Viral Video: ಇಂಡಿಗೊ ವಿಮಾನದಲ್ಲಿ ಮತ್ತೊಂದು ಎಡವಟ್ಟು; ಆಹಾರ ಪೊಟ್ಟಣದ ಮೇಲೆ ಜಿರಳೆ ನರ್ತನ! - Vistara News

ವೈರಲ್ ನ್ಯೂಸ್

Viral Video: ಇಂಡಿಗೊ ವಿಮಾನದಲ್ಲಿ ಮತ್ತೊಂದು ಎಡವಟ್ಟು; ಆಹಾರ ಪೊಟ್ಟಣದ ಮೇಲೆ ಜಿರಳೆ ನರ್ತನ!

Viral Video: ಇಂಡಿಗೊ ವಿಮಾನದ ಆಹಾರ ಸಂಗ್ರಹದ ಜಾಗದಲ್ಲಿ ಜಿರಳೆಗಳು ಓಡಾಡುತ್ತಿರುವ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

indigo
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಇಂಡಿಗೊ ವಿಮಾನದ (IndiGo plane) ಆಹಾರ ಸಂಗ್ರಹದ ಜಾಗದಲ್ಲಿ ಜಿರಳೆಗಳು ಓಡಾಡುತ್ತಿರುವ ವಿಡಿಯೊವನ್ನು ಪತ್ರಕರ್ತ ತರುಣ್‌ ಶುಕ್ಲಾ ಸಾಮಾಜಿಕ ಜಾಲತಾಣ ಎಕ್ಸ್‌ ಮೂಲಕ ಹಂಚಿಕೊಂಡಿದ್ದು, ವೈರಲ್‌ ಆಗಿದೆ (Viral Video). ವಿಮಾನಯಾನ ಸಂಸ್ಥೆಯಲ್ಲಿನ ನೈರ್ಮಲ್ಯ, ಆಹಾರ ಸುರಕ್ಷತೆ ಬಗ್ಗೆ ಇದು ಪ್ರಶ್ನೆ ಹುಟ್ಟು ಹಾಕಿದೆ. ಅನೇಕರು ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಕೂಡಲೆ ಸಮಸ್ಯೆಗೆ ಸ್ಪಂದಿಸಿದ ಇಂಡಿಗೊ ಈ ಸಮಸ್ಯೆಯನ್ನು ಪರಿಹರಿಸಲು ಕ್ರಮ ಕೈಗೊಂಡಿದೆ.

ವಿಡಿಯೊದಲ್ಲೇನಿದೆ?

“ವಿಮಾನದ ಆಹಾರ ತಯಾರಿ ಪ್ರದೇಶದಲ್ಲಿ ಜಿರಳೆಗಳು ಕಂಡು ಬಂದಿರುವುದು ನಿಜವಾಗಿಯೂ ಭಯಾನಕ ದೃಶ್ಯʼʼ ಎಂದು ಬರೆದುಕೊಂಡಿರುವ ತರುಣ್‌ ಶುಕ್ಲಾ ಜಿರಳೆಗಳು ಓಡಾಡುತ್ತಿರುವ ವಿಡಿಯೊವನ್ನು ಪೋಸ್ಟ್‌ ಮಾಡಿದ್ದಾರೆ. ಜತೆಗೆ ಅವರು ಇಂಡಿಗೊದ ಪ್ರತಿಕ್ರಿಯೆಯನ್ನೂ ಹಂಚಿಕೊಂಡಿದ್ದಾರೆ. ಸಂಬಂಧಪಟ್ಟವರು ಕೂಡಲೇ ಪ್ರತಿಕ್ರಿಯಿಸಿ ಈ ಸಮಸ್ಯೆ ನಿವಾರಣೆಯತ್ತ ಗಮನ ಹರಿಸುವುದಾಗಿ ತಿಳಿಸಿದ್ದಾರೆ ಮತ್ತು ಸ್ವಚ್ಛಗೊಳಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತರುಣ್‌ ಶುಕ್ಲಾ ಹೇಳಿದ್ದಾರೆ.

ʼʼನಮ್ಮ ಸಿಬ್ಬಂದಿ ತಕ್ಷಣ ಅಗತ್ಯ ಕ್ರಮ ಕೈಗೊಂಡರು. ಮುನ್ನೆಚ್ಚರಿಕೆ ಕ್ರಮವಾಗಿ, ನಾವು ತಕ್ಷಣ ಇಡೀ ವಿಮಾನವನ್ನು ಸ್ವಚ್ಛಗೊಳಿಸಿದ್ದೇವೆ. ಇಂಡಿಗೊದಲ್ಲಿ ಸುರಕ್ಷಿತ, ತೊಂದರೆ-ಮುಕ್ತ ಅನುಭವವನ್ನು ಖಚಿತಪಡಿಸಿಕೊಳ್ಳಲು ತಕ್ಷಣ ಕಾರ್ಯ ಪ್ರವೃತ್ತರಾಗಿದ್ದೇವೆ ಮತ್ತು ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ವಿಷಾದಿಸುತ್ತೇವೆ. ಇನ್ನು ಮುಂದೆ ನಾವು ಸ್ವಚ್ಛತೆ ಮತ್ತು ನೈರ್ಮಲ್ಯದ ಅತ್ಯುನ್ನತ ಮಾನದಂಡಗಳನ್ನು ಕಾಪಾಡಿಕೊಳ್ಳುತ್ತೇವೆ” ಎಂದು ಇಂಡಿಗೊ ತಿಳಿಸಿದೆ.

ನೆಟ್ಟಿಗರು ಏನಂದ್ರು?

