Ram Mandir: 25 ಕೆಜಿ ಬೆಳ್ಳಿ, 10 ಕೆಜಿ ಚಿನ್ನ; 1 ತಿಂಗಳಿನಲ್ಲಿ ರಾಮ ಮಂದಿರದಲ್ಲಿ ಸಂಗ್ರಹವಾಗಿದ್ದು ಎಷ್ಟು ಕೋಟಿ ರೂ.? - Vistara News

ರಾಮ ಮಂದಿರ

Ram Mandir: 25 ಕೆಜಿ ಬೆಳ್ಳಿ, 10 ಕೆಜಿ ಚಿನ್ನ; 1 ತಿಂಗಳಿನಲ್ಲಿ ರಾಮ ಮಂದಿರದಲ್ಲಿ ಸಂಗ್ರಹವಾಗಿದ್ದು ಎಷ್ಟು ಕೋಟಿ ರೂ.?

Ram Mandir: ಅಯೋಧ್ಯೆ ರಾಮ ಮಂದಿರ ಭಕ್ತರ ಪ್ರವೇಶಕ್ಕೆ ಮುಕ್ತವಾಗಿ ಒಂದು ತಿಂಗಳು ಕಳೆದಿದ್ದು, ಇದುವರೆಗೆ 25 ಕೋಟಿ ರೂ.ಗಿಂತ ಅಧಿಕ ನಗದು ಸಂಗ್ರವಾಗಿದೆ. ಜತೆಗೆ ಭಕ್ತರು ಚಿನ್ನ, ಬೆಳ್ಳಿಯನ್ನೂ ರಾಮನಿಗೆ ಅರ್ಪಿಸಿದ್ದಾರೆ.

VISTARANEWS.COM


on

rama
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯ ಭವ್ಯ ರಾಮ ಮಂದಿರದಲ್ಲಿ (Ram Mandir) ಬಾಲಕ ರಾಮ (Balak Ram) ವಿಗ್ರಹದ ಪ್ರಾಣ ಪ್ರತಿಷ್ಠೆ (Pran Prathistha) ನೆರವೇರಿದೆ. ಜನವರಿ 22ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಈ ಸಮಾರಂಭ ನಡೆದಿದೆ. ಅದಾದ ಬಳಿಕ ಜನವರಿ 23ರಿಂದ ಈ ದೇಗುಲ ಭಕ್ತರ ಪ್ರವೇಶಕ್ಕೆ ಮುಕ್ತವಾಗಿದ್ದು, ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಮ ಮಂದಿರಕ್ಕೆ ಭೇಟಿ ನೀಡಿ ಬಾಲಕ ರಾಮನ ದರ್ಶನ ಮಾಡುತ್ತಿದ್ದಾರೆ. ರಾಮ ಮಂದಿರ ಸಾವರ್ಜನಿಕ ಭೇಟಿಗೆ ಮುಕ್ತವಾಗಿ ಇದೀಗ ಸುಮಾರು ಇಂದು ತಿಂಗಳು ಕಳೆದಿದ್ದು ಕೋಟ್ಯಂತರ ರೂ. ಮೌಲ್ಯದ ಕಾಣಿಕೆ ಸಂದಾಯವಾಗಿದೆ.

ಒಂದು ತಿಂಗಳಲ್ಲಿ ಸಂಗ್ರಹವಾಗಿದ್ದು ಎಷ್ಟು?

ಚಿನ್ನ, ಬೆಳ್ಳಿ ಸೇರಿದಂತೆ ಅತ್ಯಮೂಲ್ಯ ಕೊಡುಗೆಗಳನ್ನು ಭಕ್ತರು ರಾಮನಿಗೆ ಅರ್ಪಿಸಿದ್ದಾರೆ. 1 ತಿಂಗಳ ಅವಧಿಯಲ್ಲಿ 60 ಲಕ್ಷಕ್ಕೂ ಅಧಿಕ ಭಕ್ತರು ರಾಮಮಂದಿರಕ್ಕೆ ಭೇಟಿ ನೀಡಿದ್ದು, ಒಟ್ಟು 25 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಂಗ್ರಹವಾಗಿದೆ ಎಂದು ಮೂಲಗಳು ತಿಳಿಸಿವೆ. ದೇವಸ್ಥಾನದ ಆವರಣದಲ್ಲಿ ಅಳವಡಿಸಿರುವ ಕಾಣಿಕೆ ಪೆಟ್ಟಿಗೆ ಹಾಗೂ ಕಾಣಿಕೆ ಕೌಂಟರ್‌ನಲ್ಲಿ ಈ ದೇಣಿಗೆಯನ್ನು ಸ್ವೀಕರಿಸಲಾಗಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಕಚೇರಿ ನೀಡಿದ ಮಾಹಿತಿಯ ಪ್ರಕಾರ, ಭಕ್ತರು ಈ ಮೊತ್ತವನ್ನು ನಗದು, ಚೆಕ್ ಮತ್ತು ಡ್ರಾಫ್ಟ್ ಮೂಲಕ ನೀಡಿದ್ದಾರೆ. ವಿದೇಶಿ ಭಕ್ತರು ನೀಡಿರುವ ದೇಣಿಗೆಯ ಮೊತ್ತ ಈ ಲೆಕ್ಕಾಚಾರದಲ್ಲಿ ಸೇರಿಲ್ಲ.

25 ಕೆಜಿ ಬೆಳ್ಳಿ ಮತ್ತು 10 ಕೆಜಿ ಚಿನ್ನ

ನಗದಲ್ಲದೆ ರಾಮ ಭಕ್ತರು ಚಿನ್ನ, ಬೆಳ್ಳಿ ಮತ್ತು ಅಮೂಲ್ಯ ರತ್ನಗಳನ್ನು ಸಹ ದಾನ ಮಾಡಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಕಾರ, 1 ತಿಂಗಳ ಅವಧಿಯಲ್ಲಿ ಸುಮಾರು 25 ಕೆಜಿ ಬೆಳ್ಳಿ ಮತ್ತು 10 ಕೆಜಿ ಚಿನ್ನವು ಕಾಣಿಕೆಯಾಗಿ ಬಂದಿದೆ. ಇದರಲ್ಲಿ ಚಿನ್ನ ಮತ್ತು ಬೆಳ್ಳಿಯ ಆಭರಣಗಳು, ಕಿರೀಟ, ಹಾರ, ಛತ್ರಿ, ರಥ, ಬಳೆಗಳು ಮತ್ತು ಕಾಲುಂಗುರಗಳು ಸೇರಿವೆ. ಜತೆಗೆ ಆಟಿಕೆಗಳು, ದೀಪಗಳು, ಧೂಪ ದ್ರವ್ಯದ ಸ್ಟ್ಯಾಂಡ್, ಬಿಲ್ಲು ಮತ್ತು ಬಾಣಗಳೂ ಕಾಣಿಕೆ ರೂಪದಲ್ಲಿ ರಾಮನಿಗೆ ಸಂದಾಯವಾಗಿದೆ. ಮಾತ್ರವಲ್ಲ ರಾಮಮಂದಿರಕ್ಕೆ ಭಕ್ತರು ಚಿನ್ನ ಮತ್ತು ಬೆಳ್ಳಿ ಪಾತ್ರೆಗಳನ್ನು ಸಹ ನೀಡಿದ್ದಾರೆ.

