Money Guide : ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಹೀಗೆ ಹೂಡಿಕೆ ಮಾಡಿ - Vistara News

ವಾಣಿಜ್ಯ

Money Guide : ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಹೀಗೆ ಹೂಡಿಕೆ ಮಾಡಿ

ಮಕ್ಕಳ ಭವಿಷ್ಯಕ್ಕಾಗಿ ದೊಡ್ಡ( Money Guide) ಮೊತ್ತದ ಉಳಿತಾಯ ಮತ್ತು ಹೂಡಿಕೆ ಅಗತ್ಯವಾಗುತ್ತದೆ. ಇಲ್ಲಿದೆ ವಿವರ,

VISTARANEWS.COM


on

cash count
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪೋಷಕರ ಆದಾಯದಲ್ಲಿ ಮಕ್ಕಳ ಭವಿಷ್ಯದ ಅಗತ್ಯಗಳಿಗೆ ದೊಡ್ಡ ಪಾಲು ಹೋಗುತ್ತದೆ. ( Money Guide) ಉನ್ನತ ಶಿಕ್ಷಣದ ಜತೆಗೆ ಮಕ್ಕಳ ವಿವಾಹಕ್ಕೂ ಖರ್ಚು ವೆಚ್ಚವಾಗುತ್ತದೆ. ಹೀಗಾಗಿ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಹಣಕಾಸು ಪ್ಲಾನ್‌ ಮಾಡೋದು ಹೇಗೆ? ವಿಸ್ತಾರ ಮನಿಪ್ಲಸ್‌ನಲ್ಲಿ ಈ ಬಗ್ಗೆ ನಾಲೆಡ್ಜ್‌ ಬೆಲ್‌ ಸಿಇಒ ವಿನೋದ್‌ ತಂತ್ರಿ ಅವರು ವಿವರಿಸಿದ್ದಾರೆ.

ಮಕ್ಕಳ ಭವಿಷ್ಯದ ಅಗತ್ಯತೆಗಳು ಹಲವು ಆಯಾಮಗಳನ್ನು ಒಳಗೊಂಡಿವೆ. ಆದ್ದರಿಂದ ಆದ್ಯತೆಯನ್ನು ಮಾಡಿಕೊಳ್ಳುವುದು ಮುಖ್ಯ. ಮಕ್ಕಳಿಗೆ ಬೈಕ್‌ ಕೊಡಿಸುವುದು ಮುಖ್ಯವೇ, ಅವರ ಶಿಕ್ಷಣ ಮುಖ್ಯವೇ ಎಂದು ಯೋಚಿಸಬೇಕು. ಇವತ್ತಿನ ದಿನಗಳಲ್ಲಿ ಮಕ್ಕಳ ಶಿಕ್ಷಣಕ್ಕೆ ದೊಡ್ಡ ಮೊತ್ತ ಹೋಗುತ್ತದೆ. ಆದ್ದರಿಂದ ಮೊದಲು ಆದ್ಯತೆ ಕೊಡಬೇಕು. ಬಳಿಕ ಹಣಕಾಸು ಪ್ಲಾನ್‌ ಮಾಡಬೇಕು. ಇವತ್ತು ಮಕ್ಕಳು ಹುಟ್ಟುವುದಕ್ಕಿಂತ ಮೊದಲೇ ಹಣಕಾಸು ಯೋಜನೆ ಮಾಡುವ ಪರಿಸ್ಥಿತಿ ಇದೆ. ಆದ್ದರಿಂದ ಆದಷ್ಟು ಬೇಗ ಪ್ಲಾನಿಂಗ್‌ ಮಾಡುವುದು ಉತ್ತಮ.

ಮ್ಯೂಚುವಲ್‌ ಫಂಡ್‌ಗಳಲ್ಲಿ ಚಿಲ್ಡ್ರೆನ್ಸ್‌ ಪ್ಲಾನ್‌ ಇದೆ. ವಿಮೆಯಲ್ಲೂ ಚಿಲ್ಡ್ರೆನ್ಸ್‌ ಪ್ಲಾನ್‌ ಇದೆ. ಸುಕನ್ಯಾ ಸಮೃದ್ಧಿ ಯೋಜನೆ ಇದೆ. ಆದರೆ ಚಿಲ್ಡ್ರೆನ್ಸ್‌ ಪ್ಲಾನ್‌ ಎಂಬ ಹೆಸರಿದ್ದ ತಕ್ಷಣ ವಿಮೆ ಉತ್ಪನ್ನದಲ್ಲಿ ಹೂಡಿಕೆ ಮಾಡಬೇಕೆಂದಿಲ್ಲ. ಪೋಷಕರಿಗೆ ಟರ್ಮ್‌ ವಿಮೆ ಸೂಕ್ತ. ಮಕ್ಕಳಿಗೆ ಇತರ ಆಯ್ಕೆಯನ್ನು ಪರಿಗಣಿಸಬಹುದು.

ಮಕ್ಕಳ ಭವಿಷ್ಯಕ್ಕಾಗಿ ದೀರ್ಘಕಾಲೀನ ಹೂಡಿಕೆ ಮಾಡುವುದರಿಂದ ಸಾಕಷ್ಟು ಟೈಮ್‌ ಸಿಗುತ್ತದೆ. ಈಕ್ವಿಟಿ ಮ್ಯೂಚುವಲ್‌ ಫಂಡ್‌ ಈ ನಿಟ್ಟಿನಲ್ಲಿ ಸಹಕಾರಿಯಾಗಲಿದೆ ಎನ್ನುತ್ತಾರೆ ವಿನೋದ್‌ ತಂತ್ರಿ. ಪೋಷಕರಿಗೆ ಟರ್ಮ್‌ ಪ್ಲಾನ್‌ ಪಾಕೆಟ್‌ ಫ್ರೆಂಡ್ಲಿಯಾಗಿರುತ್ತದೆ. ವರ್ಷಕ್ಕೆ 30-40 ಸಾವಿರ ವೆಚ್ಚದಲ್ಲಿ ಒಂದು ಕೋಟಿ ರೂ. ಟರ್ಮ್‌ ಇನ್ಷೂರೆನ್ಸ್‌ ಸಿಗುತ್ತದೆ. ಆರೋಗ್ಯ ವಿಮೆಯನ್ನೂ ಹೊಂದಿರಬೇಕು. ಏಕೆಂದರೆ ಮಕ್ಕಳ ಭವಿಷ್ಯಕ್ಕೆ ನೀವು ಇಡುವ ಹಣದ ರಕ್ಷಣೆಗೆ ಹೆಲ್ತ್‌ ಇನ್ಷೂರೆನ್ಸ್‌ ಅಗತ್ಯ. ಇಲ್ಲದಿದ್ದರೆ ಯಾರಿಗಾದರೂ ಅನಾರೋಗ್ಯವಾದಾಗ ಮಕ್ಕಳ ಭವಿಷ್ಯಕ್ಕೆ ಇಟ್ಟಿದ್ದ ಹಣವನ್ನು ತೆಗೆಯುವ ಸಾಧ್ಯತೆ ಇರುತ್ತದೆ.

ಮಕ್ಕಳ ಫೈನಾನ್ಸ್‌ ಪ್ಲಾನ್‌ ಸಲುವಾಗಿ ಸೈಟಿನಲ್ಲಿ ಹೂಡಿಕೆ ಉತ್ತಮವೇ? ಸಾಂಪ್ರದಾಯಿಕವಾಗಿ ರಿಯಲ್‌ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡುವುದು ಸಹಜ. ಮೊದಲು ಹೆಚ್ಚು ಆಯ್ಕೆ ಇಲ್ಲದಿದ್ದರಿಂದ ರಿಯಾಲ್ಟಿಯಲ್ಲಿ ಜನ ಹೂಡಿಕೆ ಮಾಡುತ್ತಿದ್ದರು. ಆದರೆ ಈಗ ಹಲವಾರು ಆಯ್ಕೆಗಳು ಇರುವುದರಿಂದ ನಿಮ್ಮ ಅಗತ್ಯಕ್ಕೆ ತಕ್ಕಂತೆ ನಿರ್ಧರಿಸುವುದು ಉತ್ತಮ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

Money Guide: ಬ್ಯಾಂಕ್‌ ಖಾತೆ, ಮ್ಯೂಚುವಲ್‌ ಫಂಡ್‌ ಹೊಂದಿದ್ದೀರಾ? ಹಾಗಾದರೆ ಮೊದಲು ಈ ಕೆಲಸ ಮಾಡಿ

