Road Accident : ಮಹಿಳೆ ತಲೆ ಮೇಲೆ ಹರಿದ ಕ್ಯಾಂಟರ್; ಹೆಲ್ಮೆಟ್ ಹಾಕಿದ್ದರೆ ಉಳಿಯುತ್ತಿತ್ತು ಜೀವ - Vistara News

ಕ್ರೈಂ

Road Accident : ಮಹಿಳೆ ತಲೆ ಮೇಲೆ ಹರಿದ ಕ್ಯಾಂಟರ್; ಹೆಲ್ಮೆಟ್ ಹಾಕಿದ್ದರೆ ಉಳಿಯುತ್ತಿತ್ತು ಜೀವ

Road Accident : ಯಮರೂಪಿಯಾಗಿ ಬಂದ ಕ್ಯಾಂಟರ್‌ ವಾಹನವೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದು ಮಹಿಳೆ ತಲೆ ಮೇಲೆ ಹರಿದಿದೆ.

VISTARANEWS.COM


on

Woman Deaded as mini canter collides with scooter
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವೇಗವಾಗಿ ಬಂದ ಕ್ಯಾಂಟರ್ ವಾಹನವೊಂದು ಚಲಿಸುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ( Road Accident)ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಮಹಿಳೆ ತಲೆ ಮೇಲೆ ಲಾರಿ ಹರಿದಿದೆ. ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.

ಬೆಂಗಳೂರಿನ ಬಿಜಿಎಸ್ ಆಸ್ಪತ್ರೆ ರಸ್ತೆಯಲ್ಲಿ ಅಪಘಾತ ನಡೆದಿದೆ. ಗೂಡ್ಸ್ ವಾಹನ ಗುದ್ದಿದ ಕಾರಣಕ್ಕೆ ಸ್ಕೂಟರ್‌ ಜಖಂ ಗೊಂಡಿದೆ. ಸ್ಥಳಕ್ಕೆ ಕೆಂಗೇರಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇನ್ನು ಘಟನೆಯಲ್ಲಿ ಮಹಿಳೆ ಹೆಲ್ಮೆಟ್‌ ಹಾಕಿದ್ದರೆ ಜೀವ ಉಳಿತ್ತಿತ್ತು ಎಂದಿದ್ದಾರೆ ಪ್ರತ್ಯಕ್ಷದರ್ಶಿಗಳು. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಲಾರಿಗೆ ಟಿಟಿ ವಾಹನ ಡಿಕ್ಕಿ; ಮೂವರು ಸಾವು, ಮೂವರು ಗಂಭೀರ

ರಾಮನಗರ: ಮದುವೆ ಸಂಭ್ರಮವನ್ನು ಮುಗಿಸಿ ವಾಪಸ್‌ ಊರಿಗೆ ಟಿಟಿಯಲ್ಲಿ ತೆರಳುತ್ತಿದ್ದ ಅವರಿಗೆ ಯಮರೂಪಿಯಾಗಿ ಬಂದ ಲಾರಿಯು ಪ್ರಾಣವನ್ನೇ (Road Accident) ಕಸಿದಿದೆ. ರಾಮನಗರದ ಚನ್ನಪಟ್ಟಣ ತಾಲೂಕಿನ ಚಾಮುಂಡೇಶ್ವರಿ ಮೆಡಿಕಲ್‌ ಕಾಲೇಜು ಬಳಿ ಈ ದುರ್ಘಟನೆ ನಡೆದಿದೆ. ರಸ್ತೆ ಅಪಘಾತದಲ್ಲಿ ಸೋಮಲಿಂಗಪ್ಪ (70), ಶಿವಲಿಂಗಪ್ಪ (66), ರಾಜೇಶ್ವರಿ ಎಂಬುವವರು ಸ್ಥಳದಲ್ಲೇ ಮೃತಪಟ್ಟರೆ, ಮೂವರು ಗಂಭೀರ ಸ್ಥಿತಿಯಲ್ಲಿದ್ದಾರೆ.

ತಡರಾತ್ರಿ 2 ಗಂಟೆ ಸುಮಾರಿಗೆ ಕುಟುಂಬ ಸಮೇತ ಮದುವೆ ಮುಗಿಸಿಕೊಂಡು ವಾಪಸ್ ಹೋಗುವಾಗ ಹಿಂಬದಿಯಿಂದ ಬಂದ ಟಿಟಿ ವಾಹನವು ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಮಹಿಳೆ ಸೇರಿ ಸ್ಥಳದಲ್ಲೇ ಮೂವರು ಮಸಣ ಸೇರಿದರೆ, ಮೂವರು ಗಂಭೀರ ಗಾಯಗೊಂಡಿದ್ದಾರೆ.


TT vehicle collides with lorry Three dead three critical

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳುಗಳಿಗೆ ಚಾಮುಂಡೇಶ್ವರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ರಭಸಕ್ಕೆ ಟಿಟಿ ವಾಹನವು ಸಂಪೂರ್ಣ ನಜ್ಜುಗುಜ್ಜಾಗಿದೆ. ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣ ಬಳಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Self Harming Attempt: ಮತ್ತೊಬ್ಬ ಅಧಿಕಾರಿ ಆತ್ಮಹತ್ಯೆ ಯತ್ನ; ಅಕ್ಷರ ದಾಸೋಹದಲ್ಲಿ ಮೇಲಧಿಕಾರಿಗಳ ಕಿರುಕುಳ?

