Lok Sabha Election: 5 ರಾಜ್ಯಗಳಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ತಂತ್ರ; ಸಾಲು ಸಾಲು ಸಭೆ - Vistara News

ದೇಶ

Lok Sabha Election: 5 ರಾಜ್ಯಗಳಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ತಂತ್ರ; ಸಾಲು ಸಾಲು ಸಭೆ

Lok Sabha Election: ಲೋಕಸಭೆ ಚುನಾವಣೆಗೆ ಸಕಲ ರೀತಿಯಲ್ಲಿ ಸಜ್ಜಾಗುತ್ತಿರುವ ಬಿಜೆಪಿಯು ಅಭ್ಯರ್ಥಿಗಳ ಆಯ್ಕೆಗಾಗಿ ಸಾಲು ಸಾಲು ಸಭೆಗಳನ್ನು ನಡೆಸುತ್ತಿದೆ. ಆ ಮೂಲಕ ಗೆಲ್ಲುವ ಅಭ್ಯರ್ಥಿಗಳನ್ನು ಗುರುತಿಸಿ, ಅವರಿಗೆ ಮಣೆ ಹಾಕಲು ಚಿಂತನೆ ನಡೆಸಿದೆ.

VISTARANEWS.COM


on

Amit Shah Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಲೋಕಸಭೆ ಚುನಾವಣೆಯನ್ನು (Lok Sabha Election 2024) ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಜೆಪಿಯು (BJP) ಇನ್ನಿಲ್ಲದ ರಣತಂತ್ರ ರೂಪಿಸುತ್ತಿದೆ. ಕೆಲವೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಹ್ಯಾಟ್ರಿಕ್‌ ಸಾಧಿಸಲು ಶತಪ್ರಯತ್ನ ಮಾಡುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ, ಉತ್ತರ ಪ್ರದೇಶ (Uttar Pradesh) ಸೇರಿ ಐದು ರಾಜ್ಯಗಳಲ್ಲಿ ಲೋಕಸಭೆ ಚುನಾವಣೆಯ ಅಭ್ಯರ್ಥಿಗಳನ್ನು (BJP Candidates) ಆಯ್ಕೆ ಮಾಡಲು ಸಾಲು ಸಾಲು ಸಭೆ ನಡೆಸುತ್ತಿದೆ. ಗೆಲ್ಲುವ ಅಭ್ಯರ್ಥಿಗಳಿಗಾಗಿ ಸಭೆಯಲ್ಲಿ ತೀವ್ರ ಚರ್ಚೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಸೇರಿ ಹಲವು ನಾಯಕರು ಶನಿವಾರ ಮಹತ್ವದ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತೆಲಂಗಾಣ, ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿ ಅಭ್ಯರ್ಥಿಗಳ ಆಯ್ಕೆಯ ದಿಸೆಯಲ್ಲಿ ಮಹತ್ವದ ಸಭೆ ನಡೆದಿದೆ ಎಂದು ತಿಳಿದುಬಂದಿದೆ. ಸಾಲು ಸಾಲು ಸಭೆಯ ಹಿನ್ನೆಲೆಯಲ್ಲಿ ರಾಜಸ್ಥಾನ, ಛತ್ತೀಸ್‌ಗಢದ ಮುಖ್ಯಮಂತ್ರಿಗಳು ದೆಹಲಿಯಲ್ಲೇ ಬೀಡುಬಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

narendra modi amit shah jp nadda

100 ಅಭ್ಯರ್ಥಿಗಳ ಪಟ್ಟಿ ರೆಡಿ

ಬಿಜೆಪಿ ಕೇಂದ್ರೀಯ ಚುನಾವಣೆ ಸಮಿತಿ ಸಭೆಯು ಫೆಬ್ರವರಿ 29ರಂದು ಸಭೆ ನಡೆಸಲಿದ್ದು, ಅದೇ ದಿನ 100 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ ಎಂಬುದಾಗಿ ಪಕ್ಷದ ಮೂಲಗಳು ತಿಳಿಸಿವೆ. ಐದು ರಾಜ್ಯಗಳ 100 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ಈಗಾಗಲೇ 100 ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ಫೆಬ್ರವರಿ 29ರಂದು ಪ್ರಕಟ ಮಾಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಹೆಸರುಗಳು ಕೂಡ ಪಟ್ಟಿಯಲ್ಲಿ ಇರಲಿವೆ. ಆದರೆ, ಯಾವ ಕ್ಷೇತ್ರ ಎಂಬುದರ ಕುರಿತು ಹೆಚ್ಚಿನ ಮಾಹಿತಿ ಇಲ್ಲ ಎಂದು ಹೇಳಲಾಗುತ್ತಿದೆ. ನರೇಂದ್ರ ಮೋದಿ ಅವರು ವಾರಾಣಸಿ, ಅಮಿತ್‌ ಶಾ ಅವರು ಗಾಂಧಿನಗರದಿಂದಲೇ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಮುಂದಿನ 100 ದಿನಗಳಲ್ಲಿ ಏನೇನು ಮಾಡಬೇಕು ಎಂಬುದರ ಕುರಿತು ಟಾಸ್ಕ್‌ ನೀಡಿದ್ದಾರೆ. ಅದರಲ್ಲೂ, ಬಿಜೆಪಿ ಕಾರ್ಯಕರ್ತರು ಪ್ರತಿಯೊಂದು ಮನೆಗೆ ತೆರಳಬೇಕು. ಕೇಂದ್ರ ಸರ್ಕಾರ ಜಾರಿಗೆ ತಂದ ಯೋಜನೆಗಳ ಕುರಿತು ಜನರಿಗೆ ಮಾಹಿತಿ ನೀಡಬೇಕು. ಈ ಬಾರಿ ಬಿಜೆಪಿಯು 370 ಹಾಗೂ ಎನ್‌ಡಿಎ 400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲ್ಲಬೇಕು. ಅದಕ್ಕೆ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಅವಿರತವಾಗಿ ಶ್ರಮಿಸಬೇಕು ಎಂಬುದಾಗಿ ನರೇಂದ್ರ ಮೋದಿ ಸೂಚಿಸಿದ್ದಾರೆ.

