೋಪಗೊಳ್ಳವ ಸಾಧ್ಯತೆ ಇದೆ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅವಶ್ಯಕ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಧಾರ್ಮಿಕ

Importance Of Tilaka: ಹಣೆಯ ಮೇಲೆ ತಿಲಕ ಇಟ್ಟರೆ ಏನೇನು ಪ್ರಯೋಜನ? ಇದಕ್ಕಿದೆ ವೈಜ್ಞಾನಿಕ ಕಾರಣ!

ಕೇವಲ ಶಾಸ್ತ್ರಕ್ಕಾಗಿ, ನಂಬಿಕೆಗಾಗಿ ಹಣೆಗೆ ಇಡುವ ತಿಲಕ ಇಡುವುದರಿಂದ ಹಲವು ಪ್ರಯೋಜನಗಳೂ ಇವೆ ಎಂಬುದು ಹೆಚ್ಚಿನವರಿಗೆ ತಿಳಿದಿರಲಿಕ್ಕಿಲ್ಲ. ಧಾರ್ಮಿಕ ಪ್ರಾಮುಖ್ಯತೆ (Importance Of Tilaka) ಹೊಂದಿರುವ ತಿಲಕಕ್ಕೆ ಸಂಬಂಧಿಸಿ ಸರಳ ಮತ್ತು ಪರಿಣಾಮಕಾರಿ ಕ್ರಮಗಳನ್ನು ಅಳವಡಿಸಿಕೊಂಡರೆ, ದುರದೃಷ್ಟವನ್ನು ಅದೃಷ್ಟವಾಗಿ ಪರಿವರ್ತಿಸಬಹುದು. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

Importance Of Tilaka
Koo

ಹಿಂದೂ (hindu) ಧರ್ಮದಲ್ಲಿ (Religious) ಹಣೆಗೆ ಸಾಂಕೇತಿಕವಾಗಿಯಾದರೂ ತಿಲಕವಿಟ್ಟು ಮನೆಯಿಂದ ಹೊರಡುವವರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ತಿಲಕ (Importance Of Tilaka) ಶುಭ ಸಂಕೇತ. ಪ್ರತಿಯೊಂದು ಕೆಲಸದಲ್ಲೂ (work) ಯಶಸ್ಸು ಸಿಗಲಿ ಎನ್ನುವ ಭಾವನೆಯ ಪ್ರತೀಕ. ತಿಲಕ ಇಡುವುದಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಈ ಒಂದು ಸಂಪ್ರದಾಯ ಸಂಪೂರ್ಣ ಗುರುತನ್ನು ಹೇಳುತ್ತದೆ.

ಕೇವಲ ಶಾಸ್ತ್ರಕ್ಕಾಗಿ, ನಂಬಿಕೆಗಾಗಿ ಹಣೆಗೆ ಇಡುವ ತಿಲಕ ಇಡುವುದರಿಂದ ಹಲವು ಪ್ರಯೋಜನಗಳೂ (benifits) ಇವೆ ಎಂಬುದು ಹೆಚ್ಚಿನವರಿಗೆ ತಿಳಿದಿರಲಿಕ್ಕಿಲ್ಲ. ಧಾರ್ಮಿಕ ಪ್ರಾಮುಖ್ಯತೆ (religious importance) ಹೊಂದಿರುವ ತಿಲಕಕ್ಕೆ ಸಂಬಂಧಿಸಿ ಸರಳ ಮತ್ತು ಪರಿಣಾಮಕಾರಿ ಕ್ರಮಗಳನ್ನು ಅಳವಡಿಸಿಕೊಂಡರೆ, ದುರದೃಷ್ಟವನ್ನು ಅದೃಷ್ಟವಾಗಿ ಪರಿವರ್ತಿಸಬಹುದು ಎನ್ನಲಾಗುತ್ತದೆ.

ನಮ್ಮ ದೇಹದಲ್ಲಿ ಏಳು ಸೂಕ್ಷ್ಮ ಶಕ್ತಿ ಕೇಂದ್ರಗಳಿವೆ. ಅವುಗಳು ಅಪಾರವಾದ ಶಕ್ತಿ ನಿಕ್ಷೇಪಗಳನ್ನು ಹೊಂದಿವೆ. ಇವುಗಳನ್ನು ಚಕ್ರ (chakra) ಎಂದು ಕರೆಯಲಾಗುತ್ತದೆ. ಮೆದುಳಿನ ಮಧ್ಯದಲ್ಲಿ ಆತ್ಮೀಯ ಚಕ್ರವಿದೆ. ಈ ಚಕ್ರದ ಮೇಲೆ ನಮ್ಮ ದೇಹದ ಮೂರು ನರಗಳಾದ ಅಡ, ಪಿಂಗಲ, ಶುಷನೂತ ಈ ಮೂರು ಸಂಧಿಸುತ್ತವೆ. ಆದ್ದರಿಂದಲೇ ಇದನ್ನು ನಮ್ಮ ದೇಹದಲ್ಲಿ ಪ್ರಮುಖ ಸ್ಥಳವೆಂದು ಪರಿಗಣಿಸಲಾಗಿದೆ. ಅದಕ್ಕಾಗಿಯೇ ಹಣೆಯ ಮಧ್ಯದಲ್ಲಿ ತಿಲಕವನ್ನು ಇಡಲಾಗುತ್ತದೆ. ಇದು ನಮ್ಮ ಮೆದುಳನ್ನು ಶಾಂತವಾಗಿರಿಸುತ್ತದೆ.


ಭಾರತೀಯ ಸಂಸ್ಕೃತಿಯ ಪ್ರಕಾರ ಹಣೆಯ ಮೇಲೆ ತಿಲಕವನ್ನು ಇಡುವುದಕ್ಕೆ ವೈದಿಕ ಮತ್ತು ವೈಜ್ಞಾನಿಕ ಆಧಾರಗಳಿವೆ. ವೈದಿಕ ಆಧಾರದ ಮೇಲೆ, ತಿಲಕವನ್ನು ಅನ್ವಯಿಸುವುದು ಗೌರವದ ಸಂಕೇತವಾಗಿದೆ.

