Article 370 Collection: ಮೋಡಿ ಮಾಡಿದ ʼಆರ್ಟಿಕಲ್‌ 370ʼ ಚಿತ್ರ; ಬಾಕ್ಸ್‌ ಆಫೀಸ್‌ನಲ್ಲಿ ಗಳಿಸಿದ್ದೆಷ್ಟು? - Vistara News

ಬಾಲಿವುಡ್

Article 370 Collection: ಮೋಡಿ ಮಾಡಿದ ʼಆರ್ಟಿಕಲ್‌ 370ʼ ಚಿತ್ರ; ಬಾಕ್ಸ್‌ ಆಫೀಸ್‌ನಲ್ಲಿ ಗಳಿಸಿದ್ದೆಷ್ಟು?

Article 370 Collection: ಬಾಲಿವುಡ್‌ ಚಿತ್ರ ‘ಆರ್ಟಿಕಲ್‌ 370’ ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಸೃಷ್ಟಿಸುವಲ್ಲಿ ಯಶಸ್ವಿಯಾಗಿದೆ. ಯಾಮಿ ಗೌತಮ್‌-ಪ್ರಿಯಾಮಣಿ ನಟನೆಯ ಈ ಚಿತ್ರ ನಾಲ್ಕು ದಿನಗಳಲ್ಲಿ ಸುಮಾರು 28 ಕೋಟಿ ರೂ. ಕಲೆಕ್ಟ್‌ ಮಾಡಿದೆ.

VISTARANEWS.COM


on

article 370
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಜಮ್ಮು ಕಾಶ್ಮೀರದ ವಿಶೇಷಾಧಿಕಾರವಾದ ಆರ್ಟಿಕಲ್‌ 370 ಅನ್ನು ಕೇಂದ್ರ ಸರ್ಕಾರ ರದ್ದು ಪಡಿಸಿದ ಐತಿಹಾಸಿಕ ನಿರ್ಧಾರವನ್ನು ಆಧರಿಸಿದ ತಯಾರಾದ ಹಿಂದಿ ಚಿತ್ರ ʼಆರ್ಟಿಕಲ್‌ 370ʼ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಆದಿತ್ಯ ಸುಹಾಸ್ ಜಂಭಾಲೆ (Aditya Suhas Jambhale) ನಿರ್ದೇಶನದ ಈ ಪಾಲಿಟಿಕಲ್‌ ಥ್ರಿಲ್ಲರ್‌ ಫೆಬ್ರವರಿ 23ರಂದು ತೆರೆಕಂಡಿದ್ದು ಬಾಕ್ಸ್‌ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್‌ ಮಾಡುತ್ತಿದೆ. ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಪಾಸಿಟಿವ್‌ ಪ್ರತಿಕ್ರಿಯೆ ಪಡೆದುಕೊಂಡಿರುವ ಈ ಚಿತ್ರ ಇದುವರೆಗೆ 28.70 ಕೋಟಿ ರೂ. ಬಾಚಿಕೊಂಡಿದೆ (Article 370 Collection).

ಯಾಮಿ ಗೌತಮ್‌ ಮತ್ತು ಕನ್ನಡತಿ ಪ್ರಿಯಾಮಣಿ ಮುಖ್ಯ ಪಾತ್ರದಲ್ಲಿ ನಟಿಸುವ ಈ ಚಿತ್ರ ಮೊದಲ ದಿನಾದ ಶುಕ್ರವಾರ 6.12 ಕೋಟಿ ರೂ., ಶನಿವಾರ 9.08 ಕೋಟಿ ರೂ., ಭಾನುವಾರ 10.25 ಕೋಟಿ ರೂ. ಮತ್ತು ಸೋಮವಾರ 3.25 ಕೋಟಿ ರೂ. ಗಳಿಸುವ ಮೂಲಕ 4 ದಿನಗಳಲ್ಲಿ ಒಟ್ಟು 28.70 ಕೋಟಿ ರೂ. ಸಂಗ್ರಹಿಸಿದೆ. ಸ್ಥಳೀಯ ಏಜೆಂಟ್ ಮತ್ತು ಗುಪ್ತಚರ ಫೀಲ್ಡ್ ಆಫೀಸರ್ ಝೂನಿ ಹಕ್ಸರ್ ಪಾತ್ರದಲ್ಲಿ ಯಾಮಿ ಗೌತಮ್ ಮತ್ತು ಪಿಎಂಒ ಕಾರ್ಯದರ್ಶಿ ರಾಜೇಶ್ವರಿ ಸ್ವಾಮಿನಾಥನ್ ಪಾತ್ರದಲ್ಲಿ ಪ್ರಿಯಾಮಣಿ ಅಭಿನಯಿಸಿದ್ದು, ಇವರ ನಟನೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಜತೆಗೆ ಇಡೀ ಸಿನಿಮಾವನ್ನು ಕಟ್ಟಿಕೊಟ್ಟ ರೀತಿಗೆ ಪ್ರೇಕ್ಷಕರು ಜೈ ಎಂದಿದ್ದಾರೆ.

ಭಾಷಣದಲ್ಲಿ ಉಲ್ಲೇಖಿಸಿದ್ದ ಮೋದಿ

ಇತ್ತೀಚೆಗೆ ಜಮ್ಮುವಿಗೆ ಭೇಟಿ ನೀಡಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ʼಆರ್ಟಿಕಲ್‌ 370ʼ ಸಿನಿಮಾವನ್ನು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದರು. ʼʼಈ ವಾರ ʼಆರ್ಟಿಕಲ್‌ 370ʼ ಚಿತ್ರ ಬಿಡುಗಡೆಯಾಗಲಿದೆ ಎನ್ನುವುದು ತಿಳಿದು ಬಂತು. ಆರ್ಟಿಕಲ್‌ 370 ವಿಧಿಯ ಬಗ್ಗೆ ಸಮರ್ಪಕ ಮಾಹಿತಿ ಪಡೆಯಲು ಸಾರ್ವಜನಿಕರಿಗೆ ಈ ಸಿನಿಮಾ ನೆರವಾಗಲಿದೆʼʼ ಎಂದು ಅವರು ಹೇಳಿದ್ದರು. ಅದರಂತೆ ಈ ಚಿತ್ರ ಆರ್ಟಿಕಲ್‌ 370 ಕುರಿತು ಸರಿಯಾದ ಮಾಹಿತಿ ಹೊಂದಿಲ್ಲದೆ ಇರುವವರಿಗೆ ʼಶಿಕ್ಷಣʼ ನೀಡುವಂತಹ ಕೆಲಸವನ್ನೂ ಮಾಡುತ್ತದೆ ಎಂದು ಪ್ರೇಕ್ಷಕರು ಅಭಿಪ್ರಾಯ ಪಟ್ಟಿದ್ದಾರೆ. ಜತೆಗೆ ಕಾಶ್ಮೀರದಲ್ಲಿ ನಡೆಯುತ್ತಿದ್ದ ಹಿಂಸಾಚಾರ, ಗಲಭೆಗಳು ಹೇಗೆ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲು ಉತ್ತೇಜಿಸಿತು ಎನ್ನೂವುದನ್ನೂ ಮುಂದಿಡುತ್ತದೆ.

