Residential Schools: ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ! ಇದು ಸರ್ಕಾರದ ಟೆಲಿಗ್ರಾಂ ಆದೇಶ? - Vistara News

ಶಿಕ್ಷಣ

Residential Schools: ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ! ಇದು ಸರ್ಕಾರದ ಟೆಲಿಗ್ರಾಂ ಆದೇಶ?

Residential Schools: ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂದು ವಸತಿ ಶಾಲೆಗಳಲ್ಲಿ ಬದಲು ಮಾಡಲು ಸರ್ಕಾರ ಅಧಿಕೃತ ಆದೇಶವನ್ನೇ ಹೊರಡಿಸಿಲ್ಲವೇ? ಎಂಬ ಪ್ರಶ್ನೆ ಈಗ ಕಾಡುತ್ತಿದೆ. ಈ ಸಂಬಂಧ ಟೆಲಿಗ್ರಾಂಗಳಲ್ಲಿ ಮಾತ್ರ ಆಯಾ ಜಿಲ್ಲೆಗಳ ಸಮಾಜ ಕಲ್ಯಾಣ ಅಧಿಕಾರಿಗಳು ಸೂಚಿಸಿರುವುದು ಗೊತ್ತಾಗಿದೆ.

VISTARANEWS.COM


on

Jnana Degula Education News Telegram order
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದ ಎಲ್ಲ ವಸತಿ ಶಾಲೆಗಳ (Residential Schools) ಪ್ರವೇಶ ದ್ವಾರದಲ್ಲಿ ಇದ್ದ ಘೋಷ ವಾಕ್ಯವನ್ನು ಬದಲಾಯಿಸಿರುವ ಸಮಾಜ ಕಲ್ಯಾಣ ಇಲಾಖೆ (Department of Social Welfare) ಕ್ರಮಕ್ಕೆ ರಾಜ್ಯಾದ್ಯಂತ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ. ಆದರೆ, ಈ ಬಗ್ಗೆ ಸರ್ಕಾರ ಅಧಿಕೃತ ಆದೇಶವನ್ನೇ ಹೊರಡಿಸಿಲ್ಲವೇ? ಎಂಬ ಪ್ರಶ್ನೆ ಈಗ ಕಾಡುತ್ತಿದೆ. ಈ ಸಂಬಂಧ ಟೆಲಿಗ್ರಾಂಗಳಲ್ಲಿ ಮಾತ್ರ ಆಯಾ ಜಿಲ್ಲೆಗಳ ಸಮಾಜ ಕಲ್ಯಾಣ ಅಧಿಕಾರಿಗಳು ಸೂಚಿಸುತ್ತಿರುವುದು ಬೆಳಕಿಗೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಕೆಲವು ಶಾಲೆಯ ಮುಖ್ಯಸ್ಥರು, ಈ ಬಗ್ಗೆ ಅಧಿಕೃತ ಆದೇಶವನ್ನಾದರೂ ಕೊಡಿ ಎಂದು ಚಾಟ್‌ ಮೂಲಕ ಕೇಳಿರುವುದು ಗೊತ್ತಾಗಿದೆ. ಆದರೆ, ಈ ಬಗ್ಗೆ ಸಚಿವ ಡಾ. ಎಚ್‌.ಸಿ. ಮಹದೇವಪ್ಪ, ಇಲಾಖೆಯ ಕ್ರಮವನ್ನು ಸಮರ್ಥನೆ ಮಾಡಿಕೊಂಡಿದ್ದಾರೆ. ಹೀಗಾಗಿ ಅಧಿಕೃತ ಆದೇಶ ಆಗಿದೆಯೋ ಇಲ್ಲವೋ ಎಂಬುದು ಮಾತ್ರ ಇನ್ನೂ ಗೊತ್ತಾಗಿಲ್ಲ.

ಅಧಿಕೃತ ಆದೇಶವನ್ನು ಮಾಡದೆ ಕೇವಲ ಟೆಲಿಗ್ರಾಂ ಗ್ರೂಪ್‌ಗಳಲ್ಲಿ ಮಾತ್ರ ಈ ಬಗ್ಗೆ ಆದೇಶವನ್ನು ಮಾಡಲಾಗಿದೆಯೇ? ಅಲ್ಲಿ ಮಾಡಿರುವ ಕಟ್ಟುನಿಟ್ಟಿನ ಸೂಚನೆಯಿಂದಾಗಿ ಹಲವು ಕಡೆ ಬದಲಾವಣೆ ಮಾಡಲಾಗಿದೆ ಎಂದು ಹೇಳಲಾಗಿದೆ. ಆದರೆ, ಹೆಚ್ಚಿನ ಕಡೆ ತುರ್ತಾಗಿ ಹಾಕಬೇಕಾದ್ದರಿಂದ ಬಣ್ಣ ಹೊಡಿಸಲು ಆಗದೆ, ಪೇಪರ್‌ಗಳಲ್ಲಿ ಹಾಕಲಾಗಿತ್ತು. ಈ ಕಾರಣದಿಂದ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ಪೇಪರ್‌ಗಳಲ್ಲಿ ಹಾಕಲಾಗಿರುವ ಘೋಷವಾಕ್ಯವನ್ನು ಬದಲಾವಣೆ ಮಾಡಲಾಗಿದೆ.

ಅನುಮಾನ ಹುಟ್ಟುಹಾಕುವ ಟೆಲಿಗ್ರಾಂ ಚಾಟ್‌

ಈ ಮೊದಲಿದ್ದು ಇದ್ದ “ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ” ಎಂಬ ಕುವೆಂಪು ವಿರಚಿತ ಸಾಲುಗಳನ್ನು ಬದಲಾಯಿಸಿ, “ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ” ಎಂಬ ಸಾಲನ್ನು ವಸತಿ ಶಾಲೆಗಳ ಪ್ರವೇಶದ್ವಾರದಲ್ಲಿ ಹಾಕುವ ಬಗ್ಗೆ ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದಿಲ್ಲ ಎಂಬ ಸಂಗತಿ ಸಮಾಜ ಕಲ್ಯಾಣ ಇಲಾಖೆಯ ಟೆಲಿಗ್ರಾಂ ಚಾಟ್‌ ಮೂಲಕ ಗೊತ್ತಾಗಿದೆ.

ಟೆಲಿಗ್ರಾಂ ಸಂಭಾಷಣೆಯಲ್ಲಿ ಏನಿದೆ?

ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಗೋಡೆ ಬರಹ ಬದಲಾವಣೆಗೆ ಟೆಲಿಗ್ರಾಂನಲ್ಲಿ ಸೂಚಿಸುತ್ತಾರೆ. ಆದರೆ, ಈ ಬಗ್ಗೆ ಅಧಿಕೃತ ಸುತ್ತೂಲೆ ನೀಡುವಂತೆ ಆಯಾ ವಸತಿ ಶಾಲೆಯ ಕೆಲವು ಮುಖ್ಯಸ್ಥರು ಮನವಿ ಮಾಡಿದ್ದಾರೆ. ಕನ್ನಡ ನಾಮಫಲ ಕಡ್ಡಾಯ ಸಂಬಂಧ ಕಳೆದ ಮೂರ್ನಾಲ್ಕು ತಿಂಗಳು ಹಿಂದೆ ಆಗಿದ್ದ ವಿವಾದ ಆಗಿತ್ತು. ಹೀಗಾಗಿ ಈ ಬಗ್ಗೆ ಅಧಿಕೃತ ಸಂದೇಶ ಇದ್ದರೆ ಒಳ್ಳೆಯದು. ಅಥವಾ ಈ ರೀತಿಯಾಗಿ ಬದಲಾವಣೆ ಮಾಡುವುದರಿಂದ ಯಾವುದೇ ತಪ್ಪಿಲ್ಲ ಎಂದಾದರೂ ಒಂದು ಆದೇಶವನ್ನು ಹೊರಡಿಸಿ ಎಂದು ಕೇಳಿಕೊಂಡಿದ್ದರು. ಇದರರ್ಥ ಸರ್ಕಾರದಿಂದ ಯಾವುದೇ ರೀತಿಯಾದಂತಹ ಅಧಿಕೃತ ಆದೇಶ ಹೊರಬಿದ್ದಿಲ್ಲ.

