Viral Video: ಪ್ರಾಣ ಒತ್ತೆ ಇಟ್ಟು ಮರಿ ಆನೆಯನ್ನು ರಕ್ಷಿಸಿದ ಅರಣ್ಯಾಧಿಕಾರಿಗಳು; ಕೊನೆಗೆ ತಾಯಿ ಆನೆ ಮಾಡಿದ್ದೇನು? ವಿಡಿಯೊ ನೋಡಿ - Vistara News

ವೈರಲ್ ನ್ಯೂಸ್

Viral Video: ಪ್ರಾಣ ಒತ್ತೆ ಇಟ್ಟು ಮರಿ ಆನೆಯನ್ನು ರಕ್ಷಿಸಿದ ಅರಣ್ಯಾಧಿಕಾರಿಗಳು; ಕೊನೆಗೆ ತಾಯಿ ಆನೆ ಮಾಡಿದ್ದೇನು? ವಿಡಿಯೊ ನೋಡಿ

Viral Video: ತನ್ನ ಕಂದಮ್ಮನನ್ನು ರಕ್ಷಿಸಿದ ಅರಣ್ಯಾಧಿಕಾರಿಗಳಿಗೆ ತಾಯಿ ಆನೆಯೊಂದು ಸೊಂಡಿಲೆತ್ತಿ ಕೃತಜ್ಞತೆ ಸೂಚಿಸಿದ ವಿಡಿಯೊ ಇದೀಗ ವೈರಲ್‌ ಆಗಿದೆ.

VISTARANEWS.COM


on

elephent
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾನವರಂತೆ ಪ್ರಾಣಿಗಳು ಕೂಡ ಭಾವನೆಗಳನ್ನು ವ್ಯಕ್ತಪಡಿಸುತ್ತವೆ. ಅದರಲ್ಲೂ ಆನೆಗಳು ಈ ವಿಚಾರದಲ್ಲಿ ಒಂದು ಹೆಜ್ಜೆ ಮುಂದೆಯೇ ಇರುತ್ತವೆ. ಅದಕ್ಕೆ ಉತ್ತಮ ಉದಾಹರಣೆ ಈ ವಿಡಿಯೊ. ತನ್ನ ಕಂದಮ್ಮನನ್ನು ರಕ್ಷಿಸಿದ ಅರಣ್ಯಾಧಿಕಾರಿಗಳಿಗೆ ತಾಯಿ ಆನೆಯೊಂದು ಸೊಂಡಿಲೆತ್ತಿ ಕೃತಜ್ಞತೆ ಸೂಚಿಸಿದ ವಿಡಿಯೊ ಇದಾಗಿದ್ದು, ಸದ್ಯ ವೈರಲ್‌ ಆಗಿದೆ (Viral Video). ನೆಟ್ಟಿಗರು ಆನೆಯ ವರ್ತನೆಗೆ ಫಿದಾ ಆಗಿದ್ದಾರೆ.

ವಿಡಿಯೊದಲ್ಲೇನಿದೆ?

ಐಎಎಸ್‌ ಅಧಿಕಾರಿ ಸುಪ್ರಿಯಾ ಸಾಹು ಸಾಮಾಜಿಕ ಜಾಲತಾಣ ಎಕ್ಸ್‌ ಮೂಲಕ ಹಂಚಿಕೊಂಡ ವಿಡಿಯೊ ಇದಾಗಿದ್ದು, ನೆಟ್ಟಿಗರ ಗಮನ ಸೆಳೆದಿದೆ. ತಮಿಳುನಾಡಿನ ಕೊಯಂಬತ್ತೂರು ಜಿಲ್ಲೆಯ ಪೊಲ್ಲಾಚಿಯಲ್ಲಿ ಕಂಡು ಬಂದ ದೃಶ್ಯ ಇದಾಗಿದ್ದು, ಕಾಲುವೆಯೊಂದಕ್ಕೆ ಬಿದ್ದಿದ್ದ ಮರಿ ಆನೆಯನ್ನು ಅರಣ್ಯಾಧಿಕಾರಿಗಳು ರಕ್ಷಿಸಿದ ರೀತಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮರಿ ಆನೆಯೊಂದು ಆಕಸ್ಮಿಕವಾಗಿ ಕಾಲು ಜಾರಿ ಕಾಲುವೆಗೆ ಬಿದ್ದು ಬಿಟ್ಟಿತ್ತು. ತಾಯಿ ಆನೆ ತನ್ನ ಮರಿಯನ್ನು ರಕ್ಷಿಸಲು ತೀವ್ರವಾಗಿ ಒದ್ದಾಡಿತು. ಆದರೆ ಬಲವಾದ ನೀರಿನ ಹರಿವಿನಿಂದಾಗಿ ಇದು ಸಾಧ್ಯವಾಗಲಿಲ್ಲ. ನೀರಿನ ಪ್ರವಾಹವನ್ನು ತಡೆದುಕೊಳ್ಳಲು ಮತ್ತು ಅಲ್ಲಿಂದ ಜಿಗಿಯಲು ತುಂಬ ಚಿಕ್ಕದಾಗಿರುವ ಕಾರಣ ಮರಿ ಆನೆಗೂ ಸಾಧ್ಯವಾಗಲಿಲ್ಲ. ಹೀಗಾಗಿ ಅರಣ್ಯಾಧಿಕಾರಿಗಳ ತಂಡ ಕೂಡಲೇ ಧಾವಿಸಿತು. ಮರಿ ಆನೆಯನ್ನು ಜಾಗರೂಕತೆಯಿಂದ ಕಾಲುವೆಯಿಂದ ರಕ್ಷಿಸಿತು. ಮರಿ ಆನೆಯನ್ನು ತಾಯಿ ಜತೆಗೆ ಮತ್ತೆ ಒಂದಾಗಿತು.

