ವಿಸ್ತಾರ ಸಂಪಾದಕೀಯ: ರಾವಿ ನದಿಗೆ ಭಾರತದ ಅಣೆಕಟ್ಟು ದಿಟ್ಟ ಹೆಜ್ಜೆ - Vistara News

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ರಾವಿ ನದಿಗೆ ಭಾರತದ ಅಣೆಕಟ್ಟು ದಿಟ್ಟ ಹೆಜ್ಜೆ

Vistara Editorial: 1960ರಲ್ಲಿ ಸಿಂಧೂ ನದಿ ನೀರು ಹಂಚಿಕೆ ಕುರಿತು ಭಾರತ ಹಾಗೂ ಪಾಕಿಸ್ತಾನವು ಒಪ್ಪಂದ ಮಾಡಿಕೊಂಡಿವೆ. ಭಾರತದ ಹಲವು ನದಿಗಳ ನೀರನ್ನು ಪಾಕಿಸ್ತಾನ ಬಳಸುತ್ತಿದ್ದು ಅದಕ್ಕೀಗ ಕಡಿವಾಣ ಹಾಕಲಾಗುತ್ತಿದೆ. ಅದರ ಭಾಗವಾಗಿಯೇ ರಾವಿ ನದಿ ಅಣೆಕಟ್ಟು ನಿರ್ಮಾಣಗೊಂಡಿದೆ.

VISTARANEWS.COM


on

Vistara Editorial, India built dam to Ravi River, Water crisis for Pakistan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೂರು ದಶಕಗಳಿಂದಲೂ ನನೆಗುದಿಗೆ ಬಿದ್ದಿದ್ದ, ಶಾಹ್‌ಪುರ ಕಂಡಿ ಅಣೆಕಟ್ಟು (Shahpur Kandi dam) ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ರಾವಿ ನದಿಯಿಂದ (Ravi River Water) ಪಾಕಿಸ್ತಾನಕ್ಕೆ ಹರಿಯುತ್ತಿದ್ದ ನೀರನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ. ಇದರಿಂದ ಪಾಕಿಸ್ತಾನದ ಕೃಷಿಗೆ ಭಾರಿ ಪೆಟ್ಟು ಬೀಳುವ ಜತೆಗೆ ಭಾರತದ ಲಕ್ಷಾಂತರ ರೈತರಿಗೆ ಈ ನದಿಯ ನೀರಿನಿಂದ ಹೆಚ್ಚಿನ ಪ್ರಮಾಣದಲ್ಲಿ ಅನುಕೂಲವಾಗಲಿದೆ. ಇಚ್ಛಾಶಕ್ತಿ ಪ್ರದರ್ಶಿಸಿ ಅಣೆಕಟ್ಟೆ ನಿರ್ಮಾಣ ಮಾಡಿದ ಕೇಂದ್ರ ಸರ್ಕಾರದ ಕ್ರಮ ಅಭಿನಂದನಾರ್ಹವಾಗಿದೆ(Vistara Editorial).

ಜಮ್ಮು ಗಡಿ ಭಾಗದಲ್ಲಿ ಶಾಹ್‌ಪುರ ಕಂಡಿ ಅಣೆಕಟ್ಟೆಯಿಂದ ಜಮ್ಮು-ಕಾಶ್ಮೀರ ಹಾಗೂ ಪಂಜಾಬ್‌ನ 32 ಸಾವಿರ ಹೆಕ್ಟೇರ್‌ ಜಮೀನುಗಳಿಗೆ ನೀರು ಹರಿಸಬಹುದಾಗಿದೆ. ಸುಮಾರು 1,150 ಕ್ಯುಸೆಕ್‌ ನೀರು ಉಳಿತಾಯವಾಗುವುದರಿಂದ ಲಕ್ಷಾಂತರ ರೈತರು ಉತ್ತಮ ಬೆಳೆ ಬೆಳೆಯಲು ಸಹಕಾರಿಯಾಗಲಿದೆ. ಅದರಲ್ಲೂ, ಜಮ್ಮು-ಕಾಶ್ಮೀರದ ಕಠುವಾ, ಸಾಂಬಾ ರೈತರು ಅಣೆಕಟ್ಟಿನ ಲಾಭ ಪಡೆಯಲಿದ್ದಾರೆ. ರಾವಿ ನದಿಗೆ ಅಡ್ಡಲಾಗಿ ಅಣೆಕಟ್ಟೆ ಕಟ್ಟಬೇಕು ಎಂಬ ಯೋಜನೆಯು ಹಲವು ಕಾರಣಗಳಿಂದಾಗಿ ನನೆಗುದಿಗೆ ಬಿದ್ದಿತ್ತು. 1995ರಲ್ಲಿ ಪಿ.ವಿ. ನರಸಿಂಹರಾವ್‌ ಅವರು ಪ್ರಧಾನಿಯಾಗಿದ್ದಾಗ ಅಣೆಕಟ್ಟೆ ಕಟ್ಟುವ ಯೋಜನೆ ರೂಪಿಸಲಾಗಿತ್ತು. ಆದರೆ, ಹತ್ತಾರು ಅಡೆತಡೆಗಳಿಂದಾಗಿ ಯೋಜನೆಯು ನನೆಗುದಿಗೆ ಬಿದ್ದಿತ್ತು. 2018ರಲ್ಲಿ ಅಣೆಕಟ್ಟೆ ನಿರ್ಮಾಣ ಕಾಮಗಾರಿಯನ್ನು ಆರಂಭಿಸಲಾಯಿತು ಮತ್ತು ಆರು ವರ್ಷಗಳಲ್ಲಿಯೇ ಕಾಮಗಾರಿ ಪೂರ್ಣಗೊಂಡಿದೆ. ಈಗ ನದಿಯ ನೀರು ಪಾಕಿಸ್ತಾನಕ್ಕೆ ಹರಿಯದೆ, ಭಾರತದ ರೈತರು ಗದ್ದೆಗಳಿಗೆ ಹರಿಯುತ್ತಿದೆ.

ಅಣೆಕಟ್ಟೆಯು ರೈತರಿಗೆ ಅನುಕೂಲವಾಗುವ ಜತೆಗೆ ಜಲವಿದ್ಯುತ್‌ ಉತ್ಪಾದನೆ ಯೋಜನೆಯ ಜಾರಿಗೂ ಭಾರಿ ಅನುಕೂಲವಾಗಲಿದೆ. ಇದಕ್ಕೂ ಮೊದಲು ರಾವಿ ನದಿಯ ನೀರು ಹಳೆಯ ಲಖನ್‌ಪುರ ಡ್ಯಾಮ್‌ನಿಂದ ಪಾಕಿಸ್ತಾನದ ಕಡೆ ಹರಿಯುತ್ತಿತ್ತು. ಈಗ ಮಾಧೋಪುರ ಕಾಲುವೆ ಮೂಲಕ ಜಮ್ಮು-ಕಾಶ್ಮೀರ ಹಾಗೂ ಪಂಜಾಬ್‌ ಜಮೀನುಗಳಿಗೆ ನೀರು ಹರಿಸಲಾಗುತ್ತದೆ. 1960ರಲ್ಲಿ ಸಿಂಧೂ ನದಿ ನೀರು ಹಂಚಿಕೆ ಕುರಿತು ಭಾರತ ಹಾಗೂ ಪಾಕಿಸ್ತಾನವು ಒಪ್ಪಂದ ಮಾಡಿಕೊಂಡಿವೆ. ಅದರಂತೆ, ಭಾರತದ ಹಲವು ನದಿಗಳ ನೀರನ್ನು ಪಾಕಿಸ್ತಾನ ಬಳಸುತ್ತಿದೆ. ಈ ಹಿಂದಿನ ಆಡಳಿತದಲ್ಲಿ ತೋರಿದ ನಿರ್ಲಕ್ಷ್ಯ ಮತ್ತು ಪಾಕಿಸ್ತಾನ ಜತೆಗಿನ ಸಂಬಂಧ ದೃಷ್ಟಿಯಿಂದಾಗಿ ಒಪ್ಪಂದದ ಅನ್ವಯ ದೊರೆತ ನೀರನ್ನು ಭಾರತ ಬಳಸುತ್ತಿರಲಿಲ್ಲ. ಆದರೆ, ಈಗ ನ್ಯಾಯಯುತವಾಗಿ ನಮಗೆ ದೊರೆತ ನೀರನ್ನು ಬಳಸಿಕೊಳ್ಳುವ ಪ್ರಯತ್ನದಲ್ಲಿ ಭಾರತವು ಯಶಸ್ವಿಯಾಗಿದೆ. ಆ ಮೂಲಕ, ಪಾಕಿಸ್ತಾನಕ್ಕೆ ಸ್ಪಷ್ಟ ಎಚ್ಚರಿಕೆಯನ್ನೂ ರವಾನಿಸಿದೆ. ನೆರೆಯ ರಾಷ್ಟ್ರಕ್ಕೆ ಯಾವೆಲ್ಲ ಹಂತದಲ್ಲಿ, ಯಾವೆಲ್ಲ ವಲಯದಲ್ಲಿ ಪೆಟ್ಟು ನೀಡಲು ಸಾಧ್ಯವೋ ಅಲ್ಲೆಲ್ಲ ಭಾರತವು ಯಶಸ್ಸು ಸಾಧಿಸುತ್ತಿದೆ. ಇದು ಭಾರತೀಯರಿಗೆ ಹೆಮ್ಮೆ ವಿಷಯವಾಗಿದೆ.

