For Registration Movie: ರಿಲೀಸ್‌ಗೂ ಮೊದ್ಲೇ ’ಫಾರ್ ರಿಜಿಸ್ಟ್ರೇಷನ್’ಗೆ ಡಿಮ್ಯಾಂಡ್! ತೆಲುಗಿಗೂ ಹೊರಟ ಪೃಥ್ವಿ-ಮಿಲನಾ - Vistara News

ಸಿನಿಮಾ

For Registration Movie: ರಿಲೀಸ್‌ಗೂ ಮೊದ್ಲೇ ’ಫಾರ್ ರಿಜಿಸ್ಟ್ರೇಷನ್’ಗೆ ಡಿಮ್ಯಾಂಡ್! ತೆಲುಗಿಗೂ ಹೊರಟ ಪೃಥ್ವಿ-ಮಿಲನಾ

For Registration Movie: ರಿಲೀಸ್‌ಗೂ ಮುನ್ನವೇ ಫಾರ್ ರಿಜಿಸ್ಟ್ರೇಷನ್ ಚಿತ್ರದ ತೆಲುಗು ಡಬ್ಬಿಂಗ್ ರೈಟ್ಸ್ ಭಾರಿ ಮೊತ್ತಕ್ಕೆ ಮಾರಾಟವಾಗಿದೆ. ಈ ಚಿತ್ರದಲ್ಲಿ ಪೃಥ್ವಿ ಮತ್ತು ಮಿಲನಾ ಅಭಿನಯಿಸಿದ್ದಾರೆ.

VISTARANEWS.COM


on

For Registration Movie Telugu Dubbing Rights sold for huge amount
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆ ಎದ್ದಿದೆ. ಪ್ರತಿಭಾವಂತ ಹೊಸಬರು ಮಾಡುತ್ತಿರುವ ಹೊಸ ಹೊಸ ಪ್ರಯೋಗಗಳಿಗೆ ಕನ್ನಡ ಪ್ರೇಕ್ಷಕರು ಮಾತ್ರ ಅಲ್ಲ, ಪಕ್ಕದ ರಾಜ್ಯದವರೂ ಫಿದಾ ಆಗುತ್ತಿದ್ದಾರೆ. ಬಾಲಿವುಡ್ ಮಂದಿ ಕೂಡ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತಾಗಿದೆ. ನಾವು ಇಷ್ಟೆಲ್ಲಾ ಪೀಠಿಕೆ ಹಾಕುತ್ತಿರುವುದಕ್ಕೆ ಕಾರಣ ಫಾರ್ ರಿಜಿಸ್ಟ್ರೇಷನ್ ಸಿನಿಮಾ(For Registration Movie). ಯುವ ಪ್ರತಿಭೆ ನವೀನ್ ದ್ವಾರಕಾನಾಥ್ ನಿರ್ದೇಶನದ, ನವೀನ್ ರಾವ್ ನಿರ್ಮಾಣದ, ಪೃಥ್ವಿ ಅಂಬಾರ್ (Pruthvi Ambaar) ಹಾಗೂ ಮಿಲನಾ ನಾಗರಾಜ್ (Milana Nagaraj) ಅಭಿನಯದ, ಫಾರ್ ರಿಜಿಸ್ಟ್ರೇಷನ್ ಚಿತ್ರವನ್ನು ತೆಲುಗಿನ ಖ್ಯಾತ ನಿರ್ಮಾಪಕರೊಬ್ಬರು ಭಾರೀ ಮೊತ್ತಕ್ಕೆ ಡಬ್ಬಿಂಗ್ ರೈಟ್ಸ್ (Dubbing Rights) ಪಡೆದುಕೊಂಡಿದ್ದಾರೆ.

ಶಿವಣ್ಣ ನಟನೆಯ 125ನೇ ಸಿನಿಮಾದ ವೇದವನ್ನು ಅಖಂಡ ತೆಲುಗು ಪ್ರೇಕ್ಷಕರ ಎದುರು ಪ್ರಸ್ತುತಪಡಿಸಿದ್ದ ಎಂವಿಆರ್ ಕೃಷ್ಣ ಫಾರ್ ರಿಜಿಸ್ಟ್ರೇಷನ್ ಚಿತ್ರದ ಡಬ್ಬಿಂಗ್ ಹಕ್ಕು ಖರೀದಿ ಮಾಡಿದ್ದಾರೆ. ಸಿನಿಮಾ ಬಿಡುಗಡೆಗೂ ಮುನ್ನವೇ ಡಬ್ಬಿಂಗ್ ರೈಟ್ಸ್ ಸೇಲ್ ಆಗಿರುವುದು ಚಿತ್ರತಂಡ ಖುಷಿಯನ್ನು ದುಪ್ಪಟ್ಟು ಮಾಡಿದೆ.

ಟ್ರೇಲರ್ ಹಾಗೂ ಹಾಡಿನ ಮೂಲಕ ಆಮಂತ್ರಣ ಕೊಟ್ಟಿರುವ ಫಾರ್ ರಿಜಿಸ್ಟ್ರೇಷನ್ ಸಿನಿಮಾ ನಾಳೆ ತೆರೆಗೆ ಬರ್ತಿದೆ. ಸಂಬಂಧ ಮಹತ್ವ ಸಾರುವ ಈ ಚಿತ್ರದಲ್ಲಿ ರವಿಶಂಕರ್, ತಬಲಾ ನಾಣಿ, ಸುಧಾ ಬೆಳವಾಡಿ, ಬಾಬು ಹಿರಣಯ್ಯ, ಸ್ವಾತಿ, ರಮೇಶ್ ಭಟ್, ಉಮೇಶ್ ಸೇರಿದಂತೆ ಹಲವರು ತಾರಾ ಬಳಗದಲ್ಲಿದ್ದಾರೆ. ಚಿತ್ರಕಥೆ, ನಿರ್ದೇಶನ ನವೀನ್ ದ್ವಾರಕನಾಥ್ ನಿರ್ವಹಿಸಿದ್ದು, ಸಂಗೀತ ಸಂಯೋಜನೆ ಆರ್.ಕೆ ಹರೀಶ್, ಅಭಿಲಾಷ್ ಕಲಾತಿ, ಅಭಿಷೇಕ್ ಜಿ.ಕಾಸರಗೋಡು ಛಾಯಾಗ್ರಹಣ, ಮನು ಶೇಡ್ಗರ್ ಸಂಕಲನ ಚಿತ್ರಕ್ಕಿದೆ. ನಿಶ್ಚಲ್ ಫಿಲಂಸ್ ಬ್ಯಾನರ್ನಲ್ಲಿ ನವೀನ್ ರಾವ್ ಬಂಡವಾಳ ಹೂಡಿದ್ದಾರೆ. ಬಹಳ ದಿನಗಳ ನಂತರ ಮತ್ತೆ ವಿತರಣೆ ಅಖಾಡಕ್ಕೆ ಇಳಿದಿರುವ ದೀಪಕ್ ಗಂಗಾಧರ್ ಫಿಲಂಸ್ ಫಾರ್ ರಿಜಿಸ್ಟ್ರೇಷನ್ ಸಿನಿಮಾವನ್ನು ಫೆಬ್ರವರಿ 23ರಂದು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದೆ.

