WPL 2024 : ಆರ್​ಸಿಬಿ ತಂಡಕ್ಕೆ ಸತತ ಎರಡನೇ ಜಯ, ಗುಜರಾತ್​ಗೆ ಹೀನಾಯ ಸೋಲು - Vistara News

ಪ್ರಮುಖ ಸುದ್ದಿ

WPL 2024 : ಆರ್​ಸಿಬಿ ತಂಡಕ್ಕೆ ಸತತ ಎರಡನೇ ಜಯ, ಗುಜರಾತ್​ಗೆ ಹೀನಾಯ ಸೋಲು

WPL 2024 : ಎಲ್ಲ ಹಂತದಲ್ಲೂ ಉತ್ತಮ ಪ್ರದರ್ಶನ ನೀಡಿದ ಆರ್​ಸಿಬಿ ಆಟಗಾರ್ತಿಯರು ಮತ್ತೊಂದು ಗೆಲುವಿಗೆ ಭಾಜನರಾಗಿದ್ದಾರೆ.

VISTARANEWS.COM


on

RCB Team
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಗುಜರಾತ್ ಜೈಂಟ್ಸ್ ವಿರುದ್ಧ ಏಕಪಕ್ಷೀಯ ಗೆಲುವು ಸಾಧಿಸಿದೆ. ಇದರೊಂದಿಗೆ ಡಬ್ಲ್ಯುಪಿಎಲ್ 2024 ರಲ್ಲಿ (WPL 2024) ಸತತ ಎರಡು ಗೆಲುವುಗಳನ್ನು ಗಳಿಸಿದೆ. ಮೊದಲು ಬ್ಯಾಟ್ ಮಾಡಿದ ಬೆತ್ ಮೂನಿ ನೇತೃತ್ವದ ಗುಜರಾತ್ ಜೈಂಟ್ಸ್ ತಂಡ ಪಡೆ 20 ಓವರ್ ಗಳಲ್ಲಿ 107 ರನ್ ಗಳಿಸಲಷ್ಟೇ ಶಕ್ತವಾಯಿತು. ಪ್ರತಿಯಾಗಿ ಆರ್​ಸಿಬಿ ಇನ್ನೂ 45 ಎಸೆತಗಳು ಬಾಕಿ ಇರುವಂತೆಯೇ ಗೆಲುವು ಸಾಧಿಸಿತು.

ಟಾಸ್ ಗೆದ್ದ ಸ್ಮೃತಿ ಮಂಧಾನಾ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಜೈಂಟ್ಸ್ ಉತ್ತಮ ಆಟ ಆಡಲಿಲ್ಲ. . ಬೆತ್ ಮೂನಿ ನೇತೃತ್ವದ ತಂಡವು ನಿಯಮಿತವಾಗಿ ವಿಕೆಟ್ ಗಳನ್ನು ಕಳೆದುಕೊಂಡ ಕಾರಣ ಕಡಿಮೆ ಮೊತ್ತ ಪೇರಿಸಿತು. ನಾಯಕಿ ಬೆತ್ ಮೂನಿ 7 ಎಸೆತಗಳಲ್ಲಿ 8 ರನ್ ಗಳಿಸಿ ನಿರ್ಗಮಿಸಿದರು. ಮತ್ತೊಬ್ಬ ಆರಂಭಿಕ ಆಟಗಾರ್ತಿ ಹರ್ಲೀನ್ ಡಿಯೋಲ್ 31 ಎಸೆತಗಳಲ್ಲಿ 22 ರನ್ ಗಳಿಸಿ ನಿರ್ಗಮಿಸಿದರು. ಫೋಬೆ ಲಿಚ್ಫೀಲ್ಡ್ ಗುಜರಾತ್ ಜೈಂಟ್ಸ್​ ತಂಡದ ಭರವಸೆಯಾಗಿದ್ದರು. ಆದರೆ ರೇಣುಕಾ ಸಿಂಗ್ ಅವರನ್ನು ಪೆವಿಲಿಯನ್​​ಗೆ ಕಳುಹಿಸಿದರು. ಗುಜರಾತ್ ಜೈಂಟ್ಸ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 107 ರನ್ ಗಳಿಸಲಷ್ಟೇ ಶಕ್ತವಾಯಿತು.

ಇದನ್ನೂ ಓದಿ : Virat kohli : ವಿರಾಟ್​​ ಕೊಹ್ಲಿ ಈ ಬಾರಿ ಐಪಿಎಲ್​ನಲ್ಲಿಯೂ ಆಡುವುದಿಲ್ಲ…

108 ರನ್ಗಳ ಗುರಿ ಬೆನ್ನತ್ತಿದ ಆರ್​​ಸಿಬಿಗೆ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನಾ ಉತ್ತಮ ಆರಂಭ ನೀಡಿದರು. ಅಂತೆಯೇ ಕೇವಲ 7 ಓವರ್​ಗಳಲ್ಲಿ 50 ರನ್ ಬಾರಿಸಿತು. ಸ್ಮೃತಿ ಮಂಧಾನಾ 27 ಎಸೆತಗಳಲ್ಲಿ 43 ರನ್ ಸಿಡಿಸಿ ಔಟಾದರು. ಪ್ರಸ್ತುತ ನಡೆಯುತ್ತಿರುವ ಡಬ್ಲ್ಯುಪಿಎಲ್​ನಲ್ಲಿ ಉತ್ತಮ ಫಾರ್ಮ್​ನಲ್ಲಿರುವ ಸಬ್ಬಿನೇನಿ ಮೇಘನಾ ಮಂಗಳವಾರ ಮತ್ತೊಂದು ಪ್ರಮುಖ ಇನ್ನಿಂಗ್ಸ್ ಆಡಿದರು. ಅವರು 36 ರನ್ ಬಾರಿಸಿದರೆ ಎಲಿಸ್​ ಪೆರಿ 23 ರನ್​ ಕೊಡುಗೆ ಕೊಟ್ಟರು.