ತರುಣ್‌ ಶುಕ್ಲಾ ವಿಡಿಯೊವನ್ನು ಪೋಸ್ಟ್‌ ಮಾಡಿದ ಕೆಲವೇ ಹೊತ್ತಿನಲ್ಲಿ ಇದು ವೈರಲ್‌ ಆಗಿದೆ. ಅನೇಕರು ಕಮೆಂಟ್‌ ಮೂಲಕ ತಮ್ಮ ಆಘಾತವನ್ನು ವ್ಯಕ್ತಪಡಿಸಿದ್ದಾರೆ. ಜತೆಗೆ ತಮಗಾದ ಅನುಭವಗಳನ್ನೂ ಹಂಚಿಕೊಂಡಿದ್ದಾರೆ. “ಇಂಡಿಗೊ ಅಂತಾರಾಷ್ಟ್ರೀಯ ವಿಮಾನದಲ್ಲಿ ವ್ಯವಸ್ಥೆ ಸರಿಯಾಗಿಲ್ಲ. ಯಾವಾಗಲೂ ತಡವಾಗಿ ಚಲಿಸುತ್ತದೆ. ಅಲ್ಲದೆ ಪಾನೀಯಗಳನ್ನೂ ನೀಡುವುದಿಲ್ಲ. ನಾನು ಇಂಡಿಗೊ ಅಂತಾರಾಷ್ಟ್ರೀಯ ವಿಮಾನದಲ್ಲಿ ಮತ್ತೆ ಸಂಚರಿಸುವುದಿಲ್ಲ” ಎಂದು ಒಬ್ಬರು ಹೇಳಿದ್ದಾರೆ.

ಇನ್ನೊಬ್ಬರು ಇಂಡಿಗೊ ಸಂಸ್ಥೆಯ ಬೆಂಬಲಕ್ಕೆ ಧಾವಿಸಿದ್ದಾರೆ. ಇಂಡಿಯೊ ಯಾವತ್ತೂ ಸಮಸ್ಯೆಗೆ ತ್ವರಿತವಾಗಿ ಸ್ಪಂದಿಸುತ್ತದೆ ಎಂದಿದ್ದಾರೆ. ʼʼಇಂಡಿಗೊದಲ್ಲಿ ನಾನು ಇಷ್ಟಪಡುವುದು ಇದನ್ನೇ. ನಿಯಂತ್ರಣಕ್ಕೆ ಮೀರಿದ ಸಮಸ್ಯೆಗಳು ಯಾರಿಗಾದರೂ ಎದುರಾಗಬಹುದು. ಅದನ್ನು ಯಾವ ರೀತಿ ಎದುರಿಸುತ್ತಾರೆ ಎನ್ನುವುದು ಮುಖ್ಯ. ಇಂಡಿಗೊ ತನ್ನ ಸೇವೆಯಲ್ಲಿ ಏನಾದರೂ ಸಮಸ್ಯೆ ಎದುರಾದರೆ ಯಾವಾಗಲೂ ಅದನ್ನು ತ್ವರಿತವಾಗಿ ಪರಿಹರಿಸಲು ಮುಂದಾಗುತ್ತದೆ” ಎಂದು ಅವರು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Viral News: ವ್ಯಕ್ತಿಯ ಮೂಗಿನ ಹೊಳ್ಳೆಗಳಲ್ಲಿ 68 ಬೆಂಕಿ ಕಡ್ಡಿ! ಇದು ಕೂಡ ವಿಶ್ವ ದಾಖಲೆ

ಹಿಂದೆಯೂ ಆಗಿತ್ತು

ಇಂಡಿಗೊ ಇಂತಹ ನೈರ್ಮಲ್ಯ ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ ಏಪ್ರಿಲ್‌ನಲ್ಲಿ ಇಂಡಿಗೊ ವಿಮಾನದಲ್ಲಿ ಊಟ ಮಾಡುವಾಗ ಜಿರಳೆ ತಮ್ಮ ಮೇಜಿನ ಮೇಲೆ ತೆವಳುತ್ತಿರುವ ವಿಡಿಯೊವನ್ನು ಪ್ರಯಾಣಿಕರೊಬ್ಬರು ಹಂಚಿಕೊಂಡಿದ್ದರು. ಮಾತ್ರವಲ್ಲ 2022ರ ಅಕ್ಟೋಬರ್‌ನಲ್ಲಿ ಪಾಟ್ನಾದಿಂದ ದೆಹಲಿಗೆ ಹೋಗುವ ವಿಮಾನದಲ್ಲಿ ಮತ್ತೊಬ್ಬ ಪ್ರಯಾಣಿಕರಿಗೂ ಜಿರಳೆ ಕಂಡು ಬಂದಿತ್ತು. ಕೆಲವು ದಿನಗಳ ಹಿಂದೆ ಪ್ರಯಾಣಿಕರೊಬ್ಬರಿಗೆ ವಿತರಿಸಿದ ಸ್ಯಾಂಡ್‌ವಿಚ್‌ನಲ್ಲಿ ಹುಳ ಪತ್ತೆಯಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Modi Meditation: ಕನ್ಯಾಕುಮಾರಿಯಲ್ಲಿ ಧ್ಯಾನಾಸಕ್ತ ಪ್ರಧಾನಿ ಮೋದಿಯಿಂದ ಸೂರ್ಯ ವಂದನೆ; ವಿಡಿಯೊ ನೋಡಿ

ಲೋಕಸಭೆ ಚುನಾವಣೆ (Lok Sabha Election 2024) ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿರುವ ಮಧ್ಯೆಯೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ಶಿಲೆ ಸ್ಮಾರಕದಲ್ಲಿ (Vivekananda Rock Memorial) 45 ಗಂಟೆಗಳ ಧ್ಯಾನ ನಡೆಸುತ್ತಿದ್ದಾರೆ. ಮೋದಿ ಅವರ ಧ್ಯಾನ ಶನಿವಾರ ಕೊನೆಯ ದಿನಕ್ಕೆ ಕಾಲಿಟ್ಟಿದೆ (Modi Meditation). ಮೋದಿ ಧ್ಯಾನ ಮಾಡುತ್ತಿರುವ ವಿಡಿಯೊ ಸದ್ಯ ಹೊರ ಬಂದಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

