KT Gatti: ಕಾದಂಬರಿಕಾರ ಕೆ.ಟಿ ಗಟ್ಟಿ ಅವರು ದೇಹದಾನ ಮಾಡಿದ್ದು: ಒಂದು ನೆನಪು - Vistara News

ಕಲೆ/ಸಾಹಿತ್ಯ

KT Gatti: ಕಾದಂಬರಿಕಾರ ಕೆ.ಟಿ ಗಟ್ಟಿ ಅವರು ದೇಹದಾನ ಮಾಡಿದ್ದು: ಒಂದು ನೆನಪು

ಹಿರಿಯ ಲೇಖಕ, ಕಾದಂಬರಿಕಾರ ಕೆ.ಟಿ ಗಟ್ಟಿ (KT Gatti) ಇನ್ನಿಲ್ಲ. ಅವರ ಜೊತೆ ಆತ್ಮೀಯ ಒಡನಾಟ ಹೊಂದಿದ್ದ ಲೇಖಕಿ ಶಮ ನಂದಿಬೆಟ್ಟ ಬರೆದುಕೊಂಡ ಒಂದು ನೆನಪು ಇಲ್ಲಿದೆ.

VISTARANEWS.COM


on

kt gatti
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

:: ಶಮ ನಂದಿಬೆಟ್ಟ

ನೆನಪುಗಳ ಮಾತು ಮಧುರವೇ ಅಂತೇನಿಲ್ಲ

ಅಮ್ಮ ಹೋಗಿ ಕೆಲವೇ ತಿಂಗಳುಗಳಾಗಿತ್ತು. ಯಾವುದೋ ಕೆಲಸದ ನಿಮಿತ್ತ ಊರ ಕಡೆ ಹೋದಾಗ ಕೆ.ಟಿ.ಗಟ್ಟಿಯವರನ್ನು ಭೇಟಿಯಾಗಬೇಕೆನಿಸಿತ್ತು. ಅವರು ಉಜಿರೆಯಿಂದ ಮಂಗಳೂರಿಗೆ ಹೋಗಿ ನೆಲಸಿದ್ದ ಹೊಸತು. ಹೊಸ ಮನೆಗೆ ಹೊಂದಿಕೊಂಡರೋ ಇಲ್ಲವೋ ಇಷ್ಟು ಬೇಗ ನಾನು ಹೋದರೆ ವೃದ್ಧ ದಂಪತಿಗಳಿಗೆ ಕಿರಿಕಿರಿ ಆಗಬಹುದಾ ಯೋಚನೆ. ಆದರೂ ಒಂದು ಕರೆ ಮಾಡಿದ್ದೆ. ತುಂಬ ಅಕ್ಕರೆಯಿಂದ ಈ ಸಲ ಮನೆಗೆ ಬಾರದೇ ವಾಪಸ್ ಹೋಗಕೂಡದು ಎಂದಿದ್ದರು. ಇಬ್ಬರೇ ಇರುವ ಮನೆಗೆ ಇನ್ನೊಬ್ಬಳು ಬಂದರೆ ಅಷ್ಟು ಹೊತ್ತಾದರೂ ಹಾಯೆನಿಸುತ್ತದೆ ಬಾ ಅಂದರು. ಅಷ್ಟು ವರ್ಷಗಳ ಕಾಲ ಬೇರೂರಿದ್ದ ಉಜಿರೆ ಬಿಟ್ಟು ಪಟ್ಟಣಕ್ಕೆ ಬಂದ ನೋವು ಕಂಡೂ ಕಾಣದಂತೆ ಅಲ್ಲೇ ತಿರುಗಾಡುತ್ತಿತ್ತು. ಮಾತಿನ ನಡುವೆ ಅಮ್ಮ ಓದುತ್ತಿದ್ದ ಅವರ ಕಾದಂಬರಿಗಳು ಇತ್ಯಾದಿ ಸುಳಿದವು.

ಅಮ್ಮ ಹೋದ ಬಗ್ಗೆ ಹೇಳುವಾಗ ಅಮ್ಮ ದೇಹದಾನ ಮಾಡಿದ ವಿಷಯ ಬಂತಲ್ಲ, ದಂಪತಿಗಳಿಬ್ಬರೂ ಥಟ್ಟನೆ “ಬೇರೆಲ್ಲ ಬಿಡು, ದೇಹದಾನ ಮಾಡುವ ಬಗ್ಗೆ ಪೂರ್ತಿ ವಿವರ ಹೇಳು” ಅಂದರು. ಅಮ್ಮನಿಗೆ ವಿವರಿಸಿದಷ್ಟೇ ಅಕ್ಕರೆಯಿಂದ ಎಲ್ಲ ಹೇಳಿದ್ದೆ. “ಸರಿ, ಫಾರ್ಮ್ ತರಿಸಿಕೊಳ್ಳುವೆ” ಎಂದಿದ್ದರು. ಹೊರಟ ನಂತರ ಯಾಕೋ ಸಮಾಧಾನ ಎನಿಸಲಿಲ್ಲ. ಮಕ್ಕಳು ಯಾರೂ ತೀರ ಸಮೀಪದಲ್ಲಿ ಇಲ್ಲ; ಇನ್ನಿವರು ಇದಕ್ಕೆ ಇನ್ಯಾರನ್ನೋ ಆಶ್ರಯಿಸುವುದು ಬೇಡವೆನಿಸಿ ಹತ್ತಿರದಲ್ಲೇ ಇದ್ದ ಕೆ.ಎಂ.ಸಿ ಆಸ್ಪತ್ರೆಯಿಂದ ಫಾರಂ ಕೂಡ ಕೊಟ್ಟು ಬಂದೆ. ಬಹುಶಃ ಒಂದೆರಡು ತಿಂಗಳ ನಂತರ ಇರಬಹುದು ಅವರದ್ದೇ ಕರೆ. ಚಿಕ್ಕ ಮಕ್ಕಳು ನಂಗೆ ಹೊಸ ಬಟ್ಟೆ ತಂದಿದ್ದಾರೆ ಗೊತ್ತಾ ಅನ್ನುವಷ್ಟೇ ಸಂಭ್ರಮದಿಂದ “ನೀನು ಕೊಟ್ಟ ದೇಹದಾನದ ಫಾರ್ಮ್ ತುಂಬಿಸಿ ಆಯ್ತು; ಆಸ್ಪತ್ರೆಗೆ ಕೊಟ್ಟು ಬಂದೆವು” ಅಂದಾಗ ನನ್ನ ದನಿ ಭಾರವಾದ್ದು ಅವರಿಗೆ ಗೊತ್ತಾಗದಂತೆ ಮ್ಯಾನೇಜ್ ಮಾಡಿ ಏನೋ ಹಾಳು ಹರಟೆ ಮಾತಾಡಿ ಮುಗಿಸಿದ್ದೆ.

ನನ್ನ ಒಂದು ಮಾತಿಗೆ ದೇಹದಾನದ ನಿರ್ಧಾರ ಕೈಗೊಂಡ ಅಮ್ಮ, ಅವಳ ಆಯ್ಕೆಯ ಹಾದಿಯಲ್ಲಿ ನಡೆಯಲು ನಿರ್ಧಾರ ಮಾಡಿದ ಅವಳಿಷ್ಟದ ಬರಹಗಾರರು… ಅವತ್ತಿಡೀ ಭಾವುಕತೆಯೇ ನನ್ನನ್ನು ಆಳುತ್ತಿತ್ತು. ದಿನ ಪೂರ್ತಿ ಯಾವ ಮಾತೂ ಬೇಡದಂತೆ ಫೋನ್ ಕೂಡಾ ಆಫ್ ಮಾಡಿ ಮೌನವಾಗಿ ಕೂತಿದ್ದು ನೆನಪಿದೆ. ಅಮ್ಮನಿಲ್ಲದ ಊರಿಗೆ ಹೋಗುವ ಆಸಕ್ತಿಯೇ ಇಲ್ಲವಾಗಿದ್ದರೂ ಇತ್ತೀಚೆಗೆ ಅವರನ್ನೊಮ್ಮೆ ಭೇಟಿಯಾಗಲಾ ಎನಿಸಿತ್ತು. ಅಷ್ಟರಲ್ಲಿ ಅವರ ನೆನಪಿನ ಶಕ್ತಿ ಪೂರ್ತಿ ಕುಂದಿದೆ ಎಂಬುದೂ ತಿಳಿಯಿತು. ಮಾತು ಮರೆತು, ನೆನಪು ಹೋಗಿ ಬರಿಯ ದೇಹ ಜೀವಂತ ಇರುವ ಅವರನ್ನು ನೋಡುವುದು ನಂಗೇ ಕಷ್ಟವೆಂದು ಸುಮ್ಮನುಳಿದೆ. ಇನ್ನು ಆ ಕಷ್ಟವಿಲ್ಲ; ಅವರಿಗೆ ಯಾವುದೂ ನೆನಪಾಗುವುದೂ ಬೇಕಿಲ್ಲ. ನಮ್ಮೊಳಗೆ ನೆನಪನ್ನುಳಿಸಿ ತಾನೇ ನಡೆದಿದ್ದಾರೆ. “ಇನ್ನೀಗ ಅಮ್ಮ ಓದಬಹುದಾದ ಒಂದಷ್ಟು ಕತೆಗಳನ್ನು ಅಲ್ಲೂ ಬರೀತಿರಲ್ಲ?” ಪ್ರಶ್ನೆ ಕೇಳುತ್ತಿದ್ದೇನೆ, ಅವರ ಮೆಲುನಗುವಿನ ಸದ್ದು ತಥಾಸ್ತು ಎಂದಿದೆ.

ಇದನ್ನೂ ಓದಿ: KT Gatti : ಖ್ಯಾತ ಕಾದಂಬರಿಕಾರ, ವಿದೇಶದಲ್ಲೂ ಶಿಕ್ಷಕರಾಗಿದ್ದ ಸಾಹಿತಿ ಕೆ.ಟಿ. ಗಟ್ಟಿ ಇನ್ನಿಲ್ಲ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ನನ್ನ ದೇಶ ನನ್ನ ದನಿ ಅಂಕಣ: ಚೀನಾ ದೇಶದ ಪ್ರಾಚೀನ ದೊರೆಗಳು ನಮಗೆ ಪ್ರೇರಣೆ ನೀಡಲಿ

ನನ್ನ ದೇಶ ನನ್ನ ದನಿ ಅಂಕಣ: ಕಳೆದ ಎರಡು ಶತಮಾನಗಳಲ್ಲಿ ಭಾರತದ ಜ್ಞಾನಸಂಪತ್ತನ್ನು ಕೊಳ್ಳೆಹೊಡೆಯಲು ಬ್ರಿಟಿಷರು ಏನೇನು ಬೇಕೋ ಅಷ್ಟನ್ನೂ ಮಾಡಿದರು. ಬ್ರಿಟಿಷರ ಮೂಗಿನ ನೇರಕ್ಕೆ ಅನೇಕ ಭಾಷಾಂತರಗಳೂ ಆದವು. ಆದರೆ ಅನಂತರದ ಕಾಲಾವಧಿಯಲ್ಲಿ ಭಾಷಾಂತರಕ್ಕೆ ಸಿಕ್ಕಬೇಕಾದ ಪ್ರಾಮುಖ್ಯ ಸಿಕ್ಕಲೇ ಇಲ್ಲ. ಕನ್ನಡದ ವಿದ್ವಲ್ಲೋಕದಲ್ಲಿಯೂ “ಅನುವಾದವೇ, ಒಂದು ಡಿಕ್ಷನರಿ ಇದ್ದರಾಯಿತು” ಎಂಬಂತಹ ಔದಾಸೀನ್ಯ.

