Sarfaraz Khan : ಕೆಕೆಆರ್​ ತಂಡ ಸೇರಲಿದ್ದಾರಾ ಸರ್ಫರಾಜ್ ಖಾನ್​? - Vistara News

ಪ್ರಮುಖ ಸುದ್ದಿ

Sarfaraz Khan : ಕೆಕೆಆರ್​ ತಂಡ ಸೇರಲಿದ್ದಾರಾ ಸರ್ಫರಾಜ್ ಖಾನ್​?

Sarfaraz Khan : ಇಂಗ್ಲೆಂಡ್ ವಿರುದ್ಧದ ಟೆಸ್ಟ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಸರ್ಫರಾಜ್ ಖಾನ್ ಅವರನ್ನು ತಂಡಕ್ಕೆ ಸೇರಿಸಲು ಕೆಕೆಆರ್ ಉತ್ಸುಕವಾಗಿದೆ ಎಂದು ಹೇಳಲಾಗಿದೆ.

VISTARANEWS.COM


on

Sarfaraz Khan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ ಮುಂಬರುವ ಋತುವಿನಲ್ಲಿ ಸರ್ಫರಾಜ್ ಖಾನ್ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. 2023ರ ಡಿಸೆಂಬರ್​ನಲ್ಲಿ ನಡೆದ ಹರಾಜಿನಲ್ಲಿ ಬಲಗೈ ಬ್ಯಾಟರ್​​ ಆಶ್ಚರ್ಯಕರವಾಗಿ ಅನ್​ಸೋಲ್ಡ್​ ಆಗಿದ್ದರು. ಇದಕ್ಕೂ ಮೊದಲು ಐಪಿಎಲ್ 2023 ರಲ್ಲಿ ಅವರು ಉತ್ತಮ ಪ್ರದರ್ಶನ ನೀಡಲು ವಿಫಲಗೊಂಡಿದ್ದರು. ಹೀಗಾಗಿ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಬಿಡುಗಡೆ ಮಾಡಿತ್ತು. ಅವರು ದೆಹಲಿ ತಂಡದ ಪರ ನಾಲ್ಕು ಪಂದ್ಯಗಳನ್ನು ಆಡಿದರು ಮತ್ತು ಸಾಧಾರಣ 53 ರನ್ ಗಳಿಸಿದ್ದರು. ಬ್ಯಾಟ್​ನೊಂದಿಗೆ ಅವರ ಪ್ರತಿಭೆ ಎಲ್ಲರಿಗೂ ತಿಳಿದಿದ್ದರೂ, ಫ್ರಾಂಚೈಸಿಗಳು ಹರಾಜಿನಲ್ಲಿ ಅವರನ್ನು ಬಿಡ್ ಮಾಡದಿರಲು ನಿರ್ಧರಿಸಿದವು.

ಆದಾಗ್ಯೂ, ಟೆಸ್ಟ್​ನಲ್ಲಿ ಟೀಮ್ ಇಂಡಿಯಾಕ್ಕಾಗಿ ಪಾದಾರ್ಪಣೆ ಮಾಡಿದ ನಂತರ ಮುಂಬೈ ಆಟಗಾರನ ಬಗ್ಗೆ ಆಸಕ್ತಿ ಮೂಡಿ ಬಂದಿದೆ. ಇತ್ತೀಚೆಗೆ ಮುಕ್ತಾಯಗೊಂಡ ಇಂಗ್ಲೆಂಡ್ ವಿರುದ್ಧದ ರಾಜ್​ಕೋಟ್​ ಟೆಸ್ಟ್​ನ ಎರಡೂ ಇನ್ನಿಂಗ್ಸ್​ಗಳಲ್ಲಿ ಅರ್ಧಶತಕಗಳನ್ನು ಗಳಿಸುವ ಮೂಲಕ ಸರ್ಫರಾಜ್ ಖಾನ್ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮೈದಾನಕ್ಕೆ ಕಾಲಿಟ್ಟರು. ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 66 ಎಸೆತಗಳಲ್ಲಿ 62 ರನ್ ಗಳಿಸಿದ್ದ ಅವರು, ಎರಡನೇ ಇನ್ನಿಂಗ್ಸ್​ನಲ್ಲಿ 72 ಎಸೆತಗಳಲ್ಲಿ ಅಜೇಯ 68 ರನ್ ಬಾರಿಸಿದ್ದರು.

ಕೆಕೆಆರ್ ಗುರಿ ಸರ್ಫರಾಜ್ ಖಾನ್


ಎರಡು ಬಾರಿಯ ಐಪಿಎಲ್ ಚಾಂಪಿಯನ್ಸ್ ಕೋಲ್ಕತಾ ನೈಟ್ ರೈಡರ್ಸ್ ತಂಡ 2024ರ ಐಪಿಎಲ್ ಟೂರ್ನಿಗೆ ಸರ್ಫರಾಜ್ ಖಾನ್ ಅವರ ಸೇವೆ ಪಡೆಯಲು ಆಸಕ್ತಿ ತೋರಿದೆ. ಬಂಗಾಳಿ ದಿನಪತ್ರಿಕೆ ಆನಂದಬಜಾರ್ ಪತ್ರಿಕೆಯ ವರದಿಯ ಪ್ರಕಾರ, ಕೆಕೆಆರ್ ಮಾರ್ಗದರ್ಶಕ ಗೌತಮ್ ಗಂಭೀರ್ ಬ್ಯಾಟರ್​ ಬಳಿ ಸಹಿ ಹಾಕುವಂತೆ ಕೋರಿಕೊಂಡಿದ್ದಾರೆ . ಬ್ಯಾಟಿಂಗ್ ಕ್ರಮಾಂಕವನ್ನು ಬಲಪಡಿಸುವ ಸಲುವಾಗಿ ಬ್ಯಾಟರ್​​ಗೆ ಸಹಿ ಹಾಕುವಂತೆ ಕೆಕೆಆರ್ ಮಾಜಿ ನಾಯಕ ಫ್ರಾಂಚೈಸಿಗೆ ಸಲಹೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಸರ್ಫರಾಜ್ ಖಾನ್ ದೇಶೀಯ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಭರವಸೆಯ ಆರಂಭವನ್ನು ನೀಡಿದ್ದಾರೆ, ಆದರೆ ಅವರು ಐಪಿಎಲ್​​ನಲ್ಲಿ ನಿಜವಾಗಿಯೂ ಪ್ರಭಾವ ಬೀರಲು ಸಾಧ್ಯವಾಗಿಲ್ಲ. ಅವರು ಇಲ್ಲಿಯವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದಾರೆ ಮತ್ತು ನಿಜವಾಗಿಯೂ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಐಪಿಎಲ್​​ನಲ್ಲಿ 50 ಪಂದ್ಯಗಳನ್ನಾಡಿರುವ ಅವರು ಕೇವಲ 585 ರನ್ ಗಳಿಸಿದ್ದಾರೆ.

ಕೆಕೆಆರ್ ಬಗ್ಗೆ ಮಾತನಾಡುವುದಾದರೆ ತಂಡವು 2018ರಿಂದ ಲೀಗ್ ಹಂತ ದಾಟಿಲ್ಲ. ಈ ಋತುವಿಗೆ ಮುಂಚಿತವಾಗಿ, ಅವರು ಗಂಭೀರ್ ಅವರನ್ನು ತಮ್ಮ ಮಾರ್ಗದರ್ಶಕರಾಗಿ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಬೆನ್ನುನೋವಿನಿಂದಾಗಿ ಕಳೆದ ಋತುವಿನಿಂದ ಹೊರಗುಳಿದಿದ್ದ ಶ್ರೇಯಸ್ ಅಯ್ಯರ್ ಮರಳುವುದರಿಂದ ಅವರು ಬಲಗೊಳ್ಳಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Narendra Modi: 3ನೇ ಬಾರಿ ಪ್ರಧಾನಿಯಾಗಿ ಇಂದು ಸಂಜೆ ಮೋದಿ ಪ್ರಮಾಣ; ಇಲ್ಲಿದೆ ಬಾಲ್ಯದಿಂದ ವಿಶ್ವಗುರುತನಕದ ಜೀವನ ಚಿತ್ರಣ

Narendra Modi: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಎನ್‌ಡಿಎ ಮೈತ್ರಿಕೂಟವು ಸಾರ್ವತ್ರಿಕ ಚುನಾವಣೆಯಲ್ಲಿ 292 ಸೀಟುಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಹುಮತ ಪಡೆದಿದ್ದು, ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗುವ ಮೂಲಕ ಹ್ಯಾಟ್ರಿಕ್ ಸಾಧಿಸಲಿದ್ದಾರೆ. ಕಾಂಗ್ರೆಸ್‌ ಅಲೆ, ರಾಹುಲ್‌ ಗಾಂಧಿ ಯಾತ್ರೆ, ಇಂಡಿಯಾ ಒಕ್ಕೂಟದ ಒಗ್ಗಟ್ಟಿನ ಮಧ್ಯೆಯೂ ಎನ್‌ಡಿಎ ಬಹುಮತ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಇದೆಲ್ಲದರ ಮಧ್ಯೆ, ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ಹೊತ್ತಿನಲ್ಲಿ ನರೇಂದ್ರ ಮೋದಿ ಅವರ ವೈಯಕ್ತಿಕ ಜೀವನ, ರಾಜಕೀಯಗಾಥೆ ಇಲ್ಲಿದೆ.