ಆನೆ ತಾಯಿ ಭಾವುಕ

ಕಾಲುವೆಯಲ್ಲಿ ಬಿದ್ದಿದ ಮರಿ ಆನೆಯನ್ನು ರಕ್ಷಿಸಲು ತಾಯಿ ಆನೆ ಬಹಳಷ್ಟು ಪ್ರಯತ್ನಿಸಿದರೂ ಸಾಧ್ಯವಾಗದೆ ತೀವ್ರ ದುಃಖದಲ್ಲಿತ್ತು. ಈ ವೇಳೆ ಆಗಮಿಸಿದ ರಕ್ಷಣಾ ತಂಡ ತಾಯಿ ಆನೆ ಪಾಲಿಗೆ ದೇವರಂತೆ ಕಾಣಿಸಿದ್ದರಲ್ಲಿ ಸಂಶಯವಿಲ್ಲ. ಮರಿ ಆನೆ ಸುರಕ್ಷಿತವಾಗಿ ಮೇಲೆ ಬಂದಾಗ ತಾಯಿ ಅನೆ ಭಾವುಕವಾಗಿಯಿತು. ಸೊಂಡಿಲನ್ನು ಮೇಲಕ್ಕೆತ್ತಿ ಕೃತಜ್ಞತೆ ಸೂಚಿಸಿತು. ಈ ಬಗ್ಗೆ ಸುಪ್ರಿಯಾ ಸಾಹು ಬರೆದುಕೊಂಡು, “ಬಹಳ ಚಿಕ್ಕ ಮರಿ ಆನೆಯನ್ನು ರಕ್ಷಿಸಿದ ಬಳಿಕ ತಾಯಿ ಆನೆ ನಮ್ಮ ಅರಣ್ಯ ಅಧಿಕಾರಿಗಳಿಗೆ ಧನ್ಯವಾದ ಹೇಳಲು ತನ್ನ ಸೊಂಡಿಲನ್ನು ಎತ್ತುವುದನ್ನು ನೋಡಿ ಹೃದಯ ತುಂಬಿ ಬಂತುʼʼ ಎಂದು ಹೇಳಿದ್ದಾರೆ.

“ಕಾರ್ಯಾಚರಣೆಯು ಅಪಾಯಗಳಿಂದ ತುಂಬಿದ್ದರೂ ನಮ್ಮ ಅರಣ್ಯಾಧಿಕಾರಿಗಳ ತಂಡ ಇದರಿಂದ ವಿಚಲಿತವಾಗಲಿಲ್ಲ. ಯಶಸ್ವಿ ಪುನರ್ಮಿಲನಕ್ಕೆ ಕಾರಣವಾದ ಅವರ ಅಸಾಧಾರಣ ಪ್ರಯತ್ನಗಳಿಗೆ ಅಭಿನಂದನೆಗಳು. ಎಫ್.ಡಿ. ರಾಮಸುಬ್ರಹ್ಮಣ್ಯಂ, ಡಿಡಿ ಬಿ.ತೇಜ, ಎಫ್ಆರ್‌ಒ ಪುಗಲೆಂತಿ, ಫಾರೆಸ್ಟರ್ ತಿಲಕರ್, ಅರಣ್ಯ ರಕ್ಷಕ ಸರವಣನ್, ಅರಣ್ಯ ರಕ್ಷಕ ವೆಲ್ಲಿಂಗ್ರಿ, ಅರಣ್ಯ ವೀಕ್ಷಕರಾದ ಮುರಳಿ, ರಾಸು, ಎಪಿಡಬ್ಲ್ಯುಗಳಾದ ಬಾಲು, ನಾಗರಾಜ್, ಮಹೇಶ್ ಮತ್ತು ಚಿನ್ನನಾಥನ್ ಮತ್ತಿತರರು ಅದ್ಭುತ ಕೆಲಸ ಮಾಡಿದ್ದಾರೆʼʼ ಎಂದು ಸುಪ್ರಿಯಾ ಸಾಹು ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ಆನೆಗೆ ದಾರಿ ಬಿಟ್ಟು ಕೊಟ್ಟ ಬಸ್‌ ಡ್ರೈವರ್‌; ನೆಟ್ಟಿಗರ ಮನಗೆದ್ದ ವಿಡಿಯೊ ಇಲ್ಲಿದೆ

ಸುಪ್ರಿಯಾ ಸಾಹು ಅವರ ಈ ಪೋಸ್ಟ್‌ ಅನ್ನು ಸಾವಿರಾರು ಮಂದಿ ವೀಕ್ಷಿಸಿದ್ದಾರೆ. ಅನೇಕರು ಕಮೆಂಟ್‌ ಮೂಲಕ ಅರಣ್ಯಾಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿದ್ದಾರೆ. ʼʼಬದ್ಧತೆಯಿಂದ ಕೆಲಸ ಮಾಡುವ ಈ ತಂಡಕ್ಕೆ ಅಭಿನಂದನೆಗಳು. ಇವರ ಈ ಕಾರ್ಯ ನಿಜಕ್ಕೂ ಸ್ಫೂರ್ತಿದಾಯಕʼʼ ಎಂದು ಹಲವರು ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Rohit Sharma: ರೋಹಿತ್​ ಅಪ್ಪಿಕೊಳ್ಳಲು ಯತ್ನಿಸಿದ ಅಭಿಮಾನಿಯನ್ನು ಹೆಡೆಮುರಿ ಕಟ್ಟಿದ ನ್ಯೂಯಾರ್ಕ್ ಪೊಲೀಸ್; ವಿಡಿಯೊ ವೈರಲ್​

Rohit Sharma: ಬೇರೆ ದೇಶದಲ್ಲಿ ಈ ರೀತಿ ಮೈದಾನಕ್ಕೆ ನುಗ್ಗಿದರೆ ಎಚ್ಚರಿಕೆ ನೀಡಿ ಕಳಿಸಲಾಗುತ್ತದೆ. ಆದರೆ ಅಮೆರಿಕದಲ್ಲಿ ಮಾತ್ರ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಯಾರು ಏನೇ ಹೇಳಿದರು ಕೂಡ ಇಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆ ಖಚಿತ. ಅಮೆರಿಕದಲ್ಲಿ ನೆಲೆಸಿರುವ ಭಾರತೀಯರೊಬ್ಬರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೊ ಹಂಚಿಕೊಂಡು ಜಾಗ್ರತೆ ವಹಿಸಿ. ಇಲ್ಲಿ ಹುಚ್ಚಾಟ ನಡೆಸಿದರೆ ಜೈಲು ಕಂಬಿ ಎಣಿಸುವುದು ನಿಶ್ಚಿತ ಎಂದು ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

VISTARANEWS.COM


on

Rohit Sharma
Koo

ನ್ಯೂಯಾರ್ಕ್: ಬಾಂಗ್ಲಾದೇಶ(IND vs BAN) ವಿರುದ್ಧ ನಿನ್ನೆ(ಶನಿವಾರ) ನಡೆದ ಟಿ20 ವಿಶ್ವಕಪ್(T20 World Cup 2024)​ ಟೂರ್ನಿಯ ಅಭ್ಯಾಸ ಪಂದ್ಯದ ವೇಳೆ ರೋಹಿತ್​ ಶರ್ಮ(Rohit Sharma) ಅವರ ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿ ರೋಹಿತ್​ ಅವರನ್ನು ಅಪ್ಪಿಕೊಂಡಿದ್ದಾನೆ. ಈ ವೇಳೆ ನ್ಯೂಯಾರ್ಕ್​ನ ಪೊಲೀಸ್‌ ಪಡೆ ಶರವೇಗದಲ್ಲಿ ಓಡಿ ಒಂದು ಈ ಅಭಿಮಾನಿಯನ್ನು ಹೆಡೆಮುರಿ ಕಟ್ಟಿದ್ದಾರೆ. ಈ ವಿಡಿಯೊ ವೈರಲ್(viral video)​ ಆಗಿದೆ.