ಇದನ್ನೂ ಓದಿ: Lok Sabha Election: ಮಾರ್ಚ್ 13ರ ಬಳಿಕ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಸಾಧ್ಯತೆ

ಮಾರ್ಚ್‌ 13ರ ನಂತರವೇ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಕೇಂದ್ರ ಚುನಾವಣಾ ಸಮಿತಿಯ ಅಧಿಕಾರಿಗಳು ಪ್ರಸ್ತುತ ಚುನಾವಣಾ ಸಿದ್ಧತೆಯನ್ನು ಪರಿಶೀಲಿಸಲು ವಿವಿಧ ರಾಜ್ಯಗಳಿಗೆ ಭೇಟಿ ನೀಡುತ್ತಿದ್ದಾರೆ. ಪ್ರಸ್ತುತ ಅವರು ತಮಿಳುನಾಡಿನಲ್ಲಿದ್ದು, ನಂತರ ಅವರು ಉತ್ತರ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ವಿವಿಧ ರಾಜ್ಯಗಳ ಭೇಟಿಯನ್ನು ಮಾರ್ಚ್ 13ರೊಳಗೇ ಮುಗಿಸಲು ಚುನಾವಣಾ ಆಯೋಗವು ನಿರ್ಧರಿಸಿದೆ. ಹೀಗಾಗಿ, ಆಯೋಗವು ಚುನಾವಣೆ ದಿನಾಂಕಗಳನ್ನು ಮಾರ್ಚ್ 13 ಅಥವಾ ಆ ನಂತರ ಪ್ರಕಟಿಸುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಹೇಳಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Solar Power: ಜಾಗತಿಕವಾಗಿ ಮತ್ತೊಮ್ಮೆ ಬೆಳಗಿದ ಭಾರತ; ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಜಪಾನ್‌ನನ್ನೂ ಮೀರಿದ ಸಾಧನೆ

Solar Power: 2023ರಲ್ಲಿ ಜಗತ್ತಿನ ಮೂರನೇ ಅತಿದೊಡ್ಡ ಸೌರ ವಿದ್ಯುತ್‌ ಉತ್ಪಾದಕ ರಾಷ್ಟ್ರ ಎನ್ನುವ ಹಿರಿಮೆಗೆ ಭಾರತ ಪಾತ್ರವಾಗಿದೆ. ಜಪಾನ್‌ ಅನ್ನು ಹಿಂದಿಕ್ಕಿ ಭಾರತ ಮೂರನೇ ಸ್ಥಾನವನ್ನು ಅಲಂಕರಿಸಿರುವುದು ವಿಶೇಷ. ಭಾರತವು 2015ರಲ್ಲಿ ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಒಂಬತ್ತನೇ ಸ್ಥಾನದಲ್ಲಿತ್ತು. ಸುಮಾರು ಎಂಟು ವರ್ಷಗಳಲ್ಲಿ ಇದೀಗ 3ನೇ ಸ್ಥಾನಕ್ಕೆ ಜಿಗಿದಿದೆ. 2023ರಲ್ಲಿಭಾರತದಲ್ಲಿ ಸೌರ ಶಕ್ತಿಯಿಂದ ಶೇ. 5.8ರಷ್ಟು ವಿದ್ಯುತ್‌ ಉತ್ಪಾದಿಸಲಾಗಿದೆ ಎಂದು ಜಾಗತಿಕ ಇಂಧನ ಚಿಂತಕರ ಚಾವಡಿ ಎಂಬರ್‌ ತಿಳಿಸಿದೆ.

VISTARANEWS.COM


on

Solar Power
Koo

ನವದೆಹಲಿ: ಜಾಗತಿಕ ಮಟ್ಟದಲ್ಲಿ ಭಾರತ ಮತ್ತೊಮ್ಮೆ ಗಮನ ಸೆಳೆದಿದೆ. 2023ರಲ್ಲಿ ಜಗತ್ತಿನ ಮೂರನೇ ಅತಿದೊಡ್ಡ ಸೌರ ವಿದ್ಯುತ್‌ (Solar Power) ಉತ್ಪಾದಕ ರಾಷ್ಟ್ರ ಎನ್ನುವ ಹಿರಿಮೆಗೆ ಭಾರತ ಪಾತ್ರವಾಗಿದೆ (Third largest Solar Power Generator). ಜಪಾನ್‌ ಅನ್ನು ಹಿಂದಿಕ್ಕಿ ಭಾರತ ಮೂರನೇ ಸ್ಥಾನವನ್ನು ಅಲಂಕರಿಸಿರುವುದು ವಿಶೇಷ. ಭಾರತವು 2015ರಲ್ಲಿ ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಒಂಬತ್ತನೇ ಸ್ಥಾನದಲ್ಲಿತ್ತು. ಸುಮಾರು ಎಂಟು ವರ್ಷಗಳಲ್ಲಿ ಇದೀಗ 3ನೇ ಸ್ಥಾನಕ್ಕೆ ಜಿಗಿದಿದೆ.

2023ರಲ್ಲಿ ಜಾಗತಿಕ ವಿದ್ಯುತ್‌ ವಲಯದಲ್ಲಿ ದಾಖಲೆಯ ಶೇ. 5.5ರಷ್ಟು ಸೌರ ಶಕ್ತಿಯನ್ನು ಉತ್ಪಾದಿಸಲಾಗಿದೆ. ಇತ್ತ ಭಾರತದಲ್ಲಿ ಸೌರ ಶಕ್ತಿಯಿಂದ ಶೇ. 5.8ರಷ್ಟು ವಿದ್ಯುತ್‌ ಉತ್ಪಾದಿಸಲಾಗಿದೆ ಎಂದು ಜಾಗತಿಕ ಇಂಧನ ಚಿಂತಕರ ಚಾವಡಿ ಎಂಬರ್‌ (Ember) ತಿಳಿಸಿದೆ.

6 ಪಟ್ಟು ಏರಿಕೆ

2023ರಲ್ಲಿ ಜಾಗತಿಕ ಸೌರ ಉತ್ಪಾದನೆಯು 2015ಕ್ಕಿಂತ ಆರು ಪಟ್ಟು ಹೆಚ್ಚಳ ದಾಖಲಿಸಿದೆ. ಇದೇ ವೇಳೆ ಭಾರತದಲ್ಲಿಯೂ ಗಮನಾರ್ಹ ಬೆಳವಣಿಗೆ ಕಂಡು ಬಂದಿದೆ. ಸೌರ ವಿದ್ಯುತ್‌ 2015ರಲ್ಲಿದ್ದ ಶೇ. 0.5ರಿಂದ 2023ಕ್ಕೆ ಶೇ. 5.8ಕ್ಕೆ ಏರಿಕೆಯಾಗಿದೆ ಎಂದು ಎಂಬರ್‌ ತನ್ನ ವರದಿಯಲ್ಲಿ ಕಂಡುಕೊಂಡಿದೆ. ಇಂಟರ್‌ ನ್ಯಾಷನಲ್‌ ಎನರ್ಜಿ ಏಜೆನ್ಸಿಯ(IEA) ಪ್ರಕಾರ, 2030ರ ವೇಳೆಗೆ ಸೌರ ವಿದ್ಯುತ್ ಉತ್ಪಾದನೆಯು ಜಾಗತಿಕ ವಿದ್ಯುತ್ ಉತ್ಪಾದನೆಯ ಶೇ. 22ಕ್ಕೆ ಏರಿಕೆಯಾಗಲಿದೆ. ಭಾರತದ ವಾರ್ಷಿಕ ಇಂಗಾಲದ ಡೈ ಆಕ್ಸೈಡ್ ಹೊರಸೂಸುವಿಕೆಗೆ ಅರ್ಧದಷ್ಟು (2023ರಲ್ಲಿ 1.18 ಗಿಗಾಟನ್) ವಿದ್ಯುತ್ ಉತ್ಪಾದನೆ ಕಾರಣವಾಗುತ್ತಿರುವುದರಿಂದ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳುವುದು ಅನಿವಾರ್ಯ ಎನಿಸಿಕೊಂಡಿದೆ.

