Uttara Kannada News: ಡಬ್ಲ್ಯೂಎಚ್ಆರ್‌ ಆರ್.ಕೆ ಫೌಂಡೇಶನ್‌ನ ಬನವಾಸಿ ಘಟಕದ ಪದಾಧಿಕಾರಿಗಳ ಪದಗ್ರಹಣ - Vistara News

ಉತ್ತರ ಕನ್ನಡ

Uttara Kannada News: ಡಬ್ಲ್ಯೂಎಚ್ಆರ್‌ ಆರ್.ಕೆ ಫೌಂಡೇಶನ್‌ನ ಬನವಾಸಿ ಘಟಕದ ಪದಾಧಿಕಾರಿಗಳ ಪದಗ್ರಹಣ

Uttara Kannada News: ಬನವಾಸಿ ಪಟ್ಟಣದ ಶ್ರೀ ಜಯಂತಿ ವಿದ್ಯಾವರ್ಧಕ ಸಂಘದ ಸಭಾಂಗಣದಲ್ಲಿ ಸೋಮವಾರ ಡಬ್ಲ್ಯೂಎಚ್ಆರ್‌ ಆರ್.ಕೆ ಫೌಂಡೇಶನ್‌ನ ಬನವಾಸಿ ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜರುಗಿತು.

VISTARANEWS.COM


on

new office bearers of Banavasi Unit of WHR RK Foundation
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬನವಾಸಿ: ಪಟ್ಟಣದ ಶ್ರೀ ಜಯಂತಿ ವಿದ್ಯಾವರ್ಧಕ ಸಂಘದ ಸಭಾಂಗಣದಲ್ಲಿ ಸೋಮವಾರ ಡಬ್ಲ್ಯೂಎಚ್ಆರ್‌ ಆರ್.ಕೆ ಫೌಂಡೇಶನ್‌ನ ಬನವಾಸಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ (Uttara Kannada News) ಜರುಗಿತು.

ಕಾರ್ಯಕ್ರಮದಲ್ಲಿ ವಿಶ್ವ ಮಾನವ ಹಕ್ಕುಗಳ ಆರ್.ಕೆ ಫೌಂಡೇಶನ್ ಮಹಿಳಾ ಜಿಲ್ಲಾಧ್ಯಕ್ಷೆ ಅರ್ಚನಾ ಜಯಪ್ರಕಾಶ್ ನಾಯ್ಕ್ ಮಾತನಾಡಿ, ಭೂಮಿಯ ಮೇಲಿರುವ ಪ್ರತಿಯೊಬ್ಬ ಮನುಷ್ಯನಿಗೆ ಮುಖ್ಯವಾಗಿ ಬೇಕಾಗಿರುವುದು ಆಹಾರ, ಉಡುಪು ಮತ್ತು ವಸತಿ. ಇವು ಮನುಷ್ಯನ ಮೂಲಭೂತ ಹಕ್ಕುಗಳು. ಇವುಗಳಿಲ್ಲದೆ ಮನುಷ್ಯನ ಜೀವನ ಎಂದಿಗೂ ಕಷ್ಟವೇ.ಈ ಮೂಲಭೂತ ಸವಲತ್ತುಗಳನ್ನು ಪಡೆಯುವುದು ಪ್ರತಿಯೊಬ್ಬ ಪ್ರಜೆಯ ಜನ್ಮಸಿದ್ಧ ಹಕ್ಕಾಗಿದೆ. ಆದರೆ ಬಹುತೇಕ ಸಂದರ್ಭಗಳಲ್ಲಿ ಮನುಷ್ಯನ ಈ ಮೂಲಭೂತ ಹಕ್ಕುಗಳನ್ನು ಧಮನಿಸುವ ಪ್ರಯತ್ನಗಳೇ ನಡೆಯುತ್ತಿವೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದರು.

ಪ್ರತಿಯೊಬ್ಬರಿಗೂ ಮಾನವ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಮತ್ತು ರಕ್ಷಣೆ ಮಾಡಲು ವಿಶ್ವ ಮಾನವ ಹಕ್ಕುಗಳ ದಿನವನ್ನು ಘೋಷಿಸಲಾಯಿತು. ವ್ಯಕ್ತಿಯ ಜೀವನ, ಸ್ವಾತಂತ್ರ್ಯ, ಸಮಾನತೆ ಮತ್ತು ಘನತೆಗೆ ಸಂಬಂಧಿಸಿದ ಹಕ್ಕುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: Sirsi News: ಸ್ವರ್ಣವಲ್ಲೀ ಮಹಾ ಸಂಸ್ಥಾನದಲ್ಲಿ ಶಿಷ್ಯ ಸ್ವೀಕಾರ ಮಹೋತ್ಸವಕ್ಕೆ‌ ಸಂಭ್ರಮದ ಚಾಲನೆ