VISTARANEWS.COM


on

Narendra Modi
Koo

ನವದೆಹಲಿ: ಜವಾಹರ ಲಾಲ್‌ ನೆಹರು, ಲಾಲ್‌ ಬಹದ್ದೂರ್‌ ಶಾಸ್ತ್ರಿ, ಇಂದಿರಾ ಗಾಂಧಿ, ರಾಜೀವ್‌ ಗಾಂಧಿ, ಪಿ.ವಿ.ನರಸಿಂಹರಾವ್‌, ಅಟಲ್‌ ಬಿಹಾರಿ ವಾಜಪೇಯಿ, ಸೋನಿಯಾ ಗಾಂಧಿ… ಹೀಗೆ, ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ ಹಲವು ನಾಯಕರು ದೇಶವನ್ನೇ ಆವರಿಸಿಕೊಂಡಿದ್ದಾರೆ. ಹೀಗೆ, 21ನೇ ಶತಮಾನದಲ್ಲಿ ಇಡೀ ದೇಶವನ್ನೇ ಆವರಿಸಿಕೊಂಡ, ಟೀಕೆ-ವಿರೋಧದ ಮಧ್ಯೆಯೂ ದೇಶದ ಜನರನ್ನು ಮೋಡಿ ಮಾಡಿದ ನಾಯಕ ಎಂದರೆ ಅದು ನರೇಂದ್ರ ದಾಮೋದರ ದಾಸ್‌ ಮೋದಿ ಹಾಗೂ ನರೇಂದ್ರ ದಾಮೋದರ ದಾಸ್‌ ಮೋದಿ ಮಾತ್ರ. ಇಂತಹ ನರೇಂದ್ರ ಮೋದಿ (Narendra Modi) ಅವರೀಗ ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ (Prime Minister) ಇಂದು (ಜೂನ್‌ 9) ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಆಡಳಿತ ವಿರೋಧಿ ಅಲೆ, ಕಾಂಗ್ರೆಸ್‌ ಸೇರಿ ಇಂಡಿಯಾ ಒಕ್ಕೂಟದ ನಾಯಕರ ಪೈಪೋಟಿಯ ಮಧ್ಯೆಯೂ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಸ್ಪಷ್ಟ ಬಹುಮತ ಸಾಧಿಸಿದೆ ಎಂದರೆ, ಅದಕ್ಕೆ ಮೋದಿ ಅವರ ನಾಯಕತ್ವವೇ ನಿರ್ಣಾಯಕವಾಗಿದೆ. ಇದೇ ಕಾರಣಕ್ಕಾಗಿ 10 ವರ್ಷದ ಬಳಿಕ ಮೈತ್ರಿ ಸರ್ಕಾರ ರಚನೆಯಾಗುತ್ತಿದ್ದರೂ ಮೋದಿ ಅವರೇ ಅವಿರೋಧವಾಗಿ ಪ್ರಧಾನಿಯಾಗುತ್ತಿದ್ದಾರೆ. ಹಾಗಾದರೆ, ನರೇಂದ್ರ ಮೋದಿ ಅವರ ಹಿನ್ನೆಲೆ ಏನು? ಅವರು ರಾಜಕೀಯಕ್ಕೆ ಧುಮುಕಿದ್ದು ಹೇಗೆ? ದೇಶದ ನಾಯಕರಾಗಿ ಅವರು ಹೊರಹೊಮ್ಮಿದ್ದು ಹೇಗೆ? ಇಡೀ ದೇಶವನ್ನು ಆವರಿಸಿಕೊಂಡಿದ್ದು ಹೇಗೆ? ಅವರು ತೆಗೆದುಕೊಂಡ ಪ್ರಮುಖ ತೀರ್ಮಾನಗಳು ಯಾವವು ಎಂಬುದರ ಮೇಲಿನ ಇಣುಕು ನೋಟ ಇಲ್ಲಿದೆ…

ನರೇಂದ್ರ ಮೋದಿ ಬಾಲ್ಯ

ನರೇಂದ್ರ ಮೋದಿ ಅವರು ಗುಜರಾತ್‌ನ ಮೆಹ್ಸಾನ ಜಿಲ್ಲೆಯ ವಡ್ನಗರದಲ್ಲಿ 1950ರ ಸೆಪ್ಟೆಂಬರ್‌ 17ರಂದು ಜನಿಸಿದರು. ದಾಮೋದರ ದಾಸ್‌ ಹಾಗೂ ಹೀರಾಬೆನ್‌ ಅವರು ಮೋದಿ ಅವರ ತಂದೆ-ತಾಯಿ. ನರೇಂದ್ರ ಮೋದಿ ಅವರು ದಾಮೋದರ ದಾಸ್‌ ದಂಪತಿಗೆ ಮೂರನೇ ಮಗನಾಗಿ ಜನಿಸಿದರು. ಸೋಮ ಮೋದಿ ಪಂಕಜ್‌ ಮೋದಿ, ಪ್ರಹ್ಲಾದ್‌ ಮೋದಿ, ವಾಸಂತಿಬೆನ್‌ ಹಸ್ಮುಖ್‌ಲಾಲ್‌ ಮೋದಿ ಹಾಗೂ ಅರವಿಂದ್‌ ಮೋದಿ ಅವರು ಇವರ ಸಹೋದರ ಹಾಗೂ ಸಹೋದರಿ ಆಗಿದ್ದಾರೆ. ಇಡೀ ಕುಟುಂಬವು 40 ಅಡಿ ಉದ್ದ ಹಾಗೂ 12 ಅಡಿ ಅಗಲದ ಮನೆಯಲ್ಲೇ ವಾಸಿಸುತ್ತಿತ್ತು. ಇದು ಇವರ ಬಡತನವನ್ನು ತೋರಿಸುತ್ತಿತ್ತು. ಮೋದಿ ಅವರ ತಂದೆಯು ಸ್ಥಳೀಯ ರೈಲು ನಿಲ್ದಾಣದಲ್ಲಿ ಪುಟ್ಟದೊಂದು ಟೀ ಅಂಗಡಿ ಇಟ್ಟುಕೊಂಡಿದ್ದರು. ಮೋದಿ ಅವರೂ ಬಾಲ್ಯದಲ್ಲಿ ಓದಿನ ಜತೆಗೆ ತಂದೆಯ ಟೀ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಓದು, ಚರ್ಚೆ, ಈಜಿನಲ್ಲಿ ನಿಪುಣರಾಗಿದ್ದ ಮೋದಿ ಅವರು ಹೆಚ್ಚು ಗೆಳೆಯರನ್ನು ಕೂಡ ಹೊಂದಿದ್ದರು.

ನರೇಂದ್ರ ಮೋದಿ ಅವರಿಗೆ 8ನೇ ವಯಸ್ಸಿನಲ್ಲಿಯೇ ಆರ್‌ಎಸ್‌ಎಸ್‌ನ ಪರಿಚಯವಾಯಿತು. ಸ್ವಾಮಿ ವಿವೇಕಾನಂದರ ವಿಚಾರಧಾರೆಗಳು ಅವರನ್ನು ಆಕರ್ಷಿಸಿದವು. 17ನೇ ವಯಸ್ಸಿನಲ್ಲೇ ಮನೆ ತೊರೆದ ಮೋದಿ, ಹಿಮಾಲಯ, ರಿಷಿಕೇಶ ಸೇರಿ ದೇಶದ ಹಲವು ಯಾತ್ರಾ ಸ್ಥಳಗಳಿಗೆ ಭೇಟಿ ನೀಡಿದರು. ಇದಾದ ಬಳಿಕ, 1972ರಲ್ಲಿ ಅವರು ಆರ್‌ಎಸ್‌ಎಸ್‌ ಸೇರ್ಪಡೆಯಾಗಿ, ಇಡೀ ಜೀವನವನ್ನು ಅವರು ಸೇವೆಗೆ ಮುಡಿಪಾಗಿಡುವ ತೀರ್ಮಾನ ಮಾಡಿದರು. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಹೋರಾಟ, 1982ರಲ್ಲಿ ಆರ್‌ಎಸ್‌ಎಸ್‌ ಪ್ರಚಾರಕರಾಗಿ ನೇಮಕ, 1987ರಲ್ಲಿ ಗುಜರಾತ್‌ ಬಿಜೆಪಿ ಸಂಘಟನಾ ಕಾರ್ಯದರ್ಶಿ, ಅಯೊಧ್ಯೆ ರಥಯಾತ್ರೆಯಲ್ಲಿ ಭಾಗಿಯಾಗಿ, 1995ರಲ್ಲಿ ಅವರು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ದೆಹಲಿಗೆ ತೆರಳಿದರು. 1998ರಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿಯೂ ಆಯ್ಕೆಯಾದರು. ಅಷ್ಟೊತ್ತಿಗಾಗಲೇ ಅವರಿಗೆ ಅಟಲ್‌ ಬಿಹಾರಿ ವಾಜಪೇಯಿ ಹಾಗೂ ಎಲ್‌.ಕೆ.ಅಡ್ವಾಣಿಯವರ ಸಖ್ಯ ಬೆಳೆದಿತ್ತು.

ಮೋದಿ ರಾಜಕೀಯಕ್ಕೆ ಧುಮುಕಿದ್ದು ಹೇಗೆ?

ಗುಜರಾತ್‌ ರಾಜಕಾರಣವನ್ನು ಅವಲೋಕಿಸಿದರೆ, 1995ರಲ್ಲಿ ಬಿಜೆಪಿಯ ಜನಪ್ರಿಯ ಮತ್ತು ಹಿರಿಯ ನಾಯಕ ಕೇಶುಭಾಯ್‌ ಪಟೇಲ್‌ ಮುಖ್ಯಮಂತ್ರಿಯಾಗಿದ್ದರು. 1998-2001ರ ತನಕ ಮತ್ತೊಮ್ಮೆ ಅವರೇ ಸಿಎಂ ಆಗಿದ್ದರು. ಅವರ ಉತ್ತರಾಧಿಕಾರಿಯಾಗಿ ರಾಜ್ಯದ ಮುಖ್ಯಮಂತ್ರಿಯಾದವರೇ ನರೇಂದ್ರ ಮೋದಿ. ಕೇಶುಭಾಯಿ ಪಟೇಲ್‌ ಅವರಿಗೆ ರಾಜಕೀಯ ಅಸ್ಥಿರತೆ, ಶಂಕರ್‌ ಸಿಂಘ್‌ ವಘೇಲರ ಬಂಡಾಯದ ಪರಿಣಾಮ ಒಂದು ಕಡೆ ಸವಾಲುಗಳು ಎದುರಾಗಿದ್ದವು. ಮತ್ತೊಂದು ಕಡೆ 2001ರಲ್ಲಿ ಗುಜರಾತ್‌ನ ಭುಜ್‌ನಲ್ಲಿ ಸಂಭವಿಸಿದ ಭೀಕರ ಭೂಕಂಪ ರಾಜಕೀಯದ ಚಿತ್ರಣವನ್ನೇ ಬದಲಿಸಿತು. ದುರ್ಬಲ ಆಡಳಿತ ಕೇಶುಭಾಯಿ ಪಟೇಲರ ರಾಜಕೀಯ ಜೀವನವನ್ನೂ ಕ್ಷೀಣಿಸಿತು. ಆಗ ಪ್ರಧಾನಿಯಾಗಿದ್ದ ವಾಜಪೇಯಿ ಅವರು ಗುಜರಾತ್‌ನಲ್ಲಿ ಪಕ್ಷದ ವರ್ಚಸ್ಸು ವೃದ್ಧಿಸಲು ಹೊಸ ನಾಯಕತ್ವದ ಹುಡುಕಾಟ ನಡೆಸಿದರು. ಈ ಅನ್ವೇಷಣೆಯಲ್ಲಿ ಸಿಕ್ಕಿದ ಉತ್ತರ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ನರೇಂದ್ರ ಮೋದಿ! ಪ್ರಧಾನಿ ವಾಜಪೇಯಿ ಅವರ ಬುಲಾವ್‌ ಮೇರೆಗೆ ಅವರ ನಿವಾಸಕ್ಕೆ ತೆರಳಿದ ಮೋದಿಯವರಿಗೆ ಅಚ್ಚರಿ ಕಾದಿತ್ತು. ದೆಹಲಿಯಿಂದ ಗುಜರಾತ್‌ಗೆ ತೆರಳಿ ಮುಖ್ಯಮಂತ್ರಿಯಾಗುವಂತೆ ವಾಜಪೇಯಿ ಸೂಚಿಸಿದ್ದರು. ಆದರೆ ಆಗಲೇ ಪಕ್ಷದ ಸಂಘಟನಾ ಕೌಶಲದಲ್ಲಿ ತಮ್ಮ ಛಾಪು ಮೂಡಿಸಿದ್ದ ಮೋದಿಯವರು ಸರ್ಕಾರವನ್ನೂ ನಡೆಸಬಲ್ಲರು ಎಂಬ ನಂಬಿಕೆ ವಾಜಪೇಯಿ ಅವರಲ್ಲಿತ್ತು. ಅದರಂತೆ ಮೋದಿ ಅವರು 2001ರಲ್ಲಿ ಗುಜರಾತ್‌ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು.2002ರ ಬಳಿಕ ಪಟೇಲ್‌ ಬಿಜೆಪಿಯಿಂದ ನಿರ್ಗಮಿಸಿದರು. ಅಲ್ಲಿಂದ ಗುಜರಾತ್‌ನಲ್ಲಿ ಮೋದಿ ಅವರ ಯುಗಾರಂಭವಾಯಿತು.