ನಿಧಾನಗತಿಯ ಪಿಚ್​​ನಿಂದಾಗಿ ಚೇಸಿಂಗ್ ಕಷ್ಟಕರವಾಗಿತ್ತು. ಆದರೆ ಸ್ಮೃತಿ ಅವರ ಸ್ಫೋಟಕ ಬ್ಯಾಟಿಂಗ್​ ಮತ್ತು ಮೇಘನಾ ಅವರ ಶಾಂತ ಆಟವು ಆರ್​​ಸಿಬಿಯನ್ನು 7 ಓವರ್​ಗಳು ಬಾಕಿ ಇರುವಂತೆಯೇ ಗೆಲುವಿನ ದಡ ಮುಟ್ಟಿಸಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Physical Abuse: ಬೆಂಗಳೂರಲ್ಲಿ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ

Physical Abuse: ಕೂಲಿ ಕೆಲಸ ಮಾಡುವವರ ಮಗಳಾದ ಬಾಲಕಿಯನ್ನು ರೈಲ್ವೆ ಸ್ಟೇಷನ್ ಪಾರ್ಕಿಂಗ್‌ನಲ್ಲೇ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

VISTARANEWS.COM


on

Physical Abuse
Koo

ಬೆಂಗಳೂರು: ನಗರದಲ್ಲಿ ಮತ್ತೊಂದು ರೇಪ್ ಆ್ಯಂಡ್ ಮರ್ಡರ್ ಕೇಸ್‌ ನಡೆದಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿರುವ ಘಟನೆ (Physical Abuse) ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಕೂಲಿ ಕೆಲಸ ಮಾಡುವ ದಂಪತಿಯ 6 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿಗಳು, ನಂತರ ಕೊಲೆ ಮಾಡಿ ಪಾರ್ಕಿಂಗ್‌ ಪ್ರದೇಶದ ಮರವೊಂದರ ಬಳಿ ಶವ ಎಸೆದಿದ್ದಾರೆ. ರಾತ್ರಿ ವೇಳೆ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಪಾರ್ಕಿಂಗ್ ಲಾಟ್‌ನಲ್ಲಿದ್ದರೂ ಬಾಲಕಿ ಕೊಲೆ ವಿಚಾರ ಬೆಳಕಿಗೆ ಬಂದಿರಲಿಲ್ಲ. ಜನರು ಓಡಾಡುತ್ತಿದ್ದರೂ ಯಾರೂ ಗಮನ ಹರಿಸಿರಲಿಲ್ಲ. ಮೈ ಮೇಲೆ ಪರಚಿದ ಗಾಯಗಳು ಹಾಗು ರಕ್ತಸಿಕ್ತ ಬಟ್ಟೆಗಳಿಂದ ಬಾಲಕಿ ಶವ ಕಂಡುಬಂದಿದೆ. ಸದ್ಯ ಬಾಲಕಿ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಈ ಬಗ್ಗೆ ರೈಲ್ವೆ ಎಸ್ ಪಿ ಡಾ. ಸೌಮ್ಯ ಲತಾ ಅವರು ಪ್ರತಿಕ್ರಿಯಿಸಿ, ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್‌ನಲ್ಲಿ ಒಂದು ಹೆಣ್ಣು ಮಗವಿನ ಮೃತ ದೇಹ ಸಿಕ್ಕಿದೆ. ನಮ್ಮ ಸಿಬ್ಬಂದಿ ಬಂದು ತಿಳಿಸಿದ್ದು, ಪರಿಶೀಲನೆ ನಡೆಸಲಾಗಿದೆ. ದೇಹದ ಮೇಲೆ ಸಾಕಾಷ್ಟು ಗಾಯಗಳಾಗಿವೆ, ಸಿಸಿಟಿವಿ ದೃಶ್ಯ ಪರಿಶೀಲನೆ ನಡೆಸಲಾಗುತ್ತಿದೆ. ಕೊಲೆ ಮಾಡಿ ಎಲ್ಲಿಂದಲ್ಲೋ ತಂದು ಇಲ್ಲಿ ಎಸೆಯಲಾಗಿದೆ. ಭಿಕ್ಷಾಟನೆ ಮಾಡುತ್ತಿದ್ದ ಕುಟುಂಬದ ಮಗು ಎಂದು ತಿಳಿದು ಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Actor Darshan: ಮಗುವನ್ನು ಕೈದಿ ಮಾಡಿದವರಿಗೆ ಕಾನೂನು ಕಂಟಕ; ಪಾಲಕರಿಗೆ ನೋಟಿಸ್‌!

Murder Case: ರಾಜಧಾನಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

bangalore murder case

ಬೆಂಗಳೂರು: ಬೆಂಗಳೂರಿನಲ್ಲಿ‌ ಇನ್ನೊಂದು ಬರ್ಬರ ಹತ್ಯೆ (Murder Case) ನಡೆದಿದೆ. ಅಜಿತ್‌ ಎಂಬ ವ್ಯಕ್ತಿ ಕೊಲೆಯಾದವನು. ಹಣಕಾಸಿನ ವಿಚಾರದಲ್ಲಿ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ.

ಪುಲಿಕೇಶಿನಗರ ಕಾಕ್ಸ್ ಟೌನ್ ಬಳಿ ಅಜಿತ್‌ (35) ಬರ್ಬರ ಹತ್ಯೆಯಾಗಿದೆ. ಬಡ್ಡಿ ವ್ಯವಹಾರದ ಕಾರಣದಿಂದ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಕೊಲೆಯಾದ ವ್ಯಕ್ತಿ ಬಾಣಸವಾಡಿಯಲ್ಲಿ ವಾಸವಾಗಿದ್ದು, ಕೆಲವರ ಬಳಿ ಬಡ್ಡಿಗಾಗಿ ಹಣ ಪಡೆದಿದ್ದ. ಹಣ ಕೊಡದೆ ಸತಾಯಿಸುತ್ತಿದ್ದ ಎಂಬ ಕಾರಣಕ್ಕೆ ಕೊಲೆ ಮಾಡಿರುವ ಶಂಕೆ ಇದೆ. ಘಟನಾ ಸ್ಥಳಕ್ಕೆ ಪುಲಿಕೇಶಿನಗರ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಪುಲಿಕೇಶಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಗುಂಟೆ ಸರ್ಕಲ್ ಬಳಿ ಘಟನೆ ನಡೆದಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಲಾಗಿದೆ. ದೊಡ್ಡಗುಬ್ಬಿ ಬಳಿಯ ಐಟಿಸಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಅಜಿತ್, ಕೆಲಸ ಮುಗಿಸಿ ವಾಪಸ್ ಮನೆಗೆ ಬರುವಾಗ ಮನೆ ಮುಂಭಾಗದಲ್ಲೇ ಕೊಲೆ ಮಾಡಲಾಗಿದೆ. ಡ್ಯೂಟಿ ಮುಗಿಸಿ ಬಟ್ಟೆ ಬದಲಿಸಲು ಆಗಮಿಸಿದ್ದ ವೇಳೆ ಅಟ್ಯಾಕ್ ಮಾಡಿದ ನಾಲ್ಕೈದು ಮಂದಿ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ.

ಮಗನ ಕುಡಿತದ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಅಪ್ಪ, ಅಮ್ಮ

ಮಗನ ಕುಡಿತದಿಂದ ಉಂಟಾಗಿರುವ ಕೌಟುಂಬಿಕ ಸಮಸ್ಯೆಗಳಿಂದ ಬೇಸತ್ತು ಹಿರಿಯ ವಯಸ್ಸಿನ ಪೋಷಕರು ಆತ್ಮಹತ್ಯೆ (Suicide News ) ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಘಟನೆ ನಡೆದಿದೆ. ಚಂದ್ರಶೇಖರ್ (54) ಹಾಗೂ ಶಾರದಮ್ಮ ಆತ್ಮಹತ್ಯೆ ಮಾಡಿಕೊಂಡ ದಂಪತಿ.

