ದ್ರೌಪದಿ ಮುರ್ಮು ಭಾಷಣವನ್ನು ಮನಸಾರೆ ಹೊಗಳಿದ ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋಟ್‌ - Vistara News

ದೇಶ

ದ್ರೌಪದಿ ಮುರ್ಮು ಭಾಷಣವನ್ನು ಮನಸಾರೆ ಹೊಗಳಿದ ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋಟ್‌

Draupadi murmu: ದ್ರೌಪದಿ ಮುರ್ಮು ರಾಷ್ಟ್ರಪತಿ ಚುನಾವಣೆಯಲ್ಲಿ ಗೆದ್ದ ಬಳಿಕ ಪ್ರತಿಪಕ್ಷಗಳ ಹಲವು ನಾಯಕರು ಅಭಿನಂದನೆ ಸಲ್ಲಿಸಿದ್ದರು. ಇದೀಗ ಅವರ ಭಾಷಣದ ಬಗ್ಗೆ ಕಾಂಗ್ರೆಸ್‌ನ ಅಶೋಕ್‌ ಗೆಹ್ಲೋಟ್‌ ಹೊಗಳಿದ್ದಾರೆ.

VISTARANEWS.COM


on

Ashok Gehlot
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಿದ ಬಳಿಕ ದೇಶವನ್ನುದ್ದೇಶಿ ಮಾತನಾಡಿದ್ದಾರೆ. ರಾಷ್ಟ್ರಪತಿಯಾಗಿ ತಮ್ಮ ಚೊಚ್ಚಲ ಭಾಷಣದಲ್ಲಿ ಅವರು ತಮ್ಮ ಬಾಲ್ಯದಿಂದ ಹಿಡಿದು, ಆಜಾದಿ ಕಾ ಅಮೃತ ಮಹೋತ್ಸವದವರೆಗೆ ಹಲವು ವಿಚಾರಗಳನ್ನು ಪ್ರಸ್ತಾಪ ಮಾಡಿದ್ದಾರೆ. ಅವರ ಈ ಚೊಚ್ಚಲ ಭಾಷಣವನ್ನು ರಾಜಸ್ಥಾನ ಮುಖ್ಯಮಂತ್ರಿ, ಕಾಂಗ್ರೆಸ್‌ ನಾಯಕ ಅಶೋಕ್‌ ಗೆಹ್ಲೋಟ್‌ ತುಂಬ ಮೆಚ್ಚಿಕೊಂಡಿದ್ದಾರೆ. “ದ್ರೌಪದಿ ಮುರ್ಮು ಮಾತನಾಡಿದ ಪ್ರತಿ ಶಬ್ದವೂ ಅರ್ಥಪೂರ್ಣವಾಗಿದೆ. ಅವರ ಮಾತುಗಳಿಂದ ನಾನು ತುಂಬ ಪ್ರಭಾವಿತನಾಗಿದ್ದೇನೆ” ಎಂದು ತಿಳಿಸಿದ್ದಾರೆ.

ಇಂದು ರಾಷ್ಟ್ರಪತಿ ಹುದ್ದೆಗೆ ಏರಿದ ದ್ರೌಪದಿ ಮುರ್ಮು ಬುಡಕಟ್ಟು ಜನಾಂಗದಿಂದ ಬಂದವರು. ಈ ಬಾರಿಯ ಚುನಾವಣೆಯಲ್ಲಿ ಕೂಡ ಇದೇ ಕಾರಣಕ್ಕೆ ಅವರು ಕಾಂಗ್ರೆಸ್‌ ಮತ್ತು ಇತರ ಪ್ರತಿಪಕ್ಷಗಳ ನಾಯಕರ 143 ಮತಗಳನ್ನು ಪಡೆದಿದ್ದಾರೆ. ಪ್ರತಿಪಕ್ಷಗಳೆಲ್ಲ ಒಟ್ಟಾಗಿ ಯಶವಂತ್‌ ಸಿನ್ಹಾರನ್ನು ರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯನ್ನಾಗಿ ಮಾಡಿದ್ದರೂ ಕೂಡ, 18 ರಾಷ್ಟ್ರಗಳಿಂದ ಒಟ್ಟು 143 ಶಾಸಕರು/ಸಂಸದರು ದ್ರೌಪದಿ ಮುರ್ಮುಗೆ ಅಡ್ಡಮತದಾನ ಮಾಡಿದ್ದರು. ಅದೂ ಕೂಡ ಬುಡಕಟ್ಟು ಜನಾಂಗ ಹೆಚ್ಚಾಗಿರುವ ರಾಜ್ಯಗಳಿಂದಲೇ ಈ ಅಡ್ಡಮತದಾನ ಆಗಿತ್ತು. ಅವರು ಚುನಾವಣೆಯಲ್ಲಿ ಗೆದ್ದ ಬಳಿಕವೂ ಪ್ರತಿಪಕ್ಷಗಳ ಬಹುತೇಕ ಎಲ್ಲ ನಾಯಕರೂ ಅವರನ್ನು ಅಭಿನಂದಿಸಿದ್ದರು.

