Rajya Sabha Election: ನಾಳೆ ರಾಜ್ಯಸಭಾ ಚುನಾವಣೆ; ಮತದಾನ ಹೇಗೆ? ಯಾವ ಮತ ಅಸಿಂಧು ಆಗುತ್ತೆ? - Vistara News

ರಾಜಕೀಯ

Rajya Sabha Election: ನಾಳೆ ರಾಜ್ಯಸಭಾ ಚುನಾವಣೆ; ಮತದಾನ ಹೇಗೆ? ಯಾವ ಮತ ಅಸಿಂಧು ಆಗುತ್ತೆ?

Rajya Sabha Election: ಮತದಾನ ಮಾಡುವ ಶಾಸಕರಿಗೆ ಚುನಾವಣಾಧಿಕಾರಿಗಳು ಸ್ಪಷ್ಟ ನಿರ್ದೇಶನವನ್ನು ನೀಡಲಾಗಿದೆ. ಆದರೆ, ಪಕ್ಷೇತರ ಶಾಸಕರು ಯಾವ ರೀತಿ ಮತ ಚಲಾವಣೆ ಮಾಡಬೇಕು. ಅಸಿಂಧು ಮತಗಳು ಎಂದು ಯಾವುವನ್ನು ಪರಿಗಣಿಸಲಾಗುತ್ತದೆ ಎಂಬ ಬಗ್ಗೆಯೂ ಸ್ಪಷ್ಟ ನಿರ್ದೇಶನವನ್ನು ನೀಡಲಾಗಿದೆ.

VISTARANEWS.COM


on

How to vote for Rajya Sabha election Which vote will be invalid
ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್‌ ಪಕ್ಷವು ತನ್ನ ಶಾಸಕರಿಗೆ ಅಣಕು ಚುನಾವಣೆ ಪ್ರಾತ್ಯಕ್ಷಿಕೆ ವ್ಯವಸ್ಥೆಯನ್ನು ಮಾಡಿರುವುದು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಂಗಳವಾರ (ಫೆ. 27) ರಾಜ್ಯಸಭಾ ಚುನಾವಣೆ (Rajya Sabha Election) ನಡೆಯುತ್ತಿದೆ. ಮೂರೂ ರಾಜಕೀಯ ಪಕ್ಷಗಳೂ ಚುನಾವಣೆಗೆ ಸಜ್ಜಾಗಿವೆ. ಈಗಾಗಲೇ ರಾಜಕೀಯ ಲೆಕ್ಕಾಚಾರಗಳನ್ನು ಹಾಕಲಾಗಿದೆ. ಅಲ್ಲದೆ, ಆಯಾ ಪಕ್ಷಗಳ ಶಾಸಕರಿಗೆ ವಿಪ್‌ ಜಾರಿ (Whip issue) ಮಾಡಲಾಗಿದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 4 ವರೆಗೆ ಮತದಾನ ನಡೆಯಲಿದೆ. ಇನ್ನು ಈ ಚುನಾವಣೆಯಲ್ಲಿ ಮತಗಳನ್ನು ಹೇಗೆ ದಾಖಲಿಸಬೇಕು? ಯಾವ ಮಾದರಿಯನ್ನು ಅನುಸರಿಸಬೇಕು? ಮತ ಚಲಾವಣೆಗೆ ಮೊದಲು ಯಾರಿಗೆ ಮತ ಹಾಕಿದ್ದೇವೆ ಎಂದು ಯಾರಿಗೆ ತೋರಿಸಬೇಕು? ಹೇಗೆ ಮತ ಹಾಕಿದರೆ ಅಸಿಂಧು ಆಗುತ್ತದೆ? ಎಂಬಿತ್ಯಾದಿ ಅಂಶಗಳ ಬಗ್ಗೆ ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ನೀಡಲಾಗಿದ್ದು, ಮತದಾನ ಮಾಡುವವರಿಗೆ ಸ್ಪಷ್ಟ ನಿರ್ದೇಶನವನ್ನು ನೀಡಲಾಗಿದೆ. ಆದರೆ, ಪಕ್ಷೇತರ ಶಾಸಕರು ಯಾವ ರೀತಿ ಮತ ಚಲಾವಣೆ ಮಾಡಬೇಕು ಎಂಬ ಬಗ್ಗೆಯೂ ಸ್ಪಷ್ಟ ನಿರ್ದೇಶನವನ್ನು ನೀಡಲಾಗಿದೆ.

ಮತದಾನ ಮಾಡುವ ವಿಧಾನ

  • ಮತ ನೀಡುವ ಉದ್ದೇಶಕ್ಕಾಗಿ, ಚುನಾವಣಾ ಅಧಿಕಾರಿಯು ಸರಬರಾಜು ಮಾಡಿರುವ ನೇರಳೆ ಸ್ಕೆಚ್ ಪೆನ್ನನ್ನು ಮಾತ್ರ ಬಳಸಬೇಕು. ಆ ಪೆನ್ನನ್ನು ಮತಪತ್ರದ ಜತೆಗೆ ನೀಡಲಾಗುತ್ತದೆ. ಇತರೆ ಯಾವುದೇ ಪೆನ್ನು, ಪೆನ್ಸಿಲು, ಬಾಲ್‌ಪಾಯಿಂಟ್ ಪೆನ್ನು ಅಥವಾ ಇತರೆ ಯಾವುದೇ ಗುರುತು ಮಾಡುವ ಸಾಧನವನ್ನು ಬಳಸಬಾರದು. ಏಕೆಂದರೆ ಅದು ಮತಪತ್ರವನ್ನು ಅಸಿಂಧುವನ್ನಾಗಿ ಮಾಡುತ್ತದೆ.
  • ಪ್ರಥಮ ಪ್ರಾಶಸ್ತ್ಯವಾಗಿ ಆಯ್ಕೆ ಮಾಡುವ ಅಭ್ಯರ್ಥಿಯ ಹೆಸರಿನ ಎದುರು ಒದಗಿಸಿರುವ ‘ಪ್ರಾಶಸ್ತ್ಯ ಕ್ರಮ’ದ ಕಾಲಂನಲ್ಲಿ ‘1’ ಎಂಬ ಅಂಕಿಯನ್ನು ಬರೆಯುವ ಮೂಲಕ ಮತ ನೀಡಬೇಕು. ಈ ” 1 ‘ ಎಂಬ ಅಂಕಿಯನ್ನು ಕೇವಲ ಒಬ್ಬ ಅಭ್ಯರ್ಥಿಯ ಹೆಸರಿನ ಮುಂದೆ ಮಾತ್ರವೇ ಬರೆಯಬೇಕು.
  • ಚುನಾಯಿಸಬೇಕಾದ ಅಭ್ಯರ್ಥಿಗಳ ಸಂಖ್ಯೆ ಒಂದಕ್ಕಿಂತ ಹೆಚ್ಚಾಗಿದ್ದರೂ “1” ಎಂಬ ಅಂಕಿಯನ್ನು ಕೇವಲ ಒಬ್ಬ ಅಭ್ಯರ್ಥಿಯ ಹೆಸರಿನ ಮುಂದೆ ಮಾತ್ರ ಬರೆಯತಕ್ಕದ್ದು.
  • ಚುನಾಯಿಸಬೇಕಾದ ಅಭ್ಯರ್ಥಿಗಳ ಸಂಖ್ಯೆ ಎಷ್ಟೇ ಇದ್ದರೂ, ಸ್ಪರ್ಧಿಸುವ ಅಭ್ಯರ್ಥಿಗಳ ಸಂಖ್ಯೆಯಷ್ಟು ಪ್ರಾಶಸ್ತ್ಯಗಳು ಇರುತ್ತದೆ. ಉದಾಹರಣೆಗೆ ಆರು ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದರೆ ಆ ಪೈಕಿ ನಾಲ್ವರನ್ನು ಮಾತ್ರವೇ ಚುನಾಯಿಸಬೇಕಿದ್ದರೂ ಮತದಾನ ಮಾಡುವವರು ತಮ್ಮ ಪ್ರಾಶಸ್ತ್ಯಕ್ಕನುಸಾರವಾಗಿ ಇಚ್ಛೆಯ ಅಭ್ಯರ್ಥಿಗಳ ಹೆಸರಿನ ಮುಂದೆ 1 ರಿಂದ 6 ರವರೆಗೆ ಪ್ರಾಶಸ್ತ್ಯವನ್ನು ನಮೂದಿಸಬಹುದು.
  • ಉಳಿದ ಅಭ್ಯರ್ಥಿಗಳಿಗೆ ಅಂತಹ ಅಭ್ಯರ್ಥಿಗಳ ಹೆಸರುಗಳ ಮುಂದೆ ಒದಗಿಸಿರುವ ಪ್ರಾಶಸ್ತ್ಯದ ಕ್ರಮ ಕಾಲಂನಲ್ಲಿ ಮತದಾರ ಶಾಸಕರ ಪ್ರಾಶಸ್ತ್ಯಕ್ಕನುಸಾರವಾಗಿ 2, 3, 4 ಮುಂತಾಗಿ ತರುವಾಯದ ಅಂಕಿಗಳನ್ನು ನಮೂದಿಸುವ ಮೂಲಕ ಮುಂದಿನ ಪ್ರಾಶಸ್ತ್ರಗಳನ್ನು ಸೂಚಿಸಬೇಕು.
  • ಯಾವುದೇ ಅಭ್ಯರ್ಥಿಯ ಹೆಸರಿನ ಮುಂದೆ ಕೇವಲ ಒಂದು ಅಂಕಿಯನ್ನು ಮಾತ್ರ ಬರೆದಿರುವುದನ್ನು ಖಾತರಿ ಮಾಡಿಕೊಳ್ಳಬೇಕು ಹಾಗೂ ಒಂದೇ ಅಂಕಿಯನ್ನು ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳ ಹೆಸರುಗಳ ಮುಂದೆ ಬರೆದಿಲ್ಲವೆಂಬುದನ್ನೂ ಖಾತರಿ ಮಾಡಿಕೊಳ್ಳಬೇಕು.
  • ಪ್ರಾಶಸ್ತ್ಯಗಳನ್ನು ಅಂಕಿಗಳಲ್ಲಿ ಎಂದರೆ, 1, 2, 3 ಮುಂತಾಗಿ ಮಾತ್ರ ನಮೂದಿಸತಕ್ಕದ್ದು ಮತ್ತು ಒಂದು, ಎರಡು, ಮೂರು ಇತ್ಯಾದಿಯಾಗಿ ಪದಗಳಲ್ಲಿ ನಮೂದಿಸಬಾರದು.
  • 1, 2, 3 ಮುಂತಾಗಿ ಅಂತಾರಾಷ್ಟ್ರೀಯ ರೂಪದ ಭಾರತೀಯ ಅಂಕಿಗಳನ್ನು ಅಥವಾ I, II, III ಮುಂತಾಗಿ ರೋಮನ್ ಅಂಕಿಗಳನ್ನು 1, 2, 3 ಎಂದು ದೇವನಾಗರಿ ಅಂಕಿಗಳನ್ನು ಅಥವಾ ಸಂವಿಧಾನದ ಅನುಸೂಚಿ VIII ರಲ್ಲಿ ಮನ್ನಣೆ ಪಡೆದಿರುವ ಯಾವುದೇ ಭಾರತೀಯ ಭಾಷೆಯಲ್ಲಿ ಬಳಕೆಯಲ್ಲಿರುವ ಅಂಕಿಗಳನ್ನು ನಮೂದಿಸಬಹುದು.
  • ಮತಪತ್ರದಲ್ಲಿ ಮತದಾರ ಶಾಸಕರ ಹೆಸರನ್ನು ಬರೆಯಬಾರದು ಅಥವಾ ಯಾವುದೇ ಪದಗಳನ್ನು ಬರೆಯಬಾರದು ಅಥವಾ ಸಹಿ ಅಥವಾ ಕಿರು ಸಹಿಯನ್ನು ಸಹ ಹಾಕಬಾರದು. ಹಾಗೆಯೇ ಹೆಬ್ಬೆಟ್ಟಿನ ಗುರುತನ್ನು ಹಾಕಬಾರದು. ಹಾಗೆ ಮಾಡಿದರೆ ಆ ಮತ ಪತ್ರವು ಅಸಿಂಧುವಾಗುತ್ತದೆ.
  • ಮತದಾರರು ಪ್ರಾಶಸ್ತ್ಯವನ್ನು ಸೂಚಿಸುವಾಗ ಇಚ್ಛೆಯ ಅಭ್ಯರ್ಥಿಗಳ ಹೆಸರುಗಳ ಮುಂದೆ ”✔” ಅಥವಾ ‘X’ ಗುರುತನ್ನು ಹಾಕಿದರೆ ಸಾಕಾಗದು. ಅಂತಹ ಮತಪತ್ರಗಳನ್ನು ತಿರಸ್ಕರಿಸಲಾಗುತ್ತದೆ. ಪ್ರಾಶಸ್ತ್ಯಗಳನ್ನು ಮೇಲೆ ವಿವರಿಸಿದಂತೆ 1, 2, 3 ಮುಂತಾಗಿ ಅಂಕಿಗಳಲ್ಲಿ ಮಾತ್ರ ನಮೂದಿಸತಕ್ಕದ್ದು.
  • ಮತಪತ್ರವು ಕ್ರಮಬದ್ಧವಾದ ಮತಪತ್ರ ಎಂದಾಗಬೇಕಾದರೆ ಅಭ್ಯರ್ಥಿಗಳಲ್ಲಿ ಒಬ್ಬರ ಹೆಸರಿನ ಮುಂದೆ ‘1’ ಎಂಬ ಅಂಕಿಯನ್ನು ನಮೂದಿಸುವ ಮೂಲಕ ಪ್ರಥಮ ಪ್ರಾಶಸ್ತ್ಯವನ್ನು ಸೂಚಿಸುವುದು ಅಗತ್ಯ. ಉಳಿದ ಪ್ರಾಶಸ್ತ್ಯಗಳನ್ನು ನಮೂದಿಸುವುದು ಮತದಾರರಿಗೆ ಬಿಟ್ಟಿದ್ದು. ಅಂದರೆ ಎರಡನೆಯ ಮತ್ತು ಆನಂತರದ ಪ್ರಾಶಸ್ತ್ಯಗಳನ್ನು ನಮೂದಿಸಬಹುದು ಅಥವಾ ನಮೂದಿಸಲೇ ಇರಬಹುದು.
  • ರಾಜ್ಯಸಭಾ ಚುನಾವಣೆಯಲ್ಲಿ ಮುಕ್ತ ಮತದಾನ (OPEN BALLOT SYSTEM) ಅಳವಡಿಸಿರುವುದರಿಂದ ರಾಜಕೀಯ ಪಕ್ಷಗಳಿಗೆ ಸೇರಿದ ಮತದಾರರು ತಮ್ಮ ಪ್ರಾಶಸ್ತ್ಯದ ಮತವನ್ನು ಚಲಾಯಿಸಿದ ನಂತರ ಅಂತಹ ಮತಪತ್ರವನ್ನು ಆಯಾ ರಾಜಕೀಯ ಪಕ್ಷಗಳ ಅಧಿಕೃತ ಏಜೆಂಟ್‌ರಿಗೆ ಮಾತ್ರ ತೋರಿಸತಕ್ಕದ್ದು, ನಂತರ ಮತಪತ್ರವನ್ನು ಮತಪೆಟ್ಟಿಗೆಯಲ್ಲಿ ಹಾಕತಕ್ಕದ್ದು.
  • ಪಕ್ಷೇತರ ಮತದಾರರು ಯಾವುದೇ ರಾಜಕೀಯ ಪಕ್ಷಗಳಿಗೆ ಸೇರದೆ ಇರುವುದರಿಂದ ಅವರು ತಮ್ಮ ಪ್ರಾಶಸ್ತ್ಯದ ಮತವನ್ನು ಚಲಾಯಿಸಿದ ನಂತರ ಮತಪತ್ರವನ್ನು ಯಾರಿಗೂ ತೋರಿಸದೆ ನೇರವಾಗಿ ಮತಪೆಟ್ಟಿಗೆಯಲ್ಲಿ ಹಾಕತಕ್ಕದ್ದು