ಐಎಎಸ್‌ ಅಧಿಕಾರಿ ಮಣಿವಣ್ಣನ್‌ ಟಲಿಗ್ರಾಂ ಸಂದೇಶ

ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿರುವ ಐಎಎಸ್‌ ಅಧಿಕಾರಿ ಕೆ. ಮಣಿವಣ್ಣನ್‌ ಟಲಿಗ್ರಾಂ ಸಂದೇಶ ನೀಡಿದ್ದಾರೆ ಎಂಬ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಾಡಿರುವ ಟ್ವೀಟ್‌ನಲ್ಲಿ ಗೊತ್ತಾಗುತ್ತದೆ. ಅಲ್ಲಿ ಅವರು “ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ” ಎಂಬ ಸಾಲು ಅಂತಿಮವಾಗಿದೆ. ಇದನ್ನೇ ಎಲ್ಲರೂ ಬಳಕೆ ಮಾಡಿ ಎಂದು ಹೇಳಿರುವ ಬಗ್ಗೆ ಚಾಟ್‌ನಲ್ಲಿ ಉಲ್ಲೇಖಿಸಲಾಗಿದೆ.

ದಯವಿಟ್ಟು ಕಾಂಟ್ರವರ್ಸಿ ಮಾಡಬೇಡಿ: ಎಚ್.ಸಿ. ಮಹದೇವಪ್ಪ

ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ. ಮಹದೇವಪ್ಪ ಪ್ರತಿಕ್ರಿಯೆ ನೀಡಿ, ದಯವಿಟ್ಟು ಈ ವಾಕ್ಯವನ್ನು ಕಾಂಟ್ರವರ್ಸಿ ಮಾಡಬೇಡಿ. ಅನ್ಯಾಯವಾದಾಗ ಧ್ವನಿ ಎತ್ತಬೇಕು, ಪ್ರಶ್ನೆ ಮಾಡಬೇಕು. ಕುವೆಂಪು ಅವರು ಸಹ ಅದನ್ನೇ ಹೇಳಿದ್ದಾರೆ. ಮಾಧ್ಯಮಗಳಿಗೆ ಈಗ ಇದು ಮುಖ್ಯವಾ? ನಾವು ಕುವೆಂಪು ಅವರ ಪರ ಇದ್ದೇವೆ. ಸಂವಿಧಾನ ನಮಗೆ ಹಕ್ಕು ಅಧಿಕಾರ ಕೊಟ್ಟಿದೆ. ನಮ್ಮ ಆದೇಶದಲ್ಲಿ ತಪ್ಪಿಲ್ಲ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.

ಕುವೆಂಪು ಅವರ ವಾಕ್ಯವನ್ನು ನಾವು ಬದಲಾವಣೆ ಮಾಡಿಲ್ಲ. ನಾವು ಶಿಕ್ಷಣ ಸಂಸ್ಥೆಗಳನ್ನು ಸೈದ್ಧಾಂತಿಕವಾಗಿ ಕಟ್ಟಲು ಹೊರಟಿದ್ದೇವೆ. ಮಕ್ಕಳಿಗೆ ಇದು ಸಮಸ್ಯೆ ಆಗಲ್ಲ. ಬಿಜೆಪಿ ಎಲ್ಲವನ್ನೂ ಕಾಂಟ್ರವರ್ಸಿ ಮಾಡುತ್ತಿದೆ. ಸಂವಿಧಾನ ವಿರೋಧಿ, ಬಸವನ ವಿರೋಧಿಯಾಗಿ ವರ್ತನೆ ಮಾಡುತ್ತದೆ. ಪುನಃ ಪುನಃ ಇದನ್ನೇ ಕೇಳಬೇಡಿ. ಕುವೆಂಪು ನಮ್ಮ ಐಕಾನ್ .. ಸಂವಿಧಾನ ನಮ್ಮ ದೊಡ್ಡ ಗ್ರಂಥ. ಕೆಲಸಕ್ಕೆ ಬಾರದ ವಿಚಾರಗಳನ್ನು ಹೆಚ್ಚು ತೆಗೆದುಕೊಳ್ಳಬೇಡಿ. ಕುವೆಂಪು ಹೇಳಿದ್ದನ್ನು ನಾವು ತೆಗಿಸಿಲ್ಲ. ಕುವೆಂಪು ವಿಚಾರದ ಮೇಲೆ ಸಮಾಜವನ್ನು ಕಟ್ಟುತ್ತೇವೆ ಎಂದು ಡಾ. ಎಚ್.ಸಿ. ಮಹದೇವಪ್ಪ ಮಾಧ್ಯಮಗಳ ಮೇಲೆ ಹರಿಹಾಯ್ದರು.

ಇದನ್ನೂ ಓದಿ: Residential Schools: ಮತ್ತೆ ಬದಲಾಯಿತು ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ! ಆಕ್ರೋಶಕ್ಕೆ ಮಣಿದ ಸರ್ಕಾರ

ಪ್ರತಿಪಕ್ಷಗಳಿಗೆ ಡಾ. ಎಚ್.ಸಿ. ಮಹದೇವಪ್ಪ ಸವಾಲು

ಈ ವಿಚಾರವಾಗಿ ವಿಪಕ್ಷಗಳು ಸದನದಲ್ಲಿ ಪ್ರಶ್ನೆ ಮಾಡಲಿ. ಅಲ್ಲಿಯೇ ಉತ್ತರ ಕೊಡುತ್ತೇವೆ. ಕುವೆಂಪು, ಅಂಬೇಡ್ಕರ್, ನಾರಾಯಣ ಗುರು ಅವರ ವೈಚಾರಿಕತೆ ನಿಲುವುಗಳನ್ನು ನಾವು ಮಕ್ಕಳಿಗೆ ತುಂಬುತ್ತೇವೆ. ಈ ಆದೇಶದಲ್ಲಿ ಏನಾಗಿದೆ ಅಂತ ಗೊತ್ತಿಲ್ಲ. ಆದರೆ, ಐಡಿಯಾಲಾಜಿಕಲ್ ಮೇಲೆ ಹೇಳುತ್ತಿದ್ದೇನೆ. ಕುವೆಂಪು ವಿಚಾರದ ಮೇಲೆ ಸಮಾಜ ಕಟ್ಟಬೇಕು. ಸಂವಿಧಾನದ ಮೇಲೆ ಸಮೃದ್ಧ ಭಾರತ ಕಟ್ಟಬೇಕು. ಈ ವಿಚಾರವನ್ನ ಕಾಂಟ್ರವರ್ಸಿ ಮಾಡಬೇಡಿ ಎಂದು ಹೇಳಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

NEET PG exam : ಮೋಸ ತಡೆಯಲು ಕ್ರಮ; ನೀಟ್ ಪರೀಕ್ಷೆ ಆರಂಭಕ್ಕೆ ಕೆಲವೇ ಗಂಟೆಗಳ ಮೊದಲು ಪ್ರಶ್ನೆ ಪತ್ರಿಕೆ ತಯಾರಿ!

NEET PG exam:

VISTARANEWS.COM


on

NEET PG exam
Koo

ಬೆಂಗಳೂರು: ನೀಟ್ ಪಿಜಿ ಪರೀಕ್ಷೆಯ ಬಗ್ಗೆ ಚರ್ಚಿಸಲು ಗೃಹ ಸಚಿವಾಲಯದ ಐ 4 ಸಿ ವಿಭಾಗದಲ್ಲಿ ಸೈಬರ್ ಸೆಲ್ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆದಿದ್ದು, ಪರೀಕ್ಷಾ ಮೋಸ ತಪ್ಪಿಸಲು ಆರಂಭಕ್ಕೆ ಕೆಲವೇ ಗಂಟೆಗಳ ಮೊದಲು ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸುವ ನಿರ್ಧಾರಕ್ಕೆ ಬರಲಾಗಿದೆ. ವಿವಿಧ ಸರ್ಕಾರಿ ಸಂಸ್ಥೆಗಳು ಸಂಭಾವ್ಯ ಲೋಪದೋಷಗಳನ್ನು ಮೌಲ್ಯಮಾಪನ ಮಾಡಲಾಗುತ್ತಿದ್ದು ಆಗಿರುವ ಅಕ್ರಮಗಳ ಕುರಿತ ತನಿಖೆ ಬಹುತೇಕ ಪೂರ್ಣಗೊಂಡಿದೆ. ಸಭೆಯ ಮೂಲಗಳ ಪ್ರಕಾರ ಪರೀಕ್ಷೆ ಒಂದು ತಿಂಗಳೊಳಗೆ ನಡೆಸುವ ಸಾಧ್ಯತೆಯಿದೆ.

