BJP Karnataka : ಚಾಮರಾಜನಗರಕ್ಕೆ ಶ್ರೀನಿವಾಸ್‌ ಪ್ರಸಾದ್‌ ಅಳಿಯಂದಿರ ಪೈಪೋಟಿ; ಫೈನಲ್‌ ಆಗಿದೆ ಎಂದ ವಿಜಯೇಂದ್ರ - Vistara News

ಮೈಸೂರು

BJP Karnataka : ಚಾಮರಾಜನಗರಕ್ಕೆ ಶ್ರೀನಿವಾಸ್‌ ಪ್ರಸಾದ್‌ ಅಳಿಯಂದಿರ ಪೈಪೋಟಿ; ಫೈನಲ್‌ ಆಗಿದೆ ಎಂದ ವಿಜಯೇಂದ್ರ

BJP Karnataka : ಚಾಮರಾಜ ನಗರ ಲೋಕಸಭಾ ಕ್ಷೇತ್ರಕ್ಕೆ ಹಾಲಿ ಸಂಸದರಾಗಿರುವ ಶ್ರೀನಿವಾಸ ಪ್ರಸಾದ್‌ ಅವರ ಬದಲಿಗೆ ಟಿಕೆಟ್‌ ಪಡೆಯಲು ತೀವ್ರ ಪೈಪೋಟಿ ಕಾಣಿಸಿಕೊಂಡಿದೆ. ಅಚ್ಚರಿ ಎಂದರೆ ಶ್ರೀನಿವಾಸ್‌ ಪ್ರಸಾದ್‌ ಅವರ ಅಳಿಯಂದಿರಾದ ಡಾ. ಮೋಹನ್‌ (Dr. Mohan) ಮತ್ತು ಡಾ. ಹರ್ಷವರ್ಧನ್‌ (Dr. Harshavardhan) ಅವರೇ ಪ್ರಮುಖ ಹುರಿಯಾಳುಗಳು.

VISTARANEWS.COM


on

BJP Karnataka BY Vijayendra Dr Mohan Harshavardhan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಚಾಮರಾಜ ನಗರ ಲೋಕಸಭಾ ಕ್ಷೇತ್ರಕ್ಕೆ (Chamaraja nagara constituency) ಬಿಜೆಪಿ ಅಭ್ಯರ್ಥಿ (BJP Candidate) ಯಾರು ಎಂಬ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಅವರ ಸಮ್ಮುಖದಲ್ಲಿ ದೊಡ್ಡ ಮಟ್ಟದ ಚರ್ಚೆಯಾಗಿದೆ (BJP Karnataka). ಹಾಲಿ ಸಂಸದರಾಗಿರುವ ಶ್ರೀನಿವಾಸ ಪ್ರಸಾದ್‌ (Shrinivas prasad) ಅವರು ಮಾರ್ಚ್‌ 17ರಿಂದ ರಾಜಕೀಯ ನಿವೃತ್ತಿ (Political retirement) ಪಡೆಯುತ್ತಿದ್ದು, ಅವರ ಬದಲಿಗೆ ಟಿಕೆಟ್‌ ಪಡೆಯಲು ತೀವ್ರ ಪೈಪೋಟಿ ಕಾಣಿಸಿಕೊಂಡಿದೆ. ಅಚ್ಚರಿ ಎಂದರೆ ಶ್ರೀನಿವಾಸ್‌ ಪ್ರಸಾದ್‌ ಅವರ ಅಳಿಯಂದಿರಾದ ಡಾ. ಮೋಹನ್‌ (Dr. Mohan) ಮತ್ತು ಡಾ. ಹರ್ಷವರ್ಧನ್‌ (Dr. Harshavardhan) ಅವರೇ ಪ್ರಮುಖ ಹುರಿಯಾಳುಗಳು. ಇವರಲ್ಲಿ ಯಾರಿಗೆ ಟಿಕೆಟ್‌ ಸಿಗುತ್ತದೆ ಎಂಬ ಕುತೂಹಲ ಜೋರಾಗಿರುವಂತೆಯೇ ಟಿಕೆಟ್‌ ಫೈನಲ್‌ ಆಗಿದೆ ಎಂದು ಹೇಳುವ ಮೂಲಕ ಬಿ.ವೈ ವಿಜಯೇಂದ್ರ ಅಚ್ಚರಿ ಮೂಡಿಸಿದ್ದಾರೆ.

ನಮ್ಮ ಮನೆಯಲ್ಲೇ ಇಬ್ಬರಿದ್ದಾರೆ ಅಂತ ಗೊತ್ತಿರಲಿಲ್ಲ ಎಂದ ಶ್ರೀನಿವಾಸ್‌ ಪ್ರಸಾದ್‌

ಮೈಸೂರಿನಲ್ಲಿ ಗುರುವಾರ ಬೆಳಗ್ಗೆ ಮಾತನಾಡಿದ ಚಾಮರಾಜನಗರ ಕ್ಷೇತ್ರದ ಹಾಲಿ ಸಂಸದ ಶ್ರೀನಿವಾಸ ಪ್ರಸಾದ್‌ ಅವರು, ನನ್ನ ಇಬ್ಬರು ಅಳಿಯಂದಿರ ಜತೆಗೆ ಸಾಕಷ್ಟು ಜನ ಆಕಾಂಕ್ಷಿಗಳಿದ್ದಾರೆ. ನನಗೆ ನನ್ನ ಅಳಿಯ ಡಾ.ಮೋಹನ್ ಟಿಕೆಟ್ ಕೇಳಿದ್ದಾನೆ ಅಂತ ಗೊತ್ತಿತ್ತು. ಹರ್ಷವರ್ಧನ್ ಕೂಡ ಟಿಕೆಟ್ ಕೇಳಿದ್ದಾನೆ ಅಂತ ಗೊತ್ತಿರಲಿಲ್ಲ. ಈಗ ನಮ್ಮ ಮನೆಯಲ್ಲಿ ಇಬ್ಬರು ಆಕಾಂಕ್ಷಿಗಳಿದ್ದಾರೆ. ಅವರಿಬ್ಬರೂ ತುಂಬಾ ಅನೋನ್ಯವಾಗಿದ್ದಾರೆ. ಯಾರಿಗೆ ಟಿಕೆಟ್ ಕೊಟ್ಟರೂ ಹೊಂದಾಣಿಕೆಯಿಂದ ಕೆಲಸ ಮಾಡುತ್ತಾರೆʼʼ ಎಂದು ಹೇಳಿದರು.

ಶ್ರೀನಿವಾಸ್‌ ಪ್ರಸಾದ್‌ ಅವರ ಒಬ್ಬ ಅಳಿಯ ಕಳೆದ ನಂಜನಗೂಡು ಉಪಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು. ಮತ್ತೊಬ್ಬ ಅಳಿಯ ಡಾ. ಮೋಹನ್‌ ಅವರು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಕ್ಕಾಗಿಯೇ ತಮ್ಮ ವೈದ್ಯ ವೃತ್ತಿಗೆ ರಾಜೀನಾಮೆ ನೀಡಿದ್ದಾರೆ.

ʻʻಚಾಮರಾಜನಗರ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ನನ್ನ ಅಭಿಪ್ರಾಯವನ್ನು ವಿಜಯೇಂದ್ರ ಅವರಿಗೆ ಹೇಳಿದ್ದೇನೆ. ಮಾರ್ಚ್ 17ರ ನಂತರ ಚುನಾವಣೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ಮುಂದಿನ ಚುನಾವಣೆಯಲ್ಲಿ ಬಹಿರಂಗ ಪ್ರಚಾರಕ್ಕೆ ಹೋಗುವುದಿಲ್ಲ. ಆದರೆ, ಬಿಜೆಪಿಯನ್ನು‌ ಬೆಂಬಲಿಸಿ ಎಂದು ಎಲ್ಲರನ್ನು ಕೇಳಿಕೊಳ್ಳುತ್ತೇನೆʼʼ ಎಂದು ಹೇಳಿದ ಅವರು, ಚಾಮರಾಜ ನಗರ ಕ್ಷೇತ್ರದಿಂದ ಸಚಿವ ಡಾ. ಮಹದೇವಪ್ಪ ಸ್ಪರ್ಧೆ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಅವರು ನಮ್ಮ‌ ವಿರೋಧಿಗಳು, ಅವರ ಬಗ್ಗೆ ನಾನು ಏನೂ ಮಾತನಾಡಲ್ಲ ಎಂದು ಹೇಳಿದರು.