ಭಾರತ ತಂಡ ಫೀಲ್ಡಿಂಗ್​ ನಡೆಸುತ್ತಿದ್ದ ವೇಳೆ ಅಭಿಮಾನಿಯೊಬ್ಬ ಟೀಮ್​ ಇಂಡಿಯಾದ ಜೆರ್ಸಿ ತೊಟ್ಟು ನೇರವಾಗಿ ಮೈದಾನಕ್ಕೆ ಓಡಿ ಬಂದು ರೋಹಿತ್​ ಅವರನ್ನು ಅಪ್ಪಿಕೊಂಡು ಕಾಲಿಗೆ ಬಿದ್ದಿದ್ದಾನೆ. ಇದೇ ವೇಳೆ ಇಲ್ಲಿನ ಪೊಲೀಸ್‌ ಪಡೆ ಆತನನ್ನು ಮೈದಾನದಲ್ಲೇ ಕೈಗೆ ಕೋಳ ಹಾಕಿ ಎಳೆದುಕೊಂಡು ಹೋಗಿದ್ದಾರೆ. ಈ ವೇಳೆ ರೋಹಿತ್​ ಮತ್ತು ಟೂರ್ನಿಯ ಸಂಘಟಕರು ಆತನಿಗೆ ಏನು ಮಾಡಬೇಡಿ ಎಂದು ಹೇಳಿದರೂ ಕೂಡ ಕೆಳದೆ 2 ಪೊಲೀಸರು ಆತನ್ನು ಉಗ್ರಮಾಮಿಯನ್ನು ಬಂಧಿಸಿದಂತೆ ಎಳೆದುಕೊಂಡು ಹೋಗಿದ್ದಾರೆ. ಈತನಿಗೆ ಜೈಲು ಶಿಕ್ಷೆ ಖಚಿತ ಎನ್ನಲಾಗಿದೆ.

ಬೇರೆ ದೇಶದಲ್ಲಿ ಈ ರೀತಿ ಮೈದಾನಕ್ಕೆ ನುಗ್ಗಿದರೆ ಎಚ್ಚರಿಕೆ ನೀಡಿ ಕಳಿಸಲಾಗುತ್ತದೆ. ಆದರೆ ಅಮೆರಿಕದಲ್ಲಿ ಮಾತ್ರ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಯಾರು ಏನೇ ಹೇಳಿದರು ಕೂಡ ಇಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆ ಖಚಿತ. ಅಮೆರಿಕದಲ್ಲಿ ನೆಲೆಸಿರುವ ಭಾರತೀಯರೊಬ್ಬರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೊ ಹಂಚಿಕೊಂಡು ಜಾಗ್ರತೆ ವಹಿಸಿ. ಇಲ್ಲಿ ಹುಚ್ಚಾಟ ನಡೆಸಿದರೆ ಜೈಲು ಕಂಬಿ ಎಣಿಸುವುದು ನಿಶ್ಚಿತ ಎಂದು ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ ರಿಷಭ್​ ಪಂತ್​ ಅವರ ಅರ್ಧಶತಕ ಮತ್ತು ಪಾಂಡ್ಯ ಅವರ ಅಜೇಯ 40 ರನ್​ಗಳ ನೆರವಿನಿಂದ 5 ವಿಕೆಟಿಗೆ 182 ರನ್‌ ಗಳಿಸಿತು. ಗುರಿ ಬೆನ್ನಟ್ಟಿದ ಬಾಂಗ್ಲಾ 8 ವಿಕೆಟ್ ಕಳೆದುಕೊಂಡು 121 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲು ಕಂಡಿತು. ಬಾಂಗ್ಲಾ ತಂಡ ಇದಕ್ಕೂ ಮುನ್ನ ಆಡಿದ ಅಭ್ಯಾಸ ಪಂದ್ಯದಲ್ಲಿ ಅಮೆರಿಕ ವಿರುದ್ಧವೂ ಸೋಲು ಕಂಡಿತ್ತು.

ಇದನ್ನೂ ಓದಿ IND vs BAN: ಪಾಂಡ್ಯ ಬಲಿಷ್ಠ ಹೊಡೆತಕ್ಕೆ ನೆತ್ತರು ಚೆಲ್ಲಿದ ಬಾಂಗ್ಲಾ ಬೌಲರ್; ವಿಡಿಯೊ ವೈರಲ್​

ಐಪಿಎಲ್​ನಲ್ಲಿ ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡರಲ್ಲೂ ವಿಫಲವಾಗಿದ್ದ ಹಾರ್ದಿಕ್​ ಪಾಂಡ್ಯ ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ನಡೆದಿದ ಪಾಂಡ್ಯ ಬಿರುಸಿನ ಬ್ಯಾಟಿಂಗ್​ ಮೂಲಕ ಕೇವಲ 23 ಎಸೆತಗಳಿಂದ 2 ಬೌಂಡರಿ ಮತ್ತು 4 ಸಿಕ್ಸರ್‌ ಸಹಿತ ಅಜೇಯ 40 ರನ್ ಚಚ್ಚಿದರು. ಒಂದು ವಿಕೆಟ್​ ಕೂಡ ಕಿತ್ತರು.ಕಾರು ಅಪಘಾತದ ಬಳಿಕ ಮೊದಲ ಬಾರಿ ಟೀಮ್​ ಇಂಡಿಯಾ ಪರ ಆಡಿದ ರಿಷಭ್​ ಪಂತ್​ ಪ್ರಚಂಡ ಬ್ಯಾಟಿಂಗ್​ ನಡೆಸುವ ಮೂಲಕ ಗಮನಸೆಳೆದರು. ತಮ್ಮ ನೆಚ್ಚಿನ ಒನ್​ ಹ್ಯಾಂಡ್​ ಸಿಕ್ಸರ್​ ಕೂಡ ಬಾರಿಸಿದರು. ಮೂರನೇ ಕ್ರಮಾಂಕದಲ್ಲಿ ಆಡಿದ ಪಂತ್​ ಬರೋಬ್ಬರಿ 4 ಬೌಂಡರಿ ಮತ್ತು 4 ಸಿಕ್ಸರ್​ ಬಾರಿಸಿ 53 ರನ್​ ಗಳಿಸಿದರು.

