Hindu Temples : ದೇಗುಲದ ಹಣ ಚರ್ಚ್‌, ಮಸೀದಿಗೆ ಹೋಗ್ತಿದೆ ಎನ್ನೋದು ಸುಳ್ಳು; ಅರ್ಚಕರ ಸಂಘ - Vistara News

ಧಾರ್ಮಿಕ

Hindu Temples : ದೇಗುಲದ ಹಣ ಚರ್ಚ್‌, ಮಸೀದಿಗೆ ಹೋಗ್ತಿದೆ ಎನ್ನೋದು ಸುಳ್ಳು; ಅರ್ಚಕರ ಸಂಘ

Hindu Temples : ಹಿಂದು ದೇವಸ್ಥಾನಗಳಲ್ಲಿ ಸಂಗ್ರಹವಾಗುವ ಹಣ ನಿಜಕ್ಕೂ ಮಸೀದಿ ಮತ್ತು ಚರ್ಚ್‌ ಪಾಲಾಗುತ್ತಿದೆಯಾ? ಹೊಸ ದೇಗುಲ ವಿಧೇಯಕ ಹಿಂದುಗಳಿಗೆ ಅನ್ಯಾಯ ಮಾಡುತ್ತಿದೆಯಾ? ಇದಕ್ಕೆ ಅರ್ಚಕರು ಏನಂತಾರೆ?

VISTARANEWS.COM


on

Hindu temple Pooja
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಧಾನ ಮಂಡಲ ಅಧಿವೇಶನದಲ್ಲಿ (Budget Session) ಮಂಡನೆಯಾದ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ವಿಧೇಯಕವನ್ನು (Hindu Religious institutes and Endoment Act 2024) ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಕೂಟ (BJP-JDS Coalition) ನಾನಾ ಕಾರಣಗಳನ್ನು ನೀಡಿ ವಿರೋಧಿಸುತ್ತಿರುವ ನಡುವೆಯೇ ರಾಜ್ಯದ ದೇವಾಲಯಗಳ (Hindu Temples) ಅರ್ಚಕರ ಸಂಘ (Priests Association) ಸರ್ಕಾರದ ರಕ್ಷಣೆಗೆ ಬಂದಿದೆ. ಅರ್ಚಕರ ಸಂಘದ ವತಿಯಿಂದ ಭಾನುವಾರ ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸರ್ಕಾರದ ಮೇಲೆ ಬಿಜೆಪಿ ನಡೆಸುತ್ತಿರುವ ಆರೋಪಗಳೆಲ್ಲವೂ ಸುಳ್ಳು ಎಂದು ಅರ್ಚಕರು ವಾದಿಸಿದರು. ಜತೆಗೆ ಪ್ರತಿಯೊಬ್ಬ ಬಿಜೆಪಿ ನಾಯಕರಿಗೂ ಸುಳ್ಳು ಪ್ರಚಾರ ಮಾಡದಂತೆ ಮನವಿ ಮಾಡುವುದಾಗಿ ಹೇಳಿದರು.

ಮುಖ್ಯವಾಗಿ ಹಿಂದೂ ದೇವಾಲಯಗಳ ಹುಂಡಿ ಹಣ ಮಸೀದಿ ಮತ್ತು ಚರ್ಚ್‌ಗಳಿಗೆ ಹೋಗುತ್ತಿದೆ ಎಂಬ ಆರೋಪವನ್ನು ಅರ್ಚಕರ ಸಂಘ ಅಲ್ಲಗಳೆದಿದೆ. ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅಖಿಲ ಕರ್ನಾಟಕ ಧಾರ್ಮಿಕ ದೇವಾಲಯಗಳ ಅರ್ಚಕರು, ನಮ್ಮ ರಾಜ್ಯದ ಎ, ಬಿ, ಸಿ ದರ್ಜೆಯ ದೇವಾಲಯಗಳ ಹುಂಡಿ ಹಣ ಯಾವುದೇ ಕಾರಣಕ್ಕೂ ದುರುಪಯೋಗ ಆಗುತ್ತಿಲ್ಲ. ನಮ್ಮ ದೇವಾಲಯದ ಹಣ ರಾಜ್ಯ ಸರ್ಕಾರ ಒಳ್ಳೆಯ ಕೆಲಸಕ್ಕೆ ಉಪಯೋಗ ಆಗುತ್ತಿದೆ. ದೇವಾಲಯಗಳ ಹಣ ಒಳ್ಳೆಯ ಕೆಲಸಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದರು.

ಅರ್ಚಕರ ಸಂಘದ ಪ್ರಧಾನ ಕಾರ್ಯದರ್ಶಿ ದೀಕ್ಷಿತ್ ಮಾತನಾಡಿ, ರಾಜ್ಯದ ಎ ದರ್ಜೆಯ ದೇವಸ್ಥಾನಗಳ ಬಗ್ಗೆ ಅಪಪ್ರಚಾರ ನಡೆಯುತ್ತಿದೆ. ಎ ದರ್ಜೆ ದೇವಸ್ಥಾನಗಳಲ್ಲಿ ನೂರಾರು ಕೋಟಿ ವ್ಯವಹಾರ ನಡೆಯುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಅಪಪ್ರಚಾರ ಮಾಡುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ದೇವಾಲಯಗಳ ಅಭಿವೃದ್ಧಿ ಕೆಲಸ ಮಾಡುತ್ತಿದೆ. ಅದನ್ನು ಸಹಿಸಲಾಗದ ರೀತಿ ಬಿಜೆಪಿ ನಾಯಕರು ಚರ್ಚ್, ಮಸೀದಿಗಳಿಗೆ ಹಣ ಹೋಗುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನಿತ್ಯ ಕೋಟ್ಯಂತರ ಹಣ ಸಂಗ್ರಹ ಆಗುತ್ತಿದ್ದು, ಇದನ್ನು ಬಿಜೆಪಿ ಸಹಿಸುತ್ತಿಲ್ಲ. ಬಿಜೆಪಿಯವರೇ ದಯವಿಟ್ಟು ಅಪಪ್ರಚಾರ ಮಾಡುವುದನ್ನು ಬಿಡಿ ಎಂದು ಮನವಿ ಮಾಡಿದರು.

Hindu Temples priests

ಇದನ್ನೂ ಓದಿ : Hindu Temples : ಇನ್ನು ದೇವಾಲಯ ಆದಾಯದ 10% ಹಣ ಸರ್ಕಾರಕ್ಕೆ; ಹಿಂದೆ ಎಷ್ಟಿತ್ತು?

ಮನೆಗೆ ಹೋಗಿ ಕಾಲಿಗೆ ಬಿದ್ದು ಮನವಿ ಮಾಡುತ್ತೇವೆ ಎಂದ ಅರ್ಚಕರು

ನಾವು ಈ ವಿಚಾರದಲ್ಲಿ ಪ್ರತಿಭಟನೆ ಮಾಡುವುದಿಲ್ಲ. ನೇರವಾಗಿ ಬಿಜೆಪಿ ನಾಯಕರನ್ನು ಭೇಟಿ ಮಾಡಿಯೇ ಮನವಿ ಮಾಡಿಕೊಳ್ಳುತ್ತೇವೆ. ನಾವು ಪ್ರತಿ ಬಿಜೆಪಿಯವರ ಮನೆಗೆ ಹೋಗಿ ಮನವಿ ಪತ್ರಗಳನ್ನ ಕೊಟ್ಟು ಕಾಲಿಗೆ ಬಿದ್ದು ವಿರೋಧ ಮಾಡಬೇಡಿ ಅಂತ ಕೇಳಿ ಕೊಳ್ಳುತ್ತೇವೆ. ಇದು ಸರಿಯಲ್ಲ ಅನ್ನೋದನ್ನು ಅವರಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಅರ್ಚಕರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಸ್ ಎಸ್ ದೀಕ್ಷಿತ್ ಹೇಳಿದರು.

ಹೊಸ ಧರ್ಮಾದಾಯ ವಿಧೇಯಕದಲ್ಲಿ ಏನಿದೆ?

ಹಿಂದೆ 25 ಲಕ್ಷ ರೂ. ಒಳಗೆ ಆದಾಯ ಇರುವ ದೇವಸ್ಥಾನಗಳು ಶೇಕಡಾ ಐದರಷ್ಟು ಆದಾಯವನ್ನು ರಾಜ್ಯ ಸರ್ಕಾದ ಧಾರ್ಮಿಕ ಪರಿಷತ್‌ಗೆ ನೀಡಬೇಕಾಗಿತ್ತು. ಆದರೆ ಈಗ ಒಂದು ಕೋಟಿ ರೂ.ವರೆಗಿನ ಆದಾಯವಿದ್ದರೂ ಶೇ. 5ರಷ್ಟು ಪಾಲನ್ನು ಧಾರ್ಮಿಕ ಪರಿಷತ್‌ಗೆ ನೀಡಿದರೆ ಸಾಕು.

ಹಿಂದೆ 25 ಲಕ್ಷಕ್ಕಿಂತ ಹೆಚ್ಚು ಆದಾಯವಿದ್ದ ದೇಗುಲಗಳ ಆದಾಯದ ಶೇ. 10ರಷ್ಟನ್ನು ಧಾರ್ಮಿಕ ಪರಿಷತ್‌ಗೆ ನೀಡಬೇಕಾಗಿತ್ತು. ಈಗ ಈ ಮಿತಿಯನ್ನು ಒಂದು ಕೋಟಿಗೆ ಏರಿಸಲಾಗಿದೆ. ಅಂದರೆ ಒಂದು ಕೋಟಿ ರೂ. ಆದಾಯ ಹೊಂದಿದ ಶ್ರೀಮಂತ ದೇಗುಲಗಳು ಮಾತ್ರ ಶೇ. 10 ಆದಾಯ ನೀಡಿದರೆ ಸಾಕಾಗುತ್ತದೆ.

