Sonia Gandhi: ಸೋನಿಯಾ ಗಾಂಧಿಯ ಇಟಲಿ ಆಸ್ತಿ ಮೌಲ್ಯ ಎಷ್ಟು? ಇಲ್ಲಿದೆ ಮಾಹಿತಿ - Vistara News

ದೇಶ

Sonia Gandhi: ಸೋನಿಯಾ ಗಾಂಧಿಯ ಇಟಲಿ ಆಸ್ತಿ ಮೌಲ್ಯ ಎಷ್ಟು? ಇಲ್ಲಿದೆ ಮಾಹಿತಿ

Sonia Gandhi: ರಾಜ್ಯಸಭೆಗೆ ಸ್ಪರ್ಧಿಸಿರುವ ಸೋನಿಯಾ ಗಾಂಧಿ ಅವರು 12.53 ಕೋಟಿ ಆಸ್ತಿಯನ್ನು ಚುನಾವಣಾ ಆಯೋಗದ ಎದುರು ಘೋಷಿಸಿದ್ದಾರೆ.

VISTARANEWS.COM


on

What is the value of Sonia Gandhi's property in Italy?
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ರಾಜಸ್ಥಾನದಿಂದ ರಾಜ್ಯಸಭೆಗೆ (Rajya Sabha Election) ಸ್ಪರ್ಧಿಸಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Congress Leader Sonia Gandhi) ಅವರು ತಮ್ಮ ಸಂಪತ್ತನ್ನು ಘೋಷಣೆ ಮಾಡಿದ್ದಾರೆ(Wealth Affidavit). ಚುನಾವಣಾ ಆಯೋಗಕ್ಕೆ ಅಫಿಡವಿಟ್ (Election Commission) ಸಲ್ಲಿಸಿರುವ ಮಾಹಿತಿಯ ಪ್ರಕಾರ, ಸೋನಿಯಾ ಗಾಂಧಿ ಅವರು ಚರಾಸ್ತಿ ಮತ್ತು ಸ್ಥಿರಾಸ್ತಿ ಸೇರಿ ಒಟ್ಟು 12. 53 ಕೋಟಿ ರೂ. ಆಸ್ತಿ ಹೊಂದಿದ್ದಾರೆ. ಇಟಲಿಯಲ್ಲಿ ಪಿತ್ರಾರ್ಜಿತವಾಗಿ ಬಂದಿರುವ ಆಸ್ತಿಯ ಮೌಲ್ಯ 26.83 ಲಕ್ಷ ರೂ. ಎಂದು ತಿಳಿಸಿದ್ದಾರೆ(Italy Property).

ಸೋನಿಯಾ ಗಾಂಧಿ ಅವರ ಬಳಿ 90,000 ರೂಪಾಯಿ ನಗದು ಇದ್ದರೆ, ಕಾಂಗ್ರೆಸ್ ನಾಯಕಿಯ ಒಟ್ಟು ಆಸ್ತಿ ಮೌಲ್ಯ 12,53,76,822 (12.53 ಕೋಟಿ ರೂ.) ಎಂದು ಅವರ ಚುನಾವಣಾ ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ. ಒಟ್ಟು ಸಂಪತ್ತು ವರ್ಷಗಳಲ್ಲಿ ಕ್ರಮೇಣ ಹೆಚ್ಚಳವನ್ನು ತೋರಿಸಲಾಗಿದೆ.

2014ರಲ್ಲಿ ಸೋನಿಯಾ ಗಾಂಧಿ ಅವರ ಸಂಪತ್ತು 9.28 ಕೋಟಿ ಎಂದು ತಿಳಿಸಲಾಗಿತ್ತು. ಅದು 2019 ರಲ್ಲಿ 11.82 ಕೋಟಿಗೆ ಏರಿತು ಮತ್ತು 2024 ರಲ್ಲಿ 12.53 ಕೋಟಿಗೆ ಹೆಚ್ಚಳವಾಯಿತು. 2014 ರಿಂದ 2019 ರವರೆಗೆ ಸರಿಸುಮಾರು 27.59% ರಷ್ಟು ಮತ್ತು 2019ರಿಂದ 2024ರವರೆಗೆ ಶೇ.5.89ರಷ್ಟು ಹೆಚ್ಚಳವಾಗಿದೆ. ಆದಾಗ್ಯೂ, ಅವರ ಸ್ವತ್ತುಗಳು 2009 ಮತ್ತು 2014 ರ ನಡುವೆ ಗಮನಾರ್ಹ ಜಿಗಿತವನ್ನು ಕಂಡಿವೆ.

6,38,11,415 ರೂ. ಮೌಲ್ಯದ ಚರ ಆಸ್ತಿಗಳು (6.38 ಕೋಟಿ ರೂ.) ಆಭರಣಗಳು, ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ರಾಯಧನ, ಹೂಡಿಕೆಗಳು, ಬಾಂಡ್‌ಗಳು, ಬ್ಯಾಂಕ್ ಠೇವಣಿಗಳು ಮತ್ತು ಕೈಯಲ್ಲಿ ನಗದು ಮುಂತಾದ ಆಸ್ತಿಗಳನ್ನು ಒಳಗೊಂಡಿದೆ. 1.07 ಕೋಟಿ ರೂ. ಮೌಲ್ಯ ಆಭರಣಗಳಿವೆ. ಇದರಲ್ಲಿ 1.3 ಕೆ.ಜಿ ಗೋಲ್ಡ್(49.95 ಲಕ್ಷ ರೂ.) ಮತ್ತು 88 ಕೆ.ಜಿ ಬೆಳ್ಳಿ(57.2 ಲಕ್ಷ ರೂ.) ಆಭರಣಗಳಿವೆ.

ಸಂಸದರ ವೇತನ, ರಾಯಲ್ಟಿ ಆದಾಯ, ಬ್ಯಾಂಕ್‌ಗಳಿಂದ ಬಡ್ಡಿ, ಬಾಂಡ್‌ಗಳು, ಡಿವಿಡೆಂಡ್‌ಗಳು ಮತ್ತು ಮ್ಯೂಚುವಲ್ ಫಂಡ್‌ಗಳಿಂದ ಬಂಡವಾಳ ಲಾಭಗಳು ಸೋನಿಯಾ ಗಾಂಧಿ ಅವರ ಆದಾಯದ ಮಾರ್ಗಗಳಾಗಿವೆ. ಶೈಕ್ಷಣಿಕವಾಗಿ, ಸೋನಿಯಾ ಗಾಂಧಿ ಅವರು 1964 ರಲ್ಲಿ ಸಿಯೆನಾದಲ್ಲಿ ಇಸ್ಟಿಟುಟೊ ಸಾಂಟಾ ತೆರೇಸಾದಿಂದ ವಿದೇಶಿ ಭಾಷೆಗಳಲ್ಲಿ (ಇಂಗ್ಲಿಷ್ ಮತ್ತು ಫ್ರೆಂಚ್) ಮೂರು ವರ್ಷಗಳ ಕೋರ್ಸ್ ಅನ್ನು ಪೂರ್ಣಗೊಳಿಸಿದರು ಎಂದು ಘೋಷಿಸಿದ್ದಾರೆ.