ಇದನ್ನೂ ಓದಿ: Ayodhya Ram Mandir: ರಾಮ ಲಲ್ಲಾ ಹೆಸರು ಬದಲಾಯಿತು; ಇನ್ನಿವನು ʼಬಾಲಕ ರಾಮʼ

ಮಧ್ಯಾಹ್ನ ಬಿಡುವು

ಸದ್ಯ ರಾಮ ಮಂದಿರದಲ್ಲಿ ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಭಕ್ತರಿಗೆ ದೇವರ ದರ್ಶನ ಭಾಗ್ಯ ಲಭಿಸಲಿದೆ. ಆರಂಭದಲ್ಲಿ ದೇಗುಲದ ಬಾಗಿಲನ್ನು ಬೆಳಗ್ಗೆ 7 ಗಂಟೆಗೆ ತೆರೆಯಲಾಗುತ್ತಿತ್ತು. ಬಳಿಕ ಪ್ರವಾಸಿಗರ ನೂಕು ನುಗ್ಗಲು ಗಮನಿಸಿ ದರ್ಶನದ ಸಮಯವನ್ನು ಹೆಚ್ಚಿಸಲಾಗಿತ್ತು. ಈ ಮಧ್ಯೆ ಮಧ್ಯಾಹ್ನ 12:30ರಿಂದ 1:30ರ ವರೆಗೆ ಬಾಲಕ ರಾಮನಿಗೆ ವಿಶ್ರಾಂತಿ ಸಮಯವಾಗಿರುವುದರಿಂದ ಈ ವೇಳೆ ಭಕ್ತರಿಗೆ ದರ್ಶನ ಲಭಿಸುವುದಿಲ್ಲ. ʼʼಬಾಲಕ ರಾಮ ಐದು ವರ್ಷದ ಮಗುವಾಗಿದ್ದು, ಇಷ್ಟು ಗಂಟೆಗಳ ಕಾಲ ಎಚ್ಚರವಾಗಿರುವ ಒತ್ತಡವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಬಾಲ ದೇವರಿಗೆ ಸ್ವಲ್ಪ ವಿಶ್ರಾಂತಿ ನೀಡಲು, ದೇವಾಲಯದ ಬಾಗಿಲುಗಳನ್ನು ಮುಚ್ಚಲು ಟ್ರಸ್ಟ್ ನಿರ್ಧರಿಸಿದೆ. ಮಧ್ಯಾಹ್ನ 12.30ರಿಂದ 1.30 ರವರೆಗೆ ರಾಮ ವಿಶ್ರಾಂತಿ ಪಡೆಯುತ್ತಾನೆ. ಹೀಗಾಗಿ ನಿತ್ಯ ಮಧ್ಯಾಹ್ನ ಒಂದು ಗಂಟೆ ದೇಗುಲದ ಬಾಗಿಲು ಮುಚ್ಚಲಿದೆʼʼ ಎಂದು ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಇತ್ತೀಚೆಗೆ ತಿಳಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಮ ಮಂದಿರ

Ayodhya Ram mandir: ಈವರೆಗೆ ಅಯೋಧ್ಯೆ ರಾಮಲಲ್ಲಾನ ದರ್ಶನ ಮಾಡಿದವರ ಸಂಖ್ಯೆ 1.5 ಕೋಟಿ!

Ayodhya Ram mandir: ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಜನ್ಮಭೂಮಿ ದೇವಾಲಯದಲ್ಲಿ ಜನವರಿ 22ರಂದು ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯಾದ ಬಳಿಕ ಸರಿಸುಮಾರು 1.5 ಕೋಟಿ ಜನರು ರಾಮ್ ಲಲ್ಲಾನ ದರ್ಶನ ಪಡೆದಿದ್ದಾರೆ. ಪ್ರತಿದಿನ ಒಂದು ಲಕ್ಷಕ್ಕೂ ಹೆಚ್ಚು ಜನರು ರಾಮಲಲ್ಲಾನ ದರ್ಶನ ಪಡೆಯಲು ದೇವಾಲಯಕ್ಕೆ ಆಗಮಿಸುತ್ತಿದ್ದಾರೆ.

VISTARANEWS.COM


on

By

Ayodhya Ram mandir
Koo

ಅಯೋಧ್ಯೆ: ಭಗವಾನ್ ಶ್ರೀರಾಮನ (sriram) ಜನ್ಮ ಸ್ಥಳವಾದ ಅಯೋಧ್ಯೆಯ ರಾಮ ಮಂದಿರದಲ್ಲಿ (Ayodhya Ram mandir) ರಾಮಲಲ್ಲಾನ (ramlalla) ಪ್ರಾಣ ಪ್ರತಿಷ್ಠಾಪನೆಯಾದ ಬಳಿಕ ಪ್ರತಿನಿತ್ಯ ಸುಮಾರು ಒಂದು ಲಕ್ಷ ಮಂದಿ ಭೇಟಿ ನೀಡುತ್ತಿದ್ದಾರೆ. ದೇವಾಲಯ ಉದ್ಘಾಟನೆಯಾದ ಬಳಿಕ ಈವರೆಗೆ ಸುಮಾರು 1.5 ಕೋಟಿ ಮಂದಿ ದೇವಸ್ಥಾನಕ್ಕೆ ಭೇಟಿ ನೀಡಿ ರಾಮಲಲ್ಲಾನ ದರ್ಶನ ಪಡೆದಿದ್ದಾರೆ ಎಂದು ದೇವಾಲಯದ ಟ್ರಸ್ಟ್‌ ತಿಳಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ (Shri Ram Janmabhoomi Theertha Kshetra Trust) ಪ್ರಧಾನ ಕಾರ್ಯದರ್ಶಿ (Principal Secretary) ಚಂಪತ್ ರಾಯ್‌ (Champat Rai), ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಜನ್ಮಭೂಮಿ ದೇವಾಲಯದಲ್ಲಿ ಜನವರಿ 22ರಂದು ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯಾದ ಬಳಿಕ ಸರಿಸುಮಾರು 1.5 ಕೋಟಿ ಜನರು ರಾಮ್ ಲಲ್ಲಾನ ದರ್ಶನ ಪಡೆದಿದ್ದಾರೆ. ಪ್ರತಿದಿನ ಒಂದು ಲಕ್ಷಕ್ಕೂ ಹೆಚ್ಚು ಜನರು ರಾಮಲಲ್ಲಾನ ದರ್ಶನ ಪಡೆಯಲು ದೇವಾಲಯಕ್ಕೆ ಆಗಮಿಸುತ್ತಿದ್ದಾರೆ ಎಂದು ಹೇಳಿದರು.

ಹೊಸದಾಗಿ ನಿರ್ಮಿಸಲಾದ ಭವ್ಯವಾದ ರಾಮಜನ್ಮಭೂಮಿ ದೇವಾಲಯದಲ್ಲಿ ಪ್ರಸಿದ್ಧ ಶಿಲ್ಪಿ ಅರುಣ್ ಯೋಗಿರಾಜ್ ಅವರು ರಚಿಸಿರುವ 51 ಇಂಚು ಎತ್ತರದ ಭಗವಾನ್ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾ ಜನವರಿ 22ರಂದು ಎಲ್ಲಾ ಪಂಗಡಗಳಿಗೆ ಸೇರಿದ ಸುಮಾರು 8,000 ಗಣ್ಯರ ಸಮ್ಮುಖದಲ್ಲಿ ನಡುವೆ ನಡೆಯಿತು. ಪ್ರಾಣ ಪ್ರತಿಷ್ಠಾ ಸಮಾರಂಭದ ವಿಧಿವಿಧಾನಗಳ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ವಹಿಸಿದ್ದರು.

ಇದನ್ನೂ ಓದಿ: Ram Mandir : ಇಲ್ಲಿದೆ ನೋಡಿ ಬಾಲ ರಾಮನ ಕಣ್ಣಿಗೆ ಜೀವಕಳೆ ನೀಡಿದ್ದ ಬಂಗಾರದ ಉಳಿ, ಬೆಳ್ಳಿ ಸುತ್ತಿಗೆಯ ಚಿತ್ರ


ಮುಂದಿನ ಕೆಲಸ?

ಜನ್ಮಭೂಮಿ ದೇವಾಲಯದ ಸುತ್ತಲೂ 14 ಅಡಿ ಅಗಲದ ಭದ್ರತಾ ಗೋಡೆಯನ್ನು ನಿರ್ಮಿಸುವುದಾಗಿ ದೇವಾಲಯದ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಘೋಷಿಸಿದರು. ಇದನ್ನು ‘ಪರ್ಕೋಟಾ’ ಎಂದು ಕರೆಯಲಾಗುತ್ತದೆ. ರಾಮ್ ಲಲ್ಲಾನ ಪ್ರಾಣ ಪ್ರತಿಷ್ಠೆ ನಡೆದ ದೇಗುಲದ ನೆಲ ಮಹಡಿ ಮಾತ್ರ ಪೂರ್ಣಗೊಂಡಿದ್ದು, ಮೊದಲ ಅಂತಸ್ತಿನ ಕಾಮಗಾರಿ ನಡೆಯುತ್ತಿದೆ ಎಂದು ರಾಯ್‌ ಹೇಳಿದರು.

ಹಲವು ಸಣ್ಣ ದೇಗುಲಗಳು

ರಾಮ ಮಂದಿರದ ಆವರಣದಲ್ಲಿ ಶಿವನಿಂದ ಹಿಡಿದು ಹನುಮಾನ್ ಗಢಿವರೆಗೆ ಆರು ಸಣ್ಣಸಣ್ಣ ದೇವಾಲಯಗಳನ್ನು ನಿರ್ಮಿಸಬೇಕಿದೆ. ಒಮ್ಮೆ ಪೂರ್ಣಗೊಂಡ ಅನಂತರ, ರಾಮ ಮಂದಿರದ ಆವರಣವು ಏಕಕಾಲಕ್ಕೆ 25,000 ಯಾತ್ರಾರ್ಥಿಗಳಿಗೆ ಅವಕಾಶ ಕಲ್ಪಿಸುತ್ತದೆ ಎಂದು ರಾಯ್‌ ತಿಳಿಸಿದರು.


