ಇಂದು ಐಪಿಎಲ್​ ವೇಳಾಪಟ್ಟಿ ಪ್ರಕಟ; ಆರ್​ಸಿಬಿಗೆ ಮೊದಲ ಪಂದ್ಯ, ಎದುರಾಳಿ ಯಾರು? - Vistara News

ಕ್ರೀಡೆ

ಇಂದು ಐಪಿಎಲ್​ ವೇಳಾಪಟ್ಟಿ ಪ್ರಕಟ; ಆರ್​ಸಿಬಿಗೆ ಮೊದಲ ಪಂದ್ಯ, ಎದುರಾಳಿ ಯಾರು?

17ನೇ ಆವೃತ್ತಿಯ ಐಪಿಎಲ್(IPL 2024)​ ಟೂರ್ನಿಯ ಮೊದಲ ಹಂತದ ಪಂದ್ಯಗಳ ವೇಳಾಪಟ್ಟಿ(IPL 2024 Schedule Announcement) ಇಂದು ಸಂಜೆ 5 ಗಂಟೆಗೆ ಪ್ರಕಟಗೊಳ್ಳುವ ಸಾಧ್ಯತೆ ಇದೆ.

VISTARANEWS.COM


on

IPL 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಕ್ರಿಕೆಟ್​ ಅಭಿಮಾನಿಗಳು ಕಾದು ಕುಳಿತಿರುವ 17ನೇ ಆವೃತ್ತಿಯ ಐಪಿಎಲ್(IPL 2024)​ ಟೂರ್ನಿಯ ಮೊದಲ ಹಂತದ ಪಂದ್ಯಗಳ ವೇಳಾಪಟ್ಟಿ(IPL 2024 Schedule Announcement) ಇಂದು ಸಂಜೆ 5 ಗಂಟೆಗೆ ಪ್ರಕಟಗೊಳ್ಳುವ ಸಾಧ್ಯತೆ ಇದೆ ಎಂದು ಬಿಸಿಸಿಐ(BCCI) ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್(CSK)​ ಮತ್ತು ರಾಯಲ್​ ಚಾಲೆಂಜರ್ಸ್​ ಬೆಂಗಳೂರು(CSK vs RCB) ಮುಖಾಮುಖಿಯಾಗಲಿದೆ ಎಂದು ಹೇಳಲಾಗಿದೆ.

ಏತನ್ಮಧ್ಯೆ, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾರ್ಚ್ 22 ರಂದು M. A ಚಿದಂಬರಂ ಕ್ರೀಡಾಂಗಣದಲ್ಲಿ ಮೊದಲ ಪಂದ್ಯ ಆಡಲಿದೆ ಎಂದು ಸುದ್ದಿ ಸಂಸ್ಥೆ IANS ವರದಿ ಮಾಡಿದೆ. ಆದರೆ ಬಿಸಿಸಿಐ ಕಡೆಯಿಂದ ಅಧಿಕೃತ ಮುದ್ರೆಯೊಂದು ಬೀಳಬೇಕಿದೆ.

ಈಗಾಗಲೇ ಐಪಿಎಲ್​ ಅಧ್ಯಕ್ಷ ಅರುಣ್​ ಧುಮಾಲ್​ ಸಾರ್ವತ್ರಿಕ ಚುನಾವಣೆ ಇರುವ ಕಾರಣ ವೇಳಾಪಟ್ಟಿಯನ್ನು ಎರಡು ಹಂತಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದರು. ಮಂಗಳವಾರ ಪಿಟಿಐ ಜತೆ ಮಾತನಾಡುವ ವೇಳೆ ಈ ವಿಚಾರವನ್ನು ತಿಳಿಸಿದ್ದರು.

“ನಾವು ಮಾರ್ಚ್ 22 ರಂದು ಪಂದ್ಯಾವಳಿಯನ್ನು ಪ್ರಾರಂಭಿಸಲು ನೋಡುತ್ತಿದ್ದೇವೆ. ನಾವು ಸರ್ಕಾರಿ ಏಜೆನ್ಸಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದೇವೆ ಮತ್ತು ನಾವು ಮೊದಲು ಆರಂಭಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ. ಸಂಪೂರ್ಣ ಪಂದ್ಯಾವಳಿಯು ಭಾರತದಲ್ಲಿ ನಡೆಯಲಿದೆ. ಮೇ 26 ರಂದು ಫೈನಲ್​ ಪಂದ್ಯ ನಡೆಸಲು ನೋಡುತ್ತಿದ್ದೇವೆ, 2023 ರ ಆವೃತ್ತಿಯಂತೆ ಈ ವರ್ಷ ಕೂಡ 74 ಪಂದ್ಯಗಳನ್ನು ಆಡಲಾಗುವುದು ಎಂದು ತಿಳಿಸಿದ್ದರು.

ಇದನ್ನೂ ಓದಿ IPL 2024: ಮಾರ್ಚ್​ 22ರಿಂದ ಐಪಿಎಲ್​ ಆರಂಭ; ಭಾರತದಲ್ಲೇ ಟೂರ್ನಿ

2009ರಲ್ಲಿ ಮಹಾಚುನಾವಣೆಯ ಕಾರಣದಿಂದ ಇಡೀ ಕೂಟವನ್ನು ದಕ್ಷಿಣ ಆಫ್ರಿಕಾದಲ್ಲಿ ನಡೆಸಲಾಗಿತ್ತು. ಹಾಗೆಯೇ 2014ರಲ್ಲಿಯೂ ಒಂದು ಹಂತದ ಪಂದ್ಯಗಳು ಯುಎಇಯಲ್ಲಿ ನಡೆದಿದ್ದವು. ಇದೇ ಕಾರಣದಿಂದ ಈ ಬಾರಿಯ ಆವೃತ್ತಿಯೂ ಕೂಡ ಭಾರತದ ಬದಲಾಗಿ ವಿದೇಶಕ್ಕೆ ಸ್ಥಳಾಂತರವಾಗಲಿದೆ ಎಂಬ ಊಹಾಪೋಹಗಳು ಹಬ್ಬಿದ್ದವು ಇದೀಗ ಐಪಿಎಲ್​ ಅಧ್ಯಕ್ಷರು ಭಾರತದಲ್ಲಿಯೇ ಟೂರ್ನಿ ನಡೆಯಲಿದೆ ಎಂದು ಹೇಳುವ ಮೂಲಕ ಎಲ್ಲ ಗೊಂದಲಕ್ಕೆ ತೆರೆ ಎಳೆದಿದ್ದರು. ಇದೀಗ ವೇಳಾಪಟ್ಟಿ ಪ್ರಕಟ ಮಾತ್ರ ಬಾಕಿ ಇದೆ.