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ನಾಮದೇವ ಶಿಂಪಿ ಸಮಾಜದ ಜಿಲ್ಲಾಧ್ಯಕ್ಷ ಮೃತ್ಯುಂಜಯ ಚೌದರಿ ಮಾತನಾಡಿ, ಪಟ್ಟಣದಲ್ಲಿ ವಿಶ್ವ ಮಾನವ ಹಕ್ಕುಗಳ ಆರ್.ಕೆ. ಫೌಂಡೇಶನ್ ಕಾರ್ಯರೂಪಕ್ಕೆ ಬಂದಿರುವುದು ಸ್ವಾಗತಾರ್ಹವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಶ್ರೀ ಮಧುಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರಾಜಶೇಖರ ಒಡೆಯರ್, ಸಮಾಜ ಸೇವಕಿ ಮಂಗಲಾ ದಾವಣಗೆರೆ, ಡಬ್ಲ್ಯೂಎಚ್ಆರ್ ಆರ್.ಕೆ.ಫೌಂಡೇಶನ್ ಬನವಾಸಿ ಅಧ್ಯಕ್ಷೆ ಸೀಮಾವತಿ ಕೆರೊಡಿ, ಶಿರಸಿ-ಸಿದ್ದಾಪುರದ ಉಪಾಧ್ಯಕ್ಷೆ ತೆರೇಸಾ ಡಿಸೋಜ ಮಾತನಾಡಿದರು.

ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನ ಒಟ್ಟೊಟ್ಟಿಗೆ ಏರಿಕೆ

ಈ ಸಂದರ್ಭದಲ್ಲಿ ಡಬ್ಲ್ಯೂಎಚ್ಆರ್ ಆರ್.ಕೆ.ಫೌಂಡೇಶನ್ ಬನವಾಸಿ ಘಟಕದ ಅಧ್ಯಕ್ಷ ಸುಧೀರ್ ನಾಯರ್, ಪ್ರಧಾನ ಕಾರ್ಯದರ್ಶಿ ಶೋಭ ಉಳ್ಳಾಗಡ್ಡಿ, ಶಿರಸಿ-ಸಿದ್ದಾಪುರ ಘಟಕದ ಅಧ್ಯಕ್ಷ ಮಂಜುನಾಥ ಡಿ.ನಾಯ್ಕ್, ಅಶೋಕ ಶೆರುಗಾರ ಹಾಗೂ ಡಬ್ಲ್ಯೂಎಚ್ಆರ್ ಆರ್.ಕೆ.ಫೌಂಡೇಶನ್‌ನ ಪದಾಧಿಕಾರಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು. ಸವಿತಾ ನಾಯ್ಕ್ ನಿರೂಪಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಬೆಂಗಳೂರಲ್ಲಿ ಭಾರಿ ಮಳೆ ಎಚ್ಚರಿಕೆ; ಮುಕ್ಕಾಲು ಕರ್ನಾಟಕಕ್ಕೆ ರೆಡ್‌ ಅಲರ್ಟ್‌

Karnataka Weather Forecast : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ (Rain News) ಮಳೆಯಾಗಲಿದ್ದು, ಹಲವು ಜಿಲ್ಲೆಗಳಿಗೆ ರೆಡ್‌, ಯೆಲ್ಲೋ, ಆರೆಂಜ್‌ ಅಲರ್ಟ್‌ಗಳನ್ನು ನೀಡಲಾಗಿದೆ. ಜೂನ್‌ 13ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ತಿಳಿಸಿದೆ.

ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ ಮತ್ತು ಬಾಗಲಕೋಟೆ, ಹಾವೇರಿ, ವಿಜಯನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಗಾಳಿ ವೇಗವು 55-65 ಕಿ.ಮೀ ಇರಲಿದೆ. ಹೀಗಾಗಿ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ.

ಕೆಲವು ಜಿಲ್ಲೆಗಳಲ್ಲಿ ಮಳೆಯೊಂದಿಗೆ ಗಾಳಿ ವೇಗವು 40-50 ಕಿ.ಮೀ ಇರಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಸೇರಿದಂತೆ ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್‌ 13ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Banavasi News: ಬನವಾಸಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Banavasi News: ಬನವಾಸಿ ಪಟ್ಟಣದಲ್ಲಿ ಡಬ್ಲ್ಯೂಎಚ್ಆರ್ ಆರ್.ಕೆ. ಫೌಂಡೇಶನ್ ಬನವಾಸಿ ಘಟಕದಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಮೂಲಕ ಕಾರ್ಯಕ್ರಮ ಜರುಗಿತು.

VISTARANEWS.COM


on

World Environment Day celebration in Banavasi
Koo

ಬನವಾಸಿ: ಜೀವ ಸಂಕುಲದ ಉಳಿವಿನಲ್ಲಿ ಪರಿಸರದ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಪರಿಸರ ಸಂರಕ್ಷಿಸಿ ತಮ್ಮ ಜವಾಬ್ದಾರಿ‌ ನಿರ್ವಹಿಸಬೇಕಿದೆ ಎಂದು ಡಬ್ಲ್ಯೂಎಚ್ಆರ್ ಆರ್.ಕೆ ಫೌಂಡೇಶನ್‌ನ ಜಿಲ್ಲಾಧ್ಯಕ್ಷೆ ಅರ್ಚನಾ ಜಯಪ್ರಕಾಶ್ ನಾಯ್ಕ್ (Banavasi News) ಹೇಳಿದರು.