ದೇವಸ್ಥಾನದಲ್ಲಿ ಆರತಿ, ಪೂಜೆ ಇತ್ಯಾದಿ ಸಮಯದಲ್ಲೂ ತಿಲಕವನ್ನು ಇಡಲಾಗುತ್ತದೆ. ಭಾರತೀಯ ಸಂಸ್ಕೃತಿಯಲ್ಲಿ ತಿಲಕ ಇಡದೇ ಮಾಡುವ ಯಾವುದೇ ಕೆಲಸ ಅಪೂರ್ಣವೆಂದು ಪರಿಗಣಿಸಲಾಗುತ್ತದೆ. ತಿಲಕವನ್ನು ಅನ್ವಯಿಸುವ ವೈಜ್ಞಾನಿಕ ಕಾರಣವೆಂದರೆ ತಿಲಕವನ್ನು ಅನ್ವಯಿಸುವುದರಿಂದ ಮೆದುಳಿನ ಮೇಲಿನ ಹೊರೆ ಕಡಿಮೆಯಾಗುತ್ತದೆ ಮತ್ತು ಮನಸ್ಸು ಶಾಂತವಾಗುತ್ತದೆ. ಮೆದುಳಿನಲ್ಲಿ ಯಾವುದೇ ನೋವು ಇರುವುದಿಲ್ಲ ಮತ್ತು ನೆನಪಿನ ಶಕ್ತಿ ಹೆಚ್ಚುತ್ತದೆ.

ತಿಲಕದ ಧಾರ್ಮಿಕ ಮಹತ್ವ

ಸನಾತನ ಸಂಪ್ರದಾಯದಲ್ಲಿ ಪೂಜೆಯ ಸಮಯದಲ್ಲಿ ಬಳಸುವ ತಿಲಕವು ಧಾರ್ಮಿಕ- ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ. ಪ್ರತಿಯೊಬ್ಬ ವ್ಯಕ್ತಿಯ ಹಣೆಯ ಮೇಲಿನ ತಿಲಕವನ್ನು ನೋಡುವ ಮೂಲಕ ನೀವು ಅವರ ಸಂಪೂರ್ಣ ಧಾರ್ಮಿಕ ಸಂಪ್ರದಾಯವನ್ನು ತಿಳಿಯಬಹುದು. ಶೈವರು, ವೈಷ್ಣವರು ವಿವಿಧ ರೀತಿಯ ತಿಲಕವನ್ನು ಅನ್ವಯಿಸುತ್ತಾರೆ.

ಈ ತಿಲಕವನ್ನು ಧಾರ್ಮಿಕ ಪೂಜೆಗೆ ಮಾತ್ರವಲ್ಲ, ಒಂಬತ್ತು ಗ್ರಹಗಳ ಮಂಗಳಕರವಾಗಿಯೂ ಬಳಸಲಾಗುತ್ತದೆ.
ದೇವಾಲಯದಲ್ಲಿ ಪೂಜೆಯ ಅನಂತರ ತಿಲಕವನ್ನು ಅನ್ವಯಿಸುವುದರಿಂದ ದೇವರ ಆಶೀರ್ವಾದ ಸಿಗುತ್ತದೆ ಎಂದು ನಂಬಲಾಗುತ್ತದೆ. ಮಾನವನ ಹಣೆಯ ಮಧ್ಯದಲ್ಲಿ ವಿಷ್ಣುವೇ ನೆಲೆಸಿದ್ದಾನೆ ಎಂದು ಹೇಳಲಾಗುತ್ತದೆ. ಆದ್ದರಿಂದ, ಈ ಸ್ಥಳದಲ್ಲಿ ತಿಲಕವನ್ನು ಅನ್ವಯಿಸಲಾಗುತ್ತದೆ.

ಹಣೆಯ ಮಧ್ಯ ಭಾಗದಲ್ಲಿ ತಿಲಕವನ್ನು ಹಚ್ಚುವುದರಿಂದ ಇತರರು ನಿಮ್ಮ ಕಡೆಗೆ ಆಕರ್ಷಿತರಾಗುತ್ತಾರೆ. ಯಾಕೆಂದರೆ ನಾವು ಇನ್ನೊಬ್ಬ ವ್ಯಕ್ತಿಯನ್ನು ನೋಡಿದಾಗ ನಮ್ಮ ಮೊದಲ ದೃಷ್ಟಿ ಅವನ ಮುಖದ ಮೇಲೆ ಹೋಗುತ್ತದೆ. ಹಣೆಯ ಮಧ್ಯಭಾಗವನ್ನು ‘ಆಗ್ಯ ಚಕ್ರ’ ಎನ್ನುತ್ತಾರೆ. ಈ ಚಕ್ರವನ್ನು ಗುರು ಚಕ್ರ ಎಂದೂ ಕರೆಯುತ್ತಾರೆ. ಯಾಕೆಂದರೆ ಇದನ್ನು ಗುರುವಿನ ಪ್ರತಿನಿಧಿ ಎಂದು ಪರಿಗಣಿಸಲಾಗಿದೆ. ದೇಹದ ಈ ಭಾಗಕ್ಕೆ ತಿಲಕವನ್ನು ಹಚ್ಚಿದಾಗ ಇಲ್ಲಿರುವ ಪೀನಲ್ ಗ್ರಂಥಿಯು ಶಕ್ತಿಯುತವಾಗುತ್ತದೆ ಮತ್ತು ಮೆದುಳಿನ ಒಳಗಿನಿಂದ ಒಂದು ರೀತಿಯ ಬೆಳಕು ಉಂಟಾಗುತ್ತದೆ. ಅದು ನಮ್ಮ ಮನಸ್ಸನ್ನು ಶಾಂತಗೊಳಿಸುತ್ತದೆ ಮತ್ತು ನಮ್ಮೊಳಗೆ ಏಕಾಗ್ರತೆಯನ್ನು ತರುತ್ತದೆ.

ಪ್ರಯೋಜನಗಳು ಏನೇನು?

