Daali Dhananjay: ಮೈಸೂರು ಲೋಕಸಭೆಗೆ ಡಾಲಿ ಧನಂಜಯ್‌ ಕಾಂಗ್ರೆಸ್‌ ಅಭ್ಯರ್ಥಿ; ಚರ್ಚೆ ಬಗ್ಗೆ ಸಿಎಂ ಹೇಳಿದ್ದೇನು? - Vistara News

ರಾಜಕೀಯ

Daali Dhananjay: ಮೈಸೂರು ಲೋಕಸಭೆಗೆ ಡಾಲಿ ಧನಂಜಯ್‌ ಕಾಂಗ್ರೆಸ್‌ ಅಭ್ಯರ್ಥಿ; ಚರ್ಚೆ ಬಗ್ಗೆ ಸಿಎಂ ಹೇಳಿದ್ದೇನು?

Daali Dhananjaya: ಈಚೆಗಿನ ಬೆಳವಣಿಗೆಯನ್ನು ಗಮನಿಸಿದಾಗ ಅವರನ್ನು ಮೈಸೂರು – ಕೊಡಗು ಲೋಕಸಭಾ ಕ್ಷೇತ್ರಕ್ಕೆ ಕಣಕ್ಕಿಳಿಸುವ ಮೂಲಕ ಪ್ರಬಲ ಎದುರಾಳಿಯನ್ನಾಗಿ ಮಾಡಬೇಕು ಎಂದು ಕಾಂಗ್ರೆಸ್‌ ತಂತ್ರಗಾರಿಕೆಯನ್ನು ರೂಪಿಸುತ್ತಿದೆ ಎನ್ನಲಾಗಿದೆ. ಈ ಹಿಂದೆ “ಬಡವರ ಮಕ್ಕಳು ಬೆಳೆಯಬೇಕು” ಎಂದು ಹೇಳಿದ್ದ ಧನಂಜಯ್‌ ಒಂದು ವೇಳೆ ಸ್ಪರ್ಧೆ ಮಾಡಿದರೆ ಪ್ರಬಲ ಎದುರಾಳಿಯಾಗಲಿದ್ದಾರೆ ಎಂಬ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ ಇದೆ. ಈಗ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

VISTARANEWS.COM


on

CM Siddaramaiah and Daali Dhananjaya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ರಣತಂತ್ರವನ್ನು ರೂಪಿಸುತ್ತಿದೆ. ಇನ್ನು ಹೈವೋಲ್ಟೇಜ್‌ ಕ್ಷೇತ್ರ ಎಂದೆನಿಸಿಕೊಂಡಿರುವ ಸಿಎಂ ತವರು ಜಿಲ್ಲೆಯಾದ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ‌(Mysore Lok Sabha constituency) ದೊಡ್ಡದೊಂದು ಸಂಚಲನ ಸೃಷ್ಟಿ ಮಾಡಲು ಸಿದ್ಧತೆಯನ್ನು ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಖ್ಯಾತ ಚಿತ್ರ ನಟ, ನಟ ರಾಕ್ಷಸ ಡಾಲಿ ಧನಂಜಯ (Daali Dhananjay) ಅವರನ್ನು ಕಣಕ್ಕಿಳಿಸಲು ತೆರೆಮರೆ ಹಿಂದೆ ಕಸರತ್ತು ನಡೆಯುತ್ತಿದೆ ಎಂದೇ ಹೇಳಲಾಗುತ್ತಿದೆ. ಆದರೆ, ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಇದನ್ನು ನಿರಾಕರಣೆ ಮಾಡಿದ್ದಾರೆ.

ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡಾಲಿ ಧನಂಜಯ್‌ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಸ್ಪರ್ಧೆ ವಿಚಾರ ಪ್ರಸ್ತಾಪವೇ ಆಗಿಲ್ಲ. ಚರ್ಚೆಯೂ ಆಗಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ. ಆದರೆ, ಈಚೆಗಿನ ಬೆಳವಣಿಗೆಯನ್ನು ಗಮನಿಸಿದಾಗ ಅವರನ್ನು ಮೈಸೂರು – ಕೊಡಗು ಲೋಕಸಭಾ ಕ್ಷೇತ್ರಕ್ಕೆ ಕಣಕ್ಕಿಳಿಸುವ ಮೂಲಕ ಪ್ರಬಲ ಎದುರಾಳಿಯನ್ನಾಗಿ ಮಾಡಬೇಕು ಎಂದು ಕಾಂಗ್ರೆಸ್‌ ತಂತ್ರಗಾರಿಕೆಯನ್ನು ರೂಪಿಸುತ್ತಿದೆ ಎನ್ನಲಾಗಿದೆ. ಈ ಹಿಂದೆ “ಬಡವರ ಮಕ್ಕಳು ಬೆಳೆಯಬೇಕು” ಎಂದು ಹೇಳಿದ್ದ ಧನಂಜಯ್‌ ಒಂದು ವೇಳೆ ಸ್ಪರ್ಧೆ ಮಾಡಿದರೆ ಪ್ರಬಲ ಎದುರಾಳಿಯಾಗಲಿದ್ದಾರೆ ಎಂಬ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ ಇದೆ.

ಠಕ್ಕರ್‌ ಕೊಡುತ್ತಿರುವ ಪ್ರತಾಪ್‌ ಸಿಂಹ

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಸಂಸದರಾಗಿರುವವರು ಪ್ರತಾಪ್‌ ಸಿಂಹ (MP Pratapsimha). ಅವರು ಸಿಎಂ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ನೇರವಾದ ಠಕ್ಕರ್‌ ಕೊಡುತ್ತಿದ್ದಾರೆ. ಒಂದು ಹಂತದಲ್ಲಿ ಪ್ರತಾಪ್‌ ಸಿಂಹ ವಿರುದ್ಧ ಯತೀಂದ್ರ ಸಿದ್ದರಾಮಯ್ಯ ಅವರೇ ಕಣಕ್ಕಿಳಿಯುತ್ತಾರೆ ಎಂಬ ಚರ್ಚೆ ನಡೆದಿತ್ತು. ಆದರೆ, ಈಗ ಚರ್ಚೆಯ ದಿಕ್ಕು ಸ್ವಲ್ಪ ಬದಲಾಗಿ ಡಾಲಿ ಧನಂಜಯ ಅವರ ಹೆಸರು ಕೇಳಿಬರುತ್ತಿದೆ.

ಒಂದು ವೇಳೆ ಡಾಲಿ ಧನಂಜಯ ಅವರು ಮೈಸೂರು ಕ್ಷೇತ್ರದಲ್ಲಿ ಕಣಕ್ಕಿಳಿದರೆ ದೊಡ್ಡ ಮಟ್ಟದ ಸಂಚಲನವಂತೂ ಕ್ರಿಯೇಟ್ ಆಗಲಿದೆ. ಸಿದ್ದರಾಮಯ್ಯ ಜತೆ ಆಪ್ತ ಒಡನಾಟ ಹೊಂದಿರುವ ಡಾಲಿ ಅವರು ಜನಪ್ರಿಯ ನಟ ಆಗಿರುವ ಕಾರಣಕ್ಕೆ ಪ್ರಚಾರ ನಿರಾಯಾಸವಾಗಿ ನಡೆಯುತ್ತದೆ. ಮತ್ತು ಗೆಲ್ಲುವುದು ಕಷ್ಟವಲ್ಲ ಎಂಬ ಲೆಕ್ಕಾಚಾರ ಕಾಂಗ್ರೆಸ್‌ನದ್ದು.

ಬಜೆಟ್‌ ಭಾಷಣದಲ್ಲಿ ಡಾಲಿ ಸಂಭಾಷಣೆ ಉಲ್ಲೇಖಿಸಿದ್ದ ಸಿದ್ದರಾಮಯ್ಯ!

