Yadgiri News: ಯಾದಗಿರಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಲಿಂ.ವಿಶ್ವನಾಥರಡ್ಡಿ ಕಂಚಿನ ಪುತ್ಥಳಿ‌ ಅನಾವರಣ - Vistara News

ಯಾದಗಿರಿ

Yadgiri News: ಯಾದಗಿರಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಲಿಂ.ವಿಶ್ವನಾಥರಡ್ಡಿ ಕಂಚಿನ ಪುತ್ಥಳಿ‌ ಅನಾವರಣ

Yadgiri News: ಯಾದಗಿರಿಯಲ್ಲಿ ಮುದ್ನಾಳ ಅಭಿಮಾನಿಗಳ ಬಳಗದಿಂದ ಶುಕ್ರವಾರ ನಗರದ ಜಿಲ್ಲಾಡಳಿತ ಭವನದ‌ ಸಮೀಪ ನಿರ್ಮಿಸಿರುವ ಲಿಂ.ವಿಶ್ವನಾಥರಡ್ಡಿ ಮುದ್ನಾಳರ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮ ಜರುಗಿತು.

VISTARANEWS.COM


on

lingaikya vishwanatharaddi mudnala bronze statue unveiled at yadgiri
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಾದಗಿರಿ: ಸಮಕಾಲೀನ ರಾಜಕಾರಣಿಗಳಿಗೆ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಮಾಜಿ ಸಚಿವರಾಗಿದ್ದ ಲಿಂ.ವಿಶ್ವನಾಥರಡ್ಡಿ ಮುದ್ನಾಳ ಮಾದರಿಯಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ (Yadgiri News) ಬಣ್ಣಿಸಿದರು.

ಮುದ್ನಾಳ ಅಭಿಮಾನಿಗಳ ಬಳಗದಿಂದ ಶುಕ್ರವಾರ ನಗರದ ಜಿಲ್ಲಾಡಳಿತ ಭವನದ‌ ಸಮೀಪ ನಿರ್ಮಿಸಿರುವ ಲಿಂ.ವಿಶ್ವನಾಥರಡ್ಡಿ ಮುದ್ನಾಳರ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ, ಅವರು ಮಾತನಾಡಿದರು.

ಅಂದಿನ ರಾಜಕಾರಣಕ್ಕೂ ಈಗಿನ ರಾಜಕಾರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಅಂದು ಚುನಾವಣೆ ಮಾಡಬೇಕಾದರೆ ಹಣ ಮುಖ್ಯವಾಗಿರಲಿಲ್ಲ.‌ ವ್ಯಕ್ತಿತ್ವ ಮುಖ್ಯವಾಗಿತ್ತು. ಮುದ್ನಾಳ ಅವರು, ಸಚಿವರಾಗಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Karnataka Weather : ಬಿಸಿಲ ಧಗೆ ಹೆಚ್ಚಳ; ರಾಯಚೂರಲ್ಲಿ ತಾಪಮಾನ ಏರಿಕೆ, ಬೆಳಗಾವಿಯಲ್ಲಿ ಇಳಿಕೆ

ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದ 371 (ಜೆ) ಕಲಂ ತಿದ್ದುಪಡಿಗಾಗಿ ಮೊದಲ ಹೋರಾಟಕ್ಕೆ ಅಣಿಯಾದವರೇ ವಿಶ್ವನಾಥರಡ್ಡಿ ಅವರು. ಬೆಂಗಳೂರಿನಲ್ಲಿ ವೀರಶೈವ ಮಹಾಸಭೆ ಕಚೇರಿ ನಿರ್ಮಾಣಕ್ಕೆ ನಿವೇಶನ ಒದಗಿಸಲು ಇಡೀ ನಾಡು ಸುತ್ತಾಡಿ ದೇಣಿಗೆ ಸಂಗ್ರಹಿಸಿದ್ದರು. ಬಸವ ಸಮಿತಿ ಹುಟ್ಟು ಹಾಕಿ ಅದರ ನೇತೃತ್ವ ವಹಿಸಿ, ಬಸವ ತತ್ವದ ಬಗ್ಗೆ ಪ್ರಚಾರ ಮಾಡಿದ್ದಾರೆ ಎಂದು ಗುಣಗಾನ ಮಾಡಿದರು.

ಕಾರ್ಯಕ್ರಮದಲ್ಲಿ ಕಲಬುರಗಿ ಸಂಸದ ಡಾ.ಉಮೇಶ ಜಾಧವ್ ಮಾತನಾಡಿದರು.

