INSAT-3DS Launch: ಇಂದು ಇಸ್ರೋದ ಹವಾಮಾನ ಉಪಗ್ರಹ ಉಡಾವಣೆ; ಲೈವ್‌ಸ್ಟ್ರೀಮಿಂಗ್‌ ಇಲ್ಲಿ ಲಭ್ಯವಿದೆ, ನೋಡಿ - Vistara News

ಪ್ರಮುಖ ಸುದ್ದಿ

INSAT-3DS Launch: ಇಂದು ಇಸ್ರೋದ ಹವಾಮಾನ ಉಪಗ್ರಹ ಉಡಾವಣೆ; ಲೈವ್‌ಸ್ಟ್ರೀಮಿಂಗ್‌ ಇಲ್ಲಿ ಲಭ್ಯವಿದೆ, ನೋಡಿ

INSAT-3DS Launch: ಇಸ್ರೋ ಇಂದು ಸಂಜೆ ನಡೆಸಲಿರುವ ಹವಾಮಾನ ಉಪಗ್ರಹದ ಉಡಾವಣೆಯನ್ನು ಇಂದು ಸಂಜೆ 5.35ಕ್ಕೆ ನೀವು ಈ ಕೆಳಗಿನ ಲಿಂಕ್‌ಗಳಲ್ಲಿ ವೀಕ್ಷಿಸಬಹುದು.

VISTARANEWS.COM


on

INSAT-3DS Launch
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ – ISRO) ಇಂದು ಸಂಜೆ 5.35ಕ್ಕೆ ಸರಿಯಾಗಿ ತನ್ನ ಹವಾಮಾನ ಉಪಗ್ರಹ (Weather Satellite) INSAT-3DS ಅನ್ನು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ (Satish Dhawan Space Station) ಉಡಾವಣೆ ಮಾಡಲಿದೆ.

ಈ ಉಪಗ್ರಹವನ್ನು GSLV-F14 ಬಾಹ್ಯಾಕಾಶ ನೌಕೆಯ ಮೂಲಕ ಉಡಾವಣೆ ಮಾಡಲು ಇಸ್ರೋ ಸಿದ್ಧವಾಗಿದೆ. GSLV-F14ಯ ಲಿಫ್ಟ್-ಆಫ್ ಅನ್ನು ಇಂದು ಸಂಜೆ 5.35 ಕ್ಕೆ ನಿಗದಿಪಡಿಸಲಾಗಿದೆ. ಇದನ್ನು ನೀವು ಈ ಕೆಳಗಿನ ಲಿಂಕ್‌ಗಳಲ್ಲಿ ವೀಕ್ಷಿಸಬಹುದು.

ಶ್ರೀಹರಿಕೋಟಾದಿಂದ ಉಡಾವಣೆಯ ನೇರಪ್ರಸಾರವನ್ನು ಬಾಹ್ಯಾಕಾಶ ಸಂಸ್ಥೆಯ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿರುವ ಲೈವ್‌ ಫಿಡ್‌ಬ್ಯಾಕ್‌ನಲ್ಲಿ ವೀಕ್ಷಿಸಬಹುದು. ಅಧಿಕೃತ ವೆಬ್‌ಸೈಟ್‌ನಲ್ಲಿ ಲೈವ್‌ಸ್ಟ್ರೀಮಿಂಗ್ ಲಭ್ಯವಿದೆ. ಹಾಗೆಯೇ ಇಸ್ರೋದ ಅಧಿಕೃತ ಫೇಸ್‌ಬುಕ್ ಖಾತೆ, ಇಸ್ರೋದ ಅಧಿಕೃತ ಯೂಟ್ಯೂಬ್ ಚಾನೆಲ್‌, ದೂರದರ್ಶನ – ನ್ಯಾಷನಲ್ ಟಿವಿ ಚಾನೆಲ್‌ನಲ್ಲಿಯೂ ಇದರ ಲೈವ್‌ ಲಭ್ಯವಿದೆ.

ವೆಬ್‌ಸೈಟ್:‌ https://www.isro.gov.in/
ಫೇಸ್‌ಬುಕ್:‌ https://www.facebook.com/ISRO/
ಯುಟ್ಯೂಬ್:‌ https://www.youtube.com/watch?v=jynmNenneFk

INSAT-3DS ಕುರಿತು ತಿಳಿದುಕೊಳ್ಳಬೇಕಾದದ್ದು ಇಲ್ಲಿದೆ:

1) INSAT-3DS ಉಪಗ್ರಹವನ್ನು ಹವಾಮಾನ ಮುನ್ಸೂಚನೆ ಮತ್ತು ವಿಪತ್ತು ಎಚ್ಚರಿಕೆಗಾಗಿ ಹವಾಮಾನ ವೀಕ್ಷಣೆಗಳು, ಭೂಮಿ ಮತ್ತು ಸಾಗರ ಮೇಲ್ಮೈಗಳ ಮೇಲ್ವಿಚಾರಣೆಗಾಗಿ ವಿನ್ಯಾಸಗೊಳಿಸಲಾಗಿದೆ.

2) ಉಪಗ್ರಹವು ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ INSAT-3D ಮತ್ತು INSAT-3DR ಉಪಗ್ರಹಗಳೊಂದಿಗೆ ಹವಾಮಾನ ಸೇವೆಗಳನ್ನು ವೃದ್ಧಿಸುತ್ತದೆ.

3) ಭಾರತ ಹವಾಮಾನ ಇಲಾಖೆ (IMD), ಮಧ್ಯಮ-ಶ್ರೇಣಿಯ ಹವಾಮಾನ ಮುನ್ಸೂಚನೆಯ ರಾಷ್ಟ್ರೀಯ ಕೇಂದ್ರ (NCMRWF), ಭಾರತೀಯ ಉಷ್ಣವಲಯದ ಹವಾಮಾನ ಸಂಸ್ಥೆ (IITM), ರಾಷ್ಟ್ರೀಯ ಸಾಗರ ತಂತ್ರಜ್ಞಾನ ಸಂಸ್ಥೆ (NIOT) ಸೇರಿದಂತೆ ಭೂ ವಿಜ್ಞಾನ ಸಚಿವಾಲಯದ (MoES) ಹಲವಾರು ಇಲಾಖೆಗಳು, ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ ಕೇಂದ್ರ (INCOIS) ಮತ್ತು ಹಲವಾರು ಇತರ ಏಜೆನ್ಸಿಗಳು ಮತ್ತು ಸಂಸ್ಥೆಗಳು ಸುಧಾರಿತ ಹವಾಮಾನ ಮುನ್ಸೂಚನೆಗಳು ಮತ್ತು ಹವಾಮಾನ ಸೇವೆಗಳನ್ನು ಒದಗಿಸಲು INSAT-3DS ಉಪಗ್ರಹ ಡೇಟಾವನ್ನು ಬಳಸುತ್ತವೆ.