ಇಂದು ಚೊಚ್ಚಲ ಭಾಷಣ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜಸ್ಥಾನ ಮುಖ್ಯಮಂತ್ರಿ ʼಒಬ್ಬರು ಬುಡಕಟ್ಟು ಜನಾಂಗದಿಂದ ಬಂದ ಮಹಿಳೆ ಇವತ್ತು ಆಡಿದ ಮಾತುಗಳು ಶ್ಲಾಘನೀಯ. ದೇಶದ ಬಗ್ಗೆ ತಮಗಿರುವ ಬದ್ಧತೆಯನ್ನು ಅವರಿಂದು ಹೇಳಿಕೊಂಡರು. ಅದಕ್ಕೆ ತಕ್ಕಂತೆ ನಡೆದುಕೊಳ್ಳುತ್ತಾರೆ ಎಂಬ ನಂಬಿಕೆ ನನಗಂತೂ ಖಂಡಿತ ಇದೆʼ ಎಂದು ಹೇಳಿದರು.

ದ್ರೌಪದಿ ಮುರ್ಮುಗೆ ಈಗ 64 ವರ್ಷ. ಭಾರತದಲ್ಲಿ ಇದುವರೆಗೆ ರಾಷ್ಟ್ರಪತಿ ಹುದ್ದೆಗೆ ಏರಿದವರು ಯಾರೂ ಇಷ್ಟು ಚಿಕ್ಕ ವಯಸ್ಸಿಗೇ ಆ ಸ್ಥಾನವನ್ನು ಅಲಂಕರಿಸಿರಲಿಲ್ಲ. ಇಂದು ಪ್ರಮಾಣ ವಚನ ಸ್ವೀಕರಿಸಿದ ನಂತರ ಮಾತನಾಡಿದ ದ್ರೌಪದಿ ಮುರ್ಮು ತಮ್ಮ ಗೆಲುವು ಕೇವಲ ನನ್ನೊಬ್ಬನ ಸಾಧನೆಯಲ್ಲ . ಇದು ಈ ದೇಶದ ಕೋಟ್ಯಂತರ ಬಡವರು, ಹಿಂದುಳಿದ ವರ್ಗದವರ ಯಶಸ್ಸು ಎಂದು ಹೇಳಿದ್ದರು. ಹಾಗೇ, “ಒಂದು ಬಡ ಕುಟುಂಬದಲ್ಲಿ ಹುಟ್ಟಿದ ಸಾಮಾನ್ಯ ಮಹಿಳೆ ಈ ದೇಶದ ಅತ್ಯುನ್ನತ ಹುದ್ದೆಗೆ ಏರಲು ಸಾಧ್ಯವಾಗಿದ್ದಕ್ಕೆ ಕಾರಣ ಪ್ರಜಾಪ್ರಭುತ್ವ ವ್ಯವಸ್ಥೆ” ಎಂದಿದ್ದರು.

ಇದನ್ನೂ ಓದಿ: Draupadi Murmu | ಅಮೃತಕಾಲದಲ್ಲಿ ರಾಷ್ಟ್ರಪತಿ ಹುದ್ದೆ ಕೊಟ್ಟಿದ್ದಕ್ಕೆ ಧನ್ಯವಾದಗಳು: ದ್ರೌಪದಿ ಮುರ್ಮು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

NEET UG 2024 Re-Test Result: ನೀಟ್‌ ಮರುಪರೀಕ್ಷೆಯ ಫಲಿತಾಂಶ ಪ್ರಕಟ; ಹೀಗೆ ಚೆಕ್‌ ಮಾಡಿ

NEET UG 2024 Re-Test Result: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಫಲಿತಾಂಶವನ್ನು ಸೋಮವಾರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪ್ರಕಟಿಸಿದೆ. ಮೇಯಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಕೃಪಾಂಕ ಪಡೆದ 1,563 ವಿದ್ಯಾರ್ಥಿಗಳಿಗೆ ಜೂನ್ 23ರಂದು ಮರುಪರೀಕ್ಷೆ ನಡೆಲಾಗಿತ್ತು.

VISTARANEWS.COM


on

NEET UG 2024 Re-Test Result
Koo

ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ (Re-Test) ಫಲಿತಾಂಶವನ್ನು ಸೋಮವಾರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪ್ರಕಟಿಸಿದೆ (NEET UG 2024 Re-Test Result). ಮೇಯಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಕೃಪಾಂಕ ಪಡೆದ 1,563 ವಿದ್ಯಾರ್ಥಿಗಳಿಗೆ ಜೂನ್ 23ರಂದು ಮರುಪರೀಕ್ಷೆ ನಡೆಲಾಗಿತ್ತು. ಈ ಪೈಕಿ 813 ಅಭ್ಯರ್ಥಿಗಳು ಮಾತ್ರ ಹಾಜರಾಗಿದ್ದರು. ಶನಿವಾರ ಆನ್ಸರ್‌ ಕೀ ಪ್ರಕಟಿಸಲಾಗಿತ್ತು.