ನೀಟ್ ಪಿಜಿ ಪರೀಕ್ಷೆಯ ಪರಿಷ್ಕೃತ ದಿನಾಂಕವನ್ನು ಈ ವಾರದ ಅಂತ್ಯದ ವೇಳೆಗೆ ಘೋಷಿಸುವ ನಿರೀಕ್ಷೆಯಿದೆ, ಪರೀಕ್ಷೆಗಳನ್ನು ಆಗಸ್ಟ್​​ನಲ್ಲಿ ನಡೆಸುವ ಸಾಧ್ಯತೆಯಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

ಇಸ್ರೋದ ಮಾಜಿ ಅಧಿಕಾರಿ ಡಾ.ರಾಧಾಕೃಷ್ಣನ್ ನೇತೃತ್ವದ ತಜ್ಞರ ಸಮಿತಿಗೆ ಪರೀಕ್ಷೆ ನಡೆಸುವ ಹೊಣೆಗಾರಿಕೆ ವಹಿಸಲಾಗಿದೆ. ನೀಟ್ ಪಿಜಿ ನಡೆಸುವ ಜವಾಬ್ದಾರಿಯನ್ನು ಹೊಂದಿರುವ ರಾಷ್ಟ್ರೀಯ ಪರೀಕ್ಷಾ ಮಂಡಳಿ (ಎನ್​ಟಿಎ ) ಪ್ರಸ್ತುತ ಹೊಸ ದಿನಾಂಕಗಳನ್ನು ಅಂತಿಮಗೊಳಿಸುವ ಮೊದಲು ಈ ಪರಿಶೀಲನಾ ಸಮಿತಿಯ ಅನುಮೋದನೆಗಾಗಿ ಕಾಯುತ್ತಿದೆ.

ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ ಪರೀಕ್ಷೆಯ ಸಮಗ್ರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ನಂತರ ಜೂನ್ 23 ರಂದು ನಿಗದಿಯಾಗಿದ್ದ ನೀಟ್ ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿತ್ತು.

ನೀಟ್ ಪಿಜಿ ಪರೀಕ್ಷೆ 2024 ರ ಹೊಸ ಮಾಹಿತಿಗಳೇನು?

ಗೃಹ ಸಚಿವಾಲಯದ ಐ 4 ಸಿ ವಿಭಾಗದಲ್ಲಿ ಮಹತ್ವದ ಸಭೆ ನಡೆದಿದೆ ಸೈಬರ್ ಸೆಲ್​​ನ ಅಧಿಕಾರಿಗಳನ್ನು ಒಳಗೊಂಡಂತೆ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು. ಭದ್ರತೆ ಖಚಿತಪಡಿಸಿಕೊಳ್ಳಲು ಪರೀಕ್ಷೆಗೆ ಕೆಲವೇ ಗಂಟೆಗಳ ಮೊದಲು ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಅಂತಿಮಗೊಳಿಸಲಾಗುವುದು ಮೊದಲ ನಿರ್ಧಾರವಾಗಿದೆ.

ಇದನ್ನೂ ಓದಿ: Super Computers : ಜಾಗತಿಕ ನಾಯಕತ್ವಕ್ಕಾಗಿ ಭಾರತದಲ್ಲೇ ತಯಾರಾಗುತ್ತಿದೆ ಸೂಪರ್ ಕಂಪ್ಯೂಟರ್​

ಯಾವುದೇ ಸಂಭಾವ್ಯ ಲೋಪದೋಷಗಳು ಅಥವಾ ನ್ಯೂನತೆಗಳನ್ನು ಗುರುತಿಸಲು ಮತ್ತು ಪರಿಹರಿಸಲು ಸರ್ಕಾರ ವಿವಿಧ ಏಜೆನ್ಸಿಗಳೊಂದಿಗೆ ಕೆಲಸ ಮಾಡುತ್ತಿದೆ. ಗೃಹ ಸಚಿವಾಲಯ, ಮಾಹಿತಿ ತಂತ್ರಜ್ಞಾನ ಸಚಿವಾಲಯ ಮತ್ತು ಆರೋಗ್ಯ ಸಚಿವಾಲಯವು ಇಡೀ ಪ್ರಕ್ರಿಯೆಯ ಸಮಗ್ರ ಮೌಲ್ಯಮಾಪನ ನಡೆಸಲಿದೆ.

ಹಿಂದಿನ ಅಕ್ರಮಗಳ ಕುರಿತ ತನಿಖೆ ಅಂತಿಮ ಹಂತದಲ್ಲಿದೆ, ಅದರ ವರದಿ ಶೀಘ್ರದಲ್ಲೇ ಸಲ್ಲಿಕೆಯಾಗಲಿದೆ.

Continue Reading

ಪ್ರಮುಖ ಸುದ್ದಿ

M.R.Jayaram: ಶಿಕ್ಷಣ ತಜ್ಞ ಡಾ ಎಂ ಆರ್ ಜಯರಾಮ್‌ಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್

M.R.Jayaram: ಶಿಕ್ಷಣ ತಜ್ಞ ದಿವಂಗತ ಡಾ.ಎಂ.ಎಸ್.ರಾಮಯ್ಯ ಅವರ ಹಿರಿಯ ಪುತ್ರ, ಗೋಕುಲ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಎಂ.ಆರ್.ಜಯರಾಮ್ ಅವರಿಗೆ ಬೆಂಗಳೂರು ನಗರ ವಿಶ್ವವಿದ್ಯಾಲಯವು ತನ್ನ ಮೂರನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮಾಜಿ ಕ್ರಿಕೆಟಿಗ ಜಿ.ಆರ್.ವಿಶ್ವನಾಥ್ ಅವರು ಎಂ.ಆರ್.ಜಯರಾಮ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಎಐಸಿಟಿಇ ಅಧ್ಯಕ್ಷ ಪ್ರೊ.ಟಿ.ಜಿ.ಸೀತಾರಾಮ್, ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಲಿಂಗರಾಜ ಗಾಂಧಿ, ಕುಲಸಚಿವ ಜವರೇಗೌಡ ಮತ್ತಿತರರು ಉಪಸ್ಥಿತರಿದ್ದರು.

VISTARANEWS.COM


on

M.R.Jayaram
Koo

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯವು ತನ್ನ ಮೂರನೇ ಘಟಿಕೋತ್ಸವದಲ್ಲಿ ಗೋಕುಲ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಆರ್.ಜಯರಾಮ್ (M.R.Jayaram) ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತು. ಮಾನ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮಾಜಿ ಕ್ರಿಕೆಟಿಗ ಜಿ.ಆರ್.ವಿಶ್ವನಾಥ್ ಅವರು ಗೋಕುಲ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಎಂ.ಆರ್.ಜಯರಾಮ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಎಐಸಿಟಿಇ ಅಧ್ಯಕ್ಷ ಪ್ರೊ.ಟಿ.ಜಿ.ಸೀತಾರಾಮ್, ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಲಿಂಗರಾಜ ಗಾಂಧಿ, ಕುಲಸಚಿವ ಜವರೇಗೌಡ ಮತ್ತಿತರರು ಉಪಸ್ಥಿತರಿದ್ದರು.