ಈ ಸುದ್ದಿಯನ್ನೂ ಓದಿ: For Registration Movie : ಸಂಬಂಧಗಳು ರಿಜಿಸ್ಟರ್ ಆಗುವಂತಹ ಸಿನಿಮಾ ʻFor Regn’ ಟ್ರೈಲರ್‌ ಔಟ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸಿನಿಮಾ

Ramayana Movie: ದೇಶದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಳ್ಳಲಿದೆ ʼರಾಮಾಯಣʼ; ಬಜೆಟ್‌ ನಿಮ್ಮ ಊಹೆಗೂ ನಿಲುಕದ್ದು

Ramayana Movie: ಸದ್ಯ ಚಿತ್ರ ಪ್ರೇಮಿಗಳ ಕುತೂಹಲ ಕೆರಳಿಸಿರುವ ಸಿನಿಮಾಗಳಲ್ಲಿ ರಾಮಾಯಣ ಕೂಡ ಒಂದು. ಬಾಲಿವುಡ್‌ನ ಖ್ಯಾತ ನಿರ್ದೇಶಕ ನಿತೇಶ್ ತಿವಾರಿ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ. ಕೆಜಿಎಫ್‌ ಸರಣಿ ಚಿತ್ರಗಳ ಮೂಲಕ ದೇಶದ ಗಮನ ಸೆಳೆದ ರಾಕಿ ಭಾಯಿ ಯಶ್‌ ರಾವಣನಾಗಿ ಈ ಸಿನಿಮಾ ಮೂಲಕ ಬಾಲಿವುಡ್‌ ಪ್ರವೇಶಿಸಲಿದ್ದಾರೆ ಎನ್ನಲಾಗುತ್ತಿದೆ. ಈ ಮಧ್ಯೆ ಸಿನಿಮಾ ಬಜೆಟ್‌ ಬಗ್ಗೆ ಹೊಸದೊಂದು ಅಪ್‌ಡೇಟ್‌ ಹೊರ ಬಿದ್ದಿದೆ. ಈ ಚಿತ್ರದ ಬಜೆಟ್‌ ಎಷ್ಟು ಗೊತ್ತೆ?

VISTARANEWS.COM


on

Ramayana Movie
Koo

ಮುಂಬೈ: ಸದ್ಯ ದೇಶಾದ್ಯಂತ ʼರಾಮಾಯಣʼ (Ramayana Movie) ಚಿತ್ರದ್ದೇ ಸದ್ದು. ಬಾಲಿವುಡ್‌ನ ಖ್ಯಾತ ನಿರ್ದೇಶಕ ನಿತೇಶ್ ತಿವಾರಿ (Nitesh Tiwari) ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಸಿನಿಮಾ ಬಹು ತಾರಾಗಣದ ಮೂಲಕವೇ ಸುದ್ದಿಯಾಗುತ್ತಿದೆ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತಯರಾಗುತ್ತಿರುವ ಈ ಚಿತ್ರದಲ್ಲಿ ರಾಮನಾಗಿ ರಣಬೀರ್‌ ಕಪೂರ್‌ (Ranbir Kapoor) ಮತ್ತು ಸೀತೆಯಾಗಿ ಸಾಯಿ ಪಲ್ಲವಿ (Sai Pallavi) ನಟಿಸುತ್ತಿದ್ದಾರೆ. ಈ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ ರಾಕಿಂಗ್‌ ಸ್ಟಾರ್‌ ಯಶ್‌ (Yash) ಬಾಲಿವುಡ್‌ಗೆ ಕಾಲಿಡುತ್ತಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಇನ್ನೂ ಅಧಿಕೃತ ಘೋಷಣೆಯಾಗಿಲ್ಲ. ಈ ಮಧ್ಯೆ ಸಿನಿಮಾ ಬಜೆಟ್‌ ಬಗ್ಗೆ ಹೊಸ ಅಪ್‌ಡೇಟ್‌ ಹೊರ ಬಿದ್ದಿದೆ.

ಬಜೆಟ್‌ ಎಷ್ಟು?

ʼರಾಮಾಯಣʼ ಸಿನಿಮಾ ಬರೋಬ್ಬರಿ 835 ಕೋಟಿ ರೂ. ವೆಚ್ಚದಲ್ಲಿ ತಯಾರಾಗುತ್ತಿದೆ ಎನ್ನುವ ಸುದ್ದಿ ಹಬ್ಬಿದೆ. ಈ ಮೂಲಕ ಭಾರತೀಯ ಸಿನಿರಂಗದಲ್ಲೇ ಅತೀ ದುಬಾರಿ ಚಿತ್ರ ಎನಿಸಿಕೊಳ್ಳಲಿದೆ. ʼʼರಾಮಾಯಣ ಕೇವಲ ಸಿನಿಮಾವಲ್ಲ. ಅದೊಂದು ಭಾವನೆ. ನಂಬಿಕೆ. ಹೀಗಾಗಿ ನಿರ್ಮಾಪಕರು ಈ ಚಿತ್ರದ ತಯಾರಿಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳುತ್ತಿಲ್ಲ. ದುಬಾರಿ ವೆಚ್ಚದಲ್ಲಿ ನಿರ್ಮಾಪಕರು ತೆರೆ ಮೇಲೆ ಮ್ಯಾಜಿಕ್‌ ಮಾಡಲು ಮುಂದಾಗಿದ್ದಾರೆʼʼ ಎಂದು ಮೂಲವೊಂದು ತಿಳಿಸಿದೆ.