ಸರ್ಕಾರದ ಈ ವಿಧೇಯಕದ ಬಗ್ಗೆ ಸಾಕಷ್ಟು ಅಪಪ್ರಚಾರಗಳು ನಡೆಯುತ್ತಿವೆ. ದೇವಾಲಯಗಳಿಂದ ಶೇಕಡಾವಾರು ಹಣ ಪಡೆಯುವ ಮಿತಿಯನ್ನು ಏರಿಸಿದ್ದರೂ ಪಡೆಯುವ ಹಣದ ಮೊತ್ತವನ್ನೇ ಹೆಚ್ಚಿಸಲಾಗಿದೆ ಎಂದು ಪ್ರಚಾರ ಮಾಡಲಾಗಿದೆ. ಸಿದ್ದರಾಮಯ್ಯ ಅವರನ್ನು ಕನ್ನ ರಾಮಯ್ಯ ಎಂದೆಲ್ಲ ಅವಹೇಳನ ಮಾಡಲಾಗಿದೆ.

ಈ ಕಾರಣಕ್ಕಾಗಿ ವಾಸ್ತವ ಸ್ಥಿತಿಯನ್ನು ಜನರಿಗೆ ತಿಳಿಸಲು ಅರ್ಚಕರ ಸಂಘ ಪತ್ರಿಕಾಗೋಷ್ಠಿ ನಡೆಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಧಾರ್ಮಿಕ

Hanuman Chalisa: ಹನುಮಾನ್ ಚಾಲೀಸಾ ಪಠಿಸುವಾಗ ಈ ತಪ್ಪುಗಳನ್ನು ಮಾಡಬೇಡಿ

ದೇವರ ಸ್ತೋತ್ರಗಳನ್ನು ಪಠಿಸುವಾಗ ಕೆಲವೊಂದು ತಪ್ಪುಗಳನ್ನು ಮಾಡಬಾರದು. ಅದರಲ್ಲೂ ಹನುಮಾನ್ ಚಾಲೀಸಾ (Hanuman Chalisa) ಪಠಿಸುವಾಗ ಶ್ರಾದ್ಧ, ಭಕ್ತಿಯೊಂದಿಗೆ ಕೆಲವೊಂದು ನಿಯಮಗಳನ್ನು ಪಾಲಿಸಿದರೆ ಮಾತ್ರ ಅದರ ಸಂಪೂರ್ಣ ಪ್ರಯೋಜನ ಪಡೆಯಬಹುದು. ಈ ಕುರಿತು ಇಲ್ಲಿದೆ ಉಪಯುಕ್ತ ಮಾಹಿತಿ.

VISTARANEWS.COM


on

By

Hanuman Chalisa
Koo

ಕಷ್ಟ, ಭಯದಿಂದ ದೂರವಾಗಲು ಹನುಮಾನ್ ಚಾಲೀಸಾ (Hanuman Chalisa) ಪಠಿಸುವಂತೆ ಮನೆಯ ಹಿರಿಯರು ಮಕ್ಕಳಿಗೆ ಹೇಳುತ್ತಾರೆ. ಹನುಮಾನ್ ಚಾಲೀಸಾವನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಮತ್ತು ಸರಿಯಾಗಿ ಓದಿದರೆ ಮಾತ್ರ ಅದರ ಪ್ರಯೋಜನವನ್ನು ಪಡೆಯಲು ಸಾಧ್ಯ. ಹನುಮಾನ್ ಚಾಲೀಸಾ ಓದುವಾಗ ಕೆಲವೊಂದು ತಪ್ಪುಗಳನ್ನು ಮಾಡಲೇಬಾರದು.

ಹನುಮಾನ್ ಚಾಲೀಸವನ್ನು 16ನೇ ಶತಮಾನದಲ್ಲಿ ಕವಿ-ಸಂತ (poet-saint) ತುಳಸಿದಾಸರು (Tulsidas) ರಚಿಸಿದರು ಎಂದು ಹೇಳಲಾಗುತ್ತದೆ. ತುಳಸಿದಾಸರ ಹಲವಾರು ಕೃತಿಗಳಲ್ಲಿ ಹನುಮಾನ್ ಚಾಲೀಸಾವು ಅವರ ಅತ್ಯಂತ ಪ್ರಸಿದ್ಧ ಸಂಯೋಜನೆಗಳಲ್ಲಿ ಒಂದಾಗಿದೆ. ಅನಂತರದ ಸ್ಥಾನದಲ್ಲಿದೆ ಅವರ ರಾಮಚರಿತಮಾನಸ (Ramcharitmanas).

ಹನುಮಾನ್ ಚಾಲೀಸ ಸ್ತೋತ್ರವು ಹಿಂದೂ ಭಕ್ತಿ ಮತ್ತು ಸಾಹಿತ್ಯದಲ್ಲಿ ವಿಶೇಷ ಸ್ಥಾನವನ್ನು ಹೊಂದಿದೆ. ಭಗವಾನ್ ಹನುಮಂತನ ಸದ್ಗುಣಗಳು ಮತ್ತು ಕಾರ್ಯಗಳನ್ನು ವಿವರಿಸುವ ಇದು ಶಕ್ತಿ, ರಕ್ಷಣೆ ಮತ್ತು ಬುದ್ಧಿವಂತಿಕೆಗಾಗಿ ಹನುಮಾನ್ ದೇವರ ಆಶೀರ್ವಾದವನ್ನು ಕೋರುತ್ತದೆ.

ಚಾಲೀಸಾ ಎಂದರೇನು?

ಚಾಲೀಸಾ ಎಂಬುದು ಹಿಂದಿಯಿಂದ ಬಂದ ಪದವಾಗಿದೆ. “ಚಾಲಿಸಾ” ಎಂಬ ಪದವು 40 ಸಂಖ್ಯೆಯನ್ನು ಸೂಚಿಸುತ್ತದೆ. ಇದು ಹನುಮಾನ್ ಚಾಲೀಸಾವನ್ನು ನಿರ್ದಿಷ್ಟ ಅವಧಿಗೆ ಸಾಂಪ್ರದಾಯಿಕವಾಗಿ 40 ದಿನಗಳವರೆಗೆ ಅದರ ಸಂಪೂರ್ಣ ಆಧ್ಯಾತ್ಮಿಕ ಪ್ರಯೋಜನಗಳನ್ನು ಪಡೆಯಲು ಪಠಿಸಬೇಕು ಎಂಬ ನಂಬಿಕೆಯನ್ನು ಸೂಚಿಸುತ್ತದೆ.

ಯಾವ ತಪ್ಪುಗಳನ್ನು ಮಾಡಬಾರದು?

ಹನುಮಾನ್ ಚಾಲೀಸಾವನ್ನು ಪಠಿಸುವಾಗ ಈ ಐದು ತಪ್ಪುಗಳನ್ನು ಮಾಡಲೇಬಾರದು ಎನ್ನುತ್ತಾರೆ ಹಿರಿಯರು. ಹನುಮಂತನ ಆಶೀರ್ವಾದ ಮತ್ತು ರಕ್ಷಣೆಗಾಗಿ ಹನುಮಾನ್ ಚಾಲೀಸಾವನ್ನು ಪಠಿಸುವಾಗ ಸರಿಯಾಗಿ ಮತ್ತು ಗೌರವಾನ್ವಿತವಾಗಿ ಪಠಿಸಬೇಕು. ಇದಕ್ಕಾಗಿ ಕೆಲವು ನಿಯಮಗಳನ್ನು ಅನುಸರಿಸುವುದು ಮುಖ್ಯವಾಗಿದೆ.

ಒಮ್ಮೆ ನೀವು ಹನುಮಾನ್ ಚಾಲೀಸಾವನ್ನು ಪಠಿಸಲು ಪ್ರಾರಂಭಿಸಿದರೆ ಯಾವುದೇ ಅಡೆತಡೆಯಿಲ್ಲದೆ ನಿರಂತರವಾಗಿ ಮಾಡಬೇಕು. ಸ್ತೋತ್ರದ ಆಧ್ಯಾತ್ಮಿಕ ಶಕ್ತಿಯ ಸಂಪೂರ್ಣ ಪ್ರಯೋಜನ ಪಡೆಯಲು 21 ಅಥವಾ 40 ದಿನಗಳವರೆಗೆ ಹನುಮಾನ್ ಚಾಲೀಸವನ್ನು ಪಠಿಸಬೇಕು.

ಯಾವುದೇ ಆಧ್ಯಾತ್ಮಿಕ ಚಟುವಟಿಕೆಯಲ್ಲಿ ತೊಡಗುವ ಮೊದಲು ಶುದ್ಧವಾದ ಬಟ್ಟೆಗಳನ್ನು ಧರಿಸುವುದು ಅತ್ಯಗತ್ಯ. ಸ್ವಚ್ಛವಾದ ಉಡುಪು ಧನಾತ್ಮಕ ಶಕ್ತಿಯನ್ನು ತುಂಬುತ್ತದೆ. ಮನಸ್ಸನ್ನು ಶುದ್ಧೀಕರಿಸುತ್ತದೆ. ನಿತ್ಯ ಪಠಣಕ್ಕಾಗಿ ಪವಿತ್ರ ಮತ್ತು ಸಾಮರಸ್ಯದ ವಾತಾವರಣವನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ.

ಹನುಮಾನ್ ಚಾಲೀಸಾವನ್ನು ಪಠಿಸಲು ಬಯಸುವವರು ಮದ್ಯ ಮತ್ತು ಮಾಂಸ ಸೇವನೆಯಿಂದ ದೂರವಿರಿ. ಈ ಶಿಸ್ತು ಅಳವಡಿಸಿಕೊಳ್ಳುವುದು ಆಧ್ಯಾತ್ಮಿಕ ಅನುಭವವನ್ನು ಹೆಚ್ಚಿಸುತ್ತದೆ ಮತ್ತು ಆಚರಣೆಯ ಪವಿತ್ರತೆಗೆ ಗೌರವವನ್ನು ತೋರಿಸುತ್ತದೆ.