ಇದನ್ನೂ ಓದಿ: KAS Recruitment 2024: ಕೆಎಎಸ್‌ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌; 384 ಹುದ್ದೆಗಳಿಗೆ ಅರ್ಜಿ ಆಹ್ವಾನ!

ಹೀಗೆ ಮಾಡಿದಲ್ಲಿ ಅಸಿಂಧು ಮತ ಪತ್ರಗಳೆಂದು ಪರಿಗಣನೆ

  • “1” ಎಂದು ನಮೂದಿಸದಿರುವುದು
  • “1” ಎಂಬ ಅಂಕಿಯನ್ನು ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳ ಹೆಸರಿನ ಮುಂದೆ ಹಾಕುವುದು
  • “1” ಎಂಬ ಅಂಕಿಯನ್ನು ಯಾವ ಅಭ್ಯರ್ಥಿಗೆ ಹಾಕಲಾಗಿದೆ ಎಂಬುದು ಸಂದೇಹಕ್ಕೆ ಆಸ್ಪದವಾಗುವಂತೆ ಹಾಕಿರುವುದು
  • “1” ಎಂಬ ಅಂಕಿಯನ್ನು ಮತ್ತು 2, 3 ಮುಂತಾಗಿ ಇತರ ಕೆಲವು ಅಂಕಿಗಳನ್ನು ಕೂಡ ಒಂದೇ ಅಭ್ಯರ್ಥಿಯ ಹೆಸರಿನ ಮುಂದೆ ನಮೂದಿಸಿರುವುದು
  • ಪ್ರಾಶಸ್ತ್ಯಗಳನ್ನು ಅಂಕಿಗಳಿಗೆ ಬದಲಾಗಿ ಪದಗಳಲ್ಲಿ ನಮೂದಿಸಿರುವುದು
  • ಮತದಾರನನ್ನು ಗುರುತು ಹಿಡಿಯಬಹುದಾದ ರೀತಿಯಲ್ಲಿ ಯಾವುದೇ ಗುರುತು ಅಥವಾ ಬರವಣಿಗೆ ಇರುವುದು
  • ಅಂಕಿಗಳನ್ನು ಗುರುತು ಮಾಡುವ ಉದ್ದೇಶಕ್ಕಾಗಿ ಚುನಾವಣಾ ಅಧಿಕಾರಿಯು ಸರಬರಾಜು ಮಾಡಿರುವ ನೇರಳೆ ಸ್ಕೆಚ್ ಪೆನ್ನಿನ ಬದಲು ಬೇರೆ ಸಾಧನದಲ್ಲಿ ಗುರುತು ಮಾಡಲಾದ ಯಾವುದೇ ಅಂಕಿ ಇರುವ ಮತಪತ್ರವು ಅಸಿಂಧುವಾಗಲಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: 36 ಸೆಕೆಂಡ್‌‌ಗಳ ಮತ್ತೊಂದು ಆಡಿಯೊ ಬಾಂಬ್; ಪ್ರಜ್ವಲ್ ಕೇಸ್‌‌ಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್!

Prajwal Revanna Case: ಹಾಸನದಲ್ಲಿ ಅಶ್ಲೀಲ ವಿಡಿಯೊ ಹರಿಬಿಟ್ಟವರ ಬಗ್ಗೆ ಮಾಹಿತಿ ಬಹಿರಂಗ ಮಾಡುತ್ತೇನೆ ಎಂದಿದ್ದ ವಕೀಲ ದೇವರಾಜೇಗೌಡ, ಇದೀಗ ಮತ್ತೊಂದು ಸ್ಫೋಟಕ ಆಡಿಯೊ ರಿಲೀಸ್‌ ಮಾಡಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ದೇಶಾದ್ಯಂತ ಸಂಚಲನ ಸೃಷ್ಟಿಸಿರುವ ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ (Prajwal Revanna Case) ಅಶ್ಲೀಲ ವಿಡಿಯೊ ಹರಿಬಿಟ್ಟವರ ಬಗ್ಗೆ ಮಾಹಿತಿ ಬಹಿರಂಗ ಮಾಡುತ್ತೇನೆ ಎಂದಿದ್ದ ವಕೀಲ ದೇವರಾಜೇಗೌಡ, ಇದೀಗ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಸ್ಫೋಟಕ ಆಡಿಯೊ ರಿಲೀಸ್‌ ಮಾಡಿದ್ದಾರೆ. ಇದರಿಂದ ಪ್ರಜ್ವಲ್‌ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದ್ದು, ವೈರಲ್‌ ಆಗಿರುವ 36 ಸೆಕೆಂಡ್‌ಗಳ ಆಡಿಯೊದಲ್ಲಿ ಏನಿದೆ ಎಂಬ ಮಾಹಿತಿ ಇಲ್ಲಿದೆ.

ಇತ್ತೀಚೆಗೆ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ವಕೀಲ ದೇವರಾಜೇಗೌಡ, ಹಾಸನ ಪೆನ್‌ಡ್ರೈವ್‌ ಪ್ರಕರಣದ ಹಿಂದಿನ ಕಥಾನಾಯಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ ಎಂದು ಗಂಭೀರ ಆರೋಪ ಮಾಡಿದ್ದರು. ನಂತರ ಇದಕ್ಕೆ ಸಂಬಂಧಪಟ್ಟಂತೆ ಮತ್ತಷ್ಟು ಸಾಕ್ಷ್ಯ ನೀಡುವುದಾಗಿ ಹೇಳಿದ್ದರು. ಇದೀಗ ಪ್ರಕರಣದ ಬಗ್ಗೆ ಮಂಡ್ಯ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಜತೆ ಮಾತುಕತೆಯ ಆಡಿಯೊವನ್ನು ಹರಿಬಿಟ್ಟಿದ್ದಾರೆ.