4) ಮಿಷನ್‌ನ ಪ್ರಾಥಮಿಕ ಉದ್ದೇಶ, ಭೂಮಿಯ ಮೇಲ್ಮೈಯ ಮೇಲ್ವಿಚಾರಣೆ, ಹವಾಮಾನ ಪ್ರಾಮುಖ್ಯತೆಯ ವಿವಿಧ ಫ್ರೀಕ್ವೆನ್ಸಿಯ ಚಾನಲ್‌ಗಳಲ್ಲಿ ಸಾಗರ ಪರಿಸರದ ವೀಕ್ಷಣೆ.

5) ಇದು ವಾತಾವರಣದ ವಿವಿಧ ಹವಾಮಾನದ ವಿವರವನ್ನು ಒದಗಿಸುವ ಗುರಿಯನ್ನು ಹೊಂದಿದೆ.

6) INSAT-3DS ಉಪಗ್ರಹವು ದತ್ತಾಂಶ ಸಂಗ್ರಹಣಾ ವೇದಿಕೆಗಳಿಂದ (DCPs) ದತ್ತಾಂಶ ಸಂಗ್ರಹಣೆ ಮತ್ತು ದತ್ತಾಂಶ ಪ್ರಸರಣ ಸಾಮರ್ಥ್ಯಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ.

7) ಉಪಗ್ರಹ ಸಹಾಯದಿಂದ ಹುಡುಕಾಟ ಮತ್ತು ರಕ್ಷಣಾ ಸೇವೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ.

8) ಇದರಲ್ಲಿ 51.7 ಮೀಟರ್ ಗಾತ್ರದ ರಾಕೆಟ್ ಇಮೇಜರ್ ಪೇಲೋಡ್‌ಗಳು, ಸೌಂಡರ್ ಪೇಲೋಡ್‌ಗಳು, ಡೇಟಾ ರಿಲೇ ಟ್ರಾನ್ಸ್‌ಪಾಂಡರ್‌ಗಳು, ಶೋಧ ಮತ್ತು ರಕ್ಷಣಾ ಟ್ರಾನ್ಸ್‌ಪಾಂಡರ್‌ಗಳು ಇವೆ. ಇವುಗಳನ್ನು ಮೋಡದ ಗುಣಲಕ್ಷಣಗಳು, ಮಂಜು, ಮಳೆ, ಹಿಮ, ಬೆಂಕಿಯನ್ನು ಅಧ್ಯಯನ ಮಾಡಲು ಬಳಸಲಾಗುತ್ತದೆ.

9) ಉಡಾವಣೆಯಾದ ಸುಮಾರು 20 ನಿಮಿಷಗಳ ನಂತರ INSAT-3DS ಉಪಗ್ರಹ ಕಕ್ಷೆಗೆ ಸೇರಲಿದೆ.

10) ನಂತರ ಉಪಗ್ರಹವನ್ನು ಜಿಯೋ-ಸ್ಥಾಯಿ ಕಕ್ಷೆಯಲ್ಲಿ ಇರಿಸುವ ಪ್ರಕ್ರಿಯೆ ನಡೆಯುತ್ತದೆ. ಇದು ಹೆಚ್ಚಿನ ಕುಶಲತೆಯ ಕಾರ್ಯ ಆಗಿದ್ದು, ಒಂದೆರಡು ದಿನಗಳಲ್ಲಿ ನಡೆಯುತ್ತದೆ.

11) ಇದು ಮೂರನೇ ತಲೆಮಾರಿನ, ನವೀಕರಿಸಿದ ಹವಾಮಾನ ಉಪಗ್ರಹವಾಗಿದೆ. ಉಪಗ್ರಹ 2,274 ಕೆಜಿ ತೂಕವಿದ್ದು, ಸುಮಾರು ₹480 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಇದನ್ನೂ ಓದಿ: INSAT-3DS Launch: ʼನಾಟಿ ಬಾಯ್‌ʼ ರಾಕೆಟ್‌ ಮೂಲಕ ಇಂದು ಭಾರತದ ಹವಾಮಾನ ಉಪಗ್ರಹ ಉಡಾವಣೆ; ಏಕೆ ಈ ಹೆಸರು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

EXPLAINER

CAA: ಸಿಎಎ ಅನ್ವಯ 14 ಜನಕ್ಕೆ ಭಾರತದ ಪೌರತ್ವ; ಏನಿದು ಕಾಯ್ದೆ? ಭಾರತದ ಮುಸ್ಲಿಮರಿಗೆ ತೊಂದರೆ ಇದೆಯೇ?

CAA: ದೆಹಲಿಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್‌ ಕುಮಾರ್‌ ಭಲ್ಲಾ ಅವರು ಭಾರತದ ಪೌರತ್ವ ಪ್ರಮಾಣಪತ್ರಗಳನ್ನು ನೀಡಿದ್ದಾರೆ. ಇದರೊಂದಿಗೆ ದೇಶದಲ್ಲಿ ಸಿಎಎ ಅನ್ವಯ ಪೌರತ್ವ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದಂತಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಸಾವಿರಾರು ಜನರಿಗೆ ಕೇಂದ್ರ ಸರ್ಕಾರವು ಭಾರತದ ಪೌರತ್ವ ನೀಡಲಿದೆ. ಅಷ್ಟಕ್ಕೂ ಸಿಎಎ ಎಂದರೇನು? ಕೇಂದ್ರದ ಪ್ರಮಾಣಪತ್ರಗಳಲ್ಲಿ ಏನಿರುತ್ತದೆ? ಇಲ್ಲಿದೆ ಮಾಹಿತಿ.

VISTARANEWS.COM


on

CAA
Koo

ನವದೆಹಲಿ: ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫಘಾನಿಸ್ತಾನದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡುವ ಪೌರತ್ವ (ತಿದ್ದುಪಡಿ) ಕಾಯ್ದೆ, 2019 (Citizenship Amendment Act) ಕಾಯ್ದೆ ಜಾರಿಯಾದ ಬೆನ್ನಲ್ಲೇ ಕೇಂದ್ರ ಸರ್ಕಾರವು 14 ಜನರಿಗೆ ಭಾರತದ ಪೌರತ್ವ (Indian Citizenship) ನೀಡಿದೆ. ದೆಹಲಿಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್‌ ಕುಮಾರ್‌ ಭಲ್ಲಾ ಅವರು ಭಾರತದ ಪೌರತ್ವ ಪ್ರಮಾಣಪತ್ರಗಳನ್ನು ನೀಡಿದ್ದಾರೆ. ಇದರೊಂದಿಗೆ ದೇಶದಲ್ಲಿ ಸಿಎಎ ಅನ್ವಯ ಪೌರತ್ವ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದಂತಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಸಾವಿರಾರು ಜನರಿಗೆ ಕೇಂದ್ರ ಸರ್ಕಾರವು ಭಾರತದ ಪೌರತ್ವ ನೀಡಲಿದೆ ಎಂದು ತಿಳಿದುಬಂದಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ಎಂದರೇನು?

