ವಿಕ್ರಾಂತ್‌ ರೋಣ ಬಿಡುಗಡೆ ದಿನವೇ ಕನ್ನಡದಲ್ಲಿ ಬರುತ್ತಿದೆ ದಿ ಲೆಜೆಂಡ್ ಸಿನಿಮಾ : ಸರವಣನ್ ಪ್ರತಿಕ್ರಿಯೆ ಏನು? - Vistara News

ಕಾಲಿವುಡ್

ವಿಕ್ರಾಂತ್‌ ರೋಣ ಬಿಡುಗಡೆ ದಿನವೇ ಕನ್ನಡದಲ್ಲಿ ಬರುತ್ತಿದೆ ದಿ ಲೆಜೆಂಡ್ ಸಿನಿಮಾ : ಸರವಣನ್ ಪ್ರತಿಕ್ರಿಯೆ ಏನು?

ನಟ ಅರುಲ್ ಸರವಣನ್ ದಿ ಲೆಜೆಂಡ್ ಸಿನಿಮಾ ಹಾಗೂ ಕಿಚ್ಚ ಸುದೀಪ್‌ ನಟನೆಯ ವಿಕ್ರಾಂತ್‌ ರೋಣ ಒಂದೇ ದಿನ ತೆರೆಗೆ ಅಪ್ಪಳಿಸಲಿವೆ. ಎರಡೂ ಸಿನಿಮಾಗಳು ಪ್ಯಾನ್‌ ಇಂಡಿಯಾ ಸಿನಿಮಾ ಆಗಿದೆ.

VISTARANEWS.COM


on

ದಿ ಲೆಜೆಂಡ್ ಸಿನಿಮಾ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ತಮಿಳುನಾಡಿನ ಖ್ಯಾತ ಉದ್ಯಮಿ ಹಾಗೂ ಕಾಲಿವುಡ್ ನಟ ಅರುಲ್ ಸರವಣನ್ ‘ದಿ ಲೆಜೆಂಡ್’ (The Legend) ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಜು.28ರಂದು ದಿ ಲೆಜೆಂಡ್ ಸಿನಿಮಾ ಬಿಡುಗಡೆಗೊಳ್ಳುತ್ತಿದ್ದು, ವರ್ಲ್ಡ್ ವೈಡ್ ಅದ್ಧೂರಿಯಾಗಿ ಪ್ರಚಾರ ನಡೆಸುತ್ತಿದೆ. ಅದೇ ದಿನ ಸ್ಯಾಂಡಲ್‌ವುಟ್‌ ನಟ ಕಿಚ್ಚ ಸುದೀಪ್‌ ನಟನೆಯ ವಿಕ್ರಾಂತ್‌ ರೋಣ ಸಿನಿಮಾ ಕೂಡ ತೆರೆಗೆ ಬರಲಿದೆ.

ಅರುಲ್ ಸರವಣನ್ ತಂಡ ಬೆಂಗಳೂರಿನಲ್ಲಿಯೂ ಪ್ರಚಾರ ಕಹಳೆ ಮೊಳಗಿಸಿದೆ. ಚಿತ್ರದ ನಾಯಕ ಅರುಲ್ ಸರವಣನ್, ಬಾಲಿವುಡ್ ಬ್ಯೂಟಿ ಊರ್ವಶಿ ರೌಟೇಲ, ರೈ ಲಕ್ಷ್ಮಿ ಅವರು ಮಾಧ್ಯಮದವರೊಟ್ಟಿಗೆ ಸಿನಿಮಾದ ಬಗ್ಗೆ ಒಂದಷ್ಟು ಅನುಭವ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ | Vikrant Rona | ವಿಕ್ರಾಂತ್‌ ರೋಣ ಎರಡನೇ ಹಾಡು ರಿಲೀಸ್‌: ರಾಜಕುಮಾರಿ ಲೋಕಕ್ಕೆ ಕೊಂಡೊಯ್ದ ಕಿಚ್ಚ

ಕಿಚ್ಚನ ಎದುರು ‘ದಿ ಲೆಜೆಂಡ್ʼ!

ಕಿಚ್ಚ ಸುದೀಪ್‌ ಅಭಿನಯದ ವಿಕ್ರಾಂತ್‌ ರೋಣ ಹಾಗೂ ಅರುಲ್‌ ಸರವಣನ್‌ ಅಭಿನಯದ ದಿ ಲೆಜೆಂಡ್‌ ಸಿನಿಮಾ ಒಂದೇ ದಿನ ತೆರೆಗೆ ಬರುತ್ತಿದೆ. ಈ ವಿಚಾರವಾಗಿ ʻದಿ ಲೆಜೆಂಡ್ʼ ಸುದ್ದಿಗೋಷ್ಠಿಯಲ್ಲಿ ಅರುಲ್ ಸರವಣನ್ ʻನಮ್ಮಿಬ್ಬರದ್ದೂ ಪ್ಯಾನ್ ಇಂಡಿಯಾ ಸಿನಿಮಾ. ಕಷ್ಟ ಪಟ್ಟು ಕೆಲಸ ಮಾಡಿದ್ದೇವೆ. ಏನಾಗುತ್ತದೆ ಎಂಬುದು ನೋಡೋಣʼ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಅರುಲ್ ಸರವಣನ್ ಮಾತನಾಡಿ ʻಸಿನಿಮಾ ಮಾಡಬೇಕು ಎಂಬ ಕನಸು ಚಿಕ್ಕ ವಯಸ್ಸಿನಿಂದ ಇತ್ತು. ಉದ್ಯಮದಲ್ಲಿ ಹೆಚ್ಚು ಆಸಕ್ತಿ ಇತ್ತು. ಉದ್ಯಮದಲ್ಲಿ ನೆಲೆ ಕಂಡುಕೊಂಡ ನಂತರ ಸಿನಿಮಾಗೆ ಬಂದೆ. ಕಳೆದ ಹದಿನೈದು ವರ್ಷದಿಂದ ನಿರ್ದೇಶಕ ಜೆ.ಡಿ.ಜೆರ್ರಿ ನನ್ನ ಜತೆ ಇದ್ದಾರೆ. ಪ್ರತಿಯೊಂದು ದೃಶ್ಯವೂ ಅದ್ಭುತವಾಗಿ ಮೂಡಿ ಬಂದಿದೆ. ಕನ್ನಡದಲ್ಲೂ ಸಿನಿಮಾ ಬುಕ್ಕಿಂಗ್‌ಗೆ ಅವಕಾಶ ನೀಡುತ್ತೇವೆ. ಪ್ರತಿಯೊಬ್ಬರು ಸಿನಿಮಾ ನೋಡಿ ಬೆಂಬಲಿಸಿʼ ಎಂದರು.