VISTARANEWS.COM


on

nanna desha nanna dani column
Koo

ಈ ಅಂಕಣವನ್ನು ಇಲ್ಲಿ ಆಲಿಸಿ:

ajjampura manjunath

ನನ್ನ ದೇಶ ನನ್ನ ದನಿ ಅಂಕಣ: ಅನುವಾದ ಮತ್ತು ಭಾಷಾಂತರ ಕ್ಷೇತ್ರಗಳ ಮಹತ್ತ್ವವೇ ನಮಗೆ ತಿಳಿಯದು. ಸಾಮಾನ್ಯರಿರಲಿ, ವಿಶ್ವವಿದ್ಯಾಲಯಗಳಲ್ಲಿ ವಿರಾಜಮಾನರಾಗಿರುವ ಬಹುತೇಕ ಪ್ರಭೃತಿಗಳಿಗೂ ತಿಳಿಯದು. ಭಾಷಾಂತರ ಕ್ಷೇತ್ರದ ಆಳ – ಅಗಲಗಳ ಸರಿಯಾದ ಅಂದಾಜೇ ನಮಗಿಲ್ಲ. ಕಳೆದ ಆರೇಳು ದಶಕಗಳಲ್ಲಿ ಇಂಗ್ಲಿಷ್ ಭಾಷೆ ಮತ್ತು ರೋಮನ್ ಲಿಪಿಗಳ ಅಟ್ಟಹಾಸ, ಅಬ್ಬರಗಳ ಮಹಾಪೂರದಲ್ಲಿ ಭಾರತೀಯ ಭಾಷೆಗಳು ಸೊರಗುತ್ತಿವೆ, ನಿಧಾನವಾಗಿ ನೇಪಥ್ಯಕ್ಕೂ ಸೇರುತ್ತಿವೆ. ಇನ್ನೂ ಹೆಚ್ಚಿನ ದುರಂತವೆಂದರೆ, ನಮ್ಮ ಸೋ ಕಾಲ್ಡ್ ಶಿಕ್ಷಣ ತಜ್ಞರಿಗೆ ಇದರ ಅಂದಾಜೂ ಆಗುತ್ತಿಲ್ಲ. ಇತ್ತೀಚಿನ ಒಂದೆರಡು ದಶಕಗಳಲ್ಲಿ, ಸಂವಾದ – ಚರ್ಚೆ – ಉಪನ್ಯಾಸಮಾಲೆ – ಎಲ್ಲವೂ ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಎಂಬಂತಾಗಿವೆ. ಈ ಪಿಡುಗು ಇನ್ನಷ್ಟು ಮುಂದುವರಿದು ಸಂಗೀತ, ನೃತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮೊದಲ್ಗೊಂಡು, ಶಾಲಾ ಕಾಲೇಜುಗಳ ವಿದ್ಯಾರ್ಥಿ ಸಂಘಗಳ ಕಾರ್ಯಕ್ರಮಗಳನ್ನೂ ಇಂಗ್ಲಿಷ್ ಭಾಷೆ ಆವರಿಸಿಕೊಂಡುಬಿಟ್ಟಿದೆ. ಇನ್ನು ಇಡೀ ದೇಶದ ಬೌದ್ಧಿಕ – ಶೈಕ್ಷಣಿಕ ಕ್ಷೇತ್ರಗಳು, ಇಂಗ್ಲಿಷ್ ಭಾಷೆ – ಇಂಗ್ಲಿಷ್ ಮಾಧ್ಯಮಗಳ ಉಪೋತ್ಪನ್ನಗಳಾಗಿ ಹೋಗಿರುವುದು, ಈ ಎಲ್ಲಾ ಅಪಸವ್ಯಗಳಿಗೆ ಕಲಶವಿಟ್ಟಂತಾಗಿದೆ.

ಪ್ರಾಚೀನ ಭಾರತ, ಅಷ್ಟೇಕೆ, ಪ್ರಾಚೀನ ಜಗತ್ತಿನ ಬಹುಪಾಲು ಆಳರಸರಿಗೆ ಭಾಷಾಂತರ ಕ್ಷೇತ್ರದ ಮಹತ್ತ್ವ ತಿಳಿದಿತ್ತು. ಭಾಷೆಗಳನ್ನು ಯಾರೂ ಸಮಸ್ಯೆಯನ್ನಾಗಿ ಮಾಡಿಕೊಂಡಿರಲಿಲ್ಲ. ಹಿಂದೀ – ತಮಿಳು ಭಾಷೆಗಳನ್ನು ಮತ್ತು ಭಾಷಿಕರನ್ನು ದ್ವೇಷಿಸುವ ನಮ್ಮ ಇಂದಿನ ಯುಗಮಾನದ ಅವಿವೇಕ ಅಂದಿನವರಿಗೆ ಇರಲಿಲ್ಲ. ನಾಲ್ಕೈದು ದಶಕಗಳ ಹಿಂದೆ ಬಂಗಾಳಿ, ತಮಿಳು, ತೆಲುಗು, ಮರಾಠೀ ಮುಂತಾದ ಭಾಷೆಗಳಿಂದ ನೇರವಾಗಿ ಅನುವಾದ ಮಾಡುವವರು ನಮ್ಮಲ್ಲಿಯೇ ಇದ್ದರು. ಈಗ ವಿಚಿತ್ರವೆಂದರೆ, ಭಾರತೀಯ ಭಾಷೆಗಳ ನಡುವಣ ಕೊಡುಕೊಳ್ಳುವಿಕೆಗೂ ಇಂಗ್ಲಿಷ್ ಭಾಷೆಯು ಅನಿವಾರ್ಯ ಮಾಧ್ಯಮ ಎಂಬಂತಾಗುತ್ತಿದೆ. ಇದಕ್ಕಿಂತ ದೊಡ್ಡ ದುರಂತವಿನ್ನೇನು ಇದ್ದೀತು!

ಸಾವಿರಾರು ವರ್ಷಗಳ ನಿಜೇತಿಹಾಸಾಧ್ಯಯನ ನಮ್ಮ ದಿಗ್ಭ್ರಮೆಗೆ ಕಾರಣವಾಗುತ್ತದೆ. ನೋಡಿ, ನಮಗೆ ಯುವಾನ್ ಚ್ವಾಂಗ್ (ಇದು ಸರಿಯಾದ ಉಚ್ಚಾರಣೆ, ಹಿಂದೆ ಹ್ಯೂ ಎನ್ ತ್ಸಾಂಗ್ ಎನ್ನಲಾಗುತ್ತಿತ್ತು) ಫಾಹಿಯಾನ್ ಮಾತ್ರ ಗೊತ್ತು. ಅವರೆಲ್ಲ ಚೀನಾ ದೇಶದಿಂದ ಇಲ್ಲಿಗೆ ಬಂದು ಜ್ಞಾನಸಂಪತ್ತನ್ನು ಅಲ್ಲಿಗೆ ಕೊಂಡೊಯ್ದವರು. ಅವರು, ಅಂತಹವರು ಭಾಷಾಂತರದಿಂದ ಅದ್ಭುತವಾದ ಸಂಪತ್ತನ್ನು ಸಂಗ್ರಹಿಸಿದರು ಮತ್ತು ಅವರ ದೇಶದಲ್ಲಿ ಕಾಪಿಟ್ಟುಕೊಂಡರು. ನಿಜೇತಿಹಾಸದ ಇನ್ನಷ್ಟು ವಿವರಗಳು ಅಕ್ಷರಶಃ ನಮ್ಮನ್ನು ದಿಗ್ಭ್ರಮೆಗೊಳಿಸುತ್ತವೆ. ಇಲ್ಲಿಂದ ಅಲ್ಲಿಗೆ ಹೋಗಿ ಭಾಷಾಂತರ ಮಾಡಿದ ಭಾರತೀಯ ಮೂಲದ ವಿದ್ವಾಂಸರ ವಿವರಗಳು ಸಹ ದಿಕ್ಸೂಚಿಯಾಗಿವೆ.

ಸಾಮಾನ್ಯ ಯುಗದ ಮೊದಲನೆಯ ಶತಮಾನದಲ್ಲಿ (1st Century of Common Era) ಚೀನಾ ದೇಶದ ಸಮ್ರಾಟ ಮಿಂಗ್-ತಿ ಬೌದ್ಧ ಸಿದ್ಧಾಂತದ ಅಧ್ಯಯನಕ್ಕಾಗಿ 18 ಜನರ ತಂಡವನ್ನು ಭಾರತಕ್ಕೆ ಕಳುಹಿಸಿದ. ಅವರು ಇಲ್ಲಿಂದ ದೊಡ್ಡ ಸಂಖ್ಯೆಯ ಗ್ರಂಥಗಳನ್ನು ಪ್ರತಿ ಮಾಡಿಕೊಂಡು, ಅನುವಾದಿಸಿಕೊಂಡು ತೆಗೆದುಕೊಂಡುಹೋದರು ಮತ್ತು ಕಶ್ಯಪ ಮಾತಂಗ ಮತ್ತು ಧರ್ಮರತ್ನ ಎಂಬ ಬೌದ್ಧ ವಿದ್ವಾಂಸರನ್ನೂ ಕರೆದುಕೊಂಡುಹೋದರು. ಕಶ್ಯಪರು ಆಗ ಗಾಂಧಾರದಲ್ಲಿದ್ದರು (ಗಾಂಧಾರ ಎಂದರೆ ಇಂದಿನ ಆಫಘನಿಸ್ತಾನ. ಅದು ಇಸ್ಲಾಂ ಆಕ್ರಮಣಕ್ಕೆ ಮುಂಚೆ ಸಾವಿರಾರು ವರ್ಷಗಳ ಕಾಲ ಬೌದ್ಧ ಧರ್ಮಕ್ಕೆ ಹೆಸರಾಗಿತ್ತು). ಚೀನಾ ದೇಶದ ತರ್ಕೆಸ್ತಾನ್ ಪ್ರದೇಶದ ಪರ್ವತಗಳನ್ನು ಮತ್ತು ಗೋಬೀ ಮರುಭೂಮಿಯನ್ನು ದಾಟಿಹೋಗಲು ಕಶ್ಯಪರು ಪ್ರಯಾಸಪಡಬೇಕಾಯಿತು. ಆದರೆ, ಅವರ ಆ ಪರಿಶ್ರಮದ ಭೇಟಿಯ ಕಾರಣದಿಂದಲೇ ಅನಂತರದ ಅವಧಿಯಲ್ಲಿ, ಪ್ರಾಚೀನ ಭಾರತದ ವಿಶ್ವವಿದ್ಯಾಲಯಗಳಿಂದ ನೂರಾರು ಜನ ವಿದ್ವಾಂಸರು ಚೀನಾ ದೇಶದಲ್ಲಿಯೇ ಕುಳಿತು ಭಾಷಾಂತರ ಮಾಡುವಂತಹ ವ್ಯವಸ್ಥೆ ಬೆಳೆಯಲು ಸಾಧ್ಯವಾಯಿತು. ಅಗಾಧ ಪ್ರಮಾಣದ ಸಂಸ್ಕೃತ ಗ್ರಂಥಗಳನ್ನು ಅವರೆಲ್ಲ ಪ್ರತಿ ಮಾಡಿಕೊಂಡು ಇಲ್ಲಿಂದ ತೆಗೆದುಕೊಂಡುಹೋದರು. ಹಾಗೆ ಹೋದ ವಿದ್ವಾಂಸರಲ್ಲಿ ಸಂಘವರ್ಮ, ಧರ್ಮಸತ್ಯ, ಧರ್ಮಕಾಲ, ಮಹಾಬಲ, ವಿಘ್ನ, ಧರ್ಮಫಲ, ಕಲಾಸಿವಿ, ಕಲಾರುಚಿ ಮತ್ತು ಲೋಕರುಚಿ ಅವರು ಪ್ರಮುಖರಾದವರು.