ರಾಜ್ಯ ಸರ್ಕಾರ ಈಗಾಗಲೇ ಡಾಲಿ ಧನಂಜಯ ಅವರನ್ನು ಲಿಡ್ಕರ್‌ ಕಂಪನಿಯ ರಾಯಭಾರಿಯಾಗಿ ಮಾಡಿದೆ. ಸಿದ್ದರಾಮಯ್ಯ ಅವರು ತಮ್ಮ ಬಜೆಟ್‌ ಭಾಷಣದಲ್ಲಿ ಡಾಲಿ ಧನಂಜಯ ಅವರ ಸಿನಿಮಾದ ಸಂಭಾಷಣೆಯನ್ನು ಉಲ್ಲೇಖಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಅನುದಾನಗಳನ್ನ ಮಂಡಿಸುವ ಮುನ್ನ ಸಿಎಂ ಸಿದ್ದರಾಮಯ್ಯನವರು ʻಡೇರ್ ಡೆವಿಲ್ ಮುಸ್ತಫಾʼ ಚಿತ್ರದ ಎರಡು ಸಾಲುಗಳನ್ನು ಸದನದಲ್ಲಿ ಹೇಳಿದ್ದಾರೆ. “ಒಂದು ತೋಟದಲ್ಲಿ ನೂರು ಹೂವು ಅರಳಲಿ, ಎಲ್ಲಾ ಕೂಡಿ ಆಡುವಂತಹ ಗಾಳಿ ಬೀಸಲಿ” ಎಂಬ ಸಾಲುಗಳನ್ನ ಹೇಳುವ ಮೂಲಕ ಸಮಾಜ ಕಲ್ಯಾಣ ಇಲಾಖೆಗೆ ಕೊಟ್ಟಿರುವ ಅನುದಾನವನ್ನು ಮಂಡಿಸಿದ್ದರು.

Daali Dhananjaya Election siddaramaiah

ಇದನ್ನೂ ಓದಿ : Karnataka Budget Session 2024: ಡಾಲಿ ಧನಂಜಯ್‌ ಬರೆದ ಸಾಲುಗಳು ಬಜೆಟ್‌ನಲ್ಲಿ ಹೈಲೈಟ್‌!

Daali Dhanajanya: ಯಾಕೆ ಡಾಲಿ ಧನಂಜಯ ಅವರಿಗೆ ಬೇಡಿಕೆ?

ಡಾಲಿ ಧನಂಜಯ ಅವರು ಒಬ್ಬ ನಟನಾಗಿ, ನಿರ್ಮಾಪಕನಾಗಿ ದೊಡ್ಡ ಜನಪ್ರಿಯತೆಯನ್ನು ಪಡೆದಿದ್ದಾರೆ. ವಿಭಿನ್ನ ಜಾನರ್‌ಗಳ ಸಿನಿಮಾಗಳನ್ನು ನಿರ್ಮಿಸಿ ಹೊಸ ಅಲೆ ಕ್ರಿಯೇಟ್‌ ಮಾಡಿದ್ದಾರೆ. ಹಾಗಾಗಿ ಅವರಿಗೆ ಫ್ಯಾನ್‌ ಫಾಲೋಯಿಂಗ್‌ ಅಪಾರವಾಗಿದೆ. ಡಾಲಿ ಧನಂಜಯ ಅವರು ಲಿಂಗಾಯತರು. ಮೈಸೂರಿನಲ್ಲಿ ಎಸ್ಸಿ, ಕುರುಬ, ಮುಸ್ಲಿಂ ಕಾಂಗ್ರೆಸ್​ ಪಾಲಿನ ಸಾಂಪ್ರದಾಯಿಕ ಮತಗಳು. ಅದಕ್ಕೆ ಲಿಂಗಾಯತ ಶಕ್ತಿ ಸೇರಿಕೊಂಡರೆ ಗೆಲ್ಲಬಹುದು ಎಂಬ ಲೆಕ್ಕಾಚಾರವನ್ನು ಮಾಡಲಾಗಿದೆ.

ಡಾಲಿ ಧನಂಜಯ ಅವರು ಸಾಮಾಜಿಕ ಬದ್ಧತೆ, ಸೈದ್ಧಾಂತಿಕ ಸ್ಪಷ್ಟತೆ ಇರುವ ವ್ಯಕ್ತಿ. ಅವರ ಚಿಂತನೆಗಳು ಕಾಂಗ್ರೆಸ್‌ಗೆ ಹೆಚ್ಚು ಹತ್ತಿರವಾಗಿವೆ. 2014ರ ಚುನಾವಣೆಯಲ್ಲಿ ಪ್ರತಾಪ್‌ ಸಿಂಹ ಗೆದ್ದಿದ್ದು ತಮ್ಮ ಜನಪ್ರಿಯತೆಯ ಆಧಾರದಲ್ಲಾಗಿದೆ. ಈಗಲೂ ಜನಪ್ರಿಯತೆಯನ್ನೇ ಬಂಡವಾಳ ಮಾಡಿಕೊಂಡು ಗೆಲ್ಲಬಹುದು ಎನ್ನುವುದು ಕಾಂಗ್ರೆಸ್‌ ಲೆಕ್ಕಾಚಾರವಾಗಿದೆ.

ಇದನ್ನೂ ಓದಿ : Dolly Dhananjay: `ಅಭಿಮಾನದ ತೇರು ಎಳೆಯಲುʼ ಸಜ್ಜಾಗುತ್ತಿದೆ ‘ಡಾಲಿ ಉತ್ಸವ’!

ನಿಜಕ್ಕೂ ಡಾಲಿ ಧನಂಜಯ ಅವರಿಗೆ ಅನಿವಾರ್ಯತೆ ಇದೆಯೇ?

  1. ಡಾಲಿ ಧನಂಜಯ ಅವರ ಈಗಿನ ಸಿನಿಮಾ ಕ್ರೇಜ್‌ ನೋಡಿದರೆ ಅವರು ಸಂಪೂರ್ಣವಾಗಿ ಈ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ.
  2. ಅವರಿಗೆ ಆಂತರಿಕವಾಗಿ ರಾಜಕೀಯದ ಒಲವು ಇರುವುದು ಅವರ ಸಿನಿಮಾಗಳ ಡೈಲಾಗ್‌ಗಳಲ್ಲಿ ಸ್ವಷ್ಟವಿದೆ. ಹಾಗಂತ ಈಗಲೇ ಪ್ರವೇಶ ಮಾಡುತ್ತಾರಾ ಎಂಬ ಪ್ರಶ್ನೆ ಎದುರಾಗುತ್ತದೆ.
  3. ಒಂದು ವೇಳೆ ಕಾಂಗ್ರೆಸ್‌ನಿಂದ ದೊಡ್ಡ ಮಟ್ಟದಲ್ಲಿ ಒತ್ತಡ ಬಂದರೆ ಸ್ಪರ್ಧೆ ಮಾಡಲೂಬಹುದು. ಮೇಲ್ನೋಟಕ್ಕೆ ನೋಡಿದರೆ ಸದ್ಯ ಡಾಲಿ ಧನಂಜಯ ಅವರಿಗೆ ಚುನಾವಣೆ ರಂಗ ಪ್ರವೇಶದ ಅನಿವಾರ್ಯತೆ ಇಲ್ಲ!

ನಿಜವಾಗಿ ಅವರನ್ನು ಸೆಳೆಯಲು ಯತ್ನಿಸುತ್ತಿರುವುದು ಬಿಜೆಪಿ!