Money Guide: ಬ್ಯಾಂಕ್‌ ಖಾತೆ ಇರಲಿ, ಮ್ಯೂಚುವಲ್‌ ಫಂಡ್‌ ಇರಲಿ ನಾಮಿನಿಯನ್ನು ಹೆಸರಿಸುವುದು ಬಹಳ ಮುಖ್ಯ. ಇದರಿಂದ ಅನೇಕ ಗೊಂದಲ, ಸಂಘರ್ಷವನ್ನು ತಪ್ಪಿಸಬಹುದು. ಖಾತೆದಾರರ ಮರಣದ ನಂತರ ಸ್ವತ್ತು ಯಾರುಗೆ ಸೇರಬೇಕೆಂಬುದು ಸ್ಪಷ್ಟವಾಗಿ ಉಲ್ಲೇಖವಾಗಿರುವ ಕಾರಣ ಕೊನೆಯ ಕ್ಷಣದ ಗೊಂದಲ ಇದರಿಂದ ಇಲ್ಲವಾಗುತ್ತದೆ. ಇಷ್ಟು ಮಾತ್ರವಲ್ಲ ಇನ್ನೂ ಅನೇಕ ಪ್ರಯೋಜನಗಳಿವೆ. ಅವು ಯಾವುವು ಎನ್ನುವುದರ ವಿವರಕ್ಕಾಗಿ ಈ ಲೇಖನ ಓದಿ.

VISTARANEWS.COM


on

Money Guide
Koo

ಬೆಂಗಳೂರು: ಆರ್ಥಿಕವಾಗಿ ಸದೃಢವಾಗುವುದು, ತಮ್ಮ ಕಾಲ ಮೇಲೆ ತಾವು ನಿಂತುಕೊಳ್ಳುವುದು ಪ್ರತಿಯೊಬ್ಬನ ಕನಸು. ಇದಕ್ಕಾಗಿ ಸೂಕ್ತ ಹಣಕಾಸಿನ ಯೋಜನೆ ರೂಪಿಸಿಕೊಳ್ಳುವುದು ಅತ್ಯಗತ್ಯ. ಅಲ್ಲದೆ ನಿಮ್ಮ ಸ್ವತ್ತುಗಳನ್ನು ರಕ್ಷಿಸುವುದು ಮತ್ತು ಅಗತ್ಯವಿದ್ದಾಗ ನಿಮ್ಮ ಪ್ರೀತಿಪಾತ್ರರಿಗೆ ಆರ್ಥಿಕ ನೆರವು ಲಭಿಸುವುದನ್ನು ಖಚಿತಪಡಿಸಿಕೊಳ್ಳುವುದೂ ಬಹಳ ಮುಖ್ಯವಾಗುತ್ತದೆ. ಹಾಗಾದರೆ ಇದಕ್ಕೇನು ಮಾಡಬೇಕು ಎನ್ನುವ ಪ್ರಶ್ನೆ ಮೂಡುವುದು ಸಹಜ. ಇದಕ್ಕೆ ಉತ್ತರ ಮತ್ತು ಸರಳ ಪರಿಹಾರ ಮಾರ್ಗವೆಂದರೆ ನಿಮ್ಮ ಬ್ಯಾಂಕ್ ಖಾತೆ ಮತ್ತು ಮ್ಯೂಚುವಲ್ ಫಂಡ್ ಖಾತೆಗೆ ನಾಮಿನಿಯನ್ನು ಹೆಸರಿಸುವುದು. ಹೌದು, ಈ ಕ್ರಮವು ಹಲವು ಪ್ರಯೋಜನಗಳನ್ನು ನೀಡುವ ಜತೆಗೆ ಸ್ವತ್ತಿಗೆ ಸೂಕ್ತ ರಕ್ಷಣೆಯನ್ನೂ ಒದಗಿಸುತ್ತದೆ. ಖಾತೆದಾರರ ಮರಣದ ನಂತರ ಸ್ವತ್ತುಗಳ ತಡೆರಹಿತ ವರ್ಗಾವಣೆ ಇದರಿಂದ ಸಾಧ್ಯವಾಗುತ್ತದೆ. ಇಂದಿನ ಮನಿಗೈಡ್‌ (Money Guide)ನಲ್ಲಿ ಈ ಕುರಿತಾದ ವಿವರಗಳಿವೆ.

ನಾಮಿನಿಯನ್ನು ಹೆಸರಿಸುವುದರಿಂದ ಲಭಿಸುವ ಪ್ರಯೋಜನಗಳು

ಗೊಂದಲ ರಹಿತವಾಗಿ ಸ್ವತ್ತುಗಳ ವರ್ಗಾವಣೆ

ಖಾತೆಗೆ ನಾಮಿನಿಯನ್ನು ಹೆಸರಿಸುವುದರಿಂದ ಲಭಿಸುವ ಅತಿ ಮುಖ್ಯ ಪ್ರಯೋಜನವಿದು. ಬ್ಯಾಂಕ್‌ ಖಾತೆಗೆ ನಾಮಿನಿ ಹೆಸರನ್ನು ನಿರ್ದೇಶಿಸುವುದರಿಂದ ಖಾತೆ ಹೊಂದಿರುವಾತ ಆಕಸ್ಮಿಕವಾಗಿ ಮರಣ ಹೊಂದಿದರೆ ದೀರ್ಘ ಕಾನೂನು ಪ್ರಕ್ರಿಯೆಯ ಅಗತ್ಯವಿಲ್ಲದೆ ಬ್ಯಾಂಕ್ ಖಾತೆಯ ಬಾಕಿಯನ್ನು ನಾಮನಿರ್ದೇಶಿತರಿಗೆ (ನಾಮಿನಿ) ವರ್ಗಾಯಿಸಬಹುದು. ಈ ಮೂಲಕ ನಾಮಿನಿಯು ಸರಳ ಮತ್ತು ವೇಗವಾಗಿ ಹಣವನ್ನು ಪಡೆಯಬಹುದು.

ಅದೇ ರೀತಿ ಮ್ಯೂಚುವಲ್‌ ಫಂಡ್‌ನಲ್ಲಿಯೂ ನಾಮಿನಿಯನ್ನು ಹೆಸರಿಸುವುದರಿಂದ ಖಾತೆಯಲ್ಲಿರುವ ಮೊತ್ತವನ್ನು ಖಾತೆದಾರನ ಮರಣದ ನಂತರ ನೇರವಾಗಿ ನಾಮಿನಿಗೆ ವರ್ಗಾಯಿಸಬಹುದು. ಹೀಗಾಗಿ ಇದು ಖಾತೆದಾರರ ಮರಣದ ಸಂದರ್ಭದಲ್ಲಿ ಅವರ ಪ್ರೀತಿಪಾತ್ರರಿಗೆ ನೀಡಬಹುದುದಾದ ಮೌಲ್ಯಯುತ ಉಡುಗೊರೆ ಎನಿಸಿಕೊಂಡಿದೆ.

ಕಾನೂನು ತೊಡಕು, ಗೊಂದಲಗಳ ನಿವಾರಣೆ

ನಾಮನಿರ್ದೇಶನವು ಸಂಭಾವ್ಯ ವಾರಸುದಾರರ ನಡುವಿನ ಕಾನೂನು ವಿವಾದಗಳನ್ನು ತಪ್ಪಿಸಲು ಸಹಾಯ ಮಾಡುತ್ತದೆ. ಖಾತೆದಾರರು ಮುಂದೆ ತಮ್ಮ ಆಸ್ತಿಗಳನ್ನು ಯಾರಿಗೆ ನೀಡಲು ಉದ್ದೇಶಿಸಿದ್ದಾರೆ ಎನ್ನುವ ಅಂಶ ಇದರಿಂದ ಯಾವುದೇ ಗೊಂದಲಗಳಿಲ್ಲದೆ ತಿಳಿದು ಬರುತ್ತದೆ. ಈ ಮೂಲಕ ಕುಟುಂಬ ಸದಸ್ಯರ ನಡುವೆ ಸಂಭವಿಸಬಹುದಾದ ಸಂಘರ್ಷಗಳನ್ನು ಇದು ತಡೆಯುತ್ತದೆ. ಜತೆಗೆ ತಕ್ಷಣವೇ ಹಣವನ್ನು ಹಿಂಪಡೆಯಬಹುದಾದ ಕಾರಣ ಆರ್ಥಿಕ ಸಂಕಷ್ಟದ ಸಮಯದಲ್ಲಿ ಇದು ಕೈ ಹಿಡಿಯುತ್ತದೆ. ಕೋರ್ಟ್‌, ಕಚೇರಿ ಎಂದು ಅಲೆದಾಡುವ ಪ್ರಮೇಯವೇ ಕಂಡು ಬರುವುದಿಲ್ಲ.