ಒಟ್ಟು ಮೂರು ಆಡಿಯೊಗಳನ್ನು ದೇವರಾಜೇಗೌಡ ರಿಲೀಸ್‌ ಮಾಡಿದ್ದು, ಇದರಲ್ಲಿ ಹನಿಟ್ರ್ಯಾಪ್‌ ಮಾಡಿದ್ದರು ಎನ್ನಲಾಗಿದ್ದ ಮಹಿಳೆಯ ಗಂಡ ಮೋಹನ್‌ ಜತೆಗಿನ ಮಾತುಕತೆಯ ವಿಡಿಯೊ ಒಂದು ಇದ್ದು, ಉಳಿದೆರಡು ಆಡಿಯೊಗಳು ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಜತೆ ಮಾತನಾಡಿರುವುದಾಗಿದೆ.

ಇದನ್ನೂ ಓದಿ | Prajwal Revanna Case: ರೇವಣ್ಣ ಬಸವನಗುಡಿ ನಿವಾಸದಲ್ಲಿ 2ನೇ ಬಾರಿ ಸ್ಥಳ ಮಹಜರು

ಆಡಿಯೊದಲ್ಲಿ ಏನಿದೆ?

ಆಡಿಯೊದಲ್ಲಿ ಮೊದಲಿಗೆ ನನ್ನನ್ನು ಭೇಟಿ ಆಗಿದ್ದೆ ಎಂದು ದೇವರಾಜೇಗೌಡ ಹೇಳಿರುವುದು ಯಾಕೆ ಎಂದು ಡಿಕೆಶಿ ತಮ್ಮ ಬಳಿ ಕೇಳಿರುವುದಾಗಿ ಮಾಜಿ ಸಂಸದ ಶಿವರಾಮೇಗೌಡ ಹೇಳುತ್ತಾರೆ. ಈ ವೇಳೆ ವಕೀಲ ದೇವರಾಜೇಗೌಡ, ನಮಗೆ ಏನಾದರೂ ಎಸ್‌ಐಟಿಯವರು ನೋಟಿಸ್‌ ಕೊಡತ್ತಾರಾ ಎಂದು ಪ್ರಶ್ನಿಸಿದ್ದಾರೆ. ಆಗ ಕೊಡ್ತಾರೆ, ಕೊಡ್ತಾರೆ ಎಂದ ಶಿವರಾಮೇಗೌಡ, ಎಸ್‌ಐಟಿ ಅಧಿಕಾರಿಗಳ ಮುಂದೆ ಡಿಕೆ ಬಗ್ಗೆ ನೀನು ಚಕಾರ ಎತ್ತಬೇಡ. ನಾನು ಇವತ್ತಿನಿಂದ ಅಲ್ಲ, ಬಹಳ ವರ್ಷಗಳಿಂದ ರೇವಣ್ಣ ಕುಟುಂಬದ ವಿರುದ್ಧ ಕೋರ್ಟ್‌ನಲ್ಲಿ ಹೋರಾಟ ಮಾಡುತ್ತಿದ್ದೇನೆ ಎಂದು ಹೇಳು ಎಂದು ಶಿವರಾಮೇಗೌಡ ಕಿವಿಮಾತು ಹೇಳಿದ್ದಾರೆ.

ಮತ್ತೊಂದು ಆಡಿಯೊದಲ್ಲಿ ತಮಗೆ ಹನಿಟ್ರ್ಯಾಪ್‌ ಮಾಡಿದ್ದರು ಎನ್ನಲಾದ ಮಹಿಳೆಯ ಗಂಡ ಮೋಹನ್‌ ಎಂಬುವವರ ಜತೆ ದೇವರಾಜೇಗೌಡ ಮಾತನಾಡಿದ್ದಾರೆ. ನಿಮ್ಮ ಹೆಂಡತಿ, ಅವರ ಜತೆ ಸೇರಿಕೊಂಡು ನನ್ನನ್ನು ಹನಿಟ್ರ್ಯಾಪ್‌ ಮಾಡಿದ್ದಾಳೆ, ಅವಳ ಜತೆ ಡಿವೋರ್ಸ್‌ ಆಗಿಲ್ಲವಾ ಎಂದು ಪ್ರಶ್ನಿಸಿದ್ದಾರೆ. ನಮ್ಮನ್ನು ಮನೆಯಿಂದ ಆಚೆ ಹಾಕಿ, ಹಾಸನದಲ್ಲಿ ನಮ್ಮ ಆಸ್ತಿಯನ್ನು ಅವಳ ಹೆಸರಿಗೆ ಮಾಡಿಕೊಂಡಿದ್ದಾಳೆ. ನಾನು ಹೇಗೋ ಜೀವನ ಮಾಡಿಕೊಂಡಿದ್ದೇನೆ ಎಂದು ಮೋಹನ್‌ ಹೇಳಿದ್ದಾರೆ.

ಆಡಿಯೊ ರಿಲೀಸ್‌ ಮಾಡಿದ ಬೆನ್ನಲ್ಲೇ ವಕೀಲ ದೇವರಾಜೇಗೌಡ ವಶಕ್ಕೆ

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣ ಸಂಬಂಧ ಸ್ಫೋಟಕ ಆಡಿಯೊ ರಿಲೀಸ್‌ ಮಾಡಿದ ಬೆನ್ನಲ್ಲೇ ವಕೀಲ ದೇವರಾಜೇಗೌಡ ಅವರನ್ನು ಹಿರಿಯೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಿರಿಯೂರಿನಲ್ಲಿ ವಕೀಲ ದೇವರಾಜೇಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಎಸ್‌ಐಟಿಗೆ ಒಪ್ಪಿಸಲು ತಯಾರಿ ನಡೆಸಿದ್ದಾರೆ. ಹೊಳೆನರಸೀಪುರ ಪೊಲೀಸರು ನೀಡಿದ ಮಾಹಿತಿ ಮೇರೆಗೆ ಬೆಂಗಳೂರಿನಿಂದ ಬಳ್ಳಾರಿಗೆ ಹೋಗುತ್ತಿದ್ದಾಗ ಅವರನ್ನು ವಶಕ್ಕೆ ಪಡೆಯಲಾಗಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಠಾಣೆಯಲ್ಲಿ ದೇವರಾಜೇಗೌಡ ವಿರುದ್ಧ ಏ.1ರಂದು ಕೇಸ್‌ ದಾಖಲಾಗಿತ್ತು.

ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ದೇವರಾಜೇಗೌಡ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಪತಿಯ ಮಾಲೀಕತ್ವದ ಸೈಟ್ ವಿಚಾರವಾಗಿ ದೇವರಾಜೇಗೌಡ ಅವರನ್ನು ಸಂತ್ರಸ್ತ ಮಹಿಳೆ ಭೇಟಿಯಾಗಿದ್ದರು. ಆ ಪರಿಚಯವನ್ನು ದುರ್ಬಳಕೆ ಮಾಡಿಕೊಂಡು ವಾಟ್ಸ್​ಆ್ಯಪ್​ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಆರೋಪ ದೇವರಾಜ್ ವಿರುದ್ಧ ಕೇಳಿ ಬಂದಿತ್ತು. ಅದೇ ರೀತಿ ಬಳಿಕ ಲೈಂಗಿಕವಾಗಿ ದುರ್ಬಳಕೆ ಮಾಡಿದ ಆರೋಪವೂ ಕೇಳಿ ಬಂದಿತ್ತು.

ಮಹಿಳೆಗೆ ಫೋನ್ ಮಾಡಿ ತಾವು ಜೊತೆಯಲ್ಲಿರುವ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡೋದಾಗಿ ಬೆದರಿಕೆ ಹಾಕಿದ ಆರೋಪವೂ ದಾಖಲಾಗಿತ್ತು. ಅದೇ ರೀತಿ ವಿಡಿಯೋ ಕಾಲ್‌ ಮಾಡಿ‌ ಖಾಸಗಿ ಅಂಗ ಪ್ರದರ್ಶನದ ಮಾಡಿರುವ ಆರೋಪವೂ ದಾಖಲಾಗಿತ್ತು.

ಇದನ್ನೂ ಓದಿ | Prajwal Revanna Case: ಪ್ರಜ್ವಲ್‌ ರೇವಣ್ಣ ವಿಡಿಯೋ ಡ್ರೈವರ್‌ ಮೊಬೈಲ್‌ಗೆ ಲೀಕ್‌ ಆಗಿದ್ದು ಹೀಗೆ!

ತಾನು ಹೇಳಿದ ಹಾಗೆ ಕೇಳಬೇಕು. ಇಲ್ಲದೇ ಹೋದರೆ ಪತಿಯ ಜೀವಕ್ಕೆ ಪಾಯ ತಂದೊಡ್ಡುವುದಾಗಿ ದೇವರಾಜೇಗೌಡ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಬೆಂಬಲಿಗರನ್ನು ಕಳುಹಿಸಿ ಜೀವ ಬೆದರಿಕೆ ಹಾಕಿದ ಆರೋಪವೂ ಕೇಳಿ ಬಂದಿತ್ತು. ಹೀಗಾಗಿ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ವಕೀಲರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.


Continue Reading

ಕ್ರೈಂ

Prajwal Revanna case: ಪ್ರಜ್ವಲ್‌ ರೇವಣ್ಣ ವಿರುದ್ಧ ರೆಡ್‌ ಕಾರ್ನರ್ ಬ್ರಹ್ಮಾಸ್ತ್ರ; ಯಾವ ದೇಶದಲ್ಲಿದ್ದರೂ ಅರೆಸ್ಟ್‌ ಮಾಡಲು ಸಿದ್ಧತೆ?