ಇದನ್ನೂ ಓದಿ : Hindu Temple: ದೇವಸ್ಥಾನದ ಹಣಕ್ಕೆ ಕನ್ನ ಹಾಕುವ ಬದಲು ವಿಧಾನಸೌಧದ ಮುಂದೆ ಹುಂಡಿ ಇಡಿ: ಸರ್ಕಾರಕ್ಕೆ ವಿಜಯೇಂದ್ರ ಸಲಹೆ

ಸಿದ್ದರಾಮಯ್ಯಗೂ ಜಮೀರ್‌ಗೂ ವ್ಯತ್ಯಾಸವೇ ಇಲ್ಲ

ʻʻಸಿದ್ದರಾಮಯ್ಯ ಬಾವಿಯೊಳಗಿನ ಕಪ್ಪೆ. ಮೋದಿ ಸಮುದ್ರದಲ್ಲಿ ಈಜಿದ ಮನುಷ್ಯ. ಅವರಿಗೂ ಇವರಿಗೂ ಎಲ್ಲಿಯ ಹೋಲಿಕೆ? ಸುಮ್ಮನೆ ಸಿದ್ದರಾಮಯ್ಯ ಬಾಯಿಗೆ ಬಂದಂತೆ ಕಿರುಚಾಡುತ್ತಾರೆʼʼ ಎಂದು ಹೇಳಿದ ಶ್ರೀನಿವಾಸ ಪ್ರಸಾದ್‌, ಸಿದ್ದರಾಮಯ್ಯಗೂ ಆ ಜಮೀರ್‌ಗೂ ಏನು ವ್ಯತ್ಯಾಸ ಇದೆ ಹೇಳಿ. ಇಬ್ಬರು ಸುಮ್ಮನೆ ಕೂಗುತ್ತಾರೆ. ಇವರು ಹೆರಿಗೆ ವಾರ್ಡ್ ನಲ್ಲಿ ಕಿರುಚಿದರೆ ಹೆರಿಗೆಯೇ ಆಗಿಬಿಡುತ್ತದೆ. ಆ ರೀತಿಯಲ್ಲಿ ಕೂಗುವುದನ್ನು ಕಲಿತಿದ್ದಾರೆ.ʼʼ ಎಂದರು.

ʻʻನಿರ್ಮಲಾ ಸೀತಾರಾಮನ್ ಬಗ್ಗೆ ರಾಷ್ಟ್ರಪತಿ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಇಂತಹ ಸಿದ್ದರಾಮಯ್ಯ ಬಗ್ಗೆ ಏನು ಮಾತನಾಡಲಿ? ಅವರು ಗ್ಯಾರಂಟಿಯಿಂದ ಗೆದ್ದು ಅದೇ ಗುಂಗಿನಲ್ಲಿ ಇದ್ದಾರೆ. ಮೋದಿ ಸರ್ಕಾರ ಮಾಡಿರುವ ಜನಪರ ಯೋಜನೆಗಳ ಮುಂದೆ ಇದೆಲ್ಲ ನಡೆಯುತ್ತಾ ನೋಡೋಣ.ʼʼ ಎಂದು ಶ್ರೀನಿವಾಸ ಪ್ರಸಾದ್‌ ವಾಗ್ದಾಳಿ ಮಾಡಿದರು.

ಅಭ್ಯರ್ಥಿ ಫೈನಲ್‌ ಆಗಿದೆ ಎಂದ ಬಿವೈ ವಿಜಯೇಂದ್ರ

ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಈಗಾಗಲೇ ಫೈನಲ್ ಆಗಿದೆ‌ ಎಂದು ಹೇಳಿರುವ ಬಿ.ವೈ. ವಿಜಯೇಂದ್ರ ಅವರು, ಎಲ್ಲಾ ಕ್ಷೇತ್ರಕ್ಕೂ ನಮಗೆ ಬಿಜೆಪಿ, ಕಮಲ ಮಾತ್ರ ಅಭ್ಯರ್ಥಿ. ಈ ವಿಚಾರದಲ್ಲಿ ನಮ್ಮ ಪಕ್ಷದ ಹಿರಿಯರು ತೀರ್ಮಾನ ಮಾಡುತ್ತಾರೆ. ಉಳಿದಂತೆ ಬೇರೆ ಯಾವ ಭಿನ್ನಾಭಿಪ್ರಾಯಗಳು ನಮ್ಮ ನಡುವೆ ಇಲ್ಲ ಎಂದು ಹೇಳಿದರು.

ʻʻಜೆಡಿಎಸ್ ಮತ್ತು ಬಿಜೆಪಿ ನಡುವೆ ಸೀಟ್ ಹಂಚಿಕೆಗೆ ಯಾವ ಗೊಂದಲಗಳು ಇಲ್ಲ. ಮುಂದೆಯೂ ಕೂಡ ಅದು ಉದ್ಭವ ಆಗುವುದಿಲ್ಲ. ಇವತ್ತು ಕುಮಾರಸ್ವಾಮಿ ಅಮಿತ್ ಶಾ ಅವರನ್ನು ಯಾಕೆ ಭೇಟಿ ಮಾಡುತ್ತಿದ್ದಾರೆ ಅಂತ ನನಗೆ ಗೊತ್ತಿಲ್ಲ. ನಾನು ಮುಂದಿನ ತಿಂಗಳ ಮೊದಲ ವಾರದಲ್ಲಿ ದೆಹಲಿಗೆ ತೆರಳಿ ನಮ್ಮ ಹೈಕಮಾಂಡ್ ಭೇಟಿ ಮಾಡುತ್ತೇನೆʼʼ ಎಂದು ಹೇಳಿದ ಬಿ.ವೈ ವಿಜಯೇಂದ್ರ ಅವರು, ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಮುಂದಿನ ದಿಕ್ಸೂಚಿಯಲ್ಲ ಎಂದರು.

ಅರುಣ್‌ ಪುತ್ತಿಲ ಬೇಷರತ್‌ ಪಕ್ಷ ಸೇರ್ಪಡೆ ಎಂದ ವಿಜಯೇಂದ್ರ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಬಂಡಾಯವಾಗಿ ನಿಂತು ಬಿಜೆಪಿ ಸೋಲಿಗೆ ಕಾರಣರಾಗಿದ್ದ ಅರುಣ್ ಕುಮಾರ್‌ ಪುತ್ತಿಲ ನನ್ನನ್ನು ಭೇಟಿ ಮಾಡಿದ್ದು ಸತ್ಯ. ಬೇಷರತ್ ಆಗಿ ಬಿಜೆಪಿ ಸೇರ್ಪಡೆಯಾಗಿ ಎಂದು ಹೇಳಿದ್ದೇನೆ ಎಂದರು.