ಇದನ್ನೂ ಓದಿ: Article 370: ಬಾಲಿವುಡ್‌ ಚಿತ್ರವನ್ನು ಹಾಡಿ ಹೊಗಳಿದ ಮೋದಿ; ಯಾವ ಸಿನಿಮಾ? ಏನಿದರ ವೈಶಿಷ್ಟ್ಯ?

ಈ ನೈಜ ಘಟನೆ ಆಧಾರಿತ ಚಿತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಪಾತ್ರಗಳೂ ಇವೆ. ಪ್ರಧಾನಿಯಾಗಿ ಅರುಣ್ ಗೋವಿಲ್ ಮತ್ತು ಗೃಹ ಸಚಿವರಾಗಿ ಕಿರಣ್ ಕರ್ಮಾರ್ಕರ್ ನಟಿಸಿದ್ದಾರೆ. ಇತ್ತೀಚೆಗೆ ಚಿತ್ರದ ಬಗ್ಗೆ ಮಾತನಾಡಿದ ಪ್ರಿಯಾಮಣಿ, ʼʼಇತಿಹಾಸದ ಪ್ರಮುಖ ಭಾಗವಾಗಿರುವ ಘಟನೆಯೊಂದರ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ನೀಡಬೇಕು ಎನ್ನುವ ಉದ್ದೇಶದಿಂದ ಈ ಸಿನಿಮಾ ಮಾಡಿದ್ದೇವೆ. ಆರ್ಟಿಕಲ್‌ 370 ವಿಧಿ ಬಗ್ಗೆ ಹೆಚ್ಚಿನವರಿಗೆ ಗೊತ್ತಿಲ್ಲ. ನನಗೂ ಆರಂಭದಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿ ಇರಲಿಲ್ಲ. ಬಳಿಕ ಒಂದೊಂದೇ ವಿಷಯ ಮನದಟ್ಟಾಗ ತೊಡಗಿತು. ಇದು ಯಾವುದೋ ಒಂದು ಉದ್ದೇಶ ಇರಿಸಿಕೊಂಡು ಮಾಡಿರುವ ಚಿತ್ರವಲ್ಲʼʼ ಎಂದು ಹೇಳಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Laila Khan: ಮಲತಂದೆಯಿಂದಲೇ ಹತ್ಯೆಯಾದ ಜಗ್ಗೇಶ್‌ ಚಿತ್ರದ ನಾಯಕಿ; 13 ವರ್ಷಗಳ ಬಳಿಕ ತೀರ್ಪು ಪ್ರಕಟ

Laila Khan: ಜಗ್ಗೇಶ್‌ ಅಭಿನಯದ ಕನ್ನಡದ ʼಮೇಕಪ್‌ʼ ಸೇರಿದಂತೆ ಹಿಂದಿ ಚಿತ್ರಗಳಲ್ಲಿ ಅಭಿನಯಿಸಿದ್ದ ಲೈಲಾ ಖಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಂಬೈ ಸೆಷನ್ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಪ್ರಕಟಿಸಿದೆ. 2011ರ ಫೆಬ್ರವರಿಯಲ್ಲಿ ಮುಂಬೈಯ ಇಗ್ತಪುರಿಯಲ್ಲಿರುವ ಬಂಗಲೆಯಲ್ಲಿ ನಟಿ ಲೈಲಾ ಖಾನ್ ಹಾಗೂ ಆಕೆಯ ತಾಯಿ ಸೆಲೀನಾ ಹಾಗೂ ನಾಲ್ವರು ಒಡಹುಟ್ಟಿದವರು ಸೇರಿ ಒಟ್ಟು 6 ಮಂದಿಯನ್ನು ಪರ್ವೀನ್ ತಾಕ್ ಬರ್ಬರವಾಗಿ ಹತ್ಯೆ ಮಾಡಿದ್ದ.

VISTARANEWS.COM


on

Laila Khan
Koo

ಮುಂಬೈ: ಜಗ್ಗೇಶ್‌ ಅಭಿನಯದ ಕನ್ನಡದ ʼಮೇಕಪ್‌ʼ ಸೇರಿದಂತೆ ಹಿಂದಿ ಚಿತ್ರಗಳಲ್ಲಿ ಅಭಿನಯಿಸಿದ್ದ ಲೈಲಾ ಖಾನ್ (Laila Khan) ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಂಬೈ ಸೆಷನ್ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ (Parvez Tak) ದೋಷಿ ಎಂದು ಪ್ರಕಟಿಸಿದೆ. ಘಟನೆ ನಡೆದು ಸುಮಾರು 13 ವರ್ಷಗಳ ಬಳಿಕ ಈ ತೀರ್ಪು ಹೊರಬಿದ್ದಿದೆ.

2011ರ ಫೆಬ್ರವರಿಯಲ್ಲಿ ಮುಂಬೈಯ ಇಗ್ತಪುರಿಯಲ್ಲಿರುವ ಬಂಗಲೆಯಲ್ಲಿ ನಟಿ ಲೈಲಾ ಖಾನ್ ಹಾಗೂ ಆಕೆಯ ತಾಯಿ ಸೆಲೀನಾ ಹಾಗೂ ನಾಲ್ವರು ಒಡಹುಟ್ಟಿದವರು ಸೇರಿ ಒಟ್ಟು 6 ಮಂದಿಯನ್ನು ಪರ್ವೀನ್ ತಾಕ್ ಬರ್ಬರವಾಗಿ ಹತ್ಯೆ ಮಾಡಿದ್ದ. ಅಚ್ಚರಿ ಎಂದರೆ ಪರ್ವೀನ್ ತಾಕ್ ಲೈಲಾ ಖಾನ್‌ ತಾಯಿ ಸೆಲೀನಾ ಅವರ ಮೂರನೇ ಪತಿ.