nalanda and muslim invaders

ಆಗ ಕಾಶ್ಮೀರವೂ ಪ್ರಾಚೀನ ಭಾರತದ ಬಹಳ ದೊಡ್ಡ ಬೌದ್ಧ ಅಧ್ಯಯನ ಕೇಂದ್ರವಾಗಿತ್ತು. ಕಾಶ್ಮೀರದ ರಾಜವಂಶಕ್ಕೆ ಸೇರಿದ ಗುಣವರ್ಮರು ತಮ್ಮ ಪಾಂಡಿತ್ಯಕ್ಕೇ ಹೆಸರಾಗಿದ್ದರು. ಅವರು ಮೊದಲು ಶ್ರೀಲಂಕಾ ಮತ್ತು ಜಾವಾ ದೇಶಗಳಿಗೆ ಹೋಗಿ ಖ್ಯಾತರಾದರು. ಗುಣವರ್ಮರನ್ನು ಚೀನಾ ದೇಶದ ಚಕ್ರವರ್ತಿ ಆಹ್ವಾನಿಸಿದ. ಅಷ್ಟೇ ಅಲ್ಲ, ನಾಂಕಿಂಗ್ ಎಂಬ ಪಟ್ಟಣಕ್ಕೆ ಹೋಗಿ ಸ್ವತಃ ಗುಣವರ್ಮರನ್ನು ಎದುರುಗೊಂಡ. ಅವರ ಶಿಷ್ಯನೂ ಆದ. ಅವರಿಗಾಗಿ ಒಂದು ಬೌದ್ಧ ದೇವಾಲಯವನ್ನೂ ನಿರ್ಮಿಸಿದ. ಗುಣವರ್ಮರಂತೆಯೇ ಕಾಶ್ಮೀರದಿಂದ ಚೀನಾ ದೇಶಕ್ಕೆ ಹೋದ ವಿದ್ವಾಂಸರೆಂದರೆ ಬುದ್ಧಯಶಸ್, ಧರ್ಮಯಶಸ್, ಧರ್ಮಕ್ಷೇಮ, ಬುದ್ಧಜೀವ ಮತ್ತು ಧರ್ಮಮಿತ್ರ. ಈ ವಿವರಗಳು ಅದೆಷ್ಟು ಸಂತೋಷನೀಡುತ್ತವೆ ಎಂದರೆ, ನೋಡಿ, ದಕ್ಷಿಣ ಭಾರತದಿಂದಲೂ ಹಲವಾರು ವಿದ್ವಾಂಸರು ಚೀನಾ ದೇಶಕ್ಕೆ ಹೋದರು. ಹಾಗೆ ಹೋದ ಧರ್ಮರುಚಿ ಇಪ್ಪತ್ತು ವರ್ಷಗಳ ಕಾಲ (ಸಾಮಾನ್ಯ ಯುಗದ 693ರಿಂದ 713) ಚೀನಾ ದೇಶದಲ್ಲಿದ್ದು, ದಾಖಲೆ ಪ್ರಮಾಣದ ಐವತ್ಮೂರು ಗ್ರಂಥಗಳನ್ನು ಭಾಷಾಂತರಿಸಿದರು. ಚೀನೀ ಭಾಷೆಗೆ ವ್ಯವಸ್ಥಿತವಾದ ವ್ಯಾಕರಣವಿಲ್ಲ, ಒಂದು ಪದವನ್ನು ಒಂದು ಅಕ್ಷರವೋ – ಒಂದು ಚಿಹ್ನೆಯೋ ಪ್ರತಿನಿಧಿಸಿಬಿಡುತ್ತದೆ, ಎನ್ನುವ ಹಿನ್ನೆಲೆಯಲ್ಲಿ ಅತ್ಯಂತ ವ್ಯವಸ್ಥಿತವಾದ ಸಂಸ್ಕೃತ ಮತ್ತು ಇನ್ನಿತರ ಭಾರತೀಯ ಭಾಷೆಗಳಿಂದ ಅನುವಾದಿಸುವುದು ಅದೆಷ್ಟು ಶ್ರಮದಾಯಕ, ಕ್ಲಿಷ್ಟಕರ ಎಂಬುದನ್ನು ನಾವಿಲ್ಲಿ ಅರ್ಥಮಾಡಿಕೊಳ್ಳಬೇಕಿದೆ. ಭಾಷಾಂತರದ ಆಯಾಮವೇ ಹಾಗೆ. ಸಂಸ್ಕೃತಿಗಳ – ರೀತಿನೀತಿಗಳ ವ್ಯತ್ಯಾಸ ಮತ್ತು ಅಂತರಗಳೂ ಪ್ರಮುಖ ಪಾತ್ರ ವಹಿಸುತ್ತವೆ.

ಬಹಳ ಮುಖ್ಯವಾದ ಅಂಶವೊಂದನ್ನು ಇಲ್ಲಿ ಪ್ರಸ್ತಾಪಿಸಬೇಕಿದೆ. ಜ್ಞಾನದ ಸಂಪತ್ತನ್ನು ವಿವಿಧ ಸಮುದಾಯಗಳಿಗೆ, ಅನೇಕ ದೇಶಗಳಿಗೆ ಹಂಚಲು ನೀಡಲು ಭಾಷಾಂತರದ ಇಂತಹ ಪ್ರಮುಖ ಆಯಾಮಕ್ಕೆ ರಾಜಾಶ್ರಯ ಇತ್ತು, ಇರಬೇಕು ಎನ್ನುವುದನ್ನು ಸಹ ನಾವಿಲ್ಲಿ ಗಮನಿಸಬೇಕಿದೆ. ಭಾರತ, ಚೀನಾ ಮುಂತಾದ ದೇಶಗಳಲ್ಲಿ ಅನೇಕ ರಾಜರು ಪ್ರೋತ್ಸಾಹ ನೀಡಿದುದರಿಂದಲೇ ಜ್ಞಾನ ಪರಂಪರೆ ಮುಂದುವರಿಯಲು ಮತ್ತು ಉಳಿದುಕೊಂಡು ಬರಲು ಸಾಧ್ಯವಾಯಿತು.

ಕಳೆದ ಎರಡು ಶತಮಾನಗಳಲ್ಲಿ ಭಾರತದ ಜ್ಞಾನಸಂಪತ್ತನ್ನು ಕೊಳ್ಳೆಹೊಡೆಯಲು ಬ್ರಿಟಿಷರು ಏನೇನು ಬೇಕೋ ಅಷ್ಟನ್ನೂ ಮಾಡಿದರು. ಬ್ರಿಟಿಷರ ಮೂಗಿನ ನೇರಕ್ಕೆ ಅನೇಕ ಭಾಷಾಂತರಗಳೂ ಆದವು. ಆದರೆ ಅನಂತರದ ಕಾಲಾವಧಿಯಲ್ಲಿ ಭಾಷಾಂತರಕ್ಕೆ ಸಿಕ್ಕಬೇಕಾದ ಪ್ರಾಮುಖ್ಯ ಸಿಕ್ಕಲೇ ಇಲ್ಲ. ಕನ್ನಡದ ವಿದ್ವಲ್ಲೋಕದಲ್ಲಿಯೂ “ಅನುವಾದವೇ, ಒಂದು ಡಿಕ್ಷನರಿ ಇದ್ದರಾಯಿತು” ಎಂಬಂತಹ ಔದಾಸೀನ್ಯ. ಹಾಗೆಂದೇ, ಕನಿಷ್ಠ ಎಂಬತ್ತು ಪ್ರತಿಶತ ಅನುವಾದಗಳು ಕಳಪೆ ಗುಣಮಟ್ಟದವಾಗಿಬಿಟ್ಟಿವೆ. ಇನ್ನು ಪ್ರಶಸ್ತಿ, ಸ್ಥಾನಮಾನಗಳನ್ನು ಅನುವಾದಕರು ನಿರೀಕ್ಷಿಸುವಂತೆಯೇ ಇಲ್ಲ. ಒಂದೋ ಎರಡೋ ಕು-ಕವನಗಳನ್ನು ಬರೆದವರು ತಾವು ಬರೆದ ಕವನಗಳಿಗಿಂತ ಹೆಚ್ಚು ಸಂಖ್ಯೆಯ ಪ್ರಶಸ್ತಿಗಳನ್ನು ಗಳಿಸಿಬಿಡುತ್ತಾರೆ. ಕನ್ನಡದಲ್ಲಿ “ಕುವೆಂಪು ಭಾಷಾ ಭಾರತಿ ಪ್ರಾಧಿಕಾರ”ವು, ಭಾಷಾಂತರಕ್ಕೆ ಒಳ್ಳೆಯ ಸಂಭಾವನೆಯನ್ನು ಕೊಡುತ್ತಿರುವುದು ಸ್ವಾಗತಾರ್ಹವೇ ಆದರೂ, ಮುಖ್ಯ ವಿಷಯ ಅದಲ್ಲ. ನಮ್ಮ ಪರಂಪರೆಯ ಹಾಗೂ ಅನೇಕ ಪ್ರಮುಖ ಗ್ರಂಥಗಳ ಸಮರ್ಥ ಮತ್ತು ಅಧಿಕೃತ ಅನುವಾದಗಳು ಆಗಬೇಕಿದೆ. ಅದು ಬರಿಯ ಸಂಭಾವನೆಯ ಸಂಗತಿಯನ್ನು ಮೀರಿದುದು. ಕೆಲವು ಗ್ರಂಥಗಳ ಅನುವಾದಕ್ಕೆ ಪ್ರತ್ಯೇಕ ಆದ್ಯತೆಯನ್ನೇ ನೀಡಬೇಕಾಗುತ್ತದೆ ಮತ್ತು ಬರಿಯ ಸಂಭಾವನೆ ಸಾಲದೆಹೋಗುತ್ತದೆ. ಈ ಕಾರ್ಯಕ್ಕೆಂದೇ ಪೂರ್ಣಾವಧಿ ಭಾಷಾಂತರಕಾರರ ನೇಮಕವಾಗಬೇಕಾಗಿದೆ.

ಹಿಂದೆ ರಾಜಾಶ್ರಯ ಇದ್ದ ಹಾಗೆ, ಈಗ ಸರ್ಕಾರೀ ಮತ್ತು ಸೇವಾ ಸಂಸ್ಥೆಗಳು ಪೂರ್ಣಾವಧಿ ಭಾಷಾಂತರಕಾರರನ್ನೇ ನೇಮಿಸಿಕೊಂಡು ಈ ಕಾರ್ಯವನ್ನು ಕೈಗೊಳ್ಳಬೇಕು. ಆಗ ಮಾತ್ರ ನಮ್ಮ ಪರಂಪರೆ ಮತ್ತು ನಿಜ-ಇತಿಹಾಸ ಗ್ರಂಥಗಳನ್ನು ಉಳಿಸಿಕೊಳ್ಳಲು ಸಾಧ್ಯ. ಹಾಗಾದಾಗ ಮಾತ್ರವೇ, ಪರೋಕ್ಷವಾಗಿ ಎಲ್ಲ ಭಾರತೀಯ ಭಾಷೆಗಳನ್ನೂ ಉಳಿಸಲು, ಉಳಿಸಿಕೊಳ್ಳಲು ಸಾಧ್ಯ.

ಅದೆಷ್ಟು ಪ್ರಮಾಣದಲ್ಲಿ ಮಹತ್ತ್ವದ ಗ್ರಂಥಗಳು ಬೇರೆ ಬೇರೆ ಭಾಷೆಗಳಲ್ಲಿ ಬರಬೇಕಾಗಿವೆ ಎಂದರೆ, ಭಾರತಾದ್ಯಂತ ಹತ್ತಾರು ಸಾವಿರ ಪೂರ್ಣಾವಧಿ ಭಾಷಾಂತರಕಾರರ ಅಗತ್ಯವಿದೆ.