2014 ರ ಡಿಸೆಂಬರ್ 31 ಕ್ಕಿಂತ ಮೊದಲು ನೆರೆಯ ಮುಸ್ಲಿಂ ಬಹುಸಂಖ್ಯಾತ ದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು ಮತ್ತು ಪಾರ್ಸಿಗಳಿಗೆ ಭಾರತೀಯ ಪೌರತ್ವಕ್ಕೆ ಮಾರ್ಗವನ್ನು ಒದಗಿಸಲು ಸಿಎಎ 1955 ರ ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಡಿಸೆಂಬರ್ 31, 2014 ರಂದು ಮತ್ತು ಅದಕ್ಕೂ ಮೊದಲು ಭಾರತಕ್ಕೆ ಆಗಮಿಸಿದ ಮುಸ್ಲಿಮರನ್ನು ಹೊರತುಪಡಿಸಿ ವಲಸಿಗರಿಗೆ ಈ ಕಾನೂನು ಅನ್ವಯಿಸುತ್ತದೆ.

ಸಿಎಎ ಅನುಷ್ಠಾನದ ಬಗ್ಗೆ ಆಡಳಿತಾರೂಢ ಭಾರತೀಯ ಜನತಾ ಪಕ್ಷವು ತನ್ನ ಹಿಂದಿನ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಆದರೆ ಅದರ ನಿಯಮಗಳನ್ನು ತಿಳಿಸಿರಲಿಲ್ಲ. ಕಾಯ್ದೆಯ 2019ರ ತಿದ್ದುಪಡಿಯ ಪ್ರಕಾರ ಡಿಸೆಂಬರ್ 31, 2014 ರವರೆಗೆ ಭಾರತಕ್ಕೆ ಪ್ರವೇಶಿಸಿದ ಮತ್ತು ತಮ್ಮ ಮೂಲ ದೇಶದಲ್ಲಿ “ಧಾರ್ಮಿಕ ಕಿರುಕುಳ ಅಥವಾ ಭಯ ಅಥವಾ ಧಾರ್ಮಿಕ ಕಿರುಕುಳ” ಅನುಭವಿಸಿದ ವಲಸಿಗರಿಗೆ ಭಾರತೀಯ ಪೌರತ್ವ ಲಭಿಸುತ್ತದೆ.

ಸಿಎಎಗೆ 2019ರ ತಿದ್ದುಪಡಿ ಮೂಲಕ ಮೇಲೆ ಹೇಳಿರುವ ದೇಶಗಳ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ನೀಡುವ ಕಾಯುವಿಕೆಯ ಹನ್ನೆರಡು ವರ್ಷಗಳನ್ನು ಕೇವಲ ಆರು ವರ್ಷಗಳಿಗೆ ಇಳಿಸಲಾಗಿದೆ. ಸಿಎಎ ಕುರಿತ ಗುಪ್ತಚರ ಬ್ಯೂರೋ ವರದಿಯ ಪ್ರಕಾರ, ಕಾಯ್ದೆಯ ನಿಯಮಗಳು ಪ್ರಕಟಗೊಂಡ ತಕ್ಷಣವೇ 30,000 ಕ್ಕೂ ಹೆಚ್ಚು ಫಲಾನುಭವಿಗಳು (ವಲಸಿಗರು) ಇದರ ಲಾಭವನ್ನು ಪಡೆಯುತ್ತಾರೆ.

ಯಾವ ದಾಖಲೆ ಕೊಡುವುದು ಕಡ್ಡಾಯ?

ಸಿಎಎ ಅಡಿಯಲ್ಲಿ ಭಾರತದ ಪೌರತ್ವ ಪಡೆಯಲು ವಲಸಿಗರು ಕೇಂದ್ರ ಸರ್ಕಾರಕ್ಕೆ ಹಲವು ದಾಖಲೆಗಳನ್ನು ನೀಡಬೇಕಾಗುತ್ತದೆ. ಜನನ ಪ್ರಮಾಣಪತ್ರ, ಬಾಡಿಗೆ ಮನೆಯಲ್ಲಿ ವಾಸವಿದ್ದರೆ ಅದರ ದಾಖಲೆ, ಗುರುತಿನ ಚೀಟಿ ಅಥವಾ ದಾಖಲೆ, ವಾಹನ ಚಾಲನಾ ಪರವಾನಗಿ ಸೇರಿ ಯಾವುದೇ ಪರವಾನಗಿ, ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡುವುದು ಕಡ್ಡಾಯವಾಗಿದೆ. ಇವುಗಳನ್ನು ಪರಿಶೀಲಿಸಿ ಕೇಂದ್ರ ಸರ್ಕಾರವು ಭಾರತದ ಪೌರತ್ವ ಪಡೆಯಲಿದ್ದಾರೆ.

ಭಾರತದ ಮುಸ್ಲಿಮರಿಗೆ ತೊಂದರೆ ಇಲ್ಲ

ಸಿಎಎ ಜಾರಿಯು ಭಾರತದ ಮುಸ್ಲಿಮರ ಪೌರತ್ವದ ಮೇಲೆ ಪರಿಣಾಮ ಬೀರಲು ಯಾವುದೇ ನಿಬಂಧನೆಗಳನ್ನು ಮಾಡಿಲ್ಲ. ಕಾನೂನಿಗೆ ಭಾರತದಲ್ಲಿರುವ 18 ಕೋಟಿ ಭಾರತೀಯ ಮುಸ್ಲಿಮರೊಂದಿಗೆ ಯಾವುದೇ ಸಂಬಂಧವಿಲ್ಲ. ಅವರು ತಮ್ಮ ಹಿಂದೂ ಸಹವರ್ತಿಗಳಂತೆ ಸಮಾನ ಹಕ್ಕುಗಳನ್ನು ಹೊಂದಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಇದಕ್ಕೂ ಮೊದಲು, ಸಿಎಎ ಎಂದರೆ, ಭಾರತದಲ್ಲಿರುವ ಮುಸ್ಲಿಮರ ಪೌರತ್ವವನ್ನು ರದ್ದುಗೊಳಿಸುವುದು ಎಂಬ ವದಂತಿ ಹಬ್ಬಿಸಲಾಗಿತ್ತು.

ಗೃಹ ಸಚಿವಾಲಯದ 2021-22ರ ವಾರ್ಷಿಕ ವರದಿಯ ಪ್ರಕಾರ ಏಪ್ರಿಲ್ 1, 2021ರಿಂದ ಡಿಸೆಂಬರ್ 31, 2021 ರವರೆಗೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಈ ಮುಸ್ಲಿಮೇತರ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಒಟ್ಟು 1,414 ವಿದೇಶಿಯರಿಗೆ ಪೌರತ್ವ ಕಾಯ್ದೆ, 1955 ರ ಅಡಿಯಲ್ಲಿ ಭಾರತೀಯ ಪೌರತ್ವವನ್ನು ನೀಡಲಾಗಿದೆ.