  1. ಈಗ ಡಾಲಿ ಧನಂಜಯ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ನಡೆಸುತ್ತಿರುವ ಕಾರ್ಯತಂತ್ರದ ಬಗ್ಗೆ ಬಹಿರಂಗ ಚರ್ಚೆ ನಡೆಯುತ್ತಿರುವುದು ನಿಜವಾದರೂ ಮೊದಲು ಈ ಚರ್ಚೆ ಆರಂಭವಾಗಿದ್ದು ಬಿಜೆಪಿಯಲ್ಲಿ!
  2. ಸಂಸದರಾಗಿರುವ ಪ್ರತಾಪ್‌ಸಿಂಹ ಅವರಿಗೆ ಟಿಕೆಟ್‌ ಸಿಗುವುದಿಲ್ಲ ಎಂಬ ಚರ್ಚೆ ನಡೆಯುತ್ತಿರುವುದು ಎಲ್ಲರಿಗೂ ಗೊತ್ತಿದೆ. ಒಂದು ವೇಳೆ ಅವರಿಗೆ ಅಲ್ಲದೆ ಹೋದರೆ ಬೇರೆ ಯಾರಿಗೆ ಎಂಬ ಪ್ರಶ್ನೆ ಎದುರಾದಾಗ ಮೊದಲು ಬಂದ ಹೆಸರು ಮೈಸೂರಿನ ಯದುವೀರ ಕೃಷ್ಣ ಒಡೆಯರ್‌. ಆದರೆ, ಅವರು ಒಪ್ಪದಿದ್ದರೆ ಮತ್ಯಾರು ಎಂಬ ಪ್ರಶ್ನೆಗೆ ಬಿಜೆಪಿಯಲ್ಲೇ ಕೇಳಿಬಂದ ಹೆಸರು ಡಾಲಿ ಧನಂಜಯ. ಆದರೆ, ಈಗ ಅವರ ಹೆಸರು ಕಾಂಗ್ರೆಸ್‌ನಿಂದಲೂ ಕೇಳಿಬರುತ್ತಿದೆ.
  3. ಅಂದರೆ ಒಂದು ವೇಳೆ ಡಾಲಿ ಧನಂಜಯ ಅವರು ಲೋಕಸಭಾ ಚುನಾವಣಾ ಕಣಕ್ಕೆ ಇಳಿಯಲು ಬಯಸಿದ್ದೇ ಆದರೆ ಅವರಿಗೆ ಟಿಕೆಟ್‌ ಕೊಡಲು ಎರಡೂ ಪಕ್ಷಗಳು ಸಿದ್ಧವಾಗಿವೆ ಎಂಬ ಅಭಿಪ್ರಾಯವಿದೆ. ಆದರೆ, ಡಾಲಿ ಧನಂಜಯ ಏನು ಹೇಳ್ತಾರೆ? ಮುಂದೆ ಉತ್ತರ ನೀಡಬಹುದು ಎಂಬ ನಿರೀಕ್ಷೆ ಇದೆ.

ಲೋಕಸಭೆ ಟಾರ್ಗೆಟ್‌ ಬಗ್ಗೆ ಸಿಎಂ ಹೇಳಿದ್ದೇನು?

ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಲೋಕಸಭೆ ಚುನಾವಣೆಗೆ ತಯಾರಿ ನಡೆಯುತ್ತಿದೆ. ಕನಿಷ್ಠ 20 ಸ್ಥಾನ ಗೆಲ್ಲುತ್ತೇವೆ. ಬಿಜೆಪಿಯವರು ಇಷ್ಟು ಸೀಟ್ ಗೆಲ್ಲುತ್ತೇವೆ ಎಂದು ಬುರುಡೆ ಬಿಡುತ್ತಿದ್ದಾರೆ. ಬಡವರ ವಿರೋಧಿಗಳು ಬಜೆಟ್ ಬಗ್ಗೆ ಮಾತನಾಡುತ್ತಾರೆ ಎಂದು ಹೇಳಿದ್ದಾರೆ.

ಗ್ಯಾರಂಟಿ ಸಮಾವೇಶ ಮೂಲಕ ಚುನಾವಣಾ ಪ್ರಚಾರ

ಗ್ಯಾರಂಟಿ ಫಲಾನುಭವಿಗಳ ಸಮಾವೇಶವನ್ನು ಆಯೋಜನೆ ಮಾಡುವ ಮೂಲಕ ಕಾಂಗ್ರೆಸ್ ಚುನಾವಣೆ ಪ್ರಚಾರ ಆರಂಭಿಸಿದೆಯಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ನಿಮ್ಮ ಪ್ರಶ್ನೆಯಲ್ಲೇ ಉತ್ತರವೂ ಇದೆ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

K Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

K Vasantha Bangera: ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಕಳೆದ ಹಲವು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಬುಧವಾರ ಕೊನೆಯುಸಿರೆಳೆದಿದ್ದಾರೆ.

VISTARANEWS.COM


on

K Vasantha Bangera
Koo

ಮಂಗಳೂರು: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ (79) ಅವರು (K Vasantha Bangera) ಬುಧವಾರ ಸಂಜೆ ನಿಧನರಾದರು. ದೀರ್ಘ ಕಾಲದ ಆನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ನಾಯಕ, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ವಸಂತ ಬಂಗೇರ ಅವರು, ಬೆಳ್ತಂಗಡಿ ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿದ್ದರು.

ಇತ್ತೀಚೆಗೆ ಬಂಗೇರ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಕಳೆದ ಹಲವು ತಿಂಗಳಿನಿಂದ ನಿರಂತರ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಸುಜಿತಾ ವಿ. ಬಂಗೇರ ಹಾಗೂ ಇಬ್ಬರು ಪುತ್ರಿಯರು, ಬಂದು ವರ್ಗದವರನ್ನು ಅಗಲಿದ್ದಾರೆ. ಗುರುವಾರ ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದ್ದು, ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ. ವಸಂತ ಬಂಗೇರ ಅವರು
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕುವೆಟ್ಟು ಗ್ರಾಮದಲ್ಲಿ ಕೇದೆ ಸುಬ್ಬ ಪೂಜಾರಿ ಹಾಗೂ ದೇವಕಿ ದಂಪತಿಯ ಪುತ್ರರಾಗಿ ವಸಂತ ಬಂಗೇರ ಅವರು 1946ರ ಜನವರಿ 15ರಂದು ಜನಿಸಿದ್ದರು. ಬೆಳ್ತಂಗಡಿಯ ಬೋರ್ಡ್ ಹೈಸ್ಕೂಲಿನಲ್ಲಿ ತಮ್ಮ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮುಗಿಸಿದ ಅವರು ಮುಲ್ಕಿ, ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪಿಯುಸಿ ಮುಗಿಸಿದರು.

ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಲ್ಲಿ ಚುನಾವಣೆಗೆ ನಿಂತು ಗೆಲವು ಸಾಧಿಸಿ ದಾಖಲೆ ಬರೆದಿದ್ದರು. 1983 ಮತ್ತು 1985ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು. ಆ ನಂತರ 1989ರಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷೇತರರಾಗಿ ನಿಂತು ಸೋಲು ಕಂಡಿದ್ದರು. 1994ರಲ್ಲಿ ಜನತಾದಳದ ಅಭ್ಯರ್ಥಿಯಾಗಿ ಗೆದ್ದಿದ್ದರು. ನಂತರ 1999 ಮತ್ತು 2004ರಲ್ಲಿ ಈ ಕ್ಷೇತ್ರ ಬಿಜೆಪಿ ಪಾಲಾಗಿತ್ತು. ಜೆಡಿಎಸ್‌ನಿಂದ ಸ್ಪರ್ಧಿಸಿದ ವಂಸತ ಬಂಗೇರ ಅವರನ್ನು ಅವರ ಸಹೋದರ ಪ್ರಭಾಕರ ಬಂಗೇರ ಸೋಲಿಸಿದ್ದರು. ಆ ನಂತರ 2008ರ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ವಸಂತ ಬಂಗೇರ ಸಹೋದರನನ್ನು ಸೋಲಿಸಿದರು. ಇನ್ನು 2013ರಲ್ಲಿ ವಸಂತ ಬಂಗೇರ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಬಿಜೆಪಿಯ ರಂಜನ್ ಗೌಡ ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.

ಇದನ್ನೂ ಓದಿ | EVMs Damage: ಚುನಾವಣಾ ಸಿಬ್ಬಂದಿ ಇದ್ದ ಬಸ್‌ನಲ್ಲಿ ಬೆಂಕಿ ಅವಘಡ; ಮತಯಂತ್ರಗಳು ಡ್ಯಾಮೇಜ್‌

2013ರಲ್ಲಿ ಐದನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದಂತ ಅವರು ಸಿದ್ದರಾಮಯ್ಯ ಸರ್ಕಾರದಲ್ಲಿ ಸಣ್ಣ ಕೈಗಾರಿಕಾ ನಿಗಮದ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಬೆಳ್ತಂಗಡಿ ಕ್ಷೇತ್ರದಲ್ಲಿ ಎಂಟು ಬಾರಿ ಸ್ಪರ್ಧಿಸಿ ಐದು ಬಾರಿ ಶಾಸಕರಾಗಿ, ಸರ್ಕಾರದ ಮುಖ್ಯ ಸಚೇತಕರಾಗಿ ಸೇವೆಸಲ್ಲಿಸಿದ್ದ ಬಂಗೇರರು, ಶ್ರೀ ಗುರುನಾರಾಯಣ ಸೇವಾ ಸಂಘದ ಗೌರವಾಧ್ಯಕ್ಷರಾಗಿ, ಗುರುದೇವ ಕಾಲೇಜಿನ ಅಧ್ಯಕ್ಷರಾಗಿ, ಗುರುದೇವ ಸಹಕಾರಿ ಸಂಘದ ಸ್ಥಾಪಕರಲ್ಲಿ ಒಬ್ಬರಾಗಿದ್ದಾರೆ.