ʻʻಯಾವುದೇ ಷರತ್ತುಗಳು ಬೇಡ. ಮೋದಿ ನಾಯಕತ್ವಕ್ಕಾಗಿ ಎಲ್ಲರೂ ಒಂದಾಗಬೇಕು ಎಂದು ಹೇಳಿದ್ದೇನೆ. ನಾನು ಕೂಡ ಅಲ್ಲಿನ ಸ್ಥಳೀಯ ಮುಖಂಡರ ಜೊತೆ ಚರ್ಚೆ ಮಾಡುತ್ತೇನೆ ಎಂದಿದ್ದೇನೆ. ಅರುಣ್ ಪುತ್ತಿಲ ಅಷ್ಟೇ ಅಲ್ಲ, ಯಾರೇ ಬೇಷರತ್ತಾಗಿ ಪಕ್ಷಕ್ಕೆ ಬಂದರೆ ನಮ್ಮ ಸ್ವಾಗತ ಇದೆ.ʼʼ ಎಂದು ಮೈಸೂರಿನಲ್ಲಿ ಬಿ.ವೈ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Karnataka rain : ವಾರದವರೆಗೂ ಬಿಡುವು ನೀಡಿದ್ದ ವರುಣ ನಿನ್ನೆ ಶನಿವಾರದಿಂದ ಮತ್ತೆ ಅಬ್ಬರಿಸಲು ಶುರು ಮಾಡಿದ್ದಾನೆ. ಭಾನುವಾರ ಸಂಜೆ ವೇಳೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ (Rain news) ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ಗಾಳಿ ಬೀಸುವ (Karnataka Rain) ಸಾಧ್ಯತೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಾಗೂ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ತುಮಕೂರು, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಾಮರಾಜನಗರ ಸಾಧಾರಣ ಮಳೆಯಾದರೆ, ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಯಾದಗಿರಿ, ಬೆಳಗಾವಿ, ಧಾರವಾಡ, ಗದಗದಲ್ಲಿ, ವಿಜಯನಗರ ಮತ್ತು ಹಾವೇರಿಯ ಬಹುತೇಕ ಕಡೆಗಳಲ್ಲಿ ಮಳೆಯು ಅಬ್ಬರಿಸಲಿದೆ.

ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲೂ ಗುಡುಗು ಸಹಿತ ಸಾಧಾರಣ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.

ರಾಜಧಾನಿಯಲ್ಲಿ ಅಬ್ಬರದ ಮಳೆ

ಬೆಂಗಳೂರಿನಲ್ಲಿ ಭಾನುವಾರ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚನೆ ಇದೆ. ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಿಸಿಲಿನಿಂದ ಕಂಗೆಟ್ಟ ಸಿಟಿ ಮಂದಿಗೆ ರಾತ್ರಿ ಪೂರ್ತಿ ಸುರಿದ ಮಳೆಯಿಂದಾಗಿ ವಾತಾವರಣವೂ ಕೂಲ್‌ ಆಗಿದೆ.

ಇದನ್ನೂ ಓದಿ: Weather Updates:ಇಡೀ ರಾತ್ರಿ ಭಾರೀ ಮಳೆ; ಮುಂಗಾರು ಆರಂಭದಲ್ಲೇ ಬೆಂಗಳೂರು ಅಸ್ತವ್ಯಸ್ತ

ಮೈಸೂರಿನಲ್ಲಿ ಗಾಳಿ-ಮಳೆಗೆ ನೆಲಕ್ಕುರುಳಿದ ಬಾಳೆ ಬೆಳೆ

ಮೈಸೂರಿನಲ್ಲಿ ವಿವಿಧೆಡೆ ಭಾರಿ ಮಳೆ ಗಾಳಿಗೆ ಬಾಳೆ ಬೆಳೆ ನೆಲಕ್ಕುರುಳಿದೆ. ಮಳೆ, ಗಾಳಿಯು ಕೈಯಿಗೆ ಬಂದ ತುತ್ತು ಬಾಯಿಗೆ ಇಲ್ಲದಂತೆ ಮಾಡಿದೆ. ಶನಿವಾರ ಸುರಿದ ಮಳೆ ಹಾಗೂ ಗಾಳಿಗೆ ಅವಾಂತರವೇ ಸೃಷ್ಟಿಯಾಗಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಚಿಕ್ಕಹೊಮ್ಮ, ದೊಡ್ಡ ಹೊಮ್ಮ ಸೇರಿದಂತೆ ಹಲವೆಡೆ ಗಾಳಿ ಮಳೆಗೆ ಹತ್ತಾರು ಎಕರೆ ಬಾಳೆ ನಾಶವಾಗಿದೆ. ಚಿಕ್ಕಹೊಮ್ಮ ಗ್ರಾಮದ ನಾಗೇಂದ್ರ ಎಂಬುವವರ ಜಮೀನಲ್ಲಿ ಎರಡು ಸಾವಿರ ಬಾಳಿ ಗಿಡ ನೆಲಕ್ಕುರುಳಿದ್ದು ಇದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಸೂಕ್ತ ಪರಿಹಾರಕ್ಕೆ ರೈತರು ಆಗ್ರಹಿಸಿದ್ದಾರೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹನಗೋಡು ವ್ಯಾಪ್ತಿಯಲ್ಲಿ ಮಳೆಗೆ ಅಪಾರ ಪ್ರಮಾಣದ ತಂಬಾಕು ಹಾಗೂ ಶುಂಠಿ ಬೆಳೆ ನಾಶವಾಗಿದೆ. ಪೆಂಜಹಳ್ಳಿ, ಹರಳಹಳ್ಳಿ, ಕಿರಂಗೂರು, ಹಿಂಡಗೂಡ್ಲು ಸುತ್ತ ಮುತ್ತ ಸಾಕಷ್ಟು ಮಳೆ ಅವಾಂತರವೇ ಸೃಷ್ಟಿಯಾಗಿತ್ತು. ತಂಬಾಕು ಸಸಿ ನಾಟಿ ಮಾಡಿ ಗೊಬ್ಬರ ಹಾಕಿದ್ದ ಜಮೀನಿನಲ್ಲಿ ಮಳೆಯ ನೀರು ನಿಂತು ಬೆಳೆ ಹಾನಿಯಾಗಿತ್ತು. ಹರಳಹಳ್ಳಿ ಮಾದಳ್ಳಿಕಟ್ಟೆ, ಹುಲಿಕೆರೆ, ಆದ್ವಾಳಕೆರೆ, ಸೇರಿದಂತೆ ಬಹುತೇಕ ಕೆರೆಕಟ್ಟೆಗಳು ಭರ್ತಿಯಾಗಿವೆ.

ಕೆಜಿಎಫ್‌ನಲ್ಲಿ ಭರ್ಜರಿ ಮಳೆ

ಕೋಲಾರ ಜಿಲ್ಲೆಯ ವಿವಿಧಡೆ ತಡರಾತ್ರಿ ಗುಡುಗು ಸಿಡಿಲ ಧಾರಾಕಾರ ಮಳೆಯಾಗಿದೆ. ಕೆಜಿಎಫ್‌ನಲ್ಲಿ 6.4 ಸೆಂ.ಮೀ ಅತಿ ಹೆಚ್ಚು ಮಳೆಯಾಗಿದೆ. ಬಂಗಾರಪೇಟೆ, ಮಾಲೂರು, ಕೋಲಾರ ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಕೆಜಿಎಫ್‌ನ ಬೆಮಲ್ ಬಡಾವಣೆಯಲ್ಲಿ ಭಾರಿ ಮಳೆಗೆ ಬೃಹತ್ ಮರವೊಂದು ನೆಲಕ್ಕುರಲಿದೆ. ತಡರಾತ್ರಿ ರಸ್ತೆಗೆ ಮರ ಉರುಳಿದ ಪರಿಣಾಮ ಕೆಲಕಾಲ ಸಂಚಾರವು ಅಸ್ತವ್ಯಸ್ತಗೊಂಡಿತ್ತು.

