ತಮಿಳುನಾಡಿನಲ್ಲಿ ಮತ್ತೊಬ್ಬ ಪಿಯು ವಿದ್ಯಾರ್ಥಿನಿ ನಿಗೂಢ ಸಾವು, ಆತ್ಮಹತ್ಯೆ ಶಂಕೆ - Vistara News

ಕ್ರೈಂ

ತಮಿಳುನಾಡಿನಲ್ಲಿ ಮತ್ತೊಬ್ಬ ಪಿಯು ವಿದ್ಯಾರ್ಥಿನಿ ನಿಗೂಢ ಸಾವು, ಆತ್ಮಹತ್ಯೆ ಶಂಕೆ

ಕಳೆದ ಜುಲೈ 13ರಂದು ತಮಿಳುನಾಡಿನ ಕಲ್ಲಕುರಿಚಿಯಲ್ಲಿ ವಿದ್ಯಾರ್ಥಿನಿಯೊಬ್ಬಳ ನಿಗೂಢ ಸಾವು ಸಂಭವಿಸಿತ್ತು. ಅದರ ವಿರುದ್ಧದ ಆಕ್ರೋಶ ಇನ್ನೂ ತಾರಕದಲ್ಲಿ ಇರುವಂತೆಯೇ ಮತ್ತೊಬ್ಬ ವಿದ್ಯಾರ್ಥಿನಿ ಪ್ರಾಣ ಕಳೆದುಕೊಂಡಿದ್ದಾಳೆ.

VISTARANEWS.COM


on

Tamilnadu student suicide
ತಮಿಳುನಾಡಿನ ತಿರುವಳ್ಳೂರಿನಲ್ಲಿ ವಿದ್ಯಾರ್ಥಿನಿಯ ಸಾವು ಸಂಭವಿಸಿದ ಹಾಸ್ಟೆಲ್‌ ಹೊರಗಡೆ ಪೊಲೀಸರ ಭದ್ರತೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಿರುವಳ್ಳೂರು: ಕಲ್ಲಕುರಿಚಿಯ ಕನಿಯಮುನೂರ್‌ ಗ್ರಾಮದಲ್ಲಿರುವ ಶಕ್ತಿ ಮೆಟ್ರಿಕ್ಯುಲೇಶನ್‌ ಸ್ಕೂಲ್‌ನ ಹಾಸ್ಟೆಲ್‌ನಲ್ಲಿ ಶ್ರೀಮತಿ ಎಂಬ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಿಗೂಢವಾಗಿ ಪ್ರಾಣ ಕಳೆದುಕೊಂಡ ವಿದ್ಯಮಾನ ನಡೆದು ಎರಡು ವಾರಗಳಾಗುವ ಮುನ್ನವೇ ತಮಿಳುನಾಡಿನಲ್ಲಿ ಇನ್ನೊಬ್ಬ ಪಿಯುಸಿ ವಿದ್ಯಾರ್ಥಿನಿಯ ಸಾವು ಸಂಭವಿಸಿದೆ.

ಈ ಬಾರಿ ತಿರುವಳ್ಳೂರ್‌ ಜಿಲ್ಲೆಯ ಸರಕಾರಿ ಅನುದಾನಿತ ಶಾಲೆಯೊಂದರ ಹಾಸ್ಟೆಲ್‌ ರೂಮ್‌ನಲ್ಲಿ ೧೨ನೇ ತರಗತಿಯ ವಿದ್ಯಾರ್ಥಿನಿಯ ಸಾವು ಸಂಭವಿಸಿದೆ. ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಪೊಲೀಸರು ತಿಳಿಸಿದ್ದು, ಹೆಚ್ಚಿನ ಮಾಹಿತಿ ಬಿಟ್ಟುಕೊಡುತ್ತಿಲ್ಲ. ಈಗಾಗಲೇ ಘಟನೆಯ ಬಗ್ಗೆ ಸಿಬಿ-ಸಿಐಡಿ ತನಿಖೆಗೆ ಸೂಚನೆ ನೀಡಲಾಗಿದೆ ಎಂದು ಡಿಐಜಿ ಪ್ರಕಟಿಸಿದ್ದಾರೆ. ಶಾಲೆಯ ಆವರಣದಲ್ಲಿ ಬಿಗಿ ಭದ್ರತೆಯನ್ನು ಆಯೋಜಿಸಲಾಗಿದೆ.

೧೭ ವರ್ಷದ ಹುಡುಗಿಯ ಮೃತದೇಹವನ್ನು ತಿರುವಳ್ಳೂರ್‌ ಸರಕಾರಿ ಆಸ್ಪತ್ರೆಗೆ ಒಯ್ಯಲಾಗಿದ್ದು, ಅಲ್ಲಿ ಪೋಸ್ಟ್‌ ಮಾರ್ಟಂ ನಡೆಯಲಿದೆ. ವಿದ್ಯಾರ್ಥಿನಿ ಸೋಮವಾರ ಮುಂಜಾನೆ ಹೊತ್ತಿನಲ್ಲಿ ಈ ಕೃತ್ಯವನ್ನು ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಕಹಿ ನೆನಪು ಮರೆಯುವ ಮುನ್ನವೇ
ಕಳೆದ ಜುಲೈ ೧೩ರಂದು ಕಲ್ಲಕುರಿಚಿಯಲ್ಲಿ ಪಿಯುಸಿ ವಿದ್ಯಾರ್ಥಿನಿ ಸಂಶಯಾಸ್ಪದವಾಗಿ ಸಾವನ್ನಪ್ಪಿದ್ದಳು. ಈ ಘಟನೆ ಬಯಲಾಗುತ್ತಿದ್ದಂತೆಯೇ ದೊಡ್ಡ ಸಂಖ್ಯೆಯಲ್ಲಿ ಪೋಷಕರು ಜಮಾಯಿಸಿ ವಾಹನಗಳನ್ನು ಸುಟ್ಟು ಹಾಕಿದ್ದರು. ಶಾಲೆಯ ಆವರಣದಲ್ಲಿ ದೊಡ್ಡ ಪ್ರಮಾಣದ ಪ್ರತಿಭಟನೆ ನಡೆದಿತ್ತು.
ಪೋಷಕರ ಪ್ರತಿಭಟನೆ ಎಷ್ಟು ತೀವ್ರವಾಗಿತ್ತು ಎಂದರೆ ಮಗಳ ಶವವನ್ನೂ ಸ್ವೀಕರಿಸಲೂ ಹೆತ್ತವರು ನಿರಾಕರಿಸಿದ್ದರು. ತಾವು ಬಯಸಿದ ವೈದ್ಯರ ಮೂಲಕ ಎರಡನೇ ಬಾರಿಗೆ ಮರಣೋತ್ತರ ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದ್ದರು. ಜತೆಗೆ ಸುಪ್ರೀಂಕೋರ್ಟ್‌ಗೂ ಅರ್ಜಿ ಸಲ್ಲಿಸಿದ್ದರು. ಆದರೆ, ಸುಪ್ರೀಂಕೋರ್ಟ್‌ ಅದಕ್ಕೆ ಮನ್ನಣೆ ನೀಡಲಿಲ್ಲ. ಕೊನೆಗೆ ಎರಡು ದಿನಗಳ ಹಿಂದಷ್ಟೇ ಕುಟುಂಬ ಮೃತದೇಹವನ್ನು ಸ್ವೀಕರಿಸಿ ಅಂತ್ಯ ಸಂಸ್ಕಾರ ನಡೆಸಿತ್ತು.