ಈಗಾಗಲೇ ರಾಮಾಯಣ ಸಿನಿಮಾದ ಚಿತ್ರೀಕರಣ ಆರಂಭವಾಗಿದೆ. ಇತ್ತೀಚೆಗೆ ಶೂಟಿಂಗ್‌ನ ತುಣುಕೊಂಡು ಲೀಕ್‌ ಆಗಿ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ʼʼಚಿತ್ರದ ಬಜೆಟ್‌ 835 ಕೋಟಿ ರೂ.ಗೆ ತಲುಪಲಿದೆ. ಪೋಸ್ಟ್‌ ಪ್ರೊಡಕ್ಷನ್‌ಗೇ ಸುಮಾರು 600 ದಿನ ಬೇಕಾಗುತ್ತದೆ. ಈ ಮೂಲಕ ಜಾಗತಿಕ ಮಟ್ಟದಲ್ಲಿ ಭಾರತೀಯ ಸಿನಿಮಾವೊಂದು ರಾರಾಜಿಸಲಿದೆʼʼ ಎಂದು ವರದಿಯೊಂದರಲ್ಲಿ ವಿವರಿಸಲಾಗಿದೆ.

ಅತ್ಯಂತ ದುಬಾರಿ ಚಿತ್ರ

ಪ್ರಭಾಸ್‌ ಅಭಿನಯದ, ಕಳೆದ ವರ್ಷ ತೆರೆಕಂಡ ʼಆದಿಪುರುಷ್‌ʼ ಸಿನಿಮಾ ಇದುವರೆಗಿನ ಅತ್ಯಂತ ವೆಚ್ಚದ ಸಿನಿಮಾ ಎನಿಸಿಕೊಂಡಿತ್ತು. ರಾಮಾಯಣವನ್ನು ಆಧರಿಸಿದ ಇದು ಸುಮಾರು 700 ಕೋಟಿ ರೂ. ಬಜೆಟ್‌ನಲ್ಲಿ ತಯಾರಾಗಿತ್ತು ಎನ್ನಲಾಗಿದೆ. ಎರಡನೇ ಸ್ಥಾನದಲ್ಲಿ ಪ್ರಭಾಸ್‌ ಅವರದ್ದೇ ʼಕಲ್ಕಿ 2898 ಎಡಿʼ ಸಿನಿಮಾ ಇದೆ. ದೀಪಿಕಾ ಪಡುಕೋಣೆ ನಾಯಕಿಯಾಗಿರುವ ಇದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿದ್ದು, ಈ ಚಿತ್ರದ ಬಜೆಟ್‌ ಸುಮಾರು 600 ಕೋಟಿ ರೂ. ಇನ್ನು ರಜನಿಕಾಂತ್‌ ನಟಿಸಿದ್ದ ʼ2.0ʼ ಚಿತ್ರಕ್ಕೆ 570 ಕೋಟಿ ರೂ. ವೆಚ್ಚವಾಗಿತ್ತು. ಹೀಗಾಗಿ ʼರಾಮಾಯಣʼ ಇದುವರೆಗಿನ ದುಬಾರಿ ಸಿನಿಮಾ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಇದು ಸುಮಾರು 3 ಭಾಗಗಳಲ್ಲಿ ತೆರೆಗೆ ಬರಲಿದೆ ಎನ್ನುವ ಸುದ್ದಿಯೂ ಇದೆ.

ಯಶ್‌ ನಟಿಸುತ್ತಾರಾ?

ʼಕೆಜಿಎಫ್‌ʼ ಸರಣಿ ಸಿನಿಮಾ ಮೂಲಕ ದೇಶದ ಗಮನ ಸೆಳೆದ ಸ್ಯಾಂಡಲ್‌ವುಡ್‌ ನಟ ಯಶ್‌ ರಾಮಾಯಣ ಸಿನಿಮಾದಲ್ಲಿ ರಾವಣನನಾಗಿ ಅಬ್ಬರಿಸಲಿದ್ದಾರೆ. ಅದಕ್ಕಾಗಿ ದುಬಾರಿ ಸಂಭಾವನೆಯನ್ನೇ ಪಡೆದುಕೊಂಡಿದ್ದಾರೆ ಎನ್ನುವ ಸುದ್ದಿ ಹರಡಿದೆ. ಇದರ ಜತೆಗೆ ಯಶ್‌ ನಟಿಸುತ್ತಿಲ್ಲ, ಬದಲಾಗಿ ಚಿತ್ರ ನಿರ್ಮಾಣದಲ್ಲಿ ಕೈ ಜೋಡಿಸುತ್ತಿದ್ದಾರೆ ಎಂದೂ ಹೇಳಲಾಗುತ್ತಿದೆ. ಆದರೆ ಇದುವರೆಗೆ ಈ ಬಗ್ಗೆ ಚಿತ್ರತಂಡವಾಗಲೀ, ಯಶ್‌ ಕಡೆಯಿಂದಾಗಲೀ ಸ್ಪಷ್ಟನೆ ದೊರೆತಿಲ್ಲ.

ಇದನ್ನೂ ಓದಿ: Ramayana Movie: ರಾಮಾಯಣ’ ಸಿನಿಮಾದ ರಣ್‌ಬೀರ್, ಸಾಯಿ ಪಲ್ಲವಿ ಲುಕ್ ಲೀಕ್

ದಶರಥನಾಗಿ ಅರುಣ್‌ ಗೋವಿಲ್, ಹನುಮಂತನಾಗಿ ಸನ್ನಿ ಡಿಯೋಲ್ ನಟಿಸುತ್ತಾರೆ ಎನ್ನಲಾಗುತ್ತಿದೆ. ರಾವಣನ ಸಹೋದರಿ ಶೂರ್ಪನಖಿಯಾಗಿ ರಕುಲ್‌ಪ್ರೀತ್ ಸಿಂಗ್ ನಟಿಸುತ್ತಾರೆ ಎಂದು ವರದಿಯಾಗಿದೆ. ಸದ್ಯ ಯಶ್ ಮತ್ತೊಂದು ಬಹು ನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ.