VISTARANEWS.COM


on

Modi Meditation
Koo

ಚೆನ್ನೈ: ಲೋಕಸಭೆ ಚುನಾವಣೆ (Lok Sabha Election 2024) ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿರುವ ಮಧ್ಯೆಯೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ಶಿಲೆ ಸ್ಮಾರಕದಲ್ಲಿ (Vivekananda Rock Memorial) 45 ಗಂಟೆಗಳ ಧ್ಯಾನ ನಡೆಸುತ್ತಿದ್ದಾರೆ. ಮೋದಿ ಅವರ ಧ್ಯಾನ ಶನಿವಾರ ಕೊನೆಯ ದಿನಕ್ಕೆ ಕಾಲಿಟ್ಟಿದೆ (Modi Meditation). ಮೋದಿ ಧ್ಯಾನ ಮಾಡುತ್ತಿರುವ ವಿಡಿಯೊ ಸದ್ಯ ಹೊರ ಬಂದಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಶನಿವಾರ ಬೆಳಗಿನ ಜಾವವೇ ಎದ್ದ ಪ್ರಧಾನಿ ಮೋದಿ ಭಕ್ತಿಯ ಪ್ರತೀಕವಾಗಿರುವ ಕಾವಿ ಉಡುಗೆ ತೊಟ್ಟು ಹಣೆಗೆ ವಿಭೂತಿ ಮತ್ತು ತಿಲಕವನ್ನಿಟ್ಟು ಕೈಯಲ್ಲಿ ಜಪಮಣಿಯೊಂದಿಗೆ ಮಂತ್ರ ಪಠಿಸುತ್ತಾ ಸೂರ್ಯೋದಯ ವೀಕ್ಷಿಸಿದರು ಮತ್ತು ಸೂರ್ಯನಿಗೆ ವಂದನೆ ಸಲ್ಲಿಸಿದರು.

ಮೋದಿ ದಿನಚರಿ ಹೀಗಿದೆ

ಸೂರ್ಯೋದಯದ ವೇಳೆ ವಿವೇಕಾನಂದ ಶಿಲೆ ಸ್ಮಾರಕದಲ್ಲಿ ಮೋದಿ ಸೂರ್ಯ ಆರ್ಘ್ಯವನ್ನೂ ಅರ್ಪಿಸಿದರು. ಸೂರ್ಯನ ರೂಪದಲ್ಲಿ ಪ್ರಕಟವಾದ ಸರ್ವಶಕ್ತನಿಗೆ ನಮಸ್ಕರಿಸುವ ಆಧ್ಯಾತ್ಮಿಕ ರೀತಿಗೆ ‘ಸೂರ್ಯ ಅರ್ಘ್ಯ’ ಎಂದು ಕರೆಯಲಾಗುತ್ತದೆ. ಸಣ್ಣ ಪಾತ್ರೆಯಿಂದ ಸ್ವಲ್ಪ ನೀರನ್ನು ಸಮುದ್ರಕ್ಕೆ ಅರ್ಘ್ಯವಾಗಿ ಸುರಿದ ಪ್ರಧಾನಿ ಜಪಮಾಲೆ ಬಳಸಿ ಪ್ರಾರ್ಥಿಸುವುದು ವಿಡಿಯೊದಲ್ಲಿ ಸೆರೆಯಾಗಿದೆ. ಜತೆಗೆ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಮೋದಿ ಪುಷ್ಪ ನಮನ ಸಲ್ಲಿಸಿದರು. ಅವರು ಕೈಯಲ್ಲಿ ಜಪಮಾಲೆ ಹಿಡಿದು ಮಂಟಪದ ಸುತ್ತಲೂ ಹೆಜ್ಜೆ ಹಾಕಿದರು. ಆಧ್ಯಾತ್ಮಿಕ, ಧಾರ್ಮಿಕ ಕೈಂಕರ್ಯಗಳನ್ನು ಪೂರೈಸಿದ ನಂತರ ಅವರು ರಾಕ್ ಮೆಮೋರಿಯಲ್ ಮೆಟ್ಟಿಲುಗಳ ಮೇಲೆ ಸ್ವಲ್ಪ ಹೊತ್ತು ಕುಳಿತುಕೊಂಡರು.

ಮೋದಿ ಈ ಸ್ಥಳ ಆಯ್ಕೆ ಮಾಡಿದ್ದು ಯಾಕೆ?

ಪ್ರಧಾನಿ ನರೇಂದ್ರ ಮೋದಿ ಅವರು ವಿವೇಕಾನಂದ ಅವರನ್ನು ತಮ್ಮ ಜೀವನಕ್ಕೆ ಆದರ್ಶ ಎಂದು ಪರಿಗಣಿಸುತ್ತಾರೆ. ಸ್ವಾಮಿ ವಿವೇಕಾನಂದರು ಸ್ಥಾಪಿಸಿರುವ ರಾಮಕೃಷ್ಣ ಮಿಷನ್‌ನ ಸದಸ್ಯರೂ ಆಗಿದ್ದಾರೆ. ಕಳೆದ ವರ್ಷ ರಾಮಕೃಷ್ಣ ಮಿಷನ್‌ನ 125 ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ ಮೋದಿ, ಸ್ವಾಮಿ ವಿವೇಕಾನಂದರು ಭಾರತದ ಬಗ್ಗೆ ಕಂಡಿರುವ ಕನಸನ್ನು ನನಸು ಮಾಡಲು ಭಾರತವು ಕೆಲಸ ಮಾಡುವುದನ್ನು ಅವರು ಹೆಮ್ಮೆಯಿಂದ ನೋಡುತ್ತಿದ್ದಾರೆ ಎಂದು ನನಗೆ ಖಾತ್ರಿಯಿದೆ ಎಂದು ಹೇಳಿದ್ದರು. ಇದೇ ಕಾರಣಕ್ಕಾಗಿ ವಿವೇಕಾನಂದ ರಾಕ್‌ ಮೆಮೋರಿಯಲ್‌ನಲ್ಲಿ ಮೋದಿ ಅವರು ಧ್ಯಾನ ಮಾಡಲು ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.

ವಿವೇಕಾನಂದ ಬಂಡೆಯ ಮಹತ್ವ ಏನು?