ಇದನ್ನೂ ಓದಿ: CAA: ಸಿಎಎ ಅಡಿಯಲ್ಲಿ 14 ಜನರಿಗೆ ಭಾರತದ ಪೌರತ್ವ ನೀಡಿದ ಮೋದಿ ಸರ್ಕಾರ; ಸರ್ಟಿಫಿಕೇಟ್‌ ಕೂಡ ಹಸ್ತಾಂತರ!

Continue Reading

ರಾಜಕೀಯ

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!

Prajwal Revanna Case: ಪ್ರಜ್ವಲ್‌ ರೇವಣ್ಣ ಮೇಲೆ ಕೇಸ್‌ ದಾಖಲಾಗಿ 17 ದಿನವೇ ಗತಿಸಿಹೋಗಿದೆ. ಇನ್ನು ಈ ಕೇಸ್‌ಗೆ ಸಂಬಂಧಿಸಿ ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್‌ ಮಾಡಿದ ಆರೋಪ ಎದುರಿಸಿ ಎಚ್‌.ಡಿ. ರೇವಣ್ಣ ಜೈಲು ಸೇರಿದ್ದರೂ ಆ ಕಡೆ ಭವಾನಿ ಕಣ್ಣೆತ್ತಿಯೂ ನೋಡಿಲ್ಲ. ಇನ್ನು ಇದೇ ಕೇಸ್‌ ವಿಚಾರವಾಗಿ ಎಸ್ಐಟಿ ಎರಡು ಬಾರಿ ನೋಟಿಸ್‌ ಕೊಟ್ಟರೂ ಡೋಂಟ್‌ ಕೇರ್‌ ಎಂಬಂತೆ ಕುಳಿತುಬಿಟ್ಟಿದ್ದಾರೆ. ಪ್ರಜ್ವಲ್ ರೀತಿಯಲ್ಲಿ ತಾಯಿಯೂ ವಿಚಾರಣೆಗೆ ಬರಲು ಹಿಂದೇಟು ಹಾಕಿದ್ದಾರೆ. ಈ ಎಲ್ಲ ಬೆಳವಣಿಗೆ ಮಧ್ಯೆ ರೇವಣ್ಣ ಅವರಿಗೆ ಜಾಮೀನು ಸಿಕ್ಕರೂ ಖುಷಿ ವ್ಯಕ್ತಪಡಿಸೋಕೆ ಕೂಡಾ ಅವರು ಕಾಣಿಸಿಕೊಳ್ಳಲಿಲ್ಲ. ಇದೆಲ್ಲವೂ ದೇವೇಗೌಡರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಸಂಬಂಧ ಎಚ್‌.ಡಿ. ರೇವಣ್ಣ ಅವರ ಬಳಿ ವಿಸ್ತೃತವಾಗಿ ಚರ್ಚೆ ಮಾಡಿ ತಾಕೀತು ಮಾಡಿದ್ದಾರೆನ್ನಲಾಗಿದೆ.

VISTARANEWS.COM


on

Prajwal Revanna Case Deve Gowda lashes out at Bhavani
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣ ಹಾಗೂ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭವಾನಿ ರೇವಣ್ಣ (Bhavani Revanna) ಅವರ ನಡೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು (HD Devegowda) ಗರಂ ಆಗಿದ್ದಾರೆ ಎನ್ನಲಾಗಿದೆ. ಇನ್ನು ಮುಂದೆ ಕುಟುಂಬಕ್ಕೆ ಕೆಟ್ಟ ಹೆಸರು ಬರದಂತೆ ನೋಡಿಕೋ, ಅವರಿಗೆ ಆ ನಿಟ್ಟಿನಲ್ಲಿ ಯಾವ ರೀತಿ ಎಚ್ಚರಿಕೆ ನೀಡುತ್ತೀಯೋ ನಿನಗೆ ಬಿಟ್ಟಿದ್ದು ಎಂಬುದಾಗಿ ಪುತ್ರ ಎಚ್.ಡಿ. ರೇವಣ್ಣ ಅವರಿಗೆ ಕಡ್ಡಿ ಮುರಿದಂತೆ ಹೇಳಿದ್ದಾರೆ ಎನ್ನಲಾಗಿದೆ.

ಪ್ರಜ್ವಲ್‌ ರೇವಣ್ಣ ಮೇಲೆ ಕೇಸ್‌ ದಾಖಲಾಗಿ 17 ದಿನವೇ ಗತಿಸಿಹೋಗಿದೆ. ಇನ್ನು ಈ ಕೇಸ್‌ಗೆ ಸಂಬಂಧಿಸಿ ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್‌ ಮಾಡಿದ ಆರೋಪ ಎದುರಿಸಿ ಎಚ್‌.ಡಿ. ರೇವಣ್ಣ ಜೈಲು ಸೇರಿದ್ದರೂ ಆ ಕಡೆ ಭವಾನಿ ಕಣ್ಣೆತ್ತಿಯೂ ನೋಡಿಲ್ಲ. ಇನ್ನು ಇದೇ ಕೇಸ್‌ ವಿಚಾರವಾಗಿ ಎಸ್ಐಟಿ ಎರಡು ಬಾರಿ ನೋಟಿಸ್‌ ಕೊಟ್ಟರೂ ಡೋಂಟ್‌ ಕೇರ್‌ ಎಂಬಂತೆ ಕುಳಿತುಬಿಟ್ಟಿದ್ದಾರೆ. ಪ್ರಜ್ವಲ್ ರೀತಿಯಲ್ಲಿ ತಾಯಿಯೂ ವಿಚಾರಣೆಗೆ ಬರಲು ಹಿಂದೇಟು ಹಾಕಿದ್ದಾರೆ. ಈ ಎಲ್ಲ ಬೆಳವಣಿಗೆ ಮಧ್ಯೆ ರೇವಣ್ಣ ಅವರಿಗೆ ಜಾಮೀನು ಸಿಕ್ಕರೂ ಖುಷಿ ವ್ಯಕ್ತಪಡಿಸೋಕೆ ಕೂಡಾ ಅವರು ಕಾಣಿಸಿಕೊಳ್ಳಲಿಲ್ಲ. ಅಲ್ಲದೆ, ದೇವೇಗೌಡರ ಮನೆಯತ್ತಲೂ ಸುಳಿಯಲಿಲ್ಲ. ಇದು ದೇವೇಗೌಡರ ಕೆಂಗಣ್ಣಿಗೆ ಗುರಿಯಾಗಿದೆ ಎನ್ನಲಾಗಿದೆ. ತಾವು ಗಳಿಸಿಟ್ಟ ಗೌರವ, ಹೆಸರನ್ನು ಮಣ್ಣು ಪಾಲಾಗಲು ಬಿಡುವುದಿಲ್ಲ. ಆ ರೀತಿ ಮಾಡಲು ಇನ್ನು ಮುಂದೆ ಅವಕಾಶವನ್ನೂ ಕೊಡುವುದಿಲ್ಲ ಎಂದು ಗುಡುಗಿದ್ದಾರೆನ್ನಲಾಗಿದೆ.