ಪಟ್ಟಣದಲ್ಲಿ ಡಬ್ಲ್ಯೂಎಚ್ಆರ್ ಆರ್.ಕೆ. ಫೌಂಡೇಶನ್ ಬನವಾಸಿ ಘಟಕದಿಂದ ಭಾನುವಾರ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಅವರು, ನಮ್ಮ ಸುತ್ತಮುತ್ತನಲ್ಲಿರುವ ನೈಸರ್ಗಿಕ ತಾಣವನ್ನು ನೋಡಲು ಹೊರ ರಾಜ್ಯ ಹಾಗೂ ದೇಶ, ವಿದೇಶಗಳಿಂದ ಬರುತ್ತಾರೆ ಎಂದರೆ ಅದಕ್ಕೆ ಕಾರಣ ಇಲ್ಲಿನ ಪರಿಸರ ಸಂಪತ್ತು. ಇದನ್ನು ಇನ್ನಷ್ಟು ಬೆಳೆಸಿ, ಉಳಿಸಿಕೊಂಡು ಹೋಗಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Money Guide: ಹೆಚ್ಚಿನ ಬಡ್ಡಿ ಮಾತ್ರವಲ್ಲ, ಪಿಪಿಎಫ್ ನಿಂದ ಇನ್ನೂ ಏನೇನು ಪ್ರಯೋಜನ?

ಈ ಪರಿಸರ ಮುಂದಿನ ತಲೆಮಾರಿನವರಿಗೆ ಉಳಿಯುವ ಉದ್ದೇಶದಿಂದ ಇಂತಹ ಕಾರ್ಯಕ್ರಮದ ಮೂಲಕ ನಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕಾಗಿದೆ‌. ಅತ್ಯಗತ್ಯವಾಗಿ ನಾವೆಲ್ಲರೂ ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಬೇಕಾಗಿದೆ ಎಂದರು.

ಡಬ್ಲ್ಯೂಎಚ್ಆರ್ ಆರ್.ಕೆ. ಫೌಂಡೇಶನ್ ಬನವಾಸಿ ಘಟಕದ ಅಧ್ಯಕ್ಷೆ ಸೀಮಾವತಿ ಕೆರೊಡಿ ಮಾತನಾಡಿ, ಇಂದು ನಮಗೆ ನಮ್ಮ ಸುತ್ತಮುತ್ತಲಿನಲ್ಲಿ ಸಾಕಷ್ಟು ಅರಣ್ಯ ಇದೆ ಎಂದು ಎನಿಸಬಹುದು ಆದರೆ ದಶಕಗಳು ಕಳೆದಂತೆ ಜನಸಂಖ್ಯೆ ಹೆಚ್ಚಳ, ಕಾರ್ಖಾನೆಗಳು, ಪ್ಲಾಸ್ಟಿಕ್ ಉತ್ಪನ್ನ ಬಳಕೆಯಿಂದ ಶುದ್ಧ ಗಾಳಿ, ನೀರನ್ನು ಹಣ ನೀಡಿ ಖರೀದಿಸುವಂತ ಸ್ಥಿತಿ ಬರಬಹುದು ಆ ಸ್ಥಿತಿಗೆ ತಲುಪಬಾರದು ಎಂದರೆ ಪ್ರತಿಯೊಬ್ಬರು ಇಂದಿನಿಂದಲೇ ಒಂದೊಂದು ಗಿಡ ನೆಡಬೇಕು, ಅದರ ಪಾಲನೆ ಮಾಡಬೇಕು. ಪರಿಸರ ಸಂರಕ್ಷಣೆಗೆ ಪ್ರಮುಖ ಆದ್ಯತೆ ನೀಡಬೇಕು ಎಂದರು.

ಇದೇ ವೇಳೆ ಡಬ್ಲ್ಯೂಎಚ್ಆರ್ ಆರ್.ಕೆ. ಫೌಂಡೇಶನ್ ಬನವಾಸಿ ಘಟಕದ ನೂತನ ಸದಸ್ಯರಿಗೆ ಗುರುತಿನ ಚೀಟಿ ವಿತರಿಸಿ, ಸನ್ಮಾನಿಸಲಾಯಿತು.

ಇದನ್ನೂ ಓದಿ: Shira News: ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಸಕ ಟಿ.ಬಿ.ಜಯಚಂದ್ರ

ಕಾರ್ಯಕ್ರಮದಲ್ಲಿ ಡಬ್ಲ್ಯೂಎಚ್ಆರ್‌ ಆರ್.ಕೆ. ಫೌಂಡೇಶನ್‌ನ ಪದಾಧಿಕಾರಿಗಳು, ಸದಸ್ಯರು ಇದ್ದರು.