ವಿಶೇಷ ಎಂದರೆ ಸೋನಿಯಾ ಗಾಂಧಿ ಅವರು ಯಾವುದೇ ಸೋಷಿಯಲ್ ಮೀಡಿಯಾ ಖಾತೆಯನ್ನು ಹೊಂದಿಲ್ಲ. ಫೇಸ್ ಬುಕ್ ಅಥವಾ ಎಕ್ಸ್‌ ವೇದಿಕೆಯಲ್ಲಿ ತಾವಿಲ್ಲ ಎಂದು ಅಫಿಡವಿಟ್‌ನಲ್ಲಿ ಎಂದು ಘೋಷಿಸಿಕೊಂಡಿದ್ದಾರೆ. ಚುನಾವಣಾ ಅಫಿಡವಿಟ್‌ನಲ್ಲಿ ಕಾಂಗ್ರೆಸ್ ನಾಯಕಿಯ ವಿರುದ್ಧ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನೂ ಬಹಿರಂಗಪಡಿಸಲಾಗಿದೆ. ಯಾವುದೇ ಕ್ರಿಮಿನಲ್ ಪ್ರಕರಣದಲ್ಲಿ ಆಕೆಗೆ ಶಿಕ್ಷೆಯಾಗಿಲ್ಲ ಎಂದು ಅದು ಹೇಳುತ್ತದೆ. ಫೆ.27ರಂದು ರಾಜ್ಯಸಭೆಗೆ ಚುನಾವಣೆ ನಡೆಯಲಿದೆ.

ಈ ಸುದ್ದಿಯನ್ನೂ ಓದಿ: Sonia Gandhi: ಭಾವುಕರಾಗಿ ರಾಯ್‌ಬರೇಲಿ ಕ್ಷೇತ್ರದ ಜನತೆಗೆ ಪತ್ರ ಬರೆದ ಸೋನಿಯಾ ಗಾಂಧಿ ಹೇಳಿದ್ದೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Prajwal Revanna Case : ಜರ್ಮನಿಯಿಂದ ಭಾರತಕ್ಕೆ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ

Prajwal Revanna Case: ಮೇ 31ಕ್ಕೆ ಬೆಂಗಳೂರಿಗೆ ತಲುಪುವ ಲುಫ್ತಾನ್ಸಾ ಸಂಸ್ಥೆಯ ವಿಮಾನದಲ್ಲಿ ಪ್ರಜ್ವಲ್ ಟಿಕೆಟ್ ಬುಕಿಂಗ್ ಮಾಡಿದ್ದಾರೆ. ವಿಮಾನದ ಬ್ಯುಸಿನೆಸ್​ ಕ್ಲಾಸ್​ ವರ್ಗದಲ್ಲಿ ಅವರು ತಮ್ಮ ಟಿಕೆಟ್ ಕಾಯ್ದಿರಿಸಿದ್ದಾರೆ. ಕಳೆದ ಒಂದು ತಿಂಗಳಿಂದ ಭಾರತ ಬಿಟ್ಟು ಪರಾರಿಯಾಗಿದ್ದ ಅವರು ವಾಪಸ್​ ಬರಲು ನಿರ್ಧರಿಸಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಪೆನ್​ಡ್ರೈವ್ ಮೂಲಕ ಪ್ರಸರಣಗೊಂಡ ಅಶ್ಲೀಲ ವಿಡಿಯೊಗಳ ಪ್ರಕರಣದ (Prajwal Revanna Case) ಪ್ರಮುಖ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯಿಂದ ವಾಪಸ್​ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ್ದಾರೆ. ಲುಫ್ತಾನ್ಸಾ ಸಂಸ್ಥೆಯ ವಿಮಾನದಲ್ಲಿ ಏರ್​ ಟಿಕೆಟ್​ ಬುಕ್ ಮಾಡಿದ ವಿವರ ‘ವಿಸ್ತಾರನ್ಯೂಸ್​’ಗೆ ಲಭ್ಯವಾಗಿದೆ. ಪ್ರಕರಣದ ತನಿಖೆ ನಡೆಸುವ ಎಸ್​ಐಟಿ ಪ್ರಜ್ವಲ್ ರೇವಣ್ಣಗಾಗಿ ಕಾಯುತ್ತಿದ್ದು ಭಾರತಕ್ಕೆ ಬಂದ ತಕ್ಷಣ ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಚ್​ನಿಂದ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನೇರ ಟಿಕೆಟ್​ ಬುಕ್​ ಮಾಡಿಕೊಂಡಿದ್ದು ಅಲ್ಲಿಂದಲೇ ಅವರನ್ನು ಎಸ್​ಐಟಿ ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಲಿದ್ದಾರೆ.

ಮೇ 31ಕ್ಕೆ ಬೆಂಗಳೂರಿಗೆ ತಲುಪುವ ಲುಫ್ತಾನ್ಸಾ ಸಂಸ್ಥೆಯ ವಿಮಾನದಲ್ಲಿ ಪ್ರಜ್ವಲ್ ಟಿಕೆಟ್ ಬುಕಿಂಗ್ ಮಾಡಿದ್ದಾರೆ. ವಿಮಾನದ ಬ್ಯುಸಿನೆಸ್​ ಕ್ಲಾಸ್​ ವರ್ಗದಲ್ಲಿ ಅವರು ತಮ್ಮ ಟಿಕೆಟ್ ಕಾಯ್ದಿರಿಸಿದ್ದಾರೆ. ಕಳೆದ ಒಂದು ತಿಂಗಳಿಂದ ಭಾರತ ಬಿಟ್ಟು ಪರಾರಿಯಾಗಿದ್ದ ಅವರು ವಾಪಸ್​ ಬರಲು ನಿರ್ಧರಿಸಿದ್ದಾರೆ. ಎಸ್​ಐಟಿ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸುವುದಕ್ಕಿಂತ ಮೊದಲೇ ಅವರು ಭಾರತದಿಂದ ಹೊರಟ್ಟಿದ್ದರು. ಪ್ರಕರಣ ಕಾವು ಪಡೆದು ಪ್ರತಿಭಟನೆ ಹಾಗೂ ಧರಣಿಗಳು ನಡೆಯುವ ಸಂದರ್ಭದಲ್ಲಿ ದೇಶದಿಂದ ದೂರವಿದ್ದರು. ಎಸ್​ಐಟಿ ಪೊಲೀಸರು ಪ್ರಜ್ವಲ್​ ವಶಕ್ಕೆ ಪಡೆಯಲು ನಾನಾ ರಾಜತಾಂತ್ರಿಕ ಸಮಸ್ಯೆ ಎದುರಾದ ಕಾರಣ ಕಾಯಬೇಕಾಯಿತು. ಅಂತಿಮವಾಗಿ ಕೇಂದ್ರ ಸರ್ಕಾರ ಸೇರಿದಂತೆ ಎಲ್ಲರ ಒತ್ತಾಯ ಹಾಗೂ ತಮಗೆ ಹಾಜರಾಗಲು ನೀಡಿದ ನೋಟಿಸ್​ನ ಗಡುವು ಮುಗಿದ ಕಾರಣ ಜರ್ಮನಿಯಿಂದ ಬರಲಿದ್ದಾರೆ.

ಪ್ರಜ್ವಲ್‌ ರೇವಣ್ಣ ಮೇ 31ರ ಮೊದಲು ಬರಲೇಬೇಕು! ಕಾರಣ ಇಲ್ಲಿದೆ

ಅಶ್ಲೀಲ ವಿಡಿಯೋ ವೈರಲ್ (pen drive case video viral) ಪ್ರಕರಣದಲ್ಲಿ ವಿಶೇಷ ತನಿಖಾ ತಂಡಕ್ಕೆ ಬೇಕಾಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Hassan MP Prajwal Revanna Case) ನಾಪತ್ತೆಯಾಗಿ ಒಂದು ತಿಂಗಳ ಬಳಿಕ ಹೊಸ ವಿಡಿಯೋ ಮೂಲಕ ಪ್ರತ್ಯಕ್ಷವಾಗಿದ್ದಾರೆ. ಆದರೆ ಅವರು ದೇಶದೊಳಗೇ ಇದ್ದುಕೊಂಡೇ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದರೇ ಎಂಬ ಸಂಶಯವೂ ವ್ಯಕ್ತವಾಗಿದೆ.