ತಿಲಕದಿಂದ ಅನೇಕ ಪ್ರಯೋಜನಗಳಿವೆ. ಹಣೆಯ ಮೇಲೆ ತಿಲಕವನ್ನು ಹಚ್ಚುವುದರಿಂದ ವ್ಯಕ್ತಿಯ ವ್ಯಕ್ತಿತ್ವವು ಪ್ರಭಾವಶಾಲಿಯಾಗುತ್ತದೆ. ಅದು ವ್ಯಕ್ತಿಯ ಮುಖದ ಮೇಲೆ ಹೊಳಪನ್ನು ಹೆಚ್ಚಿಸುತ್ತದೆ. ತಿಲಕದಿಂದ ವ್ಯಕ್ತಿಯ ಪಾಪಗಳು ನಾಶವಾಗುತ್ತವೆ ಎಂದು ನಂಬಲಾಗಿದೆ. ಅಷ್ಟೇ ಅಲ್ಲ, ಹಣೆಯ ಮೇಲೆ ಹಚ್ಚಿದ ತಿಲಕವು ಅನೇಕ ರೀತಿಯ ಗ್ರಹಗಳನ್ನು ಶಾಂತಗೊಳಿಸುತ್ತದೆ. ಇದರಿಂದಾಗಿ ಅನೇಕ ಬಾರಿ ತೊಂದರೆಗಳಿಂದ ನಮಗೆ ರಕ್ಷಣೆ ದೊರೆಯುತ್ತದೆ ಎನ್ನುತ್ತಾರೆ ಜ್ಯೋತಿಷಿಗಳು.


ವೈಜ್ಞಾನಿಕ ಪ್ರಾಮುಖ್ಯತೆ

ವಿಜ್ಞಾನಿಗಳ ಪ್ರಕಾರ ಹಣೆಯ ಮೇಲೆ ತಿಲಕವನ್ನು ಹಚ್ಚುವುದರಿಂದ ನಮ್ಮಲ್ಲಿ ಧನಾತ್ಮಕ ಚಿಂತನೆ ಉಂಟಾಗುತ್ತದೆ. ಸಿರೊಟೋನಿನ್ ಮತ್ತು ಬೀಟಾ ಎಂಡಾರ್ಫಿನ್ ಸ್ರವಿಸುವಿಕೆಯು ಸಮತೋಲಿತ ರೀತಿಯಲ್ಲಿ ಸಂಭವಿಸುತ್ತದೆ. ಇದರಿಂದಾಗಿ ನಮ್ಮ ಮನಸ್ಸಿನಲ್ಲಿ ದುಃಖ ದೂರವಾಗುತ್ತದೆ. ದೇಹದಲ್ಲಿ ಉತ್ಸಾಹ ತುಂಬುತ್ತದೆ. ಇದರಿಂದಾಗಿ ನಮ್ಮ ಮನಸ್ಸು ಸಕಾರಾತ್ಮಕ ಕೆಲಸದಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತದೆ. ಅಷ್ಟೇ ಅಲ್ಲ ತಿಲಕವನ್ನು ಹಚ್ಚುವುದರಿಂದ ತಲೆನೋವಿನ ಸಮಸ್ಯೆಯೂ ಕಡಿಮೆಯಾಗುತ್ತದೆ. ನಮ್ಮಲ್ಲಿ ಉತ್ಸಾಹ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ.

ಹಣೆಯ ಮೇಲೆ ತಿಲಕವು ಮನಸ್ಸನ್ನು ಸ್ಥಿರ ಮತ್ತು ಶಾಂತವಾಗಿಸುತ್ತದೆ. ಮೆದುಳು ಸಂಬಂಧಿತ ಕಾಯಿಲೆಗಳಾದ ಒತ್ತಡಗಳನ್ನು ದೂರ ಮಾಡುತ್ತದೆ. ಮೆದುಳು ನಮ್ಮ ಎರಡು ಹುಬ್ಬುಗಳ ನಡುವಿನ ಸುಷುಮ್ನಾ, ಇಡಾ ಮತ್ತು ಪಿಂಗಲ ನರಗಳ ಕೇಂದ್ರವಾಗಿದೆ. ಇದನ್ನು ದೈವಿಕ ಕಣ್ಣು ಅಥವಾ ಮೂರನೇ ಕಣ್ಣಿನಂತೆ ಪರಿಗಣಿಸಲಾಗಿದೆ. ಈ ಸ್ಥಳದಲ್ಲಿ ತಿಲಕವನ್ನು ಅನ್ವಯಿಸುವುದರಿಂದ ಅಜ್ಞಾಚಕ್ರವು ಜಾಗೃತಗೊಳ್ಳುತ್ತದೆ ಮತ್ತು ವ್ಯಕ್ತಿಯ ಶಕ್ತಿಯು ಹೆಚ್ಚಾಗುತ್ತದೆ. ಹಣೆಯ ಮೇಲೆ ನಿಯಮಿತವಾಗಿ ತಿಲಕವನ್ನು ಅನ್ವಯಿಸುವುದರಿಂದ ತಂಪು, ತಾಜಾತನ ಮತ್ತು ಶಾಂತಿಯ ಭಾವನೆಯನ್ನು ನೀಡುತ್ತದೆ. ಬುದ್ಧಿ ಚುರುಕಾಗುತ್ತದೆ.

ತಿಲಕ ಮತ್ತು ಅಕ್ಷತೆ

ತಿಲಕ ಮತ್ತು ಅಕ್ಷತೆ ಶುಭ ಸಂಕೇತವಾಗಿದೆ. ಹಣೆಗೆ ತಿಲಕ ಹಚ್ಚಿದ ಬಳಿಕ ಅಕ್ಕಿಯನ್ನು ತಲೆ ಮೇಲೆ ಹಾಕಲಾಗುತ್ತ್ತದೆ. ಈ ಅಕ್ಕಿಯನ್ನು ಅಕ್ಷತ್ ಎಂದೂ ಕರೆಯುತ್ತಾರೆ ಮತ್ತು ಅದು ಎಂದಿಗೂ ನಾಶವಾಗುವುದಿಲ್ಲ ಎಂದರ್ಥ. ಅದಕ್ಕಾಗಿಯೇ ಯಾವುದೇ ಕೆಲಸದ ಯಶಸ್ಸಿಗೆ ಅಕ್ಕಿಯನ್ನು ಬಳಸಲಾಗುತ್ತದೆ. ಅದಕ್ಕಾಗಿಯೇ ಅಕ್ಕಿಯನ್ನು ತಿಲಕದ ಅನಂತರ ಬಳಸಲಾಗುತ್ತದೆ. ಅಲ್ಲದೇ ಹಿಂದೂ ಧರ್ಮದಲ್ಲಿ ಅಕ್ಕಿಯನ್ನು ಸಮೃದ್ಧಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ.

ಇದನ್ನೂ ಓದಿ: Dina Bhavishya: ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರಿಕೆ ಇರಲಿ

ತಿಲಕವನ್ನು ಎಲ್ಲಿ ಇಡುವುದು?