Continue Reading

ಉತ್ತರ ಕನ್ನಡ

Uttara Kannada News: ಪಕ್ಷದ್ರೋಹಿ ಶಾಸಕ ಶಿವರಾಮ ಹೆಬ್ಬಾರ್ ರಾಜೀನಾಮೆಗೆ ಆಗ್ರಹ

Uttara Kannada News: ಶಾಸಕ ಶಿವರಾಮ ಹೆಬ್ಬಾರ್, ಕಾಂಗ್ರೆಸ್ ಬೇಕಿದ್ದರೆ ಕಾಂಗ್ರೆಸ್ ಅಥವಾ ಬಿಜೆಪಿಯಲ್ಲಿರಬೇಕು. ಎರಡೂ ಬೇಡದಿದ್ದರೆ ಮನೆಯಲ್ಲಿರಬಹುದು. ಅದನ್ನು ಬಿಟ್ಟು ಮೋಸದ ರಾಜಕೀಯವನ್ನು ಮಾಡಬಾರದು. ಯಲ್ಲಾಪುರ ಮುಂಡಗೋಡ ಕ್ಷೇತ್ರ ಬಿಜೆಪಿಯ ಭದ್ರಕೋಟೆ. ಇಲ್ಲಿ ವ್ಯಕ್ತಿ ಆಧಾರಿತ ಚುನಾವಣೆ ಮಾಡುವ ಪ್ರಮೇಯ ಬರುವುದಿಲ್ಲ. ಸಂಘಟನೆಯನ್ನು ಬೆಳೆಸುವ ಉದ್ದೇಶದಿಂದ ಇರುವ ಕಾರ್ಯಕರ್ತರೆಲ್ಲ ಇನ್ನೂ ಪಕ್ಷದಲ್ಲಿಯೇ ಇದ್ದಾರೆ. ಅಧಿಕಾರವನ್ನು ಅರಸಿ ಬಂದವರೆಲ್ಲ ಪಕ್ಷದಿಂದ ಹೊರ ನಡೆದಿದ್ದಾರೆ. ಇನ್ನು ಮುಂದೆ ಎಲ್ಲಾ ಚುನಾವಣೆಯಲ್ಲೂ ಕಾರ್ಯಕರ್ತರು ಇದೇ ರೀತಿ ಕಾರ್ಯ ನಿರ್ವಹಿಸಿ, ಯಾರೇ ಅಭ್ಯರ್ಥಿಯಾದರು ಗೆಲ್ಲಿಸಿಕೊಂಡು ಬರುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ತಿಳಿಸಿದ್ದಾರೆ.

VISTARANEWS.COM


on

MLA Shivaram Hebbar should resign immediately MLC Shantharama Siddi demands
Koo

ಯಲ್ಲಾಪುರ: ಯಲ್ಲಾಪುರದ ಶಾಸಕ ಶಿವರಾಮ ಹೆಬ್ಬಾರ್ ಅವರು ತಲಾಖ್ ಸಂಸ್ಕೃತಿಯನ್ನು ಅನುಸರಿಸುತ್ತಿದ್ದು, ಯಾರನ್ನು ಅಪ್ಪಿಕೊಳ್ಳಬೇಕು, ಯಾರನ್ನು ಬಿಡಬೇಕು ಎಂಬುದನ್ನು ತಿಳಿಯದಾಗಿದ್ದಾರೆ. ಅತ್ತ ಕಾಂಗ್ರೆಸ್ ಹೋಗದೆ, ಇತ್ತ ಬಿಜೆಪಿಯಲ್ಲಿ ಇರದೇ, ಎರಡೂ ಪಕ್ಷಗಳಿಗೂ ಹಾಗೂ ಕಾರ್ಯಕರ್ತರಿಗೂ ಗೊಂದಲ ಮೂಡಿಸಿದ್ದು, ತಕ್ಷಣ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಪಕ್ಷದ ಪರವಾಗಿ ಆಗ್ರಹಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ (Uttara Kannada News) ತಿಳಿಸಿದರು.

ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಶಿವರಾಮ ಹೆಬ್ಬಾರ್ ಅವರು ಕಾಂಗ್ರೆಸ್ ಬೇಕಿದ್ದರೆ ಕಾಂಗ್ರೆಸ್ ಅಥವಾ ಬಿಜೆಪಿಯಲ್ಲಿರಬೇಕು. ಎರಡೂ ಬೇಡದಿದ್ದರೆ ಮನೆಯಲ್ಲಿರಬಹುದು. ಅದನ್ನು ಬಿಟ್ಟು ಮೋಸದ ರಾಜಕೀಯವನ್ನು ಮಾಡಬಾರದು ಎಂದು ಆರೋಪಿಸಿದ ಅವರು, ಯಲ್ಲಾಪುರ ಮುಂಡಗೋಡ ಕ್ಷೇತ್ರ ಬಿಜೆಪಿಯ ಭದ್ರಕೋಟೆ. ಇಲ್ಲಿ ವ್ಯಕ್ತಿ ಆಧಾರಿತ ಚುನಾವಣೆ ಮಾಡುವ ಪ್ರಮೇಯ ಬರುವುದಿಲ್ಲ. ಸಂಘಟನೆಯನ್ನು ಬೆಳೆಸುವ ಉದ್ದೇಶದಿಂದ ಇರುವ ಕಾರ್ಯಕರ್ತರೆಲ್ಲ ಇನ್ನೂ ಪಕ್ಷದಲ್ಲಿಯೇ ಇದ್ದಾರೆ. ಅಧಿಕಾರವನ್ನು ಅರಸಿ ಬಂದವರೆಲ್ಲ ಪಕ್ಷದಿಂದ ಹೊರ ನಡೆದಿದ್ದಾರೆ. ಇನ್ನು ಮುಂದೆ ಎಲ್ಲಾ ಚುನಾವಣೆಯಲ್ಲೂ ಕಾರ್ಯಕರ್ತರು ಇದೇ ರೀತಿ ಕಾರ್ಯ ನಿರ್ವಹಿಸಿ, ಯಾರೇ ಅಭ್ಯರ್ಥಿಯಾದರೂ ಗೆಲ್ಲಿಸಿಕೊಂಡು ಬರುತ್ತೇವೆ ಎಂದರು.

ಇದನ್ನೂ ಓದಿ: Election Commission : ಜುಲೈ 10ರಂದು 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ

ಬಿಜೆಪಿ ಮಂಡಲಾಧ್ಯಕ್ಷ ಪ್ರಸಾದ ಹೆಗಡೆ ಮಾತನಾಡಿ, ದೇಶವನ್ನು ಕಟ್ಟಲು ಬಿಜೆಪಿಯ ಕೊಡುಗೆ ಅಪಾರ. ಇಂತಹ ನಾಯಕತ್ವಕ್ಕೆ ಹಾಗೂ ಪಕ್ಷಕ್ಕೆ ಯಲ್ಲಾಪುರದ ಶಾಸಕರು ಮೋಸ ಮಾಡಿದ್ದಾರೆ. ಪಕ್ಷ ಅವರನ್ನು ಅತ್ಯಂತ ಗೌರವದಿಂದ ನೋಡಿಕೊಂಡಿದೆ. ಆದರೂ ಪ್ರಜಾಪ್ರಭುತ್ವಕ್ಕೆ ಮಾರಕ ಎಂಬಂತೆ, ಬಿಜೆಪಿ ಪಕ್ಷದ ಪ್ರತಿನಿಧಿಯಾಗಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಮಾಡಿರುವುದನ್ನು ಯಲ್ಲಾಪುರ ಮಂಡಲ ಖಂಡಿಸುತ್ತದೆ. ಅವರ ಹೊರತಾಗಿಯೂ ಲೋಕಸಭಾ ಚುನಾವಣೆಯಲ್ಲಿ ಅತ್ಯಂತ ಹೆಚ್ಚಿನ ಮತದ ಅಂತರದಿಂದ ನಮ್ಮ ಅಭ್ಯರ್ಥಿ ಕಾಗೇರಿ ಅವರು ಜಯ ಸಾಧಿಸಿದ್ದಾರೆ. ಹಿಂದಿನ ಎಲ್ಲಾ ಚುನಾವಣೆಯನ್ನು ಕಾರ್ಯಕರ್ತರ ಆಧಾರದ ಮೇಲೆ ಗೆಲ್ಲುತ್ತಾ ಬಂದಿದ್ದು, ಮುಂದೆಯೂ ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿದೆ. ಹೀಗಾಗಿ ಶಾಸಕರು ರಾಜಿನಾಮೆ ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ನಾವು ಪ್ರತಿಭಟನೆ ನಡೆಸಲಿದ್ದೇವೆ ಎಂದರು.

ಇದನ್ನೂ ಓದಿ: Gold Rate Today: ರಾಜಧಾನಿಯಲ್ಲಿ ಏರಿಳಿಯದ ಬಂಗಾರದ ಬೆಲೆ; ಇಂದಿನ ದರಗಳು ಹೀಗಿವೆ

ಈ ಸಂದರ್ಭದಲ್ಲಿ ಪ್ರಮುಖರಾದ ಉಮೇಶ ಭಾಗ್ವತ್, ಪ.ಪಂ. ಸದಸ್ಯೆ ಶ್ಯಾಮಿಲಿ ಪಾಟನಕರ್, ಸೋಮೇಶ್ವರ ನಾಯ್ಕ, ಶ್ರೀನಿವಾಸ್ ಗಾಂವ್ಕರ್, ಪ್ರಧಾನ ಕಾರ್ಯದರ್ಶಿ ನಟರಾಜ ಗೌಡರ್, ಜಿಲ್ಲಾ ಕಾರ್ಯಕಾರಣಿ ಸದಸ್ಯ ವೆಂಕಟ್ರಮಣ ಬೆಳ್ಳಿ, ನಾಗರಾಜ್, ಅರ್ಜುನ್ ಬೆಂಡಿಗೇರಿ, ರವಿ ದೇವಡಿಗ, ಬಜ್ಜು ಪಿಂಗಳೆ, ರಾಘವೇಂದ್ರ ಭಟ್, ಗಣೇಶ ಹೆಗಡೆ ಹಾಗೂ ಕಾರ್ಯಕರ್ತರು ಉಪ್ಥಿತರಿದ್ದರು.