ಮಗ ಪ್ರಶಾಂತನಿಗೆ ವರ್ಷಗಳ ಹಿಂದೆ ಮದುವೆ ಮಾಡಿದ್ದರು. ಆದರೆ ಮಗ ಕುಡಿತದಿಂದ ಮನೆ ಬರೋದು ಕಡಿಮೆ ಮಾಡಿದ್ದ, ಇದರಿಂದ ನೊಂದು ಕಳೆದ ಮೂರು ತಿಂಗಳ ಹಿಂದೆ ಪ್ರಶಾಂತನ ಹೆಂಡತಿ ಮನೆ ಬಿಟ್ಟು ತವರು ಮನೆ ಸೇರಿದ್ದರು. ಇದರಿಂದ‌ ಮಗನ‌ ಬಾಳು ಹೀಗಾಯಿತು ಎಂದು ನೊಂದು ಕೊಂಡಿದ್ದರು.

ಇದನ್ನೂ ಓದಿ: Hemant Nimbalkar: ವಾರ್ತಾ ಇಲಾಖೆ ಆಯುಕ್ತರಾಗಿ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮರು ನೇಮಕ

ಸೋಮವಾ ಎರಡನೇ‌ ಮಗನನ್ನ ಅಂಗಡಿ ಕಳಿಸಿ ದಂಪತಿ ನೇಣಿಗೆ ಶರಣಾಗಿದ್ದರು. ಮಗ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರು ಹೊಸಕೋಟೆ ಮೂಲದವರು. ಅವರು ಹಲವು ವರ್ಷಗಳಿಂದ‌ ಹಳೆ ಬೈಯಪ್ಪನಹಳ್ಳಿ ಯಲ್ಲಿ ವಾಸ ಮಾಡಿಕೊಂಡಿದ್ದರು. ಬೆಂಗಳೂರಿನಲ್ಲೊ ಕೂಲಿ ಕೆಲಸ ಮಾಡಿಕೊಂಡಿದ್ದರು. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ದೇಶ

Nitin Gadkari: ರಸ್ತೆಗಿಳಿಯಲಿದೆ 132 ಸೀಟು, ಹೋಸ್ಟೆಸ್‌ ಒಳಗೊಂಡ ಬಸ್‌; ಸಾರಿಗೆ ವಲಯದಲ್ಲಿನ ಯೋಜನೆ ವಿವರಿಸಿದ ಸಚಿವ ನಿತಿನ್‌ ಗಡ್ಕರಿ

Nitin Gadkari: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಸಾರಿಗೆ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಮುಂದಾಗಿದ್ದಾರೆ. ”132 ಸೀಟುಗಳ ಬಸ್‌ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಇದರಲ್ಲಿ ವಿಮಾನದಲ್ಲಿರುವಂತೆ ಸಕಲ ಸೌಲಭ್ಯಗಳೂ ಇರಲಿದೆ. ಏರ್‌ ಹೋಸ್ಟೆಸ್‌ನಂತೆ ಬಸ್‌ ಹೋಸ್ಟೆಸ್‌ಗಳೂ ಕಾರ್ಯ ನಿರ್ವಹಿಸಲಿದ್ದು, ಈ ಬಸ್‌ನಿಂದ ಪರಿಸರಕ್ಕೆ ಯಾವುದೇ ಹಾನಿ ಉಂಟಾಗುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.

VISTARANEWS.COM


on

Nitin Gadkari
Koo

ಮುಂಬೈ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ (Nitin Gadkari) ಅವರು ಸಾರಿಗೆ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಮುಂದಾಗಿದ್ದಾರೆ. ”132 ಸೀಟುಗಳ ಬಸ್‌ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಇದರಲ್ಲಿ ವಿಮಾನದಲ್ಲಿರುವಂತೆ ಸಕಲ ಸೌಲಭ್ಯಗಳೂ ಇರಲಿದೆ. ಏರ್‌ ಹೋಸ್ಟೆಸ್‌ನಂತೆ ಬಸ್‌ ಹೋಸ್ಟೆಸ್‌ಗಳೂ ಕಾರ್ಯ ನಿರ್ವಹಿಸಲಿದ್ದು, ಈ ಬಸ್‌ನಿಂದ ಪರಿಸರಕ್ಕೆ ಯಾವುದೇ ಹಾನಿ ಉಂಟಾಗುವುದಿಲ್ಲ” ಎಂದು ನಿತಿನ್‌ ಗಡ್ಕರಿ ತಿಳಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ʼʼಪರಿಸರ ಮಾಲಿನ್ಯ ಎನ್ನುವುದು ಸದ್ಯ ದೇಶ, ಜಗತ್ತು ಎದುರಿಸುವ ಬಹುದೊಡ್ಡ ಸಮಸ್ಯೆ. ಹೀಗಾಗಿ ಸರ್ಕಾರ ಪರಿಸರಕ್ಕೆ ಹಾನಿ ಉಂಟು ಮಾಡದ ಪರ್ಯಾಯ ವ್ಯವಸ್ಥೆಗಳಿಗೆ ಒತ್ತು ನೀಡಲಿದೆ. ಅದರ ಭಾಗವಾಗಿ ಸಾರ್ವಜನಿಕ ಸಾರಿಗೆ ವಿಭಾಗದಲ್ಲಿಯೂ ಅಮೂಲಾಗ್ರ ಬದಲಾವಣೆ ಜಾರಿಗೆ ತರಲಾಗುವುದುʼʼ ಎಂದು ಹೇಳಿದ್ದಾರೆ.

ಕನಸಿನ ಯೋಜನೆ

ಈ ವೇಳೆ ಅವರು ತಮ್ಮ ಕನಸಿನ 132 ಸೀಟುಗಳ ಬಸ್‌ನ ಯೋಜನೆ ಬಗ್ಗೆ ಮಾಹಿತಿ ನೀಡಿದ್ದಾರೆ. ʼʼ132 ಆಸನಗಳ ಬಸ್ ಅನ್ನು‌ ಪಚಯಿಸಲು ಮುಂದಾಗಿದ್ದೇವೆ. ಇದರ ಪ್ರಾಯೋಗಿಕ ಸಂಚಾರ ನಾಗ್ಪುರದಲ್ಲಿ ನಡೆಯಲಿದೆ. ಈ ಬಸ್‌ ವಿಮಾನದಂತಹ ಆಸನ ಮತ್ತು ಬಸ್ ಹೋಸ್ಟೆಸ್ ಅನ್ನು ಒಳಗೊಂಡಿದೆ. ಸಾಮಾನ್ಯ ಡೀಸೆಲ್ ಬಸ್‌ಗಳಿಗಿಂತ ಅಗ್ಗವಾಗಿರಲಿದೆ. ಮಾಲಿನ್ಯರಹಿತ ಶಕ್ತಿಯ ಮೂಲಗಳಲ್ಲಿ ಚಲಿಸಲಿದೆʼʼ ಎಂದು ವಿವರಿಸಿದ್ದಾರೆ. ʼʼಭಾರತವನ್ನು ಇಂಧನದ ಆಮದುದಾರ ದೇಶವನ್ನಾಗಿಸುವ ಬದಲು ಬದಲು ರಫ್ತುದಾರ ದೇಶವನ್ನಾಗಿಸುವುದೇ ನಮ್ಮ ಸರ್ಕಾರದ ಗುರಿʼʼ ಎಂದು ಅವರು ತಿಳಿಸಿದ್ದಾರೆ.