ಇದನ್ನೂ ಓದಿ: Prajwal Revanna Case: ಎರಡು ಎಫ್ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಎಚ್.ಡಿ.ರೇವಣ್ಣ ಅರ್ಜಿ

ನಿನ್ನೆ ಹೊಸ ವಿಡಿಯೋ ಮಾಡಿ ಹರಿಬಿಟ್ಟಿರುವ ಪ್ರಜ್ವಲ್‌, ಶುಕ್ರವಾರ, ಮೇ 31ರಂದು ಎಸ್‌ಐಟಿ (SIT) ಮುಂದೆ ಹಾಜರಾಗುವುದಾಗಿ ತಿಳಿಸಿದ್ದಾರೆ. ಸದ್ಯ ವಿಡಿಯೋವನ್ನು ಎಸ್‌ಐಟಿ ಕೂಲಂಕಷವಾಗಿ ಪರಿಶೀಲನೆ ನಡೆಸುತ್ತಿದೆ. ವಿಡಿಯೋದ ಮೂಲ ಯಾವುದು, ಯಾವ ಐಪಿ ಅಡ್ರೆಸ್‌ನಿಂದ ಆಪ್‌ಲೋಡ್ ಆಗಿದೆ ಎಂಬುದರ ಪತ್ತೆಗೆ‌ ಎಸ್‌ಐಟಿ ಮುಂದಾಗಿದೆ. ವಿಡಿಯೋ ಮೊದಲು ತಲುಪಿದ್ದು ಯಾರಿಗೆ, ಎಲ್ಲಿಂದ, ವಿಡಿಯೋ ಮಾಡಿರುವ ಮದರ್ ಡಿವೈಸ್ ಮಾಹಿತಿ ಪತ್ತೆಗೆ ಎಸ್‌ಐಟಿ ಯತ್ನಿಸುತ್ತಿದೆ. ಶುಕ್ರವಾರ ಪ್ರಜ್ವಲ್‌ ಎಸ್ಐಟಿ ಮುಂದೆ ಹಾಜರಾಗದಿದ್ದಲ್ಲಿ ಮದರ್ ಡಿವೈಸ್ ಲೋಕೆಷನ್ ಪತ್ತೆಗೆ ಯತ್ನಿಸುವ ಸಂಭವ ಇದೆ. ಸದ್ಯ ಪ್ರಜ್ವಲ್ ರೇವಣ್ಣ ಬರುವವರೆಗೂ ಕಾಯಲು ಇಷ್ಟವಿಲ್ಲದ ಎಸ್ಐಟಿ, ಅದಕ್ಕೂ ಮುನ್ನವೇ ಪತ್ತೆ ಮಾಡಿ ಬಂಧಿಸುವ ಚಿಂತನೆ ನಡೆಸಿದೆ.

ಯಾಕೆ ಮೇ 31 ?

ಮೇ 31ರಂದು ಪ್ರಜ್ವಲ್‌ ರೇವಣ್ಣ ಅವರ ಕಳೆದ ಬಾರಿಯ ಸಂಸದ ಸ್ಥಾನ ಅವಲಂಬಿಸಿ ನೀಡಲಾದ ರಾಜತಾಂತ್ರಿಕ ಪಾಸ್‌ಪೋರ್ಟ್‌ನ (Diplomatic passport) ಅವಧಿ ಅಂತ್ಯವಾಗಲಿದೆ. ಈ ಸಲ ಚುನಾಯಿತರಾದರೆ ಅವರು ಹೊಸದಾಗಿ ರಾಜತಾಂತ್ರಿಕ ಪಾಸ್‌ಪೋರ್ಟ್‌ ಮಾಡಿಸಿಕೊಳ್ಳಬೇಕಿದೆ. ಹೀಗಾಗಿ ಹಳೆಯ ಪಾಸ್‌ಪೋರ್ಟ್‌ನಲ್ಲಿ ಓಡಾಡಲು ಸಾಧ್ಯವಿಲ್ಲ. ಇದೇ ಕಾರಣಕ್ಕಾಗಿ ಪ್ರಜ್ವಲ್‌ ಮೇ 31ನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಈ ನಡುವೆ ಪ್ರಜ್ವಲ್ ರೇವಣ್ಣ ವಿರುದ್ಧದ ಎಸ್ಐಟಿ ತನಿಖೆ ಮಹತ್ವದ ಹಂತ ತಲುಪಿದೆ. ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಂತ್ರಸ್ತೆಯ ಹೇಳಿಕೆ ದಾಖಲಿಸಲಾಗಿದೆ. ಪ್ರಜ್ವಲ್ ರೇವಣ್ಣ ಬಂದ ಬಳಿಕ ತನಿಖೆ ಮಾಡಬೇಕಿದೆ. ಅಶ್ಲೀಲ ವಿಡಿಯೋಗಳನ್ನು ಮಾಡಲಾದ ಡಿವೈಜ್ ಅನ್ನು ಪತ್ತೆಹಚ್ಚಬೇಕಿದೆ. ಅಶ್ಲೀಲ ವಿಡಿಯೋಗಳ ಕುರಿತು ಫಾರೆನ್ಸಿಕ್ ರಿಪೋರ್ಟ್‌ಗಾಗಿ ಎಸ್ಐಟಿ ಕಾಯುತ್ತಿದೆ. FSL ರಿಪೋರ್ಟ್ ಎಸ್ಐಟಿ ಕೈ ಸೇರಿದ ಕೂಡಲೇ ಚಾರ್ಜ್‌ಶೀಟ್‌ಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ. ಪ್ರಜ್ವಲ್ ರೇವಣ್ಣ ಹೇಳಿಕೆ ದಾಖಲಿಸಿ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಬೇಕಿದೆ.

ಜೂನ್ ಮೊದಲ ವಾರದಲ್ಲಿ ಪ್ರಜ್ವಲ್ ಬಂದಿದ್ದೇ ಆದಲ್ಲಿ ತನಿಖೆ ನಡೆಸಿ ಸ್ಟೇಟ್ಮೆಂಟ್ ದಾಖಲಿಸಲಿದ್ದಾರೆ. ಒಂದು ವೇಳೆ ಪ್ರಜ್ವಲ್ ಜೂನ್‌ನಲ್ಲಿ ವಾಪಸ್ ಬರದೇ ಇದ್ದಲ್ಲಿ, ಆರೋಪಿ ತಲೆ ಮರೆಸಿಕೊಂಡಿದ್ದಾನೆ ಎಂದು ನ್ಯಾಯಾಲಯಕ್ಕೆ ಅಬ್‌ಸ್ಕಾಂಡ್‌ ಚಾರ್ಜ್‌ಶೀಟ್ ಸಲ್ಲಿಸಬೇಕಿದೆ.

ಗೃಹ ಸಚಿವರು ಏನೆಂದರು?