M.R.Jayaram

ಡಾ.ಎಂ.ಆರ್.ಜಯರಾಮ್ ಕುರಿತು

ಗೋಕುಲ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಆರ್.ಜಯರಾಮ್ ಅವರು ಕರ್ನಾಟಕದ ಹೆಸರಾಂತ ಲೋಕೋಪಕಾರಿ ಮತ್ತು ಶಿಕ್ಷಣ ತಜ್ಞ ದಿವಂಗತ ಡಾ.ಎಂ.ಎಸ್.ರಾಮಯ್ಯ ಅವರ ಹಿರಿಯ ಪುತ್ರ. 1947ರಲ್ಲಿ ಜನಿಸಿದ ಡಾ.ಜಯರಾಮ್ ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಷಯದಲ್ಲಿ ಪದವಿ ಪಡೆದ ಅವರು ರಾಮಯ್ಯ ಸಮೂಹ ಶಿಕ್ಷಣ ಸಂಸ್ಥೆಗಳನ್ನು ನಿರ್ವಹಿಸುವ ಕಾಯಕಕ್ಕೆ ಸಜ್ಜಾದರು.

M.R.Jayaram

1972ರಲ್ಲಿ, ತಮ್ಮ ಇಪ್ಪತ್ತೈದನೇ ವಯಸ್ಸಿನಲ್ಲಿ, ಜಯರಾಮ್ ಎಂ.ಎಸ್.ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (ಎಂಎಸ್ಆರ್‌ಟಿ) ಆಡಳಿತ ಮಂಡಳಿಯ (ಈಗ ಆಡಳಿತ ಮಂಡಳಿ) ಅಧ್ಯಕ್ಷರಾಗಿ ಜವಾಬ್ದಾರಿಯನ್ನು ವಹಿಸಿಕೊಂಡರು. ಅವರ ತಮ್ಮ ಜಾಣ್ಮೆ ಮತ್ತು ನಿರ್ವಹಣಾ ಸಾಮರ್ಥ್ಯಗಳಿಂದ ಸಂಸ್ಥೆಗೆ ಗೌರವವನ್ನು ತಂದುಕೊಟ್ಟರು. ಅಂದಿನಿಂದ ಇದು ಎಂಜಿನಿಯರಿಂಗ್ ಶಿಕ್ಷಣದಲ್ಲಿ ಪ್ರಮುಖ ಸಂಸ್ಥೆಯಾಗಿ ಅಭಿವೃದ್ಧಿ ಹೊಂದಿದೆ.

M.R.Jayaram

ರಾಜಕೀಯ ತ್ಯಜಿಸಿದ ಡಾ. ಜಯರಾಮ್

1972ರಲ್ಲಿ ಡಾ. ಜಯರಾಮ್ ಅವರು ಕರ್ನಾಟಕ ವಿಧಾನಸಭೆಯ ಅತ್ಯಂತ ಕಿರಿಯ ಸದಸ್ಯರಾಗಿ ಆಯ್ಕೆಯಾದರು. ನಾಲ್ಕು ವರ್ಷಗಳ ಕಾಲ ಶಾಸಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಯರಾಮ್ ಅವರು ರಾಜಕೀಯದಿಂದ ಬೇಸರಗೊಂಡು ವಿಧಾನಸಭೆಗೆ ರಾಜೀನಾಮೆ ನೀಡಿ ಸ್ಪೀಕರ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದರು. ಚುನಾಯಿತ ಪ್ರತಿನಿಧಿಯೊಬ್ಬರು ತಾವೇ ಇಷ್ಟಪಟ್ಟು ಅಧಿಕಾರವನ್ನು ತ್ಯಜಿಸಿದಕ್ಕೆ ಇದು ಏಕೈಕ ಉದಾಹರಣೆಯಾಗಿದೆ. ರಾಜ್ಯ ಶಾಸಕಾಂಗದಿಂದ ಅವರು ಹೊರಗೆ ನಡೆದಿದ್ದು, ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಬಹಳ ಲಾಭವಾಗಿತ್ತು, ಯಾಕೆಂದರೆ ನಂತರ ಅವರು ಶಿಕ್ಷಣ ಮತ್ತು ಸಮಾಜ ಕಲ್ಯಾಣಕ್ಕಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡರು.

1979ರಲ್ಲಿ ಎಂ.ಎಸ್.ರಾಮಯ್ಯ ವೈದ್ಯಕೀಯ ಕಾಲೇಜು (ಎಂಎಸ್ಆರ್‌ಎಂಸಿ) ಸ್ಥಾಪಿಸಿದರು ಮತ್ತು ಡಾ. ಜಯರಾಮ್ ಅವರು ಎಂಎಸ್ಆರ್‌ಎಂಸಿ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಿಕೊಂಡರು. ಸ್ನಾತಕೋತ್ತರ ಶಿಕ್ಷಣ ಮತ್ತು ಸಂಶೋಧನೆಯನ್ನು ಬಲಪಡಿಸಲು ಅವರು ಎರಡೂ ಸಂಸ್ಥೆಗಳನ್ನು ಬಹಳ ಬುದ್ಧಿವಂತ ನಾಯಕತ್ವದೊಂದಿಗೆ ಮುನ್ನಡೆಸಿದರು, ಜೊತೆಗೆ ಪದವಿಪೂರ್ವ ಶಿಕ್ಷಣದಲ್ಲಿ ಹೆಚ್ಚಿನ ಖ್ಯಾತಿಯನ್ನು ಗಳಿಸಿದರು. ಡಾ.ಎಂ.ಆರ್.ಜಯರಾಮ್ ಅವರು ಉನ್ನತ ಶಿಕ್ಷಣದಲ್ಲಿ ಗುಣಮಟ್ಟ, ಕೈಗೆಟುಕುವಿಕೆ ಮತ್ತು ಪ್ರವೇಶಕ್ಕೆ ಒತ್ತು ನೀಡುವ ಮೂಲಕ ಈ ಸಂಸ್ಥೆಗಳನ್ನು ಪರಿವರ್ತಿಸಿದ ಹೆಗ್ಗಳಿಕೆಯನ್ನು ಪಡೆದಿದ್ದಾರೆ. ಅವರ ಪ್ರಯತ್ನಗಳ ಪರಿಣಾಮವಾಗಿ, ಈ ಪ್ರಮುಖ ಸಂಸ್ಥೆಗಳು ದೇಶದ 25 ಸಂಸ್ಥೆಗಳಲ್ಲಿ ಆಯಾ ಕ್ಷೇತ್ರಗಳಲ್ಲಿವೆ.

M.R.Jayaram

ಡಾ.ಜಯರಾಮ್ ಅವರ ಉತ್ತಮ ನಾಯಕತ್ವಕ್ಕೆ ಸಾಕ್ಷಿ ಎಂಬಂತೆ ಇಂದು ಜಿಇಎಫ್ ತನ್ನ 85 ಎಕರೆ ಜ್ಞಾನ ಗಂಗೋತ್ರಿ ಕ್ಯಾಂಪಸ್‌ನಲ್ಲಿ 18 ಕಾಲೇಜುಗಳು / ಶಾಲೆಗಳನ್ನು ಮೇಲ್ವಿಚಾರಣೆ ಮಾಡುತ್ತದೆ. ಈ ಶಾಲೆಗಳಲ್ಲಿ ಎಂಜಿನಿಯರಿಂಗ್, ವೈದ್ಯಕೀಯ, ನರ್ಸಿಂಗ್, ದಂತವೈದ್ಯಕೀಯ, ಕಾನೂನು, ಸಮಾಜ ವಿಜ್ಞಾನ ಮತ್ತು ಮ್ಯಾನೇಜ್‌ಮೆಂಟ್‌ ಸೇರಿವೆ. ಕ್ಯಾಂಪಸ್‌ನಲ್ಲಿ ಭಾರತ ಮತ್ತು ವಿದೇಶಗಳ ವಿದ್ಯಾರ್ಥಿಗಳನ್ನು ಒಳಗೊಂಡ 11,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದಾರೆ. ಅವರ ದೃಢನಿಶ್ಚಯ ಮತ್ತು ನಿರಂತರ ಪ್ರಯತ್ನದಿಂದ ಈ ಪ್ರತಿಯೊಂದು ಸಂಸ್ಥೆಯೂ “ಅತ್ಯುತ್ತಮ ಕೇಂದ್ರ”ವಾಗಿ ಕರೆಯಿಸಿಕೊಳ್ಳುತ್ತಿದೆ.