Self Harming Attempt: ಲಿಂಗಸಗೂರು ತಾಲೂಕಿನ ಅಕ್ಷರ ದಾಸೋಹದ ನಿರ್ದೇಶಕ ಮೌನೇಶ್ ಕಂಬಾರ ಆತ್ಮಹತ್ಯೆಗೆ ಯತ್ನಿಸಿದ ಅಧಿಕಾರಿ. ಸುಮಾರು 40ಕ್ಕೂ ಹೆಚ್ಚು ನಿದ್ರೆ ಟ್ಯಾಬ್ಲೆಟ್‌ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಒಂದು ತಿಂಗಳು ಹಿಂದಷ್ಟೇ ಸಹಾಯ ನಿರ್ದೇಶಕರಾಗಿ ಇವರು ನೇಮಕಗೊಂಡಿದ್ದರು.

VISTARANEWS.COM


on

self harming attempt
Koo

ರಾಯಚೂರು: ರಾಯಚೂರಲ್ಲಿ (Raichur news) ಅಕ್ಷರ ದಾಸೋಹ (Akshra dasoha) ಅಧಿಕಾರಿಯೊಬ್ಬರು ಆತ್ಮಹತ್ಯೆಗೆ (Self Harming Attempt) ಯತ್ನಿಸಿದ್ದಾರೆ. ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ. ಇದು ಕಳೆದ ಒಂದು ತಿಂಗಳಲ್ಲಿ ವರದಿಯಾಗುತ್ತಿರುವ ಇಂಥ ಮೂರನೇ ಪ್ರಕರಣವಾಗಿದೆ.

ಲಿಂಗಸಗೂರು ತಾಲೂಕಿನ ಅಕ್ಷರ ದಾಸೋಹದ ನಿರ್ದೇಶಕ ಮೌನೇಶ್ ಕಂಬಾರ ಆತ್ಮಹತ್ಯೆಗೆ ಯತ್ನಿಸಿದ ಅಧಿಕಾರಿ. ಸುಮಾರು 40ಕ್ಕೂ ಹೆಚ್ಚು ನಿದ್ರೆ ಟ್ಯಾಬ್ಲೆಟ್‌ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಒಂದು ತಿಂಗಳು ಹಿಂದಷ್ಟೇ ಸಹಾಯ ನಿರ್ದೇಶಕರಾಗಿ ಇವರು ನೇಮಕಗೊಂಡಿದ್ದರು. ಕೆಲಸದ ಜತೆ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರು ಎಂದು ತಿಳಿದುಬಂದಿದೆ.

ನಿನ್ನೆ ಏಕಾಏಕಿ ಕಚೇರಿಯಿಂದ ಒಂದು ದಿನದ ಮಟ್ಟಿಗೆ ರಜೆ ಪಡೆದಿದು ಮನೆಗೆ ಬಂದಿದ್ದ ಮೌನೇಶ್, ಮನೆಯಲ್ಲೇ ಟ್ಯಾಬ್ಲೆಟ್‌ಗಳನ್ನು ಸೇವಿಸಿ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಲಿಂಗಸಗೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಗೆ ಕರೆದೊಯ್ಯಲಾಗಿದೆ. ಲಿಂಗಸಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಕಳೆದ ತಿಂಗಳು ಶಿವಮೊಗ್ಗದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದು ಭಾರಿ ಸುದ್ದಿಯಾಗಿದೆ. ನಿಗಮದಲ್ಲಿ ನಡೆದ ಹಗರಣದ ಬಗ್ಗೆ ಅವರು ಬರೆದಿಟ್ಟ ಡೆತ್‌ನೋಟ್‌ ಇದೀಗ ಸಚಿವರ ತಲೆದಂಡ ಪಡೆದಿದೆ. ವಿಶ್ವೇಶ್ವರಯ್ಯ ಜಲ ನಿಗಮ ಮಂಡಳಿಯ ಮಹಾ ನಿರ್ದೇಶಕರೊಬ್ಬರು ಕಾಮಗಾರಿ ನಡೆಸಿದ 8 ಕೋಟಿ ರೂಪಾಯಿ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ತುಮಕೂರಿನ ಗುತ್ತಿಗೆದಾರರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ನಂತರ ಬಿಲ್‌ ಹಣ ಬಿಡುಗಡೆಯಾಗಿತ್ತು.

ಸಿಡಿಲಿಗೆ ಬಾಲಕ, ಮಹಿಳೆ ಬಲಿ

ಗದಗ/ಕೊಪ್ಪಳ: ಎರಡು ಪ್ರತ್ಯೇಕ ಮಳೆ ಅವಘಡಗಳಲ್ಲಿ ಸಿಡಿಲು ಬಡಿದು ಬಾಲಕ ಮತ್ತು ಮಹಿಳೆ ದುರ್ಮರಣ ಹೊಂದಿದ್ದಾರೆ. ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಸಿಡಿಲಿಗೆ ಬಾಲಕನೊಬ್ಬ ಬಲಿಯಾಗಿದ್ದರೆ, ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಕುರಿ ಮೇಯಿಸಲು ಹೋದ ಬಾಲಕ ಸಾವು

ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಬಂಡೆಮ್ಮ ನಗರ ಗ್ರಾಮದ ಬಳಿ ಸಿಡಿಲು ಬಡಿದು ಬಾಲಕ ಮೃತಪಟ್ಟಿದ್ದು, ಇನ್ನೊಬ್ಬ ಬಾಲಕನಿಗೆ ಗಂಭೀರ ಗಾಯಗಳಾಗಿವೆ. ಕುರಿ ಮೇಯಿಸಲು ಹೋಗಿದ್ದ ವೇಳೆ ಗುಡುಗು, ಸಿಡಿಲು ಸಹಿತ ಮಳೆ ಸುರಿದಿದ್ದು, ಈ ವೇಳೆ ಮರದ ಬಳಿ ನಿಂತಾಗ ಅವಘಡ ನಡೆದಿದೆ. ಗುಡ್ಡದಕೇರಿ ಬಡಾವಣೆಯ ನಿವಾಸಿ ಯಲ್ಲಪ್ಪ ಕಿಲೀಕೈ (17) ಮೃತ ಬಾಲಕ. ಪರಸಪ್ಪ ಕಿಲೀಕೈ (15) ಗಾಯಾಳುವಾಗಿದ್ದು, ಆತನಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸಿಡಿಲಿಗೆ ರೈತ ಮಹಿಳೆ ಬಲಿ

ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಜೆ ರಾಂಪುರದಲ್ಲಿ ಸಿಡಿಲು ಬಡಿದು ರೈತ ಮಹಿಳೆ ರತ್ನಮ್ಮ ಓತಗೇರಿ(43) ಎಂಬುವವರು ಮೃತಪಟ್ಟಿದ್ದಾರೆ. ಹೊಲಕ್ಕೆ ರತ್ನಮ್ಮನೊಂದಿಗೆ ಆಕೆಯ ಅಕ್ಕ ದೇವಮ್ಮ ಸಹ ಹೋಗಿದ್ದರು. ಮಳೆ ಆರಂಭವಾಗುತ್ತಿದ್ದಂತೆ ದೇವಮ್ಮ ಮನೆ ಸೇರಿದ್ದರು. ಆದರೆ ಹೊಲದಲ್ಲಿದ್ದ ರತ್ನಮ್ಮಗೆ ಸಿಡಿಲು ಬಡಿದಿದ್ದರಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ | Karnataka Weather : ಭಾರಿ ಮಳೆಗೆ ಶ್ರೀನಿವಾಸಪುರದ ರೈಲ್ವೆ ಅಂಡರ್‌ ಪಾಸ್‌ ಜಲಾವೃತ; ಇನ್ನೈದು ದಿನ ಭಾರಿ ವರ್ಷಧಾರೆ

Continue Reading

ದೇಶ

Manipur Violence: ಮಣಿಪುರ ಹಿಂಸಾಚಾರ; ಮೋಸ್ಟ್‌ ವಾಂಟೆಡ್‌ ಗಲಭೆಕೋರ ಅರೆಸ್ಟ್‌

Manipur Violence: ಎನ್‌ಐಎ ತನಿಖೆಯ ಪ್ರಕಾರ, ಈಶಾನ್ಯ ರಾಜ್ಯಗಳು ಮತ್ತು ನೆರೆಯ ಮ್ಯಾನ್ಮಾರ್‌ನಲ್ಲಿರುವ ಭಯೋತ್ಪಾದಕ ಸಂಘಟನೆಗಳ ಬೆಂಬಲದೊಂದಿಗೆ ಕುಕಿ ಮತ್ತು ಜೋಮಿ ಬಂಡುಕೋರರು ಈ ಪ್ರದೇಶದಲ್ಲಿ ಪ್ರಸ್ತುತ ಜನಾಂಗೀಯ ಅಶಾಂತಿಯನ್ನು ಸೃಷ್ಟಿಸಲು ಮತ್ತು ಸರ್ಕಾರದ ವಿರುದ್ಧ ದಂಗೆ ಉದ್ದೇಶದಿಂದ ಸಂಚು ರೂಪಿಸಿದ್ದಾರೆ. ಆರೋಪಿಯು ಕಳೆದ ವರ್ಷದಿಂದ ನಡೆಯುತ್ತಿರುವ ದಂಗೆ ಮತ್ತು ಹಿಂಸಾಚಾರದ ವೇಳೆ ವಿವಿಧ ಸ್ಥಳಗಳಲ್ಲಿ ಭದ್ರತಾ ಪಡೆಗಳ ಮೇಲೆ ದಾಳಿಗಳಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ.

VISTARANEWS.COM


on

Manipur violence
Koo

ಮಣಿಪುರ: ಈಶಾನ್ಯ ರಾಜ್ಯವಾದ ಮಣಿಪುರ(Manipur Violence)ದಲ್ಲಿ ಕಳೆದ ವರ್ಷ ಉಂಟಾಗಿದ್ದು, ಜನಾಂಗೀಯ ಹಿಂಸಾಚಾರಕ್ಕೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅರೆಸ್ಟ್‌ ಮಾಡಿದೆ. ಬಂಧಿತನನ್ನು ಥಾಂಗ್ಮಿಂಥಾಂಗ್ ಹಾಕಿಪ್ ಅಲಿಯಾಸ್ ತಂಗ್ಬೋಯಿ ಹಾಕಿಪ್ ಅಲಿಯಾಸ್ ರೋಜರ್‌ ಎಂದು ಗುರುತಿಸಲಾಗಿದ್ದು, ಈತನನ್ನು ಇಂಫಾಲ್‌(Impal Airport) ಏರ್‌ಪೋರ್ಟ್‌ನಲ್ಲಿ ಎನ್‌ಐಎ ಅಧಿಕಾರಿಗಳು ಹೆಡೆಮುರಿಕಟ್ಟಿದ್ದಾರೆ.