ಪರಿಸರ ಮಾಲಿನ್ಯ ಪ್ರಮುಖ ಸಮಸ್ಯೆ

ʼʼನಾವು ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಪರಿಸರ ಮಾಲಿನ್ಯ ಮುಖ್ಯವಾದುದು. ದೇಶದಲ್ಲಿ ಅದರಲ್ಲಿಯೂ ರಾಜಧಾನಿ ದೆಹಲಿಯಲ್ಲಿ ವಾಯು, ಜಲ, ಶಬ್ದ ಮಾಲಿನ್ಯ ಮಿತಿ ಮೀರಿದೆ. ಹೀಗಾಗಿ ನಾವು ಮಾಲಿನ್ಯ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಹೀಗಾಗಿ ಕಡಿಮೆ ವೆಚ್ಚದ, ಪರಿಸರ ಸ್ನೇಹಿ ಸಂಚಾರ ವ್ಯವಸ್ಥೆ ಪರಿಚಯಿಸಲು ಚಿಂತನೆ ನಡೆಸಿದ್ದೇವೆ. ಅದರ ಭಾಗವಾಗಿ ಇಂಡಿಯನ್ ಆಯಿಲ್ 300 ಎಥೆನಾಲ್ ಪಂಪ್‌ಗಳನ್ನು ಸ್ಥಾಪಿಸಲಿದೆ. ಹೊಸ ಮಾದರಿಯ ವಾಹನ ನಿರ್ಮಾಣಕ್ಕೆ ತಯಾರಕರೂ ಮುಂದಾಗಿದ್ದಾರೆ. ಆದ್ದರಿಂದ 100 ರೂ. ಕೊಟ್ಟು ಒಂದು ಲೀಟರ್‌ ಪೆಟ್ರೋಲ್ ಖರೀದಿಸುವ ಬದಲು, 60 ರೂ. ಪಾವತಿಸಿ ಎಥೆನಾಲ್ ಖರೀದಿಸಬಹುದು. ಈ ಹೊಸ ಮಾದರಿಯ ವಾಹನವು ಶೇ. 60 ವಿದ್ಯುತ್ ಮತ್ತು ಶೇ. 40ರಷ್ಟು ಎಥೆನಾಲ್‌ನಲ್ಲಿ ಚಲಿಸಲಿದೆ. ಇದು ಮಾಲಿನ್ಯವನ್ನು ಸಹ ಕಡಿಮೆ ಮಾಡುತ್ತದೆ” ಎಂದು ಸಚಿವರು ಹೇಳಿದ್ದಾರೆ.

“ನಾವು ಟಾಟಾ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡು ನಾಗ್ಪುರದಲ್ಲಿ ಪ್ರಾಯೋಗಿಕ ಯೋಜನೆಯನ್ನು ಜಾರಿಗೊಳಿಸಲಿದ್ದೇವೆ. ಜೆಕ್ ಗಣರಾಜ್ಯದಲ್ಲಿ ಮೂರು ಬಸ್ಸುಗಳನ್ನು ಸೇರಿಸಿ ಓಡಿಸುತ್ತಾರೆ. ಅದರಂತೆ ನಮ್ಮ ಈ ಯೋಜನೆ 132 ಸೀಟುಗಳ ಬಸ್‌ ಅನ್ನು ಹೊಂದಿದೆ. ಈ ಬಸ್‌ ರಿಂಗ್ ರಸ್ತೆಯಲ್ಲಿ 49 ಕಿ.ಮೀ. ಪ್ರಯಾಣಿಸುತ್ತದೆ. ಕೇವಲ 40 ಸೆಕೆಂಡು ಚಾರ್ಜ್ ಮಾಡಿದರೆ 40 ಕಿ.ಮೀ. ದೂರ ಸಂಚರಿಸಲಿದೆʼʼ ಎಂದು ಗಡ್ಕರಿ ತಿಳಿಸಿದ್ದಾರೆ.

ಬಸ್‌ನ ವೈಶಿಷ್ಟ್ಯ

“ಬಸ್‌ನಲ್ಲಿ ಎಲ್ಲ ಸೌಲಭ್ಯಗಳನ್ನು ಅಳವಡಿಸುವಂತೆ ಸೂಚಿಸಿದ್ದೇನೆ. ಸೀಟಿನ ಮುಂದೆ ಲ್ಯಾಪ್‌ಟಾಪ್‌ ಇಡಲು ಸ್ಥಳಾವಕಾಶ, ಹವಾನಿಯಂತ್ರಣ ವ್ಯವಸ್ಥೆ, ಆರಾಮದಾಯಕ ಕುರ್ಚಿಗಾಗಿ ಬೇಡಿಕೆ ಇಟ್ಟಿದ್ದೇನೆ. ಏರ್ ಹೋಸ್ಟೆಸ್‌ಗಳಂತೆ ಪ್ರಯಾಣಿಕರಿಗೆ ಹಣ್ಣು, ಪ್ಯಾಕ್ ಮಾಡಿದ ಆಹಾರ ಮತ್ತು ಪಾನೀಯಗಳನ್ನು ನೀಡಲು ಬಸ್ ಹೋಸ್ಟೆಸ್‌ಗಳು ಇರಲಿದ್ದಾರೆ. ನನ್ನ ಲೆಕ್ಕಾಚಾರದ ಪ್ರಕಾರ ಈ ಬಸ್‌ನ ವೆಚ್ಚ ಡೀಸೆಲ್ ಬಸ್‌ಗಿಂತ ಶೇ. 30ರಷ್ಟು ಕಡಿಮೆ ಇರಲಿದೆ. ಸೌರಶಕ್ತಿಯನ್ನು ಬಳಸಿದರೆ, ವೆಚ್ಚ ಇನ್ನೂ ಕಡಿಮೆಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

ತಮ್ಮ ಸಲಹೆಯನ್ನು ಸ್ವೀಕರಿಸಿದ್ದಕ್ಕಾಗಿ ಪೆಟ್ರೋಲಿಯಂ ಸಚಿವ ಹರ್ದೀಪ್ ಪುರಿ ಅವರಿಗೆ ಧನ್ಯವಾದ ಅರ್ಪಿಸಿದ ಗಡ್ಕರಿ, ʼʼಇಂಡಿಯನ್ ಆಯಿಲ್ ಕಸದಿಂದ 1 ಲಕ್ಷ ಲೀಟರ್ ಎಥೆನಾಲ್ ಮತ್ತು ಜೈವಿಕ ಬಿಟುಮೆನ್ ಉತ್ಪಾದಿಸುವ ಯೋಜನೆಯನ್ನು ಪ್ರಾರಂಭಿಸಿದೆ. 76,000 ಟನ್ ಜೈವಿಕ ವಾಯುಯಾನ ಇಂಧನವನ್ನು ಸಹ ಉತ್ಪಾದಿಸುತ್ತದೆʼʼ ಎಂದಿದ್ದಾರೆ.