ಸೌರ ಶಕ್ತಿ ಸತತ 19ನೇ ವರ್ಷವೂ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ವಿದ್ಯುತ್ ಮೂಲ ಎನಿಸಿಕೊಂಡಿದೆ. 2023ರಲ್ಲಿ ವಿಶ್ವಾದ್ಯಂತ ಕಲ್ಲಿದ್ದಲಿಗಿಂತ ಎರಡು ಪಟ್ಟು ಹೆಚ್ಚು ಸೌರ ಶಕ್ತಿಯಿಂದ ವಿದ್ಯುತ್‌ ಉತ್ಪಾದನೆಯಾಗಿದೆ. ಇನ್ನು ಈ ಅವಧಿಯ ಸೌರ ಉತ್ಪಾದನೆಯಲ್ಲಿ ಭಾರತವು ವಿಶ್ವದ ನಾಲ್ಕನೇ ಅತಿ ದೊಡ್ಡ ಹೆಚ್ಚಳವನ್ನು ದಾಖಲಿಸಿದೆ. ಚೀನಾ (+156 ಟಿಡಬ್ಲ್ಯುಎಚ್‌), ಅಮೆರಿಕ (+33 ಟಿಡಬ್ಲ್ಯುಎಚ್‌), ಬ್ರೆಜಿಲ್ (+22 ಟಿಡಬ್ಲ್ಯುಎಚ್‌) ಬಳಿಕ ಭಾರತ (+18 ಟಿಡಬ್ಲ್ಯುಎಚ್‌) ಇದೆ.

ಎಂಬರ್‌ನ ಏಷ್ಯಾ ಕಾರ್ಯಕ್ರಮದ ನಿರ್ದೇಶಕ ಆದಿತ್ಯ ಲೊಲ್ಲಾ ಮಾತನಾಡಿ, ”ಶುದ್ಧ ವಿದ್ಯುತ್ ಹೆಚ್ಚಿಸಬೇಕಿರುವುದು ವಿದ್ಯುತ್ ವಲಯದಲ್ಲಿ ಇಂಗಾಲದ ಹೊರಸೂಸುವಿಕೆ ಕಡಿಮೆ ಮಾಡಲು ಮಾತ್ರವಲ್ಲದೇ ಏರುತ್ತಿರುವ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಮತ್ತು ಆರ್ಥಿಕ ಹೊರೆಯನ್ನು ದೂರ ಸರಿಸಲು ಅವಶ್ಯಕವಾಗಿದೆ. ಅಲ್ಲದೇ ಇದು ಹವಾಮಾನ ಬದಲಾವಣೆಯನ್ನು ನಿಭಾಯಿಸುವಲ್ಲೂ ನಿರ್ಣಾಯಕ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Renewable Energy: ಭಾರತದಲ್ಲಿದೆ ಪ್ಯಾರಿಸ್‌ಗಿಂತ 5 ಪಟ್ಟು ದೊಡ್ಡದಾದ ಸೋಲಾರ್‌ ಪವರ್‌ ಘಟಕ!‌

ಕಳೆದ ಡಿಸೆಂಬರ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಕಾಪ್​ 28 ಹವಾಮಾನ ಬದಲಾವಣೆ ಸಮ್ಮೇಳನದಲ್ಲಿ ವಿಶ್ವದ ವಿವಿಧ ರಾಷ್ಟ್ರಗಳು 2030ರ ವೇಳೆಗೆ ಜಾಗತಿಕ ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು ಮೂರು ಪಟ್ಟು ಹೆಚ್ಚಿಸುವ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿವೆ. ಇದರಲ್ಲಿ ಭಾರತವೂ ಒಂದಾಗಿದೆ. ದೇಶದಲ್ಲಿ ಈಗಾಗಲೇ ವಿವಿಧ ಯೋಜನೆಗಳ ಮೂಲಕ ಸೌರ ವಿದ್ಯುತ್‌ ಉತ್ಪಾದನೆಗೆ ಉತ್ತೇಜನ ನೀಡಲಾಗುತ್ತಿದೆ.

Continue Reading

ಉದ್ಯೋಗ

Job News: ಗುಡ್‌ನ್ಯೂಸ್‌; ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ ಶೀಘ್ರ 12,000 ಉದ್ಯೋಗಿಗಳ ನೇಮಕ

Job News: ಬ್ಯಾಂಕ್‌ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುತ್ತಿರುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ದೇಶದ ಅತಿ ದೊಡ್ಡ ಬ್ಯಾಂಕ್‌ ಎನಿಸಿಕೊಂಡಿರುವ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಬರೋಬ್ಬರಿ 12,000 ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಮುಂದಾಗಿದೆ. ಮಾಹಿತಿ ತಂತ್ರಜ್ಞಾನ ಮತ್ತು ಇತರ ವಿಭಾಗಗಳಲ್ಲಿ ಈ ನೇಮಕಾತಿ ನಡೆಲಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಅಧಿಸೂಚನೆ ಶೀಘ್ರದಲ್ಲಿಯೇ ಹೊರ ಬೀಳಲಿದೆ.

VISTARANEWS.COM


on

Job News
Koo

ನವದೆಹಲಿ: ದೇಶದ ಅತಿ ದೊಡ್ಡ ಬ್ಯಾಂಕ್‌ ಎನಿಸಿಕೊಂಡಿರುವ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (State Bank of India) ಬರೋಬ್ಬರಿ 12,000 ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಮುಂದಾಗಿದೆ. ಮಾಹಿತಿ ತಂತ್ರಜ್ಞಾನ (Information Technology) ಮತ್ತು ಇತರ ವಿಭಾಗಗಳಲ್ಲಿ ಈ ನೇಮಕಾತಿ ನಡೆಲಿದೆ ಎಂದು ಅಧ್ಯಕ್ಷ ದಿನೇಶ್‌ ಖರಾ (Dinesh Khara) ಮಾಹಿತಿ ನೀಡಿದ್ದಾರೆ (Job News).