ಸೆಲೀನಾ ಹೆಸರಿನಲ್ಲಿರುವ ಭೂಮಿಗೆ ಸಂಬಂಧಿಸಿದಂತೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿತ್ತು. ಮೊದಲು ಪರ್ವೀನ್ ತಾಕ್ ಪತ್ನಿ ಸೆಲೀನಾ ಅವರನ್ನು ಕೊಲೆ ಮಾಡಿದ್ದ. ಬಳಿಕ ಮನೆಯಲ್ಲಿದ್ದ ಲೈಲಾ ಖಾನ್‌ ಹಾಗೂ ಆಕೆಯ ನಾಲ್ವರು ಒಡಹುಟ್ಟಿದವರ ಹತ್ಯೆ ಮಾಡಿ ಪರಾರಿಯಾಗಿದ್ದ. 2012ರಲ್ಲಿ ಆತನನ್ನು ಬಂಧಿಸಲಾಗಿತ್ತು. ಮೇ 14ರಂದು ಕೋರ್ಟ್‌ ಶಿಕ್ಷೆ ಪ್ರಕಟಿಸಲಿದೆ.

ಘಟನೆಯ ವಿವರ

2011ರಲ್ಲಿ ಲೈಲಾ ಖಾನ್‌, ಆಕೆಯ ತಾಯಿ ಸೆಲೀನಾ ಮತ್ತು ಲೈಲಾ ಖಾನ್‌ ಒಡಹುಟ್ಟಿದವರಾದ ಆಮಿನಾ, ಅವಳಿಗಳಾದ ಝಾರ ಮತ್ತು ಇಮ್ರಾನ್‌, ಕಸಿನ್‌ ರೇಷ್ಮಾ ನಾಪತ್ತೆಯಾಗಿದ್ದಾರೆಂದು ಲೈಲಾ ಖಾನ್‌ ತಂದೆ ನಾದಿರ್‌ ಪಟೇಲ್‌ ಪೊಲೀಸರಿಗೆ ದೂರು ನೀಡಿದ್ದರು.

ಅದರಂತೆ ತನಿಖೆ ಆರಂಭವಾಗಿತ್ತು. ತನಿಖೆ ಭಾಗವಾಗಿ ನಾಸಿಕ್ ಬಳಿಯ ಇಗ್ತಪುರಿಯಲ್ಲಿರುವ ಕುಟುಂಬದ ತೋಟದ ಮನೆ ಪರಿಶೀಲಿಸಲು ಅಧಿಕಾರಿಗಳು ನಿರ್ಧರಿಸಿದ್ದರು. ಆ ಬಂಗಲೆ ಬೆಂಕಿಯಲ್ಲಿ ಭಾಗಶಃ ಹಾನಿಯಾಗಿತ್ತು. ಅಲ್ಲದೆ ಲೈಲಾ ಖಾನ್‌ ಅವರ ಮೊಬೈಲ್‌ ನಾಪತ್ತೆಯಾಗುವ ವೇಳೆ ನಾಸಿಕ್‌ನಲ್ಲೇ ಇತ್ತು ಎನ್ನುವುದು ಕಂಡು ಬಂದಿತ್ತು. ಇದೇ ವೇಳೆ ಲೈಲಾ ಖಾನ್‌ಗೆ ಸೇರಿದ ವಾಹನ ಜಮ್ಮು ಮತ್ತು ಕಾಶ್ಮೀರದಲ್ಲಿ ಪತ್ತೆಯಾಗಿತ್ತು. ಪರ್ವೀನ್ ತಾಕ್ ಮೂಲತಃ ಕಾಶ್ಮೀರದವನು. ಹೀಗಾಗಿ ಪೊಲೀಸರಿಗೆ ಆತನ ಮೇಲೆ ಸಂಶಯ ಬಲವಾಗಿತ್ತು. ಬಳಿಕ ಆತನನ್ನು ಬಂಧಿಸಲಾಯಿತು. ಈ ವೇಳೆ ಆತ ಆಸ್ತಿ ವಿಚಾರದಲ್ಲಿ ಕೊಲೆ ಮಾಡಿರುವ ಸಂಗತಿ ಹೊರ ಬಿದ್ದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಸೆಲೀನಾ ಅವರ ಇಬ್ಬರು ಮಾಜಿ ಪತಿಯರು ಸೇರಿದಂತೆ ಸುಮಾರು 40 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಲಾಗಿತ್ತು.

ಲೈಲಾ ಖಾನ್‌ ಮೊದಲ ಬಾರಿಗೆ 2002ರಲ್ಲಿ ತೆರೆಕಂಡ ಜಗ್ಗೇಶ್‌ ಅಭಿನಯದ ʼಮೇಕಪ್‌ʼ ಕನ್ನಡ ಸಿನಿಮಾದಲ್ಲಿ ಲೈಲಾ ಪಟೇಲ್‌ ಎಂಬ ಹೆಸರಿನಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರ ಅಷ್ಟೇನೂ ಸದ್ದು ಮಾಡಿರಲಿಲ್ಲ. ಬಳಿಕ ಲೈಲಾ 2008ರಲ್ಲಿ ರಾಜೇಶ್‌ ಖನ್ನಾ ನಟನೆಯ ʼವಫಾ: ಎ ಡೆಡ್ಲಿ ಲವ್‌ ಸ್ಟೋರಿʼ ಹಿಂದಿ ಸಿನಿಮಾದಲ್ಲಿ ನಾಯಕಿಯಾಗಿದ್ದರು. ಇದು ಕೂಡ ಬಾಕ್ಸ್‌ ಆಫೀಸ್‌ನಲ್ಲಿ ಸದ್ದು ಮಾಡಲಿಲ್ಲ. ಆದರೆ ಲೈಲಾಗೆ ಒಂದಷ್ಟು ಜನಪ್ರಿಯತೆ ತಂಡುಕೊಟ್ಟಿತ್ತು. ಲೈಲಾ ಬಾಂಗ್ಲಾ ದೇಶ ಮೂಲದ ಮುನೀರ್‌ ಖಾನ್‌ ಎನ್ನುವವನನ್ನು ವರಿಸಿದ್ದರು.

