Soujanya Case : ಸೌಜನ್ಯ ಸಾವಿನ ಮರುತನಿಖೆಗೆ ತಂದೆ ಮನವಿ; ಸರ್ಕಾರ, ಸಿಬಿಐಗೆ ಕೋರ್ಟ್‌ ನೋಟಿಸ್‌ - Vistara News

ಕೋರ್ಟ್

Soujanya Case : ಸೌಜನ್ಯ ಸಾವಿನ ಮರುತನಿಖೆಗೆ ತಂದೆ ಮನವಿ; ಸರ್ಕಾರ, ಸಿಬಿಐಗೆ ಕೋರ್ಟ್‌ ನೋಟಿಸ್‌

Soujanya Case : ಧರ್ಮಸ್ಥಳದ ಸೌಜನ್ಯ ಕೊಲೆ ಮತ್ತು ಅತ್ಯಾಚಾರದ ಕೇಸ್‌ಗೆ ಸಂಬಂಧಿಸಿ ಸಿಬಿಐ ಮರು ತನಿಖೆಗೆ ಮನವಿ ಮಾಡಲಾಗಿದೆ. ಈ ಸಂಬಂಧ ಕೋರ್ಟ್‌ ಸರ್ಕಾರ ಹಾಗೂ ಕೇಂದ್ರೀಯ ತನಿಖಾ ಸಂಸ್ಥೆಗೆ ನೋಟಿಸ್‌ ನೀಡಿದೆ.

VISTARANEWS.COM


on

Soujanya Case High Court
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಧರ್ಮಸ್ಥಳದಲ್ಲಿ 11 ವರ್ಷದ ಹಿಂದೆ ನಡೆದ ಸೌಜನ್ಯ ಎಂಬ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ (Soujanya Case) ಮರು ತನಿಖೆ ಕೋರಿ ಆಕೆಯ ತಂದೆ ರಾಜ್ಯ ಹೈಕೋರ್ಟ್‌ಗೆ (Karnataka High court) ಅರ್ಜಿ ಸಲ್ಲಿಸಿದ್ದಾರೆ. ಇದನ್ನು ಆಧರಿಸಿ ಹೈಕೋರ್ಟ್‌ ರಾಜ್ಯ ಸರ್ಕಾರ (Karnataka Government) ಮತ್ತು ಸಿಬಿಐಗೆ ನೋಟಿಸ್‌ ಜಾರಿ (Notice to CBI) ಮಾಡಿದೆ. 2012ರ ಅಕ್ಟೋಬರ್‌ 9ರಂದು ನಡೆದ ಈ ಘಟನೆಯಲ್ಲಿ ಆರೋಪಿ ಎಂದು ಬಂಧಿತನಾದ ಸಂತೋಷ್‌ ರಾವ್‌ಗೆ (Accused Santhosh Rao) ಸಿಬಿಐ ಕ್ಲೀನ್‌ ಚಿಟ್‌ ನೀಡಲಾಗಿತ್ತು. ಹಾಗಿದ್ದರೆ ಕೊಲೆಗಾರ ಯಾರು ಎನ್ನುವ ಪ್ರಶ್ನೆ ಗಾಢವಾಗಿ ಕಾಡುತ್ತಿದ್ದು, ಅದನ್ನು ಪತ್ತೆ ಹಚ್ಚಲು ಮರು ತನಿಖೆಯಾಗಲಿ ಎಂಬ ಬೇಡಿಕೆ ಜೋರಾಗಿ ಕೇಳಿಬಂದಿತ್ತು. ಅದರಂತೆ ಯುವತಿ ತಂದೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ‌ ಸೌಜನ್ಯ ಅವರ ತಂದೆ ಚಂದಪ್ಪ ಗೌಡ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೆ ನಟರಾಜನ್‌ ಅವರ ನೇತೃತ್ವದ ಏಕಸದಸ್ಯ ಪೀಠ ನಡೆಸಿತು.

ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನಂತರ ಪ್ರತಿವಾದಿಗಳಾಗಿರುವ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರು, ಸಿಐಡಿ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರು, ಅಪರಾಧ ಮತ್ತು ತಾಂತ್ರಿಕ ಸೇವಗಳ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರು, ದಕ್ಷಿಣ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ, ಸಿಐಡಿ ಉಪ ಪೊಲೀಸ್‌ ವರಿಷ್ಠಾಧಿಕಾರಿ, ಬೆಳ್ತಂಗಡಿ ಪೊಲೀಸ್‌ ಠಾಣಾಧಿಕಾರಿ ಮತ್ತು ಸಿಬಿಐಗೆ ಪೀಠವು ನೋಟಿಸ್‌ ಜಾರಿಗೊಳಿಸಿದೆ.

Soujanya Case Santhosh Rao

ಪ್ರಕರಣದಿಂದ ಆರೋಪಿ ಸಂತೋಷ್‌ ರಾವ್‌ ಅನ್ನು ಖುಲಾಸೆಗೊಳಿಸಿ ವಿಚಾರಣಾಧೀನ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್‌ ಮೇಲ್ಮನವಿಯು ಇದೇ ನ್ಯಾಯಾಲಯದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಾಕಿಯಿದೆ. ಮೇಲ್ಮನವಿಯೊಂದಿಗೆ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಬೇಕು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಇದನ್ನು ಪರಿಗಣಿಸಿರುವ ಪೀಠವು ರೋಸ್ಟರ್‌ ಪ್ರಕಾರ ಸೂಕ್ತ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲು ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟ್ರಿಗೆ ನಿರ್ದೇಶಿಸಿದೆ.

ಪ್ರಕರಣದಿಂದ ಖುಲಾಸೆಯಾಗಿರುವ ಸಂತೋಷ್‌ ರಾವ್‌ ಅನ್ನು ಸಹ ಪ್ರಕರಣದಲ್ಲಿ ಪ್ರತಿವಾದಿ ಮಾಡಲಾಗಿದೆ.

ಇದನ್ನೂ ಓದಿ : Soujanya Case : ಸೌಜನ್ಯ ಕೊಲೆ ಪ್ರಕರಣ; ಸಂತೋಷ್‌ ರಾವ್‌ ಖುಲಾಸೆ ಪ್ರಶ್ನಿಸಿ ಸಿಬಿಐ ಮೇಲ್ಮನವಿ

Soujanya Case : ಏನಿದು ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣ?