”ಸುಮಾರು 11,000ರಿಂದ 12,000 ಉದ್ಯೋಗಿಗಳ ನೇಮಕಾತಿಯ ಪ್ರಕ್ರಿಯೆ ನಡೆಯುತ್ತಿದೆ. ಈ ನೇಮಕಾತಿ ಬ್ಯಾಂಕ್‌ನ ತಾಂತ್ರಿಕ ಸಾಮರ್ಥ್ಯವನ್ನು ಹೆಚ್ಚಿಸುವ ಗುರಿ ಹೊಂದಿದೆ. ಜತೆಗೆ ಸೇವೆಯ ಗುಣಮಟ್ಟವನ್ನು ವೃದ್ಧಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆʼʼ ಎಂದು ಅವರು ವಿವರಿಸಿದ್ದಾರೆ. ʼʼನೇಮಕಗೊಂಡವರಿಗೆ ಆರಂಭದಲ್ಲಿ ಬ್ಯಾಂಕಿಂಗ್‌ ವ್ಯವಸ್ಥೆಯ ಬಗ್ಗೆ ಸೂಕ್ತ ಮಾಹಿತಿ ನೀಡಿ ಬಳಿಕ ಅವರನ್ನು ಐಟಿ ವಿಭಾಗಕ್ಕೆ ಶಿಫಾರಸ್ಸು ಮಡಲಾಗುವುದುʼʼ ಎಂದು ಅವರು ಹೇಳಿದ್ದಾರೆ. ಈ ಮೂಲಕ ಬ್ಯಾಂಕ್‌ ಉದ್ಯೋಗ ಹೊಂದಬೇಕು ಎನ್ನುವವರ ಕನಸು ನನಸಾಗಲಿದೆ.

ಉದ್ಯೋಗಿಗಳ ಸಂಖ್ಯೆಯಲ್ಲಿ ಕುಸಿತ

ಮಾರ್ಚ್‌ ಅಂತ್ಯಕ್ಕೆ ಎಸ್‌ಬಿಐ ಉದ್ಯೋಗಿಗಳ ಸಂಖ್ಯೆ 2,32,296ಕ್ಕೆ ಕುಸಿದಿದೆ. ಕಳೆದ ವರ್ಷ ಇದೇ ವೇಳೆಗೆ 2,35,858 ಉದ್ಯೋಗಿಗಳಿ ಕಾರ್ಯ ನಿರ್ವಹಿಸುತ್ತಿದ್ದರು. ಇನ್ನು 2024ರ ಮಾರ್ಚ್‌ 31ಕ್ಕೆ ಕೊನೆಗೊಂಡ ತ್ರೈ ಮಾಸಿಕದಲ್ಲಿ ಎಸ್‌ಬಿಐಯ ನಿವ್ವಳ ಲಾಭ ಶೇ. 24ರಷ್ಟು ಏರಿಕೆ ದಾಖಲಿಸಿ 20,698 ಕೋಟಿ ರೂ.ಗೆ ತಲುಪಿದೆ. ಕಳೆದ ವರ್ಷ ಈ ಅವಧಿಯಲ್ಲಿ ಎಸ್‌ಬಿಐ 16,695 ಕೋಟಿ ರೂ. ನಿವ್ವಳ ಲಾಭ ಗಳಿಸಿತ್ತು. ಬಡ್ಡಿಯ ಆದಾಯ ಶೇ. 19ರಷ್ಟು ವೃದ್ಧಿಸಿ 92,951 ಕೋಟಿ ರೂ.ಯಿಂದ 1.11 ಲಕ್ಷ ಕೋಟಿ ರೂ.ಗೆ ತಲುಪಿದೆ. ದೇಶದಲ್ಲಿ ಉದ್ಯಮ ಆಧಾರಿತ ಚಟುವಟಿಕೆ ಹೆಚ್ಚುತ್ತಿರುವುದೇ ಇದಕ್ಕೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.

ಎಸ್‌ಬಿಐಯ ಒಟ್ಟು ಆದಾಯವೂ ಏರುಗತಿಯಲ್ಲಿದೆ. 1.06 ಲಕ್ಷ ಕೋಟಿ ರೂ.ಯಿಂದ 1.28 ಲಕ್ಷ ಕೋಟಿ ರೂ.ಗೆ ಜಿಗಿತ ಕಂಡಿದೆ. ಜತೆಗೆ ನಿರ್ವಹಣಾ ವೆಚ್ಚವೂ ಹಿಂದಿನ ವರ್ಷದ 29,732 ಕೋಟಿ ರೂ.ಗಳಿಂದ 30,276 ಕೋಟಿ ರೂ.ಗೆ ಏರಿಕೆ ಕಂಡಿದೆ ಎಂದು ಅಂಕಿ-ಅಂಶಗಳು ತಿಳಿಸಿವೆ.

ಇದನ್ನೂ ಓದಿ: Ujjivan Small Finance Bank : ಉಜ್ಜೀವನ್ ಸ್ಮಾಲ್ ಫೈನಾನ್ಸ್ ಸಿಇಒ ಆಗಿ ಸಂಜೀವ್ ನೌಟಿಯಾಲ್ ನೇಮಕ

ನಿರೀಕ್ಷೆ ಮೀರಿದ ಲಾಭಾಂಶ

ಆರ್ಥಿಕ ತಜ್ಞರು ಈ ತ್ರೈಮಾಸಿಕದಲ್ಲಿ ಎಸ್‌ಬಿಐ 13,400 ಕೋಟಿ ರೂ. ಲಾಭ ದಾಖಲಿಸಬಹುದು ಎಂದು ನಿರೀಕ್ಷಿಸಿದ್ದರು. ಆದರೆ ಫಲಿತಾಂಶ ಈ ಎಲ್ಲ ನಿರೀಕ್ಷೆಗಳನ್ನೂ ಮೀರಿದ್ದು, ಬರೋಬ್ಬರಿ 20,698 ಕೋಟಿ ರೂ. ನಿವ್ವಳ ಲಾಭ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಎಸ್‌ಬಿಐ ತನ್ನ ಪ್ರತಿ ಈಕ್ವಿಟಿ ಷೇರಿಗೆ 13.70 ರೂ. ಲಾಭಾಂಶ ಘೋಷಿಸಿದೆ. ತ್ರೈ ಮಾಸಿಕ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಎಸ್‌ಬಿಐ ಷೇರುಗಳಲ್ಲಿ ಜಿಗಿತ ಕಂಡು ಬಂದಿದೆ. ಮೇ 9ರಂದು ಎಸ್‌ಬಿಐ ಷೇರುಗಳು ಸುಮಾರು ಶೇ. 3ರಷ್ಟು ಹೆಚ್ಚಾಗಿ 834.40 ರೂ.ನಲ್ಲಿ ವಹಿವಾಟು ನಡೆಸುವುದು ಕಂಡುಬಂತು. ಎಸ್‌ಬಿಐನ ಒಟ್ಟು ಅನುತ್ಪಾದಕ ಆಸ್ತಿ (ಜಿಎನ್‌ಪಿಎ) ಪ್ರಮಾಣ ಶೇ.2.24ಕ್ಕೆ ಇಳಿಕೆಯಾಗಿದೆ. ಇದು ಕಳೆದ ವರ್ಷ ಶೇ . 2.78ರಷ್ಟು ಇತ್ತು.