ಇದನ್ನೂ ಓದಿ: Roopa Iyer: ನಿರ್ದೇಶಕಿ ರೂಪಾ ಅಯ್ಯರ್‌ಗೂ ಆನ್‌ಲೈನ್‌ ಕಳ್ಳರ ಕಾಟ; ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ 30 ಲಕ್ಷ ರೂ.ಗೆ ಬೇಡಿಕೆ

Continue Reading

Latest

Ranveer Singh: 2 ಕೋಟಿ ರೂ. ಮೌಲ್ಯದ ವಜ್ರದ ನೆಕ್ಲೇಸ್ ಧರಿಸಿ ಗಮನ ಸೆಳೆದ ರಣವೀರ್ ಸಿಂಗ್

ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ (Ranveer Singh) ಮುಂಬಯಿನಲ್ಲಿ ಬುಧವಾರ ನಡೆದ ಕ್ಲಾಸಿ ಗಾಲಾದಲ್ಲಿ ಭಾಗವಹಿಸಿದ್ದು ಬಿಳಿ ಬಣ್ಣದ ಧಿರಿಸಿಗೆ ಮ್ಯಾಚಿಂಗ್ ಆಗಿ ಹೈ ಹೀಲ್ಸ್ ಧರಿಸಿದ್ದರು. ಜೊತೆಗೆ ಅವರು ಹಾಕಿದ್ದ ದಪ್ಪನಾದ ವಜ್ರದ ನೆಕ್ಲೇಸ್ ಎಲ್ಲರ ಗಮನ ಅವರತ್ತ ಸೆಳೆಯುವಂತೆ ಮಾಡಿತ್ತು.

VISTARANEWS.COM


on

By

Ranveer Singh
Koo

ಬಹು ದಿನಗಳ ಬಳಿಕ ಮುಂಬಯಿಯ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ (Ranveer Singh) ದುಬಾರಿ ಮೌಲ್ಯದ ವಜ್ರದ ನೆಕ್ಲೆಸ್ (diamond necklace), ಹೈ ಹೀಲ್ಸ್ ನೊಂದಿಗೆ (high heels) ಬಿಳಿ ಬಣ್ಣದ ದಿರಸಿನಲ್ಲಿ ಜನಮನ ಸೆಳೆದರು. ಬಿಳಿ ಸ್ಯಾಟಿನ್ ಶರ್ಟ್ (white satin shirt) ಮತ್ತು ಮ್ಯಾಚಿಂಗ್ ಪ್ಯಾಂಟ್‌ನಲ್ಲಿ (matching trousers) ರಣವೀರ್ ಸ್ಟೈಲಿಶ್ ಆಗಿ ಕಾಣುತ್ತಿದ್ದರು.

ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ ಅವರು ಮುಂಬಯಿನಲ್ಲಿ ಬುಧವಾರ ನಡೆದ ಕ್ಲಾಸಿ ಗಾಲಾದಲ್ಲಿ ಭಾಗವಹಿಸಿದ್ದರು. ಕೆಲವು ದಿನಗಳ ಬಳಿಕ ನಗರದಲ್ಲಿ ಕಾಣಿಸಿಕೊಂಡ ಅವರು, ಬಿಳಿ ಬಣ್ಣದ ಹೈ ಹೀಲ್ಸ್ ಧರಿಸಿದ್ದು, ಅವರ ದಿರಸಿಗೆ ಮ್ಯಾಚಿಂಗ್ ಆಗಿ ಹೊಳೆಯುತ್ತಿತ್ತು. ದಪ್ಪನಾದ ವಜ್ರದ ನೆಕ್ಲೇಸ್ ಅನ್ನು ಧರಿಸಿದ್ಧ ಅವರು ನಡೆಯುತ್ತಿದ್ದಾಗ ಎಲ್ಲರ ದೃಷ್ಟಿ ಅವರತ್ತ ನೆಟ್ಟಿತ್ತು.

ರಣವೀರ್ ಬಿಳಿ ಸ್ಯಾಟಿನ್ ಶರ್ಟ್ ಮತ್ತು ಮ್ಯಾಚಿಂಗ್ ಪ್ಯಾಂಟ್‌ನಲ್ಲಿ ಕೊಂಚ ಕಪ್ಪಾಗಿ ಕಾಣುತ್ತಿದ್ದರು. ಆದರೆ ಉಬರ್-ಸ್ಟೈಲಿಶ್ ವೈಟ್ ಬೆಲ್ಟ್‌ನೊಂದಿಗೆ ತಮ್ಮ ಧಿರಿಸನ್ನು ಪೂರ್ಣಗೊಳಿಸಿದ ಅವರು ನೀಲಿ ಬಣ್ಣದ ಸನ್ ಗ್ಲಾಸ್ ಧರಿಸಿದ್ದರು. ಆದರೆ ಈ ಸಂದರ್ಭದಲ್ಲಿ ಸಾಕಷ್ಟು ಮಂದಿಯ ಗಮನ ಸೆಳೆದಿದ್ದು ಅವರು ಧರಿಸಿದ್ದ ಡೈಮಂಡ್ ನೆಕ್ಲೇಸ್.

ಎಷ್ಟು ಮೌಲ್ಯ?

ರಣವೀರ್ ಅವರು ಆಭರಣ ಸಂಗ್ರಹವನ್ನು ಇಷ್ಟಪಡುತ್ತಾರೆ. ಅವರಲ್ಲಿ ಸಾಕಷ್ಟು ಸಂಗ್ರಹವೂ ಇದೆ. ಬಿಳಿ ಬಣ್ಣದ ಸೂಟ್ ನೊಂದಿಗೆ ಅವರು 2 ಕೋಟಿ ರೂಪಾಯಿ ಮೌಲ್ಯದ ಬೆಸ್ಪೋಕ್ ಟಿಫಾನಿ ನೆಕ್ಲೇಸ್ ಅನ್ನು ಧರಿಸಿರುವುದು ಅವರ ಲುಕ್ ಗೆ ಹೆಚ್ಚಿನ ಮೆರುಗು ನೀಡಿತ್ತು. ದಪ್ಪನಾದ ಹೀಲ್ಸ್‌ಗಳನ್ನು ಧರಿಸಿ ಫೋಟೋಗಳಿಗೆ ಪೋಸ್ ನೀಡಿದ ಅವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮಂದಿಯ ಗಮನ ಸೆಳೆದಿದೆ.