ಮೊದಲ ಪ್ರಯತ್ನದಲ್ಲೇ ಶಾಸಕ, ಆಗಲೂ ಇತ್ತು ಜನಪ್ರಿಯತೆ

2002ರ ಫೆಬ್ರವರಿ 24ರಂದು ನರೇಂದ್ರ ಮೋದಿ ಅವರು ಮೊದಲ ಬಾರಿ ಶಾಸಕರಾಗಿ ಆಯ್ಕೆಯಾದರು. ರಾಜ್‌ಕೋಟ್‌-2 ಕ್ಷೇತ್ರದ ಉಪಚುನಾವಣೆಯಲ್ಲಿ ಅವರು ಗೆಲುವು ಸಾಧಿಸಿದ್ದರು. ರಾಜ್‌ಕೋಟ್‌-2 ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾದಾಗ ಮೋದಿ ಅವರು ಮೊದಲ ಬಾರಿ ಸ್ಪರ್ಧಿಸಿದ್ದರು. ಅವರು 14,728 ಮತಗಳಿಂದ ಮೊದಲ ಚುನಾವಣೆಯಲ್ಲಿಯೇ ಗೆಲುವು ಸಾಧಿಸಿದ್ದರು. ಚುನಾವಣೆ ಗೆಲುವಿನ ಬಳಿಕ ಅವರು ಕ್ಷೇತ್ರದಲ್ಲಿ ರೋಡ್‌ ಶೋ ನಡೆಸಿದ್ದರು. ಆಗಲೂ, ಜನ ಮೋದಿ ಅವರೆಂದರೆ ಮುಗಿಬೀಳುತ್ತಿದ್ದರು. ಹಿರಿಯ ಮಹಿಳೆಯರು ಕೂಡ ಬಂದು ಅವರಿಗೆ ಹಾರ ಹಾಕಿ ಹೋಗುತ್ತಿದ್ದರು. “ಗುಜರಾತ್‌ನ ಸಿಂಹ ಬಂತು” ಎಂಬುದಾಗಿ ಘೋಷಣೆ ಮಾಡಿದ್ದರು. ಇದಕ್ಕೂ ಮೊದಲು ಅಂದರೆ, 2001ರಲ್ಲಿಯೇ ಮೋದಿ ಗುಜರಾತ್‌ ಸಿಎಂ ಆಗಿದ್ದರು. ಸಿಎಂ ಗಾದಿಗೇರಿದ ಬಳಿಕ ಅವರು ಶಾಸಕರಾಗಿ ಆಯ್ಕೆಯಾಗಿದ್ದರು.

ಗುಜರಾತ್‌ನಲ್ಲಿ 2001ರ ಜನವರಿ 26ರ ಗಣರಾಜ್ಯೋತ್ಸವದಂದು ಸಂಭವಿಸಿದ ಭೀಕರ ಭೂಕಂಪದಲ್ಲಿ 13 ಸಾವಿರಕ್ಕೂ ಹೆಚ್ಚು ಮಂದಿ ಅಸುನೀಗಿದ್ದರು. ಲಕ್ಷಾಂತರ ಮಂದಿ ಗಾಯಗೊಂಡಿದ್ದರು. ಗುಜರಾತ್‌ನ ಕಛ್‌ ಜಿಲ್ಲೆಯಲ್ಲಿ ಸಂಭವಿಸಿದ ಭೂಕಂಪದ ಬಳಿಕ ಪರಿಹಾರ, ಪುನರ್ವಸತಿ ಕಾರ್ಯಾಚರಣೆಯ ಜವಾಬ್ದಾರಿ ನರೇಂದ್ರ ಮೋದಿಯವರಿಗಿತ್ತು. ನಂತರದ ವರ್ಷಗಳಲ್ಲಿ ಕಛ್‌ ವಲಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಯಿತು. ಭೂಕಂಪದ ಸಂದರ್ಭದಲ್ಲಿ ಮೋದಿ ಅವರು ಮುಂದೆ ನಿಂತು ಅಧಿಕಾರಿಗಳು, ಶಾಸಕರನ್ನು ಪರಿಹಾರ ಕಾರ್ಯಕ್ಕೆ ನಿಯೋಜಿಸಿದ್ದು, ಆಡಳಿತ, ಕಾರ್ಯವೈಖರಿಯಲ್ಲಿ ಬದಲಾವಣೆ ತಂದಿದ್ದು ಪ್ರಮುಖವಾಗಿತ್ತು.

ಗೋಧ್ರಾ ಹಿಂಸಾಚಾರ

ಗುಜರಾತ್‌ ಸಿಎಂ ಆಗಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕರಿಸಿದ ಆರಂಭಿಕ ವರ್ಷಗಳು ಕಲ್ಲು ಮುಳ್ಳಿನ ದುರ್ಗಮ ಹಾದಿಯಾಗಿತ್ತು. ಭೀಕರ ಭೂಕಂಪನದಿಂದ ರಾಜ್ಯ ತತ್ತರಿಸಿತ್ತು. ಲಕ್ಷಾಂತರ ನಿರಾಶ್ರಿತರ ಪುನರ್ವಸತಿಯ ಬೃಹತ್‌ ಸವಾಲು ಎದುರಿತ್ತು. ದುರದೃಷ್ಟವಶಾತ್‌ 2002ರ ಫೆಬ್ರವರಿ-ಮಾರ್ಚ್‌ ಅವಧಿಯಲ್ಲಿ ಗೋಧ್ರಾದಲ್ಲಿ ನಡೆದ ಘೋರ ನರಮೇಧ, ನಂತರ ಇಡೀ ರಾಜ್ಯವನ್ನು ಪ್ರಕ್ಷುಬ್ಧವಾಗಿಸಿದ ಕೋಮು ಗಲಭೆ, ನರೇಂದ್ರ ಮೋದಿಯವರಿಗೆ ಅಗ್ನಿ ಪರೀಕ್ಷೆಯಾಗಿತ್ತು. ಇದೇ ಸಂದರ್ಭ ಮೋದಿ ವಿರೋಧಿಗಳ ಗ್ಯಾಂಗ್‌ ಅವರ ವಿರುದ್ಧ ನಿರಂತರ ಷಡ್ಯಂತ್ರಗಳನ್ನು ನಡೆಸಿತು. ಮೋದಿಯವರೇ ಈ ಎಲ್ಲ ಗಲಭೆಗಳ ಸೂತ್ರಧಾರ ಎಂದು ಬಿಂಬಿಸಿತು. ಇಪ್ಪತ್ತು ವರ್ಷಗಳ ಕಾಲ ಈ ಗ್ಯಾಂಗ್‌ ಮೋದಿ ವಿರುದ್ಧ ಮಸಲತ್ತು ನಡೆಸಿದರೂ, ಅಂತಿಮವಾಗಿ ಸುಪ್ರೀಂಕೋರ್ಟ್‌, ಮೋದಿಯವರಿಗೆ ಕ್ಲೀನ್‌ ಚಿಟ್‌ ನೀಡಿತು. ಗೋಧ್ರಾ ಗಲಭೆಯಲ್ಲಿ ಮೋದಿಯವರದ್ದು ಯಾವುದೇ ತಪ್ಪಿಲ್ಲ ಎಂದ ಸುಪ್ರೀಂಕೋರ್ಟ್‌, ಮೋದಿ ವಿರುದ್ಧ ನಡೆದ 16 ವರ್ಷಗಳ ಷಡ್ಯಂತ್ರದ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು. ಹಾಗೂ ತಪ್ಪಿತಸ್ಥರನ್ನು ಕಟಕಟೆಗೆ ತಂದು ನಿಲ್ಲಿಸಬೇಕು ಎಂದೂ ಆದೇಶಿಸಿತು. ಹೀಗಾಗಿ ಇದು ಐತಿಹಾಸಿಕ ಮಹತ್ವದ ತೀರ್ಪುಗಳಲ್ಲೊಂದು.