ಚಲಿಸುತ್ತಿದ್ದ ಬೈಕ್‌ ಮೇಲೆ ಬಿದ್ದ ಮರ, ಸವಾರ ಗಂಭೀರ

ಇನ್ನೂ ವಿಜಯನಗರದ ನಿವಾಸಿ ಬೈಕ್‌ನಲ್ಲಿ ಬರುವಾಗ ಗಾಳಿ ಮಳೆಗೆ ಮರ ಬಿದ್ದಿದೆ. ಪರಿಣಾಮ ಬೈಕ್ ಸವಾರ ಇಮ್ಯುನಿಯಲ್ ಎಂಬಾತ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಜಿಎಫ್ ನ ಮಾರಿಕೊಪ್ಪ ಮತ್ತು ಆಂಧ್ರದ ಕುಪ್ಪಂ ರಾಮಕುಪ್ಪಂ ಬಂಗಾರಪೇಟೆ ಮಾಲೂರು ಕಡೆ ಬಿರುಸಿನ ಮಳೆಯಾಗಿದೆ .ಹಳ್ಳ ಕೊಳ್ಳಗಳು ತುಂಬಿ ನೀರು ಹರಿದಿದೆ. ಇನ್ನು ಎರಡು ದಿನಗಳ ಕಾಲ ಕೋಲಾರ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.

ವಿಜಯಪುರದಲ್ಲಿ ಗಾಳಿ ರಭಸ

ವಿಜಯಪುರ ಜಿಲ್ಲೆಯ ಹೂವಿನ ಹಿಪ್ಪರಗಿ ಭಾಗದಲ್ಲಿ ಭಾರಿ ಮಳೆ ಸುರಿದಿದೆ. ಭೀಕರ ಬರಗಾಲದಿಂದ ಕಂಗೆಟ್ಟಿದ್ದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಮಳೆಯಿಂದಾಗಿ ರೈತರ ಮೊಗದಲ್ಲಿ ಸಂತಸ ಮೂಡಿದೆ. ರಭಸವಾಗಿ ಸುರಿದ ಮಳೆಯಿಂದಾಗಿ ಕೆರೆ ಹಾಗೂ ರಸ್ತೆಗಳು ತುಂಬಿ ಹರಿದಿದ್ದವು. ಭಾರಿ ಗಾಳಿ ಸಮೇತವಾಗಿ ಸತತ ಮೂರು ಗಂಟೆ ಸುರಿದ ಮಳೆಗೆ ಮರಗಳು‌ ಹಾಗೂ ವಿದ್ಯುತ್ ಕಂಬ ನೆಲಕ್ಕೆ ಬಿದ್ದಿದ್ದವು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮೇಲ್ಮೈ ಸುಳಿಗಾಳಿ ಎಫೆಕ್ಟ್‌; ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

Rain News : ರಾಜ್ಯಾದ್ಯಂತ ಗುಡುಗು ಸಹಿತ ಮಧ್ಯಮ ಮಳೆಯಾಗಲಿದ್ದು, ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ಗಾಳಿ ಬೀಸುವ (Karnataka weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ವ್ಯಾಪಕ ಲಘುದಿಂದ ಸಾಧಾರಣ ಮಳೆ ಸಾಧ್ಯತೆ ಇದೆ. ತುಮಕೂರು, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಾಮರಾಜನಗರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಯಾದಗಿರಿ, ಬೆಳಗಾವಿ, ಧಾರವಾಡ, ಗದಗದಲ್ಲಿ ಸಾಧಾರಣ ಮಳೆಯಾಗಲಿದೆ. ವಿಜಯನಗರ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: World Milk Day: ಹಾಲಿಗೊಂದು ದಿನವೇ ಬೇಕೆಂದಿಲ್ಲ, ವರ್ಷವಿಡೀ ಆಚರಿಸಬಹುದು!

ಬೇಸಿಗೆಯ ತಾಪಕ್ಕೆ ಮೂಗಿನಲ್ಲಿ ರಕ್ತಸ್ರಾವವೇ? ತಡೆಯಲು ಇಲ್ಲಿವೆ ಸರಳ ಉಪಾಯ

ಚಳಿಗಾಲದಲ್ಲಿ ಮಾತ್ರವಲ್ಲ, ಬೇಸಿಗೆಯಲ್ಲೂ ಮೂಗಿನಲ್ಲಿ ರಕ್ತಸ್ರಾವ ಆಗುವುದು ಸಾಮಾನ್ಯ. ಆದರೆ ಹಾಗೇಕಾಗುತ್ತದೆ? ಹಾಗೆ ಆಗದಂತೆ ತಡೆಯುವುದಕ್ಕೆ ಸಾಧ್ಯವಿಲ್ಲವೇ- ಈ ಎಲ್ಲ ಮಾಹಿತಿಗಳ ಜೊತೆಗೆ ಅದನ್ನು ತಡೆಯುವ ಸರಳ (Nosebleeds In Summer) ಉಪಾಯಗಳು ಇಲ್ಲಿವೆ. ಬೇಸಿಗೆಯಲ್ಲಿ ಕಾಡುವ ಹಲವು ರೀತಿಯ ಆರೋಗ್ಯ ಸಮಸ್ಯೆಗಳ ಪೈಕಿ ಮೂಗಿನಲ್ಲಿ ರಕ್ತ ಸೋರುವುದೂ ಒಂದು. ಅತಿ ಬಿಸಿಯಾದ ಮತ್ತು ಶುಷ್ಕ ವಾತಾವರಣವಿದ್ದಾಗ ಈ ಸಮಸ್ಯೆ ಕಾಡುವುದು ಹೆಚ್ಚು. ಅತಿಯಾದ ಚಳಿಯ ಜೊತೆಗಿನ ಒಣ ಹವೆ ಇದ್ದರೂ ಈ ತೊಂದರೆ ಕಾಡಬಹುದು. ಆದರೆ ಹೆಚ್ಚಿನ ಜನ ಬೇಸಿಗೆಯಲ್ಲಿ ಈ ಸಮಸ್ಯೆಯನ್ನು ಎದುರಿಸುತ್ತಾರೆ. ಅಲ್ಪಸ್ವಲ್ಪ ರಕ್ತ ಸೋರುತ್ತಿದ್ದರೆ ಇದನ್ನು ತಡೆಯುವುದಕ್ಕೆ ಕೆಲವು ಮನೆಮದ್ದುಗಳು ಸಹಾಯ ಮಾಡಬಹುದು. ಆದರೆ ಮೂಗಿನಲ್ಲಿ ಹೆಚ್ಚು ರಕ್ತಸ್ರಾವ ಆಗುತ್ತಿದ್ದರೆ ವೈದ್ಯರನ್ನು ಕಾಣಬೇಕಾದೀತು. ಮೂಗಿನಲ್ಲಿ ರಕ್ತ ಸೋರುವುದಕ್ಕೆ ಕಾರಣಗಳನ್ನು ಮೊದಲು ಅರ್ಥ ಮಾಡಿಕೊಳ್ಳೋಣ. ಒಣಗಿದ ಬಿಸಿ ಹವೆಯಿಂದಾಗಿ ಮೂಗಿನ ಒಳ ಭಾಗದಲ್ಲಿರುವ ಸೂಕ್ಷ್ಮ ರಕ್ತನಾಳಗಳು ಒಡೆದಾಗ ಉಂಟಾಗುವ ಸಮಸ್ಯೆಯಿದು. ಕೆಲವೊಮ್ಮೆ ಸೋಂಕಿನಿಂದಲೂ ಈ ಸಮಸ್ಯೆ ಕಾಣಬಹುದು. ಅತಿಯಾಗಿ ರಕ್ತಸ್ರಾವ ಆಗುತ್ತಿದ್ದರೆ, ಬೇರೆಯದೇ ಸಮಸ್ಯೆಯನ್ನಿದು ಸೂಚಿಸಬಹುದು. ಆದರೆ ಬೇಸಿಗೆಯ ಕಾರಣದಿಂದಲೇ ಮೂಗಿನಲ್ಲಿ ರಕ್ತ ಸೋರುತ್ತಿದ್ದರೆ, ಕೆಲವು ಮನೆಮದ್ದುಗಳು ಇದಕ್ಕೆ ಉಪಶಮನ ನೀಡುತ್ತವೆ.