ತಮ್ಮ ಆಭರಣ ಪ್ರೀತಿಯ ಬಗ್ಗೆ ಮಾತನಾಡಿದ ರಣವೀರ್ ಸಿಂಗ್, ವೈಯಕ್ತಿಕ, ಭಾವನಾತ್ಮಕ ಮೌಲ್ಯವನ್ನು ಹೊಂದಿರುವ ಆಭರಣಗಳು ನನ್ನ ನೆಚ್ಚಿನ, ಅತ್ಯಂತ ಪ್ರಿಯವಾದ ತುಣುಕುಗಳಾಗಿವೆ. ಇದರಲ್ಲಿ ಮದುವೆಯ ಉಂಗುರವೂ ಒಂದು. ಇದು ನನ್ನ ಹೆಂಡತಿ ದೀಪಿಕಾ ಪಡುಕೋಣೆ ನನಗೆ ಉಡುಗೊರೆಯಾಗಿ ನೀಡಿರುವುದು. ಇನ್ನೊಂದು ಪ್ಲಾಟಿನಂ ಎಂಗೇಜ್‌ಮೆಂಟ್ ರಿಂಗ್ ಆಗಿದೆ. ತದನಂತರ ಸಹಜವಾಗಿ ನನ್ನ ತಾಯಿಯ ವಜ್ರದ ಕಿವಿಯೋಲೆಗಳು ಮತ್ತು ನನ್ನ ಅಜ್ಜಿಯ ಮುತ್ತುಗಳು ಎಂದು ತಿಳಿಸಿದರು.


ಮೊದಲ ಮಗುವಿನ ನಿರೀಕ್ಷೆ

ಪತ್ನಿ ದೀಪಿಕಾ ಪಡುಕೋಣೆ ಅವರೊಂದಿಗೆ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ರಣವೀರ್ ದೀರ್ಘ ಸಮಯದ ಬಳಿಕ ಬುಧವಾರ ಮುಂಬಯಿಗೆ ಮರಳಿದ್ದಾರೆ. ಗರ್ಭಧಾರಣೆಯ ಘೋಷಣೆಯ ಅನಂತರ ದಂಪತಿ ತಮ್ಮ ಸಂಪೂರ್ಣ ಗಮನವನ್ನು ತಾಯಿ ಮತ್ತು ಮಗುವಿನ ಆರೋಗ್ಯದ ಮೇಲೆ ಕೇಂದ್ರೀಕರಿಸಿದ್ದಾರೆ. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಅವರು ತಮ್ಮ ಮೊದಲ ಮಗುವನ್ನು ಸ್ವಾಗತಿಸಲಿದ್ದಾರೆ.

ಇದನ್ನೂ ಓದಿ: Janhvi Kapoor: ಕ್ರಿಕೆಟ್ ಥಿಮ್‌ ಡ್ರೆಸ್‌ನಲ್ಲಿ ಪೋಸ್‌ ಕೊಟ್ಟ ಜಾನ್ವಿ ಕಪೂರ್; ಚೆಂಡಿದೆ ಬೆನ್ನ ಹಿಂದೆ!

ಚಿತ್ರೀಕರಣದಲ್ಲೂ ಬ್ಯುಸಿ

ಸದ್ಯ ರಣವೀರ್ ಫರ್ಹಾನ್ ಅಖ್ತರ್ ಅವರ ಡಾನ್ ಫ್ರ್ಯಾಂಚೈಸ್‌ನಲ್ಲಿ ಹೊಸ ಡಾನ್ ಆಗಲು ಸಿದ್ಧರಾಗಿದ್ದಾರೆ. ಇದನ್ನು ಮೊದಲು ಶಾರುಖ್ ಖಾನ್ ಗಾಗಿ ನಿರ್ಮಿಸಲಾಗಿತ್ತು. ಇದಲ್ಲದೇ ರಣವೀರ್ ಹನುಮಾನ್ ನಿರ್ದೇಶಕ ಪ್ರಶಾಂತ್ ವರ್ಮಾ ಅವರ ಮುಂದಿನ ಚಿತ್ರಕ್ಕೆ ಸಹಿ ಹಾಕಿದ್ದಾರೆ ಎನ್ನಲಾಗಿದೆ.

Continue Reading

ಬಾಲಿವುಡ್

Janhvi Kapoor: ಕ್ರಿಕೆಟ್ ಥಿಮ್‌ ಡ್ರೆಸ್‌ನಲ್ಲಿ ಪೋಸ್‌ ಕೊಟ್ಟ ಜಾನ್ವಿ ಕಪೂರ್; ಚೆಂಡಿದೆ ಬೆನ್ನ ಹಿಂದೆ!

Janhvi Kapoor ಮೂಲಗಳ ಪ್ರಕಾರ, ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼ ಚಿತ್ರದ ಟ್ರೈಲರ್ ಮೇ ಎರಡನೇ ವಾರದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದೆ ಚಿತ್ರತಂಡ. ಟ್ರೈಲರ್ ಬಿಡುಗಡೆಯ ನಂತರ, ಚಿತ್ರದ ಪ್ರಥಮ ಪ್ರದರ್ಶನಕ್ಕೆ ಮೂರು ವಾರಗಳ ಪ್ರಚಾರದ ಭಾಗವಾಗಿ ಹಾಡುಗಳನ್ನು ಅನಾವರಣಗೊಳಿಸಲಾಗುತ್ತದೆ.

VISTARANEWS.COM


on

Janhvi Kapoor Wears Cricket-Themed Dress
Koo

ಬೆಂಗಳೂರು: ಜಾನ್ವಿ ಕಪೂರ್ (Janhvi Kapoor) ಮತ್ತು ರಾಜ್‌ಕುಮಾರ್ ರಾವ್ ಅವರು ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼ ಮಹಿಯಲ್ಲಿ ಎರಡನೇ ಬಾರಿಗೆ ತೆರೆ ಹಂಚಿಕೊಳ್ಳಲು ಸಿದ್ಧರಾಗಿದ್ದಾರೆ. ಈಗಾಗಲೇ ನಟ ನಟಿ ಚಿತ್ರದ ಪ್ರಚಾರದಲ್ಲಿ ತೊಡಗಿರುವುದು ಕಂಡುಬಂದಿದೆ. ಜಾನ್ವಿ ಕಪೂರ್ ತನ್ನ ಇತ್ತೀಚಿನ ಫ್ಯಾಶನ್ ಸ್ಟೇಟ್‌ಮೆಂಟ್ ಮೂಲಕ ಗಮನ ಸೆಳೆದಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಕ್ರಿಕೆಟ್ ಬಾಲ್‌ನಂತೆ ಕಾಣುವ ಉಡುಪನ್ನು ಧರಿಸಿದ್ದರು. ಇದೀಗ ಈ ಫೋಟೊ, ವಿಡಿಯೊಗಳು ವೈರಲ್‌ ಆಗಿವೆ.

