Elephant Attack : ಕೇರಳದ ವ್ಯಕ್ತಿಗೆ ಪರಿಹಾರ ಕೊಟ್ಟಿದ್ದು ಯಾಕೆಂದರೆ, ಕೊಂದಿದ್ದು ಕರ್ನಾಟಕದ ಆನೆ! - Vistara News

ಬೆಂಗಳೂರು

Elephant Attack : ಕೇರಳದ ವ್ಯಕ್ತಿಗೆ ಪರಿಹಾರ ಕೊಟ್ಟಿದ್ದು ಯಾಕೆಂದರೆ, ಕೊಂದಿದ್ದು ಕರ್ನಾಟಕದ ಆನೆ!

Elephant Attack : ಕೇರಳದಲ್ಲಿ ಆನೆ ದಾಳಿಗೆ ಒಳಗಾದ ವ್ಯಕ್ತಿಗೆ ಕರ್ನಾಟಕ ಸರ್ಕಾರ ಪರಿಹಾರ ಕೊಟ್ಟಿರುವ ವಿಚಾರ ಈಗ ವಿವಾದಕ್ಕೆ ಕಾರಣವಾಗಿದೆ. ಹಾಗಿದ್ದರೆ ರಾಜ್ಯ ಸರ್ಕಾರ ಪರಿಹಾರ ಕೊಟಿದ್ದು ಯಾಕೆ? ಇಲ್ಲಿದೆ ಕಾರಣ.

VISTARANEWS.COM


on

Elephant Attack karnataka Compensation
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಕೇರಳದ ವಯನಾಡಿನ (Wayanad in Kerala) ಪೂಲ್ಪಳ್ಳಿ ಪ್ರದೇಶದಲ್ಲಿ ಕಳೆದ ಫೆಬ್ರವರಿ 10ರಂದು ಕಾಡಾನೆಯೊಂದು ವಸತಿ ಪ್ರದೇಶಕ್ಕೆ ನುಗ್ಗಿ (Elephant Attack) 42 ವರ್ಷದ ಟ್ಯಾಕ್ಸಿ ಡ್ರೈವರ್‌ ಅಜೀಶ್‌ (Taxi Driver Ajeesh Death) ಎಂಬವರನ್ನು ಕೊಂದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಸರ್ಕಾರ (Karnataka Government) 15 ಲಕ್ಷ ರೂ. ಪರಿಹಾರವನ್ನು (15 Lakhs Compensation) ನೀಡಿರುವುದು ಭಾರಿ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಪ್ರತಿಪಾದಿಸುವ ಕಾಂಗ್ರೆಸ್‌ ಕೇರಳದಲ್ಲಿ ಕಾಡಾನೆ ದಾಳಿಗೆ ಒಳಗಾದ ವ್ಯಕ್ತಿಗೆ ಪರಿಹಾರ ನೀಡುವಾಗ ನಮ್ಮ ಹಕ್ಕು ನೆನಪಾಗಲಿಲ್ಲವೇ? ರಾಹುಲ್‌ ಗಾಂಧಿ ಅವರು ಹೇಳಿದರು ಎಂದ ಮಾತ್ರಕ್ಕೆ ಅವರನ್ನು ಓಲೈಸಲು ಅಜೀಶ್‌ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡಿರುವುದು ಸರಿಯೇ ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಇದರ ನಡುವೆ, ಕರ್ನಾಟಕ ಯಾಕೆ ಪರಿಹಾರ ಕೊಡಬೇಕಾಗಿ ಬಂತು ಎಂಬ ವಿಚಾರಕ್ಕೆ ಸಂಬಂಧಿಸಿ ಅರಣ್ಯ ಸಚಿವ ಈಶ್ವರ ಖಂಡ್ರೆ (Eshwar Khandre) ಅವರು ಸ್ಪಷ್ಟನೆ ನೀಡಿದ್ದಾರೆ.

ಅಜೀಶ್‌ ಜೋಸೆಫ್‌ ಪನಚಿಯಿಲ್‌ ಎಂಬ ಟ್ಯಾಕ್ಸಿ ಚಾಲಕನ ಸಾವಿನಿಂದಾಗಿ ವಯನಾಡ್‌ ಪ್ರದೇಶದಲ್ಲಿ ದೊಡ್ಡ ಆಘಾತ ಉಂಟಾಗಿದೆ. ದಾಳಿ ಮಾಡಿದ ಆನೆ ಎಲ್ಲಿ ಹೋಗಿದೆ ಎಂದು ಪತ್ತೆ ಹಚ್ಚಲು ಡ್ರೋನ್‌ಗಳನ್ನು ಬಳಸಲಾಗಿದೆ. ಆದರೆ, ಡ್ರೋನ್‌ಗೂ ಸಿಗದೆ ಈ ಆನೆ ತಲೆ ಮರೆಸಿಕೊಂಡಿದೆ. ಈ ನಡುವೆ, ಆನೆ ವಯನಾಡಿನ ಕೇರಳ ಭಾಗದಲ್ಲಿ ದಾಳಿ ನಡೆಸಿ ಕರ್ನಾಟಕದ ಕಾಡಿನ ಪ್ರದೇಶವನ್ನು ಪ್ರವೇಶಿಸಿದೆ. ಆನೆಯನ್ನು ಪತ್ತೆ ಹಚ್ಚಲು ಕೇರಳದ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಶತ ಪ್ರಯತ್ನ ನಡೆಸುತ್ತಿದ್ದು, ಅವರಿಗೆ ಕರ್ನಾಟಕದ ತಂಡವೂ ಸಹಾಯ ಮಾಡಿದೆ.