ಅವಲಂಬಿತರಿಗೆ ಆರ್ಥಿಕ ಸುರಕ್ಷೆ

ನಾಮನಿರ್ದೇಶಿತರನ್ನು ಹೆಸರಿಸುವುದರಿಂದ ಅವಲಂಬಿತರು ಅಥವಾ ಉದ್ದೇಶಿತ ಫಲಾನುಭವಿಗಳು ತ್ವರಿತವಾಗಿ ಆರ್ಥಿಕ ಬೆಂಬಲವನ್ನು ಪಡೆಯುತ್ತಾರೆ. ಖಾತೆದಾರರ ನಿಧನದ ನಂತರ ತಕ್ಷಣದ ಹಣಕಾಸಿನ ಅಗತ್ಯಗಳನ್ನು ಪೂರೈಸಲು ಇದು ನಿರ್ಣಾಯಕವಾಗಿದೆ. ಒಂದು ವೇಳೆ ನಾಮನಿರ್ದೇಶಿತರು ಅಪ್ರಾಪ್ತರಾಗಿದ್ದರೆ ಅವರು ಪ್ರಾಪ್ತ ವಯಸ್ಕರಾಗುವ ತನಕ ಅವರ ಪೋಷಕರು ಇದನ್ನು ನಿಭಾಯಿಸಬಹುದು. ಇದರಿಂದ ಹಣ ದುರುಪಯೋಗವಾಗುವುದನ್ನು ತಡೆಯಬಹುದು.

ಖರ್ಚು ಕಡಿತ

ನಾಮಿನಿಯನ್ನು ಹೆಸರಿಸುವುದರಿಂದ ಲಭಿಸುವ ಇನ್ನೊಂದು ಮುಖ್ಯ ಪ್ರಯೋಜನ ಎಂದರೆ ಖರ್ಚು ಕಡಿತ. ಸ್ಪಷ್ಟವಾಗಿ ಹಣ ಯಾರಿಗೆ ಸೇರಬೇಕೆಂದು ಉಲ್ಲೇಖಿಸುವುದರಿಂದ ಕೋರ್ಟ್‌ ಅಲೆದಾಟ ಇದರಿಂದ ತಪ್ಪುತ್ತದೆ. ಈ ಮೂಲಕ ವಕೀಲರ ಫೀಸ್‌ ಸೇರಿದಂತೆ ಅನೇಕ ಖರ್ಚುಗಳನ್ನು ಉಳಿಸಬಹುದು.

ಬದಲಾವಣೆಯನ್ನೂ ಮಾಡಬಹುದು

ಒಂದು ವೇಳೆ ನಾಮಿನಿಯ ಹೆಸರನ್ನು ಬದಲಾಯಿಸಬೇಕಂದು ಖಾತೆದಾರರಿಗೆ ಅನಿಸಿದರೆ ಅದಕ್ಕೆ ಬೇಕಾದ ಆಯ್ಕೆಯೂ ಲಭ್ಯ. ಕೆಲವು ಸ್ವತ್ತುಗಳನ್ನು ಉದ್ದೇಶಿತರಿಗೆ ಪರಿಣಾಮಕಾರಿಯಾಗಿ ವರ್ಗಾಯಿಸಲಾಗುತ್ತಿದೆ ಎನ್ನುವುದನ್ನು ಖಚಿತಪಡಿಸಿಕೊಳ್ಳುವ ಮೂಲಕ ಇದು ವಿಲ್‌ ಮತ್ತು ಟ್ರಸ್ಟ್‌ನಂತೆ ಕಾರ್ಯ ನಿರ್ವಹಿಸುತ್ತದೆ.

ಇದನ್ನೂ ಓದಿ: Money Guide: 1 ಕೋಟಿ ರೂ. ದುಡಿಯಬೇಕೆ? ಈ ಅಪಾಯ ರಹಿತ ಯೋಜನೆಯಲ್ಲಿ ಹೂಡಿಕೆ ಮಾಡಿ

ಒಟ್ಟಿನಲ್ಲಿ ನಿಮ್ಮ ಬ್ಯಾಂಕ್ ಮತ್ತು ಮ್ಯೂಚುವಲ್ ಫಂಡ್ ಖಾತೆಗಳಿಗೆ ನಾಮಿನಿಯನ್ನು ಸೇರಿಸುವುದರಿಂದ ನಿಮ್ಮ ಸ್ವತ್ತುಗಳ ಸುಗಮ ಮತ್ತು ಪರಿಣಾಮಕಾರಿ ವರ್ಗಾವಣೆಯನ್ನು ಖಚಿತಪಡಿಸಿಕೊಳ್ಳಬಹುದು. ಮಾತ್ರವಲ್ಲ ಸಂಭಾವ್ಯ ಕಾನೂನು ತೊಡಕುಗಳನ್ನು ನಿವಾರಿಸಿ ಪ್ರೀತಿಪಾತ್ರರಿಗೆ ಆರ್ಥಿಕ ಭದ್ರತೆಯನ್ನು ಒದಗಿಸಬಹುದು ಎನ್ನುತ್ತಾರೆ ಆರ್ಥಿಕ ತಜ್ಞರು.

Continue Reading

ಕೃಷಿ

Success Story: ಎರಡೇ ತಿಂಗಳಲ್ಲಿ ಆನ್ ಲೈನ್ ಮೂಲಕ 1,800 ಕೆ.ಜಿ. ಮಾವು ಮಾರಿದ ರಾಯಚೂರಿನ ರೈತ!

ರಾಯಚೂರಿನ ಗುಡಿಪಾಡು ಆಂಜನೇಯ (Success Story) ಅವರು ಆನ್‌ಲೈನ್‌ನಲ್ಲಿ ಎರಡು ತಿಂಗಳಲ್ಲಿ 1,800 ಕೆ.ಜಿ. ಮಾವು ಮಾರಾಟ ಮಾಡಿ ಸುದ್ದಿಯಲ್ಲಿದ್ದಾರೆ. ಡಿಪ್ಲೊಮಾ ಪೂರ್ಣಗೊಳಿಸಿರುವ ಆಂಜನೇಯ ಅವರು ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಏಳು ವರ್ಷಗಳ ಕಾಲ ಕೆಲಸ ಮಾಡಿ ಈಗ ಸಂಪೂರ್ಣವಾಗಿ ಕೃಷಿಯಲ್ಲಿ ತೊಡಗಿಕೊಂಡಿದ್ದಾರೆ. ಮಾವು ಮಾರಾಟದ ಇವರ ಸಕ್ಸೆಸ್ ಸ್ಟೋರಿ ಇಲ್ಲಿದೆ.

VISTARANEWS.COM


on

By

Success Story
Koo

ಕೃಷಿ ಕೆಲಸಗಳಲ್ಲಿ ಕೇವಲ ಕಷ್ಟ ಪಟ್ಟು ದುಡಿದರೆ ಸಾಲದು, ಬುದ್ದಿವಂತಿಕೆಯೂ ಬೇಕು. ಆಗ ಮಾತ್ರ ಉತ್ತಮ ಆದಾಯ ಗಳಿಸಬಹುದು ಎಂಬುದನ್ನು ರೈತನೊಬ್ಬ (Success Story) ಸಾಬೀತು ಮಾಡಿದ್ದಾನೆ. ಈ ರೈತ ಬೇರೆಯಾರೂ ಅಲ್ಲ ನಮ್ಮ ಕರ್ನಾಟಕದವರೇ (karnataka) ಆಗಿದ್ದಾರೆ. ಮಾವಿನ ಕೃಷಿ (Mango Cultivation) ಮಾಡಿ ರಾಯಚೂರಿನ (Raichur) ಗುಡಿಪಾಡು ಆಂಜನೇಯ (Gudipadu Anjaneya) ಅವರು ಈಗ ಎಲ್ಲೆಡೆ ಸುದ್ದಿ ಮಾಡುತ್ತಿದ್ದಾರೆ. ಗುಡಿಪಾಡು ಆಂಜನೇಯ ಅವರು ಆನ್‌ಲೈನ್‌ನಲ್ಲಿ ಎರಡು ತಿಂಗಳಲ್ಲಿ 1,800 ಕೆ.ಜಿ. ಮಾವು ಮಾರಾಟ ಮಾಡಿ ಸುದ್ದಿಯಾಗುತ್ತಿದ್ದಾರೆ. ಡಿಪ್ಲೊಮಾ ಪೂರ್ಣಗೊಳಿಸಿರುವ ಆಂಜನೇಯ ಅವರು ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಏಳು ವರ್ಷಗಳ ಕಾಲ ಕೆಲಸ ಮಾಡಿದ್ದರು. ಬಳಿಕ ಕೃಷಿಯಲ್ಲಿ ಸಂಪೂರ್ಣವಾಗಿ ತೊಡಗಿಕೊಂಡರು.