Continue Reading

ಬಾಲಿವುಡ್

Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; 6ನೇ ಆರೋಪಿಯ ಬಂಧನ

Salman Khan: ಕೆಲವು ದಿನಗಳ ಹಿಂದೆ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರ ಮನೆ ಮುಂದೆ ಫೈರಿಂಗ್‌ ಮಾಡಿದ ಪ್ರಕರಣದಲ್ಲಿ ಪೊಲೀಸರು 6ನೇ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು 37 ವರ್ಷದ ಹರ್ಪಾಲ್‌ ಸಿಂಗ್‌ ಎಂದು ಗುರುತಿಸಲಾಗಿದೆ. ಈತನನ್ನು ಹರಿಯಾಣದ ಫತೇಹಾಬಾದ್‌ನಿಂದ ವಶಕ್ಕೆ ಪಡೆಯಲಾಗಿದ್ದು, ಈತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Salman Khan
Koo

ಮುಂಬೈ: ಇತ್ತೀಚೆಗೆ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ (Salman Khan) ನಿವಾಸದ ಎದುರು ಗುಂಡಿನ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದ ಆರನೇ ಆರೋಪಿಯನ್ನು ಹರಿಯಾಣದಲ್ಲಿ ಬಂಧಿಸಲಾಗಿದೆ. ತನಿಖೆ ನಡೆಸುತ್ತಿರುವ ಮುಂಬೈ ಕ್ರೈಂ ಬ್ರ್ಯಾಂಚ್‌ ಹರಿಯಾಣದ ಫತೇಹಾಬಾದ್‌ನಿಂದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯನಾದ ಆರನೇ ಆರೋಪಿಯನ್ನು ಬಂಧಿಸಿದೆ. ಬಂಧಿತ ಆರೋಪಿಯನ್ನು 37 ವರ್ಷದ ಹರ್ಪಾಲ್‌ ಸಿಂಗ್‌ ಎಂದು ಗುರುತಿಸಲಾಗಿದೆ.

ʼʼಹರ್ಪಾಲ್‌ ಸಿಂಗ್‌ನನ್ನು ಆತನ ಊರಾದ ಫತೇಹಾಬಾದ್‌ನಿಂದ ಬಂಧಿಸಲಾಗಿದೆ. ಮುಂಬೈ ಕ್ರೈಂ ಬ್ರ್ಯಾಂಚ್‌ನ ಅಧಿಕಾರಿಗಳ ತಂಡ ಸೋಮವಾರ ರಾತ್ರಿ ಆಗಮಿಸಿದ ಆತನನ್ನು ವಶಕ್ಕೆ ಪಡೆದುಕೊಂಡಿದೆʼʼ ಎಂದು ಮೂಲಗಳು ತಿಳಿಸಿವೆ. ಹರ್ಪಾಲ್‌ ಸಿಂಗ್‌ನನ್ನು ಮಂಗಳವಾರ ಬೆಳಿಗ್ಗೆ ಮುಂಬೈಗೆ ಕರೆತರಲಾಗಿದ್ದು, ನಂತರ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (MCOCA) ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಇದುವರೆಗೆ 6 ಮಂದಿಯನ್ನು ಬಂಧಿಸಿದಂತಾಗಿದೆ.

ಈ ಹಿಂದೆ ಆರಂಭದಲ್ಲಿ ಪೊಲೀಸರು ಪಂಜಾಬ್‌ ಮೂಲದ ಇಬ್ಬರನ್ನು ಬಂಧಿಸಿದ್ದರು. ಬಳಿಕ ಗುಜರಾತ್‌ನಿಂದ ಇಬ್ಬರನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ರಾಜಸ್ಥಾನದ ಓರ್ವ ಬಲೆಗೆ ಬಿದ್ದಿದ್ದ.

ಏನಿದು ಪ್ರಕರಣ?

ಎಪ್ರಿಲ್‌ 14ರಂದು ಮುಂಬೈಯ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆದಿತ್ತು. ಬೈಕ್‌ನಲ್ಲಿ ಬಂದು ದಾಳಿ ನಡೆಸಿದ್ದ ಶೂಟರ್‌ಗಳಾದ ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಎಂಬ ಇಬ್ಬರು ದುಷ್ಕರ್ಮಿಗಳನ್ನು ಬಳಿಕ ಅರೆಸ್ಟ್‌ ಮಾಡಲಾಗಿತ್ತು. ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಘೋಷಿಸಿದ್ದರು.

ಈ ಮಧ್ಯೆ ಗುಂಡಿನ ದಾಳಿ ನಡೆಸಿದ್ದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಆರೋಪ ಎದುರಿಸುತ್ತಿದ್ದ ಅನೂಜ್‌ ಥಾಪನ್‌ ಕೆಲವು ದಿನಗಳ ಹಿಂದೆ ಪೊಲೀಸ್‌ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದ. ಅನುಜ್ ಥಾಪನ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಆತನ ಕುಟುಂಬ ಇದರ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿತ್ತು. ಲಾಕಪ್‌ನಲ್ಲಿ ಥಾಪನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದರೆ ಆತನ ತಾಯಿ ಇದು ಕೊಲೆ ಎಂದು ಆರೋಪಿಸಿದ್ದರು.

ಕಾರಣವೇನು?