  1. 2012ರ ಅಕ್ಟೋಬರ್‌ 9ರಂದು ಸೌಜನ್ಯಳನ್ನು ಅಪಹರಿಸಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.
  2. ಬೆಳ್ತಂಗಡಿ ಠಾಣಾ ಪೊಲೀಸರು ಒಂದೆರಡು ದಿನದಲ್ಲಿ ಸಂತೋಷ್‌ ರಾವ್‌ ಎಂಬಾತನೇ ಕೊಲೆಗಾರ ಎಂದು ಹೇಳಿ ಬಂಧಿಸಿದ್ದರು. ನಂತರ ಪ್ರಕರಣದ ತನಿಖೆಯನ್ನು ಸಿಐಡಿ, ಆ ಬಳಿಕ ಸಿಬಿಐಗೆ ವರ್ಗಾಯಿಸಲಾಗಿತ್ತು.
  3. ಸಿಬಿಐ ತನಿಖೆ ಪೂರ್ಣಗೊಳಿಸಿ ಸಂತೋಷ್‌ ರಾವ್‌ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿತ್ತು. ವಿಶೇಷ ನ್ಯಾಯಾಲಯವು ಸೂಕ್ತ ಸಾಕ್ಷ್ಯಧಾರಗಳಿಲ್ಲ ಎಂದು ಸಂತೋಷ್‌ ರಾವ್‌ ಅವರನ್ನು ಖುಲಾಸೆಗೊಳಿಸಿ 2023ರ ಜೂನ್‌ 16ರಂದು ಆದೇಶಿಸಿತ್ತು.
  4. ಆ ಆದೇಶದಲ್ಲಿ ಪ್ರಾಸಿಕ್ಯೂಷನ್‌ (ತನಿಖಾಧಿಕಾರಿಗಳು) ಈ ಅಪರಾಧ ಕೃತ್ಯದಲ್ಲಿ ಆರೋಪಿಯ ಪಾತ್ರ ಇರುವುದನ್ನು ಮತ್ತು ಆತನ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸುವಲ್ಲಿ ವಿಫಲವಾಗಿತ್ತು.
  5. ಗೋಲ್ಡನ್‌ ಅವರ್‌ನಲ್ಲಿ ತನಿಖೆಯನ್ನು (ಪ್ರಕರಣ ಘಟಿಸಿದ ಅಲ್ಪ ಅವಧಿಯಲ್ಲಿಯೇ ನಡೆಸುವ ಮಾಹಿತಿ, ಸಾಕ್ಷ್ಯ ಸಂಗ್ರಹ) ಸಮರ್ಪಕವಾಗಿ ಮಾಡಿಲ್ಲ ಎಂದು ಸಿಬಿಐ ತನ್ನ ವರದಿಯಲ್ಲಿ ಸ್ಪಷ್ಟವಾಗಿ ಹೇಳಿದೆ.
  6. ಇದು ಸಂತೋಷ್‌ ರಾವ್‌ ಮಾಡಿದ ಕೊಲೆಯಲ್ಲ, ಯಾರೋ ಪ್ರಭಾವಿಗಳು ಮಾಡಿ ಸಂತೋಷ್‌ ರಾವ್‌ ತಲೆಗೆ ಕಟ್ಟಲಾಗಿದೆ ಎಂಬ ಆರೋಪಗಳು ಜೋರಾಗಿವೆ.
  7. ಸಂತೋಷ್‌ ರಾವ್‌ ಖುಲಾಸೆ ಆಗಿದ್ದರೆ ನಿಜವಾದ ಆರೋಪಿ ಯಾರು ಎನ್ನುವ ಬಗ್ಗೆ ತನಿಖೆಯಾಗಬೇಕು ಎಂಬ ಬೇಡಿಕೆಯೂ ಇದೆ.
  8. ತನಿಖೆ ನ್ಯಾಯೋಚಿತವಾಗಿ ನಡೆದಿಲ್ಲ ಎಂಬುದು ಸ್ಪಷ್ಟವಾಗಿರುವ ಕಾರಣ ಮರು ತನಿಖೆ ನಡೆಸಲು ಆದೇಶಿಸಬೇಕು ಎನ್ನುವುದು ತಂದೆಯ ಮನವಿಯಾಗಿತ್ತು.
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Bhavani Reavanna : ಭವಾನಿ ರೇವಣ್ಣಗೆ ಬಂಧನ ಭೀತಿ; ಜಾಮೀನು ಅರ್ಜಿ ತೀರ್ಪು ಮುಂದಕ್ಕೆ

Bhavani Reavanna : ಇದು ಅವರಿಗೆ ವಿಚಾರಣೆಗೆ ಹಾಜರಾಲು ನೀಡುತ್ತಿರುವ ಎರಡನೇ ನೋಟಿಸ್ ಆಗಿದೆ. ಪ್ರಜ್ವಲ್ ರೇವಣ್ಣ ಅವರಿಂದ ಅನ್ಯಾಯಕ್ಕೆ ಒಳಗಾಗಿದ್ದ ಸಂತ್ರಸ್ತ ಮಹಿಳೆಯೊಬ್ಬಳನ್ನು ಅಪಹರಿಸಿರುವ ಪ್ರಕರಣದಲ್ಲಿ ಭವಾನಿ ರೇವಣ್ಣ ಎಸ್​ಐಟಿ ಪೊಲೀಸರ ತನಿಖೆಗೆ ಒಳಪಡಬೇಕಾಗಿತ್ತು. ಆದರೆ, ಯಾವುದೇ ಕಾರಣಕ್ಕೆ ಯಾರಿಗೂ ಕಾಣಿಸದೇ, ಪೊಲೀಸರ ವಿಚಾರಣೆಗೂ ಹಾಜರಾಗದೇ ತಲೆ ಮರಿಸಿಕೊಂಡ ರೀತಿಯಲ್ಲಿ ವರ್ತಿಸುತ್ತಿದ್ದಾರೆ.