Success Story

ತೋಟಗಾರಿಕೆ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಅವರು ಹಣ್ಣು, ತರಕಾರಿ, ಹೂವು, ಅಲಂಕಾರಿಕ ಸಸ್ಯಗಳನ್ನು ಬೆಳೆಯುವ ವಿಜ್ಞಾನ ಮತ್ತು ಕಲೆಯನ್ನು ಕಲಿತು ಆನ್‌ಲೈನ್ ಪೋರ್ಟಲ್ ಮೂಲಕ ಮಾವಿನ ಹಣ್ಣುಗಳನ್ನು ಮಾರಾಟ ಮಾಡುತ್ತಿದ್ದಾರೆ. ಆಂಜನೇಯ ಅವರು ಆನ್‌ಲೈನ್ ನಲ್ಲಿ ಗ್ರಾಹಕರಿಗೆ ಮಾರಾಟ ಮಾಡುವ ಮಾವಿನ ತಳಿಗಳಲ್ಲಿ ಪ್ರಮುಖವಾದವು ಬನಗನಪಲ್ಲಿ, ಮಲ್ಲಿಕಾ ಮತ್ತು ಕೇಸರಿ ಮಾವುಗಳು. ಇವರು ತಮ್ಮ ಮಾವಿನ ಹಣ್ಣುಗಳ ಮಾರಾಟ ಜಾಲವನ್ನು ರಾಯಚೂರಿನ ಹೊರಗೂ ವಿಸ್ತರಿಸಿದ್ದಾರೆ. ಬೆಂಗಳೂರಿನ ಜಯನಗರ, ವೈಟ್‌ಫೀಲ್ಡ್ ಮತ್ತು ಲಾಲ್ ಬಾಗ್‌ನ ಎಂಇಎಸ್ ಮೈದಾನದಲ್ಲಿ ಮಾವು ಮೇಳದಲ್ಲಿ ಪಾಲ್ಗೊಂಡಿರುವ ಇವರು, ಆನ್ ಲೈನ್ ಮೂಲಕ ರಾಜ್ಯದ ಮೂಲೆಮೂಲೆ ಮಾತ್ರವಲ್ಲ ಹೊರರಾಜ್ಯ, ವಿದೇಶಗಳಿಗೂ ಹಣ್ಣುಗಳನ್ನು ಮಾರಾಟ ಮಾಡುತ್ತಿದ್ದಾರೆ. ವಿದೇಶಗಳೊಂದಿಗೆ ವ್ಯಾಪಾರ ಸಂಬಂಧಗಳನ್ನು ರೂಪಿಸುವ ಗುರಿ ಹೊಂದಿರುವ ಅವರು ಇತರ ಕೃಷಿಕರಿಗೂ ಪ್ರೇರಣೆಯಾಗಿದ್ದಾರೆ.

ಸಾಕಷ್ಟು ಶ್ರಮ

ಆಂಜನೇಯ ತಮ್ಮ ವ್ಯವಹಾರದ ಆರಂಭದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲು ಸಾಕಷ್ಟು ಶ್ರಮಿಸಿದ್ದಾರೆ. ಅವರು ಗ್ರಾಹಕರ ವಿಳಾಸವನ್ನು ಆನ್‌ಲೈನ್‌ನಲ್ಲಿ ಸಂಗ್ರಹಿಸಿ, ಪ್ರತಿಯೊಂದು ಹಂತವನ್ನು ಅನುಸರಿಸಿ, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಅದನ್ನು ಅವರ ಮನೆ ಬಾಗಿಲಿಗೆ ತಲುಪಿಸುವ ಮಾರ್ಗಗಳನ್ನು ಹುಡುಕುತ್ತಿದ್ದರು. ಮಾವಿನ ಹಣ್ಣುಗಳನ್ನು ಮಾರಾಟ ಮಾಡುವ ಮೊದಲು, ಆಂಜನೇಯ ಅವರು ಮೋಸಂಬಿ ಮತ್ತು ನಿಂಬೆಯನ್ನು ಮಾರುಕಟ್ಟೆ ಮತ್ತು ಆನ್‌ಲೈನ್‌ನಲ್ಲಿ ಮಾರಾಟ ಮಾಡುತ್ತಿದ್ದರು.

Mango Breeds

ಆನ್ ಲೈನ್ ಪೋರ್ಟಲ್ ಪ್ರಾರಂಭ

ಬಳಿಕ ಆಂಜನೇಯ ಅವರು ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಲಿಮಿಟೆಡ್ (KSMDMCL) ಅಂಚೆ ಇಲಾಖೆಯ ಸಹಯೋಗದೊಂದಿಗೆ ತಮ್ಮ ಪೋರ್ಟಲ್ ಅನ್ನು ಪ್ರಾರಂಭಿಸಿದರು. ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಲಿಮಿಟೆಡ್ ಪ್ರಾರಂಭಿಸಿರುವ ಕರ್ ಸಿರಿ ಮ್ಯಾಂಗೋಸ್ (https://www.karsirimangoes.karnataka.gov.in) ವೆಬ್‌ಸೈಟ್ 2022ರಲ್ಲಿ ವಿವಿಧ ಬಗೆಯ ಹಣ್ಣುಗಳಿಗಾಗಿ ಆರ್ಡರ್‌ಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿತು. ಈ‌ ವೆಬ್ ಸೈಟ್ ಮೂಲಕವೇ ಈ ರೈತ ಮಾವು ಮಾರಿ ಲಾಭ ಗಳಿಸುತ್ತಿದ್ದಾರೆ.

ಇದನ್ನೂ ಓದಿ: Mysore News: ಮೈಸೂರಿನಲ್ಲಿ ಪಾಲಿಕೆಯಿಂದ ನಿಷೇಧಿತ ಪ್ಲಾಸ್ಟಿಕ್‌ ವಶ; 1.61 ಲಕ್ಷ ರೂ. ದಂಡ

ಇದು ಗ್ರಾಹಕರ ಮನೆ ಬಾಗಿಲಿಗೆ ಹಣ್ಣುಗಳನ್ನು ತಲುಪಿಸುತ್ತದೆ. ಹಣ್ಣುಗಳ ಚಿತ್ರಗಳು ಮತ್ತು ಹೆಸರುಗಳ ಜೊತೆಗೆ ವೆಬ್‌ಸೈಟ್ ಮಾವಿನ ಸರಬರಾಜಿಗೆ ಕಾರಣರಾದ ರೈತರ ಹೆಸರು ಮತ್ತು ಸಂಖ್ಯೆಗಳನ್ನು ಸಹ ಪ್ರದರ್ಶಿಸುತ್ತದೆ. ಮಾವು ಬೆಳೆಗಾರರಿಗೆ ಈ ವೆಬ್‌ಸೈಟ್ ಆಶಾದಾಯಕವಾಗಿದೆ. ಇದನ್ನು ಬಳಸಿಕೊಂಡೇ ಆಂಜನೇಯ ಅವರು ಎರಡು ತಿಂಗಳಲ್ಲಿ 1,800 ಕೆ.ಜಿ. ಮಾವು ಮಾರಾಟ ಮಾಡಿದ್ದಾರೆ.

Continue Reading

ಕ್ರೀಡೆ

Yuvraj Singh : ಅಪಾರ್ಟ್​ಮೆಂಟ್ ವಿತರಣೆಯಲ್ಲಿ ಮೋಸ, ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ನೋಟಿಸ್​ ಕೊಟ್ಟ ಯುವರಾಜ್ ಸಿಂಗ್

Yuvraj Singh : ಈ ಸಂಸ್ಥೆಗಳು ಭರವಸೆ ನೀಡಿದಂತೆ ಸ್ವಾಧೀನದ ದೃಷ್ಟಿಯಿಂದ ಯೋಜನೆಗಳ ವಿತರಣೆಯನ್ನು ಸಹ ಸರಿಯಾದ ಸಮಯದಲ್ಲಿ ಪೂರೈಸಲಾಗಿಲ್ಲ ಎಂದು ಸಿಂಗ್ ಹೇಳಿದ್ದಾರೆ. ವಿಶೇಷವೆಂದರೆ, ಮಾಜಿ ಕ್ರಿಕೆಟ್ ತಾರೆ 2020 ರಲ್ಲಿ ದೆಹಲಿಯ ಹೌಜ್ ಖಾಸ್ ಪ್ರದೇಶದಲ್ಲಿ ವಸತಿ ಘಟಕವನ್ನು ಕಾಯ್ದಿರಿಸಿದ್ದರು.