Prajwal Revanna case: ಮೂರು ಕೇಸ್ ದಾಖಲಾಗಿದ್ದರೂ ಪ್ರಜ್ವಲ್‌ ರೇವಣ್ಣ ಇನ್ನೂ ಪತ್ತೆಯಾಗಿಲ್ಲ. ಈಗ ಇನ್ನೂ ಕೆಲ ಸಂತ್ರಸ್ತೆಯರು ಪ್ರಜ್ವಲ್ ವಿರುದ್ಧ ದೂರು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಪೆನ್‌ಡ್ರೈವ್‌ ಕೇಸ್ ಸಂತ್ರಸ್ತರಿದ್ದರೆ ಹೆಲ್ಪ್‌ಲೈನ್‌ಗೂ ಕಾಲ್‌ ಮಾಡಿ ಎಂದು ಎಸ್‌ಐಟಿ ಹೇಳಿದೆ. ಅದಕ್ಕೆ ಹಲವು ಕರೆಗಳು ಬರುತ್ತಿವೆ ಎನ್ನಲಾಗಿದೆ. ಇನ್ನೊಂದೆಡೆ ಈಗಾಗಲೇ ಪ್ರಜ್ವಲ್ ಬಂಧನಕ್ಕೆ ಬ್ಲೂಕಾರ್ನರ್ ನೋಟಿಸ್ ಅನ್ನು ಜಾರಿ ಮಾಡಲಾಗಿತ್ತು. ಆದರೆ, 15 ದಿನವಾದರೂ ಪ್ರಜ್ವಲ್‌ ಸುಳಿವು ಇಲ್ಲದೇ ಇರುವ ಕಾರಣ ರೆಡ್‌ ಕಾರ್ನರ್‌ ನೋಟಿಸ್‌ ನೀಡಿ ಅರೆಸ್ಟ್‌ ಮಾಡಲು ಎಸ್‌ಐಟಿ ಸಿದ್ಧತೆಯನ್ನು ನಡೆಸಿದೆ ಎಂದು ಹೇಳಲಾಗಿದೆ.

VISTARANEWS.COM


on

Prajwal Revanna case SIT to issue Red Corner Notice against Prajwal
Koo

ಬೆಂಗಳೂರು: ಈಗಾಗಲೇ ಲೈಂಗಿಕ ದೌರ್ಜನ್ಯ (Physical abuse) ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna case) ವಿರುದ್ಧ ಒಟ್ಟು ಮೂರು ಅತ್ಯಾಚಾರ ಕೇಸ್‌ಗಳು ದಾಖಲಾಗಿವೆ. ಆದರೆ, ಅವರು ವಿದೇಶದಲ್ಲಿ ತಲೆಮರೆಸಿಕೊಂಡು ಇರುವ ಕಾರಣ ಈಗಾಗಲೇ ಬ್ಲೂಕಾರ್ನರ್ ನೋಟಿಸ್ ನೀಡಲಾಗಿತ್ತು. ಆದರೆ, ಶತಾಯಗತಾಯ ಅವರನ್ನು ಬಂಧಿಸಿ ಕರೆತರಲೇಬೇಕು ಎಂದು ತೀರ್ಮಾನಿಸಿರುವ ಎಸ್‌ಐಟಿ ಈಗ ರೆಡ್‌ ಕಾರ್ನರ್ ಬ್ರಹ್ಮಾಸ್ತ್ರ ಬಿಡಲು ಮುಂದಾಗಿದೆ.

ಮೂರು ಕೇಸ್ ದಾಖಲಾಗಿದ್ದರೂ ಪ್ರಜ್ವಲ್‌ ರೇವಣ್ಣ ಇನ್ನೂ ಪತ್ತೆಯಾಗಿಲ್ಲ. ಈಗ ಇನ್ನೂ ಕೆಲ ಸಂತ್ರಸ್ತೆಯರು ಪ್ರಜ್ವಲ್ ವಿರುದ್ಧ ದೂರು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಪೆನ್‌ಡ್ರೈವ್‌ ಕೇಸ್ ಸಂತ್ರಸ್ತರಿದ್ದರೆ ಹೆಲ್ಪ್‌ಲೈನ್‌ಗೂ ಕಾಲ್‌ ಮಾಡಿ ಎಂದು ಎಸ್‌ಐಟಿ ಹೇಳಿದೆ. ಅದಕ್ಕೆ ಹಲವು ಕರೆಗಳು ಬರುತ್ತಿವೆ ಎನ್ನಲಾಗಿದೆ. ಇನ್ನೊಂದೆಡೆ ಈಗಾಗಲೇ ಪ್ರಜ್ವಲ್ ಬಂಧನಕ್ಕೆ ಬ್ಲೂಕಾರ್ನರ್ ನೋಟಿಸ್ ಅನ್ನು ಜಾರಿ ಮಾಡಲಾಗಿತ್ತು. ಆದರೆ, 15 ದಿನವಾದರೂ ಪ್ರಜ್ವಲ್‌ ಸುಳಿವು ಇಲ್ಲದೇ ಇರುವ ಕಾರಣ ರೆಡ್‌ ಕಾರ್ನರ್‌ ನೋಟಿಸ್‌ ನೀಡಿ ಅರೆಸ್ಟ್‌ ಮಾಡಲು ಎಸ್‌ಐಟಿ ಸಿದ್ಧತೆಯನ್ನು ನಡೆಸಿದೆ ಎಂದು ಹೇಳಲಾಗಿದೆ.

ರೆಡ್‌ ಕಾರ್ನರ್‌ ಜಾರಿಯಾದರೆ ಏನಾಗುತ್ತೆ?

ಪ್ರಜ್ವಲ್ ರೇವಣ್ಣ ಬಂಧನಕ್ಕೆ ರೆಡ್ ಕಾರ್ನರ್ ನೋಟಿಸ್ ಹೊರಡಿಸಲು ಮನವಿ ಮಾಡಲು ಎಸ್‌ಐಟಿ ಚಿಂತನೆ ನಡೆಸಿದೆ. ಇದಕ್ಕೆ ಮೊದಲು ಸಿಬಿಐ ಸಂಸ್ಥೆಯು ಇಂಟರ್‌ಪೋಲ್‌ ಅನ್ನು ಸಂಪರ್ಕಿಸಿ ರೆಡ್ ಕಾರ್ನರ್ ನೋಟಿಸ್‌ಗೆ ಬೇಡಿಕೆ ಸಲ್ಲಿಸಬೇಕು. ರೆಡ್ ಕಾರ್ನರ್ ನೋಟಿಸ್ ಜಾರಿಯಾದರೆ, ಯಾವ ದೇಶದಲ್ಲಿದ್ದರೂ ಆ ದೇಶದ ಪೊಲೀಸರು ಆರೋಪಿಯನ್ನು ಬಂಧಿಸಿ ಸಂಬಂಧಪಟ್ಟ ದೇಶಕ್ಕೆ ಮಾಹಿತಿ ನೀಡುತ್ತಾರೆ. ನಂತರ ಇಲ್ಲಿನ ಪೊಲೀಸರು ಹೋಗಿ ಆತನನ್ನು ಕರೆತರುತ್ತಾರೆ. ಹೀಗಾಗಿ ಪ್ರಜ್ವಲ್‌ ವಿರುದ್ಧ ಈ ಕ್ರಮಕ್ಕೆ ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದಾರೆ ಎನ್ನಲಾಗಿದೆ.

ಬ್ಲ್ಯೂ ಕಾರ್ನರ್‌ ನೋಟಿಸ್‌ ಏಕೆ?

ಬ್ಲೂ ಕಾರ್ನರ್ ನೋಟಿಸ್‌ ಜಾರಿಯಾದ ಬಳಿಕ ಇಂಟರ್‌ಪೋಲ್ ಇತರ ಕಡೆಗಳಿಗೂ ಆರೋಪಿಯ ಮಾಹಿತಿಯನ್ನು ಕಳಿಸಿ, ಆರೋಪಿಯ ನೆಲೆಯ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುತ್ತದೆ. ಆರೋಪಿ ಯಾವ ದೇಶದಲ್ಲಿ ಇದ್ದಾರೆ? ಎಲ್ಲಿ ಲೊಕೇಟ್ ಆಗಿದ್ದಾರೆ ಅನ್ನುವ ಚಲನವಲನಗಳನ್ನು ಈ ಮೂಲಕ ಪತ್ತೆ ಮಾಡುತ್ತಾರೆ. ಬಳಿಕ ಸಿಬಿಐಗೆ ಆರೋಪಿಯ ಚಲನವಲನ ಬಗ್ಗೆ ಮಾಹಿತಿ ನೀಡುತ್ತಾರೆ. ಸಿಬಿಐ ಮೂಲಕ ಎಸ್ಐಟಿಗೆ ಪ್ರಜ್ವಲ್ ಎಲ್ಲಿದ್ದಾರೆ ಅನ್ನುವ ಮಾಹಿತಿ ಸಿಗುತ್ತದೆ. ಹೀಗಾಗಿ ಈ ನೋಟಿಸ್‌ ನೀಡಲಾಗಿದ್ದು, ಇದು ಸುಳಿವು ಪಡೆಯಲು ಮುಖ್ಯವಾಗಿದೆ. ಆದರೆ, ಇದರಿಂದ ಪ್ರಜ್ವಲ್‌ ಬಗ್ಗೆ ಸರಿಯಾದ ಮಾಹಿತಿ ಸಿಗುತ್ತಿಲ್ಲ ಎನ್ನಲಾಗಿದೆ.

ಕಠಿಣ ಸೆಕ್ಷನ್‌ ಜಡಿದ SIT! ಯಾವುದಕ್ಕೆ ಎಷ್ಟು ವರ್ಷ ಜೈಲು?

ಎರಡು ದಿನದ ಹಿಂದಷ್ಟೇ ಪ್ರಜ್ವಲ್‌ ರೇವಣ್ಣ ಮೇಲೆ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಮೂರನೇ ಎಫ್ಐಆರ್‌ನಲ್ಲಿ ಒಂದಕ್ಕಿಂತ ಒಂದು ಕಠಿಣ ಸೆಕ್ಷನ್‌ಗಳನ್ನು ಹಾಕಲಾಗಿದೆ. ಹೀಗಾಗಿ ಪ್ರಜ್ವಲ್‌ ಒಂದು ವೇಳೆ ಅರೆಸ್ಟ್‌ ಆಗಿ ಅಪರಾಧ ಸಾಬೀತಾದರೆ ಜೈಲು ಶಿಕ್ಷೆ ಗ್ಯಾರಂಟಿ ಎನ್ನಲಾಗಿದೆ.

ಸಿಐಡಿಯ ಸೈಬರ್ ಕ್ರೈಂನಲ್ಲಿ ದಾಖಲಾಗಿರುವ ಈ ಪ್ರಕರಣದಲ್ಲೂ ಸಾಕಷ್ಟು ಗಂಭೀರವಾದ ಸೆಕ್ಷನ್‌ಗಳನ್ನು ಹಾಕಲಾಗಿದೆ. ಇದೇ ಮೇ 8ರಂದು ದಾಖಲಾಗಿರುವ ಎಫ್ಐಆರ್ ಇದಾಗಿದ್ದು, ಐಪಿಸಿ 376(2)(N), 376(2)(K), 354(A) 354(B), 354(C) ಹಾಗೂ 506 ಸೆಕ್ಷನ್‌ಗಳನ್ನು ಹಾಕಲಾಗಿದೆ. ಅದರಲ್ಲಿ 376(2)(n) ಅನ್ನು ಸೆಕ್ಷನ್ ನಿರಂತರವಾಗಿ ಅತ್ಯಾಚಾರವನ್ನು ನಡೆಸಲಾಗಿದೆ ಎಂದು ದಾಖಲು ಮಾಡಲಾಗಿದೆ.