ಈ ಬಾರಿಯ ವಿಶೇಷತೆ ಏನು?


ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾದ ಇಬ್ಬರು ವೇಗಿಗಳಾದ ಮಿಚೆಲ್ ಸ್ಟಾರ್ಕ್ ಮತ್ತು ಪ್ಯಾಟ್ ಕಮಿನ್ಸ್ 20 ಕೋಟಿ ರೂ.ಗಳ ಗಡಿ ದಾಟಿದ್ದಾರೆ. ಕಮಿನ್ಸ್ ಅವರನ್ನು ಸನ್ರೈಸರ್ಸ್ ಹೈದರಾಬಾದ್ 20.50 ಕೋಟಿ ರೂ.ಗೆ ಖರೀದಿಸಿತು, ಈ ದಾಖಲೆಯು ಕೇವಲ 30 ನಿಮಿಷಗಳ ಕಾಲ ಉಳಿಯಿತು, ಕೋಲ್ಕತಾ ನೈಟ್ ರೈಡರ್ಸ್ ಮಿಚೆಲ್ ಸ್ಟಾರ್ಕ್​ಗೆ 24.75 ಕೋಟಿ ರೂ.ಗಳನ್ನು ಪಾವತಿಸಿತು. ಇದೇ ವೇಳೆ ಅನ್​ಕ್ಯಾಪ್ಡ್​ ಭಾರತೀಯರಾದ ಶುಭಂ ದುಬೆ ಮತ್ತು ಸಮೀರ್ ರಿಜ್ವಿ ಕೂಡ ಗಮನ ಸೆಳೆದರು. ಈ ಬಾರಿ 30 ವಿದೇಶಿ ಆಟಗಾರರು ಸೇರಿದಂತೆ ಒಟ್ಟು 72 ಆಟಗಾರರನ್ನು ಒಟ್ಟು 230.45 ಕೋಟಿ ರೂ.ಗೆ 10 ಫ್ರಾಂಚೈಸಿಗಳು ತಮ್ಮ ತಮ್ಮ ತೆಕ್ಕೆಗೆ ತೆಗೆದುಕಂಡಿದ್ದವು. ಮಿನಿ ಹರಾಜು ಡಿಸೆಂಬರ್ 19 ರಂದು ದುಬೈನಲ್ಲಿ ನಡೆದಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs SL: ಗ್ಲೆನ್​ ಮ್ಯಾಕ್ಸ್​ವೆಲ್​ ಟಿ20 ವಿಶ್ವ ದಾಖಲೆ ಮುರಿದ ಸೂರ್ಯಕುಮಾರ್

IND vs SL: 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಸೂರ್ಯ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 200+ ಸ್ಟ್ರೈಕ್ ರೇಟ್​ನಲ್ಲಿ ಅತೀ ಹೆಚ್ಚು ಬಾರಿ 50+ ಸ್ಕೋರ್​ಗಳಿಸಿದ ವಿಶ್ವ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡರು. ಈ ವೇಳೆ ಆಸ್ಟ್ರೇಲಿಯಾದ ಗ್ಲೆನ್​ ಮ್ಯಾಕ್ಸ್​ವೆಲ್​ ದಾಖಲೆ ಪತನಗೊಂಡಿತು.

VISTARANEWS.COM


on

IND vs SL
Koo

ಪಲ್ಲೆಕೆಲೆ: ಶನಿವಾರ ನಡೆದಿದ್ದ ಶ್ರೀಲಂಕಾ(IND vs SL) ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ ಶುಭಾರಂಭ ಮಾಡಿದೆ. ಇದೇ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್​ ನಡೆಸಿ ಅರ್ಧಶತಕ ಬಾರಿಸಿದ ಟೀಮ್​ ಇಂಡಿಯಾದ ನೂತನ ನಾಯಕ ಸೂರ್ಯಕುಮಾರ್​ ಯಾದವ್(​Suryakumar Yadav) ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಟಾಸ್​ ಸೋತು ಮೊದಲು ಬ್ಯಾಟಿಂಗ್​ ಆರಂಭಿಸಿದ ಭಾರತ ತಂಡಕ್ಕೆ ಆರಂಭಿಕರಾದ ಜೈಸ್ವಾಲ್‌-ಗಿಲ್‌ ಸೇರಿಕೊಂಡು ಲಂಕಾ ದಾಳಿಯನ್ನು ಪುಡಿಗಟ್ಟಿದರು. ಆ ಬಳಿಕ ನಾಯಕ ಸೂರ್ಯಕುಮಾರ್​ ಬ್ಯಾಟಿಂಗ್​ ಅಬ್ಬರ ಆರಂಭವಾಯಿತು. ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಸೂರ್ಯ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 200+ ಸ್ಟ್ರೈಕ್ ರೇಟ್​ನಲ್ಲಿ ಅತೀ ಹೆಚ್ಚು ಬಾರಿ 50+ ಸ್ಕೋರ್​ಗಳಿಸಿದ ವಿಶ್ವ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡರು. ಈ ವೇಳೆ ಆಸ್ಟ್ರೇಲಿಯಾದ ಗ್ಲೆನ್​ ಮ್ಯಾಕ್ಸ್​ವೆಲ್​ ದಾಖಲೆ ಪತನಗೊಂಡಿತು.

ಮ್ಯಾಕ್ಸ್​ವೆಲ್(Glenn Maxwell)​ ಒಟ್ಟು 8 ಬಾರಿ 200+ ಸ್ಟ್ರೈಕ್ ರೇಟ್​ನಲ್ಲಿ ಅರ್ಧಶತಕಕ್ಕಿಂತ ಹೆಚ್ಚಿನ ರನ್ ಕಲೆಹಾಕಿದ್ದರು. ಆದರೆ, ಇದೀಗ ಸೂರ್ಯಕುಮಾರ್ 66 ಇನಿಂಗ್ಸ್ ಆಡಿ 9 ಬಾರಿ 200+ ಸ್ಟ್ರೈಕ್ ರೇಟ್​ನಲ್ಲಿ 50 ಕ್ಕಿಂತ ಹೆಚ್ಚಿನ ರನ್ ಬಾರಿಸುವ ಮೂಲಕ ವಿಶ್ವ ದಾಖಲೆಯನ್ನು ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದಾರೆ. ಒಟ್ಟಾರೆಯಾಗಿ ಸೂರ್ಯ ಈ ಪಂದ್ಯದಲ್ಲಿ 26 ಎಸೆತಗಳಿಂದ 58 ರನ್​ ಚಚ್ಚಿದರು. ಅವರ ಈ ಅಬ್ಬರದ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್​ ಸಿಡಿಯಿತು.