ಪರ್ಕೋಟಾ ವಿಶೇಷತೆ ಏನು?

ದೇವಾಲಯದ ಸುತ್ತ ನಿರ್ಮಿಸಲಾಗುವ ಪರ್ಕೋಟಾ ಬಹುಪಯೋಗಿಯಾಗಿದ್ದು, ಅಲ್ಲಿ 6 ದೇವಾಲಯಗಳನ್ನು ನಿರ್ಮಿಸಲಾಗುವುದು. ಶಂಕರ, ಸೂರ್ಯ, ಹನುಮಾನ್, ಮಾ ಅನ್ನಪೂರ್ಣ, ಮಹರ್ಷಿ ವಾಲ್ಮೀಕಿ, ವಶಿಷ್ಠ, ವಿಶ್ವಾಮಿತ್ರ ಮತ್ತು ಅಗಸ್ತ್ಯ ರ ದೇವಾಲಯವನ್ನು ಆವರಣದಲ್ಲಿ ನಿರ್ಮಿಸಲಾಗುತ್ತದೆ. ನಿಶಾದ್ ರಾಜ್, ಮಾ ಶಬರಿ, ಮಾ ಅಹಲ್ಯಾ ಮತ್ತು ಜಟಾಯು ದೇವಾಲಯಗಳನ್ನು ನಿರ್ಮಿಸಲಾಗುವುದು ಎಂದರು.

ದೇವಾಲಯದ ಆವರಣದಲ್ಲಿರುವ 600 ಕ್ಕೂ ಹೆಚ್ಚು ಗಿಡಗಳನ್ನು ಸಂರಕ್ಷಿಸಲಾಗಿದೆ. ನೀರು ಸಂಸ್ಕರಣಾ ಘಟಕ, ಒಳಚರಂಡಿ ಸಂಸ್ಕರಣಾ ಘಟಕವೂ ದೇವಾಲಯ ಆವರಣದಲ್ಲಿ ಇದೆ. ಈ ದೇವಾಲಯವು ಸ್ವತಃ ಸ್ವತಂತ್ರವಾಗಿರುತ್ತದೆ ಮತ್ತು ಅಯೋಧ್ಯೆಯ ಜನರು ಯಾವುದೇ ಸಮಸ್ಯೆಗಳನ್ನು ಎದುರಿಸಬೇಕಾಗಿಲ್ಲ. ದೇವಾಲಯದ ಅಗತ್ಯವನ್ನು ಪೂರೈಸಲು ಯಾವುದೇ ಸಮಸ್ಯೆ, ಇಲ್ಲ ಎಂದು ತಿಳಿಸಿದರು.

ರಾಮ ನವಮಿ ಆಚರಣೆ

ರಾಮ ಮಂದಿರದಲ್ಲಿ ಏಪ್ರಿಲ್ 17ರಂದು ಅತ್ಯಂತ ವೈಭವದಿಂದ ರಾಮನ ಜನ್ಮ ದಿನವನ್ನು ಆಚರಿಸಲಾಯಿತು. ಭವ್ಯವಾದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಅನಂತರ ಮೊದಲ ಬಾರಿಗೆ ರಾಮನಿಗೆ ‘ಸೂರ್ಯ ತಿಲಕ’ ವನ್ನು ಇಡಲಾಯಿತು. ದೇವಾಲಯವು ಆಗ 19 ಗಂಟೆಗಳ ಕಾಲ ತೆರೆದಿತ್ತು. ಆಹಾರಕ್ರಮಕ್ಕೆ 56 ಖಾದ್ಯಗಳನ್ನು ನೀಡಲಾಯಿತು ಎಂದು ಮಾಹಿತಿ ನೀಡಿದರು.

ನಾಗರ ಶೈಲಿ

ಸಾಂಪ್ರದಾಯಿಕ ನಾಗರ ಶೈಲಿಯಲ್ಲಿ ನಿರ್ಮಿಸಲಾದ ಮೂರು ಅಂತಸ್ತಿನ ರಾಮ ಜನ್ಮಭೂಮಿ ಮಂದಿರವು ದೇವಾಲಯದ ಪಟ್ಟಣದಲ್ಲಿ 2.7 ಎಕರೆ ಭೂಮಿಯಲ್ಲಿ 380 ಅಡಿ ಉದ್ದ , 250 ಅಡಿ ಅಗಲ ಮತ್ತು 161 ಅಡಿ ಎತ್ತರವನ್ನು ಹೊಂದಿದೆ. ಒಟ್ಟು 392 ಕಂಬಗಳು ಮತ್ತು 44 ಬಾಗಿಲುಗಳನ್ನು ಹೊಂದಿದೆ. ಐದು ಮಂಟಪಗಳಲ್ಲಿ ನೃತ್ಯ ಮಂಟಪ, ರಂಗ ಮಂಟಪ, ಸಭಾ ಮಂಟಪ, ಪ್ರಾರ್ಥನಾ ಮತ್ತು ಕೀರ್ತನ ಮಂಟಪಗಳು ಸೇರಿವೆ. ಕಂಬ ಮತ್ತು ಗೋಡೆಗಳ ಮೇಲೆ ಹಿಂದೂ ದೇವಾನುದೇವತೆಗಳ ಸಂಕೀರ್ಣವಾದ ಕೆತ್ತನೆಯ ಚಿತ್ರಣಗಳನ್ನು ಒಳಗೊಂಡಿದೆ.

Continue Reading

Latest

Surya Tilak: ರಾಮಲಲ್ಲಾನಿಗೆ ಸೂರ್ಯ ತಿಲಕ; ಇದರ ಹಿಂದಿದೆ ವಿಜ್ಞಾನಿಗಳ ಕೈಚಳಕ

Surya Tilak: ಅಯೋಧ್ಯೆ ರಾಮ ಮಂದಿರದಲ್ಲಿ ರಾಮ ಲಲ್ಲಾನಿಗೆ ಸೂರ್ಯ ತಿಲಕವನ್ನು ಇಂದು ಇಡಲಾಗಿದೆ. ಇದರ ಹಿಂದೆ ವಿಜ್ಞಾನಿಗಳ ಪರಿಶ್ರಮವಿದೆ. ರಾಮ ಮಂದಿರ ಮಾತ್ರವಲ್ಲ ದೇಶದ ಇನ್ನು ಹಲವು ದೇಗುಲಗಳಲ್ಲಿ ದೇವರಿಗೆ ಸೂರ್ಯಾಭಿಷೇಕವನ್ನು ನಡೆಸಲಾಗುತ್ತದೆ.

VISTARANEWS.COM


on

By

Surya Tilak
Koo

ಉತ್ತರಪ್ರದೇಶ: ಜನವರಿಯಲ್ಲಿ ಉದ್ಘಾಟನೆಯಾದ ಅಯೋಧ್ಯೆ (ayodhya) ರಾಮ ಮಂದಿರದಲ್ಲಿ (ram mandir) ಪ್ರತಿಷ್ಠಾಪನೆಯಾಗಿರುವ ರಾಮ ಲಲ್ಲಾನ (ram lalla) ಜನ್ಮದಿನದವಾದ ರಾಮನವಮಿ (ram navami) ಪ್ರಯುಕ್ತ ಬುಧವಾರ ಮಧ್ಯಾಹ್ನ ಸೂರ್ಯ ತಿಲಕವನ್ನು (Surya Tilak) ಇಡಲಾಗಿದೆ. ದೇಶದ ಲಕ್ಷಾಂತರ ಮಂದಿ ಇದನ್ನು ವೀಕ್ಷಿಸಿದರು. ಇಶ್ವಾಕು ಕುಲದ ಭಗವಾನ್ ಶ್ರೀರಾಮನು ಸೂರ್ಯ ದೇವನ ವಂಶಸ್ಥರೆಂದು ನಂಬಲಾಗುತ್ತದೆ. ರಾಮನವಮಿ ಪ್ರಯುಕ್ತ ಭಗವಾನ್ ಶ್ರೀರಾಮನ ಜನ್ಮ ಸ್ಥಳವಾದ ಅಯೋಧ್ಯೆಯಲ್ಲಿ ರಾಮ್ ಲಲ್ಲಾನಿಗೆ ಸೂರ್ಯ ತಿಲಕ ಅಥವಾ ಸೂರ್ಯ ಅಭಿಷೇಕವನ್ನು ನಡೆಸಲಾಯಿತು. ಸೂರ್ಯನ ಕಿರಣಗಳು ರಾಮಲಲ್ಲಾನ ಹಣೆಯ ಮೇಲೆ ಕೆಲವು ನಿಮಿಷಗಳ ಕಾಲ ಬೆಳಗಿತ್ತು.