Continue Reading

ಚಿಕ್ಕಮಗಳೂರು

Prajwal Revanna Case: ಎಚ್‌ಡಿಕೆ ಕಿಂಗ್‌ ಆಫ್‌ ಬ್ಲ್ಯಾಕ್‌ಮೇಲ್‌; ತಿರುಗಿಬಿದ್ದ ಡಿ.ಕೆ. ಶಿವಕುಮಾರ್!

Prajwal Revanna Case: ಎಚ್.ಡಿ. ಕುಮಾರಸ್ವಾಮಿ ಅವರ ಕೆಲಸ ಮುಗಿಸೋದೇ ಅಲ್ವಾ? ಅವರು ಕಿಂಗ್ ಆಫ್ ಬ್ಲ್ಯಾಕ್‌ಮೇಲ್. ‌ಅಧಿಕಾರಿಗಳು, ರಾಜಕಾರಣಿಗಳನ್ನು ಹೆದರಿಸುತ್ತಿದ್ದಾರೆ. ಅವರದು ಇದೇ ಕೆಲಸವಾಗಿದೆ. ಈ ಎಲ್ಲ ವಿಷಯಗಳ ಬಗ್ಗೆ ಚರ್ಚೆ ಮಾಡಲು ಟೈಮ್ ಇದೆ. ಅಸೆಂಬ್ಲಿಯೂ ಇದೆ. ಎಲ್ಲವನ್ನೂ ತಗೊಂಡ್ ಬರ್ಲಿ ಚರ್ಚೆ ಮಾಡೋಣ ಎಂದು ಡಿ.ಕೆ. ಶಿವಕುಮಾರ್ ಸವಾಲು ಹಾಕಿದ್ದಾರೆ. ಮೊದಲು ಅವರ ಹೆಸರು ಸ್ಟ್ಯಾಂಡ್ ಆಗಲಿ, ದೇವೇಗೌಡರು ನನ್ನ ಹೆಸರು ತೆಗೆದುಕೊಳ್ಳುವುದು ಬೇಡ ಅಂದರು. ಅವರದ್ದೇ ಬೇರೆ ಫ್ಯಾಮಿಲಿ, ನಮ್ಮದೇ ಬೇರೆ ಫ್ಯಾಮಿಲಿ ಎಂದಿದ್ದಾರೆ. ಉಪ್ಪು ತಿಂದವನು ನೀರು ಕುಡಿಯಬೇಕು ಎಂದವರು ಈಗ ಯಾಕೆ ಉರಿ ಮಾಡಿಕೊಳ್ಳುತ್ತಿದ್ದಾರೆ? ಎಂದು ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Prajwal Revanna Case HD Kumaraswamy King of Blackmail and DK Shivakumar is back
Koo

ಚಿಕ್ಕಮಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣವು (Hassan Pen Drive Case) ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನಡುವೆ ಭಾರಿ ವಾಕ್ಸಮರಕ್ಕೆ ಕಾರಣವಾಗಿದೆ. ಆರೋಪ – ಪ್ರತ್ಯಾರೋಪಗಳು ತಾರಕಕ್ಕೇರಿವೆ. ಮಂಗಳವಾರವಷ್ಟೇ ಸುದ್ದಿಗೋಷ್ಠಿ ನಡೆಸಿದ್ದ ಎಚ್‌ಡಿಕೆ, ಸಂಪುಟದಿಂದ ಡಿಕೆಶಿ ವಜಾಕ್ಕೆ ಆಗ್ರಹಿಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ಡಿ.ಕೆ. ಶಿವಕುಮಾರ್‌, ಕುಮಾರಸ್ವಾಮಿ ಅವರು “ಕಿಂಗ್ ಆಫ್ ಬ್ಲ್ಯಾಕ್‌ಮೇಲ್” ಎಂದು ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಎಚ್.ಡಿ. ಕುಮಾರಸ್ವಾಮಿ ಅವರ ಕೆಲಸ ಮುಗಿಸೋದೇ ಅಲ್ವಾ? ಅವರು ಕಿಂಗ್ ಆಫ್ ಬ್ಲ್ಯಾಕ್‌ಮೇಲ್. ‌ಅಧಿಕಾರಿಗಳು, ರಾಜಕಾರಣಿಗಳನ್ನು ಹೆದರಿಸುತ್ತಿದ್ದಾರೆ. ಅವರದು ಇದೇ ಕೆಲಸವಾಗಿದೆ. ಈ ಎಲ್ಲ ವಿಷಯಗಳ ಬಗ್ಗೆ ಚರ್ಚೆ ಮಾಡಲು ಟೈಮ್ ಇದೆ. ಅಸೆಂಬ್ಲಿಯೂ ಇದೆ. ಎಲ್ಲವನ್ನೂ ತಗೊಂಡ್ ಬರ್ಲಿ ಚರ್ಚೆ ಮಾಡೋಣ ಎಂದು ಸವಾಲು ಹಾಕಿದರು.

ಮೊದಲು ಅವರ ಹೆಸರು ಸ್ಟ್ಯಾಂಡ್ ಆಗಲಿ, ದೇವೇಗೌಡರು ನನ್ನ ಹೆಸರು ತೆಗೆದುಕೊಳ್ಳುವುದು ಬೇಡ ಅಂದರು. ಅವರದ್ದೇ ಬೇರೆ ಫ್ಯಾಮಿಲಿ, ನಮ್ಮದೇ ಬೇರೆ ಫ್ಯಾಮಿಲಿ ಎಂದಿದ್ದಾರೆ. ಉಪ್ಪು ತಿಂದವನು ನೀರು ಕುಡಿಯಬೇಕು ಎಂದವರು ಈಗ ಯಾಕೆ ಉರಿ ಮಾಡಿಕೊಳ್ಳುತ್ತಿದ್ದಾರೆ? ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆ ಮಾಡಿದರು.

ರೆಸ್ಟ್‌ ಮಾಡಲು ಬಂದಿದ್ದೇನೆ

ಚುನಾವಣೆ ಮುಗಿಯಿತು. ನಾನೀಗ ಸಿದ್ದಾರ್ಥ್ ಮನೆಗೆ ರೆಸ್ಟ್ ಮಾಡಲು ಬಂದಿದ್ದೇನೆ. ಪೆನ್‌ಡ್ರೈವ್ ವಿಚಾರ ಎಲ್ಲವೂ ಕುಮಾರಸ್ವಾಮಿಗೆ ಗೊತ್ತು. ಕುಮಾರಣ್ಣನಿಗೆ ನನ್ನ ರಾಜೀನಾಮೆ ಬೇಕಂತೆ. ಒಕ್ಕಲಿಗ ನಾಯಕರ ಪೈಪೋಟಿಯಂತೆ, ರಾಜೀನಾಮೆ ಬೇಕಂತೆ ಕೊಡೋಣ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಹೋಗಿ ವಾದ ಮಾಡಲಿ

ಇವರು ವಕೀಲರಾ? ನ್ಯಾಯಾಧೀಶರಾ? ಹೋಗಿ ವಾದ ಮಾಡಲಿ. ಶಿವಕುಮಾರ್, ಸಿದ್ದರಾಮಯ್ಯ, ಸುರ್ಜೆವಾಲ ಇನ್ವೆಸ್ಟಿಗೇಷನ್ ಟೀಮ್ ಎಂದು ಹೇಳುತ್ತಾರೆ. ಆದರೆ, ಈ ಪ್ರಕರಣದ ಕಥಾ ನಾಯಕ, ಡೈರೆಕ್ಟರ್, ಪ್ರೊಡ್ಯೂಸರ್ ಎಲ್ಲವೂ ಇವರೇ ಆಗಿದ್ದಾರೆ. ಎಲ್ಲವೂ ಗೊತ್ತಿದೆ. ಅವರ ಕಾರ್ಯಕರ್ತರು ಅಂತೆ, ಮರ್ಯಾದೆ ಇದ್ದರೆ ಹೋಗಿ ಧೈರ್ಯ ತುಂಬಲಿ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಇದನ್ನೂ ಓದಿ: Prajwal Revanna Case: ವಿಡಿಯೋ ಕಿಂಗ್‌ಪಿನ್‌ ಕಾರ್ತಿಕ್‌ ಕಾಂಗ್ರೆಸ್‌ ಅಭ್ಯರ್ಥಿ ಜೊತೆ ಕ್ಲೋಸ್;‌ ʼಕೈʼವಾಡಕ್ಕೆ ಸಾಕ್ಷಿ ಫೋಟೋಗಳು ಇಲ್ಲಿವೆ!