ಹಿಂದೂ ಮಹಾಸಾಗರ, ಅರಬ್ಬೀ ಸಮುದ್ರ ಮತ್ತು ಬಂಗಾಳಕೊಲ್ಲಿಯ ಸಂಗಮದಲ್ಲಿರುವ ಭಾರತದ ದಕ್ಷಿಣ ತುದಿಯಾದ ಕನ್ಯಾಕುಮಾರಿಯ ವವತುರೈ ಕಡಲತೀರದಿಂದ ಸುಮಾರು 500 ಮೀಟರ್ ದೂರದಲ್ಲಿರುವ ಈ ದ್ವೀಪದ ಮೇಲೆ ಧ್ಯಾನ ಮಾಡುವಾಗ ಸ್ವಾಮಿ ವಿವೇಕಾನಂದರು ಅಭಿವೃದ್ಧಿ ಹೊಂದಿದ ಭಾರತದ ಕನಸು ಕಂಡಿದ್ದರು. ಭಾರತದಾದ್ಯಂತ ನಾಲ್ಕು ವರ್ಷಗಳ ಕಾಲ ಅಲೆದಾಡಿದ ಅವರು ದೈವಿಕ ಸ್ವಭಾವ, ಸತ್ಯ, ಶುದ್ಧತೆ, ಪ್ರಾಮಾಣಿಕತೆ, ಪರಿಶ್ರಮ, ಧೈರ್ಯ, ಶಕ್ತಿ ಮತ್ತು ಪ್ರೀತಿಯಲ್ಲಿ ನಂಬಿಕೆಯ ಇಡುವ ತತ್ತ್ವವನ್ನು ಸಾರಿದರು.

ಇದನ್ನೂ ಓದಿ: PM Narendra Modi: ಕನ್ಯಾಕುಮಾರಿಯಲ್ಲಿ ʼನಮೋʼ- ಪ್ರಧಾನಿ ಮೋದಿಯ 33 ವರ್ಷ ಹಳೆಯ ಫೊಟೋ ವೈರಲ್‌

Continue Reading

ಕ್ರೀಡೆ

Cristiano Ronaldo: ಕಿಂಗ್ಸ್ ಕಪ್ ಫೈನಲ್​ನಲ್ಲಿ ಸೋಲು; ಬಿಕ್ಕಿ ಬಿಕ್ಕಿ ಅತ್ತ ಕ್ರಿಸ್ಟಿಯಾನೊ ರೊನಾಲ್ಡೊ

Cristiano Ronaldo: ಬರೋಬ್ಬರಿ 1,700 ಕೋಟಿ ರೂ. (200 ಮಿಲಿಯನ್‌ ಯೂರೋಸ್‌) ಪಡೆದು ಕ್ರಿಸ್ಟಿಯಾನೊ ರೊನಾಲ್ಡೊ 2 ವರ್ಷಗಳ ಒಪ್ಪಂದ ಪ್ರಕಾರ ಅಲ್ ನಾಸ್ಸರ್ ತಂಡಕ್ಕೆ ಸೇರಿದ್ದರು. ತಂಡದ ಪರ ಇದುವರೆಗೆ ಒಟ್ಟು 35 ಗೋಲು ಬಾರಿಸಿದ್ದಾರೆ. ಆದರೆ ತಂಡವನ್ನು ಚಾಂಪಿಯನ್​ ಪಟ್ಟ ಅಲಂಕರಿಸುವಲ್ಲಿ ವಿಫಲರಾಗಿದ್ದಾರೆ.

VISTARANEWS.COM


on

Cristiano Ronaldo
Koo

ದುಬೈ: ಪೋರ್ಚುಗಲ್‌ನ ಸೂಪರ್‌ ಸ್ಟಾರ್‌ ಕ್ರಿಸ್ಟಿಯಾನೊ ರೊನಾಲ್ಡೊ(Cristiano Ronaldo) ಅವರು ತಾನು ಪ್ರತಿನಿಧಿಸುವ ಅಲ್​ ನಾಸ್ಸರ್​(Al Nassr) ತಂಡ ಕಿಂಗ್ಸ್ ಕಪ್ ಫೈನಲ್​ನಲ್ಲಿ(King’s Cup final) ಸೋಲು ಕಂಡ ಬೇಸರದಲ್ಲಿ ಮೈದಾನದಲ್ಲೇ ಬಿಕ್ಕಿ ಬಿಕ್ಕಿ ಅತ್ತ ಪ್ರಸಂಗ ನಡೆದಿದೆ. ರೊನಾಲ್ಡೊ ಕಣ್ಣೀರು ಸುರಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​(viral video) ಆಗಿದೆ.

ಮೇ 31, ಶುಕ್ರವಾರ ತಡರಾತ್ರಿ ನಡೆದಿದ್ದ ಕಿಂಗ್ಸ್ ಕಪ್ ಫೈನಲ್‌ನಲ್ಲಿ ಅಲ್ ನಾಸ್ಸರ್ ಮತ್ತು ಅಲ್ ಹಿಲಾಲ್(Al Hilal) ತಂಡಗಳು ಮುಖಾಮುಖಿಯಾಗಿದ್ದವು. ಅತ್ಯಂತ ಜಿದ್ದಾಜಿದ್ದಿನಿಂದ ಸಾಗಿದ ಈ ಪಂದ್ಯ 1-1 ಗೋಲುಗಳಿಂದ ಮುಕ್ತಾಯಕಂಡಿತು. ಹೆಚ್ಚುವರಿ ಸಮಯದ ಆಟದಲ್ಲಿಯೂ ಉಭಯ ತಂಡಗಳಿಂದ ಗೋಲು ಗಳಿಸಲು ಸಾಧ್ಯವಾಗದ ಕಾರಣ ಅಂತಿಮವಾಗಿ ವಿಜೇತರನ್ನು ನಿರ್ಧರಿಸಲು ಪೆನಾಲ್ಟಿ ಶೂಟೌಟ್‌ ಮೊರೆ ಹೋಗಲಾಯಿತು. ಶೂಟೌಟ್​ನಲ್ಲಿ ಅಲ್ ಹಿಲಾಲ್ ತಂಡ 5-4 ಗೋಲುಗಳ ಅಂತರದಿಂದ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿತು.

ತಂಡ ಸೋಲುತ್ತಿದ್ದಂತೆ ಕ್ರಿಸ್ಟಿಯಾನೊ ರೊನಾಲ್ಡೊ ಮೈದಾನದಲ್ಲೇ ಬಿದ್ದು ಅಳತೊಡಗಿದರು. ರೊನಾಲ್ಡೊ ಅವರು ಟರ್ಫ್‌ನ ಮೇಲೆ ಮಲಗಿ ಅಳುತ್ತಿದ್ದ ವೇಳೆ ಸಹ ಆಟಗಾರರು ಮತ್ತು ತಂಡದ ಮಾಲಿಕ ಕೂಡ ಆಗಮಿಸಿ ರೊನಾಲ್ಡೊರನ್ನು ಸಂತೈಸಿದ್ದಾರೆ. ರನ್ನರ್ಸ್-ಅಪ್ ಪದಕ ನೀಡುವ ವೇಳೆಯೂ ರೊನಾಲ್ಡೊ ಕಣ್ಣೀರು ಸುರಿಸುತ್ತಲೇ ಇದ್ದರು. ಈ ದೃಶ್ಯ ಕಂಡು ಅವರ ಅಭಿಮಾನಿಗಳ ಕಣ್ಣಲ್ಲಿಯೂ ನೀರು ಬರುವಂತೆ ಮಾಡಿತು.