VISTARANEWS.COM


on

Bhavani Reavanna
Koo

ಬೆಂಗಳೂರು: ಲೈಂಗಿಕ ಹಗರಣದಲ್ಲಿನ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದ ಆರೋಪಿಯಾಗಿರುವ ಭವಾನಿ ರೇವಣ್ಣ (Bhavani Reavanna) ಅವರಿಗೆ ಬಂಧನ ಭೀತಿ ಶುರುವಾಗಿದೆ. ತಮ್ಮನ್ನು ಬಂಧಿಸದಂತೆ ನಿರೀಕ್ಷಣಾ ಜಾಮೀನಿಗಾಗಿ ಭವಾನಿ ಅವರ ವಕೀಲರು ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ನ್ಯಾಯಾಲಯ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿದೆ. ಹೀಗಾಗಿ ಅವರಿಗೆ ಬಂಧನ ಭೀತಿ ಶುರುವಾಗಿದೆ. ಏತನ್ಮಧ್ಯೆ ಲೈಂಗಿಕ ಹಗರಣದಲ್ಲಿನ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದ ಆರೋಪಿಯಾಗಿರುವ ಭವಾನಿ ರೇವಣ್ಣ ಅವರಿಗೆ ಎಸ್​ಐಟಿ ಅಧಿಕಾರಿಗಳು ಮತ್ತೊಂದು ನೋಟಿಸ್​ ನೀಡಿದ್ದಾರೆ.

ಇದು ಅವರಿಗೆ ವಿಚಾರಣೆಗೆ ಹಾಜರಾಲು ನೀಡುತ್ತಿರುವ ಎರಡನೇ ನೋಟಿಸ್ ಆಗಿದೆ. ಪ್ರಜ್ವಲ್ ರೇವಣ್ಣ ಅವರಿಂದ ಅನ್ಯಾಯಕ್ಕೆ ಒಳಗಾಗಿದ್ದ ಸಂತ್ರಸ್ತ ಮಹಿಳೆಯೊಬ್ಬಳನ್ನು ಅಪಹರಿಸಿರುವ ಪ್ರಕರಣದಲ್ಲಿ ಭವಾನಿ ರೇವಣ್ಣ ಎಸ್​ಐಟಿ ಪೊಲೀಸರ ತನಿಖೆಗೆ ಒಳಪಡಬೇಕಾಗಿತ್ತು. ಆದರೆ, ಯಾವುದೇ ಕಾರಣಕ್ಕೆ ಯಾರಿಗೂ ಕಾಣಿಸದೇ, ಪೊಲೀಸರ ವಿಚಾರಣೆಗೂ ಹಾಜರಾಗದೇ ತಲೆ ಮರಿಸಿಕೊಂಡ ರೀತಿಯಲ್ಲಿ ವರ್ತಿಸುತ್ತಿದ್ದಾರೆ.

ಒಂದೆಡೆ ಮಗ ಪ್ರಜ್ವಲ್‌ ರೇವಣ್ಣ (prajwal revanna case) ನಿನ್ನೆ ರಾತ್ರಿ ಬಂಧನವಾಗಿದ್ದು, ಇಂದು ಮೆಡಿಕಲ್‌ ಟೆಸ್ಟ್‌ ನಡೆಸಲಾಗುತ್ತಿದೆ. ಇಂದೇ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಪೊಲೀಸ್‌ ಕಸ್ಟಡಿಗೆ ಪಡೆಯಲು ಸಿದ್ಧತೆ ನಡೆಸಲಾಗಿದೆ. ಇಂದು ಭವಾನಿ ರೇವಣ್ಣ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ಕೂಡ ತೀರ್ಪಿಗೆ ಬರುತ್ತಿದೆ. ಅದರ ಬೆನ್ನಲ್ಲೇ ಎಸ್‌ಐಟಿ ಮತ್ತೊಂದು ನೋಟೀಸ್ ನೀಡಿದೆ. ಕೆ.ಆರ್ ನಗರ ಠಾಣೆಯಲ್ಲಿ ದಾಖಲಾಗಿದ್ದ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ನೊಟೀಸ್ ನೀಡಿದೆ. “ಪ್ರಕರಣಕ್ಕೆ ಸಂಬಂಧಿಸಿ 01/06/2024ರಂದು ತನಿಖೆಗೆ ತನಿಖಾಧಿಕಾರಿಗಳು ಬರಲಿದ್ದು, ತಾವು ನೀಡಿದ ಈ ವಿಳಾಸದಲ್ಲಿ ತಮ್ಮನ್ನು ತನಿಖೆಗೆ ಒಳಪಡಿಸಲಾಗುವುದು. ಅಗತ್ಯ ಸಹಕಾರ ನೀಡಬೇಕು” ಎಂದು ನೊಟೀಸ್ ನೀಡಿದ್ದಾರೆ.

ಇದನ್ನೂ ಓದಿ ;Prajwal Revanna Case : ಪ್ರಜ್ವಲ್​ನನ್ನು ಮಹಿಳಾ ಪೊಲೀಸ್ ಸಿಬ್ಬಂದಿಯೇ ಬಂಧಿಸಿದ್ದು ಯಾಕೆ?

“ಈ ಹಿಂದೆ ನೀಡಿದ್ದ ನೋಟೀಸ್‌ಗೆ ನೀವು ಉತ್ತರಿಸಿಲ್ಲ. 15-05-24ರಂದು ನೀಡಿದ ನೋಟೀಸ್‌ಗೆ, ಹೊಳೆನರಸೀಪುರದ ಚನ್ನಾಂಭಿಕ ನಿವಾಸದಲ್ಲಿ ಸ್ಪಷ್ಟನೆ ನೀಡುವುದಾಗಿ ತಿಳಿಸಿದ್ದೀರಿ. ಈ ಪ್ರಕರಣದಲ್ಲಿ ನಿಮ್ಮನ್ನು ವಿಚಾರಣೆಗೆ ಒಳಪಡಿಸುವ ಅವಶ್ಯಕತೆ ಇದೆ. ಆದ್ದರಿಂದ ನೀವು ಹೇಳಿರುವಂತೆ ನಾವು ನಿಮ್ಮನ್ನು 01-06-24ರಂದು ವಿಚಾರಣೆಗೆ ಒಳಪಡಿಸಲಿದ್ದು, ಖುದ್ದು ಹಾಜರಿರಬೇಕು. ಮಹಿಳಾ ಅಧಿಕಾರಿಗಳೊಂದಿಗೆ ಜೂನ್ 1ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆ ಒಳಗೆ ವಿಚಾರಣೆಗೆ ಆಗಮಿಸುತ್ತೇವೆ. ಆ ಸಂದರ್ಭ ಖುದ್ದು ಮನೆಯಲ್ಲಿ ಹಾಜರಿರಬೇಕು” ಎಂದು ಎಸ್‌ಐಟಿ ಮುಖ್ಯಸ್ಥ ಹೇಮಂತ್‌ಕುಮಾರ್‌ ಆದೇಶಿಸಿದ್ದಾರೆ.