ಭಾರತ ಮತ್ತು ಪಾಕಿಸ್ತಾನಗಳೆರಡೂ ಏಕಕಾಲಕ್ಕೆ ಸ್ವಾತಂತ್ರ್ಯವನ್ನು ಪಡೆದುಕೊಂಡು, 75 ವಸಂತಗಳನ್ನು ಕಂಡಿವೆ. ಭಾರತವು ಈಗ ಜಾಗತಿಕ ಮಟ್ಟದಲ್ಲಿ ಯಾವ ಸ್ಥಾನದಲ್ಲಿದೆ ಮತ್ತು ಪಾಕಿಸ್ತಾನ ಯಾವ ಸ್ಥಾನದಲಿಲ್ಲ ಎಂದು ನೋಡಿದರೆ, ಉಭಯ ರಾಷ್ಟ್ರಗಳ ಮಧ್ಯೆ ಅಜಗಜಾಂತರವಿದೆ. ಯಾವ ವಿಷಯದಲ್ಲೂ, ಯಾವ ಕ್ಷೇತ್ರದಲ್ಲೂ ಇಂದು ಪಾಕಿಸ್ತಾನವು ಭಾರತದ ಸನಿಹದಲ್ಲೂ ಇಲ್ಲ. ಪ್ರಗತಿಯನ್ನೇ ಮುಖ್ಯ ಧ್ಯೇಯವಾಗಿಸಿಕೊಂಡು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರೀತಿ-ವಿಶ್ವಾಸಗಳಿಂದ ಮುನ್ನಡೆದ ಪರಿಣಾಮ ಇಂದು ಭಾರತವು ಜಗತ್ತಿನ ಅಗ್ರಮಾನ್ಯ ರಾಷ್ಟ್ರವಾಗಿ ಬೆಳೆಯುತ್ತಿದೆ. ಆರ್ಥಿಕವಾಗಿ ಐದನೇ ಅತಿದೊಡ್ಡ ರಾಷ್ಟ್ರವಾಗಿ ಉದಯಿಸಿದೆ. ಎಲ್ಲ ಕ್ಷೇತ್ರಗಳಲ್ಲಿ ಇಂದು ಭಾರತೀಯರ ಪಾರುಪತ್ಯವಿದೆ. ಆದರೆ, ಈ ವಿಷಯದಲ್ಲಿ ಪಾಕಿಸ್ತಾನವು ಬಹಳ ಹಿಂದಿದೆ.

ದ್ವೇಷವನ್ನು ತುಂಬಿಕೊಂಡು, ಧಾರ್ಮಿಕ ಸಂಕುಚಿತವನ್ನೇ ಮುಂದೆ ಮಾಡಿಕೊಂಡ ಬಂದ ಪಾಕಿಸ್ತಾನವು ಆರ್ಥಿಕ ಸಂಕಟದ ಸ್ಥಿತಿಯಲ್ಲಿದೆ. ಅಲ್ಲಿಯ ಜನರ ಪರಿಸ್ಥಿತಿ ಈಗ ಚಿಂತಾಜನಕವಾಗಿದೆ. ಹೊಟ್ಟಿಗೆ ಹಿಟ್ಟಿರದಿದ್ದರೂ ಜುಟ್ಟಿಗೆ ಮಲ್ಲಿಗೆ ಎನ್ನುವಂತೆ, ಹಸಿದ ತನ್ನ ಜನರ ಹೊಟ್ಟೆಯನ್ನು ತುಂಬಿಸುವ ಬದಲು, ಭಾರತದ ಜತೆಗೆ ಶಸ್ತ್ರಾಸ್ತ್ರ ಪೈಪೋಟಿಗೆ ಇಳಿದು ಪಾಕಿಸ್ತಾನ ಪಾತಾಳಕ್ಕೆ ಕುಸಿದಿದೆ. ಭಾರತದ ವಿರುದ್ಧ ಉಗ್ರರಿಗೆ ನೆಲೆ ಒದಗಿಸಿ, ಈಗ ಅದರ ದುಷ್ಪರಿಣಾಮವನ್ನು ಎದುರಿಸುತ್ತಿದೆ. ಸ್ನೇಹಿತರನ್ನು ಬದಲಿಸಬಹುದು ಹೊರತ ನೆರೆ ಹೊರೆಯವರೆನ್ನಲ್ಲ ಎಂಬ ಮಾತಿನಂತೆ ಪಾಕಿಸ್ತಾನವು ಭಾರತದ ಜತೆಗೆ ಸ್ನೇಹದಿಂದಲೇ ವರ್ತಿಸಿದ್ದರೆ, ನದಿ ನೀರು ಹಂಚಿಕೆ, ಕಾಶ್ಮೀರ ವಿಷಯ ಸೇರಿದಂತೆ ಎಲ್ಲ ಸಮಸ್ಯೆಗಳೂ ಬಗೆಹರಿಯುತ್ತಿದ್ದವು. ಆದರೆ, ಪಾಕಿಸ್ತಾನ ಆರಿಸಿಕೊಂಡ ಹಾದಿಯು ಭಾರತದ ಹಾದಿಗಿಂತಲೂ ಭಿನ್ನ ಮತ್ತು ವಿಧ್ವಂಸಕಕಾರಿಯಾಗಿತ್ತು. ಆದರೆ, ಭಾರತ ಮಾತ್ರ ಪ್ರಜಾಸತ್ತಾತ್ಮಕ ಹಾದಿಯಲ್ಲಿ ನಡೆದ ತನ್ನ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳುವಲ್ಲಿ ಈಗ ಯಶಸ್ವಿಯಾಗುತ್ತಿದೆ. ತನ್ನ ಹಕ್ಕುಗಳನ್ನು ಯಾರ ಮುಲಾಜಿಲ್ಲದೇ ಪಡೆದುಕೊಳ್ಳುತ್ತಿದೆ. ಇದಕ್ಕೆ ರಾವಿ ನದಿಗೆ ಕಟ್ಟಲಾದ ಅಣೆಕಟ್ಟೆ ಹೊಸ ಸಾಕ್ಷಿಯಾಗಿದೆ. ಪಾಕಿಸ್ತಾನವು ಇನ್ನಾದರೂ ಭಾರತದ ಶಕ್ತಿಯನ್ನು ಅರಿತಕೊಂಡು ಮುನ್ನಡೆಯಲಿ. ಇಲ್ಲದಿದ್ದರೆ, ಅದಕ್ಕೆ ಎಲ್ಲ ನಿಟ್ಟಿನಿಂದಲೂ ಸೋಲೇ ಸಿಗಲಿದೆ.

ಈ ಸುದ್ದಿಯನ್ನೂ ಓದಿ: ವಿಸ್ತಾರ ಸಂಪಾದಕೀಯ: ಬೆಂಗಳೂರಿನ ಜಲ ದಾಹ ನೀಗಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ರಾಜ್ಯ ಪ್ರಾಥಮಿಕ- ಪ್ರೌಢಶಾಲಾ ಶಿಕ್ಷಣದ ಪರಿಸ್ಥಿತಿ ಸರಿಹೋಗುವುದೆಂದು?

SSLC Result: ಶಾಲೆಗಳನ್ನು ಪ್ರಯೋಗಶಾಲೆಗಳಂತೆ ನೋಡುವ ಮನಸ್ಥಿತಿ ಪ್ರತಿಯೊಂದು ಸರಕಾರದ್ದಾಗಿದೆ. ಇದಕ್ಕೆ ಇತ್ತೀಚೆಗೆ ಪದವಿ ಶಿಕ್ಷಣದಲ್ಲಿ ಮಾಡುತ್ತಿರುವ ಬದಲಾವಣೆಯೇ ದೃಷ್ಟಾಂತ. ನಾಲ್ಕು ವರ್ಷಗಳ ಪದವಿಯನ್ನು ಮತ್ತೆ ಮೂರು ವರ್ಷಕ್ಕೆ ಇಳಿಸಿರುವ ಈ ಕ್ರಮದಿಂದಾಗಿ, ರಾಜ್ಯ ಶಿಕ್ಷಣ ವ್ಯವಸ್ಥೆಯು ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಪ್ರತ್ಯೇಕತೆ ಕಾಪಾಡಿಕೊಂಡು, ಎನ್‌ಇಪಿಯಿಂದ ದೊರೆಯಬಹುದಾದ ಲಾಭಗಳಿಂದ ವಂಚಿತವಾಗಲಿದೆ.