ಮೋರ್‌ ಸ್ಟ್ರಾಂಗ್‌ ಮೋರ್‌ ಎನಿಮಿ

ನನ್ನ ಮೇಲೆ ಆರೋಪ ಮಾಡದಿದ್ದರೆ ಎಚ್.ಡಿ. ಕುಮಾರಸ್ವಾಮಿಗೆ ಮಾರ್ಕೆಟ್‌ ಓಡಲ್ಲ. ನನ್ನ ಹೆಸರು ಇರದಿದ್ದರೆ ನೀವು ಮಾಧ್ಯಮದಲ್ಲಿ ತೋರಿಸಲಲ್ಲ. ನನ್ನ ಹೆಸರು ಇಲ್ಲದಿದ್ರೆ ಪಾಪ ಅವರಿಗೆ ನಿದ್ದೆಯೇ ಬರಲ್ಲ. ಮೋರ್‌ ಸ್ಟ್ರಾಂಗ್‌ ಮೋರ್‌ ಎನಿಮಿ, ಲೆಸ್‌ ಸ್ಟ್ರಾಂಗ್‌ ಲೆಸ್‌ ಎನಿಮಿ ಎಂದು ಡಿ.ಕೆ. ಶಿವಕುಮಾರ್‌ ಮಾರ್ಮಿಕವಾಗಿ ನುಡಿದರು.

Continue Reading

ಕರ್ನಾಟಕ

Hoskote News: ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿ ಆಯ್ಕೆಗೆ ಬಿಜೆಪಿ ಆಕ್ರೋಶ; ಸಿಎಂ ಹೇಳಿದ್ದೇನು?

Hoskote News: ಬಿಜೆಪಿ ಸರ್ಕಾರದ ಅವಧಿಯಲ್ಲೂ ಹೊಸಕೋಟೆಯ ಅವಿಮುಕ್ತೇಶ್ವರ ದೇವಾಲಯದ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿಗಳನ್ನು ನೇಮಿಸಲಾಗಿತ್ತು. ಹೀಗಾಗಿ ಜನರನ್ನು ಬಿಜೆಪಿ ನಾಯಕರು ತಪ್ಪುದಾರಿಗೆಳೆಯುವ ಕೆಲಸ ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

VISTARANEWS.COM


on

Hoskote News
Koo

ಹೊಸಕೋಟೆ: ನಗರದ ಅವಿಮುಕ್ತೇಶ್ವರ ದೇವಾಲಯದ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿಯನ್ನು ಸದಸ್ಯರನ್ನಾಗಿ ಮಾಡಿರುವುದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಹಿಂದು ವಿರೋಧಿ ಸಿಎಂ ಸಿದ್ದರಾಮಯ್ಯ ಈಗ ಹಿಂದುಯೇತರರನ್ನು ನೇಮಿಸುವ ಮೂಲಕ ದೇವಾಲಯಗಳು ಮತ್ತು ಅವುಗಳ ಸಂಪತ್ತನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ನಿಮ್ಮದೇ ಸರ್ಕಾರ ಇದ್ದಾಗ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಮಾಡಿದಾಗ ನಿಮ್ಮಲ್ಲಿ ಈಗ ಉಕ್ಕಿ ಹರಿಯುತ್ತಿರುವ ಹಿಂದುತ್ವದ ಅಭಿಮಾನ ಆಗ ಎಲ್ಲಿ ಅಡಗಿ ಕೂತಿತ್ತು ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಬಿಜೆಪಿ ನಾಯಕರೇ… ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳುವಿರಿ? ನಿಮ್ಮ ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ ಬೆತ್ತಲಾಗುತ್ತೀರಿ? ಕಾಂಗ್ರೆಸ್ ಸರ್ಕಾರ ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ಸಮುದಾಯದ ನವಾಜ್ ಅವರನ್ನು ಸದಸ್ಯರನ್ನಾಗಿ ಮಾಡಿದೆ ಎಂದು ಎದೆಬಡಿದುಕೊಳ್ಳುತ್ತೀರಲ್ಲಾ? ನಿಮ್ಮದೇ ಪಕ್ಷದ ಸರ್ಕಾರ 2020 ಮತ್ತು 2022ರ ಸಾಲಿನಲ್ಲಿ ಇದೇ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ಸಮುದಾಯ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಮಾಡಿದಾಗ ನಿಮ್ಮಲ್ಲಿ ಈಗ ಉಕ್ಕಿ ಹರಿಯುತ್ತಿರುವ ಹಿಂದುತ್ವದ ಅಭಿಮಾನ ಆಗ ಎಲ್ಲಿ ಅಡಗಿ ಕೂತಿತ್ತು ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ | State Education Policy: 3 ವರ್ಷದ ಪದವಿಗೆ ರಾಜ್ಯ ಸರ್ಕಾರ ಅಸ್ತು; ಎಸ್‌ಇಪಿ ಆಯೋಗದ ಶಿಫಾರುಸುಗಳ ಅನ್ವಯ ಆದೇಶ

ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನ ಸರ್ವಧರ್ಮಗಳನ್ನು ಸಮಭಾವದಿಂದ ಕಾಣುವ ಹಿಂದು ಧರ್ಮದ ಪರಂಪರೆಗೆ ಸಾಕ್ಷಿಯಾಗಿದೆ. ಅಲ್ಲಿನ ಪ್ರತಿಯೊಂದು ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಎಲ್ಲ ಧರ್ಮಗಳ ಜನತೆ ಭಕ್ತಿ-ಗೌರವದಿಂದ ಭಾಗವಹಿಸುತ್ತಾರೆ. 2020ರಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಈ ದೇವಸ್ಥಾನದ ಬ್ರಹ್ಮರಥೋತ್ಸವ ಸಮಿತಿಗೆ ಇಮ್ತಿಯಾಜ್ ಪಾಷಾ ಅವರನ್ನು ಸದಸ್ಯರನ್ನಾಗಿ ನೇಮಿಸಿತ್ತು. 2022ರಲ್ಲಿ ಬಿಜೆಪಿ ಸರ್ಕಾರ ಮತ್ತೆ ಈ ಸಮಿತಿಗೆ ಅಪ್ಸರ್ ಅವರನ್ನು ಸದಸ್ಯರನ್ನಾಗಿ ಮಾಡಿತ್ತು.

ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಸಂಪತ್ತು ಲೂಟಿ ಮಾಡುವ ದುರುದ್ದೇಶದಿಂದಲೇ ಬಿಜೆಪಿ ಸರ್ಕಾರ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಮರನ್ನು ಸದಸ್ಯರನ್ನಾಗಿ ಮಾಡಿದೆ ಎಂದು ಆರೋಪಿಸುವಷ್ಟು ಕೀಳು ಮಟ್ಟಕ್ಕೆ ನಾನಿಳಿಯಲಾರೆ. ಎಲ್ಲವನ್ನೂ ಕೇಸರಿ ಕಣ್ಣುಗಳಿಂದ ನೋಡುವ ರೋಗದಿಂದ ಶೀಘ್ರ ಗುಣಮುಖರಾಗಿ ಎಂದು ನಿಮಗೂ ನಿಮ್ಮ ಸರ್ವೋಚ್ಚ ನಾಯಕರಾದ ನರೇಂದ್ರ ಮೋದಿ ಅವರಿಗೆ ಹಾರೈಸುತ್ತೇನೆ.