ಸೂರ್ಯ ತಿಲಕವಿಟ್ಟದ್ದು ಹೇಗೆ ?

ರಾಮಲಲ್ಲಾನಿಗೆ ಸೂರ್ಯ ತಿಲಕವಿಡಲು ಐಐಟಿ-ರೂರ್ಕಿಯ ವಿಜ್ಞಾನಿಗಳ ವಿಶೇಷ ತಂತ್ರಜ್ಞಾನವನ್ನು ಬಳಸಿದ್ದಾರೆ. ನಿರ್ದಿಷ್ಟ ಸಮಯದಲ್ಲಿ ರಾಮ್ ಲಲ್ಲಾನ ಹಣೆಯ ಮೇಲೆ ಸೂರ್ಯನ ಕಿರಣಗಳನ್ನು ನಿಖರವಾಗಿ ಬೀಳಲು ಉತ್ತಮ ಗುಣಮಟ್ಟದ ಕನ್ನಡಿ ಮತ್ತು ಮಸೂರಗಳನ್ನು ಹೊಂದಿರುವ ಉಪಕರಣವನ್ನು ಬಳಸಲಾಗಿದೆ. ಈ ಉಪಕರಣವು ಪ್ರತಿಫಲಿತ ಕನ್ನಡಿಗಳು ಮತ್ತು ಲೆನ್ಸ್‌ಗಳೊಂದಿಗೆ ಗೇರ್‌ಬಾಕ್ಸ್ ಜೋಡಿಸಲಾಗಿದೆ. ದೇವಳದ ಶಿಕಾರದ ಬಳಿ ಮೂರನೇ ಮಹಡಿಯಿಂದ ಸೂರ್ಯನ ಕಿರಣಗಳನ್ನು ನಿರ್ದಿಷ್ಟ ಸಮಯದಲ್ಲಿ ‘ಗರ್ಭಗೃಹ’ ದೊಳಗೆ ಇದು ಪ್ರತಿಫಲಿಸಲು ಸಹಾಯ ಮಾಡುತ್ತದೆ.


ಇದನ್ನೂ ಓದಿ: Ayodhya Ram Mandir: ಜನ್ಮದಿನದ ಸಂಭ್ರಮಕ್ಕೆ ಕಾತರ; ರಾಮಲಲ್ಲಾನಿಗೆ ಸೂರ್ಯ ಕಿರಣ ಅಭಿಷೇಕ ಪ್ರಯೋಗ ಸಕ್ಸೆಸ್!

ಚಂದ್ರನ ಕ್ಯಾಲೆಂಡರ್ ಅನ್ನು ಆಧರಿಸಿ ಪ್ರತಿ ವರ್ಷ ರಾಮನವಮಿಯಂದು ಸೂರ್ಯನ ಕಿರಣಗಳು ರಾಮನ ಹಣೆಗೆ ತಿಲಕವಿಡಲು ಸಹಾಯವಾಗಳು ಗೇರ್‌ಬಾಕ್ಸ್ ಅನ್ನು ವಿನ್ಯಾಸಗೊಳಿಸಲಾಗಿದೆ. ಇದರಲ್ಲಿರುವ ಆಪ್ಟಿಕಲ್ ಪಥ, ಪೈಪಿಂಗ್‌ ಮತ್ತು ಟಿಪ್-ಟಿಲ್ಟ್‌ ಗಳು ಸುಧೀರ್ಘ ಬಾಳಿಕೆ ಬರಲು ಮತ್ತು ಕಡಿಮೆ ನಿರ್ವಹಣೆಗಾಗಿ ಸ್ಪ್ರಿಂಗ್‌ಗಳಿಲ್ಲದೆ ವಿನ್ಯಾಸಗೊಳಿಸಲಾಗಿದೆ.


ಎರಡು ಬಾರಿ ಪ್ರಯೋಗ

ರಾಮಲಲ್ಲಾನಿಗೆ ಸೂರ್ಯಾಭಿಷೇಕ ನಡೆಸಲು ವಿಜ್ಞಾನಿಗಳು ಎರಡು ಬಾರಿ ಏಪ್ರಿಲ್ 8 ಮತ್ತು 13ರಂದು ಸೂರ್ಯ ತಿಲಕ್ ಕಾರ್ಯವಿಧಾನವನ್ನು ಯಶಸ್ವಿಯಾಗಿ ಪ್ರಯೋಗ ನಡೆಸಿದ್ದರು.

ಯಾರ ಪರಿಶ್ರಮ ?

ರಾಮ ಮಂದಿರದಲ್ಲಿ ರಾಮಲಲ್ಲಾನಿಗೆ ಸೂರ್ಯ ತಿಲಕವಿಡಲು ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (IIA), ತಾಂತ್ರಿಕ ಬೆಂಬಲ ನೀಡಿದ್ದು, ಬೆಂಗಳೂರು ಮೂಲದ ಕಂಪೆನಿಯೊಂದು ಆಪ್ಟಿಕಾ ಮಸೂರ ಮತ್ತು ಹಿತ್ತಾಳೆ ಟ್ಯೂಬ್‌ ಗಳನ್ನು ಒದಗಿಸಿತ್ತು.

ಸಿಬಿಆರ್ ಐ ವಿಜ್ಞಾನಿ ಡಾ. ಪ್ರದೀಪ್ ಚೌಹಾಣ್ ಅವರು ನೀಡಿರುವ ಮಾಹಿತಿಯಂತೆ ಇದು ಸಂಪೂರ್ಣವಾಗಿ ಸೂರ್ಯನದ್ದೇ ಕಿರಣ. ಈ ಕಾರ್ಯವಿಧಾನದಲ್ಲಿ ಯಾವುದೇ ವಿದ್ಯುತ್ ಅಥವಾ ಬ್ಯಾಟರಿ ಅಥವಾ ಕಬ್ಬಿಣವನ್ನು ಬಳಸಲಾಗುವುದಿಲ್ಲ ಎಂದು ಹೇಳಿದ್ದರು.

ಸಾಂಪ್ರದಾಯಿಕ ಭಾರತೀಯ ಮಿಶ್ರಲೋಹವಾದ ಪಂಚಧಾತುವನ್ನು ಸೂರ್ಯ ತಿಲಕ ಉಪಕರಣದಲ್ಲಿಯೂ ಬಳಸಲಾಗಿದೆ. ಇಸ್ರೋದ ಮಾಜಿ ವಿಜ್ಞಾನಿ ಮನೀಶ್ ಪುರೋಹಿತ್ ನೀಡಿರುವ ಮಾಹಿತಿ ಪ್ರಕಾರ ಸೂರ್ಯನ ಕಿರಣಗಳು ರಾಮ್ ಲಲ್ಲಾನ ಹಣೆಯನ್ನು ಬೆಳಗಿಸುವುದನ್ನು ಆರ್ಕಿಯೋ ಆಸ್ಟ್ರೊನಮಿ, ಮೆಟಾನಿಕ್ ಸೈಕಲ್ ಮತ್ತು ಅನಾಲೆಮ್ಮಾ ಖಚಿತಪಡಿಸುತ್ತದೆ.

ಅನಾಲೆಮ್ಮವು ಎಂಟು ಅಂಕೆಯ ವಕ್ರರೇಖೆಯಾಗಿದ್ದು ಅದು ಭೂಮಿಯ ಓರೆ ಮತ್ತು ಕಕ್ಷೆಯ ಕಾರಣದಿಂದ ವರ್ಷಕ್ಕೆ ಸೂರ್ಯನ ಬದಲಾಗುತ್ತಿರುವ ಸ್ಥಾನವನ್ನು ಟ್ರ್ಯಾಕ್ ಮಾಡುತ್ತದೆ. ಮೆಟೋನಿಕ್ ಚಕ್ರವು ಸುಮಾರು 19 ವರ್ಷಗಳ ಅವಧಿಯಾಗಿದ್ದು ರಾಮ ನವಮಿಯ ದಿನಾಂಕ ಮತ್ತು ಅದು ಬೀಳುವ ‘ತಿಥಿ’ ಒಟ್ಟಿಗೆ ಬರುವುದನ್ನು ಖಚಿತಪಡಿಸುತ್ತದೆ ಎನ್ನುತ್ತಾರೆ ಪುರೋಹಿತ್.