ವಿದ್ಯಾರ್ಥಿನಿಯ ಸಾವಿನ ಹಿಂದೆ ಹಾಸ್ಟೆಲ್‌ನ ವಾರ್ಡನ್‌ಗಳು, ಕೆಲಸಗಾರರು, ಆಡಳಿತ ಮಂಡಳಿಯ ಕೈವಾಡವಿದೆ ಎನ್ನುವುದು ಹೆತ್ತವರ ಗಂಭೀರ ಆರೋಪವಾಗಿದೆ. ಇದೀಗ ಹೈಕೋರ್ಟ್‌ ಮರಣೋತ್ತರ ಪರೀಕ್ಷಾ ವರದಿಯನ್ನು ಸರಿಯಾಗಿ ಅವಲೋಕಿಸಿ ಒಂದು ತಿಂಗಳಲ್ಲಿ ವರದಿ ನೀಡುವಂತೆ ಪೊಲೀಸರಿಗೆ ಸೂಚಿಸಿದೆ.

ಇದನ್ನೂ ಓದಿ| School Girl Suicide | ಶಿಕ್ಷಕರ ಕಿರುಕುಳಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ: ಶಾಲೆ ಮೇಲೆ ಜನರ ದಾಳಿ, ಬಸ್‌ಗೆ ಬೆಂಕಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Accident: ಟೆರೇಸ್ ಮೇಲೆ ನಿಂತು ಜಗಳ ನೋಡುತ್ತಿದ್ದ ಮಹಿಳೆಗೇ ಬಿತ್ತು ಗುಂಡೇಟು!

ಉತ್ತರ ದೆಹಲಿಯಲ್ಲಿ 17 ಲಕ್ಷ ರೂಪಾಯಿಗಾಗಿ ಇಬ್ಬರ ನಡುವೆ ನಡೆದ ವಾದವು ಜಗಳಕ್ಕೆ ತಿರುಗಿತ್ತು. ಈ ನಡುವೆ ಒಬ್ಬ ವ್ಯಕ್ತಿ ಪಿಸ್ತೂಲ್ ಎಳೆದು ಮತ್ತೊಬ್ಬ ವ್ಯಕ್ತಿಯತ್ತ ಗುಂಡು ಹಾರಿಸಿದ್ದಾನೆ. ಆದರೆ, ಬುಲೆಟ್ ಗುರಿ ತಪ್ಪಿ (Accident) ಟೆರೇಸ್‌ನಿಂದ ಜಗಳವನ್ನು ಗಮನಿಸುತ್ತಿದ್ದ 48 ವರ್ಷದ ಮಹಿಳೆಗೆ ತಗುಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

VISTARANEWS.COM


on

By

Accident
Koo

ನವದೆಹಲಿ: ಟೆರೇಸ್‌ನಲ್ಲಿ ನಿಂತು ಹೊಡೆದಾಟವನ್ನು ನೋಡುತ್ತಿದ್ದ ಮಹಿಳೆಗೆ ಆಕಸ್ಮಿಕವಾಗಿ (Accident) ಗುಂಡು (shot) ತಾಗಿರುವ ಘಟನೆ ಉತ್ತರ ದೆಹಲಿಯ (north delhi) ದಯಾಲ್‌ಪುರದಲ್ಲಿ ನಡೆದಿದೆ. ಒಬ್ಬ ವ್ಯಕ್ತಿ ಮತ್ತೊಬ್ಬ ವ್ಯಕ್ತಿಗೆ ಗುಂಡು ಹಾರಿಸಿದಾಗ ಅದು ತಪ್ಪಿ ಟೆರೇಸ್ ಮೇಲೆ ನಿಂತು ಇವರ ಜಗಳ ನೋಡುತ್ತಿದ್ದ ಮಹಿಳೆಗೆ ತಗುಲಿದೆ ಎನ್ನಲಾಗಿದೆ.

ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಈಶಾನ್ಯ ದೆಹಲಿಯ ದಯಾಲ್‌ಪುರ್‌ನಲ್ಲಿ ಜುಲೈ 2ರಂದು ಶನಿವಾರ ಇಬ್ಬರ ನಡುವೆ ಜಗಳವಾಗಿದೆ. ಪೊಲೀಸ್ ಅಧಿಕಾರಿಗಳ ಪ್ರಕಾರ, 17 ಲಕ್ಷ ರೂಪಾಯಿಗಾಗಿ ಇವರ ನಡುವೆ ನಡೆದ ವಾದವು ಜಗಳಕ್ಕೆ ತಿರುಗಿತ್ತು. ಈ ನಡುವೆ ಒಬ್ಬ ವ್ಯಕ್ತಿ ಪಿಸ್ತೂಲ್ ಎಳೆದು ಮತ್ತೊಬ್ಬ ವ್ಯಕ್ತಿಯತ್ತ ಗುಂಡು ಹಾರಿಸಿದ್ದಾನೆ. ಆದರೆ, ಬುಲೆಟ್ ತಪ್ಪಿ ಟೆರೇಸ್‌ನಿಂದ ಜಗಳವನ್ನು ಗಮನಿಸುತ್ತಿದ್ದ 48 ವರ್ಷದ ಮಹಿಳೆಗೆ ಹೊಡೆದಿದೆ.

ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ ಗುಂಡೇಟಿನಿಂದ ಗಾಯಗೊಂಡಿದ್ದ ಮಹಿಳೆಯನ್ನು ಆಕೆಯ ಕುಟುಂಬದವರು ಜಿಟಿಬಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆರೋಪಿಗಳ ಪೈಕಿ ಬಬ್ಲು ಎಂಬಾತನಿಗೆ 17 ಲಕ್ಷ ರೂ.ಗಳನ್ನು ಸಾಲವಾಗಿ ನೀಡಿದ್ದಾಗಿ ದೂರುದಾರ ಹಾಶಿಮ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಆತ ಬಬ್ಲುವನ್ನು ವಿಚಾರಿಸಲು ಹೋದಾಗ ವಾದವು ವಿಕೋಪಕ್ಕೆ ತಿರುಗಿದೆ. ಬಬ್ಲು ತನ್ನ ಸಹಚರರಾದ ಕಮರುಲ್, ಸುಹಾಲೆ ಮತ್ತು ಸಮ್ರುನ್‌ನೊಂದಿಗೆ ಬಂದಿದ್ದು, ಹಾಶಿಮ್ ಮೇಲೆ ಹಲ್ಲೆಗೆ ಮುಂದಾಗಿದ್ದರು. ಈ ನಡುವೆ ಕಮರುಲ್ ಎಂಬಾತ ಹಾಶಿಮ್‌ ಮೇಲೆ ಗುಂಡು ಹಾರಿಸಿದ ಎನ್ನಲಾಗಿದೆ. ಆದರೆ ಇದು ಗುರಿ ತಪ್ಪಿ ಮಹಿಳೆಗೆ ಹೊಡೆದಿದೆ. ಗುಂಡಿನ ದಾಳಿಯ ಅನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಇದನ್ನೂ ಓದಿ: Self Harming : ನಿದ್ದೆ ಇಲ್ಲದೇ ಒದ್ದಾಟ; ಬೇವಿನ ಮರಕ್ಕೆ ನೇಣು ಬಿಗಿದುಕೊಂಡ ಆಟೋ ಚಾಲಕ

ಪೊಲೀಸರು ದೆಹಲಿಯ ಬ್ರಿಜ್‌ಪುರಿ ನಿವಾಸಿಗಳಾದ ಬಬ್ಲು (38) ಮತ್ತು ಕಮರುಲ್ (26) ಎಂಬವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಪಿಸ್ತೂಲ್, ಸ್ಕೂಟರ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಉಳಿದ ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುದ್ಧಿ ಹೇಳಿದ್ದಕ್ಕೆ ಶಿಕ್ಷಕನನ್ನೇ ಕೊಂದ ವಿದ್ಯಾರ್ಥಿ

ವಿದ್ಯೆ ಕಲಿಸಿದ ಗುರುವನ್ನೇ ವಿದ್ಯಾರ್ಥಿಯೊಬ್ಬ ಇರಿದು ಕೊಂದಿ ಘಟನೆ ಅಸ್ಸಾಂನ ಶಿವಸಾಗರ್ ಜಿಲ್ಲೆಯ ಶಾಲೆಯೊಂದರಲ್ಲಿ ನಡೆದಿದೆ. 11 ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನನ್ನು ತರಗತಿಯಲ್ಲಿ ಇರಿದು ಕೊಂದಿದ್ದಾನೆ. ಕಳಪೆ ಸಾಧನೆಗಾಗಿ ಬೈದಿದ್ದಕ್ಕಾಗಿ ರಸಾಯನಶಾಸ್ತ್ರ ಶಿಕ್ಷಕ ರಾಜೇಶ್ ಬರುವಾ ಬೆಜವಾಡ (55) ಮೇಲೆ ಹಲ್ಲೆ ನಡೆಸಿ ಕೊಂದ 16 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಜವಾಡ ಅವರು ರಸಾಯನಶಾಸ್ತ್ರವನ್ನು ಕಲಿಸುತ್ತಿದ್ದರು. ಜೊತೆಗೆ ಖಾಸಗಿ ಒಡೆತನದ ಶಾಲೆಯಲ್ಲಿ ನಿರ್ವಹಣಾ ಜವಾಬ್ದಾರಿಗಳನ್ನು ಸಹ ಹೊಂದಿದ್ದರು. ರಸಾಯನಶಾಸ್ತ್ರದಲ್ಲಿನ ಕಲಿಕೆಯ ಬಗ್ಗೆ ಶಿಕ್ಷಕರು ವಿದ್ಯಾರ್ಥಿಯನ್ನು ಗದರಿಸಿದ್ದರು. ಅಲ್ಲದೇ ಪೋಷಕರ ಸಭೆಗಾಗಿ ಪೋಷಕರನ್ನು ಶಾಲೆಗೆ ಕರೆದುಕೊಂಡು ಬಾ ಎಂದು ಹೇಳಿದ್ದರು ಎನ್ನಲಾಗಿದೆ.