ಚಾಲೀಸಾವನ್ನು ಪೂರ್ಣಗೊಳಿಸಲು ಅವಸರ ಅವಸರವಾಗಿ ಓದಬೇಡಿ. ಗಮನವನ್ನು ಸಂಪೂರ್ಣವಾಗಿ ಕೇಂದ್ರೀಕರಿಸಿ ಪಠಿಸಿ.

ಇದನ್ನೂ ಓದಿ: Bengaluru News: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮ: ವಿ. ಅಪ್ಪಣ್ಣ ಆಚಾರ್ಯ

ಹನುಮಾನ್ ಚಾಲೀಸಾವನ್ನು ಪಠಿಸಲು ಸೂಕ್ತವಾದ ಸಮಯ ಬ್ರಾಹ್ಮಿ ಮುಹೂರ್ತ. ಈ ಅವಧಿಯು ಯಾವುದೇ ಆಧ್ಯಾತ್ಮಿಕ ಚಟುವಟಿಕೆಯನ್ನು ಪ್ರಾರಂಭಿಸಲು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಬ್ರಹ್ಮ ಮುಹೂರ್ತದ ವೇಳೆ ಸ್ತೋತ್ರವನ್ನು ಪಠಿಸುವುದು ಅದರ ಆಧ್ಯಾತ್ಮಿಕ ಪ್ರಯೋಜನಗಳನ್ನು ವರ್ಧಿಸುತ್ತದೆ ಮತ್ತು ದೈವಿಕತೆಯೊಂದಿಗೆ ಹೆಚ್ಚು ಆಳವಾಗಿ ಸಂಪರ್ಕಿಸುತ್ತದೆ.

ಹನುಮಾನ್ ಚಾಲೀಸವು ಎಲ್ಲಾ ಸಮಸ್ಯೆಗಳು ಮತ್ತು ನಕಾರಾತ್ಮಕ ಆಲೋಚನೆಗಳನ್ನು ದೂರ ಮಾಡುತ್ತದೆ.

Continue Reading

ಅಂಕಣ

ಧವಳ ಧಾರಿಣಿ ಅಂಕಣ: ಗೌತಮ ಬುದ್ಧ; ಭಾರತೀಯ ತತ್ತ್ವಶಾಸ್ತ್ರದ ಮುನ್ನುಡಿ

ಧವಳ ಧಾರಿಣಿ ಅಂಕಣ (Dhavall Dharini): ಗೌತಮ ಬುದ್ಧನೇ ನೇರವಾಗಿ ಬೋಧಿಸಿದ ತತ್ತ್ವಗಳನ್ನು ಗಮನಿಸಿದಾಗ ಆತನ ತತ್ತ್ವಗಳು ಭಾರತೀಯ ದರ್ಶನ ಶಾಸ್ತ್ರದ ಮುನ್ನುಡಿಯಾಗಿವೆ ಎನ್ನಬಹುದು. ಇಂದು ಬುದ್ಧ ಪೂರ್ಣಿಮಾ (Buddha Purnima) ಹಿನ್ನೆಲೆಯಲ್ಲಿ ಆತನ ಚಿಂತನೆಗಳ ಬಗ್ಗೆ ಒಂದು ಅವಲೋಕನ.

VISTARANEWS.COM


on

dhavala dharini column buddha ಧವಳ ಧಾರಿಣಿ
Koo
dhavala dharini by Narayana yaji

­ಧವಳ ಧಾರಿಣಿ ಅಂಕಣ: ಭಾರತದ ಇತಿಹಾಸದಲ್ಲಿ ಗೌತಮ ಬುದ್ಧ (Gautama Buddha) ಮಹತ್ವದ ಸ್ಥಾನ ಪಡೆಯುವುದು ಆತ ಹೊಸ ಧರ್ಮವನ್ನು ಸ್ಥಾಪಿಸಿದ್ದಾನೆ ಎನ್ನುವುದಕ್ಕೆ ಅಲ್ಲ. ಬೌದ್ಧ ಧರ್ಮವನ್ನು (buddhism) ನೇರವಾಗಿ ಬುದ್ಧನೇ ಸ್ಥಾಪಿಸಲಿಲ್ಲ. ಆತನ ನಿರ್ವಾಣದ ನಂತರದ ಇನ್ನೂರು ವರ್ಷಗಳ ನಂತರ ಆತನ ಶಿಷ್ಯರು ಒಂದೆಡೆ ಸೇರಿ ಬುಧ್ದನ ತತ್ತ್ವಕ್ಕೆ ಒಂದು ಧಾರ್ಮಿಕ ಸ್ವರೂಪವನ್ನು ಕೊಟ್ಟರು. ಶಾಕ್ಯಮುನಿ ಗೌತಮನಿಗೆ ಲೋಕದ ಜನತೆ ಬದುಕುತ್ತಿರುವ ವಿಧಾನದಲ್ಲಿ ಬದಲಾವಣೆ ತರಬೇಕಾಗಿತ್ತು. ವರ್ಣವ್ಯವಸ್ಥೆಯ ಮೂಲಕ ಅಸ್ತಿತ್ವಕ್ಕೆ ಬಂದ ಬ್ರಾಹ್ಮಣಿಕೆಯೆನ್ನುವುದು ಅದಾಗ ಜಾತಿಯಾಗಿ ಬದಲಾವಣೆಯಾಗಿತ್ತು. ಆದರೂ ಅದು ಅಷ್ಟು ಗಟ್ಟಿಯಾಗಿ ಅನುಷ್ಟಾನಕ್ಕೆ ಬಂದಿರಲಿಲ್ಲ. ಬ್ರಾಹ್ಮಣರ ಪಾರಮ್ಯವೆನ್ನುವುದು ಧಾರ್ಮಿಕ ರಂಗದಲ್ಲಿ ಇತ್ತು. ಆತನ ಜನನದ ಕಾಲಘಟ್ಟವಾದ ಸುಮಾರು ಕ್ರಿ. ಪೂ. 623 ಶತಮಾನದಲ್ಲಿ ಭಾರತ ಧಾರ್ಮಿಕವಾಗಿ ಹಲವು ಪಲ್ಲಟಗಳನ್ನು ಅನುಭವಿಸಿತ್ತು. ಸನಾತನ ಧರ್ಮದ ಆಚರಣೆಯಲ್ಲಿ ಸಮಗ್ರವಾದ ದಿಕ್ಕುಗಳನ್ನು ತೋರಿಸುವವರು ಇರಲಿಲ್ಲ. ಧಾರ್ಮಿಕ ನಾಯಕತ್ವವೆನ್ನುವದು ತತ್ವಜ್ಞಾನಿಗಳು ತಮಗೆ ತೋಚಿದ ದಿಕ್ಕಿನಲ್ಲಿ ಅರ್ಥೈಸಿಕೊಂಡು ಅದನ್ನೇ ಬೋಧಿಸುತ್ತಿದ್ದರು. ಈ ಕಾಲಘಟ್ಟದಲ್ಲಿಯೇ ತಂತ್ರಶಾಸ್ತ್ರ, ಅಘೋರಿಗಳು, ಕಾಪಾಲಿಕರು ಹೀಗೆ ಸಾಧನೆಗಳಿಗೆ ಸಾತ್ವಿಕಮಾರ್ಗಗಳ ಜೊತೆಗೆ ಹಟಯೋಗವೂ ಸೇರಿಹೋಗಿತ್ತು. ರಾಜರುಗಳು ಯಾವ ಹಾದಿಯನ್ನು ಹಿಡಿಯುತ್ತಿದ್ದಾರೋ ಅದೇ ಹಾದಿಯನ್ನು ಜನಸಾಮಾನ್ಯರು ನಡೆದುಕೊಳ್ಳುತ್ತಿದ್ದರು.

ಇಂತಹ ಹೊತ್ತಿನಲ್ಲಿ ಪ್ರವೇಶ ಮಾಡಿದ ಬುದ್ಧನ ಉಪದೇಶಗಳು ಸನಾತನ ಧರ್ಮಕ್ಕೇ ಹೊಸ ವ್ಯಾಖ್ಯಾನವನ್ನು ಕೊಟ್ಟವು. ಹಾಗಂತ ಆತ ಭಾರತೀಯ ದರ್ಶನ ಶಾಸ್ತ್ರಕ್ಕೆ ವಿಲೋಮವಾದದ್ದನ್ನು ತನ್ನು ಬೋಧನೆಯಲ್ಲಿ ಹೇಳಲಿಲ್ಲ. ಬುದ್ಧ ಅರ್ಥವಾಗಬೇಕಾದರೆ ಭಾರತೀಯ ತತ್ತ್ವಶಾಸ್ತ್ರ ಅರ್ಥವಾಗಬೇಕು. ಸ್ವರ್ಗಕಾಮಕ್ಕಾಗಿ ಯಜ್ಞ ಯಾಗಾದಿಗಳು ಎಂದು ಸಾರುತ್ತಿದ ಪುರಾಣಗಳ ನಡುವೆ ವೇದಾಂತದ ಪರಮ ಸತ್ಯವನ್ನು ಆತನ ಉಪದೇಶಗಳಲ್ಲಿ ಗಮನಿಸಬಹುದಾಗಿದೆ. “ವೇದಗಳಲ್ಲಿ ಅಡಗಿದ್ದ ಸತ್ಯಗಳನ್ನು ಹೊರತಂದು ಜಗತ್ತಿಗೆಲ್ಲ ಘಂಟಾಘೋಷವಾಗಿ ಸಾರಿದ ವಿಶಾಲಹೃದಯಿಯಾಗಿ ಬುದ್ದ ಕಾಣಿಸಿಸಿಕೊಳ್ಳುತ್ತಾನೆ ಎಂದು ವಿವೇಕಾನಂದರು ಹೇಳುತ್ತಾರೆ. “ಕಿಸಾಗೌತಮಿಗೆ ಆಕೆಯ ಮಗನ ಸಾವಿನ ನೋವನ್ನೂ ಮರೆಯಿಸಿ ಭವಚಕ್ರಗಳ ಬಂಧನದ ಜಗತ್ತಿನ ಮಾಯೆಯನ್ನು ಹೋಗಲಾಡಿಸಿದ ಬುದ್ಧ ಬಿಡಿಸಿದಷ್ಟೂ ಬಿಡಿಸಲಾಗದ ಒಗಟು”. ಸನಾತನ ಧರ್ಮದ ಸಾರವೇ ಬುದ್ಧನ ಉಪದೇಶವೆನ್ನಬಹುದಾಗಿದೆ. ಅದಕ್ಕೇ ಸ್ವಾಮಿ ವಿವೇಕಾನಂದರು ತಮ್ಮ ಕೃತಿಶ್ರೇಣಿಯಲ್ಲಿ “ಭಾರತದಲ್ಲಿ ಬೌದ್ಧಧರ್ಮವು ನಾಶವಾಗಲಿಲ್ಲ, ಉಪನಿಷತ್ತುಗಳಲ್ಲಿ ಹುಟ್ಟಿದೆ. ಅದು ನವಯುಗದ ಹಿಂದೂ ಧರ್ಮವಾಯಿತು” ಎನ್ನುತ್ತಾರೆ.