M.R.Jayaram

ಡಾ.ಎಂ.ಎಸ್.ರಾಮಯ್ಯ ಅವರ ನಿಧನದ ನಂತರ, ಡಾ.ಜಯರಾಮ್ ಅವರು ತಮ್ಮ ಪ್ರಯತ್ನಗಳನ್ನು ಮತ್ತಷ್ಟು ಹೆಚ್ಚಿಸಿದರು. ಈಗ ತಮ್ಮ ತಂದೆಯ ನೆನಪಿಗಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸುವತ್ತ ಗಮನ ಹರಿಸಿದ್ದಾರೆ ಮತ್ತು ಎಂ.ಎಸ್.ರಾಮಯ್ಯ ಸ್ಮಾರಕ ಆಸ್ಪತ್ರೆ ಇಂದು ಬೆಂಗಳೂರಿನ ಹೆಮ್ಮೆಯಾಗಿದೆ. ಎಂ.ಎಸ್. ರಾಮಯ್ಯ ಸ್ಕೂಲ್ ಆಫ್ ಅಡ್ವಾನ್ಸ್‌ಡ್‌ ಸ್ಟಡೀಸ್‌ ಕೂಡ ಅವರ ಸೃಷ್ಟಿಯಾಗಿದ್ದು, ನಂತರ ಅದು ಈಗ ಪ್ರಸಿದ್ಧ ರಾಮಯ್ಯ ಅನ್ವಯಿಕ ವಿಜ್ಞಾನಗಳ ವಿಶ್ವವಿದ್ಯಾಲಯವಾಗಿ ರೂಪಾಂತರಗೊಂಡಿತು. ಮತ್ತು ಇದು ಅವರು ಅವಿರತವಾಗಿ ನಿರ್ಮಿಸಿದ ಹದಿಮೂರು ಬೋಧಕವರ್ಗಗಳನ್ನು ಒಳಗೊಂಡಿದೆ. ಹಾಗೇ ಡಾ.ಜಯರಾಮ್ ಅವರು ರಾಮಯ್ಯ ಅನ್ವಯಿಕ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದಾರೆ.

ಡಾ.ಜಯರಾಮ್ ಅವರು ಶಿಕ್ಷಣ ತಜ್ಞರಲ್ಲದೆ, ಖ್ಯಾತ ಉದ್ಯಮಿ ಮತ್ತು ಕೈಗಾರಿಕೋದ್ಯಮಿಯಾಗಿದ್ದಾರೆ. ಇತ್ತೀಚೆಗೆ ಅವರು ತಮ್ಮ ಎಲ್ಲಾ ವ್ಯವಹಾರಗಳನ್ನು ಕ್ರೋಢೀಕರಿಸಿದರು ಮತ್ತು ಅವುಗಳನ್ನು “ವಾಲ್ಡೆಲ್ ಕಾರ್ಪೊರೇಷನ್” ಎಂಬ ಒಂದೇ ಹೆಸರಿನಡಿಯಲ್ಲಿ ತಂದರು. ವಾಲ್ಡೆಲ್ ವಿನ್ಯಾಸ ಎಂಜಿನಿಯರಿಂಗ್ ಮತ್ತು ಇತರ ವ್ಯವಹಾರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು ಸಮುದಾಯ ಅಭಿವೃದ್ಧಿ ಮತ್ತು ಲೋಕೋಪಕಾರದಲ್ಲಿಯೂ ತೊಡಗಿಸಿಕೊಂಡಿದ್ದಾರೆ. ಅವರು ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಆಧ್ಯಾತ್ಮಿಕ ಪುನರುತ್ಥಾನದ ಕೇಂದ್ರವಾದ ಕೈವಾರ ಕ್ಷೇತ್ರದ ಧರ್ಮಾಧಿಕಾರಿ (ಮುಖ್ಯಸ್ಥ) ಆಗಿದ್ದಾರೆ. ಕ್ಷೇತ್ರವು ಹಳೆಯ ದೇವಾಲಯಗಳ ಪುನರುಜ್ಜೀವನ, ಕೈವಾರದ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಆರೋಗ್ಯ ಮತ್ತು ಶಿಕ್ಷಣವನ್ನು ಒದಗಿಸುವುದು, ಅನಾನುಕೂಲಕರ ಮತ್ತು ದುರ್ಬಲ ಜನಸಂಖ್ಯೆಯ ಕಲ್ಯಾಣ ಚಟುವಟಿಕೆಗಳನ್ನು ಒಳಗೊಂಡಿದೆ.

ಡಾ.ಜಯರಾಮ್ ಅವರು ಎಂ.ಎಸ್.ರಾಮಯ್ಯ ಚಾರಿಟೀಸ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿಯಾಗಿದ್ದು, ಇದು ಹಲವಾರು ಉತ್ತಮವಾಗಿ ವ್ಯಾಖ್ಯಾನಿಸಲಾದ ಸಾಮಾಜಿಕ ಉದ್ದೇಶಗಳನ್ನು ಅನುಸರಿಸುತ್ತದೆ. ಉನ್ನತ ಶಿಕ್ಷಣವನ್ನು ಮುಂದುವರಿಸಲು ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಅಭ್ಯರ್ಥಿಗಳಿಗೆ ಟ್ರಸ್ಟ್ ವಾರ್ಷಿಕವಾಗಿ ವಾರ್ಷಿಕ ವಿದ್ಯಾರ್ಥಿವೇತನವನ್ನು ನೀಡುತ್ತದೆ.

ಡಾ.ಜಯರಾಮ್ ಅವರು ವೃತ್ತಿಪರ ಸಂಘಗಳೊಂದಿಗೆ ಸಂಬಂಧ ಹೊಂದಿದ್ದಾರೆ. ಅವರು 7000 ಕ್ಕೂ ಹೆಚ್ಚು ಉನ್ನತ ಶಿಕ್ಷಣವನ್ನು ಪ್ರತಿನಿಧಿಸುವ ಉನ್ನತ ವೃತ್ತಿಪರ ಸಂಸ್ಥೆಯಾದ ಎಜುಕೇಶನ್ ಪ್ರಮೋಷನ್ ಸೊಸೈಟಿ ಫಾರ್ ಇಂಡಿಯಾದ ಅಧ್ಯಕ್ಷರಾಗಿದ್ದಾರೆ.

ಸಂಸ್ಥೆಗಳು: ಅವರು ಕರ್ನಾಟಕ ವೃತ್ತಿಪರ ಕಾಲೇಜುಗಳ ಪ್ರತಿಷ್ಠಾನದ ಕಾರ್ಯದರ್ಶಿ ಮತ್ತು ಕರ್ನಾಟಕ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ದಂತ ಕಾಲೇಜುಗಳ ಒಕ್ಕೂಟದ (ಸಿಒಎಂಇಡಿಕೆ) ಅಧ್ಯಕ್ಷರಾಗಿದ್ದಾರೆ.

ಇದನ್ನೂ ಓದಿ: ರೈಲು ಪ್ರಯಾಣಿಕರು ತಿಳಿದುಕೊಳ್ಳಲೇಬೇಕಾದ ನಿಯಮಗಳು

ಪ್ರಶಸ್ತಿ: ಸೆಪ್ಟೆಂಬರ್‌ 2006 ರಲ್ಲಿ, ಡಾ.ಜಯರಾಮ್ ಅವರಿಗೆ ಶಿಕ್ಷಣ ಮತ್ತು ವ್ಯವಹಾರಕ್ಕೆ ನೀಡಿದ ಕೊಡುಗೆಗಾಗಿ ಯುಕೆಯ ಕೊವೆಂಟ್ರಿ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿತು. ಮೇ 2022 ರಲ್ಲಿ, ಚಿಕಾಗೋದ ಇಲಿನಾಯ್ಸ್ ವಿಶ್ವವಿದ್ಯಾಲಯವು ಅವರಿಗೆ ಡಾಕ್ಟರ್ ಆಫ್ ಹ್ಯೂಮನ್ ಲೆಟರ್ಸ್ ನೀಡಿತು.