ಹಲವು ವರ್ಷಗಳ ಹಿಂದಿನ ಕೃಷ್ಣಮೃಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್‌ ಅವರನ್ನು ಕೊಲ್ಲುವುದಾಗಿ 2018 ರಲ್ಲಿ ಬೆದರಿಕೆ ಹಾಕಿದ ನಂತರ ಬಿಷ್ಣೋಯ್ ಅವರ ಸಹಾಯಕರಲ್ಲಿ ಒಬ್ಬನನ್ನು ಬಂಧಿಸಲಾಯಿತು. ಜೋಧಪುರ್​ನ ಬಿಷ್ಣೋಯ್​ಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ ಕೃಷ್ಣಮೃಗ ಕೊಲ್ಲುವುದನ್ನು ಬಿಷ್ಣೋಯ್​ಗಳು ಎಂದಿಗೂ ಸಹಿಸುವುದಿಲ್ಲ. ಈ ಕಾರಣಕ್ಕೆ ಸಲ್ಮಾನ್ ಖಾನ್ ಹತ್ಯೆ ಮಾಡಲು ಲಾರೆನ್ಸ್ ಬಿಷ್ಣೋಯ್ ನಿರ್ಧರಿಸಿದ್ದ. ಎಬಿಪಿ ನ್ಯೂಸ್‌ಗೆ ನೀಡಿದ ಇತ್ತೀಚಿನ ಸಂದರ್ಶನದಲ್ಲಿ, ʻʻಸಲ್ಮಾನ್ ಖಾನ್ ಅವರನ್ನು ಕೊಲ್ಲುವುದು ನನ್ನ ಜೀವನದ ಗುರಿ. ಸಲ್ಮಾನ್‌ ಅವರು ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ವಿಷಯ ಕೊನೆಗೊಳ್ಳುತ್ತದೆʼʼ ಎಂದು ಹೇಳಿದ್ದ.

ಇದನ್ನೂ ಓದಿ: Salman Khan : ಸಲ್ಮಾನ್​ ಮನೆ ಬಳಿ ಗುಂಡಿನ ದಾಳಿ; ಪಂಜಾಬ್​​ನಲ್ಲಿ ಗನ್​ ಕೊಟ್ಟವರಿಬ್ಬರ ಬಂಧನ

Continue Reading

ಸಿನಿಮಾ

Kalki 2898 AD: ʼಕಲ್ಕಿʼ ಚಿತ್ರಕ್ಕಾಗಿ ಕನ್ನಡದಲ್ಲಿ ಡಬ್‌ ಮಾಡಲಿದ್ದಾರೆ ದೀಪಿಕಾ ಪಡುಕೋಣೆ

Kalki 2898 AD: ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳ ಪೈಕಿ ʼಕಲ್ಕಿ 2898 ಎಡಿʼ ಕೂಡ ಒಂದು. ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಬಹು ತಾರಾಗಣ ಹೊಂದಿರುವ ಚಿತ್ರ ಜೂನ್ 27ರಂದು ತೆರೆಗೆ ಬರಲಿದೆ. ಪ್ಯಾನ್‌ ಇಂಡಿಯಾ ಚಿತ್ರವಾಗಿ ತೆರೆಗೆ ಬರಲಿರುವ ಈ ಸಿನಿಮಾದ ಕನ್ನಡ ಮತ್ತು ಹಿಂದಿ ಅವತರಣಿಕೆಯ ತಮ್ಮ ಪಾತ್ರಕ್ಕೆ ನಾಯಕಿ ದೀಪಿಕಾ ಪಡುಕೋಣೆ ಸ್ವತಃ ಡಬ್‌ ಮಾಡಲಿದ್ದಾರೆ ಎನ್ನಲಾಗಿದೆ. ಮೂಲತಃ ಕರ್ನಾಟಕವರಾದ ದೀಪಿಕಾ 2006ರಲ್ಲಿ ತೆರೆಕಂಡ ಉಪೇಂದ್ರ ಅಭಿನಯದ ಕನ್ನಡದ ʼಐಶ್ವರ್ಯಾʼ ಚಿತ್ರದ ಮೂಲಕ ದೀಪಿಕಾ ಬಣ್ಣದ ಲೋಕ ಪ್ರವೇಶಿಸಿದ್ದರು. ಬಳಿಕ ಕನ್ನಡತ್ತ ಮುಖ ಮಾಡಿರಲಿಲ್ಲ. ಈದೀಗ ಅವರು ಕನ್ನಡದಲ್ಲಿ ಡಬ್‌ ಮಾಡಲಿದ್ದಾರೆ ಎನ್ನುವ ವಿಚಾರ ತಿಳಿದು ಅಭಿಮಾನಿಗಳು ಥ್ರಿಲ್‌ ಆಗಿದ್ದಾರೆ.

VISTARANEWS.COM


on

Kalki 2898 AD
Koo

ಮುಂಬೈ: ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳ ಪೈಕಿ ʼಕಲ್ಕಿ 2898 ಎಡಿʼ (Kalki 2898 AD) ಕೂಡ ಒಂದು. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ಇದು ಈ ವರ್ಷದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಂಡಿದೆ. ಟಾಲಿವುಡ್‌ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ ಬ್ಯೂಟಿ ದೀಪಿಕಾ ಪಡುಕೋಣೆ (Prabhas-Deepika Padukone) ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಕುತೂಹಲ ಮೂಡಿಸಿದೆ. ಇವರ ಜತೆಗೆ ಘಟಾನುಘಟಿ ಕಲಾವಿದರಾದ ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌ (Amitabh Bachchanಮತ್ತು ಕಮಲ್‌ ಹಾಸನ್‌ (Kamal Haasan) ಕೂಡ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದೀಗ ಚಿತ್ರದ ಬಗ್ಗೆ ಮಹತ್ವದ ಅಪ್‌ಡೇಟ್‌ ಹೊರ ಬಿದ್ದಿದ್ದು, ಕನ್ನಡ ಅವತರಣಿಕೆಯಲ್ಲಿ ತಮ್ಮ ಪಾತ್ರಕ್ಕೆ ದೀಪಿಕಾ ಪಡುಕೋಣೆ ಸ್ವತಃ ಡಬ್‌ ಮಾಡಲಿದ್ದಾರೆ ಎನ್ನಲಾಗಿದೆ.