ಪ್ರಜ್ವಲ್ ವಿಡಿಯೋ ರಿಲೀಸ್ ವಿಚಾರದಲ್ಲಿ ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ (home minister G Parameshwara) ಹೇಳಿಕೆ ನೀಡಿದ್ದಾರೆ. “ಮೇ 31ರಂದು ಪ್ರಜ್ವಲ್‌ ಸಂಸದ ಸ್ಥಾನ ಅಂತ್ಯವಾಗಲಿದೆ. ಆಗ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ಸೀಜ್ ಆಗುತ್ತದೆ. ಇದೆಲ್ಲವನ್ನು ತಿಳಿದುಕೊಂಡು ಬರಲು ಯೋಚನೆ ಮಾಡಿದ್ದಾರೆ ಅನ್ಸುತ್ತೆ” ಎಂದಿದ್ದಾರೆ.

“ದೇಶದೊಳಗೆ ಏನು ಪ್ರಯತ್ನ ‌ಮಾಡಬೇಕು ನಾವು ಮಾಡಿದ್ದೇವೆ. ಕೇಂದ್ರ ಸರ್ಕಾರಕ್ಕೆ ಬರೆದಿದ್ದೇವೆ, ಕೇಂದ್ರ ಗೃಹ ಇಲಾಖೆಗೆ ವಾರೆಂಟ್ ಬಗ್ಗೆ ತಿಳಿಸಿದ್ದೇವೆ. ಬ್ಲೂ ಕಾರ್ನರ್ ನೋಟೀಸ್ (blue corner notice) ಇಶ್ಯೂ ಆಗಿದೆ. ಪ್ರಜ್ವಲ್‌ ಬರದೇ ಹೋದರೆ ಇಂಟರ್‌ಪೋಲ್‌ನವರು (Interpol) ಲೊಕೇಶನ್‌ ತಿಳಿದುಕೊಂಡು ನಮಗೆ ಮಾಹಿತಿ ನೀಡುವುದು ಎಂದಿತ್ತು. ಇಂತಹ ಸಂದರ್ಭದಲ್ಲಿ ನಾನು ಬರ್ತೇನೆ ಎಂದು ವಿಡಿಯೋ ಮೂಲಕ ತಿಳಿಸಿದ್ದಾರೆ. ಕಾನೂನಿನಿಂದ ತಪ್ಪಿಸಿಕೊಳ್ಳಲು ಯಾರಿಗೂ ಸಾಧ್ಯವಿಲ್ಲ” ಎಂದಿದ್ದಾರೆ.

ಈ ಸಲ ಸುಮ್ಮನಿರೋಲ್ಲ ಎಸ್‌ಐಟಿ

ಪ್ರಜ್ವಲ್ ರೇವಣ್ಣ ವಿಡಿಯೋ ಬಿಟ್ಟ ಬೆನ್ನಲ್ಲೇ ಎಸ್ಐಟಿ ಅಲರ್ಟ್ ಆಗಿದೆ. ವಿಡಿಯೋ ಬಿಟ್ಟಿದ್ದು ಎಲ್ಲಿಂದ, ಯಾವ ದೇಶದಿಂದ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಆದರೆ ಕಳೆದ ಬಾರಿ ಕೂಡ ಪ್ರಜ್ವಲ್ ರೇವಣ್ಣ ಇದೇ ರೀತಿ ಕಾಲಾವಕಾಶ ಕೋರಿದ್ದರು. ಹೇಳಿದಂತೆ ವಿಚಾರಣೆಗೆ ಹಾಜರಾಗದೆ ದೂರ ಉಳಿದಿದ್ದರು. ಈ ಬಾರಿಯೂ ಹಾಗೆಯೇ ಮಾಡುವ ಸಾಧ್ಯತೆ ಕೂಡ ಇದೆ. ಹೀಗಾಗಿ ಈಗಲೇ ಪ್ರಜ್ವಲ್ ರೇವಣ್ಣ ಕಾಂಟ್ಯಾಕ್ಟ್‌ಗೆ ಎಸ್‌ಐಟಿ ಮುಂದಾಗಿದೆ.

ಕೇಂದ್ರ ತನಿಖಾ ಸಂಸ್ಥೆಗಳಿಗೂ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಇಂಟರ್‌ಪೋಲ್‌ಗೂ ಎಸ್‌ಐಟಿ ಮಾಹಿತಿ ಕೋರಲಿದೆ. ಈಗಾಗಲೇ ಪ್ರಜ್ವಲ್‌ ವಿರುದ್ಧ ಲುಕ್‌ಔಟ್‌ ನೋಟೀಸ್‌ (lookout notice) ಹಾಗೂ ಬ್ಲೂ ಕಾರ್ನರ್‌ ನೋಟೀಸ್‌ ಜಾರಿ ಮಾಡಲಾಗಿದೆ. ಆತನ ವಿರುದ್ಧ ಆರೆಸ್ಟ್ ವಾರಂಟ್ ಕೂಡ ಇದೆ. ಹೀಗಾಗಿ ಎಸ್‌ಐಟಿ ಒಂದು ತಿಂಗಳಿಂದ ಏರ್‌ಪೋರ್ಟ್‌ನಲ್ಲೇ ಠಿಕಾಣಿ ಹೂಡಿದೆ. ಏರ್‌ಪೋರ್ಟ್‌ನಿಂದ ಹೊರಕ್ಕೆ ಕಾಲಿಡುವ ಮೊದಲೇ ಇಮಿಗ್ರೇಶನ್‌ ಅಧಿಕಾರಿಗಳು ಪ್ರಜ್ವಲ್‌ ರೇವಣ್ಣನನ್ನು ವಶಕ್ಕೆ ಪಡೆದು ಎಸ್‌ಐಟಿಗೆ ಒಪ್ಪಿಸಲಿದ್ದಾರೆ.

Continue Reading

ಪ್ರಮುಖ ಸುದ್ದಿ

Bomb Threat : ತೆಲಂಗಾಣ ಡಿಸಿಎಂ ಮನೆಗೆ ಬಾಂಬ್​ ಬೆದರಿಕೆ; ಆತಂಕ

VISTARANEWS.COM


on

Bomb Threat
Koo

ಹೈದರಾಬಾದ್: ದೇಶದ ಮೂಲೆ ಮೂಲೆಯಿಂದ ದಿನ ಬೆಳಗ್ಗೆದ್ದ ಬಾಂಬ್​ ಬೆದರಿಕೆಯ (Bomb Threat) ಸುದ್ದಿಗಳು ಹರದಿ ಬರುತ್ತಿವೆ. ಅಂತೆಯೇ ಮಂಗಳವಾರ ತೆಲಂಗಾಣ ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಅವರ ಅಧಿಕೃತ ನಿವಾಸ ಪ್ರಜಾ ಭವನಕ್ಕೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಕರೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕರೆ ಮಾಡಿದ ವ್ಯಕ್ತಿ ‘ಡಯಲ್-100’ ಗೆ ಕರೆ ಮಾಡಿ ಬಾಂಬ್ ಇರಿಸಲಾಗಿದೆ ಮತ್ತು ಅದು ಹೈದರಾಬಾದ್ ನಗರದ ಪ್ರಜಾ ಭವನದಲ್ಲಿ ಸ್ಫೋಟಗೊಳ್ಳುತ್ತದೆ ಎಂದು ಎಚ್ಚರಿಸಿದ್ದ. ಬಳಿಕ ಅದು ಹುಸಿ ಬಾಂಬ್​ ಕರೆ ಎಂದು ಗೊತ್ತಾಗಿದೆ.