Continue Reading

ದೇಶ

NEET UG 2024 Re-Test Result: ನೀಟ್‌ ಮರುಪರೀಕ್ಷೆಯ ಫಲಿತಾಂಶ ಪ್ರಕಟ; ಹೀಗೆ ಚೆಕ್‌ ಮಾಡಿ

NEET UG 2024 Re-Test Result: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಫಲಿತಾಂಶವನ್ನು ಸೋಮವಾರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪ್ರಕಟಿಸಿದೆ. ಮೇಯಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಕೃಪಾಂಕ ಪಡೆದ 1,563 ವಿದ್ಯಾರ್ಥಿಗಳಿಗೆ ಜೂನ್ 23ರಂದು ಮರುಪರೀಕ್ಷೆ ನಡೆಲಾಗಿತ್ತು.

VISTARANEWS.COM


on

NEET UG 2024 Re-Test Result
Koo

ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ (Re-Test) ಫಲಿತಾಂಶವನ್ನು ಸೋಮವಾರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪ್ರಕಟಿಸಿದೆ (NEET UG 2024 Re-Test Result). ಮೇಯಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಕೃಪಾಂಕ ಪಡೆದ 1,563 ವಿದ್ಯಾರ್ಥಿಗಳಿಗೆ ಜೂನ್ 23ರಂದು ಮರುಪರೀಕ್ಷೆ ನಡೆಲಾಗಿತ್ತು. ಈ ಪೈಕಿ 813 ಅಭ್ಯರ್ಥಿಗಳು ಮಾತ್ರ ಹಾಜರಾಗಿದ್ದರು. ಶನಿವಾರ ಆನ್ಸರ್‌ ಕೀ ಪ್ರಕಟಿಸಲಾಗಿತ್ತು.

ಚಂಡೀಗಢ, ಗುಜರಾತ್‌, ಹರಿಯಾಣ, ಮೇಘಾಲಯ ಸೇರಿ ಆರು ರಾಜ್ಯಗಳ ನಗರಗಳಲ್ಲಿ ಮರು ಪರೀಕ್ಷೆ ನಡೆದಿತ್ತು. ಈ ಪೈಕಿ ಛತ್ತೀಸ್‌ಗಢದಲ್ಲಿ 602 ಅಭ್ಯರ್ಥಿಗಳ ಪೈಕಿ 291 ವಿದ್ಯಾರ್ಥಿಗಳು ಹಾಜರಾದರೆ, ಹರಿಯಾಣದಲ್ಲಿ 494 ಅಭ್ಯರ್ಥಿಗಳ ಪೈಕಿ 287, ಮೇಘಾಲಯದಲ್ಲಿ 464 ವಿದ್ಯಾರ್ಥಿಗಳ ಪೈಕಿ 234 ಅಭ್ಯರ್ಥಿಗಳು ಮಾತ್ರ ಹಾಜರಾಗಿದ್ದರು. ಗುಜರಾತ್‌ ಕೇಂದ್ರದಲ್ಲಿ ಒಬ್ಬ ವಿದ್ಯಾರ್ಥಿ ಮಾತ್ರ ಮರು ಪರೀಕ್ಷೆ ಬರೆದಿದ್ದರು.

“ಜೂನ್ 23ರಂದು ಮರು ಪರೀಕ್ಷೆಗೆ ಹಾಜರಾದ ನೀಟ್ (ಯುಜಿ) 2024ರ ಎಲ್ಲ ಅಭ್ಯರ್ಥಿಗಳ ಪರಿಷ್ಕೃತ ಸ್ಕೋರ್‌ ಕಾರ್ಡ್‌ಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಲಾಗಿನ್‌ ಆಗಿ ಪರಿಷ್ಕೃತ ಸ್ಕೋರ್‌ ಕಾರ್ಡ್‌ಗಳನ್ನು ಡೌನ್‌ಲೋಡ್‌ ಮಾಡಬಹುದು” ಎಂದು ಎನ್‌ಟಿಎ ತಿಳಿಸಿದೆ.

ಫಲಿತಾಂಶ ಹೀಗೆ ಚೆಕ್‌ ಮಾಡಿ

ನೀಟ್‌ ಪರೀಕ್ಷೆ ವೇಳೆ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಮತ್ತು ಕೇಂದ್ರ ಶಿಕ್ಷಣ ಸಚಿವಾಲಯದ ಅಧಿಕಾರಿಗಳು ಹಾಜರಿದ್ದು, ಮರುಪರೀಕ್ಷೆಯ ಮೇಲ್ವಿಚಾರಣೆ ನಡೆಸಿದರು.

ಯಾಕಾಗಿ ಮರು ಪರೀಕ್ಷೆ?

2024ರ ಮೇ 5ರಂದು 14 ಅಂತಾರಾಷ್ಟ್ರೀಯ ಸ್ಥಳಗಳು ಸೇರಿದಂತೆ 571 ನಗರಗಳಲ್ಲಿ, 4,750 ಕೇಂದ್ರಗಳಲ್ಲಿ 24 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಿದ್ದರು. ಜೂನ್ 4ರಂದು ಫಲಿತಾಂಶವನ್ನು ಪ್ರಕಟಿಸಲಾಯಿತು. ಬಳಿಕ 1,563 ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳು ದೊರೆತಿರುವುದು ಭಾರಿ ಸುದ್ದಿ ಆಯಿತು. ಸದ್ಯ ಪ್ರಕರಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಗ್ರೇಸ್ ಅಂಕದ ವಿವಾದ ದೇಶಾದ್ಯಂತ ಹರಡುತ್ತಿದ್ದಂತೆ ಕೇಂದ್ರ ಸರ್ಕಾರ ಗ್ರೇಸ್ ಅಂಕಗಳನ್ನು ಪಡೆದ 1,563 ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ನಡೆಸುವುದಾಗಿ ಸುಪ್ರೀಂ ಕೋರ್ಟ್‌ಗೆ ಹೇಳಿತ್ತು. 1,563 ಅಭ್ಯರ್ಥಿಗಳಲ್ಲಿ ಯಾರಾದರೂ ಮರುಪರೀಕ್ಷೆಯಿಂದ ಹೊರಗುಳಿದಿದ್ದರೆ ಗ್ರೇಸ್ ಅಂಕಗಳಿಲ್ಲದ ಅವರ ಹಿಂದಿನ ಅಂಕಗಳನ್ನು ಫಲಿತಾಂಶಗಳಿಗಾಗಿ ಬಳಸಲಾಗುತ್ತದೆ ಎಂದೂ ಕೇಂದ್ರ ಕೋರ್ಟ್‌ಗೆ ತಿಳಿಸಿತ್ತು. ಅದರಂತೆ ಮರುಪರೀಕ್ಷೆ ನಡೆಸಲಾಗಿತ್ತು.

Continue Reading

ಕರ್ನಾಟಕ

Text Book: ರಾಜ್ಯ ಪಠ್ಯಕ್ರಮದ ವಿರುದ್ಧ ವೀರಶೈವ ಮಠಾಧೀಶರ ಅಸಮಾಧಾನ; ಸಿಎಂಗೆ ಪತ್ರ

Text Book: 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಬಸವಣ್ಣರ ಕುರಿತು ತಪ್ಪು ಮಾಹಿತಿ ಪ್ರಕಟಿಸಲಾಗಿದೆ ಎಂದು 2024ರ ಸಾಲಿನ ರಾಜ್ಯ ಪಠ್ಯಕ್ರಮದ ವಿರುದ್ಧ ವೀರಶೈವ ಮಠಾಧೀಶರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜತೆಗೆ ಅಖಿಲ ಭಾರತ ವೀರಶೈವ ಶಿವಾಚಾರ್ಯರ ಸಂಸ್ಥೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಲೋಪ ಸರಿಪಡಿಸುವಂತೆ ಮನವಿ ಮಾಡಿದೆ. ಪಠ್ಯದಲ್ಲಿ ವೀರಶೈವ ಎಂಬ ಪದವನ್ನೇ ಕೈ ಬಿಡಲಾಗಿದ್ದು, ಇದು ಸಮುದಾಯಕ್ಕೆ ಮಾಡಿದ ಅನ್ಯಾಯ ಎಂದು ವಚನಗಳನ್ನು ಉಲ್ಲೇಖಿಸಿ ಸುದೀರ್ಘವಾಗಿ ವೀರಶೈವ ಮಠಾಧೀಶರು ಪತ್ರ ಬರೆದಿದ್ದಾರೆ.