ಇದನ್ನೂ ಓದಿ: Nitin Gadkari : ಕೆಟ್ಟದಾಗಿರುವ ಹೈವೆಗಳಿಗೆ ಟೋಲ್​ ಶುಲ್ಕ ಕಟ್ಟಬೇಡಿ; ನಿತಿನ್​ ಗಡ್ಕರಿ ಸೂಚನೆ

Continue Reading

Latest

Amarnath Tragedy: ಬಸ್‌ ಬ್ರೇಕ್ ಫೇಲ್; ಜೀವ ಉಳಿಸಿಕೊಳ್ಳಲು ಬಸ್‌ನಿಂದ ಜಿಗಿದ ಅಮರನಾಥ ಯಾತ್ರಿಕರು! ವಿಡಿಯೊ ಇದೆ

Amarnath Tragedy: ಅಮರನಾಥ ಯಾತ್ರೆಗೆ ತೆರಳಿದವರಿಗೆ ದುರಂತವೊಂದು ಎದುರಾಗಿದೆ. ಅಮರನಾಥ ಯಾತ್ರೆಯಿಂದ ಹಿಂದಿರುಗುತ್ತಿದ್ದ ಕೆಲವು ಯಾತ್ರಾರ್ಥಿಗಳು ಜಮ್ಮು ಮತ್ತು ಕಾಶ್ಮೀರದ ರಂಬನ್ ಜಿಲ್ಲೆಯಲ್ಲಿ ಚಲಿಸುತ್ತಿರುವ ಬಸ್ಸಿನಿಂದ ಜಿಗಿದು ಗಾಯಗೊಂಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಸ್‌ ಬ್ರೇಕ್ ಫೇಲ್ ಆದ ಕಾರಣ ಬನಿಹಾಲ್ ಬಳಿಯ ನಾಚ್ಲಾನಾ ಬಳಿ ಚಾಲಕನಿಗೆ ಬಸ್ ಅನ್ನು ನಿಯಂತ್ರಿಸಲು ಆಗಲಿಲ್ಲ. ಇದರಿಂದ ಬಸ್‌ನಲ್ಲಿದ್ದ ಪ್ರಯಾಣಿಕರು ಭಯಗೊಂಡು ತಮ್ಮ ಜೀವ ಉಳಿಸಿಕೊಳ್ಳಲು ಬಸ್ಸಿನಿಂದ ಜಿಗಿದು ಗಾಯಗೊಂಡಿದ್ದಾರೆ.

VISTARANEWS.COM


on

Amarnath Tragedy
Koo

ಶ್ರೀನಗರ : ಪ್ರತಿವರ್ಷ ಅಮರನಾಥ ಯಾತ್ರೆಗೆ (Amarnath Tragedy) ಹಲವಾರು ಮಂದಿ ಯಾತ್ರಾರ್ಥಿಗಳು ಪ್ರಯಾಣ ಮಾಡುತ್ತಿರುತ್ತಾರೆ. ಆದರೆ ಇತ್ತೀಚೆಗೆ ಅಮರನಾಥ ಯಾತ್ರೆಗೆ ತೆರಳಿದವರಿಗೆ ದುರಂತವೊಂದು ಎದುರಾಗಿದೆ. ಅಮರನಾಥ ಯಾತ್ರೆಯಿಂದ ಹಿಂದಿರುಗುತ್ತಿದ್ದ ಕೆಲವು ಯಾತ್ರಾರ್ಥಿಗಳು ಜಮ್ಮು ಮತ್ತು ಕಾಶ್ಮೀರದ ರಂಬನ್ ಜಿಲ್ಲೆಯಲ್ಲಿ ಚಲಿಸುತ್ತಿರುವ ಬಸ್ಸಿನಿಂದ ಜಿಗಿದು ಗಾಯಗೊಂಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅನೇಕರು ವಿಡಿಯೊ ನೋಡಿ ಶಾಕ್ ಆಗಿದ್ದಾರೆ.

ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಪಂಜಾಬ್‌ನ ಹೋಶಿಯಾರ್ಪುರಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಹದಿನೇಳು ಮಂದಿ ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಒಟ್ಟು 45 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಆದರೆ ರಸ್ತೆ ಮಧ್ಯದಲ್ಲಿ ಬಸ್‌ನ ಬ್ರೇಕ್ ಫೇಲ್ ಆಗಿದೆ. ಇದರ ಪರಿಣಾಮ ಬನಿಹಾಲ್ ಬಳಿಯ ನಾಚ್ಲಾನಾ ಬಳಿ ಚಾಲಕನಿಗೆ ಬಸ್ ಅನ್ನು ನಿಯಂತ್ರಿಸಲು ಆಗಲಿಲ್ಲ. ಇದರಿಂದ ಬಸ್‌ನಲ್ಲಿದ್ದ ಪ್ರಯಾಣಿಕರು ಭಯಗೊಂಡು ತಮ್ಮ ಜೀವ ಉಳಿಸಿಕೊಳ್ಳಲು ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಹಲವಾರು ಪ್ರಯಾಣಿಕರು ಬಸ್ಸಿನಿಂದ ಜಿಗಿದ ಗಾಯಗೊಂಡಿದ್ದಾರೆ.