Continue Reading

ದೇಶ

Modi Meditation: ಕನ್ಯಾಕುಮಾರಿಯಲ್ಲಿ ಧ್ಯಾನಾಸಕ್ತ ಪ್ರಧಾನಿ ಮೋದಿಯಿಂದ ಸೂರ್ಯ ವಂದನೆ; ವಿಡಿಯೊ ನೋಡಿ

ಲೋಕಸಭೆ ಚುನಾವಣೆ (Lok Sabha Election 2024) ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿರುವ ಮಧ್ಯೆಯೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ಶಿಲೆ ಸ್ಮಾರಕದಲ್ಲಿ (Vivekananda Rock Memorial) 45 ಗಂಟೆಗಳ ಧ್ಯಾನ ನಡೆಸುತ್ತಿದ್ದಾರೆ. ಮೋದಿ ಅವರ ಧ್ಯಾನ ಶನಿವಾರ ಕೊನೆಯ ದಿನಕ್ಕೆ ಕಾಲಿಟ್ಟಿದೆ (Modi Meditation). ಮೋದಿ ಧ್ಯಾನ ಮಾಡುತ್ತಿರುವ ವಿಡಿಯೊ ಸದ್ಯ ಹೊರ ಬಂದಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

VISTARANEWS.COM


on

Modi Meditation
Koo

ಚೆನ್ನೈ: ಲೋಕಸಭೆ ಚುನಾವಣೆ (Lok Sabha Election 2024) ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿರುವ ಮಧ್ಯೆಯೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ಶಿಲೆ ಸ್ಮಾರಕದಲ್ಲಿ (Vivekananda Rock Memorial) 45 ಗಂಟೆಗಳ ಧ್ಯಾನ ನಡೆಸುತ್ತಿದ್ದಾರೆ. ಮೋದಿ ಅವರ ಧ್ಯಾನ ಶನಿವಾರ ಕೊನೆಯ ದಿನಕ್ಕೆ ಕಾಲಿಟ್ಟಿದೆ (Modi Meditation). ಮೋದಿ ಧ್ಯಾನ ಮಾಡುತ್ತಿರುವ ವಿಡಿಯೊ ಸದ್ಯ ಹೊರ ಬಂದಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಶನಿವಾರ ಬೆಳಗಿನ ಜಾವವೇ ಎದ್ದ ಪ್ರಧಾನಿ ಮೋದಿ ಭಕ್ತಿಯ ಪ್ರತೀಕವಾಗಿರುವ ಕಾವಿ ಉಡುಗೆ ತೊಟ್ಟು ಹಣೆಗೆ ವಿಭೂತಿ ಮತ್ತು ತಿಲಕವನ್ನಿಟ್ಟು ಕೈಯಲ್ಲಿ ಜಪಮಣಿಯೊಂದಿಗೆ ಮಂತ್ರ ಪಠಿಸುತ್ತಾ ಸೂರ್ಯೋದಯ ವೀಕ್ಷಿಸಿದರು ಮತ್ತು ಸೂರ್ಯನಿಗೆ ವಂದನೆ ಸಲ್ಲಿಸಿದರು.

ಮೋದಿ ದಿನಚರಿ ಹೀಗಿದೆ

ಸೂರ್ಯೋದಯದ ವೇಳೆ ವಿವೇಕಾನಂದ ಶಿಲೆ ಸ್ಮಾರಕದಲ್ಲಿ ಮೋದಿ ಸೂರ್ಯ ಆರ್ಘ್ಯವನ್ನೂ ಅರ್ಪಿಸಿದರು. ಸೂರ್ಯನ ರೂಪದಲ್ಲಿ ಪ್ರಕಟವಾದ ಸರ್ವಶಕ್ತನಿಗೆ ನಮಸ್ಕರಿಸುವ ಆಧ್ಯಾತ್ಮಿಕ ರೀತಿಗೆ ‘ಸೂರ್ಯ ಅರ್ಘ್ಯ’ ಎಂದು ಕರೆಯಲಾಗುತ್ತದೆ. ಸಣ್ಣ ಪಾತ್ರೆಯಿಂದ ಸ್ವಲ್ಪ ನೀರನ್ನು ಸಮುದ್ರಕ್ಕೆ ಅರ್ಘ್ಯವಾಗಿ ಸುರಿದ ಪ್ರಧಾನಿ ಜಪಮಾಲೆ ಬಳಸಿ ಪ್ರಾರ್ಥಿಸುವುದು ವಿಡಿಯೊದಲ್ಲಿ ಸೆರೆಯಾಗಿದೆ. ಜತೆಗೆ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಮೋದಿ ಪುಷ್ಪ ನಮನ ಸಲ್ಲಿಸಿದರು. ಅವರು ಕೈಯಲ್ಲಿ ಜಪಮಾಲೆ ಹಿಡಿದು ಮಂಟಪದ ಸುತ್ತಲೂ ಹೆಜ್ಜೆ ಹಾಕಿದರು. ಆಧ್ಯಾತ್ಮಿಕ, ಧಾರ್ಮಿಕ ಕೈಂಕರ್ಯಗಳನ್ನು ಪೂರೈಸಿದ ನಂತರ ಅವರು ರಾಕ್ ಮೆಮೋರಿಯಲ್ ಮೆಟ್ಟಿಲುಗಳ ಮೇಲೆ ಸ್ವಲ್ಪ ಹೊತ್ತು ಕುಳಿತುಕೊಂಡರು.

ಮೋದಿ ಈ ಸ್ಥಳ ಆಯ್ಕೆ ಮಾಡಿದ್ದು ಯಾಕೆ?