ಸಾಮಾನ್ಯವಾಗಿ ಯಾವುದೇ ವ್ಯಕ್ತಿಯ ಹಣೆಯ ಮೇಲೆ ತಿಲಕವನ್ನು ಅನ್ವಯಿಸಲಾಗುತ್ತದೆ ಎಂದು ನಮಗೆ ತಿಳಿದಿದೆ. ಆದರೆ ಅದು ಹಾಗಲ್ಲ. ಪೂಜೆಯಲ್ಲಿ ಬಳಸುವ ತಿಲಕವನ್ನು ತಲೆ, ಹಣೆ, ಕುತ್ತಿಗೆ, ಹೃದಯ, ಎರಡೂ ತೋಳುಗಳು, ಹೊಕ್ಕುಳ, ಬೆನ್ನು, ಎರಡೂ ಕಂಕುಳಗಳು ಸೇರಿದಂತೆ ದೇಹದ ಒಟ್ಟು 12 ಸ್ಥಳಗಳಲ್ಲಿ ಅನ್ವಯಿಸಲಾಗುತ್ತದೆ. ಆದರೆ ನಿತ್ಯ ಬಳಸುವ ತಿಲಕವನ್ನು ಹಣೆಯ ಮೇಲೆ ಮಾತ್ರ ಅನ್ವಯಿಸಬೇಕು. ಹಣೆಯ ಬಿಂದುವಿನ ಮೇಲೆ ಅಂದರೆ ಎರಡು ಹುಬ್ಬುಗಳ ನಡುವೆ ಅನ್ವಯಿಸಬಹುದು.

ತಿಲಕವನ್ನು ಹೇಗೆ ಅನ್ವಯಿಸಬೇಕು?

ನಂಬಿಕೆಗೆ ಸಂಬಂಧಿಸಿದ ಈ ತಿಲಕವನ್ನು ಅನ್ವಯಿಸಲು ಕೆಲವು ನಿಯಮಗಳನ್ನು ಮಾಡಲಾಗಿದೆ. ಅವುಗಳೆಂದರೆ ತಿಲಕವನ್ನು ಸ್ನಾನ ಮಾಡಿ ಶುದ್ಧ ವಸ್ತ್ರ ಧರಿಸಿದ ಬಳಿಕವೇ ಅನ್ವಯಿಸಬೇಕು.

Continue Reading

ಭವಿಷ್ಯ

Dina Bhavishya : ದಿನದ ಕೊನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪ; ಈ ರಾಶಿಯವರು ಮೌನವಾಗಿರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ನವಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಶನಿವಾರವೂ ತುಲಾ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಕನ್ಯಾ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಮಾನಸಿಕವಾಗಿ ನೆಮ್ಮದಿ ಇರಲಿದೆ. ಅಗತ್ಯ ವಸ್ತುಗಳ ಖರೀದಿಗಾಗಿ ಖರ್ಚು ಮಾಡುವಿರಿ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ದಿನದ ಕೊನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪವಾಗಬಹುದು. ವೃಷಭ ರಾಶಿಯವರು ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಅಧಿಕ ರಕ್ತದ ಒತ್ತಡ ಇರುವವರು ಯಾವುದೇ ಕಾರಣಕ್ಕೂ ತಾತ್ಸಾರ ಮಾಡುವುದು ಬೇಡ. ವ್ಯಾಪಾರ ವ್ಯವಹಾರಗಳಲ್ಲಿ ಲಾಭ ಸಿಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (15-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ನವಮಿ 26:31 ವಾರ: ಶನಿವಾರ
ನಕ್ಷತ್ರ: ಉತ್ತರ ಪಾಲ್ಗುಣಿ 08:12 ಯೋಗ: ವ್ಯತಿಪಾತ 20:08
ಕರಣ: ಬಾಲವ 13:18 ಅಮೃತ ಕಾಲ: ಬೆಳಗಿನ ಜಾವ 04:28 ರಿಂದ 06:16ರವರೆಗೆ
ದಿನದ ವಿಶೇಷ: ಶ್ರೀರಂಗಪಟ್ಟಣ ರಥೋತ್ಸವ

ಸೂರ್ಯೋದಯ : 05:54   ಸೂರ್ಯಾಸ್ತ : 06:47

ರಾಹುಕಾಲ: ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ
05:54 ರಿಂದ 07:30
ಯಮಗಂಡಕಾಲ: ಮಧ್ಯಾಹ್ನ 01:57
ರಿಂದ 03:34