ಇದನ್ನೂ ಓದಿ INDW vs SLW Final: ಇಂದು ಭಾರತ-ಲಂಕಾ ಏಷ್ಯಾ ಕಪ್​ ಫೈನಲ್​; 8ನೇ ಟ್ರೋಫಿ ಮೇಲೆ ಕಣ್ಣಿಟ್ಟ ಹರ್ಮನ್​ಪ್ರೀತ್​​ ಪಡೆ  

ಕೊಹ್ಲಿ ದಾಖಲೆ ಸರಿಗಟ್ಟಿದ ಸೂರ್ಯ


ಈ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆಯುವ ಮೂಲಕ ಸೂರ್ಯಕುಮಾರ್​ ಅವರು ವಿರಾಟ್​ ಕೊಹ್ಲಿ ದಾಖಲೆಯೊಂದನ್ನು ಸರಿಗಟ್ಟಿದರು. ಹೌದು, ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರರ ಪಟ್ಟಿಯಲ್ಲಿ ಜಂಟಿ ಅಗ್ರಸ್ಥಾನ ಪಡೆದರು. ಕೊಹ್ಲಿ ಮತ್ತು ಸೂರ್ಯ ಒಟ್ಟು 16 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಸೂರ್ಯ ಅವರು 69 ಪಂದ್ಯಗಳಲ್ಲಿ ಈ ಸಾಧನೆ ಮಾಡಿದರೆ, ಕೊಹ್ಲಿ 125 ಪಂದ್ಯಗಳನ್ನು ಆಡಿದ್ದಾರೆ.

ಮೊದಲು ಬ್ಯಾಟಿಂಗ್​ ನಡೆಸಿದ ಭಾರತ 7 ವಿಕೆಟಿಗೆ 213 ರನ್‌ ಪೇರಿಸಿದರೆ, ಶ್ರೀಲಂಕಾ 19.2 ಓವರ್‌ಗಳಲ್ಲಿ 170ಕ್ಕೆ ಆಲೌಟ್‌ ಆಯಿತು. ಭಾರತ 43 ರನ್ನುಗಳ ಗೆಲುವು ಸಾಧಿಸಿತು. ಲಂಕಾ ತಂಡದ ಆರಂಭ ನೋಡುವಾಗ ಪಂದ್ಯವನ್ನು ಗೆಲ್ಲಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಪಥುಮ್‌ ನಿಸ್ಸಂಕ-ಕುಸಲ್‌ ಮೆಂಡಿಸ್‌ 8.4 ಓವರ್‌ಗಳಿಂದ 84 ರನ್‌ ಪೇರಿಸಿ ಅಪಾಯಕಾರಿಯಾಗಿ ಗೋಚರಿಸಿದ್ದರು. ನಿಸ್ಸಂಕ 48 ಎಸೆತಗಳಿಂದ 79 (7 ಬೌಂಡರಿ, 4 ಸಿಕ್ಸರ್‌), ಮೆಂಡಿಸ್‌ 45 ರನ್‌ ಬಾರಿಸಿದರು. ರಿಯಾನ್​ ಪರಾಗ್‌ ಕೇವಲ 5 ರನ್‌ ವೆಚ್ಚದಲ್ಲಿ 3 ವಿಕೆಟ್‌ ಉರುಳಿಸಿದ್ದು ಪಂದ್ಯದ ಗತಿಯನ್ನೇ ಬದಲಿಸಿತು. ಭಾರತ ಗೆಲುವಿನ ನಗೆ ಬೀರಿತು. ದ್ವಿತೀಯ ಪಂದ್ಯ ಇಂದು ನಡೆಯಲಿದೆ.

Continue Reading

ಪ್ರಮುಖ ಸುದ್ದಿ

INDW vs SLW Final: ಇಂದು ಭಾರತ-ಲಂಕಾ ಏಷ್ಯಾ ಕಪ್​ ಫೈನಲ್​; 8ನೇ ಟ್ರೋಫಿ ಮೇಲೆ ಕಣ್ಣಿಟ್ಟ ಹರ್ಮನ್​ಪ್ರೀತ್​​ ಪಡೆ  

INDW vs SLW Final: ದಾಂಬುಲಾದ ರಂಗಿರಿ ಕ್ರಿಕೆಟ್​ ಸ್ಟೇಡಿಯಂನ ಪಿಚ್​ ಚೇಸಿಂಗ್​ ನಡೆಸುವ ತಂಡಕ್ಕೆ ಹೆಚ್ಚಾಗಿ ಸಹಕಾರಿಯಾಗಿದೆ. ಅದರಲ್ಲೂ ಈ ಪಂದ್ಯ ಹಗಲು ರಾತ್ರಿ ನಡೆಯುವ ಕಾರಣ ಸ್ಪಿನ್ನಿಗೆ ಹೆಚ್ಚು ನೆರವು ನೀಡುತ್ತದೆ. ಹೀಗಾಗಿ ಇತ್ತಂಡಗಳು ಕೂಡ ಟಾಸ್​ ಗೆದ್ದರೆ ಚೇಸಿಂಗ್​ ಹಾಗೂ ಸ್ಪಿನ್​ ಬೌಲಿಂಗ್​ಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಸಾಧ್ಯತೆ ಇದೆ.