drink Water night

ನೀರು ಕುಡಿಯಿರಿ

ಇದಕ್ಕಿರುವ ಅತ್ಯಂತ ಸರಳವಾದ ಮದ್ದೆಂದರೆ ನೀರು ಕುಡಿಯುವುದು. ಹೆಚ್ಚಿನ ನೀರು ದೇಹ ಸೇರಿದಂತೆ ಕೋಶಗಳಲ್ಲಿರುವ ಶುಷ್ಕತೆ ಕಡಿಮೆಯಾಗುತ್ತದೆ. ಇದರಿಂದ ಮೂಗಿನಲ್ಲಿರುವ ಮ್ಯೂಕಸ್‌ ಕೋಶಗಳು ಸಹ ತಮ್ಮ ತೇವವನ್ನು ಕಾಪಿಟ್ಟುಕೊಳ್ಳುವುದಕ್ಕೆ ಸಹಾಯವಾಗುತ್ತದೆ. ಅಂದರೆ, ಒಣ ಹವೆಯ ಪ್ರತಿಕೂಲ ಪರಿಣಾಮ ಬೀರದಂತೆ ತಡೆಯುವುದಕ್ಕೆ ಇದು ಸುಲಭದ ಉಪಾಯ.

ಹ್ಯುಮಿಡಿಫಯರ್‌

ಬೇಸಿಗೆಯ ನೆವದಿಂದ ಎಷ್ಟೋ ಬಾರಿ ಅತಿಯಾಗಿ ಫ್ಯಾನ್‌ ಅಥವಾ ಎಸಿ ಬಳಸುತ್ತೇವೆ. ಇದರಿಂದ ಮನೆಯ ಅಥವಾ ಕಚೇರಿಯ ವಾತಾವರಣದಲ್ಲಿ ಶುಷ್ಕತೆ ಹೆಚ್ಚಾಗುತ್ತದೆ. ನೈಸರ್ಗಿಕವಾದ ಬಿಸಿ ಗಾಳಿಯ ಜೊತೆಗೆ ಇದೂ ಸಹ ಸಮಸ್ಯೆಗಳನ್ನು ಹೆಚ್ಚಿಸಬಹುದು. ಹಾಗಾಗಿ ವಾತಾವರಣದ ತೇವಾಂಶವನ್ನು ಹೆಚ್ಚಿಸುವಂಥ ಹ್ಯುಮಿಡಿಫಯರ್‌ ಬಳಸುವುದು ಇನ್ನೊಂದು ಮಾರ್ಗ. ಇದರಿಂದ ಮೂಗಿನ ಅಂಗಾಂಶಗಳು ಹಾನಿಗೊಳ್ಳುವುದನ್ನು ತಡೆಯಬಹುದು.

Moisturizer

ಮಾಯಿಶ್ಚರೈಸರ್‌ ಬಳಕೆ

ಮೂಗಿನ ಒಳ ಭಾಗ ಒಣಗಿ ಬಿರಿಯದಂತೆ ತಡೆಯಲು ಮಾಯಿಶ್ಚರೈಸರ್‌ ಬಳಕೆ ಮಾಡುವುದು ಉಪಯುಕ್ತ. ಇದಕ್ಕಾಗಿ ಇರುವ ಜೆಲ್‌ ಇಲ್ಲವೇ ಸ್ಟ್ರೇ ಬಳಸಬಹುದು. ಸಾಲೈನ್‌ ಸ್ಪ್ರೇ ಬಳಕೆಯೂ ಉಪಯುಕ್ತವಾದೀತು. ಇವನ್ನೆಲ್ಲ ಹೊಸದಾಗಿ ಖರೀದಿಸಿ ತರುವಷ್ಟು ವ್ಯವಧಾನ ಇಲ್ಲದಿದ್ದರೆ, ಸರಳವಾಗಿ ಕೊಬ್ಬರಿ ಎಣ್ಣೆಯನ್ನು ಮೂಗಿನ ಒಳಭಾಗದ ಅಂಗಾಂಶಗಳಿಗೆ ಹೆಚ್ಚಿ. ಇದು ಪರಿಣಾಮಕಾರಿಯಾಗಿ ತೇವವನ್ನು ಹಿಡಿದಿಡುತ್ತದೆ.

ಮುಚ್ಚಿಕೊಳ್ಳಿ

ತೀವ್ರ ತಾಪದ ಹೊತ್ತಿನಲ್ಲಿ ಮನೆಯಿಂದ ಹೊರಗೆ ಹೋಗುವಾಗ ಮುಖಕ್ಕೆ ಮಾಸ್ಕ್‌ ಹಾಕುವುದು ಸಹಾಯಕ. ಇದರಿಂದ ಒಣ ಹವೆಯನ್ನು ಉಸಿರಾಡುವುದು ಸ್ವಲ್ಪ ಮಟ್ಟಿಗಾದರೂ ತಪ್ಪಿಸಬಹುದು. ತಿಳಿ ಬಣ್ಣದ ದೊಡ್ಡ ಹ್ಯಾಟ್‌ ಧರಿಸುವುದರಿಂದ ಮುಖದ ಮೇಲೆ ಬಿಸಿಲು ನೇರವಾಗಿ ಬೀಳದಂತೆ ಮಾಡಬಹುದು. ಈ ಕ್ರಮಗಳೆಲ್ಲ ಸಣ್ಣವೇ ಆದರೂ, ಒಟ್ಟಾರೆಯಾಗಿ ಸಮಸ್ಯೆಯನ್ನು ದೂರ ಮಾಡುವಲ್ಲಿ ನೆರವಾಗುತ್ತವೆ.

ಇದನ್ನೂ ಓದಿ: Mango For Diabetes: ಮಧುಮೇಹಿಗಳೂ ಮಾವಿನಹಣ್ಣಿನ ರುಚಿ ಸವಿಯಬಹುದೇ? ಇಲ್ಲಿದೆ ಉತ್ತರ!

ಮಾಡಬೇಡಿ

ಮೂಗನ್ನು ಶುಚಿಗೊಳಿಸುವ ನೆವದಲ್ಲಿ ನಾಸಿಕದ ಮೇಲೆ ಯಾವುದೇ ರೀತಿಯಲ್ಲೂ ತೀರಾ ಒತ್ತಡ ಹಾಕಬೇಡಿ. ಈಗಾಗಲೇ ಮೂಗಿನಲ್ಲಿ ರಕ್ತ ಸೋರುತ್ತಿದ್ದರಂತೂ ಈ ಬಗ್ಗೆ ಹೆಚ್ಚಿನ ಎಚ್ಚರ ವಹಿಸಿ. ಮೂಗಿನ ಮೇಲೆ ಒತ್ತಡ ಹಾಕಿದರೆ ಬಿರಿದ ಕೋಶಗಳು ದುರಸ್ತಿಯಾಗುವುದು ನಿಧಾನವಾಗುತ್ತದೆ ಅಥವಾ ಇನ್ನಷ್ಟು ಬಿರಿದು ಸಮಸ್ಯೆಯನ್ನೇ ಸೃಷ್ಟಿಸುತ್ತವೆ. ಅಲರ್ಜಿಗಳನ್ನು ಹತ್ತಿಕ್ಕಿ. ದಿನವಿಡೀ ಜೋರಾಗಿ ಸೀನುತ್ತಲೇ ಇದ್ದರೆ, ಮೂಗು ಸೋರುವಾಗ ರಕ್ತಸ್ರಾವ ಆಗುವುದು ಖಚಿತ.