ದಿನದ ನಂತರ ವಿದ್ಯಾರ್ಥಿ ಕ್ಯಾಶುಯಲ್ ಬಟ್ಟೆಗಳಲ್ಲಿ ತರಗತಿಗೆ ಬಂದಿದ್ದ. ಶಿಕ್ಷಕರು ಅವನನ್ನು ಹೊರಹೋಗುವಂತೆ ಕೇಳಿದರು. ಇದ್ದಕ್ಕಿದ್ದಂತೆ ವಿದ್ಯಾರ್ಥಿ ಬೆಜವಾಡ ಅವರ ಮೇಲೆ ಹಲ್ಲೆ ನಡೆಸಿ ಚಾಕುವಿನಿಂದ ಪದೇ ಪದೇ ಇರಿದಿದ್ದಾನೆ.
ಇನ್ನು ಘಟನೆ ಬಗ್ಗೆ ಪೊಲೀಸರು ಪ್ರತಿಕ್ರಿಯಿಸಿದ್ದು, ಕೋಚಿಂಗ್‌ ಸೆಂಟರ್‌ನಲ್ಲಿ ಕೊಲೆಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಸ್ಥಳಕ್ಕೆ ಬಂದು ನೋಡಿದಾಗ ತರಗತಿಯಲ್ಲಿ ರಕ್ತದ ಮಡುವಿನಲ್ಲಿ ಶಿಕ್ಷಕ ಬಿದ್ದಿದ್ದರು. ಅಲ್ಲೇ ಚಾಕು ಕೂಡ ಇತ್ತು.

ಶಿಕ್ಷಕನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಸಿಲಾಯಿತಾದರೂ ಆತ ಸಾವನ್ನಪ್ಪಿರುವುದನ್ನು ವೈದ್ಯರು ಖಚಿತಪಡಿಸಿದರು. ಇನ್ನು ವಿದ್ಯಾರ್ಥಿಯನ್ನು ಈಗಾಗಲೇ ವಶಕ್ಕೆ ಪಡೆದಿದ್ದೇವೆ. ಸಿಸಿಟಿವಿ ದೃಶ್ಯಾವಳಿಗಳನ್ನು ನಾವು ಪರಿಶೀಲನೆ ನಡೆಸುತ್ತಿದ್ದೇವೆ. ಇತರ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದಾಗ ಶಿಕ್ಷಕ ವಿದ್ಯಾರ್ಥಿಗೆ ಈ ಹಿಂದೆ ಬೈದಿದ್ದರು ಎಂಬುದು ಬಯಲಾಗಿದೆ ಎಂದು ಹೇಳಿದ್ದಾರೆ.

Continue Reading

ಕೊಡಗು

Elephant attack :ಕಾರಿನ ಮೇಲೆ ಕಾಡಾನೆ ದಾಳಿ; ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

Elephant attack : ಕಾರಿನ ಮೇಲೆ ಕಾಡಾನೆಯೊಂದು ದಾಳಿ ಮಾಡಿದ್ದು, ಮಕ್ಕಳು ಸೇರಿ ನಾಲ್ವಾರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

VISTARANEWS.COM


on

By

Elephant attack car in Kodagu‌ four people escape
Koo

ಕೊಡಗು: ಮಲೆನಾಡು ಭಾಗದಲ್ಲಿ ಕಾಡಾನೆಗಳ (Wild animal attack) ಉಪಟಳ ಹೆಚ್ಚಾಗುತ್ತಿದ್ದು, ಕೊಡಗಿನಲ್ಲಿ ಕಾರಿನ ಮೇಲೆ ಕಾಡಾನೆ ದಾಳಿ (Elephant attack) ನಡೆಸಿದೆ. ಕಾರಿನೊಳಗೆ ಇದ್ದ ಕುಟುಂಬವೊಂದು ಕೂದಲೆಳೆಯ ಅಂತರದಿಂದ ಪಾರಾಗಿದ್ದಾರೆ. ವೀರಾಜಪೇಟೆಯ ಯಶವಂತ್ ಅವರ ಕುಟುಂಬವು ಕಾಡಾನೆ ದಾಳಿಯಿಂದ ಪಾರಾಗಿದ್ದಾರೆ.

ಯಶವಂತ್‌ ತಮ್ಮ ಕುಟುಂಬದೊಂದಿಗೆ ಟಿ.ಶೆಟ್ಟಿಗೇರಿಯಿಂದ ಇರ್ಪು ಕಡೆ ತೆರಳುತ್ತಿದ್ದಳು. ಈ ವೇಳೆ ಪೊನ್ನಂಪೇಟೆ ತಾಲೂಕಿನ ಕುರ್ಚಿ ಗ್ರಾಮದಲ್ಲಿ ಅಡ್ಡಗಟ್ಟಿದ ಆನೆಯು ಏಕಾಏಕಿ ದಾಳಿ ಮಾಡಿದೆ. ಆನೆ ಹತ್ತಿರ ಬರುತ್ತಿದ್ದಂತೆ ಕಾರಿನಿಂದ ಇಳಿದು ಓಡಿದ್ದಾರೆ. ಈ ವೇಳೆ ಆನೆಯು ಕಾರು ಜಖಂಗೊಳಿಸಿದೆ. ಇಬ್ಬರು ಮಕ್ಕಳು ಸೇರಿದಂತೆ ಕಾರಿನಲ್ಲಿದ್ದ ನಾಲ್ವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

ಕಾಡಾನೆ ಹಾವಳಿಗೆ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಪ್ರತಿನಿತ್ಯ ಗ್ರಾಮದಲ್ಲಿ ಕಾಡಾನೆಗಳು ಅಡ್ಡಾಡುತ್ತಿದ್ದರೂ ಸೆರೆಹಿಡಿಯದೆ ಸುಮ್ಮನಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

ಇದನ್ನೂ ಓದಿ: Wild Animals Attack: ವಿಜಯನಗರ: ನಾಡಿಗೆ ನುಗ್ಗಿದ ಕರಡಿಯನ್ನು ರಾತ್ರೋರಾತ್ರಿ ಕಾಡಿಗೆ ಅಟ್ಟಿದ ಅರಣ್ಯ ಇಲಾಖೆ ಸಿಬ್ಬಂದಿ