ಬಾಳೆಹೊನ್ನೂರಿನ ರಂಭಾಪುರಿಯ ಜಗದ್ಗುರು ಶ್ರೀ ಪ್ರಸನ್ನ ರೇಣುಕಾ ಡಾ. ವೀರಸೋಮೇಶ್ವರ ಶಿವಾಚಾರ್ಯ ಭಗತ್ಪಾದರು ಕಾರ್ಯಕ್ರಮದ ಪಾವನ ಸಾನಿಧ್ಯ ವಹಿಸಿ, ಆಶೀರ್ವಚನ ನೀಡಿ, ಪ್ರತಿಯೊಬ್ಬರೂ ಸಹನೆಯಿಂದ ಇರಬೇಕು. ಸಹನೆ ಹಾಗೂ ವಿನಯತೆಯಿಂದ ಇದ್ದರೆ ಜೀವನದಲ್ಲಿ ಸಾಧಿಸಬಹುದು ಎಂದ ಶ್ರೀಗಳು, ಲಿಂ.ವಿಶ್ವನಾಥರೆಡ್ಡಿ ಮುದ್ನಾಳ ಅವರು ಕಲ್ಯಾಣ ಕರ್ನಾಟಕ ಭಾಗಕ್ಕೆ ಅಷ್ಟೇ ಅಲ್ಲ ರಾಜ್ಯಕ್ಕೆ ಅವರು ಶಕ್ತಿಯಾಗಿದ್ದರು. 371 (ಜೆ) ಕಲಂ ತಿದ್ದುಪಡಿಗಾಗಿ ಮುಂಚೂಣಿಯಾಗಿ ಹೋರಾಟ ಮಾಡಿದ್ದರು. ಅವರು ಒಬ್ಬ ಆದರ್ಶ ವ್ಯಕ್ತಿಯಾಗಿದ್ದರು ಎಂದು ತಿಳಿಸಿದರು.‌

ಇದನ್ನೂ ಓದಿ: Vastu Tips: ವಾಸ್ತು ದೋಷ ಪರಿಹಾರಕ್ಕೆ ನಿಮ್ಮ ದೇವರ ಕೋಣೆ ಹೀಗಿರಲಿ…

ಮಾಜಿ ಶಾಸಕ ವೆಂಕಟರಡ್ಡಿ ಮುದ್ನಾಳ ಮಾತನಾಡಿದರು. ಬಿಜೆಪಿ ಯುವ ಮುಖಂಡ ಮಹೇಶರಡ್ಡಿ ಮುದ್ನಾಳ ಪ್ರಾಸ್ತಾವಿಕ ಮಾತನಾಡಿ, ವಿಶ್ವನಾಥರಡ್ಡಿ ಅವರ ವ್ಯಕ್ತಿತ್ವದ ಕಿರು ಪರಿಚಯ ಮಾಡಿದರು.

ಕಾರ್ಯಕ್ರಮದಲ್ಲಿ ಅಬ್ಬೆತುಮಕೂರಿನ ಡಾ.ಗಂಗಾಧರ ಸ್ವಾಮೀಜಿ, ಹೆಡಗಿಮದ್ರಾದ ಶ್ರೀ ಶಾಂತ ಮಲ್ಲಿಕಾರ್ಜುನ ಪಂಡಿತಾರಾಧ್ಯ ಸ್ವಾಮೀಜಿ, ದೇವಾಪುರದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಪಂಚಮ ಸಿದ್ಧಲಿಂಗ ಸ್ವಾಮೀಜಿ, ದೋರನಹಳ್ಳಿ ಶಿವಲಿಂಗ ರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ, ದಾಸಬಾಳ ಮಠದ ಶ್ರೀ ವೀರೇಶ್ವರ ಸ್ವಾಮೀಜಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಾಸಕ ಶರಣಗೌಡ ಕಂದಕೂರ, ಸಂಸದ ರಾಜಾ ಅಮರೇಶ್ವರ ನಾಯಕ, ಮಾಜಿ ಸಚಿವರಾದ ನರಸಿಂಹ ನಾಯಕ (ರಾಜುಗೌಡ), ಹಾಲಪ್ಪ ಆಚಾರ್, ಮಾಜಿ ಎಂಎಲ್‌ಸಿ ಅಮರನಾಥ ಪಾಟೀಲ್, ಮುಖಂಡರಾದ ಲಿಂಗಾರಡ್ಡಿ ಭಾಸರಡ್ಡಿ, ಡಾ. ವೀರಬಸವಂತರಡ್ಡಿ ಮುದ್ನಾಳ್, ಹಣಮಂತರಡ್ಡಿ ಮುದ್ನಾಳ್ ಹಾಗೂ ಇತರರು ಪಾಲ್ಗೊಂಡಿದ್ದರು.