ಇನ್ನು ಇತ್ತ ಇದೇ ವಿಚಾರವಾಗಿ ಇಬ್ಬರು ಸರ್ಕಾರಿ ಅಧಿಕಾರಿಗಳನ್ನೂ ಕೂಡ ಎಸ್‌ಐಟಿ ತನಿಖೆ ವೇಳೆ ವಿಚಾರಣೆ ನಡೆಸಿದೆ.‌ ವರ್ಗಾವಣೆ ಮಾಡಿಸುತ್ತೇನೆ ಎಂದು ಹೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬುದು ಸಂತ್ರಸ್ತೆಯಾದ ಸರ್ಕಾರಿ ಅಧಿಕಾರಿಯ ಆರೋಪವಾಗಿದೆ. ಮೊದಲಿಗೆ ಈ ವಿಚಾರದಲ್ಲಿ ನಮ್ಮನ್ನು ಎಳಿಯಬೇಡಿ ಎಂದಿದ್ದ ಸಂತ್ರಸ್ತೆಯರು ಕೊನೆಗೂ ಎಸ್‌ಐಟಿ ಮುಂದೆ ಹಾಜರಾಗಿ ಕೆಲವು ವಿಷಯಗಳನ್ನು ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ.

ಇತ್ತ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ಕಿಡ್ನ್ಯಾಪ್ ಮಾಡಿದ್ದು ಮೂರು ಜನರಲ್ಲ ಏಳು ಜನ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎನ್ನಲಾಗಿದೆ. ಕರೆದೊಯ್ಯಲು ಒಬ್ಬರು, ಕೂಡಿ ಹಾಕಲು ಒಬ್ಬರು ಎಂಬಂತೆ ಒಟ್ಟಾರೆಯಾಗಿ ಏಳು ಜನರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಎಸ್‌ಐಟಿ ಹೇಳುತ್ತಿದೆ. ಈ ವಿಚಾರವಾಗಿ ತನಿಖೆ ನಡೆಯುತ್ತಿದೆ.

ಯಾವ ಯಾವ ಸೆಕ್ಷನ್‌ ಏನು ಹೇಳುತ್ತದೆ?

  • 376(2)(N)- ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ.
    ಶಿಕ್ಷೆ – ಕನಿಷ್ಠ 10 ವರ್ಷ ಹಾಗೂ ಗರಿಷ್ಠ ಜೀವಾವಧಿ ಶಿಕ್ಷೆ
  • ಸೆಕ್ಷನ್‌ – IPC 376(2)(K) – ಜನಪ್ರತಿನಿಧಿಯಾಗಿ ಅಧಿಕಾರ ದುರ್ಬಳಕೆ, ಅತ್ಯಾಚಾರ
    ಶಿಕ್ಷೆ – ಕನಿಷ್ಠ 7ರಿಂದ 10 ವರ್ಷ ಹಾಗೂ ಗರಿಷ್ಠ ಜೀವಾವಧಿ ಶಿಕ್ಷೆ
  • ಸೆಕ್ಷನ್‌ – IPC 354(A) – ಲೈಂಗಿಕ ಕೃತ್ಯಕ್ಕೆ ಆಮಿಷವೊಡ್ಡಿದ ರೀತಿ ನಡವಳಿಕೆ, ದೌರ್ಜನ್ಯ
    ಶಿಕ್ಷೆ – ಗರಿಷ್ಠ 3 ವರ್ಷ ಜೈಲು ಶಿಕ್ಷೆ
  • ಸೆಕ್ಷನ್‌ – IPC 354(B) – ಮಹಿಳೆಯ ಬಟ್ಟೆ ಹಿಡಿದು ಎಳೆದಾಡಿ ಮಾನಭಂಗ ಯತ್ನ
    ಶಿಕ್ಷೆ – ಗರಿಷ್ಠ ಮೂರು ವರ್ಷ ಜೈಲು ಶಿಕ್ಷೆ
  • ಸೆಕ್ಷನ್‌ – IPC 354(C)-ಖಾಸಗಿ ಚಿತ್ರ ಸೆರೆಹಿಡಿದು ವೀಕ್ಷಣೆ ಮಾಡುವುದು
    ಶಿಕ್ಷೆ – ಗರಿಷ್ಠ ಏಳು ವರ್ಷ ಜೈಲು ಶಿಕ್ಷೆ
  • ಸೆಕ್ಷನ್‌ – IPC 506 – ಬೆದರಿಕೆ ಹಾಕಿರುವುದಾಗಿ ಪ್ರಜ್ವಲ್‌ ವಿರುದ್ಧ FIRನಲ್ಲಿ ಉಲ್ಲೇಖ
    ಶಿಕ್ಷೆ – ಕನಿಷ್ಠ 2 ವರ್ಷ ಅಥವಾ ಏಳು ವರ್ಷ ಜೈಲು ಶಿಕ್ಷೆ

ಹೀಗೆ ಮೂರನೇ ಎಫ್ಐಆರ್‌ನಲ್ಲಿ ಕಠಿಣ ಸೆಕ್ಷನ್‌ಗಳನ್ನು ಎಸ್ಐಟಿ ಹಾಕಿದ್ದು, ಪ್ರಜ್ವಲ್‌ಗೆ ಭಾರಿ ಉರುಳಾಗಲಿದೆ.

ಸುಳ್ಳು ಕೇಸ್‌ ಹಾಕಲು ಮಹಿಳೆಯನ್ನು SIT ಸಂಪರ್ಕ ಮಾಡಿಲ್ಲ; ಕಾಟ ಕೊಟ್ಟವನನ್ನು ಬಿಡಲ್ಲ!

ಈಗಾಗಲೇ ಲೈಂಗಿಕ ದೌರ್ಜನ್ಯ (Physical abuse) ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna case) ವಿರುದ್ಧ ಸುಳ್ಳು ಕೇಸ್ (Fake case) ಹಾಕಲು ತನಗೆ ಒತ್ತಾಯಿಸಲಾಗುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (National Commission for Women) ಮಹಿಳೆಯೊಬ್ಬರು ನೀಡಿರುವ ದೂರು ಹೊಸ ತಿರುವನ್ನು ಪಡೆದುಕೊಂಡಿದೆ. ಎಸ್‌ಐಟಿಯಿಂದ ಯಾರೂ ಆಕೆಯನ್ನು ಸಂಪರ್ಕಿಸಿಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ. ಆದರೆ, ಸಂಪರ್ಕ ಮಾಡಿದವರ ಬಗ್ಗೆ ಪತ್ತೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ತಿಳಿಸಿದೆ.

ಸಂತ್ರಸ್ತ ಮಹಿಳೆಗೆ ಎಸ್ಐಟಿ ಅಧಿಕಾರಿ ಎಂದು ಕರೆ ಮಾಡಿ ತೊಂದರೆ ಮಾಡಿರುವ ಆರೋಪ ವಿಚಾರವಾಗಿ ಎಸ್ಐಟಿ ಉನ್ನತ ಮೂಲಗಳು ಸ್ಪಷ್ಟನೆ ನೀಡಿದೆ. ಅಲ್ಲದೆ, ಎನ್‌ಸಿಡಬ್ಲ್ಯು ದೂರನ್ನು ಎಸ್‌ಐಟಿಗೆ ರವಾನಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್‌ಐಟಿ, ಗುರುವಾರವಷ್ಟೇ ಈ ಮಹಿಳೆಯ ಬಗ್ಗೆ ಎಸ್‌ಐಟಿಗೆ ತಿಳಿದುಬಂದಿದೆ.

ಎಸ್‌ಐಟಿಯಿಂದ ಯಾರೂ ಆಕೆಯನ್ನು ಈ ಹಿಂದೆ ಸಂಪರ್ಕಿಸಿಲ್ಲ. ಮಹಿಳಾ ಆಯೋಗಕ್ಕೆ ದೂರು ನೀಡಿದ ಮಹಿಳೆಯು ನಮಗೆ ಯಾವುದೇ ದೂರು ನೀಡಿಲ್ಲ. ಮಹಿಳೆಗೆ ಕರೆ ಮಾಡಿದ ವ್ಯಕ್ತಿಯ ಗುರುತು ತಿಳಿಯಲು ಎಸ್‌ಐಟಿ ವಿಚಾರಣೆ ಆರಂಭಿಸಿದೆ. ಅಂತಹವರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತೆ ಕೋರಿ ಮಹಿಳಾ ಆಯೋಗಕ್ಕೆ ಪತ್ರ ಬರೆದಿರುವ ಮಹಿಳೆ

ಪ್ರಜ್ವಲ್‌ ರೇವಣ್ಣ ಹಾಗೂ ಎಚ್‌.ಡಿ ರೇವಣ್ಣ (HD revanna jailed) ಅವರ ವಿರುದ್ಧ ರಾಜಕೀಯ ಪ್ರೇರಿತ ಸುಳ್ಳು ದೂರುಗಳನ್ನು ದಾಖಲಿಸಲಾಗುತ್ತಿದೆ ಎಂದು ಜೆಡಿಎಸ್‌ (JDS) ಪ್ರತಿಭಟನೆ ನಡೆಸುತ್ತಿರುವುದರ ಹಿನ್ನೆಲೆಯಲ್ಲಿ ಈ ದೂರು ಮಹತ್ವ ಪಡೆದುಕೊಂಡಿದೆ. ಸೂಕ್ತ ಭದ್ರತೆಗೆ ಕೋರಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆಯೊಬ್ಬರು ಪತ್ರ ಬರೆದಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡುವಂತೆ ನನಗೆ ಒತ್ತಡ ಹಾಕಲಾಗುತ್ತಿದೆ. ಮೂವರು ಸಿವಿಲ್ ಡ್ರೆಸ್‌ನಲ್ಲಿ ಬಂದವರು ಒತ್ತಡ ಹಾಕಿದ್ದು, ಇಲ್ಲದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಬೆದರಿಕೆ ಹಾಕಿದ್ದಾರೆ. ನನ್ನ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆ ಪತ್ರ ಬರೆದಿದ್ದಾರೆ.

ಮಹಿಳೆ ಪತ್ರ ಬರೆದಿರುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ ಮಾಹಿತಿ ನೀಡಿದೆ. ಹಾಸನ ಮೂಲದ ಮಹಿಳೆ ಪತ್ರ ಬರೆದಿದ್ದು, ಪತ್ರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮಾಹಿತಿ ನೀಡಲಾಗಿದೆ. ದೂರಿನ ಪ್ರತಿ ಹಾಗೂ ಸೂಕ್ತ ಭದ್ರತೆಗೆ ಮನವಿ ಮಾಡಲಾಗಿದೆ.