ಪ್ರಧಾನಿ ನರೇಂದ್ರ ಮೋದಿ ಅವರು ವಿವೇಕಾನಂದ ಅವರನ್ನು ತಮ್ಮ ಜೀವನಕ್ಕೆ ಆದರ್ಶ ಎಂದು ಪರಿಗಣಿಸುತ್ತಾರೆ. ಸ್ವಾಮಿ ವಿವೇಕಾನಂದರು ಸ್ಥಾಪಿಸಿರುವ ರಾಮಕೃಷ್ಣ ಮಿಷನ್‌ನ ಸದಸ್ಯರೂ ಆಗಿದ್ದಾರೆ. ಕಳೆದ ವರ್ಷ ರಾಮಕೃಷ್ಣ ಮಿಷನ್‌ನ 125 ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ ಮೋದಿ, ಸ್ವಾಮಿ ವಿವೇಕಾನಂದರು ಭಾರತದ ಬಗ್ಗೆ ಕಂಡಿರುವ ಕನಸನ್ನು ನನಸು ಮಾಡಲು ಭಾರತವು ಕೆಲಸ ಮಾಡುವುದನ್ನು ಅವರು ಹೆಮ್ಮೆಯಿಂದ ನೋಡುತ್ತಿದ್ದಾರೆ ಎಂದು ನನಗೆ ಖಾತ್ರಿಯಿದೆ ಎಂದು ಹೇಳಿದ್ದರು. ಇದೇ ಕಾರಣಕ್ಕಾಗಿ ವಿವೇಕಾನಂದ ರಾಕ್‌ ಮೆಮೋರಿಯಲ್‌ನಲ್ಲಿ ಮೋದಿ ಅವರು ಧ್ಯಾನ ಮಾಡಲು ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.

ವಿವೇಕಾನಂದ ಬಂಡೆಯ ಮಹತ್ವ ಏನು?

ಹಿಂದೂ ಮಹಾಸಾಗರ, ಅರಬ್ಬೀ ಸಮುದ್ರ ಮತ್ತು ಬಂಗಾಳಕೊಲ್ಲಿಯ ಸಂಗಮದಲ್ಲಿರುವ ಭಾರತದ ದಕ್ಷಿಣ ತುದಿಯಾದ ಕನ್ಯಾಕುಮಾರಿಯ ವವತುರೈ ಕಡಲತೀರದಿಂದ ಸುಮಾರು 500 ಮೀಟರ್ ದೂರದಲ್ಲಿರುವ ಈ ದ್ವೀಪದ ಮೇಲೆ ಧ್ಯಾನ ಮಾಡುವಾಗ ಸ್ವಾಮಿ ವಿವೇಕಾನಂದರು ಅಭಿವೃದ್ಧಿ ಹೊಂದಿದ ಭಾರತದ ಕನಸು ಕಂಡಿದ್ದರು. ಭಾರತದಾದ್ಯಂತ ನಾಲ್ಕು ವರ್ಷಗಳ ಕಾಲ ಅಲೆದಾಡಿದ ಅವರು ದೈವಿಕ ಸ್ವಭಾವ, ಸತ್ಯ, ಶುದ್ಧತೆ, ಪ್ರಾಮಾಣಿಕತೆ, ಪರಿಶ್ರಮ, ಧೈರ್ಯ, ಶಕ್ತಿ ಮತ್ತು ಪ್ರೀತಿಯಲ್ಲಿ ನಂಬಿಕೆಯ ಇಡುವ ತತ್ತ್ವವನ್ನು ಸಾರಿದರು.

ಇದನ್ನೂ ಓದಿ: PM Narendra Modi: ಕನ್ಯಾಕುಮಾರಿಯಲ್ಲಿ ʼನಮೋʼ- ಪ್ರಧಾನಿ ಮೋದಿಯ 33 ವರ್ಷ ಹಳೆಯ ಫೊಟೋ ವೈರಲ್‌

Continue Reading

ಕ್ರೀಡೆ

Cristiano Ronaldo: ಕಿಂಗ್ಸ್ ಕಪ್ ಫೈನಲ್​ನಲ್ಲಿ ಸೋಲು; ಬಿಕ್ಕಿ ಬಿಕ್ಕಿ ಅತ್ತ ಕ್ರಿಸ್ಟಿಯಾನೊ ರೊನಾಲ್ಡೊ

Cristiano Ronaldo: ಬರೋಬ್ಬರಿ 1,700 ಕೋಟಿ ರೂ. (200 ಮಿಲಿಯನ್‌ ಯೂರೋಸ್‌) ಪಡೆದು ಕ್ರಿಸ್ಟಿಯಾನೊ ರೊನಾಲ್ಡೊ 2 ವರ್ಷಗಳ ಒಪ್ಪಂದ ಪ್ರಕಾರ ಅಲ್ ನಾಸ್ಸರ್ ತಂಡಕ್ಕೆ ಸೇರಿದ್ದರು. ತಂಡದ ಪರ ಇದುವರೆಗೆ ಒಟ್ಟು 35 ಗೋಲು ಬಾರಿಸಿದ್ದಾರೆ. ಆದರೆ ತಂಡವನ್ನು ಚಾಂಪಿಯನ್​ ಪಟ್ಟ ಅಲಂಕರಿಸುವಲ್ಲಿ ವಿಫಲರಾಗಿದ್ದಾರೆ.

VISTARANEWS.COM


on

Cristiano Ronaldo
Koo

ದುಬೈ: ಪೋರ್ಚುಗಲ್‌ನ ಸೂಪರ್‌ ಸ್ಟಾರ್‌ ಕ್ರಿಸ್ಟಿಯಾನೊ ರೊನಾಲ್ಡೊ(Cristiano Ronaldo) ಅವರು ತಾನು ಪ್ರತಿನಿಧಿಸುವ ಅಲ್​ ನಾಸ್ಸರ್​(Al Nassr) ತಂಡ ಕಿಂಗ್ಸ್ ಕಪ್ ಫೈನಲ್​ನಲ್ಲಿ(King’s Cup final) ಸೋಲು ಕಂಡ ಬೇಸರದಲ್ಲಿ ಮೈದಾನದಲ್ಲೇ ಬಿಕ್ಕಿ ಬಿಕ್ಕಿ ಅತ್ತ ಪ್ರಸಂಗ ನಡೆದಿದೆ. ರೊನಾಲ್ಡೊ ಕಣ್ಣೀರು ಸುರಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​(viral video) ಆಗಿದೆ.