ಇದನ್ನೂ ಓದಿ: ನನ್ನ ದೇಶ ನನ್ನ ದನಿ ಅಂಕಣ: ಆ ಕರಾಳ ದಿನಗಳನ್ನು ನೆನಪಿಸಿ ಅಂತರಂಗ ಕಲಕುವ ಬುಗುರಿ

ವಿಚಿತ್ರ ನೋಡಿ. ಅಮೆರಿಕಾ, ಫ್ರಾನ್ಸ್ ಮತ್ತು ಇಂಗ್ಲೆಂಡ್ ದೇಶಗಳ ದರೋಡೆಕಾರರಿಗೆ ನಮ್ಮ ಪ್ರಾಚೀನ ಗ್ರಂಥಗಳ ನಿಜ-ಮೌಲ್ಯ ಗೊತ್ತಿತ್ತು. ಈ ಮೂರೂ ದೇಶಗಳ ವಿದ್ವಾಂಸರು ಒಟ್ಟಾಗಿ ಕುಳಿತು, ಸಾಮಾನ್ಯ ಯುಗದ 17 – 18ನೆಯ ಶತಮಾನಗಳಲ್ಲಿ, ನಮ್ಮ “ಸೂರ್ಯ ಸಿದ್ಧಾಂತ” ಗ್ರಂಥವನ್ನು ಅನುವಾದಿಸಿಕೊಂಡು ಹೋದರು. ಖಗೋಳ ಶಾಸ್ತ್ರದ ಆ ಅಮೌಲ್ಯ ಗ್ರಂಥದ ಪ್ರಮುಖ ವೈಜ್ಞಾನಿಕ ಅಂಶಗಳನ್ನು ಅವರು ಬಳಸಿಕೊಂಡರು. ಮೆಕಾಲೆ ಹುಟ್ಟುಹಾಕಿದ ನಮ್ಮ ದೇಶದ ಇಂದಿನ ವಿಕೃತ ಶಿಕ್ಷಣ ವ್ಯವಸ್ಥೆ ಹೇಗಿದೆಯೆಂದರೆ, ಇಂದು ನಮ್ಮ ವಿಶ್ವವಿದ್ಯಾಲಯಗಳ ಮಹಾಶಯರಿಗೆ “ಸೂರ್ಯ ಸಿದ್ಧಾಂತ”ದ ಬಗೆಗೆ ಕೇಳಿದರೆ, ಅವರು “ಅದು ಬೆಕ್ಕೋ – ನಾಯಿಯೋ ಇರಬಹುದು” ಎಂದಾರು. ಕಮ್ಯೂನಿಸ್ಟರು ಅವರ ತಲೆಗೆ ತುಂಬಿರುವಂತೆ, ಪ್ರಾಚೀನ ಭಾರತವೆಂದರೆ ಅವರ ಪಾಲಿಗೆ “ಸತೀ ಸಹಗಮನ, ಅಸ್ಪೃಶ್ಯತೆ, ಜಾತೀಯತೆ, ಮೂಢ ನಂಬಿಕೆಗಳು, ಭೇದಭಾವ, ಶೋಷಣೆ, ಇತ್ಯಾದಿ” ಮಾತ್ರ!

ಅತ್ಯಂತ ನಿರುಪಯುಕ್ತವಾದ ಕೆಮಿಸ್ಟ್ರಿ (ಶಾಲಾ ಕಾಲೇಜುಗಳಲ್ಲಿ ನಾನೂ ಕೆಮಿಸ್ಟ್ರಿ ವಿದ್ಯಾರ್ಥಿಯೇ. ಅದರಿಂದ ಮೂರುಕಾಸಿನ ಪ್ರಯೋಜನವೂ ಇಲ್ಲವೆಂಬುದನ್ನು, ಕಳೆದ ಅರ್ಧ ಶತಮಾನದಲ್ಲಿ ಅರ್ಥ ಮಾಡಿಕೊಂಡಿದ್ದೇನೆ) ಮುಂತಾದವನ್ನು ಕೈಬಿಟ್ಟು, ಆಗಬೇಕಾದ ವಿಭಾಗಗಳಲ್ಲಿ ಆಗಬೇಕಾದ ಕೆಲಸಗಳಿಗೆ ಆದ್ಯತೆ ಕೊಟ್ಟರೆ, ನಮ್ಮ ವಿಶ್ವವಿದ್ಯಾಲಯಗಳೂ ಅರ್ಥಪೂರ್ಣ ಕೊಡುಗೆ ನೀಡಬಹುದು.

ಇಲ್ಲಿ ಇನ್ನೂ ಒಂದು ಪ್ರಮುಖ ಸಂಗತಿಯನ್ನು ಪ್ರಸ್ತಾಪಿಸಬಹುದು. ಮೇಲೆ ಉಲ್ಲೇಖಿಸಿದ ಉದಾಹರಣೆಗಳು, ಮತಧರ್ಮಗಳ ಶಾಸ್ತ್ರಗ್ರಂಥಗಳ ಅನುವಾದಕ್ಕೆ ಸಂಬಂಧಿಸುತ್ತವೆ, ಅದರ ಹಿಂದೆ ಧರ್ಮಶ್ರದ್ಧೆಯ ಆಯಾಮವಿದೆ ಎಂದು ಕೆಲವರು ಮೂಗು ಮುರಿಯಬಹುದು. ಚೀನಾ ದೇಶದ ಈ ಮೇಲಿನ ಯೋಜನೆಗಳಲ್ಲಿ, ಅವರಿಗೆ ಜೊತೆಜೊತೆಯಲ್ಲಿಯೇ ತರ್ಕಶಾಸ್ತ್ರ, ಔಷಧಶಾಸ್ತ್ರ, ಆಯುರ್ವೇದ ಮುಂತಾದ ಅನೇಕ ಜ್ಞಾನಶಾಖೆಗಳ ಲಾಭವೂ ಆಯಿತು. ನಮ್ಮ ಭಾರತ-ಮೂಲದ ಗಣಿತ, ಅಂಕಿಗಳು, ಕ್ಯಾಲ್ಕುಲಸ್, ಬುದ್ಧಿವಂತರ ಆಟ ಎಂದೇ ಹೆಸರಾದ ಚದುರಂಗದಾಟ (Chess) ಇತ್ಯಾದಿ ಮಹತ್ತ್ವದ ಸಂಗತಿಗಳು ಅರೇಬಿಯಾ ಮೂಲಕ ಯೂರೋಪಿಗೆ ಪರಿಚಯವಾದವು. ಪರೋಕ್ಷವಾಗಿ ಯೂರೋಪಿನಲ್ಲಿ ಆಧುನಿಕ ವಿಜ್ಞಾನದ ವಿಕಾಸ ಸಂಶೋಧನೆಗಳಿಗೆ ಇವೆಲ್ಲಾ ಸಾಧನಗಳಾದವು, ಎಂಬುದನ್ನೂ ನಾವು ಮರೆಯುವಂತಿಲ್ಲ.

ಹೌದು, ಭಾಷಾಂತರ ಕ್ಷೇತ್ರಕ್ಕೆ ಈಗಲಾದರೂ ಆದ್ಯತೆ ದೊರೆಯಬೇಕಿದೆ. ಭಾರತೀಯ ಸಮಾಜದ ಬೌದ್ಧಿಕ ಲೋಕದ ಚುಕ್ಕಾಣಿ ಹಿಡಿದವರು ಈ ನಿಟ್ಟಿನಲ್ಲಿ ತೀವ್ರ ಗಮನ ನೀಡಬೇಕಿದೆ.

ಇದನ್ನೂ ಓದಿ: ನನ್ನ ದೇಶ ನನ್ನ ದನಿ ಅಂಕಣ: ಜೈಶಂಕರ್‌ ಕೃತಿ ʻಭಾರತ ಪಥʼ ತೆರೆದಿಡುವ ವಿದೇಶಾಂಗ ಸಂಬಂಧಗಳ ರೋಚಕ ಆಯಾಮ

Continue Reading

ಬೆಂಗಳೂರು

Music Festival: ಬೆಂಗಳೂರಿನಲ್ಲಿ ಮೇ 12ರಂದು ಸಪ್ತಕ ʼಸಂಗೀತ ಸಂಭ್ರಮʼ

Music Festival: ಬೆಂಗಳೂರಿನ ಮಲ್ಲೇಶ್ವರದ ವೈಯಾಲಿಕಾವಲ್‌ನ ಚೌಡಯ್ಯ ಸ್ಮಾರಕ ಸಭಾ ಭವನದಲ್ಲಿ ಸಂಗೀತ ಸಂಭ್ರಮ ಕಾರ್ಯಕ್ರಮ ನಡೆಯಲಿದೆ.

VISTARANEWS.COM


on

Music Festival
Koo

ಬೆಂಗಳೂರು: ಸಪ್ತಕ ಸಂಸ್ಥೆಯ 19ನೇ ವಾರ್ಷಿಕ ಸಂಗೀತ ಉತ್ಸವದ ನಿಮಿತ್ತ ಮೇ 12ರಂದು ಸಂಜೆ 5.30ಕ್ಕೆ ಸಂಗೀತ ಸಂಭ್ರಮ 552ನೇ ಕಾರ್ಯಕ್ರಮವನ್ನು (Music Festival) ನಗರದ ಮಲ್ಲೇಶ್ವರದ ವೈಯಾಲಿಕಾವಲ್‌ನ ಚೌಡಯ್ಯ ಸ್ಮಾರಕ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಪ್ತಕ ಸಂಚಾಲಕರಾದ ಜಿ.ಎಸ್‌.ಹೆಗಡೆ ತಿಳಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಅಕಾಡೆಮಿ ಆಫ್‌ ಮ್ಯೂಸಿಕ್‌ ಪ್ರಾಯೋಕತ್ವದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಡಾ. ಕೆ ಧರಿಣಿದೇವಿ ಮಾಲಗತ್ತಿ ಭಾಗವಹಿಸಲಿದ್ದಾರೆ.

ಕೋಲ್ಕೊತಾ ಗಾಯಕಿ ವಿದುಷಿ ರುಚಿರಾ ಪಾಂಡಾ, ಬೆಂಗಳೂರಿನ ತಬಲಾ ವಾದಕ ಪಂ. ರಾಜೇಂದ್ರ ನಾಕೋಡ, ಹಾರ್ಮೋನಿಯಂ ವಾದಕ ಪಂ. ವ್ಯಾಸಮೂರ್ತಿ ಕಟ್ಟಿ, ಮುಂಬಯಿಯ ತಬಲಾ ಸೋಲೋ ಕಲಾವಿದ ಪಂ. ಯೋಗೀಶ ಸಂಸಿ, ಪುಣೆಯ ಹಾರ್ಮೋನಿಯಮ್ ಲೆಹರಾ ಕಲಾವಿದರಾದ ತನ್ಮಯ ದೇವಚಕೆ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | Book Release: ಮೈಸೂರಿನಲ್ಲಿ ಮೇ 9ರಂದು ಐತಿಚಂಡ ರಮೇಶ ಉತ್ತಪ್ಪ ಅವರ 4 ಪುಸ್ತಕ ಬಿಡುಗಡೆ, ಸಂವಾದ

Continue Reading

ಮೈಸೂರು

Book Release: ಮೈಸೂರಿನಲ್ಲಿ ಮೇ 9ರಂದು ಐತಿಚಂಡ ರಮೇಶ ಉತ್ತಪ್ಪ ಅವರ 4 ಪುಸ್ತಕ ಬಿಡುಗಡೆ, ಸಂವಾದ

Book Release: ಮೈಸೂರು ವಿಶ್ವವಿದ್ಯಾಲಯದ ವಿಜ್ಞಾನ ಭವನದಲ್ಲಿ ಮೇ 9ರಂದು ಬೆಳಗ್ಗೆ 10.30ಕ್ಕೆ ಪತ್ರಕರ್ತ, ಸಾಹಿತಿ ಐತಿಚಂಡ ರಮೇಶ್‌ ಉತ್ತಪ್ಪ ಅವರ ವನ್ಯಜೀವಿಗಳ ಕುರಿತ 4 ಪುಸ್ತಕಗಳ ಬಿಡುಗಡೆ ಸಮಾರಂಭ ಹಾಗೂ ಸಂವಾದ ಕಾರ್ಯಕ್ರಮ ನಡೆಯಲಿದೆ.