ಫೋನ್ ಕರೆ ಬಂದ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಬಾಂಬ್ ನಿಷ್ಕ್ರಿಯ ದಳದ ಸಹಾಯದಿಂದ ಆವರಣದಲ್ಲಿ ಶೋಧ ನಡೆಸಿದ್ದಾರೆ.. ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ ಮತ್ತು ಬಾಂಬ್ ಬೆದರಿಕೆ ಕರೆ ಹುಸಿ ಎಂದು ತಿಳಿದುಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹುಸಿ ಕರೆ ಹೈದರಾಬಾದ್​ನಿಂದ ಮಾಡಲಾಗಿದೆ. ಕರೆ ಮಾಡಿದವರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದರು.

ಪ್ರಾಥಮಿಕ ತನಿಖೆಯ ಸಮಯದಲ್ಲಿ, ಕರೆ ಮಾಡಿದವರು ಬೆಳಿಗ್ಗೆಯಿಂದ ಇಂತಹ ಕರೆಗಳನ್ನು ಮಾಡುತ್ತಿದ್ದರು ಎಂದು ತಿಳಿದುಬಂದಿದೆ ಎಂದು ಅಧಿಕಾರಿ ಹೇಳಿದರು.

ಇದನ್ನೂ ಓದಿ: Cab Service : ಆ್ಯಪ್​ ಆಧಾರಿತ ಕ್ಯಾಬ್​ಗಳು ಶೇ. 5ಕ್ಕಿಂತ ಹೆಚ್ಚು ಸೇವಾ ಶುಲ್ಕ ವಿಧಿಸುವಂತಿಲ್ಲ; ಸರ್ಕಾರದ ಆದೇಶಕ್ಕೆ ಕೋರ್ಟ್​ ಮನ್ನಣೆ

ಇದಕ್ಕೂ ಮುನ್ನ ತೆಲಂಗಾಣದ ಪಂಚಾಯತ್ ರಾಜ್, ಗ್ರಾಮೀಣಾಭಿವೃದ್ಧಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಡಿ.ಅನಸೂಯಾ ಅವರು ಪ್ರಜಾ ಭವನಕ್ಕೆ ಭೇಟಿ ನೀಡಿ ಅಧಿಕಾರಿಗಳು ಮತ್ತು ಉಪ ಮುಖ್ಯಮಂತ್ರಿಯ ಕುಟುಂಬ ಸದಸ್ಯರನ್ನು ಭೇಟಿಯಾಗಿ ಈ ವಿಷಯದ ಬಗ್ಗೆ ಚರ್ಚಿಸಿದರು. ಸಂದರ್ಶಕರನ್ನು ಕೂಲಂಕಷವಾಗಿ ಪರಿಶೀಲಿಸುವಂತೆ ಮತ್ತು ಪ್ರಜಾ ಭವನದಲ್ಲಿ ಭದ್ರತೆಯನ್ನು ಹೆಚ್ಚಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಪ್ರಜಾ ಭವನದ ಒಂದು ಭಾಗವನ್ನು ವಾರಕ್ಕೆ ಎರಡು ಬಾರಿ ನಡೆಯುವ ಕುಂದುಕೊರತೆ ನಿವಾರಣಾ ಸಭೆಯಾದ ‘ಪ್ರಜಾ ವಾಣಿ’ ಕಾರ್ಯಕ್ರಮಕ್ಕೆ ಬಳಸಲಾಗುತ್ತದೆ.

Continue Reading

ಪ್ರಮುಖ ಸುದ್ದಿ

Lok Sabha Election : ಷೇರು ಮಾರುಕಟ್ಟೆ ಸಂಸ್ಥೆಯ ಪ್ರಕಾರ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚು ಸೀಟು ಗೆಲ್ಲಲಿದೆ; ಲೆಕ್ಕಾಚಾರ ಹೀಗಿದೆ

Lok Sabha Election : ಏಪ್ರಿಲ್ 19ರಂದು ಚುನಾವಣೆಗಳು ಪ್ರಾರಂಭವಾದಾಗಿನಿಂದ ಪ್ರಮುಖ ಷೇರು ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ತಲಾ 3 ಪ್ರತಿಶತದಷ್ಟು ಪ್ರಗತಿ ಕಂಡಿದೆ. ಕಡಿಮೆ ಮತದಾನ ಹಾಗೂ ಸರ್ಕಾರದ ಅಸ್ಥಿರತೆಯ ಬಗ್ಗೆ ಇದ್ದ ಆರಂಭಿಕ ಕಳವಳಗಳು ನಿಧಾನವಾಗಿದೆ. ಆದರೆ, ಫಿಯರ್ ಗೇಜ್ ಇಂಡಿಯಾ ವಿಐಎಕ್ಸ್ ಪ್ರಕಾರ ಮಾರುಕಟ್ಟೆ ಚಂಚಲತೆ ಮುಂದುವರಿದಿದೆ.

VISTARANEWS.COM


on

Lok Sabha Election
Koo

ಬೆಂಗಳೂರು: ಲೋಕಸಭಾ ಚುನಾವಣೆಯ (Lok Sabha Election) ಆರು ಹಂತಗಳ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಆನ್​ಲೈನ್​ ಸ್ಟಾಕ್ ಟ್ರೇಡಿಂಗ್ ಮತ್ತು ಹೂಡಿಕೆ ಸಂಸ್ಥೆಯಾಗಿರುವ ಐಐಎಫ್ಎಲ್ ಸೆಕ್ಯುರಿಟೀಸ್ ತನ್ನ ಸಮೀಕ್ಷೆಯನ್ನು ಪ್ರಕಟಿಸಿದೆ. ಅದರ ಪ್ರಕಾರ ಈ ಬಾರಿ ಬಿಜೆಪಿ 320 ಸ್ಥಾನಗಳನ್ನು ಸಲೀಸಾಗಿ ಗೆಲ್ಲಲಿದೆ. ಇದು 2019ರ 303 ಸೀಟ್​ಗಳಿಂತ ಅಧಿಕ. ಆರನೇ ಹಂತದ ಮತದಾನ ಸೇರಿದಂತೆ ಬಿಜೆಪಿಗೆ ಹೆಚ್ಚು ಮತಗಳು ಬೀಳುವ ಹಿಂದಿ ಹೃದಯಭಾಗದ ರಾಜ್ಯಗಳಲ್ಲಿ 3 ಶೇಕಡಾ ಮತ ಚಲಾವಣೆ ಕುಸಿತ ಕಂಡಿದೆ. (ಹಿಂದಿಯೇತರ ರಾಜ್ಯಗಳಲ್ಲಿ 0.6 ಶೇಕಡಾ ಕುಸಿತ) ಇದು ಬಿಜೆಪಿಗೆ ನಷ್ಟ ಎಂದು ಅಂದಾಜಿಸಲಾಗುತ್ತದೆ. ಇದರ ಹೊರತಾಗಿಯೂ, ಉತ್ತರ ಪ್ರದೇಶ (ಎಸ್ಪಿ-ಬಿಎಸ್ಪಿ ಮೈತ್ರಿಯ ಅನುಪಸ್ಥಿತಿ), ಒಡಿಶಾ, ಪಶ್ಚಿಮ ಬಂಗಾಳ, ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಸಿಗುವ ಸ್ಥಾನಗಳ ಲಾಭಗಳ ಮೂಲಕ ಬಿಜೆಪಿ ಬಹುಮತ ಹೆಚ್ಚಿಸಿಕೊಳ್ಳಲಿದೆ ಎಂದು ಬ್ರೋಕರೇಜ್ ಸಂಸ್ಥೆ ಅಂದಾಜಿಸಿದೆ.