ಚಂಡೀಗಢ, ಗುಜರಾತ್‌, ಹರಿಯಾಣ, ಮೇಘಾಲಯ ಸೇರಿ ಆರು ರಾಜ್ಯಗಳ ನಗರಗಳಲ್ಲಿ ಮರು ಪರೀಕ್ಷೆ ನಡೆದಿತ್ತು. ಈ ಪೈಕಿ ಛತ್ತೀಸ್‌ಗಢದಲ್ಲಿ 602 ಅಭ್ಯರ್ಥಿಗಳ ಪೈಕಿ 291 ವಿದ್ಯಾರ್ಥಿಗಳು ಹಾಜರಾದರೆ, ಹರಿಯಾಣದಲ್ಲಿ 494 ಅಭ್ಯರ್ಥಿಗಳ ಪೈಕಿ 287, ಮೇಘಾಲಯದಲ್ಲಿ 464 ವಿದ್ಯಾರ್ಥಿಗಳ ಪೈಕಿ 234 ಅಭ್ಯರ್ಥಿಗಳು ಮಾತ್ರ ಹಾಜರಾಗಿದ್ದರು. ಗುಜರಾತ್‌ ಕೇಂದ್ರದಲ್ಲಿ ಒಬ್ಬ ವಿದ್ಯಾರ್ಥಿ ಮಾತ್ರ ಮರು ಪರೀಕ್ಷೆ ಬರೆದಿದ್ದರು.

“ಜೂನ್ 23ರಂದು ಮರು ಪರೀಕ್ಷೆಗೆ ಹಾಜರಾದ ನೀಟ್ (ಯುಜಿ) 2024ರ ಎಲ್ಲ ಅಭ್ಯರ್ಥಿಗಳ ಪರಿಷ್ಕೃತ ಸ್ಕೋರ್‌ ಕಾರ್ಡ್‌ಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಲಾಗಿನ್‌ ಆಗಿ ಪರಿಷ್ಕೃತ ಸ್ಕೋರ್‌ ಕಾರ್ಡ್‌ಗಳನ್ನು ಡೌನ್‌ಲೋಡ್‌ ಮಾಡಬಹುದು” ಎಂದು ಎನ್‌ಟಿಎ ತಿಳಿಸಿದೆ.

ಫಲಿತಾಂಶ ಹೀಗೆ ಚೆಕ್‌ ಮಾಡಿ

ನೀಟ್‌ ಪರೀಕ್ಷೆ ವೇಳೆ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಮತ್ತು ಕೇಂದ್ರ ಶಿಕ್ಷಣ ಸಚಿವಾಲಯದ ಅಧಿಕಾರಿಗಳು ಹಾಜರಿದ್ದು, ಮರುಪರೀಕ್ಷೆಯ ಮೇಲ್ವಿಚಾರಣೆ ನಡೆಸಿದರು.

ಯಾಕಾಗಿ ಮರು ಪರೀಕ್ಷೆ?

2024ರ ಮೇ 5ರಂದು 14 ಅಂತಾರಾಷ್ಟ್ರೀಯ ಸ್ಥಳಗಳು ಸೇರಿದಂತೆ 571 ನಗರಗಳಲ್ಲಿ, 4,750 ಕೇಂದ್ರಗಳಲ್ಲಿ 24 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಿದ್ದರು. ಜೂನ್ 4ರಂದು ಫಲಿತಾಂಶವನ್ನು ಪ್ರಕಟಿಸಲಾಯಿತು. ಬಳಿಕ 1,563 ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳು ದೊರೆತಿರುವುದು ಭಾರಿ ಸುದ್ದಿ ಆಯಿತು. ಸದ್ಯ ಪ್ರಕರಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಗ್ರೇಸ್ ಅಂಕದ ವಿವಾದ ದೇಶಾದ್ಯಂತ ಹರಡುತ್ತಿದ್ದಂತೆ ಕೇಂದ್ರ ಸರ್ಕಾರ ಗ್ರೇಸ್ ಅಂಕಗಳನ್ನು ಪಡೆದ 1,563 ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ನಡೆಸುವುದಾಗಿ ಸುಪ್ರೀಂ ಕೋರ್ಟ್‌ಗೆ ಹೇಳಿತ್ತು. 1,563 ಅಭ್ಯರ್ಥಿಗಳಲ್ಲಿ ಯಾರಾದರೂ ಮರುಪರೀಕ್ಷೆಯಿಂದ ಹೊರಗುಳಿದಿದ್ದರೆ ಗ್ರೇಸ್ ಅಂಕಗಳಿಲ್ಲದ ಅವರ ಹಿಂದಿನ ಅಂಕಗಳನ್ನು ಫಲಿತಾಂಶಗಳಿಗಾಗಿ ಬಳಸಲಾಗುತ್ತದೆ ಎಂದೂ ಕೇಂದ್ರ ಕೋರ್ಟ್‌ಗೆ ತಿಳಿಸಿತ್ತು. ಅದರಂತೆ ಮರುಪರೀಕ್ಷೆ ನಡೆಸಲಾಗಿತ್ತು.

Continue Reading

ಉದ್ಯೋಗ

Job Alert: HCLನಲ್ಲಿ ಖಾಲಿ ಇರುವ 56 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ 1 ಲಕ್ಷ ರೂ.ವರೆಗೆ: ಇಂದೇ ಅಪ್ಲೈ ಮಾಡಿ

Job Alert: ಹಿಂದುಸ್ತಾನ್‌ ಕಾಪರ್‌ ಲಿಮಿಟೆಡ್‌ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 56 ಜೂನಿಯರ್‌ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಡಿಪ್ಲೋಮಾ, ಎಂಜಿನಿಯರಿಂಗ್‌ ಪದವಿ ಪಡೆದು ಕಾರ್ಯಾನುಭವ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಜುಲೈ 21 ಕೊನೆಯ ದಿನ.