ಇದನ್ನೂ ಓದಿ: Joe Root : ರೋಹಿತ್ ಶರ್ಮಾ ದಾಖಲೆ ಸರಿಟ್ಟಿದ ಇಂಗ್ಲೆಂಡ್ ಬ್ಯಾಟರ್​ ಜೋ ರೂಟ್​

ರಾಚಣ್ಣಗೌಡ ಮುದ್ನಾಳ ಸ್ವಾಗತಿಸಿದರು. ಪ್ರಾಚಾರ್ಯ ಡಾ.ಸುಭಾಶ್ಚಂದ್ರ ಕೌಲಗಿ ನಿರೂಪಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಸಾಧಾರಣದಿಂದ ಭಾರಿ ಮಳೆ ಸಾಧ್ಯತೆ; ಕರಾವಳಿ-ಮಲೆನಾಡಿಗೆ ಎಚ್ಚರಿಕೆ

Karnataka Weather Forecast : ಗುಡುಗು ಸಹಿತ ಗಾಳಿಯೊಂದಿಗೆ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಹೀಗಾಗಿ ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (karnataka Weather Forecast) ನೀಡಿದೆ. ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾದರೆ, ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಇನ್ನೂ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಬೆಳಗಾವಿ, ಧಾರವಾಡ, ರಾಯಚೂರು, ಯಾದಗಿರಿಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ.

ಮಲೆನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆದರೆ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಲ್ಲೂ ಗುಡುಗು ಮಳೆ

ಬೆಂಗಳೂರು ಸುತ್ತಮುತ್ತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಅನುಕ್ರಮವಾಗಿ 30 ಮತ್ತು 22 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಜಿಲ್ಲೆಗಳಿಗೆ ಅಲರ್ಟ್‌

ಜು.1ರಂದು ಗುಡುಗು ಸಹಿತ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಮೀನುಗಾರರಿಗೂ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: Kidnap case : ಕೋಟಿ ಆಸೆಗೆ ಸಿನಿಮಾ ಸ್ಟೈಲ್‌ನಲ್ಲಿ ಸ್ಟಾಕ್‌ ಮಾರ್ಕೆಟ್‌ ವಂಚಕನ ಕಿಡ್ನ್ಯಾಪ್‌

ಜು.1ರಿಂದ ಕೊಡಗಿಗೆ ಭಾರಿ ವಾಹನಗಳ ಓಡಾಟ ನಿಷೇಧ

ಕೊಡಗು: ಕೊಡಗಿನಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಮಳೆಯ ಎಫೆಕ್ಟ್‌ನಿಂದಾಗಿ (Rain Effect), ಜಿಲ್ಲೆಯಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ ಹಾಕಲಾಗಿದೆ. ಕೊಡಗು ಡಿಸಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ. ಜುಲೈ 1 ರಿಂದ ಜುಲೈ 30ರವರೆಗೆ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಅಗತ್ಯ ವಸ್ತುಗಳ ಪೂರೈಕೆ ಹಾಗೂ ಸಾರ್ವಜನಿಕ ಪ್ರಯಾಣಿಕರ ವಾಹನಗಳಿಲ್ಲ ಯಾವುದೇ ನಿರ್ಬಂಧ ಇಲ್ಲ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಭಾರಿ ಗಾತ್ರದ ವಾಹನಗಳು ಹೆಚ್ಚು ಸಂಚರಿಸುತ್ತಿದ್ದವು. ಆದರೆ ಗುಡ್ಡದ ಬದಿಯಿಂದ ಮಣ್ಣು ಕುಸಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ ಹಾಕಲಾಗಿದೆ.

ಯಾವೆಲ್ಲ ವಾಹನಗಳಿಗೆ ನಿರ್ಬಂಧ?

ವಾಹನದ ನೋಂದಣಿ ತೂಕ 18,500 ಕೆ.ಜಿ.ಗಿಂತ ಹೆಚ್ಚಿನ ತೂಕದ ಸರಕು ಸಾಗಾಣಿಕೆ ವಾಹನ, ಮಲ್ಟಿ ಆಕ್ಸಿಲ್ ಟ್ರಕ್‍ಗಳ ಸಂಚಾರ ಮತ್ತು ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್(ಮಲ್ಟಿ ಆಕ್ಸಿಲ್), ಆರ್ಟಿಕ್ಯೂಲೇಟೆಡ್ ವಾಹನಗಳು ಮತ್ತು ಮರಳು ಸಾಗಾಣಿಕೆ, ಮರದ ದಿಮ್ಮಿಗಳನ್ನು ಸಾಗಿಸುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ನಿರ್ಬಂಧಿಸಲಾಗಿದೆ.