ದೇವೇಗೌಡರ ಕುಟುಂಬಕ್ಕೆ ತಲೆ ನೋವಾದ ಭವಾನಿ ರೇವಣ್ಣ!

ಹಾಗಾದರೆ ಭವಾನಿ ಅವರಿಗೆ ಎಚ್.ಡಿ. ರೇವಣ್ಣ ಅವರ ಮೇಲೆಯೂ ಪ್ರೀತಿ ಇಲ್ಲವೇ? ದೇವೇಗೌಡರ ಬಗ್ಗೆ ಭಯವಿಲ್ಲವೇ? ಯಾಕಿಷ್ಟು ಮೊಂಡುತನವನ್ನು ತೋರುತತಿದ್ದಾರೆ ಎಂಬ ಪ್ರಶ್ನೆಗಳು ಎದ್ದಿವೆ. ಪತಿಯ ಮೇಲೆ ಪ್ರೀತಿ ಇದ್ದಿದ್ದರೆ ಅವರು ಜೈಲು ಸೇರಿದಾಗ ಬೆಂಬಲಕ್ಕೆ ನಿಲ್ಲಬೇಕಿತ್ತು. ನಿಮ್ಮ ಜತೆಗೆ ನಾನಿದ್ದೇನೆ, ಹೆದರಬೇಡಿ ಎಂದು ಬೆನ್ನಿಗೆ ನಿಲ್ಲಬೇಕಿತ್ತು. ಆಸರೆಯ ಮಾತನಾಡಬೇಕಿತ್ತು. ಆದರೆ, ಈ ಯಾವುದನ್ನೂ ಮಾಡದ ಭವಾನಿ, ತಮ್ಮ ಸೇಫ್‌ ಅನ್ನು ಮಾತ್ರವೇ ನೋಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಇನ್ನು ಪುತ್ರ ಪ್ರಜ್ವಲ್ ಸಹ ತಂದೆ ಜೈಲುಪಾಲಾದರೂ ನನಗೇನು ಎಂಬ ರೀತಿಯಲ್ಲಿ ವಿದೇಶವನ್ನು ಬಿಟ್ಟು ಹೊರ ಬರುತ್ತಿಲ್ಲ. ಇದೆಲ್ಲವೂ ದೇವೇಗೌಡರಿಗೆ ಸಿಟ್ಟು ತರಿಸಿದೆ ಎನ್ನಲಾಗಿದೆ.

ಅಮ್ಮ – ಮಗನ ಆಟಕ್ಕೆ ರೇವಣ್ಣ ಬಲಿ ಎಂದು ಅಸಮಾಧಾನ

ಸಾಮಾನ್ಯವಾಗಿ ಪುತ್ರನ ಕುಟುಂಬದ ವ್ಯವಹಾರಗಳಿಗೆ ತಲೆ ಹಾಕದ ಎಚ್.ಡಿ. ದೇವೇಗೌಡರು, ಈ ಪ್ರಕರಣದಲ್ಲಿ ತಮ್ಮ ಹಾಗೂ ಕುಟುಂಬದ ಹೆಸರು ಮಣ್ಣುಪಾಲಾಗುತ್ತಿರುವುದನ್ನು ಕಂಡು ಅಸಮಾಧಾನಗೊಂಡಿದ್ದಾರೆ. ಹೀಗಾಗಿ ರೇವಣ್ಣ ಅವರನ್ನು ಕರೆದು ಒಂದಷ್ಟು ಬುದ್ಧಿ ಮಾತುಗಳನ್ನು ಹೇಳಿದ್ದಾರೆ. ಅಮ್ಮ – ಮಗನ ಆಟಕ್ಕೆ ನೀನು ಬಲಿಯಾಗುತ್ತಿರುವೆ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ. ನಿನ್ನ ಕಷ್ಟದ ಕಾಲದಲ್ಲಿಯೂ ಭವಾನಿ ಸಾಥ್‌ ಕೊಡಲಿಲ್ಲವೆಂದರೆ ಹೇಗೆ? ಎಂದು ಪ್ರಶ್ನೆ ಮಾಡಿದ್ದಾರೆ. ನಿನ್ನ ಒಳ್ಳೆಯತನವೇ ಮುಳುವಾಯಿತು ಎಂದು ಎಚ್‌.ಡಿ. ದೇವೇಗೌಡ ಕಿಡಿಕಾರಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Prajwal Revanna Case: ನಿಮ್ಮ ಸರ್ಕಾರದ ಮೇಲೆ ಮಹಿಳೆಯರು ವಿಶ್ವಾಸ ಇಡಬಹುದೇ? ಸಿದ್ದರಾಮಯ್ಯಗೆ ಸಾಹಿತಿಗಳ ಬಹಿರಂಗ ಪತ್ರ!

ಕರೆದು ಬುದ್ಧಿ ಹೇಳು, ಮತ್ತೆ ಹೀಗಾಗದಂತೆ ನೋಡಿಕೋ!!

ಭವಾನಿ ಮತ್ತು ಮಕ್ಕಳು ಏನು ಬೇಕಿದ್ದರೂ ಮಾಡಿಕೊಳ್ಳಲಿ. ಆದರೆ, ಇನ್ನು ಮುಂದೆ ಕುಟುಂಬಕ್ಕೆ ಕೆಟ್ಟ ಹೆಸರು ಬರದಂತೆ ನೋಡಿಕೊಳ್ಳಿ. ಈ ಬಗ್ಗೆ ಸಮಯ ನೋಡಿ ಅವರೆಲ್ಲರಿಗೂ ಎಚ್ಚರಿಕೆ ಕೊಡು. ಪ್ರಜ್ವಲ್ ವಿದೇಶದಿಂದ ಬಂದು ಕೋರ್ಟ್‌ನಿಂದ ಜಾಮೀನು ಪಡೆದ ಸಾರ್ವಜನಿಕ ಜೀವನದಲ್ಲಿ ಎಚ್ಚರಿಕೆಯಿಂದ ಇರಬೇಕು. ಈ ನಿಟ್ಟಿನಲ್ಲಿ ನೀನು ಜವಾಬ್ದಾರಿಯಿಂದ ನೋಡಿಕೊ ಎಂದು ಎಚ್.ಡಿ. ರೇವಣ್ಣ ಅವರಿಗೆ ಎಚ್.ಡಿ. ದೇವೇಗೌಡ ತಾಕೀತು ಮಾಡಿದ್ದಾರೆ.