ಗುಜರಾತ್‌ ಅಭಿವೃದ್ಧಿಗೆ ಆದ್ಯತೆ

ಗುಜರಾತ್‌ನ ಅಭಿವೃದ್ಧಿಗೆ ಸಂಬಂಧಿಸಿ ಮೋದಿಯವರ ಯೋಜನೆಗಳು ಹಲವು. ಅವುಗಳ ಪೈಕಿ ನರ್ಮದಾ ಅಣೆಕಟ್ಟೆ ಯೋಜನೆಯನ್ನು ಪೂರ್ಣಗೊಳಿಸಿರುವುದೂ ಒಂದು. ದಕ್ಷಿಣ ಗುಜರಾತ್‌ನಿಂದ ಸೌರಾಷ್ಟ್ರಕ್ಕೆ ನರ್ಮದೆಯ ನೀರನ್ನು ತಂದು ನೀರಾವರಿ ಕಲ್ಪಿಸುವ ಯೋಜನೆಯ ವಿರುದ್ಧ ಮೇಧಾ ಪಾಟ್ಕರ್‌ ಮತ್ತಿತರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು. ಆದರೆ ಸರ್ದಾರ್‌ ಸರೋವರ್‌ ಯೋಜನೆ ಇವತ್ತು 18.45 ಲಕ್ಷ ಹೆಕ್ಟೇರ್‌ ಭೂಮಿಗೆ ನೀರಾವರಿ ವ್ಯವಸ್ಥೆ ನೀಡಿದೆ. 9,490 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಿದೆ. ಪ್ರವಾಹದಿಂದ ರಕ್ಷಣೆ ಕೊಟ್ಟಿದೆ. ಕೃಷಿ ಉತ್ಪಾದನೆಯ ಹೆಚ್ಚಳಕ್ಕೆ ಪುಷ್ಟಿ ನೀಡಿದೆ. ಮೋದಿಯವರು ಗುಜರಾತ್‌ ಸಿಎಂ ಆಗಿದ್ದ ಅವಧಿಯಲ್ಲಿ ಎಂಟು ವರ್ಷಗಳ ಕಾಲ ರಾಜ್ಯ ಎರಡಂಕಿಯ ಆರ್ಥಿಕ ಬೆಳವಣಿಗೆ ದಾಖಲಿಸಿ ದೇಶದ ಗಮನ ಸೆಳೆದಿತ್ತು. ತ್ವರಿತ ಅಭಿವೃದ್ಧಿಗೆ ಗುಜರಾತ್‌ ಮಾದರಿಯಾಗಿತ್ತು. ಟಾಟಾ ನ್ಯಾನೋ ಕಾರು ಉತ್ಪಾದನೆ ಘಟಕವನ್ನು ಮೋದಿ ಗುಜರಾತ್‌ಗೆ ತೆಗೆದುಕೊಂಡು ಹೋದರು. ಬಂಡವಾಳ ಹೂಡಿಕೆದಾರರ ಸಮಾವೇಶ ಮಾಡಿ ರಾಜ್ಯಕ್ಕೆ ಹೂಡಿಕೆ ಹರಿದಬರುವಂತೆ ಮಾಡಿದರು. ಇದೇ ಕಾರಣಕ್ಕಾಗಿ ಅವರು, 2002, 2007 ಹಾಗೂ 2012ರಲ್ಲಿ ನಡೆದ ಗುಜರಾತ್‌ ವಿಧಾನಸಭೆ ಚುನಾವಣೆಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದರು. ದೇಶಾದ್ಯಂತ ಗುಜರಾತ್‌ ಮಾಡೆಲ್‌ ಅಭಿವೃದ್ಧಿ ಹೆಸರಾಯಿತು.

2014ರಲ್ಲಿ ಬಿಜೆಪಿಗೆ ಬಹುಮತ, ಮೋದಿಗೆ ಬಹುಪರಾಕ್

ಪ್ರಧಾನಿ ನರೇಂದ್ರ ಮೋದಿಯವರ ಅಭೂತಪೂರ್ವ ಯಶಸ್ಸು, ಜನಪ್ರಿಯತೆಗೆ ಅವರೇ ವಿವರಿಸಬೇಕಿಲ್ಲ. 2014 ಮತ್ತು 2019ರ ಲೋಕಸಭೆ ಚುನಾವಣೆಯ ಫಲಿತಾಂಶದ ಅಂಕಿ ಅಂಶಗಳೇ ಸಾಕು. 2014ರಲ್ಲಿ ಪ್ರಧಾನಿ ಅಭ್ಯರ್ಥಿಯಾಗಿದ್ದ ನರೇಂದ್ರ ಮೋದಿಯವರು‌ ಚುನಾವಣೆಯಲ್ಲಿ ಮೂರು ದಶಕಗಳ ಸಮ್ಮಿಶ್ರ ಸರ್ಕಾರಗಳ ಜಂಜಾಟಕ್ಕೆ ತೆರೆ ಎಳೆದರು. 284 ಲೋಕಸಭಾ ಕ್ಷೇತ್ರಗಳಲ್ಲಿ ಗೆದ್ದು ಬಿಜೆಪಿ ನೇತೃತ್ವದ ಎನ್‌ಡಿಎ ಹೊಸ ಇತಿಹಾಸ ಸೃಷ್ಟಿಸಿತು. 31% ಮತಗಳು ಲಭಿಸಿದವು. 2019ರಲ್ಲಿ ಮೋದಿ ಸರ್ಕಾರ ಮತ್ತಷ್ಟು ಪ್ರಬಲವಾಗಿತ್ತು. ಶೇ.37.3ರಷ್ಟು ಮತಗಳು ಮತ್ತು 303 ಕ್ಷೇತ್ರಗಳಲ್ಲಿ ಗೆಲುವಿನ ಫಲಿತಾಂಶ ಬಂದಿತು. ಇದರೊಂದಿಗೆ ಅತಿ ಹೆಚ್ಚು ಕಾಲ ಪ್ರಧಾನಿ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ಕಾಂಗ್ರೆಸ್ಸೇತರ ರಾಜಕಾರಣಿಯೂ ಆದರು.

ಕಳೆದ 2014ರಿಂದೀಚೆಗೆ ಬಿಜೆಪಿ ಕೇಂದ್ರ ಮತ್ತು ರಾಜ್ಯಗಳ ಮಟ್ಟದಲ್ಲಿನ ಚುನಾವಣೆಗಳಲ್ಲಿ ಸೋತಿದ್ದು ಕಡಿಮೆ, ಗೆಲುವು ಸಾಧಿಸಿದ್ದೇ ಹೆಚ್ಚು. ಬಿಜೆಪಿಯ ಹಿಂದುತ್ವ ಮತ್ತು ಅಭಿವೃದ್ಧಿ ರಾಜಕಾರಣದ ಹಿಂದೆ ನರೇಂದ್ರ ಮೋದಿಯವರ ವರ್ಚಸ್ಸು ಕೆಲಸ ಮಾಡಿದೆ. ಸದಸ್ಯತ್ವದ ದೃಷ್ಟಿಯಿಂದ ಬಿಜೆಪಿ ವಿಶ್ವದ ದೊಡ್ಡ ಪಕ್ಷವೆಂದು ಹೇಳಿಕೊಂಡಿದೆ. ದೇಶದಲ್ಲಿ ಕಾಂಗ್ರೆಸ್‌ಗೆ ಪರ್ಯಾಯವೇ ಇಲ್ಲ ಎಂಬ ಮಾತು ಹಿಂದೊಮ್ಮೆ ಇತ್ತು ಎಂದರೆ ಮುಂದಿನ ಪೀಳಿಗೆಗೆ ನಂಬಲೂ ಕಷ್ಟವಾಗಬಹುದು ಎಂಬ ಸ್ಥಿತಿಗೆ ಕಾಂಗ್ರೆಸ್‌ ಈಗ ತಲುಪಿದೆ. ಪ್ರತಿಪಕ್ಷ ಮಾನ್ಯತೆ ಪಡೆಯಲೂ ಪರದಾಡುವ ಸ್ಥಿತಿ. ಬಿಜೆಪಿ ಈ ಪರಿಯಲ್ಲಿ ಕಾಂಗ್ರೆಸ್‌ ರಾಜಕಾರಣಕ್ಕೆ ಪರ್ಯಾಯವಾಗಿ ಬೆಳೆಯಲಿದೆ ಎಂದು 10 ವರ್ಷಗಳ ಹಿಂದೆ ಯಾವೊಬ್ಬ ರಾಜಕೀಯ ಪಂಡಿತರೂ ಭವಿಷ್ಯ ನುಡಿದಿರಲಿಲ್ಲ.

10 ವರ್ಷದಲ್ಲಿ ಮೋದಿ ಸಾಧನೆಗಳು

ಮೂಲ ಸೌಕರ್ಯ ಅಭಿವೃದ್ಧಿ

ಗ್ರಾಮಗಳಲ್ಲಿ ಮನೆ ಮನೆಗಳಲ್ಲಿ ಶೌಚಾಲಯ ನಿರ್ಮಾಣದಿಂದ ಹಿಡಿದು ಸಾಮಾನ್ಯ ಜನರೂ ವಿಮಾನದಲ್ಲಿ ಪ್ರಯಾಣಿಸುವ ಉಡಾನ್‌ ಯೋಜನೆತನಕ ಮೋದಿ ಆಡಳಿತದಲ್ಲಿ ಮೂಲ ಸೌಕರ್ಯ ಅಭಿವೃದ್ಧಿಯಾಗಿದೆ. ದೇಶಾದ್ಯಂತ 11.72 ಕೋಟಿ ಶೌಚಾಲಯ ನಿರ್ಮಿಸಲಾಗಿದೆ. 3.5 ಕೋಟಿ ಮನೆ ನಿರ್ಮಾಣ, ಉಜ್ವಲ ಯೋಜನೆ ಅಡಿಯಲ್ಲಿ 9.6 ಕೋಟಿ ಎಲ್‌ಪಿಜಿ ಸಂಪರ್ಕ ಕಲ್ಪಿಸಲಾಗಿದೆ. ಇನ್ನು ಉಡಾನ್‌ ಯೋಜನೆ ಅಡಿಯಲ್ಲಿ ದೇಶಾದ್ಯಂತ ಇದ್ದ 74 ವಿಮಾನ ನಿಲ್ದಾಣಗಳ ಸಂಖ್ಯೆಯನ್ನು 141ಕ್ಕೆ ಏರಿಸಲಾಗಿದೆ. ಜನಧನ್‌ ಯೋಜನೆ ಮೂಲಕ 50 ಕೋಟಿ ಬ್ಯಾಂಕ್‌ ಖಾತೆಗಳನ್ನು ತೆರೆಯಲಾಗಿದೆ. ರೈಲು ನಿಲ್ದಾಣಗಳನ್ನು ಅತ್ಯಾಧುನೀಕರಣ ಮಾಡಲಾಗಿದೆ. ರೈಲುಗಳಲ್ಲಿ ಜೈವಿಕ ಶೌಚಾಲಯಗಳ ಅಳವಡಿಕೆ, ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿಗಳು, ಎಕ್ಸ್‌ಪ್ರೆಸ್‌ವೇಗಳು ದೇಶದ ನರನಾಡಿಗಳಂತೆ ಕಾಣುತ್ತಿವೆ.