ವೈರಲ್‌ ಆಗಿರುವ ವಿಡಿಯೊದಲ್ಲಿ, ಜಾಹ್ನವಿ ಕಪೂರ್ ಮತ್ತು ರಾಜ್‌ಕುಮಾರ್ ರಾವ್ ಒಟ್ಟಾಗಿ ಇರುವುದು ಕಾಣಬಹುದು. ಇದ್ದಕ್ಕಿದ್ದಂತೆ ರಾಜ್‌ಕುಮಾರ್ ರಾವ್ ಅವರು ನಟಿಯನ್ನು ತಿರುಗಿಸಿ ಅವರ ಉಡುಗೆಗೆ ಜೋಡಿಸಲಾದ ಕೆಂಪು ಬಣ್ಣದ ಕ್ರಿಕೆಟ್ ಬಾಲ್‌ಗಳ ಸಾಲನ್ನು ಕ್ಯಾಮೆರಾಗೆ ತೋರಿಸಿದರು. ಜಾಹ್ನವಿ ಕೂಡ ನಗುತ್ತಿದ್ದರು. ಅನೇಕರು ಜಾನ್ವಿ ಕಪೂರ್ ಹೊಸ ಸ್ಟೈಲ್‌ಗೆ ಹೊಗಳಿದ್ದಾರೆ.

ಮೂಲಗಳ ಪ್ರಕಾರ, ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼ ಚಿತ್ರದ ಟ್ರೈಲರ್ ಮೇ ಎರಡನೇ ವಾರದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದೆ ಚಿತ್ರತಂಡ. ಟ್ರೈಲರ್ ಬಿಡುಗಡೆಯ ನಂತರ, ಚಿತ್ರದ ಪ್ರಥಮ ಪ್ರದರ್ಶನಕ್ಕೆ ಮೂರು ವಾರಗಳ ಪ್ರಚಾರದ ಭಾಗವಾಗಿ ಹಾಡುಗಳನ್ನು ಅನಾವರಣಗೊಳಿಸಲಾಗುತ್ತದೆ. ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼಯಲ್ಲಿ, ರಾಜ್‌ಕುಮಾರ್ ಅವರು ಮಹೇಂದ್ರ ಸಿಂಗ್ ಧೋನಿ ಪಾತ್ರವನ್ನು ನಿರ್ವಹಿಸುತ್ತಿದ್ದರೆ, ಜಾನ್ವಿ ಮಹಿಮಾ ಎಂಬ ಪಾತ್ರವನ್ನು ನಿರ್ವಹಿಸಿಲಿದ್ದಾರೆ.

ಇದನ್ನೂ ಓದಿ: Janhvi Kapoor: ರಾಧಿಕಾ ಮರ್ಚಂಟ್‌ ʻಬ್ರೈಡಲ್‌ ಶವರ್‌ʼ ಪಾರ್ಟಿಯಲ್ಲಿ ನಟಿ ಜಾನ್ವಿ ಕಪೂರ್!

ʻದೇವರ’ ನಂತರ ಮತ್ತೊಂದು ತೆಲುಗು ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ನಟಿಸಲು ಸಿದ್ಧರಾಗಿದ್ದಾರೆ. ಬುಚ್ಚಿ ಬಾಬು ಸನಾ ನಿರ್ದೇಶಿಸುತ್ತಿರುವ 16ನೇ ಚಿತ್ರದಲ್ಲಿ ರಾಮ್ ಚರಣ್ ಜತೆ ತೆರೆ ಹಂಚಿಕೊಳ್ಳಲಿದ್ದಾರೆ. ಜಾನ್ವಿ ಕಪೂರ್ ಕೊನೆಯದಾಗಿ ವರುಣ್ ಧವನ್ ಜತೆ ‘ಬವಾಲ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ‘ಆರ್‌ಸಿ 16’ ಮತ್ತು ‘ದೇವರ’ ಜತೆಗೆ , ಸುಧಾಂಶು ಸರಿಯಾ ಅವರ ‘ಉಲಾಜ್’ ಮತ್ತು ವರುಣ್ ಧವನ್ ಎದುರು ‘ಸನ್ನಿ ಸಂಸ್ಕರಿ ಕಿ ತುಳಸಿ ಕುಮಾರಿ’ ಸಿನಿಮಾಗಳನ್ನು ಹೊಂದಿದ್ದಾರೆ.

ಸುಧಾಂಶು ಸರಿಯಾ ನಿರ್ದೇಶನದ ಉಲಾಜ್ ಚಿತ್ರದ ಟೀಸರ್ ಈಗಾಗಲೇ ಬಿಡುಗಡೆಗೊಂಡಿದೆ. ಈ ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ಅವರು ರಾಜತಾಂತ್ರಿಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಟೀಸರ್ ನಲ್ಲಿ ಜಾನ್ವಿ ಕಪೂರ್ ಅವರು ದೇಶಭಕ್ತರ ಕುಟುಂಬದಿಂದ ಬಂದ ಯುವ ರಾಜತಾಂತ್ರಿಕ ಸುಹಾನಾ ಪಾತ್ರದಲ್ಲಿ ನಟಿಸಿದ್ದಾರೆ.

Continue Reading

ಬಾಲಿವುಡ್

Ananya Panday: ಅನನ್ಯಾ ಪಾಂಡೆ ಜತೆ ಆದಿತ್ಯ ರಾಯ್ ಕಪೂರ್ ಬ್ರೇಕಪ್‌? ಸೈಫ್‌ ಪುತ್ರಿ ಜತೆ ಲವ್‌ ಸ್ಟಾರ್ಟ್‌!