ಇದನ್ನೂ ಓದಿ Cristiano Ronaldo: ಅಶ್ಲೀಲ ವರ್ತನೆ ತೋರಿದ ರೊನಾಲ್ಡೊಗೆ ಅಮಾನತು ಶಿಕ್ಷೆ ವಿಧಿಸಿದ ಸೌದಿ ಫುಟ್ಬಾಲ್​ ಫೆಡರೇಷನ್

ಬರೋಬ್ಬರಿ 1,700 ಕೋಟಿ ರೂ. (200 ಮಿಲಿಯನ್‌ ಯೂರೋಸ್‌) ಪಡೆದು ಕ್ರಿಸ್ಟಿಯಾನೊ ರೊನಾಲ್ಡೊ 2 ವರ್ಷಗಳ ಒಪ್ಪಂದ ಪ್ರಕಾರ ಅಲ್ ನಾಸ್ಸರ್ ತಂಡಕ್ಕೆ ಸೇರಿದ್ದರು. ತಂಡದ ಪರ ಇದುವರೆಗೆ ಒಟ್ಟು 35 ಗೋಲು ಬಾರಿಸಿದ್ದಾರೆ. ಆದರೆ ತಂಡವನ್ನು ಚಾಂಪಿಯನ್​ ಪಟ್ಟ ಅಲಂಕರಿಸುವಲ್ಲಿ ವಿಫಲರಾಗಿದ್ದಾರೆ.

67 ವರ್ಷಗಳ ಇತಿಹಾಸ ಹೊಂದಿರುವ ಅಲ್‌ ನಾಸ್ಸರ್​ ಸೌದಿ ಅರೇಬಿಯದ ಅತ್ಯಂತ ಶ್ರೀಮಂತ ಫ‌ುಟ್‌ಬಾಲ್‌ ಕ್ಲಬ್‌. 9 ಸಲ ಚಾಂಪಿಯನ್ಸ್‌ ಲೀಗ್‌ ಪ್ರಶಸ್ತಿ ಜಯಿಸಿದೆ. 6 ಸಲ ಕಿಂಗ್ಸ್‌ ಕಪ್‌ 3 ಸಲ ಕ್ರೌನ್‌ ಪ್ರಿನ್ಸೆಸ್‌ ಕಪ್‌, 3 ಸಲ ಫೆಡರೇಶನ್‌ ಕಪ್‌,2 ಸಲ ಸೌದಿ ಸೂಪರ್‌ ಕಪ್‌, ಚಾಂಪಿಯನ್‌ ಆಗಿ ಮೂಡಿಬಂದ ಹೆಗ್ಗಳಿಕೆ ಈ ಕ್ಲಬ್‌ನದ್ದು.

Continue Reading

ಕ್ರೀಡೆ

Shubman Gill: ಕಿರುತೆರೆ​ ನಟಿಯೊಂದಿಗೆ ಶುಭಮನ್​ ಗಿಲ್ ಮದುವೆ?; ಸ್ವತಃ ಸ್ಪಷ್ಟನೆ ನೀಡಿದ ನಟಿ

Shubman Gill: ಸಾಮಾಜಿಕ ಮಾಧ್ಯಮಗಳ ವರದಿ ಪ್ರಕಾರ ಶುಭಮನ್​ ಗಿಲ್​ ಮತ್ತು ರಿದ್ಧಿಮಾ ಪಂಡಿತ್ ಕೆಲವು ವರ್ಷಗಳಿಂದ ಗುಟ್ಟಾಗಿ ಪ್ರೀತಿಸುತ್ತಿದ್ದರು. ಈ ಜೋಡಿ ಇದೇ ಡಿಸೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದೆ ಎಂದು ಹೇಳಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ನಟಿ, ತಾನು ಶುಭ್‌ಮನ್ ಗಿಲ್ ಅವರನ್ನು ಮದುವೆಯಾಗುತ್ತಿಲ್ಲ ಎಂದು ಹೇಳಿದ್ದಾರೆ.

VISTARANEWS.COM


on

Shubman Gill
Koo

ಮುಂಬಯಿ: ಟೀಮ್​ ಇಂಡಿಯಾದ ಸ್ಟಾರ್​​ ಯುವ ಆಟಗಾರ ಶುಭಮನ್​ ಗಿಲ್(Shubman Gill)​ ಅವರು ಶೀಘ್ರದಲ್ಲೇ ವಿವಾಹವಾಗಲಿದ್ದಾರೆ ಎನ್ನುವ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಗಿಲ್​ ಮದುವೆಯಾಗುತ್ತಿರುವುದು ಸಾರಾ ತೆಂಡೂಲ್ಕರ್(sara tendulkar)​ ಅಲ್ಲ ಬದಲಾಗಿ ಕಿರುತೆರೆಯ ಸುಂದರಿ ರಿದ್ಧಿಮಾ ಪಂಡಿತ್ ಅವರನ್ನು ವರಿಸಲಿದ್ದಾರೆ ಎಂದು ವರದಿಯಾಗಿದೆ. ಇದಕ್ಕೆ ರಿದ್ಧಿಮಾ ಪಂಡಿತ್(Ridhima Pandit) ಸ್ಪಷ್ಟನೆಯನ್ನು ಕೂಡ ನೀಡಿದ್ದಾರೆ.