ಡಿಜಿಟಲ್‌ ಇಂಡಿಯಾ ಮೇನಿಯಾ

ನರೇಂದ್ರ ಮೋದಿ ಅವರು ಕಂಡ ಡಿಜಿಟಲ್‌ ಇಂಡಿಯಾ ಕನಸು ಬಹುತೇಕ ನನಸಾಗಿದೆ. ಮೊದಲೆಲ್ಲ ಯಾರಿಗಾದರೂ ಹಣ ಕಳುಹಿಸಬೇಕು ಎಂದರೆ ನೆಟ್‌ ಬ್ಯಾಂಕಿಂಗ್‌ ಮೊರೆ ಹೋಗಬೇಕಿತ್ತು. ಇಲ್ಲವೇ, ಬ್ಯಾಂಕ್‌ನಲ್ಲಿ ಕ್ಯೂ ನಿಂತು ಎನ್‌ಇಎಫ್‌ಟಿ (NEFT) ಮಾಡಬೇಕಿತ್ತು. ಆದರೆ, ಡಿಜಿಟಲ್‌ ಇಂಡಿಯಾ ಅಭಿಯಾನವು ಯಶಸ್ವಿಯಾಗಿದ್ದು, ಈಗ ಯುಪಿಐ ಮೂಲಕ ಕ್ಷಣಮಾತ್ರದಲ್ಲಿ ಹಣ ಕಳುಹಿಸಬಹುದಾಗಿದೆ. ಡಿಜಿಟಲ್‌ ಆರ್ಥಿಕತೆ ಸೃಷ್ಟಿಯಾಗಿದೆ. ಗ್ರಾಮದ ಗೂಡಂಗಡಿಗಳಿಂದ ಹಿಡಿದು ನಗರಗಳಲ್ಲಿ ತರಕಾರಿ ಮಾರುವವರೂ ಈಗ ಕ್ಯೂಆರ್‌ ಕೋಡ್‌ ಸ್ಕ್ಯಾನರ್‌ ಇಟ್ಟುಕೊಂಡಿದ್ದಾರೆ. ಸದ್ಯ, ಶೇ. 75ರಷ್ಟು ಚಿಲ್ಲರೆ ವ್ಯಾಪಾರವು ಯುಪಿಐ ಮೂಲಕವೇ ಆಗುತ್ತಿದೆ. ಕೋಟ್ಯಂತರ ಜನ, ಲಕ್ಷಾಂತರ ಕೋಟಿ ರೂಪಾಯಿಯನ್ನು ಯುಪಿಐ ಮೂಲಕವೇ ವರ್ಗಾವಣೆ ಮಾಡುತ್ತಿದ್ದಾರೆ. ಯುಪಿಐ ವ್ಯವಸ್ಥೆಯನ್ನು ಬೇರೆ ದೇಶಗಳೂ ಅಳವಡಿಸಿಕೊಂಡಿವೆ.

Digital Payment

370ನೇ ವಿಧಿ ರದ್ದು

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿ ರದ್ದುಗೊಳಿಸಿರುವುದು ನರೇಂದ್ರ ಮೋದಿ ಸರ್ಕಾರದ ದಿಟ್ಟ ತೀರ್ಮಾನಗಳಲ್ಲಿ ಒಂದಾಗಿದೆ. ಉಗ್ರರ ತಾಣವಾಗಿದ್ದ, ಪ್ರತ್ಯೇಕವಾದಿಗಳ ಗೂಡಾಗಿದ್ದ, ಕಲ್ಲು ತೂರಾಟಗಾರರ ಪ್ರಯೋಗ ತಾಣವಾಗಿದ್ದ ಕಾಶ್ಮೀರದಲ್ಲಿ ಈಗ ಜಿ-20 ಸಭೆ ನಡೆಯುವಂತಾಗಿದ್ದರೆ ಅದಕ್ಕೆ 370ನೇ ವಿಧಿ ರದ್ದುಗೊಳಿಸಿದ್ದೇ ಕಾರಣವಾಗಿದೆ. 2019ರ ಆಗಸ್ಟ್‌ 5ರಂದು 370ನೇ ವಿಧಿ ರದ್ದು ಬಳಿಕ ಉಗ್ರರ ಉಪಟಳ ನಿಲ್ಲದಿದ್ದರೂ ಪ್ರತ್ಯೇಕವಾದಿಗಳನ್ನು ಹೆಡೆಮುರಿ ಕಟ್ಟಲಾಗಿದೆ. ಕಾಶ್ಮೀರದಲ್ಲಿ ವಿದೇಶಿ ಗಣ್ಯರು ಬಂದು ಶಾಪಿಂಗ್‌ ಮಾಡುವಂತಾಗಿದೆ. ಆದರೂ, ಕೇಂದ್ರ ಸರ್ಕಾರವು ಕಾಶ್ಮೀರ ಪಂಡಿತರಿಗೆ ಭದ್ರತೆ ಒದಗಿಸುವಲ್ಲಿ ಹಿನ್ನಡೆ ಅನುಭವಿಸಿದ್ದು, ಅದರ ಕುರಿತು ಹೆಚ್ಚಿನ ಗಮನ ಹರಿಸಬೇಕಿದೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕೊನೆಯ ಹಂತಕ್ಕೆ ಬಂದಿದ್ದು, ಇದನ್ನು ಸುಗಮವಾಗಿ ಕೈಗೊಂಡ ಕೀರ್ತಿ, ಬಿಜೆಪಿ ನೀಡಿದ ಭರವಸೆಯನ್ನು ಈಡೇರಿಸಿದ ಕೀರ್ತಿ ಕೇಂದ್ರ ಸರ್ಕಾರಕ್ಕೆ ಸಲ್ಲಬೇಕು. ಅಯೋಧ್ಯೆಯಲ್ಲಿ ರಾಮಮಂದಿರ ಪರ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ ಬಳಿಕ ದೇಶಾದ್ಯಂತ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರದಂತೆ ನೋಡಿಕೊಂಡಿದ್ದು, ಸುಗಮವಾಗಿ ರಾಮಮಂದಿರ ನಿರ್ಮಾಣಕ್ಕೆ ವ್ಯವಸ್ಥೆ ಮಾಡಿದ್ದು ಕೇಂದ್ರ ಸರ್ಕಾರದ ಸಾಧನೆಯಾಗಿದೆ. ಅಷ್ಟೇ ಅಲ್ಲ, 2024ರ ಜನವರಿಯಲ್ಲಿ ರಾಮಮಂದಿರದಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆಗೆ ಸರ್ಕಾರ ಸಿದ್ಧವಾಗಿದೆ. ಹಾಗೆಯೇ, ಸುಪ್ರೀಂ ಕೋರ್ಟ್‌ ಆದೇಶದಂತೆ ಮಸೀದಿ ನಿರ್ಮಾಣಕ್ಕೂ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದೆ.

PM Narendra Modi

ಕೊರೊನಾ ಸಂದರ್ಭದಲ್ಲಿ ಉಚಿತವಾಗಿ ಆಹಾರ ಧಾನ್ಯ ವಿತರಣೆ

ಕೊರೊನಾ ಸಾಂಕ್ರಾಮಿಕ ಪಿಡುಗಿನ ಸಂದರ್ಭದಲ್ಲಿ ದೇಶದ ಕೋಟ್ಯಂತರ ಜನ ಸಂಕಷ್ಟಕ್ಕೆ ಸಿಲುಕಿದ್ದಾಗ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆ ಮೂಲಕ (PMGKAY) ಬಡವರಿಗೆ ಉಚಿತವಾಗಿ ಆಹಾರ ಧಾನ್ಯ ವಿತರಿಸಿದ್ದು ಕೂಡ ಕೇಂದ್ರದ ಸಾಧನೆಯಾಗಿದೆ. ದೇಶದ 80 ಕೋಟಿ ಜನರಿಗೆ ಉಚಿತವಾಗಿ ಆಹಾರ ಧಾನ್ಯ ವಿತರಣೆ ಮಾಡುವ ಮೂಲಕ ಜನರ ನೆರವಿಗೆ ಕೇಂದ್ರ ಸರ್ಕಾರ ನಿಂತಿದ್ದು ಸ್ಮರಣೀಯ.

ದೇಶದ ಗಡಿ ಭದ್ರ, ಉಗ್ರರಿಗೆ ತಿರುಗೇಟು

ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ದೇಶದ ಗಡಿಗಳು ಮತ್ತಷ್ಟು ಭದ್ರವಾಗಿವೆ. ಉಗ್ರರ ದಾಳಿಗಳು ಬಹುತೇಕವಾಗಿ ನಿಂತುಹೋಗಿವೆ. 2016ರಲ್ಲಿ ಪಾಕಿಸ್ತಾನದ ಉಗ್ರರು ಜಮ್ಮು-ಕಾಶ್ಮೀರದ ಉರಿ ಮೇಲೆ ನಡೆಸಿದ ದಾಳಿಗೆ ಪ್ರತಿಯಾಗಿ ಸರ್ಜಿಕಲ್‌ ಸ್ಟ್ರೈಕ್‌, 2019ರಲ್ಲಿ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಗೆ ಬಾಲಾಕೋಟ್‌ ವಾಯುದಾಳಿ ಮೂಲಕ ಪಾಕಿಸ್ತಾನದ ಉಗ್ರ ಚಟುವಟಿಕೆಗಳಿಗೆ ಪ್ರತ್ಯುತ್ತರ ನೀಡಲಾಗಿದೆ. ಜಮ್ಮು-ಕಾಶ್ಮೀರದಲ್ಲಿ ಉಗ್ರರ ಉಪಟಳ, ಕಲ್ಲು ತೂರಾಟ, ಪ್ರತ್ಯೇಕವಾದಿಗಳನ್ನು ಹೆಡೆಮುರಿಕಟ್ಟಿದ್ದು ಮೋದಿ ಸರ್ಕಾರದ ದಿಟ್ಟ ನಿರ್ಧಾರವಾಗಿದೆ.