Ananya Panday: ಅನನ್ಯಾ ಮತ್ತು ಆದಿತ್ಯ ಸಂಬಂಧದಲ್ಲಿದ್ದಾರೆ ಎಂಬ ವದಂತಿ 2022ರಲ್ಲಿ ಶುರುವಾಗಿತ್ತು. 2022 ರಲ್ಲಿ ಕೃತಿ ಸನೂನ್ ಅವರ ದೀಪಾವಳಿ ಪಾರ್ಟಿಯಲ್ಲಿ ಜೋಡಿ ಕಾಣಿಸಿಕೊಂಡಾಗ ವದಂತಿ ಸುದ್ದಿಗಳು ಮತ್ತಷ್ಟು ಹೆಚ್ಚಾಯ್ತು. ವೈರಲ್‌ ಆದ ಫೋಟೊದಲ್ಲಿ ಆದಿತ್ಯ ಮತ್ತು ಸಾರಾ ಚಿತ್ರನಿರ್ಮಾಪಕ ಅನುರಾಗ್ ಬಸು ಅವರೊಂದಿಗೆ ಸಮಯವನ್ನು ಕಳೆಯುತ್ತಿರುವುದು ಕಾಣಬಹುದು. ಮೆಟ್ರೋ ಇನ್ ಡಿನೋ ಸಿನಿಮಾ ಸೆಟ್‌ನಲ್ಲಿ ಆಯೋಜಿಸಲಾದ ನಿರ್ದೇಶಕರ ಹುಟ್ಟುಹಬ್ಬದ ಸಂದರ್ಭದ ಫೋಟೊಗಳಿವು ಎನ್ನಲಾಗುತ್ತಿದೆ. ಆದಿತ್ಯ ಮತ್ತು ಸಾರಾ ಚಿತ್ರಗಳಲ್ಲಿ ಪರಸ್ಪರ ಹತ್ತಿರವಾಗಿ ನಿಂತಿದ್ದಾರೆ.

VISTARANEWS.COM


on

Ananya Panday Aditya Roy Kapur parties with Sara Ali Khan
Koo

ಬೆಂಗಳೂರು: ಅನನ್ಯಾ ಪಾಂಡೆ (Ananya Panday) ಮತ್ತು ಆದಿತ್ಯ ರಾಯ್ ಕಪೂರ್ (Aditya Roy Kapur ) ನಡುವೆ ಡೇಟಿಂಗ್ ವದಂತಿಗಳು ಹೊಸದೇನಲ್ಲ. ಆದರೆ ಹೊಸ ವರದಿಗಳ ಪ್ರಕಾರ ಈ ಜೋಡಿ ಬ್ರೇಕಪ್‌ ಮಾಡಿಕೊಂಡಿದೆ ಎಂದು ವರದಿಯಾಗಿದೆ. ಇತ್ತೀಚೆಗೆ ಆದಿತ್ಯ ರಾಯ್ ಕಪೂರ್ ಅವರು ಸಾರಾ ಅಲಿ ಖಾನ್ ಅವರೊಂದಿಗೆ ಪಾರ್ಟಿಯೊಂದರಲ್ಲಿ ಕಾಣಿಸಿಕೊಂಡರು. ಈ ಪಾರ್ಟಿಯ ಹಲವು ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ವರದಿಯಾಗಿದೆ.

ವೈರಲ್‌ ಆದ ಫೋಟೊದಲ್ಲಿ ಆದಿತ್ಯ ಮತ್ತು ಸಾರಾ ಚಿತ್ರನಿರ್ಮಾಪಕ ಅನುರಾಗ್ ಬಸು ಅವರೊಂದಿಗೆ ಸಮಯವನ್ನು ಕಳೆಯುತ್ತಿರುವುದು ಕಾಣಬಹುದು. ಮೆಟ್ರೋ ಇನ್ ಡಿನೋ ಸಿನಿಮಾ ಸೆಟ್‌ನಲ್ಲಿ ಆಯೋಜಿಸಲಾದ ನಿರ್ದೇಶಕರ ಹುಟ್ಟುಹಬ್ಬದ ಸಂದರ್ಭದ ಫೋಟೊಗಳಿವು ಎನ್ನಲಾಗುತ್ತಿದೆ. ಆದಿತ್ಯ ಮತ್ತು ಸಾರಾ ಚಿತ್ರಗಳಲ್ಲಿ ಪರಸ್ಪರ ಹತ್ತಿರವಾಗಿ ನಿಂತಿದ್ದಾರೆ.

ಅನನ್ಯಾ ಮತ್ತು ಆದಿತ್ಯ ಪ್ರೇಮ ಸಂಬಂಧದಲ್ಲಿದ್ದಾರೆ ಎಂಬ ವದಂತಿ 2022ರಲ್ಲಿ ಶುರುವಾಗಿತ್ತು. 2022ರಲ್ಲಿ ಕೃತಿ ಸನೂನ್ ಅವರ ದೀಪಾವಳಿ ಪಾರ್ಟಿಯಲ್ಲಿ ಜೋಡಿ ಕಾಣಿಸಿಕೊಂಡಾಗ ವದಂತಿ ಸುದ್ದಿಗಳು ಮತ್ತಷ್ಟು ಹೆಚ್ಚಾಯ್ತು. ಕರಣ್ ಜೋಹರ್ ಅವರು ತಮ್ಮ ಟಾಕ್ ಶೋ ಸಂದರ್ಭದಲ್ಲಿಯೂ ಅನನ್ಯಾ ಈ ಬಗ್ಗೆ ಮಾತನಾಡಿದ್ದರು.