ಒಟ್ಟು ಆರು ಹಂತಗಳ ಮತದಾನ ಮುಕ್ತಾಯವಾಗಿದ್ದು ಶೇಕಡಾ 89ರಷ್ಟು ಮತಗಳು ಚಲಾವಣೆಯಾಗಿದೆ. ಈ 486 ಸ್ಥಾನಗಳ ಪೈಕಿ ಬಿಜೆಪಿ 278 ಸ್ಥಾನಗಳಲ್ಲಿ ಗೆಲುವು ಸಾಧಿಸಿಲಿದೆ. ಜೂನ್ 1 ರಂದು ನಡೆಯಲಿರುವ ಕೊನೆಯ ಹಂತದ ಚುನಾವಣೆಗೆ ಮುಂಚಿತವಾಗಿ ಮೊದಲ ಎರಡು ಹಂತಗಳಲ್ಲಿ ಮತದಾನದ ಪ್ರಮಾಣ ಕುಸಿತ ಕಂಡಿದೆ. ಆದಾಗ್ಯೂ ಬಿಜೆಪಿ 320ರ ಗಡಿ ಮುಟ್ಟುವುದು ಖಚಿತ ಎಂದು ಅದು ಅಂದಾಜಿಸಿದೆ. ಇದೇ ವೇಳೆ ಕೊನೇ ಹಂತದ ಮತದಾನ 2019 ರ ಮಟ್ಟಕ್ಕಿಂತ ಸ್ವಲ್ಪ ಕಡಿಮೆಯಾಗಬಹುದು ಸಮೀಕ್ಷೆ ಹೇಳಿದೆ.

ಏಪ್ರಿಲ್ 19ರಂದು ಚುನಾವಣೆಗಳು ಪ್ರಾರಂಭವಾದಾಗಿನಿಂದ ಪ್ರಮುಖ ಷೇರು ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ತಲಾ 3 ಪ್ರತಿಶತದಷ್ಟು ಪ್ರಗತಿ ಕಂಡಿದೆ. ಕಡಿಮೆ ಮತದಾನ ಹಾಗೂ ಸರ್ಕಾರದ ಅಸ್ಥಿರತೆಯ ಬಗ್ಗೆ ಇದ್ದ ಆರಂಭಿಕ ಕಳವಳಗಳು ನಿಧಾನವಾಗಿದೆ ಕಡಿಮೆಯಾಗಿದೆ. ಆದರೆ, ಫಿಯರ್ ಗೇಜ್ ಇಂಡಿಯಾ ವಿಐಎಕ್ಸ್ ಪ್ರಕಾರ ಮಾರುಕಟ್ಟೆ ಚಂಚಲತೆ ಮುಂದುವರಿದಿದೆ.

ಇದನ್ನೂ ಓದಿ: Lok Sabha Election : ಲವ್​ ಜಿಹಾದ್ ಶುರುವಾಗಿದ್ದೇ ಜಾರ್ಖಂಡ್​ನಿಂದ; ಜೆಎಮ್​ಎಮ್​ ವಿರುದ್ಧ ಮೋದಿ ಗಂಭೀರ ಆರೋಪ

1951-67ನ್ನು ಹೊರತುಪಡಿಸಿ ಭಾರತದಲ್ಲಿ ಸತತವಾಗಿ ನಡೆದ 3 ಲೋಕಸಭಾ ಚುನಾವಣೆಗಳಲ್ಲಿ ಮತದಾನದ ಪ್ರಮಾಣ ಹೆಚ್ಚಳಗೊಂಡ ಉದಾಹರಣೆಗಳು ಇಲ್ಲ. ಅಂತೆಯೇ 2014 ಮತ್ತು 2019 ರ ಚುನಾವಣೆಗಳಲ್ಲಿ ಮತದಾನದ ಪ್ರಮಾಣ ಹೆಚ್ಚಳ ಕಂಡ ನಂತರ 2024 ರ ಚುನಾವಣೆಯಲ್ಲಿ ಯಥಾವತ್​ ಪ್ರಮಾಣ ಸ್ವಲ್ಪ ಕುಸಿತ ಕಂಡಿದೆ ಎಂದು ಐಐಎಫ್ಎಲ್ ಸೆಕ್ಯುರಿಟೀಸ್ ಹೇಳಿದೆ.

ಐಐಎಫ್ಎಲ್ ಸೆಕ್ಯುರಿಟೀಸ್ ಪ್ರಕಾರ, ಉತ್ತರ ಪ್ರದೇಶದಲ್ಲಿ ಬಿಜೆಪಿ 2019 ರ ಒಟ್ಟು ಸ್ಥಾನಕ್ಕೆ ಇನ್ನೂ 10 ಸ್ಥಾನಗಳನ್ನು ಸೇರ್ಪಡೆಗೊಳಿಸಲಿದೆ. ಅಂದರೆ ಒಟ್ಟು 80ರಲ್ಲಿ 72 ಬಿಜೆಪಿ ಪಾಲಾಗಲಿದೆ. 2019ರಲ್ಲಿ ಅದು 62 ಆಗಿತ್ತು. ನರೇಂದ್ರ ಮೋದಿ ನೇತೃತ್ವದ ಪಕ್ಷವು ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ 2019ಕ್ಕಿಂತ ತಲಾ 5 ಹೆಚ್ಚುವರಿ ಸ್ಥಾನಗಳನ್ನು ಗಳಿಸಲದೆ. ಬಂಗಾಳದಲ್ಲಿ 18ರಿಂದ 23ಕ್ಕೆ ಏರಿಕೆಯಾದರೆ, ಒಡಿಶಾದಲ್ಲಿ 8ರಿಂದ 13ಕ್ಕೆ ಜಿಗಿಯಲಿದೆ. ಅಲ್ಲದೆ, ತೆಲಂಗಾಣ ಮತ್ತು ಆಂಧ್ರಪ್ರದೇಶ ತಲಾ 3 ಸ್ಥಾನಗಳನ್ನು ಪಡೆಯಲಿದೆ.

ಬೇಸ್​ ಪಾಯಿಂಟ್​ಗಳ ಕುಸಿತ

6 ಹಂತಗಳ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಮತದಾನದ ಪ್ರಮಾಣದಲ್ಲಿ ಸರಾಸರಿ 150 ಬೇಸಿಸ್ ಪಾಯಿಂಟ್​​ಗಳ ಕುಸಿತ ಕಂಡುಬಂದಿದೆ. ಮೊದಲ ಹಂತದಲ್ಲಿ ಮತದಾನದ 400 ಬೇಸಿಸ್ ಪಾಯಿಂಟ್​ಗಳ ಕುಸಿತ ಹೋಲಿಸಿದರೆ ಇದು ಕಡಿಮೆ. ಹಂತ 4 ಮತ್ತು 5ನೇ ಹಂತದಲ್ಲಿ 2019 ಕ್ಕೆ ಹೋಲಿಸಿದರೆ ಅಲ್ಪ ಏರಿಕೆ ಕಂಡಿದ್ದು. 6 ನೇ ಹಂತವು ಅಲ್ಪ ಕುಸಿತ ದಾಖಲಾಗಿದೆ ಐಐಎಫ್ಎಲ್ ಸೆಕ್ಯುರಿಟೀಸ್ ಹೇಳಿದೆ.