VISTARANEWS.COM


on

Text Book
Koo

ಬೆಂಗಳೂರು: 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ (Text Book) ಬಸವಣ್ಣರ ಕುರಿತು ತಪ್ಪು ಮಾಹಿತಿ ಪ್ರಕಟಿಸಲಾಗಿದೆ ಎಂದು 2024ರ ಸಾಲಿನ ರಾಜ್ಯ ಪಠ್ಯಕ್ರಮದ ವಿರುದ್ಧ ವೀರಶೈವ ಮಠಾಧೀಶರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜತೆಗೆ ಅಖಿಲ ಭಾರತ ವೀರಶೈವ ಶಿವಾಚಾರ್ಯರ ಸಂಸ್ಥೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಲೋಪ ಸರಿಪಡಿಸುವಂತೆ ಮನವಿ ಮಾಡಿದೆ.

ಪಠ್ಯದಲ್ಲಿ ವೀರಶೈವ ಎಂಬ ಪದವನ್ನೇ ಕೈ ಬಿಡಲಾಗಿದ್ದು, ಇದು ಸಮುದಾಯಕ್ಕೆ ಮಾಡಿದ ಅನ್ಯಾಯ ಎಂದು ವಚನಗಳನ್ನು ಉಲ್ಲೇಖಿಸಿ ಸುದೀರ್ಘವಾಗಿ ವೀರಶೈವ ಮಠಾಧೀಶರು ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಏನಿದೆ?

ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಪರವಾಗಿ ಡಾ. ಮಹಾಂತಲಿಂಗ ಶಿವಾಚಾರ್ಯ ಶ್ರೀ ಪತ್ರ ಬರೆದಿದ್ದಾರೆ. ಅಖಿಲ ಭಾರತ ವೀರಶೈವ ಶಿವಾಚಾರ್ಯರ ಸಂಸ್ಥೆಯಲ್ಲಿ ವೀರಶೈವ ಧರ್ಮದ ಗುರುಪರಂಪರೆಯ ಪಂಚಪೀಠಗಳ ಶಾಖಾಮಠಗಳ ಮಠಾಧೀಶರು ಸದಸ್ಯರಾಗಿದ್ದಾರೆ. ಈ ಎಲ್ಲ ಮಠಾಧೀಶರ ಒಮ್ಮತದ ಅಭಿಪ್ರಾಯವನ್ನು ಈ ಪತ್ರದಲ್ಲಿ ತಮ್ಮ ಗಮನಕ್ಕೆ ತರುತ್ತಿದ್ದೇವೆ ಎಂದು ಉಲ್ಲೇಖಿಸಲಾಗಿದೆ.

ಈ ವರ್ಷದ 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದಲ್ಲಿ ಬಸವಣ್ಣ ಅವರ ಪರಿಚಯವನ್ನು ಪರಿಷ್ಕರಿಸಲಾಗಿದೆ. 2016ರಿಂದ ಈಗ ಮೂರನೇ ಬಾರಿ ಪರಿಷ್ಕರಿಸಲಾಗಿದೆ. ಈ ಪರಿಷ್ಕರಣೆಯಲ್ಲಿ ವಿದ್ಯಾರ್ಥಿಗಳಿಗೆ ಅನೇಕ ತಪ್ಪು ಮಾಹಿತಿಗಳನ್ನು ನೀಡಿರುವುದು ಗಮನಕ್ಕೆ ಬಂದಿದೆ. ಬಸವಣ್ಣ ಅವರ ಪರಿಚಯದ ವೇಳೆ ವೀರಶೈವ ಪದ ಕೈ ಬಿಡಲಾಗಿದೆ. ಇದು ಸರಿಯಲ್ಲ ಎಂದು ವಚನದ ಮೂಲಕ ವಿವರಿಸಲಾಗಿದೆ.

ಬಸವಣ್ಣ ಅರಿವನ್ನೇ ಗುರುವಾಗಿಸಿಕೊಂಡಿದ್ದರು ಎಂದು ಪರಿಷ್ಕರಣೆ ಮಾಡಲಾದ ಪಠ್ಯಕ್ಕೂ ಆಕ್ಷೇಪ ವ್ಯಕ್ತಪಡಿಸಲಾಗಿದೆ. ಆ ತಪ್ಪುಗಳನ್ನೂ ಸರಿಪಡಿಸುವಂತೆ ತಿಳಿಸಲಾಗಿದೆ.

ಯಾವೆಲ್ಲ ತಪ್ಪುಗಳು?

ಈ ವರ್ಷ ಪರಿಷ್ಕೃತಗೊಂಡಿರುವ ಪುಸ್ತಕದಲ್ಲಿ ‘ವೀರಶೈವ’ ಪದವನ್ನು ತಗೆದು ಹಾಕಲಾಗಿದೆ. ಈ ಪರಿಷ್ಕರಣೆ ಸರಿಯಲ್ಲ‌. ಯಾಕೆಂದರೆ 30 ಹೆಚ್ಚು ಶಿವಶರಣರು 142 ವಚನಗಳಲ್ಲಿ 221 ಬಾರಿ ʼವೀರಶೈವʼ ಎಂಬ ಪದ ಬಳಸಿದ್ದಾರೆ. ಕೇವಲ 8 ಜನ ಶಿವಶರಣರು ತಮ್ಮ 10 ವಚನಗಳಲ್ಲಿ 12 ಕಡೆ ಮಾತ್ರ ‘ಲಿಂಗಾಯತ’ ಪದವನ್ನು ಬಳಸಿದ್ದಾರೆ. ಆದರೆ ಬಸವಣ್ಣ ತಮ್ಮ ಒಂದು ವಚನದಲ್ಲಿಯೂ ‘ಲಿಂಗಾಯತ’ ಪದ ಬಳಸಿಲ್ಲ. ಆದರೆ ಬಸವಣ್ಣ ಅವರೇ ಅನೇಕ ಬಾರಿ ತಮ್ಮ ವಚನಗಳಲ್ಲಿ ‘ವೀರಶೈವ’ ಪದ ಬಳಸಿರುವುದಲ್ಲದೇ ತಮ್ಮದೊಂದು ವಚನದಲ್ಲಿ ತಾವು ನಿಜ ವೀರಶೈವ’ (ವಚನ ಸಂಖ್ಯೆ 1,092) ಎಂದು ಹೇಳಿಕೊಂಡಿದ್ದಾರೆ.

ವಾಸ್ತವ ಹೀಗಿರುವಾಗ 2016 ಮತ್ತು 2022ರ ಪಠ್ಯಪುಸ್ತದಲ್ಲಿರುವ ʼವೀರಶೈವ’ ಪದವನ್ನು ತಗೆದು ಹಾಕಿರುವುದು ಸರಿಯಾದ ಕ್ರಮವಲ್ಲ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಇದರಿಂದ ಇತಿಹಾಸವನ್ನು ತಿರುಚಿದಂತಾಗುತ್ತದೆ. ಇದು ವಿದ್ಯಾರ್ಥಿಗಳಿಗೆ ಮಾಡುವ ಅನ್ಯಾಯ ಮತ್ತು ಕಾನೂನು ಬಾಹಿರ ಕಾರ್ಯ ಎಂದು ಪ್ರತಿಕ್ರಿಯಿಸಲಾಗಿದೆ.