ಜೀವನದ ನಶ್ವರತೆಯೆನ್ನುವುದು ಬುದ್ಧನ ಬದುಕಿನಲ್ಲಿ ಬಂದ ಮೊದಲ ತಿರುವು. ಪ್ರಸಿದ್ಧವಾದ ಆತನ ವಾಕ್ಯ “ಆಸೆಯೇ ದುಃಖಕ್ಕೆ ಕಾರಣ” ಎನ್ನುವುದು ನೋಡಲು ಸರಳವಾಗಿ ಕಂಡರೂ ಈ ಸತ್ಯವನ್ನು ಮನಗಾಣುವಲ್ಲಿ ಬುದ್ಧ ಸುಮಾರು ಆರುವರ್ಷಗಳ ಕಾಲ ಹುಡುಕಾಡಿದ್ದಾನೆ. ತನ್ನ ಕುಲಗುರು ಅಸಿತದೇವಲನಿಂದ ಹಿಡಿದು ಆಲಾರಾ ಕಲಮ್, ಉದ್ಧತ ರಾಮಪುತ್ತ ಮುಂತಾದ ಅನೇಕರ ಹತ್ತಿರ ಈ ವಿಷಯವನ್ನು ಚರ್ಚಿಸಿದ್ದಾನೆ. ಹಿಮಾಲಯದ ತಪ್ಪಲಿನ ಕೆಲ ಸನ್ಯಾಸಿಗಳು ಪ್ರಾಪಂಚಿಕ ಸುಖ ಮತ್ತು ದುಃಖಗಳ ಕಾರಣವನ್ನು ಅರಿತು ವೇದೋಪನಿಷತ್ತುಗಳ ನಿಜವಾದ ಅರ್ಥಗಳನ್ನು ತಿಳಿದು ಅದನ್ನೇ ಬೊಧಿಸುತ್ತಿದ್ದರು. ಅವರೆಲ್ಲರೂ ಈತನಿಗೆ ತಮ್ಮಲ್ಲಿದ ವಿದ್ಯೆಯನ್ನು ಧಾರೆ ಎರೆದರೂ ಅವೆಲ್ಲವೂ ಬದುಕಿನ ಪರಮ ಸತ್ಯವನ್ನು ಸಾಧಿಸುವತ್ತ ಪ್ರಯೋಜನಕ್ಕೆ ಬಾರದವುಗಳು ಎನ್ನುವುದು ಅರಿವಾಯಿತು. ಉದ್ಧಕ ರಾಪಪುತ್ತನ ಹತ್ತಿರ ಸಮಾಧಿಗೆ ಹೋಗುವ ತಂತ್ರವನ್ನು ಕೇವಲ ಹದಿನೈದನೇ ದಿನಗಳಲ್ಲಿ ಕಲಿತ. ಆಗ ಅವನಿಗೆ ಅರಿವಾಗಿದ್ದು ಎಚ್ಚರಕ್ಕೂ ಮತ್ತು ಸಮಾಧಿಗೂ ಇರುವ ಸ್ಥಿತಿಯೆಂದರೆ ಗ್ರಹಿಕೆ ಮತ್ತು ಗ್ರಹಿಕೆಯಲ್ಲದ ಸ್ಥಿತಿ ಎನ್ನುವುದು. ಆದರೆ ಎಚ್ಚರಾದ ಮೇಲೆ ಮತ್ತೆ ಈ ಲೋಕದ ಅವಸ್ಥೆಗಳಲ್ಲೇ ಇರುತ್ತೇವೆ ಎನ್ನುವುದು ಅರಿತಾಗ ಸಮಾಧಿಯೆನ್ನುವುದು ಸ್ವಪ್ನ ಅಥವಾ ಸುಷುಪ್ತಿಯ ಅವಸ್ಥೆಗಳಲ್ಲಿರುವ ಸ್ಥಿತಿಯೇ ಹೊರತೂ ಬೇರೆನೂ ಅಲ್ಲವೆಂದು ಅರಿವಿಗೆ ಬಂತು. ಪರಿಪೂರ್ಣ ಜ್ಞಾನವೆನ್ನುವುದನ್ನು ಸಾಧಿಸಿದ ವ್ಯಕ್ತಿಗೆ ಮತ್ತೆ ಲೌಕಿಕ ಬಾಧಿಸಬಾರದು. ಹಾಗಾಗಿ ಯಾವುದು ಸ್ಥಾಯಿ ಸ್ವರೂಪವಲ್ಲವೋ ಅವೆಲ್ಲವೂ ಅವಿದ್ಯೆ ಎನ್ನುವ ತೀರ್ಮಾನಕ್ಕೆ ಬಂದವ ಗಯಾಕ್ಕೆ ಬಂದು ಅಲ್ಲಿನ ಸ್ಮಶಾನದಲ್ಲಿರುವ ಬೋಧಿವೃಕ್ಷದ ಕೆಳಗೆ ಧ್ಯಾನಮಾಡಲು ತೊಡಗಿದ. ಜ್ಞಾನವೆನ್ನುವದು ಪ್ರಾಪಂಚಿಕ ವಸ್ತುಗಳಿಂದ ವಿಮುಖನಾಗುವದಲ್ಲ, ನಮ್ಮ ಉಸಿರು, ಹಕ್ಕಿಯ ಹಾಡು, ಎಲೆ, ಸೂರ್ಯನ ಕಿರಣ ಇವೆಲ್ಲವೂ ಧ್ಯಾನಕ್ಕೆ ಸಾಧನವಾಗಬಹುದೆಂದು ಆತನಿಗೆ ಅನಿಸಿತು. ಒಂದು ಧೂಳಿನ ಕಣದಿಂದಲೇ ಸಮಗ್ರವಾಗಿ ಬ್ರಹ್ಮಾಂಡದ ಲಕ್ಷಣವನ್ನು ಅರಿಯಬಹುದೆನ್ನುವ ವಿಷಯ ಹೊಳೆಯಿತು. ಜ್ಞಾನೋದಯವೆನ್ನುವದು ವಾಸ್ತವ ಪ್ರಪಂಚದಲ್ಲಿದೆಯೇ ಹೊರತು ಕಾಣದ ಆತ್ಮ ಅಥವಾ ಬ್ರಹ್ಮದ ವಿಷಯದಲ್ಲಿ ಇಲ್ಲ. ಆತ್ಮ ಪ್ರತ್ಯೇಕವೆನ್ನುವ ಭಾವನೆಯನ್ನು ಮೀರಿ ಪ್ರಕೃತಿಯ ಪ್ರತೀ ವಸ್ತುವಿನಲ್ಲಿ ಸೌಂದರ್ಯವಿದೆಯೆನ್ನುವದನ್ನು ಗೌತಮನ ಅರಿತುಕೊಂಡ. ಪ್ರಪಂಚವೇ ಪರಸ್ಪರ ಅವಲಂಬಿತ ಮತ್ತು ಸ್ವಯಂ ಸ್ವಭಾವವುಳ್ಳ ಸತ್ಯವೆನ್ನುವ ಸೂತ್ರ ಆತನಿಗೆ ಅರಿವಾಯಿತು. ಜ್ಞಾನವೆನ್ನುವದು ಒಳಗಣ್ಣು ಎನ್ನುವ ಭ್ರಮೆಗಿಂತ ಹೊರಗಣ್ಣಿಗೆ ಕಾಣುವ ಪ್ರಪಂಚದ ಸಮಸ್ಥವಸ್ತುವಿನಲ್ಲಿ ಇದೆ ಎನ್ನುವದು ಸ್ಪಷ್ಟವಾಯಿತು.