VISTARANEWS.COM


on

Ithichanda Ramesh Uthappaʼs Four books to be released in Mysore on May 9
Koo

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗ, ಬೆಂಗಳೂರಿನ ಅಕ್ಷರ ಮಂಟಪ ಪ್ರಕಾಶನ ಹಾಗೂ ಮೈಸೂರು ಕಲ್ಚರಲ್‌ ಅಸೋಸಿಯೇಷನ್‌ ಸಹಯೋಗದಲ್ಲಿ ಮೇ 9ರಂದು ಬೆಳಗ್ಗೆ 10.30ಕ್ಕೆ ಪತ್ರಕರ್ತ, ಸಾಹಿತಿ ಐತಿಚಂಡ ರಮೇಶ್‌ ಉತ್ತಪ್ಪ (Ithichanda Ramesh Uthappa) ಅವರ ವನ್ಯಜೀವಿಗಳ ಕುರಿತ 4 ಪುಸ್ತಕಗಳ ಬಿಡುಗಡೆ ಸಮಾರಂಭ ಹಾಗೂ ಸಂವಾದ ಕಾರ್ಯಕ್ರಮವನ್ನು (Book Release) ನಗರದ ಮೈಸೂರು ವಿಶ್ವವಿದ್ಯಾನಿಲಯದ ವಿಜ್ಞಾನ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಅವರು ಉದ್ಘಾಟಿಸಲಿದ್ದು, ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಹಾಗೂ ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ ಕೃತಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಜಯ ಕರ್ನಾಟಕ ಸಂಪಾದಕ ಸುದರ್ಶನ ಚನ್ನಂಗಿಹಳ್ಳಿ, ವಿಜಯವಾಣಿ ಸಂಪಾದಕ ಕೆ.ಎನ್. ಚನ್ನೇಗೌಡ ಹಾಗೂ ಕನ್ನಡ ಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ಭಾಗವಹಿಸಲಿದ್ದಾರೆ.

ಮೈಸೂರು ವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರೊ. ಎಂ.ಎಸ್. ಸಪ್ನ ಅವರು ಅಧ್ಯಕ್ಷತೆ ವಹಿಸಲಿದ್ದು, ವಿಶೇಷ ಅತಿಥಿಗಳಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಮಾನಸ ಹಾಜರಿರಲಿದ್ದಾರೆ.

ಇದನ್ನೂ ಓದಿ | ರಾಜಮಾರ್ಗ ಅಂಕಣ: ಶೇಕ್ಸ್‌ಪಿಯರ್‌ ನೆನಪಿನಲ್ಲಿ ಓದುವ ಸುಖ ನೆನಪಿಸಿಕೊಳ್ಳುವ ಹೊತ್ತು

ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಪ್ರೊ.ಸಿ.ಕೆ.ಪುಟ್ಟಸ್ವಾಮಿ, ಸಹ ಪ್ರಾಧ್ಯಾಪಕರಾದ ಪ್ರೊ. ಎನ್. ಮಮತ, ಪುಸ್ತಕಗಳ ಲೇಖಕರಾದ ಐತಿಚಂಡ ರಮೇಶ್ ಉತ್ತಪ್ಪ, ಪ್ರಕಾಶಕ ಚೇತನ್ ಕಣಬೂರು, ಮೈಸೂರು ಕಲ್ಬರಲ್ ಅಸೋಸಿಯೇಷನ್‌ನ ಎ.ಪಿ.ನಾಗೇಶ್ ಉಪಸ್ಥಿತರಿರಲಿದ್ದಾರೆ.

ಬಿಡುಗಡೆಯಾಗಲಿರುವ ಕೃತಿಗಳು

  • ಕಾಡು ಹೇಳಿದ ಕಥೆ: ವೈಲ್ಡ್‌ ಲೈಫ್ ರಿಪೋರ್ಟಿಂಗ್
  • ಹಾವು: ನಂಬಿಕೆ ಹಾಗೂ ಮನೋವೈಜ್ಞಾನಿಕ ವಿಶ್ಲೇಷಣೆ
  • ಆನೆ: ಬದಲಾದ ವರ್ತನೆ
  • ಅರ್ಜುನ ನಿನ್ನ ಮರೆಯಲೆಂತು ನಾ..!
Continue Reading

ಅಂಕಣ

ಧವಳ ಧಾರಿಣಿ ಅಂಕಣ: ರಾಮಪಟ್ಟಾಭಿಷೇಕ ಭಂಗ

ಧವಳ ಧಾರಿಣಿ ಅಂಕಣ: ಕಾಮವೆನ್ನುವುದು ಎಂತಹವರನ್ನೂ ತಲೆಕೆಡಿಸಿಬಿಡುತ್ತದೆ. ಕಾಮದ ಹುಚ್ಚಿನಲ್ಲಿರುವ ದಶರಥ ತನ್ನ ಸುಖಕ್ಕಾಗಿ ಏನನ್ನು ಮಾಡಲೂ ಹೇಸದ ಸ್ಥಿತಿಗೆ ತಲುಪಿದ್ದಾನೆ. ವಧಾರ್ಹನಲ್ಲದವನನ್ನು ವಧಿಸಲೇ, ಮರಣದಂಡನೆಗೆ ಗುರಿಯಾದವನನ್ನು ಬಿಡಿಸಲೇ, ದರಿದ್ರನನ್ನು ಶ್ರೀಮಂತನನ್ನಾಗಿ ಮಾಡಲೇ, ಶ್ರೀಮಂತನನ್ನು ದರಿದ್ರನನ್ನಾಗಿ ಮಾಡಲೇ; ನಿನ್ನ ಪ್ರೀತಿಗಾಗಿ ಏನನ್ನೂ ಮಾಡಲೂ ತಾನು ಸಿದ್ಧ ಎನ್ನುತ್ತಾನೆ.

VISTARANEWS.COM


on

king dasharatha kaikeyi dhavala dharini column
Koo

ಪ್ರಾಣಕ್ಕಿಂತ ಪ್ರಿಯಳಾದ ಸತಿಯಿಂದ ಪ್ರಾಪ್ತವಾದ ಪುತ್ರ ವಿಯೋಗ

dhavala dharini by Narayana yaji

ಧವಳ ಧಾರಿಣಿ ಅಂಕಣ: ಸ ಕೈಕೇಯ್ಯಾ ಗೃಹಂ ಶ್ರೇಷ್ಠಂ ಪ್ರವಿವೇಶ ಮಹಾಯಶಾಃ
ಪಾಣ್ಡುರಾಭ್ರಮಿವಾಕಾಶಂ ರಾಹುಯುಕ್ತಂ ನಿಶಾಕರಃ ৷৷ಅ.ಯೋ.10.11৷৷

ಬಿಳಿಯದಾದ ಮೋಡಗಳಿಂದ ಕೂಡಿದ ಆಕಾಶದಲ್ಲಿ ರಾಹುವಿಗೆ ಗ್ರಾಸವಾಗುವ ಸಲುವಾಗಿ ಚಂದ್ರನು ಪ್ರವೇಶಿಸುವಂತೆ ಮಹಾಯಶೋವಂತನಾದ ರಾಜನು ಭವ್ಯವಾದ ಕೈಕೇಯಿಯ ಅಂತಃಪುರವನ್ನು ಪ್ರವೇಶಿಸಿದನು.

ಕವಿಸಮಯವೆನ್ನುವದು ರಾಮಾಯಣ ಕಾವ್ಯದ ವಿಶೇಷ. ವಾಲ್ಮೀಕಿ ಕಾವ್ಯವನ್ನು ಕೇವಲ ಉಅಪದೇಶಕ್ಕಾಗಿಯಲ್ಲ, ಅದನ್ನು ತಾಳವಾದ್ಯಗಳೊಂದಿಗೆ ರಾಗವಾಗಿ ಹಾಡಲು ಅನುಕೂಲವಾಗುವಂತೆ ಬರೆದಿದ್ದಾನೆ. ಹಾಡುಗಾರಿಕೆಯಲ್ಲಿ ವರ್ಣನೆಗೆ ಮಹತ್ವ ಬರುತ್ತದೆ. ಕಾವ್ಯದ ಮುಂಗಾಣ್ಕೆ ಅಲ್ಲಲ್ಲಿ ವ್ಯಕ್ತವಾಗುತ್ತಾ ಹೋಗುತ್ತದೆ. ಕೈಕೇಯಿಯ ಅರಮನೆಗೆ ಹೋಗುವ ರಾಜನ ಕುರಿತು ವರ್ಣಿಸುವಾಗ ಬಿಳಿಯದಾದ ಮೋಡ, ರಾಹು, ಆಕಾಶ, ಚಂದ್ರ ಎನ್ನುವ ಉಪಮೆಗಳ ಮೂಲಕ ಹೇಳಿದ್ದಾನೆ. ಆಕಾಶ ಎನ್ನುವುದು ಮನಸ್ಸಿನಲ್ಲಿ ಆಸೆಗಳ ವಿಸ್ತಾರದವನ್ನು ಸೂಚಿಸಿದೆ. ಬಿಳಿಯದಾದ ಮೋಡವೆನ್ನುವದು ಅರ್ಥಪೂರ್ಣವಾದ ಉಪಮೆ. ನೀರಿನಿಂದ ಯುಕ್ತವಾದ ಮೋಡ ಕಪ್ಪಾಗಿರುತ್ತದೆ. ಮನಸ್ಸಿನಲ್ಲಿ ತನ್ನ ಮಗನ ಪಟ್ಟಾಭಿಷೇಕದ ಕುರಿತು ಯಾವ ಆಸೆಯನ್ನೇ ಇರಿಸಿಕೊಳ್ಳಲಿ, ಅದೆಲ್ಲವೂ ನೀರಿಲ್ಲದ ಮೋಡದಂತೆ ವ್ಯರ್ಥವಾಗಿ ಹಾರಿಹೋಗುತ್ತದೆ ಎನ್ನುವುದನ್ನು ಹೇಳುತ್ತಾನೆ. ರಾಹು ಮತ್ತು ಕೇತುಗಳು ಭಾರತೀಯ ಖಗೋಳಶಸ್ತ್ರದ ಪ್ರಕಾರ ಎರಡು ವಿರುದ್ಧದಿಕ್ಕುಗಳಲ್ಲಿರುವ ಬಿಂದುಗಳು. ಈ ಬಿಂದುವಿಗೆ ಸೂರ್ಯಚಂದರು ಬಂದಾಗ ಗ್ರಹಣವಾಗುತ್ತದೆ. ಚಂದ್ರ ಮನಸ್ಸಿನ ಕಾರಕ. ಸಂತೊಷ ಮತ್ತು ಕಾಮವಿಕಾರಗಳು ಮನಸ್ಸಿನಲ್ಲಿ ಉತ್ಪನ್ನವಾಗುವಂತವು. ಚಂದ್ರ ತನ್ನ ಪರಿಭ್ರಮಣದಲ್ಲಿ ರಾಹುವಿನ ಬಿಂದುವಿಗೆ ಬಂದಾಗ ಗ್ರಹಣವಾಗಿ ತನ್ನ ಕಾಂತಿಯನ್ನು ಕಳೆದುಕೊಳ್ಳುತ್ತಾನೋ ಅದೇರಿತಿ ರಾಜ ತನ್ನೆಲ್ಲ ಕನಸನ್ನು ಕಳೆದುಕೊಂಡು ನಿಶ್ಚಿತವಾಗಿ ಮರಣದತ್ತ ಸಾಗಲು ಬಂದಿದ್ದಾನೆ ಎನ್ನುವುದನ್ನು ಉಪಮಾಮಲಂಕಾರದಲ್ಲಿ ಕವಿ ವರ್ಣಿಸಿದ್ದಾನೆ.