ಈ ವಾಹನಗಳಿಗೆ ವಿನಾಯಿತಿ

ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳಿಗೆ (ಮಲ್ಟಿ ಆಕ್ಸಿಲ್ ಬಸ್‍ಗಳು ಸೇರಿದಂತೆ) ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.

ಆದೇಶ ಮೀರಿದರೆ ದಂಡ ಪ್ರಯೋಗ

ಈ ಕುರಿತು ಸೂಚನಾ ಫಲಕಗಳನ್ನು ಅಳವಡಿಸಲು ಸೂಚಿಸಲಾಗಿದೆ. ಜತೆಗೆ ಕೊಡಗು ಜಿಲ್ಲೆಯ ಮುಖಾಂತರ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275 ರ ಜಿಲ್ಲೆಯ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್‍ಪೋಸ್ಟ್ ನಿರ್ಮಿಸುವಂತೆ ತಿಳಿಸಲಾಗಿದೆ. ದಿನದ 24 ಗಂಟೆಯೂ ನಿಗಾ ವಹಿಸಲು ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ. ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಈ ಆದೇಶ ಉಲ್ಲಂಘನೆಯಾಗದಂತೆ ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಪೊಲೀಸ್ ಹಾಗೂ ಸಾರಿಗೆ ಇಲಾಖೆಗೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Karnataka Weather Forecast : ಭಾನುವಾರ ಬೆಂಗಳೂರು, ಕಲಬುರಗಿ, ಕೊಪ್ಪಳ ಸೇರಿದಂತೆ ಹಲವೆಡೆ ಮಳೆಯಾಗಿದೆ. ಕೊಡಗಿನಲ್ಲಿ ಮಳೆ ಎಫೆಕ್ಟ್‌ನಿಂದಾಗಿ (Rain News) ಭಾರಿ ಗಾತ್ರದ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಹಲವು ದಿನಗಳಿಂದ ಮೋಡ ಕವಿದ ವಾತಾವರಣ (Karnataka Weather Forecast) ಇತ್ತು. ಮಧ್ಯಾಹ್ನದ ಹೊತ್ತು ಕೆಲವೊಮ್ಮೆ ಜಿಟಿ ಜಿಟಿ ಮಳೆಯ (Rain News) ಸಿಂಚನವಾಗುತ್ತಿತ್ತು. ಭಾನುವಾರ ಗಾಳಿಯೊಂದಿಗೆ ಮಳೆಯಾಗಿದೆ. ಮೆಜೆಸ್ಟಿಕ್, ಕೆಆರ್‌ವೃತ್ತ, ಕಾರ್ಪೋರೇಶನ್ ಸರ್ಕಲ್‌, ಕೆಆರ್‌ ಮಾರ್ಕೆಟ್, ಶೇಷಾದ್ರಿಪುರಂ, ಗಾಂಧಿನಗರ, ಶಿವಾಜಿನಗರ. ವಿಧಾನಸೌಧ ಸುತ್ತಮುತ್ತ ಮಳೆಯಾಗಿದೆ. ಇತ್ತ ದಿಢೀರ್‌ ಬಂದ ಮಳೆಗೆ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಸಮಸ್ಯೆಯುಂಟಾಯಿತು.

ಇತ್ತ ಕಲಬುರಗಿಯಲ್ಲಿ ಭಾನುವಾರ ವರುಣನ ಆರ್ಭಟ ಜೋರಾಗಿತ್ತು. ಒಂದು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದು,ಜನ ಜೀವನ ಅಸ್ತವ್ಯಸ್ತವಾಗಿತ್ತು. ಕೊಪ್ಪಳದಲ್ಲೂ ಕಳೆದ ಒಂದು ವಾರ ಬಿಡುವು ನೀಡಿದ್ದ ಮಳೆರಾಯ ಭಾನುವಾರ ಅಬ್ಬರಿಸಿದ್ದ. ಕೊಪ್ಪಳ ತಾಲೂಕಿನ‌ ಹಿರೇಸಿಂದೋಗಿ ಸುತ್ತಮುತ್ತ ಉತ್ತಮ ಮಳೆಯಾಗಿದೆ.