ಸಾಮಾಜಿಕ ಮಾಧ್ಯಮಗಳ ವರದಿ ಪ್ರಕಾರ ಶುಭಮನ್​ ಗಿಲ್​ ಮತ್ತು ರಿದ್ಧಿಮಾ ಪಂಡಿತ್ ಕೆಲವು ವರ್ಷಗಳಿಂದ ಗುಟ್ಟಾಗಿ ಪ್ರೀತಿಸುತ್ತಿದ್ದರು. ಈ ಜೋಡಿ ಇದೇ ಡಿಸೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದೆ ಎಂದು ಹೇಳಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ನಟಿ, ತಾನು ಶುಭ್‌ಮನ್ ಗಿಲ್ ಅವರನ್ನು ಮದುವೆಯಾಗುತ್ತಿಲ್ಲ. ಈ ವದಂತಿಗಳಲ್ಲಿ ಯಾವುದೇ ಸತ್ಯವಿಲ್ಲ. ನನ್ನ ಜೀವನದಲ್ಲಿ ಈ ರೀತಿಯ ಮಹತ್ವದ ಘಟನೆ ನಡೆದರೆ ನಾನೇ ಮುಂದೆ ಬಂದು ಸುದ್ದಿ ಪ್ರಕಟಿಸುತ್ತೇನೆ ಎಂದು ಹೇಳುವ ಮೂಲಕ ಈ ಸುಳ್ಳು ಸುದ್ದಿಯನ್ನು ತಳ್ಳಿಹಾಕಿದ್ದಾರೆ.

ಈ ಜೋಡಿ ಮದುವೆಯಾಗುತ್ತಾರೆ ಎಂಬ ಸುಳ್ಳು ಸುದ್ದಿ ಹಬ್ಬಲು ಕಾರಣವೆಂದರೆ, ಕೆಲ ದಿನಗಳ ಹಿಂದೆ ರಿದ್ಧಿಮಾ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ಮದುವೆಯ ಕುರಿತಾದ ವಿಡಿಯೊವೊಂದನ್ನು ಹಾಕಿದ್ದರು. ಇದೇ ವೇಳೆ ಕೆಲ ನೆಟ್ಟಿಗರು ಗಿಲ್ ಅವರ ಹೆಸರನ್ನು ಪ್ರಸ್ತಾಪಿಸಿದ್ದರು. ಹೀಗಾಗಿ ಗಿಲ್​ ಮತ್ತು ರಿದ್ಧಿಮಾ ಮದುವೆಯಾಗುತ್ತಾರೆ ಎನ್ನುವ ಸುದ್ದಿ ಹರಡಿತು.

ಇದನ್ನೂ ಓದಿ Shubman Gill: ಶತಕದ ಐಪಿಎಲ್​ ಪಂದ್ಯವನ್ನಾಡಲು ಸಜ್ಜಾದ ಗಿಲ್​; ಸಾಧನೆ ಹೇಗಿದೆ?

ಸಾರಾ ತೆಂಡೂಲ್ಕರ್ ಮತ್ತು ಶುಭಮನ್​ ಗಿಲ್​(Gill And Sara) ಇಬ್ಬರು ಕದ್ದು ಮುಚ್ಚಿ ಡೇಟಿಂಗ್(sara tendulkar and shubman gill relationship)​ ನಡೆಸುತ್ತಿದ್ದಾರೆ, ಇವರಿಬ್ಬರು ಪ್ರೀತಿ ಕೂಡ ಮಾಡುತ್ತಿದ್ದಾರೆ ಎಂಬ ಸುದ್ದಿ ಈಗಾಗಲೇ ಹಲವು ಬಾರಿ ಕೇಳಿಬಂದಿತ್ತು.  ಆದಾಗ್ಯೂ, ಇಬ್ಬರೂ ವದಂತಿಯನ್ನು ನಿರಾಕರಿಸಿಲ್ಲ ಅಥವಾ ದೃಢಪಡಿಸಿಲ್ಲ. ಪಾಪರಾಜಿಗಳು ಇಬ್ಬರು ಸೆಲೆಬ್ರಿಟಿಗಳನ್ನು ಸಾರ್ವಜನಿಕವಾಗಿ ಸಾಕಷ್ಟು ಬಾರಿ ಪ್ರಶ್ನಿಸಿದ್ದಾರೆ.

ರೆಸ್ಟೋರೆಂಟ್​ನಲ್ಲಿ ಜತೆಯಾಗಿ ಕಾಣಿಸಿಕೊಂಡಿದ್ದ ಸಾರಾ-ಗಿಲ್​

ಏಕದಿನ ವಿಶ್ವಕಪ್​ ಪಂದ್ಯವನ್ನಾಡಲು ಟೀಮ್​ ಇಂಡಿಯಾದ ಆಟಗಾರರು ಮುಂಬೈಗೆ ಬಂದಿದ್ದ ವೇಳೆ ಶುಭಮನ್​ ಗಿಲ್​ ಮತ್ತು ಸಾರಾ ಅವರು ರೆಸ್ಟೋರೆಂಟ್​ನಲ್ಲಿ ಜತೆಯಾಗಿ ಕಾಣಿಸಿಕೊಂಡಿದ್ದರು. ಇಬ್ಬರು ಜತೆಯಾಗಿ ಕಾಣಿಸಿಕೊಂಡ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ರೆಸ್ಟೋರೆಂಟ್‌ನಿಂದ ಸಾರಾ ಜತೆಗೆ ಬರುತ್ತಿರುವುದನ್ನು ಪಾಪರಾಜಿಗಳು ಕಂಡ ತಕ್ಷಣ ಶುಭಮನ್​ ಗಿಲ್​ ತನಗೇನು ತಿಳಿಯದವರಂತೆ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಇದೊಂದು ಅಚಾನಕ್ ಮುಖಾಮುಖಿ ಎಂಬಂತೆ ತಮ್ಮ ಪತವನ್ನು ಬದಲಿಸಿ ಒಮ್ಮೆ ಅತ್ತಿಂದಿತ್ತ ಇತ್ತಿಂದತ್ತ ನಡೆದಿದ್ದರು. ಗಿಲ್ ಕ್ರಿಕೆಟ್​ ಆಡುವ ವೇಳೆ ಹೆಚ್ಚಾಗಿ ಸಾರಾ ಕೂಡ ಪ್ರೇಕ್ಷಕರ ಸ್ಟ್ಯಾಂಡ್​ನಲ್ಲಿ ಕಾಣಿಸಿಕೊಳ್ಳುತ್ತಾರೆ. ಅಲ್ಲದೆ ಗಿಲ್​ ಉತ್ತಮವಾಗಿ ಆಡಿದಾಗ ಚಪ್ಪಾಳೆ ತಟ್ಟುತ್ತಾ, ಔಟಾದಾಗ ಸಪ್ಪೆ ಮೋರೆ ಹಾಕಿ ಕುಳಿತ ಹಲವು ಫೋಟೊ ಮತ್ತು ವಿಡಿಯೊ ಈಗಾಗಲೇ ವೈರಲ್​ ಕೂಡ ಆಗಿದೆ.