Continue Reading

ದೇಶ

Char Dham Yatra: ಇಂದಿನಿಂದ ಪವಿತ್ರ ಚಾರ್‌ಧಾಮ್‌ ಯಾತ್ರೆ ಆರಂಭ

Char Dham Yatra:ಗಂಗೋತ್ರಿ, ಯಮುನೋತ್ರಿ, ಕೇದಾರನಾಥ ಹಾಗೂ ಬದರಿನಾಥ್ ಹೀಗೆ ಒಟ್ಟು ನಾಲ್ಕು ಪವಿತ್ರ ಯಾತ್ರೆಗಳು. ಈ ಪವಿತ್ರ ಸ್ಥಳಗಳ ಬಾಗಿಲುಗಳು ಅಕ್ಷಯ ತೃತೀಯದಂದು ತೆರೆಯಲಾಗುತ್ತದೆ. ಏಪ್ರಿಲ್​ 15ರಿಂದ ಪ್ರಾರಂಭವಾದ ಆನ್​ಲೈನ್ ನೋಂದಣಿ ಪ್ರಕ್ರಿಯೆಯನ್ನು ಜೂನ್ ತಿಂಗಳ ಕೊನೆಯವರೆಗೆ ವಿಸ್ತರಿಸಲಾಗಿದೆ. ಈ ಬಾರಿ ಮೇ ತಿಂಗಳ ಆರಂಭದ ವೇಳೆಗೆ ಆನ್​ಲೈನ್​ ನೋಂದಣಿ ಸಂಖ್ಯೆ 21 ಲಕ್ಷ ದಾಟಿದೆ.

VISTARANEWS.COM


on

Char Dham Yatra
Koo

ಉತ್ತರಾಖಂಡ: ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ(Char Dham Yatra) ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7 ಗಂಟೆಗೆ ತೆರೆದರೆ, ಗಂಗೋತ್ರಿ ದೇವಾಲಯವು ಮಧ್ಯಾಹ್ನ 12.20 ತೆರೆಯುತ್ತದೆ. ಮೇ 12 ರಂದು ಬೆಳಗ್ಗೆ 6 ಗಂಟೆಗೆ ಉತ್ತರಾಖಂಡದ(Uttarakhand) ಚಾರ್​ಧಾಮ್ ಯಾತ್ರೆಯ ಭಾಗವಾಗಿರುವ ಬದರಿನಾಥ್ ಅನ್ನು ತೆರೆಯಲಿದೆ. 6 ತಿಂಗಳಿಗೆ ಒಮ್ಮೆ ತೆರೆಯುವ ಈ ಯಾತ್ರಾ ಸ್ಥಳಗಳಿಗೆ ದೇಶ-ವಿದೇಶಗಳಿಂದ ಯಾತ್ರಾರ್ಥಿಗಳು ಭೇಟಿ ನೀಡುತ್ತಾರೆ.

ಗಂಗೋತ್ರಿ, ಯಮುನೋತ್ರಿ, ಕೇದಾರನಾಥ ಹಾಗೂ ಬದರಿನಾಥ್ ಹೀಗೆ ಒಟ್ಟು ನಾಲ್ಕು ಪವಿತ್ರ ಯಾತ್ರೆಗಳು. ಈ ಪವಿತ್ರ ಸ್ಥಳಗಳ ಬಾಗಿಲುಗಳು ಅಕ್ಷಯ ತೃತೀಯದಂದು ತೆರೆಯಲಾಗುತ್ತದೆ. ಏಪ್ರಿಲ್​ 15ರಿಂದ ಪ್ರಾರಂಭವಾದ ಆನ್​ಲೈನ್ ನೋಂದಣಿ ಪ್ರಕ್ರಿಯೆಯನ್ನು ಜೂನ್ ತಿಂಗಳ ಕೊನೆಯವರೆಗೆ ವಿಸ್ತರಿಸಲಾಗಿದೆ. ಈ ಬಾರಿ ಮೇ ತಿಂಗಳ ಆರಂಭದ ವೇಳೆಗೆ ಆನ್​ಲೈನ್​ ನೋಂದಣಿ ಸಂಖ್ಯೆ 21 ಲಕ್ಷ ದಾಟಿದೆ. ಈ ಕಾರಣಕ್ಕಾಗಿ ಮೇ ತಿಂಗಳಲ್ಲಿ ಬುಕಿಂಗ್ ಫುಲ್ ಆಗಿವೆ. ಈ ಬಾರಿ 7 ಲಕ್ಷ 41 ಸಾವಿರಕ್ಕೂ ಹೆಚ್ಚು ಮಂದಿ ಕೇದಾರನಾಥ ಯಾತ್ರೆಗೆ ಹೆಸರು ನೋಂದಾಯಿಸಿದ್ದಾರೆ. ಬದರಿನಾಥ್​ 7 ಲಕ್ಷ 38 ಸಾವಿರಕ್ಕೂ ಹೆಚ್ಚು ಜನರು ನೋಂದಾಯಿಸಿಕೊಂಡಿದ್ದಾರೆ. ಅದೇ ಸಮಯದಲ್ಲಿ ಗಂಗೋತ್ರಿ ಮತ್ತು ಯಮುನೋತ್ರಿಗೆ ಕ್ರಮವಾಗಿ 38 ಲಕ್ಷ ಮತ್ತು 33 ಲಕ್ಷಕ್ಕೂ ಹೆಚ್ಚು ಜನರು ನೋಂದಾಯಿಸಿಕೊಂಡಿದ್ದಾರೆ.

ನೋಂದಣಿ ಇಲ್ಲದೆ ಯಾತ್ರೆಗೆ ಬರುವ ಭಕ್ತರ ಅನುಕೂಲಕ್ಕಾಗಿ ಹರಿದ್ವಾರ ಮತ್ತು ಋಷಿಕೇಶದಲ್ಲಿ ಮೇ8ರಿಂದ ಆಫ್​ಲೈನ್​ ನೋಂದಣಿ ಸೌಲಭ್ಯವನ್ನೂ ಕಲ್ಪಿಸಲಾಗಿದೆ. ಆಫ್​ಲೈನ್​ ನೋಂದಣಿಯೂ ಯಾತ್ರಿಕರ ಸಂಖ್ಯೆಯನ್ನು ಹೆಚ್ಚಿಸುವ ನಿರೀಕ್ಷೆ ಇದೆ.