VISTARANEWS.COM


on

SSLC Result
Koo

ಈ ವರ್ಷದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಂದ ಬಳಿಕ, ಊಹಿಸಿದಂತೆಯೇ ಆಗಿದೆ. ಕರ್ನಾಟಕದಲ್ಲಿ ಶಾಲಾ ಶಿಕ್ಷಣದ ಗುಣಮಟ್ಟದ ಬಗ್ಗೆ ಚರ್ಚೆ ಎದ್ದಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿಯಿಂದ ಪ್ರಸ್ತುತ ಪ್ರಾಥಮಿಕ ಹಾಗೂ ಪ್ರೌಢ ಹಂತದಲ್ಲಿ ಕಲಿಕೆಯ ಗುಣಮಟ್ಟ ಕುಸಿದಿದೆ (SSLC Result) ಎಂದು ಖಾಸಗಿ ಶಾಲಾ ಒಕ್ಕೂಟ (ಕ್ಯಾಮ್ಸ್) ಅಸಮಾಧಾನ ಹೊರಹಾಕಿದೆ. ಸರ್ಕಾರಿ ಶಾಲಾ ಶಿಕ್ಷಣದ ಬಗ್ಗೆ ಹೆತ್ತವರು ಯಾವ ಅಭಿಪ್ರಾಯ ಹೊಂದಿದ್ದಾರೆ ಎಂಬುದನ್ನು ಸಂಕಲಿಸಿದರೆ ದಾರುಣ ಚಿತ್ರ ಸಿಗಬಹುದು; ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಹೆತ್ತವರು ಕೆಳಮಧ್ಯಮ ವರ್ಗದ, ಕೆಳವರ್ಗದವರಾದುದರಿಂದ ಅವರಿಗೆ ಬೇರೆ ದಾರಿಯಿಲ್ಲ. ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಳಿಸುತ್ತಿರುವವರು, ಅಲ್ಲಿಗೆ ಕಳಿಸುತ್ತಿರುವುದೇಕೆ ಎಂದು ಕೇಳಿದರೆ ಸರ್ಕಾರಿ ಶಿಕ್ಷಣದ ಕಳಪೆ ಗುಣಮಟ್ಟದತ್ತ ಬೆಟ್ಟು ಮಾಡುತ್ತಾರೆ. ಆದರೆ ಇದೂ ಪೂರ್ತಿ ಸತ್ಯವಲ್ಲ. ಯಾಕೆಂದರೆ ಹಲವಾರು ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಇದು ಒಟ್ಟಾರೆಯಾಗಿ ರಾಜ್ಯ ಶೈಕ್ಷಣಿಕ ಪಠ್ಯದ ಸಮಸ್ಯೆಗಳತ್ತ ಬೆಟ್ಟು ಮಾಡುತ್ತದೆ. ಒಟ್ಟಾರೆಯಾಗಿ ಪಠ್ಯದ ಸಮಸ್ಯೆ ಹಾಗೂ ಕಲಿಕೆಯ ಸಮಸ್ಯೆಗಳು ಒಗ್ಗೂಡಿ ಇಂದಿನ ಈ ಸ್ಥಿತಿಗೆ ತಂದಿವೆ.

ಸರ್ಕಾರ ಶಾಲಾ ಶಿಕ್ಷಣದ ಗುಣಮಟ್ಟ ಹೆಚ್ಚಿಸುವಲ್ಲಿ ಸರ್ಕಾರ ಯಾವುದೇ ಪರಿಣಾಮಕಾರಿ ರೂಪುರೇಷೆಗಳನ್ನು ರೂಪಿಸುತ್ತಿಲ್ಲ. ಬದಲಿಗೆ ಶಿಕ್ಷಣ ಇಲಾಖೆ ದಿನಕ್ಕೊಂದು ನಿಯಮಗಳನ್ನು ಮಾಡುತ್ತಿದೆ. ಆದರೆ ತಾವೇ ನಡೆಸುವ ಸರ್ಕಾರಿ ಶಾಲೆಗಳಲ್ಲಿ ಅನುಷ್ಠಾನ ಮಾಡದೇ, ಕೇವಲ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳಿಗೆ ಮಾತ್ರ ನಿಯಮ ಎಂಬಂತೆ ವರ್ತಿಸುತ್ತಿದೆ ಎಂದು ಶಾಲಾ ಒಕ್ಕೂಟ ಆಕ್ರೋಶ ಹೊರಹಾಕಿದೆ. ಇದೂ ನಿಜ. ಶಾಲೆಗಳನ್ನು ಪ್ರಯೋಗಶಾಲೆಗಳಂತೆ ನೋಡುವ ಮನಸ್ಥಿತಿ ಪ್ರತಿಯೊಂದು ಸರಕಾರದ್ದಾಗಿದೆ. ಇದಕ್ಕೆ ಇತ್ತೀಚೆಗೆ ಪದವಿ ಶಿಕ್ಷಣದಲ್ಲಿ ಮಾಡುತ್ತಿರುವ ಬದಲಾವಣೆಯೇ ದೃಷ್ಟಾಂತ. ನಾಲ್ಕು ವರ್ಷಗಳ ಪದವಿಯನ್ನು ಮತ್ತೆ ಮೂರು ವರ್ಷಕ್ಕೆ ಇಳಿಸಿರುವ ಈ ಕ್ರಮದಿಂದಾಗಿ, ರಾಜ್ಯ ಶಿಕ್ಷಣ ವ್ಯವಸ್ಥೆಯು ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಪ್ರತ್ಯೇಕತೆ ಕಾಪಾಡಿಕೊಂಡು, ಎನ್‌ಇಪಿಯಿಂದ ದೊರೆಯಬಹುದಾದ ಲಾಭಗಳಿಂದ ವಂಚಿತವಾಗಲಿದೆ.

ರಾಜ್ಯದಲ್ಲಿ ಪ್ರಾಥಮಿಕ ಹಂತದಲ್ಲೆ ಶಿಕ್ಷಣದ ಗುಣಮಟ್ಟ ಕಾಪಾಡದೇ ಇರುವುದರಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಕುಸಿತ ಉಂಟಾಗಿದೆ. 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಿರಾಶದಾಯವಾಗಿದೆ. ಸಿಸಿಟಿವಿ ಹಾಕಿದ್ದಕ್ಕೆ ಫಲಿತಾಂಶ ಕಡಿಮೆ ಬಂದಿದೆ ಎಂದು ಶಾಲಾ ಶಿಕ್ಷಣ ಇಲಾಖೆಯೇ ಒಪ್ಪಿಕೊಂಡಿದೆ. ಅಧಿಕಾರಿಗಳ ಬಳಿ ಚರ್ಚೆ ಮಾಡಿದಾಗ, ಮಕ್ಕಳು ತುಂಬಾ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಹೀಗಾಗಿ ಅವರನ್ನು ಪಾಸ್ ಮಾಡಬೇಕು ಎನ್ನುತ್ತಾರೆ. ಹೀಗಾಗಿ ಗ್ರೇಸ್‌ ಅಂಕ ಕೊಡಲಾಗಿದೆ. ಹತ್ತು ವರ್ಷಗಳಿಂದ ಶಾಲೆಯಲ್ಲಿ ಕಲಿತರೂ 10ನೇ ತರಗತಿಗೆ ಬಂದಾಗ ಕನಿಷ್ಠ 25 ಅಂಕ ಗಳಿಸಲೂ ಆಗದ ಮಕ್ಕಳ ಸಂಖ್ಯೆ ಹೆಚ್ಚು ಇದೆ ಎಂದರೆ ಏನರ್ಥ? ಇದು ಶಿಕ್ಷಣವೇ? ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಬದಲು ಮಕ್ಕಳ ಹಿತದೃಷ್ಟಿಯ ಹೆಸರಲ್ಲಿ ಗ್ರೇಸ್‌ ಅಂಕದ ಪ್ರಮಾಣ ಹೆಚ್ಚಿಸುತ್ತಿರುವುದು ಸರಿಯಲ್ಲ. ಇದು ಕ್ರಿಕೆಟ್‌ನಲ್ಲಿ ಬೌಂಡರಿಗೆ ಬಾಲ್‌ ಹೋಗುತ್ತಿಲ್ಲ ಎಂದು ಬೌಂಡರಿ ವ್ಯಾಪ್ತಿಯನ್ನೇ ಕುಗ್ಗಿಸಿದಂತೆ! ಇದರಿಂದ ಆಟಗಾರರ ಪ್ರತಿಭೆಯೇನೂ ಹೆಚ್ಚುವುದಿಲ್ಲ!