ಹಲವು ದೇವಾಲಯಗಳಲ್ಲೂ ಇದೆ

ಗರ್ಭಗುಡಿಯ ದೇವರಿಗೆ ಸೂರ್ಯ ಅಭಿಷೇಕವನ್ನು ಕೇವಲ ರಾಮ ಮಂದಿರದಲ್ಲಿ ಮಾಡುತ್ತಿಲ್ಲ. ದೇಶದ ಹಲವಾರು ಜೈನ ಮತ್ತು ಹಿಂದೂ ದೇವಾಲಯಗಳಲ್ಲಿ ನಡೆಸಲಾಗುತ್ತದೆ.


ಕರ್ನಾಟಕದ ಬೆಂಗಳೂರಿನಲ್ಲಿರುವ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲೂ ಪ್ರತಿ ಮಕರ ಸಂಕ್ರಾಂತಿಯಂದು, ಸೂರ್ಯಕಿರಣಗಳು ನಂದಿಯ ಪ್ರತಿಮೆಯನ್ನು ಬೆಳಗಿ ಶಿವಲಿಂಗದ ಪಾದಗಳನ್ನು ಮುಟ್ಟಿ ಅಂತಿಮವಾಗಿ ಸಂಪೂರ್ಣ ಶಿವಲಿಂಗವನ್ನು ಆವರಿಸುತ್ತದೆ.

ತಮಿಳುನಾಡಿನಲ್ಲಿರುವ 11-12 ನೇ ಶತಮಾನದ ಸುರಿಯಾನಾರ್ ಕೋವಿಲ್ (ಸೂರ್ಯ) ದೇವಾಲಯದಲ್ಲಿ ಸೂರ್ಯನ ಬೆಳಕು ವರ್ಷದ ಕೆಲವು ಸಮಯ ದೇವಾಲಯದಲ್ಲಿರುವ ಸೂರ್ಯ, ಉಷಾದೇವಿ ಮತ್ತು ಪ್ರತ್ಯೂಷಾ ದೇವಿಯ ಬಿಂಬದ ಮೇಲೆ ಬೀಳುತ್ತದೆ.

ಮಧ್ಯಪ್ರದೇಶದ ಉನವ್ ಬಾಲಾಜಿ ಸೂರ್ಯ ದೇವಸ್ಥಾನದಲ್ಲಿ ದತಿಯಾದಲ್ಲಿ ಉತ್ಸವದ ವೇಳೆ ಮುಂಜಾನೆ ಸೂರ್ಯನ ಮೊದಲ ಕಿರಣಗಳು ನೇರವಾಗಿ ದೇವಾಲಯದ ಗರ್ಭಗುಡಿಯಲ್ಲಿರುವ ವಿಗ್ರಹದ ಮೇಲೆ ಬೀಳುತ್ತವೆ.

ಆಂಧ್ರಪ್ರದೇಶದ ನಾಗಲಾಪುರಂ ಜಿಲ್ಲೆಯಲ್ಲಿರುವ ವಿಷ್ಣುವಿನ ಮತ್ಸ್ಯ ಅವತಾರವನ್ನು ಪ್ರತಿಬಿಂಬಿಸುವ ನಾರಾಯಣಸ್ವಾಮಿ ದೇವಸ್ಥಾನದಲ್ಲಿ ವರ್ಷದಲ್ಲಿ ಐದು ದಿನ ಸೂರ್ಯ ಪೂಜಾ ಮಹೋತ್ಸವವನ್ನು ಆಯೋಜಿಸುತ್ತದೆ. ಈ ಸಂದರ್ಭದಲ್ಲಿ ಸೂರ್ಯನ ಕಿರಣಗಳು ದೇವಾಲಯದೊಳಗಿನ ಗರ್ಭಗೃಹದಲ್ಲಿರುವ ಪ್ರಧಾನ ದೇವತೆಯ ಪಾದಗಳಿಂದ ಹೊಕ್ಕುಳವರೆಗೆ ಚಲಿಸುತ್ತದೆ.


ಮಹಾರಾಷ್ಟ್ರದ ಕೊಲ್ಲಾಪುರದಲ್ಲಿರುವ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವರ್ಷದಲ್ಲಿ ಎರಡು ಬಾರಿ ಗರ್ಭಗೃಹವನ್ನು ಸೂರ್ಯನ ಕಿರಣಗಳು ನೇರವಾಗಿ ಗರುಡ ಮಂಟಪದ ಮೂಲಕ ಪ್ರವೇಶಿಸಿ ಮಹಾಲಕ್ಷ್ಮಿ ದೇವಿಯ ಪಾದಗಳ ಮೇಲೆ ಬೀಳುತ್ತವೆ. ಎರಡು ನಿರ್ದಿಷ್ಟ ದಿನಗಳಲ್ಲಿ ಸೂರ್ಯನ ಸಂಪೂರ್ಣ ಬೆಳಕಿನಿಂದ ಇಡೀ ವಿಗ್ರಹವನ್ನು ಸ್ನಾನ ಮಾಡಿಸಲಾಗುತ್ತದೆ.

ಗುಜರಾತ್ ನಲ್ಲಿರುವ 11 ನೇ ಶತಮಾನದ ಮೊಧೇರಾ ಸೂರ್ಯ ದೇವಾಲಯದಲ್ಲಿ ವರ್ಷಕ್ಕೆ ಎರಡು ಬರಿ ಸೂರ್ಯಕಿರಣಗಳು ದೇವಾಲಯವನ್ನು ಪ್ರವೇಶಿಸಿ ಸೂರ್ಯ ದೇವರ ವಿಗ್ರಹದ ಮೇಲೆ ಬೀಳುತ್ತವೆ.

ಅಹಮದಾಬಾದ್‌ನ ಕೋಬಾ ಜೈನ ದೇವಾಲಯದಲ್ಲಿ ವಾರ್ಷಿಕವಾಗಿ ಸೂರ್ಯಾಭಿಷೇಕ ನಡೆಯುತ್ತದೆ. ವಾರ್ಷಿಕ ಸಮಾರಂಭದಲ್ಲಿ ಸೂರ್ಯಕಿರಣಗಳು ನೇರವಾಗಿ ಮಹಾವೀರಸ್ವಾಮಿಯ ಅಮೃತಶಿಲೆಯ ಪ್ರತಿಮೆಯ ಹಣೆಯ ಮೇಲೆ ಮೂರು ನಿಮಿಷಗಳ ಕಾಲ ಬೀಳುತ್ತವೆ.

ರಾಜಸ್ಥಾನದಲ್ಲಿ ಅರಾವಳಿಯಲ್ಲಿರುವ 15ನೇ ಶತಮಾನದ ರಣಕ್‌ಪುರ ದೇವಾಲಯದ ಗರ್ಭಗುಡಿಗೆ ಸೂರ್ಯನ ಬೆಳಕು ನೇರವಾಗಿ ಬರುವಂತೆ ಬಿಳಿ ಅಮೃತಶಿಲೆಗಳಿಂದ ವಿನ್ಯಾಸಗೊಳಿಸಲಾಗಿದೆ.


ಒಡಿಶಾದಲ್ಲಿರುವ 13 ನೇ ಶತಮಾನದ ಕೋನಾರ್ಕ್ ಸೂರ್ಯ ದೇವಾಲಯದಲ್ಲಿ ಸೂರ್ಯೋದಯದ ವೇಳೆ ಸೂರ್ಯನ ಬೆಳಕು ದೇವಾಲಯಕ್ಕೆ ಸಂಪೂರ್ಣ ಸ್ನಾನ ಮಾಡಿಸುತ್ತದೆ. ದೇವಾಲಯದ ಮುಖ್ಯ ದ್ವಾರವನ್ನು ಸೂರ್ಯ ಕಿರಣಗಳು ಸ್ಪರ್ಶಿಸುತ್ತದೆ. ಅನಂತರ ಅದರ ವಿವಿಧ ದ್ವಾರಗಳ ಮೂಲಕ ಗರ್ಭಗೃಹದೊಳಗೆ ಪ್ರವೇಶಿಸುತ್ತದೆ.

Continue Reading

ಧಾರ್ಮಿಕ

Ram Navami: ನಾಳೆ ದೇಶಾದ್ಯಂತ ರಾಮ ನವಮಿ ಸಂಭ್ರಮ; ಈ ದಿನದ ಮಹತ್ವವೇನು ಗೊತ್ತೇ ?

Ram Navami: ಈಗ ಪ್ರತಿಯೊಬ್ಬರ ಮನದಲ್ಲೂ ರಾಮನಾಮ ಮೊಳಗುತ್ತಿದೆ. ಯಾಕೆಂದರೆ ರಾಮ ಜನ್ಮ ದಿನದ ಉತ್ಸವ ರಾಮ ನವಮಿ ಆಚರಣೆಗೆ ದೇಶವೇ ಸಜ್ಜಾಗಿದೆ. ದೇಶಾದ್ಯಂತ ಇರುವ ರಾಮ ಮಂದಿರಗಳು ಅಲಂಕಾರಗೊಂಡು ವೈಭವದಿಂದ ರಾಮನ ಹುಟ್ಟುಹಬ್ಬ ಆಚರಣೆಗೆ ಕಾಯುತ್ತಿದೆ.