2019 ರ ಚುನಾವಣೆಗೆ ಹೋಲಿಸಿದರೆ 486 ಸ್ಥಾನಗಳಲ್ಲಿ ಒಟ್ಟು 156 ಸ್ಥಾನಗಳಲ್ಲಿ ಮತದಾನದ ಪ್ರಮಾಣ ಹೆಚ್ಚಾಗಿದೆ ಎಂದು ಐಐಎಫ್ಎಲ್ ಸೆಕ್ಯುರಿಟೀಸ್ ತಿಳಿಸಿದೆ.

ಅನಿರೀಕ್ಷಿತ ಫಲಿತಾಂಶ ಅಸಾಧ್ಯ

ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಭಾರಿ ಪ್ರಮಾಣದ ಮತ ಹಂಚಿಕೆ ವ್ಯತ್ಯಾಸ ಆಗಿದೆ. ಹೀಗಾಗಿ 2024 ರ ಚುನಾವಣೆಯ ಫಲಿತಾಂಶ 2004 ರ ಚುನಾವಣೆಗಳಂತೆ ಅಚ್ಚರಿಯ ಫಲಿತಾಂಶವನ್ನು ಪ್ರಕಟಿಸುವುದಿಲ್ಲ ಎಂದು ಐಐಎಫ್ಎಲ್ ದೃಢವಾಗಿ ಹೇಳಿದೆ.

ಕರ್ನಾಟಕದಲ್ಲಿ ನಷ್ಟ

“ಮೈತ್ರಿ / ಅಭ್ಯರ್ಥಿ ಆಯ್ಕೆ ಸಮಸ್ಯೆಗಳಿಂದಾಗಿ ರಾಜಸ್ಥಾನ, ಕರ್ನಾಟಕ ಮತ್ತು ಹರಿಯಾಣ ರಾಜ್ಯಗಳಲ್ಲಿ ಬಿಜೆಪಿಗೆ ನಷ್ಟವಾಗಬಹುದು. ಆದರೆ, ಮಹಾರಾಷ್ಟ್ರದಲ್ಲಿ ಎನ್​ಡಿಎ 2 ಸ್ಥಾನಗಳನ್ನು ಹೆಚ್ಚಿಸಿಕೊಳ್ಳಲಿದೆ ಎಂದು ಅಂದಾಜಿಸಿದೆ. 2019 ರಲ್ಲಿ 224 ಸ್ಥಾನಗಳಲ್ಲಿ ಶೇಕಡಾ 50ಕ್ಕಿಂತ ಹೆಚ್ಚು ಮತ ಪಡೆಯುವ ಮೂಲಕ ಬಿಜೆಪಿ ತನ್ನ ಬಹುಮತವನ್ನು ಉಳಿಸಿಕೊಳ್ಳುತ್ತದೆ ಐಐಎಫ್ಎಲ್ ಸೆಕ್ಯುರಿಟೀಸ್ ಹೇಳಿದೆ.

Continue Reading

ಕರ್ನಾಟಕ

Toyota: ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024; ಟಿಟಿಟಿಐ ವಿದ್ಯಾರ್ಥಿಗಳ ಉತ್ತಮ ಸಾಧನೆ

Toyota: ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ (ಎನ್‌ಎಸ್‌ಡಿಸಿ) ದಿಂದ ನವದೆಹಲಿಯ ಯಶೋಭೂಮಿ ದ್ವಾರಕಾದಲ್ಲಿ ಆಯೋಜಿಸಿದ್ದ ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024 ರಲ್ಲಿ ಟೊಯೊಟಾ ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ) ಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

VISTARANEWS.COM


on

Toyota Technical Training Institute students Excellent performance in India Skills Competition 2024
Koo

ರಾಮನಗರ: ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ (ಎನ್‌ಎಸ್‌ಡಿಸಿ) ದಿಂದ ನವದೆಹಲಿಯ ಯಶೋಭೂಮಿ ದ್ವಾರಕಾದಲ್ಲಿ ಆಯೋಜಿಸಿದ್ದ ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024 ರಲ್ಲಿ ಟೊಯೊಟಾ (Toyota) ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ) ಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಸಂಯೋಜಿತ ಉತ್ಪಾದನೆ (ಎಡಿಟಿವ್ ಮ್ಯಾನುಫ್ಯಾಕ್ಚರಿಂಗ್ ) ವಿಭಾಗದ ವೈಯಕ್ತಿಕ ಪ್ರತಿಸ್ಪರ್ಧಿಯಾಗಿ ಪ್ರೇಮ್. ವಿ ಚಿನ್ನದ ಪದಕವನ್ನು ಗಳಿಸಿದ್ದಾರೆ. ಮ್ಯಾನುಫ್ಯಾಕ್ಚರಿಂಗ್ ಟೀಮ್ ಚಾಲೆಂಜ್‌ನಲ್ಲಿ ಮೋಹಿತ್ ಎಂ.ಯು, ಹರೀಶ್ ಆರ್, ಮತ್ತು ನೆಲ್ಸನ್ ವಿ ತಂಡ ಚಿನ್ನದ ಪದಕಗಳನ್ನು ಪಡೆದುಕೊಂಡಿದೆ.

ಮೆಕಾಟ್ರಾನಿಕ್ಸ್ ವಿಭಾಗದಲ್ಲಿ ದರ್ಶನ್ ಗೌಡ ಸಿ.ಎಸ್. ಮತ್ತು ಭಾನು ಪ್ರಸಾದ್ ಎಸ್.ಎಂ ತಂಡ ಚಿನ್ನದ ಪದಕ ಗಳಿಸಿದೆ. ಹೇಮಂತ್ ಕೆ.ವೈ ಮತ್ತು ಉದಯ್ ಕುಮಾರ್ ಬಿ ತಂಡ ಬೆಳ್ಳಿ ಪದಕ ಗಳಿಸಿದೆ. ಇದಲ್ಲದೆ, ರೋಹನ್ ಎ.ಎಸ್. ಬೆಳ್ಳಿ ಪದಕ ಮತ್ತು ಸುದೀಪ್ ಎಸ್.ಎಂ. ಅವರು ಕಾರ್ ಪೇಂಟಿಂಗ್‌ನಲ್ಲಿ ವೈಯಕ್ತಿಕ ಸ್ಪರ್ಧಿಯಾಗಿ ಮೆಡಲಿಯನ್ ಆಫ್ ಎಕ್ಸಲೆನ್ಸ್ ಪಡೆದಿದ್ದಾರೆ.

ಇದನ್ನೂ ಓದಿ: Credit Card Safety Tips: ಕ್ರೆಡಿಟ್‌ ಕಾರ್ಡ್ ವಂಚನೆಯಿಂದ ಪಾರಾಗಲು ಇಲ್ಲಿದೆ 9 ಸಲಹೆ

ನವದೆಹಲಿಯ ಯಶೋಭೂಮಿ ದ್ವಾರಕಾದಲ್ಲಿ ನಡೆದ ಸ್ಪರ್ಧೆಯ “ಆಫ್-ಸೈಟ್” ಭಾಗದ ನಾಲ್ಕು ವಿಭಾಗಗಳಲ್ಲಿ ಟಿಟಿಟಿಐ ಭಾಗವಹಿಸಿತ್ತು. ಮ್ಯಾನುಫ್ಯಾಕ್ಚರಿಂಗ್ ಟೀಮ್ ಚಾಲೆಂಜ್, ಮೆಕಾಟ್ರಾನಿಕ್ಸ್, ಕಾರ್ ಪೇಂಟಿಂಗ್ ಮತ್ತು ಎಡಿಟಿವ್ ಮ್ಯಾನುಫ್ಯಾಕ್ಚರಿಂಗ್ ಸೇರಿದಂತೆ ಹಲವು ವಿಭಾಗಗಳಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಟಿಟಿಟಿಐನ ವಿದ್ಯಾರ್ಥಿಗಳು ಅದ್ಭುತ ಕೌಶಲ್ಯ ಮತ್ತು ಡೆಡಿಕೇಷನ್ ಅನ್ನು ಪ್ರದರ್ಶಿಸಿದ್ದಾರೆ.