Winter transitions to summer

ಆಹಾರ

ಆರೋಗ್ಯಕರವಾದ ಆಹಾರವನ್ನು ಕಡ್ಡಾಯವಾಗಿ ಪಾಲಿಸಿ. ಸೆಕೆಯ ನೆವವೊಡ್ಡಿ ಅತಿಯಾದ ತಣ್ಣಗಿನ ಪೇಯಗಳನ್ನು ಕುಡಿಯುವುದು, ಐಸ್‌ಕ್ರೀಮ್‌ ಮೆಲ್ಲುವುದು- ಇವೆಲ್ಲ ಮೂಗಿನ ಸಮಸ್ಯೆಗಳನ್ನು ಹೆಚ್ಚಿಸಬಹುದು; ಗಂಟಲಿನ ಸೋಂಕಿಗೆ, ಶೀತ-ನೆಗಡಿಗೆ ಕಾರಣವಾಗಬಹುದು. ವಿಟಮಿನ್‌ ಸಿ ಹೆಚ್ಚಿರುವ ಆಹಾರವನ್ನು ವಿಫುಲವಾಗಿ ಸೇವಿಸುವ ಮೂಲಕ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆಗೆ ಕೆರೆಯಂತಾದ ರಸ್ತೆಗಳು; ಮುಳುಗಡೆಯಾದ ವಾಹನಗಳು

Rain News : ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯು ಅಬ್ಬರಿಸುತ್ತಿದ್ದು, ಅವಾಂತರವೇ ಸೃಷ್ಟಿಯಾಗಿದೆ. ಮುಂದಿನ ಐದು ದಿನಗಳು ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ವೀಕೆಂಡ್‌ ಮೂಡ್‌ನಲ್ಲಿದ್ದ ಜನರಿಗೆ ಮಳೆರಾಯನ (Rain News) ಎಂಟ್ರಿ ಕೊಂಚ ಕಿರಿಕಿರಿಯನ್ನುಂಟು ಮಾಡಿದೆ. ಬೆಳಗ್ಗೆ ಬಿಸಿಲಿನಿಂದ ಕಂಗೆಟ್ಟ ಜನರಿಗೆ ಮಧ್ಯಾಹ್ನ ಆಗುತ್ತಿದ್ದಂತೆ ಮೋಡ ಕವಿದ ವಾತಾವರಣ ಇತ್ತು. ನೋಡನೋಡುತ್ತಿದ್ದಂತೆ ಗುಡುಗು ಸಹಿತ ಧಾರಾಕಾರ ಮಳೆ (Karnataka Weather Forecast) ಸುರಿದಿತ್ತು. ರಾಜಧಾನಿ ಬೆಂಗಳೂರಲ್ಲಿ ಬಿಡುವು ನೀಡಿದ್ದ ವರುಣ ವಾರದ ನಂತರ ಅಬ್ಬರಿಸಿದ್ದ. ಜಸ್ಟ್‌ ಒಂದೂವರೆ ಗಂಟೆಯ ಮಳೆಗೆ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡಬೇಕಾಯಿತು.

ಶೇಷಾದ್ರಿಪುರಂ, ಶಿವಾನಂದ ಸರ್ಕಲ್, ವಿಜಯನಗರ, ಶಿವಾಜಿನಗರ ಸೇರಿದಂತೆ ಮಲ್ಲೇಶ್ವರಂ, ವಸಂತನಗರ, ಶಾಂತಿನಗರ, ಜಯನಗರ, ಯಶವಂತಪುರ, ರಾಜಾಜಿನಗರ, ಕೋರಮಂಗಲ ಹಾಗೂ ಎಂಜಿ ರಸ್ತೆ, ಕಬ್ಬನ್ ಪಾರ್ಕ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿತ್ತು.

ಮುಳುಗಡೆಯಾದ ಸಹಕಾರ

ಮಹಾದೇವಪುರ ಸುತ್ತಮುತ್ತ ಒಂದು ಗಂಟೆಗೂ ಹೆಚ್ಚು ಕಾಲ ಭಾರಿ ಮಳೆ ಸುರಿದಿದೆ. ಮಳೆಗೆ ಸಹಕಾರ ನಗರದ ಜಿ ಬ್ಲಾಕ್‌ನ ರಸ್ತೆಗಳಲ್ಲಿ ನೀರು ತುಂಬಿ ಹರಿದಿತ್ತು. ಇದರಿಂದಾಗಿ ಅಂಗಡಿ ಮುಂಗಟ್ಟುಗಳಲ್ಲಿ ನೀರು ನಿಂತಿದ್ದರಿಂದ ಜನರು ಪರದಾಡಬೇಕಾಯಿತು. ಪಾದಚಾರಿಗಳು ಮತ್ತು ವಾಹನ ಸವಾರರು ರಸ್ತೆ ದಾಟಲು ಪರದಾಡಬೇಕಾಯಿತು. ಇನ್ನೂ ದಿಢೀರ್‌ ಮಳೆಗೆ ವಾಹನ ಸವಾರರು ಬಸ್ ನಿಲ್ದಾಣಗಳಲ್ಲಿ ಆಶ್ರಯ ಪಡೆದರು.

Karnataka weather Forecast

ಆನೇಕಲ್‌ನಲ್ಲೂ ಮಳೆ ಅಬ್ಬರ

ಆನೇಕಲ್ ತಾಲೂಕಿನಾದ್ಯಂತ ಮಳೆಯು ಅಬ್ಬರಿಸಿತ್ತು. ಆನೇಕಲ್, ಚಂದಾಪುರ, ಅತ್ತಿಬೆಲೆ, ಹೆಬ್ಬಗೋಡಿ, ಎಲೆಕ್ಟ್ರಾನಿಕ್ ಸಿಟಿ ಭಾಗದಲ್ಲಿ ಮಳೆಯಾಗಿದೆ. ಚಂದಾಪುರದ ಬಳಿ ಸರ್ವೀಸ್ ರಸ್ತೆ ಜಲಾವೃತಗೊಂಡಿತ್ತು. ಇದರಿಂದಾಗಿ ಬೈಕ್ ಸವಾರರು, ಪಾದಚಾರಿಗಳು ಹಾಗೂ ವಾಹನ ಸವಾರ ಪರದಾಡಬೇಕಾಯಿತು. ಮಳೆ ನೀರು ಹೊರ ಹೋಗಲು ಜಾಗವಿಲ್ಲದೆ ರಸ್ತೆಯು ಕೆರೆಯಂತಾಗಿತ್ತು.

ಇದನ್ನೂ ಓದಿ: Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

ಚಿಕ್ಕಮಗಳೂರಿನಲ್ಲೂ ಮಳೆಯ ಸಿಂಚನ

ಶನಿವಾರದಂದು ಚಿಕ್ಕಮಗಳೂರು ಜಿಲ್ಲೆಯ ಹಲವಡೆ ಭಾರಿ ಮಳೆಯಾಗಿದೆ. ಚಿಕ್ಕಮಗಳೂರು ನಗರ, ಬೆಳವಾಡಿ, ಕಳಸಾಪುರ, ಮಾಗಡಿ, ಅಂಬಳೆ, ತೇಗೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ, ಕಡೂರು ತಾಲೂಕಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ಭಾರಿ ಬಿರುಗಾಳಿ ಮಳೆಗೆ ಚಿಕ್ಕಮಗಳೂರು ಗ್ರಾಮಾಂತರ ತತ್ತರಿಸಿತ್ತು. ಮಳೆಯಿಂದಾಗಿ ಚಿಕ್ಕಮಗಳೂರು ನಗರದಲ್ಲಿ ಜನಜೀವನ ಅಸ್ತವ್ಯಸ್ತವಾಗಿತ್ತು. ಗುಡುಗು ಸಿಡಿಲು ಸಹಿತ ಸುರಿದ ಮಳೆಗೆ ಹಳ್ಳ ಕೊಳ್ಳಗಳು ಉಕ್ಕಿ ಹರಿದಿದೆ.