VISTARANEWS.COM


on

By

Ram Navami
Koo

ಪ್ರತಿ ವರ್ಷದಂತೆ ಈ ಬಾರಿಯು ಭಗವಾನ್ ಶ್ರೀ ರಾಮನ (sriram) ಜನ್ಮ ದಿನವಾದ ರಾಮ ನವಮಿ (Ram Navami) ಮತ್ತೆ ಬಂದಿದೆ. ದೇಶಾದ್ಯಂತ ರಾಮ ನವಮಿ ಉತ್ಸವಕ್ಕೆ ರಾಮ ಭಕ್ತರು ಸಜ್ಜಾಗಿದ್ದಾರೆ. ರಾಮ ಮಂದಿರಗಳನ್ನೂ (ram mandir) ಸುಂದರವಾಗಿ ಅಲಂಕರಿಸಿ ಅತ್ಯಂತ ವೈಭವದಿಂದ ಉತ್ಸವವನ್ನು ಆಚರಿಸಲು ಸಿದ್ದತೆಗಳು ಭರದಿಂದ ಸಾಗುತ್ತಿದೆ.

ರಾಮ ನವಮಿಯಂದು ಸಾಮಾನ್ಯವಾಗಿ ರಾಮ ಭಕ್ತು (Ram Bhaktas) ದೇವಾಲಯಕ್ಕೆ ಭೇಟಿ ನೀಡುತ್ತಾರೆ. ವಿಶೇಷ ಪ್ರಾರ್ಥನೆಗಳನ್ನು ಸಲ್ಲಿಸುತ್ತಾರೆ. ಈ ಸಂದರ್ಭದಲ್ಲಿ ಹಲವಾರು ಮಂದಿ ಉಪವಾಸ (fasting) ವ್ರತವನ್ನು ಆಚರಿಸುತ್ತಾರೆ. ದೇವಾಲಯಗಳಲ್ಲಿ (temple) ಆಧ್ಯಾತ್ಮಕ ಪ್ರವಚನ, ಭಜನೆ, ಸಂಕೀರ್ತನೆಗಳನ್ನು ಆಯೋಜಿಸಲಾಗುತ್ತದೆ. ತೊಟ್ಟಿಲಲ್ಲಿ ಪುಟ್ಟ ರಾಮನನ್ನು ಇಟ್ಟು ತೂಗಿ ಪೂಜೆ ಸಲ್ಲಿಸಲಾಗುತ್ತದೆ. ಒಟ್ಟಿನಲ್ಲಿ ಈ ದಿನ ಎಲ್ಲರೂ ರಾಮನ ಭಕ್ತಿಯಲ್ಲಿ ಮಿಂದೇಳುತ್ತಾರೆ.

ರಾಮ ನವಮಿ ಆಚರಣೆ ಯಾವಾಗ?

ಶ್ರೀ ರಾಮನು ಚೈತ್ರ ಮಾಸದ ಶುಕ್ಲ ಪಕ್ಷದ ನವಮಿ ತಿಥಿಯಂದು ಜನಿಸಿದ್ದಾನೆ. ಹೀಗಾಗಿ ಹಿಂದೂ ಚಾಂದ್ರಮಾನ ಪಂಚಾಂಗದಲ್ಲಿ ಬರುವ ಏಪ್ರಿಲ್ 17 ಬುಧವಾರದಂದು ರಾಮನವಮಿಯನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: Ram Mandir : ರಾಮನವಮಿಯಂದು ವಿತರಿಸಲು ಅಯೋಧ್ಯೆಗೆ 1,11,111 ಕೆ.ಜಿ ಲಡ್ಡು ಕಳುಹಿಸಿದ ರಾಮಭಕ್ತರು

ರಾಮ ನವಮಿ ದಿನ ಮಧ್ಯಾಹ್ನ ಗಂಟೆ 11.03 ರಿಂದ 1.38 ವಿಶೇಷವೆಂದು ಪರಿಗಣಿಸಲಾಗಿದೆ. ರಾಮ ನವಮಿ ತಿಥಿಯು ಏಪ್ರಿಲ್ 16ರಂದು ಬೆಳಗ್ಗೆ 1.23ಕ್ಕೆ ಪ್ರಾರಂಭವಾಗಿ ಏಪ್ರಿಲ್ 17ರಂದು ರಾತ್ರಿ 3.14 ಕ್ಕೆ ಮುಕ್ತಾಯವಾಗುತ್ತದೆ.


ರಾಮ ನವಮಿಯ ಇತಿಹಾಸವೇನು?

ಹಿಂದೂ ಪುರಾಣಗಳಲ್ಲಿ ಅತ್ಯಂತ ಶ್ರೇಷ್ಠ ವ್ಯಕ್ತಿಯೆಂದೇ ಪರಿಗಣಿಸಲ್ಪಟ್ಟಿರುವ ಭಗವಾನ್ ರಾಮನ ರಾಮ ನವಮಿಯಂದು ಜನ್ಮ ತಾಳಿದ್ದನು. ಹಿಂದೂ ಕ್ಯಾಲೆಂಡರ್‌ನಲ್ಲಿ ಸಾಂಪ್ರದಾಯಿಕವಾಗಿ ಚೈತ್ರ ಮಾಸದ ಒಂಬತ್ತನೇ ದಿನದಂದು ರಾಮ ನವಮಿಯನ್ನು ಆಚರಿಸಲಾಗುತ್ತದೆ. ಶ್ರೀರಾಮನು ವಿಷ್ಣುವಿನ ಏಳನೇ ಅವತಾರವೆಂದು ನಂಬಲಾಗುತ್ತದೆ. ಸದಾಚಾರ ಮತ್ತು ಸದ್ಗುಣಗಳ ಪ್ರತಿಪಾದಕನೆಂದು ರಾಮನನ್ನು ಕರೆಯಲಾಗುತ್ತದೆ. ಅನೇಕ ಶತಮಾನಗಳಿಂದ ರಾಮ ನವಮಿಯನ್ನು ಅತ್ಯಂತ ವೈಭವಾಗಿ ಆಚರಿಸಲಾಗುತ್ತದೆ.

ರಾಮ ನವಮಿ ಆಚರಣೆ ಏಕೆ ?

ಪ್ರಪಂಚದಾದ್ಯಂತದ ಹಿಂದೂಗಳು ಅಪಾರ ಸಾಂಸ್ಕೃತಿಕ ಮತ್ತು ಧಾರ್ಮಿಕ ಪ್ರಾಮುಖ್ಯತೆಯನ್ನು ಹೊಂದಿದ್ದಾರೆ. ರಾಮ ನವಮಿಯು ಧರ್ಮ ಅಥವಾ ಸದಾಚಾರದ ನಿರಂತರ ಮೌಲ್ಯಗಳನ್ನು ಗೌರವಿಸುವ ಆಚರಣೆಯಾಗಿದೆ. ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯವನ್ನು ಇದು ಸೂಚಿಸುತ್ತದೆ. ಭಗವಾನ್ ರಾಮನ ಕರ್ತವ್ಯ, ಗೌರವ ಮತ್ತು ತ್ಯಾಗದ ಉದಾಹರಣೆಯು ಜನರಲ್ಲಿ ನೈತಿಕ ತತ್ತ್ವ ಗಳನ್ನು ಸಂರಕ್ಷಿಸಲು ಮತ್ತು ಸದ್ಗುಣಶೀಲ ಜೀವನವನ್ನು ನಡೆಸಲು ಪ್ರೇರೇಪಿಸುತ್ತದೆ.


ಹೇಗೆ ಆಚರಣೆ ?