Continue Reading

ವೈರಲ್ ನ್ಯೂಸ್

Shocking Video: ಮಗುವನ್ನು ಎತ್ತಿಕೊಂಡು ಹೋಗಲು ಕೋತಿಯ ಶತಪ್ರಯತ್ನ; ಮುಂದೇನಾಯ್ತು?

ಕೋತಿಗಳು ನಿಮ್ಮ ಸುತ್ತಮುತ್ತ ಇದ್ದರೆ ಎಚ್ಚರ. ಪುಟ್ಟ ಮಕ್ಕಳನ್ನು ಇದು ಎಳೆದುಕೊಂಡು ಹೋಗುವುದು. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಈ ಎರಡು ವಿಡಿಯೋಗಳು ನಿಮ್ಮ ಎದೆಯಲ್ಲಿ ನಡುಕ (Shocking Video) ಹುಟ್ಟಿಸದೆ ಇರಲಾರದು.

VISTARANEWS.COM


on

By

Shocking Video
Koo

ಮಕ್ಕಳು (Kids) ಆಟವಾಡುವಾಗ ಎಷ್ಟು ಎಚ್ಚರಿಕೆಯಿಂದ ಇದ್ದರೂ ಸಾಲದು. ಯಾಕೆಂದರೆ ಅಪಾಯ (danger) ಎಲ್ಲಿಂದ, ಹೇಗೆ ಬರುತ್ತದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ. ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ ಆಗಿರುವ ಈ ವಿಡಿಯೋ ನೋಡಿದರೆ ಒಂದು ಕ್ಷಣ ಎಂತವರನ್ನೂ ಭಯ ಬೀಳಿಸದೆ (Shocking Video) ಇರಲಾರದು. ಆಟವಾಡುತ್ತಿದ್ದ ಮಗುವಿನ ಮೇಲೆ ಕೋತಿಯೊಂದು ನಿರಂತರ ದಾಳಿಗೆ ಮುಂದಾದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.

ವೈರಲ್ ಆಗಿರುವ ಈ ವಿಡಿಯೋದಲ್ಲಿ ಕೋತಿಯೊಂದು ಇತರ ಮಕ್ಕಳೊಂದಿಗೆ ಹೊರಗೆ ಆಡುತ್ತಿರುವ ಮಗುವಿನ ಮೇಲೆ ದಾಳಿ ಮಾಡಿದೆ. ಮಗು ಮನೆಯ ಹೊರಗೆ ಮರದ ಮೆಟ್ಟಿಲುಗಳ ಮೇಲೆ ಇದ್ದಾಗ ಮಂಗ ಇದ್ದಕ್ಕಿದ್ದಂತೆ ಹಾರಿ ಬಂದು ಮಗುವನ್ನು ಎಳೆದುಕೊಂಡು ಹೋಗಲು ಪ್ರಯತ್ನಿಸುತ್ತಿದೆ.

ಇತರ ಮಕ್ಕಳು ಭಯದಿಂದ ಓಡಿಹೋಗುತ್ತಾರೆ. ಕೂಡಲೇ ಮಗುವಿನ ಬೊಬ್ಬೆ ಕೇಳಿ ಓಡಿ ಬಂದ ತಾಯಿ ಮಗುವನ್ನು ರಕ್ಷಿಸಲು ಪ್ರಯತ್ನಿಸುತ್ತಾಳೆ. ಆದರೂ ಮಗ ಆಕೆಯ ಕೈಯಿಂದ ಮಗುವನ್ನು ಹಿಡಿದುಕೊಂಡು ಹೋಗಲು ಪ್ರಯತ್ನಿಸುತ್ತದೆ. ಕೂಡಲೇ ಅಲ್ಲಿಗೆ ಬಂದ ವ್ಯಕ್ತಿಯೊಬ್ಬ ಕೋತಿಯನ್ನು ಹೆದರಿಸಲು ಪ್ರಯತ್ನಿಸುತ್ತಾರೆ. ಅವರು ಎಷ್ಟೇ ಪ್ರಯತ್ನ ಮಾಡಿದರೂ ಕೋತಿಯೂ ಮಗುವನ್ನು ಕೊಂಡೊಯ್ಯಲು ಬಿಡದ ಪ್ರಯತ್ನ ನಡೆಸಿದೆ.


ಮಗುವಿನ ತಾಯಿ ಮಗುವನ್ನು ಕೋತಿಯ ಹಿಡಿತದಿಂದ ಕಿತ್ತು ತನ್ನ ಮಡಿಲಲ್ಲಿ ಹಿಡಿದಿಡುತ್ತಾಳೆ. ಆದರೆ, ಪಟ್ಟುಬಿಡದ ಕೋತಿ ತನ್ನ ದಾಳಿಯನ್ನು ಮುಂದುವರೆಸಿದೆ. ತಾಯಿಯ ತೋಳುಗಳಿಂದಲೂ ಮಗುವನ್ನು ಎಳೆಯಲು ಪ್ರಯತ್ನಿಸುತ್ತಿದೆ.

ಈಗಾಗಲೇ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಎಲ್ಲರ ಗಮನ ಸೆಳೆದಿದೆ. ಸುಮಾರು 7 ಮಿಲಿಯನ್ ಮಂದಿ ಇದನ್ನು ವೀಕ್ಷಿಸಿದ್ದಾರೆ. ಇದಕ್ಕೆ ಸಾಕಷ್ಟು ಮಂದಿ ಕಾಮೆಂಟ್ ಮಾಡಿದ್ದು ಎಲ್ಲರ ಅಸಹಾಯಕತೆ ಬಗ್ಗೆ ಬೇಸರ ವ್ಯಕ್ತ ಪಡಿಸಿದ್ದಾರೆ.