ವಿವಿಧ ಭಾಷೆಗಳಲ್ಲಿ ʼಕಲ್ಕಿ 2898 ಎಡಿʼ ಸಿನಿಮಾ ತೆರೆಗೆ ಬರಲಿದೆ. ಈ ಪೈಕಿ ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ತಮ್ಮ ಪಾತ್ರಕ್ಕೆ ಸ್ವತಃ ದೀಪಿಕಾ ಅವರೇ ಡಬ್‌ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 2006ರಲ್ಲಿ ತೆರೆಕಂಡ ಉಪೇಂದ್ರ ಅಭಿನಯದ ಕನ್ನಡದ ʼಐಶ್ವರ್ಯಾʼ ಚಿತ್ರದ ಮೂಲಕ ದೀಪಿಕಾ ಬಣ್ಣದ ಲೋಕ ಪ್ರವೇಶಿಸಿದ್ದರು. ಅದರ ಬಳಿಕ ಅವರು ಕನ್ನಡ ಸಿನಿಮಾದಲ್ಲಿ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಅವರು ಕನ್ನಡದಲ್ಲಢ ಡಬ್‌ ಮಾಡಿರುತ್ತಿರುವ ವಿಚಾರ ಕೇಳಿ ಅಭಿಮಾನಿಗಳು ಥ್ರಿಲ್‌ ಆಗಿದ್ದಾರೆ.

ಜೂನ್‌ 27ರಂದು ಬಿಡುಗಡೆ

ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಬಹು ತಾರಾಗಣ ಹೊಂದಿರುವ ಚಿತ್ರ ಜೂನ್ 27ರಂದು ತೆರೆಗೆ ಬರಲಿದೆ. ಮೊದಲಿಗೆ ಮೇ 9ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿತ್ತು. ಆದರೆ ಚುನಾವಣೆಯ ಕಾರಣ ಸಿನಿಮಾ ರಿಲೀಸ್‌ ಡೇಟ್‌ವನ್ನು ಮುಂದೂಡಲಾಗಿತ್ತು. ಸದ್ಯ ಚಿತ್ರೀಕರಣ ಪೂರ್ಣಗೊಳಿಸಿರುವ ತಂಡ ಪೋಸ್ಟ್‌ ಪ್ರೊಡಕ್ಷನ್‌ ಕಾರ್ಯದಲ್ಲಿ ನಿರತವಾಗಿದೆ.

ಮೊದಲ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ ಮೊದಲೇ ಒಪ್ಪಂದ ಮಾಡಿಕೊಂಡಂತೆ ಈ ತಿಂಗಳಲ್ಲಿ ಪ್ರೊಮೊಷನ್‌ ನಡೆಸಿಕೊಂಡಲಿದ್ದಾರೆ. ಅದರ ಭಾಗವಾಗಿ ವಿವಿಧ ಮಾಧ್ಯಮಗಳು ಅವರ ಸಂದರ್ಶನವನ್ನು ಚಿತ್ರೀಕರಿಸಲು ತಯಾರಿ ನಡೆಸಿವೆ ಎನ್ನಲಾಗಿದೆ. ಇದರ ಜತೆಗೆ ಡಬ್ಬಿಂಗ್‌ ಅನ್ನೂ ಅವರು ಪೂರ್ಣಗೊಳಿಸಲಿದ್ದಾರೆ. ಸೆಪ್ಟಂಬರ್‌ನಲ್ಲಿ ಮಗು ಜನಿಸುವ ನಿರೀಕ್ಷೆ ಇದ್ದು, ಬಾಕಿ ಇರುವ ಸಿನಿಮಾ ಚಟುವಟಿಕೆಗಳನ್ನೆಲ್ಲ ನಡೆಸಿ ದೀಪಿಕಾ ಜೂನ್‌ ಬಳಿಕ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿದೆ.

ಅಶ್ವತ್ಥಾಮನಾಗಿ ಗಮನ ಸೆಳೆದ ಅಮಿತಾಭ್‌

ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿರುವ ʼಕಲ್ಕಿ 2898 ಎಡಿʼ ಚಿತ್ರದಲ್ಲಿ ಹಿರಿಯ ನಟ ಅಮಿತಾಭ್‌ ಬಚ್ಚನ್‌ ಅವರು ಅಶ್ವತ್ಥಾಮನಾಗಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಅವರ ಲುಕ್‌ ರಿಲೀಸ್‌ ಆಗಿದ್ದು, ಪ್ರೇಕ್ಷಕರ ಗಮನ ಸೆಳೆದಿದೆ. ಏ. 21ರಂದು ಚಿತ್ರತಂಡ ಅಮಿತಾಭ್‌ ಅವರ ಪಾತ್ರವನ್ನು ರಿವೀಲ್‌ ಮಾಡಿದೆ. ಜತೆಗೆ ಶಿವರಾತ್ರಿಯಂದು ಪ್ರಭಾಸ್‌ ಅವರ ಫಸ್ಟ್‌ಲುಕ್‌ ಬಿಡುಗಡೆ ಮಾಡಲಾಗಿತ್ತು. ಇದು ಕೂಡ ಅಭಿಮಾನಿಗಳನ್ನು ಆಕರ್ಷಿಸಿದ್ದು, ಚಿತ್ರದ ಮೇಲಿನ ನಿರೀಕ್ಷೆ ಇನ್ನಷ್ಟು ಹೆಚ್ಚಿಸಿದೆ.

ಇದನ್ನೂ ಓದಿ: Kalki 2898 – AD: ʻಪ್ರಾಜೆಕ್ಟ್‌ ಕೆʼ ಸಿನಿಮಾ ಟೈಟಲ್‌ ರಿವೀಲ್‌; ಪ್ರಭಾಸ್‌, ದೀಪಿಕಾ, ಅಮಿತಾಭ್‌ ಲುಕ್‌ ಔಟ್‌!

ವೈಜಯಂತಿ ಮೂವೀಸ್‌ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಬಾಲಿವುಡ್‌ ನಟಿ ದಿಶಾ ಪಠಾಣಿ ಕೂಡ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಚಿತ್ರದ ಬಗ್ಗೆ ಮಾತನಾಡಿದ್ದ ನಾಗ್‌ ಚೈತ್ಯನ್ಯ, ʼʼಈ ಸಿನಿಮಾದ ಕಥೆ ಮಹಾಭಾರತದ ಕಾಲಘಟ್ಟಲ್ಲಿ ಆರಂಭವಾಗಿ ಕ್ರಿ.ಶ. 2898ರಲ್ಲಿ ಕೊನೆಗೊಳ್ಳಲಿದೆ. ಆ ಮೂಲಕ ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿದ್ದೇವೆ. ಇದಕ್ಕಾಗಿ ಬಹಳಷ್ಟು ಶ್ರಮ ವಹಿಸಿದ್ದೇವೆʼʼ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದರು.