ನಿಜವೆಂದರೆ ಇದು ಕೇರಳದ ಆನೆಯಲ್ಲ, ಕರ್ನಾಟಕದ್ದೇ ಆನೆ!

ಅಜೀಶ್‌ ಅವರನ್ನು ಮನೆಯ ಗೇಟ್‌ ಮುರಿದು ಒಳ ನುಗ್ಗಿ ಕೊಂದು ಹಾಕಿದ ಈ ಪುಂಡಾನೆ ಕರ್ನಾಟಕಕ್ಕೆ ಸೇರಿದ್ದು ಎಂದು ತಿಳಿದುಬಂದಿದೆ. ಕರ್ನಾಟಕದ ಈ ಆನೆ ಗಡಿಯನ್ನು ದಾಟಿ ಹೋಗಿ ವಯನಾಡಿನಲ್ಲಿ ಅನಾಹುತ ಸೃಷ್ಟಿಸಿ ಮರಳಿ ಬಂದಿದೆ ಎನ್ನುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ಅದಕ್ಕಿಂತಲೂ ಮುಖ್ಯವಾಗಿ ಇದು ಕರ್ನಾಟಕದ ಆನೆಯೇ ಎನ್ನುವುದಕ್ಕೆ ಸಾಕಷ್ಟು ದಾಖಲೆಗಳು ಇವೆ.

ಇದನ್ನೂ ಓದಿ : Congress politics : ಕೇರಳದಲ್ಲಿ ಆನೆ ದಾಳಿಗೆ ಬಲಿಯಾದ ವ್ಯಕ್ತಿಗೆ ಕರ್ನಾಟಕದಿಂದ 15 ಲಕ್ಷ ರೂ. ಪರಿಹಾರ!

ಇದು ಬೇಲೂರಿನಲ್ಲಿ ಸೆರೆಯಾದ ಮಕ್ನಾ

ವಯನಾಡಿನಲ್ಲಿ ಅನಾಹುತವನ್ನು ಸೃಷ್ಟಿಸಿರುವ ಈ ಆನೆ 2023ರ ನವೆಂಬರ್‌ನಲ್ಲಿ ಹಾಸನ ಜಿಲ್ಲೆಯಲ್ಲಿ ಹಲವು ಅನಾಹುತಗಳನ್ನು ಸೃಷ್ಟಿಸಿದ ಆನೆಯಾಗಿದೆ. ಅದನ್ನು ಅಂದು ಹಾಸನ ಜಿಲ್ಲೆಯ ಬೇಲೂರಿನಲ್ಲಿ ವಶಕ್ಕೆ ಪಡೆದು ಬಂಡೀಪುರ ಹುಲಿ ಅಭಯಾರಣ್ಯಕ್ಕೆ ಬಿಡಲಾಗಿತ್ತು. ಜತೆಗೆ ಅದರ ಚಲನವಲನಗಳನ್ನು ಗಮನಿಸಲು ರೇಡಿಯೊ ಕಾಲರ್‌ಗಳನ್ನು ಕೂಡಾ ಅಳವಡಿಸಲಾಗಿತ್ತು.