ಟ್ರೈಲರ್‌ ಹಾಗೂ ಹಾಡುಗಳ ಮೂಲಕ ಸದ್ದು ಮಾಡುತ್ತಿರುವ ʻದಿ ಲೆಜೆಂಡ್ʼ ಸಿನಿಮಾವನ್ನು ಜೆ.ಡಿ.ಜೆರ್ರಿ ನಿರ್ದೇಶನ ಮಾಡುತ್ತಿದ್ದಾರೆ. ಊರ್ವಶಿ ರೌಟೇಲಾ ಈ ಸಿನಿಮಾ ಮೂಲಕ ಮೊದಲ ಬಾರಿಗೆ ತಮಿಳು ಚಿತ್ರರಂಗ ಪ್ರವೇಶ ಮಾಡಿದ್ದು, ಅರುಲ್ ಸರವಣನ್‌ಗೆ ಜೋಡಿಯಾಗಿ ನಟಿಸಿದ್ದಾರೆ.

ನಸ್ಸಾರ್, ಪ್ರಭು, ಸುಮನ್, ವಿವೇಕ್, ಇಮ್ಮನ್ ಅಣ್ಣಾಚಿ, ಯಶಿಕಾ ಆನಂದ್ ಸೇರಿದಂತೆ ಹಲವರು ತಾರಾಬಳಗ ಚಿತ್ರದಲ್ಲಿದ್ದಾರೆ. ಹ್ಯಾರೀಸ್ ಜಯರಾಜ್ ಅವರ ಸಂಗೀತ ಸಿನಿಮಾಕ್ಕಿದೆ. ವರ್ಲ್ಡ್ ವೈಡ್ 2000ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ತೆರೆಗೆ ಬರುತ್ತಿದೆ.

ಇದನ್ನೂ ಓದಿ | Cinedubs Mobile App | ವಿಕ್ರಾಂತ್‌ ರೋಣ ಸಿನಿಮಾ ಮೂಲಕ ಬರುತ್ತಿದೆ ಸಿನಿಡಬ್ಸ್‌ ಆ್ಯಪ್‌; ಏನಿದರ ವಿಶೇಷತೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Varalaxmi Sarathkumar: ನನ್ನ ತಂದೆ ಎರಡು ಮದುವೆಯಾದರು, ಹಾಗೇ ನಾನೂ ಕೂಡ ಎಂದ ನಟ ಶರತ್‌ಕುಮಾರ್ ಪುತ್ರಿ!

Varalaxmi Sarathkumar: ಮಾರ್ಚ್ 1ರಂದು ಮುಂಬೈನಲ್ಲಿ ತಮ್ಮ ಪ್ರೀತಿಪಾತ್ರರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ತಾವು ಮದುವೆಯಾಗುತ್ತಿರುವ ಹುಡಗನ ಬಗ್ಗೆ ನೆಗೆಟಿವ್‌ ಕಮೆಂಟ್‌ ಮಾಡುವರ ಬಗ್ಗೆ ನಟಿ ಸಂದರ್ಶನವೊಂದರಲ್ಲಿ ಪ್ರತಿಕ್ರಿಯಿಸಿದ್ದಾರೆ. 2020 ರಲ್ಲಿ ವರಲಕ್ಷ್ಮಿ ಅವರು ಸಿನಿಮಾಗಳನ್ನು ತೊರೆದು ಉದ್ಯಮಿಯೊಬ್ಬರನ್ನು ಮದುವೆಯಾಗುತ್ತಿದ್ದಾರೆ ಎಂಬ ವದಂತಿಗಳು ಹಬ್ಬಿತ್ತು. ಇದಾದ ಬಳಿಕ ನಟಿ ವದಂತಿಗಳನ್ನು ತಳ್ಳಿ ಹಾಕಿದ್ದರು.

VISTARANEWS.COM


on

Varalaxmi Sarathkumar negative comments on fiance
Koo

ಬೆಂಗಳೂರು: ಬಹುಭಾಷಾ ನಟ ಶರತ್‌ಕುಮಾರ್ (Varalaxmi Sarathkumar) ಅವರ ಪುತ್ರಿ ಮತ್ತು ಕನ್ನಡದ ʻಮಾಣಿಕ್ಯʼ ಸಿನಿಮಾದಲ್ಲಿ ಸುದೀಪ್‌ಗೆ ಜೋಡಿಯಾಗಿದ್ದ ನಟಿ ವರಲಕ್ಷ್ಮಿ ಶರತ್‌ಕುಮಾರ್ ಮುಂಬೈ ಮೂಲದ ಉದ್ಯಮಿ ಜತೆಗೆ 38ನೇ ವಯಸ್ಸಿನಲ್ಲಿ ಎಂಗೇಜ್‌ ಆಗಿದ್ದರು. ಮಾರ್ಚ್ 1ರಂದು ಮುಂಬೈನಲ್ಲಿ ತಮ್ಮ ಪ್ರೀತಿಪಾತ್ರರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ತಾವು ಮದುವೆಯಾಗುತ್ತಿರುವ ಹುಡಗನ ಬಗ್ಗೆ ನೆಗೆಟಿವ್‌ ಕಮೆಂಟ್‌ ಮಾಡುವರ ಬಗ್ಗೆ ನಟಿ ಸಂದರ್ಶನವೊಂದರಲ್ಲಿ ಪ್ರತಿಕ್ರಿಯಿಸಿದ್ದಾರೆ.

ನಿಖೋಲಯ್ ಸಚ್‌ದೇವ್ (Nicholai Sachdev) ಜತೆ ನಿಶ್ಚಿತಾರ್ಥವಾದ ಬಳಿಕ ನಟಿ ವರಲಕ್ಷ್ಮಿ ಶರತ್‌ಕುಮಾರ್ ಅವರು ಟೀಕೆಗೆ ಗುರಿಯಾದರು. ಈ ಬಗ್ಗೆ ನಟಿ ಮಾತನಾಡಿ ʻʻನನ್ನ ತಂದೆ ಕೂಡ ಎರಡು ಬಾರಿ ಮದುವೆಯಾದರು. ಆದರೆ ಆಮೇಲೆ ಅವರು ಸಂತೋಷವಾಗಿಯೇ ಇದ್ದಾರೆ. ಎರಡು ಮದುವೆಯಾಗುವುದರಲ್ಲಿ ಏನೂ ತಪ್ಪಿಲ್ಲ. ಜನರು ನಿಖೋಲಯ್ ಬಗ್ಗೆ ಹೇಗೆ ಮಾತನಾಡುತ್ತಾರೆ ಎಂಬುದನ್ನು ನಾನು ನೋಡಿದ್ದೇನೆ. ನಿನಿಖೋಲಯ್ ನನ್ನ ದೃಷ್ಟಿಯಲ್ಲಿ ಸುಂದರವಾಗಿದ್ದಾರೆ. ನಮ್ಮ ಸಂಬಂಧದ ಬಗ್ಗೆ ನೆಗೆಟಿವ್‌ ಕಮೆಂಟ್ ಮಾಡುವ ಜನರ ಬಗ್ಗೆ ನಾನು ಹೆದರುವುದಿಲ್ಲ. ನಾನು ಅವರಿಗೆಲ್ಲ ಏಕೆ ಉತ್ತರಿಸಬೇಕು?. ನಿಖೋಲಯ್ ಅವರ ಪೋಷಕರು ಆರ್ಟ್ ಗ್ಯಾಲರಿಯನ್ನು ನಡೆಸುತ್ತಾರೆ. ನಿಖೋಲಯ್ ಮಾಜಿ ಪತ್ನಿಯೊಂದಿಗೆ ನಾನು ಚೆನ್ನಾಗಿಯೇ ಇದ್ದೇನೆ. ಅವರದ್ದು ಅದ್ಭುತ ವ್ಯಕ್ತಿತ್ವ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Varalaxmi Sarathkumar:‌ ನಟ ಶರತ್‌ಕುಮಾರ್ ಪುತ್ರಿಯನ್ನು ಭೇಟಿಯಾದ ಕಿಚ್ಚ ಸುದೀಪ್!