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಮಾನಸಿಕವಾಗಿ ನೆಮ್ಮದಿ ಇರಲಿದೆ. ಅಗತ್ಯ ವಸ್ತುಗಳ ಖರೀದಿಗಾಗಿ ಖರ್ಚು ಮಾಡುವಿರಿ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ದಿನದ ಕೊನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪವಾಗಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಅಧಿಕ ರಕ್ತದ ಒತ್ತಡ ಇರುವವರು ಯಾವುದೇ ಕಾರಣಕ್ಕೂ ತಾತ್ಸಾರ ಮಾಡುವುದು ಬೇಡ. ವ್ಯಾಪಾರ ವ್ಯವಹಾರಗಳಲ್ಲಿ ಲಾಭ ಸಿಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ.
ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಆಧ್ಯಾತ್ಮಿಕ ವಿಚಾರಗಳಿಂದ, ಹಿರಿಯರಿಂದ ಮಾರ್ಗದರ್ಶನ ಪಡೆಯುವಿರಿ. ಇದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಅನಿವಾರ್ಯ ಕಾರಣಗಳಿಂದ ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕಟಕ:ಯಾವುದೇ ಆಪ್ತ ಸಂಬಂಧಿಕರ ಬೆಂಬಲದಿಂದ ನೀವು ನಿಮ್ಮ ವ್ಯಾಪಾರದಲ್ಲಿ ಉತ್ತಮವಾಗಿ ಮಾಡಬಹುದು. ಇದು ನಿಮಗೆ ಆರ್ಥಿಕ ಲಾಭವನ್ನು ನೀಡುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ:ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳಿವೆ. ಅನಾವಶ್ಯಕ ಕಾರಣಗಳಿಂದ ಖರ್ಚು ಇರಲಿದೆ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಉತ್ಸಾಹದ ದಿನವಿದು. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಗತ್ಯ ಖರ್ಚುಗಳ ಮೇಲೆ ನಿಯಂತ್ರಣ ಸಾಧಿಸುವಿರಿ. ಜೀವನದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಿ, ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳಿಂದ ಹೆಚ್ಚಿನ ಒತ್ತಡ, ಮನೆಯಲ್ಲಿನ ಭಿನ್ನಾಭಿಪ್ರಾಯಗಳು ನಿಮ್ಮ ಏಕಾಗ್ರತೆಗೆ ಧಕ್ಕೆ ತರುವ ಸಾಧ್ಯತೆ ಇದೆ. ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ದೈಹಿಕ ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ :ಆತುರದಲ್ಲಿ ಯಾವುದೇ ತೀರ್ಮಾನಗಳನ್ನು ಕೈಗೊಳ್ಳುವುದು ಬೇಡ, ದಿನದ ಮಟ್ಟಿಗೆ ಯಾವುದೇ ಹೂಡಿಕೆ ವ್ಯವಹಾರದಲ್ಲಿ ತೊಡಗುವುದರಿಂದ ನಷ್ಟವಾಗುವ ಸಾಧ್ಯತೆ ಇದೆ. ಕೆಲವು ರಹಸ್ಯ ಸುದ್ದಿಗಳಿಂದ ನಿಮಗೆ ಅಚ್ಚರಿಯಾಗಬಹುದು. ನಿಮ್ಮ ಅಚ್ಚು ಕಟ್ಟು ಕೆಲಸದಿಂದ ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಆರ್ಥಿಕ ಪ್ರಗತಿ ಸಾಧಾರಣವಾಗಿರುವುದರಿಂದ ಒತ್ತಡ ಇರಲಿದೆ. ಪ್ರಮುಖ ಕೆಲಸ ಕಾರ್ಯಗಳು ನಿಧಾನವಾಗಿ ಸಾಗಲಿದೆ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ಮಾತುಕತೆಯಲ್ಲಿ ತೊಡಗುವಿರಿ. ಉದ್ಯೋಗಿಗಳಿಗೆ ಶುಭ ಫಲ. ದೈಹಿಕ ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಅನೇಕ ಕಾರಣಾಂತರಗಳಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿ ಕಂಡರು, ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ವ್ಯಾಪಾರದ ಉದ್ದೇಶದಿಂದಾಗಿ ಕೈಕೊಂಡ ಪ್ರವಾಸದಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಕೊಂಚಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಮನರಂಜನೆಗಾಗಿ ಸಮಯವನ್ನು ಕಳೆಯುವಿರಿ. ಸೃಜನಶೀಲ ಕಾರ್ಯಗಳಿಂದಾಗಿ ವ್ಯಕ್ತಿತ್ವ ಪ್ರಕಾಶಿಸುವ ಸಾಧ್ಯತೆ ಇದೆ. ನಿಮ್ಮ ಅನುಭವಗಳನ್ನು ಇತರರೊಂದಿಗೆ ಹಂಚಿಕೊಳ್ಳುವಿರಿ. ಆಧ್ಯಾತ್ಮಿಕ ಗುರುಗಳ ಮಾರ್ಗದರ್ಶನ ಪಡೆಯುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

Horoscope Today

ಮೀನ: ಆಹಾರದ ವ್ಯತ್ಯಾಸದ ಕ್ರಮದಿಂದಾಗಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಲಿದೆ ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Dina Bhavishya: ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರಿಕೆ ಇರಲಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ಅಷ್ಟಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಕನ್ಯಾ ರಾಶಿಯಿಂದ ಶುಕ್ರವಾರ ಮಧ್ಯಾಹ್ನ 02:12 ಕ್ಕೆ ತುಲಾ ರಾಶಿಯನ್ನು ಪ್ರವೇಶಿಸುತ್ತಾನೆ. ಮೇಷ, ಕಟಕ, ಕನ್ಯಾ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರಿಕೆ ಇರಲಿ. ವೃಷಭ ರಾಶಿಯವರು ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಸಾಧಿಸಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವ ಅವಕಾಶ ಸಿಗಲಿದೆ. ಸಿಂಹ ರಾಶಿಯವರು ಮಿತಿಮೀರಿದ ಕೆಲಸದ ಒತ್ತಡದಿಂದಾಗಿ ದಣಿವಾಗಲಿದೆ, ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (14-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ಅಷ್ಟಮಿ 24:03 ವಾರ: ಶುಕ್ರವಾರ
ನಕ್ಷತ್ರ: ಉತ್ತರ ಪಾಲ್ಗುಣಿ 32:12 ಯೋಗ: ಸಿದ್ಧಿ 19:05
ಕರಣ: ವಿಷ್ಟಿ (ಭದ್ರ) 10:47 ಅಮೃತ ಕಾಲ: ಮಧ್ಯರಾತ್ರಿ 12:06 ರಿಂದ 01:55 ವರೆಗೆ
ದಿನದ ವಿಶೇಷ: ಕೊಲ್ಲೂರು ಮೂಕಾಂಬಿಕಾ ಜಯಂತಿ, ಶುಕ್ಲಾದೇವಿ ಪೂಜಾ

ಸೂರ್ಯೋದಯ : 05:53   ಸೂರ್ಯಾಸ್ತ : 06:47

ರಾಹುಕಾಲ: ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರಿಕೆ ಇರಲಿ. ಅತಿಯಾದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಆಧ್ಯಾತ್ಮಿಕ ಸಾಧನೆ ಅವಶ್ಯಕ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಸಾಧಿಸಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವ ಅವಕಾಶ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಸಹದ್ಯೋಗಿಗಳಿಂದ ಕಿರಿಕಿರಿಯಾಗಲಿದೆ, ತಾಳ್ಮೆಯಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮಿಥುನ: ಬಂಧುಗಳು ಟೀಕೆಗಳನ್ನು ಮಾಡುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಒತ್ತಡದೊಂದಿಗೆ ಮಾನಸಿಕ ನೆಮ್ಮದಿ ಹಾಳು ಮಾಡುವ ಸಾಧ್ಯತೆ ಇದೆ. ಸಂಯಮದಿಂದ ವರ್ತಿಸಿ. ಆರ್ಥಿಕ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 4

Horoscope Today

ಕಟಕ:ಪ್ರಮುಖ ವ್ಯಕ್ತಿಗಳ ಸಹಕಾರ ಸಿಗಲಿದೆ. ಆತುರದ ತೀರ್ಮಾನ ತೆಗೆದುಕೊಳ್ಳುವುದು ಬೇಡ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರುತ್ತದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 8