VISTARANEWS.COM


on

Job Alert
Koo

ನವದೆಹಲಿ: ಒಂದೊಳ್ಳೆ ಉದ್ಯೋಗ ಹೊಂದಬೇಕು ಎನ್ನುವ ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಹಿಂದುಸ್ತಾನ್‌ ಕಾಪರ್‌ ಲಿಮಿಟೆಡ್‌ (Hindustan Copper Limited) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (Hindustan Copper Recruitment 2024). ಒಟ್ಟು 56 ಜೂನಿಯರ್‌ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಡಿಪ್ಲೋಮಾ, ಎಂಜಿನಿಯರಿಂಗ್‌ ಪದವಿ ಪಡೆದು ಕಾರ್ಯಾನುಭವ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಜುಲೈ 21 ಕೊನೆಯ ದಿನ (Job Alert).

ಹುದ್ದೆಗಳ ವಿವರ

ಜೂನಿಯರ್ ಮ್ಯಾನೇಜರ್ (ಮೈನಿಂಗ್‌)- 46 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಮೈನಿಂಗ್ ಎಂಜಿನಿಯರಿಂಗ್‌ನಲ್ಲಿ ಪದವಿ
ಜೂನಿಯರ್ ಮ್ಯಾನೇಜರ್ (ಎಲೆಕ್ಟ್ರಿಕಲ್)- 6 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ
ಜೂನಿಯರ್ ಮ್ಯಾನೇಜರ್ (ಕಂಪನಿ ಸೆಕ್ರೆಟರಿ) 2 ಹುದ್ದೆ, ವಿದ್ಯಾರ್ಹತೆ: ಕಂಪನಿ ಸೆಕ್ರೆಟರಿ, ಪದವಿ
ಜೂನಿಯರ್ ಮ್ಯಾನೇಜರ್ (ಫೈನಾನ್ಸ್)- 1 ಹುದ್ದೆ, ವಿದ್ಯಾರ್ಹತೆ: ಸಿಎ, ಪದವಿ, ಸ್ನಾತಕೋತ್ತರ ಪದವಿ / ಡಿಪ್ಲೋಮಾ
ಜೂನಿಯರ್ ಮ್ಯಾನೇಜರ್ (ಎಚ್ಆರ್) 1 ಹುದ್ದೆ, ವಿದ್ಯಾರ್ಹತೆ: ಪದವಿ, ಸ್ನಾತಕೋತ್ತರ ಪದವಿ / ಡಿಪ್ಲೋಮಾ, ಎಂಬಿಎ

ವಯೋಮಿತಿ

ಗರಿಷ್ಠ ವಯೋಮಿತಿ 40 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವಿಭಾಗದ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ವಿಭಾಗದ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಡಿ (ಸಾಮಾನ್ಯ / ಇಡಬ್ಲ್ಯುಎಸ್‌) ವಿಭಾಗದ ಅಭ್ಯರ್ಥಿಗಳಿಗೆ 10, ಪಿಡಬ್ಲ್ಯುಡಿ (ಒಬಿಸಿ) ವಿಭಾಗದ ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಡಿ (ಎಸ್‌ಸಿ / ಎಸ್‌ಟಿ) ವಿಭಾಗದ ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 30,000 ರೂ. – 1,20,000 ರೂ. ಮಾಸಿಕ ವೇತನ ದೊರೆಯಲಿದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯುಎಸ್‌ ವಿಭಾಗದ ಅಭ್ಯರ್ಥಿಗಳು 500 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು. ಇತರ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.

Hindustan Copper Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://www.hindustancopper.com/RecruitmentNew/CandidateLogin/113).
  • ವೈಯಕ್ತಿಕ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಪಾರಂ ಡೌನ್‌ಲೋಡ್‌ ಮಾಡಿ ಪ್ರಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: 10ನೇ ತರಗತಿ ಪಾಸಾದವರಿಗೆ ಗುಡ್‌ನ್ಯೂಸ್‌; SSCಯಿಂದ ಬರೋಬ್ಬರಿ 8,326 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Continue Reading

ವೈರಲ್ ನ್ಯೂಸ್

Viral News: ನೀರ ಬಿಟ್ಟು ರಸ್ತೆಗೆ ಬಂದ ಮೊಸಳೆಗೆ ಇಲ್ಲೇನು ಕೆಲಸ? ಅಪರೂಪದ Video ಇಲ್ಲಿದೆ ನೋಡಿ