ಇದನ್ನೂ ಓದಿ: Kidnap case : ಕೋಟಿ ಆಸೆಗೆ ಸಿನಿಮಾ ಸ್ಟೈಲ್‌ನಲ್ಲಿ ಸ್ಟಾಕ್‌ ಮಾರ್ಕೆಟ್‌ ವಂಚಕನ ಕಿಡ್ನ್ಯಾಪ್‌

ಭಾರಿ ಮಳೆ ಎಫೆಕ್ಟ್‌ ರಾ.ಹೆ 275ರಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ

ಕೊಡಗಿನಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಮಳೆಯ ಎಫೆಕ್ಟ್‌ನಿಂದಾಗಿ, ಜಿಲ್ಲೆಯಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ ಹಾಕಲಾಗಿದೆ. ಕೊಡಗು ಡಿಸಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.

ಜುಲೈ 1ರಿಂದ ಜುಲೈ 30ರವರೆಗೆ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಅಗತ್ಯ ವಸ್ತುಗಳ ಪೂರೈಕೆ ಹಾಗೂ ಸಾರ್ವಜನಿಕ ಪ್ರಯಾಣಿಕರ ವಾಹನಗಳಿಲ್ಲ ಯಾವುದೇ ನಿರ್ಬಂಧ ಇಲ್ಲ. ಗುಡ್ಡದ ಬದಿಯಿಂದ ಮಣ್ಣು ಕುಸಿತಗೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ ಹಾಕಲಾಗಿದೆ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಭಾರಿ ಗಾತ್ರದ ವಾಹನಗಳು ಹೆಚ್ಚು ಸಂಚರಿಸುತ್ತಿದ್ದವು.

ಭೋರ್ಗರೆದ ಧನುಷ್ ಕೋಟಿ ಜಲಪಾತ

ಮೈಸೂರಿನ ಕಾವೇರಿ ಕೊಳ್ಳದಲ್ಲಿ ಭರ್ಜರಿ ಮಳೆ ಹಿನ್ನೆಲೆಯಲ್ಲಿ ಧನುಷ್ ಕೋಟಿ ಜಲಪಾತ ಭೋರ್ಗರೆದಿದೆ. ಮೈಸೂರಿನ ಕೆಆರ್ ನಗರದ ಚುಂಚನಕಟ್ಟೆ ಬಳಿ ಇರುವ ಧನುಷ್ಕೋಟಿ ಜಲಪಾತಕ್ಕೆ ಪ್ರವಾಸಿಗರ ಕೈಬೀಸಿ ಕರೆಯುತ್ತಿದೆ.

ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಳ

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಕೃಷ್ಣಾ ನದಿಯ ಒಳಹರಿವು ಹೆಚ್ಚಳಗೊಂಡಿದೆ. ಚಿಕ್ಕೋಡಿ ತಾಲೂಕಿನ ಮಾಂಜರಿ, ಬಾವನಸೌದತ್ತಿ ಸಂಪರ್ಕಿಸುವ ಹಳೆ ಸೇತುವೆ ಜಲಾವೃತಗೊಂಡಿದೆ.

ಕರಾವಳಿಗೆ ಭಾರಿ ಮಳೆ ಮುನ್ಸೂಚನೆ

ಜುಲೈ 1ರಂದು ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿಯ ವೇಗವು 30-40 ಕಿ.ಮೀ ತಲುಪುವ ಸಾಧ್ಯತೆಯಿದೆ ಹಾಗೂ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗಾಳಿ ಜತೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಧ್ಯಮ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

CM Post: ಬಿ.ಕೆ.ಹರಿಪ್ರಸಾದ್‌ರನ್ನು ಸಿಎಂ ಮಾಡಲು ಪ್ರಣವಾನಂದ ಶ್ರೀ ಒತ್ತಾಯ; ಕೇಳೋದ್ರಲ್ಲಿ ತಪ್ಪಿಲ್ಲ ಎಂದ ಜಮೀರ್‌

CM Post: ಬಿ.ಕೆ.ಹರಿಪ್ರಸಾದ್ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತರು. ಮೂಲತಃ ಅವರು ಕಾಂಗ್ರೆಸ್ಸಿಗರು, ಯಾವುದೇ ವಲಸೆ ನಾಯಕರಲ್ಲ. ಹೀಗಾಗಿ ಅವರಿಗೆ ಸಿಎಂ ಸ್ಥಾನ ನೀಡಬೇಕು ಎಂದು ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.