ಎಲ್ಲರಿಗೂ ಲಸಿಕೆ ವಿತರಣೆ

ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ದೇಶೀಯವಾಗಿ ಕೊರೊನಾ ನಿರೋಧಕ ಲಸಿಕೆ ಉತ್ಪಾದನೆ ಜತೆಗೆ ದೇಶಾದ್ಯಂತ ಕೋಟ್ಯಂತರ ಜನರಿಗೆ ವಿತರಣೆ ಮಾಡಿದ್ದು, ಎರಡು ಲಾಕ್‌ಡೌನ್‌ ಮಾಡಿಯೂ ಆರ್ಥಿಕತೆ ದಿವಾಳಿಯಾಗದಂತೆ ನೋಡಿಕೊಂಡಿದ್ದು, ಆಮ್ಲಜನಕ ಕೊರತೆ, ವೈದ್ಯಕೀಯ ಮೂಲ ಸೌಕರ್ಯಗಳ ಕೊರತೆ ಮಧ್ಯೆಯೂ ಕೊರೊನಾ ನಿರ್ವಹಣೆ ಮಾಡಿದ್ದು ಮೋದಿ ಸರ್ಕಾರದ ಸಾಧನೆ ಎಂಬುದರಲ್ಲಿ ಎರಡು ಮಾತಿಲ್ಲ. ಕೊರೊನಾ ನಿರೋಧಕ ಲಸಿಕೆಯ 200 ಕೋಟಿಗೂ ಅಧಿಕ ಡೋಸ್‌ ವಿತರಣೆ ಮಾಡಿದ್ದು, ಬೇರೆ ರಾಷ್ಟ್ರಗಳಿಗೂ ಲಸಿಕೆ ರವಾನೆ ಮಾಡಿದ್ದು ಸಾಧನೆಯಾಗಿದೆ.

ರೈತರ ಖಾತೆಯಲ್ಲಿ ಕಾಂಚಾಣ ಝಣಝಣ

ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಅಡಿಯಲ್ಲಿ ರೈತರಿಗೆ ವರ್ಷದಲ್ಲಿ ತಲಾ 2 ಸಾವಿರ ರೂ. ನಂತೆ ಮೂರು ಬಾರಿ 6 ಸಾವಿರ ರೂ. ನೀಡುವ ಮೂಲಕ ಕೇಂದ್ರ ಸರ್ಕಾರ ನೀಡಿದ ಭರವಸೆಯನ್ನು ಉಳಿಸಿಕೊಂಡಿದೆ. ಇದರಿಂದ ದೇಶದ ಕೋಟ್ಯಂತರ ರೈತರ ಖಾತೆಗೆ ಹಣ ಜಮೆಯಾಗುತ್ತಿದ್ದು, ಯೋಜನೆ ಜಾರಿಯಲ್ಲಿ ಎಲ್ಲೂ ಲೋಪವಾಗದಂತೆ ಕೇಂದ್ರ ಸರ್ಕಾರ ನೋಡಿಕೊಂಡಿದೆ.

ವಿದೇಶಗಳಿಂದ ಭಾರತೀಯರ ರಕ್ಷಣೆ

ಮೋದಿ ಸರ್ಕಾರವು ಎರಡನೇ ಅವಧಿಯ ವೇಳೆ, ಬೇರೆ ದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿದ ಭಾರತೀಯರನ್ನು ರಕ್ಷಿಸುವಲ್ಲಿ ಬೇರೆ ರಾಷ್ಟ್ರಗಳಿಗೂ ಮಾದರಿ ಎನಿಸಿದೆ. ಅಫಘಾನಿಸ್ತಾನದಲ್ಲಿ ತಾಲಿಬಾನ್‌ ಉಗ್ರರ ಉಪಟಳ ಆರಂಭವಾದಾಗ ಕೇಂದ್ರ ಸರ್ಕಾರವು 700 ಭಾರತೀಯರನ್ನು ಸುರಕ್ಷಿತವಾಗಿ ಕರೆದುಕೊಂಡು ಬಂದಿದೆ. ಉಕ್ರೇನ್‌ನಲ್ಲಿ ರಷ್ಯಾ ಆಕ್ರಮಣ ಆರಂಭಿಸಿದಾಗ 23 ಸಾವಿರ ಭಾರತೀಯರನ್ನು ತಾಯ್ನಾಡಿಗೆ ಕರೆದುಕೊಂಡು ಬಂದಿದೆ. ಅಷ್ಟೇ ಏಕೆ, ಕೆಲ ದಿನಗಳ ಹಿಂದೆಯೇ ಸುಡಾನ್‌ನಲ್ಲಿ ಆಂತರಿಕ ಸಂಘರ್ಷ ಉಂಟಾದಾಗ, ‘ಆಪರೇಷನ್‌ ಕಾವೇರಿ’ ಮೂಲಕ ಕನ್ನಡಿಗರೂ ಸೇರಿ ನೂರಾರು ಭಾರತೀಯರನ್ನು ಸರ್ಕಾರ ಸುರಕ್ಷಿತವಾಗಿ ಕರೆದುಕೊಂಡು ಬಂದಿದೆ.

ದೇಶದಲ್ಲಿ ಇಷ್ಟೆಲ್ಲ ಬದಲಾವಣೆಗೆ ಕಾರಣವಾಗಿರುವ ನರೇಂದ್ರ ಮೋದಿ ಅವರು ಭಾನುವಾರ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆ ಮೂಲಕ ಅವರು ನೆಹರು ಅವರ ದಾಖಲೆಯನ್ನು ಮುರಿಯಲು ಮತ್ತೊಂದು ಹೆಜ್ಜೆ ಮುಂದಿಡಲು ಸಜ್ಜಾಗಿದ್ದಾರೆ.

ಇದನ್ನೂ ಓದಿ: ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದಕ್ಕೆ ತನ್ನ ಬೆರಳನ್ನೇ ಕತ್ತರಿಸಿ ದೇವಿಗೆ ಅರ್ಪಿಸಿದ ಮೋದಿ ‘ಭಕ್ತ’!

Continue Reading

ಕ್ರೀಡೆ

IND vs PAK: ಇಂದು ಇಂಡೋ-ಪಾಕ್​ ರೋಚಕ ಟಿ20 ಕದನ; ವಿಜಯ ಪತಾಕೆ ಹಾರಿಸಲಿ ಭಾರತ

IND vs PAK: ಸದ್ಯದ ಮುನ್ಸೂಚನೆಯಂತೆ ಪಂದ್ಯ ನಡೆಯುವ ಭಾನುವಾರ ನ್ಯೂಯಾರ್ಕ್​ನಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಅಕ್ಯುವೆದರ್‌ನ ಮುನ್ಸೂಚನೆಯ ಪ್ರಕಾರ ಅಮೆರಿಕದ ಕಾಲಮಾನದ ಪ್ರಕಾರ ಬೆಳಗ್ಗೆ 11 ಸುಮಾರಿಗೆ ಶೇ. 51 ಪ್ರತಿಶತದಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

VISTARANEWS.COM


on

IND vs PAK
Koo

ನ್ಯೂಯಾರ್ಕ್​: ಕ್ರೀಡಾ ಲೋಕವೇ ಕಾದು ಕುಳಿತಿರುವ ಭಾರತ(IND vs PAK) ಮತ್ತು ಪಾಕಿಸ್ತಾನ ನಡುವಣ ರೋಚಕ ಟಿ20 ವಿಶ್ವಕಪ್​ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು(ಭಾನುವಾರ) ರಾತ್ರಿ ಇತ್ತಂಡಗಳ ಮಧ್ಯೆ ಈ ಪಂದ್ಯ ನಡೆಯಲಿದೆ. ಅಭಿಮಾನಿಗಳ ಕಾತರ, ಕೌತುಕಗಳೆಲ್ಲ ಸೀಮೆಯನ್ನು ಮೀರಿವೆ. ಜಗತ್ತಿನ ಇತರೆ ಯಾವುದೇ ದೇಶಗಳ ನಡುವಿನ ಕ್ರಿಕೆಟ್‌ ಸಮರದಲ್ಲಿ ಈ ತೀವ್ರತೆಯನ್ನು ನೀವು ಕಾಣಲು ಸಾಧ್ಯವೇ ಇಲ್ಲ. ಭಾರತ ಮತ್ತು ಪಾಕ್​ ಪಂದ್ಯಗಳಲ್ಲಿ ಗೆಲುವಿನ ರೂವಾರಿಗಳು ಕ್ರಿಕೆಟಿನ ದೊಡ್ಡ ಹೀರೋಗಳಾಗಿ ಮೆರೆಯುತ್ತಾರೆ. ಹಾಗೆಯೇ ಕೆಲವು ವಿಲನ್‌ಗಳೂ ಹುಟ್ಟಿ ಕೊಳ್ಳುತ್ತಾರೆ. ಪಾಕಿಸ್ತಾನ ಸೋತರೆ ಅಲ್ಲಿ ಇವರ ಪ್ರತಿಕೃತಿ ದಹನವಾಗಲಿದೆ; ಮನೆಗೆ ಕಲ್ಲು ಬೀಳಲಿದೆ. ಇದರಿಂದ ಬಚಾವಾಗುವುದು ಪಾಕ್‌ ಕ್ರಿಕೆಟಿಗರ ಪಾಲಿಗೆ ಇನ್ನೂ ದೊಡ್ಡ ಸವಾಲು.

ಅಕ್ಷರಶಃ ಇದೊಂದು ಕದನವೇ ಆಗಿರುತ್ತದೆ. ಗೆದ್ದರೆ ಯುದ್ಧವನ್ನೇ ಜಯಿಸಿದ ಮಹಾಸಂಭ್ರಮ. ರೋಹಿತ್​ ಪಡೆಯ ಮೇಲಿನ ನಿರೀಕ್ಷೆ ದೊಡ್ಡ ಮಟ್ಟದಲ್ಲೇ ಇದೆ. ಹಾಗೆಯೇ ಅಮೆರಿಕ ವಿರುದ್ಧ ಸೋತಿರುವ ಪಾಕಿಸ್ತಾನಕ್ಕೆ ಒತ್ತಡವೂ ಇದೆ. ಗೆದ್ದರಷ್ಟೇ ಮುಂದಿನ ಹಂತಕ್ಕೇರಬಹುದು. ಹೀಗಾಗಿ ಪಂದ್ಯ ಜಿದ್ದಾಜಿದ್ದಿನಿಂದ ಕೂಡಿರುವ ಸಾಧ್ಯತೆ ಹೆಚ್ಚು. ಆದರೆ ಪಂದ್ಯಕ್ಕೆ ಮಳೆಯ ಭೀತಿ ಕೂಡ ಎದುರಾಗಿದೆ.