ಸುಮಾರು ಎರಡು ತಿಂಗಳ ಬಳಿಕ ಇದೇ ಆನೆ ವಯನಾಡಿನಲ್ಲಿ ಕಾಣಿಸಿಕೊಂಡಿತ್ತು. ಅಂದರೆ ಕರ್ನಾಟಕದ ಗಡಿಯನ್ನು ದಾಟಿ ಅದು ಕೇರಳದ ಭಾಗಕ್ಕೆ ಹೋಗಿತ್ತು. ಅಲ್ಲಿ ದಾಳಿ ನಡೆಸಿ ಮರಳಿ ಕರ್ನಾಟಕದ ಗಡಿಯನ್ನೇ ಪ್ರವೇಶ ಮಾಡಿದೆ. ಕಳೆದ 10 ದಿನಗಳಿಂದ ಈ ಆನೆಗಾಗಿ ಗಡಿ ಭಾಗದಲ್ಲಿ ಹುಡುಕಾಟ ನಡೆಯುತ್ತಿದೆ. ಈಗಲೂ ಅದು ಕರ್ನಾಟಕದ ಗಡಿಯೊಳಗೇ ಇದೆ ಎನ್ನಲಾಗಿದೆ. ಕರ್ನಾಟಕದ ಆನೆ ದಾಳಿಗೆ ಸಂಬಂಧಿಸಿ ಈ ಭಾಗದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ. ಇದನ್ನು ಮಾನವೀಯ ನೆಲೆಯಿಂದ ಪರಿಗಣಿಸಿ ಪರಿಹಾರ ನೀಡುವಂತೆ ವಯನಾಡ್‌ ಸಂಸದರಾಗಿರುವ ರಾಹುಲ್‌ ಗಾಂಧಿ ಕರ್ನಾಟಕ ಸರ್ಕಾರಕ್ಕೆ ಮನವಿ ಮಾಡಿದ್ದರು. ಅದನ್ನು ಪರಿಗಣಿಸಿ ಅರಣ್ಯ ಇಲಾಖೆ ಕರ್ನಾಟಕದಲ್ಲಿ ಆನೆ ದಾಳಿ ಸಾವಿಗೆ ನೀಡುವ ಪರಿಹಾರವನ್ನು ಕೇರಳದ ವ್ಯಕ್ತಿಗೂ ನೀಡಿದೆ.

ಆನೆಗಳಿಗೆ ಗಡಿ ಇಲ್ಲ ಎಂದು ವಾದಿಸಿದ್ದ ಈಶ್ವರ ಖಂಡ್ರೆ

ಆನೆಗಳ ವಿಚಾರದಲ್ಲಿ ಅವುಗಳಿಗೆ ಗಡಿ ಇಲ್ಲ, ಕರ್ನಾಟಕದ ಆನೆ, ತಮಿಳುನಾಡಿನ ಆನೆ ಎಂಬ ಲೆಕ್ಕವಿಲ್ಲ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ವಾದಿಸಿದ್ದರು. ಇದೇ ವಾದವನ್ನು ಆರಂಭದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರೂ ಮುಂದಿಟ್ಟಿದ್ದರು. ಆದರೆ, ಕೊನೆಗೆ ರಾಹುಲ್‌ ಗಾಂಧಿ ಅವರೇ ಈ ವಿಚಾರವನ್ನು ಪರಿಗಣಿಸುವಂತೆ ಮನವಿ ಮಾಡಿದ್ದರಿಂದ ಅವರು ಪರಿಹಾರ ನೀಡಲು ಮುಂದಾದರು ಎನ್ನಲಾಗಿದೆ.

ದೇಶದಲ್ಲೇ ಅತಿ ಹೆಚ್ಚು ಆನೆಗಳಿರುವುದು ಕರ್ನಾಟಕದಲ್ಲಿ

ದೇಶದಲ್ಲಿ ಒಟ್ಟು 30000ಕ್ಕೂ ಅಧಿಕ ಆನೆಗಳಿವೆ. ಆದರೆ, ಅತಿ ಹೆಚ್ಚು ಆನೆಗಳಿರುವುದು ಕರ್ನಾಟಕ ರಾಜ್ಯದಲ್ಲಿ. ಕರ್ನಾಟಕದಲ್ಲಿ ಪ್ರಸಕ್ತ 6395 ಆನೆಗಳಿವೆ. ಎರಡನೇ ಅತಿ ಹೆಚ್ಚು ಸಂಖ್ಯೆಯ ಆನೆಗಳಿರುವುದು ಅಸ್ಸಾಂನಲ್ಲಿ (5719), ಕೇರಳದಲ್ಲಿ 3054, ತಮಿಳುನಾಡಿನಲ್ಲಿ 2961 ಆನೆಗಳಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading
Advertisement
Latest18 hours ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

ಚಿತ್ರದುರ್ಗ20 hours ago

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

Latest21 hours ago

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

Latest22 hours ago

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

ಪ್ರಮುಖ ಸುದ್ದಿ2 days ago

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್‌ : ನಾಳೆಯೇ ಪ್ರಮಾಣವಚನ ಸಾಧ್ಯತೆ

Latest2 days ago

ರಾಜ್ಯಪಾಲರ ಭೇಟಿಗೆ ವಿಜಯ್‌ :ವಿಸಿಕೆ ಬೆಂಬಲ ಬಹುತೇಕ ಫೈನಲ್‌?

Latest2 days ago

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ

Rakshit Shetty Richard Anthony Produce By Hombale
ದೇಶ3 days ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ3 days ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ3 days ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