ಮೇ 31, ಶುಕ್ರವಾರ ತಡರಾತ್ರಿ ನಡೆದಿದ್ದ ಕಿಂಗ್ಸ್ ಕಪ್ ಫೈನಲ್‌ನಲ್ಲಿ ಅಲ್ ನಾಸ್ಸರ್ ಮತ್ತು ಅಲ್ ಹಿಲಾಲ್(Al Hilal) ತಂಡಗಳು ಮುಖಾಮುಖಿಯಾಗಿದ್ದವು. ಅತ್ಯಂತ ಜಿದ್ದಾಜಿದ್ದಿನಿಂದ ಸಾಗಿದ ಈ ಪಂದ್ಯ 1-1 ಗೋಲುಗಳಿಂದ ಮುಕ್ತಾಯಕಂಡಿತು. ಹೆಚ್ಚುವರಿ ಸಮಯದ ಆಟದಲ್ಲಿಯೂ ಉಭಯ ತಂಡಗಳಿಂದ ಗೋಲು ಗಳಿಸಲು ಸಾಧ್ಯವಾಗದ ಕಾರಣ ಅಂತಿಮವಾಗಿ ವಿಜೇತರನ್ನು ನಿರ್ಧರಿಸಲು ಪೆನಾಲ್ಟಿ ಶೂಟೌಟ್‌ ಮೊರೆ ಹೋಗಲಾಯಿತು. ಶೂಟೌಟ್​ನಲ್ಲಿ ಅಲ್ ಹಿಲಾಲ್ ತಂಡ 5-4 ಗೋಲುಗಳ ಅಂತರದಿಂದ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿತು.

ತಂಡ ಸೋಲುತ್ತಿದ್ದಂತೆ ಕ್ರಿಸ್ಟಿಯಾನೊ ರೊನಾಲ್ಡೊ ಮೈದಾನದಲ್ಲೇ ಬಿದ್ದು ಅಳತೊಡಗಿದರು. ರೊನಾಲ್ಡೊ ಅವರು ಟರ್ಫ್‌ನ ಮೇಲೆ ಮಲಗಿ ಅಳುತ್ತಿದ್ದ ವೇಳೆ ಸಹ ಆಟಗಾರರು ಮತ್ತು ತಂಡದ ಮಾಲಿಕ ಕೂಡ ಆಗಮಿಸಿ ರೊನಾಲ್ಡೊರನ್ನು ಸಂತೈಸಿದ್ದಾರೆ. ರನ್ನರ್ಸ್-ಅಪ್ ಪದಕ ನೀಡುವ ವೇಳೆಯೂ ರೊನಾಲ್ಡೊ ಕಣ್ಣೀರು ಸುರಿಸುತ್ತಲೇ ಇದ್ದರು. ಈ ದೃಶ್ಯ ಕಂಡು ಅವರ ಅಭಿಮಾನಿಗಳ ಕಣ್ಣಲ್ಲಿಯೂ ನೀರು ಬರುವಂತೆ ಮಾಡಿತು.

ಇದನ್ನೂ ಓದಿ Cristiano Ronaldo: ಅಶ್ಲೀಲ ವರ್ತನೆ ತೋರಿದ ರೊನಾಲ್ಡೊಗೆ ಅಮಾನತು ಶಿಕ್ಷೆ ವಿಧಿಸಿದ ಸೌದಿ ಫುಟ್ಬಾಲ್​ ಫೆಡರೇಷನ್

ಬರೋಬ್ಬರಿ 1,700 ಕೋಟಿ ರೂ. (200 ಮಿಲಿಯನ್‌ ಯೂರೋಸ್‌) ಪಡೆದು ಕ್ರಿಸ್ಟಿಯಾನೊ ರೊನಾಲ್ಡೊ 2 ವರ್ಷಗಳ ಒಪ್ಪಂದ ಪ್ರಕಾರ ಅಲ್ ನಾಸ್ಸರ್ ತಂಡಕ್ಕೆ ಸೇರಿದ್ದರು. ತಂಡದ ಪರ ಇದುವರೆಗೆ ಒಟ್ಟು 35 ಗೋಲು ಬಾರಿಸಿದ್ದಾರೆ. ಆದರೆ ತಂಡವನ್ನು ಚಾಂಪಿಯನ್​ ಪಟ್ಟ ಅಲಂಕರಿಸುವಲ್ಲಿ ವಿಫಲರಾಗಿದ್ದಾರೆ.

67 ವರ್ಷಗಳ ಇತಿಹಾಸ ಹೊಂದಿರುವ ಅಲ್‌ ನಾಸ್ಸರ್​ ಸೌದಿ ಅರೇಬಿಯದ ಅತ್ಯಂತ ಶ್ರೀಮಂತ ಫ‌ುಟ್‌ಬಾಲ್‌ ಕ್ಲಬ್‌. 9 ಸಲ ಚಾಂಪಿಯನ್ಸ್‌ ಲೀಗ್‌ ಪ್ರಶಸ್ತಿ ಜಯಿಸಿದೆ. 6 ಸಲ ಕಿಂಗ್ಸ್‌ ಕಪ್‌ 3 ಸಲ ಕ್ರೌನ್‌ ಪ್ರಿನ್ಸೆಸ್‌ ಕಪ್‌, 3 ಸಲ ಫೆಡರೇಶನ್‌ ಕಪ್‌,2 ಸಲ ಸೌದಿ ಸೂಪರ್‌ ಕಪ್‌, ಚಾಂಪಿಯನ್‌ ಆಗಿ ಮೂಡಿಬಂದ ಹೆಗ್ಗಳಿಕೆ ಈ ಕ್ಲಬ್‌ನದ್ದು.

Continue Reading

ಕ್ರೀಡೆ

Shubman Gill: ಕಿರುತೆರೆ​ ನಟಿಯೊಂದಿಗೆ ಶುಭಮನ್​ ಗಿಲ್ ಮದುವೆ?; ಸ್ವತಃ ಸ್ಪಷ್ಟನೆ ನೀಡಿದ ನಟಿ

Shubman Gill: ಸಾಮಾಜಿಕ ಮಾಧ್ಯಮಗಳ ವರದಿ ಪ್ರಕಾರ ಶುಭಮನ್​ ಗಿಲ್​ ಮತ್ತು ರಿದ್ಧಿಮಾ ಪಂಡಿತ್ ಕೆಲವು ವರ್ಷಗಳಿಂದ ಗುಟ್ಟಾಗಿ ಪ್ರೀತಿಸುತ್ತಿದ್ದರು. ಈ ಜೋಡಿ ಇದೇ ಡಿಸೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದೆ ಎಂದು ಹೇಳಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ನಟಿ, ತಾನು ಶುಭ್‌ಮನ್ ಗಿಲ್ ಅವರನ್ನು ಮದುವೆಯಾಗುತ್ತಿಲ್ಲ ಎಂದು ಹೇಳಿದ್ದಾರೆ.