ದಶರಥನ ಪಾತ್ರವನ್ನು ವಿವೇಚಿಸುವಾಗ ಮೊದಲಿನಿಂದಲೂ ಕಂಡುಬಂದ ಅಂಶವೆಂದರೆ ಮಹಾನ್ ರಾಜರ್ಶಿಯಾಗಿದ್ದ ದೊರೆ ರಾಮನ ಕುರಿತು ಕಡುಲೋಭಿಯಾಗಿ ಪರಿವರ್ತನೆಯಾಗಿರುವುದನ್ನು ಗಮನಿಸಬಹುದು. ದಶರಥನ ವ್ಯಕ್ತಿತ್ವವೆನ್ನುವುದು ಸಂಕೀರ್ಣವೇನೂ ಅಲ್ಲ. ಶೂರನಾಗಿದ್ದ; ಸೂರ್ಯವಂಶದ ಧ್ಯೇಯೋದ್ಧಶವಾದ ಧರ್ಮಸ್ಥಾಪನೆಯ ವಿಷಯದಲ್ಲಿ ಸದಾ ನಿರತನಾಗಿದ್ದ. ಅದೇ ಕಾಲಕ್ಕೆ ಅಯೋಧ್ಯೆಯ ಸಿಂಹಾಸನವೆನ್ನುವುದು ಗಣತಂತ್ರವ್ಯವಸ್ಥೆಯಲ್ಲಿ ಇತ್ತು. ರಾಜರಾಗುವವರು ಯಾರೇ ಆದರೂ ಅದಕ್ಕೆ ಪ್ರಜೆಗಳ ಒಪ್ಪಿಗೆ ಪಡೆಯಬೇಕಾಗಿತ್ತು. ಪ್ರಾಚೀನ ಗ್ರೀಸಿನಲ್ಲಿದ್ದ ರೀತಿಯ ಗಣತಂತ್ರವ್ಯವಸ್ಥೆ ಅಯೋಧ್ಯೆಯಲ್ಲಿ ಇತ್ತು ಎನ್ನುವುದಕ್ಕೆ ವಾಲ್ಮೀಕಿಯ ರಾಮಾಯಣವನ್ನು ಮತ್ತು ಮತ್ತು ಪ್ಲೇಟೋವಿನ “The Republic” ಕೃತಿಯನ್ನು ತುಲನೆ ಮಾಡಿದಾಗ ಅನಿಸುತ್ತದೆ. ಅದನ್ನು ಕೇವಲ ತೋರಿಕೆಗಾಗಿ ಆಚರಣೆಯಲ್ಲಿ ಇಟ್ಟು ತನಗೆ ಬೇಕಾದಂತೆ ಉತ್ತರಾಧಿಕಾರಿಯನ್ನು ಆರಿಸುವ ತಂತ್ರವನ್ನು ದಶರಥ ಅನುಸರಿಸಿರುವುದು ರಾಮನಿಗೆ ಪಟ್ಟಗಟ್ಟಬೇಕೆನ್ನುವ ಸಂದರ್ಭದಲ್ಲಿ ಕಾಣಬಹುದು. ಆತನ ಚಾಣಾಕ್ಷನಡೆಯ ಒಳಗಿರುವದು ತನ್ನದು ಎನ್ನುವ ಮೋಹದ ಅರಿವು ಎನ್ನುವುದು ಯಾರ ಗಮನಕ್ಕೂ, ಹೆಚ್ಚೇನು ರಾಮನ ಅರಿವಿಗೂ ಬಾರದ ಹಾಗೆ ನಡೆದುಕೊಂಡಿದ್ದಾನೆ. ಪರಿಪೂರ್ಣ ವ್ಯಕ್ತಿತ್ವದ ರಾಮನಂತಹ ದೊರೆ ತಮಗೆ ಸಿಗುತ್ತಾನೆ ಎನ್ನುವ ಕಾರಣಕ್ಕೆ ಪ್ರಜೆಗಳು ಸಂಭ್ರಮಿಸುವುದು ಸಹಜವೇ ಆಗಿದೆ. ತಾನು ಅಶ್ವಪತಿಗೆ ಕೊಟ್ಟ ಮಾತುಗಳು ಹೀಗೆ ಮರೆಯಾದ ಕಾರಣ ಅದು ದೊರೆಗೆ ಅಪರಿಮಿತ ಸಂತೋಷವನ್ನು ಕೊಟ್ಟಿದೆ. ಇಳಿವಯಸ್ಸಿನಲ್ಲಿ ಕಿರಿಯ ಚಲುವೆಯಾದ ಕೈಕೇಯಿಯ ಹಿಂದೆ ಬಿದ್ದಿದ್ದ ದೊರೆಗೆ ವೃದ್ದಾಪ್ಯದಲ್ಲಿ ಮಕ್ಕಳಾದ ಮೇಲೆ ರಾಮ ಎನ್ನುವ ಕುರುಡು ಮೋಹ ಆವರಿಸಿಕೊಂಡಿತ್ತು. ಆತನ ಕುರಿತು ಮಂಥರೆ ಹೇಳುವ ಮಾತು

ಧರ್ಮವಾದೀ ಶಠೋ ಭರ್ತಾ ಶ್ಲಕ್ಷ್ಣವಾದೀ ಚ ದಾರುಣಃ
ಶುದ್ಧಭಾವೇ ನ ಜಾನೀಷೇ ತೇನೈವ ಮತಿಸಂಧಿತಾ৷৷ಬಾ.ಕಾಂ.7.24৷৷

ನಿನ್ನ ಗಂಡನು ಮೇಲೆಮೇಲೆ ಧರ್ಮಸಮ್ಮತವಾದ ಮಾತುಗಳನ್ನು ಆಡುತ್ತಿದ್ದರೂ ಅಂತರಂಗದಲ್ಲಿ ಬಹಳ ಕಪಟಸ್ವಭಾವದವನು. ಬಾಯಲ್ಲಿ ಮೃದುವಾದ ಮಾತುಗಳನ್ನು ಆಡುತ್ತಿದ್ದರೂ ನಂಬಿಸಿ ಮೋಸಮಾಡುವುದು ಹೇಗೆಂದು ಯೋಚಿಸುತ್ತಿರುತ್ತಾನೆ. ಕರುಣೆಯೆನ್ನುವುದೇ ಇಲ್ಲ, ಬಹಳ ಋಜುಸ್ವಭಾವದವಳಾದ ನೀನು ಆತನ ಕಪಟವನ್ನು ಅರಿಯದೇ ಹೋದೆಯಲ್ಲವೇ.

ಮಂಥರೆ ಇಲ್ಲಿ ಕೈಕೇಯಿಯ ಮನಸ್ಸನ್ನು ತಿರುಗಿಸಲು ಹೇಳಿರುವಳಾದರೂ ಪಾಯಸವನ್ನು ತನ್ನ ರಾಣಿಯರಿಗೆ ಹಂಚುವಲ್ಲಿಂದ ಹಿಡಿದು ರಾಮಪಟ್ಟಾಭಿಷೇಕದ ವರೆಗೆ ದಶರಥ ಏಕಪಕ್ಷೀಯವಾಗಿ ತೆಗೆದುಕೊಂಡ ತೀರ್ಮಾನವನ್ನು ಗಮನಿಸಿದಾಗ ನಮ್ಮ ದೌರ್ಬಲ್ಯ ಶತ್ರುಗಳಿಗೆ ಆಯುಧ ಎನ್ನುವ ನೀತಿಶಾಸ್ತ್ರದ ಮಾತನ್ನು ನೆನಪಿಸುತ್ತದೆ. ಅಂತೂ ತನ್ನ ಕಾರ್ಯವಾದ ರಾಮನ ಪಟ್ಟಾಭಿಷೇಕದ ವಿಷಯದಲ್ಲಿ ಯಾವ ತೊಂದರೆಯಿಲ್ಲದೇ ಸಾಂಗವಾಗಿ ನಡೆಯುವುದು ಎನ್ನುವ ನಂಬಿಕೆಯೊಂದಿಗೆ ಸಂತೊಷವೆನ್ನುವುದು ಅತಿರೇಕಕ್ಕೆ ಹೋಗಿತ್ತು. ಸಂತೋಷ ಅತಿರೇಕಕ್ಕೆ ಹೋದಾಗ ಅದು ಮದಕ್ಕೆ ತಿರುಗುತ್ತದೆ. ಮದವೆನ್ನುವುದು ಕಾಮಕ್ಕೆ ಮೂಲ. ಅದನ್ನು ಇಳಿಸಿಕೊಳ್ಳಲು ಸಂಗಾತಿಯನ್ನು ಹುಡಿಕಿಕೊಳ್ಳುವುದು ಜೀವಿಗಳ ಸಹಜ ಕ್ರಿಯೆ. ಅರಸನಿಗೆ ತನ್ನ ಆಲೋಚನೆಯನ್ನು ಹಂಚಿಕೊಳ್ಳುವ ಸಂಗಾತಿಯ ಅಗತ್ಯ ತುರ್ತಾಗಿ ಎದುರಾಯಿತು. ವಶಿಷ್ಠರಲ್ಲಿಯಾಗಲಿ, ವಾಮದೇವರಲ್ಲಿಯಾಗಲಿ ಇದನ್ನೆಲ್ಲವನ್ನು ಹಂಚಿಕೊಳ್ಳಲು ಅವರೇನು ಸಾಮಾನ್ಯದವರಾಗಿರಲಿಲ್ಲ.

ರಾಮ ಯುವರಾಜ ಪಟ್ಟಕ್ಕೆ ಅರ್ಹನಾಗಿದ್ದರೂ, ಅಯೋಧ್ಯೆಯಲ್ಲಿ ಆ ಸಾಯಂಕಾಲ ನಡೆದ ಸಿದ್ಧತೆ ದಶರಥನ ವೈಯಕ್ತಿಕ ಕಾಮನೆಯ ಫಲವಾಗಿತ್ತು. ಪ್ರಜೆಗಳು ರಾಮನನ್ನು ರಾಜನ್ನಾಗಿ ನೋಡಲು ಬಯಸಿದ್ದರೆನ್ನುವುದು ನಿಜವಾದರೂ ಇಲ್ಲಿಮೊದಲ ಸಾರಿ ರಾಮನ ಪಟ್ಟಾಭಿಷೇಕಕ್ಕಾಗಿ ದಶರಥ ಹೇಗೆಲ್ಲಾ ಮಂಡಿಗೆಯನ್ನು ಹಾಕಿದ್ದ ಎನುವುದನ್ನು ಹಿಂದಿನ ಭಾಗಗಳಲ್ಲಿ ನೋಡಿದ್ದೇವೆ. ರಾಮನನ್ನು ಕೇವಲ ಮಗನಾಗಿ ಮಾತ್ರ ನೋಡಿದ್ದಾನೆಯೇ ಹೊರತು ವಿಶ್ವಾಮಿತ್ರ, ವಶಿಷ್ಠರು, ಪರಶುರಾಮ ಮೊದಲಾದವರಿಗೆ ರಾಮನ ಅವತಾರದ ಹಿಂದಿರುವ ದೈವತ್ವದ ದರ್ಶನ ಅರಸನಿಗೆ ಸಾಯುವವರೆಗೂ ಆಗಲೇ ಇಲ್ಲ. ರಾಮನಿಗೆ ಪಟ್ಟಗಟ್ಟುವ ತನ್ನ ಮನಸ್ಸಿನ ಮಂಡಿಗೆ ಯಶಸ್ವಿಯಾದ ವಿಷಯವನ್ನು ವಿವರವಾಗಿ ವರ್ಣಿಸಿ ಹೇಳಲು ಕಿರಿಯ ರಾಣಿಯಷ್ಟು ಆಪ್ತರು ಬೇರೆ ಯಾರೂ ಇಲ್ಲ. ಕೌಸಲ್ಯೆಗೆ ಹೇಳಿದರೆ ಆಕೆಗೆ ಸಂತೋಷವೇನೋ ಆಗಬಹುದಾದರೂ ಆಕೆಯಲ್ಲಿ ಕಾಮದ ಆಕರ್ಷಣೆ ದೊರೆಗೆ ಬತ್ತಿಹೋಗಿತ್ತು. ಸುಮಿತ್ರೆಯೂ ಅಷ್ಟೇ. ಚಿಕ್ಕವಯಸ್ಸಿನ ಕೈಕೆಯಿಯನ್ನು ಚೆನ್ನಾಗಿ ಮರಳುಮಾಡಿ ಇಟ್ಟುಕೊಂಡಿದ್ದ. ತನಗೆ ಬೇಕಾದ ಹಾಗೆ ಸುಖವನ್ನು ಅವಳಿಂದ ಪಡೆಯುತ್ತಿದ್ದ. ಆಕೆ ರಾಜನಿಗೋಸ್ಕರ ಅಲಂಕರಿಸಿಕೊಂಡು ನಗುಮುಖದಿಂದ ಯಾವತ್ತಿಗೂ ಸ್ವಾಗತಿಸಲು ಸಿದ್ಧಳಾಗಿರುತ್ತಿದ್ದಳು. ಕೈಕೇಯಿ ಮಂಥರೆಯ ಮಾತಿನಿಂದ ಪ್ರಭಾವಿತಳಾಗಿ ರಾಜನನ್ನು ಮಣಿಸಲೇ ಬೇಕೆಂದು ಕೋಪಾಗಾರವನ್ನು ಸೇರಿದರೆ ಇಳಿವಯಸ್ಸಿನ ರಾಜ “ರಾಮಾಭಿಷೇಕದ ಸಂತೋಷದ ವಾರ್ತೆಯನ್ನು ಕೈಕೇಯಿಗೆ ತಿಳಿಸಿ ರತಿಸುಖವನ್ನು ಪಡೆಯಬೇಕೆಂದು ಬಯಸಿ ಅತ್ಯಾಸೆಯಿಂದ ಕೈಕೇಯಿಯ ಅಂತಃಪುರಕ್ಕೆ ಧಾವಿಸಿ ಬರುತ್ತಾನೆ”.