ಈ ವಿಡಿಯೋ ಜೊತೆಗೆ ನೆಟ್ಟಿಗರೊಬ್ಬರು ಮತ್ತೊಂದು ಕೋತಿ ದಾಳಿಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇತರ ಮಕ್ಕಳೊಂದಿಗೆ ಆಡುತ್ತಿದ್ದ ಪುಟ್ಟ ಮಗುವನ್ನು ಕೋತಿಯೊಂದು ಎಳೆದುಕೊಂಡು ಹೋಗಲು ಪ್ರಯತ್ನಿಸಿದೆ.


ಮನೆಯ ಹೊರಗೆ ಇತರ ಮಕ್ಕಳೊಂದಿಗೆ ಪುಟ್ಟ ಮಗು ಆಟವಾಡುತ್ತಿತ್ತು. ಅಲ್ಲಿಗೆ ಬಂದ ಕೋತಿಯೊಂದು ಮಗುವನ್ನು ಅಂಗಳದಲ್ಲಿ ಸಾಕಷ್ಟು ದೂರದವರೆಗೆ ಎಳೆದುಕೊಂಡು ಹೋಗಿದೆ. ಆದರೆ ಮಗುವನ್ನು ಎತ್ತಿಕೊಂಡು ಹೋಗಲು ಆಗಲಿಲ್ಲ. ಅಲ್ಲಿಯೇ ಇದ್ದ ಜನರನ್ನು ಕಂಡು ಹೆದರಿ ಅದು ಮಗುವನ್ನು ಬಿಟ್ಟು ಹೋಯಿತು. ಈ ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿದ್ದು, ಸುಮಾರು 52 ಸಾವಿರ ಮಂದಿ ಇದನ್ನು ವೀಕ್ಷಿಸಿದ್ದಾರೆ.

Continue Reading
Advertisement
Gautam Gambhir
ಕ್ರೀಡೆ3 mins ago

Gautam Gambhir: ಗೌತಮ್​ ಗಂಭೀರ್​ ಭಾರತದ ಮುಂದಿನ ಕೋಚ್​; ಅಧಿಕೃತ ಘೋಷಣೆಯೊಂದೇ ಬಾಕಿ

Rameshwaram Cafe food on Anant Ambani, Radhika Merchant
ಸಿನಿಮಾ5 mins ago

Rameshwaram Cafe: ಅನಂತ್ ಅಂಬಾನಿ ಎರಡನೇ ಪ್ರಿ ವೆಡ್ಡಿಂಗ್‌ನಲ್ಲಿ ಮೇನ್‌ ಮೆನು ರಾಮೇಶ್ವರಂ ಕೆಫೆಯ ಪುಡಿ ಇಡ್ಲಿ ಮತ್ತು ಪುಡಿ ದೋಸೆ!

Family Fighting in Belgavi
ಬೆಳಗಾವಿ8 mins ago

Family Fighting : ಜಮೀನಿನ ವಿಚಾರದಲ್ಲಿ ಕುಟುಂಬಗಳ ಫೈಟ್; ಕುಡುಗೋಲು, ದೊಣ್ಣೆ ಹಿಡಿದು ಮಾರಾಮಾರಿ

Valmiki Corporation Scam
ಕರ್ನಾಟಕ10 mins ago

Valmiki Corporation Scam: ಮೃತ ಅಧೀಕ್ಷಕ ಚಂದ್ರಶೇಖರನ್‌ ಪತ್ನಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು

prashant kishor
ಪ್ರಮುಖ ಸುದ್ದಿ11 mins ago

Lok Sabha Election 2024: ಈಗಲೂ ಹೇಳ್ತೇನೆ ಕೇಳಿ, ಬಿಜೆಪಿಯೇ ಗೆಲ್ಲೋದು! ಎಕ್ಸಿಟ್ ಪೋಲ್‌ಗೆ ಮೊದಲು ಪ್ರಶಾಂತ್ ಕಿಶೋರ್ ಫೈನಲ್ ಲೆಕ್ಕಾಚಾರ ಹೀಗಿದೆ!

IndiGo Flight
ದೇಶ14 mins ago

IndiGo Flight: ಮತ್ತೊಂದು ಹುಸಿ ಬಾಂಬ್‌ ಕರೆ; ಮುಂಬೈಯಲ್ಲಿ ಇಂಡಿಗೋ ವಿಮಾನದ ತುರ್ತು ಲ್ಯಾಂಡಿಂಗ್‌

bhavani revanna SIT team
ಪ್ರಮುಖ ಸುದ್ದಿ48 mins ago

Bhavani Revanna: ಮಗ ಬಂದ, ಅಮ್ಮ ನಾಪತ್ತೆ! ಮನೆಯಿಂದ ಮಾಯವಾದ ಭವಾನಿ ರೇವಣ್ಣ; ಕಾದು ಕುಳಿತ ಎಸ್‌ಐಟಿ

Valmiki Corporation Scam
ಪ್ರಮುಖ ಸುದ್ದಿ51 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ ತನಿಖೆಗೆ ಸಿಬಿಐ ಎಂಟ್ರಿ ಫಿಕ್ಸ್; ನಾಗೇಂದ್ರ ವಿರುದ್ಧ ಕ್ರಮಕ್ಕೆ ಖರ್ಗೆ ಸೂಚನೆ

Assault Case
ಬೆಳಗಾವಿ1 hour ago

Assault Case : ಮಾರಾಮಾರಿಯಲ್ಲಿ ತಂದೆ ಕಿವಿ ಕಟ್‌; ಚಾಲಕ ಇಲ್ಲದ್ದಕ್ಕೆ ತಾನೇ ಆಂಬ್ಯುಲೆನ್ಸ್‌ ಓಡಿಸಿ ಆಸ್ಪತ್ರೆಗೆ ಕರೆತಂದ ಮಗ

Actor Jaggesh talk about body shame
ಸ್ಯಾಂಡಲ್ ವುಡ್2 hours ago

Actor Jaggesh: ಬಾಲ್ಯದಲ್ಲಿ ನನ್ನನ್ನು ಕರಿಯ ಎಂದು ಗೇಲಿ ಮಾಡುತ್ತಿದ್ದರು, ಆದರೆ ನಾನು…; ಜಗ್ಗೇಶ್‌ ಮನದ ಮಾತು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