VISTARANEWS.COM


on

Shubman Gill
Koo

ಮುಂಬಯಿ: ಟೀಮ್​ ಇಂಡಿಯಾದ ಸ್ಟಾರ್​​ ಯುವ ಆಟಗಾರ ಶುಭಮನ್​ ಗಿಲ್(Shubman Gill)​ ಅವರು ಶೀಘ್ರದಲ್ಲೇ ವಿವಾಹವಾಗಲಿದ್ದಾರೆ ಎನ್ನುವ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಗಿಲ್​ ಮದುವೆಯಾಗುತ್ತಿರುವುದು ಸಾರಾ ತೆಂಡೂಲ್ಕರ್(sara tendulkar)​ ಅಲ್ಲ ಬದಲಾಗಿ ಕಿರುತೆರೆಯ ಸುಂದರಿ ರಿದ್ಧಿಮಾ ಪಂಡಿತ್ ಅವರನ್ನು ವರಿಸಲಿದ್ದಾರೆ ಎಂದು ವರದಿಯಾಗಿದೆ. ಇದಕ್ಕೆ ರಿದ್ಧಿಮಾ ಪಂಡಿತ್(Ridhima Pandit) ಸ್ಪಷ್ಟನೆಯನ್ನು ಕೂಡ ನೀಡಿದ್ದಾರೆ.

ಸಾಮಾಜಿಕ ಮಾಧ್ಯಮಗಳ ವರದಿ ಪ್ರಕಾರ ಶುಭಮನ್​ ಗಿಲ್​ ಮತ್ತು ರಿದ್ಧಿಮಾ ಪಂಡಿತ್ ಕೆಲವು ವರ್ಷಗಳಿಂದ ಗುಟ್ಟಾಗಿ ಪ್ರೀತಿಸುತ್ತಿದ್ದರು. ಈ ಜೋಡಿ ಇದೇ ಡಿಸೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದೆ ಎಂದು ಹೇಳಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ನಟಿ, ತಾನು ಶುಭ್‌ಮನ್ ಗಿಲ್ ಅವರನ್ನು ಮದುವೆಯಾಗುತ್ತಿಲ್ಲ. ಈ ವದಂತಿಗಳಲ್ಲಿ ಯಾವುದೇ ಸತ್ಯವಿಲ್ಲ. ನನ್ನ ಜೀವನದಲ್ಲಿ ಈ ರೀತಿಯ ಮಹತ್ವದ ಘಟನೆ ನಡೆದರೆ ನಾನೇ ಮುಂದೆ ಬಂದು ಸುದ್ದಿ ಪ್ರಕಟಿಸುತ್ತೇನೆ ಎಂದು ಹೇಳುವ ಮೂಲಕ ಈ ಸುಳ್ಳು ಸುದ್ದಿಯನ್ನು ತಳ್ಳಿಹಾಕಿದ್ದಾರೆ.

ಈ ಜೋಡಿ ಮದುವೆಯಾಗುತ್ತಾರೆ ಎಂಬ ಸುಳ್ಳು ಸುದ್ದಿ ಹಬ್ಬಲು ಕಾರಣವೆಂದರೆ, ಕೆಲ ದಿನಗಳ ಹಿಂದೆ ರಿದ್ಧಿಮಾ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ಮದುವೆಯ ಕುರಿತಾದ ವಿಡಿಯೊವೊಂದನ್ನು ಹಾಕಿದ್ದರು. ಇದೇ ವೇಳೆ ಕೆಲ ನೆಟ್ಟಿಗರು ಗಿಲ್ ಅವರ ಹೆಸರನ್ನು ಪ್ರಸ್ತಾಪಿಸಿದ್ದರು. ಹೀಗಾಗಿ ಗಿಲ್​ ಮತ್ತು ರಿದ್ಧಿಮಾ ಮದುವೆಯಾಗುತ್ತಾರೆ ಎನ್ನುವ ಸುದ್ದಿ ಹರಡಿತು.

ಇದನ್ನೂ ಓದಿ Shubman Gill: ಶತಕದ ಐಪಿಎಲ್​ ಪಂದ್ಯವನ್ನಾಡಲು ಸಜ್ಜಾದ ಗಿಲ್​; ಸಾಧನೆ ಹೇಗಿದೆ?

ಸಾರಾ ತೆಂಡೂಲ್ಕರ್ ಮತ್ತು ಶುಭಮನ್​ ಗಿಲ್​(Gill And Sara) ಇಬ್ಬರು ಕದ್ದು ಮುಚ್ಚಿ ಡೇಟಿಂಗ್(sara tendulkar and shubman gill relationship)​ ನಡೆಸುತ್ತಿದ್ದಾರೆ, ಇವರಿಬ್ಬರು ಪ್ರೀತಿ ಕೂಡ ಮಾಡುತ್ತಿದ್ದಾರೆ ಎಂಬ ಸುದ್ದಿ ಈಗಾಗಲೇ ಹಲವು ಬಾರಿ ಕೇಳಿಬಂದಿತ್ತು.  ಆದಾಗ್ಯೂ, ಇಬ್ಬರೂ ವದಂತಿಯನ್ನು ನಿರಾಕರಿಸಿಲ್ಲ ಅಥವಾ ದೃಢಪಡಿಸಿಲ್ಲ. ಪಾಪರಾಜಿಗಳು ಇಬ್ಬರು ಸೆಲೆಬ್ರಿಟಿಗಳನ್ನು ಸಾರ್ವಜನಿಕವಾಗಿ ಸಾಕಷ್ಟು ಬಾರಿ ಪ್ರಶ್ನಿಸಿದ್ದಾರೆ.