Continue Reading

ಮಳೆ

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka Weather Forecast : ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದಾಗಿ (Rain News) ಮರಗಳು ಧರೆಗುರುಳಿದ್ದು, ನಾನಾ ಅವಾಂತರವನ್ನೇ ಸೃಷ್ಟಿಸಿದೆ. ಭಾರಿ ಮಳೆಗೆ ಮನೆ ಗೋಡೆ ಕುಸಿದು ಎರಡು ಎಮ್ಮೆಗಳು ಮೃತಪಟ್ಟರೆ ಮತ್ತೊಂದು ಕಡೆ ನೆಲಕ್ಕೆ ಅಪ್ಪಳಿಸಿದ್ದ ವಿದ್ಯುತ್‌ ತಂತಿ ತಗುಲಿ ಆಕಳೊಂದು ಮೃತಪಟ್ಟಿದೆ.

VISTARANEWS.COM


on

By

Karnataka weather Forecast
Koo

ವಿಜಯಪುರ: ರಾಜ್ಯದ ಹಲವೆಡೆ ವ್ಯಾಪಕ ಮಳೆಯಾಗುತ್ತಿದ್ದು, (Karnataka Weather Forecast) ಅವಾಂತರವನ್ನೇ ಸೃಷ್ಟಿಸಿದೆ. ವಿಜಯಪುರದಲ್ಲಿ ಸುರಿದ ಧಾರಾಕಾರ ಮಳೆಗೆ (Rain News) ಮನೆಯ ಗೋಡೆ ಕುಸಿದು, ಎರಡು ಎಮ್ಮೆಗಳು ಮೃತಪಟ್ಟಿವೆ. ಗೋಡೆ ಕುಸಿಯುವಾಗ ಮನೆಯಲ್ಲಿ ಯಾರು ಇಲ್ಲದ ಕಾರಣಕ್ಕೆ ಭಾರಿ ಅನಾಹುತವೊಂದು ತಪ್ಪಿದೆ. ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಪಟ್ಟಣದಲ್ಲಿ ಘಟನೆ ನಡೆದಿದೆ.

ಬಸಪ್ಪ ಕೋಟಿನ್ ಎಂಬುವರಿಗೆ ಸೇರಿದ ಎರಡು ಎಮ್ಮೆಗಳನ್ನು ಮನೆ ಸಮೀಪವೇ ಕಟ್ಟಲಾಗಿತ್ತು. ಈ ವೇಳೆ ಗೋಡೆ ಕುಸಿದು ಬಿದ್ದ ರಭಸಕ್ಕೆ ಎಮ್ಮೆಗಳು ಮೃತಪಟ್ಟಿವೆ. ಲಕ್ಷ ರೂಪಾಯಿಗೆ ಬೆಲೆ ಬಾಳುತ್ತಿದ್ದ ಎರಡು ಎಮ್ಮೆಗಳನ್ನು ಕಳೆದುಕೊಂಡು ಬಸಪ್ಪ ಕಂಗಲಾಗಿದ್ದಾರೆ. ನೈಸರ್ಗಿಕ ವಿಕೋಪದಿಂದ ಆದ ಅನಾಹುತಕ್ಕೆ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ. ನಿನ್ನೆ ಭಾನುವಾರ ರಾತ್ರಿ‌ ಸುರಿದ ಧಾರಾಕಾರ ಮಳೆಗೆ ದೇವರ ಹಿಪ್ಪರಗಿಯ ಕೆಲ ಮನೆಗಳಲ್ಲಿ ನೀರು ನುಗ್ಗಿತ್ತು. ಇದರಿಂದಾಗಿ ಜನರು ಜಾಗರಣೆ ಮಾಡುವಂತಾಯಿತು.