ವಿಡಿಯೊದಲ್ಲೊ ರಸ್ತೆಯಲ್ಲಿ ಚಲಿಸುತ್ತಿದ್ದ ಬಸ್‌ನಿಂದ ಪ್ರಯಾಣಿಕರು ಒಬ್ಬರಾಗಿಯೇ ಜಿಗಿದು ಕೆಳಗೆ ಬೀಳುತ್ತಿದ್ದಾರೆ. ಹಾಗೇ ಬಿದ್ದ ಪ್ರಯಾಣಿಕರಲ್ಲಿ ಕೆಲವರು ತಮ್ಮವರನ್ನು ಕಾಪಾಡಲು ಬಸ್ಸಿನ ಹಿಂದೆ ಓಡುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಪೊಲೀಸರು ಸೇನೆಯ ಜೊತೆಗೆ ಬಸ್ ಇದ್ದ ಕಡೆ ಬಂದು ತ್ವರಿತ ಕ್ರಮ ತೆಗೆದುಕೊಂಡಿದ್ದಾರೆ. ಸೈನಿಕರು ಬಸ್ ಅನ್ನು ನಿಲ್ಲಿಸಲು ಮತ್ತು ಹತ್ತಿರದ ಹೊಳೆಗೆ ಹೋಗದಂತೆ ತಡೆಯಲು ಕಲ್ಲುಗಳನ್ನು ಬಸ್‌ ನ ಚಕ್ರದ ಕೆಳಗೆ ಇಟ್ಟಿದ್ದಾರೆ. ಇದರಿಂದ ಆಗಬಹುದಾದ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಸೇನೆಯ ತಂಡಗಳು, ಆಂಬ್ಯುಲೆನ್ಸ್ ನೊಂದಿಗೆ ಘಟನಾ ಸ್ಥಳಕ್ಕೆ ಆಗಮಿಸಿ ಗಾಯಾಳುಗಳಿಗೆ ವೈದ್ಯಕೀಯ ನೆರವು ಮತ್ತು ಪ್ರಥಮ ಚಿಕಿತ್ಸೆಯನ್ನು ನೀಡಿದ್ದಾರೆ.

Amarnath Tragedy

ಇದನ್ನೂ ಓದಿ: ನೀವೂ ಕೂಡ ನಿಮ್ಮ ಹೆಂಡತಿಯನ್ನು ಇವರಂತೆ ಪ್ರೀತಿಸಬಲ್ಲಿರಾ? ಈ ಫೋಟೊ, ವಿಡಿಯೊ ನೋಡಿ ಹೇಳಿ!

ಈ ಹಿಂದೆ ಈ ವರ್ಷದ ಜೂನ್ ತಿಂಗಳಿನಲ್ಲಿ ಭಯೋತ್ಪಾದಕರು ಶಿವಖೋರಿ ದೇವಸ್ಥಾನದಿಂದ ಮಾತಾ ವೈಷ್ಣೋದೇವಿ ದೇಗುಲಕ್ಕೆ ಹಿಂದಿರುಗುತ್ತಿದ್ದ ಪ್ರಯಾಣಿಕರಿದ್ದ ಬಸ್‌ನ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಭಯೋತ್ಪಾದಕರ ಗುಂಡಿನ ದಾಳಿಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತಕ್ಕೀಡಾಗಿ ಕಂದಕಕ್ಕೆ ಬಿದ್ದಿದೆ. ಈ ಅಪಘಾತದಲ್ಲಿ 10 ಜನರು ಸಾವನ್ನಪ್ಪಿದ್ದರು.

Continue Reading

ಪ್ರಮುಖ ಸುದ್ದಿ

Dengue Fever: ಇನ್ನೂ ಏರಲಿದೆ ಡೆಂಗ್ಯು ಕೇಸ್‌ ಎಂದ ಆರೋಗ್ಯ ಸಚಿವರು; ಇದುವರೆಗೆ 6 ಸಾವು

Dengue Fever: ಕಳೆದ ವರ್ಷಕ್ಕೆ ಹೋಲಿಸಿದ್ರೆ ಈ ಬಾರಿ ಪ್ರಕರಣಗಳು ಡಬಲ್ ಆಗಿವೆ. ಜನವರಿಯಿಂದ ಜುಲೈ 1ರ ತನಕ ಒಟ್ಟು 6187 ಕೇಸ್ ಪಾಸಿಟಿವ್ ಇದೆ. ಕಳೆದ ವರ್ಷ 2903 ಇತ್ತು. ಇಷ್ಟೇ ಅಲ್ಲ ರಾಜ್ಯದಲ್ಲಿ ಮತ್ತಷ್ಟು ಡೆಂಗ್ಯು ಕೇಸ್ ಇರಬಹುದು. 47% ಟೆಸ್ಟಿಂಗ್ ರೇಟ್ ಹೆಚ್ಚಳ ಮಾಡಲಾಗಿದೆ.

VISTARANEWS.COM


on

dengue fever Dinesh Gundu Rao
Koo

ಬೆಂಗಳೂರು: ಇದುವರೆಗೆ ರಾಜ್ಯದಲ್ಲಿ ಡೆಂಗ್ಯು ಜ್ವರದಿಂದಾಗಿ (Dengue Fever) 6 ಜನ ಸತ್ತಿದ್ದಾರೆ. ಸೆಪ್ಟೆಂಬರ್‌ನಲ್ಲಿ ಡೆಂಗ್ಯು ಜ್ವರ ಪ್ರಕರಣಗಳು (Dengue Positive) ಇನ್ನೂ ಏರಬಹುದು ಎಂದು ಆರೋಗ್ಯ ಸಚಿವ (Health Minister) ದಿನೇಶ್‌ ಗುಂಡೂರಾವ್‌ (dinesh Gundu Rao) ಎಚ್ಚರಿಸಿದ್ದಾರೆ.

ಡೆಂಗ್ಯು ಹರಡುವಿಕೆ ನಿಯಂತ್ರಣದ ಬಗ್ಗೆ ವಿವಿಧ ಇಲಾಖೆಗಳ ಜೊತೆ ಸಭೆ ಮಾಡಿದ ಬಳಿಕ ಅವರು ಸುದ್ದಿಗೋಷ್ಠಿ ನಡೆಸಿದರು. ಡೆಂಗ್ಯು ಕಳೆದ ವರ್ಷಕ್ಕಿಂತ ಈ ಬಾರಿ ದುಪ್ಪಟ್ಟಾಗಿದೆ. ಇಲ್ಲಿಯವರೆಗೂ ರಾಜ್ಯದಲ್ಲಿ 6187 ಪ್ರಕರಣ ದಾಖಲಾಗಿದೆ. 6 ಜನ ಸತ್ತಿದ್ದಾರೆ. ಇದರಲ್ಲಿ ಕೋಮಾರ್ಬಿಡಿಟೀಸ್‌ (ಬಿಪಿ, ಮಧುಮೇಹ, ಹೃದಯ ಕಾಯಿಲೆ) ಇದ್ದ ಮೂವರೂ ಸೇರಿದ್ದಾರೆ ಎಂದು ಸಚಿವರು ತಿಳಿಸಿದರು.