VISTARANEWS.COM


on

Koo

ಯಾದಗಿರಿ: ಬಿ.ಕೆ. ಹರಿಪ್ರಸಾದ್ ಅವರನ್ನು ಸಿಎಂ ಮಾಡುವಂತೆ ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ (Pranavananda Swamiji) ಅವರು ಪುನರುಚ್ಚರಿಸಿದ್ದಾರೆ. ಬಿ.ಕೆ. ಹರಿಪ್ರಸಾದ್‌ರನ್ನು (BK hariprasad) ಸಿಎಂ ಅಥವಾ ಡಿಸಿಎಂ ಮಾಡುವಂತೆ ಒತ್ತಾಯ ಮಾಡಿರುವ ಅವರು, ಈಡಿಗ ಸಮುದಾಯವು ತನ್ನದೇ ರಾಜಕೀಯ ಪ್ರಾಬಲ್ಯ ಹೊಂದಿದೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಮಾಡುವುದಿದ್ದರೆ ಬಿ.ಕೆ.ಹರಿಪ್ರಸಾದ್ ಅವರನ್ನೇ ಸಿಎಂ (CM Post) ಎಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಕೆ.ಹರಿಪ್ರಸಾದ್ ಅವರ ಹಿಂದೆ ಹಿಂದುಳಿದ ಸಮಾಜ ಇದೆ, ಹರಿಪ್ರಸಾದ್ ಅವರ ಪರವಾಗಿ ಗಟ್ಟಿ ಧ್ವನಿಯಲ್ಲಿ ಹೇಳುತ್ತೇನೆ. ಸಿಎಂ, ಡಿಸಿಎಂ ಸ್ಥಾನ ಬದಲಾದರೆ ಬಿ.ಕೆ.ಹರಿಪ್ರಸಾದ್ ಅವರಿಗೆ ಸಿಎಂ ಸ್ಥಾನ‌ ನೀಡಬೇಕು. ಇಲ್ಲದಿದ್ದರೆ ಡಿಸಿಎಂ ಆಗಿ ತೆಗೆದುಕೊಳ್ಳಬೇಕು. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡುವುದಾದರೆ ಹರಿಪ್ರಸಾದ್ ಅವರಿಗೆ ನೀಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ | Actor Darshan:  ದರ್ಶನ್‌‌‌‌‌‌ ವಿರುದ್ಧ ಪರೋಕ್ಷವಾಗಿ ಕೌಂಟರ್‌ ಕೊಟ್ಟ ನಟ ಜಗ್ಗೇಶ್!

ಸ್ವಾಮೀಜಿಗಳು ರಾಜಕೀಯಕ್ಕೆ ಬರಬೇಡಿ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿ, ಸ್ವಾಮೀಜಿಗಳು ಅವರ ಅಭಿಪ್ರಾಯ ವ್ಯಕ್ತಪಡಿಸುವಾಗ ಮಂತ್ರಿಗಳು, ರಾಜಕೀಯ ನಾಯಕರು ಅಪಮಾನ ಮಾಡಬಾರದು. ಅಪಮಾನ ಮಾಡಿದರೆ ಮುಂದಿನ ದಿನಗಳಲ್ಲಿ ನೀವು ಮಠಕ್ಕೆ ಕಾಲಿಡಬೇಡಿ. ನೀವು ಮಾಡಿದ್ದೆಲ್ಲಾ ಸರಿ ಅಂತ ಒಪ್ಪಿಕೊಳ್ಳೋಕೆ ಸಮುದಾಯದ ಸ್ವಾಮೀಜಿಗಳು ಸಿದ್ಧರಿಲ್ಲ. ನೀವು ಧೈರ್ಯವಾಗಿ ಹೇಳಿ ಮಠಕ್ಕೆ ಕಾಲಿಡಲ್ಲ ಅಂತ, ಆಗ ನಾವು ರಾಜಕೀಯಕ್ಕೆ ಬರಲ್ಲ ಎಂದು ಸವಾಲು ಹಾಕಿದರು.