ರಾಯಚೂರಿನಲ್ಲಿ ಮೂವರ ಮೇಲೆ ದಾಳಿ ಮಾಡಿ ಕಾಲ್ಕಿತ್ತ ಚಿರತೆ

ರಾಯಚೂರು: ಕಾಡುಪ್ರಾಣಿಗಳ ಹಾವಳಿ (Wild Animal Attack) ಹೆಚ್ಚಾಗಿದ್ದು, ಜನ-ಸಾಮಾನ್ಯರು ಆತಂಕದಲ್ಲೇ ಓಡಾಡುವಂತಾಗಿದೆ. ಆಹಾರ ಅರಸಿ ನಾಡಿಗೆ ಕಾಲಿಡುತ್ತಿರುವ ಪ್ರಾಣಿಗಳು ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡುತ್ತಿವೆ. ಜತೆಗೆ ಸಾಕುಪ್ರಾಣಿಗಳನ್ನು ಕೊಂದು ಎತ್ತಿಕೊಂಡು ಹೋಗುತ್ತಿವೆ. ಸದ್ಯ ರಾಯಚೂರಿನ ದೇವದುರ್ಗ ತಾಲ್ಲೂಕಿನ ಕಮದಾಳು ಗ್ರಾಮದಲ್ಲಿ ಮೂವರ ಮೇಲೆ ಚಿರತೆ (Leopard attack) ದಾಳಿ ನಡೆಸಿದೆ.

ಚಿರತೆ ದಾಳಿಯಿಂದಾಗಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮಲ್ಲಣ್ಣ, ರಂಗನಾಥ್‌, ಹನಮೇಶ ಕಮದಾಳ ಗಾಯಾಳುಗಳು. ಸದ್ಯ ಗಾಯಾಳುಗಳನ್ನು ದೇವದುರ್ಗ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಮೂವರು ಜಮೀನಿಗೆ ತೆರಳುತ್ತಿದ್ದಾಗ, ಹಿಂದಿನಿಂದ ಬಂದ ಚಿರತೆಯು ಮೂವರ ಮೇಲೂ ಎರಗಿ ದಾಳಿ ಮಾಡಿ ಗಾಯಗೊಳಿಸಿದೆ.

ಚಿರತೆ ಪ್ರತ್ಯಕ್ಷವಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿದೆ. ಇನ್ನೂ ಸ್ಥಳಕ್ಕೆ ಪೊಲೀಸ್ ಹಾಗೂ ಅರಣ್ಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಮದಾಳು,ಯರಮಸಾಳ, ಜೇರಬಂಡಿ, ಗುಂಡಗುರ್ತಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಕೂಡಲೇ ಸೆರೆಹಿಡಿಯುವಂತೆ ಜನರು ಒತ್ತಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Bengaluru News : ʻ ಹುಡುಗ- ಹುಡುಗಿಯರ ಸರ್ವಿಸ್ ಬೇಕಾʼ ಎಂದವನ ಹೆಡೆಮುರಿ ಕಟ್ಟಿದ ಖಾಕಿ ಪಡೆ

Bengaluru News : ಬೇರೆ ಬೇರೆ ನಂಬರ್‌ಗಳಿಂದ ಸಿಕ್ಕ ಸಿಕ್ಕವರಿಗೆ ಫೋನ್‌ ಮಾಡಿ ಹುಡುಗ ಹಾಗೂ ಹುಡುಗಿಯರ ಸರ್ವೀಸ್ ಬೇಕಾ ಅಂತ ಕಿರಿಕಿರಿ ನೀಡುತ್ತಿದ್ದ ದುಷ್ಟನನ್ನು (Physical Abuse) ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

By

Bengaluru News Physical Abuse
Koo

ಬೆಂಗಳೂರು: ಹುಡುಗ ಹಾಗೂ ಹುಡುಗಿಯರ ಸರ್ವಿಸ್ ಬೇಕಾ ಎಂದು ಯುವಕ-ಯುವತಿಯರಿಗೆ ಮಸೇಜ್‌ ಮಾಡುತ್ತಿದ್ದ‌ (Physical Abuse) ಕಿರಾತಕನನ್ನು (Bengaluru News) ಖಾಕಿ ಪಡೆ ಬಂಧಿಸಿದೆ. ಪೂರ್ವ ವಿಭಾಗ ಸೆನ್ ಪೊಲೀಸರು ಆನಂದ್ ಶರ್ಮಾ ಎಂಬಾತನನ್ನು ಬಂಧಿಸಿದ್ದಾರೆ.

ಈ ದುಷ್ಟ ಬೇರೆ ಬೇರೆ ನಂಬರ್‌ಗಳನ್ನು ಬಳಸಿ ಫೋನ್‌ ಮಾಡಿ ಹುಡುಗಿಯರ ಸರ್ವಿಸ್ ಬೇಕಾ ಎಂದು ಕರೆ ಮಾಡುತ್ತಿದ್ದ. ಸುಭಿ ಎಂಬಾಕೆಗೂ ಕರೆ ಮಾಡಿ ಟಾರ್ಚರ್‌ ಕೊಟ್ಟಿದ್ದ. ಹೀಗಾಗಿ ಆಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ದೂರು ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಮೊಬೈಲ್ ನಂಬರ್ ಆಧರಿಸಿ ಆರೋಪಿ ಆನಂದ್‌ ಶರ್ಮಾನನ್ನು ಪೂರ್ವ ವಿಭಾಗ ಸೆನ್ ಪೊಲೀಸರು ಬಂಧಿಸಿದ್ದಾರೆ. ಶೇಷಾದ್ರಿಪುರಂ ವಿ ಸ್ಟೇಜ್ ಪಿಜಿ ಬಳಿ ಆರೋಪಿಯನ್ನು ಬಂಧಿಸಿ, ಆತ ಬಳಿಯಿದ್ದ ಮೊಬೈಲ್ ಫೋನ್ ವಶಪಡಿಸಿಕೊಂಡು ತನಿಖೆಯನ್ನು ಮುಂದುವರೆಸಿದ್ದಾರೆ.