VISTARANEWS.COM


on

INDW vs SLW Final
Koo

ದಾಂಬುಲಾ,(ಶ್ರೀಲಂಕಾ): ಇಂದು ನಡೆಯುವ 9ನೇ ಆವೃತ್ತಿಯ ಮಹಿಳಾ ಏಷ್ಯಾಕಪ್​ ಫೈನಲ್​(Womens Asia Cup Final) ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಮತ್ತು ಹಾಲಿ ಚಾಂಪಿಯನ್​ ಭಾರತ(India Women vs Sri Lanka Women Final) ಮುಖಾಮುಖಿಯಾಗಲಿವೆ. 7 ಬಾರಿಯ ಚಾಂಪಿಯನ್​ ಭಾರತವೇ(INDW vs SLW Final) ಈ ಬಾರಿಯ ಪ್ರಶಸ್ತಿ ಗೆಲ್ಲುವ ಹಾಟ್‌ ಫೇವರಿಟ್‌ ಆಗಿದೆ. ಅತ್ತ ಆತಿಥೇಯ ಲಂಕಾ ಚೊಚ್ಚಲ ಪ್ರಶಸ್ತಿ ಗೆಲ್ಲುವ ಇದಾರೆಯಲ್ಲಿದೆ. ಹೀಗಾಗಿ ಈ ಪಂದ್ಯದವನ್ನು ಹೈವೋಲ್ಟೇಜ್​ ಎಂದು ನಿರೀಕ್ಷೆ ಮಾಡಬಹುದು.

ಭಾರತ ಪರ ಬ್ಯಾಟಿಂಗ್​ನಲ್ಲಿ ಆರಂಭಿಕ ಆಟಗಾರ್ತಿಯರಾದ ಶಫಾಲಿ ವರ್ಮ ಮತ್ತು ಸ್ಮೃತಿ ಮಂಧಾನ ಎಲ್ಲ ಪಂದ್ಯಗಲ್ಲಿಯೂ ಶ್ರೇಷ್ಠ ಪ್ರದರ್ಶನ ತೋರಿದ್ದಾರೆ. ಶಫಾಲಿ 184 ರನ್​ ಗಳಿಸಿ ಕೂಟದ ಅತ್ಯಧಿಕ ರನ್​ ಗಳಿಸಿದ ಆಟಗಾರ್ತಿಯಲ್ಲಿ 2ನೇ ಸ್ಥಾನ ಪಡೆದಿದ್ದಾರೆ. ಬೌಲಿಂಗ್ ವಿಭಾಗ ತುಂಬಾನೆ ಘಾತಕವಾಗಿದೆ. ಸ್ಪಿನ್ನ್​ ಮತ್ತು ವೇಗದ ವಿಭಾಗದಲ್ಲಿ ಸಮತೋಲಿತವಾಗಿದೆ. ರಾಧಾ ಯಾದವ್​, ಆಲ್​ರೌಂಡರ್​ ದೀಪ್ತಿ ಶರ್ಮಾ ತಂಡದ ಸ್ಪಿನ್ನರ್​ಗಳಾದರೆ, ವೇಗಿ ರೇಣುಕಾ ಸಿಂಗ್​ ಮತ್ತು ಪೂಜಾ ವಸ್ತ್ರಾಕರ್​ ವೇಗಿಗಳಾಗಿದ್ದಾರೆ.

ಎದುರಾಳಿ ಶ್ರೀಲಂಕಾವನ್ನು ಕಡೆಗಣಿಸುವಂತಿಲ್ಲ. ಕೂಟದ ಗರಿಷ್ಠ ಸ್ಕೋರರ್​ ಎನಿಸಿಕೊಂಡಿರುವ ನಾಯಕಿ ಚಾಮರಿ ಅತಪಟ್ಟು ಪ್ರಚಂಡ ಬ್ಯಾಟಿಂಗ್​ ಫಾರ್ಮ್​ನಲ್ಲಿದ್ದಾರೆ. ಒಂದು ಶತಕ ಕೂಡ ಬಾರಿಸಿದ್ದಾರೆ. ಆಡಿದ 4 ಪಂದ್ಯಗಳಿಂದ 243 ರನ್​ ಕಲೆ ಹಾಕಿದ್ದಾರೆ. ಇವರು ಸಿಡಿದು ನಿಂತರೆ ಪಂದ್ಯದ ಗತಿಯೇ ಬದಲಾಗಬಹುದು. ಹೀಗಾಗಿ ಇವರನ್ನು ಹೆಚ್ಚು ಹೊತ್ತು ಕ್ರೀಸ್​ ಆಕ್ರಮಿಸದಂತೆ ಭಾರತೀಯ ಬೌಲರ್​ಗಳು ನೋಡಿಕೊಳ್ಳುವ ಅಗತ್ಯವಿದೆ.

ದಾಂಬುಲಾದ ರಂಗಿರಿ ಕ್ರಿಕೆಟ್​ ಸ್ಟೇಡಿಯಂನ ಪಿಚ್​ ಚೇಸಿಂಗ್​ ನಡೆಸುವ ತಂಡಕ್ಕೆ ಹೆಚ್ಚಾಗಿ ಸಹಕಾರಿಯಾಗಿದೆ. ಅದರಲ್ಲೂ ಈ ಪಂದ್ಯ ಹಗಲು ರಾತ್ರಿ ನಡೆಯುವ ಕಾರಣ ಸ್ಪಿನ್ನಿಗೆ ಹೆಚ್ಚು ನೆರವು ನೀಡುತ್ತದೆ. ಹೀಗಾಗಿ ಇತ್ತಂಡಗಳು ಕೂಡ ಟಾಸ್​ ಗೆದ್ದರೆ ಚೇಸಿಂಗ್​ ಹಾಗೂ ಸ್ಪಿನ್​ ಬೌಲಿಂಗ್​ಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಸಾಧ್ಯತೆ ಇದೆ.