ಇದನ್ನೂ ಓದಿ:ವಿಸ್ತಾರ ಸಂಪಾದಕೀಯ: ಹೋರ್ಡಿಂಗ್ ಕುಸಿತ ಬೆಂಗಳೂರಿಗರಿಗೂ ಎಚ್ಚರಿಕೆಯ ಗಂಟೆ

ಪ್ರತಿ ಸಲ ಸರ್ಕಾರ ಬಂದಾಗಲೂ ರಾಜಕೀಯ ಸಿದ್ಧಾಂತದ ಹಿನ್ನೆಲೆಯಲ್ಲಿ ಪಠ್ಯಕ್ರಮ ಪರಿಷ್ಕರಣೆ ಆಗುತ್ತಿದೆ. ಕಳೆದ ಹತ್ತಾರು ವರ್ಷಗಳಿಂದ ಇದೇ ರೀತಿ ನಡೆದುಕೊಂಡು ಬರುತ್ತಿದೆ. ಶಿಕ್ಷಣ ಇಲಾಖೆಯಿಂದ ಗುಣಮಟ್ಟದ ಪಠ್ಯ ಪುಸ್ತಕ ರಚನೆ ಆಗದೇ ಇದ್ದಲ್ಲಿ ಇದರ ಅಡ್ಡಪರಿಣಾಮವನ್ನು ಮುಂದೆ ಅನುಭವಿಸಬೇಕಾಗುತ್ತದೆ. ಮಕ್ಕಳಿಗೆ ಬೇಕಾದಂತಹ ಸಂಯೋಜಿತ ಪಠ್ಯ ರಚನೆಯಾಗದೆ ಇದ್ದರೆ, ಪೋಷಕರು ಅನಿವಾರ್ಯವಾಗಿ CBSE-ICSE ಕಡೆ ಹೋಗಬೇಕಾಗುತ್ತದೆ. ರಾಜ್ಯದ ವಿದ್ಯಾರ್ಥಿಗಳು ನೆರೆಹೊರೆ ರಾಜ್ಯಗಳ ಪಠ್ಯಕ್ಕೆ ಹಾಗೂ ರಾಷ್ಟ್ರಮಟ್ಟದ ಶಿಕ್ಷಣಕ್ಕೆ ಸ್ಪರ್ಧಾತ್ಮಕವಾಗಿ ಸಿದ್ಧ ಮಾಡುವುದು ಸರ್ಕಾರದ ಆದ್ಯ ಜವಾಬ್ದಾರಿ. ಆದರೆ ಈ ವಿಚಾರದಲ್ಲಿ ಸದಾ ರಾಜಕೀಯ. ವಿದ್ಯಾರ್ಥಿಗಳ ಹಿತದೃಷ್ಟಿಗಿಂತ ತಮ್ಮ ಸಿದ್ಧಾಂತಗಳನ್ನು ಹೇರುವುದೇ ಪಕ್ಷಗಳ ಆದ್ಯತೆಯಾಗಿದೆ. ಶಿಕ್ಷಣ ತಜ್ಞರನ್ನು ಮುಂದಿಟ್ಟುಕೊಂಡು ಪಠ್ಯಕ್ರಮ ರಚಿಸುವುದಕ್ಕಿಂತಲೂ ರಾಜಕೀಯ ಚಿಂತನೆಯ ತಜ್ಞರನ್ನು ಸಮಿತಿಯಲ್ಲಿ ನೇಮಿಸಿಕೊಂಡು ಪಠ್ಯ ರಚಿಸಲಾಗುತ್ತಿದೆ. ಇದು ಮಕ್ಕಳ ಬಾಳಿನಲ್ಲಿ ಆಡುವ ಚೆಲ್ಲಾಟ. ಇದು ನಿಲ್ಲಬೇಕು. ಇಲ್ಲವಾದರೆ ಈ ಫಲಿತಾಂಶ ಕುಸಿತ ಹಾಗೂ ಅವಮಾನ ಮುಂದುವರಿಯಲಿದೆ.

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಹೋರ್ಡಿಂಗ್ ಕುಸಿತ ಬೆಂಗಳೂರಿಗರಿಗೂ ಎಚ್ಚರಿಕೆಯ ಗಂಟೆ

ಬೆಂಗಳೂರಿನಲ್ಲೂ ಇಂಥ ಜಾಹೀರಾತು ಫಲಕಗಳ ಹಾವಳಿ ಸಾಕಷ್ಟಿದೆ. ಇವುಗಳಲ್ಲಿ ಅನಧಿಕೃತ ಎಷ್ಟು, ಅನಧಿಕೃತ ಎಷ್ಟು ಯಾರೂ ಹೇಳಲಾರರು. ಕಳೆದ ವರ್ಷ ಹೈಕೋರ್ಟ್, ಅನಧಿಕೃತ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್‌ಗಳ ಬಗ್ಗೆ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿತ್ತು. ಪರಿಣಾಮ ನಗರವನ್ನು ತರಾತುರಿಯಿಂದ ಕ್ಲೀನ್ ಮಾಡಲಾಗಿತ್ತು. ಇದೀಗ ಬಿಬಿಎಂಪಿ ನೂತನ ಬೈಲಾ ತಂದಿದೆ. ಅದರಂತೆ ದೊಡ್ಡ ಹೋರ್ಡಿಂಗ್‌ಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಇದರ ಅಪಾಯ ಇದ್ದೇ ಇದೆ.

VISTARANEWS.COM


on

Hoarding
Koo

ಮುಂಬಯಿಯ ಘಾಟ್‌ಕೋಪರ್‌ನಲ್ಲಿ ಅಪ್ಪಳಿಸಿದ ಭಾರಿ ಧೂಳು ಬಿರುಗಾಳಿ ಮತ್ತು ಮಳೆಯಿಂದಾಗಿ ಬೃಹತ್ ಜಾಹೀರಾತು ಫಲಕ ಕುಸಿದು 14 ಮಂದಿ ಸಾವನ್ನಪ್ಪಿದ್ದಾರೆ. 59 ಜನರು ಗಾಯಗೊಂಡಿದ್ದಾರೆ. ಸೋಮವಾರ ಮಧ್ಯಾಹ್ನ ವೇಗವಾಗಿ ಧೂಳಿನ ಸಮೇತ ಬಂದ ಬಿರುಗಾಳಿ, ಭಾರೀ ಮಳೆ ಹಿನ್ನೆಲೆ ಮುಂಬೈ ನಗರದಲ್ಲಿ ಅನಾಹುತಗಳು ಸಂಭವಿಸುತ್ತಿವೆ. ಜನಸಂದಣಿ ಇರುವ ಪ್ರದೇಶದಲ್ಲಿ ಬೃಹದಾಕಾರದ ಹೋರ್ಡಿಂಗ್ ಬಿರುಗಾಳಿಗೆ ಕುಸಿದು ಬಿದ್ದಿದೆ. ಬೃಹದಾಕಾರದ ಹೋರ್ಡಿಂಗ್ ನ ಕಬ್ಬಿಣದ ರಾಡ್ ಗಳು ಹಿಂದಕ್ಕೆ ವಾಲಿಕೊಂಡು ಸಂಪೂರ್ಣವಾಗಿ ನೆಲಕಚ್ಚಿದೆ. ದುರ್ಘಟನೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಹೋರ್ಡಿಂಗ್​ ಕೆಳಗೆ ಸಿಲುಕಿಕೊಂಡಿದ್ದಾರೆ. ಹೋರ್ಡಿಂಗ್ ಬಿದ್ದ ಪರಿಣಾಮ ಅಲ್ಲಿದ್ದ ಅಂಗಡಿಗಳು, ವಾಹನಗಳು ಸಹ ಜಖಂ ಆಗಿದೆ. ಇನ್ನೊಂದು ಇಂಥದೇ ಘಟನೆಯಲ್ಲಿ, ವಡಾಲಾದಲ್ಲಿ ಅಟ್ಟಣಿಗೆಯೊಂದು ಕುಸಿದಿದೆ. ಹಲವಾರು ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದು, ಹಲವರು ಕಾರಿನೊಳಗೆ ಸಿಲುಕಿಕೊಂಡಿದ್ದಾರೆ.

ಇದು ಅಪರೂಪದ ಪ್ರಕರಣವಲ್ಲ. ಈ ಹಿಂದೆಯೂ ಇಂಥ ಘಟನೆಗಳು ಆದದ್ದುಂಟು. ಈ ಬೃಹತ್ ಜಾಹೀರಾತು ಫಲಕಗಳು ನಾಲ್ಕು- ಐದು ಮಹಡಿ ಕಟ್ಟಡಗಳಷ್ಟು ಎತ್ತರವಾಗಿರುತ್ತವೆ. ವೈಜ್ಞಾನಿಕವಾಗಿ ಇದನ್ನು ನಿರ್ಮಿಸದೇ ಹೋದರೆ ಇವು ಬಿದ್ದಾಗ ಹಲವು ಜೀವಗಳಿಗೆ ಮಾರಣಾಂತಿಕ ಆಗುವ ಸಂಭವ ಇದ್ದೇ ಇರುತ್ತದೆ. ಜೊತೆಗೆ ಅನಧಿಕೃತ ಫ್ಲೆಕ್ಸ್, ಹೋರ್ಡಿಂಗ್‌ಗಳ ಕಾಟವೂ ಇದೆ. ಇವು ನಗರಗಳ ಸೌಂದರ್ಯವನ್ನು ಊನಗೊಳಿಸುವಲ್ಲಿ ಕುಖ್ಯಾತವಾಗಿವೆ.