ರಾಜ್ಯದ ಬಿಜೆಪಿ ನಾಯಕರೇ, ನಿಮಗೆ ಮಾನ-ಮರ್ಯಾದೆ ಎನ್ನುವುದೇನಾದರೂ ಇದ್ದರೆ ಮೊದಲು ಜನರನ್ನು ತಪ್ಪುದಾರಿಗೆಳೆಯುವ ಈ ಹೇಳಿಕೆಯನ್ನು ವಾಪಸು ಪಡೆದು ರಾಜ್ಯದ ಜಾತ್ಯತೀತ ಕನ್ನಡಿಗರ ಕ್ಷಮೆ ಕೇಳಬೇಕೆಂದು ಒತ್ತಾಯಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿ ಏನು ಹೇಳಿತ್ತು?

ಹೊಸಕೋಟೆಯ ಅವಿಮುಕ್ಷೇಶ್ವರ ದೇವಾಲಯದ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿ ನೇಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ರಾಜ್ಯ ಬಿಜೆಪಿ, ದೇವಸ್ಥಾನದ ಬ್ರಹ್ಮೋತ್ಸವದ ಮೇಲ್ವಿಚಾರಣೆಗೆ ಕಾಂಗ್ರೆಸ್ ‘ನವಾಜ್’ ಅವರನ್ನು ನೇಮಿಸಿದೆ. ನಮ್ಮ ದೇವಸ್ಥಾನಗಳನ್ನು ಲೂಟಿ ಮಾಡಲು ಪ್ರಯತ್ನಿಸಿದ ನಂತರ, ಹಿಂದು ವಿರೋಧಿ ಸಿಎಂ ಸಿದ್ದರಾಮಯ್ಯ ಈಗ ಹಿಂದುಯೇತರರನ್ನು ನೇಮಿಸುವ ಮೂಲಕ ದೇವಾಲಯಗಳು ಮತ್ತು ಅವುಗಳ ಸಂಪನ್ಮೂಲಗಳನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿತ್ತು.

ಇದನ್ನೂ ಓದಿ | Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇಬ್ಬರು ಹೆಚ್ಚುವರಿ ಎಸ್‌ಪಿಪಿ ನೇಮಕ; ರಾಜ್ಯ ಸರ್ಕಾರದ ಮಹತ್ವದ ಆದೇಶ

ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಹಿಂದುಗಳ ಹಕ್ಕುಗಳನ್ನು ಕಸಿದುಕೊಳ್ಳುವ, ಒಂದು ನಿರ್ದಿಷ್ಟ ಸಮುದಾಯಕ್ಕೆ ಒಲವು ತೋರುವ ರಾಹುಲ್ ಗಾಂಧಿಯವರ ಭ್ರಮೆಯ ಕಲ್ಪನೆಗಳನ್ನು ಕಾರ್ಯಗತಗೊಳಿಸಲು ಆತುರ ತೋರುತ್ತಿದೆ. ಇಂದು ಇದು ಕರ್ನಾಟಕದಲ್ಲಿ ಕೇವಲ ಒಂದು ದೇವಾಲಯ, ನಾಳೆ ಅದು ಭಾರತದ ಪ್ರತಿಯೊಂದು ದೇವಾಲಯವಾಗಬಹುದು. ಕಾಂಗ್ರೆಸ್ ಬಗ್ಗೆ ಎಚ್ಚರವಿರಲಿ ಎಂದು ಬಿಜೆಪಿ ತಿಳಿಸಿತ್ತು.

Continue Reading

ಕರ್ನಾಟಕ

State Education Policy: 3 ವರ್ಷದ ಪದವಿಗೆ ರಾಜ್ಯ ಸರ್ಕಾರ ಅಸ್ತು; ಎಸ್‌ಇಪಿ ಆಯೋಗದ ಶಿಫಾರುಸುಗಳ ಅನ್ವಯ ಆದೇಶ

State Education Policy: 2024-25ನೇ ಶೈಕ್ಷಣಿಕ ಸಾಲಿನಿಂದ ಪದವಿ ಕಾರ್ಯಕ್ರಮಗಳಿಗೆ ಸಂಬಂಧಪಟ್ಟಂತೆ ರಾಜ್ಯ ಶಿಕ್ಷಣ ನೀತಿ ಆಯೋಗವು ನೀಡಿರುವ ಮಧ್ಯಂತರ ವರದಿಗಳ ಶಿಫಾರಸುಗಳ ಅನ್ವಯ ಪದವಿ ಅವಧಿ ಹಾಗೂ ಪಠ್ಯಕ್ರಮ ರಚನೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

VISTARANEWS.COM


on

State Education Policy
Koo

ಬೆಂಗಳೂರು: ರಾಜ್ಯ ಶಿಕ್ಷಣ ನೀತಿ ಆಯೋಗದ (State Education Policy) ಮಧ್ಯಂತರ ವರದಿ ಅನ್ವಯ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ವರದಿಯ ಶಿಫಾರಸುಗಳ ಆಧಾರದ ಮೇಲೆ ಪದವಿ ಅವಧಿ ಮತ್ತು ಪಠ್ಯಕ್ರಮ ರಚನೆಯಲ್ಲಿ ಕೆಲ ಮಾರ್ಪಾಡು ಮಾಡಲಾಗಿದೆ. ಇದರಲ್ಲಿ ಪ್ರಮುಖವಾಗಿ 4 ವರ್ಷಗಳ ಪದವಿಯನ್ನು ಕೈಬಿಟ್ಟು, ಈ ಹಿಂದೆ ಇದ್ದ ಮೂರು ವರ್ಷಗಳ ಪದವಿಯನ್ನೇ ಮುಂದುವರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದ ಉನ್ನತ ಶಿಕ್ಷಣ ಇಲಾಖೆಯಡಿ ವಿಶ್ವವಿದ್ಯಾಲಯಗಳು ಮತ್ತು ಸಂಯೋಜಿತ ಕಾಲೇಜುಗಳಲ್ಲಿ 2021-22ನೇ ಶೈಕ್ಷಣಿಕ ವರ್ಷದಿಂದ ಅಗತ್ಯ ಮಾರ್ಗಸೂಚಿಗಳನುಸಾರ ಅನುಷ್ಠಾನಗೊಳಿಸಲಾಗಿತ್ತು. ಚುನಾವಣಾ ಪೂರ್ವದಲ್ಲಿ ಎನ್‌ಇಪಿ ರದ್ದು ಪಡಿಸುವುದಾಗಿ ಘೋಷಿಸಿದ್ದ ಕಾಂಗ್ರೆಸ್‌, ಅಧಿಕಾರಕ್ಕೆ ಬಂದ ಆರಂಭದಲ್ಲಿ ಪ್ರೊ. ಸುಖ್‌ದೇವ್‌ ಥೋರಟ್‌ ನೇತೃತ್ವದಲ್ಲಿ ರಾಜ್ಯ ಶಿಕ್ಷಣ ನೀತಿ ಆಯೋಗ ರಚಿಸಿತ್ತು. ಆಯೋಗವು ಇತ್ತೀಚೆಗೆ ಸಲ್ಲಿಸಿದ ಮಧ್ಯಂತರ ವರದಿಯ ಶಿಫಾರಸುಗಳ ಅನ್ವಯ ಪದವಿ ಅವಧಿ ಮತ್ತು ಪಠ್ಯಕ್ರಮ ರಚನೆಯಲ್ಲಿ ರಾಜ್ಯ ಸರ್ಕಾರ ಕೆಲ ಮಾರ್ಪಾಡುಗಳನ್ನು ಮಾಡಿದೆ.

ಆದೇಶದಲ್ಲಿ ಏನಿದೆ?

ರಾಜ್ಯದ ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣವನ್ನು ಸೂಕ್ಷ್ಮವಾಗಿ ಪರಾಮರ್ಶಿಸಿ ಶಿಕ್ಷಣ ನೀತಿಯನ್ನು ರೂಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಪ್ರೊ.ಸುಖದೇವ್ ಥೋರಟ್ ರವರ ಅಧ್ಯಕ್ಷತೆಯಲ್ಲಿ ಆಯೋಗ ರಚಿಸಿರುತ್ತದೆ. ಈ ನೀತಿಯು ರಾಜ್ಯದ ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣದಲ್ಲಿ ನೋಂದಣಿಯನ್ನು ವೃದ್ಧಿಸಲು, ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು, ಪ್ರತಿಯೊಬ್ಬರಿಗೂ ಗುಣಾತ್ಮಕ ಶಿಕ್ಷಣದಲ್ಲಿ ಸಮಾನ ಅವಕಾಶ ಕಲ್ಪಿಸಲು, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಜ್ಞಾನವನ್ನು ಸದೃಢಗೊಳಿಸಲು, ಶಾಲಾ ಹಾಗೂ ಉನ್ನತ ಶಿಕ್ಷಣವನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಉದ್ಯೋಗವಕಾಶವನ್ನು ಕಲ್ಪಿಸಲು ಮತ್ತು ಪ್ರಜಾಸತ್ತಾತ್ಮಕ ಮತ್ತು ನಾಗರೀಕ/ನೈತಿಕ ಮೌಲ್ಯಗಳನ್ನು ಬೆಳೆಸುವ ಗುರಿ ಹೊಂದಿದೆ.