ನಟಿ ಮಾತು ಮುಂದುವರಿಸಿ ʻʻನಿಖೋಲಯ್ ನನ್ನನ್ನು ಯಾವಾಗಲೂ ಖುಷಿಯಲ್ಲಿ ಇರಿಸುತ್ತಾರೆ. ನನ್ನ ವೃತ್ತಿಜೀವನವನ್ನು ಬೆಂಬಲಿಸುತ್ತಾರೆ. ನನ್ನನ್ನು ತುಂಬಾ ಪ್ರೀತಿಸುತ್ತಾರೆ, ಮುದ್ದು ಮಾಡುತ್ತಾರೆ ಮತ್ತು ನನ್ನನ್ನು ರಕ್ಷಿಸುತ್ತಾರೆ. 14 ವರ್ಷಗಳ ಹಿಂದೆ ಒಬ್ಬರೂ ಭೇಟಿಯಾದೆವು. ಆದರೆ ನಾವು ಆಗ ಡೇಟಿಂಗ್ ಮಾಡಿರಲಿಲ್ಲ. ನಾವು ಸ್ನೇಹಿತರಂತೆ ಇದ್ದೇವುʼʼಎಂದು ಹೇಳಿಕೊಂಡಿದ್ದಾರೆ.

ವರಲಕ್ಷ್ಮಿ ಮತ್ತು ನಿಕೋಲಾಯ್ ಅವರ ಪ್ರೇಮಕಥೆ!

ನಟ ರಮೇಶ್ ಅವರು ಜೋಡಿಯ ಪ್ರೇಮಕಥೆಯನ್ನು ಬಹಿರಂಗಪಡಿಸಿದ್ದರು. “ನಟಿ ವರಲಕ್ಷ್ಮಿ ಶರತ್‌ಕುಮಾರ್ ಮತ್ತು ಗ್ಯಾಲರಿಸ್ಟ್ ನಿಕೋಲಾಯ್ ಸಚ್‌ದೇವ್ ಅವರು ಮಾರ್ಚ್ 1ರಂದು ಮುಂಬೈನಲ್ಲಿ ಕುಟುಂಬ ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಕಳೆದ 14 ವರ್ಷಗಳಿಂದ ಪರಸ್ಪರ ಪರಿಚಿತರಾದ ವರಲಕ್ಷ್ಮಿ ಮತ್ತು ನಿಕೋಲಾಯ್ ತಮ್ಮ ಪೋಷಕರ ಆಶೀರ್ವಾದದೊಂದಿಗೆ ಉಂಗುರಗಳನ್ನು ಬದಲಾಯಿಸಿಕೊಂಡರು. ಈ ವರ್ಷದ ಕೊನೆಯಲ್ಲಿ ಜೋಡಿ ವಿವಾಹವಾಗಲಿದೆʼʼಎಂದು ಬರೆದುಕೊಂಡಿದ್ದರು.

ನಿಶ್ಚಿತಾರ್ಥ ಸಮಾರಂಭದಲ್ಲಿ, ವರಲಕ್ಷ್ಮಿ ರೇಷ್ಮೆ ಸೀರೆಯಲ್ಲಿ ಮಿಂಚುತ್ತಿದ್ದರು. 2020 ರಲ್ಲಿ ವರಲಕ್ಷ್ಮಿ ಅವರು ಸಿನಿಮಾಗಳನ್ನು ತೊರೆದು ಉದ್ಯಮಿಯೊಬ್ಬರನ್ನು ಮದುವೆಯಾಗುತ್ತಿದ್ದಾರೆ ಎಂಬ ವದಂತಿಗಳು ಹಬ್ಬಿತ್ತು. ಇದಾದ ಬಳಿಕ ನಟಿ ವದಂತಿಗಳನ್ನು ತಳ್ಳಿ ಹಾಕಿದ್ದರು.

ಇನ್ನೇನು ಶೀಘ್ರದಲ್ಲಿಯೇ ಈ ಜೋಡಿಯ ಮದುವೆಯ ದಿನಾಂಕವೂ ಘೋಷಣೆ ಆಗಲಿದೆ. ಈ ಮೊದಲು ವರಲಕ್ಷ್ಮಿ ಶರತ್‌ಕುಮಾರ್, ತಮಿಳು ನಟ ವಿಶಾಲ್ ಅವರನ್ನು ಪ್ರೀತಿಸುತ್ತಿದ್ದಾರೆ ಮತ್ತು ಇಬ್ಬರೂ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ವದಂತಿಗಳು ಕಾಲಿವುಡ್‌ನಲ್ಲಿ ಹರಿದಾಡಿದ್ದವು.

ವರಲಕ್ಷ್ಮಿ ಅವರು ಇತ್ತೀಚೆಗೆ ಪ್ರಶಾಂತ್ ವರ್ಮಾ ಅವರ ತೇಜ ಸಜ್ಜಾ ಅಭಿನಯದ ತೆಲುಗು ಚಿತ್ರ ʻಹನುಮಾನ್ ಚಿತ್ರದಲ್ಲಿʼ ಕಾಣಿಸಿಕೊಂಡಿದ್ದರು. ಧನುಷ್ ಅವರ ಮುಂಬರುವ ತಮಿಳು ಚಿತ್ರ ʻರಾಯನ್‌ʼನಲ್ಲಿ ನಟಿಸಲು ರೆಡಿಯಾಗಿದ್ದಾರೆ. ʻಶಬರಿʼ ಎಂಬ ತೆಲುಗು ಚಿತ್ರದ ಹೊರತಾಗಿ ಮಲಯಾಳಂ ಚಿತ್ರ ʻಕಲರ್ಸ್ʼನಲ್ಲಿಯೂ ಅವರು ಕಾಣಿಸಿಕೊಳ್ಳಲಿದ್ದಾರೆ.

Continue Reading

ಕಾಲಿವುಡ್

Shruti Haasan: ಎರಡನೇ ಬಾಯ್‌ಫ್ರೆಂಡ್‌ ನಿಂದಲೂ ಕಮಲ್‌ ಹಾಸನ್‌ ಪುತ್ರಿ ಬ್ರೇಕಪ್?