ಇದನ್ನೂ ಓದಿ: Ananya Panday: ‘ಹಾವು’ ಜತೆಗಿದ್ದ ಫೋಟೊ ಡಿಲಿಟ್ ಮಾಡಿದ ನಟಿ ಅನನ್ಯಾ ಪಾಂಡೆ

ಸಾರಾ ಅಲಿ ಖಾನ್ ಮತ್ತು ಅನನ್ಯಾ ಪಾಂಡೆ (Ananya Panday) ‘ಕಾಫಿ ವಿತ್ ಕರಣ್’ ಸೀಸನ್‌ 8ರಲ್ಲಿ ಅತಿಥಿಗಳಾಗಿ ಆಗಮಿಸಿದ್ದರು. ಸಾರಾ ಅವರು ಶುಭಮನ್ ಗಿಲ್ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳನ್ನು ನಿರಾಕರಿಸಿದರೆ, ಅನನ್ಯಾ ಅವರು ಆದಿತ್ಯ ರಾಯ್ ಕಪೂರ್ ಜತೆಗಿನ ಸಂಬಂಧವನ್ನು ಬಹುತೇಕ ದೃಢಪಡಿಸಿದ್ದರು. ನಿರ್ಮಾಪಕ ಮತ್ತು ನಿರೂಪಕ ಕರಣ್ ಜೋಹರ್ ಅನನ್ಯಾ ಅವರನ್ನು ʻಆದಿತ್ಯ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದೀರ? ಎಂದು ಪ್ರಶ್ನೆ ಕೇಳಿದ್ದರು. ಇದರಿಂದ ಬಚಾವ್‌ ಆಗಲು ಅನನ್ಯಾ ಹಲವಾರು ಪ್ರಯತ್ನಗಳನ್ನು ಮಾಡಿದದ್ದರು. ಆದರೆ ಕೊನೆಗೂ ಆಗಿರಲಿಲ್ಲ. ಆದಿತ್ಯ ಜತೆ ಇರುವುದು ನಿಮ್ಮ ಸ್ನೇಹಾನಾ ಅಥವಾ ಸ್ನೇಹಕ್ಕಿಂತ ಮುಂದುವರಿದ ಸಂಬಂಧನಾ?ಎಂದು ಪ್ರಶ್ನೆ ಇಟ್ಟರು ಕರಣ್‌. “ಸ್ನೇಹಿತರಲ್ಲ, ನಾವು ಸ್ನೇಹಿತರು” ಎಂದು ಅನನ್ಯಾ ಹೇಳಿದರು, ಪ್ರಶ್ನೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು ಆದರೆ ಕರಣ್ ವ್ಯಂಗ್ಯವಾಡಿದರು,”ಬೆಸ್ಟ್ ಫ್ರೆಂಡ್ಸ್, ನಾವು ನಿಜವಾಗಿಯೂ ಒಳ್ಳೆಯ ಸ್ನೇಹಿತರು” ಎಂದಿದ್ದರು ಅನನ್ಯಾ.

Continue Reading
Advertisement
IPL 2024
ಕ್ರೀಡೆ10 mins ago

IPL 2024 : ಆರ್​ಸಿಬಿಯ ಪ್ಲೇಆಫ್​ ಚಾನ್ಸ್​ ಇದೆಯೇ? ಇಲ್ಲಿದೆ ನೋಡಿ ಲೆಕ್ಕಾಚಾರ

Prajwal Revanna case SIT did not contact woman to file false case
ಕ್ರೈಂ13 mins ago

Prajwal Revanna case: ಸುಳ್ಳು ಕೇಸ್‌ ಹಾಕಲು ಮಹಿಳೆಯನ್ನು SIT ಸಂಪರ್ಕ ಮಾಡಿಲ್ಲ; ಕಾಟ ಕೊಟ್ಟವನನ್ನು ಬಿಡಲ್ಲ!

Murder case
ಕ್ರೈಂ19 mins ago

Murder case : ತೃತೀಯ ಲಿಂಗಿಯನ್ನು ಕೊಂದ ಮಹಿಳೆ; ಮಗನಿಗೆ ನಾಯಿ ಚೈನ್‌ ಹಾಕಿ ಎಳೆಯುವಾಗ ಸಾವು

IPL 2024
ಪ್ರಮುಖ ಸುದ್ದಿ34 mins ago

IPL 2024 : ರಾಹುಲ್ ದ್ರಾವಿಡ್ ಸೃಷ್ಟಿಸಿದ್ದ 14 ವರ್ಷಗಳ ಹಿಂದಿನ ದಾಖಲೆ ಮುರಿದ ದಿನೇಶ್ ಕಾರ್ತಿಕ್

Madara Channaiah Gurupeeta
ಕರ್ನಾಟಕ37 mins ago

Madara Channaiah Gurupeeta: ಮಾದಾರ ಚನ್ನಯ್ಯ ಗುರುಪೀಠಕ್ಕೆ ನೂತನ ವಟು ಸ್ವೀಕಾರ

Viral News
ವೈರಲ್ ನ್ಯೂಸ್44 mins ago

Viral News: ಕುಡಿದ ಮತ್ತಿನಲ್ಲಿ ಪೊಲೀಸ್‌ ಪೇದೆಯ ಕೈ ಕಚ್ಚಿ, ಬಟ್ಟೆ ಹರಿದು ಹಲ್ಲೆ ಮಾಡಿದ ಮಹಿಳೆಯರು

Laila Khan
ಸಿನಿಮಾ54 mins ago

Laila Khan: ಮಲತಂದೆಯಿಂದಲೇ ಹತ್ಯೆಯಾದ ಜಗ್ಗೇಶ್‌ ಚಿತ್ರದ ನಾಯಕಿ; 13 ವರ್ಷಗಳ ಬಳಿಕ ತೀರ್ಪು ಪ್ರಕಟ

Kantilal Bhuria
ದೇಶ54 mins ago

Kantilal Bhuria: ಒಬ್ಬನಿಗೆ ಇಬ್ಬರು ಹೆಂಡತಿಯರು ಇದ್ದರೆ ಕಾಂಗ್ರೆಸ್‌ನಿಂದ 2 ಲಕ್ಷ ರೂ. ಎಂದ ಕೈ ನಾಯಕ; ಬಿಜೆಪಿ ಟೀಕೆ

Union Minister Pralhad Joshi latest Statement in hubli
ಕರ್ನಾಟಕ1 hour ago

Pralhad Joshi: ದೇಶದಲ್ಲಿ ಹಿಂದೂ ಜನಸಂಖ್ಯೆ ಕುಸಿತ ಆತಂಕಕಾರಿ: ಸಚಿವ ಪ್ರಲ್ಹಾದ್‌ ಜೋಶಿ

Rahul gandhi
ದೇಶ1 hour ago

Rahul Gandhi: “ಅದಾನಿ-ಅಂಬಾನಿ… ಕಾಪಾಡಿ..ಕಾಪಾಡಿ ಅಂತಿದ್ದಾರೆ ಪ್ರಧಾನಿ ಮೋದಿ” ; ರಾಹುಲ್‌ ಗಾಂಧಿ ವ್ಯಂಗ್ಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Physical Abuse The public prosecutor called the client woman to the lodge
ಕ್ರೈಂ3 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ4 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ5 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ12 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ19 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ20 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ21 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ1 day ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

ಟ್ರೆಂಡಿಂಗ್‌