ಇದನ್ನೂ ಓದಿ | Press Freedom: ಚೀನಾ ಸೇರಿದಂತೆ ಈ ದೇಶಗಳು ಪತ್ರಕರ್ತರಿಗೆ ಸುರಕ್ಷಿತವಲ್ಲ

ಆಯೋಗವು ಆಗಸ್ಟ್ 2024ರಲ್ಲಿ ಅಂತಿಮ ವರದಿಯನ್ನು ಸಲ್ಲಿಸಲಿದ್ದು, ಪ್ರಸ್ತುತ ಕೆಲವು ಶಿಫಾರಸುಗಳೊಂದಿಗೆ ಮಧ್ಯಂತರ ವರದಿ ಸಲ್ಲಿಸಿದೆ. ಸರ್ಕಾರವು ಆಗಸ್ಟ್ 2021ರಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕಾಗಿ ಆದೇಶವನ್ನು ಹೊರಡಿಸಿತ್ತು. ರಾಜ್ಯ ಶಿಕ್ಷಣ ನೀತಿ ಆಯೋಗದ ಮಧ್ಯಂತರ ವರದಿಯ ಶಿಫಾರಸುಗಳ ಆಧಾರದ ಮೇಲೆ ಪದವಿ ಅವಧಿ ಮತ್ತು ಪಠ್ಯಕ್ರಮ ರಚನೆಯಲ್ಲಿ ಕೆಲವೊಂದು ಮಾರ್ಪಾಡುಗಳನ್ನು ಸೂಚಿಸಿದೆ.

ರಾಜ್ಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಪದವಿ ಕೋರ್ಸ್‌ಗಳಿಗೆ ಸಂಯೋಜನೆ ಹಾಗೂ ಪ್ರವೇಶಾತಿ ಪ್ರಕ್ರಿಯೆಯನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಯಾವುದೇ ವಿಳಂಬವಿಲ್ಲದೆ ಈ ಪ್ರಕ್ರಿಯೆಯನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲಾಗುವುದು. 2024-25ರ ಶೈಕ್ಷಣಿಕ ಸಾಲಿಗೆ ಸಂಬಂಧಿಸಿದಂತೆ ಕೆಳಕಂಡಂತೆ ಕೆಲವು ಬದಲಾವಣೆಗಳನ್ನು ಪ್ರಸ್ತಾಪಿಸಲಾಗಿದೆ.

2024-25ನೇ ಶೈಕ್ಷಣಿಕ ವರ್ಷಕ್ಕೆ ಕಾಲಾವಧಿ ಮತ್ತು ಪಠ್ಯಕ್ರಮದಲ್ಲಿ ಪ್ರಸ್ತಾಪಿಸಲಾಗಿರುವ ಬದಲಾವಣೆಗಳು:

ಆಯೋಗದ ಮಧ್ಯಂತರ ವರದಿಯ ಶಿಫಾರಸುಗಳನ್ನು ಆಧರಿಸಿ, ಸರ್ಕಾರವು ಉನ್ನತ ಶಿಕ್ಷಣದ ಪದವಿ ಕಾರ್ಯಕ್ರಮದಲ್ಲಿ ಮತ್ತು ಎಲ್ಲ ಸಾರ್ವಜನಿಕ ವಿಶ್ವವಿದ್ಯಾಲಯಗಳ ಹಾಗೂ ಸಂಯೋಜಿತ ಕಾಲೇಜುಗಳ ಪಠ್ಯಕ್ರಮದಲ್ಲಿ ಕೆಳಕಂಡ ಬದಲಾವಣೆಗಳನ್ನು ತರಲು ಉದ್ದೇಶಿಸಿದೆ.

1.ಪದವಿ ಕಾರ್ಯಕ್ರಮದ ಕಾಲಾವಧಿ: ಸ್ನಾತಕ ಪದವಿ ಕಾರ್ಯಕ್ರಮದ ಕಾಲಾವಧಿ ಕೇವಲ 3 ವರ್ಷಗಳು ಮಾತ್ರ ಆಗಿದ್ದು, ನಾಲ್ಕು ವರ್ಷದ ಪದವಿ ಕಾರ್ಯಕ್ರಮವನ್ನು ಪ್ರಾರಂಭಿಸುವ ಆಯ್ಕೆ ಇರುವುದಿಲ್ಲ. ಈ ಮೊದಲು ನಾಲ್ಕು ವರ್ಷದ ಪದವಿಯು ಆಯ್ಕೆಯಾಗಿತ್ತು.
2. ಮೂರು ವರ್ಷಗಳ ಪದವಿ ಕಾರ್ಯಕ್ರಮಕ್ಕೆ ಪಠ್ಯಕ್ರಮದ ಸ್ವರೂಪ: ಮೂರು ಬೇರೆಬೇರೆ ಪದವಿ ಪಠ್ಯಕ್ರಮದ ಚೌಕಟ್ಟುಗಳನ್ನು (CFW) ಪ್ರಸ್ತಾಪಿಸಿ ಅಂಗೀಕರಿಸಲಾಗಿದ್ದು, ಅವು ಈ ಕೆಳಗಿನಂತಿವೆ:

a. ಎಲ್ಲ 6 ಸೆಮಿಸ್ಮರ್‌ಗಳಲ್ಲಿ 3 ಮೇಜರ್‌ಗಳೊಡನೆ ಸಾಮಾನ್ಯ ಪದವಿ, ಅಥವಾ
b. 4ನೇ ಸೆಮಿಸ್ಟರ್ ವರೆಗೆ 3 ಮೇಜರ್ ಗಳು ಮತ್ತು 5 ಹಾಗೂ 6ನೇ ಸೆಮಿಸ್ಟರ್ ಗಳಲ್ಲಿ 1 Subject ನಲ್ಲಿ ವಿಶೇಷಜ್ಞತೆ (Specialization).
c. ಮೊದಲನೇ ಸೆಮಿಸ್ಟರ್ ನಿಂದ ಮೈನರ್ Subject ಗಳ ಜೊತೆಗೆ 1 Subject ನಲ್ಲಿ ವಿಶೇಷತೆ (Specialization) (ಉದಾ: ಬಿ.ಕಾಂ, ಬಿಬಿಎ, ಬಿಸಿಎ, ಬಿಎ/ಬಿಎಸ್ಸಿ) ಪಠ್ಯಕ್ರಮದ ವಿವರಗಳನ್ನು ಲಗತ್ತಿಸಲಾಗಿದೆ.

3.ಬಹು ಆಗಮನ/ನಿರ್ಗಮನ ಮೊದಲನೇ ವರ್ಷದ ನಂತರ ಸರ್ಟಿಫಿಕೇಟ್ ನೀಡುವ ಹಾಗೂ ಎರಡನೇ ವರ್ಷದ ನಂತರ ಡಿಪ್ಲೊಮಾ ನೀಡುವ (ಬಹು ಆಗಮನ/ನಿರ್ಗಮನು ಕುರಿತು, ಅಂತಿಮ ವರದಿ ಸಲ್ಲಿಕೆಯಾದ ನಂತರ ಶಿಫಾರಸುಗಳನ್ನು ಅನುಷ್ಠಾನಗೊಳಿಸುವ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ. ಆದರೆ ಈ ಹಂತದಲ್ಲಲ್ಲ.
4. ಪಠ್ಯಕ್ರಮ ರಚನೆಯಲ್ಲಿನ ಬದಲಾವಣೆಯ ಮೂಲಕ ಆಳವಾದ ಜ್ಞಾನ ಔದ್ಯಮಿಕ ಆಧಾರಿತ ಕೋರ್ಸ್‌ಗಳನ್ನು ಮತ್ತು ಪ್ರಾದೇಶಿಕ ನಿರ್ದಿಷ್ಟ ವಿಷಯಗಳನ್ನು ವಿಶ್ವವಿದ್ಯಾಲಯಗಳ ಅಧ್ಯಯನ ಮಂಡಳಿಗೆ ಸ್ವಾಯತ್ತತೆಯನ್ನು ನೀಡುವುದನ್ನು 5. Apprenticeship-embedded degree courses ಸಹ ಪಠ್ಯಕ್ರಮದ ಭಾಗವಾಗಿ ಪರಿಗಣಿಸಲಾಗಿದೆ.