Continue Reading

ಕರ್ನಾಟಕ

Vidyarthi Vidyarthiniyare Movie: ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೈಲರ್ ಔಟ್; ಧುಮ್ಮಿಕ್ಕಿದ ಹರೆಯದ ತೊರೆ!

Vidyarthi Vidyarthiniyare Movie: ರ‍್ಯಾಪರ್ ಚಂದನ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ʼವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಟ್ರೈಲರ್‌ ರಿಲೀಸ್‌ ಆಗಿದೆ. ಕಾಲೇಜು ಹುಡುಗ, ಹುಡುಗಿಯರ ಹದಿ ಹರೆಯದ ಹುಚ್ಚು ಮನಸ್ಸಿನ ಹೊಯ್ದಾಟವನ್ನು ಇಲ್ಲಿ ತೆರೆದಿಡಲಾಗಿದೆ.

VISTARANEWS.COM


on

Vidyarthi Vidyarthiniyare Movie
Koo

ಬೆಂಗಳೂರು: ರ‍್ಯಾಪರ್ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ʼವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare Movie) ಚಿತ್ರವು ಶೀರ್ಷಿಕೆಯಲ್ಲಿಯೇ ಟೀನೇಜ್ ಸ್ಟೋರಿಯ ಕಂಪು ಹೊಂದಿದ್ದು, ಈಗಾಗಲೇ ನಾನಾ ಕ್ರೀಯಾಶೀಲ ಚಟುವಟಿಕೆಗಳ ಮೂಲಕ ಪ್ರೇಕ್ಷಕರನ್ನು ತಲುಪಿತ್ತು. ಆ ಕಾರಣದಿಂದಲೇ ಎಲ್ಲರೂ ಟ್ರೈಲರ್‌ನತ್ತ ದೃಷ್ಟಿ ನೆಟ್ಟಿದ್ದರು. ಇದೀಗ ಚಿತ್ರತಂಡ ಯುವ ಆವೇಗದಿಂದ ತೊನೆದಾಡುತ್ತಿರುವಂತೆ ಭಾಸವಾಗುವ ಟ್ರೈಲರ್ ಅನ್ನು ಬಿಡುಗಡೆಗೊಳಿಸಿದೆ. ಅದರೊಳಗೆ ಹದಿಹರೆಯದ ಮನಸುಗಳ ನಾನಾ ಮಗ್ಗುಲುಗಳು ಹರೆಯದ ತೊರೆಯೊಂದಿಗೆ ಧುಮ್ಮಿಕ್ಕಿ ಹರಿದಿವೆ. ಈ ಟ್ರೈಲರ್ ಅನ್ನು ಸೈಡ್ ಎ ಅಂತ ಹೆಸರಿಸಲಾಗಿದೆ. ಇದನ್ನು ನೋಡುತ್ತಲೇ ಒಟ್ಟಾರೆ ಸಿನಿಮಾದಲ್ಲೇನೋ ಇದೆಯೆಂಬ ಗಟ್ಟಿಯಾದ ಭರವಸೆ ತಂತಾನೇ ಮೂಡುತ್ತದೆ. ಸೈಡ್ ಬಿ ಟ್ರೈಲರ್‌ಗಾಗಿ ಕಾತರವೂ ಮೂಡಿಕೊಳ್ಳುತ್ತೆ. ಅಷ್ಟರಮಟ್ಟಿಗೆ ಈ ಟ್ರೈಲರ್ ಪರಿಣಾಮಕಾರಿಯಾಗಿ ಮೂಡಿ ಬಂದಿದೆ!

ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಟೈಟಲ್ಲೇ ಹೇಳುವಂತೆ ಯೂತ್ಸ್ ಸಬ್ಜೆಕ್ಟ್ ಸಿನಿಮಾ. ಕಾಲೇಜು ಹುಡುಗ, ಹುಡುಗಿಯರ, ಹದಿ ಹರೆಯದ ಹುಚ್ಚು ಮನಸ್ಸಿನ ಹೊಯ್ದಾಟವನ್ನು ಇಲ್ಲಿ ತೆರೆದಿಡಲಾಗಿದೆ. ಹಾಗಂತ ಇದು ಮಾಮೂಲಿಯಾಗೂ ಇದು ಸಿದ್ಧಸೂತ್ರದ ಚೌಕಟ್ಟಿಗೊಳಪಟ್ಟಿಲ್ಲ ಅನ್ನೋದು ಟ್ರೈಲರ್ ಎಳೆಯಲ್ಲಿ ಸ್ಪಷ್ಟವಾಗುತ್ತದೆ. ಹೊಡೆದಾಟ, ಬಡಿದಾಟ, ರ‍್ಯಾಗಿಂಗ್, ಬಿಸಿ ರಕ್ತದ ಹುಡುಗರ ಪುಂಡಾಟಿಕೆ ಸೇರಿ ಇಲ್ಲಿ ಎಲ್ಲವೂ ಇದೆ. ಅದರ ಜೊತೆ ಜೊತೆಗೇ ಶೈಕ್ಷಣಿಕ ಪರಿಸರದ ಕ್ರೌರ್ಯದ ಮುಖವೊಂದನ್ನು ಬಯಲಾಗಿಸುವ ಪ್ರಯತ್ನವೂ ಗಮನ ಸೆಳೆಯುವಂತಿದೆ. ಮೋಜು ಮಸ್ತಿಯಲ್ಲಿ ಮೈಮರೆತ ಮನಸ್ಥಿತಿಗಳ ಕಥೆಯ ಸೂಚನೆಯಿದೆ. ಹಿಡಿತ ತಪ್ಪಿದ ಮಕ್ಕಳನ್ನು ಹಾದಿಗೆ ತರುವ ಯತ್ನವೂ ಇದೆ. ಪ್ರಸ್ತುತ ಕಾಲದ ಟೀನೇಜ್ ಹುಡುಗರ ಕಹಾನಿಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದೆ ಟ್ರೈಲರ್.