VISTARANEWS.COM


on

Yuvraj Singh
Koo

ನವದೆಹಲಿ: ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್ ಯುವರಾಜ್ ಸಿಂಗ್ (Yuvraj Singh)​ ಅವರು ದೆಹಲಿ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ಎರಡು ಕಾನೂನು ನೋಟಿಸ್ ನೀಡಿದ್ದಾರೆ. ಈ ಸಂಸ್ಥೆಗಳು ನಡೆಸುವ ಯೋಜನೆಗಳಿಗೆ ಮೋಸದ ಪ್ರಚಾರ ಚಟುವಟಿಕೆಗಳ ಮೂಲಕ ಗೌಪ್ಯತೆ ಹಕ್ಕುಗಳ ಉಲ್ಲಂಘನೆ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಸಂಸ್ಥೆಗಳು ಭರವಸೆ ನೀಡಿದಂತೆ ಸ್ವಾಧೀನದ ದೃಷ್ಟಿಯಿಂದ ಯೋಜನೆಗಳ ವಿತರಣೆಯನ್ನು ಸಹ ಸರಿಯಾದ ಸಮಯದಲ್ಲಿ ಪೂರೈಸಲಾಗಿಲ್ಲ ಎಂದು ಸಿಂಗ್ ಹೇಳಿದ್ದಾರೆ. ವಿಶೇಷವೆಂದರೆ, ಮಾಜಿ ಕ್ರಿಕೆಟ್ ತಾರೆ 2020 ರಲ್ಲಿ ದೆಹಲಿಯ ಹೌಜ್ ಖಾಸ್ ಪ್ರದೇಶದಲ್ಲಿ ವಸತಿ ಘಟಕವನ್ನು ಕಾಯ್ದಿರಿಸಿದ್ದರು. ಯುವರಾಜ್ ಸಿಂಗ್ ಅವರನ್ನು ಪ್ರತಿನಿಧಿಸುವ ರಿಜ್ವಾನ್ ಲಾ ಅಸೋಸಿಯೇಟ್ಸ್ ಎಂಬ ಕಾನೂನು ಸಂಸ್ಥೆಯು ಯೋಜನೆಯ ವಿಳಂಬದಿಂದಾಗಿ ಉಂಟಾದ ಹಾನಿಯ ಕ್ಲೇಮ್​ನೊಂದಿಗೆ ನೋಟಿಸ್ ನೀಡಿದೆ.

ಇದನ್ನೂ ಓದಿ: Kavya Maran : ಸೋತಾಗ ಕಣ್ಣೀರು ಹಾಕಿದ ಕಾವ್ಯಾ ಮಾರನ್​, ​ ಡ್ರೆಸಿಂಗ್​ ರೂಮ್​ಗೆ ತೆರಳಿ ಆಟಗಾರರನ್ನೇ ನಗಿಸಿದರು; ಇಲ್ಲಿದೆ ವಿಡಿಯೊ

ಸಿಂಗ್ ಅವರಿಗೆ ಪ್ರೀಮಿಯಂ ಗುಣಮಟ್ಟದ ಅಪಾರ್ಟ್​ಮೆಂಟ್​ ಕೊಡುವೆ ಭರವಸೆ ನೀಡಲಾಗಿತ್ತು. ಆದರೆ ರಿಯಲ್ ಎಸ್ಟೇಟ್ ಕಡಿಮೆ ಗುಣಮಟ್ಟದ ಅಪಾರ್ಟ್​​ಮೆಂಟ್​ ಮಂಜೂರು ಮಾಡುವ ಮೂಲಕ ಮೋಸ ಮಾಡಿದೆ ಎಂದು ಆರೋಪಿಸಲಾಗಿದೆ. ವಿಶೇಷವೆಂದರೆ, ಈ ಯೋಜನೆ ಮೆಸರ್ಸ್ ಉಪ್ಪಲ್ ಹೌಸಿಂಗ್ ಪ್ರೈವೇಟ್ ಲಿಮಿಟೆಡ್​ ಸೇರಿದೆ. ಬೌದ್ಧಿಕ ಆಸ್ತಿ ಹಕ್ಕುಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮತ್ತು ಗೌಪ್ಯತೆ ಹಕ್ಕುಗಳ ಉಲ್ಲಂಘನೆಗಾಗಿ ಮೆಸರ್ಸ್ ಬ್ರಿಲಿಯಂಟ್ ಎಟೋಯಿಲ್ ಪ್ರೈವೇಟ್ ಲಿಮಿಟೆಡ್ ಎಂಬ ಮತ್ತೊಂದು ಸಂಸ್ಥೆಗೆ ಎರಡನೇ ನೋಟಿಸ್ ನೀಡಲಾಗಿದೆ.

ಈ ವಿವಾದವು ಮುಖ್ಯವಾಗಿ ವ್ಯಕ್ತಿತ್ವ ಹಕ್ಕುಗಳಿಗೆ ಸಂಬಂಧಿಸಿದಂತೆ ಬೌದ್ಧಿಕ ಆಸ್ತಿ ಹಕ್ಕುಗಳ ಉಲ್ಲಂಘನೆ ಮತ್ತು ಸೆಲೆಬ್ರಿಟಿಯ ಬ್ರಾಂಡ್ ಮೌಲ್ಯದ ದುರುಪಯೋಗಕ್ಕೆ ಸಂಬಂಧಿಸಿದೆ.

ಒಪ್ಪಂದವು ಕಳೆದ ವರ್ಷ ನವೆಂಬರ ನಲ್ಲಿ ಮುಕ್ತಾಯಗೊಂಡಿತ್ತು

ರಿಯಲ್ ಎಸ್ಟೇಟ್ ಸಂಸ್ಥೆ ಕೈಗೊಂಡ ಯೋಜನೆಗಳ ಪ್ರಚಾರ ಮತ್ತು ಅನುಮೋದನೆಗೆ ಸಂಬಂಧಿಸಿದಂತೆ ಸಂಬಂಧಿತ ಪಕ್ಷಗಳು ತಿಳಿವಳಿಕೆ ಒಪ್ಪಂದಕ್ಕೆ (ತಿಳಿವಳಿಕೆ ಒಪ್ಪಂದ) ಸಹಿ ಹಾಕಿರುವುದು ಅತ್ಯಗತ್ಯ. ಆದಾಗ್ಯೂ, ಈ ತಿಳಿವಳಿಕೆ ಒಪ್ಪಂದವು ಕಳೆದ ವರ್ಷ ನವೆಂಬರ್ 23 ರಂದು ಕೊನೆಗೊಂಡಿತು. ಅದರ ಹೊರತಾಗಿಯೂ, ಸಂಸ್ಥೆಯು ಯುವರಾಜ್ ಸಿಂಗ್ ಅವರ ಹೆಸರನ್ನು ಬಿಲ್ಬೋರ್ಡ್ ಜಾಹೀರಾತುಗಳ ಮೂಲಕ ಮತ್ತು ಯೋಜನಾ ಸ್ಥಳದಲ್ಲಿ ಬಳಸುವುದನ್ನು ಮುಂದುವರಿಸಿತ್ತು.

ಸಂಸ್ಥೆಯು ಸುದ್ದಿ ಲೇಖನಗಳ ಜೊತೆಗೆ ಅವರ ವ್ಯಕ್ತಿತ್ವವನ್ನು ತಮ್ಮ ಸಾಮಾಜಿಕ ಮಾಧ್ಯಮ ಅಭಿಯಾನಗಳಲ್ಲಿ ಬಳಸುವ ಮೂಲಕ ಉಲ್ಲಂಘನೆ ಮುಂದುವರಿಸಿತ್ತು. ಇದರಿಂದಾಗಿ ಕೃತಿಸ್ವಾಮ್ಯ, ಪ್ರಚಾರದ ಹಕ್ಕು ಮತ್ತು ವ್ಯಕ್ತಿತ್ವದ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಯುವರಾಜ್ ಸಿಂಗ್ ಆರೋಪಿಸಿದ್ದಾರೆ.

Continue Reading

ದೇಶ

Samsung Galaxy: ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎಫ್ 55 5ಜಿ ಸ್ಮಾರ್ಟ್‌ಫೋನ್ ರಿಲೀಸ್‌; ಏನಿದರ ವಿಶೇಷತೆ?