ಇದನ್ನೂ ಓದಿ: Lok Sabha Election 2024: ಲೋಕಸಭಾ ಪ್ರಚಾರಕ್ಕೆ 26 ಸಾವಿರ ಕಿಲೋ ಮೀಟರ್ ಸಂಚಾರ, ದಿನಕ್ಕೆ ಸರಾಸರಿ 14-18 ಗಂಟೆ ಸಿಎಂ ಪ್ರಚಾರ!

ಪ್ರಜ್ವಲ್ ಕೇಸ್‌ನಲ್ಲಿ ಮಹಿಳೆಗೆ ದೂರು ನೀಡುವಂತೆ ಒತ್ತಡ ಹಾಕಲಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಆಯೋಗದಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಇಂದು ಮತ್ತೆ ಪತ್ರ ಬರೆಯುತ್ತೇವೆ. ಆಯೋಗದ ಅಧಿಕಾರಿಗಳು ಪತ್ರ ಬರೆದ ಮಹಿಳೆಯನ್ನು ಭೇಟಿ ಮಾಡುತ್ತೇವೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ.

Continue Reading

ಕ್ರೈಂ

Prajwal Revanna case: ಪ್ರಜ್ವಲ್‌ ಮೇಲೆ ಒಟ್ಟು ಮೂರು FIR; ಮೂರರಲ್ಲೂ ವಾಂಟೆಡ್‌ ಲಿಸ್ಟ್‌ನಲ್ಲಿ ಸಂಸದ!

Prajwal Revanna case: ದೇಶ ಬಿಟ್ಟು ಪರಾರಿಯಾದ ಪ್ರಜ್ವಲ್‌ ಸದ್ಯಕ್ಕೆ 3 ಕೇಸ್‌ಗಳಲ್ಲಿ ವಾಂಟೆಡ್‌ ಆಗಿದ್ದಾರೆ. ಅವರ ಮೇಲೆ ಯಾವ ಯಾವ ದಿನ ಕೇಸ್‌ ಅನ್ನು ಹಾಕಲಾಗಿದೆ ಎಂಬುದನನ್ನು ನೋಡುವುದಾದರೆ, ಏಪ್ರಿಲ್ 28ರಂದು ಹೊಳೆನರಸೀಪುರ ಠಾಣೆಯಲ್ಲಿ ಮೊದಲ ಎಫ್‌ಐಆರ್, ಮೇ 1ರಂದು ಬೆಂಗಳೂರಿನ ಸಿಐಡಿ ಠಾಣೆಯಲ್ಲಿ ಎರಡನೇ ಎಫ್‌ಐಆರ್ ಹಾಗೂ ಮೇ 8ರಂದು ಬೆಂಗಳೂರಿನ ಸಿಐಡಿ ಠಾಣೆಯಲ್ಲಿ ಮತ್ತೊಂದು ಕೇಸ್‌ ಅನ್ನು ದಾಖಲು ಮಾಡಲಾಗಿದೆ. ಹೀಗಾಗಿ ಈ ಕೇಸ್‌ಗಳು ಪ್ರಜ್ವಲ್‌ಗೆ ಖಂಡಿತವಾಗಿಯೂ ಮುಳುವಾಗುವ ಲಕ್ಷಣಗಳೂ ಕಾಣಿಸುತ್ತಿವೆ.

VISTARANEWS.COM


on

Prajwal Revanna case Three FIRs against Prajwal Wanted list in all three
Koo

ಬೆಂಗಳೂರು: ಈಗಾಗಲೇ ಲೈಂಗಿಕ ದೌರ್ಜನ್ಯ (Physical abuse) ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna case) ವಿರುದ್ಧ ಈಗ ಮೂರು ಕೇಸ್‌ಗಳು ದಾಖಲಾಗಿವೆ. ಅಲ್ಲದೆ, ಈ ಮೂರೂ ಕೇಸ್‌ಗಳಲ್ಲಿ ಅವರು ವಾಂಟೆಡ್‌ ಲಿಸ್ಟ್‌ನಲ್ಲಿದ್ದಾರೆ.

ಪೆನ್‌ಡ್ರೈವ್ ಪಾಪಕೂಪದಲ್ಲಿ ಪ್ರಜ್ವಲ್‌ ಮೇಲೆ ಕೇಸ್ ಮೇಲೆ ಕೇಸ್‌ ಅನ್ನು ಹಾಕಲಾಗಿದೆ. ಅವರ ಮೇಲೆ ದೂರು ನೀಡಲು ಸಂತ್ರಸ್ತೆಯರು ಮೊದಲು ಹಿಂದೇಟು ಹಾಕಿದ್ದಾರಾದರೂ ಈಗ ಮಹಿಳಾ ಅಧಿಕಾರಿಗಳೂ ಸೇರಿದಂತೆ ಹಲವರು ಮುಂದೆ ಬರುತ್ತಿದ್ದಾರೆ. ಹೀಗಾಗಿ ಈ ಕೇಸ್‌ಗಳು ಪ್ರಜ್ವಲ್‌ಗೆ ಖಂಡಿತವಾಗಿಯೂ ಮುಳುವಾಗುವ ಲಕ್ಷಣಗಳೂ ಕಾಣಿಸುತ್ತಿವೆ.

ಪ್ರಜ್ವಲ್ ರೇವಣ್ಣ ವಿರುದ್ಧ ಇದುವರೆಗೂ ಮೂರು FIR ದಾಖಲಾಗಿದೆ. ಮೇ 8ರ ಬುಧವಾರ ಸಿಐಡಿ ಠಾಣೆಯಲ್ಲಿ ಹೊಸ ಎಫ್‌ಐಆರ್ ಅನ್ನು ದಾಖಲು ಮಾಡಲಾಗಿತ್ತು. ಇದು ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾದ ಲೇಟೆಸ್ಟ್ ರೇಪ್ ಕೇಸ್ ಆಗಿದೆ. ಇದರಲ್ಲಿ IPC 376(2)(N), 376(2)(K), 354(A), 354(B) ಹಾಗೂ 354C ಹಾಗೂ 506 ಅಡಿಯಲ್ಲಿ ಕೇಸ್‌ ಅನ್ನು ಬುಕ್‌ ಮಾಡಲಾಗಿದೆ.

ವಾಂಟೆಡ್ ಪ್ರಜ್ವಲ್!

ದೇಶ ಬಿಟ್ಟು ಪರಾರಿಯಾದ ಪ್ರಜ್ವಲ್‌ ಸದ್ಯಕ್ಕೆ 3 ಕೇಸ್‌ಗಳಲ್ಲಿ ವಾಂಟೆಡ್‌ ಆಗಿದ್ದಾರೆ. ಅವರ ಮೇಲೆ ಯಾವ ಯಾವ ದಿನ ಕೇಸ್‌ ಅನ್ನು ಹಾಕಲಾಗಿದೆ ಎಂಬುದನನ್ನು ನೋಡುವುದಾದರೆ, ಏಪ್ರಿಲ್ 28ರಂದು ಹೊಳೆನರಸೀಪುರ ಠಾಣೆಯಲ್ಲಿ ಮೊದಲ ಎಫ್‌ಐಆರ್, ಮೇ 1ರಂದು ಬೆಂಗಳೂರಿನ ಸಿಐಡಿ ಠಾಣೆಯಲ್ಲಿ ಎರಡನೇ ಎಫ್‌ಐಆರ್ ಹಾಗೂ ಮೇ 8ರಂದು ಬೆಂಗಳೂರಿನ ಸಿಐಡಿ ಠಾಣೆಯಲ್ಲಿ ಮತ್ತೊಂದು ಕೇಸ್‌ ಅನ್ನು ದಾಖಲು ಮಾಡಲಾಗಿದೆ.

ಕಠಿಣ ಸೆಕ್ಷನ್‌ ಜಡಿದ SIT! ಯಾವುದಕ್ಕೆ ಎಷ್ಟು ವರ್ಷ ಜೈಲು?

ಎರಡು ದಿನದ ಹಿಂದಷ್ಟೇ ಪ್ರಜ್ವಲ್‌ ರೇವಣ್ಣ ಮೇಲೆ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಮೂರನೇ ಎಫ್ಐಆರ್‌ನಲ್ಲಿ ಒಂದಕ್ಕಿಂತ ಒಂದು ಕಠಿಣ ಸೆಕ್ಷನ್‌ಗಳನ್ನು ಹಾಕಲಾಗಿದೆ. ಹೀಗಾಗಿ ಪ್ರಜ್ವಲ್‌ ಒಂದು ವೇಳೆ ಅರೆಸ್ಟ್‌ ಆಗಿ ಅಪರಾಧ ಸಾಬೀತಾದರೆ ಜೈಲು ಶಿಕ್ಷೆ ಗ್ಯಾರಂಟಿ ಎನ್ನಲಾಗಿದೆ.

ಸಿಐಡಿಯ ಸೈಬರ್ ಕ್ರೈಂನಲ್ಲಿ ದಾಖಲಾಗಿರುವ ಈ ಪ್ರಕರಣದಲ್ಲೂ ಸಾಕಷ್ಟು ಗಂಭೀರವಾದ ಸೆಕ್ಷನ್‌ಗಳನ್ನು ಹಾಕಲಾಗಿದೆ. ಇದೇ ಮೇ 8ರಂದು ದಾಖಲಾಗಿರುವ ಎಫ್ಐಆರ್ ಇದಾಗಿದ್ದು, ಐಪಿಸಿ 376(2)(N), 376(2)(K), 354(A) 354(B), 354(C) ಹಾಗೂ 506 ಸೆಕ್ಷನ್‌ಗಳನ್ನು ಹಾಕಲಾಗಿದೆ. ಅದರಲ್ಲಿ 376(2)(n) ಅನ್ನು ಸೆಕ್ಷನ್ ನಿರಂತರವಾಗಿ ಅತ್ಯಾಚಾರವನ್ನು ನಡೆಸಲಾಗಿದೆ ಎಂದು ದಾಖಲು ಮಾಡಲಾಗಿದೆ.

ಇನ್ನು ಇತ್ತ ಇದೇ ವಿಚಾರವಾಗಿ ಇಬ್ಬರು ಸರ್ಕಾರಿ ಅಧಿಕಾರಿಗಳನ್ನೂ ಕೂಡ ಎಸ್‌ಐಟಿ ತನಿಖೆ ವೇಳೆ ವಿಚಾರಣೆ ನಡೆಸಿದೆ.‌ ವರ್ಗಾವಣೆ ಮಾಡಿಸುತ್ತೇನೆ ಎಂದು ಹೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬುದು ಸಂತ್ರಸ್ತೆಯಾದ ಸರ್ಕಾರಿ ಅಧಿಕಾರಿಯ ಆರೋಪವಾಗಿದೆ. ಮೊದಲಿಗೆ ಈ ವಿಚಾರದಲ್ಲಿ ನಮ್ಮನ್ನು ಎಳಿಯಬೇಡಿ ಎಂದಿದ್ದ ಸಂತ್ರಸ್ತೆಯರು ಕೊನೆಗೂ ಎಸ್‌ಐಟಿ ಮುಂದೆ ಹಾಜರಾಗಿ ಕೆಲವು ವಿಷಯಗಳನ್ನು ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ.