ರೆಸ್ಟೋರೆಂಟ್​ನಲ್ಲಿ ಜತೆಯಾಗಿ ಕಾಣಿಸಿಕೊಂಡಿದ್ದ ಸಾರಾ-ಗಿಲ್​

ಏಕದಿನ ವಿಶ್ವಕಪ್​ ಪಂದ್ಯವನ್ನಾಡಲು ಟೀಮ್​ ಇಂಡಿಯಾದ ಆಟಗಾರರು ಮುಂಬೈಗೆ ಬಂದಿದ್ದ ವೇಳೆ ಶುಭಮನ್​ ಗಿಲ್​ ಮತ್ತು ಸಾರಾ ಅವರು ರೆಸ್ಟೋರೆಂಟ್​ನಲ್ಲಿ ಜತೆಯಾಗಿ ಕಾಣಿಸಿಕೊಂಡಿದ್ದರು. ಇಬ್ಬರು ಜತೆಯಾಗಿ ಕಾಣಿಸಿಕೊಂಡ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ರೆಸ್ಟೋರೆಂಟ್‌ನಿಂದ ಸಾರಾ ಜತೆಗೆ ಬರುತ್ತಿರುವುದನ್ನು ಪಾಪರಾಜಿಗಳು ಕಂಡ ತಕ್ಷಣ ಶುಭಮನ್​ ಗಿಲ್​ ತನಗೇನು ತಿಳಿಯದವರಂತೆ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಇದೊಂದು ಅಚಾನಕ್ ಮುಖಾಮುಖಿ ಎಂಬಂತೆ ತಮ್ಮ ಪತವನ್ನು ಬದಲಿಸಿ ಒಮ್ಮೆ ಅತ್ತಿಂದಿತ್ತ ಇತ್ತಿಂದತ್ತ ನಡೆದಿದ್ದರು. ಗಿಲ್ ಕ್ರಿಕೆಟ್​ ಆಡುವ ವೇಳೆ ಹೆಚ್ಚಾಗಿ ಸಾರಾ ಕೂಡ ಪ್ರೇಕ್ಷಕರ ಸ್ಟ್ಯಾಂಡ್​ನಲ್ಲಿ ಕಾಣಿಸಿಕೊಳ್ಳುತ್ತಾರೆ. ಅಲ್ಲದೆ ಗಿಲ್​ ಉತ್ತಮವಾಗಿ ಆಡಿದಾಗ ಚಪ್ಪಾಳೆ ತಟ್ಟುತ್ತಾ, ಔಟಾದಾಗ ಸಪ್ಪೆ ಮೋರೆ ಹಾಕಿ ಕುಳಿತ ಹಲವು ಫೋಟೊ ಮತ್ತು ವಿಡಿಯೊ ಈಗಾಗಲೇ ವೈರಲ್​ ಕೂಡ ಆಗಿದೆ.

Continue Reading
Advertisement
Electric shock Electronic City
ಬೆಂಗಳೂರು ಗ್ರಾಮಾಂತರ12 mins ago

Electric Shock: ಪಲ್ಲಕ್ಕಿ ಹೊತ್ತಿದ್ದ ಟ್ರ್ಯಾಕ್ಟರ್‌ಗೆ ಪ್ರವಹಿಸಿದ ವಿದ್ಯುತ್‌; ಕ್ಷಣಾರ್ಧದಲ್ಲೇ ಇಬ್ಬರು ಸುಟ್ಟು ಕರಕಲು

Udupi Pocso case
ಪ್ರಮುಖ ಸುದ್ದಿ14 mins ago

Udupi Pocso case: ಉಡುಪಿಯಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಕೇಸ್‌; 8-9 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ!

Aaron Jones
ಕ್ರಿಕೆಟ್30 mins ago

Aaron Jones: 17 ವರ್ಷಗಳ ಹಿಂದಿನ ಟಿ20 ವಿಶ್ವಕಪ್​ ದಾಖಲೆ ಸರಿಗಟ್ಟಿದ ಯುಎಸ್​ಎ ಬ್ಯಾಟರ್​ ಆರೋನ್ ಜೋನ್ಸ್

Indian 2 Audio Launch Kamal Haasan Simbu Kajal Aggarwal
ಕಾಲಿವುಡ್34 mins ago

Indian 2 Audio Launch: ಅದ್ಧೂರಿಯಾಗಿ ನೆರವೇರಿತು ʼಇಂಡಿಯನ್‌ 2ʼ ಸಿನಿಮಾದ ಆಡಿಯೊ ಲಾಂಚ್‌!

Traffic Advisory
Lok Sabha Election 202442 mins ago

Traffic Advisory : ಲೋಕಸಭೆ ಎಲೆಕ್ಷನ್‌ ಕೌಂಟಿಂಗ್‌; ಬೆಂಗಳೂರಲ್ಲಿ ಎಲ್ಲೆಲ್ಲಿ ವಾಹನ ನಿರ್ಬಂಧ, ಮಾರ್ಗ ಬದಲು?

education News
ಬೆಂಗಳೂರು54 mins ago

Education News : ನೀಟ್ ಪರೀಕ್ಷೆ ಬಳಿಕ ಎಂಜಿನಿಯರ್ ಸೀಟು ಹಂಚಿಕೆ; 1.24 ಲಕ್ಷ ಸೀಟುಗಳು ಲಭ್ಯ, ಆನ್ ಲೈನ್ ಪ್ರಕ್ರಿಯೆ

Sushant Singh Rajput's sister cries as she visits Kedarnath
ಬಾಲಿವುಡ್59 mins ago

Sushant Singh: ಕೇದಾರನಾಥಕ್ಕೆ ಭೇಟಿ ಕೊಟ್ಟಾಗ ಸುಶಾಂತ್ ಸಿಂಗ್ ನೆನೆದು ಕಣ್ಣೀರಿಟ್ಟ ಸಹೋದರಿ!

PM Narendra Modi
ದೇಶ1 hour ago

PM Narendra Modi: ಎಕ್ಸಿಟ್‌ ಪೋಲ್‌ ರಿಸಲ್ಟ್‌ ಬೆನ್ನಲ್ಲೇ ಪ್ರಧಾನಿ ಮೋದಿ ಬ್ಯಾಕ್‌ ಟು ಬ್ಯಾಕ್‌ ಮೀಟಿಂಗ್‌

Muthyala Maduvu Waterfalls
ಪ್ರವಾಸ1 hour ago

Muthyala Maduvu Waterfalls: ಜಲರಾಶಿಯಿಂದ ತುಂಬಿಕೊಂಡು ಕಣ್ಮನ ಸೆಳೆಯುತ್ತಿರುವ ಮುತ್ಯಾಲಮಡುವು ಜಲಪಾತ

CAN vs USA
ಕ್ರೀಡೆ1 hour ago

CAN vs USA: ಕೆನಡಾ ಪರ ಟಿ20 ವಿಶ್ವಕಪ್​ ಪಂದ್ಯವಾಡಿದ ದಾವಣಗೆರೆಯ ಶ್ರೇಯಸ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು21 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು7 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