ಭಾರತವೇ ಪೇವರಿಟ್​

ಮೇಲ್ನೋಟಕೆ ಭಾರತ ಈ ಬಾರಿಯ ಕೂಟದಲ್ಲಿ ಫೇವರಿಟ್‌ ಆಗಿ ಗುರುತಿಸಿಕೊಂಡಿದೆ. ಆದರೆ ಅತಿಯಾದ ಆತ್ಮವಿಶ್ವಾಸ ಸಲ್ಲದು. ಎಲ್ಲ ಪಂದ್ಯದಲ್ಲಿಯೂ ಎಚ್ಚರ ಅಗತ್ಯ. ಅದರಂತೆ ಯಾವುದೇ ಕಾರಣಕ್ಕೂ ಎದುರಾಳಿಗಳನ್ನು ಕಡೆಗಣಿಸುವಂತಿಲ್ಲ. ಇದಕ್ಕೆ ಅಮೆರಿಕ ವಿರುದ್ಧ ಪಾಕ್​, ಅಫಘಾನಿಸ್ತಾನ ವಿರುದ್ಧ ನ್ಯೂಜಿಲ್ಯಾಂಡ್​ ಸೋಲು ಕಂಡಿರುವುದೇ ಉತ್ತಮ ನಿದರ್ಶನ. ಏಕದಿನ ವಿಶ್ವಕಪ್​ನಲ್ಲಿ ಪಾಕ್​ ವಿರುದ್ಧ ಭಾರತ ಅಜೇಯವಾಗಿದ್ದರೂ ಕೂಡ, ಟಿ20ಯಲ್ಲಿ ಅಜೇಯವಲ್ಲ. ಭಾರತದ ಆತಿಥ್ಯದಲ್ಲೇ ದುಬೈನಲ್ಲಿ 2021ರಲ್ಲಿ ನಡೆದಿದ್ದ ಟೂರ್ನಿಯಲ್ಲಿ ಭಾರತ 10 ವಿಕೆಟ್​ಗಳ ಹೀನಾಯ ಸೋಲು ಕಂಡಿತ್ತು. 2022ರಲ್ಲಿ ನಡೆದಿದ್ದ ಟೂರ್ನಿಯಲ್ಲಿ ಭಾರತ ಕೊನೆಯ ಎಸೆತದಲ್ಲಿ ಗೆಲುವು ಸಾಧಿಸಿತ್ತು. ಟಿ20ಯಲ್ಲಿ ಪಾಕಿಸ್ತಾನ ತಂಡ ಭಾರತಕ್ಕೆ ಪೈಪೋಟಿ ನೀಡುತ್ತಿದೆ. ಹೀಗಾಗಿ ಎಚ್ಚರದಿಂದ ಆಡಬೇಕು.

ಇದನ್ನೂ ಓದಿ Rohit Sharma Injury: ಪಾಕ್​ ಪಂದ್ಯಕ್ಕೂ ಮುನ್ನ ಭಾರತಕ್ಕೆ ಆತಂಕ; ಅಭ್ಯಾಸದ ವೇಳೆ ರೋಹಿತ್​ಗೆ ಗಾಯ

ಪಾಕ್‌ ತಂಡವೂ ಬಲಿಷ್ಠ


ಭಾರತ ತಂಡದಂತೆ ಪಾಕಿಸ್ತಾನ ಕೂಡ ಬಲಿಷ್ಠವಾಗಿದೆ. ಬೌಲಿಂಗ್‌ ಮತ್ತು ಬ್ಯಾಟಿಂಗ್‌ ಎರಡೂ ವಿಭಾಗಲ್ಲಿ ವೈವಿಧ್ಯಮಯವಾಗಿ ಗೋಚರಿಸಿದೆ. ಬ್ಯಾಟಿಂಗ್‌ನಲ್ಲಿ ಮೊಹಮ್ಮದ್‌ ರಿಜ್ವಾನ್‌, ನಾಯಕ ಬಾಬರ್‌ ಅಜಂ, ಇಫ್ತಿಕರ್​, ಫಕಾರ್​ ಜಮಾನ್​ ಬಲವಾದರೆ ಅತ್ತ ಬೌಲಿಂಗ್‌ನಲ್ಲಿ ಶಾಹೀನ್‌ ಅಫ್ರಿದಿ, ಶದಾಬ್‌, ಆಮೀರ್​, ರವೂಫ್‌ ಮತ್ತು ನಶೀಮ್​ ಶಾ ಎದುರಾಳಿಗಳನ್ನು ಕಟ್ಟಿಹಾಕುವಲ್ಲಿ ಸಮರ್ಥರಿದ್ದಾರೆ. ಅದರಲ್ಲೂ ಹೊಸ ಚೆಂಡಿನಲ್ಲಿ ಅಫ್ರಿದಿ ಬೆಂಕಿ ಎಸೆತಗಳನ್ನು ಎಸೆಯುವುದರಲ್ಲಿ ಎತ್ತಿದ ಕೈ.

ಮಳೆ ಭೀತಿ


ಸದ್ಯದ ಮುನ್ಸೂಚನೆಯಂತೆ ಪಂದ್ಯ ನಡೆಯುವ ಭಾನುವಾರ ನ್ಯೂಯಾರ್ಕ್​ನಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಅಕ್ಯುವೆದರ್‌ನ ಮುನ್ಸೂಚನೆಯ ಪ್ರಕಾರ ಅಮೆರಿಕದ ಕಾಲಮಾನದ ಪ್ರಕಾರ ಬೆಳಗ್ಗೆ 11 ಸುಮಾರಿಗೆ ಶೇ. 51 ಪ್ರತಿಶತದಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ. ಭಾರತದಲ್ಲಿ ಈ ಪಂದ್ಯ ರಾತ್ರಿ ಪ್ರಸಾರವಾಗುತ್ತದೆ. ಮಳೆಯಿಂದ ಪಂದ್ಯ ರದ್ದುಗೊಂಡರೆ ಉಭಯ ತಂಡಗಳಿಗೂ ತಲಾ 1 ಅಂಕ ನೀಡಲಾಗುತ್ತದೆ. ಏಕೆಂದರೆ ಲೀಗ್​ ಪಂದ್ಯಗಳಿಗೆ ಮೀಸಲು ದಿನ ಇಲ್ಲ.

Continue Reading

ಭವಿಷ್ಯ

Dina Bhavishya : ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಇರಲಿ ಎಚ್ಚರಿಕೆ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ತದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಕಟಕ ರಾಶಿಯಿಂದ ಭಾನುವಾರ ಮಧ್ಯಾಹ್ನ 03:28 ಕ್ಕೆ ಸಿಂಹ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿರಯವರು ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ವೃಷಭ ರಾಶಿಯವರು ಆತ್ಮವಿಶ್ವಾಸದಿಂದ ಮಾಡಿದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗುವುದು. ಹಿರಿಯರ ಬೆಂಬಲ ಆಶೀರ್ವಾದ ಸಿಗಲಿದೆ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಹಳೆಯ ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (9-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ತದಿಗೆ 15:43 ವಾರ: ಭಾನುವಾರ
ನಕ್ಷತ್ರ: ಪುನರ್ವಸು 20:19 ಯೋಗ: ವೃದ್ಧಿ 17:19
ಕರಣ: ಗರಜ 15:43 ಅಮೃತ ಕಾಲ: ಸಂಜೆ 05:52 ರಿಂದ 07:31ರ ವರೆಗೆ
ದಿನದ ವಿಶೇಷ: ಕದಳೀ ಗೌರೀ ವ್ರತ

ಸೂರ್ಯೋದಯ : 05:53   ಸೂರ್ಯಾಸ್ತ : 06:45

ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಗೃಹೋಪಯೋಗಿ ವಸ್ತುಗಳಿಂದಾಗಿ ಖರ್ಚು ಹೆಚ್ಚಲಿದೆ. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಆತ್ಮವಿಶ್ವಾಸದಿಂದ ಮಾಡಿದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗುವುದು. ಹಿರಿಯರ ಬೆಂಬಲ ಆಶೀರ್ವಾದ ಸಿಗಲಿದೆ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಹಳೆಯ ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಿಥುನ:ಆರೋಗ್ಯದ ಕುರಿತು ಕಾಳಜಿ ಇರಲಿ. ಆದಷ್ಟು ತಾಳ್ಮೆಯಿಂದ ವರ್ತಿಸಿ. ಭವಿಷ್ಯದಲ್ಲಿನ ಹೂಡಿಕೆ ಯೋಜನೆ ಕುರಿತು ಆಲೋಚನೆ ಮಾಡುವಿರಿ. ಕುಟುಂಬದಲ್ಲಿ ಸಂಗಾತಿಯ ಬೆಂಬಲ ಹಾಗೂ ಸಲಹೆ ಸಿಗಲಿದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕಟಕ:ಅತಿಯಾದ ಒತ್ತಡದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ, ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ಇರಲಿ. ಆರ್ಥಿಕವಾಗಿ ಲಾಭ ಇರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕುಟುಂಬದ ವಾತಾವರಣ ಕೆಡದಂತೆ ಜಾಗ್ರತೆವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ನಿಮ್ಮ ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ, ಸಾಧ್ಯವಾದಷ್ಟು ಮಟ್ಟಿಗೆ ತಾಳ್ಮೆ ಇರಲಿ. ಉನ್ನತ ವ್ಯಕ್ತಿಗಳ ಸಹಾಯ ದೊರೆಯಲಿದೆ. ಉದ್ಯೋಗಿಗಳಿಗೆ ಯಶಸ್ಸು,ಕೀರ್ತಿ, ಶುಭಫಲ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಹಳೆಯ ವಿಚಾರಗಳನ್ನು ಕೆದಕಿ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ಮುಂದೆಯಾಗುವ ಕಾರ್ಯಗಳ ಬಗ್ಗೆ ಗಮನ ಇರಲಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ:ಹಣಕಾಸಿನ ಸಮಸ್ಯೆ ತಲೆದೋರಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳನ್ನು ಕೇಳುವಿರಿ. ಹೂಡಿಕೆ ವ್ಯವಹಾರಗಳನ್ನು ಮಾಡುವುದು ಬೇಡ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ : ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ದೀರ್ಘಕಾಲದ ಕೆಲಸಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದವರ ಸಹಕಾರ ಸಿಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಕೊಂಚಮಟ್ಟಿಗೆ ಒತ್ತಡ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಭವಿಷ್ಯದ ಕುರಿತಾಗಿ ಆಲೋಚನೆ ಮಾಡುವಿರಿ, ಜೀವನದಲ್ಲಿ ಅಭದ್ರತೆಯು ಕಾಡಬಹುದು.ಯಾವುದನ್ನು ಅತಿಯಾಗಿ ಆಲೋಚಿಸಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ಇರಲಿ.ಹೂಡಿಕೆ, ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಆರೋಗ್ಯದಲ್ಲಿ ಕೊಂಚ ಏರುಪೇರಾಗಲಿದೆ. ಕೆಲವು ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಈ ಹಿಂದೆ ನೀಡಿದ ಹಣವು ಮರಳುವ ಸಾಧ್ಯತೆ ಇದೆ. ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಉತ್ಸಾಹದಿಂದ ಕಾರ್ಯ ಸಿದ್ಧಿ. ಅಗತ್ಯ ವಸ್ತುಗಳ ಖರೀದಿ ಖರ್ಚು ಇರಲಿದೆ. ಅಮೂಲ್ಯ ವಸ್ತುಗಳ ಕುರಿತು ಲಕ್ಷ್ಯ ಇರಲಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 6