ಮೇಲ್ಮೈ ಸುಳಿಗಾಳಿ ಹಿನ್ನೆಲೆ ಇನ್ನೈದು ದಿನ ಭಾರಿ ಮಳೆ

ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ‌ ಮುಂದಿನ ಐದು ದಿನಗಳ‌ ಕಾಲ ಭಾರಿ‌ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಸದ್ಯ ಮುಂಗಾರು ಕೇರಳ ರಾಜ್ಯವನ್ನು ಪ್ರವೇಶಿಸಿದ್ದು, ನಂತರ ಕರ್ನಾಟಕವನ್ನು ಆವರಿಸಲಿದೆ.

ಈ ಭಾರಿ ಅವಧಿಗೂ ಮೊದಲೇ ಮುಂಗಾರು ಪ್ರವೇಶವಾಗುತ್ತಿದೆ. ಕಳೆದ ವರ್ಷ ಕರ್ನಾಟಕದಲ್ಲಿ ಜೂನ್ 15ಕ್ಕೆ ಮುಂಗಾರು ಪ್ರವೇಶವಾಗಿತ್ತು. ಆದರೆ ಈ ವರ್ಷ 15 ದಿನಗಳಿಗೂ ಮೊದಲೇ ಮುಂಗಾರು ಪ್ರವೇಶವಾಗುತ್ತಿದೆ. ಈ ಬಾರಿ ಉತ್ತಮ ಮಳೆಯಾಗುವ ಸೂಚನೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Cow Smuggling : ಕಂಟೇನರ್‌, ಮಿಲ್ಕ್‌ ವ್ಯಾನ್‌ನಲ್ಲಿತ್ತು 70ಕ್ಕೂ ಹೆಚ್ಚು ಜಾನುವಾರು; ಹಿಂಸೆ ಕೊಟ್ಟವರು ಅರೆಸ್ಟ್‌

Cow Smuggling: ಕಾರವಾರದಲ್ಲಿ ಅಕ್ರಮ ಗೋ ಸಾಗಾಟದ ವಾಹನ ಬೆನ್ನಟ್ಟಿದ ಪೊಲೀಸರು 20ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಿಸಿದ್ದಾರೆ. ಕಂಟೇನರ್‌ವೊಂದರಲ್ಲೇ ಜಾನುವಾರಗಳನ್ನು ತುರುಕಿ ಹಿಂಸಾತ್ಮಕವಾಗಿ ರವಾನೆ ಮಾಡಲಾಗುತ್ತಿತ್ತು. ಇತ್ತ ಮೈಸೂರಿನಲ್ಲೂ ಕಸಾಯಿಖಾನೆಗೆ ಸಾಗಿಸುತ್ತಿದ್ದ 49ಕ್ಕೂ ಹೆಚ್ಚು ರಾಸುಗಳನ್ನು ರಕ್ಷಣೆ ಮಾಡಲಾಗಿದೆ.

VISTARANEWS.COM


on

By

Cow Smuggling
Koo

ಕಾರವಾರ/ಮೈಸೂರು: ಪ್ರತ್ಯೇಕ ಕಡೆಗಳಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ (Cow Smuggling) ವಾಹನಗಳ ಮೇಲೆ ಪೊಲೀಸರು ದಾಳಿ, ರಾಸುಗಳನ್ನು ರಕ್ಷಣೆ ಮಾಡಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 66ರ ಮಾಸ್ತಿಕಟ್ಟಾ ಸರ್ಕಲ್ ಬಳಿ ಕಂಟೇನರ್‌ನಲ್ಲಿ ಹಿಂಸಾತ್ಮಕವಾಗಿ ಜಾನುವಾರುಗಳನ್ನು ಸಾಗಾಟಕ್ಕೆ ಯತ್ನಿಸಲಾಗಿತ್ತು.

ಬೆಳಗಾವಿ ಜಿಲ್ಲೆಯ ಕಿತ್ತೂರಿನಿಂದ ಭಟ್ಕಳಕ್ಕೆ ಕಂಟೇನರ್‌ ಮೂಲಕ ಜಾನುವಾರಗಳನ್ನು ಸಾಗಾಟಕ್ಕೆ ತೆರಳುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು 23 ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ. ಮಂಡ್ಯ ಮೂಲದ ಚಾಲಕ ಸೈಯ್ಯದ್ ಇಸ್ಮಾಯಿಲ್, ಹಾಸನ ಜಿಲ್ಲೆಯ ಹೊಳೆನರಸೀಪುರದ ಮಹಮ್ಮದ್ ಅತೀಕ್, ಇರ್ಫಾನ್ ಬಂಧಿತರು. ಜಾನುವಾರು ಸಾಗಾಟ ಸಂಬಂಧ ಭಟ್ಕಳದ ಮದೀನಾ ಕಾಲೋನಿಯ ಶಾಯ್ ನೂರ್, ಅವುಫ್ ಅಬು ಅಹ್ಮದ್ ಎಂಬುವವರನ್ನು ಬಂಧಿಸಲಾಗಿದೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಿಲ್ಕ್‌ ಟ್ಯಾಂಕ್‌ನಲ್ಲಿದ್ದ ಗೋವು!

ಕಸಾಯಿಖಾನೆಗೆ ಸಾಗಿಸುತ್ತಿದ್ದ 49ಕ್ಕೂ ಹೆಚ್ಚು ರಾಸುಗಳ ರಕ್ಷಣೆ ಮಾಡಲಾಗಿದೆ. ಮೈಸೂರಿನಲ್ಲಿ ಹುಣಸೂರು ಪೊಲೀಸರು ಕಾರ್ಯಾಚರಣೆ ನಡೆಸಿದರು. ಜಾನುವಾರುಗಳನ್ನು ಕೂಡಿ ಹಾಕಿದ್ದ ಗೋಡೌನ್ ಮೇಲೆ ಮಧ್ಯರಾತ್ರಿ ವೇಳೆ ದಾಳಿ ಮಾಡಿದಾಗ ಒಂದು ಮಿಲ್ಕ್ ವ್ಯಾನ್ ಸೇರಿದಂತೆ ಮೂರು ಗೂಡ್ಸ್ ವಾಹನಗಳಲ್ಲಿ ತುಂಬಿದ್ದ 49 ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ. ಹುಣಸೂರು ತಾಲೂಕಿನ ರತ್ನಪುರಿಯ ಅಲ್ತಾಫ್, ಶಾಬುದ್ದೀನ್ ಎಂಬುವವರಿಗೆ ಸೇರಿದ ಮನೆ ಪಕ್ಕದ ಗೋಡೌನ್‌ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Family Fighting : ಜಮೀನಿನ ವಿಚಾರದಲ್ಲಿ ಕುಟುಂಬಗಳ ಫೈಟ್; ಕುಡುಗೋಲು, ದೊಣ್ಣೆ ಹಿಡಿದು ಮಾರಾಮಾರಿ

ಅಕ್ರಮ ಗೋ ಸಾಗಾಟದ ವಾಹನ ಬೆನ್ನಟ್ಟಿ ಹಿಡಿದ ಭಜರಂಗದಳದ ಕಾರ್ಯಕರ್ತರು

ಯಾದಗಿರಿ: ಕಸಾಯಿ ಖಾನೆಗೆ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ (Cow Smugling) ವಾಹನವನ್ನು ಬಜರಂಗದಳ ಕಾರ್ಯಕರ್ತರು ಬೆನ್ನಟ್ಟಿ ಹಿಡಿದಿದ್ದಾರೆ. ಆ ವಾಹನದಲ್ಲಿ ನಿರ್ದಯವಾಗಿ ಹಾಕಲಾಗಿದ್ದ 7 ಗೋವುಗಳನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಲಾಗಿದೆ. ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುವವರರ ಬಗ್ಗೆ ಇದೇ ವೇಳೆ ಆಕ್ರೋಶ ವ್ಯಕ್ತಪಡಿಸಲಾಗಿದ್ದು ಎಲ್ಲರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾರ್ಯಕರ್ತರು ಮನವಿ ಮಾಡಿದ್ದಾರೆ.