ಕುಕಿ ನ್ಯಾಷನಲ್ ಫ್ರಂಟ್-ಮಿಲಿಟರಿ ಕೌನ್ಸಿಲ್ (KNF-MC) ಸದಸ್ಯನಾಗಿರುವ ರೋಜರ್‌ನ ವಿರುದ್ಧ ಮಣಿಪುರ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲು ಹಿಂಸಾಚಾರ ಗಲಭೆ ಸೃಷ್ಟಿಸಲು ಸಂಚು ರೂಪಿಸಿದ ಆರೋಪ ಇದೆ. ಆತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯಡಿಯಲ್ಲಿ ಕೇಸ್‌ ದಾಖಲಿಸಲಾಗಿದೆ. ಕಳೆದ ವರ್ಷ ಜು. 19ರಂದು ಎನ್‌ಐಎ ಈತನ ವಿರುದ್ಧ ಸೂಮೋಟೋ ಕೇಸ್‌ ದಾಖಲಿಸಿಕೊಂಡಿತ್ತು.

ಎನ್‌ಐಎ ಆರೋಪ ಏನು?

ಎನ್‌ಐಎ ತನಿಖೆಯ ಪ್ರಕಾರ, ಈಶಾನ್ಯ ರಾಜ್ಯಗಳು ಮತ್ತು ನೆರೆಯ ಮ್ಯಾನ್ಮಾರ್‌ನಲ್ಲಿರುವ ಭಯೋತ್ಪಾದಕ ಸಂಘಟನೆಗಳ ಬೆಂಬಲದೊಂದಿಗೆ ಕುಕಿ ಮತ್ತು ಜೋಮಿ ಬಂಡುಕೋರರು ಈ ಪ್ರದೇಶದಲ್ಲಿ ಪ್ರಸ್ತುತ ಜನಾಂಗೀಯ ಅಶಾಂತಿಯನ್ನು ಸೃಷ್ಟಿಸಲು ಮತ್ತು ಸರ್ಕಾರದ ವಿರುದ್ಧ ದಂಗೆ ಉದ್ದೇಶದಿಂದ ಸಂಚು ರೂಪಿಸಿದ್ದಾರೆ. ಆರೋಪಿಯು ಕಳೆದ ವರ್ಷದಿಂದ ನಡೆಯುತ್ತಿರುವ ದಂಗೆ ಮತ್ತು ಹಿಂಸಾಚಾರದ ವೇಳೆ ವಿವಿಧ ಸ್ಥಳಗಳಲ್ಲಿ ಭದ್ರತಾ ಪಡೆಗಳ ಮೇಲೆ ದಾಳಿಗಳಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ.

ಮಣಿಪುರ ರಾಜ್ಯದಲ್ಲಿನ ಅಸ್ಥಿರ ಪರಿಸ್ಥಿತಿಯನ್ನು ಉಲ್ಬಣಗೊಳಿಸಲು ಮತ್ತು ಜನರ ಮನಸ್ಸಿನಲ್ಲಿ ಭಯೋತ್ಪಾದನೆಯನ್ನು ಸೃಷ್ಟಿಸಲು ಮ್ಯಾನ್ಮಾರ್‌ನ ಕುಕಿ ನ್ಯಾಷನಲ್ ಫ್ರಂಟ್ (ಕೆಎನ್‌ಎಫ್)-ಬಿ ಉಗ್ರರ ಜೊತೆ ರೋಜರ್‌ಗೆ ಸಂಪರ್ಕ ಇರುವುದು ಕಂಡು ಬಂದಿದೆ. ಅಲ್ಲದೇ ಈತ ಹಿಂಸಾಚಾರದಲ್ಲಿ ಬಳಸಲು ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ಪೂರೈಸಲು ಪಿಡಿಎಫ್ / ಕೆಎನ್‌ಎಫ್-ಬಿ (ಮ್ಯಾನ್ಮಾರ್) ನಾಯಕರನ್ನು ಭೇಟಿಯಾಗಿದ್ದ ಎಂದು ಎನ್‌ಐಎ ತನಿಖೆಯಲ್ಲಿ ಬಯಲಾಗಿದೆ.