Continue Reading

ದೇಶ

CAA: ಸಿಎಎ ಅಡಿಯಲ್ಲಿ 14 ಜನರಿಗೆ ಭಾರತದ ಪೌರತ್ವ ನೀಡಿದ ಮೋದಿ ಸರ್ಕಾರ; ಸರ್ಟಿಫಿಕೇಟ್‌ ಕೂಡ ಹಸ್ತಾಂತರ!

ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ಪಡೆಯುವುದನ್ನು ಸಿಎಎ ಜಾರಿಯಿಂದ ಸುಲಭಗೊಳಿಸುತ್ತದೆ. ಡಿಸೆಂಬರ್ 31, 2014 ರಂದು ಮತ್ತು ಅದಕ್ಕೂ ಮೊದಲು ಭಾರತಕ್ಕೆ ಆಗಮಿಸಿದ ಮುಸ್ಲಿಮರನ್ನು ಹೊರತುಪಡಿಸಿ ವಲಸಿಗರಿಗೆ ಈ ಕಾನೂನು ಅನ್ವಯಿಸುತ್ತದೆ. ಈಗ ಸಿಎಎ ನಿಯಮಗಳ ಅಡಿಯಲ್ಲಿ 14 ಜನರಿಗೆ ಕೇಂದ್ರ ಸರ್ಕಾರ ಪ್ರಮಾಣಪತ್ರ ನೀಡಿದೆ.

VISTARANEWS.COM


on

CAA
Koo

ನವದೆಹಲಿ: ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫಘಾನಿಸ್ತಾನದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡುವ ಪೌರತ್ವ (ತಿದ್ದುಪಡಿ) ಕಾಯ್ದೆ, 2019 (Citizenship Amendment Act) ಕಾಯ್ದೆ ಜಾರಿಯಾದ ಬೆನ್ನಲ್ಲೇ ಕೇಂದ್ರ ಸರ್ಕಾರವು 14 ಜನರಿಗೆ ಭಾರತದ ಪೌರತ್ವ (Indian Citizenship) ನೀಡಿದೆ. ಸಿಎಎ (CAA) ಅಡಿಯಲ್ಲಿ ಪೌರತ್ವ ಕಲ್ಪಿಸಿರುವ ಕುರಿತು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್‌ ಕುಮಾರ್‌ ಭಲ್ಲಾ ಅವರು 14 ಜನರಿಗೆ ಪ್ರಮಾಣಪತ್ರಗಳನ್ನು ಹಸ್ತಾಂತರಿಸಿದ್ದಾರೆ.

ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ಪಡೆಯುವುದನ್ನು ಸಿಎಎ ಜಾರಿಯಿಂದ ಸುಲಭಗೊಳಿಸುತ್ತದೆ. ಡಿಸೆಂಬರ್ 31, 2014 ರಂದು ಮತ್ತು ಅದಕ್ಕೂ ಮೊದಲು ಭಾರತಕ್ಕೆ ಆಗಮಿಸಿದ ಮುಸ್ಲಿಮರನ್ನು ಹೊರತುಪಡಿಸಿ ವಲಸಿಗರಿಗೆ ಈ ಕಾನೂನು ಅನ್ವಯಿಸುತ್ತದೆ. ಸಿಎಎ ನಿಯಮಗಳ ಜಾರಿಗೆ ಕೇಂದ್ರ ಸರ್ಕಾರವು ಕಳೆದ ಮಾರ್ಚ್​ 11ರಂದು ಅಧಿಸೂಚನೆ ಹೊರಡಿಸಿದೆ. ಆ ಮೂಲಕ ದೇಶದಲ್ಲಿ ಸಿಎಎ ಜಾರಿಗೊಳಿಸಿದೆ. ಇದರ ಬೆನ್ನಲ್ಲೇ, 14 ಜನರಿಗೆ ಪ್ರಮಾಣಪತ್ರಗಳನ್ನು ನೀಡಿದೆ.

CAA

ಪೌರತ್ವ ತಿದ್ದುಪಡಿ ಕಾಯ್ದೆ ಎಂದರೇನು?

2014 ರ ಡಿಸೆಂಬರ್ 31 ಕ್ಕಿಂತ ಮೊದಲು ನೆರೆಯ ಮುಸ್ಲಿಂ ಬಹುಸಂಖ್ಯಾತ ದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು ಮತ್ತು ಪಾರ್ಸಿಗಳಿಗೆ ಭಾರತೀಯ ಪೌರತ್ವಕ್ಕೆ ಮಾರ್ಗವನ್ನು ಒದಗಿಸಲು ಸಿಎಎ 1955 ರ ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ.

ಸಿಎಎ ಅನುಷ್ಠಾನದ ಬಗ್ಗೆ ಆಡಳಿತಾರೂಢ ಭಾರತೀಯ ಜನತಾ ಪಕ್ಷವು ತನ್ನ ಹಿಂದಿನ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಆದರೆ ಅದರ ನಿಯಮಗಳನ್ನು ತಿಳಿಸಿರಲಿಲ್ಲ. ಕಾಯ್ದೆಯ 2019ರ ತಿದ್ದುಪಡಿಯ ಪ್ರಕಾರ ಡಿಸೆಂಬರ್ 31, 2014 ರವರೆಗೆ ಭಾರತಕ್ಕೆ ಪ್ರವೇಶಿಸಿದ ಮತ್ತು ತಮ್ಮ ಮೂಲ ದೇಶದಲ್ಲಿ “ಧಾರ್ಮಿಕ ಕಿರುಕುಳ ಅಥವಾ ಭಯ ಅಥವಾ ಧಾರ್ಮಿಕ ಕಿರುಕುಳ” ಅನುಭವಿಸಿದ ವಲಸಿಗರಿಗೆ ಭಾರತೀಯ ಪೌರತ್ವ ಲಭಿಸುತ್ತದೆ.

ಸಿಎಎಗೆ 2019 ರ ತಿದ್ದುಪಡಿ ಮೂಲಕ ಮೇಲೆ ಹೇಳಿರುವ ದೇಶಗಳ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ನೀಡುವ ಕಾಯುವಿಕೆಯ ಹನ್ನೆರಡು ವರ್ಷಗಳನ್ನು ಕೇವಲ ಆರು ವರ್ಷಗಳಿಗೆ ಇಳಿಸಲಾಗಿದೆ. ಸಿಎಎ ಕುರಿತ ಗುಪ್ತಚರ ಬ್ಯೂರೋ ವರದಿಯ ಪ್ರಕಾರ, ಕಾಯ್ದೆಯ ನಿಯಮಗಳು ಪ್ರಕಟಗೊಂಡ ತಕ್ಷಣವೇ 30,000 ಕ್ಕೂ ಹೆಚ್ಚು ಫಲಾನುಭವಿಗಳು (ವಲಸಿಗರು) ಇದರ ಲಾಭವನ್ನು ಪಡೆಯುತ್ತಾರೆ.