ಇದನ್ನೂ ಓದಿ Paris Olympics 2024 : ಭಾರತಕ್ಕೆ ಒಲಿಂಪಿಕ್ ಕ್ರೀಡಾಕೂಟ ತರುವ ದಿನ ದೂರವಿಲ್ಲ; ಇಂಡಿಯಾ ಹೌಸ್ ಉದ್ಘಾಟನೆಯಲ್ಲಿ ನೀತಾ ಅಂಬಾನಿ

ಇದುವರೆಗಿನ ಮಹಿಳಾ ಏಷ್ಯಾಕಪ್​ ಟೂರ್ನಿಯಲ್ಲಿ ಭಾರತ ಮತ್ತು ಶ್ರೀಲಂಕಾ 5 ಬಾರಿ ಫೈನಲ್​ ಮುಖಾಮುಖಿಯಾಗಿವೆ. ಎಲ್ಲ ಪಂದ್ಯಗಳನ್ನು ಭಾರತವೇ ಗೆದ್ದು ಬೀಗಿದೆ. ಈ ಬಾರಿಯದ್ದು 6ನೇ ಮುಖಾಮುಖಿ. ಮಹಿಳಾ ಏಷ್ಯಾ ಕಪ್​ ಈವರೆಗಿನ 8 ಕೂಟಗಳಲ್ಲಿ ಭಾರತ 7 ಸಲ ಚಾಂಪಿಯನ್‌ ಆಗುವ ಮೂಲಕ ಪ್ರಭುತ್ವ ಸಾಧಿಸಿದೆ. ಸೋಲು ಕಂಡಿದ್ದು ಒಮ್ಮೆ ಮಾತ್ರ. ಅದು 2018ರಲ್ಲಿ ಬಾಂಗ್ಲಾದೇಶ ವಿರುದ್ಧ. ಅಂದಿನ ಫೈನಲ್​ ಪಂದ್ಯದಲ್ಲಿ ಭಾರತ 3 ವಿಕೆಟ್‌ ಅಂತರದಿಂದ ಸೋಲನುಭವಿಸಿ ಪ್ರಶಸ್ತಿಯಿಂದ ವಂಚಿತವಾಗಿತ್ತು.

ಸಂಭಾವ್ಯ ತಂಡಗಳು


ಶ್ರೀಲಂಕಾ: ವಿಶ್ಮಿ ಗುಣರತ್ನೆ, ಚಾಮರಿ ಅಟಪಟ್ಟು (ನಾಯಕಿ), ಹರ್ಷಿತಾ ಸಮರವಿಕ್ರಮ, ಹಾಸಿನಿ ಪೆರೇರಾ, ಅನುಷ್ಕಾ ಸಂಜೀವನಿ (ವಾಕ್), ಕವಿಶಾ ದಿಲ್ಹಾರಿ, ನೀಲಾಕ್ಷಿ ಡಿ ಸಿಲ್ವಾ, ಇನೋಶಿ ಪ್ರಿಯದರ್ಶನಿ, ಉದೇಶಿಕಾ ಪ್ರಬೋಧನಿ, ಸುಗಂದಿಕಾ ಕುಮಾರಿ, ಅಚಿನಿ ಕುಲಸೂರ್ಯ.

ಭಾರತ: ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಉಮಾ ಚೆಟ್ರಿ, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೀ), ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ರಾಧಾ ಯಾದವ್, ತನುಜಾ ಕನ್ವರ್, ರೇಣುಕಾ ಠಾಕೂರ್ ಸಿಂಗ್.

Continue Reading

ಪ್ರಮುಖ ಸುದ್ದಿ

Olympic Games Paris: ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಸ್ಪರ್ಧೆಗಳ ವಿವರ

Olympic Games Paris: ವನಿತೆಯರ 10 ಮೀ. ಏರ್‌ ಪಿಸ್ತೂಲ್‌ ಫೈನಲ್‌ ಸ್ಪರ್ಧೆಯಲ್ಲಿ ಭಾರತದ ಮನು ಭಾಕರ್‌ ಕಣಕ್ಕಿಳಿಯಲಿದ್ದಾರೆ.

VISTARANEWS.COM


on

Koo

ಪ್ಯಾರಿಸ್​: ಒಲಿಂಪಿಕ್ಸ್​ನಲ್ಲಿ(Olympic Games Paris) ಶನಿವಾರ ಭಾರತಕ್ಕೆ ಮಿಶ್ರ ಫಲಿತಾಂಶ ಲಭಿಸಿತ್ತು. ಇಂದು(ಭಾನುವಾರ) ಹಲವು ಸ್ಪರ್ಧೆಗಳಲ್ಲಿ ಭಾರತದ ಕ್ರೀಡಾಪಟುಗಳು ಪದಕ ನಿರೀಕ್ಷೆಯೊಂದಿಗೆ ಕಣಕ್ಕಿಳಿಯಲಿದ್ದಾರೆ. ಇಂದಿನ ಸ್ಪರ್ಧೆಯ ವೇಳಾಪಟ್ಟಿ ಹೀಗಿದೆ.

ಬ್ಯಾಡ್ಮಿಂಟನ್‌ (ಆರಂಭ: ಮಧ್ಯಾಹ್ನ 12.45)

ಪುರುಷರ ಸಿಂಗಲ್ಸ್‌ ಗ್ರೂಪ್‌ ಹಂತ: ಎಚ್‌.ಎಸ್‌. ಪ್ರಣಯ್‌, ಲಕ್ಷ್ಯ ಸೇನ್‌.

ಮಹಿಳಾ ಸಿಂಗಲ್ಸ್‌ ಗ್ರೂಪ್‌ ಹಂತ: ಪಿ.ವಿ. ಸಿಂಧು.

ಪುರುಷರ ಡಬಲ್ಸ್‌ ಗ್ರೂಪ್‌ ಹಂತ: ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌.

ಮಹಿಳಾ ಡಬಲ್ಸ್‌ ಗ್ರೂಪ್‌ ಹಂತ: ತನಿಷಾ ಕ್ರಾಸ್ಟೊ-ಅಶ್ವಿ‌ನಿ ಪೊನ್ನಪ್ಪ.

ಶೂಟಿಂಗ್‌ (ಮಧ್ಯಾಹ್ನ12.45)

ಮಹಿಳೆಯರ 10 ಮೀ. ಏರ್‌ ಪಿಸ್ತೂಲ್‌ ಅರ್ಹತಾ ಸುತ್ತು: ಇಳವೆನಿಲ್‌ ವಲರಿವನ್‌, ರಮಿತಾ ಜಿಂದಲ್‌.