ಯಾದಗಿರಿಯಲ್ಲಿ ವಿದ್ಯುತ್ ತಗುಲಿ ಜಾನುವಾರು ಸಾವು

ಇತ್ತ ಯಾದಗಿರಿಯ ಯಡ್ಡಹಳ್ಳಿ ಗ್ರಾಮದಲ್ಲಿ ವಿದ್ಯುತ್‌ ತಗುಲಿ ಜಾನುವಾರು ಮೃತಪಟ್ಟಿದೆ. ಜೆಸ್ಕಾಂ ಇಲಾಖೆ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ವಿದ್ಯುತ್‌ ಕಂಬಗಳು ಧರೆಗುರುಳಿದ್ದವು. ವಿದ್ಯುತ್ ಕಂಬ ಹಾಗೂ ವಿದ್ಯುತ್ ತಂತಿ ತೆರವು ಮಾಡದೆ ಜೆಸ್ಕಾಂ ಸಿಬ್ಬಂದಿ ವಿದ್ಯುತ್ ಪೂರೈಕೆ ಮಾಡಿದ್ದಾರೆ. ಸಿಬ್ಬಂದಿ ನಿರ್ಲಕ್ಷ್ಯದಿಂದಲೇ ವಿದ್ಯುತ್ ತಂತಿ ತುಳಿದು ಆಕಳು ಮೃತಪಟ್ಟಿದೆ ಎಂದು ಆರೋಪಿಸಿದ್ದಾರೆ. ಆಕಳು ಕಳೆದುಕೊಂಡ ಲಿಂಗಾರೆಡ್ಡಿ ಕಂಗಲಾಗಿದ್ದು, ಜೆಸ್ಕಾಂ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹೊರಹಾಕಿದ್ದಾರೆ.

ಇತ್ತ ಧಾರಕಾರ ಮಳೆಯಿಂದ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬರದೇವನಾಳ ಸಮೀಪದ ಡೋಣಿ ನದಿಯ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ. ಡೋಣಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಕಿರಿದಾದ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಡೋಣಿ ನದಿ ಉಕ್ಕಿ ಹರಿಯುತ್ತಿರುವುದರಿಂದ ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ತರಕಿಹಾಳ, ಕರೇಕನಾಳ, ಮದಲಿಂಗನಾಳ ಹಾಗೂ ಗೆದ್ದಲಮರಿ ಸೇರಿ ಹಲವು ಗ್ರಾಮಗಳ ಸಂಪರ್ಕ ಕಡಿತವಾಗಿದೆ.

ಇದನ್ನೂ ಓದಿ: Karnataka Rain : ಬೆಳಗಾವಿಯಲ್ಲಿ ಭಾರಿ ಮಳೆಗೆ ಮರ ಬಿದ್ದು ಗಂಭೀರ ಗಾಯಗೊಂಡಿದ್ದ ಮತ್ತೊಬ್ಬ ಯುವಕ ಸಾವು

ಕಲಬುರಗಿಯಲ್ಲಿ ಕೆರೆಯಂತಾದ ರಸ್ತೆಗಳು

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ತೋಟ್ನಳ್ಳಿ ಗ್ರಾಮದಲ್ಲಿ ಭಾರಿ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ರಸ್ತೆಗಳು ಜಲಾವೃತಗೊಂಡಿವೆ. ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ತವರು ಕ್ಷೇತ್ರದಲ್ಲಿ ಮಳೆಯು ಅವಾಂತರವನ್ನು ಸೃಷ್ಟಿಸಿದೆ. ಪ್ರತಿ ವರ್ಷ ಮಳೆಗಾಲದಲ್ಲಿ ಗ್ರಾಮಸ್ಥರು ಪರದಾಡುವಂತಾಗಿದೆ. ಶಾಶ್ವತ ಪರಿಹಾರಕ್ಕೆ ಆಗ್ರಹಿಸಿದ್ದಾರೆ.

ಕೊಡಗಿನಲ್ಲಿ ಮಳೆಗೆ ಧರೆಗುರುಳಿದ ಮರಗಳು

ಕೊಡಗು ಜಿಲ್ಲೆಯಾದ್ಯಂತ ನಿರಂತರ ಮಳೆಯಿಂದಾಗಿ ಹಲವೆಡೆ ಮರಗಳು ಧರೆಗುರುಳಿವೆ. ಮಡಿಕೇರಿ ತಾಲೂಕಿನ ಭಾಗಮಂಡಲದ ರಸ್ತೆಗೆ ಅಡ್ಡಲಾಗಿ ಮರ ಬಿದ್ದು ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು. ಮತ್ತೊಂದೆಡೆ ಪಾಂಡಿ ಹಾಗೂ ಸೂರ್ತಲೆ ರಸ್ತೆಯಲ್ಲೂ ಮರ ಬಿದ್ದು ಅವಾಂತರವೇ ಸೃಷ್ಟಿಯಾಗಿದೆ. ಭಾಗಮಂಡಲ ರಸ್ತೆಯಲ್ಲಿ ಬಿದ್ದಿರುವ ಮರಗಳನ್ನು ಸ್ಥಳೀಯರೇ ತೆರವುಗೊಳಿಸಿದ್ದಾರೆ.