ಇದನ್ನೂ ಓದಿ: CAA: ಕೇಂದ್ರ ಸೂಚನೆ ಕೊಟ್ಟ ಕೂಡಲೇ ಮಧ್ಯಪ್ರದೇಶದಲ್ಲಿ ಸಿಎಎ ಜಾರಿ; ಸಿಎಂ ಮೋಹನ್‌ ಯಾದವ್‌

Continue Reading

ವಿದೇಶ

Google: 10 ಲಕ್ಷ ಕೋಟಿ ರೂ. ಮೌಲ್ಯದ ಪಿಂಚಣಿ ಡೇಟಾ ಡಿಲೀಟ್‌ ಮಾಡಿ Sorry ಎಂದ ಗೂಗಲ್; ಮುಂದೇನು?

Google: ಲಕ್ಷಾಂತರ ಜನರ ಡೇಟಾವನ್ನು ಗೂಗಲ್‌ ಕ್ಲೌಡ್‌ನಿಂದ ಅಳಿಸಿಹಾಕಿದ ಬಳಿಕ ಗೂಗಲ್‌ ಸಂಸ್ಥೆ ಕ್ಷಮೆಯಿರಲಿ ಎಂದಷ್ಟೇ ಹೇಳುವ ಮೂಲಕ ಕೈ ತೊಳೆದುಕೊಂಡಿದೆ. ಮಾಹಿತಿ ಡಿಲೀಟ್‌ ಆದ ಕಾರಣ ಯುನಿಸೂಪರ್‌ ಸಂಸ್ಥೆಯು ಕೂಡ ವಿಷಾದ ವ್ಯಕ್ತಪಡಿಸಿದೆ. ಆದರೆ, ಲಕ್ಷಾಂತರ ಜನರ ಲಕ್ಷಾಂತರ ಕೋಟಿ ರೂ. ಮಾಹಿತಿ ಡಿಲೀಟ್‌ ಆದ ಕಾರಣ ಅವರೆಲ್ಲ ಆತಂಕಕ್ಕೀಡಾಗಿದ್ದಾರೆ.

VISTARANEWS.COM


on

Google
Koo

ವಾಷಿಂಗ್ಟನ್:‌ ಇದೇನಿದ್ದರೂ ಡಿಜಿಟಲ್‌ (Digital) ಯುಗ. ಎಲ್ಲ ಮಾಹಿತಿಯೂ ಈಗ ಕಂಪ್ಯೂಟರ್‌ನಲ್ಲಿ, ಗೂಗಲ್‌ ಕ್ಲೌಡ್‌ ಸೇರಿ ಹಲವು ಮಾದರಿಯಲ್ಲಿ ಸಂಗ್ರಹಿಸಲಾಗುತ್ತದೆ. ಬ್ಯಾಂಕಿಂಗ್‌ನಿಂದ ಹಿಡಿದು ಎಲ್ಲ ಕ್ಷೇತ್ರಗಳ ಮಾಹಿತಿಯೂ ಆನ್‌ಲೈನ್‌ನಲ್ಲೇ ಸಂಗ್ರಹಿಸಲಾಗುತ್ತದೆ. ಆದರೆ, ಈ ಮಾಹಿತಿ ಡಿಲೀಟ್‌ ಮಾಡಿದರೆ, ಯಾರಾದರೂ ಡಿಲೀಟ್‌ ಮಾಡಿದರೆ ಆಗುವ ಅನಾಹುತಗಳು ಅಷ್ಟಿಷ್ಟಲ್ಲ. ಇದಕ್ಕೆ ನಿದರ್ಶನ ಎಂಬಂತೆ, ಗೂಗಲ್‌ (Google) ಸಂಸ್ಥೆಯು ಗೂಗಲ್‌ ಕ್ಲೌಡ್‌ನಲ್ಲಿ (Google Cloud) ಸುಮಾರು 10.43 ಲಕ್ಷ ಕೋಟಿ ರೂ. ಮೌಲ್ಯದ ಪಿಂಚಣಿ ಡೇಟಾವನ್ನು ಅಚಾತುರ್ಯವಾಗಿ ಡಿಲೀಟ್‌ ಮಾಡಿದೆ.

ಆಸ್ಟ್ರೇಲಿಯಾದ ನಿವೃತ್ತಿದಾರರಿಗೆ ಪಿಂಚಣಿ ಒದಗಿಸುವ ಯುನಿಸೂಪರ್‌ (UniSuper) ಎಂಬ ಸಂಸ್ಥೆಯ 6.2 ಲಕ್ಷ ಜನರ ಮಾಹಿತಿಯನ್ನು ಗೂಗಲ್‌ ಡಿಲೀಟ್‌ ಮಾಡಿದೆ. ಯುನಿಸೂಪರ್‌ ಸಂಸ್ಥೆಯು ಡೇಟಾ ಸಂಗ್ರಹಕ್ಕಾಗಿ ಗೂಗಲ್‌ ಕ್ಲೌಡ್‌ ಜತೆ ಒಪ್ಪಂದ ಮಾಡಿಕೊಂಡಿತ್ತು. ಆದರೆ, ಗೂಗಲ್‌ ಸಂಸ್ಥೆಯು ಅಚಾತುರ್ಯದಿಂದ 6.2 ಲಕ್ಷ ಜನರ ಡೇಟಾವನ್ನು ಡಿಲೀಟ್‌ ಮಾಡಿದೆ. ಕಳೆದ ಒಂದು ವಾರದಿಂದ ಯುನಿಸೂಪರ್‌ ಸದಸ್ಯರು ತಮ್ಮ ಪಿಂಚಣಿ ಮಾಹಿತಿಯನ್ನು ಪರಿಶೀಲಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಅವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Sorry ಎಂದ ಗೂಗಲ್‌

ಲಕ್ಷಾಂತರ ಜನರ ಡೇಟಾವನ್ನು ಗೂಗಲ್‌ ಕ್ಲೌಡ್‌ನಿಂದ ಅಳಿಸಿಹಾಕಿದ ಬಳಿಕ ಗೂಗಲ್‌ ಸಂಸ್ಥೆ ಕ್ಷಮೆಯಿರಲಿ ಎಂದಷ್ಟೇ ಹೇಳುವ ಮೂಲಕ ಕೈ ತೊಳೆದುಕೊಂಡಿದೆ. ಮಾಹಿತಿ ಡಿಲೀಟ್‌ ಆದ ಕಾರಣ ಯುನಿಸೂಪರ್‌ ಸಂಸ್ಥೆಯು ಕೂಡ ವಿಷಾದ ವ್ಯಕ್ತಪಡಿಸಿದೆ. ಆದರೆ, ಲಕ್ಷಾಂತರ ಜನರ ಲಕ್ಷಾಂತರ ಕೋಟಿ ರೂ. ಮಾಹಿತಿ ಡಿಲೀಟ್‌ ಆದ ಕಾರಣ ಅವರೆಲ್ಲ ಆತಂಕಕ್ಕೀಡಾಗಿದ್ದಾರೆ. ಇದಕ್ಕೆ ಪರಿಹಾರ ಕಂಡುಕೊಳ್ಳಿ ಎಂಬುದಾಗಿ ಸಂಸ್ಥೆಯನ್ನು ಆಗ್ರಹಿಸಿದ್ದಾರೆ. ಇದರ ಬೆನ್ನಲ್ಲೇ, ಗೂಗಲ್‌ ಜತೆಗಿನ ಒಪ್ಪಂದವನ್ನು ಯುನಿಸೂಪರ್‌ ರದ್ದುಗೊಳಿಸಿದೆ.