buddha Purnima 2023

ಬುದ್ಧನ ಬೋಧನೆಗಳು ಮೊದಲನೆಯದಾಗಿ ಜೀವನವು ದುಃಖದಿಂದ ಕೂಡಿದೆ. ಜನನ, ಮರಣ, ರೋಗ, ವೃದ್ಧಾಪ್ಯ, ವಿರಹ, ಮನಸ್ಸು ಮತ್ತು ದೇಹಗಳ ವ್ಯವಸ್ಥೆಯೇ ದುಃಖಮಯ, ಎರಡನೆಯದಾಗಿ ಈ ದುಃಖಕ್ಕೆ ಕಾರಣವಿದೆ. ಮನುಷ್ಯ ತನ್ನ ಮೂಲರೂಪವನ್ನು ಅರಿಯದಿರುವದು, ಈ ಅಜ್ಞಾನಗಳಿಂದಾಗಿಯೇ ಆತ ದೇಹ-ಮನಸ್ಸುಗಳಿಗೆ ಅಂಟಿಕೊಳ್ಳುತ್ತಾನೆ. ಈ ಕಾರ್ಯಕಾರಣ ಸಂಬಂಧದಿಂದಾಗಿ ಕರ್ಮಚಕ್ರಗಳ ಮೂಲಕ ಪುನರ್ಜನದ ಭವಚಕ್ರಗಳಿಗೆ ಸಿಕ್ಕುಬೀಳುತ್ತಾನೆ, ಈ ಯಾತನೆಗಳಿಗೆ ಕಾರಣ ಆಯಾ ವ್ಯಕ್ತಿಯೇ ಹೊರತೂ ವಿಧಿ, ಆಕಸ್ಮಿಕ ಇತ್ಯಾದಿಗಳೆಲ್ಲ ಸುಳ್ಳು. ಮೂರನೆಯದು ಈ ಭವಚಕ್ರಗಳಿಂದ ಬಿಡುಗಡೆ. ಬುದ್ಧ ಇದು ಅವಿದ್ಯೆ, ಅಜ್ಞಾನಾವಸ್ಥೆಯೆನುತ್ತಾನೆ. ಲೋಕದಲ್ಲಿನ ಎಲ್ಲಾ ಅವಸ್ಥೆಗಳಿಗೂ ಇದೇ ಕಾರಣ, ಇದೇ “ಪ್ರತ್ಯೀತ್ಯಸಮುತ್ಪಾದ” ಸಿದ್ಧಾಂತ. ನಾಲ್ಕನೆಯದೇ ಈ ಭವಚಕ್ರಗಳಿಂದ ಬಿಡುಗಡೆಯ ಮಾರ್ಗವೆಂದರೆ ಈ ದುಃಖದಿಂದ ಬಿಡುಗಡೆ. ಅದೇ ಅವಿಧ್ಯಾ ಜಿವನದಿಂದ ಬಿಡುಗಡೆ. ಇದನ್ನು ಸಾಧಿಸಲು ಅಷ್ಟಾಂಗಿಕ ಮಾರ್ಗಗಳಾದ ಸಮ್ಯಕ್ ದೃಷ್ಟಿ, ಸಮ್ಯಕ್ ಸಂಕಲ್ಪ, ಸಮ್ಯಕ್ ವಾಕ್ಕು, ಸಮ್ಯಕ್ ಕ್ರಿಯಾ ಸಮ್ಯಕ್ ಆಜೀವ, ಸಮ್ಯಕ್ ವ್ಯಾಯಾಮ, ಸಮ್ಯಕ್ ಸ್ಮೃತಿ ಮತ್ತು ಸಮ್ಯಕ ಸಮಾಧಿಯ ಮೂಲಕ ಸಾಧಿಸಬಹುದು. ಈ ಅಷ್ಟಾಂಗ ಮಾರ್ಗವೆಂದರೆ ನೈತಿಕತೆ, ಸಾಧನೆ, ಸಾಕ್ಷಾತ್ಕಾರ, ಸ್ವಾರ್ಥವನ್ನು ತ್ಯಜಿಸುವದು, ಬೂತದಯೆಗಳು. ಬುದ್ದ ಇದನ್ನು ಸ್ವಯಂ ತನ್ನ ಕೊನೆಯಕ್ಷಣದವರೆಗೂತಾನೇ ಆಚರಿಸಿದ್ದನು. ಕುಂಡ ಕಮ್ಮಾರಪುತ್ತ ನೀಡಿದ ವಿಷಯುಕ್ತ ಆಹಾರದಿಂದ ಸಾಯುವ ಸಂದರ್ಭದಲ್ಲಿಯೂ ಅವನನ್ನು ಕ್ಷಮಿಸಿದನು. ಪ್ರಪಂಚದಲ್ಲಿ ಕಾಣುವ ವಸ್ತುಗಳನ್ನು ಅವು ಇರುವಂತೆಯೇ ತಿಳಿದವ ಬುದ್ಧ. ಹಾಗಂತ ಇದು ಚಾರ್ವಾಕ ಮತಕ್ಕೆ ಹತ್ತಿರವಾದಂತೆ ಕಂಡರೂ ಆತ ನಾಸ್ತಿಕವಾದಿಯಲ್ಲ. ಬುದ್ಧ ಅಸ್ತಿತ್ವವನ್ನು ಒಪ್ಪಿಕೊಳ್ಳುತ್ತಾನೆ, ಅದು ಅದ್ವೈತವನ್ನು ಹೋಲುತ್ತದೆ. ಬೌದ್ಧರು ಆತ್ಮದ ಅಸ್ತಿತ್ವವನ್ನು ಒಪ್ಪುವದಿಲ್ಲ ಎನ್ನುವ ಸಾಮಾನ್ಯ ನಂಬಿಕೆ. ಆದರೆ ಇದಕ್ಕೆ ಆಧಾರವಿಲ್ಲ.

ಬೌದ್ಧ ದರ್ಶನಗಳಲ್ಲಿ ಬುದ್ಧತ್ತ್ವಕ್ಕೆ ಏರುವುದು ಅಂದರೆ ಅದು ತುರೀಯಾವಸ್ಥೆ. ಸಾಮಾನ್ಯ ವ್ಯಕ್ತಿ ಬುದ್ಧನಾಗಲಿಕ್ಕೆ ಅನೇಕ ಜನ್ಮಗಳನ್ನು ಪಡೆಯಬೇಕಾಗುತ್ತದೆ. ಅದರಲ್ಲಿಯೂ ಕೊನೆಯ ಮೂರು ಹಂತಗಳಾದ ಅರಿಹಂತ, ಪಚ್ಛೇಕ ಬುದ್ಧತ್ವವನ್ನು ಸಾಧಿಸಿದ ಮೇಲೆ ಗೌತಮ ಬುದ್ಧ ತಲುಪಿದ ಸ್ಥಿತಿ ಸಮ ಸಂಬುದ್ಧತ್ವದ ಸ್ಥಿತಿ. ಜಾತಕದ ಕತೆಗಳಲ್ಲಿ ಬುದ್ಧನ ಹಿಂದಿನ ಜನ್ಮದ ವಿವರಗಳು ಕಥೆಯ ರೂಪದಲ್ಲಿ ಬರುವುದನ್ನು ಗಮನಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ಆತ್ಮದ ಅಸ್ತಿತ್ವವನ್ನು ಬುದ್ಧ ಒಪ್ಪುವದೂ ಇಲ್ಲ ಅಥವಾ ನಿರಾಕರಿಸುವುದೂ ಇಲ್ಲ. ವಚ್ಚಗೋತ್ತ ಎನ್ನುವ ಬ್ರಾಹ್ಮಣ ಇದೇ ವಿಷಯದಲ್ಲಿ ಬುದ್ಧನ ಹತ್ತಿರ ಕೇಳುವ ಪ್ರಶ್ನೆ ತೆವಿಜ್ಜ ಸುತ್ತದಲ್ಲಿ ಬರುತ್ತದೆ. ಆತ ಬುದ್ಧನಲ್ಲಿ ಕೇಳುವ ಆತ್ಮವಿದೆಯೇ ಅಥವಾ ಇಲ್ಲವೇ ಎನ್ನುವ ಪ್ರಶ್ನೆಗೆ ಆತ ಮೌನವಾಗಿಬಿಡುತ್ತಾನೆ. ಆತನ ಪ್ರಕಾರ ಆತ್ಮವಿದೆ ಎಂದು ಸಾರಿದ್ದರೆ ಅನಿತ್ಯಕ್ಕೇ ನಿತ್ಯವೆಂದು ಆತನ ಶಿಷ್ಯರು ಪರಿಗಣಿಸಬಹುದು, ಇಲ್ಲವೆಂದರೆ ಉಚ್ಛೇದವಾದ (ವಿನಾಶವಾದ)ವನ್ನು ಉಪದೇಶಿಸುವ ದಾರ್ಶನಿಕರು ಹೇಳಿದ್ದು ಸತ್ಯವೆಂದು ಅವರು ನಂಬುತ್ತಾರೆ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ರಾಮಪಟ್ಟಾಭಿಷೇಕ ಭಂಗ