Shruti Haasan: ಮೈಕಲ್ ಕೋರ್ಸೆಲ್ ಅವರಿಂದ ದೂರವಾದ ನಂತರ, ಶ್ರುತಿ ಹಾಸನ್ ಬದುಕಿನಲ್ಲಿ ಬಂದ ವ್ಯಕ್ತಿ ಶಂತನು ಹಜಾರಿಕಾ. ಶಂತನು ಹಜಾರಿಕಾ ಜತೆ ಎರಡು ವರ್ಷಗಳ ಪ್ರೀತಿಯಲ್ಲಿ ಇದ್ದಿದ್ದರು ಶ್ರುತಿ ಹಾಸನ್. ಅನೇಕ ಸಲ ತಮ್ಮ ಈ ಪ್ರೇಮ ಕಥೆಯನ್ನ ಹೆಮ್ಮೆಯಿಂದ ಹೇಳಿಕೊಂಡಿದ್ದರು. ನಟಿ ಶ್ರುತಿ ಹಾಸನ್ ಆಗಾಗ ಅವಾಂತರಗಳನ್ನು ಮಾಡುತ್ತಲೇ ಸಾಕಷ್ಟು ವಿವಾದಕ್ಕೂ ಗುರಿಯಾಗುತ್ತಲೇ ಇರುತ್ತಾರೆ. ಶ್ರುತಿ ಹಾಸನ್‌ ನಗುವಿನೊಂದಿಗೆ ಶಾಂತನು ಹಜಾರಿಕಾನ ಕಣ್ಣು ಅಷ್ಟೇ ಅಲ್ಲ, ಮತ್ತು ಆತ ಬಿಡುವ ಹೂಸು ಕೂಡ ನನಗೆ ತುಂಬಾ ಇಷ್ಟ ಎಂದಿದ್ದರು.

VISTARANEWS.COM


on

Shruti Haasan and boyfriend santanu hazarika break up
Koo

ಬೆಂಗಳೂರು: ಕಾಲಿವುಡ್‌ ಸೂಪರ್‌ ಸ್ಟಾರ್‌ ಮಲ್‌ ಹಾಸನ್‌ (Kamal Hassan) ಅವರ ಪುತ್ರಿ ನಟಿ ಶ್ರುತಿ ಹಾಸನ್‌ (Shruti Haasan) ಪ್ರಿಯತಮ ಶಂತನು ಹಜಾರಿಕಾ (santanu hazarika) ಜತೆ ಲಿವಿಂಗ್‌ ರಿಲೇಶನ್‌ಶಿಪ್‌ನಲ್ಲಿ ಇರುವುದು ಗೊತ್ತೇ ಇದೆ. ಇದೀಗ ಜೋಡಿ ಬ್ರೇಕಪ್‌ ಮಾಡಿಕೊಂಡಿದೆ ಎಂದು ತಮಿಳು ಮಾಧ್ಯಮಗಳು ವರದಿ ಮಾಡಿವೆ. ಪೂರಕ ಎಂಬಂತೆ ನಟಿ ಪ್ರಿಯತಮ ಶಂತನು ಹಜಾರಿಕಾ ಅವರ ಎಲ್ಲ ಫೋಟೊಗಳನ್ನು ಡಿಲಿಟ್‌ ಮಾಡಿದ್ದಾರೆ. ಜತೆಗೆ ಇನ್‌ಸ್ಟಾ ಅನ್‌ಫಾಲೋ ಮಾಡಿದ್ದಾರೆ.

ಮೂಲಗಳ ಪ್ರಕಾರ ನಟಿ ಸ್ವಲ್ಪ ಸಮಯದವರೆಗೆ ಇನ್ಸ್ಟಾಗ್ರಾಮ್ ಖಾತೆಯನ್ನು ಡಿ ಆಕ್ಟಿವೇಟ್‌ ಮಾಡಿದ್ದರು. ಬಳಿಕ ಇನ್‌ಸ್ಟಾದಲ್ಲಿ ಶಂತನು ಹಜಾರಿಕಾ ಜತೆ ಇದ್ದ ಫೋಟೊಗಳನ್ನು ಡಿಲಿಟ್‌ ಮಾಡಿದ್ದಾರೆ. ಜತೆಗೆ ಅನ್‌ಫಾಲೋ ಮಾಡಿದ್ದಾರೆ. ಈಗಾಗಲೇ ಈ ಜೋಡಿ ಒಟ್ಟಿಗೆ ಇಲ್ಲ ಎಂದು ವರದಿಯಾಗಿದೆ. ಈ ಮುಂಚೆ ಒಂದೇ ಮನೆಯಲ್ಲಿ ಇಬ್ಬರೂ ಇದ್ದಿದ್ದರು. ನಟಿ ತನ್ನ ವೈಯಕ್ತಿಕ ಜೀವನದಲ್ಲಿ ನಡೆಯುವ ಘಟನೆಗಳನ್ನು ಅಭಿಮಾನಿಗಳೊಂದಿಗೆ ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಬ್ರೇಕಪ್‌ ಬಗ್ಗೆ ನಟಿ ಶೀರ್ಘದಲ್ಲೇ ಅಧಿಕೃತವಾಗಿ ಹೇಳಿಕೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ.

ಮೈಕಲ್ ಕೋರ್ಸೆಲ್ ಅವರಿಂದ ದೂರವಾದ ನಂತರ, ಶ್ರುತಿ ಹಾಸನ್ ಬದುಕಿನಲ್ಲಿ ಬಂದ ವ್ಯಕ್ತಿ ಶಂತನು ಹಜಾರಿಕಾ. ಶಂತನು ಹಜಾರಿಕಾ ಜತೆ ಎರಡು ವರ್ಷಗಳ ಪ್ರೀತಿಯಲ್ಲಿ ಇದ್ದಿದ್ದರು ಶ್ರುತಿ ಹಾಸನ್. ಅನೇಕ ಸಲ ತಮ್ಮ ಈ ಪ್ರೇಮ ಕಥೆಯನ್ನ ಹೆಮ್ಮೆಯಿಂದ ಹೇಳಿಕೊಂಡಿದ್ದರು.

ಇದನ್ನೂ ಓದಿ: Shruti Haasan: ನಿರ್ದೇಶಕನ ಜತೆ ಸಖತ್‌ ರೊಮ್ಯಾನ್ಸ್‌ ಮಾಡಿದ ಕಮಲ್ ಹಾಸನ್ ಪುತ್ರಿ

ಶ್ರುತಿ ಹಾಸನ್‌ ಮತ್ತು ಶಂತನು ಹಜಾರಿಕಾ ಸುಮಾರು 5 ವರ್ಷಗಳಿಂದ ಡೇಟಿಂಗ್‌ ನಡೆಸುತ್ತಿದ್ದಾರೆ. ಇವರು 2018ರಲ್ಲಿ ಮೊದಲ ಬಾರಿ ಭೇಟಿಯಾಗಿದ್ದರು. ಆಗಾಗ ಶ್ರುತಿ ಹಾಸನ್‌ ಶಂತನು ಹಜಾರಿಕಾ ಜತೆ ಇರುವ ಫೋಟೊಗಳನ್ನು ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಿದ್ದರು. ಮೊದಲು ಪ್ರಪೋಸ್ ಮಾಡಿದ್ದು ಕೂಡ ಶ್ರುತಿ ಹಾಸನ್‌ ಅಂತೆ.