ಕೇದಾರನಾಥ ಪ್ರಾಮುಖ್ಯತೆ ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯಲ್ಲಿರುವ ಕೇದಾರನಾಥ ಶಿವನ ಪವಿತ್ರ ಸ್ಥಳವಾಗಿದೆ. ಇಲ್ಲಿಗೆ ಪ್ರತಿ ವರ್ಷ ಲಕ್ಷಗಟ್ಟಲೆ ಜನರು ದರ್ಶನಕ್ಕೆ ಬರುತ್ತಾರೆ. ಶಿವನ ಹನ್ನೆರಡು ಜ್ಯೋತಿರ್ಲಿಂಗಗಳು ಮತ್ತು ಪಂಚ ಕೇದಾರಗಳಲ್ಲಿ ಕೇದಾರನಾಥವನ್ನು ಸಹ ಪರಿಗಣಿಸಲಾಗಿದೆ. ಕೇದಾರನಾಥ ದೇವಾಲಯದಲ್ಲಿ ಸ್ಥಾಪಿಸಲಾದ ಶಿವಲಿಂಗವು ಸ್ವಯಂಪೂರ್ಣವಾಗಿದೆ. ಇದರಿಂದಾಗಿ ದೇವಾಲಯದ ಮಹತ್ವ ಹೆಚ್ಚುತ್ತಿದೆ.

ಬದರಿನಾಥ ಪ್ರಾಮುಖ್ಯತೆ ಬದರಿನಾಥವನ್ನು ಚಾರ್​ ಧಾಮ್​ಗಳಲ್ಲಿ ಪ್ರಮುಖ ಧಾಮಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಇದು ಹಿಮಾಲಯ ಪರ್ವತ ಶ್ರೇಣಿಯಲ್ಲಿ ಅಲಕನಂದಾ ನದಿಯ ದಡದಲ್ಲಿದೆ. ಇದು ಮುಖ್ಯವಾಗಿ ವಿಷ್ಣುವಿನ ದೇವಾಲಯವಾಗಿದೆ. ಇಲ್ಲಿ ನರ ಮತ್ತು ನಾರಾಯಣನನ್ನು ಪೂಜಿಸಲಾಗುತ್ತದೆ. ಈ ದೇವಾಲಯವನ್ನು ಮೂರು ಭಾಗಗಳಾಗಿ ವಿಂಗಡಿಸಲಾಗಿದೆ. ಈ ನಾಲ್ಕು ಪುಣ್ಯಕ್ಷೇತ್ರಗಳು ಹಿಮಾಲಯದ ತಪ್ಪಲಿನಲ್ಲಿವೆ. ಅಲ್ಲಿಗೆ ಹೋದರೆ. ಸ್ವರ್ಗ ಅಂದರೆ ಹೀಗೆ ಇರಬಹುದು ಅನ್ನಿಸುತ್ತದೆ. ಬೇರೆ ಲೋಕದಲ್ಲಿ ಪಯಣಿಸುತ್ತಿರುವಂತೆ ಭಾಸವಾಗುತ್ತದೆ. ಅಜ್ಞಾತ ಆಧ್ಯಾತ್ಮಿಕ ಅನುಭವವನ್ನು ಪಡೆಯುತ್ತಾರೆ. ಮನುಷ್ಯ ಜೀವನದ ಪರಮಾರ್ಥ ತಿಳಿಯುತ್ತದೆ ಎನ್ನುತ್ತಾರೆ ಭಕ್ತರು.

ವಾಟ್ಸಾಪ್ ಮೂಲಕವೂ ನೋಂದಣಿ ಮಾಡಿಕೊಳ್ಳಬಹುದು

ವಾಟ್ಸಾಪ್‌ ಮೂಲಕವೂ ಈ ಚಾರ್‌ ಧಾಮ್‌ ಯಾತ್ರೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. 8394833833 ಎಂಬ ಸಂಖ್ಯೆಗೆ ವಾಟ್ಸಾಪ್ ಮಾಡುವ ಮೂಲಕ ‘ಯಾತ್ರಾ’ ಎಂದು ಟೈಪ್ ಮಾಡಿ ಅಥವಾ ಟೋಲ್-ಫ್ರೀ ಸಂಖ್ಯೆ 01351364 ಗೆ ಕರೆ ಮಾಡಿ.

ಆನ್‌ಲೈನ್‌ನಲ್ಲಿ ನೋಂದಾಯಿಸುವುದು ಹೇಗೆ?

  • ನೋಂದಣಿ/ಲಾಗ್-ಇನ್ ಬಟನ್ ಕ್ಲಿಕ್ ಮಾಡಿ.
  • ಹೊಸ ವಿಂಡೋದಲ್ಲಿ ಫಾರ್ಮ್‌ನಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನಮೂದಿಸಿ.
  • ಒದಗಿಸಿದ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಅನ್ನು ಬಳಸಿಕೊಂಡು OTP ಪರಿಶೀಲನೆಯ ಮೂಲಕ ನಿಮ್ಮ ಗುರುತನ್ನು ಪರಿಶೀಲಿಸಿ.
  • ಪರಿಶೀಲನೆಯ ನಂತರ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಪಾಸ್‌ವರ್ಡ್ ಬಳಸಿ ಲಾಗ್ ಇನ್ ಮಾಡಿ.
  • ನಿಮ್ಮ ವೈಯಕ್ತೀಕರಿಸಿದ ಡ್ಯಾಶ್‌ಬೋರ್ಡ್ ಅನ್ನು ಪ್ರವೇಶಿಸಿ ಮತ್ತು ಯಾತ್ರಿಕರು ಅಥವಾ ಪ್ರವಾಸಿಗರನ್ನು ಸೇರಿಸಿ/ನಿರ್ವಹಿಸು ಬಟನ್ ಅನ್ನು ಕ್ಲಿಕ್ ಮಾಡಿ.
  • ಪ್ರಕಾರ, ಹೆಸರು, ದಿನಾಂಕಗಳು ಮತ್ತು ಪ್ರವಾಸಿಗರ ಸಂಖ್ಯೆಯಂತಹ ಅಗತ್ಯವಿರುವ ಎಲ್ಲಾ ಪ್ರವಾಸದ ವಿವರಗಳನ್ನು ಒದಗಿಸಿ.
  • ಬೇಕಾದ ಪುರಾವೆಗಳನ್ನು ನಮೂದಿಸಿ.
  • ಯಶಸ್ವಿ ನೋಂದಣಿಯ ನಂತರ, ನಿಮ್ಮ ಮೊಬೈಲ್ ಸಂಖ್ಯೆಯನ್ನು ದೃಢೀಕರಿಸುವ SMS ಮೂಲಕ ನೀವು ಅನನ್ಯ ನೋಂದಣಿ ಸಂಖ್ಯೆಯನ್ನು (URN) ಸ್ವೀಕರಿಸುತ್ತೀರಿ.
  • ನಿಮ್ಮ ಪ್ರಯಾಣದ ಸಮಯದಲ್ಲಿ ಅಗತ್ಯವಿರುವ ಚಾರ್‌ ಧಾಮ್‌ ಯಾತ್ರೆಗಾಗಿ ನೋಂದಣಿ ಪತ್ರವನ್ನು ಡೌನ್‌ಲೋಡ್ ಮಾಡಿ.