Viral News: ಮೊಸಳೆ ಯಾರಿಗೆ ಗೊತ್ತಿಲ್ಲ ಹೇಳಿ? ಚೂಪಾದ ಉಗುರು, ಹಲ್ಲು, ದೈತ್ಯ ದೇಹ ನೋಡಿದರೆ ಸಾಕು ಹಲವರು ಬೆಚ್ಚಿ ಬೀಳುತ್ತಾರೆ. ಅಂತಹ ಪ್ರಾಣಿ ಧುತ್ತನೆ ಕಣ್ಣೆದುರು ಬಂದರೆ ಹೇಗಾಗಬೇಡ? ಅದರಲ್ಲಿಯೂ ನೀರಿನಲ್ಲಿ ಇರುವ ಪ್ರಾಣಿ ರಸ್ತೆಗೆ ಬಂದರೆ ಓಡಾಡುವವರು ಬೆಚ್ಚಿ ಬೀಳದೆ ಇರುತ್ತಾರಾ? ಹೌದು ಇಂತಹದ್ದೊಂದು ಅಚ್ಚರಿಯ ಘಟನೆ ನಡೆದಿದೆ. ಈ ಅಪರೂಪದ ವಿಡಿಯೊ ಇಲ್ಲಿದೆ ನೋಡಿ.

VISTARANEWS.COM


on

Viral News
Koo

ಮುಂಬೈ: ಮೊಸಳೆ (Crocodile) ಜಲಚರ. ಸಾಮಾನ್ಯವಾಗಿ ನದಿಯಲ್ಲಿ, ದೊಡ್ಡ ದೊಡ್ಡ ಸರೋವರಗಳಲ್ಲಿ, ಸಮುದ್ರದಲ್ಲಿ ವಾಸಿಸುತ್ತವೆ. ಅಪರೂಪಕ್ಕೆ ದಡಕ್ಕೆ ಬಂದು ಸ್ವಲ್ಪ ಹೊತ್ತು ವಿಶ್ರಾಂತಿ ಪಡೆದು, ಮೈ ಬೆಚ್ಚಗೆ ಮಾಡಿಕೊಂಡು ಮತ್ತೆ ನೀರೊಳಗೆ ತೆರಳುತ್ತವೆ. ಇದೆಲ್ಲರಿಗೂ ಗೊತ್ತಿರುವ ವಿಷಯ. ಇದರಲ್ಲೇನು ವಿಶೇಷ ಎಂದು ನೀವು ಪ್ರಶ್ನಿಸಬಹುದು. ಇಲ್ಲಿದೆ ಟ್ವಿಸ್ಟ್‌. ನೀರಲ್ಲಿ ಇರುವ ಮೊಸಳೆ ನಗರಕ್ಕೆ ಅದರಲ್ಲಿಯೂ ಜನ ನಿಬಿಡ ರಸ್ತೆಗೆ ಬಂದರೆ ಹೇಗಾಗಬಹುದು? ಇದೆಲ್ಲ ಕಲ್ಪನೆ, ಸಿನಿಮಾದಲ್ಲಿ ನಡೆಯಬಹುದು ಎಂದುಕೊಂಡರೆ ನಿಮ್ಮ ಊಹೆ ತಪ್ಪು. ಹಾಗಾದರೆ ನಿಜವಾಗಿಯೂ ರಸ್ತೆಗೆ ಮೊಸಳೆ ಬಂದಿತ್ತೆ? ಎಲ್ಲಿ? ಯಾಕೆ? ಮುಂತಾದ ನಿಮ್ಮ ಪ್ರಶ್ನೆಗೆ ಈ ವೈರಲ್‌ ವಿಡಿಯೊದಲ್ಲಿ ಇದೆ ಉತ್ತರ (Viral News).

ಮಹಾರಾಷ್ಟ್ರದಲ್ಲಿ ಜೋರಾಗಿ ಮಳೆ ಸುರಿಯುತ್ತಿದೆ. ಈ ಮಳೆಗೆ ಬೇಗ ಬೇಗ ಮನೆ ಸೇರಿಕೊಂಡು ಬಿಡಬೇಕು ಎಂದು ಧಾವಂತದಲ್ಲಿ ಸಾಗುತ್ತಿದ್ದ ರತ್ನಗಿರಿ ಜಿಲ್ಲೆಯ ಜನರಿಗೆ ಕನಸಿನಲ್ಲಿಯೂ ಊಹಿಸದ ಅಚ್ಚರಿ ರಸ್ತೆ ಮಧ್ಯೆ ಎದುರಾಗಿತ್ತು. ತಮ್ಮ ಪಾಡಿಗೆ ತಾವು ಸಾಗುತ್ತಿದ್ದ ವಾಹನ ಚಾಲಕರು ಒಂದು ಕ್ಷಣ ದಂಗಾಗಿ ನಿಂತು ಅಪರೂಪದ ಅತಿಥಿಯನ್ನು ದಿಟ್ಟಿಸಿ ನೋಡತೊಡಗಿದರು. ಹೌದು, ಭಾರಿ ಮಳೆಯಿಂದಾಗಿ ಬೃಹತ್‌ ಗಾತ್ರದ ಮೊಸಳೆಯೊಂದು ನೀರಿನಲ್ಲಿ ಕೊಚ್ಚಿಕೊಂಡು ಬಂದಿತ್ತು. ಎತ್ತ ಹೋಗಬೇಕು ಎನ್ನುವುದು ತಿಳಿಯದೆ ಅದು ಜನ ನಿಬಿಡ ರಸ್ತೆಯಲ್ಲಿ ಹೆಜ್ಜೆ ಹಾಕುತ್ತಿರುವ ದೃಶ್ಯ ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

ವಿಡಿಯೊದಲ್ಲಿ ಏನಿದೆ?