ನನ್ನ ಬಾಯ್‌ಫ್ರೆಂಡ್‌ನ ಹೂಸು ಕೂಡ ನಂಗಿಷ್ಟ ಎಂದಿದ್ದ ಕಮಲ್‌ ಹಾಸನ್‌ ಪುತ್ರಿ

ನಟಿ ಶ್ರುತಿ ಹಾಸನ್ ಆಗಾಗ ಅವಾಂತರಗಳನ್ನು ಮಾಡುತ್ತಲೇ ಸಾಕಷ್ಟು ವಿವಾದಕ್ಕೂ ಗುರಿಯಾಗುತ್ತಲೇ ಇರುತ್ತಾರೆ. ಶ್ರುತಿ ಹಾಸನ್‌ ನಗುವಿನೊಂದಿಗೆ ಶಾಂತನು ಹಜಾರಿಕಾನ ಕಣ್ಣು ಅಷ್ಟೇ ಅಲ್ಲ, ಮತ್ತು ಆತ ಬಿಡುವ ಹೂಸು ಕೂಡ ನನಗೆ ತುಂಬಾ ಇಷ್ಟ ಎಂದಿದ್ದರು.

ಶ್ರುತಿ ಹಾಸನ್ ಫುಲ್ ಬ್ಯುಸಿ ಶ್ರುತಿ ಹಾಸನ್ ಕೈಯಲ್ಲಿ ದೊಡ್ಡ ದೊಡ್ಡ ಸಿನಿಮಾಗಳಿವೆ. ನಟಿ ಪ್ರಭಾಸ್ ಅವರ ಸಲಾರ್‌ನಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಸಲಾರ್‌ ಸಿನಿಮಾದಲ್ಲಿ ಶ್ರುತಿ ಹಾಸನ್ ‘ಆದ್ಯ’ ಪಾತ್ರ ಮಾಡಿದ್ದರು. ಶ್ರುತಿ ಇತ್ತೀಚೆಗೆ ತೆಲುಗು ಚಿತ್ರ ‘ವಾಲ್ತೇರ್‌ ವೀರಯ್ಯ’ದಲ್ಲಿ ಕಾಣಿಸಿಕೊಂಡಿದ್ದರು. ಈ ವರ್ಷ ವೀರಸಿಂಹ ರೆಡ್ಡಿ ಮತ್ತು ವಾಲ್ತೇರ್‌ ವೀರಯ್ಯ ಜನವರಿ ತಿಂಗಳಲ್ಲಿ ಒಟ್ಟಿಗೆ ತೆರೆಗೆ ಬಂತು.

ಕಮಲ್ ಹಾಸನ್ (Kamal Haasan) ನಟನೆಯ ‘ವಿಕ್ರಮ್’ ಚಿತ್ರಕ್ಕೆ ಲೋಕೇಶ್ ಕನಕರಾಜ್ ನಿರ್ದೇಶನ ಮಾಡುವ ಮೂಲಕ ಸೈ ಎನಿಸಿಕೊಂಡಿದ್ದರು. ಕಮಲ್‌ ಹಾಸನ್‌ ಪುತ್ರಿ ಶ್ರುತಿ ಹಾಸನ್‌ ಅವರಿಗೆ ಆ್ಯಕ್ಷನ್ ಕಟ್‌ ಹೇಳಲಿದ್ದಾರೆ ಲೋಕೇಶ್‌ ಕನಕರಾಜ್‌. ಕಮಲ್ ಹಾಸನ್ ಅವರ ನಿರ್ಮಾಣ ಸಂಸ್ಥೆ ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್ (RKFI) ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ.

Continue Reading

ಸಿನಿಮಾ

Kanguva Budget: ಭಾರಿ ಸದ್ದು ಮಾಡುತ್ತಿರುವ ಕಂಗುವ ಚಿತ್ರದ ಬಜೆಟ್ ಎಷ್ಟು ಗೊತ್ತೇ?

Kanguva Budget: ಭಾರತೀಯ ಚಿತ್ರರಂಗದಲ್ಲಿ ಅತೀ ದೊಡ್ಡ ಬಜೆಟ್ ನ ಚಿತ್ರ ಕಂಗುವ ವರ್ಷಾಂತ್ಯಕ್ಕೆ ತೆರೆಗೆ ಬರಲು ಸಜ್ಜಾಗುತ್ತಿದೆ. ತಮಿಳು ನಟ ಸೂರ್ಯ ಶಿವಕುಮಾರ್ ಹಾಗೂ ಬಾಲಿವುಡ್ ಸ್ಟಾರ್ ಬಾಬಿ ಡಿ’ಯೋಲ್‌ ಅಭಿನಯದ ಈ ಚಿತ್ರ ಈಗಾಗಲೇ ಸಿನಿ ರಸಿಕರನ್ನು ಮೋಡಿ ಮಾಡಿದೆ.

VISTARANEWS.COM


on

By

Kanguva Budget
Koo

ಚೆನ್ನೈ: ಹೊಸ ವರ್ಷದಂದು (new year) ಪೋಸ್ಟರ್ (poster) ಬಿಡುಗಡೆಯಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ (social media) ಸಾಕಷ್ಟು ಸದ್ದು ಮಾಡುತ್ತಿರುವ ಚಿತ್ರ ಕಂಗುವ (Kanguva). ತಮಿಳು (tamil) ನಟ (actor) ಸೂರ್ಯ (surya), ದಿಶಾ ಪಟಾನಿ (disha patani) ಅಭಿನಯದ ಈ ಚಿತ್ರ ಬಿಡುಗಡೆಗೆ ಮುನ್ನವೇ ಸಾಕಷ್ಟು ಮಂದಿಯ ಗಮನ ಸೆಳೆದಿದ್ದು, ಚಿತ್ರದ ಕುರಿತು ಹೊಸಹೊಸ ಮಾಹಿತಿಗಾಗಿ ವೀಕ್ಷಕರು ಕಾಯುವಂತೆ ಮಾಡಿದೆ.

ವರ್ಷದ ಅತಿ ದೊಡ್ಡ ಮತ್ತು ದುಬಾರಿ ಚಿತ್ರಗಳಲ್ಲಿ ಒಂದು ಎಂದು ಊಹಿಸಲಾಗಿರುವ ಕಂಗುವವನ್ನು (Kanguva Budget) ಸುಮಾರು 300 ಕೋಟಿಗೂ ಹೆಚ್ಚು ಬಜೆಟ್‌ ನಲ್ಲಿ ನಿರ್ಮಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ಚಿತ್ರವೂ ಚಿತ್ರರಂಗದಲ್ಲಿ ಬಹು ದಾಖಲೆಗಳನ್ನು ಮುರಿಯಲಿದೆ ಎಂದು ಊಹಿಸಲಾಗಿದೆ.