ಪುರುಷರ 10 ಮೀ. ಏರ್‌ ಪಿಸ್ತೂಲ್‌ ಫೈನಲ್‌
ಪುರುಷರ 10 ಮೀ. ಏರ್‌ ರೈಫ‌ಲ್‌ ಅರ್ಹತಾ ಸುತ್ತು:
ಸಂದೀಪ್‌ ಸಿಂಗ್‌, ಅರ್ಜುನ್‌ ಬಬುಟ.(ಮಧ್ಯಾಹ್ನ 2.45)

ವನಿತೆಯರ 10 ಮೀ. ಏರ್‌ ಪಿಸ್ತೂಲ್‌ ಫೈನಲ್‌: ಮನು ಭಾಕರ್‌ (ಮಧ್ಯಾಹ್ನ, 3.30)

ಆರ್ಚರಿ

ಮಹಿಳೆಯರ ತಂಡ ಸ್ಪರ್ಧೆ, 16ರ ಸುತ್ತು: ದೀಪಿಕಾ ಕುಮಾರಿ, ಅಂಕಿತಾ ಭಕತ್‌, ಭಜನ್‌ ಕೌರ್‌. (ಮಧ್ಯಾಹ್ನ 1.00)

ಮಹಿಳಾ ತಂಡದ ಕಂಚಿನ ಸ್ಪರ್ಧೆ.(ರಾತ್ರಿ 8.18)

ಮಹಿಳಾ ತಂಡದ ಚಿನ್ನದ ಸ್ಪರ್ಧೆ.(ರಾತ್ರಿ 8.41)

ರೋಯಿಂಗ್​


ಪುರುಷರ ಸಿಂಗಲ್‌ ಸ್ಕಲ್ಸ್‌ ರೆಪಿಶಾಜ್‌ ಸುತ್ತು: ಬಲ್ರಾಜ್‌ ಪನ್ವರ್‌.(ಮಧ್ಯಾಹ್ನ 1.06)

ಟೇಬಲ್‌ ಟೆನಿಸ್

ಪುರುಷರ ಸಿಂಗಲ್ಸ್‌: ಶರತ್‌ ಕಮಲ್‌, ಹರ್ಮೀತ್‌ ದೇಸಾಯಿ.

ಮಹಿಳಾ ಸಿಂಗಲ್ಸ್‌: ಮಣಿಕಾ ಬಾತ್ರಾ, ಶ್ರೀಜಾ ಅಕುಲಾ.(ಮಧ್ಯಾಹ್ನ 1.30)

ಬಾಕ್ಸಿಂಗ್‌


ಪುರುಷರ 51 ಕೆಜಿ, 32ರ ಸುತ್ತು: ಅಮಿತ್‌ ಪಂಘಲ್‌.(ಮಧ್ಯಾಹ್ನ 2.30)

ಪುರುಷರ 71 ಕೆಜಿ, 32ರ ಸುತ್ತು: ನಿಶಾಂತ್‌ ದೇವ್‌.(ಮಧ್ಯಾಹ್ನ 3.02)

ಮಹಿಳೆಯರ 50 ಕೆಜಿ, 32ರ ಸುತ್ತು: ನಿಖತ್‌ ಜರೀನ್‌ (ಸಂಜೆ 4.06)

ಈಜು


ಪುರುಷರ 100 ಮೀ. ಬ್ಯಾಕ್‌ಸ್ಟ್ರೋಕ್‌ ಹೀಟ್ಸ್‌: ಶ್ರಿಹರಿ ನಟರಾಜ್‌.

ವನಿತೆಯರ 200 ಮೀ. ಫ್ರೀಸ್ಟೈಲ್‌ ಹೀಟ್ಸ್‌: ಧಿನಿಧಿ ದೇಸಿಂಗೂ. (ಮಧ್ಯಾಹ್ನ 2.30)

ಪುರುಷರ 100 ಮೀ. ಬ್ಯಾಕ್‌ಸ್ಟ್ರೋಕ್‌ ಸೆಮಿಫೈನಲ್‌. (ತಡರಾತ್ರಿ 1.02)

ಮಹಿಳೆಯರ 200 ಮೀ. ಫ್ರೀಸ್ಟೈಲ್‌ ಸೆಮಿಫೈನಲ್‌.(ತಡರಾತ್ರಿ 1.20.)

ಟೆನಿಸ್‌

ಪುರುಷರ ಸಿಂಗಲ್ಸ್‌ ಮೊದಲ ಸುತ್ತು: ಸುಮಿತ್‌ ನಾಗಲ್‌.

ಪುರುಷರ ಡಬಲ್ಸ್‌: ರೋಹನ್‌ ಬೋಪಣ್ಣ-ಶ್ರೀರಾಮ್‌ ಬಾಲಾಜಿ(ಮಧ್ಯಾಹ್ನ 3.30)

Continue Reading

ಕ್ರೀಡೆ

Paris Olympics 2024 : ಭಾರತಕ್ಕೆ ಒಲಿಂಪಿಕ್ ಕ್ರೀಡಾಕೂಟ ತರುವ ದಿನ ದೂರವಿಲ್ಲ; ಇಂಡಿಯಾ ಹೌಸ್ ಉದ್ಘಾಟನೆಯಲ್ಲಿ ನೀತಾ ಅಂಬಾನಿ

Paris Olympics 2024 : ಭಾರತ ಮತ್ತು ವಿದೇಶಗಳ ಅತಿಥಿಗಳು, ಐಒಸಿ ಅಧಿಕಾರಿಗಳು ಮತ್ತು ಭಾರತದ ಗಣ್ಯರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಇದರಲ್ಲಿ ಐಒಸಿ ಸಮಿತಿ ಸದಸ್ಯ ಸೆರ್ ಮಿಯಾಂಗ್ ಎನ್ ಜಿ, ಭಾರತೀಯ ಒಲಿಂಪಿಕ್ ಸಂಸ್ಥೆ ಅಧ್ಯಕ್ಷ ಪಿ.ಟಿ. ಉಷಾ, ಫ್ರಾನ್ಸ್‌ನಲ್ಲಿರುವ ಭಾರತದ ರಾಯಭಾರಿ ಜಾವೇದ್ ಅಶ್ರಫ್, ಬಿಸಿಸಿಐನ ಜಯ್ ಶಾ ಮತ್ತು ಒಲಿಂಪಿಕ್ ಚಿನ್ನದ ಪದಕ ವಿಜೇತ ಅಭಿನವ್ ಬಿಂದ್ರಾ ಸೇರಿ ಹಲವರಿದ್ದರು.