ಇದರ ಅರ್ಥವಿಷ್ಟೇ ಬುದ್ಧ ಅಸ್ತಿತ್ವವಾದಿಯಾಗಿದ್ದ. ತನ್ನ ಶಿಷ್ಯರಿಗೆ “ನಿಮಗೆ ನೀವೇ ಬೆಳಕಾಗಿರಿ” ಎಂದು ಉಪದೇಶವನ್ನು ಮಾಡಿದ್ದ. ಬದುಕಿನಲ್ಲಿ ಕಾಣುವ ವಸ್ತುಗಳಲ್ಲಿಯೇ ಆನಂದವಿದೆ ಎನ್ನುವದರ ಮೂಲಕವೇ ಆತನಿಗೆ ಜ್ಞಾನೋದಯವಾದದ್ದರಿಂದ ಆತ “ತಿವಿಜ್ಜಸುತ್ತ”ದಲ್ಲಿ ಹೇಳುವಂತೆ. “ಹಳೆಯ ಓಲೆಗರಿಯಲ್ಲಿ ಹೇಳಿದೆ ಎನ್ನುವ ಮಾತ್ರಕ್ಕೆ ನಂಬಬಾರದು. ಎಲ್ಲವನ್ನೂ ವಿಚಾರಣೆ ಮಾಡಿ ವಿಶ್ಲೇಷಿಸಿ ಅದರಿಂದ ಎಲ್ಲರಿಗೂ ಒಳ್ಳೆಯದಾಗುತ್ತದೆ ಎಂದಾದರೆ ಅದರಂತೆ ನೀವೂ ಬಾಳಿ” ಎಂದಿದ್ದಾನೆ. ಬುದ್ಧನ ಪ್ರಕಾರ ನಿರ್ವಾಣವೆಂದರೆ ಅದು ‘ಸಂವೇದನೆ ಮತ್ತು ಭಾವನೆಗಳು ನಿಂತುಹೋಗುವ ಕ್ರಿಯೆ’. ಇದು ಜ್ಞಾತ್ರಾಜ್ಞೇಯದ ಸಂಬಂಧದ ಆಭಾವ. ಈ ನಿರ್ವಾಣಕ್ರಿಯೆಯನ್ನು ಮಾಂಡುಕ್ಯೋಪನಿಷತ್ತಿನ ತುರೀಯಾವಸ್ಥೆಗೆ ಹೋಲಿಸಬಹುದು. (ನಾಂತಃಪ್ರಜ್ಞಂ ನ ಬಹಿಃಪ್ರಜ್ಞಂ..ಮಾಂಡೂಕ್ಯ-7) ಇವೆರಡರಲ್ಲೂ ಭಾವನಾತ್ಮಕವಾದ ವಿಷಯಗಳಿಲ್ಲ. ಅವು ವಿಷಯ, ವಿಷಯಿ ಸಂಬಂಧ, ದೇಶ ಕಾಲ ನಿಮಿತ್ತ ಇವುಗಳಿಗೆ ಅತೀತವಾಗಿದೆ. ಇವೆರಡರಲ್ಲೂ ಚೇತನಾವಿಷಯಗಳಿಲ್ಲ; ಚೈತನ್ಯಸ್ವರೂಪವಿದೆ. ಪಾಲಿ ಭಾಷೆಯಲ್ಲಿರುವ ತೇರವಾದ ಬೌದ್ಧಗ್ರಂಥ ‘ಉದಾನ”ದಲ್ಲಿ “ಅಜವೂ ಅನಾದಿಯೂ ಅಕೃತವೂ ಅಸಂಯುಕ್ತವೂ ಆದುದೊಂದಿದೆ. ಎಲೈ ಭಿಕ್ಕು, ಅದಿಲ್ಲವಾದರೆ ಹುಟ್ಟುಳ್ಳದ್ದೂ, ಸಾದಿಯೂ ಕೃತವೂ ಸಂಯುಕ್ತವೂ ಆದ ಜಗತ್ತಿನಿಂದ ಮುಕ್ತಿಯೇ ಇರುವದಿಲ್ಲ” (ಉದಾನ 8-3) ಎಂದಿದ್ದಾನೆ. ಆತ ನಿರ್ವಿಕಾರವೂ ಶಾಶ್ವತವೂ ಆದ ಶಾಶ್ವತ ಸತ್ಯವನ್ನು ಒಪ್ಪುತ್ತಾನೆಂಬುದು ಇದರಿಂದ ಸ್ಪಷ್ಟ. ಇದಲ್ಲದಿದ್ದರೆ ಅವನ ನಿರ್ವಾಣವಾದವೇ ಬಿದ್ದುಹೋಗುತ್ತದೆ. ಆತ ಹೇಳಿದ್ದು “ಆತ್ಮ ಮತ್ತು ಬ್ರಹ್ಮ ವಿಷಯಕವಾದ ವಿಚಾರಗಳಿಂದ ಯಾವ ಪ್ರಯೋಜನವೂ ಇಲ್ಲ, ಒಳ್ಳೆಯದನ್ನು ಮಾಡಿರಿ; ಒಳ್ಳೆಯವರಾಗಿರಿ, ಇದೇ ನಿಮ್ಮನ್ನು ನಿರ್ವಾಣಕ್ಕೆ ಕೊಂಡೊಯ್ಯುತ್ತದೆ”. ಬುದ್ಧನೇ ನೇರವಾಗಿ ಬೋಧಿಸಿದ ತತ್ತ್ವಗಳನ್ನು ಗಮನಿಸಿದಾಗ ಆತನ ತತ್ತ್ವಗಳು ಭಾರತೀಯ ದರ್ಶನ ಶಾಸ್ತ್ರದ ಮುನ್ನುಡಿಯಾಗಿವೆ ಎನ್ನಬಹುದು.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಆತುರಗೆಟ್ಟು ಸ್ತಿಮಿತ ಕಳೆದುಕೊಂಡವನ ವಿಲಾಪ

Continue Reading

ಧಾರ್ಮಿಕ

Buddha Purnima: ಇಂದು ಬುದ್ಧ ಪೂರ್ಣಿಮೆ; ಬುದ್ಧನ ಬೋಧನೆಯನ್ನು ಸ್ಮರಿಸಿಕೊಳ್ಳುವ ದಿನ

Buddha Purnima: ಹಿಂದೂ ಕ್ಯಾಲೆಂಡರ್ ಪ್ರಕಾರ ವೈಶಾಖ ತಿಂಗಳ (ಏಪ್ರಿಲ್/ಮೇ) ಹುಣ್ಣಿಮೆಯ ದಿನದಂದು ಬುದ್ಧ ಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಈ ದಿನವು ಬೌದ್ಧ ಕ್ಯಾಲೆಂಡರ್ ನಲ್ಲಿ ಪ್ರಮುಖ ದಿನವಾಗಿದೆ. ಬುದ್ಧ ಜಯಂತಿಯು ಪ್ರಪಂಚದಾದ್ಯಂತ ಇರುವ ಬೌದ್ಧರಿಗೆ ವಿಶೇಷ ದಿನವಾಗಿದೆ. ಇದು ಬೌದ್ಧ ಧರ್ಮದ ಸ್ಥಾಪಕ ಸಿದ್ಧಾರ್ಥ ಗೌತಮನನ್ನು ಗೌರವಿಸುತ್ತದೆ.

VISTARANEWS.COM


on

By

Buddha Purnima
Koo

ಬುದ್ಧ ಜಯಂತಿ ಅಥವಾ ವೈಶಾಖಿ ಬುದ್ಧ ಪೂರ್ಣಿಮಾ (Buddha Purnima) ಅಥವಾ ವೆಸಾಕ್ (Vesak) ಎಂದೂ ಕರೆಯಲ್ಪಡುವ ಬುದ್ಧ ಪೂರ್ಣಿಮಾ ಹಬ್ಬವು ಗೌತಮ ಬುದ್ಧನ (Gautama Buddha) ಜನ್ಮ ದಿನವನ್ನು ಸೂಚಿಸುತ್ತದೆ.

ಭಾರತ, ಶ್ರೀಲಂಕಾ, ನೇಪಾಳ, ಭೂತಾನ್, ಟಿಬೆಟ್, ಥೈಲ್ಯಾಂಡ್, ಚೀನಾ, ಕೊರಿಯಾ, ಲಾವೋಸ್, ವಿಯೆಟ್ನಾಂ, ಮಂಗೋಲಿಯಾ, ಕಾಂಬೋಡಿಯಾ ಮತ್ತು ಇಂಡೋನೇಷ್ಯಾ ಸೇರಿದಂತೆ ಹಲವಾರು ಆಗ್ನೇಯ ಏಷ್ಯಾದ ದೇಶಗಳಲ್ಲಿ ಇದನ್ನು ಅತ್ಯಂತ ಅದ್ಧೂರಿಯಾಗಿ ಆಚರಿಸಲಾಗುತ್ತದೆ.

ಹಿಂದೂ ಕ್ಯಾಲೆಂಡರ್ ಪ್ರಕಾರ ವೈಶಾಖ ತಿಂಗಳ (ಏಪ್ರಿಲ್/ಮೇ) ಹುಣ್ಣಿಮೆಯ ದಿನದಂದು ಬುದ್ಧ ಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಈ ದಿನವು ಬೌದ್ಧ ಕ್ಯಾಲೆಂಡರ್ ನಲ್ಲಿ ಪ್ರಮುಖ ದಿನವಾಗಿದೆ. ಬುದ್ಧ ಜಯಂತಿಯು ಪ್ರಪಂಚದಾದ್ಯಂತ ಇರುವ ಬೌದ್ಧರಿಗೆ ವಿಶೇಷ ದಿನವಾಗಿದೆ. ಇದು ಬೌದ್ಧ ಧರ್ಮದ ಸ್ಥಾಪಕ ಸಿದ್ಧಾರ್ಥ ಗೌತಮನನ್ನು ಗೌರವಿಸುತ್ತದೆ.


ಈ ದಿನದ ಮೂರು ಮಹತ್ವ

ಬ್ರಿಟಿಷ್ ಲೈಬ್ರರಿ ಬ್ಲಾಗ್ ಪ್ರಕಾರ, ಪ್ರತಿ ಹುಣ್ಣಿಮೆಯ ದಿನವು ಬೌದ್ಧರಿಗೆ ಮಂಗಳಕರ ದಿನವಾಗಿದೆ. ಆದರೆ ಎಲ್ಲಕ್ಕಿಂತ ಮುಖ್ಯವಾದದ್ದು ಮೇ ತಿಂಗಳ ಹುಣ್ಣಿಮೆಯ ದಿನ. ಏಕೆಂದರೆ ಗೌತಮ ಬುದ್ಧನ ಜೀವನದಲ್ಲಿ ಮೂರು ಪ್ರಮುಖ ಘಟನೆಗಳು ಈ ದಿನ ನಡೆದವು. ಮೊದಲನೆಯದಾಗಿ, ಬುದ್ಧನಾಗಲಿರುವ ರಾಜಕುಮಾರ ಸಿದ್ಧಾರ್ಥ ಮೇ ತಿಂಗಳ ಹುಣ್ಣಿಮೆಯ ದಿನದಂದು ಜನಿಸಿದನು. ಎರಡನೆಯದಾಗಿ, ಆರು ವರ್ಷಗಳ ಕಠಿಣ ತಪಸ್ಸಿನ ಬಳಿಕ ಬೋಧಿ ವೃಕ್ಷದ ನೆರಳಿನಲ್ಲಿ ಜ್ಞಾನೋದಯವನ್ನು ಪಡೆದನು. ಮೇ ತಿಂಗಳ ಹುಣ್ಣಿಮೆಯ ದಿನದಂದು ಬೋಧಗಯಾದಲ್ಲಿ ಗೌತಮ ಬುದ್ಧರಾದರು. ಮೂರನೆಯದಾಗಿ ಬುದ್ಧರಾದ 45 ವರ್ಷಗಳ ಬಳಿಕ ಅವರು ಎಂಬತ್ತನೇ ವಯಸ್ಸಿನಲ್ಲಿ ಕುಸಿನಾರಾದಲ್ಲಿ ನಿಧನರಾದರು.