Horoscope Today

ಸಿಂಹ:ಮಿತಿಮೀರಿದ ಕೆಲಸದ ಒತ್ತಡದಿಂದಾಗಿ ದಣಿವಾಗಲಿದೆ, ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಮಕ್ಕಳಿಂದ ಸಂತೋಷ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕನ್ಯಾ: ನಿಮ್ಮ ವರ್ತನೆ ಕುಟುಂಬದ ಸದಸ್ಯರಿಗೆ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಹಣಕಾಸು ಪ್ರಗತಿ ಇರಲಿದೆ. ಬಂಧುಗಳ ಭೇಟಿಯು ಕೊಂಚ ಸಮಾಧಾನ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಂಗಾತಿಯ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಮಾತಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ :ಕುಟುಂಬ ಸದಸ್ಯರ ಆರೋಗ್ಯ ಕಡೆ ಗಮನ ಇರಲಿ. ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವಂತೆ ಮಾಡಬಹುದು. ದಿನದ ಮಟ್ಟಿಗೆ ಖರ್ಚು ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಧನಸ್ಸು: ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆಪ್ತ ಸ್ನೇಹಿತ- ಸಂಬಂಧಿಗಳ ಸಮಸ್ಯೆಗಳಿಗೆ ಸ್ಪಂದಿಸುವಿರಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮಕರ: ಆರೋಗ್ಯ ಉತ್ತಮವಾಗಿರಲಿದೆ. ಸ್ನೇಹಿತರ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತರುವುದು. ಅತಿರೇಖದಲ್ಲಿ ಮಾತನಾಡುವುದು ಬೇಡ. ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ಉದ್ಯೋಗದ ಸ್ಥಳದಲ್ಲಿ ಪ್ರಸಂಶೆ ಸಿಗಲಿದೆ. ಹಿರಿಯರ ಮಾರ್ಗದರ್ಶನ ಸಿಗುವುದು. ಆರೋಗ್ಯ ಉತ್ತಮವಾಗಿರಲಿದೆ. ಅನಿರೀಕ್ಷಿತ ಖರ್ಚು ಇರಲಿದೆ. ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಅದೃಷ್ಟ ಸಂಖ್ಯೆ: 3

Horoscope Today

ಮೀನ: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಪಾಲುದಾರಿಕೆ ವ್ಯವಹಾರವು ನಷ್ಟ ತರುವುದು. ನಿಮ್ಮ ಉದಾರ ವರ್ತನೆಯನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಭವಿಷ್ಯ

Baba Vanga Predictions: ಪ್ರಪಂಚದ ಅಂತ್ಯ ಯಾವಾಗ? ಈ ವರ್ಷ ಏನೇನಾಗಲಿವೆ? ಬಾಬಾ ವಂಗಾ ಭವಿಷ್ಯ ಹೀಗಿದೆ!

ಬಾಲ್ಕನ್ಸ್‌ನ ನಾಸ್ಟ್ರಾಡಾಮಸ್ ಎಂದೂ ಕರೆಯಲ್ಪಡುವ ಬಾಬಾ ವಂಗಾ (Baba Vanga Predictions) ಅವರು ನುಡಿದಿರುವ ಅನೇಕ ಭವಿಷ್ಯವಾಣಿಗಳು ನಿಜವಾಗಿವೆ. ಇದೀಗ ಅವರು ಪ್ರಪಂಚದ ಅಂತ್ಯ ಯಾವಾಗ ಆಗುತ್ತೆ ಎಂದು ಹೇಳಿರುವುದಾಗಿ ತಿಳಿದು ಬಂದಿದೆ. ಅಲ್ಲದೇ 2024ರ ಅವರ ಅನೇಕ ಭವಿಷ್ಯವಾಣಿಗಳು ನಿಜವಾಗುವ ಹಾಗಿದೆ. ಅವು ಯಾವುದು ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

Baba Vanga Predictions
Koo

ವಾಂಜೆಲಿಯಾ ಪಾಂಡೆವಾ ಗುಶ್ಟೆರೋವಾ ಎಂಬ ಹೆಸರಿನ ಬಲ್ಗೇರಿಯಾದ (Bulgarian) ಅಂಧ ಮಹಿಳೆ ಬಾಬಾ ವಂಗಾ (Baba Vanga) ಅವರ ಭವಿಷ್ಯವಾಣಿಯನ್ನು (Baba Vanga Predictions) ಸಾಕಷ್ಟು ಮಂದಿ ನಂಬುತ್ತಾರೆ. ಇದಕ್ಕೆ ಮುಖ್ಯ ಕಾರಣ ಹಲವು ವರ್ಷಗಳ ಹಿಂದೆ ಅವರು ನುಡಿದಿರುವ ಬಹುತೇಕ ಭವಿಷ್ಯವಾಣಿಗಳು (Predictions) ನಿಜವಾಗಿವೆ. ಎರಡು ದಶಕಗಳ ಹಿಂದೆಯೇ ಅವರು ನಿಧನರಾಗಿದ್ದು, ಅವರ ಭವಿಷ್ಯವಾಣಿಗಳ ಬಗ್ಗೆ ಜನರು ನಿರಂತರ ಚರ್ಚೆ ಮಾಡುತ್ತಿರುತ್ತಾರೆ.

ಬಲ್ಗೇರಿಯನ್ ಕ್ಲೈರ್ವಾಯಂಟ್ ನಲ್ಲಿ 1911ರಲ್ಲಿ ಜನಿಸಿದ ಬಾಬಾ ವಂಗಾ ಬಾಲ್ಯದಿಂದಲೂ ಭವಿಷ್ಯವನ್ನು ಸ್ಪಷ್ಟವಾಗಿ ಕಾಣುತ್ತಿದ್ದರು. ಇವರು 9/11 ದಾಳಿ, ರಾಜಕುಮಾರಿ ಡಯಾನಾ ಅವರ ಸಾವು, ಯುನೈಟೆಡ್ ಸ್ಟೇಟ್ ನ ಮೊದಲ ಕಪ್ಪು ಅಧ್ಯಕ್ಷ ಬರಾಕ್ ಒಬಾಮಾ ಅವರು ಆಗುತ್ತಾರೆ ಮತ್ತು ಕೋವಿಡ್-19 ಸಾಂಕ್ರಾಮಿಕದ ಕುರಿತು ಭವಿಷ್ಯ ನುಡಿದಿದ್ದರು. ಅವರು ತಮ್ಮ ಜೀವನದುದ್ದಕ್ಕೂ ಹಲವಾರು ಭವಿಷ್ಯವಾಣಿಗಳನ್ನು ನುಡಿದಿದ್ದು, ಅದರಲ್ಲಿ ಹೆಚ್ಚಿನವು ನಿಜವಾಗಿದೆ. ಬಾಬಾ ವಂಗಾ ಅವರು ಕೆಲವು ಭಯಾನಕ ಭವಿಷ್ಯವಾಣಿಗಳನ್ನು ನುಡಿದಿದ್ದಾರೆ. ಅದು ಹೆಚ್ಚು ಕಳವಳಕಾರಿಯಾಗಿದೆ.