ಬ್ಯಾಕಪ್‌ಗಾಗಿ ಹರಸಾಹಸ

6 ಲಕ್ಷಕ್ಕೂ ಅಧಿಕ ಮಾಹಿತಿಯನ್ನು ಮರು ಸಂಗ್ರಹಿಸಲು (ಬ್ಯಾಕಪ್‌) ಯುನಿಸೂಪರ್‌ ಹರಸಾಹಸ ಮಾಡುತ್ತಿದೆ. ಡಿಲೀಟ್‌ ಆಗಿರುವ ಎಲ್ಲ ಮಾಹಿತಿಯನ್ನು ಬ್ಯಾಕಪ್‌ ಮಾಡಿಕೊಳ್ಳಲು ಬೇರೊಂದು ಕಂಪನಿ ಜತೆ ಒಪ್ಪಂದ ಮಾಡಿಕೊಂಡಿದೆ. ಆದರೆ, ಮಾಹಿತಿಯು ತಾತ್ಕಾಲಿಕವಾಗಿ ಡಿಲೀಟ್‌ ಆಗಿದೆಯೋ, ಇಲ್ಲವೋ? ಅದನ್ನು ಬ್ಯಾಕಪ್‌ ಮಾಡುವುದು ಸುಲಭವೋ, ಇಲ್ಲವೋ ಎಂಬ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಮಾಹಿತಿ ಲಭ್ಯವಾಗುವವರೆಗೂ ಗ್ರಾಹಕರು ಹಾಗೂ ಕಂಪನಿಗೆ ಆತಂಕ ತಪ್ಪಿದ್ದಲ್ಲ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Google Layoff: ಮತ್ತಷ್ಟು ಉದ್ಯೋಗ ಕಡಿತಗೊಳಿಸಿದ ಗೂಗಲ್‌; ಕಾರಣವೇನು?

Continue Reading
Advertisement
North East Graduate Constituency Election Congress party leaders and workers Meeting in Yadgiri
ರಾಜಕೀಯ1 min ago

MLC Election: ಪರಿಷತ್ ಚುನಾವಣೆ; ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿಗೆ ಶ್ರಮಿಸಲು ಕಾರ್ಯಕರ್ತರಿಗೆ ದರ್ಶನಾಪುರ ಮನವಿ

T20 World Cup 2024
ಕ್ರೀಡೆ4 mins ago

T20 World Cup 2024: ಭಾರತ ಕೇವಲ ಒಂದು ಅಭ್ಯಾಸ ಪಂದ್ಯ ಮಾತ್ರ ಆಡಲಿದೆ; ಕಾರಣ ಏನು?

MLC Election
ಕರ್ನಾಟಕ17 mins ago

MLC Election: ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಫೈನಲ್‌; ಬಂಡಾಯವಾಗಿ ಬಿಜೆಪಿ ಅಭ್ಯರ್ಥಿ ನಾಮಪತ್ರ

CAA
EXPLAINER19 mins ago

CAA: ಸಿಎಎ ಅನ್ವಯ 14 ಜನಕ್ಕೆ ಭಾರತದ ಪೌರತ್ವ; ಏನಿದು ಕಾಯ್ದೆ? ಭಾರತದ ಮುಸ್ಲಿಮರಿಗೆ ತೊಂದರೆ ಇದೆಯೇ?

Fortis Hospital doctors team performed a successful complex kidney transplant surgery for two patients with robotic assistance
ಕರ್ನಾಟಕ21 mins ago

Fortis Hospital: ರೋಬೋಟಿಕ್‌ ನೆರವಿನಿಂದ ಇಬ್ಬರಿಗೆ ‘ಸಂಕೀರ್ಣ ಕಿಡ್ನಿ ಕಸಿ’ ಆಪರೇಷನ್ ಸಕ್ಸೆಸ್!

V. Sunil Kumar latest statemetn
ಬೆಂಗಳೂರು28 mins ago

V. Sunil Kumar: ರಾಜ್ಯದಲ್ಲಿ ಅಸಮರ್ಥ ಸಂಪುಟ, ಅಭಿವೃದ್ಧಿ ಶೂನ್ಯ ಸರ್ಕಾರ: ವಿ. ಸುನೀಲ್ ಕುಮಾರ್

private hospitals heads and health department officers Meeting at vijayanagara DC office
ವಿಜಯನಗರ38 mins ago

Vijayanagara News: ಖಾಸಗಿ ಆಸ್ಪತ್ರೆಗಳು ಚಿಕಿತ್ಸಾ ಲೋಪ ಎಸಗಿದರೆ ಕಾನೂನು ಕ್ರಮ: ಡಿಸಿ ಎಚ್ಚರಿಕೆ

Ram Pothineni Double iSmart teaser with Sanjay Dutt
ಟಾಲಿವುಡ್40 mins ago

Ram Pothineni: ಡೈನಾಮಿಕ್ ಸ್ಟಾರ್ ರಾಮ್‌ – ಸಂಜಯ್ ದತ್ ಭರ್ಜರಿ ಜುಗಲ್ಬಂದಿ: `ಡಬಲ್ ಇಸ್ಮಾರ್ಟ್‘ ಟೀಸರ್‌ ಔಟ್‌!

Prajwal Revanna Case Deve Gowda lashes out at Bhavani
ರಾಜಕೀಯ42 mins ago

Prajwal Revanna Case: ಭವಾನಿ ವಿರುದ್ಧ ದೇವೇಗೌಡ ಗರಂ; ಮತ್ತೆ ಹೀಗಾಗದಂತೆ ಎಚ್ಚರಿಕೆ ನೀಡಲು ರೇವಣ್ಣಗೆ ತಾಕೀತು!

Wedding men's jewel Fashion Artificial pearl necklace has entered
ಫ್ಯಾಷನ್42 mins ago

Wedding men’s jewel Fashion: ವೆಡ್ಡಿಂಗ್‌ ಮೆನ್ಸ್‌ ಜ್ಯುವೆಲರಿ ಫ್ಯಾಷನ್‌ಗೆ ಕಾಲಿಟ್ಟ ಆರ್ಟಿಫಿಶಿಯಲ್‌ ಪರ್ಲ್‌ ಹಾರ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ10 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ13 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ23 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