ಬೆಂಗಳೂರಿನಲ್ಲೂ ಇಂಥ ಜಾಹೀರಾತು ಫಲಕಗಳ ಹಾವಳಿ ಸಾಕಷ್ಟಿದೆ. ಇವುಗಳಲ್ಲಿ ಅನಧಿಕೃತ ಎಷ್ಟು, ಅನಧಿಕೃತ ಎಷ್ಟು ಯಾರೂ ಹೇಳಲಾರರು. ಕಳೆದ ವರ್ಷ ಹೈಕೋರ್ಟ್, ಅನಧಿಕೃತ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್‌ಗಳ ಬಗ್ಗೆ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿತ್ತು. ಪರಿಣಾಮ ನಗರವನ್ನು ತರಾತುರಿಯಿಂದ ಕ್ಲೀನ್ ಮಾಡಲಾಗಿತ್ತು. ಇದೀಗ ಬಿಬಿಎಂಪಿ ನೂತನ ಬೈಲಾ ತಂದಿದೆ. ಅದರಂತೆ ದೊಡ್ಡ ಹೋರ್ಡಿಂಗ್‌ಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಹೋರ್ಡಿಂಗ್‌ನ ಗಾತ್ರವು ರಸ್ತೆಯ ಅಗಲ, ವೃತ್ತ ಅಥವಾ ಜಂಕ್ಷನ್ ಮತ್ತು ಪ್ರದೇಶವನ್ನು ಅವಲಂಬಿಸಿರುತ್ತದೆ. ಉದಾಹರಣೆಗೆ, 80 ರಿಂದ 100 ಅಡಿ ಅಗಲದ ರಸ್ತೆಯಲ್ಲಿ (ಒಳಗಿನ ವರ್ತುಲ ರಸ್ತೆ) 1,000 ಚದರ ಅಡಿ ಹೋರ್ಡಿಂಗ್ ಅನ್ನು ಪ್ರದರ್ಶಿಸಲು ಅನುಮತಿಸಲಾಗಿದೆ. ಜಾಹೀರಾತುದಾರರು ಪ್ರತಿ 100 ಮೀಟರ್‌ಗಳಿಗೆ ಅಂತಹ ಬೋರ್ಡ್‌ಗಳನ್ನು ಸ್ಥಾಪಿಸಬಹುದು. ಕನಿಷ್ಠ ಜಾಹೀರಾತು ಪ್ರದೇಶವು 800 ಚದರ ಅಡಿಗಳಾಗಿದ್ದರೆ, ಗರಿಷ್ಠ 3,000 ಚದರ ಅಡಿ. ಗರಿಷ್ಠ ಎತ್ತರ 75 ಅಡಿಗಳವರೆಗೂ ಹೋಗಬಹುದು. ಅಂದರೆ ಸುಮಾರು ಏಳು ಮಹಡಿ ಎತ್ತರ!

ಇಂಥ ಒಂದು ಬೃಹತ್ ಫಲಕ ಗಾಳಿಗೆ ಬಿದ್ದರೆ ಎಂಥ ಅನಾಹುತ ಆದೀತು ಎಂಬುದನ್ನು ಊಹಿಸಬಹುದು. ನೂತನ ಹೋರ್ಡಿಂಗ್ ನೀತಿಯಿಂದ ವಾರ್ಷಿಕ 500 ಕೋಟಿ ರೂಪಾಯಿ ಗಳಿಸುವ ಇರಾದೆ ಬಿಬಿಎಂಪಿಗೆ ಇದೆ. ಆದರೆ ಅದರಡಿ ಓಡಾಡುವ ಜನರ ಸುರಕ್ಷತೆಯ ಬಗ್ಗೆ ಯಾವ ಕ್ರಮ ತೆಗೆದುಕೊಳ್ಳಲಾಗುತ್ತದೆ? ಇಂಥ ಅಪಘಾತದ ಸಂತ್ರಸ್ತರಿಗೆ ಗರಿಷ್ಠ ವಿಮೆ ನೀಡುವ ಕಾಯಿದೆ ಇರಬೇಕಲ್ಲವೆ? ಇದರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಇಂಥ ಅಪಘಾತಗಳು ಸಂಭವಿಸಿದಾಗ, ನಮ್ಮ ಸುತ್ತಮುತ್ತಲೂ ಯಾವಾಗ ಬೇಕಾದರೂ ಸಂಭವನೀಯ ಅಪಾಯಗಳ ಕುರಿತು ಕೂಡ ನಾವು ಚಿಂತಿಸಿ ಕಾರ್ಯಪ್ರವೃತ್ತರಾಗಬೇಕಿದೆ.

ಇದನ್ನೂ ಓದಿ: ICC World Cup 2023 : ಜಸ್ಟ್​ ಮಿಸ್​; ಪ್ರೇಕ್ಷಕರ ಸೀಟ್​​ಗಳ ಮೇಲೆ ಬಿದ್ದ ಬೃಹತ್​ ಹೋರ್ಡಿಂಗ್​

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಭಾರತ ಆತ್ಮನಿರ್ಭರ ಸಾಧನೆ ಶ್ಲಾಘನೀಯ

ಶುದ್ಧ ವಿದ್ಯುತ್‌ ಉತ್ಪಾದನೆ ಹೆಚ್ಚಳ, ವಿದ್ಯುತ್‌ ವಲಯದಲ್ಲಿ ಹೊರಸೂಸುವ ಇಂಗಾಲದ ಪ್ರಮಾಣ ಕಡಿಮೆ ಮಾಡುವುದು ಸೌರ ವಿದ್ಯುತ್‌ ಉತ್ಪಾದನೆಯ ಪ್ರಮುಖ ಅನುಕೂಲಗಳವಾಗಿವೆ. ಇದು ಹವಾಮಾನ ಬದಲಾವಣೆ ನಿಯಂತ್ರಣಕ್ಕೂ ಕಾರಣವಾಗಲಿದೆ. ಇದರ ಬೆನ್ನಲ್ಲೇ, ಭಾರತವು ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಐತಿಹಾಸಿಕ ಸಾಧನೆಯೊಂದನ್ನು ಮಾಡಿದೆ. ಜಪಾನ್‌ಅನ್ನೂ ಹಿಂದಿಕ್ಕಿ, ಜಗತ್ತಿನಲ್ಲೇ ಹೆಚ್ಚು ಸೌರ ವಿದ್ಯುತ್‌ ಉತ್ಪಾದನೆ ಮಾಡುವ ಮೂರನೇ ರಾಷ್ಟ್ರ ಎಂಬ ಖ್ಯಾತಿಯನ್ನು ಭಾರತ ಗಳಿಸಿದೆ. ಇದು ನಿಜಕ್ಕೂ ಶ್ಲಾಘನೀಯ ಸಾಧನೆಯಾಗಿದೆ.

VISTARANEWS.COM


on

Solar
Koo

ಹವಾಮಾನ ಬದಲಾವಣೆ (Climate Change), ಜಾಗತಿಕ ತಾಪಮಾನ ಏರಿಕೆ ಕುರಿತು ಜಗತ್ತಿನಾದ್ಯಂತ ಚರ್ಚೆಗಳು, ಪರಿಹಾರಕ್ಕಾಗಿ ಯೋಜನೆ ರೂಪಿಸುವುದು ಸೇರಿ ಹತ್ತಾರು ಕಾರ್ಯಚಟುವಟಿಕೆಗಳು ನಡೆಯುತ್ತಿವೆ. ಅತಿವೃಷ್ಟಿ, ಅನಾವೃಷ್ಟಿ, ಚಳಿಗಾಲದಲ್ಲೂ ಬಿರುಬಿಸಿಲು, ಬೇಸಿಗೆಯಲ್ಲಿ ಅಕಾಲಿಕ ಮಳೆ, ಕಾಡುಗಳು ಇರುವ ಪ್ರದೇಶದಲ್ಲೂ ಹೆಚ್ಚಿದ ತಾಪ ಸೇರಿ ಹಲವು ಪರಿಣಾಮಗಳು ಹವಾಮಾನ ಬದಲಾವಣೆಗೆ ಹಿಡಿದ ಕನ್ನಡಿಯೇ ಆಗಿದೆ. ಇದರ ಬೆನ್ನಲ್ಲೇ, ಭಾರತವು ಸೌರ ವಿದ್ಯುತ್‌ ಉತ್ಪಾದನೆಯಲ್ಲಿ (Solar Power Generation) ಐತಿಹಾಸಿಕ ಸಾಧನೆಯೊಂದನ್ನು ಮಾಡಿದೆ. ಜಪಾನ್‌ಅನ್ನೂ ಹಿಂದಿಕ್ಕಿ, ಜಗತ್ತಿನಲ್ಲೇ ಹೆಚ್ಚು ಸೌರ ವಿದ್ಯುತ್‌ ಉತ್ಪಾದನೆ ಮಾಡುವ ಮೂರನೇ ರಾಷ್ಟ್ರ ಎಂಬ ಖ್ಯಾತಿಯನ್ನು ಭಾರತ ಗಳಿಸಿದೆ. ಹಾಗಾಗಿ, ಇದು ಮರುಮಾತೇ ಇಲ್ಲದೆ ಶ್ಲಾಘನೀಯ ಸಾಧನೆ ಎಂದು ಹೇಳಬಹುದಾಗಿದೆ.