ಯಾದಗಿರಿ ಜಿಲ್ಲೆಯ ವರ್ಕನಳ್ಳಿ ಬಳಿ ವಾಹನ ತಡೆದು ಗೋವುಗಳ ರಕ್ಷಣೆ ಮಾಡಲಾಗಿದೆ. ಮಸ್ಕನಳ್ಳಿ ಗ್ರಾಮದಿಂದ ಕಲಬುರಗಿಗೆ ವಾಹನದಲ್ಲಿ ಗೋವುಗಳನ್ನು ಸಾಗಾಟ ಮಾಡಲಾಗುತ್ತಿತ್ತು ಎಂದು ಹಿಂದೂಪರ ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ.

ಯಾವುದೇ ಅನುಮತಿಯಿಲ್ಲದೇ ಹಾಗೂ ನಿರ್ದಾಕ್ಷಿಣ್ಯ ರೀತಿಯಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಮಾಹಿತಿಯನ್ನು ಸ್ಥಳೀಯರು ಬಜರಂಗದಳ ಕಾರ್ಯಕರ್ತರಿಗೆ ನೀಡಿದ್ದರು. ತಕ್ಷಣ ಗೋ ಸಾಗಾಟದ ವಾಹನವನ್ನು ಬೆನ್ನಟ್ಟಿ ತಡೆದು ಬಜರಂಗದಳ ಕಾರ್ಯಕರ್ತರು ಅವುಗಳನ್ನು ವಶಕ್ಕೆ ತೆಗೆದುಕೊಂಡು ಪೊಲೀಸರಿಗೆ ನೀಡಿದ್ದಾರೆ. ಸಾಧಾರಣಾ ಟಾಟಾ ಸುಮೋ ವಾಹನದಲ್ಲಿ 7 ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಕಾರಣ ಅವರುಗಳೆಲ್ಲೂ ಗಂಭೀರ ಸ್ಥಿತಿಯಲ್ಲಿದ್ದವು. ಗೋವುಗಳನ್ನು ರಕ್ಷಿಸಿ ವಾಹನ ಸಹಿತ ಪೋಲಿಸ್ ಠಾಣೆಗೆ ಒಪ್ಪಿಸಲಾಗಿದೆ.

ಯಾದಗಿರಿ ಜಿಲ್ಲೆಯಲ್ಲಿ ಅಕ್ರಮ ಗೋಸಾಗಾಟ ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ ಎಂದು ಇದೇ ವೇಳೆ ಕಾರ್ಯಕರ್ತರು ಆರೋಪಿಸಿದ್ದಾರೆ. ಬಕ್ರಿದ್ ಹಬ್ಬಕ್ಕೆ ಅತೀ ಹೆಚ್ಚು ಗೋವು ಸಾಗಾಣಿಕೆ ಆಗ್ತಿವೆ. ಇದರಿಂದ ಸ್ಥಳೀಯವಾಗಿ ಸಮಸ್ಯೆಯಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ನಿರುಪದ್ರವಿ ಗೋವುಗಳನ್ನು ತೆಗೆದುಕೊಂಡು ಹೋಗಿ ಮಾಂಸಕ್ಕಾಗಿ ಕಡಿಯಲಾಗಿತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಗೋವಿನ ರಕ್ಷಣೆ ಮಾಡಬೇಕೆಂದು ಬಜರಂಗದಳ ಮುಖಂಡ ಶಿವಕುಮಾರ ಆಗ್ರಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Aaron Jones
ಕ್ರಿಕೆಟ್13 mins ago

Aaron Jones: 17 ವರ್ಷಗಳ ಹಿಂದಿನ ಟಿ20 ವಿಶ್ವಕಪ್​ ದಾಖಲೆ ಸರಿಗಟ್ಟಿದ ಯುಎಸ್​ಎ ಬ್ಯಾಟರ್​ ಆರೋನ್ ಜೋನ್ಸ್

Indian 2 Audio Launch Kamal Haasan Simbu Kajal Aggarwal
ಕಾಲಿವುಡ್18 mins ago

Indian 2 Audio Launch: ಅದ್ಧೂರಿಯಾಗಿ ನೆರವೇರಿತು ʼಇಂಡಿಯನ್‌ 2ʼ ಸಿನಿಮಾದ ಆಡಿಯೊ ಲಾಂಚ್‌!

Traffic Advisory
Lok Sabha Election 202426 mins ago

Traffic Advisory : ಲೋಕಸಭೆ ಎಲೆಕ್ಷನ್‌ ಕೌಂಟಿಂಗ್‌; ಬೆಂಗಳೂರಲ್ಲಿ ಎಲ್ಲೆಲ್ಲಿ ವಾಹನ ನಿರ್ಬಂಧ, ಮಾರ್ಗ ಬದಲು?

education News
ಬೆಂಗಳೂರು38 mins ago

Education News : ನೀಟ್ ಪರೀಕ್ಷೆ ಬಳಿಕ ಎಂಜಿನಿಯರ್ ಸೀಟು ಹಂಚಿಕೆ; 1.24 ಲಕ್ಷ ಸೀಟುಗಳು ಲಭ್ಯ, ಆನ್ ಲೈನ್ ಪ್ರಕ್ರಿಯೆ

Sushant Singh Rajput's sister cries as she visits Kedarnath
ಬಾಲಿವುಡ್42 mins ago

Sushant Singh: ಕೇದಾರನಾಥಕ್ಕೆ ಭೇಟಿ ಕೊಟ್ಟಾಗ ಸುಶಾಂತ್ ಸಿಂಗ್ ನೆನೆದು ಕಣ್ಣೀರಿಟ್ಟ ಸಹೋದರಿ!

PM Narendra Modi
ದೇಶ47 mins ago

PM Narendra Modi: ಎಕ್ಸಿಟ್‌ ಪೋಲ್‌ ರಿಸಲ್ಟ್‌ ಬೆನ್ನಲ್ಲೇ ಪ್ರಧಾನಿ ಮೋದಿ ಬ್ಯಾಕ್‌ ಟು ಬ್ಯಾಕ್‌ ಮೀಟಿಂಗ್‌

Muthyala Maduvu Waterfalls
ಪ್ರವಾಸ1 hour ago

Muthyala Maduvu Waterfalls: ಜಲರಾಶಿಯಿಂದ ತುಂಬಿಕೊಂಡು ಕಣ್ಮನ ಸೆಳೆಯುತ್ತಿರುವ ಮುತ್ಯಾಲಮಡುವು ಜಲಪಾತ

CAN vs USA
ಕ್ರೀಡೆ1 hour ago

CAN vs USA: ಕೆನಡಾ ಪರ ಟಿ20 ವಿಶ್ವಕಪ್​ ಪಂದ್ಯವಾಡಿದ ದಾವಣಗೆರೆಯ ಶ್ರೇಯಸ್

Raveena Tandon attacked In Mumbai After Being Accused Of Rash Driving
ಬಾಲಿವುಡ್1 hour ago

Raveena Tandon: ರವೀನಾ ಟಂಡನ್ ಕಾರು ಅಪಘಾತ; ನಟಿ ಹೊಡೆಯಬೇಡಿ ಪ್ಲೀಸ್ ಎನ್ನುತ್ತಿರುವ ವಿಡಿಯೊ ನೋಡಿ!

gold rate today
ಕರ್ನಾಟಕ1 hour ago

Gold Rate Today: ಬಂಗಾರ ಪ್ರಿಯರಿಗೆ ಶುಭ ಸುದ್ದಿ; ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು21 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು7 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