ಮಣಿಪುರ ಹಿಂಸಾಚಾರ

ಮೇ 3, 2023 ರಂದು ಈಶಾನ್ಯ ರಾಜ್ಯ ಮಣಿಪುರದಲ್ಲಿ ಮೊದಲ ಬಾರಿಗೆ ಘರ್ಷಣೆಗಳು ಪ್ರಾರಂಭವಾದವು, ಪರಿಶಿಷ್ಟ ಪಂಗಡಗಳ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೀಟೈ ಸಮುದಾಯದ ಮೀಸಲಾತಿಗೆ ಆಗ್ರಹಿಸಿ ‘ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ’ ಆಯೋಜಿಸಿದ ನಂತರ ಈ ಸಂಘರ್ಷ ಆರಂಭವಾಗಿತ್ತು. ಮಣಿಪುರದ ಜನಸಂಖ್ಯೆಯ ಶೇಕಡ 53 ರಷ್ಟಿರುವ ಮೈತೈಗಳು ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಬುಡಕಟ್ಟು ಜನಾಂಗದ ನಾಗಾಗಳು ಮತ್ತು ಕುಕಿಗಳು ಜನಸಂಖ್ಯೆಯ ಶೇಕಡಾ 40 ರಷ್ಟಿದ್ದಾರೆ ಮತ್ತು ಬೆಟ್ಟದ ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ. ರಾಜ್ಯದಲ್ಲಿ ಶಾಂತಿ ಮರುಸ್ಥಾಪನೆಗಾಗಿ ಸುಮಾರು 10,000 ಸೇನೆ ಮತ್ತು ಅಸ್ಸಾಂ ರೈಫಲ್ಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಮಣಿಪುರದಲ್ಲಿ ಭುಗಿಲೆದ್ದಿರುವ ಮಣಿಪುರದಲ್ಲಿ ಮೈತೆಯಿ ಮತ್ತು ಕುಕಿ ಸಮುದಾಯದ ಜನರ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ 200 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡರು ಮತ್ತು 310 ಜನರು ಗಾಯಗೊಂಡಿದ್ದಾರೆ. ರಾಜ್ಯದ ಹೊರಗಿನ ನಿರಾಶ್ರಿತರ ಶಿಬಿರಗಳಲ್ಲಿ ಸಾವಿರಾರು ಜನರು ಇದ್ದಾರೆ ಮತ್ತು ಲಕ್ಷಗಟ್ಟಲೆ ಪುರುಷರು, ಮಹಿಳೆಯರು ಮತ್ತು ಮಕ್ಕಳು ಸ್ಥಳಾಂತರಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಜ್ಯ ಸರ್ಕಾರ 11 ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಿದೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ.

ಇದನ್ನೂ ಓದಿ:Road Accident: ಗೂಡ್ಸ್ ವಾಹನ-ಕಾರು ಡಿಕ್ಕಿ; ಇಬ್ಬರ ಸಾವು, ಐವರಿಗೆ ಗಂಭೀರ ಗಾಯ

Continue Reading

ಕ್ರೈಂ

Love Sex Dhoka: ಪ್ರೀತಿಸುವ ನಾಟಕವಾಡಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌; ಯುವಕನ ಬಂಧನಕ್ಕಾಗಿ ಪೊಲೀಸ್‌ ಠಾಣೆ ಮುಂದೆ ಯುವತಿ ಧರಣಿ

Love Sex Dhoka: ಕಾರಟಗಿಯ ರವಿರಾಜ್‌ ಎಂಬ ಯುವಕ ಮದುವೆ ಆಗ್ತೀನಿ ಎಂದು ನಂಬಿಸಿ ತನ್ನ ಮೇಲೆ ಎರಡು ವರ್ಷದಿಂದ ಅತ್ಯಾಚಾರವೆಸಗಿದ್ದಾನೆ. ಈತನನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಯುವತಿ ಪಾಲಕರೊಂದಿಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಳು.

VISTARANEWS.COM


on

love sex dhoka koppala
Koo

ಕೊಪ್ಪಳ: ಕೊಪ್ಪಳದಲ್ಲೊಂದು ಲವ್ ಸೆಕ್ಸ್ ದೋಖಾ (love dhoka) ಪ್ರಕರಣ (Fraud Case) ನಡೆದಿದೆ. ಪ್ರೀತಿಸುವ ನಾಟಕವಾಡಿ ಅತ್ಯಾಚಾರ (Physical abuse) ಎಸಗಿ ಕೈ ಕೊಟ್ಟ ಯುವಕನನ್ನು ಬಂಧಿಸಲು ಆಗ್ರಹಿಸಿ ಯುವತಿಯೊಬ್ಬಳು ಪೊಲೀಸ್‌ ಠಾಣೆ ಮುಂದೆ ಧರಣಿ ಕೂತಿದ್ದಾಳೆ.

ಕಾರಟಗಿಯ ರವಿರಾಜ್‌ ಎಂಬ ಯುವಕ ಮದುವೆ ಆಗ್ತೀನಿ ಎಂದು ನಂಬಿಸಿ ತನ್ನ ಮೇಲೆ ಎರಡು ವರ್ಷದಿಂದ ಅತ್ಯಾಚಾರವೆಸಗಿದ್ದಾನೆ. ಈತನನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಯುವತಿ ಪಾಲಕರೊಂದಿಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಳು. ಮೊಸ ಮಾಡಿದ ಯುವಕನ ವಿರುದ್ಧ ದೂರು ದಾಖಲಿಸಿದ್ದಳು. ಪ್ರಕರಣ ದಾಖಲಾದರೂ ಯುವಕನನ್ನು ಆರೆಸ್ಟ್ ಮಾಡಲು ಪೊಲೀಸರು ಮೀನಮೇಷ ಎಣಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಕಾರಟಗಿ ಪೊಲೀಸ್ ಠಾಣೆ ಮುಂದೆ ಯುವತಿ ಮತ್ತು ಆಕೆಯ ಕುಟುಂಬ ಧರಣಿ ಕುಳಿತಿವೆ.