ಭವಾನಿ ರೇವಣ್ಣ ಅವರಿಗೆ ಇದುವರೆಗೆ ಎರಡು ನೋಟೀಸ್‌ಗಳನ್ನು ನೀಡಲಾಗಿದೆ. ನಂತರ ಎಸ್ಐಟಿಗೆ ಪತ್ರ ಬರೆದಿದ್ದ ಭವಾನಿ, ಅವಶ್ಯವಿದ್ದರೆ ತನಿಖೆಗೆ ತಮ್ಮ ಮನೆಯಲ್ಲಿ ಲಭ್ಯವಿರುವುದಾಗಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ತಾವು ವಿಚಾರಣೆಗೆ ಬರುತ್ತಿರುವುದಾಗಿ ಎಸ್ಐಟಿಯಿಂದ ನೊಟೀಸ್‌ ಹೋಗಿದೆ. ಹಾಸನ ಹೊಳೆನರಸೀಪುರದ ಹೆಚ್.ಡಿ ರೇವಣ್ಣ ಹಾಗೂ ಭವಾನಿ ನಿವಾಸದ ಬಾಗಿಲಿಗೆ SIT ಟೀಂ ನೋಟೀಸ್ ಅಂಟಿಸಿದೆ. ಹೀಗಾಗಿ ನಾಳೆ ಹೊಳೆನರಸೀಪುರದಲ್ಲಿ ಭವಾನಿ ರೇವಣ್ಣ ಅವರ ಮೊದಲ ಸುತ್ತಿನ ವಿಚಾರಣೆ ನಡೆಯಲಿದೆ.

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ (Prajwal Revanna Case) ಕೆ.ಆರ್.ನಗರ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ (Bhavani Revanna) ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತು ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಮೇ 31ರಂದೇ ಆದೇಶವನ್ನು ಹೊರಡಿಸುವುದಾಗಿ ತಿಳಿಸಿದೆ. ಅತ್ತ, ತಮ್ಮ ವಿರುದ್ಧ ದಾಖಲಾದ ಎರಡೂ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಎಚ್‌.ಡಿ.ರೇವಣ್ಣ ಕೂಡ ಅರ್ಜಿ ಸಲ್ಲಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Muslim Personal Law : ಹಿಂದೂ- ಮುಸ್ಲಿಂ ಜೋಡಿಯ ಮದುವೆಗೆ ವೈಯಕ್ತಿಕ ಕಾನೂನಿನ ಮಾನ್ಯತೆ ಇಲ್ಲ ಎಂದ ಕೋರ್ಟ್​, ವಿವರಣೆ ಹೀಗಿದೆ

Muslim Personal Law: ವಿಶೇಷ ವಿವಾಹ ಕಾಯ್ದೆಯಡಿ ತಮ್ಮ ಮದುವೆಯ ನೋಂದಣಿಗೆ ನಿಗದಿಪಡಿಸಿದ ದಿನಾಂಕದಂದು ವಿವಾಹ ಅಧಿಕಾರಿಯ ಮುಂದೆ ಹಾಜರಾಗಲು ಅವರು ಇತರ ಪರಿಹಾರಗಳನ್ನು ನೀಡುವಂತೆ ಜೋಡಿ ರಕ್ಷಣೆ ಕೋರಿತ್ತು. ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ ಹಿಂದೂ ಮಹಿಳೆ ಮತ್ತು ಮುಸ್ಲಿಂ ಪುರುಷನ ನಡುವಿನ ವಿವಾಹವು ವೈಯಕ್ತಿಕ ಕಾನೂನಿನ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ಹೇಳಿ ನ್ಯಾಯಾಲಯವು ರಕ್ಷಣೆ ನಿರಾಕರಿಸಿತ್ತು.

VISTARANEWS.COM


on

Muslim Personal Law
Koo

ಭೋಪಾಲ್​: ಮುಸ್ಲಿಂ ಪುರುಷ ಮತ್ತು ಹಿಂದೂ ಮಹಿಳೆಯ ನಡುವಿನ ವಿವಾಹವು ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ (Muslim Personal Law) ಅಮಾನ್ಯ ಎಂದು ಮಧ್ಯಪ್ರದೇಶ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಅಂತರ್ ಧರ್ಮೀಯ ದಂಪತಿಗೆ ರಕ್ಷಣೆ ನೀಡಲು ನಿರಾಕರಿಸಿತು. ಅರ್ಜಿದಾರರು ಪರಸ್ಪರ ಪ್ರೀತಿಸುತ್ತಿದ್ದರು. ಹೀಗಾಗಿ ವಿಶೇಷ ವಿವಾಹ ಕಾಯ್ದೆಯಡಿ ವಿವಾಹ ನೋಂದಣಾಧಿಕಾರಿಯನ್ನು ಸಂಪರ್ಕಿಸಿದ್ದರು. ಆದರೆ ಕುಟುಂಬದ ಆಕ್ಷೇಪಣೆಗಳಿಂದಾಗಿ, ಅವರು ವಿವಾಹ ಅಧಿಕಾರಿಯ ಮುಂದೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಪರಿಣಾಮವಾಗಿ ಅವರ ಮದುವೆಯನ್ನು ನೋಂದಾಯಿಸಲಾಗಿಲ್ಲ.