ಕೈಕೇಯಿ ಅಂತಃಪುರದಲ್ಲಿ ಇಲ್ಲವಾಗಿರುವುದನ್ನು ಕಂಡವನಿಗೆ ವ್ಯಾಕುಲವಾಯಿತು. ಪ್ರತಿಹಾರಿ ಹೇಳಿದ “ದೇವ ದೇವಿ ಬೃಶಂ ಕ್ರುದ್ಧಾ ಕ್ರೋಧಾಗಾರಮಭಿದ್ರುತಾ-ಪರಮ ಕ್ರುದ್ಧೆಯಾಗಿ ದೇವಿ ಕೋಪಾಗಾರವನ್ನು ಸೇರಿದ್ದಾಳೆ” ಎನ್ನುವ ಮಾತನ್ನು ಕೇಳಿ ಕಂಗಾಲಾದ. ಕೋಪಾಗಾರಕ್ಕೆ ಧಾವಿಸಿ ನೋಡಿದರೆ ತನ್ನ ಪ್ರೇಯಸಿ ಅಸ್ತವ್ಯಸ್ತವಾಗಿ ನೆಲದ ಮೇಲೆ ಮಲಗಿದ್ದಾಳೆ. ಪ್ರಿಯತಮೆಯನ್ನು ಆಕಾಶದಿಂದ ಚ್ಯುತಳಾದ ಅಪ್ಸರೆಯಂತೆ ಕಂಡವನಿಗೆ ಎದೆಯೊಡೆದು ಹೋಯಿತು. “ನಿಷ್ಕಳಂಕನಾದ ದಶರಥ ಪಾಪಸಂಕಲ್ಪವನ್ನು ಹೊತ್ತ ಕೈಕೇಯಿಯನ್ನು ಕಂಡ” ಎನ್ನುವ ಮಾತು ಇಲ್ಲಿ ಬರುತ್ತದೆ. ಸಂಕಲ್ಪವೆನ್ನುವುದು ಹೊಸ ಕಾರ್ಯಕ್ಕೆ ಹೇತು. ಮುಂದಿನ ಘಟನೆಗೆ ಇಲ್ಲಿ ನಾಂದಿಯಾಗುತ್ತಿದೆ. ಧರ್ಮಮಾರ್ಗದಲ್ಲಿ ಸದಾ ನಡೆಯುತ್ತಿದ್ದ ಅರಸ ಕಾಮಮೋಹಿತನಾಗಿ ಕೈಕೇಯಿಯನ್ನು ಸಮಾಧಾನ ಮಾಡಲು ಹೇಳುವ ಮಾತುಗಳು ಸೂರ್ಯವಂಶಕ್ಕೆ ಹೇಳಿಸಿದ್ದಲ್ಲ.

ಅವಧ್ಯೋ ವಧ್ಯತಾಂ ಕೋ ವಾ ವಧ್ಯಃ ಕೋವಾ ವಿಮುಚ್ಯತಾಮ್.
ದರಿದ್ರಃ ಕೋ ಭವದಾಢ್ಯೋ ದ್ರವ್ಯವಾನ್ಕೋSಪ್ಯಕಿಂಚನಃ৷৷ಅ. ಕಾಂ.10.33৷৷

ಕಾಮವೆನ್ನುವುದು ಎಂತವರನ್ನೂ ತಲೆಕೆಡಿಸಿಬಿಡುತ್ತದೆ. ಕಾಮದ ಹುಚ್ಚಿನಲ್ಲಿರುವ ದಶರಥ ತನ್ನ ಸುಖಕ್ಕಾಗಿ ಏನನ್ನು ಮಾಡಲೂ ಹೇಸದ ಸ್ಥಿತಿಗೆ ತಲುಪಿದ್ದಾನೆ. ವಧಾರ್ಹನಲ್ಲದವನನ್ನು ವಧಿಸಲೇ, ಮರಣದಂಡನೆಗೆ ಗುರಿಯಾದವನನ್ನು ಬಿಡಿಸಲೇ, ದರಿದ್ರನನ್ನು ಶ್ರೀಮಂತನನ್ನಾಗಿ ಮಾಡಲೇ, ಶ್ರೀಮಂತನನ್ನು ದರಿದ್ರನನ್ನಾಗಿ ಮಾಡಲೇ; ನಿನ್ನ ಪ್ರೀತಿಗಾಗಿ ಏನನ್ನೂ ಮಾಡಲೂ ತಾನು ಸಿದ್ಧ ಎನ್ನುವ ಮಾತುಗಳು ದೊರೆತನಕ್ಕೆ ತಕ್ಕುದಲ್ಲ. ಆತ ಅವಳನ್ನು ಸಮಾಧಾನಿಸುತ್ತಾ “ಪ್ರಿಯತಮೆಯಲ್ಲಿ ನನಗೆ ನಿನಗಿಂತ- ಮನುಜರಲ್ಲಿ ರಾಮನಿಗಿಂತ ಹೆಚ್ಚಿನವರು ಯಾರೂ ಇಲ್ಲ” ಎನ್ನುವಲ್ಲಿ ರಾಮನ ಹೆಸರನ್ನು ಕೇಳಿದ ಆಕೆಗೆ ಮತ್ತುಷ್ಟು ಉರಿ ಹತ್ತಿತು. ದೊರೆ ಮನ್ಮಥನ ಬಾಣಕ್ಕೆ ಈಡಾಗಿರುವುದನ್ನು ಪಕ್ಕಾ ಮಾಡಿಕೊಂಡಳು. ಸ್ವಲ್ಪ ಹೊತ್ತು ಕಾಡಿಸಬೇಕು ಎಂದು ಸುಮ್ಮನಾದವಳು. ದಶರಥನಿಗೆ ಸಹಿಸಲಾಗಿಲ್ಲ. ಆಕೆಯ ರೂಪಲಾವಣ್ಯಕ್ಕೆ ಸೋತಿದ್ದ. ಅವಳ ನೋವನ್ನು ಬಗೆಹರಿಸುವುದು ತನ್ನ ಆದ್ಯ ಕರ್ತವ್ಯವೆಂದು ಬಗೆದ.. ಅದು ತನಕ ತಾನು ಗಳಿಸಿದ ಸುಕೃತದ ಮೇಲೆ ಆಣೆಯಿಟ್ಟು ಅವಳ ಬಯಕೆಯನ್ನು ಈಡೇರಿಸುವೆ ಎಂದು ಅಂಗಲಾಚಿದ.

dhavala dharini king dasharatha

ಆದರೂ ಸುಮ್ಮನಿದ್ದ ಕೈಕೇಯಿಗೆ ಕೊನೆಯದಾಗಿ “ನನ್ನ ರಾಮನಾಣೆಗೂ ನೀನು ಹೇಳುವ ಕಾರ್ಯವನ್ನು ಮಾಡುತ್ತೇನೆ” ಎಂದು ಪ್ರತಿಜ್ಞೆ ಮಾಡಿಬಿಟ್ಟ. ಗಾಳದಲ್ಲಿ ಚಿಕ್ಕಮೀನನ್ನು ಚುಚ್ಚಿ ದೊಡ್ಡಮೀನನ್ನು ಸೆಳೆಯುವಂತೆ ಚಕ್ರವರ್ತಿಯನ್ನು ಮಟ್ಟುಹಾಕಿ ತನ್ನ ಕಾರ್ಯಸಾಧಿಸಲು ಇದೇ ಸಮಯವೆಂದು ತಿಳಿದ ಕೈಕೇಯಿ ಬಯಕೆಯನ್ನು ಹೇಳುವ ಮುನ್ನ ರಾಜನಲ್ಲಿನ ಧರ್ಮಪ್ರಜ್ಞೆಯನ್ನು ಜಾಗ್ರತಗೊಳಿಸಲು “ನೀನು ಮಾಡಿದ ಈ ಪ್ರತಿಜ್ಞೆಯನ್ನು ಮೂವತ್ತುಮೂರು ಕೋಟಿ ದೇವತೆಗಳು ಕೇಳಲಿ, ಚಂದ್ರಸೂರ್ಯರೂ ಕೇಳಲಿ, ಆಕಾಶವೂ ಇದಕ್ಕೆ ಸಾಕ್ಷಿಯಾಗಲಿ, ನವಗ್ರಹಗಳು, ಹಗಲು-ರಾತ್ರಿಗಳು, ಎಂಟುದಿಕ್ಕುಗಳು,ಗಂಧರ್ವರಾಕ್ಷಸರನ್ನೊಳಗೊಂಡಿರುವ ಸ್ವರ್ಗ-ಮರ್ತ್ಯ-ಪಾತಾಳ, ನಿಶಾಚರರೂ, ಪಿಶಾಚಗಳೂ, ಭೂತಗಣಗಳೂ, ಗೃಹದೇವತೆಗಳೂ ಸಹಿತ ಎಲ್ಲರೂ ನೀನು ಹೇಳಿದ ಈ ಪ್ರತಿಜ್ಞಾವಾಕ್ಯಕ್ಕೆ ಸಾಕ್ಷಿಗಳಾಗಲಿ” ಎಂದವಳೇ ಆತನನ್ನು ಸಂಪೂರ್ಣವಾಗಿ ಖೆಡ್ಡಾಕ್ಕೆ ತೋಡುವ ಈ ಮಾತನ್ನು ಆಡುತ್ತಾಳೆ.