ಯುವಕ ಹಾಗೂ ಯುವತಿ ಕಾಲೇಜ್‌ಮೇಟ್‌ ಆಗಿದ್ದರು ಎಂದು ತಿಳಿದುಬಂದಿದೆ. ಪ್ರೀತಿಸುವ ನಾಟಕವಾಡಿ ಸತತ ಎರಡು ವರ್ಷ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮದುವೆಯಾಗುವ ಆಮಿಷವೊಡ್ಡಿ ಮೋಸ ಮಾಡಿದ್ದಾನೆ. ತನ್ನ ಖಾಸಗಿ ವಿಡಿಯೋ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾನೆ. ನನ್ನ ವಿಡಿಯೋ ಇಟ್ಟುಕೊಂಡು ಮತ್ತೆ ಮತ್ತೆ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ.

ಕ್ಷುಲ್ಲಕ ಕಾರಣಕ್ಕೆ ಗಲಾಟೆ, ಮನೆಗಳಿಗೆ ನುಗ್ಗಿ ದೊಣ್ಣೆ, ಬಡಿಗೆಗಳಿಂದ ಹಲ್ಲೆ

ಗದಗ : ಕ್ಷುಲ್ಲಕ ಕಾರಣವೊಂದಕ್ಕೆ ಮನೆಗಳಿಗೆ ನುಗ್ಗಿ ಮಹಿಳೆಯರು ಸೇರಿದಂತೆ ಮನೆ ಮಂದಿಗೆಲ್ಲ ಡೊಣ್ಣೆ, ಬಡಿಗೆಗಳಿಂದ ಹಲ್ಲೆ ನಡೆಸಿದ ಪ್ರಕರಣವೊಂದು ದಾಖಲಾಗಿದೆ. ಗದಗ (Gadag News) ತಾಲೂಕಿನ ಅಡವಿಸೋಮಾಪೂರ ಸಣ್ಣ ತಾಂಡಾದಲ್ಲಿ ಘಟನೆ ನಡೆದಿದೆ. ಇಬ್ಬರು ಮಹಿಳೆಯರು ಸೇರಿ ಐವರ ಮೇಲೆ ಹಲ್ಲೆ ನಡೆದಿದೆ.

ಜಮೀನು ಬದುವಿನ ವಿಷಯಕ್ಕೆ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಏಕಾಏಕಿ ಮನೆಗಳಿಗೆ ನುಗ್ಗಿ ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ. ಗಲಾಟೆಯು ಎರಡು ದಿನದ ಹಿಂದೆ ಆರಂಭಗೊಂಡಿತ್ತು. ಪೊಲೀಸ್​ ಠಾಣೆಯ ಮೆಟ್ಟಿಲೇರಿತ್ತು. ಅಲ್ಲಿ ಸಮಾಧಾನ ಮಾಡಿ ಕಳುಹಿಸಿದ್ದರು. ಹಿರಿಯರ ಮಧ್ಯಸ್ಥಿಕೆಯಲ್ಲಿ ಗಲಾಟೆ ಬಗೆಹರಿಸಿಕೊಳ್ಳಲಾಗಿತ್ತು. ಇದೀಗ ಮತ್ತೆ ಏಕಾ ಏಕಿ ಗಲಾಟೆ ಮಾಡಿ ಐವರು ಜನರ ಮೇಲೆ ಹಲ್ಲೆ ನಡೆಸಲಾಗಿದೆ. ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Rain News: ಪ್ರತ್ಯೇಕ ಮಳೆ ಅವಘಡ; ಸಿಡಿಲು ಬಡಿದು ಬಾಲಕ, ಮಹಿಳೆ ದುರ್ಮರಣ

ಎರಡು ಪ್ರತ್ಯೇಕ ಮಳೆ ಅವಘಡಗಳಲ್ಲಿ ಸಿಡಿಲು ಬಡಿದು ಬಾಲಕ ಮತ್ತು ಮಹಿಳೆ ದುರ್ಮರಣ ಹೊಂದಿದ್ದಾರೆ. ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಸಿಡಿಲಿಗೆ ಬಾಲಕನೊಬ್ಬ ಬಲಿಯಾಗಿದ್ದರೆ, ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಬಂಡೆಮ್ಮ ನಗರ ಗ್ರಾಮದ ಬಳಿ ಸಿಡಿಲು ಬಡಿದು ಬಾಲಕ ಮೃತಪಟ್ಟಿದ್ದು, ಇನ್ನೊಬ್ಬ ಬಾಲಕನಿಗೆ ಗಂಭೀರ ಗಾಯಗಳಾಗಿವೆ. ಕುರಿ ಮೇಯಿಸಲು ಹೋಗಿದ್ದ ವೇಳೆ ಗುಡುಗು, ಸಿಡಿಲು ಸಹಿತ ಮಳೆ ಸುರಿದಿದ್ದು, ಈ ವೇಳೆ ಮರದ ಬಳಿ ನಿಂತಾಗ ಅವಘಡ ನಡೆದಿದೆ. ಗುಡ್ಡದಕೇರಿ ಬಡಾವಣೆಯ ನಿವಾಸಿ ಯಲ್ಲಪ್ಪ ಕಿಲೀಕೈ (17) ಮೃತ ಬಾಲಕ. ಪರಸಪ್ಪ ಕಿಲೀಕೈ (15) ಗಾಯಾಳುವಾಗಿದ್ದು, ಆತನಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: Murder Case : ಸ್ನೇಹಿತರೇ ಕೊಲೆಗಾರರು; ಬರ್ತ್‌ ಡೇ ಪಾರ್ಟಿಗೆ ಹೋದ ಯುವಕನ ಬರ್ಬರ ಹತ್ಯೆ