VISTARANEWS.COM


on

Paris Olympics 2024
Koo

ಮುಂಬೈ/ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್‌ (Paris Olympics 2024) ಅದ್ಧೂರಿಯಾಗಿ ಉದ್ಘಾಟನೆಯಾದ ಒಂದು ದಿನದ ನಂತರ, ಭಾರತವು ಮೊದಲ ಬಾರಿಗೆ ‘ಇಂಡಿಯಾ ಹೌಸ್’ ಅನ್ನು ಪ್ಯಾರಿಸ್‌ನಲ್ಲಿ ಉದ್ಘಾಟಿಸಿತು. ರಿಲಯನ್ಸ್ ಫೌಂಡೇಷನ್ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಎಂ. ಅಂಬಾನಿ ಅವರು ಸಾಂಪ್ರದಾಯಿಕ ಭಾರತೀಯ ಶೈಲಿಯಲ್ಲಿ ದೀಪ ಬೆಳಗಿಸುವ ಮೂಲಕ ಇಂಡಿಯಾ ಹೌಸ್ ಅನ್ನು ಉದ್ಘಾಟಿಸಿದರು.

ಭಾರತ ಮತ್ತು ವಿದೇಶಗಳ ಅತಿಥಿಗಳು, ಐಒಸಿ ಅಧಿಕಾರಿಗಳು ಮತ್ತು ಭಾರತದ ಗಣ್ಯರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಇದರಲ್ಲಿ ಐಒಸಿ ಸಮಿತಿ ಸದಸ್ಯ ಸೆರ್ ಮಿಯಾಂಗ್ ಎನ್ ಜಿ, ಭಾರತೀಯ ಒಲಿಂಪಿಕ್ ಸಂಸ್ಥೆ ಅಧ್ಯಕ್ಷ ಪಿ.ಟಿ. ಉಷಾ, ಫ್ರಾನ್ಸ್‌ನಲ್ಲಿರುವ ಭಾರತದ ರಾಯಭಾರಿ ಜಾವೇದ್ ಅಶ್ರಫ್, ಬಿಸಿಸಿಐನ ಜಯ್ ಶಾ ಮತ್ತು ಒಲಿಂಪಿಕ್ ಚಿನ್ನದ ಪದಕ ವಿಜೇತ ಅಭಿನವ್ ಬಿಂದ್ರಾ ಸೇರಿ ಹಲವರಿದ್ದರು.

ಈ ಸಂದರ್ಭದಲ್ಲಿ ಐಒಸಿ ಸದಸ್ಯೆ ನೀತಾ ಅಂಬಾನಿ ಅವರು ಭಾರತಕ್ಕೆ ಒಲಿಂಪಿಕ್ಸ್ ತರುವುದು ಖಚಿತ ಎಂದು ಘೋಷಿಸಿದರು. “ಒಲಿಂಪಿಕ್ಸ್ ಇತಿಹಾಸದಲ್ಲಿ ಮೊದಲ ಬಾರಿಗೆ ನಿರ್ಮಿಸಲಾದ ಇಂಡಿಯಾ ಹೌಸ್‌ಗೆ ಸ್ವಾಗತ. ಇಂದು ನಾವು 2024ರ ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟದಲ್ಲಿ ಹೊಸ ಕನಸನ್ನು ಕಾಣುತ್ತಿದ್ದೇವೆ. 140 ಕೋಟಿ ಭಾರತೀಯರ ಕನಸು ಸಹ ಆಗಿದೆ. ಭಾರತಕ್ಕೆ ಒಲಿಂಪಿಕ್ ಅನ್ನು ತರುವುದು ಸಾಮಾನ್ಯ ಕನಸಾಗಿದೆ. ಅಥೆನ್ಸ್‌ನಲ್ಲಿ ಮೊದಲ ಬಾರಿಗೆ ಒಲಂಪಿಕ್ಸ್ ಜ್ಯೋತಿಯನ್ನು ಬೆಳಗಿಸಿದ್ದು, ಆ ಜ್ಯೋತಿಯನ್ನು ನಮ್ಮ ಪ್ರಾಚೀನ ಭಾರತದ ಮಣ್ಣಿಗೆ ತರುವ ದಿನ ದೂರವಿಲ್ಲ, ನಮ್ಮ ದೇಶವು ಒಲಿಂಪಿಕ್ ಆತಿಥ್ಯ ವಹಿಸುವ ದಿನ ದೂರವಿಲ್ಲ. ಇಂಡಿಯಾ ಹೌಸ್ ಉದ್ಘಾಟನೆಯಲ್ಲಿ ಇದು ನಮ್ಮ ಸಾಮೂಹಿಕ ಸಂಕಲ್ಪವಾಗಿದೆ,” ಎಂದರು.

“ಇಂಡಿಯಾ ಹೌಸ್ ಅನ್ನು ಭಾರತದ ಒಲಿಂಪಿಕ್ ಆಕಾಂಕ್ಷೆಗಳ ಸಂಕೇತವಾಗಿ ನೋಡಲಾಗುತ್ತದೆ. ಇದು ನಮ್ಮ ಕ್ರೀಡಾಪಟುಗಳಿಗೆ ಮನೆಯಿಂದ ದೂರವಿರುವಂಥ ಮತ್ತೊಂದು ಮನೆಯಾಗಲಿದೆ ಎಂದು ನಾವು ಭಾವಿಸುತ್ತೇವೆ. ನಾವು ಅವರ ಆತ್ಮಶಕ್ತಿಯನ್ನು ಗೌರವಿಸುವ ಮತ್ತು ಅವರ ಸಾಧನೆಗಳನ್ನು ಆಚರಿಸುವ ಸ್ಥಳವಾಗಿದೆ. ಇಂಡಿಯಾ ಹೌಸ್ ಅಂತ್ಯವಲ್ಲ, ಇದು ಭಾರತಕ್ಕೆ ಹೊಸ ಆರಂಭವಾಗಿದೆ. ಸೌಂದರ್ಯ, ವೈವಿಧ್ಯ ಮತ್ತು ಶ್ರೀಮಂತ ಪರಂಪರೆಯನ್ನು ಅನುಭವಕ್ಕೆ ಪಡೆಯುವುದಕ್ಕೆ ನಾವು ಜಗತ್ತನ್ನು ಸ್ವಾಗತಿಸುತ್ತೇವೆ,” ಎಂದರು.