ರಾಮ ನವಮಿಯನ್ನು ಭಾರತದಲ್ಲಿ ಜನರು ಬಹಳ ಉತ್ಸಾಹ ಮತ್ತು ಆಸಕ್ತಿಯಿಂದ ಆಚರಿಸುತ್ತಾರೆ. ಭಗವಾನ್ ರಾಮನ ಸಣ್ಣ ವಿಗ್ರಹವನ್ನು ಪೀಠದ ಮೇಲೆ ಇರಿಸಲಾಗುತ್ತದೆ. ಮನೆಗಳನ್ನು ಸ್ವಚ್ಛಗೊಳಿಸುತ್ತಾರೆ ಮತ್ತು ಅಲಂಕರಿಸಲಾಗುತ್ತದೆ. ಮನೆ ಬಾಗಿಲಲ್ಲಿ ರಂಗೋಲಿಗಳನ್ನು ಬರೆಯಲಾಗುತ್ತದೆ. ಭಗವಾನ್ ರಾಮನಿಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಗುತ್ತದೆ. ಉಪವಾಸ, ಮೆರವಣಿಗೆ, ಮಹಾಕಾವ್ಯ ರಾಮಾಯಣ ಪಠಿಸುವುದು ಮತ್ತು ಕೇಳುವುದು, ಹವನಗಳಂತ ವಿವಿಧ ಆಚರಣೆಗಳಲ್ಲಿ ಭಕ್ತರು ಪಾಲ್ಗೊಳ್ಳುತ್ತಾರೆ. ರಾಮ ನವಮಿಯು ಒಂಬತ್ತು ದಿನಗಳ ಚೈತ್ರ ನವರಾತ್ರಿ ಉತ್ಸವದ ಅಂತ್ಯವನ್ನು ಸೂಚಿಸುತ್ತದೆ. ಈ ಸಂದರ್ಭದಲ್ಲಿ ಜಾತಿ, ಧರ್ಮ ಮತ್ತು ರಾಷ್ಟ್ರೀಯತೆಯನ್ನು ಮೀರಿ ಎಲ್ಲ ಸಮುದಾಯಗಳು ಏಕತೆ ಮತ್ತು ಸಾಮರಸ್ಯದಿಂದ ಹಬ್ಬದಲ್ಲಿ ಪಾಲ್ಗೊಳ್ಳುತ್ತದೆ.


ಅಯೋಧ್ಯೆಯತ್ತ ಎಲ್ಲರ ಚಿತ್ತ

ಉತ್ತರಪ್ರದೇಶದ ಅಯೋಧ್ಯೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ಯಾಕೆಂದರೆ ರಾಮ ಜನ್ಮ ಭೂಮಿಯಲ್ಲಿ ರಾಮ ಮಂದಿರ ಉದ್ಘಾಟನೆಯಾದ ಬಳಿಕ ಮೊದಲ ಬಾರಿಗೆ ಹೊಸ ಮಂದಿರದಲ್ಲಿ ರಾಮನ ಜನ್ಮ ದಿನವನ್ನು ಆಚರಿಸಲಾಗುತ್ತದೆ. ಈಗಾಗಲೇ ಇಲ್ಲಿ ಸಾಕಷ್ಟು ತಯಾರಿಗಳು ನಡೆದಿದ್ದು, ವಿಶ್ವದ ಗಮನ ಸೆಳೆದಿದೆ. ಹೊರದೇಶಗಳಲ್ಲೂ ಆಚರಣೆ ರಾಮ ಜನ್ಮದಿನವನ್ನು ಭಾರತದಲ್ಲಿ ಮಾತ್ರವಲ್ಲ ನೇಪಾಳ, ಬಾಂಗ್ಲಾದೇಶದ ಹಿಂದೂಗಳೂ ಅತ್ಯಂತ ವೈಭವದಿಂದ ಆಚರಿಸುತ್ತಾರೆ. ಉತ್ತರ ಅಮೆರಿಕ ಮತ್ತು ಯುರೋಪ್ ನ ಕೆಲವು ರಾಷ್ಟ್ರಗಳಲ್ಲೂ ರಾಮನವಮಿಯನ್ನು ಆಚರಿಸಲಾಗುತ್ತದೆ.

Continue Reading

ಪ್ರಮುಖ ಸುದ್ದಿ

Ram Navami 2024: ರಾಮ ನವಮಿಯನ್ನು ವಿಶೇಷವಾಗಿ ಆಚರಿಸುವ ಟಾಪ್‌ 5 ಸ್ಥಳಗಳಿವು

Ram Navami 2024: ರಾಮ ನವಮಿ ಎಂಬ ಹೆಸರು ಕೇಳುತ್ತಲೇ ಮನಸ್ಸಿನಲ್ಲಿ ಸಡಗರ ತುಂಬಿ ತುಳುಕುತ್ತದೆ. ಹಬ್ಬದ ತಯಾರಿ ಈಗಾಗಲೇ ಜೋರಾಗಿ ನಡೆದಿದೆ. ದೇಶದ ಕೆಲವು ಭಾಗಗಳಲ್ಲಿ ರಾಮ ನವಮಿಯನ್ನು ಬಹಳ ಸಡಗರದಿಂದ ಆಚರಿಸಲಾಗುತ್ತದೆ. ಆ ಸ್ಥಳಗಳು ಯಾವುವು? ಅವುಗಳ ವಿಶೇಷತೆ ಏನು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

Rama Navami
Koo

ಬೆಂಗಳೂರು: ರಾಮ ನವಮಿಯನ್ನು (Rama Navami) ಶ್ರೀರಾಮನ ಜನ್ಮದಿನವೆಂದು ಆಚರಿಸಲಾಗುತ್ತದೆ. ರಾಜ ದಶರಥ ಮತ್ತು ರಾಣಿ ಕೌಸಲ್ಯ ದೇವಿಯ ಪುತ್ರನಾಗಿ ಶ್ರೀವಿಷ್ಣುವು ಶ್ರೀರಾಮನ ಅವತಾರದಲ್ಲಿ ದುಷ್ಟ ರಾವಣನನ್ನು ಸಂಹಾರ ಮಾಡಲು ಈ ದಿನ ಭೂಮಿಯ ಮೇಲೆ ಜನ್ಮ ತಾಳಿದನು ಎಂದು ನಂಬಲಾಗಿದೆ. ಹಾಗಾಗಿ ಏಪ್ರಿಲ್ 17ರಂದು ಭಾರತದಾದ್ಯಂತ ರಾಮನವಮಿಯನ್ನು ಬಹಳ ವಿಜೃಂಭನೆಯಿಂದ ಆಚರಿಸಲಾಗುತ್ತದೆ. ಆದರೆ ದೇಶದ ಈ ಕೆಲವು ಸ್ಥಳಗಳಲ್ಲಿ ರಾಮನವಮಿಯನ್ನು ಬಹಳ ವಿಶೇಷವಾಗಿ ಆಚರಿಸುತ್ತಾರೆ. ಆ ಸ್ಥಳಗಳು ಯಾವುವು ಎಂಬ ಮಾಹಿತಿ ಇಲ್ಲಿದೆ.

ಉತ್ತರ ಪ್ರದೇಶದ ಅಯೋಧ್ಯೆ

ಭಗವಾನ್ ಶ್ರೀರಾಮನ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ಭವ್ಯ ಶ್ರೀ ರಾಮ ಮಂದಿರ ಇತ್ತೀಚೆಗಷ್ಟೇ ಉದ್ಘಾಟನೆಗೊಂಡಿದೆ. ಇಲ್ಲಿ ರಾಮ ನವಮಿಯನ್ನು ಬಹಳ ವಿಶೇಷವಾಗಿ ಆಚರಿಸಲಾಗುತ್ತದೆ. ಅಯೋಧ್ಯೆ ಧಾಮದಲ್ಲಿ ರಾಮನವಮಿ ಮೇಳವನ್ನು ನಡೆಸಲಾಗುತ್ತಿದ್ದು, ಇದು ಸುಮಾರು 25 ಲಕ್ಷ ಭಕ್ತರನ್ನು ಸೆಳೆಯುವ ನಿರೀಕ್ಷೆಯಿದೆ ಎನ್ನಲಾಗಿದೆ. ಜೊತೆಗೆ ಹನುಮಾನ್ ಗಢಿ ಮತ್ತು ಕನಕ ಭವನದಂತಹ ಇತರ ದೇವಾಲಯಗಳಿಗೂ ನೀವು ಭೇಟಿ ನೀಡಬಹುದು. ರಾಮ ಮಂದಿರ ಆವರಣದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಬಿಹಾರದ ಸೀತಾ ಮಢಿ

ಸೀತಾ ಮಾತೆಯ ಜನ್ಮ ಸ್ಥಳವಾಗಿ ಪೂಜೆ ಮಾಡಲಾಗುತ್ತಿರುವ ಬಿಹಾರದ ಸೀತಾ ಮಢಿಯು ರಾಮಭಕ್ತರಿಗೆ ರಾಮ ನವಮಿಯನ್ನು ಆಚರಿಸಲು ಇರುವ ವಿಶೇಷ ಸ್ಥಳವಾಗಿದೆ. ಇಲ್ಲಿನ ಜಾನಕಿ ಮಂದಿರದಲ್ಲಿ ರಾಮನವಮಿಯನ್ನು ಬಹಳ ವಿಶೇಷವಾಗಿ ಉತ್ಸಾಹದಿಂದ ಆಚರಿಸುತ್ತಾರೆ. ಈ ದಿನ ಸಾವಿರಾರು ಭಕ್ತರು ಇಲ್ಲಿಗೆ ಬರುತ್ತಾರೆ. ಈ ದಿನ ಮಂದಿರವನ್ನು ಸುಂದರವಾಗಿ ಅಲಂಕರಿಸಲಾಗುತ್ತದೆ.