ವಿಶೇಷ ವಿವಾಹ ಕಾಯ್ದೆಯಡಿ ತಮ್ಮ ಮದುವೆಯ ನೋಂದಣಿಗೆ ನಿಗದಿಪಡಿಸಿದ ದಿನಾಂಕದಂದು ವಿವಾಹ ಅಧಿಕಾರಿಯ ಮುಂದೆ ಹಾಜರಾಗಲು ಅವರು ಇತರ ಪರಿಹಾರಗಳನ್ನು ನೀಡುವಂತೆ ಜೋಡಿ ರಕ್ಷಣೆ ಕೋರಿತ್ತು. ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ ಹಿಂದೂ ಮಹಿಳೆ ಮತ್ತು ಮುಸ್ಲಿಂ ಪುರುಷನ ನಡುವಿನ ವಿವಾಹವು ವೈಯಕ್ತಿಕ ಕಾನೂನಿನ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ಹೇಳಿ ನ್ಯಾಯಾಲಯವು ರಕ್ಷಣೆ ನಿರಾಕರಿಸಿತ್ತು.

“ಮಹಮ್ಮದೀಯ ಕಾನೂನಿನ ಪ್ರಕಾರ, ಮುಸ್ಲಿಂ ಹುಡುಗನು ವಿಗ್ರಹಾರಾಧಕ ಅಥವಾ ಅಗ್ನಿ ಆರಾಧಕಳಾಗಿರುವ ಹುಡುಗಿಯನ್ನು ಮದುವೆಯಾಗುವುದು ಮಾನ್ಯ ವಿವಾಹವಲ್ಲ. ಮದುವೆಯನ್ನು ವಿಶೇಷ ವಿವಾಹ ಕಾಯ್ದೆಯಡಿ ನೋಂದಾಯಿಸಿದರೂ ಮಾನ್ಯ ವಿವಾಹವಾಗುವುದಿಲ್ಲ. ಅದು ಫಾಸಿದ್ ವಿವಾಹವಾಗಿರುತ್ತದೆ.

ಇದನ್ನೂ ಓದಿ: Radhika Merchant : ಅನಂತ್​​ ಅಂಬಾನಿ- ರಾಧಿಕಾ ಮರ್ಚೆಂಟ್​ ವಿವಾಹದ ಸ್ಥಳ ಬಹಿರಂಗ; ಇಲ್ಲಿದೆ ವಿವರ

ಮುಸ್ಲಿಂ ಹುಡುಗನೊಬ್ಬ ಹಿಂದೂ ಹುಡುಗಿಯನ್ನು ಮದುವೆಯಾಗುವುದು ಮಾನ್ಯವಾಗುತ್ತದೆಯೇ ಅಥವಾ ಇಲ್ಲವೇ ಎಂಬ ಪ್ರಶ್ನೆಯನ್ನು ನ್ಯಾಯಾಲಯ ಪರಿಗಣಿಸಿದೆ. “ವೈಯಕ್ತಿಕ ಕಾನೂನಿನ ಪ್ರಕಾರ, ಮದುವೆಯ ಆಚರಣೆಗೆ ಕೆಲವು ಆಚರಣೆಗಳನ್ನು ನಿರ್ವಹಿಸುವುದು ಅವಶ್ಯಕ. ವಿಶೇಷ ವಿವಾಹ ಕಾಯ್ದೆಯಡಿ ಮದುವೆಯನ್ನು ನಡೆಸಿದರೆ, ಅಂತಹ ಕಡ್ಡಾಯ ಆಚರಣೆಗಳನ್ನು ನಿರ್ವಹಿಸದ ಕಾರಣ ಅಂತಹ ಮದುವೆಯನ್ನು ಪ್ರಶ್ನಿಸಲಾಗುವುದಿಲ್ಲ. ವಿಶೇಷ ವಿವಾಹ ಕಾಯ್ದೆಯಡಿ ವಿವಾಹವು ವೈಯಕ್ತಿಕ ಕಾನೂನಿನಡಿಯಲ್ಲಿ ನಿಷೇಧಿಸಲಾದ ಮದುವೆಯನ್ನು ಕಾನೂನುಬದ್ಧಗೊಳಿಸುವುದಿಲ್ಲ.

Continue Reading

ಪ್ರಮುಖ ಸುದ್ದಿ

Cab Service : ಆ್ಯಪ್​ ಆಧಾರಿತ ಕ್ಯಾಬ್​ಗಳು ಶೇ. 5ಕ್ಕಿಂತ ಹೆಚ್ಚು ಸೇವಾ ಶುಲ್ಕ ವಿಧಿಸುವಂತಿಲ್ಲ; ಸರ್ಕಾರದ ಆದೇಶಕ್ಕೆ ಕೋರ್ಟ್​ ಮನ್ನಣೆ

Cab Service: ನ್ಯಾಯಾಲಯವು ಆದೇಶದಲ್ಲಿ. ರಿಟ್ ಅರ್ಜಿಗಳನ್ನು ವಜಾಗೊಳಿಸಲಾಗಿದೆ. ಕ್ಯಾಬ್ ಸಂಸ್ಥೆಗಳು ಈಗ ನಿಗದಿಪಡಿಸಿದ ಶೇಕಡಾ 5 ಸೇವಾ ಶುಲ್ಕ ಸಂಗ್ರಹಿಸಲು ಮಾತ್ರ ಅರ್ಹರಾಗಿರುತ್ತಾರೆ ಎಂದು ಸ್ಪಷ್ಟಪಡಿಸಲಾಗಿದೆ. ಅಪ್ಲಿಕೇಶನ್ ಆಧಾರಿತ ಆಟೋ ಚಾಲಕರ ಸೇವಾ ಶುಲ್ಕವನ್ನು ಕರ್ನಾಟಕ ಸಾರಿಗೆ ಇಲಾಖೆ ನವೆಂಬರ್ 25, 2022 ರಂದು ಶೇಕಡಾ 5 ಕ್ಕೆ (ಮೂಲ ಶುಲ್ಕಕ್ಕೆ ಅನ್ವಯವಾಗುವ ಜಿಎಸ್​ಟಿಯೊಂದಿಗೆ) ಮಿತಗೊಳಿಸಿತ್ತು.