Horoscope Today

ಮೀನ: ಅನೇಕ ಮೂಲಗಳಿಂದ ಹಣಕಾಸಿನ ಹರಿವು ಹೆಚ್ಚಳವಾಗಲಿದೆ. ದೀರ್ಘಕಾಲದ ಆಲೋಚನೆಯಿಂದ ದೂರವಾಗುವ ಸಾಧ್ಯತೆ ಇದೆ. ಮಾನಸಿಕ ನೆಮ್ಮದಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಒದಗಿಬರುವುದು. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಕರ್ನಾಟಕ

Davanagere News: ದಾವಣಗೆರೆಯಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ; ನಾಲ್ವರ ಬಂಧನ

Davanagere News: ಹರಿಹರದ ಕಾಳಿದಾಸ ನಗರದಲ್ಲಿ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಹಲ್ಲೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲ್ಲೆ ಮಾಡಿದವರು ಹಾಗೂ ಹಲ್ಲೆಗೊಳಗಾದ ಯುವಕ ಒಂದೇ ಕೋಮಿಗೆ ಸೇರಿದವರಾಗಿದ್ದಾರೆ. ಹಲ್ಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ, ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.

VISTARANEWS.COM


on

Karnataka police
Koo

ದಾವಣಗೆರೆ: ಜಿಲ್ಲೆಯ ಹರಿಹರದಲ್ಲಿ ಮುಸ್ಲಿಂ ಯುವಕನ ಮೇಲೆಯೇ ಹಲವು ಮುಸ್ಲಿಂ ಯುವಕರು ನೈತಿಕ ಪೊಲೀಸ್‌ಗಿರಿ (Moral Policing) ನಡೆಸಿ, ಹಲ್ಲೆ ಮಾಡಿದ ಪ್ರಕರಣವನ್ನು (Davanagere News) ಪೊಲೀಸರು ಭೇದಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೇ 31ರಂದು ದಾವಣಗೆರೆ ಜಿಲ್ಲೆಯ ಹರಿಹರ ನಗರದ ಬೆಂಕಿ ನಗರದ ಮದರಸಾ ಬಳಿಯ ಖಾಲಿ‌ ಕೊಠಡಿಯಲ್ಲಿ ಹಲ್ಲೆ ನಡೆಸಲಾಗಿತ್ತು. ಈಗ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಹರಿಹರದ ಕಾಳಿದಾಸ ನಗರದ ನಿವಾಸಿ ಮಹಮ್ಮದ್ ಅಲಿ (26) ಮೇಲೆ ಏಳು ಯುವಕರು ಹಲ್ಲೆ ನಡೆಸಿದ್ದರು. ಆಸೀಫ್, ಗೌಸ್, ತೌಫಿಕ್, ಸಯ್ಯದ್, ದಾದು, ಚೋಟು, ಫಿರೋಜ್‌ ಎಂಬುವರು ಹಲ್ಲೆ ನಡೆಸಿದ್ದರು. ಹಲ್ಲೆ ಮಾಡಿದ ಏಳು ಜನರಲ್ಲಿ ನಾಲ್ವರನ್ನು ಹರಿಹರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳಿದವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ ಎಂಬುದಾಗಿ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಮಾಹಿತಿ ನೀಡಿದ್ದಾರೆ.

ಖಾಲಿ ಕೊಠಡಿಯಲ್ಲಿ ಯುವಕನ ಮೇಲೆ ಆರೋಪಿಗಳು ನಿರಂತರವಾಗಿ ಚಿತ್ರಹಿಂಸೆ ನೀಡಿದ್ದರು. ಸಾಮಾಜಿಕ‌ ಜಾಲತಾಣಗಳಲ್ಲಿ ಹಲ್ಲೆಯ ವಿಡಿಯೊ ವೈರಲ್‌ ಆಗಿತ್ತು. ಯುವಕನನ್ನು ಒಬ್ಬ ಹಿಡಿದುಕೊಂಡು, ಇನ್ನೊಬ್ಬ ಹಲ್ಲೆ ನಡೆಸಿದ್ದ. ದೊಣ್ಣೆಯಿಂದ ಯುವಕನ ಮೇಲೆ ಹಲ್ಲೆ ಮಾಡಲಾಗಿದ್ದು, ಈ ಬಗ್ಗೆ ‌ಪೊಲೀಸರಿಗೆ ಯಾವುದೇ ದೂರು ನೀಡಿಲ್ಲ. ಆದರೆ, ಹಲ್ಲೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದ ಕಾರಣ ಕ್ರಮ ತೆಗೆದುಕೊಳ್ಳುವಂತೆ ಜನ ಆಗ್ರಹಿಸಿದ್ದರು.

ಅಪರಿಚಿತ ವಾಹನ ಡಿಕ್ಕಿಯಾಗಿ ಪೊಲೀಸ್‌ ಪೇದೆಗೆ ಗಂಭೀರ ಗಾಯ

ಯಾದಗಿರಿ: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಪೊಲೀಸ್‌ ಕಾನ್‌ಸ್ಟೇಬಲ್‌ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಹಾಪುರ-ಯಾದಗಿರಿ ಮಾರ್ಗ ಮಧ್ಯೆ ನಡೆದಿದೆ. ಯಾದಗಿರಿ ಸಂಚಾರ ಪೊಲೀಸ್ ಠಾಣೆಯ ಪೇದೆ ಹಜರತ್ ಅಲಿ ಗಾಯಾಳು. ದೋರನಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿರುವ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡಿರುವ ಪೇದೆಯನ್ನು ಕಲಬುರಗಿ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Assault Case : ಅರೆ ಬೆತ್ತಲಾಗಿ ಯುವಕನಿಗೆ ನಡು ರಸ್ತೆಯಲ್ಲೆ ಹಿಗ್ಗಾಮುಗ್ಗಾ ಥಳಿತ; ಹಲ್ಲೆಕೋರರು ಅರೆಸ್ಟ್‌

Continue Reading
Advertisement
Narendra Modi
ದೇಶ20 mins ago

Narendra Modi: 3ನೇ ಬಾರಿ ಪ್ರಧಾನಿಯಾಗಿ ಇಂದು ಸಂಜೆ ಮೋದಿ ಪ್ರಮಾಣ; ಇಲ್ಲಿದೆ ಬಾಲ್ಯದಿಂದ ವಿಶ್ವಗುರುತನಕದ ಜೀವನ ಚಿತ್ರಣ

5:2 Diet
ಆರೋಗ್ಯ21 mins ago

5:2 Diet: ಏನಿದು 5:2 ಮಧ್ಯಂತರ ಉಪವಾಸ? ಇದರ ಪ್ರಯೋಜನಗಳೇನು?

IND vs PAK
ಕ್ರೀಡೆ51 mins ago

IND vs PAK: ಇಂದು ಇಂಡೋ-ಪಾಕ್​ ರೋಚಕ ಟಿ20 ಕದನ; ವಿಜಯ ಪತಾಕೆ ಹಾರಿಸಲಿ ಭಾರತ

Dina Bhavishya
ಭವಿಷ್ಯ1 hour ago

Dina Bhavishya : ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಇರಲಿ ಎಚ್ಚರಿಕೆ

NED vs RSA
T20 ವಿಶ್ವಕಪ್7 hours ago

NED vs RSA: ಹೋರಾಡಿ ಸೋತ ನೆದರ್ಲೆಂಡ್ಸ್​; ಹರಿಣ ಪಡೆಗೆ ಪ್ರಯಾಸದ ಗೆಲುವು

Karnataka police
ಕರ್ನಾಟಕ8 hours ago

Davanagere News: ದಾವಣಗೆರೆಯಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ; ನಾಲ್ವರ ಬಂಧನ

French Open Final 2024
ಪ್ರಮುಖ ಸುದ್ದಿ9 hours ago

French Open Final 2024: 4ನೇ​ ಫ್ರೆಂಚ್‌ ಓಪನ್‌ ಟ್ರೋಫಿ ಗೆದ್ದ ಇಗಾ ಸ್ವಿಯಾಟೆಕ್‌

Govt Employees
ಕರ್ನಾಟಕ9 hours ago

Govt Employees: ಪ್ರತಿ ಸೋಮವಾರ ಕೇಂದ್ರ ಕಚೇರಿಗಳಿಗೆ ಅಧಿಕಾರಿ, ನೌಕರರ ಹಾಜರು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

Kisan Samman Nidhi
ಪ್ರಮುಖ ಸುದ್ದಿ9 hours ago

Kisan Samman Nidhi: ರೈತರಿಗೆ ಗುಡ್‌ ನ್ಯೂಸ್;‌ ಕಿಸಾನ್‌ ಸಮ್ಮಾನ್‌ ನಿಧಿ 2 ಸಾವಿರ ರೂ. ಹೆಚ್ಚಳ, ಇನ್ನು ಸಿಗೋದು 8 ಸಾವಿರ ರೂ.!

IND vs PAK
ಕ್ರೀಡೆ9 hours ago

IND vs PAK: ಭಾರತ-ಪಾಕ್​ ಹೈವೋಲ್ಟೇಜ್​ ಪಂದ್ಯದ ಹವಾಮಾನ ವರದಿ, ಆಡುವ ಬಳಗ ಹೇಗಿದೆ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ1 day ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ7 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