ಇದನ್ನೂ ಓದಿ: Paris Olympics 2024 : ಷಟ್ಲರ್​ಗಳ ಪರಾಕ್ರಮ ಆರಂಭ; ಸಿಂಗಲ್ಸ್​ನಲ್ಲಿ ಲಕ್ಷ್ಯ ಸೇನ್​, ಡಬಲ್ಸ್​ನಲ್ಲಿ ಸಾತ್ವಿಕ್​- ಚಿರಾಗ್ ಜೋಡಿಗೆ ಗೆಲುವು

ಇಂಡಿಯಾ ಹೌಸ್ ಉದ್ಘಾಟನಾ ಸಮಾರಂಭಕ್ಕೆ ಬಾಲಿವುಡ್ ಗಾಯಕ ಶಾನ್ ತಮ್ಮ ಗಾಯನದ ಮೂಲಕ ಕಳೆ ತುಂಬಿದರು. ಅವರ ಬಾಲಿವುಡ್ ಹಾಡುಗಳಿಗೆ ಪ್ರೇಕ್ಷಕರು ಮುಕ್ತವಾಗಿ ನೃತ್ಯ ಮಾಡಿದರು. ಡೊಳ್ಳು ಬಾರಿಸುವ ಮೂಲಕ ಪ್ರವಾಸಿಗರನ್ನು ಸ್ವಾಗತಿಸಲಾಯಿತು. ಇದಾದ ಬಳಿಕ ಮುಂಬೈನ ಅಂಧ ಮಕ್ಕಳು ಭಾರತೀಯ ಸಾಂಪ್ರದಾಯಿಕ ಆಟ ಮಲ್ಲಕಂಬದ ಅದ್ಭುತ ಪ್ರದರ್ಶನ ನೀಡಿದರು. ಇಂಡಿಯಾ ಹೌಸ್ ಪಾರ್ಕ್ ಆಫ್ ನೇಷನ್ಸ್‌ನಲ್ಲಿರುವ ಪಾರ್ಕ್ ಡೆ ಲಾ ವಿಲೆಟ್‌ನಲ್ಲಿದೆ ಮತ್ತು ಜುಲೈ 27 ರಿಂದ ಆಗಸ್ಟ್ 11ರ ವರೆಗಿನ ಒಲಿಂಪಿಕ್ ಕ್ರೀಡಾಕೂಟದಲ್ಲಿ ಸ್ಥಳೀಯ ಸಮಯ ಬೆಳಿಗ್ಗೆ 11 ರಿಂದ ರಾತ್ರಿ 11 ರವರೆಗೆ ಸಂದರ್ಶಕರಿಗೆ ತೆರೆದಿರುತ್ತದೆ.

Continue Reading
Advertisement
IND vs SL
ಕ್ರೀಡೆ14 mins ago

IND vs SL: ಗ್ಲೆನ್​ ಮ್ಯಾಕ್ಸ್​ವೆಲ್​ ಟಿ20 ವಿಶ್ವ ದಾಖಲೆ ಮುರಿದ ಸೂರ್ಯಕುಮಾರ್

Gold Rate Today
ಚಿನ್ನದ ದರ28 mins ago

Gold Rate Today: ಆಭರಣ ಖರೀದಿಸುವ ಯೋಚನೆಯಲ್ಲಿದ್ದೀರಾ? ಇಂದಿನ ಬೆಲೆ ಚೆಕ್‌ ಮಾಡಿ

Bigg Boss OTT 3 Anil Kapoor as the worst ever host of Bigg Boss
ಬಿಗ್ ಬಾಸ್32 mins ago

Bigg Boss OTT 3: ಅನಿಲ್​ ಕಪೂರ್ ʻವರ್ಸ್ಟ್‌ ನಿರೂಪಕʼ ಎಂದ ನೆಟ್ಟಿಗರು ; ಬೇಸತ್ತ ವೀಕ್ಷಕರು!

CH Vijayashankar
ಪ್ರಮುಖ ಸುದ್ದಿ45 mins ago

CH Vijayashankar: ಮೇಘಾಲಯ ರಾಜ್ಯಪಾಲರಾಗಿ ಸಿ.ಎಚ್. ವಿಜಯಶಂಕರ್ ನೇಮಕ

Vinay Rajkumar pepe the film A certificate
ಸ್ಯಾಂಡಲ್ ವುಡ್57 mins ago

Vinay Rajkumar: ಸೆನ್ಸಾರ್ ಪಾಸಾದ ‘ಪೆಪೆ’; ವಿನಯ್ ರಾಜ್ ಕುಮಾರ್ ಚಿತ್ರಕ್ಕೆ A’ ಸರ್ಟಿಫಿಕೇಟ್!

INDW vs SLW Final
ಪ್ರಮುಖ ಸುದ್ದಿ58 mins ago

INDW vs SLW Final: ಇಂದು ಭಾರತ-ಲಂಕಾ ಏಷ್ಯಾ ಕಪ್​ ಫೈನಲ್​; 8ನೇ ಟ್ರೋಫಿ ಮೇಲೆ ಕಣ್ಣಿಟ್ಟ ಹರ್ಮನ್​ಪ್ರೀತ್​​ ಪಡೆ  

Suzuki India
ಆಟೋಮೊಬೈಲ್60 mins ago

4 ಲಕ್ಷ ಬೈಕ್‌, ಸ್ಕೂಟರ್‌ ಹಿಂಪಡೆಯಲು ಮುಂದಾದ ಸುಜುಕಿ ಇಂಡಿಯಾ; ಈ ಪಟ್ಟಿಯಲ್ಲಿ ನಿಮ್ಮ ವಾಹನವೂ ಇದ್ಯಾ? ಹೀಗೆ ಚೆಕ್‌ ಮಾಡಿ

rowdysheeters police firing
ಕ್ರೈಂ1 hour ago

Police Firing: ಕೈ ಕಟ್‌ ಮಾಡಿದ ರೌಡಿಗಳ ಕಾಲಿಗೆ ಪೊಲೀಸರ ಗುಂಡೇಟು

ಪ್ರಮುಖ ಸುದ್ದಿ1 hour ago

Olympic Games Paris: ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಸ್ಪರ್ಧೆಗಳ ವಿವರ

Bigg Boss Marathi 5 premiere ritesh deshmukh co star shubhankar tawde
ಬಿಗ್ ಬಾಸ್1 hour ago

Bigg Boss Marathi 5: ಶುರುವಾಯ್ತು ಮರಾಠಿ ಬಿಗ್​ಬಾಸ್ 5; ಈ ಬಾರಿ ರಿತೇಶ್ ದೇಶ್​ಮುಖ್ ನಿರೂಪಕ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ15 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ20 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ21 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ2 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ2 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ2 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ2 days ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ3 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್3 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ3 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