VISTARANEWS.COM


on

Cab service
Koo

ಬೆಂಗಳೂರು: ಆ್ಯಪ್ ಮೂಲಕ ಕಾರ್ಯಾಚರಿಸುವ ಕ್ಯಾಬ್ ಅಗ್ರಿಗೇಟರ್​ಗಳು (Cab Service) ಗ್ರಾಹಕರಿಂದ ಸಂಗ್ರಹಿಸುವ ಸೇವಾ ಶುಲ್ಕ ನಿಗದಿಪಡಿಸುವ ಕರ್ನಾಟಕ ರಾಜ್ಯ ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿ ಕರ್ನಾಟಕ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ ಎಂದು ಬಾರ್ ಆ್ಯಂಡ್​ ಬೆಂಚ್ ವರದಿ ಮಾಡಿದೆ. ಕ್ಯಾಬ್​ ಕಂಪನಿಗಳು ಗರಿಷ್ಠ ಶೇಕಡಾ 5ರಷ್ಟು ಸೇವಾ ಶುಲ್ಕ ಮಾತ್ರ ಸಂಗ್ರಹಿಬಹುದು ಎಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಇದರಿಂದಾಗಿ ಬೆಂಗಳೂರು ನಗರ ಸೇರಿದಂತೆ ಕರ್ನಾಟಕದಲ್ಲಿ ಆ್ಯಪ್ ಆಧಾರಿತ ಕ್ಯಾಬ್​​ಗಳನ್ನು ಬಳಸುವ ಗ್ರಾಹಕರಿಗೆ ಅನುಕೂಲವಾಗಲಿದೆ. ಮಿತಿ ಮೀರಿ ಶುಲ್ಕ ವಿಧಿಸುವ ಕಂಪನಿಗಳ ಯೋಜನೆಗೆ ಕಡಿವಾಣ ಬೀಳಲಿದೆ.

ನ್ಯಾಯಾಲಯವು ಆದೇಶದಲ್ಲಿ. ರಿಟ್ ಅರ್ಜಿಗಳನ್ನು ವಜಾಗೊಳಿಸಲಾಗಿದೆ. ಕ್ಯಾಬ್ ಸಂಸ್ಥೆಗಳು ಈಗ ನಿಗದಿಪಡಿಸಿದ ಶೇಕಡಾ 5 ಸೇವಾ ಶುಲ್ಕ ಸಂಗ್ರಹಿಸಲು ಮಾತ್ರ ಅರ್ಹರಾಗಿರುತ್ತಾರೆ ಎಂದು ಸ್ಪಷ್ಟಪಡಿಸಲಾಗಿದೆ. ಅಪ್ಲಿಕೇಶನ್ ಆಧಾರಿತ ಆಟೋ ಚಾಲಕರ ಸೇವಾ ಶುಲ್ಕವನ್ನು ಕರ್ನಾಟಕ ಸಾರಿಗೆ ಇಲಾಖೆ ನವೆಂಬರ್ 25, 2022 ರಂದು ಶೇಕಡಾ 5 ಕ್ಕೆ (ಮೂಲ ಶುಲ್ಕಕ್ಕೆ ಅನ್ವಯವಾಗುವ ಜಿಎಸ್​ಟಿಯೊಂದಿಗೆ) ಮಿತಗೊಳಿಸಿತ್ತು. ಆದರೆ ಉಬರ್, ಓಲಾ ಮತ್ತು ರ್ಯಾಪಿಡೊದಂತಹ ರೈಡ್-ಹೆಯ್ಲಿಂಗ್ ಅಪ್ಲಿಕೇಶನ್ ಗಳು ಈ ಕ್ರಮವನ್ನು ಪ್ರಶ್ನಿಸಿದ್ದವು. ಶೇಕಡಾ 20 ರಷ್ಟು ಸಾಮಾನ್ಯ ದರ ವಿಧಿಸಲು ಅನುಮತಿ ನೀಡಬೇಕು ಮತ್ತು ಮೂಲ ದರದ ಜತೆಗೆ ಶೇಕಡಾ 20ರಷ್ಟು ಸರ್ಜ್​ ಪ್ರೈಸ್ ಅಥವಾ ದುಪ್ಪಟ್ಟು ಶುಲ್ಕ ವಿಧಿಸಲು ಅವಕಾಶ ನೀಡಬೇಕು ಎಂದು ಕೋರಿತ್ತು. ಈ ಎಲ್ಲ ಕಂಪನಿಗಳು ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಕಾನೂನುಬಾಹಿರ, ನಿರಂಕುಶ ಮತ್ತು ತರ್ಕರಹಿತ ಎಂದು ವಾದಿಸಿದ್ದವು.

ಇದನ್ನು ಓದಿ : Lok Sabha Election : ಷೇರು ಮಾರುಕಟ್ಟೆ ಸಂಸ್ಥೆಯ ಪ್ರಕಾರ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚು ಸೀಟು ಗೆಲ್ಲಲಿದೆ; ಲೆಕ್ಕಾಚಾರ ಹೀಗಿದೆ

ನೋಟಿಸ್ ಅನ್ನು ನ್ಯಾಯಾಲಯವು ಜನವರಿ 2023 ರಲ್ಲಿ ತಡೆಹಿಡಿದಿತ್ತು. ಶೇಕಡಾ 10 ರ ಅನುಕೂಲಕರ ಶುಲ್ಕದೊಂದಿಗೆ ಅಗ್ರಿಗೇಟರ್​ಗಳು ಅಲ್ಪಾವಧಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಿತು. ಸೋಮವಾರ, ನ್ಯಾಯಾಲಯವು ಅಂತಿಮವಾಗಿ ಅರ್ಜಿಗಳನ್ನು ವಜಾಗೊಳಿಸಿತು. ಈ ತೀರ್ಪಿನಿಂದ ಬೆಂಗಳೂರಿನ ಸಾವಿರಾರು ನಾಗರಿಕರಿಗೆ ಅನುಕೂಲವಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

Continue Reading

ದೇಶ

Laila Khan Case: ನಟಿ ಲೈಲಾ ಖಾನ್‌ ಸೇರಿ 6 ಜನರ ಹತ್ಯೆ;‌ ನಟಿಯ ತಂದೆ ಪರ್ವೇಜ್‌ ತಕ್‌ಗೆ ಗಲ್ಲು ಶಿಕ್ಷೆ!