ಇದನ್ನೂ ಓದಿ: Self Harming : ನಿದ್ದೆ ಇಲ್ಲದೇ ಒದ್ದಾಟ; ಬೇವಿನ ಮರಕ್ಕೆ ನೇಣು ಬಿಗಿದುಕೊಂಡ ಆಟೋ ಚಾಲಕ

ಮನೆಗೆ ನುಗ್ಗಿ ಯುವಕನಿಂದ ಬಾಲಕಿ ಮೇಲೆ ಅಮಾನುಷ ಹಲ್ಲೆ; ವಿಡಿಯೊ ನೋಡಿ ಜನಾಕ್ರೋಶ

ನವದೆಹಲಿ: ಅಪ್ರಾಪ್ತ ವಯಸ್ಸಿನ ಬಾಲಕಿಗೆ (minor girl) ದುಷ್ಕರ್ಮಿಯೊಬ್ಬ ಅಮಾನುಷವಾಗಿ ಥಳಿಸಿರುವ ಘಟನೆ ನಡೆದಿದ್ದು, ಇದರ ವಿಡಿಯೋ (Viral Video) ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ ಆಗಿ ವ್ಯಾಪಕ ಜನಾಕ್ರೋಶಕ್ಕೆ ಕಾರಣವಾಗಿದೆ. ತಮ್ಮ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು ಬಯಸುವ ವ್ಯಕ್ತಿಯೊಬ್ಬ ಹುಡುಗಿ ಮೇಲೆ ಹಲ್ಲೆ ಮಾಡಿರುವುದನ್ನು ಈ ವಿಡಿಯೋದಲ್ಲಿ ಸೆರೆ ಹಿಡಿಯಲಾಗಿದೆ.

ಲಕ್ನೋದ ಬಿ-376 ವಿಶಾಲ್ ಖಂಡ್‌ನ ಗೋಮತಿ ನಗರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಈ ವಿಡಿಯೋವನ್ನು ಆದಿತ್ಯ ಕಮಲ್ ಪಾಂಡೆ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಪ್ರಬಲ್ ಪ್ರತಾಪ್ ಸಿಂಗ್ ಎಂಬ ವ್ಯಕ್ತಿ ಅಪ್ರಾಪ್ತ ಬ್ರಾಹ್ಮಣ ಹುಡುಗಿಯ ಮನೆಗೆ ಬಲವಂತವಾಗಿ ಪ್ರವೇಶಿಸಿ, ಅಶ್ಲೀಲವಾಗಿ ನಿಂದಿಸುತ್ತಾನೆ. ಫೋನ್‌ನಲ್ಲಿ ಯಾರೊಂದಿಗಾದರೂ ಮಾತನಾಡುವಂತೆ ಮಾಡುತ್ತಾನೆ. ಈ ಅಪ್ರಾಪ್ತ ಬಾಲಕಿ ಯಾಕೆ ಹಾಗೆ ಹೇಳುತ್ತೀರಿ ಎಂದು ಪ್ರಶ್ನಿಸಿದಾಗ ಆತ ಬಾಲಕಿಗೆ ಕಪಾಳಮೋಕ್ಷ ಮಾಡಿದ್ದಾನೆ. ಬಾಲಕಿಯ ಫೋನ್‌ಗಳನ್ನು ಒಡೆಯಲಾಗಿದೆ, ಬಟ್ಟೆ ಹರಿದು ಹಾಕಲಾಗಿದೆ. ಆಕೆಗೆ ಸಾಕಷ್ಟು ಹಿಂಸೆ ನೀಡಲಾಗಿದೆ. ವ್ಯಕ್ತಿಯು ರಿವಾಲ್ವರ್ ಕೂಡ ಹೊಂದಿದ್ದ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಹೇಳಲಾಗಿದೆ.

ಆರೋಪಿಯನ್ನು ಬಂಧಿಸಿರುವ ಕುರಿತು ಈವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ವಿಡಿಯೋದಲ್ಲಿರುವ ಬಾಲಕಿಯನ್ನು ದೀಪಶಿಖಾ ತಿವಾರಿ ಎಂದು ಗುರುತಿಸಲಾಗಿದ್ದು, ಆ ವ್ಯಕ್ತಿ ಅವರ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು ಬಯಸಿದ್ದಾರೆ ಎನ್ನಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವೈರಲ್ ನ್ಯೂಸ್

Viral Video: ಮನೆಗೆ ನುಗ್ಗಿ ಯುವಕನಿಂದ ಬಾಲಕಿ ಮೇಲೆ ಅಮಾನುಷ ಹಲ್ಲೆ; ವಿಡಿಯೊ ನೋಡಿ ಜನಾಕ್ರೋಶ

ಆಸ್ತಿಯನ್ನು ವಶಪಡಿಕೊಳ್ಳಲು ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಪ್ರಬಲ್ ಪ್ರತಾಪ್ ಸಿಂಗ್ ಎಂಬ ವ್ಯಕ್ತಿ ಅಪ್ರಾಪ್ತ ವಯಸ್ಸಿನ ಬ್ರಾಹ್ಮಣ ಹುಡುಗಿಯ ಮನೆಗೆ ಬಲವಂತವಾಗಿ ಪ್ರವೇಶಿಸಿ, ಅಶ್ಲೀಲವಾಗಿ ನಿಂದಿಸಿರುವ ಘಟನೆ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿ ಜನಾಕ್ರೋಶಕ್ಕೆ ಕಾರಣವಾಗಿದೆ.