Samsung Galaxy: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆಗಿರುವ ಸ್ಯಾಮ್‌ಸಂಗ್, ಗ್ಯಾಲಕ್ಸಿ ಎಫ್ ಸರಣಿಯ ಅತ್ಯಂತ ಪ್ರೀಮಿಯಂ ಸ್ಮಾರ್ಟ್‌ಫೋನ್ ಗ್ಯಾಲಕ್ಸಿ ಎಫ್ 55 5ಜಿ ಅನ್ನು ಇಂದು ಬಿಡುಗಡೆ ಮಾಡಿದ್ದು, ನಯವಾಗಿ ಮತ್ತು ಸೊಗಸಾಗಿರುವ ಗ್ಯಾಲಕ್ಸಿ ಎಫ್55 5ಜಿ ಪ್ರೀಮಿಯಂ ಬ್ಯಾಕ್ ವೀಗನ್ ಲೆದರ್ ಫಿನಿಶ್ ಬ್ಯಾಕ್ ಪ್ಯಾನೆಲ್ ಅನ್ನು ಹೊಂದಿದ್ದು, ಅತ್ಯಾಕರ್ಷಕವಾಗಿ ಕಾಣಿಸುತ್ತದೆ. ಗ್ಯಾಲಕ್ಸಿ ಎಫ್55 5ಜಿ ಮೂಲಕ ಸ್ಯಾಮ್ ಸಂಗ್ ಎಫ್ ಸೀರೀಸ್ ಉತ್ಪನ್ನಗಳಲ್ಲಿಯೇ ಮೊದಲ ಬಾರಿಗೆ ಕ್ಲಾಸಿ ವೀಗನ್ ಲೆದರ್ ವಿನ್ಯಾಸದ ಸ್ಮಾರ್ಟ್‌ಫೋನ್ ಅನ್ನು ರಿಲೀಸ್‌ ಮಾಡಿದೆ.

VISTARANEWS.COM


on

Samsung Galaxy F55 5G Smartphone Released With Exciting Classy Veegan Leather Design
Koo

ಬೆಂಗಳೂರು: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆಗಿರುವ ಸ್ಯಾಮ್‌ಸಂಗ್, ಗ್ಯಾಲಕ್ಸಿ ಎಫ್ ಸರಣಿಯ ಅತ್ಯಂತ ಪ್ರೀಮಿಯಂ ಸ್ಮಾರ್ಟ್‌ಫೋನ್ ಗ್ಯಾಲಕ್ಸಿ (Samsung Galaxy) ಎಫ್ 55 5ಜಿ ಅನ್ನು ಇಂದು ಬಿಡುಗಡೆ ಮಾಡಿದೆ.

ನಯವಾಗಿ ಮತ್ತು ಸೊಗಸಾಗಿರುವ ಗ್ಯಾಲಕ್ಸಿ ಎಫ್55 5ಜಿ ಪ್ರೀಮಿಯಂ ಬ್ಯಾಕ್ ವೀಗನ್ ಲೆದರ್ ಫಿನಿಶ್ ಬ್ಯಾಕ್ ಪ್ಯಾನೆಲ್ ಅನ್ನು ಹೊಂದಿದ್ದು, ಅತ್ಯಾಕರ್ಷಕವಾಗಿ ಕಾಣಿಸುತ್ತದೆ. ಗ್ಯಾಲಕ್ಸಿ ಎಫ್55 5ಜಿ ಮೂಲಕ ಸ್ಯಾಮ್ ಸಂಗ್ ಎಫ್ ಸೀರೀಸ್ ಉತ್ಪನ್ನಗಳಲ್ಲಿಯೇ ಮೊದಲ ಬಾರಿಗೆ ಕ್ಲಾಸಿ ವೀಗನ್ ಲೆದರ್ ವಿನ್ಯಾಸದ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ.

ಗ್ಯಾಲಕ್ಸಿ ಎಫ್55 5ಜಿ ಸೂಪರ್ ಅಮೋಲ್ಡ್+ ಡಿಸ್ಪ್ಲೇ, ಶಕ್ತಿಶಾಲಿ ಸ್ನ್ಯಾಪ್ ಡ್ರಾಗನ್ 7 ಜೆನ್ 1 ಪ್ರೊಸೆಸರ್, 45ಡಬ್ಲ್ಯೂ ಸೂಪರ್-ಫಾಸ್ಟ್ ಚಾರ್ಜಿಂಗ್, 4 ಜನರೇಷನ್ ಆಂಡ್ರಾಯ್ಡ್ ಅಪ್ ಡೇಟ್‌ಗಳು ಮತ್ತು 5 ವರ್ಷಗಳ ಸೆಕ್ಯೂರಿಟಿ ಅಪ್‌ಡೇಟ್‌ಗಳಂತಹ ವಿಭಾಗ-ಶ್ರೇಷ್ಠ ಫೀಚರ್‌ಗಳನ್ನು ಹೊಂದಿದ್ದು, ಬಳಕೆದಾರರು ಮುಂದಿನ ಹಲವು ವರ್ಷಗಳ ಕಾಲ ಹೊಸ ಫೀಚರ್ ಮತ್ತು ಹೆಚ್ಚಿನ ಭದ್ರತೆಯನ್ನು ಹೊಂದಬಹುದಾಗಿದೆ.

ಇದನ್ನೂ ಓದಿ: Fortis Hospital: ವಿಶ್ವದಲ್ಲೇ ಮೊದಲ ಬಾರಿಗೆ 3 ವಿಭಿನ್ನ ಕಾಯಿಲೆಗೆ ಏಕಕಾಲದಲ್ಲೇ ಯಶಸ್ವಿ ಶಸ್ತ್ರಚಿಕಿತ್ಸೆ

ಸ್ಯಾಮ್‌ಸಂಗ್ ಇಂಡಿಯಾದ ಎಂಎಕ್ಸ್ ವಿಭಾಗದ ಹಿರಿಯ ಉಪಾಧ್ಯಕ್ಷ ರಾಜು ಪುಲ್ಲನ್ ಈ ಕುರಿತು ಮಾತನಾಡಿ, “ಗ್ಯಾಲಕ್ಸಿ ಎಫ್55 5ಜಿ ಮೂಲಕ ಸ್ಯಾಮ್ ಸಂಗ್ ಎಫ್ ಸರಣಿಯಲ್ಲಿಯೇ ಮೊದಲ ಬಾರಿಗೆ ಸ್ಯಾಡಲ್ ಸ್ಟಿಚ್ ಮಾದರಿಯ ಕ್ಲಾಸಿ ವೀಗನ್ ಲೆದರ್ ವಿನ್ಯಾಸವನ್ನು ನೀಡಲಾಗುತ್ತಿದೆ. ಗ್ಯಾಲಕ್ಸಿ ಎಫ್55 5ಜಿ ಏಪ್ರಿಕಾಟ್ ಕ್ರಶ್ ಮತ್ತು ರೈಸಿನ್ ಬ್ಲ್ಯಾಕ್ ಎಂಬ ಎರಡು ಆಕರ್ಷಕ ಬಣ್ಣಗಳಲ್ಲಿ ಬರಲಿದೆ. ಇದರ ಜತೆಗೆ, ಸೂಪರ್ ಅಮೋಲ್ಡ್+ 120ಹರ್ಟ್ಜ್ ಡಿಸ್ಪ್ಲೇ, ಶಕ್ತಿಯುತ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಹಾಗೂ 4 ಜನರೇಷನ್‌ಗಳ ಓಎಸ್ ಅಪ್‌ಡೇಟ್‌ಗಳು, ಐದು ವರ್ಷಗಳ ಸೆಕ್ಯೂರಿಟಿ ಅಪ್‌ಡೇಟ್ ಮತ್ತು ನಾಕ್ಸ್ ಸೆಕ್ಯೂರಿಟಿ ಫೀಚರ್‌ಗಳನ್ನು ಹೊಂದಿದೆ. ಈ ಮೂಲಕ ಸ್ಯಾಮ್‌ಸಂಗ್ ತನ್ನ ಗ್ರಾಹಕರಿಗೆ ಉನ್ನತ-ಶ್ರೇಣಿಯ ಅನುಭವಗಳನ್ನು ಒದಗಿಸಲಿದೆ ಎಂದು ತಿಳಿಸಿದ್ದಾರೆ.