2015ರಲ್ಲಿ ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಭಾರತವು 9ನೇ ಸ್ಥಾನದಲ್ಲಿತ್ತು. ಆದರೆ, 2015ರಿಂದ 2023ರ ಅವಧಿಯಲ್ಲಿ ಭಾರತವು ಆರು ಪಟ್ಟು ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿರುವುದೇ ಮೂರನೇ ಸ್ಥಾನಕ್ಕೇರಲು ಕಾರಣವಾಗಿದೆ. 2023ರಲ್ಲಿ ಜಾಗತಿಕ ವಿದ್ಯುತ್‌ ವಲಯದಲ್ಲಿ ದಾಖಲೆಯ ಶೇ. 5.5ರಷ್ಟು ಸೌರ ಶಕ್ತಿಯನ್ನು ಉತ್ಪಾದಿಸಲಾಗಿದೆ. ಆದರೆ, ಭಾರತದಲ್ಲಿ ಸೌರ ಶಕ್ತಿಯಿಂದ ಶೇ. 5.8ರಷ್ಟು ವಿದ್ಯುತ್‌ ಉತ್ಪಾದಿಸಲಾಗಿದೆ ಎಂದು ಜಾಗತಿಕ ಇಂಧನ ಚಿಂತಕರ ಚಾವಡಿ ಎಂಬರ್‌ (Ember) ತಿಳಿಸಿದೆ. ಇದು ಭಾರತವು ಸೌರ ವಿದ್ಯುತ್‌ ಶಕ್ತಿಯನ್ನು ಉತ್ಪಾದಿಸುವಲ್ಲಿ ಕಂಡುಕೊಂಡರುವ ವೇಗಕ್ಕೆ ಸಾಕ್ಷಿಯಾಗಿದೆ.

ಸೌರ ವಿದ್ಯುತ್‌ ಉತ್ಪಾದನೆಯು 2015ರಲ್ಲಿದ್ದ ಶೇ. 0.5ರಿಂದ 2023ಕ್ಕೆ ಶೇ. 5.8ಕ್ಕೆ ಏರಿಕೆಯಾಗಿದೆ ಎಂದು ಎಂಬರ್‌ ತನ್ನ ವರದಿಯಲ್ಲಿ ಕಂಡುಕೊಂಡಿದೆ. ಇಂಟರ್‌ ನ್ಯಾಷನಲ್‌ ಎನರ್ಜಿ ಏಜೆನ್ಸಿಯ(IEA) ಪ್ರಕಾರ, 2030ರ ವೇಳೆಗೆ ಸೌರ ವಿದ್ಯುತ್ ಉತ್ಪಾದನೆಯು ಜಾಗತಿಕ ವಿದ್ಯುತ್ ಉತ್ಪಾದನೆಯ ಶೇ. 22ಕ್ಕೆ ಏರಿಕೆಯಾಗಲಿದೆ. ಭಾರತದ ವಾರ್ಷಿಕ ಇಂಗಾಲದ ಡೈ ಆಕ್ಸೈಡ್ ಹೊರಸೂಸುವಿಕೆಗೆ ಅರ್ಧದಷ್ಟು (2023ರಲ್ಲಿ 1.18 ಗಿಗಾಟನ್) ವಿದ್ಯುತ್ ಉತ್ಪಾದನೆ ಕಾರಣವಾಗುತ್ತಿರುವುದರಿಂದ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳುವುದು ಅನಿವಾರ್ಯ ಎನಿಸಿಕೊಂಡಿದೆ. ಆದರೆ, ಭಾರತವು ಗಣನೀಯವಾಗಿ ಸೌರ ವಿದ್ಯುತ್‌ ಉತ್ಪಾದನೆ ಮಾಡುತ್ತಿರುವುದರಿಂದ ಪರಿಸರದ ಮೇಲಿನ ಪರಿಣಾಮಕ್ಕೂ ಭಾರತ ಪರಿಹಾರ ಕಂಡುಕೊಳ್ಳುವಂತಾಗಿದೆ.

ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಈಗ ಚೀನಾ ಮೊದಲ ಸ್ಥಾನದಲ್ಲಿದ್ದರೆ, ಅಮೆರಿಕ ಎರಡನೇ ಸ್ಥಾನದಲ್ಲಿದೆ. ಹಾಗಾಗಿ, ಮುಂದಿನ ದಿನಗಳಲ್ಲಿ ಭಾರತವು ಇನ್ನಷ್ಟು ಸಾಧನೆ ಮಾಡಿದರೂ ಅಚ್ಚರಿ ಇಲ್ಲ. ಶುದ್ಧ ವಿದ್ಯುತ್‌ ಉತ್ಪಾದನೆ ಹೆಚ್ಚಳ, ವಿದ್ಯುತ್‌ ವಲಯದಲ್ಲಿ ಹೊರಸೂಸುವ ಇಂಗಾಲದ ಪ್ರಮಾಣ ಕಡಿಮೆ ಮಾಡುವುದು ಸೌರ ವಿದ್ಯುತ್‌ ಉತ್ಪಾದನೆಯ ಪ್ರಮುಖ ಮುನ್ನಡೆಯಾಗಿವೆ. ಅದರಲ್ಲೂ, ಭಾರತದ ಜನಸಂಖ್ಯೆ ಜಾಸ್ತಿ ಇರುವುದರಿಂದ ಬೇಡಿಕೆಗೆ ತಕ್ಕಷ್ಟು ವಿದ್ಯುತ್‌ ಪೂರೈಸುವುದು ಕಷ್ಟವಾಗುವ ಜತೆಗೆ ಖಜಾನೆಗೂ ಹೊರೆಯಾಗುತ್ತದೆ. ಇದಕ್ಕೆ ಸೌರ ವಿದ್ಯುತ್‌ ಉತ್ಪಾದನೆಯೇ ರಾಜಮಾರ್ಗವಾಗಿದೆ.

ಹವಾಮಾನ ಬದಲಾವಣೆ ಕುರಿತು ಭಾರತ ಜಾಗತಿಕ ವೇದಿಕೆಗಳಲ್ಲಿ ಭಾರತವು ಪ್ರಬಲವಾಗಿ ಪ್ರತಿಪಾದನೆ ಮಾಡುತ್ತದೆ. ಹವಾಮಾನ ನಿಯಂತ್ರಣದ ಕುರಿತು ನರೇಂದ್ರ ಮೋದಿ ಅವರು ಮಾತನಾಡುತ್ತಾರೆ. ಹವಾಮಾನ ಬದಲಾವಣೆ ವಿರುದ್ಧದ ಸಮರದ ತಂಡದಲ್ಲಿ ಭಾರತವೂ ಪ್ರಮುಖ ಸದಸ್ಯವಾಗಿದೆ. ಇದೇ ಕಾರಣಕ್ಕಾಗಿ, ಸೌರ ವಿದ್ಯುತ್‌ ಉತ್ಪಾದನೆಯ ಸಾಧನೆಯು ಜಗತ್ತಿಗೇ ಮಾದರಿಯಾಗಿದೆ. ಇನ್ನು ನರೇಂದ್ರ ಮೋದಿ ಅವರು 2047ರ ವೇಳೆಗೆ ವಿಕಸಿತ ಭಾರತದ ನಿರ್ಮಾಣದ ಕನಸು ಕಾಣುತ್ತಿದ್ದಾರೆ. ವಿಕಸಿತ ಭಾರತದ ನಿರ್ಮಾಣಕ್ಕಿರುವ ಮಾನದಂಡಗಳಲ್ಲಿ ಸೌರ ವಿದ್ಯುತ್‌ ಕ್ಷೇತ್ರದ ಸಾಧನೆಯು ಪ್ರಮುಖವಾಗಿದೆ. ಹಾಗಾಗಿ, ಜಪಾನ್‌ಗಿಂತ ಭಾರತ ಮುಂದೆ ಹೋಗಿರುವುದು ವಿಕಸಿತ ಭಾರತದತ್ತ ದಾಪುಗಾಲು ಇಡುತ್ತಿರುವುದಕ್ಕೆ ಸಾಕ್ಷಿಯಾಗಿದೆ.