ಕಳೆದ ವರ್ಷಕ್ಕೆ ಹೋಲಿಸಿದ್ರೆ ಈ ಬಾರಿ ಪ್ರಕರಣಗಳು ಡಬಲ್ ಆಗಿವೆ. ಜನವರಿಯಿಂದ ಜುಲೈ 1ರ ತನಕ ಒಟ್ಟು 6187 ಕೇಸ್ ಪಾಸಿಟಿವ್ ಇದೆ. ಕಳೆದ ವರ್ಷ 2903 ಇತ್ತು. ಇಷ್ಟೇ ಅಲ್ಲ ರಾಜ್ಯದಲ್ಲಿ ಮತ್ತಷ್ಟು ಡೆಂಗ್ಯು ಕೇಸ್ ಇರಬಹುದು. 47% ಟೆಸ್ಟಿಂಗ್ ರೇಟ್ ಹೆಚ್ಚಳ ಮಾಡಲಾಗಿದೆ. ಸದಾ ಮಳೆ ಬರುತ್ತಿದ್ದರೆ ಡೆಂಗ್ಯು ಸೊಳ್ಳೆ ಬರುವುದಿಲ್ಲ. ಮಳೆ ಬಿಟ್ಟು ಬಿಟ್ಟು ಬರುವ ಹಿನ್ನೆಲೆಯಲ್ಲಿ ಡೆಂಗ್ಯುವಿಗೆ ಅನುಕೂಲ ವಾತಾವರಣ ಇದೆ. ನಿಂತು ಬೀಳುವ ಮಳೆಯಿಂದಾಗಿ ಸೊಳ್ಳೆ ಹರಡುವಿಕೆ ಹೆಚ್ಚಾಗುತ್ತದೆ. ಇದು ಅನುಕೂಲ ಮಾಡಿಕೊಡುತ್ತದೆ. ಹವಾಮಾನ ಬದಲಾವಣೆಯಿಂದ ರೋಗ ಉಲ್ಬಣಗೊಳ್ಳುತ್ತಿದೆ ಎಂದು ಸಚಿವರು ತಿಳಿಸಿದರು.

ರಾಜ್ಯದಲ್ಲಿ ಒಟ್ಟು 6187 ಪ್ರಕರಣಗಳು ಇವೆ. 3463 ಪ್ರಕರಣ ನಗರ ಪ್ರದೇಶಗಳಲ್ಲಿ ಕಂಡು ಬಂದಿವೆ. 56% ನಗರ ಪ್ರದೇಶದಲ್ಲಿ, 44% ಗ್ರಾಮೀಣ ಪ್ರದೇಶದಲ್ಲಿ ಪೊಸಿಟಿವ್‌ ಬಂದಿವೆ. ಒಂದು ವರ್ಷದ ಒಳಗಿನ 123 ಮಕ್ಕಳಿಗೆ, 1-18 ವರ್ಷದ 2301 ಮಂದಿಗೆ, 19- 60 ವರ್ಷದ 3313 ಮಂದಿಗೆ, 61 ವರ್ಷ ಮೇಲಿನ 450 ಮಂದಿಗೆ ಪಾಸಿಟಿವ್‌ ಬಂದಿದೆ ಎಂದು ಮಾಹಿತಿ ನೀಡಿದರು.

ಡೆಂಗ್ಯು ಜ್ವರ ಇನ್ನಷ್ಟು ಹೆಚ್ಚಾಗಬಹುದು. ಸೆಪ್ಟಂಬರ್‌ನಲ್ಲಿ ಮತ್ತೆ ಹೆಚ್ಚಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿಗಳು ಮುಂಜಾಗ್ರತಾ ಕ್ರಮಕ್ಕೆ ಸೂಚಿಸಿದ್ದಾರೆ. ಟೆಸ್ಟಿಂಗ್ ಕಿಟ್ ಹೆಚ್ಚುವರಿ ಇರಿಸಲಾಗಿದೆ. ಪ್ಲೇಟ್‌ಲೆಟ್ಸ್‌ ಕೊಡುವುದಕ್ಕೆ ತಿಳಿಸಿದ್ದೇವೆ. ಡೆಂಗ್ಯುವಿಗೆ ನಿರ್ದಿಷ್ಟ ಚಿಕಿತ್ಸೆ ಇಲ್ಲ. ಪ್ಲೇಟ್ ಲೆಟ್ಸ್ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದೇವೆ. ಬ್ಲಡ್ ಯೂನಿಟ್‌ಗಳ ಜತೆ ಮಾತುಕತೆ ಮಾಡಲಾಗಿದೆ. ಐವಿ ಫ್ಲೂವಿಡ್‌ಗಳನ್ನು ಕೊಡಲಾಗುತ್ತದೆ. ಇದು ನಮ್ಮ ಬಳಿ ಸಾಕಷ್ಟು ಇದೆ. ಆರಂಭದಲ್ಲಿ ಪ್ಯಾರಸಿಟಮಲ್ ಕೊಟ್ಟರೆ ಸಾಕಾಗುತ್ತದೆ ಎಂದು ತಿಳಿಸಿದರು.

ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ

ಖಾಸಗಿ ಆಸ್ಪತ್ರೆಗಳು ಡೆಂಗ್ಯು ಕೇಸ್ ರಿಪೋರ್ಟ್ ಮಾಡುತ್ತಿಲ್ಲ. ಕೆಪಿಎಂ ಆಕ್ಟ್ ಪ್ರಕಾರ ಖಾಸಗಿ ಆಸ್ಪತ್ರೆಗಳು ಡೆಂಗ್ಯು ಕೇಸ್ ರಿಪೋರ್ಟ್ ಮಾಡುವುದು ಕಡ್ಡಾಯ. IHIPಯಲ್ಲಿ ಅನೇಕ ಖಾಸಗಿ ಆಸ್ಪತ್ರೆಗಳು ಅಪ್ಲೋಡ್ ಮಾಡುತ್ತಿಲ್ಲ. ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು. ಖಾಸಗಿ ಆಸ್ಪತ್ರೆಯಲ್ಲಿ ಡೆಂಗ್ಯು ತಪಾಸಣೆಗೆ ದರ ನಿಗದಿ ಮಾಡುವ ಬಗ್ಗೆ ಚರ್ಚೆ ಮಾಡಿಲ್ಲ. ಆ ಬಗ್ಗೆ ಮುಂದೆ ಚರ್ಚೆ ಮಾಡುತ್ತೇವೆ ಎಂದು ಅವರು ತಿಳಿಸಿದರು.