ಕ್ಲಾಸಿ ವೀಗನ್ ಲೆದರ್ ಡಿಸೈನ್

ಮಂತ್ರಮುಗ್ಧಗೊಳಿಸುವಂತೆ ವಿನ್ಯಾಸಗೊಳಿಸಲಾಗಿರುವ ಗ್ಯಾಲಕ್ಸಿ ಎಫ್55 5ಜಿ ವಿಶಿಷ್ಟವಾದ ಸ್ಯಾಡಲ್ ಸ್ಟಿಚ್ ಮಾದರಿ ಜತೆಗೆ ಕ್ಲಾಸಿ ವೀಗನ್ ಲೆದರ್ ಫಿನಿಶ್ ಬ್ಯಾಕ್ ಪ್ಯಾನೆಲ್ ಹೊಂದಿದೆ. ಕ್ಯಾಮೆರಾ ಡೆಕೊ ಗೋಲ್ಡನ್ ಬಣ್ಣದಲ್ಲಿ ಬರುತ್ತದೆ ಮತ್ತು ಪ್ರೀಮಿಯಂ ಲುಕ್ ಅನ್ನು ನೀಡುತ್ತದೆ. ಏಪ್ರಿಕಾಟ್ ಕ್ರಶ್ ಮತ್ತು ರೈಸಿನ್ ಬ್ಲ್ಯಾಂಕ್ ಎಂಬ ಎರಡು ಮನಮೋಹಕ ಬಣ್ಣಗಳ ಆಯ್ಕೆಗಳು ಲಭ್ಯವಿದೆ. ಸ್ಮಾರ್ಟ್‌ಫೋನ್ ಕೇವಲ 180 ಗ್ರಾಂ ತೂಗುತ್ತದೆ ಮತ್ತು 7.8 ಎಂಎಂ ಅಗಲ ಹೊಂದಿದ್ದು, ನಯವಾಗಿದೆ ಹಾಗೂ ಬಳಸುವಾಗ ಅದ್ಭುತ ಅನುಭವ ಉಂಟು ಮಾಡಲಿದೆ.

ಇದನ್ನೂ ಓದಿ: Snake Rescue: ಶಿರಾದಲ್ಲಿ ಹೆಬ್ಬಾವು ರಕ್ಷಿಸಿದ ಮಾಜಿ ಸೈನಿಕ

6.7″ ಫುಲ್ ಎಚ್ಡಿ+ ಸೂಪರ್ ಅಮೋಲ್ಡ್+ ಡಿಸ್‌ಪ್ಲೇ ಹೊಂದಿರುವ ಗ್ಯಾಲಕ್ಸಿ ಎಫ್55 5ಜಿ ಗ್ರಾಹಕರಿಗೆ ಅತ್ಯದ್ಭುತ ದೃಶ್ಯ ವೈಭವ ಮತ್ತು ಸೊಗಸಾದ ವೀಕ್ಷಣೆಯ ಅನುಭವವನ್ನು ನೀಡುತ್ತದೆ. ದೊಡ್ಡ ಡಿಸ್‌ಪ್ಲೇಯು 1000 ನಿಟ್‌ಗಳ ಸಾಮರ್ಥ್ಯದ ಹೆಚ್ಚಿನ ಬ್ರೈಟ್‌ನೆಸ್‌ ಹೊಂದಿದೆ ಮತ್ತು ವಿಷನ್ ಬೂಸ್ಟರ್ ತಂತ್ರಜ್ಞಾನದಿಂದಾಗಿ ಪ್ರಕಾಶಮಾನವಾದ ಸೂರ್ಯನ ಬೆಳಕಿನಲ್ಲಿಯೂ ಬಳಕೆದಾರರು ತಮ್ಮ ಮೊಬೈಲ್ ಅನ್ನು ಅಡೆತಡೆಯಿಲ್ಲದೆ ವೀಕ್ಷಣೆ ಮಾಡಬಹುದಾಗಿದೆ.

ಶಕ್ತಿಯುತ ಪ್ರೊಸೆಸರ್

ಗ್ಯಾಲಕ್ಸಿ ಎಫ್55 5ಜಿ 4ಎನ್ಎಂ ಕ್ವಾಲ್ಕಮ್ ಸ್ನ್ಯಾಪ್ ಡ್ರಾಗನ್ 7 ಜೆನ್ 1 ಪ್ರೊಸೆಸರ್‌ ಹೊಂದಿದ್ದು, ಬಳಕೆದಾರರಿಗೆ ನಿರರ್ಗಳವಾಗಿ ಮಲ್ಟಿ ಟಾಸ್ಕಿಂಗ್ ಮಾಡುವ ಅವಕಾಶ ಒದಗಿಸುತ್ತದೆ. 5ಜಿಯ ಅಪ್ರತಿಮ ವೇಗ ಮತ್ತು ಸಂಪರ್ಕ ಇರುವ ಕಾರಣ ಬಳಕೆದಾರರು ಎಲ್ಲಿಗೆ ಹೋದರೂ ಕನೆಕ್ಟೆಡ್ ಆಗಿರಬಹುದು ಮತ್ತು ಸಂಪರ್ಕದಲ್ಲಿರಬಹುದು. ವೇಗವಾಗಿ ಡೌನ್‌ಲೋಡ್‌, ಸುಗಮ ಸ್ಟ್ರೀಮಿಂಗ್ ಮತ್ತು ನಿರರ್ಗಳವಾಗಿ ಬ್ರೌಸಿಂಗ್ ಮಾಡಬಹುದು. ಪ್ರೊಸೆಸರ್ ಉತ್ತಮ ಗುಣಮಟ್ಟದ ಆಡಿಯೋ ಮತ್ತು ದೃಶ್ಯಗಳನ್ನು ನೀಡುವುದರ ಜತೆಗೆ ಹೈಸ್ಪೀಡ್ ಕನೆಕ್ಟಿವಿಟಿ ಹೊಂದಿದ್ದು, ಸೊಗಸಾದ ಮೊಬೈಲ್ ಗೇಮಿಂಗ್ ಅನುಭವವನ್ನು ನೀಡುತ್ತದೆ.

ನೈಟೋಗ್ರಫಿ ಕ್ಯಾಮೆರಾ

ಗ್ಯಾಲಕ್ಸಿ ಎಫ್55 5ಜಿ ಹೆಚ್ಚಿನ ರೆಸೆಲ್ಯೂಶನ್ ಹೊಂದಿರುವ ಮತ್ತು ಶೇಕ್-ಫ್ರೀ ಅಂದರೆ ಕೈ ಅಲುಗಾಡಿದರೂ ಸ್ಪಷ್ಟವಾದ ವೀಡಿಯೋ ಮತ್ತು ಫೋಟೋಗಳನ್ನು ಶೂಟ್ ಮಾಡಬಹುದಾದ 50 ಎಂಪಿ (ಓಐಎಸ್) ನೋ ಶೇಕ್ ಕ್ಯಾಮೆರಾವನ್ನು ಹೊಂದಿದೆ. ಈ ಕ್ಯಾಮೆರಾ ಕೈ ನಡುಕ ಅಥವಾ ಆಕಸ್ಮಿಕ ಅಲುಗಾಟಗಳಿಂದ ಉಂಟಾಗುವ ಮಸುಕುತನವನ್ನು ತಡೆಯುತ್ತದೆ. ಕ್ಯಾಮೆರಾ ಸೆಟಪ್ 8ಎಂಪಿ ಅಲ್ಟ್ರಾ-ವೈಡ್ ಸೆನ್ಸರ್ ಅನ್ನು ಸಹ ಒಳಗೊಂಡಿದೆ. ವಿಶೇಷವಾಗಿ ಗ್ಯಾಲಕ್ಸಿ ಎಫ್55 5ಜಿ ನೈಟೋಗ್ರಫಿ ಫೀಚರ್ ಜತೆಗೆ ಬರುತ್ತದೆ, ಈ ಫೀಚರ್ ಕಡಿಮೆ-ಬೆಳಕಿನ ಫೋಟೋಗಳು ಮತ್ತು ವೀಡಿಯೊಗಳನ್ನು ಸೆರೆಹಿಡಿಯಲು ಬಳಕೆದಾರರಿಗೆ ಅನುವು ಮಾಡಿಕೊಡುತ್ತದೆ. ಗ್ಯಾಲಕ್ಸಿ ಎಫ್55 5ಜಿ ವಿವರವಾದ, ತೀಕ್ಷ್ಣವಾದ ಸೆಲ್ಫಿ ತೆಗೆಯಲು 50ಎಂಪಿ ಸಾಮರ್ಥ್ಯದ ಹೈ ರೆಸಲ್ಯೂಶನ್ ಫ್ರಂಟ್ ಕ್ಯಾಮೆರಾವನ್ನು ಹೊಂದಿದೆ.