ಇದನ್ನೂ ಓದಿ: Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಭಾರತದ ಚುನಾವಣೆಯಲ್ಲಿ ಅಮೆರಿಕದ ಹಸ್ತಕ್ಷೇಪ ಖಂಡನೀಯ

ಅಮೆರಿಕದ ಹಿತಾಸಕ್ತಿ ಭಾರತದಲ್ಲಿ ಬಹಳಷ್ಟಿದೆ. ಅಲ್ಲಿನ ಮೆಡಿಕಲ್ ಲಾಬಿ, ಸೋಯಾ ಲಾಬಿ, ತೈಲ ಲಾಬಿ, ಶಸ್ತ್ರಾಸ್ತ್ರ ಲಾಬಿ ಇತ್ಯಾದಿಗಳು ಇಲ್ಲಿ ಪ್ರಭಾವ ಬೀರಲು ಯತ್ನಿಸುತ್ತಲೇ ಇರುತ್ತವೆ. ಉದಾಹರಣೆಗೆ, ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳಬೇಡಿ ಎಂದು ಇತ್ತೀಚೆಗೆ ಬೆದರಿಕೆ ಒಡ್ಡಿತ್ತು. ಶಸ್ತ್ರಾಸ್ತ್ರಗಳಲ್ಲಿ ಸ್ವಾವಲಂಬನೆ, ಬಾಹ್ಯಾಕಾಶ ವಿಜ್ಞಾನದಲ್ಲಿ ಬೆಳವಣಿಗೆ, ಸುಸ್ಥಿರ ಇಂಧನದಲ್ಲಿ ಮುನ್ನಡೆ, ರಾಷ್ಟ್ರೀಯವಾದಿ ಚಿಂತನೆಯ ಆಡಳಿತ ಇತ್ಯಾದಿಗಳು ಅಮೆರಿಕದ ಕಣ್ಣು ಕುಕ್ಕಿರಲೂಬಹುದು.

VISTARANEWS.COM


on

Joe Biden
Koo

ಅಮೆರಿಕದಲ್ಲಿ ಖಲಿಸ್ತಾನಿ ನಾಯಕ (Khalistan Leader) ಗುರುಪತ್‌ವಂತ್ ಸಿಂಗ್ ಪನ್ನುನ್ (Gurpatwant Singh Pannun) ಹತ್ಯೆಯ ಸಂಚಿನಲ್ಲಿ (Murder plot) ಭಾರತದ ʼರಾʼ (RAW) ಅಧಿಕಾರಿಯ ಕೈವಾಡದ ಕುರಿತು ಅಮೆರಿಕ(America)ದ ಆರೋಪಕ್ಕೆ ತಿರುಗೇಟು ನೀಡಿದ್ದ ರಷ್ಯಾ(America v/s Russia), ಅಮೆರಿಕವು ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಲು ಯತ್ನಿಸುತ್ತಿದೆ ಎಂದು ಹೇಳಿತ್ತು. ಪನ್ನುನ್ ಹತ್ಯೆ ಪ್ರಕರಣದಲ್ಲಿ ಭಾರತದ ಕೈವಾಡ ಇದೆ ಎಂದು ಆರೋಪಿಸಿದ್ದ ಅಮೆರಿಕಕ್ಕೆ ಟಾಂಗ್‌ ನೀಡಿದ್ದ ರಷ್ಯಾ, ಭಾರತದಲ್ಲಿ ಆಂತರಿಕ ರಾಜಕೀಯ ಸ್ಥಿತಿಗತಿಯನ್ನು ಅಲ್ಲೋಲ ಕಲ್ಲೋಲ ಮಾಡಲು ಅಮೆರಿಕ ಯತ್ನಿಸುತ್ತಿದೆ. ಭಾರತೀಯ ರಾಷ್ಟ್ರೀಯತೆ ಮನಸ್ಥಿತಿ ಮತ್ತು ಇತಿಹಾಸವನ್ನು ಅರ್ಥಮಾಡಿಕೊಳ್ಳದ ಅಮೆರಿಕ ಸುಖಾಸುಮ್ಮನೆ ಭಾರತದ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಆರೋಪ ಮಾಡುತ್ತಿದೆ. ಭಾರತದ ಆಂತರಿಕ ವಿಚಾರದಲ್ಲಿ ಅಮೆರಿಕ ನಿರಂತರವಾಗಿ ಮೂಗು ತೂರಿಸುವ ಪ್ರಯತ್ನ ನಡೆಸುತ್ತಲೇ ಇದೆ. ಭಾರತವನ್ನು ಗೌರವಿಸುವ ಮನಸ್ಸು ಅಮೆರಿಕಕ್ಕೆ ಇಲ್ಲ. ಅಮೆರಿಕದ ಆರೋಪಗಳು ಸುಳ್ಳು ಮತ್ತು ನಿರಾಧಾರವಾಗಿದ್ದು, ಅದನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಖಡಕ್ಕಾಗಿ ಹೇಳಿದೆ.

ರಷ್ಯಾ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅಮೆರಿಕ, ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಲು ಅಮೆರಿಕ ಎಂದಿಗೂ ಬಯಸುವುದಿಲ್ಲ. ಭಾರತ ಮಾತ್ರ ಅಲ್ಲ ಬೇರೆ ಯಾವುದೇ ರಾಷ್ಟ್ರಗಳ ಆಂತರಿಕ ವಿಚಾರದಲ್ಲಿ ಅಮೆರಿಕ ಮೂಗು ತೂರಿಸುವುದಿಲ್ಲ ಎಂದು ಹೇಳಿದೆ. ಈ ಮಾತಿನಲ್ಲಿ ಸತ್ಯವೆಷ್ಟಿದೆ, ಸುಳ್ಳೆಷ್ಟು ಎಂಬುದು ಇಡೀ ಜಗತ್ತಿಗೇ ಗೊತ್ತು. ಈ ಭೂಮಿಯಲ್ಲಿ ಎಲ್ಲ ದೇಶಗಳ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ದೇಶ ಒಂದಿದ್ದರೆ ಅದು ಅಮೆರಿಕ. ರಷ್ಯ ಕೂಡ ಸುಮ್ಮಸುಮ್ಮನೇ ಆರೋಪ‌ ಮಾಡಲಾರದು. ಅದರ ಬೇಹುಗಾರಿಕೆ ಶಕ್ತಿ ಕೂಡ ಬಲವಾಗಿಯೇ ಇದೆ. ಹೀಗಾಗಿ ಅದು ಹಂಚಿಕೊಂಡಿರುವ ಮಾಹಿತಿ ಪೂರ್ತಿ ಸುಳ್ಳು ಎನ್ನಲಾಗುವುದಿಲ್ಲ. ರಷ್ಯ ಹಾಗೂ ಅಮೆರಿಕ ಸಾಂಪ್ರದಾಯಿಕ ವೈರಿಗಳಾಗಿರುವುದರಿಂದ, ಆ ಅಂಶವೂ ರಷ್ಯದ ಹೇಳಿಕೆಯ ಹಿಂದೆ ಸ್ವಲ್ಪ ಕೆಲಸ ಮಾಡಿರಬಹುದು ಅನ್ನೋಣ.

ಅನ್ಯ ದೇಶಗಳ ವಿಚಾರದಲ್ಲಿ ಮೂಗು ತೂರಿಸುವ ಅಮೆರಿಕದ ಚಾಳಿಗೆ ಸಾಕಷ್ಟು ಇತಿಹಾಸವಿದೆ. ಅದು ಕ್ಯೂಬಾದ, ರಷ್ಯದ ಅಧ್ಯಕ್ಷರ ಹತ್ಯೆಗೆ ಯತ್ನಿಸಿದೆ; ಅಫ್ಘಾನಿಸ್ತಾನವನ್ನು ಭಯೋತ್ಪಾದಕರನ್ನು ಬೆಳೆಸಿ ಪೂರ್ತಿ ನಾಶ ಮಾಡಿದೆ. ಪಾಕ್ ಅದೇ ಹಾದಿಯಲ್ಲಿದೆ. ಗಲ್ಫ್ ದೇಶಗಳಲ್ಲಿ ಅಮೆರಿಕದ ಮೂಗಿನ ನೇರಕ್ಕೆ ಕುಣಿಯದ ಇರಾನ್, ಟರ್ಕಿ, ಮುಂತಾದ ದೇಶಗಳನ್ನು ಬೆದರಿಸುತ್ತದೆ. ನ್ಯಾಟೋ ಮೂಲಕ ಯುರೋಪ್ ದೇಶಗಳನ್ನು ಕುಣಿಸುತ್ತಿದೆ. ಲ್ಯಾಟಿನ್ ಅಮೆರಿಕದ ಡ್ರಗ್ಸ್ ಜಾಲವನ್ನು ಗುಮ್ಮನಗುಸಕನಂತೆ ಪೋಷಿಸಿದೆ. ವಿಯೆಟ್ನಾಂ ಮೊದಲಾದ ದೇಶಗಳನ್ನು ನೇರ ಮಿಲಿಟರಿ ದಾಳಿ ಮೂಲಕ ಬಗ್ಗುಬಡಿಯಲು ಯತ್ನಿಸಿದೆ. ಅಮೆರಿಕ ಎಸಗದ ಕುಕೃತ್ಯವೇ ಇಲ್ಲ. ಇಂಥ ದೇಶದ ಮಿಲಿಟರಿ ಮತ್ತು ಬೇಹುಗಾರಿಕೆ ನಮ್ಮ ದೇಶದ ಚುನಾವಣೆಯಲ್ಲಿ ಕರಾಮತ್ತಿಗೆ ಮುಂದಾದರೆ ಆಶ್ಚರ್ಯವಿಲ್ಲ.