ತೆಲಂಗಾಣದ ಭದ್ರಾಚಲಂ

‘ದಕ್ಷಿಣದ ಅಯೋಧ್ಯೆ’ ಎಂದು ಕರೆಯಲ್ಪಡುವ ತೆಲಂಗಾಣದ ಭದ್ರಾಚಲಂನಲ್ಲಿರುವ ಸೀತಾ ರಾಮಚಂದ್ರ ಸ್ವಾಮಿ ದೇವಾಲಯದಲ್ಲಿ ರಾಮನವಮಿಯನ್ನು ಬಹಳ ಸಡಗರದಿಂದ ಆಚರಿಸಲಾಗುತ್ತದೆ. ಇಲ್ಲಿ ರಾಮ ನವಮಿಯನ್ನು ರಾಮನು ಸೀತಾಮಾತೆಯನ್ನು ವಿವಾಹವಾದ ದಿನ ಎಂದು ಆಚರಿಸಲಾಗುತ್ತದೆ. ಹಾಗಾಗಿ ಈ ದಿನ ದೇವಾಲಯದಲ್ಲಿ ವಿವಾಹ ಕಾರ್ಯಕ್ರಮವನ್ನು ನಡೆಸಲಾಗುತ್ತದೆ. ಹಾಗೆಯೇ ಸಂಪ್ರದಾಯದ ಭಾಗವಾಗಿ ದೈವಿಕ ದಂಪತಿಗಳಿಗೆ ವಸ್ತ್ರಗಳು ಮತ್ತು ಮುತ್ಯಾಲ ತಾಳಂಬ್ರಲು ನೀಡಲಾಗುತ್ತದೆ. ಈ ದಿನ ದೇವಾಲಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಧಾರ್ಮಿಕ ಪ್ರವಚನಗಳು ಮತ್ತು ದೇವತೆಗಳ ಭವ್ಯವಾದ ಮೆರವಣಿಗೆ ನಡೆಯುತ್ತದೆ.

ತಮಿಳುನಾಡಿನ ರಾಮೇಶ್ವರಂ

ರಾಮೇಶ್ವರಂನಲ್ಲಿ ರಾವಣನಿಂದ ಸೀತೆಯನ್ನು ರಕ್ಷಿಸಲು ರಾಮನು ಶ್ರೀಲಂಕಾವನ್ನು ತಲುಪಲು ಸೇತುವೆಯನ್ನು ನಿರ್ಮಿಸಿದನ್ನು ನಂಬಲಾಗಿದೆ. ಇಲ್ಲಿನ ಶ್ರೀ ಕೋದಂಡರಾಮಸ್ವಾಮಿ ದೇವಸ್ಥಾನದಲ್ಲಿ ರಾಮನವಮಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಇದು ರಾವಣನನ್ನು ಕೊಂದ ಪಾಪ ವಿಮೋಚನೆಗಾಗಿ ರಾಮನು ಶಿವನನ್ನು ಪೂಜಿಸಿದ ಸ್ಥಳ ಎನ್ನಲಾಗುತ್ತದೆ.

ಇದನ್ನೂ ಓದಿ: Theft Case : ಹಗಲಿನಲ್ಲಿ ಸ್ವಿಗ್ಗಿ ಡೆಲಿವರಿ ಬಾಯ್‌; ರಾತ್ರಿಯಲ್ಲಿ ಬೈಕ್ ಕದಿಯುವ ಕಳ್ಳ

ತಮಿಳುನಾಡಿನ ಕೊಯಮತ್ತೂರು

ಇಲ್ಲಿನ ಅರುಲ್ಮಿಗು ಕೋದಂಡರಾಮರ ದೇವಸ್ಥಾನದಲ್ಲಿ ಬೆಳಗ್ಗೆ ಸೂರ್ಯದೇವನಿಗೆ ಪ್ರಾರ್ಥನೆಗಳನ್ನು ಸಲ್ಲಿಸುತ್ತ ರಾಮನವಮಿಯನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಇಲ್ಲಿ ಅಂದು ರಾಮಾಯಣ ಮತ್ತು ರಾಮಚರಿತಮಾನಸದಂತಹ ಪವಿತ್ರ ಗ್ರಂಥಗಳ ಪಠಣಗಳು, ಉತ್ಸವವನ್ನು ಒಳಗೊಂಡ ಮೆರವಣಿಗೆ ಇತ್ಯಾದಿ ವಿಶೇಷ ಆಚರಣೆಗಳನ್ನು ಮಾಡಲಾಗುತ್ತದೆ. ಹಾಗೆಯೇ ಭಕ್ತರಿಗೆ ಹಣ್ಣುಗಳು ಮತ್ತು ಸಿಹಿ ತಿಂಡಿಗಳನ್ನು ಧಾರಾಳವಾಗಿ ವಿತರಿಸಲಾಗುತ್ತದೆ.

Continue Reading
Advertisement
Prajwal Revanna Case
ಕರ್ನಾಟಕ7 mins ago

Prajwal Revanna Case: ಪೆನ್​​ಡ್ರೈವ್ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ; ದೇವರಾಜೇಗೌಡ ತಪ್ಪು ಮಾಹಿತಿ ನೀಡಿದ್ದಾರೆ: ಶಿವರಾಮೇಗೌಡ

Cholera
ಕರ್ನಾಟಕ15 mins ago

Cholera: ಸಿದ್ದರಾಮಯ್ಯ ತವರು ಕ್ಷೇತ್ರದಲ್ಲಿ ಕಾಲರಾ ಅಟ್ಟಹಾಸ; ಕಲುಷಿತ ನೀರು ಕುಡಿದು 114 ಜನಕ್ಕೆ ಕಾಯಿಲೆ!

RCB vs CSK
ಕ್ರೀಡೆ17 mins ago

RCB vs CSK: ಚೆನ್ನೈ ಸೋಲಿಗೆ ಧೋನಿ ಬಾರಿಸಿದ ಔಟ್​ ಆಫ್​ದಿ ಸ್ಟೇಡಿಯಂ ಸಿಕ್ಸರ್​ ಕಾರಣ

Ninagagi Kannada Serial Ritvvikk Mathad Playing Lead In Divya Uruduga
ಕಿರುತೆರೆ19 mins ago

Ninagagi Kannada Serial: ʻನಿನಗಾಗಿʼ ಸೀರಿಯಲ್‌ನಲ್ಲಿ ದಿವ್ಯಾ ಉರುಡುಗ ಜತೆ ‘ಗಿಣಿರಾಮ’ ಧಾರಾವಾಹಿಯ ನಟ ನಟನೆ

British Journalist
ದೇಶ25 mins ago

British Journalist: “ವವ ಭಾರತದ ಬಗ್ಗೆ ಪ್ರಪಂಚಕ್ಕೆ ತಿಳಿಸಬೇಕು”- ಇಂಡಿಯಾಗೆ ಮನಸೋತ ಬ್ರಿಟಿಷ್‌ ಪತ್ರಕರ್ತ

Karnataka rain
ಮಳೆ26 mins ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

RCB
ಕ್ರಿಕೆಟ್49 mins ago

RCB: ಆರ್​ಸಿಬಿಯ ನಂಟು ಬಿಡದ ವಿಜಯ್​ ಮಲ್ಯ; ಟ್ವೀಟ್​ ಮೂಲಕ ಅಭಿನಂದನೆ

Pavithra Jayaram Trinayani Serial Son Prajwal Reaction
ಸಿನಿಮಾ1 hour ago

Pavithra Jayaram: ಅಮ್ಮ ಮತ್ತು ಚಂದ್ರಕಾಂತ್‌ ಒಡನಾಟ ಹೇಗಿತ್ತು ಅಂತ ನಮಗೆ ಗೊತ್ತು ಎಂದ ಪವಿತ್ರ ಜಯರಾಮ್ ಮಗ!

Karnataka Rain
ಮಳೆ2 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Viral News
ವೈರಲ್ ನ್ಯೂಸ್2 hours ago

Viral News: ಬಾಯ್‌ಫ್ರೆಂಡ್‌ನ ಗುಪ್ತಾಂಗವನ್ನೇ ಕಟ್‌ ಮಾಡಿ ಕಸದ ಬುಟ್ಟಿಗೆ ಎಸೆದ ಮಹಿಳೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka rain
ಮಳೆ26 mins ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

ಟ್ರೆಂಡಿಂಗ್‌