ಕಂಗುವ ಬಗ್ಗೆ ಭಾರಿ ಚರ್ಚೆ

ಸ್ಟುಡಿಯೋ ಗ್ರೀನ್ ಮತ್ತು ಸೂರ್ಯ ಶಿವಕುಮಾರ್ ಅವರ ಬಹು ನಿರೀಕ್ಷಿತ ಚಿತ್ರ “ಕಂಗುವ” ದ ಟೀಸರ್ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಸದ್ದು ಮಾಡುತ್ತಿದೆ. ಕಣ್ಣಿಗೆ ಹಬ್ಬದಂತಿರುವ ಚಿತ್ರದ ದೃಶ್ಯಗಳು, ಬೆರಗುಗೊಳಿಸುವ ವಿನ್ಯಾಸ, ವಿಶಿಷ್ಟ ಪರಿಕಲ್ಪನೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮಂದಿಯ ಗಮನ ಸೆಳೆದಿದ್ದು, ಅದ್ಬುತ ಪ್ರತಿಕ್ರಿಯೆ ಕೇಳಿ ಬರುತ್ತಿದೆ. ದೇಶದಾದ್ಯಂತ ಸಾಕಷ್ಟು ಮಂದಿ ಇದನ್ನು ನೋಡಲು ಉತ್ಸುಕರಾಗಿದ್ದಾರೆ.

ಇದನ್ನೂ ಓದಿ: Uttarakaanda Movie: ʼಉತ್ತರಕಾಂಡʼ ಚಿತ್ರಕ್ಕೆ ನಾಯಕಿ ಎಂಟ್ರಿ; ಮೋಹಕ ತಾರೆ ರಮ್ಯಾ ಜಾಗಕ್ಕೆ ಕಾಲಿವುಡ್‌ ನಟಿ


ಶಕ್ತಿಶಾಲಿ ನಾಯಕನಾಗಿ ಸೂರ್ಯ ಮತ್ತು ಖಳನಾಯಕನಾಗಿ ಬಾಬಿ ಡಿ’ಯೋಲ್‌ ಚಿತ್ರದ ಬಗ್ಗೆ ಕುತೂಹಲ ಮತ್ತಷ್ಟು ಹೆಚ್ಚುವಂತೆ ಮಾಡಿದ್ದಾರೆ. ಟೀಸರ್ ಬಿಡುಗಡೆಯಾದಾಗಿನಿಂದ ಆನ್‌ಲೈನ್ ಚರ್ಚೆಯನ್ನು ಹುಟ್ಟುಹಾಕಿದೆ, ಎಲ್ಲರೂ ಚಿತ್ರದ ಬಗ್ಗೆ ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದಾರೆ.

ದುಬಾರಿ ಚಿತ್ರ

ಕಂಗುವವರ ಮಹತ್ವಾಕಾಂಕ್ಷೆಯ ಕಥೆಯ ಹಂದರವನ್ನು ಒಳಗೊಂಡಿರುವ ಈ ಚಿತ್ರದ ಬಜೆಟ್ 350 ಕೋಟಿಗೂ ಮೀರಿದೆ ಎನ್ನಲಾಗಿದೆ. ಇದು ಭಾರತೀಯ ಚಿತ್ರರಂಗದ ಅತ್ಯಂತ ದುಬಾರಿ ಚಿತ್ರಗಳಲ್ಲಿ ಒಂದಾಗಲಿದೆ.


ಚಿತ್ರದ ಪ್ಯಾನ್-ವರ್ಲ್ಡ್ ಪ್ರಾಜೆಕ್ಟ್ ಎಲ್ಲರನ್ನೂ ಬೆರಗುಗೊಳಿಸುವಂತಿದೆ. ಸುಂದರ ದೃಶ್ಯಗಳು, ಭವ್ಯವಾದ ಛಾಯಾಗ್ರಹಣ ಮತ್ತು ವಿಸ್ತಾರವಾದ ಈ ಚಿತ್ರ ಚಲನಚಿತ್ರ ನಿರ್ಮಾಪಕರು ಅದರ ಸೃಷ್ಟಿಗೆ ಸುರಿದ ಅಪಾರ ಸಮರ್ಪಣೆಯನ್ನು ಪ್ರತಿಬಿಂಬಿಸುತ್ತದೆ.

ವೆಟ್ರಿ ಪಳನಿಸಾಮಿ ಅವರ ಅದ್ಭುತ ಛಾಯಾಗ್ರಹಣ ಮತ್ತು ಗಾಯಕ ರಾಕ್‌ಸ್ಟಾರ್ ದೇವಿ ಶ್ರೀ ಪ್ರಸಾದ್ ಅವರ ಸಂಗೀತ ಸಂಯೋಜನೆಯಲ್ಲಿ ಈ ಚಿತ್ರವು ಹೆಚ್ಚು ಪ್ರದರ್ಶನವನ್ನು ಕಾಣುವ ನಿರೀಕ್ಷೆಯಿದೆ.

ಸ್ಟುಡಿಯೋ ಗ್ರೀನ್‌ ಬೆಂಬಲದಿಂದ ನಿರ್ದೇಶಕ ಶಿವ ಅವರ ವಿಶಿಷ್ಟ ಕಲ್ಪನೆಗೆ ಜೀವ ತುಂಬಿದೆ. ಹಾಲಿವುಡ್ ಶೈಲಿಯಲ್ಲಿ ಮೂಡಿ ಬಂದಿರುವ ಚಿತ್ರ ಸಿನಿರಸಿಕರ ಮನ ಗೆಲ್ಲುವುದರಲ್ಲಿ ಸಂದೇಹವಿಲ್ಲ.

ದಕ್ಷಿಣ ಭಾರತದ ಚಲನಚಿತ್ರೋದ್ಯಮದಲ್ಲಿ ಪ್ರಮುಖರಾಗಿರುವ ಸ್ಟುಡಿಯೋ ಗ್ರೀನ್ ಮಾಲಕ ಕೆ.ಇ. ಜ್ಞಾನವೇಲ್ ರಾಜಾ ಅವರು ಕಳೆದ 16 ವರ್ಷಗಳಲ್ಲಿ ಸತತವಾಗಿ “ಸಿಂಗಂ” ಸರಣಿ, “ಪರುತಿ ವೀರನ್,” “ಸಿರುತೈ,” “ಕೊಂಬನ್,” “ನಾನ್ ಮಹನ್ ಅಲ್ಲಾ,” “ಮದ್ರಾಸ್,” “ಟೆಡ್ಡಿ,” ಮತ್ತು ತೀರಾ ಇತ್ತೀಚೆಗೆ ಬ್ಲಾಕ್ಬಸ್ಟರ್ ಹಿಟ್ ಗಳನ್ನು ನೀಡಿದ್ದಾರೆ.