ಪ್ರಸ್ತುತ ಚಾಲ್ತಿಯಲ್ಲಿರುವ ತಂಡಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ

ಈ ಬದಲಾವಣೆಗಳು 2021-22, 2022-23, 2023-24 ನೇ ವರ್ಷಗಳಲ್ಲಿ ಪ್ರವೇಶಾತಿ ಪಡೆದ ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಪದವಿ ಕಾರ್ಯಕ್ರಮಗಳಿಗೆ 2021-22, 2022-23 ಮತ್ತು 2023-24 ನೇ ಶೈಕ್ಷಣಿಕ ವರ್ಷಗಳಲ್ಲಿ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳು ಕಾಲಾವಧಿ ಹಾಗೂ ಪಠ್ಯಕ್ರಮದ ಕುರಿತು ಸದ್ಯಕ್ಕೆ ಜಾರಿಯಲ್ಲಿರುವ ಸರ್ಕಾರದ ಆದೇಶ ಸಂಖ್ಯೆ: ಇಡಿ 260 ಯುಎನ್‌ಇ 2019 (ಭಾಗ-1), ದಿನಾಂಕ: 07-08-2021ರ ಅನುಸಾರವಾಗಿಯೇ ವಿದ್ಯಾಭ್ಯಾಸ ಮಾಡುತ್ತಾರೆ.

ಘೋಷಣೆ ಮಾಡಲ್ಪಟ್ಟಿರುವ ಬದಲಾವಣೆಗಳು ಶೈಕ್ಷಣಿಕ ವರ್ಷ 2024-25ರಿಂದ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ.

ಇದನ್ನೂ ಓದಿ | Job Alert: ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 7ರೊಳಗೆ ಅಪ್ಲೈ ಮಾಡಿ

2024-25ನೇ ಸಾಲಿನ ಸಂಯೋಜನೆ ಮತ್ತು ಪ್ರವೇಶಾತಿ ಪ್ರಕ್ರಿಯೆಗಳು

ವಿಶ್ವವಿದ್ಯಾಲಯಗಳಿಗೆ ಸಂಯೋಜನಾ ಪ್ರಕ್ರಿಯೆ ಮತ್ತು ಪ್ರವೇಶಾತಿಗಳು ಈ ಕೂಡಲೇ ಪ್ರಾರಂಭಗೊಳ್ಳುತ್ತವೆ. ಸರ್ಕಾರದ ಆದೇಶದಂತೆ ಪ್ರವೇಶಾತಿ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ. ಈ ಕುರಿತು ಈಗಾಗಲೇ ಎಲ್ಲ ವಿಶ್ವವಿದ್ಯಾಲಯಗಳಿಗೆ ಮಾಹಿತಿ ನೀಡಲಾಗಿದ್ದು, ಕಾಲೇಜುಗಳಿಗೆ ಸ್ಪಷ್ಟಿಕರಣ ಬೇಕಾದಲ್ಲಿ ತಮ್ಮ ಸಂಯೋಜಕ ವಿಶ್ವವಿದ್ಯಾಲಯಗಳನ್ನು ಕೇಳಬಹುದಾಗಿದೆ. 2024-25ನೇ ಶೈಕ್ಷಣಿಕ ಸಾಲಿನ ಸಂಯೋಜನಾ ಪ್ರಕ್ರಿಯೆಯು ಸಂಬಂಧಪಟ್ಟ ವಿಶ್ವವಿದ್ಯಾಲಯಗಳ ಸಂಯೋಜಿತ ಕಾಲೇಜುಗಳಿಗೆ ದಿನಾಂಕ 09.05.2024 ರಂದು UUCMS ತಂತ್ರಾಂಶದ ಮೂಲಕ ಪ್ರಾರಂಭವಾಗುತ್ತದೆ.

Continue Reading
Advertisement
Sam Pitroda
ಪ್ರಮುಖ ಸುದ್ದಿ6 mins ago

Sam Pitroda: ಭಾರತೀಯರ ಬಣ್ಣದ ಕುರಿತು ಮಾತಾಡಿದ ಸ್ಯಾಮ್‌ ಪಿತ್ರೋಡಾ ತಲೆದಂಡ; ಕಾಂಗ್ರೆಸ್‌ ಸ್ಥಾನಕ್ಕೆ ರಾಜೀನಾಮೆ!

Neeraj Chopra
ಕ್ರೀಡೆ25 mins ago

Neeraj Chopra: 3 ವರ್ಷದ ಬಳಿಕ ದೇಶೀಯ ಕ್ರೀಡಾಕೂಟದಲ್ಲಿ ನೀರಜ್​ ಚೋಪ್ರಾ ಸ್ಪರ್ಧೆ

Cancer Risk
ಆರೋಗ್ಯ34 mins ago

Cancer Risk: ಕ್ಯಾನ್ಸರ್ ಅಪಾಯದಿಂದ ಪಾರಾಗಲು ಯಾವ ಆಹಾರ ಸೇವಿಸಬಾರದು? ಯಾವ ಆಹಾರ ಸೇವಿಸಬೇಕು?

K Vasantha Bangera
ಪ್ರಮುಖ ಸುದ್ದಿ44 mins ago

K Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

T20 World Cup 2024
ಕ್ರೀಡೆ1 hour ago

T20 World Cup 2024: ಕ್ರಿಕೆಟ್​ ಪ್ರಿಯರಿಗೆ ಗುಡ್​ ನ್ಯೂಸ್​​; ಈ ಮೊಬೈಲ್‌ ಆ್ಯಪ್​ನಲ್ಲಿ ಟಿ20 ವಿಶ್ವಕಪ್ ಉಚಿತ ಪ್ರಸಾರ

Girls Pleats Skirts Fashion
ಫ್ಯಾಷನ್2 hours ago

Girls Pleats Skirts Fashion: ಹುಡುಗಿಯರ ಮೆಚ್ಚಿನ ಆಯ್ಕೆ ಕೊರಿಯನ್‌ ಪ್ಲೀಟ್ಸ್‌ ಸ್ಕರ್ಟ್ಸ್‌ಗಳು

Jan Aushadhi
ದೇಶ2 hours ago

Jan Aushadhi: ಪ್ರಯಾಣಿಕರಿಗೆ ಗುಡ್‌ ನ್ಯೂಸ್; ರೈಲು ನಿಲ್ದಾಣಗಳಲ್ಲೂ ಸಿಗಲಿವೆ ಕಡಿಮೆ ಬೆಲೆಗೆ ಔಷಧ!

Prajwal Revanna Case HD Kumaraswamy King of Blackmail and DK Shivakumar is back
ಚಿಕ್ಕಮಗಳೂರು2 hours ago

Prajwal Revanna Case: ಎಚ್‌ಡಿಕೆ ಕಿಂಗ್‌ ಆಫ್‌ ಬ್ಲ್ಯಾಕ್‌ಮೇಲ್‌; ತಿರುಗಿಬಿದ್ದ ಡಿ.ಕೆ. ಶಿವಕುಮಾರ್!

Hoskote News
ಕರ್ನಾಟಕ2 hours ago

Hoskote News: ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿ ಆಯ್ಕೆಗೆ ಬಿಜೆಪಿ ಆಕ್ರೋಶ; ಸಿಎಂ ಹೇಳಿದ್ದೇನು?

Heavy Rain
ತುಮಕೂರು2 hours ago

Heavy Rain: ಕಳುವರಹಳ್ಳಿಯಲ್ಲಿ ಭಾರೀ ಗಾಳಿ ಮಳೆಗೆ ಶಾಲಾ ಚಾವಣಿ ಕುಸಿತ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ15 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ23 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ1 day ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ1 day ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