ರತ್ನಗಿರಿ ಜಿಲ್ಲೆಯ ಚಿಪ್ಲುನ್‌ ಎಂಬಲ್ಲಿ ಈ ಅಪರೂಪದ ದೃಶ್ಯ ಸೆರೆಯಾಗಿದೆ. ಚಿಪ್ಲುನ್‌ನಲ್ಲಿ ಹರಿಯುವ ಶಿವ ನದಿ ಅನೇಕ ಮೊಸಳೆಗಳಿಗೆ ಆಶ್ರಯತಾಣ. ಇಲ್ಲಿ ಜೋರಾಗಿ ಸುರಿದ ಮಳೆಗೆ ಬೃಹತ್‌ ಗಾತ್ರದ ಮೊಸಳೆಯೊಂದು ನೀರಿನಲ್ಲಿ ಕೊಚ್ಚಿಕೊಂಡು ಬಂದಿದೆ. ಅದು ರಸ್ತೆಯಲ್ಲಿ ಸಂಚರಿಸುವುದನ್ನು ಕಾರಿನಲ್ಲಿದ್ದ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ವಾಹನಗಳ ಬೆಳಕಿನಲ್ಲಿ ಮೊಸಳೆ ರಸ್ತೆಯಲ್ಲಿ ರಾಜಾರೋಷವಾಗಿ ಅಡ್ಡಾಡುತ್ತಿರುವುದು ಸ್ಪಷ್ಟವಾಗಿ ಕಂಡು ಬರುತ್ತಿದೆ.

ರತ್ನಗಿರಿ ಮೊಸಳೆಗಳಿಗೆ ಪ್ರಸಿದ್ಧ

ಭಾರತದ ಮೂರು ಮೊಸಳೆ ಪ್ರಭೇದಗಳಲ್ಲಿ ಒಂದಾದ ಮಗ್ಗರ್ ಮೊಸಳೆಗಳಿಗೆ ರತ್ನಗಿರಿ ಬಹಳ ಪ್ರಸಿದ್ಧ. ರತ್ನಗಿರಿ ಜಿಲ್ಲೆಯ ಚಿಪ್ಲುನ್ ಮತ್ತು ಇತರ ಸ್ಥಳಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಇದರಿಂದ ನದಿಗಳ ನೀರಿನ ಮಟ್ಟ ದಿನ ಕಳೆದಂತೆ ಹೆಚ್ಚಾಗುತ್ತಿದೆ. ಜುಲೈ 2ರ ತನಕ ಧಾರಾಕಾರ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Viral News: 10 ಅಡಿಯ ದೈತ್ಯ ಮೊಸಳೆಯಿಂದ ಕಬ್ಬಿಣದ ಗೇಟು ಹಾರಲು ಯತ್ನ; ಮೈ ಜುಮ್ಮೆನ್ನಿಸುವ ವಿಡಿಯೊ ಇಲ್ಲಿದೆ

ಸದ್ಯ ವಿಡಿಯೊ ನೋಡಿದರ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ಮೊಸಳೆ ನೆಲದ ಮೇಲೆ ಇಷ್ಟು ಸರಾಗವಾಗಿ ನಡೆಯುತ್ತದೆ ಎನ್ನುವುದು ಗೊತ್ತೆ ಇರಲಿಲ್ಲ ಎಂದು ಅನೇಕರು ಕಮೆಂಟ್‌ ಮಾಡಿದ್ದಾರೆ. ಕಣ್ಣನ್ನು ನಂಬಲೇ ಸಾಧ್ಯವಾಗುತ್ತಿಲ್ಲ ಎಂದು ಇನ್ನೂ ಹಲವರು ಉದ್ಘರಿಸಿದ್ದಾರೆ. ಇನ್ನು ಈ ಕಣ್ಣಲ್ಲಿ ಏನೇನು ನೋಡಬೇಕೋ ಎಂದು ಕೆಲವರು ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ. ನೀರು ಬಿಟ್ಟು ರಸ್ತೆಯಲ್ಲಿ ಮೊಸಳೆಗೆ ಏನು ಕೆಲಸ? ಎಂದು ನೆಟ್ಟಿಗರು ಕಾಲೆಳೆದಿದ್ದಾರೆ.

Continue Reading

ವಾಣಿಜ್ಯ

LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ 30 ರೂ. ಇಳಿಕೆ

LPG Price Cut: ಜುಲೈ 1ರಿಂದ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ತೂಕದ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 30 ರೂ. ಕಡಿಮೆ ಮಾಡಿವೆ. ಇದರೊಂದಿಗೆ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 30 ರೂ. ಕಡಿತಗೊಂಡು 1,726 ರೂ.ಗೆ ತಲುಪಿದೆ.

VISTARANEWS.COM


on

LPG Price Cut
Koo

ನವದೆಹಲಿ: ಜುಲೈ 1ರಿಂದ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು (OMCs) 19 ಕೆಜಿ ತೂಕದ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 30 ರೂ. ಕಡಿಮೆ ಮಾಡಿವೆ (LPG Price Cut). ಇದರೊಂದಿಗೆ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 30 ರೂ. ಕಡಿತಗೊಂಡು 1,726 ರೂ.ಗೆ ತಲುಪಿದೆ.