Continue Reading

ಕರ್ನಾಟಕ

Gadag News : ಕ್ಷುಲ್ಲಕ ಕಾರಣಕ್ಕೆ ಗಲಾಟೆ, ಮನೆಗಳಿಗೆ ನುಗ್ಗಿ ದೊಣ್ಣೆ, ಬಡಿಗೆಗಳಿಂದ ಹಲ್ಲೆ

Gadag News : ಜಮೀನು ಬದುವಿನ ವಿಷಯಕ್ಕೆ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಏಕಾಏಕಿ ಮನೆಗಳಿಗೆ ನುಗ್ಗಿ ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ. ಗಲಾಟೆಯು ಎರಡು ದಿನದ ಹಿಂದೆ ಆರಂಭಗೊಂಡಿತ್ತು. ಪೊಲೀಸ್​ ಠಾಣೆಯ ಮೆಟ್ಟಿಲೇರಿತ್ತು. ಅಲ್ಲಿ ಸಮಾಧಾನ ಮಾಡಿ ಕಳುಹಿಸಿದ್ದರು.

VISTARANEWS.COM


on

Gadag News
Koo

ಗದಗ : ಕ್ಷುಲ್ಲಕ ಕಾರಣವೊಂದಕ್ಕೆ ಮನೆಗಳಿಗೆ ನುಗ್ಗಿ ಮಹಿಳೆಯರು ಸೇರಿದಂತೆ ಮನೆ ಮಂದಿಗೆಲ್ಲ ಡೊಣ್ಣೆ, ಬಡಿಗೆಗಳಿಂದ ಹಲ್ಲೆ ನಡೆಸಿದ ಪ್ರಕರಣವೊಂದು ದಾಖಲಾಗಿದೆ. ಗದಗ (Gadag News) ತಾಲೂಕಿನ ಅಡವಿಸೋಮಾಪೂರ ಸಣ್ಣ ತಾಂಡಾದಲ್ಲಿ ಘಟನೆ ನಡೆದಿದೆ. ಇಬ್ಬರು ಮಹಿಳೆಯರು ಸೇರಿ ಐವರ ಮೇಲೆ ಹಲ್ಲೆ ನಡೆದಿದೆ

ಜಮೀನು ಬದುವಿನ ವಿಷಯಕ್ಕೆ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಏಕಾಏಕಿ ಮನೆಗಳಿಗೆ ನುಗ್ಗಿ ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ. ಗಲಾಟೆಯು ಎರಡು ದಿನದ ಹಿಂದೆ ಆರಂಭಗೊಂಡಿತ್ತು. ಪೊಲೀಸ್​ ಠಾಣೆಯ ಮೆಟ್ಟಿಲೇರಿತ್ತು. ಅಲ್ಲಿ ಸಮಾಧಾನ ಮಾಡಿ ಕಳುಹಿಸಿದ್ದರು. ಹಿರಿಯರ ಮಧ್ಯಸ್ಥಿಕೆಯಲ್ಲಿ ಗಲಾಟೆ ಬಗೆಹರಿಸಿಕೊಳ್ಳಲಾಗಿತ್ತು. ಇದೀಗ ಮತ್ತೆ ಏಕಾ ಏಕಿ ಗಲಾಟೆ ಮಾಡಿ ಐವರು ಜನರ ಮೇಲೆ ಹಲ್ಲೆ ನಡೆಸಲಾಗಿದೆ. ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Rain News: ಪ್ರತ್ಯೇಕ ಮಳೆ ಅವಘಡ; ಸಿಡಿಲು ಬಡಿದು ಬಾಲಕ, ಮಹಿಳೆ ದುರ್ಮರಣ

ಎರಡು ಪ್ರತ್ಯೇಕ ಮಳೆ ಅವಘಡಗಳಲ್ಲಿ ಸಿಡಿಲು ಬಡಿದು ಬಾಲಕ ಮತ್ತು ಮಹಿಳೆ ದುರ್ಮರಣ ಹೊಂದಿದ್ದಾರೆ. ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಸಿಡಿಲಿಗೆ ಬಾಲಕನೊಬ್ಬ ಬಲಿಯಾಗಿದ್ದರೆ, ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಬಂಡೆಮ್ಮ ನಗರ ಗ್ರಾಮದ ಬಳಿ ಸಿಡಿಲು ಬಡಿದು ಬಾಲಕ ಮೃತಪಟ್ಟಿದ್ದು, ಇನ್ನೊಬ್ಬ ಬಾಲಕನಿಗೆ ಗಂಭೀರ ಗಾಯಗಳಾಗಿವೆ. ಕುರಿ ಮೇಯಿಸಲು ಹೋಗಿದ್ದ ವೇಳೆ ಗುಡುಗು, ಸಿಡಿಲು ಸಹಿತ ಮಳೆ ಸುರಿದಿದ್ದು, ಈ ವೇಳೆ ಮರದ ಬಳಿ ನಿಂತಾಗ ಅವಘಡ ನಡೆದಿದೆ. ಗುಡ್ಡದಕೇರಿ ಬಡಾವಣೆಯ ನಿವಾಸಿ ಯಲ್ಲಪ್ಪ ಕಿಲೀಕೈ (17) ಮೃತ ಬಾಲಕ. ಪರಸಪ್ಪ ಕಿಲೀಕೈ (15) ಗಾಯಾಳುವಾಗಿದ್ದು, ಆತನಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: Vijayanagara News: ತಾಯಿ, ಶಿಶು ಮರಣ ಪ್ರಕರಣ ಮರುಕಳಿಸಿದರೆ ಶಿಸ್ತು ಕ್ರಮ: ಡಿಸಿ ದಿವಾಕರ್