ಇತ್ತ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ಕಿಡ್ನ್ಯಾಪ್ ಮಾಡಿದ್ದು ಮೂರು ಜನರಲ್ಲ ಏಳು ಜನ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎನ್ನಲಾಗಿದೆ. ಕರೆದೊಯ್ಯಲು ಒಬ್ಬರು, ಕೂಡಿ ಹಾಕಲು ಒಬ್ಬರು ಎಂಬಂತೆ ಒಟ್ಟಾರೆಯಾಗಿ ಏಳು ಜನರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಎಸ್‌ಐಟಿ ಹೇಳುತ್ತಿದೆ. ಈ ವಿಚಾರವಾಗಿ ತನಿಖೆ ನಡೆಯುತ್ತಿದೆ.

ಯಾವ ಯಾವ ಸೆಕ್ಷನ್‌ ಏನು ಹೇಳುತ್ತದೆ?

  • 376(2)(N)- ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ.
    ಶಿಕ್ಷೆ – ಕನಿಷ್ಠ 10 ವರ್ಷ ಹಾಗೂ ಗರಿಷ್ಠ ಜೀವಾವಧಿ ಶಿಕ್ಷೆ
  • ಸೆಕ್ಷನ್‌ – IPC 376(2)(K) – ಜನಪ್ರತಿನಿಧಿಯಾಗಿ ಅಧಿಕಾರ ದುರ್ಬಳಕೆ, ಅತ್ಯಾಚಾರ
    ಶಿಕ್ಷೆ – ಕನಿಷ್ಠ 7ರಿಂದ 10 ವರ್ಷ ಹಾಗೂ ಗರಿಷ್ಠ ಜೀವಾವಧಿ ಶಿಕ್ಷೆ
  • ಸೆಕ್ಷನ್‌ – IPC 354(A) – ಲೈಂಗಿಕ ಕೃತ್ಯಕ್ಕೆ ಆಮಿಷವೊಡ್ಡಿದ ರೀತಿ ನಡವಳಿಕೆ, ದೌರ್ಜನ್ಯ
    ಶಿಕ್ಷೆ – ಗರಿಷ್ಠ 3 ವರ್ಷ ಜೈಲು ಶಿಕ್ಷೆ
  • ಸೆಕ್ಷನ್‌ – IPC 354(B) – ಮಹಿಳೆಯ ಬಟ್ಟೆ ಹಿಡಿದು ಎಳೆದಾಡಿ ಮಾನಭಂಗ ಯತ್ನ
    ಶಿಕ್ಷೆ – ಗರಿಷ್ಠ ಮೂರು ವರ್ಷ ಜೈಲು ಶಿಕ್ಷೆ
  • ಸೆಕ್ಷನ್‌ – IPC 354(C)-ಖಾಸಗಿ ಚಿತ್ರ ಸೆರೆಹಿಡಿದು ವೀಕ್ಷಣೆ ಮಾಡುವುದು
    ಶಿಕ್ಷೆ – ಗರಿಷ್ಠ ಏಳು ವರ್ಷ ಜೈಲು ಶಿಕ್ಷೆ
  • ಸೆಕ್ಷನ್‌ – IPC 506 – ಬೆದರಿಕೆ ಹಾಕಿರುವುದಾಗಿ ಪ್ರಜ್ವಲ್‌ ವಿರುದ್ಧ FIRನಲ್ಲಿ ಉಲ್ಲೇಖ
    ಶಿಕ್ಷೆ – ಕನಿಷ್ಠ 2 ವರ್ಷ ಅಥವಾ ಏಳು ವರ್ಷ ಜೈಲು ಶಿಕ್ಷೆ

ಹೀಗೆ ಮೂರನೇ ಎಫ್ಐಆರ್‌ನಲ್ಲಿ ಕಠಿಣ ಸೆಕ್ಷನ್‌ಗಳನ್ನು ಎಸ್ಐಟಿ ಹಾಕಿದ್ದು, ಪ್ರಜ್ವಲ್‌ಗೆ ಭಾರಿ ಉರುಳಾಗಲಿದೆ.

ಸುಳ್ಳು ಕೇಸ್‌ ಹಾಕಲು ಮಹಿಳೆಯನ್ನು SIT ಸಂಪರ್ಕ ಮಾಡಿಲ್ಲ; ಕಾಟ ಕೊಟ್ಟವನನ್ನು ಬಿಡಲ್ಲ!

ಈಗಾಗಲೇ ಲೈಂಗಿಕ ದೌರ್ಜನ್ಯ (Physical abuse) ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna case) ವಿರುದ್ಧ ಸುಳ್ಳು ಕೇಸ್ (Fake case) ಹಾಕಲು ತನಗೆ ಒತ್ತಾಯಿಸಲಾಗುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (National Commission for Women) ಮಹಿಳೆಯೊಬ್ಬರು ನೀಡಿರುವ ದೂರು ಹೊಸ ತಿರುವನ್ನು ಪಡೆದುಕೊಂಡಿದೆ. ಎಸ್‌ಐಟಿಯಿಂದ ಯಾರೂ ಆಕೆಯನ್ನು ಸಂಪರ್ಕಿಸಿಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ. ಆದರೆ, ಸಂಪರ್ಕ ಮಾಡಿದವರ ಬಗ್ಗೆ ಪತ್ತೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ತಿಳಿಸಿದೆ.

ಸಂತ್ರಸ್ತ ಮಹಿಳೆಗೆ ಎಸ್ಐಟಿ ಅಧಿಕಾರಿ ಎಂದು ಕರೆ ಮಾಡಿ ತೊಂದರೆ ಮಾಡಿರುವ ಆರೋಪ ವಿಚಾರವಾಗಿ ಎಸ್ಐಟಿ ಉನ್ನತ ಮೂಲಗಳು ಸ್ಪಷ್ಟನೆ ನೀಡಿದೆ. ಅಲ್ಲದೆ, ಎನ್‌ಸಿಡಬ್ಲ್ಯು ದೂರನ್ನು ಎಸ್‌ಐಟಿಗೆ ರವಾನಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್‌ಐಟಿ, ಗುರುವಾರವಷ್ಟೇ ಈ ಮಹಿಳೆಯ ಬಗ್ಗೆ ಎಸ್‌ಐಟಿಗೆ ತಿಳಿದುಬಂದಿದೆ.

ಎಸ್‌ಐಟಿಯಿಂದ ಯಾರೂ ಆಕೆಯನ್ನು ಈ ಹಿಂದೆ ಸಂಪರ್ಕಿಸಿಲ್ಲ. ಮಹಿಳಾ ಆಯೋಗಕ್ಕೆ ದೂರು ನೀಡಿದ ಮಹಿಳೆಯು ನಮಗೆ ಯಾವುದೇ ದೂರು ನೀಡಿಲ್ಲ. ಮಹಿಳೆಗೆ ಕರೆ ಮಾಡಿದ ವ್ಯಕ್ತಿಯ ಗುರುತು ತಿಳಿಯಲು ಎಸ್‌ಐಟಿ ವಿಚಾರಣೆ ಆರಂಭಿಸಿದೆ. ಅಂತಹವರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತೆ ಕೋರಿ ಮಹಿಳಾ ಆಯೋಗಕ್ಕೆ ಪತ್ರ ಬರೆದಿರುವ ಮಹಿಳೆ

ಪ್ರಜ್ವಲ್‌ ರೇವಣ್ಣ ಹಾಗೂ ಎಚ್‌.ಡಿ ರೇವಣ್ಣ (HD revanna jailed) ಅವರ ವಿರುದ್ಧ ರಾಜಕೀಯ ಪ್ರೇರಿತ ಸುಳ್ಳು ದೂರುಗಳನ್ನು ದಾಖಲಿಸಲಾಗುತ್ತಿದೆ ಎಂದು ಜೆಡಿಎಸ್‌ (JDS) ಪ್ರತಿಭಟನೆ ನಡೆಸುತ್ತಿರುವುದರ ಹಿನ್ನೆಲೆಯಲ್ಲಿ ಈ ದೂರು ಮಹತ್ವ ಪಡೆದುಕೊಂಡಿದೆ. ಸೂಕ್ತ ಭದ್ರತೆಗೆ ಕೋರಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆಯೊಬ್ಬರು ಪತ್ರ ಬರೆದಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡುವಂತೆ ನನಗೆ ಒತ್ತಡ ಹಾಕಲಾಗುತ್ತಿದೆ. ಮೂವರು ಸಿವಿಲ್ ಡ್ರೆಸ್‌ನಲ್ಲಿ ಬಂದವರು ಒತ್ತಡ ಹಾಕಿದ್ದು, ಇಲ್ಲದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಬೆದರಿಕೆ ಹಾಕಿದ್ದಾರೆ. ನನ್ನ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆ ಪತ್ರ ಬರೆದಿದ್ದಾರೆ.

ಮಹಿಳೆ ಪತ್ರ ಬರೆದಿರುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ ಮಾಹಿತಿ ನೀಡಿದೆ. ಹಾಸನ ಮೂಲದ ಮಹಿಳೆ ಪತ್ರ ಬರೆದಿದ್ದು, ಪತ್ರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮಾಹಿತಿ ನೀಡಲಾಗಿದೆ. ದೂರಿನ ಪ್ರತಿ ಹಾಗೂ ಸೂಕ್ತ ಭದ್ರತೆಗೆ ಮನವಿ ಮಾಡಲಾಗಿದೆ.

ಇದನ್ನೂ ಓದಿ: Lok Sabha Election 2024: ಲೋಕಸಭಾ ಪ್ರಚಾರಕ್ಕೆ 26 ಸಾವಿರ ಕಿಲೋ ಮೀಟರ್ ಸಂಚಾರ, ದಿನಕ್ಕೆ ಸರಾಸರಿ 14-18 ಗಂಟೆ ಸಿಎಂ ಪ್ರಚಾರ!

ಪ್ರಜ್ವಲ್ ಕೇಸ್‌ನಲ್ಲಿ ಮಹಿಳೆಗೆ ದೂರು ನೀಡುವಂತೆ ಒತ್ತಡ ಹಾಕಲಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಆಯೋಗದಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಇಂದು ಮತ್ತೆ ಪತ್ರ ಬರೆಯುತ್ತೇವೆ. ಆಯೋಗದ ಅಧಿಕಾರಿಗಳು ಪತ್ರ ಬರೆದ ಮಹಿಳೆಯನ್ನು ಭೇಟಿ ಮಾಡುತ್ತೇವೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ.