VISTARANEWS.COM


on

By

Viral Video
Koo

ನವದೆಹಲಿ: ಅಪ್ರಾಪ್ತ ವಯಸ್ಸಿನ ಬಾಲಕಿಗೆ (minor girl) ದುಷ್ಕರ್ಮಿಯೊಬ್ಬ ಅಮಾನುಷವಾಗಿ ಥಳಿಸಿರುವ ಘಟನೆ ನಡೆದಿದ್ದು, ಇದರ ವಿಡಿಯೋ (Viral Video) ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ ಆಗಿ ವ್ಯಾಪಕ ಜನಾಕ್ರೋಶಕ್ಕೆ ಕಾರಣವಾಗಿದೆ. ತಮ್ಮ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು ಬಯಸುವ ವ್ಯಕ್ತಿಯೊಬ್ಬ ಹುಡುಗಿ ಮೇಲೆ ಹಲ್ಲೆ ಮಾಡಿರುವುದನ್ನು ಈ ವಿಡಿಯೋದಲ್ಲಿ ಸೆರೆ ಹಿಡಿಯಲಾಗಿದೆ.

ಲಕ್ನೋದ ಬಿ-376 ವಿಶಾಲ್ ಖಂಡ್‌ನ ಗೋಮತಿ ನಗರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಈ ವಿಡಿಯೋವನ್ನು ಆದಿತ್ಯ ಕಮಲ್ ಪಾಂಡೆ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಪ್ರಬಲ್ ಪ್ರತಾಪ್ ಸಿಂಗ್ ಎಂಬ ವ್ಯಕ್ತಿ ಅಪ್ರಾಪ್ತ ಬ್ರಾಹ್ಮಣ ಹುಡುಗಿಯ ಮನೆಗೆ ಬಲವಂತವಾಗಿ ಪ್ರವೇಶಿಸಿ, ಅಶ್ಲೀಲವಾಗಿ ನಿಂದಿಸುತ್ತಾನೆ. ಫೋನ್‌ನಲ್ಲಿ ಯಾರೊಂದಿಗಾದರೂ ಮಾತನಾಡುವಂತೆ ಮಾಡುತ್ತಾನೆ. ಈ ಅಪ್ರಾಪ್ತ ಬಾಲಕಿ ಯಾಕೆ ಹಾಗೆ ಹೇಳುತ್ತೀರಿ ಎಂದು ಪ್ರಶ್ನಿಸಿದಾಗ ಆತ ಬಾಲಕಿಗೆ ಕಪಾಳಮೋಕ್ಷ ಮಾಡಿದ್ದಾನೆ. ಬಾಲಕಿಯ ಫೋನ್‌ಗಳನ್ನು ಒಡೆಯಲಾಗಿದೆ, ಬಟ್ಟೆ ಹರಿದು ಹಾಕಲಾಗಿದೆ. ಆಕೆಗೆ ಸಾಕಷ್ಟು ಹಿಂಸೆ ನೀಡಲಾಗಿದೆ. ವ್ಯಕ್ತಿಯು ರಿವಾಲ್ವರ್ ಕೂಡ ಹೊಂದಿದ್ದ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಹೇಳಲಾಗಿದೆ.

ಇದನ್ನೂ ಓದಿ: MS Dhoni Birthday: ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಪತ್ನಿ; ವಿಡಿಯೊ ವೈರಲ್​

ಆರೋಪಿಯನ್ನು ಬಂಧಿಸಿರುವ ಕುರಿತು ಈವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ವಿಡಿಯೋದಲ್ಲಿರುವ ಬಾಲಕಿಯನ್ನು ದೀಪಶಿಖಾ ತಿವಾರಿ ಎಂದು ಗುರುತಿಸಲಾಗಿದ್ದು, ಆ ವ್ಯಕ್ತಿ ಅವರ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು ಬಯಸಿದ್ದಾರೆ ಎನ್ನಲಾಗಿದೆ.

ಮಕ್ಕಳ ಬಿಸಿಯೂಟದಲ್ಲೂ ಕಳ್ಳಾಟ, ವಿದ್ಯಾರ್ಥಿಗಳಿಗೆ ಸಿಗೋದು ಬರೀ ಅನ್ನ-ಅರಿಶಿಣ

ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಬೇಕು ಎಂದು ಕರ್ನಾಟಕ ಸೇರಿ ದೇಶದ ಹಲವು ರಾಜ್ಯಗಳ ಶಾಲೆಗಳಲ್ಲಿ ಜಾರಿಗೆ ತಂದಿರುವ ಮಧ್ಯಾಹ್ನ ಬಿಸಿಯೂಟದ ಯೋಜನೆಗಳಲ್ಲೂ ಅಧಿಕಾರಿಗಳು ಕಳ್ಳಾಟ ಆಡುತ್ತಿದ್ದಾರೆ. ಕೆಲವೆಡೆ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಬಿಸಿಯೂಟ ನೀಡುವುದಿಲ್ಲ ಎಂಬ ಆರೋಪಗಳು ಕೇಳಿಬರುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ ಛತ್ತೀಸ್‌ಗಢದ ಶಾಲೆಯೊಂದರಲ್ಲಿ ಮಕ್ಕಳಿಗೆ ಬಿಸಿಯೂಟ ಯೋಜನೆ ಅನ್ವಯ ಬರೀ ಅನ್ನ ಹಾಗೂ ಅರಿಶಿಣ ಮಿಶ್ರಣ ಮಾಡಿ ಅದನ್ನೇ ನೀಡಲಾಗಿದೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಛತ್ತೀಸ್‌ಗಢದ ಬಲರಾಮ್‌ಪುರ ಜಿಲ್ಲೆಯ ಬಿಜಾಕುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಇಷ್ಟೊಂದು ಕಳಪೆ ಆಹಾರವನ್ನು ನೀಡಲಾಗುತ್ತಿದೆ. ಮಕ್ಕಳು ಅರಿಶಿಣ ಮಿಕ್ಸ್‌ ಆಗಿರುವ ಅನ್ನವನ್ನು ಸೇವಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 43 ವಿದ್ಯಾರ್ಥಿಗಳು ಓದುತ್ತಿದ್ದು, ಬಹುತೇಕರು ಬಡವರ ಮಕ್ಕಳಾಗಿದ್ದಾರೆ. ಆದರೆ, ಇವರಿಗೆ ಕಳೆದ ಒಂದು ವಾರದಿಂದ ಬಿಸಿಯೂಟದಲ್ಲಿ ತರಕಾರಿ ನೀಡದೆ, ಬರೀ ಅರಿಶಿಣ ಮಿಶ್ರಣ ಆಗಿರುವ ಅನ್ನ ನೀಡಲಾಗುತ್ತಿದೆ. ಇದನ್ನು ಶಾಲೆಯ ಅಧಿಕಾರಿಗಳೇ ದೃಢಪಡಿಸಿದ್ದಾರೆ.