“ಪಾತು ತಾಲಾ.” ಅವರು “ಬಾಹುಬಲಿ: ದಿ ಬಿಗಿನಿಂಗ್” ನಂತಹ ಪ್ರಮುಖ ಬ್ಲಾಕ್‌ಬಸ್ಟರ್‌ಗಳನ್ನು ವಿತರಿಸಿದ ಕಾರಣ ಅವರಿಂದಲೇ ಚಿತ್ರ ಬಿಡುಗಡೆ ಮಾಡಿಸಬೇಕು ಎಂದು ಹಲವಾರು ಮಂದಿ ನಿರ್ದೇಶಕರು ಕಾಯುವಂತಾಗಿದೆ.
ಸ್ಟುಡಿಯೋ ಗ್ರೀನ್ ಕಂಗುವಕ್ಕಾಗಿ ವಿಶ್ವದಾದ್ಯಂತ ಇರುವ ಪ್ರಮುಖ ವಿತರಕರೊಂದಿಗೆ ಕೈಜೋಡಿಸಿದೆ. 2024 ರ ಕೊನೆಯಲ್ಲಿ ಈ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ.

Continue Reading

ಕಾಲಿವುಡ್

Actor Rajinikanth: ಲೋಕೇಶ್ ಕನಕರಾಜ್-ರಜನಿ ಸಿನಿಮಾಗೆ ಟಾಲಿವುಡ್‌ ಖ್ಯಾತ ನಟ ಭರ್ಜರಿ ಎಂಟ್ರಿ?

Actor Rajinikanth: ‘ತಲೈವರ್ 171’ ಗಾಗಿ (Thailaiver 171) ಲೋಕೇಶ್ ಕನಕರಾಜ್ (Lokesh Kanagaraj) ಅವರೊಂದಿಗೆ ಕೈ ಜೋಡಿಸುವುದು ಪಕ್ಕಾ ಎಂದು ಸನ್ ಪಿಕ್ಚರ್ಸ್‌ನ ಅಧಿಕೃತ ಟ್ವಿಟರ್‌ ಪೇಜ್‌ನಲ್ಲಿ ಈ ಹಿಂದೆ ಪೋಸ್ಟ್‌ ಮಾಡಿತ್ತು. ಇದೀಗ ಹೊಸ ಮಾಹಿತಿ ಪ್ರಕಾರ ಅಕ್ಕಿನೇನಿ ನಾಗಾರ್ಜುನ ಅವರು ಈ ಸಿನಿಮಾಗೆ ಎಂಟ್ರಿ ಕೊಡುತ್ತಿದ್ದಾರೆ ಎನ್ನಲಾಗಿದೆ.

VISTARANEWS.COM


on

Actor Rajinikanth Thailaiver 171 lokesh kanakaraj entry
Koo

ಬೆಂಗಳೂರು: ʻಜೈಲರ್’ ಬಳಿಕ ರಜನಿಕಾಂತ್ (Actor Rajinikanth) ‘ಲಾಲ್ ಸಲಾಂ’ (Lal Salaam) ಚಿತ್ರದಲ್ಲಿ ನಟಿಸುತ್ತಿದ್ದಾರೆ. ಆ ನಂತರ ಜ್ಞಾನವೇಲ್ ನಿರ್ದೇಶನದ ಚಿತ್ರಕ್ಕೆ ಗ್ರೀನ್ ಸಿಗ್ನಲ್‌ ಕೊಟ್ಟಿದ್ದಾರೆ. ಈ ಎರಡೂ ಸಿನಿಮಾಗಳು ಮುಗಿದ ಬಳಿಕ ಕಾಲಿವುಡ್ ಸೆನ್ಸೇಷನಲ್ ಡೈರೆಕ್ಟರ್ ಲೋಕೇಶ್ ಕನಕರಾಜ್ ನಿರ್ದೇಶನದಲ್ಲಿ ತಲೈವಾ ನಟಿಸುವುದು ಫಿಕ್ಸ್‌ ಆಗಿದೆ. ‘ತಲೈವರ್ 171’ ಗಾಗಿ (Thailaiver 171) ಲೋಕೇಶ್ ಕನಕರಾಜ್ (Lokesh Kanagaraj) ಅವರೊಂದಿಗೆ ಕೈ ಜೋಡಿಸುವುದು ಪಕ್ಕಾ ಎಂದು ಸನ್ ಪಿಕ್ಚರ್ಸ್‌ನ ಅಧಿಕೃತ ಟ್ವಿಟರ್‌ ಪೇಜ್‌ನಲ್ಲಿ ಈ ಹಿಂದೆ ಪೋಸ್ಟ್‌ ಮಾಡಿತ್ತು. ಇದೀಗ ಹೊಸ ಮಾಹಿತಿ ಪ್ರಕಾರ ಅಕ್ಕಿನೇನಿ ನಾಗಾರ್ಜುನ ಅವರು ಈ ಸಿನಿಮಾಗೆ ಎಂಟ್ರಿ ಕೊಡುತ್ತಿದ್ದಾರೆ ಎನ್ನಲಾಗಿದೆ.

ಒಂದು ವೇಳೆ ಈ ಸುದ್ದಿ ನಿಜ ಅಂತಾದರೆ ರಜನಿಕಾಂತ್‌ ಹಾಗೂ ನಾರ್ಜುನ ಅವರು 32 ವರ್ಷಗಳ ಬಳಿಕ ತೆರೆ ಮೇಲೆ ನೋಡಬಹುದು. ನಾಗಾರ್ಜುನಗೆ ಮಲ್ಟಿಸ್ಟಾರರ್ ಸಿನಿಮಾ ಹೊಸದೇನು ಅಲ್ಲ. ಇತ್ತೀಚೆಗೆ ‘ಬ್ರಹ್ಮಾಸ್ತ್ರ’ ಸಿನಿಮಾದಲ್ಲಿ ರಣ್‌ಬೀರ್ ಕಪೂರ್ ಜತೆ ಕಾಣಿಸಿಕೊಂಡಿದ್ದರು. ಈಗ ಧನುಷ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ‘ಊಪಿರಿ’ ಸಿನಿಮಾದಲ್ಲೂ ಕಾರ್ತಿ ಜೊತೆ ನಾಗಾರ್ಜುನ ಜತೆ ನಟಿಸಿದ್ದರು. ಹೀಗಾಗಿ ರಜನಿಕಾಂತ್ ಜತೆ ನಟಿಸಬಹುದು ಎಂದು ಹೇಳಲಾಗುತ್ತಿದೆ.