ಬುದ್ಧ ಜಯಂತಿ ಯಾವಾಗ?

ಈ ವರ್ಷ ಬುದ್ಧ ಜಯಂತಿಯು ಗುರುವಾರ ಮೇ 23ರಂದು ಆಚರಿಸಲಾಗುತ್ತಿದೆ. ಪೂರ್ಣಿಮಾ ತಿಥಿಯು ಮೇ 22ರಂದು ಸಂಜೆ 6.47ಕ್ಕೆ ಪ್ರಾರಂಭಗೊಂಡು ಮೇ 23ರಂದು ಸಂಜೆ 7.22ಕ್ಕೆ ಕೊನೆಗೊಳ್ಳುತ್ತದೆ.

ಬುದ್ಧ ಜಯಂತಿ ಆಚರಣೆ ಹೇಗೆ?

ಬೌದ್ಧರಿಗೆ ಬುದ್ಧ ಜಯಂತಿಯು ಬುದ್ಧನ ಬೋಧನೆಗಳನ್ನು ಪ್ರತಿಬಿಂಬಿಸುವ ಸಮಯವಾಗಿದೆ. ಇದು ಶಾಂತಿ, ಸಹಾನುಭೂತಿ ಮತ್ತು ಬುದ್ಧಿವಂತಿಕೆಯ ಪ್ರತೀಕವಾಗಿದೆ.

ಬುದ್ಧನ ಭಕ್ತರು ದೇವಾಲಯಗಳಿಗೆ ಭೇಟಿ ನೀಡುತ್ತಾರೆ, ಮೇಣದಬತ್ತಿ, ಧೂಪದ್ರವ್ಯಗಳನ್ನು ಬೆಳಗಿಸುತ್ತಾರೆ, ಪ್ರಾರ್ಥಿಸುತ್ತಾರೆ. ಭಗವಾನ್ ಬುದ್ಧನ ಪ್ರತಿಮೆಯ ಮುಂದೆ ಸಿಹಿತಿಂಡಿ ಮತ್ತು ಹಣ್ಣುಗಳನ್ನು ಅರ್ಪಿಸುತ್ತಾರೆ. ಬುದ್ಧನ ಜೀವನ ಮತ್ತು ಬೋಧನೆಗಳ ಕುರಿತು ಧರ್ಮೋಪದೇಶಗಳು ನಡೆಯುತ್ತವೆ. ಜನರು ಸಾಮಾನ್ಯವಾಗಿ ಬಿಳಿ ಬಟ್ಟೆಯನ್ನು ಧರಿಸುತ್ತಾರೆ, ಮಾಂಸಾಹಾರವನ್ನು ಸೇವಿಸುವುದಿಲ್ಲ. ಖೀರ್ ವಿತರಿಸುತ್ತಾರೆ, ಬೌದ್ಧ ಸಿದ್ಧಾಂತದ ಪ್ರಕಾರ ಈ ದಿನ ಸುಜಾತಾ ಎಂಬ ಮಹಿಳೆ ಬುದ್ಧನಿಗೆ ಹಾಲಿನ ಗಂಜಿಯನ್ನು ಅರ್ಪಿಸಿದಳು ಎನ್ನಲಾಗುತ್ತದೆ.

ಭಗವಾನ್ ಬುದ್ಧನ ಪ್ರಮುಖ ಬೋಧನೆಗಳಲ್ಲಿ ಎಲ್ಲಾ ಜೀವಿಗಳಿಗೆ ಸಹಾನುಭೂತಿ ತೋರಿಸಬೇಕು, ಸ್ವಾತಂತ್ರ್ಯ ನೀಡಬೇಕು ಎನ್ನುವುದು ಒಂದು. ಹಾಗಾಗಿ ಈ ದಿನದಂದು ಪಂಜರದಲ್ಲಿರುವ ಪಕ್ಷಿಗಳನ್ನು ಸಾಂಕೇತಿಕವಾಗಿ ಮುಕ್ತಗೊಳಿಸುತ್ತಾರೆ. ಭಾರತದಲ್ಲಿ ಉತ್ತರ ಪ್ರದೇಶದ ಸಾರನಾಥದಲ್ಲಿ ದೊಡ್ಡ ಜಾತ್ರೆಯೇ ನಡೆಯುತ್ತದೆ. ಇದು ಪ್ರಮುಖ ಬೌದ್ಧ ಯಾತ್ರಾ ಸ್ಥಳವಾಗಿದೆ. ಅಲ್ಲಿ ಬುದ್ಧನು ಜ್ಞಾನೋದಯವನ್ನು ಪಡೆದ ಅನಂತರ ತನ್ನ ಮೊದಲ ಧರ್ಮೋಪದೇಶವನ್ನು ನೀಡಿದನೆಂದು ಹೇಳಲಾಗುತ್ತದೆ.


ಬುದ್ಧ ಜಯಂತಿಯ ಇತಿಹಾಸ ಏನು?

ವೈಶಾಖ ಮಾಸದ ಬುದ್ಧ ಪೂರ್ಣಿಮೆಯು ಗೌತಮ ಬುದ್ಧನ ಜನ್ಮ ದಿನವೆಂದು ಆಚರಿಸಲಾಗುತ್ತದೆ. ಬುದ್ಧನ ಜನನ ಮತ್ತು ಮರಣದ ದಿನಾಂಕಗಳು ಖಚಿತವಾಗಿಲ್ಲ. ಆದರೆ ಇತಿಹಾಸಕಾರರು ಅವರು 563-483 B.Cಯಲ್ಲಿ ಜನಿಸಿದರು. ಅವರು ನೇಪಾಳದ ಲುಂಬಿನಿಯಲ್ಲಿ ಜನಿಸಿದರು ಮತ್ತು ಉತ್ತರ ಪ್ರದೇಶದ ಕುಶಿನಗರದಲ್ಲಿ 80ನೇ ವಯಸ್ಸಿನಲ್ಲಿ ನಿಧನರಾದರು ಎನ್ನುತ್ತಾರೆ.

ಬೋಧಗಯಾ ಬೌದ್ಧರಿಗೆ ಅತ್ಯಂತ ಪ್ರಮುಖ ಯಾತ್ರಾ ಸ್ಥಳವಾಗಿದೆ. ಅಲ್ಲಿ ಬುದ್ಧನು ಜ್ಞಾನೋದಯವನ್ನು ಪಡೆದನು. ಇತರ ಪ್ರಮುಖ ಸ್ಥಳಗಳೆಂದರೆ ಕುಶಿನಗರ, ಲುಂಬಿನಿ ಮತ್ತು ಸಾರನಾಥ, ಅಲ್ಲಿ ಅವರು ಮೊದಲು ಬೌದ್ಧ ಧರ್ಮವನ್ನು ಕಲಿಸಿದರು.

ವಿಷ್ಣುವಿನ 9ನೇ ಅವತಾರ

ಉತ್ತರ ಭಾರತದಲ್ಲಿ ಬುದ್ಧನನ್ನು ಭಗವಾನ್ ವಿಷ್ಣುವಿನ 9ನೇ ಅವತಾರವಾಗಿ ನೋಡಲಾಗುತ್ತದೆ, ಕೃಷ್ಣನನ್ನು 8ನೇ ಅವತಾರ ಎಂದು ಪರಿಗಣಿಸಲಾಗಿದೆ. ಆದರೆ ಬೌದ್ಧರು ಬುದ್ಧನನ್ನು ವಿಷ್ಣುವಿನ ಅವತಾರವೆಂದು ಪರಿಗಣಿಸುವುದಿಲ್ಲ.

Continue Reading

ತುಮಕೂರು

Tumkur News: ವಿಜೃಂಭಣೆಯಿಂದ ನಡೆದ ಶ್ರೀ ಬೇವಿನಳಮ್ಮ ದೇವಿ ಜಲಧಿ ಮಹೋತ್ಸವ

Tumkur News: ಕೊರಟಗೆರೆ ತಾಲೂಕಿನ ಚನ್ನರಾಯದುರ್ಗ ಹೋಬಳಿಯ ಜೆಟ್ಟಿ ಅಗ್ರಹಾರ ಕೆರೆಯಂಗಳದಲ್ಲಿ ಏಳು ಹಳ್ಳಿ ಗ್ರಾಮದೇವತೆ ಶ್ರೀ ಬೇವಿನಳಮ್ಮ ದೇವಿಯ ಜಲಧಿ ಮಹೋತ್ಸವವು ಶ್ರದ್ಧಾ ಭಕ್ತಿಯಿಂದ ನೆರೆವೇರಿತು. ಶ್ರೀ ಬೇವಿನಳಮ್ಮ ದೇವಿಯ ಜಲಧಿ ಮಹೋತ್ಸವ ಅಂಗವಾಗಿ ದೇವಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಧಾರ್ಮಿಕ ಪೂಜೆ ಸಲ್ಲಿಸಿದ ನಂತರ ಗಂಗಾ ಪೂಜೆ ನಡೆಯಿತು. ನಂತರ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.