ಇನ್ನು ದೆಹಲಿಯಲ್ಲಿ ಪರಿಷ್ಕೃತ ದರ 1,646 ರೂ. ಆಗಿದೆ. ಹಿಂದೆ 1,676 ರೂ. ಆಗಿತ್ತು. ಮುಂಬೈಯಲ್ಲಿಯೂ 30 ರೂ. ಇಳಿಕೆಯಾಗಿದ್ದು ಹೊಸ ಬೆಲೆಯನ್ನು 1,598 ರೂ.ಗೆ ನಿಗದಿಪಡಿಸಲಾಗಿದೆ. ಕೋಲ್ಕತ್ತಾದಲ್ಲಿ ದರ ಪರಿಷ್ಕರಣೆಯ ಬಳಿಕ 1,756 ರೂ. ಇದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಪ್ರತಿ ತಿಂಗಳ 1ನೇ ತಾರೀಕಿನಂದು ಅಡುಗೆ ಅನಿಲ ಬೆಲೆಗಳನ್ನು ಪರಿಷ್ಕರಿಸುತ್ತವೆ. ಈ ರೀತಿಯ ಏರಿಳಿತಗಳು ಸಾಮಾನ್ಯವಾಗಿ ಇಂಧನ ವೆಚ್ಚಗಳು ಮತ್ತು ಮಾರುಕಟ್ಟೆ ಡೈನಾಮಿಕ್ಸ್ ಬದಲಾವಣೆಗಳಿಂದ ಪ್ರಭಾವಿತವಾಗಿರುತ್ತವೆ.

ವಾಣಿಜ್ಯ ಎಲ್‌ಪಿಜಿ ಬೆಲೆಗಳ ಕಡಿತವು ಈ ಸಿಲಿಂಡರ್‌ಗಳನ್ನೇ ಅವಲಂಬಿಸಿರುವ ವ್ಯವಹಾರಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ. ಜಾಗತಿಕ ತೈಲ ಮಾರುಕಟ್ಟೆಯ ಪ್ರವೃತ್ತಿಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುವುದಾಗಿ ಮತ್ತು ದೇಶಾದ್ಯಂತದ ಗ್ರಾಹಕರಿಗೆ ನ್ಯಾಯಯುತ ಬೆಲೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಹೊಂದಾಣಿಕೆಗಳನ್ನು ಮಾಡುವುದಾಗಿ ಒಎಂಸಿಗಳು ಭರವಸೆ ನೀಡಿವೆ.

ಸತತ ಇಳಿಕೆ

ಕಳೆದ ಕೆಲವು ತಿಂಗಳಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಕಡಿತಗೊಳಿಸಲಾಗುತ್ತಿದೆ. ಜೂನ್‌ 1ರಂದು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ 69.50 ರೂ. ಕಡಿಮೆ ಆಗಿತ್ತು. ಮೇ 1ರಂದು ದರ ಪರಿಷ್ಕರಿಸಿ 19 ರೂ. ಇಳಿಕೆ ಮಾಡಲಾಗಿತ್ತು. ಏಪ್ರಿಲ್‌ನಲ್ಲಿಯೂ 19 ಕೆಜಿಯ ಸಿಲಿಂಡರ್‌ ಬೆಲೆಯನ್ನು 30.50 ರೂ. ಇಳಿಸಲಾಗಿತ್ತು. ತೈಲ ಮಾರುಕಟ್ಟೆ ಕಂಪನಿಗಳು ಹಿಂದಿನ ಘೋಷಣೆಯನ್ನು ಮಾರ್ಚ್ 1ರಂದು ಮಾಡಿದ್ದು, ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಸಿಲಿಂಡರ್‌ಗಳ ದರಗಳನ್ನು ಹೆಚ್ಚಿಸಿದ್ದವು. ಆ ಸಮಯದಲ್ಲಿ, OMCಗಳು ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (LPG) ಗ್ಯಾಸ್ ಸಿಲಿಂಡರ್ ಬೆಲೆಗಳಲ್ಲಿ 19 ಕೆಜಿ ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು 25 ರೂ. ಹೆಚ್ಚಿಸಿದ್ದವು.