Laila Khan Case: ಸೆಲಿನಾ ಅವರಿಗೆ ಪರ್ವೇಜ್‌ ತಕ್‌ ಮೂರನೇ ಪತಿಯಾಗಿದ್ದ. ಸೆಲಿನಾ ತಕ್‌ ಅವರು ಶ್ರೀಮಂತರಾಗಿದ್ದ ಕಾರಣ, ಅವರಿಗೆ ಸಂಬಂಧಿಸಿದ ಎಲ್ಲ ಆಸ್ತಿಯನ್ನು ಹೊಡೆಯಲು ಪರ್ವೇಜ್‌ ತಕ್‌ ಕುತಂತ್ರ ಮಾಡುತ್ತಿದ್ದ. ಇದಕ್ಕಾಗಿ, ಅವರ ಜತೆ ಜಗಳವಾಡುತ್ತಿದ್ದ. ಎಲ್ಲ ಆಸ್ತಿಯನ್ನು ತನ್ನ ಹೆಸರಿಗೆ ಬರೆದುಕೊಡುವಂತೆ ಒತ್ತಾಯಿಸುತ್ತಿದ್ದ. ಆಸ್ತಿಗಾಗಿ ಜಗಳ ಕಾಯುತ್ತಿದ್ದ. ಕೊನೆಗೊಂದು ದಿನ ಲೈಲಾ ಖಾನ್‌ ಸೇರಿ ಆರು ಮಂದಿಯನ್ನು ಕೊಲೆ ಮಾಡಿದ್ದ. ಈಗ ಈತನಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.

VISTARANEWS.COM


on

Laila Khan Case
Koo

ಮುಂಬೈ: ಬಾಲಿವುಡ್‌ ನಟಿ, ವಫಾ, ಫರಾರ್‌ ಸಿನಿಮಾಗಳ ಖ್ಯಾತಿಯ ಲೈಲಾ ಖಾನ್‌ (Laila Khan Case) ಹಾಗೂ ಅವರ ಐವರು ಸಂಬಂಧಿಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ನ್ಯಾಯಾಲಯವು (Mumbai Court) ನಟಿಯ ಮಲ ತಂದೆ ಪರ್ವೇಜ್‌ ತಕ್‌ಗೆ (Parvez Tak) ಗಲ್ಲು ಶಿಕ್ಷೆ ವಿಧಿಸಿದೆ. ಆ ಮೂಲಕ 13 ವರ್ಷಗಳ ಪ್ರಕರಣಕ್ಕೆ ಮುಂಬೈ ನ್ಯಾಯಾಲಯವು ಅಂತ್ಯ ಹಾಡಿದೆ. ಆರೂ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ ಸಚಿನ್‌ ಪವಾರ್‌ ಅವರು ಆದೇಶ ಹೊರಡಿಸಿದ್ದಾರೆ. ಇವರು ಮೇ 9ರಂದು ವಿಚಾರಣೆ ಅಂತ್ಯಗೊಳಿಸಿ, ಶಿಕ್ಷೆಯ ಪ್ರಮಾಣವನ್ನು ಕಾಯ್ದಿರಿಸಿದ್ದರು.

ಏನಿದು ಪ್ರಕರಣ?

2011ರ ಫೆಬ್ರವರಿಯಲ್ಲಿ ಮಹಾರಾಷ್ಟ್ರದ ನಾಶಿಕ್‌ ಜಿಲ್ಲೆಯ ಇಗಟ್‌ಪುರಿಯಲ್ಲಿರುವ ನಿವಾಸದಲ್ಲಿ ನಟಿ ಲೈಲಾ ಖಾನ್‌, ಲೈಲಾ ಖಾನ್‌ ತಾಯಿ ಸೆಲಿನಾ ಸೇರಿ ಆರು ಜನರನ್ನು ಪರ್ವೇಜ್‌ ತಕ್‌ ಸೇರಿ ಹಲವರು ಕೊಲೆ ಮಾಡಿದ್ದರು. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸೆಲಿನಾ ಸೇರಿ ಆರು ಮಂದಿಯನ್ನು ಹತ್ಯೆಗೈದು, ಫಾರ್ಮ್‌ಹೌಸ್‌ನಲ್ಲಿಯೇ ಸಮಾಧಿ ಮಾಡಲಾಗಿತ್ತು. ಜಮ್ಮು-ಕಾಶ್ಮೀರ ಪೊಲೀಸರು ಪರ್ವೇಜ್‌ ತಕ್‌ನನ್ನು ಬಂಧಿಸಿದ ಬಳಿಕವೇ ಫಾರ್ಮ್‌ಹೌಸ್‌ನಲ್ಲಿ ಲೈಲಾ ಖಾನ್‌ ಸೇರಿ ಎಲ್ಲರ ಶವಗಳು ಪತ್ತೆಯಾಗಿದ್ದವು.

Court Order

ಕೊಲೆ ಮಾಡಲು ಏನು ಕಾರಣ?

ಸೆಲಿನಾ ಅವರಿಗೆ ಪರ್ವೇಜ್‌ ತಕ್‌ ಮೂರನೇ ಪತಿಯಾಗಿದ್ದ. ಸೆಲಿನಾ ತಕ್‌ ಅವರು ಶ್ರೀಮಂತರಾಗಿದ್ದ ಕಾರಣ, ಅವರಿಗೆ ಸಂಬಂಧಿಸಿದ ಎಲ್ಲ ಆಸ್ತಿಯನ್ನು ಹೊಡೆಯಲು ಪರ್ವೇಜ್‌ ತಕ್‌ ಕುತಂತ್ರ ಮಾಡುತ್ತಿದ್ದ. ಇದಕ್ಕಾಗಿ, ಅವರ ಜತೆ ಜಗಳವಾಡುತ್ತಿದ್ದ. ಎಲ್ಲ ಆಸ್ತಿಯನ್ನು ತನ್ನ ಹೆಸರಿಗೆ ಬರೆದುಕೊಡುವಂತೆ ಒತ್ತಾಯಿಸುತ್ತಿದ್ದ. ಆಸ್ತಿಗಾಗಿ ಜಗಳ ಕಾಯುತ್ತಿದ್ದ ಕಾರಣ ಪರ್ವೇಜ್‌ ತಕ್‌ನನ್ನು ಸೆಲಿನಾ ಅವರು ಮನೆಗೆಲಸದವನ ರೀತಿ ನೋಡುತ್ತಿದ್ದರು. ಮನೆಯಿಂದ ಈತನನ್ನು ದೂರವೇ ಇಟ್ಟಿದ್ದರು ಎಂದು ತಿಳಿದುಬಂದಿತ್ತು.