ಮೂರನೇ ಮಹಾಯುದ್ಧ:

ಇದರಲ್ಲಿ 2024ರಲ್ಲಿ ಮೂರನೇ ಮಹಾಯುದ್ಧದ ಭವಿಷ್ಯವನ್ನು ಅವರು ಹೇಳಿದ್ದಾರೆ. ಇದಕ್ಕೆ ಪೂರಕ ಎನ್ನುವಂತೆ ಇಸ್ರೇಲ್- ಇರಾನ್ ಮತ್ತು ರಷ್ಯಾ- ಉಕ್ರೇನ್ ನಡುವಿನ ಪ್ರಸ್ತುತ ಉದ್ವಿಗ್ನತೆಯೊಂದಿಗೆ ಇದು ನಿಜವಾಗುತ್ತಿರುವಂತೆ ಕಾಣುತ್ತಿದೆ. ಇದು ಅನೇಕರ ಚಿಂತೆಗೂ ಕಾರಣವಾಗಿದೆ. ಬಾಬಾ ವಂಗಾ ಅವರು 2024ರಲ್ಲಿ ಯುರೋಪ್‌ನಲ್ಲಿ ಭಯೋತ್ಪಾದಕ ದಾಳಿಗಳು ಸೇರಿದಂತೆ ಹಲವು ಕರಾಳ ಘಟನೆಗಳ ಬಗ್ಗೆಯೂ ಮುನ್ಸೂಚನೆ ನೀಡಿದ್ದಾರೆ. ಬಾಲ್ಕನ್ಸ್‌ನ ನಾಸ್ಟ್ರಾಡಾಮಸ್ ಎಂದೂ ಕರೆಯಲ್ಪಡುವ ಅವರು 1996ರಲ್ಲಿ ನಿಧನರಾದ ಅವರು ಪ್ರಪಂಚದ ಅಂತ್ಯದವರೆಗೆ ಮನುಕುಲಕ್ಕೆ ಸಂಭವಿಸಬಹುದಾದ ಅನೇಕ ಘಟನೆಗಳ ಬಗ್ಗೆ ಹೇಳಿದ್ದಾರೆ.

2024ರ ಕುರಿತು ಬಾಬಾ ವಂಗಾ ಅವರ ಭವಿಷ್ಯವಾಣಿಗಳು ಹೀಗಿವೆ:

2024ರಲ್ಲಿ ನೈಸರ್ಗಿಕ ವಿಪತ್ತು ಮತ್ತು ತೀವ್ರ ಹವಾಮಾನ ಘಟನೆಗಳು ಸಂಭವಿಸಲಿದೆ. ಈ ದಿನಗಳಲ್ಲಿ ತಾಪಮಾನದ ಏರಿಕೆ ಯನ್ನು ಗಮನಿಸಿದರೆ ಇದು ಸರಿ ಎಂದು ಎನ್ನಬಹುದು. ಸೈಬರ್ ದಾಳಿ ಹೆಚ್ಚಾಗುತ್ತದೆ ಎಂದು ಬಾಬಾ ವಂಗಾ ಅವರ ಮೊದಲೇ ನುಡಿದಿರುವ ಪ್ರಮುಖ ಭವಿಷ್ಯವಾಣಿಗಳಲ್ಲಿ ಒಂದಾಗಿದೆ.

ಬಾಬಾ ವಂಗಾ ಸತ್ತಾಗ ಇಂಟರ್ನೆಟ್ ಪ್ರಾರಂಭವಾಗಿದ್ದು ಮಾತ್ರ. ಆದರೆ ಆಗಲೇ ಅವರು ಹ್ಯಾಕರ್‌ಗಳು ತಮ್ಮ ದಾಳಿಯನ್ನು ಹೆಚ್ಚಿಸುತ್ತಾರೆ, ವಿಶೇಷವಾಗಿ ಪ್ರಮುಖ ಮೂಲಸೌಕರ್ಯಗಳ ಮೇಲೆ ವಿಶ್ವದಾದ್ಯಂತ ಭದ್ರತಾ ಸಮಸ್ಯೆಗಳನ್ನು ಉಂಟುಮಾಡುತ್ತಾರೆ ಎಂದು ಭವಿಷ್ಯ ನುಡಿದಿದ್ದರು.

ಆರ್ಥಿಕ ಶಕ್ತಿಯಲ್ಲಿ ಜಾಗತಿಕ ಬದಲಾವಣೆಗಳು, ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಸಾಲದ ಮಟ್ಟಗಳಿಂದಾಗಿ 2024ರಲ್ಲಿ ಆರ್ಥಿಕ ಬಿಕ್ಕಟ್ಟುಗಳ ಕುರಿತು ಬಾಬಾ ವಂಗಾ ಮೊದಲೇ ಹೇಳಿದ್ದಾರೆ.

ಇದನ್ನೂ ಓದಿ: Baba Vanga: 2024 ವರ್ಷವಿಡೀ ಭಯಾನಕ! ಬಾಬಾ ವಂಗಾ ಭವಿಷ್ಯ

ಯುರೋಪ್‌ನಲ್ಲಿ ಹೆಚ್ಚಿನ ಭಯೋತ್ಪಾದಕ ಚಟುವಟಿಕೆಗಳ ಬಗ್ಗೆ ಮೊದಲೇ ಎಚ್ಚರಿಸಿರುವ ಬಾಬಾ ವಂಗಾ, ದೊಡ್ಡ ರಾಷ್ಟ್ರವೊಂದು ಜೈವಿಕ ಶಸ್ತ್ರಾಸ್ತ್ರಗಳನ್ನು ಪರೀಕ್ಷಿಸಬಹುದು ಅಥವಾ ಬಳಸಬಹುದು ಎಂದು ಹೇಳಿದ್ದರು.