VISTARANEWS.COM


on

Shree Bevinalamma Devi Jaladhi Mahotsav celebration in koratagere taluk
Koo

ಕೊರಟಗೆರೆ: ತಾಲೂಕಿನ ಚನ್ನರಾಯದುರ್ಗ ಹೋಬಳಿಯ ಜೆಟ್ಟಿ ಅಗ್ರಹಾರ ಕೆರೆಯಂಗಳದಲ್ಲಿ ಏಳು ಹಳ್ಳಿ ಗ್ರಾಮದೇವತೆ ಶ್ರೀ ಬೇವಿನಳಮ್ಮ ದೇವಿಯ ಜಲಧಿ ಮಹೋತ್ಸವವು ಶ್ರದ್ಧಾ ಭಕ್ತಿಯಿಂದ (Tumkur News) ನೆರೆವೇರಿತು.

ಶ್ರೀ ಬೇವಿನಳಮ್ಮ ದೇವಿಯ ಜಲಧಿ ಮಹೋತ್ಸವ ಅಂಗವಾಗಿ ದೇವಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಧಾರ್ಮಿಕ ಪೂಜೆ ಸಲ್ಲಿಸಿದ ನಂತರ ಗಂಗಾ ಪೂಜೆ ನಡೆಯಿತು. ನಂತರ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.

ಇದನ್ನೂ ಓದಿ:Meta: ಮೆಟಾದಿಂದ ಯುವ ಜನರಿಗೆ ಡಿಜಿಟಲ್ ಸುರಕ್ಷಾ ಪಾಠ

ಸಾಹಿತಿ ಡಾ. ನರಸಿಂಹಮೂರ್ತಿ ಮಾತನಾಡಿ, ಸುಮಾರು 250 ವರ್ಷಗಳ ಇತಿಹಾಸವುಳ್ಳ ದೇವಗಾನಿಕೆ ಶ್ರೀ ಬೇವಿನಳಮ್ಮ ತಾಯಿ ಏಳು ಜನ ಅಕ್ಕತಂಗಿಯರಲ್ಲಿ ತಾಯಿಯು ಒಬ್ಬಳು. ಈ ತಾಯಿಯ ಜಾತ್ರೆ-ಜಲಧಿ ವಿಶೇಷವಾಗಿ ಆಚರಣೆ ಮಾಡುತ್ತಾ ನಮ್ಮ ಪೂರ್ವಿಕರು ಬಂದಿದ್ದಾರೆ. ಹಾಗೆ ನಾವು ಕೂಡ ಈ ಆಚರಣೆಯನ್ನು ಮುಂದುವರಿಸುತ್ತಾ ಬಂದಿದ್ದೇವೆ. ಈ ದೇವಿಯ ಜಾತ್ರೆಯನ್ನು ಐದು ವರ್ಷಕ್ಕೊಮ್ಮೆ ಮಾಡುತ್ತಿದ್ದು, ಜಲಧಿಯನ್ನು ವರ್ಷಕ್ಕೊಮ್ಮೆ ಬಹಳ ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ಆಚರಿಸುತ್ತಿದ್ದೇವೆ ಎಂದು ತಿಳಿಸಿದರು.

ಈ ವೇಳೆ ಕಾಂಗ್ರೆಸ್ ಮುಖಂಡ ಮಂಜುನಾಥ್ ಮಾತನಾಡಿ, ಜಟ್ಟಿ ಅಗ್ರಹಾರ ಎಂದರೇ ಜಟ್ಟಿ ಮನೆತನದವರಿಗೆ ರಾಜ ಮಹಾರಾಜರು ಉಡುಗೊರೆಯಾಗಿ ನೀಡಿದಂತಹ ಇತಿಹಾಸವುಳ್ಳ ಗ್ರಾಮವಾಗಿದ್ದು, ಇಲ್ಲಿ ನೆಲೆಸಿರುವ ಗ್ರಾಮ ಶಕ್ತಿ ಬೇವಿನಳಮ್ಮ ತಾಯಿಯು ಗ್ರಾಮಕ್ಕೆ ಯಾವುದೇ ತೊಂದರೆ ತೊಡಕುಗಳು ಆಗದಂತೆ ಕಾಪಾಡಿಕೊಂಡು ಬರುತ್ತಿದ್ದಾಳೆ. ಬರಗಾಲವಿರುವುದರಿಂದ ಅದ್ದೂರಿಯಾಗಿ ಜಾತ್ರೆ ಮಾಡಲು ಆಗದ ಕಾರಣ ಜಲಧಿಯನ್ನು ಅದ್ಧೂರಿಯಾಗಿ ಆಚರಿಸುತ್ತಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: India Skills: ಇಂಡಿಯಾ ಸ್ಕಿಲ್ಸ್ 2024 ಗ್ರ್ಯಾಂಡ್ ಫಿನಾಲೆ; ವರ್ಲ್ಡ್ ಸ್ಕಿಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ 58 ವಿಜೇತರು

ಈ ಸಂದರ್ಭದಲ್ಲಿ ಪೂಜಾರು ಲಕ್ಷ್ಮೀಶ್, ಗ್ರಾಮಸ್ಥರಾದ ತಿಮ್ಮರಾಜು, ಮಧುಸೂಧನ್, ಟೈಗರ್ ನಾಗರಾಜು, ಬಸವರಾಜು, ಕೇಬಲ್ ಸಿದ್ದಗಂಗಯ್ಯ, ಮಂಜುನಾಥ್, ಹನುಮಂತರಾಜು, ಚಂದ್ರಕುಮಾರ್, ಸಿದ್ದರಾಜು, ದೇವರಾಜು, ನಾಗರಾಜು, ಕೆಂಪರಾಜು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳು ಪಾಲ್ಗೊಂಡಿದ್ದರು.

Continue Reading
Advertisement
SRH vs RR
ಕ್ರೀಡೆ6 mins ago

SRH vs RR: ರಾಜಸ್ಥಾನ್​-ಹೈದರಾಬಾದ್​ ಐಪಿಎಲ್​ ದಾಖಲೆ, ಹವಾಮಾನ ವರದಿ ಹೇಗಿದೆ?

Self Harming
ಚಿಕ್ಕೋಡಿ8 mins ago

Self Harming : ಮದುವೆಗೆ ವಧು ಸಿಕ್ಕಿಲ್ಲವೆಂದು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Viral Video
ವೈರಲ್ ನ್ಯೂಸ್17 mins ago

Viral Video: ವಿವಾಹ ಮಂಟಪದಲ್ಲಿ ನಾಗವಲ್ಲಿ ಅವತಾರ ತಾಳಿದ ವಧು; ವರ ಈಗ ಕೋಮಾದಲ್ಲಿದ್ದಾನೆ ಎಂದ ನೆಟ್ಟಿಗರು

ರಾಜಕೀಯ32 mins ago

Diplomatic passport: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

Weather Report
ದೇಶ37 mins ago

Weather Updates: ಬಿಸಿಗಾಳಿ ಶಾಖಕ್ಕೆ ಕುಲುಮೆಯಂತಾದ ಉತ್ತರ ಭಾರತ..ದಕ್ಷಿಣದಲ್ಲಿ ವರುಣಾರ್ಭಟ- ಕೇರಳದಲ್ಲಿ ನಾಲ್ವರ ದುರ್ಮರಣ

Prajwal Revanna Case Passport Cancellation Process Begins Arrest of Prajwal is certain
ಪ್ರಮುಖ ಸುದ್ದಿ40 mins ago

Prajwal Revanna Case: ಪಾಸ್‌ಪೋರ್ಟ್‌ ರದ್ದತಿ ಪ್ರಕ್ರಿಯೆ ಶುರು; ಪ್ರಜ್ವಲ್‌ ರೇವಣ್ಣ ಬಂಧನ ಖಚಿತ

ಗುರು ಸಕಲಮಾ guru sakalamaa
ಕರ್ನಾಟಕ46 mins ago

ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು- ಇವು ಗುರು ಸಕಲಮಾ ಬದುಕಿನ ಅಧ್ಯಾಯಗಳು!

Road Accident in Vijayanagara
ಕ್ರೈಂ48 mins ago

Road Accident : ಬೈಕ್‌ ಸ್ಕಿಡ್‌ ಆಗಿ ಕಂದಕಕ್ಕೆ ಬಿದ್ದ ಸವಾರ ಮೃತ್ಯು; ಕೆರೆಗೆ ಕಾರು ಹಾರಿಸಿ ಪ್ರಾಣಬಿಟ್ಟ ಚಾಲಕ

RCB Funny Memes
ಕ್ರೀಡೆ1 hour ago

RCB Funny Memes: ಕೊನೆಗೊಂಡ ಆರ್​ಸಿಬಿಯ ಹೊಸ ಅಧ್ಯಾಯ; ಟ್ರೋಲ್​, ಮೀಮ್ಸ್​ಗಳ ಮೂಲಕವೇ ತಿರುಗೇಟು ಕೊಟ್ಟ ಚೆನ್ನೈ ಅಭಿಮಾನಿಗಳು

Hamas Terrorists
ವಿದೇಶ1 hour ago

ಎಲ್ಲೆ ಮೀರಿದ ಹಮಾಸ್‌ ಉಗ್ರರ ಅಟ್ಟಹಾಸ; ಗಾಯಗೊಂಡ ಇಸ್ರೇಲಿ ಮಹಿಳಾ ಸೈನಿಕರ ಮೇಲೆ ಲೈಂಗಿಕ ದೌರ್ಜನ್ಯ: ಭಯಾನಕ ವಿಡಿಯೊ ಇಲ್ಲಿದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ9 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