ಅಮೆರಿಕದ ಹಿತಾಸಕ್ತಿ ಭಾರತದಲ್ಲಿ ಬಹಳಷ್ಟಿದೆ. ಅಲ್ಲಿನ ಮೆಡಿಕಲ್ ಲಾಬಿ, ಸೋಯಾ ಲಾಬಿ, ತೈಲ ಲಾಬಿ, ಶಸ್ತ್ರಾಸ್ತ್ರ ಲಾಬಿ ಇತ್ಯಾದಿಗಳು ಇಲ್ಲಿ ಪ್ರಭಾವ ಬೀರಲು ಯತ್ನಿಸುತ್ತಲೇ ಇರುತ್ತವೆ. ಉದಾಹರಣೆಗೆ, ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳಬೇಡಿ ಎಂದು ಇತ್ತೀಚೆಗೆ ಬೆದರಿಕೆ ಒಡ್ಡಿತ್ತು. ಭಾರತದ ರಸಗೊಬ್ಬರ ಸಬ್ಸಿಡಿ, ಭತ್ತದ ಇಳುವರಿಯ ಹೆಚ್ಚಳ ಇತ್ಯಾದಿಗಳ ಬಗ್ಗೆ ಅದರ ಕೊಂಕು ಇದೆ. ಶಸ್ತ್ರಾಸ್ತ್ರಗಳಲ್ಲಿ ಸ್ವಾವಲಂಬನೆ, ಬಾಹ್ಯಾಕಾಶ ವಿಜ್ಞಾನದಲ್ಲಿ ಬೆಳವಣಿಗೆ, ಸುಸ್ಥಿರ ಇಂಧನದಲ್ಲಿ ಮುನ್ನಡೆ, ರಾಷ್ಟ್ರೀಯವಾದಿ ಚಿಂತನೆಯ ಆಡಳಿತ ಇತ್ಯಾದಿಗಳು ಅಮೆರಿಕದ ಕಣ್ಣು ಕುಕ್ಕಿರಲೂಬಹುದು. ಸದ್ಯ ಅದು ಪನ್ನುನ್ ಹತ್ಯೆ ಸಂಚಿನ ನೆಪ ಹಿಡಿದುಕೊಂಡು ಭಾರತಕ್ಕೆ ಮುಜುಗರ ಸೃಷ್ಟಿಸುವ ಯತ್ನದಲ್ಲಿದೆ. ಆದರೆ ಪನ್ನುನ್ ಭಾರತಕ್ಕೆ ಪೀಡಕನಾದ ಒಬ್ಬ ಭಯೋತ್ಪಾದಕ ಎಂಬುದನ್ನು ಒಪ್ಪಿಕೊಳ್ಳಲು ಅದು ಸಿದ್ಧವಿಲ್ಲ.

ಆದರೆ ಭಾರತ ಇದನ್ನೆಲ್ಲ ಅರ್ಥ ಮಾಡಿಕೊಳ್ಳಲು ಆಗದ ದಡ್ಡ ದೇಶವಲ್ಲ. ನಮಗೆ ನಮ್ಮದೇ ರಾಜನೀತಿಯಿದೆ, ಸಂವಿಧಾನವಿದೆ. ನಮ್ಮ ಸಾರ್ವಭೌಮತ್ವವನ್ನು ಯಾರೂ ಪ್ರಶ್ನೆ ಮಾಡಲು ಸಾಧ್ಯವಿಲ್ಲ. ನಮ್ಮ ಚುನಾವಣೆಗಳು ಪಾರದರ್ಶಕ ಹಾಗೂ ಪ್ರಜಾಸತ್ತಾತ್ಮಕ. ಅಮೆರಿಕದ ಕೈವಾಡವನ್ನು ಪತ್ತೆ ಹಚ್ಚುವಷ್ಟು, ಅದನ್ನು ಮೊಳಕೆಯಲ್ಲೇ ನಿಗ್ರಹಿಸುವಷ್ಟು ಶಕ್ತವಾಗಿದೆ ನಮ್ಮ ಬೇಹುಗಾರಿಕೆ ಶಕ್ತಿ.

ಇದನ್ನೂ ಓದಿ: China Missile : ಪಾಕಿಸ್ತಾನಕ್ಕೆ ಗುಟ್ಟಾಗಿ ಕ್ಷಿಪಣಿ ಕಳುಹಿಸಿದ ಚೀನಾದ ಎರಡು ಕಂಪನಿಗಳಿಗೆ ಅಮೆರಿಕದ ನಿರ್ಬಂಧ

Continue Reading
Advertisement
PBKS vs RR
ಕ್ರೀಡೆ3 mins ago

PBKS vs RR: ಸ್ಯಾಮ್‌ ಕರನ್‌ ಏಕಾಂಗಿ ಬ್ಯಾಟಿಂಗ್​ ಹೋರಾಟಕ್ಕೆ ತಲೆ ಬಾಗಿದ ರಾಜಸ್ಥಾನ್​

Anjali Murder Case
ಕ್ರೈಂ21 mins ago

Anjali Murder Case: ಅಂಜಲಿ‌ ಕೊಲೆ‌ ಪ್ರಕರಣದಲ್ಲಿ ಕರ್ತವ್ಯ ಲೋಪ; ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

Participation of young women in science technology information and communication fields should be increased says Isha Ambani
ದೇಶ32 mins ago

Isha Ambani: ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಶ್ಲಾಘಿಸಿದ ಇಶಾ ಅಂಬಾನಿ

Retired Teacher G T Bhatt Bommanahalli 80th celebration programme on May 19
ಉತ್ತರ ಕನ್ನಡ39 mins ago

Uttara Kannada News: ಮೇ 19ರಂದು ನಿವೃತ್ತ ಶಿಕ್ಷಕ ಜಿ. ಟಿ. ಭಟ್ ಬೊಮ್ಮನಹಳ್ಳಿ 80ರ ಸಂಭ್ರಮ

Dalita Sangharsha samiti demands that Minister HK Patil should be dismissed from the Cabinet
ರಾಯಚೂರು43 mins ago

Raichur News: 371 ಜೆ ಮೀಸಲಾತಿ ಮುಂದುವರಿಸದಂತೆ ಸಿಎಂಗೆ ಪತ್ರ ಬರೆದ ಎಚ್.ಕೆ. ಪಾಟೀಲ್ ವಜಾಗೆ ದಸಂಸ ಆಗ್ರಹ

Sandeep Lamichhane
ಕ್ರೀಡೆ55 mins ago

Sandeep Lamichhane: ಅತ್ಯಾಚಾರ ಆರೋಪದಲ್ಲಿ 8 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕ್ರಿಕೆಟಿಗ ಲಮಿಚಾನೆಗೆ ರಿಲೀಫ್; ನಿರಪರಾಧಿ ಎಂದ ಕೋರ್ಟ್​

Shyam Rangeela
ದೇಶ1 hour ago

Shyam Rangeela: ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿದ ಕಲಾವಿದನ ನಾಮಪತ್ರ ತಿರಸ್ಕಾರ!

Terrorist Arrested
ಕರ್ನಾಟಕ2 hours ago

Terrorist Arrested: ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಶಂಕಿತ ಉಗ್ರನ ಬಂಧನ

Monsoon 2024
ದೇಶ2 hours ago

Monsoon 2024: ರೈತರಿಗೆ ಗುಡ್‌ ನ್ಯೂಸ್;‌ ಮುಂಗಾರು ಮಳೆ ಆಗಮನಕ್ಕೆ ಫಿಕ್ಸ್‌ ಆಯ್ತು ದಿನಾಂಕ!

DP Manu
ಕ್ರೀಡೆ2 hours ago

DP Manu: ಫೆಡರೇಷನ್ ಕಪ್‌ನಲ್ಲಿ ನೀರಜ್​ ಚೋಪ್ರಾಗೆ ಬೆವರಿಳಿಯುವಂತೆ ಮಾಡಿದ ಕನ್ನಡಿಗ ಮನು; ಇವರ ಹಿನ್ನೆಲೆ, ಸಾಧನೆ ಏನೇನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ16 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ18 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ1 day ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