2024ರಲ್ಲಿ ಆಲ್ಝೈಮರ್ ಮತ್ತು ಕ್ಯಾನ್ಸರ್ ಸೇರಿದಂತೆ ಗುಣಪಡಿಸಲಾಗದ ಕಾಯಿಲೆಗಳಿಗೆ ಕೆಲವು ವೈದ್ಯಕೀಯ ಪ್ರಗತಿಯ ಬಗ್ಗೆ ಬಾಬಾ ವಂಗಾ ಭವಿಷ್ಯ ನುಡಿದಿದ್ದಾರೆ. ಈಗಾಗಲೇ ಆಶ್ಚರ್ಯ ಎನ್ನುವಂತೆ ರಷ್ಯಾದಲ್ಲಿ ಕ್ಯಾನ್ಸರ್ ಲಸಿಕೆ ಅಭಿವೃದ್ಧಿಯಲ್ಲಿದೆ ಎಂದು ವರದಿಯಾಗಿದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಹತ್ಯೆ ಮಾಡುವ ಪ್ರಯತ್ನ ನಡೆಯುತ್ತದೆ ಎಂಬ ಭವಿಷ್ಯವಾಣಿಯನ್ನೂ ಬಾಬಾ ವಂಗಾ ನುಡಿದಿದ್ದಾರೆ. ಇಷ್ಟು ಮಾತ್ರವಲ್ಲ 5079ರಲ್ಲಿ ಜಗತ್ತು ಸಂಪೂರ್ಣ ವಿನಾಶವಾಗುತ್ತದೆ ಎಂಬುದು ಅವರ ಭವಿಷ್ಯವಾಣಿಯಲ್ಲಿದೆ.

Continue Reading
Advertisement
Teachers Transfer
ಪ್ರಮುಖ ಸುದ್ದಿ3 hours ago

Teachers Transfer: ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ; ಕಡ್ಡಾಯ, ಹೆಚ್ಚುವರಿ‌ ಟ್ರಾನ್ಸ್‌ಫರ್ ಇಲ್ಲ, ಕೋರಿಕೆ ವರ್ಗ ಮಾತ್ರ

T20 World Cup 2024
T20 ವಿಶ್ವಕಪ್4 hours ago

T20 World Cup 2024: ಭಾರತ-ಕೆನಡಾ ಪಂದ್ಯ ಮಳೆಯಿಂದ ರದ್ದು; ಅಗ್ರಸ್ಥಾನಿಯಾಗಿ ರೋಹಿತ್‌ ಪಡೆ ಸೂಪರ್‌ 8ಕ್ಕೆ ಎಂಟ್ರಿ

Hiriya vidwamsa Sagri Raghavendra Upadhyaya passed away
ಶ್ರದ್ಧಾಂಜಲಿ5 hours ago

Sagri Raghavendra Upadhyaya: ಹಿರಿಯ ವಿದ್ವಾಂಸ ಸಗ್ರಿ ರಾಘವೇಂದ್ರ ಉಪಾಧ್ಯಾಯ ನಿಧನ

Government has no money to clean tankers no ability to provide clean drinking water says R Ashok
ಪ್ರಮುಖ ಸುದ್ದಿ5 hours ago

R Ashok: ಟ್ಯಾಂಕರ್ ಸ್ವಚ್ಛಗೊಳಿಸಲೂ ಸಿದ್ದು ಸರ್ಕಾರದ ಬಳಿ ಹಣವಿಲ್ಲ; ಆರ್. ಅಶೋಕ್‌ ಆಕ್ರೋಶ

Union Minister Pralhad Joshi statement about increase in petrol and diesel prices in the state
ಕರ್ನಾಟಕ5 hours ago

Pralhad Joshi: ತೈಲ ಬೆಲೆ ಏರಿಸಿ ಕರ್ನಾಟಕದವರ ಕೈಗೆ ಗ್ಯಾರಂಟಿ ಚೊಂಬು ಕೊಟ್ಟ ಕಾಂಗ್ರೆಸ್: ಪ್ರಲ್ಹಾದ್‌ ಜೋಶಿ

Bribe Case
ಕ್ರೈಂ5 hours ago

Bribe Case: ಕಸ ಗುಡಿಸುತ್ತಲೇ ಉನ್ನತ ಹುದ್ದೆಗೇರಿದ್ದ ಮಹಿಳೆ ಕಸ ಗುಡಿಸುವವರಿಂದಲೇ ಲಂಚ ಸ್ವೀಕರಿಸುವಾಗ ಬಂಧನ!

Minister dr G Parameshwar inaugurated the hasiru grama programme in Koratagere
ತುಮಕೂರು6 hours ago

Koratagere News: ಹಸಿರೇ ಉಸಿರು, ಹಸಿರಿದ್ದೆಡೆ ಮಾನವನ ಸರ್ವಾಂಗಿಣ ಪ್ರಗತಿ: ಸಚಿವ ಜಿ. ಪರಮೇಶ್ವರ್‌

Giorgia Meloni
ವಿದೇಶ6 hours ago

Giorgia Meloni: ಇಟಲಿ ಪ್ರಧಾನಿ ಮೆಲೋನಿ ಕಾರ್ಮಿಕ ಮಹಿಳೆಯ ಮಗಳು! ಅವರ ಕುರಿತ ಕುತೂಹಲಕರ ಸಂಗತಿಗಳಿವು

Sapthami Gowda
ಪ್ರಮುಖ ಸುದ್ದಿ6 hours ago

Sapthami Gowda: ಯುವ ಪತ್ನಿ ವಿರುದ್ಧ ಸಪ್ತಮಿಗೌಡ ಮಾನಹಾನಿ ಕೇಸ್; ನಟಿ ಹೆಸರು ಎಲ್ಲಿಯೂ ಬಳಸದಂತೆ ಕೋರ್ಟ್ ಆದೇಶ

Gold Heist
ವಿದೇಶ6 hours ago

Gold Heist: ಜ್ಯುವೆಲರಿ ಶಾಪ್‌ಗೆ ನುಗ್ಗಿ ಚಿನ್ನ ಕದ್ದ 20 ಕಳ್ಳರು; ಸಿನಿಮಾ ಸ್ಟೈಲಲ್ಲೇ ದರೋಡೆ ಮಾಡಿದ ವಿಡಿಯೊ ಇಲ್ಲಿದೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ12 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 day ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು1 day ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು1 day ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ1 day ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ4 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ5 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