ಈ ವೇಳೆ ಎನ್‌ಎಸ್‌ಡಿಸಿ ಯ ಮಾರ್ಕೆಟಿಂಗ್ ಮತ್ತು ಕಮ್ಯುನಿಕೇಷನ್ಸ್ ಜನರಲ್ ಮ್ಯಾನೇಜರ್ ಮೋನಿಕಾ ನಂದಾ ಮಾತನಾಡಿ, “ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024 ರಲ್ಲಿ ಗಮನಾರ್ಹ ಸಾಧನೆ ಮಾಡಿದ ಟೊಯೋಟಾ ಟೆಕ್ನಿಕಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ (ಟಿಟಿಟಿಐ) ನ ವಿದ್ಯಾರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅವರ ಅನುಕರಣೀಯ ಕೌಶಲ್ಯಗಳು ಮತ್ತು ಸಮರ್ಪಣೆ ಟಿಟಿಟಿಐನ ತರಬೇತಿ ಕಾರ್ಯಕ್ರಮಗಳ ಪರಿಣಾಮಕಾರಿತ್ವಕ್ಕೆ ಸಾಕ್ಷಿಯಾಗಿದೆ. ಈ ವಿಜೇತರು ತಮ್ಮ ಸಂಸ್ಥೆಗೆ ಗೌರವವನ್ನು ತರುವುದಲ್ಲದೆ, ಜಾಗತಿಕ ಮಟ್ಟದಲ್ಲಿ ಭಾರತೀಯ ಕೌಶಲ್ಯ ಅಭಿವೃದ್ಧಿಯ ಖ್ಯಾತಿಯನ್ನು ಹೆಚ್ಚಿಸುತ್ತಾರೆ. ವಿಶ್ವ ಕೌಶಲ್ಯ ಸ್ಪರ್ಧೆಗೆ ಆಯ್ಕೆಯಾದವರು ಈ ಶ್ರೇಷ್ಠತೆಯ ಪರಂಪರೆಯನ್ನು ಮುಂದುವರಿಸುತ್ತಾರೆ. ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತವನ್ನು ಹೆಮ್ಮೆಪಡುವಂತೆ ಮಾಡುತ್ತಾರೆ ಎಂದು ನಮಗೆ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಹಣಕಾಸು ಮತ್ತು ಆಡಳಿತದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಜಿ.ಶಂಕರ ಮಾತನಾಡಿ, “ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024 ರಲ್ಲಿ ಟಿಟಿಟಿಐ ವಿದ್ಯಾರ್ಥಿಗಳ ಗಮನಾರ್ಹ ಸಾಧನೆಗಳ ಬಗ್ಗೆ ನಾವು ಅಪಾರ ಹೆಮ್ಮೆ ಪಡುತ್ತೇವೆ. ಅವರ ಯಶಸ್ವಿ ಪ್ರಯಾಣ ನಮಗೆ ಹೆಚ್ಚು ಆನಂದವನ್ನು ನೀಡಿದೆ. ಕಠಿಣ ಪರಿಶ್ರಮದಿಂದಾಗಿ ಈ ಮೈಲಿಗಲ್ಲನ್ನು ವಿದ್ಯಾರ್ಥಿಗಳು ತಲುಪಿದ್ದಾರೆ ಎಂದು ತಿಳಿಸಿದ್ದಾರೆ.

Continue Reading
Advertisement
Rishab Pant
ಪ್ರಮುಖ ಸುದ್ದಿ18 mins ago

Rishabh Pant : ವಿಶ್ವಕಪ್​​ಗೆ ಮುನ್ನ ಟೀಮ್ ಇಂಡಿಯಾ ಜೆರ್ಸಿ ಧರಿಸಿದ ರಿಷಭ್ ಪಂತ್ ವಿಡಿಯೋ ಹಂಚಿಕೊಂಡ ಬಿಸಿಸಿಐ

Wildlife Sanctuaries
ಪರಿಸರ18 mins ago

Wildlife Sanctuaries: ಮಳೆ ಬರುವ ಮುನ್ನ ಈ ವನ್ಯಜೀವಿಧಾಮಗಳನ್ನು ನೋಡಲು ಪ್ರಯತ್ನಿಸಿ

T20 World Cup
ಕ್ರೀಡೆ48 mins ago

T20 World Cup : ಭಾರತ- ಪಾಕ್ ಪಂದ್ಯ ಐಸಿಸ್​ ಉಗ್ರರಿಂದ ಬಾಂಬ್ ಬೆದರಿಕೆ

namaz on road
ಪ್ರಮುಖ ಸುದ್ದಿ1 hour ago

ವಿಸ್ತಾರ ಸಂಪಾದಕೀಯ: ನಡುರಸ್ತೆಯಲ್ಲೇಕೆ ನಮಾಜ್‌ ಮಾಡಬೇಕು?

Dina Bhavishya
ಭವಿಷ್ಯ1 hour ago

Dina Bhavishya : ಈ ರಾಶಿಯವರು ಜಂಟಿ ಹೂಡಿಕೆ ವ್ಯವಹಾರದಿಂದ ದೂರವಿರಿ

Prajwal Revanna Case
ಪ್ರಮುಖ ಸುದ್ದಿ7 hours ago

Prajwal Revanna Case : ಜರ್ಮನಿಯಿಂದ ಭಾರತಕ್ಕೆ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ

chakravarthy sulibele
ಕರ್ನಾಟಕ8 hours ago

Chakravarthy Sulibele : ಮಂಡಿಯೂರಿ ಭೈರಪ್ಪ ಅವರಿಂದ ಸಾವರ್ಕರ್ ಪ್ರಶಸ್ತಿ ಸ್ವೀಕರಿಸಿದ ಚಕ್ರವರ್ತಿ ಸೂಲಿಬೆಲೆ

Cyber Crime
ಪ್ರಮುಖ ಸುದ್ದಿ8 hours ago

Cyber Crime : ಹೆಣ್ಣು ಮಕ್ಕಳ ಫೋಟೋ ಅಶ್ಲೀಲಗೊಳಿಸಿ ಪೋಸ್ಟ್​ ಮಾಡುತ್ತಿದ್ದವನ ಬಂಧನ

Bomb Threat
ಪ್ರಮುಖ ಸುದ್ದಿ8 hours ago

Bomb Threat : ತೆಲಂಗಾಣ ಡಿಸಿಎಂ ಮನೆಗೆ ಬಾಂಬ್​ ಬೆದರಿಕೆ; ಆತಂಕ

Acid attack
ಕರ್ನಾಟಕ9 hours ago

Acid attack: ಮನೆ ಬಾಗಿಲು ತೆರೆಯದ ಹಿನ್ನೆಲೆ ವಿವಾಹಿತ ಪ್ರಿಯತಮೆಗೆ ಆ್ಯಸಿಡ್ ಎರಚಿದ ಪ್ರಿಯಕರ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ11 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು19 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ7 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