ನಮ್ಮ ವೆಬ್‌ಸೈಟಿನಲ್ಲಿ ಡೆಂಗ್ಯು ಬುಲೆಟಿನ್ ಬಿಡುಗಡೆ ಮಾಡುತ್ತೇವೆ. ಪ್ರತಿ ದಿನ ಎಷ್ಟು ಕೇಸ್ ಬಂದಿದೆ ಎನ್ನುವ ಮಾಹಿತಿ ಹಾಕುತ್ತೇವೆ. ದಿನ ನಿತ್ಯ ಡೆಂಗ್ಯು ಬುಲೆಟಿನ್ ಕೊಡಲಾಗುತ್ತದೆ. ಬೆಂಗಳೂರು ನಗರದಲ್ಲಿ ಬಿಬಿಎಂಪಿ ಎಲ್ಲಾ ಮನೆಗಳ ಸರ್ವೆ ಮಾಡುತ್ತಿದೆ. ಸೂಕ್ಷ್ಮ ಪ್ರದೇಶಗಳು ಮಾತ್ರವಲ್ಲ ಎಲ್ಲಾ ಮನೆಗಳ ಸರ್ವೆ ನಡೆಸಲು ನಾನು ಬಿಬಿಎಂಪಿಗೆ ಸೂಚನೆ ನೀಡಿದ್ದೇನೆ. ಮನೆ ಮನೆಗೆ ಭೇಟಿ ಕೊಡಲು ಸೂಚಿಸಿದ್ದೇನೆ. ರಾಜ್ಯಾದ್ಯಂತ ಡೆಂಗ್ಯು ಬಗ್ಗೆ ಕಟ್ಟೆಚ್ಚರ ವಹಿಸಲು ಸೂಚನೆ ಕೊಡಲಾಗಿದೆ. ಪ್ರತಿ ಶುಕ್ರವಾರ ಡೆಂಗ್ಯು ವಿಚಾರದಲ್ಲಿ ಫೀಲ್ಡ್‌ನಲ್ಲಿ ಇದ್ದು, ಮಾನಿಟರ್ ಮಾಡಲು ಸೂಚಿಸಿದ್ದೇನೆ. ಪ್ರತಿ ಶುಕ್ರವಾರ ಮನೆ ಮನೆ ಸಮೀಕ್ಷೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಎಲ್ಲೆಲ್ಲಿ ಪಾಸಿಟಿವ್ ಕೇಸ್ ಬರುತ್ತದೆಯೋ ಅಲ್ಲಿ ತೀವ್ರ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಲಾರ್ವ ನಾಶ, ಫಾಗಿಂಗ್ ಸೇರಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. RWA, ಕ್ರೆಡೈ ಸೇರಿ ಕಟ್ಟಡ ಮಾಲೀಕರು ಸೇರಿ ಅವರನ್ನು ಒಳಗೊಂಡು ಸಭೆ ನಡೆಸಲು ತೀರ್ಮಾನಿಸಿದ್ದೇವೆ. ಮೆಡಿಕಲ್ ಆಫೀಸರ್, MOH, ಸೈನ್ಸ್ ಟೀಚರ್ಸ್‌ಗೆ ಡೆಂಗ್ಯು ವಿಚಾರದಲ್ಲಿ ವಿಶೇಷ ತರಬೇತಿ ನೀಡಲಾಗಿದೆ. ಮಕ್ಕಳಿಗೆ ಡೆಂಗ್ಯು ಕುರಿತು ತಿಳಿವಳಿಕೆ ನೀಡಲಾಗಿದೆ. ಡಿಪೋಗಳಲ್ಲಿ ಟಯರ್‌ಗಳಲ್ಲಿ ಸೊಳ್ಳೆ ಉತ್ಪತ್ತಿ ಆಗುತ್ತಿರುವುದು ಕಂಡು ಬಂದಿದೆ. ಡಿಪೋಗಳಿಂದ ಸ್ಯಾಂಪಲ್ ಕಲೆಕ್ಟ್ ಮಾಡಲಾಗಿದೆ. ಹೆಚ್ಚು ಸಕ್ರಿಯ ಪ್ರಕರಣಗಳು ಕಂಡು ಬರ್ತಿದೆ. ಹೀಗಾಗಿ ಎಚ್ಚರಿಕೆ ವಹಿಸಲು ಸಾರಿಗೆ ಇಲಾಖೆಗೆ ಸೂಚಿಸಿದ್ದೇವೆ. ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಜನರಿಗೆ ಅರಿವು ಮೂಡಿಸುವಂತೆ ತಿಳಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Dengue fever: ಮಾರಕ ಡೆಂಗ್ಯು ಜ್ವರಕ್ಕೆ ಬಾಲಕಿ ಬಲಿ

Continue Reading
Advertisement
Physical Abuse
ಕರ್ನಾಟಕ24 mins ago

Physical Abuse: ಬೆಂಗಳೂರಲ್ಲಿ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ

Narendra Modi
ದೇಶ30 mins ago

Narendra Modi: ಮುಂದಿನ 5 ವರ್ಷ ಬಡತನ ವಿರುದ್ಧದ ಹೋರಾಟಕ್ಕೆ ಮೀಸಲು; ರಾಜ್ಯಸಭೆಯಲ್ಲಿ ಮೋದಿ ಭರವಸೆ

Double Ismart Steppa Maar electrifies with mass beats
ಟಾಲಿವುಡ್33 mins ago

Double Ismart: ಪ್ರಚಾರ ಅಖಾಡದಲ್ಲಿ ‘ಡಬಲ್ ಇಸ್ಮಾರ್ಟ್’: ಮೊದಲ ಹಾಡು ರಿಲೀಸ್!

Actor Darshan
ಕರ್ನಾಟಕ57 mins ago

Actor Darshan: ಮಗುವನ್ನು ಕೈದಿ ಮಾಡಿದವರಿಗೆ ಕಾನೂನು ಕಂಟಕ; ಪಾಲಕರಿಗೆ ನೋಟಿಸ್‌!

IPL 2025
ಕ್ರೀಡೆ1 hour ago

IPL 2025: ಮುಂದಿನ ವರ್ಷ ಆರ್​ಸಿಬಿಗೆ ವಿರಾಟ್​ ಕೊಹ್ಲಿ ನಾಯಕ?

Kannada New Movie kannnajaru teaser teaser Out
ಸಿನಿಮಾ1 hour ago

Kannada New Movie: ‘ಕಣಂಜಾರು’ ಟೀಸರ್ ಮೆಚ್ಚಿದ ಚಂದನವನ!

viral news signboard
ವೈರಲ್ ನ್ಯೂಸ್1 hour ago

Viral News: ʼತುರ್ತಾಗಿ ಒಂದು ಅಪಘಾತ ಮಾಡಿʼ ಅನ್ನುತ್ತಿದೆ ಈ ಸೈನ್‌ಬೋರ್ಡ್‌!

Hijab Row
ದೇಶ1 hour ago

Hijab Row: ಹಿಬಾಬ್‌ ನಿಷೇಧದ ಬೆನ್ನಲ್ಲೇ ಜೀನ್ಸ್‌, ಟೀ-ಶರ್ಟ್‌ ಬ್ಯಾನ್‌- ಪ್ರಕಟಣೆ ಹೊರಡಿಸಿದ ಮುಂಬೈ ಕಾಲೇಜು

Stray Dogs Attack
ಕರ್ನಾಟಕ2 hours ago

Stray Dogs Attack: ಸುರಪುರದಲ್ಲಿ ಬೀದಿ ನಾಯಿಗಳ ದಾಳಿಗೆ 15 ಕುರಿಗಳು ಬಲಿ

Gold Rate Today
ಚಿನ್ನದ ದರ2 hours ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಷ್ಟಿದೆ ಇಂದಿನ ಬೆಲೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ19 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