Continue Reading

ಪ್ರಮುಖ ಸುದ್ದಿ

Prajwal Revanna Case: ಸ್ಫೋಟಕ ಆಡಿಯೊ ರಿಲೀಸ್‌ ಮಾಡಿದ ಬೆನ್ನಲ್ಲೇ ವಕೀಲ ದೇವರಾಜೇಗೌಡ ವಶಕ್ಕೆ

Prajwal Revanna Case: ಹಾಸನ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿ ಸ್ಫೋಟಕ ಆಡಿಯೊ ರಿಲೀಸ್‌ ಮಾಡಿದ ಬೆನ್ನಲ್ಲೇ ವಕೀಲ ದೇವರಾಜೇಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಸ್ಫೋಟಕ ಆಡಿಯೊ ಹೊರಬಿದ್ದಿದೆ. ಇತ್ತೀಚೆಗೆ ಈ ಹಗರಣದಲ್ಲಿ ಡಿಸಿಎಂ ಡಿಕೆಶಿ ಕೈವಾಡ ಎಂದು ಆರೋಪಿಸಿದ್ದ ವಕೀಲ ದೇವರಾಜೇಗೌಡ, ಇದೀಗ ಮತ್ತೊಂದು ಆಡಿಯೊ ಬಾಂಬ್‌ ಹಾಕಿದ್ದಾರೆ. ದೇವರಾಜೇಗೌಡ-ಶಿವರಾಮೇಗೌಡ ನಡುವಿನ ಮಾತುಕತೆಯ 36 ಸೆಕೆಂಡ್ಸ್‌ ಆಡಿಯೊ ವೈರಲ್‌ ಆಗಿದೆ. ಇದರ ಬೆನ್ನಲ್ಲೇ ವಕೀಲ ದೇವರಾಜೇಗೌಡ ಅವರನ್ನು ಹಿರಿಯೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಿರಿಯೂರಿನಲ್ಲಿ ವಕೀಲ ದೇವರಾಜೇಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಎಸ್‌ಐಟಿಗೆ ಒಪ್ಪಿಸಲು ತಯಾರಿ ನಡೆಸಿದ್ದಾರೆ. ಹೊಳೆನರಸೀಪುರ ಪೊಲೀಸರು ನೀಡಿದ ಮಾಹಿತಿ ಮೇರೆಗೆ ಬೆಂಗಳೂರಿನಿಂದ ಬಳ್ಳಾರಿಗೆ ಹೋಗುತ್ತಿದ್ದಾಗ ಅವರನ್ನು ವಶಕ್ಕೆ ಪಡೆಯಲಾಗಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಠಾಣೆಯಲ್ಲಿ ದೇವರಾಜೇಗೌಡ ವಿರುದ್ಧ ಏ.1ರಂದು ಕೇಸ್‌ ದಾಖಲಾಗಿತ್ತು.

ಆಡಿಯೊ ವೈರಲ್‌

ಪೊಲೀಸರು ವಶಕ್ಕೆ ಪಡೆಯುವ ಮುನ್ನ ವಿಡಿಯೊದಲ್ಲಿ ಮಾತನಾಡಿರುವ ವಕೀಲ ದೇವರಾಜೇಗೌಡ, ನಾನು ಎಲ್ಲೂ ಕಾಣೆ ಆಗಿಲ್ಲಾ. ಮೂರು ದಿನ ರಜೆ ಇರುವುದರಿಂದ ದೇವಾಲಯಕ್ಕೆ ಹೊಗುತ್ತಿದ್ದೇನೆ. ಕಾಣೆ ಆಗುವ ಪರಿಸ್ಥಿತಿ ನನಗೆ ಬಂದಿಲ್ಲ. ಕುಟುಂಬ ಸಮೇತ ದೇವಸ್ಥಾನಕ್ಕೆ ತೆರಳಿದ್ದೇನೆ. ಆಗಾಗಿ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಇನ್ನು ಇದೇ ವೇಳೆ ಹಾಸನ ಅಶ್ಲೀಲ‌ ವಿಡಿಯೋ ಪ್ರಕರಣದ ಸಂಬಂಧ ಅಜ್ಞಾತ ಸ್ಥಳದಿಂದ ದೇವರಾಜೇಗೌಡ ಮೂರು ಆಡಿಯೊ ಕ್ಲಿಪ್ ಬಿಡುಗಡೆ ಮಾಡಿದ್ದಾರೆ. ಮಾಜಿ ಸಂಸದ ಶಿವರಾಮೇಗೌಡ ಜತೆ ಮಾತನಾಡಿರುವ ಎನ್ನಲಾದ ಎರಡು ಆಡಿಯೊ ತುಣುಕು ವೈರಲ್‌ ಆಗಿದೆ.

ಹನಿಟ್ರ್ಯಾಪ್ ಸಂಬಂಧ ಮಹಿಳೆ ಗಂಡನ ಜತೆ ಮಾತನಾಡಿದ ಒಂದು ಆಡಿಯೊ ಇದೆ. ಇನ್ನು ಡಿಕೆಶಿ ವಿಚಾರ ಶಿವರಾಮೇಗೌಡ ಜತೆ ದೇವರಾಜೇಗೌಡ ಮಾತನಾಡುತ್ತಿರುವ ಆಡಿಯೊ ಕೂಡ ಇದ್ದು, ಎಸ್‌ಐಟಿ ವಿಚಾರಣೆಯಲ್ಲಿ ಡಿಕೆಶಿ ಹೆಸರೇಳದಂತೆ ಶಿವರಾಮೇಗೌಡ ಸೂಚಿಸಿದ್ದಾರೆ.

ಇದನ್ನೂ ಓದಿ | Prajwal Revanna case: ಪ್ರಜ್ವಲ್‌ ಮೇಲೆ ಮತ್ತೊಂದು ಅತ್ಯಾಚಾರ ಕೇಸ್‌; ಕಠಿಣ ಸೆಕ್ಷನ್‌ ಜಡಿದ SIT! ಯಾವುದಕ್ಕೆ ಎಷ್ಟು ವರ್ಷ ಜೈಲು?

ದೇವರಾಜೇಗೌಡ-ಶಿವರಾಮೇಗೌಡ ನಡುವಿನ ಮಾತುಕತೆಯ 36 ಸೆಕೆಂಡ್ಸ್‌ ಆಡಿಯೊ ವೈರಲ್‌ ಆಗಿದ್ದು, ಇದರಲ್ಲಿ ನಮಗೆ ಏನಾದರೂ ಎಸ್‌ಐಟಿ ನೋಟಿಸ್‌ ಕೊಡುತ್ತಾರಾ ಎಂದು ವಕೀಲ ಕೇಳಿದ್ದಾರೆ. ಆಗ ಈ ಹಿಂದಿನಿಂದ ರೇವಣ್ಣ ಫ್ಯಾಮಿಲಿ ವಿರುದ್ಧ ಹೋರಾಡುತ್ತಿದ್ದೀನಿ, ಕೋರ್ಟ್‌ನಲ್ಲೂ ಹೋರಾಟ ಮಾಡುತ್ತಿದ್ದೀನಿ ಅಂತ ಹೇಳು ಎಂದು ದೇವರಾಜೇಗೌಡಗೆ ಶಿವರಾಮೇಗೌಡ ಕಿವಿಮಾತು ಹೇಳಿರುವುದು ಆಡಿಯೊದಲ್ಲಿ ಇದೆ.

Continue Reading
Advertisement
K S Rajanna
ದೇಶ17 mins ago

K.S. Rajanna: ಛಲಬಿಡದ ಸಾಧಕನಿಗೆ ಪದ್ಮಶ್ರೀ ಗರಿ; ಅಂಗವೈಕಲ್ಯ ಮೆಟ್ಟಿನಿಂತ ಕನ್ನಡಿಗನಿಗೆ ದೇಶದ ನಮನ- ವೀಡಿಯೋ ವೈರಲ್‌

Viral News
ಕ್ರೈಂ34 mins ago

ಬೆಂಗಳೂರಿನಲ್ಲಿ ಮಿತಿ ಮೀರಿದ ಪುಂಡರ ಹಾವಳಿ; ಹಾಡ ಹಗಲೇ ಯುವತಿಗೆ ಅನ್ಯಕೋಮಿನ ಯುವಕರಿಂದ ಕಿರುಕುಳ

CAA
ದೇಶ1 hour ago

CAA: ಕೇಂದ್ರ ಸೂಚನೆ ಕೊಟ್ಟ ಕೂಡಲೇ ಮಧ್ಯಪ್ರದೇಶದಲ್ಲಿ ಸಿಎಎ ಜಾರಿ; ಸಿಎಂ ಮೋಹನ್‌ ಯಾದವ್‌

Heavy Rain
ಕರ್ನಾಟಕ1 hour ago

Heavy Rain: ಬೆಂಗಳೂರಿನಲ್ಲಿ ಮಳೆಯ ಅಬ್ಬರ; ಹಲವೆಡೆ ರಸ್ತೆಯಲ್ಲೇ ಹರಿದ ನೀರು, ಸಂಚಾರ ಅಸ್ತವ್ಯಸ್ತ

Dharwad News
ಕ್ರೈಂ2 hours ago

Dharwad News: ರಥೋತ್ಸವ ವೇಳೆ ದುರಂತ; ರಥದ ಚಕ್ರಕ್ಕೆ ಸಿಲುಕಿ ಭಕ್ತ ಸಾವು

cyber crime
ದೇಶ2 hours ago

Cyber crime: ದೇಶಾದ್ಯಂತ 28,000ಕ್ಕೂ ಹೆಚ್ಚು ಮೊಬೈಲ್‌ ಫೋನ್‌ಗಳು ಬ್ಲಾಕ್‌!

Murder Case
ಕ್ರೈಂ2 hours ago

Murder Case: ಕೊಡಗಿನಲ್ಲಿ ಬಾಲಕಿಯ ರುಂಡ ಕತ್ತರಿಸಿದ್ದ ಆರೋಪಿಯ ಬಂಧನ

karnataka Weather Forecast
ಮಳೆ3 hours ago

Karnataka Weather : ವಾರಾಂತ್ಯದಲ್ಲಿ ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ ಅಬ್ಬರ

Joe Biden
ಸಂಪಾದಕೀಯ4 hours ago

ವಿಸ್ತಾರ ಸಂಪಾದಕೀಯ: ಭಾರತದ ಚುನಾವಣೆಯಲ್ಲಿ ಅಮೆರಿಕದ ಹಸ್ತಕ್ಷೇಪ ಖಂಡನೀಯ

Cotton Candy
ಆರೋಗ್ಯ4 hours ago

Cotton Candy: ಕಾಟನ್‌ ಕ್ಯಾಂಡಿ ಯಾಕೆ ಎಷ್ಟೊಂದು ಅಪಾಯಕಾರಿ ಗೊತ್ತೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ5 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ20 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ21 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ22 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ1 day ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ2 days ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

ಟ್ರೆಂಡಿಂಗ್‌