ಅಲ್ಲದೆ ಈ ವರ್ಷ ಪರಿಷ್ಕೃತಗೊಂಡಿರುವ ಪುಸ್ತಕದಲ್ಲಿ ಬಸವಣ್ಣನವರು ‘ಅರಿವನ್ನೇ ಗುರು’ವಾಗಿಸಿಕೊಂಡಿದ್ದರು. ಬಸವಣ್ಣನವರು ಇಷ್ಟಲಿಂಗದ ವಿನೂತನ ಪರಿಕಲ್ಪನೆಯನ್ನು ಜಾರಿಗೆ ತಂದರು ಎಂದು ಪ್ರಕಟಿಸಲಾಗಿದೆ. ಇದು ಸಂಪೂರ್ಣ ತಪ್ಪು ಮಾಹಿತಿ. ಬಸವಣ್ಣನವರು ತಮ್ಮ ವಚನಗಳಲ್ಲಿ ಪ್ರತಿಯೊಬ್ಬರಲ್ಲಿರುವ ಅಂತರಂಗದಲ್ಲಿರುವ ಪರಮಾತ್ಮನ ಆರಿವೇ ಗುರುವಾಗಬೇಕು. ಅರಿವು ಪ್ರತಿಯೊಬ್ಬರ ಬದುಕಿಗೆ ನಿತ್ಯ ದಾರಿದೀಪವಾಗಬೇಕೆಂದು ಪ್ರತಿಪಾದಿಸಿದ್ದಾರೆಯೇ ಹೊರತು ತಮಗೆ ಗುರುವಿಲ್ಲ. ತಮಗೆ ತಮ್ಮ ಅರಿವೇ ಗುರು ಎಂದು ಎಲ್ಲಿಯೂ ಯಾವ ಸಂದರ್ಭದಲ್ಲಿಯೂ ಹೇಳಿಲ್ಲ. ಅವರು ಅವರಲ್ಲಿರುವ ಗುರುವಿನ ಬಗೆಗಿನ ಗೌರವವನ್ನು ತಮ್ಮ ಅನೇಕ ವಚನಗಳಲ್ಲಿ ನಿರೂಪಿಸಿದ್ದಾರೆ. ತಾವು ಗುರುವಿನಿಂದ ಇಷ್ಟಲಿಂಗವನ್ನು ಪಡೆದಿದ್ದೇನೆ ಎಂದು ಆನೇಕ ವಚನಗಳಲ್ಲಿ ಅವರೇ ಹೇಳಿಕೊಂಡಿದ್ದಾರೆ. ಇದಕ್ಕೆ ಅನೇಕ ವಚನಗಳ ಉದಾಹರಣೆಗಳಿವೆ.

ಬಸವಣ್ಣನವರ ವಚನಗಳಲ್ಲಿ ಗುರುವಿನ ಮತ್ತು ಗುರುಗಳಿಂದ ಇಷ್ಟಲಿಂಗ ಪಡೆದೆ ಎನ್ನುವ ಉಲ್ಲೇಖಗಳಿವೆ. ಆದ್ದರಿಂದ ಬಸವಣ್ಣನವರಿಗಿಂತ ಮೊದಲೇ ಇಷ್ಟಲಿಂಗ ಪೂಜೆಯಿತ್ತು ಎನ್ನುವುದಕ್ಕೆ ಆಧಾರಗಳಿವೆ. ಆದ್ದರಿಂದ ಇತಿಹಾಸಕ್ಕೆ ಹಾಗೂ ನಡೆದು ಬಂದ ಪರಂಪರೆಗೆ ಧಕ್ಕೆಯಾಗುವ ವಿಚಾರಗಳನ್ನು ವಿಧ್ಯಾರ್ಥಿಗಳ ತಲೆ ತುಂಬಬಾರದು ಎಂದು ಪಠ್ಯಪುಸ್ತಕ ಪರಿಷ್ಕರಣ ಸಮಿತಿಗೆ ನಿರ್ದೇಶನ ನೀಡಬೇಕು. ಒಂದು ವೇಳೆ 9ನೇ ತರಗತಿಯ ಪಠ್ಯದಲ್ಲಿ ಆದ ದೋಷಗಳನ್ನು ಸರಿಪಡಿಸದಿದ್ದರೆ ನಾವು ಕಾನೂನು ಮೊರೆ ಹೋಗಬೇಕಾಗುತ್ತದೆ ಎಂದು ಪತ್ರದಲ್ಲಿ ಎಚ್ಚರಿಸಲಾಗಿದೆ.

ಇದನ್ನೂ ಓದಿ: Pralhad Joshi: ಸಚಿವ ಪ್ರಲ್ಹಾದ್‌ ಜೋಶಿ ವೀರಶೈವರನ್ನು ಕಡೆಗಣಿಸಿಲ್ಲ: ಶ್ರೀ ರುದ್ರಮುನಿ‌ ಸ್ವಾಮೀಜಿ ಸಮರ್ಥನೆ

Continue Reading
Advertisement
ಆಟೋಮೊಬೈಲ್25 mins ago

Mahindra Scorpio N : ಮಹೀಂದ್ರಾ ತನ್ನ ಸ್ಕಾರ್ಪಿಯೋ-ಎನ್ Z8 ವೇರಿಯೆಂಟ್​ನಲ್ಲಿ ನೀಡಿದ ಹಲವು ಫೀಚರ್​ಗಳು

suicide news
ಕರ್ನಾಟಕ2 hours ago

Suicide News : ಮಗನ ಕುಡಿತದ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಅಪ್ಪ, ಅಮ್ಮ

Aditya L1
ದೇಶ2 hours ago

Aditya L1: ಲ್ಯಾಗ್ರೇಂಜ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದ ಆದಿತ್ಯ ಎಲ್‌ 1; ಇಸ್ರೋಗೆ ಭಾರಿ ಮುನ್ನಡೆ

David Miller :
ಪ್ರಮುಖ ಸುದ್ದಿ2 hours ago

David Miller : ಸೋಲಿನ ಬೇಸರದಲ್ಲಿ ವಿದಾಯ ಹೇಳಿದರೇ ಮಿಲ್ಲರ್​​; ದಕ್ಷಿಣ ಆಫ್ರಿಕಾ ಆಟಗಾರನ ಪ್ರತಿಕ್ರಿಯೆ ಏನು?

Sudha Murty
ದೇಶ3 hours ago

Sudha Murty: ಕರ್ನಾಟಕ ಸೇರಿ ದೇಶದ ಪ್ರವಾಸೋದ್ಯಮಕ್ಕೆ ಒತ್ತು ನೀಡಿ; ರಾಜ್ಯಸಭೆಯಲ್ಲಿ ಸುಧಾಮೂರ್ತಿ ಮೊದಲ ಭಾಷಣ!

Physical Abuse
ಕರ್ನಾಟಕ3 hours ago

Physical Abuse : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Mahua Moitra
ಪ್ರಮುಖ ಸುದ್ದಿ4 hours ago

Mahua Moitra: ಸುಮ್ನೆ ಕೂತ್ಕೊಳ್ಳಿ ರಾಹುಲ್‌ ಗಾಂಧಿ; ಸಂಸತ್ತಲ್ಲೇ ಮಹುವಾ ಮೊಯಿತ್ರಾ ಹೀಗೆ ಸಿಟ್ಟಾಗಿದ್ದೇಕೆ?

Viral Video
Latest4 hours ago

Viral Video: ಲೈವ್‌ ವರದಿ ಮಾಡುತ್ತಿದ್ದಾಗ ಪಾಕ್ ಟಿವಿ ವರದಿಗಾರ್ತಿ ಮೇಲೆ ಗೂಳಿ ದಾಳಿ!

Hemant Nimbalkar
ಪ್ರಮುಖ ಸುದ್ದಿ4 hours ago

Hemant Nimbalkar: ವಾರ್ತಾ ಇಲಾಖೆ ಆಯುಕ್ತರಾಗಿ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮರು ನೇಮಕ

Kolar News
ಕರ್ನಾಟಕ4 hours ago

Kolar News: ಕಾಲೇಜಿನ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಯುವಕನ ಬಂಧನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ7 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ1 day ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