ಟಿ.ಜೆ.ಜ್ಞಾನವೇಲ್ ನಿರ್ದೇಶನದ ಈ ಸಿನಿಮಾದಲ್ಲಿ ಮಲಯಾಳಂ ನಟ ಫಹಾದ್‌ ಫಾಸಿಲ್‌ ಕೂಡ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಈ ಇಬ್ಬರು ಜತೆಯಾಗಿ ನಟಿಸುತ್ತಿರುವ ಫೋಟೊ ಇಂಟರ್‌ನೆಟ್‌ನಲ್ಲಿ ಹರಿದಾಡಿ ವೈರಲ್‌ ಆಗಿತ್ತು. ವಿಶೇಷ ಎಂದರೆ ಈ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸುತ್ತಿದ್ದಾರೆ. ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌, ರಾಣಾ ದಗ್ಗುಬಾಟಿ, ಮಲಯಾಳಂ ನಟಿ ಮಂಜು ವಾಯಿಯರ್‌, ರಿತಿಕಾ ಸಿಂಗ್‌, ದುಶಾರಾ ವಿಜಯನ್‌ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಅನಿರುದ್ಧ್‌ ರವಿಚಂದರ್‌ ಸಂಗೀತ ಸಂಯೋಜಿಸಲಿದ್ದಾರೆ.

ಇದನ್ನೂ ಓದಿ: Actor Rajinikanth: ಬಾಲಿವುಡ್‌ ಖ್ಯಾತ ನಿರ್ಮಾಪಕರೊಂದಿಗೆ ಕೈ ಜೋಡಿಸಿದ ರಜನಿಕಾಂತ್‌; ತಲೈವಾ ಹೊಸ ಚಿತ್ರ ಯಾವಾಗ?

ಕಥೆ ಏನು?

‘ವೆಟ್ಟೈಯನ್’ ಚಿತ್ರದಲ್ಲಿ ರಜನಿಕಾಂತ್ ನಿವೃತ್ತ ಪೊಲೀಸ್ ಅಧಿಕಾರಿಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ ಎಂದು ವರದಿಯಾಗಿದೆ. ತಿರುವನಂತಪುರಂ, ತಿರುನೆಲ್ವೇಲಿ ಮತ್ತು ಮುಂಬೈ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಈಗಾಗಲೇ ಚಿತ್ರೀಕರಣ ನಡೆದಿದೆ. ತಮಿಳು ಜತೆಗೆ ಕನ್ನಡ, ತೆಲುಗು, ಮಲಯಾಳಂ ಮತ್ತು ಹಿಂದಿಯಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ.

ಟೀಸರ್‌ ಬಿಡುಗಡೆ

ಇತ್ತೀಚೆಗೆ ‘ವೆಟ್ಟೈಯನ್’ ಚಿತ್ರದ ಟೀಸರ್‌ ಬಿಡುಗಡೆಯಾಗಿತ್ತು. ಲಾಠಿ ಹಿಡಿದು ರಜನಿಕಾಂತ್‌ ಆಗಮಿಸುವ ದೃಶ್ಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದರು. ಜತೆಗೆ ರಜನಿಕಾಂತ್ ತಮ್ಮದೇ ಶೈಲಿಯಲ್ಲಿ ಕನ್ನಡಕ ಹಾಕಿಕೊಳ್ಳುತ್ತ ಡೈಲಾಗ್‌ ಹೇಳುವ ದೃಶ್ಯ, ಕೈ ಹಿಂಬದಿಯಲ್ಲಿಟ್ಟುಕೊಂಡು ಚಿಟಿಕೆ ಹೊಡೆಯುವ ಸೀನ್‌ ಗಮನ ಸೆಳೆದಿತ್ತು. ‌ʼವೆಟ್ಟೈಯನ್‌ʼ ಎಂದರೆ ಕನ್ನಡದಲ್ಲಿ ಬೇಟೆಗಾರ ಎಂದರ್ಥ. ಈ ಸಿನಿಮಾದಲ್ಲಿ ರಜನಿಕಾಂತ್‌ ಅಪರಾಧಿಗಳ ಬೇಟೆಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಆಗಲೇ ಪ್ರೇಕ್ಷಕರು ಊಹಿಸಿದ್ದರು.

Continue Reading
Advertisement
love jihad
ಕರ್ನಾಟಕ3 hours ago

Love Jihad Case: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್; ಬಾಲಕಿಯನ್ನು ಪುಸಲಾಯಿಸಿ ಕರೆತಂದ ಅನ್ಯಕೋಮಿನ ಯುವಕ!

BUS
ಕರ್ನಾಟಕ3 hours ago

ಚಿಕ್ಕಮಗಳೂರಿನ ದತ್ತಪೀಠದಲ್ಲಿ 100 ಅಡಿ ಆಳಕ್ಕೆ ಬಿದ್ದ ಪ್ರವಾಸಿ ಬಸ್;‌ ಬಾಲಕ ಸಾವು, 29 ಮಂದಿಗೆ ಗಾಯ

ತುಮಕೂರು4 hours ago

Sira News: ಬಿಸಿಲ ಬೇಗೆಗೆ ಮತ್ಸ್ಯಗಳ ಮಾರಣಹೋಮ; ನೀರಿಲ್ಲದೇ ವಿಲವಿಲನೇ ಒದ್ದಾಡಿ ಸಾವಿರಾರು ಮೀನುಗಳ ಸಾವು

CSK vs SRH
ಕ್ರೀಡೆ4 hours ago

CSK vs SRH: ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ ಚೆನ್ನೈ; ಹೈದರಾಬಾದ್​ ವಿರುದ್ಧ 78 ರನ್​ ಅಮೋಘ ಜಯ

Notes
ಕರ್ನಾಟಕ4 hours ago

ಬೆಂಗಳೂರಿನಲ್ಲಿ ಆರ್‌ಬಿಐ ನಿಯಮ ಉಲ್ಲಂಘಿಸಿ ನೋಟು ನಗದೀಕರಣ; ಇಬ್ಬರಿಗೆ 4 ವರ್ಷ ಜೈಲು!

Narendra Modi
Lok Sabha Election 20244 hours ago

Narendra Modi: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಪ್ರಭಾವ ಸ್ಪಷ್ಟ; ಪುನರುಚ್ಚರಿಸಿದ ಮೋದಿ

cet exam karnataka exam authority
ಕರ್ನಾಟಕ5 hours ago

CET 2024: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಡಲು ನಿರ್ಧಾರ, ಮರು ಪರೀಕ್ಷೆ ಇಲ್ಲ; ಅಂಕ ಪರಿಗಣನೆ ಹೇಗೆ?

PM Narendra Modi
ಕರ್ನಾಟಕ5 hours ago

PM Narendra Modi: ನಾಳೆ ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

Paris Olympics
ಕ್ರೀಡೆ5 hours ago

Paris Olympics: ಬೆಳ್ಳಿ ಗೆದ್ದು ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಶೂಟರ್​ ಮಹೇಶ್ವರಿ

Arecanut cultivation
ಚಿತ್ರದುರ್ಗ5 hours ago

Arecanut Cultivation: ಒಣಗುತ್ತಿರುವುದು ಅಡಿಕೆ ಮರಗಳಲ್ಲ, ರೈತರ ಬದುಕು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202411 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202413 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202415 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202415 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ18 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ22 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ3 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