ಚಂದ್ರಶೇಖರ ಸ್ವಾಮೀಜಿಗಳು ಹೇಳಿದಾಗ ಎಲ್ಲರೂ ಸ್ವಾಗತ ಮಾಡಿದರು. ಡಿ.ಕೆ.ಸುರೇಶ್‌, ಬಾಲಕೃಷ್ಣ ಹಾಗೂ ಚಲುವರಾಯಸ್ವಾಮಿ ಸ್ವಾಗತ ಮಾಡಿದರು. ಒಂದು ಕಡೆ ಸ್ವಾಗತ ಮಾಡೋದು, ಮತ್ತೊಂದು ಕಡೆ ರಾಜಕೀಯಕ್ಕೆ ಬರಬೇಡಿ ಅಂತ ಹೇಳೋದು. ಇದು ಡಿ.ಕೆ.ಶಿವಕುಮಾರ ಅವರ ರಾಜಕೀಯ ಗಿಮಿಕ್, ನಮಗೆ ನೋವಾಗಿದ್ದಕ್ಕೆ ನಾವು ಹೇಳುತ್ತಿದ್ದೇವೆ. ನಮಗೆ ಯಾರು ಡಿಸಿಎಂ ಸ್ಥಾನ ಕೊಟ್ಟಿಲ್ಲ, ಈಗಾಗಲೇ ಡಿಕೆಶಿ ಡಿಸಿಎಂ ಇದ್ದಾರೆ. ಜೊತೆಗೆ ಒಕ್ಕಲಿಗ ಸಮುದಾಯದ ಸಚಿವರು ಇದ್ದಾರೆ. ಚಂದ್ರಶೇಖರ ಸ್ವಾಮೀಜಿಯವರು ಅವರ ಸಮುದಾಯದ ಬಗ್ಗೆ ಮಾತನಾಡಿದ್ದಾರೆ. ಆದರೆ ಡಿ.ಕೆ.ಶಿವಕುಮಾರ ಅವರದ್ದು ರಾಜಕೀಯ ಗಿಮಿಕ್‌ನ ಭಾಗ ಎಂದು ಕಿಡಿಕಾರಿದರು.

ಯಾರು ಬೇಕಾದ್ರು ಅಭಿಪ್ರಾಯ ಹೇಳಬಹುದು ಎಂದ ಜಮೀರ್‌ ಅಹ್ಮದ್‌

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಮಂಡ್ಯದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯಿಸಿ, ಯಾರು ಬೇಕಾದರೂ ಅವರ ಅಭಿಪ್ರಾಯ ಹೇಳಬಹುದು. ಆದರೆ ನಿರ್ಧಾರ ಮಾಡುವುದು ಪಕ್ಷದ ಹೈ ಕಮಾಂಡ್. ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ. ಖಾಲಿ‌ ಇದ್ದಾಗ ಆ ಬಗ್ಗೆ ಚರ್ಚೆ ಮಾಡಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ | Pradeep Eshwar: ವಿಪಕ್ಷ ನಾಯಕರು ಸಿದ್ದರಾಮಯ್ಯ ಬಳಿ ಕೋಚಿಂಗ್‌ ಪಡೆಯಲಿ: ಅಶೋಕ್‌ಗೆ ಪ್ರದೀಪ್‌ ಈಶ್ವರ್‌ ಸಲಹೆ

ಸ್ವಾಮೀಜಿ‌ ಅವರು ಅವರ ಅಭಿಪ್ರಾಯ ಹೇಳಿದ್ದಾರೆ. ಯಾರು ಬೇಕಾದ್ರು ಅವರ ಅಭಿಪ್ರಾಯ ಹೇಳಬಹುದು. ಹೈ ಕಮಾಂಡ್ ತೀರ್ಮಾನ ಮಾಡಿ ಸಿದ್ದರಾಮಯ್ಯರನ್ನು ಸಿಎಂ ಮಾಡಿದ್ದಾರೆ. ಎಲ್ಲಾ ಸಮುದಾಯದವರೂ ಸಿಎಂ ಸ್ಥಾನ ಕೇಳುತ್ತಾರೆ, ಅದು ಅವರವರ ಅಭಿಪ್ರಾಯ. ಸಿಎಂ ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಒಪ್ಪಂದವಾಗಿಲ್ಲ ಎಂದು ತಿಳಿಸಿದ್ದಾರೆ.

Continue Reading

ಮಳೆ

Karnataka Weather : ಜುಲೈ ಮೊದಲ ವಾರ ಮತ್ತಷ್ಟು ಅಬ್ಬರಿಸಲಿದೆ ಗುಡುಗು ಸಹಿತ ಮಳೆ!

Rain News : ಜೂ.30ರಂದು ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಐಎಂಡಿ ಯೆಲ್ಲೋ ಅಲರ್ಟ್‌ ಘೋಷಣೆ (Karnataka Weather Forecast) ಮಾಡಿದೆ. ಜುಲೈ ಮೊದಲ ವಾರ ಮತ್ತಷ್ಟು ತೀವ್ರಗೊಳ್ಳಲಿದ್ದು, ಜು.3ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಭಾನುವಾರ ಕರಾವಳಿಯಲ್ಲಿ ವ್ಯಾಪಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ. ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ನಿರೀಕ್ಷೆಯಿದೆ. ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾದರೆ, ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಸಹಿತ ಗಂಟೆಗೆ 30-40 ಕಿ.ಮೀ ಗಾಳಿ ಬೀಸುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ , ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರಗಿ ಮತ್ತು ವಿಜಯಪುರದಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬಾಗಲಕೋಟೆ ಸಣ್ಣ ಪ್ರಮಾಣದಲ್ಲಿ ಮಳೆಯ ಸಿಂಚನವಾಗಲಿದೆ.