2011ರ ಫೆಬ್ರವರಿಯಲ್ಲಿ ಸೆಲಿನಾ ಸೇರಿ ಎಲ್ಲರನ್ನೂ ಕೊಲೆ ಮಾಡಲು ಪ್ಲಾನ್‌ ರೂಪಿಸಿದ್ದ. ಇದಕ್ಕಾಗಿ ಆತ ಹಲವರಿಗೆ ಹಣವನ್ನೂ ಕೊಟ್ಟು ಕರೆದುಕೊಂಡು ಹೋಗಿದ್ದ. ಮನೆಗೆ ಹೋದವನೇ, ಸೆಲಿನಾ ಅವರ ಜತೆ ಜಗಳವಾಡಿದ್ದಾನೆ. ಮೊದಲು ಸೆಲಿನಾ ಅವರನ್ನು ಕೊಂದ ಪರ್ವೇಜ್‌ ತಕ್‌, ಬಳಿಕ ಲೈಲಾ ಖಾನ್‌ ಸೇರಿ ಆರು ಮಂದಿಯನ್ನು ಕೊಂದು, ಅದೇ ಫಾರ್ಮ್‌ಹೌಸ್‌ನಲ್ಲಿ ಹೂತು ಹಾಕಿದ್ದ. ಕೆಲ ತಿಂಗಳ ಬಳಿಕ ಈತನನ್ನು ಕಾಶ್ಮೀರ ಪೊಲೀಸರು ಬಂಧಿಸಿದ್ದರು. ಫಾರ್ಮ್‌ಹೌಸ್‌ನಲ್ಲಿ ಪರಿಶೀಲನೆ ನಡೆಸಿದ್ದಾಗ ಆರೂ ಮಂದಿಯ ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದವು.

ಇದನ್ನೂ ಓದಿ: Murder Case: ನಟಿ, ಕಾಂಗ್ರೆಸ್ ನಾಯಕಿ ವಿದ್ಯಾ ಹತ್ಯೆ ಆರೋಪಿ ಪತಿಯ ಬಂಧನ

Continue Reading
Advertisement
Kanyakumari Tour
ಪ್ರವಾಸ35 mins ago

Kanyakumari Tour: ನಿಮ್ಮ ಕನ್ಯಾಕುಮಾರಿ ಪ್ರವಾಸದ ಪಟ್ಟಿಯಲ್ಲಿರಲಿ ಈ 10 ಸಂಗತಿಗಳು

Sri Huligemma Devi Maharathotsava in Hulagi
ಧಾರ್ಮಿಕ43 mins ago

Koppala News: ವಿಜೃಂಭಣೆಯಿಂದ ಜರುಗಿದ ಹುಲಗಿಯ ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವ

Vijayanagara ZP CEO Sadashiva Prabhu instructed that Dadara Rubella Lasika Abhiyan should be conducted neatly
ಆರೋಗ್ಯ44 mins ago

Vijayanagara News: ದಡಾರ, ರುಬೆಲ್ಲಾ ಲಸಿಕಾ ಅಭಿಯಾನಕ್ಕೆ ಸಿದ್ಧತೆ

District administration all preparations for vote counting says DC Prashanth Kumar Mishra
ಬಳ್ಳಾರಿ45 mins ago

Lok Sabha Election 2024: ಮತ ಎಣಿಕೆಗೆ ಬಳ್ಳಾರಿ ಜಿಲ್ಲಾಡಳಿತ ಸಕಲ ಸಿದ್ಧತೆ

Exit Polls
Lok Sabha Election 202447 mins ago

Exit Poll: 2004, 2009, 2014, 2019ರಲ್ಲಿ ಎಕ್ಸಿಟ್ ಪೋಲ್ ಹೇಳಿದ್ದೇನು? ಆಗಿದ್ದೇನು?

Heart Attack
ದೇಶ54 mins ago

Heart Attack: ತಿರಂಗಾ ಹಿಡಿದು ಕುಣಿಯುವಾಗಲೇ ಹೃದಯಾಘಾತಕ್ಕೆ ನಿವೃತ್ತ ಯೋಧ ಬಲಿ; ಸಾವಿನಲ್ಲೂ ಸಾರ್ಥಕತೆ!

Prajwal revanna Case
ಚಿಕ್ಕಮಗಳೂರು1 hour ago

Prajwal Revanna Case: ಭವಾನಿ ರೇವಣ್ಣ ಕಾರು ಚಾಲಕನನ್ನು ವಶಕ್ಕೆ ಪಡೆದ ಎಸ್‌ಐಟಿ

Modi Meditation
ಪ್ರಮುಖ ಸುದ್ದಿ2 hours ago

Modi Meditation: ಮೋದಿ ಮಾಡ್ತಿರೋದು ‘ಧ್ಯಾನ’ ಅಲ್ಲ ‘ಡ್ರಾಮಾ’ ಎಂದ ಮಲ್ಲಿಕಾರ್ಜುನ ಖರ್ಗೆ!

Virat Kohli
ಪ್ರಮುಖ ಸುದ್ದಿ2 hours ago

Virat kohli : ಕಡೆಗಣಿಸುವ ಹೇಳಿಕೆ ನೀಡಿ ಕೊಹ್ಲಿಗೆ ಮತ್ತೆ ಅವಮಾನ ಮಾಡಿದ ಅಂಬಾಟಿ ರಾಯುಡು

Anjali Murder Case
ಕರ್ನಾಟಕ2 hours ago

Anjali Murder Case: ಅಂಜಲಿ ಹಂತಕ ಗಿರೀಶ್‌ಗೆ ಜೂನ್ 16ರವರೆಗೆ‌ ನ್ಯಾಯಾಂಗ ಬಂಧನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ1 day ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು5 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