ವಿಜಯನಗರದಲ್ಲಿ ನೆಲಕ್ಕೆ ಅಪ್ಪಳಿಸಿದ ಆಲದ ಮರ

ವಿಜಯನಗರದ ಕೂಡ್ಲಿಗಿ ಪಟ್ಟಣದ ರಾಜೀವ್ ಗಾಂಧೀ ನಗರದಲ್ಲಿ ನಿರಂತರ ಮಳೆಯಿಂದಾಗಿ ಬೃಹತ್ ಆಲದ ಮರವೊಂದು ನೆಲಕ್ಕೆ ಅಪ್ಪಳಿಸಿದೆ. ಕೂಡ್ಲಿಗಿ – ಹೊಸಪೇಟೆ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಮರ ಉರುಳಿ ಬಿದ್ದ ಪರಿಣಾಮ ವಾಹನಗಳ ಸಂಚಾರಕ್ಕೆ ಅಡಚಣೆ ಆಗಿತು. ಮರ ತೆರವು ಗೊಳಿಸುವಂತೆ ರಾಜೀವ್ ಗಾಂಧೀ ನಗರದ ನಿವಾಸಿಗಳು ಹಾಗೂ ರೈತರು ಆಗ್ರಹಿಸಿದರು. ಆಲದ ಮರವು ವಿದ್ಯುತ್ ತಂತಿ ಮೇಲೆಯೂ ಬಿದ್ದಿದ್ದು, ರಾಜೀವ್ ಗಾಂಧೀ ನಗರಕ್ಕೆ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Virat Kohli
ಕ್ರೀಡೆ4 mins ago

Virat Kohli: ಸಾರ್ವಜನಿಕವಾಗಿ ಕಾಣಿಸಿಕೊಂಡರೂ ಕೊಹ್ಲಿಯನ್ನು ಗುರುತಿಸದ ನ್ಯೂಯಾರ್ಕ್​ ಜನತೆ; ವಿಡಿಯೊ ವೈರಲ್​

Cashless Health Claim
ಮನಿ ಗೈಡ್17 mins ago

Cashless Health Claim: ಸಂಪೂರ್ಣ ನಗದು ರಹಿತ ಆರೋಗ್ಯ ವಿಮೆ ಕ್ಲೈಮ್; ಆಗಸ್ಟ್ 1ರಿಂದ ಜಾರಿ

Shatrughan Sinha
ಸಿನಿಮಾ17 mins ago

Shatrughan Sinha: ಮುಸ್ಲಿಂ ಯುವಕನ ಜತೆ ಮಗಳ ವಿವಾಹ; ನಟ ಶತ್ರುಘ್ನ ಸಿನ್ಹಾ ಪ್ರತಿಕ್ರಿಯೆ ಏನು?

Amol Kale
ಪ್ರಮುಖ ಸುದ್ದಿ19 mins ago

Amol Kale: ಭಾರತ-ಪಾಕ್‌ ಪಂದ್ಯ ವೀಕ್ಷಿಸಲು ಅಮೆರಿಕಕ್ಕೆ ತೆರಳಿದ್ದ ಎಂಸಿಎ ಅಧ್ಯಕ್ಷ ಅಮೋಲ್‌ ಕಾಳೆ ನಿಧನ

T20 World Cup 2024
ಕ್ರಿಕೆಟ್47 mins ago

T20 World Cup 2024: ಪಾಕ್​ಗೆ ಇನ್ನೂ ಇದೆ ಸೂಪರ್-8 ಅವಕಾಶ? ಇಲ್ಲಿದೆ ಲೆಕ್ಕಾಚಾರ

Narenda Modi
Lok Sabha Election 202457 mins ago

ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌, ಮಾಜಿ ಪ್ರಧಾನಿಗಳಾದ ಮನಮೋಹನ ಸಿಂಗ್‌, ದೇವೇಗೌಡ ಅವರ ಆಶೀರ್ವಾದ ಪಡೆದ ಮೋದಿ

Smartphone Charging Tips
ತಂತ್ರಜ್ಞಾನ1 hour ago

Smartphone Charging Tips: ನಿಮ್ಮ ಸ್ಮಾರ್ಟ್ ಪೋನ್ ಬ್ಯಾಟರಿ ಹೆಚ್ಚು ಬಾಳಿಕೆ ಬರಲು ಹೀಗೆ ಮಾಡಿ

Bengaluru Crime News
ಬೆಂಗಳೂರು1 hour ago

ಬೈಕ್‌ ಮರೆತು ಬಂದಿದ್ದನ್ನು ಪ್ರಶ್ನಿಸಿದ ಮಗನನ್ನೇ ಕೊಂದ ತಂದೆ; ಕುಡಿದ ಮತ್ತಲ್ಲಿ ನಡೆಯಿತು ದುರಂತ!

RSA vs BAN
ಕ್ರೀಡೆ1 hour ago

RSA vs BAN: ಹ್ಯಾಟ್ರಿಕ್​ ಗೆಲುವು ಸಾಧಿಸಿ ಸೂಪರ್​-8 ಹಂತಕ್ಕೆ ಲಗ್ಗೆಯಿಟ್ಟ ದಕ್ಷಿಣ ಆಫ್ರಿಕಾ

Delhi Tour
ಲೈಫ್‌ಸ್ಟೈಲ್1 hour ago

Delhi Tour: ದೆಹಲಿಗೆ ಪ್ರವಾಸಕ್ಕೆ ಹೋದಾಗ ಮಿಸ್ ಮಾಡದೇ ಈ ಅದ್ಭುತ ಸ್ಥಳಗಳಿಗೆ ಭೇಟಿ ನೀಡಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ18 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

ಟ್ರೆಂಡಿಂಗ್‌