ಸತ್ಯಸಂಧೋ ಮಹಾತೇಜಾಃ ಧರ್ಮಜ್ಞಃ ಸುಸಮಾಹಿತಾಃ.
ವರಂ ಮಮ ದದಾತ್ಯೇಷಃ ತನ್ಮೇ ಶ್ರೃಣ್ವನ್ತು ದೈವತಾಃ৷৷ಅಯೋ.11.16৷৷

ಎಲೈ ದೇವತೆಗಳಿರಾ! ನೀವೆಲ್ಲರೂ ಕೇಳಿರಿ. ಸತ್ಯಸಂಧನಾದ ಮಹಾತೇಜಸ್ವಿಯಾದ, ಧರ್ಮಜ್ಞನಾದ ಧಶರಥನು ಸಮಾಧಾನಚಿತ್ತನಾಗಿ ತಾನು ಪ್ರತಿಜ್ಞೆ ಮಾಡಿರುವಂತೆ ನನಗೆ ವರವನ್ನು ದಯಪಾಲಿಸಲಿದ್ದಾನೆ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ರಾಮಾಯಣದ ಕವಿಗೆ ಕಾಡಿದ ಮೂರು ಚಿಂತೆಗಳು

ವ್ಯಾಧನ ಧ್ವನಿಯಿಂದ ಆಕರ್ಷಿತಳಾಗಿ ಬಲೆಗೆ ಬೀಳುವ ಜಿಂಕೆಯಂತೆ ರಾಜನು ತನ್ನ ವಿನಾಶಕ್ಕಾಗಿ ಧರ್ಮಪಾಶವನ್ನು ಕುತ್ತಿಗೆಗೆ ಬಿಗಿದುಕೊಂಡಿದ್ದು ಹೀಗೆ. ಅವನಿಗೆ ಮುಂದೆ ಮಾತಾಡಲು ಅವಕಾಶಕೊಡದಂತೆ ಆತನನ್ನು ಬಿಗಿದಪ್ಪಿ ತನಗೆ ಹಿಂದೆ ಕೊಟ್ಟಿದ್ದ ವರಗಳನ್ನು ಅಪೇಕ್ಷಿಸಿ ಅದಕ್ಕೆ ರಾಜ ಬೇರೆ ಏನನ್ನಾದರೂ ಹೇಳಬಾರದೆಂದು, “ರಾಮನಿಗೆ ಪಟ್ಟಾಭಿಷೇಕಕ್ಕೆ ಯಾವೆಲ್ಲಾ ಸಿದ್ಧತೆಗಳಾಗಿವೆಯೋ ಅದೇ ಸಾಂಬಾರಪದಾರ್ಥಗಳಿಂದ ಭರತನಿಗೆ ಪಟ್ಟಾಭಿಷೇಕವಾಗಬೇಕು. ಎರಡನೇಯ ವರವನ್ನೂ ಹೇಳಿಯೇಬಿಡುವೆ.

ನವ ಪಞ್ಚ ಚ ವರ್ಷಾಣಿ ದಣ್ಡಕಾರಣ್ಯಮಾಶ್ರಿತಃ
ಚೀರಾಜಿನಜಟಾಧಾರೀ ರಾಮೋ ಭವತು ತಾಪಸಃ.

ಹದಿನಾಲ್ಕು ವರುಷಗಳ ಕಾಲ ರಾಮನು ದಂಡಕಾರಣ್ಯಕ್ಕೆ ಹೋಗಿ ಅಲ್ಲಿ ಅವನು ಜಟಾಧಾರಿಯಾಗಿ ನಾರಮುಡಿಯನ್ನುಟ್ಟು ಕೃಷ್ಣಾಜಿನವನ್ನು ಧರಿಸಿ ತಾಪಸನಂತೆ ಇರಬೇಕು.

ಕೈಕೇಯಿ ಇಷ್ಟಕ್ಕೇ ನಿಲ್ಲಿಸುವುದಿಲ್ಲ. “ಆದ್ಯ ಚೈವ ಹಿ ಪಶ್ಯೇಯಂ ಪ್ರಯಾನ್ತಂ ರಾಘವಂ ವನಮ್- ರಾಘವನು ಚೀರಾಜಿನ-ಜಟಾಧಾರಿಯಾಗಿ ಕಾಡಿಗೆ ಹೋಗುವುದನ್ನು ಈಗಲೇ ನಾನು ನೋಡಬೇಕು, ಸತ್ಯವಚನನಾದ ನೀನು ಈಗಲೇ ನಡೆಸಿಕೊಡು” ತನ್ನ ಇಬ್ಬರು ಪ್ರಿಯರಲ್ಲಿ ಒಬ್ಬನಾದ ರಾಮನಿಗೆ ಆಘಾತಕಾರಿಯಾದ ವಿಷಯಗಳನ್ನು ಹೇಳುವ ಮಾತುಗಳು ದಶರಥನ ಕಾಮದ ಪಿತ್ಥವನ್ನು ಜರ್ರನೆ ಇಳಿಸಿಯೇಬಿಟ್ಟಿತು; ಜೊತೆಗೆ ಆತನ ಮನೋಧೈರ್ಯವನ್ನೂ ಸಹ! ಲೋಕದ ಎಲ್ಲಾ ರಾಜರನ್ನು, ಪ್ರಜೆಗಳನ್ನು ಮತ್ತು ವಶಿಷ್ಠರಾದಿಯಾಗಿರುವ ಎಲ್ಲಾ ಋಷಿಗಳನ್ನು ತನ್ನ ಇಷ್ಟಕ್ಕೆ ಒಗ್ಗಿಕೊಳ್ಳುವಂತೆ ತಂತ್ರವನ್ನು ಹೂಡಿದ ಅರಸನ ಇಚ್ಛೆ ಇಲ್ಲಿ ತರಗೆಲೆಗಳಂತೆ ಗಾಳಿಗೆ ಹಾರಿಹೋಯಿತು. ಯಾವ ಉದ್ಧೇಶಕ್ಕಾಗಿ ಕೈಕೇಯಿಯ ಅರಮನೆಗೆ ಬಂದಿದ್ದನೋ ಅವೆಲ್ಲವೂ ನೀರಿನಲ್ಲಿ ಹೋಮ ಮಾಡಿದಂತೆ ಕದಡಿಹೋಯಿತು. ಅವನ ಜೀವನದಲ್ಲಿ ರಾಮನಿಗೆ ಪಟ್ಟಾಭಿಷೇಕವನ್ನು ಮಾಡಿವದೊಂದೇ ಗುರಿ ಇದ್ದಿದ್ದು. ತನ್ನ ಪ್ರೀತಿಯ ರಾಣಿಯಿಂದಲೇ ಹೀಗೆ ವಿಘ್ನಬರಬಹುದೆಂದು ರಾಜ ಎಣಿಸಿರಲಿಲ್ಲ. ಅಂಥ ಸ್ವಲ್ಪ ಅನುಮಾನ ಬಂದಿದ್ದರೂ ಆತ ಕೈಕೇಯಿಯ ಅರಮನೆಗೆ ಬರುತ್ತಲೇ ಇರಲಿಲ್ಲ. ಒಮ್ಮೆಲೇ ಎಚ್ಚರತಪ್ಪಿ ಬಿದ್ದ. ತನ್ನ ರಾಜತ್ವಕ್ಕೆ ಧಿಕ್ಕಾರ ಹಾಕಿಕೊಂಡ. ಕೊನೆಗೆ ಅನಿವಾರ್ಯವಾಗಿ ಕೈಕೇಯಿಗೆ ನಮಸ್ಕರಿಸಿಕೊಂಡು “ನಿನ್ನ ಕಾಲನ್ನು ಬೇಕಾದರೂ ಹಿಡಿಯುತ್ತೇನೆ, ರಾಮನನ್ನು ರಕ್ಷಿಸು. ವರದಾನವೆನ್ನುವ ಒಂದು ಪ್ರತಿಜ್ಞೆಯಲ್ಲಿ ನನ್ನನ್ನು ಸಿಕ್ಕಿಹಾಕಿಸಿ ನಿರಪರಾಧಿಯನ್ನು ಕಾಡಿಗಟ್ಟಿದ ದೋಷ ನನಗೆ ಬಾರದಿರಲಿ” ಎಂದು ನೆಲದಲ್ಲಿ ಹೊರಳಾಡತೊಡಗಿದ.

ಮೂಂದಿನ ಭಾಗದಲ್ಲಿ ತನ್ನ ಕರ್ಮಫಲವನ್ನು ತಾನು ಉಂಡ ಮಹಾರಾಜ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ರಾಮಾಯಣದ ಮಹಾ ಮಥನದ ಕಡೆಗೋಲು ಮಂಥರೆ

Continue Reading
Advertisement
Narendra Modi
ದೇಶ2 mins ago

Narendra Modi: ವಾರಾಣಸಿಯಲ್ಲಿ ಹೊಸ ಅಲೆ ಸೃಷ್ಟಿಸಿದ ಮೋದಿ, ಶಕ್ತಿ ಪ್ರದರ್ಶನ; ರೋಡ್‌ ಶೋ Photos ಇಲ್ಲಿವೆ

Pratibha Puraskar
ಕರ್ನಾಟಕ19 mins ago

Pratibha Puraskar: ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ; ಮೇ 31 ಕೊನೆಯ ದಿನ

HD Revanna Bail Revanna will not leave the country condition imposed by the court
ಕ್ರೈಂ46 mins ago

HD Revanna Bail: ರೇವಣ್ಣಗೆ ಜಾಮೀನು; ನಾಳೆ 11 ದಿನದ ವನವಾಸದಿಂದ ಮುಕ್ತಿ; ಬೇಲ್‌ ಸಿಗಲು ಕಾರಣವೇನು?

Dust Storm
ಪ್ರಮುಖ ಸುದ್ದಿ56 mins ago

Dust Storm : ಧೂಳು ಗಾಳಿಗೆ ಹೋರ್ಡಿಂಗ್ ಕುಸಿದು ಮೂವರ ಸಾವು, 59 ಮಂದಿಗೆ ಗಾಯ

CopConnect cyber security caffe inauguration by Dr Nagalakshmi Chaudhary at bengaluru
ಬೆಂಗಳೂರು59 mins ago

Bengaluru News: ಮಹಿಳೆಯರು ಸೋಷಿಯಲ್‌ ಮೀಡಿಯಾ ಬಳಸುವಾಗ ಎಚ್ಚರ ವಹಿಸಬೇಕು ಎಂದ ಮಹಿಳಾ ಆಯೋಗದ ಅಧ್ಯಕ್ಷೆ

35 crore crop damage insurance deposit for farmers of Yallapur constituency says MLA Shivaram Hebbar
ಉತ್ತರ ಕನ್ನಡ1 hour ago

Uttara Kannada News: ಯಲ್ಲಾಪುರ ಕ್ಷೇತ್ರದ ರೈತರಿಗೆ 35 ಕೋಟಿ ರೂ. ಬೆಳೆ ಹಾನಿ ವಿಮೆ ಜಮಾ: ಶಿವರಾಮ ಹೆಬ್ಬಾರ್‌

Bilhara village farmer grew bumper mango on barren land
ಕರ್ನಾಟಕ1 hour ago

Yadgiri News: ಬರಡು ಭೂಮಿಯಲ್ಲಿ ಈ ರೈತ ಬಂಪರ್ ಮಾವು ಬೆಳೆದಿದ್ದು ಹೇಗೆ?

Metro Penalty
ಬೆಂಗಳೂರು1 hour ago

Metro Penalty: ಮೆಟ್ರೊ ಸ್ಟೇಷನ್‌ನಲ್ಲಿ ಗರ್ಲ್‌ ಫ್ರೆಂಡ್‌ಗೆ ಕಾಯುತ್ತ ಕೂತರೆ ಬೀಳುತ್ತೆ 50 ರೂ. ದಂಡ!

IPL 2024
ಪ್ರಮುಖ ಸುದ್ದಿ1 hour ago

IPL 2024: ಮಾಲೀಕನ ಜತೆ ಜಗಳ, ತಂಡದ ಬಸ್​ ಬಿಟ್ಟು ಸ್ವಂತ ಖರ್ಚಲ್ಲಿ ಪ್ರಯಾಣಿಸಿದ ಕೆ. ಎಲ್​ ರಾಹುಲ್​

Chandrayaan 4
ದೇಶ1 hour ago

Chandrayaan 4: ಚಂದ್ರಯಾನ 4ಕ್ಕೆ ಇಸ್ರೋ ಸಜ್ಜು; ಚಂದ್ರನ ವಿಶೇಷ ಸ್ಥಳದಲ್ಲಿ ಬಾಹ್ಯಾಕಾಶ ನೌಕೆ ಲ್ಯಾಂಡಿಂಗ್!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

HD Revanna Bail Revanna will not leave the country condition imposed by the court
ಕ್ರೈಂ2 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

Prajwal Revanna case HD Revanna finally gets bail What was the argument like
ಕ್ರೈಂ3 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ3 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ3 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ4 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ10 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ15 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ16 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ1 day ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

ಟ್ರೆಂಡಿಂಗ್‌