ಚಂದನ್ ಶೆಟ್ಟಿ ಈ ಚಿತ್ರದ ಮೂಲಕ ಡಿಫರೆಂಟಾಗಿ ಕಾಣಿಸಲಿದ್ದಾರೆಂಬ ನಿಖರ ಮಾಹಿತಿಯನ್ನು ನಿರ್ದೇಶಕ ಅರುಣ್ ಅಮುಕ್ತ ನೀಡುತ್ತಾ ಬಂದಿದ್ದಾರೆ. ಅವರ ಪಾತ್ರವನ್ನು ಅಷ್ಟೇ ಗೌಪ್ಯವಾಗಿ ಕಾಪಾಡಿಕೊಂಡು ಸಿನಿಮಾ ಮೇಲಿನ ಕುತೂಹಲವನ್ನು ಹೆಚ್ಚಿಸಿದೆ ಚಿತ್ರತಂಡ. ಒಟ್ಟಾರೆಯಾಗಿ ಟ್ರೈಲರ್ ನೋಡಿದರೆ ನಿರ್ದೇಶಕರು ಹೊಸದೇನನ್ನೋ ಹೇಳುವ ಪ್ರಯತ್ನ ಮಾಡಿದ್ದಾರೆ ಅನ್ನೋದು ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ. ಅರುಣ್ ಅಮುಕ್ತ ಅತ್ಯಂತ ಆಸ್ಥೆಯಿಂದ ಈ ಸಿನಿಮಾವನ್ನು ರೂಪಿಸಿದ್ದಾರೆಂಬುದಕ್ಕೂ ಕೂಡ ಈ ಟ್ರೈಲರಿನಲ್ಲಿ ಸಾಕ್ಷಿಗಳಿವೆ. ಕಾಲೇಜು ಕೇಂದ್ರಿತ ಕಥೆ ಅಂದಾಕ್ಷಣ ಒಂದು ಕಲ್ಪನೆ ಮೊಳೆತುಕೊಳ್ಳುತ್ತದೆ. ಅದನ್ನು ಮೀರಿದ ಆತ್ಮದೊಂದಿಗೆ ಅರುಣ್ ಅಮುಕ್ತ ಈ ಸಿನಿಮಾವನ್ನು ದೃಷ್ಯೀಕರಿಸಿರುವ ಲಕ್ಷಣಗಳಿವೆ. ಈವರೆಗೂ ಹಂತ ಹಂತವಾಗಿ ಕಾಯ್ದುಕೊಂಡಿದ್ದ ಕುತೂಹಲವನ್ನು ಈ ಸೈಡ್ ಎ ಟ್ರೈಲರ್ ಸಾರ್ಥಕಗೊಳಿಸಿದೆ.

ಇದನ್ನೂ ಓದಿ | Turbo Trailer Out: ಮಮ್ಮುಟ್ಟಿ ನಟನೆಯ ‘ಟರ್ಬೋ’ ಟ್ರೈಲರ್‌ ಔಟ್‌: ರಾಜ್‌ ಬಿ ಶೆಟ್ಟಿ ಖದರ್‌ಗೆ ಫ್ಯಾನ್ಸ್‌ ಫಿದಾ!

ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್ ಜಿ. ಕಶ್ಯಪ್ ಕಾರ್ಯಕಾರಿ ನಿರ್ಮಾಪಕ, ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ ಅರುಣ್ ಸುರೇಶ್ ಈ ಹಾಡಿಗೆ ಛಾಯಾಗ್ರಹಣ ಮಾಡಿದ್ದಾರೆ. ಚಂದನ್ ಶೆಟ್ಟಿ , ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

Continue Reading
Advertisement
I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20244 mins ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

pm narendra modi nomination
ಪ್ರಮುಖ ಸುದ್ದಿ12 mins ago

PM Narendra Modi: ಪಿಎಂ ಮೋದಿ ನಾಮಪತ್ರ ಅನುಮೋದಿಸಿದ ನಾಲ್ವರ ಹಿನ್ನೆಲೆ ಏನು?

Viral Video
Latest19 mins ago

Viral Video: ಇಲ್ಲಿ ಸಿಗೋದು ಡಿಸೇಲ್ ಪರಾಠಾ!

Love Failure
ಬೆಂಗಳೂರು ಗ್ರಾಮಾಂತರ21 mins ago

Love Failure : ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

HD Revanna Bail I am not happy that Revanna has been released says HD Kumaraswamy
ರಾಜಕೀಯ41 mins ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

Bomb threat
ದೇಶ43 mins ago

Bomb Threat: ದಿಲ್ಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮೂಲಕ ಸಂದೇಶ ರವಾನೆ

T20 World Cup 2024
ಕ್ರಿಕೆಟ್47 mins ago

T20 World Cup 2024: ನೆದರ್ಲೆಂಡ್ಸ್‌ ಟಿ20 ವಿಶ್ವಕಪ್ ತಂಡದಲ್ಲಿ ಮೂವರು ಭಾರತೀಯ ಆಟಗಾರರಿಗೆ ಸ್ಥಾನ

Davanagere News Marriage at an early age
ದಾವಣಗೆರೆ47 mins ago

Davanagere News : ಇಳಿ ವಯಸ್ಸಿನಲ್ಲಿ ಕೂಡಿ ಬಂದ ಕಂಕಣ ಭಾಗ್ಯ; ದೂರಾಯಿತು ಒಂಟಿತನ

Ramayana Movie
ಸಿನಿಮಾ49 mins ago

Ramayana Movie: ದೇಶದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಳ್ಳಲಿದೆ ʼರಾಮಾಯಣʼ; ಬಜೆಟ್‌ ನಿಮ್ಮ ಊಹೆಗೂ ನಿಲುಕದ್ದು

gold rate today
ಚಿನ್ನದ ದರ57 mins ago

Gold Rate Today: ಬಂಗಾರದ ಬೆಲೆ ಇನ್ನೂ ಇಳಿಕೆ; ಇಂದಿನ ಮಾರುಕಟ್ಟೆ ದರಗಳನ್ನು ಇಲ್ಲಿ ಗಮನಿಸಿಕೊಳ್ಳಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20244 mins ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ41 mins ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ8 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ19 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ19 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ19 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ20 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ20 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಟ್ರೆಂಡಿಂಗ್‌