ಸೂಪರ್-ಫಾಸ್ಟ್ ಚಾರ್ಜಿಂಗ್

ಗ್ಯಾಲಕ್ಸಿ ಎಫ್55 5ಜಿ ಪ್ಯಾಕ್‌ಗಳು 5000 ಎಂಎಎಚ್ ಬ್ಯಾಟರಿ ಹೊಂದಿದೆ. ಅದರಿಂದ ದೀರ್ಘ ಕಾಲ ಬ್ರೌಸಿಂಗ್, ಗೇಮಿಂಗ್ ಮತ್ತು ಬಿಂಜ್ ವೀಕ್ಷಣೆ ಮಾಡಬಹುದಾಗಿದೆ. ಗ್ಯಾಲಕ್ಸಿ ಎಫ್55 5ಜಿ ಬಳಕೆದಾರರಿಗೆ ಯಾವುದೇ ಅಡೆತಡೆ ಇಲ್ಲದೆ ಆರಾಮಾಗಿ ಮೊಬೈಲ್ ಬಳಸಲು, ಸಂಪರ್ಕದಲ್ಲಿರಲು, ಮನರಂಜನೆ ನೀಡಲು ಮತ್ತು ಉತ್ಪಾದಕತೆ ಹೆಚ್ಚಿಸಲು ಅನುವು ಮಾಡಿಕೊಡುತ್ತದೆ. ಗ್ಯಾಲಕ್ಸಿ ಎಫ್55 5ಜಿ ಕಡಿಮೆ ಸಮಯದಲ್ಲಿ ಹೆಚ್ಚಿನ ಚಾರ್ಜ್ ಮಾಡಬಹುದಾದ 45ಡಬ್ಲ್ಯೂ ಸೂಪರ್-ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ ಹೊಂದಿದೆ.

ಇದನ್ನೂ ಓದಿ: New Financial Rules: ಜೂನ್ 1ರಿಂದ ಏನೆಲ್ಲಾ ಬದಲಾವಣೆಗಳಾಗಲಿವೆ ಗೊತ್ತಿದೆಯೆ?

ಗ್ಯಾಲಕ್ಸಿ ಎಫ್55 5ಜಿ, ಹಲವಾರು ಹೊಸ ಆವಿಷ್ಕಾರಗಳನ್ನು ಹೊಂದಿದೆ. ಇದರ ವಾಯ್ಸ್ ಫೋಕಸ್‌ ಫೀಚರ್ ವಾತಾವರಣದಲ್ಲಿನ ಶಬ್ದವನ್ನು ಕಡಿತಗೊಳಿಸಿ ಅದ್ಭುತ ಕರೆ ಅನುಭವ ನೀಡುತ್ತದೆ ಮತ್ತು ಆ ಮೂಲಕ ಗ್ರಾಹಕರ ಅನುಭವವನ್ನು ಹೆಚ್ಚಿಸಲಿದೆ. ಕ್ವಿಕ್ ಶೇರ್ ವೈಶಿಷ್ಟ್ಯವು ಬಳಕೆದಾರರಿಗೆ ಫೈಲ್‌ಗಳು, ಫೋಟೋಗಳು ಮತ್ತು ಡಾಕ್ಯುಮೆಂಟ್‌ಗಳನ್ನು ನಿಮ್ಮ ಲ್ಯಾಪ್‌ಟಾಪ್ ಮತ್ತು ಟ್ಯಾಬ್ ಸೇರಿದಂತೆ ಯಾವುದೇ ಸಾಧನ ಅದು ದೂರದಲ್ಲಿದ್ದರೂ ಕೂಡ ತ್ವರಿತವಾಗಿ ಹಂಚಿಕೊಳ್ಳಲು ಅನುವು ಮಾಡಿಕೊಡುತ್ತದೆ. ಹೆಚ್ಚುವರಿಯಾಗಿ, ಸ್ಯಾಮ್ ಸಂಗ್ ಗ್ಯಾಲಕ್ಸಿ ಎಫ್55 5ಜಿ ನೊಂದಿಗೆ ನಾಲ್ಕು ಜನರೇಷನ್‌ಗಳ ಓಎಸ್ ಅಪ್‌ಡೇಟ್‌ಗಳು ಮತ್ತು ಐದು ವರ್ಷಗಳ ಸೆಕ್ಯೂರಿಟಿ ಅಪ್ ಡೇಟ್‌ಗಳನ್ನು ಒದಗಿಸುತ್ತಿದ್ದು, ಬಳಕೆದಾರರು ಮುಂಬರುವ ವರ್ಷಗಳಲ್ಲಿ ಹೊಸ ವೈಶಿಷ್ಟ್ಯಗಳನ್ನು ಮತ್ತು ಹೆಚ್ಚಿನ ಭದ್ರತೆಯನ್ನು ಆನಂದಿಸಬಹುದು ಎಂಬುದನ್ನು ಖಚಿತಪಡಿಸುತ್ತದೆ.

Continue Reading
Advertisement
Mysore Vasudevacharya Memorial Music utsav Vidwat Sabha and award ceremony
ಮೈಸೂರು21 mins ago

Mysore News: ಮೈಸೂರಿನಲ್ಲಿ ಗಾಯಕ ಎಚ್ ಎಸ್ ನಾಗರಾಜ್ ಗೆ ಶ್ರೀ ವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿ ಪ್ರದಾನ

swati Maliwal assault case:
ದೇಶ21 mins ago

Swati Maliwal assault case : ಕೇಜ್ರಿವಾಲ್ ಆಪ್ತ ಬಿಭವ್​ ಕುಮಾರ್ ಮೂರು ದಿನ ಪೊಲೀಸ್​ ಕಸ್ಟಡಿಗೆ

Gautam Gambhir
ಪ್ರಮುಖ ಸುದ್ದಿ36 mins ago

Gautam Gambhir : ಗೌತಮ್ ಗಂಭೀರ್ ಭಾರತ ತಂಡದ ಮುಂದಿನ ಕೋಚ್​; ಐಪಿಎಲ್​ ಫ್ರಾಂಚೈಸಿ ಮಾಲೀಕರಿಂದ ಬಹಿರಂಗ?

Namaz on Road
ದಕ್ಷಿಣ ಕನ್ನಡ40 mins ago

Namaz On Road: ಮಂಗಳೂರಿನ ರಸ್ತೆಯಲ್ಲಿ ನಮಾಜ್ ಮಾಡಿದವರ ವಿರುದ್ಧ ಎಫ್‌ಐಆರ್‌

Credit Card Safety Tips
ಮನಿ ಗೈಡ್48 mins ago

Credit Card Safety Tips: ಕ್ರೆಡಿಟ್‌ ಕಾರ್ಡ್ ವಂಚನೆಯಿಂದ ಪಾರಾಗಲು ಇಲ್ಲಿದೆ 9 ಸಲಹೆ

Karnataka weather Forecast
ಮಳೆ52 mins ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

Child Trafficking Racket
ಪ್ರಮುಖ ಸುದ್ದಿ1 hour ago

Child Trafficking Racket: ಅಂತಾರಾಜ್ಯ ಮಕ್ಕಳ ಕಳ್ಳಸಾಗಣೆ ದಂಧೆ ಪತ್ತೆ; 11 ಮಕ್ಕಳ ರಕ್ಷಣೆ

Prajwal Revanna Case
ಕರ್ನಾಟಕ1 hour ago

Prajwal Revanna Case: ಎರಡು ಎಫ್ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಎಚ್.ಡಿ.ರೇವಣ್ಣ ಅರ್ಜಿ

Summer Dress Fashion
ಫ್ಯಾಷನ್2 hours ago

Summer Dress Fashion: ಸೀಸನ್‌ ಎಂಡ್‌ ಫ್ಯಾಷನ್‌ಗೆ ಕಾಲಿಟ್ಟ ಸಮುದ್ರದ ಅಲೆ ಬಿಂಬಿಸುವ ವೆವಿ ಡ್ರೆಸ್‌!

Lok Sabha Election
ಪ್ರಮುಖ ಸುದ್ದಿ2 hours ago

Lok Sabha Election : ಲವ್​ ಜಿಹಾದ್ ಶುರುವಾಗಿದ್ದೇ ಜಾರ್ಖಂಡ್​ನಿಂದ; ಜೆಎಮ್​ಎಮ್​ ವಿರುದ್ಧ ಮೋದಿ ಗಂಭೀರ ಆರೋಪ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ52 mins ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು9 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 day ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ7 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