ಒಂದು ವಾರದಿಂದ ತರಕಾರಿ ಪೂರೈಸುವವರು ಶಾಲೆಗೆ ತರಕಾರಿ ಪೂರೈಸುತ್ತಿಲ್ಲ. ಎಷ್ಟೇ ಪ್ರಯತ್ನ ಪಟ್ಟರೂ ತರಕಾರಿ ವ್ಯವಸ್ಥೆ ಆಗಿಲ್ಲ. ಹಾಗಾಗಿ, ಮಕ್ಕಳಿಗೆ ಅನ್ನ-ಸಾರು ಇಲ್ಲವೇ ಅರಿಶಿಣ ಮಿಶ್ರಿತ ಅನ್ನ ನೀಡುತ್ತಿದ್ದೇವೆ ಎಂದು ಶಾಲೆಯ ಮುಖ್ಯೋಪಾಧ್ಯಾಯ ತಿಳಿಸಿದ್ದಾರೆ.

ಇವರ ಆರೋಪಗಳಿಗೆ ತರಕಾರಿ ಪೂರೈಸುವವರು ಪ್ರತಿಕ್ರಿಯಿಸಿದ್ದು, ಶಾಲೆಗೆ ತರಕಾರಿ ಪೂರೈಸಿದ್ದಕ್ಕೆ ಹಲವು ತಿಂಗಳಿಂದ ಹಣ ನೀಡಿಲ್ಲ. ಇದರಿಂದಾಗಿ ನಾವು ತರಕಾರಿ ಪೂರೈಸುತ್ತಿಲ್ಲ ಎಂದು ಹೇಳಿದ್ದಾರೆ.

Continue Reading
Advertisement
School Principal
ದೇಶ3 hours ago

School Principal: ಶಾಲೆಯಲ್ಲೇ ಮಹಿಳಾ ಟೀಚರ್‌ ಜತೆ ಪ್ರಿನ್ಸಿಪಾಲ್‌ ರೊಮ್ಯಾನ್ಸ್;‌ ವೈರಲ್‌ ಫೋಟೊ ಇಲ್ಲಿದೆ

WCPL 2024
ಪ್ರಮುಖ ಸುದ್ದಿ4 hours ago

WCPL 2024 : ಸಿಪಿಎಲ್​​ನ ಟ್ರಿನ್​ಬ್ಯಾಗೊ ರೈಡರ್ಸ್​ ತಂಡಕ್ಕೆ ಜೆಮಿಮಾ, ಶಿಖಾ ಸೇರ್ಪಡೆ

KRS Inflow
ದೇಶ4 hours ago

KRS Inflow: ಕೆಆರ್‌ಎಸ್‌ಗೆ ದಾಖಲೆಯ 11 ಸಾವಿರ ಕ್ಯುಸೆಕ್‌ ನೀರು ಒಳಹರಿವು; ಸೋಮವಾರದಿಂದ ನಾಲೆಗಳಿಗೆ ನೀರು

Abhishek Sharma
ಕ್ರೀಡೆ4 hours ago

Abhishek Sharma : 47 ಎಸೆತಕ್ಕೆ ಶತಕ ಬಾರಿಸಿ ಹಲವಾರು ದಾಖಲೆ ಮುರಿದಿ ಅಭಿಷೇಕ್​ ಶರ್ಮಾ

Dengue Scare
ಕರ್ನಾಟಕ5 hours ago

Dengue Scare: ಸರ್ಕಾರದಿಂದಲೇ ಉಚಿತವಾಗಿ ಡೆಂಗ್ಯೂ ಪರೀಕ್ಷೆ ಮಾಡಿಸಲಿ; ಆರ್.‌ ಅಶೋಕ್‌ ಆಗ್ರಹ

World Biryani Day:
ಪ್ರಮುಖ ಸುದ್ದಿ5 hours ago

World Biryani Day : ಕೋಲ್ಕತಾ, ಹೈದರಾಬಾದ್ ಬಿರಿಯಾನಿ ತಿಂದಿರಬಹುದು; ಇವುಗಳ ಹಿನ್ನೆಲೆ ಗೊತ್ತಾ?

Accident
Latest6 hours ago

Accident: ಟೆರೇಸ್ ಮೇಲೆ ನಿಂತು ಜಗಳ ನೋಡುತ್ತಿದ್ದ ಮಹಿಳೆಗೇ ಬಿತ್ತು ಗುಂಡೇಟು!

Puri Jagannath Rath Yatra
ಪ್ರಮುಖ ಸುದ್ದಿ6 hours ago

Puri Jagannath Rath Yatra: ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಒಬ್ಬನ ಸಾವು, 400 ಭಕ್ತರಿಗೆ ಗಾಯ!

NIA Arrest
ದೇಶ6 hours ago

NIA Arrest: ಹಿಜ್ಬುಲ್‌, LeT ಉಗ್ರ ಸಂಘಟನೆಗಳ ಜೊತೆ ನಂಟು; ಪ್ರಮುಖ ಆರೋಪಿ ಅರೆಸ್ಟ್‌

Elephant attack car in Kodagu‌ four people escape
ಕೊಡಗು6 hours ago

Elephant attack :ಕಾರಿನ ಮೇಲೆ ಕಾಡಾನೆ ದಾಳಿ; ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ8 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ10 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ11 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ21 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ1 day ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ1 day ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ2 days ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

ಟ್ರೆಂಡಿಂಗ್‌