ಸಿಡಿಲಿಗೆ ರೈತ ಮಹಿಳೆ ಬಲಿ

ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಜೆ ರಾಂಪುರದಲ್ಲಿ ಸಿಡಿಲು ಬಡಿದು ರೈತ ಮಹಿಳೆ ರತ್ನಮ್ಮ ಓತಗೇರಿ(43) ಎಂಬುವವರು ಮೃತಪಟ್ಟಿದ್ದಾರೆ. ಹೊಲಕ್ಕೆ ರತ್ನಮ್ಮನೊಂದಿಗೆ ಆಕೆಯ ಅಕ್ಕ ದೇವಮ್ಮ ಸಹ ಹೋಗಿದ್ದರು. ಮಳೆ ಆರಂಭವಾಗುತ್ತಿದ್ದಂತೆ ದೇವಮ್ಮ ಮನೆ ಸೇರಿದ್ದರು. ಆದರೆ ಹೊಲದಲ್ಲಿದ್ದ ರತ್ನಮ್ಮಗೆ ಸಿಡಿಲು ಬಡಿದಿದ್ದರಿಂದ ಮೃತಪಟ್ಟಿದ್ದಾರೆ.

Continue Reading
Advertisement
Election Results 2024
Lok Sabha Election 20243 mins ago

Election Results 2024: ಸಂಸದರಾಗಿ ಆಯ್ಕೆಯಾದ ಉತ್ತರ ಪ್ರದೇಶದ ಎಂಟು ಶಾಸಕರು; ಶೀಘ್ರ ಉಪಚುನಾವಣೆ

self harming attempt
ಕ್ರೈಂ4 mins ago

Self Harming Attempt: ಮತ್ತೊಬ್ಬ ಅಧಿಕಾರಿ ಆತ್ಮಹತ್ಯೆ ಯತ್ನ; ಅಕ್ಷರ ದಾಸೋಹದಲ್ಲಿ ಮೇಲಧಿಕಾರಿಗಳ ಕಿರುಕುಳ?

Lok Sabha Election 2024
ರಾಜಕೀಯ6 mins ago

Lok Sabha Election 2024: ಈ ಬಾರಿ ಆಯ್ಕೆಯಾದ 105 ಸಂಸದರು ಪಿಯುಸಿ ದಾಟಿಲ್ಲ!

Lok Sabha Election 2024
ರಾಜಕೀಯ14 mins ago

Lok Sabha Election 2024: ಈ ಬಾರಿ 24 ಮುಸ್ಲಿಂ ಸಂಸದರ ಆಯ್ಕೆ; ಕಾಂಗ್ರೆಸ್‌, ಎಸ್‌ಪಿಯಿಂದಲೇ ಹೆಚ್ಚು

Viral Video
ವೈರಲ್ ನ್ಯೂಸ್15 mins ago

Viral Video: ಪುಷ್ಪ 2 ಚಿತ್ರದ ಹಾಡಿಗೆ ಹೆಜ್ಜೆ ಹಾಕಿದ ಅಜ್ಜಿ; ವಾವ್ಹ್‌ ಕ್ಯೂಟ್ ಎಂದ ನೆಟ್ಟಿಗರು

Manipur violence
ದೇಶ23 mins ago

Manipur Violence: ಮಣಿಪುರ ಹಿಂಸಾಚಾರ; ಮೋಸ್ಟ್‌ ವಾಂಟೆಡ್‌ ಗಲಭೆಕೋರ ಅರೆಸ್ಟ್‌

love sex dhoka koppala
ಕ್ರೈಂ33 mins ago

Love Sex Dhoka: ಪ್ರೀತಿಸುವ ನಾಟಕವಾಡಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌; ಯುವಕನ ಬಂಧನಕ್ಕಾಗಿ ಪೊಲೀಸ್‌ ಠಾಣೆ ಮುಂದೆ ಯುವತಿ ಧರಣಿ

karnataka weather Forecast
ಮಳೆ2 hours ago

Karnataka Weather : ಗುಡುಗು ಸಹಿತ ಭಾರಿ ಮಳೆ; ಇಂದಿನಿಂದ 5 ದಿನ ಮೀನುಗಾರರು ಸಮುದ್ರಕ್ಕೆ ಇಳಿಯುವಂತಿಲ್ಲ

pulses benefits
ಆರೋಗ್ಯ2 hours ago

Pulses Benefits: ಬೇಳೆಕಾಳುಗಳಲ್ಲಿರುವ ಎಲ್ಲ ಪೋಷಕಾಂಶಗಳು ದೇಹಕ್ಕೆ ಸೇರಬೇಕಾದರೆ ಹೀಗೆ ಮಾಡಿ!

dry fruits
ಆಹಾರ/ಅಡುಗೆ3 hours ago

Dry Fruits: ಈ ಒಣಹಣ್ಣುಗಳನ್ನು ಬೆಳಗ್ಗೆ ಎದ್ದ ಕೂಡಲೇ ತಿನ್ನುವುದು ಒಳ್ಳೆಯದಲ್ಲ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ20 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 weeks ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