ಇನ್ನೂ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಸಾಧಾರಣ ಮಳೆಯಾಗಲಿದ್ದು, ಶಿವಮೊಗ್ಗದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: DCET 2024 : ಡಿಸಿಇಟಿ ಫಲಿತಾಂಶ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಯೆಲ್ಲೋ ಅಲರ್ಟ್‌ ಘೋಷಣೆ

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಭಾರಿ ಮಳೆಯೊಂದಿಗೆ ಗುಡುಗು ಇರಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜುಲೈ 3ರವರೆಗೆ ಮೀನುಗಾರರು ಮೀನುಗಾರಿಗೆ ತೆರಳದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Dengue fever rises across the state including Bengaluru BBMP Commissioner also get fever
ಪ್ರಮುಖ ಸುದ್ದಿ2 mins ago

Dengue Fever: ರಾಜಧಾನಿಯಲ್ಲಿ ಡೆಂಗ್ಯು ಜ್ವರಕ್ಕೆ ಒಂದು ಬಲಿ, ರಾಜ್ಯದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆ

Gold Rate Today
ಕರ್ನಾಟಕ2 mins ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ದರ ಹೇಗಿದೆ?

Jasprit Bumrah
ಕ್ರೀಡೆ12 mins ago

Jasprit Bumrah : ಜಸ್​ಪ್ರಿತ್ ಬುಮ್ರಾ ವೈಟ್ ಬಾಲ್ ಕ್ರಿಕೆಟ್​​ನ ಅತ್ಯುತ್ತಮ ಬೌಲರ್​ ಎಂದು ಹೊಗಳಿದ ಮೈಕಲ್ ವಾನ್

assault case
ಚಿತ್ರದುರ್ಗ14 mins ago

Assault Case : ಕಚೇರಿಗೆ ನುಗ್ಗಿ ದರದರನೆ ಎಳೆದು ಪಿಡಿಓ ಥಳಿಸಿದ ಪುಂಡರ ಗ್ಯಾಂಗ್‌!

Actor Darshan is like my son says hamsalekha
ಸ್ಯಾಂಡಲ್ ವುಡ್35 mins ago

Actor Darshan: ದರ್ಶನ್ ನನ್ನ ಮಗು, ಆತ ಕೊಟ್ಟ ಕೊಡುಗೆ ಕಡೆ ನೋಡೋಣ ಎಂದ ಹಂಸಲೇಖ!

Rohit Sharma
ಪ್ರಮುಖ ಸುದ್ದಿ1 hour ago

Rohit Sharma: ನನಗೆ ಟಿ20ಗೆ ನಿವೃತ್ತಿ ಘೋಷಿಸಲು ಮನಸ್ಸು ಇರಲಿಲ್ಲ; ಆಘಾತಕಾರಿ ಹೇಳಿಕೆ ನೀಡಿದ ರೋಹಿತ್​ ಶರ್ಮಾ

LPG Price Cut
ವಾಣಿಜ್ಯ1 hour ago

LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ 30 ರೂ. ಇಳಿಕೆ

kidanp case
ಕ್ರೈಂ1 hour ago

Kidnap Case: ಹಿಂದೂ ಹುಡುಗನ ಜೊತೆಗೆ ಮುಸ್ಲಿಂ ಹುಡುಗಿ ನಾಪತ್ತೆ, ಕಿಡ್ನಾಪ್‌ ದೂರು

Rakshak Bullet Washed His Father grave
ಸ್ಯಾಂಡಲ್ ವುಡ್1 hour ago

Rakshak Bullet: ಅಜ್ಜಿ-ತಂದೆಯ ಸಮಾಧಿ ತೊಳೆದು ವಿಶೇಷ ವಿಡಿಯೊ ಮಾಡಿದ ರಕ್ಷಕ್ ಬುಲೆಟ್

Team India Captain
ಕ್ರೀಡೆ1 hour ago

Team India Captain : ರೋಹಿತ್ ಶರ್ಮಾ ನಂತರ ಟಿ20 ತಂಡದ ನಾಯಕ ಯಾರು? ಇಲ್ಲಿದೆ ಐದು ಮುಂಚೂಣಿ ಹೆಸರುಗಳು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ17 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು22 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