ಗೃಹಬಳಕೆಯ ಸಿಲಿಂಡರ್‌ ಬೆಲೆ ಯಥಾಸ್ಥಿತಿ

ಈ ಮಧ್ಯೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ಇಳಿಕೆ ಅಥವಾ ಏರಿಕೆ ಆಗಿಲ್ಲ. ಬೆಂಗಳೂರಿನಲ್ಲಿ ಗೃಹಬಳಕೆಯ ಸಿಲಿಂಡರ್‌ ಬೆಲೆ 805.50 ರೂ. ಇದೆ. ಇನ್ನು ದೆಹಲಿಯಲ್ಲಿ 803 ರೂ., ಕೋಲ್ಕತ್ತಾದಲ್ಲಿ 829 ರೂ., ಮುಂಬೈನಲ್ಲಿ 802.50 ರೂ., ಚೆನ್ನೈನಲ್ಲಿ 818.50 ರೂ. ಇದೆ. ವಿಶೇಷವೆಂದರೆ ಕಳೆದ ವರ್ಷ ಜೂನ್‌ನಲ್ಲಿ ದೆಹಲಿಯಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 1,103 ರೂ. ಇತ್ತು. ಆಗಸ್ಟ್‌ನಲ್ಲಿ ತೈಲ ಕಂಪನಿಗಳು 200 ರೂ.ಗಳ ಕಡಿತವನ್ನು ಘೋಷಿಸಿ 903 ರೂ.ಗೆ ಇಳಿಸಿದವು. ಬಳಿಕ 2024ರ ಮಾರ್ಚ್‌ನಲ್ಲಿ ಬೆಲೆಯನ್ನು ಮತ್ತೂ 100 ರೂ. ಕಡಿತಗೊಳಿಸಲಾಯಿತು.

ಇದನ್ನೂ ಓದಿ: Mohan Bhagwat: ಮುಕೇಶ್‌ ಅಂಬಾನಿ ನಿವಾಸಕ್ಕೆ ಆಗಮಿಸಿದ ಮೋಹನ್‌ ಭಾಗವತ್‌; ಕೈ ಮುಗಿದು ಸ್ವಾಗತಿಸಿದ ನೀತಾ ಅಂಬಾನಿ

Continue Reading
Advertisement
Actor Darshan grandmother came running distant town to see and not punish him
ಸ್ಯಾಂಡಲ್ ವುಡ್12 mins ago

Actor Darshan: ದರ್ಶನ್‌ ತಪ್ಪು ಮಾಡಿದ್ದಾನೆ ಆದರೆ ಶಿಕ್ಷೆ ಕೊಡಬೇಡಿ ಎಂದು ದೂರದ ಊರಿಂದ ಓಡೋಡಿ ಬಂದ ಅಜ್ಜಿ!

ಚಿಕ್ಕಬಳ್ಳಾಪುರ13 mins ago

Dead Body Found : ಮರದಲ್ಲಿ ನೇತಾಡುತ್ತಿತ್ತು ಅಪರಿಚಿತನ ಶವ; ಸತ್ತವನ ಕೈ ಮೇಲಿತ್ತು ಲಕ್ಷ್ಮಿ ಹೆಸರಿನ ಹಚ್ಚೆ

Hurricane Beryl
ಪ್ರಮುಖ ಸುದ್ದಿ18 mins ago

Hurricane Beryl : ವೆಸ್ಟ್​ ಇಂಡೀಸ್​ನಲ್ಲಿ ಚಂಡಮಾರುತ, ಸಂಕಷ್ಟದಲ್ಲಿ ಸಿಲುಕಿದ ಚಾಂಪಿಯನ್ ಭಾರತ ತಂಡ

NEET UG 2024 Re-Test Result
ದೇಶ28 mins ago

NEET UG 2024 Re-Test Result: ನೀಟ್‌ ಮರುಪರೀಕ್ಷೆಯ ಫಲಿತಾಂಶ ಪ್ರಕಟ; ಹೀಗೆ ಚೆಕ್‌ ಮಾಡಿ

National Doctor’s Day
ಆರೋಗ್ಯ31 mins ago

National Doctor’s Day: ಇಂದು ರಾಷ್ಟ್ರೀಯ ವೈದ್ಯರ ದಿನ; ಕಾಳಜಿಯ ಕೈಗಳಿಗೆ ಕೃತಜ್ಞತೆ ಹೇಳುವ ದಿನ

hassan murder case
ಕ್ರೈಂ40 mins ago

Murder Case: ಎಸ್‌ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

Golden Star Ganesh Birthday Not Celebrating His Birthday This Year
ಸ್ಯಾಂಡಲ್ ವುಡ್40 mins ago

Golden Star Ganesh Birthday:  ಈ ವರ್ಷವೂ ಬರ್ತ್​ಡೇ ಆಚರಿಸಿಕೊಳ್ಳದಿರಲು ನಿರ್ಧರಿಸಿದ ಗೋಲ್ಡನ್ ಸ್ಟಾರ್ ಗಣೇಶ್

ICC Team of the Tournament
ಪ್ರಮುಖ ಸುದ್ದಿ43 mins ago

ICC Team of the Tournament : ಐಸಿಸಿ ಟೀಮ್​ ಆಫ್​​ ದಿ ಟೂರ್ನಮೆಂಟ್​ನಲ್ಲಿ ಆರು ಭಾರತೀಯರು​; ಕೊಹ್ಲಿಗಿಲ್ಲ ಚಾನ್ಸ್​

Job Alert
ಉದ್ಯೋಗ1 hour ago

Job Alert: HCLನಲ್ಲಿ ಖಾಲಿ ಇರುವ 56 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ 1 ಲಕ್ಷ ರೂ.ವರೆಗೆ: ಇಂದೇ ಅಪ್ಲೈ ಮಾಡಿ

murder case
ಬೆಂಗಳೂರು1 hour ago

Murder Case : ರೌಡಿಯಾಗಲು ಹೊರಟವನನ್ನು ಕೊಂದು ಹಾಕಿದ್ರು ಪುಂಡರು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ19 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು24 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