ಇದನ್ನೂ ಓದಿ: Arvind Kejriwal: ಕೇಜ್ರಿವಾಲ್‌ ಜಾಮೀನು ಅರ್ಜಿ ಇಂದು ವಿಚಾರಣೆ; ದಿಲ್ಲಿ ಸಿಎಂಗೆ ಜೈಲಾ…? ಬೇಲಾ?

Continue Reading

ದೇಶ

Arvind Kejriwal: ಕೇಜ್ರಿವಾಲ್‌ ಜಾಮೀನು ಅರ್ಜಿ ಇಂದು ವಿಚಾರಣೆ; ದಿಲ್ಲಿ ಸಿಎಂಗೆ ಜೈಲಾ…? ಬೇಲಾ?

Arvind Kejriwal: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ ಇಂದು ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿದೆ. ಇಂದು ನಡೆಯಲಿರುವ ವಿಚಾರಣೆಯಲ್ಲಿ ಅರವಿಂದ ಕೇಜ್ರಿವಾಲ್‌ ಅವರಿಗೆ ಜೈಲೇ ಗ್ಯಾರಂಟಿನಾ ಅಥವಾ ಜಾಮೀನು ಸಿಗುತ್ತದೆಯೇ ಎಂಬುದು ನಿರ್ಧಾರವಾಗಲಿದೆ. ಸದ್ಯ ತಿಹಾರ್‌ ಜೈಲಿನಲ್ಲಿರುವ ಕೇಜ್ರಿವಾಲ್‌ ಲೋಕಸಭೆ ಚುನಾವಣೆ ಹಿನ್ನೆಲೆ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದರು.

VISTARANEWS.COM


on

Aravind Kejriwal
Koo

ನವದೆಹಲಿ: ಅಬಕಾರಿ ನೀತಿಗೆ(Delhi Excise policy) ಸಂಬಂಧಿಸಿದಂತೆ ಅಕ್ರಮ ಹಣ (Illegal money transaction) ವರ್ಗಾವಣೆ ಪ್ರಕರಣದಲ್ಲಿ ಅರೆಸ್ಟ್‌ ಆಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ ಇಂದು ಸುಪ್ರೀಂಕೋರ್ಟ್‌(Supreme Court)ನಲ್ಲಿ ನಡೆಯಲಿದೆ. ಇಂದು ನಡೆಯಲಿರುವ ವಿಚಾರಣೆಯಲ್ಲಿ ಅರವಿಂದ ಕೇಜ್ರಿವಾಲ್‌ ಅವರಿಗೆ ಜೈಲೇ ಗ್ಯಾರಂಟಿನಾ ಅಥವಾ ಜಾಮೀನು ಸಿಗುತ್ತದೆಯೇ ಎಂಬುದು ನಿರ್ಧಾರವಾಗಲಿದೆ. ಸದ್ಯ ತಿಹಾರ್‌ ಜೈಲಿನಲ್ಲಿರುವ ಕೇಜ್ರಿವಾಲ್‌ ಲೋಕಸಭೆ ಚುನಾವಣೆ ಹಿನ್ನೆಲೆ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದರು.

ನ್ಯಾಯಮೂರ್ತಿ ಸಂಜೀವ್‌ ಖನ್ನಾ ನೇತೃತ್ವದ ಪೀಠ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ ನಡೆಸಲಿದೆ. ಅಲ್ಲದೇ ಕೇಜ್ರಿವಾಲ್‌ ತಮ್ಮ ಬಂಧನ ಪ್ರಶ್ನಿಸಿ ಸಲ್ಲಿದಿದ್ದ ಅರ್ಜಿಯ ವಿಚಾರಣೆಯೂ ಇಂದೇ ನಡೆಯಲಿದೆ. ಇನ್ನು ED ಪರ ವಕೀಲ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ಅರವಿಂದ ಕೇಜ್ರಿವಾಲ್‌ ಅವರಿಗೆ ಚುನಾವಣೆ ದೃಷ್ಟಿಯಿಂದ ಜಾಮೀನಿ ನೀಡಿದರೆ ಜನರಿಗೆ ತಪ್ಪು ಸಂದೇಶ ಹೋದಂತಾಗುತ್ತದೆ. ರಾಜಕಾರಣಿಗಳಿಗೊಂದು ನ್ಯಾಯ, ಜನರಿಗೊಂದು ನ್ಯಾಯ ಎಂದು ಜನ ಭಾವಿಸುತ್ತಾರೆ ಎಂದು ಈಗಾಗಲೇ ವಾದ ಮಂಡಿಸಿದ್ದರು. ಇದಾದ ಬಳಿಕ ಈ ಪ್ರಕರಣವನ್ನು ನ್ಯಾಯಪೀಠ ಎರಡು ಭಾಗವನ್ನಾಗಿ ವಿಭಜಿಸಿತ್ತು. ಒಂದು ಇಡಿ ಬಂಧನ ಪ್ರಶ್ನಿಸಿ ಕೇಜ್ರಿವಾಲ್‌ ಸಲ್ಲಿಸಿದ ಅರ್ಜಿ. ಮತ್ತೊಂದು ಮಧ್ಯಂತರ ಜಾಮೀನು ಅರ್ಜಿ. ಮಂಗಳವಾರ ವಿಚಾರಣೆ ನಡೆಸಿದ ಕೋರ್ಟ್‌ ಕೇಜ್ರಿವಾಲ್‌ ಅವರ ನ್ಯಾಯಾಂಗ ಬಂಧನವನ್ನು ಮೇ 20ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿತ್ತು ಮತ್ತು ಮಧ್ಯಂತರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ನಡೆಸುವುದಾಗಿ ಹೇಳಿತ್ತು.

ಏ.9ರಂದು ಇದೇ ಪ್ರಕರಣ ವಿಚಾರಣೆ ನಡೆಸಿದ್ದ ದಿಲ್ಲಿ ಹೈಕೋರ್ಟ್‌, ಅಕ್ರಮ ಹಣ ವರ್ಗಾವಣೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆಗೆ ಹಾಜರಾಗುವಂತೆ ಪದೇ ಪದೇ ಸಮನ್ಸ್‌ ನೀಡಿದರೂ ಅವರು ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಇಡಿ ಕೊನೆಗೆ ಅವರನ್ನು ಅರೆಸ್ಟ್‌ ಮಾಡಲೇಬೇಕಾಗಿತ್ತು. ಅದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಹೇಳಿತ್ತು. ಹೀಗಾಗಿ ಕೇಜ್ರಿವಾಲ್‌ ಕೊನೆಗೆ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು.

ಅಬಕಾರಿ ನೀತಿ ಪ್ರಕರಣವೇನು?

ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ. ದೆಹಲಿ ಸರ್ಕಾರವು ನಗರದ ಪ್ರಮುಖ ಮದ್ಯದ ವ್ಯಾಪಾರವನ್ನು ಪರಿಷ್ಕರಿಸುವ ನೀತಿಯನ್ನು ರೂಪಿಸಿದ್ದು, ವ್ಯಾಪಾರಿಗಳಿಗೆ ಪರವಾನಗಿ ಶುಲ್ಕದ ಬದಲಾವಣೆ ಸೇರಿದಂತೆ ಹಲವು ಬದಲಾವಣೆ ಮಾಡಿತ್ತು. ಆದರೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಇದರಲ್ಲಿ ಅಕ್ರಮಗಳನ್ನು ಆರೋಪಿಸಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ಕೋರಿದ್ದರು. ನಂತರ ನೀತಿಯನ್ನು ರದ್ದುಗೊಳಿಸಲಾಯಿತು.

ಇದನ್ನೂ ಓದಿ:Prajwal Revanna Case: ವಿದೇಶದಿಂದ ಪ್ರಜ್ವಲ್‌ ರೇವಣ್ಣ ಎಳೆತರಲು ರೆಡ್‌ ಕಾರ್ನರ್‌ ನೋಟಿಸ್?‌ ಭವಾನಿ ರೇವಣ್ಣಗೂ ವಿಚಾರಣೆಗೆ ಬುಲಾವ್

ಸಿಬಿಐ ಮತ್ತು ಇಡಿ ಪ್ರಕಾರ, ಎಎಪಿ ನಾಯಕರು ಅಬಕಾರಿ ನೀತಿಯ ಅಡಿಯಲ್ಲಿ ಪರವಾನಗಿ ನೀಡಲು ರಾಜಕಾರಣಿಗಳು ಮತ್ತು ಮದ್ಯದ ಉದ್ಯಮಿಗಳ ಗುಂಪಿನಿಂದ ₹ 100 ಕೋಟಿ ಕಿಕ್‌ಬ್ಯಾಕ್‌ಗಳನ್ನು ಸ್ವೀಕರಿಸಿದ್ದಾರೆ. ಆರೋಪಪಟ್ಟಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಹೆಸರನ್ನೂ ಉಲ್ಲೇಖಿಸಲಾಗಿದ್ದು, ಅಬಕಾರಿ ನೀತಿ ಪ್ರಕರಣದ ಎಲ್ಲಾ ಆರೋಪಿಗಳು ಅಬಕಾರಿ ನೀತಿಯನ್ನು ರೂಪಿಸಲು ದೆಹಲಿ ಸಿಎಂ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿತ್ತು. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಜೊತೆಗೆ ಭಾರತ್ ರಾಷ್ಟ್ರ ಸಮಿತಿ (BRS) ನಾಯಕಿ ಕೆ. ಕವಿತಾ ಮತ್ತು ಆಮ್ ಆದ್ಮಿ ಪಕ್ಷದ ಗೋವಾ ಚುನಾವಣೆ ನಿಧಿ ವ್ಯವಸ್ಥಾಪಕ ಚನ್‌ಪ್ರೀತ್ ಸಿಂಗ್ ಅವರನ್ನು ಬಂಧಿಸಲಾಗಿತ್ತು.

Continue Reading
Advertisement
Sanjiv Goenka
ಪ್ರಮುಖ ಸುದ್ದಿ4 mins ago

Sanjiv Goenka: ರಾಹುಲ್‌ಗೆ ಬೈದ ಗೋಯೆಂಕಾ; ಈ ಹಿಂದೆ ಧೋನಿಯನ್ನೇ ಕ್ಯಾಪ್ಟನ್ಸಿಯಿಂದ ತೆಗೆದಿದ್ದರು!

Solar Power
ದೇಶ7 mins ago

Solar Power: ಜಾಗತಿಕವಾಗಿ ಮತ್ತೊಮ್ಮೆ ಬೆಳಗಿದ ಭಾರತ; ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಜಪಾನ್‌ನನ್ನೂ ಮೀರಿದ ಸಾಧನೆ

sslc result 2024 vaishnavi self harming
ಕ್ರೈಂ47 mins ago

SSLC Result 2024: ಎಸ್‌ಎಸ್‌ಎಲ್‌ಸಿ ಫೇಲ್‌, ಸರಣಿ ಸಾವಿಗೆ ಮತ್ತೊಂದು ಸೇರ್ಪಡೆ

Job News
ಉದ್ಯೋಗ57 mins ago

Job News: ಗುಡ್‌ನ್ಯೂಸ್‌; ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ ಶೀಘ್ರ 12,000 ಉದ್ಯೋಗಿಗಳ ನೇಮಕ

Char Dham Yatra
ದೇಶ1 hour ago

Char Dham Yatra: ಇಂದಿನಿಂದ ಪವಿತ್ರ ಚಾರ್‌ಧಾಮ್‌ ಯಾತ್ರೆ ಆರಂಭ

hd revanna jailed 2
ಕ್ರೈಂ1 hour ago

HD Revanna Jailed: ಇನ್ನು ಮೂರು ದಿನ ಎಚ್‌ಡಿ ರೇವಣ್ಣ ಭೇಟಿ ಯಾರಿಗೂ ಇಲ್ಲ

Aravind Kejriwal
ದೇಶ2 hours ago

Arvind Kejriwal: ಕೇಜ್ರಿವಾಲ್‌ ಜಾಮೀನು ಅರ್ಜಿ ಇಂದು ವಿಚಾರಣೆ; ದಿಲ್ಲಿ ಸಿಎಂಗೆ ಜೈಲಾ…? ಬೇಲಾ?

drowned in tank jindal bellary
ಕ್ರೈಂ2 hours ago

Drowned in Tank: ಜಿಂದಾಲ್‌ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳ ಸಾವು

IPL 2024
ಐಪಿಎಲ್ 20242 hours ago

IPL 2024: ಆರ್‌ಸಿಬಿಯ ಪ್ಲೇ ಆಫ್ ಕನಸು ಜೀವಂತ; ಸೋಲಿನೊಂದಿಗೆ ರೇಸ್‌ನಿಂದ ಹೊರಬಿದ್ದ ಪಂಜಾಬ್‌: ಹೀಗಿದೆ ಹೊಸ ಅಂಕಪಟ್ಟಿ

Virat Kohli
ಐಪಿಎಲ್ 20242 hours ago

Virat Kohli: ಮೈದಾನದಲ್ಲೇ ರುಸ್ಸೊ AK 47ಗೆ ಕಲಾಶ್‌ನಿಕಾವೋ ಗನ್ ತೆಗೆದ ಕೊಹ್ಲಿ; ವಿಡಿಯೊ ನೋಡಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ13 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ14 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ15 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ21 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ21 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ22 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು22 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ22 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು24 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

ಟ್ರೆಂಡಿಂಗ್‌